IPL 2024 : ಆಟಗಾರರಿಗೆ ಇಂಗ್ಲಿಷ್ ಗೊತ್ತಿಲ್ಲದ್ದು ಆರ್​ಸಿಬಿ ಸೋಲಿಗೆ ಕಾರಣ; ಮಾಜಿ ಆಟಗಾರನ ವಿಭಿನ್ನ ವಿಶ್ಲೇಷಣೆ - Vistara News

ಪ್ರಮುಖ ಸುದ್ದಿ

IPL 2024 : ಆಟಗಾರರಿಗೆ ಇಂಗ್ಲಿಷ್ ಗೊತ್ತಿಲ್ಲದ್ದು ಆರ್​ಸಿಬಿ ಸೋಲಿಗೆ ಕಾರಣ; ಮಾಜಿ ಆಟಗಾರನ ವಿಭಿನ್ನ ವಿಶ್ಲೇಷಣೆ

IPL 2024: ಕೆಲವರು ಮಾತ್ರ ಅಂತರರಾಷ್ಟ್ರೀಯ ಆಟಗಾರರು. ಉಳಿದವರೆಲ್ಲರೂ ಭಾರತೀಯರು ಮತ್ತು ಅವರಲ್ಲಿ ಅರ್ಧದಷ್ಟು ಜನರಿಗೆ ಇಂಗ್ಲಿಷ್ ಸರಿಯಾಗಿ ಅರ್ಥವಾಗುವುದಿಲ್ಲ. ನೀವು ಅವರನ್ನು ಹೇಗೆ ಪ್ರೇರೇಪಿಸುವಿರಿ? ಅವರೊಂದಿಗೆ ಸಮಯ ಕಳೆಯುವವರು ಯಾರು? ಅವರೊಂದಿಗೆ ಯಾರು ಮಾತನಾಡುತ್ತಾರೆ? ಆ ತಂಡದಲ್ಲಿ ಒಬ್ಬನೇ ಒಬ್ಬ ಭಾರತೀಯ ಸಿಬ್ಬಂದಿ ಇಲ್ಲ. . ಕನಿಷ್ಠ ಆಟಗಾರರು ನಂಬಬಹುದಾದ ಯಾರಾದರೂ ಇರಬೇಕು,” ಎಂದು ಸೆಹ್ವಾಗ್ ಆರ್​ಸಿಬಿ ಮ್ಯಾನೇಜ್ಮೆಂಟ್ ಅನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತೊಂದು ನಿರಾಶಾದಾಯಕ ಸೋಲಿಗೆ ಒಳಗಾಗಿದೆ. ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) 17ನೇ ಆವೃತ್ತಿಯಲ್ಲಿ ಆಘಾತಕಾರಿ ಫಲಿತಾಂಶ ಎದುರಿಸಿದೆ. ಪ್ರತಿ ಋತುವಿನಲ್ಲಿ, ಫ್ರಾಂಚೈಸಿ ತಮ್ಮ ಅಭಿಮಾನಿಗಳ ಹೃದಯದಲ್ಲಿ ಭರವಸೆಗಳನ್ನು ಮೂಡಿಸುತ್ತದೆ/ ನಂತರ ಕಳಪೆ ಪ್ರದರ್ಶನದಿಂದ ಅವರಿಗೆ ಬೇಸರ ಮೂಡಿಸುತ್ತದೆ. 2024 ರ ಅಭಿಯಾನವು ಅದಕ್ಕಿಂತ ಭಿನ್ನವಾಗಿಲ್ಲ. ಆರ್​ಸಿಬಿ 7 ಪಂದ್ಯಗಳಲ್ಲಿ 6 ಸೋಲುಗಳನ್ನು ಅನುಭವಿಸಿ 10 ತಂಡಗಳ ಪಾಯಿಂಟ್ಸ್​​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಪಂಡಿತರು ಆರ್​​ಸಿಬಿಯ ಸೋಲಿಗೆ ಕಾರಣಗಳನ್ನು ಹುಡುಕುತ್ತಲೇ ಇದ್ದಾರೆ. ಅಂತೆಯೇ ಮಾಜಿ ಸ್ಫೋಟಕ ಬ್ಯಾಟರ್​​ ವಿರೇಂದ್ರ ಸೆಹ್ವಾಗ್ ಈ ತಮ್ಮದೇ ಅಭಿಪ್ರಾಯಗಳನ್ನು ನೀಡಿದ್ದಾರೆ. ಅವರ ಪ್ರಕಾರ ಆರ್​ಸಿಬಿಯ ದೊಡ್ಡ ಸಮಸ್ಯೆಯೆಂದರೆ ಭಾರತೀಯ ಸಹಾಯಕ ಸಿಬ್ಬಂದಿಯ ಕೊರತೆ.

ನಿಮ್ಮ ಬಳಿ 12ರಿಂದ 15 ಭಾರತೀಯ ಆಟಗಾರರು ಇದ್ದಾರೆ. ಕೇವಲ 10 ವಿದೇಶಿ ಆಟಗಾರರನ್ನು ಹೊಂದಿದ್ದೀರಿ. ನಿಮ್ಮ ಇಡೀ ಸಹಾಯಕ ಸಿಬ್ಬಂದಿ ವರ್ಗ ವಿದೇಶಿಯರಾಗಿದ್ದರೆ. ಅದುವೇ ಸಮಸ್ಯೆಯಾಗಿದೆ. ಅವರಲ್ಲಿ ಕೆಲವರು ಮಾತ್ರ ಅಂತರರಾಷ್ಟ್ರೀಯ ಆಟಗಾರರು. ಉಳಿದವರೆಲ್ಲರೂ ಭಾರತೀಯರು ಮತ್ತು ಅವರಲ್ಲಿ ಅರ್ಧದಷ್ಟು ಜನರಿಗೆ ಇಂಗ್ಲಿಷ್ ಸರಿಯಾಗಿ ಅರ್ಥವಾಗುವುದಿಲ್ಲ. ನೀವು ಅವರನ್ನು ಹೇಗೆ ಪ್ರೇರೇಪಿಸುವಿರಿ? ಅವರೊಂದಿಗೆ ಸಮಯ ಕಳೆಯುವವರು ಯಾರು? ಅವರೊಂದಿಗೆ ಯಾರು ಮಾತನಾಡುತ್ತಾರೆ? ಆ ತಂಡದಲ್ಲಿ ಒಬ್ಬನೇ ಒಬ್ಬ ಭಾರತೀಯ ಸಿಬ್ಬಂದಿ ಇಲ್ಲ. . ಕನಿಷ್ಠ ಆಟಗಾರರು ನಂಬಬಹುದಾದ ಯಾರಾದರೂ ಇರಬೇಕು,” ಎಂದು ಸೆಹ್ವಾಗ್ ಆರ್​ಸಿಬಿ ಮ್ಯಾನೇಜ್ಮೆಂಟ್ ಅನ್ನು ಪ್ರಶ್ನಿಸಿದ್ದಾರೆ.

ಆಟಗಾರರಿಗೆ ಆರಾಮದಾಯಕ ಪರಿಸ್ಥಿತಿ ಸಿಗಬೇಕು. ನಾಯಕ ಫಾಫ್ ಡು ಪ್ಲೆಸಿಸ್ ಅವರ ಮುಂದೆ ನಿಲ್ಲುವುದೇ ಇಲ್ಲ. ಯಾಕೆಂದರೆ ಅವರಿಗೆ ಭಾಷೆ ಬರುವುದಿಲ್ಲ. ಅವರು ಏನನ್ನಾದರೂ ಕೇಳಿದರೆ, ಅವರು ಉತ್ತರಿಸಬೇಕಾಗುತ್ತದೆ. ನಾಯಕ ಭಾರತೀಯನಾಗಿದ್ದರೆ, ಆಟಗಾರನ ಮನಸ್ಸಿನಲ್ಲಿ ಏನಾಗುತ್ತಿದೆ ಹಂಚಿಕೊಳ್ಳಬಹುದು. ವಿದೇಶಿ ಆಟಗಾರರಿಗೆ ಇದೇ ಪರಿಸ್ಥಿತಿ ಎದುರಾಗಿದ್ದರೆ ಏನು ಮಾಡಬೇಕಾಗಿತ್ತು. ಹೀಗಾಗಿ ಆರ್​ಸಿಬಿಗೆ ಕನಿಷ್ಠ 2-3 ಭಾರತೀಯ ಸಹಾಯಕ ಸಿಬ್ಬಂದಿಯ ಅಗತ್ಯವಿದೆ ಎಂದು ಸೆಹ್ವಾಗ್ ವಿಶ್ಲೇಷಣೆ ಮಾಡಿದ್ದಾರೆ.

ಆಯ್ಕೆಯೇ ಸರಿಲ್ಲಿ

ಭಾರತ ಮತ್ತು ಕೋಲ್ಕತಾ ನೈಟ್ ರೈಡರ್ಸ್​ ತಂಡ ಮಾಜಿ ಬ್ಯಾಟರ್​ ಮನೋಜ್ ತಿವಾರಿ, ಆರ್​ಸಿಬಿಯ ಸಮಸ್ಯೆಗಳು ಭೀಕರವಾಗಿದೆ ಎಂದಿದ್ದಾರೆ. ಹರಾಜು ಟೇಬಲ್​ನಲ್ಲಿಯೇ ಕಳಪೆ ನೇಮಕ ನಡೆಯುತ್ತಿದೆ. ಅದುವೇ ಅವರ ತೊಂದರೆಗಳ ಹಿಂದಿನ ದೊಡ್ಡ ಕಾರಣ ಎಂದ ಹೇಳಿದ್ದಾರೆ.

ಇದನ್ನೂ ಓದಿ: Hardik Pandya : ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ; ಏನಿದು ಕೇಸ್​?

“ಸಮಸ್ಯೆ ಎಲ್ಲಿದೆ ಎಂದು ನನಗೆ ತಿಳಿದಿದೆ. ಹರಾಜು ಟೇಬಲ್ ನಿಂದ ನಿರ್ವಹಣೆಯವರೆಗೆ ಎಲ್ಲ ಕಡೆಯೂ ಇದೆ. ಈ ಫ್ರಾಂಚೈಸಿಯ ಎಲ್ಲಾ ಉತ್ತಮ ಆಟಗಾರರು ಇತರ ತಂಡಗಳಿಗಾಗಿ ಹೋಗಿ ಅತ್ಯುತ್ತಮವಾಗಿ ಆಡುತ್ತಾರೆ. ಆ ತಂಡದಲ್ಲಿ ಪ್ರಮುಖ ವಿಕೆಟ್ ಟೇಕಿಂಗ್​ ಬೌಲರ್ (ಯಜುವೇಂದ್ರ ಚಾಹಲ್) ಅವರನ್ನು ಕೈಬಿಡಲಾಗಿದೆ. ಇದೇ ವೇಳೆ ವಿರಾಟ್ ಕೊಹ್ಲಿ ನಾಯಕತ್ವವನ್ನು ಮುಂದುವರಿಸುವುದಿಲ್ಲ. ಅವರು ಅವರನ್ನು 2016ರರ ಫೈನಲ್ ಗೆ ಮುನ್ನಡೆಸಿದವರು. 40 ಕೋಟಿ ರೂ.ಗಿಂತ ಹೆಚ್ಚಿನ ಒಟ್ಟು ಹಣ ಪಡೆದಿರುವ ಫ್ರಾಂಚೈಸಿಯ 4 ದುಬಾರಿ ಆಟಗಾರರು ಬೆಂಚ್ ಕಾಯುತ್ತಿದ್ದಾಋಎ. ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್. ಸಿರಾಜ್​​ಗೆ ವಿಶ್ರಾಂತಿ ನೀಡಲಾಗಿದೆ. ತುಂಬಾ ಹಣವನ್ನು ಖರ್ಚು ಮಾಡಿ ಅವರನ್ನು ಹೊರಗೆ ಕೂರಿಸಲಾಗುತ್ತದೆ. ಇವೆಲ್ಲವೂ ಸಮಸ್ಯೆಯೇ ಎಂದು “ಎಂದು ತಿವಾರಿ ಹೇಳಿದ್ದಾರೆ.

ಬ್ಯಾಟಿಂಗ್ ಅಲ್ಲಿ ಸಮಸ್ಯೆಯಲ್ಲ. ಆ ತಂಡದ ಸಮಸ್ಯೆ ಯಾವಾಗಲೂ ಬೌಲಿಂಗ್ ಆಗಿತ್ತು. ಅವರಲ್ಲಿ ಸ್ಪೆಷಲಿಸ್ಟ್ ಸ್ಪಿನ್ನರ್ ಇಲ್ಲ. ನೀವು ವಿಲ್ ಜಾಕ್ಸ್ ಅವರಿಗೆ ಮೊದಲ ಓವರ್​ ಕೊಡಲಾಗುತ್ತದೆ. ಕೆಲವೊಮ್ಮೆ ಮಹಿಪಾಲ್ ಲೊಮ್ರೊಗೂ ಬೌಲಿಂಗ್​. ಮೈದಾನದಲ್ಲಿನ ಕೆಲವು ನಾಯಕತ್ವದ ನಿರ್ಧಾರಗಳು ಭಯಾನಕವಾಗಿವೆ. ಪ್ರತಿಯೊಂದು ಮೂಲೆಯಿಂದಲೂ ತಪ್ಪಾಗಿದೆ. ಅವರು ಸಂಪೂರ್ಣವಾಗಿ ಮರುಸಂಘಟನೆಗೊಳ್ಳಬೇಕು ಮತ್ತು ದೀರ್ಘಕಾಲೀನ ಯೋಜನೆಯನ್ನು ರೂಪಿಸಬೇಕು ಎಂದು ಹೇಳಿದರು.

ಬೆಂಗಳೂರು ತಂಡಕ್ಕೆ ಇದು ಇನ್ನೂ ಮುಗಿದ ಅಧ್ಯಾಯವಲ್ಲ. ಫಾಫ್ ಡು ಪ್ಲೆಸಿಸ್ ಪಡೆ ಪ್ಲೇಆಫ್ಗೆ ಪ್ರವೇಶಿಸಲು ದೈತ್ಯ ಪ್ರಯತ್ನದ ಅಗತ್ಯವಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಪದಗ್ರಹಣದ ಬಳಿಕ ತಮ್ಮ ಮೊದಲ ಭಾಷಣದಲ್ಲಿ ಜನತೆಗೆ ತಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಸ್ಪಷ್ಟಪಡಿಸಿದರು.

“ನಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ. ತಮಿಳುನಾಡಿನ 8 ಕೋಟಿ ಜನರೂ ನನ್ನವರೇ. ನಾನು ನಿಮ್ಮಲ್ಲೊಬ್ಬ., ನಿಮ್ಮ ಕುಟುಂಬದ ಸದಸ್ಯ, ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ” ಎಂದು ವಿಜಯ್‌ ಹೇಳಿದರು.

“ಇಲ್ಲಿರುವುದು ಒಂದೇ ಪವರ್‌ ಸೆಂಟರ್‌. ಆ ಕಡೆ ಒಂದು, ಈ ಕಡೆ ಒಂದು ಪವರ್‌ ಸೆಂಟರ್‌ ಇಲ್ಲ. ತಮಿಳುನಾಡಿನಲ್ಲಿ ಹೊಸ ಯುಗಾರಂಭ ಆಗಿದೆ” ಎಂದು ಅವರು ಘೋಷಿಸಿದರು.

ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಂ ಸೇರಿದಂತೆ ಎಲ್ಲ ಧರ್ಮಗಳ ಜನರ ಹಿತ ಕಾಪಾಡುವುದಾಗಿ ಹೇಳಿದ ವಿಜಯ್‌, “ನಿಜವಾದ ಜಾತ್ಯಾತೀತ ಹಾಗೂ ಸಮಾಜವಾದಿ ಆಡಳಿತ ಆರಂಭವಾಗಿದೆ” ಎಂದು ತಿಳಿಸಿದರು.

ತಮ್ಮ ಸರ್ಕಾರ ರಚನೆಗೆ ಬೆಂಬಲ ನೀಡಿದ ಕಾಂಗ್ರೆಸ್‌, ವಿಸಿಕೆ ಹಾಗೂ ಎಡಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ವಿಜಯ್‌, “ನನ್ನ ಸಹೋದರ ರಾಹುಲ್‌ ಗಾಂಧಿಗೆ ವಿಶೇಷ ಧನ್ಯವಾದ” ಎಂದರು.

“ನನ್ನ ಜನರ ಹಣ ಲೂಟಿ ಮಾಡಲು ನಾನು ಬಿಡುವುದಿಲ್ಲ” ಎಂದು ಭ್ರಷ್ಟಾಚಾರ ವಿರುದ್ಧ ಕಠಿಣ ನಿಲುವು ತಾಳುವುದಾಗಿ ಸಿಎಂ ವಿಜಯ್‌ ಸ್ಪಷ್ಟಪಡಿಸಿದರು.

Continue Reading

Latest

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್‌ ವಿಜಯ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಚೆನ್ನೈನ ನೆಹರೂ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಮಾಡಿದರು.

ಟಿವಿಕೆ ಪಕ್ಷ ಕಾಂಗ್ರೆಸ್‌, ವಿಸಿಕೆ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದೆ. ಸಚಿವ ಸಂಪುಟದಲ್ಲಿ ಎನ್‌. ಆನಂದ್‌, ಆಥವ್‌ ಅರ್ಜುನ್‌, ಡಾ. ಅರುಣ್‌ ರಾಜ್‌, ಕೆ.ಎ. ಸೆಂಗೋಟ್ಟಿಯ್ಯನ್‌, ಪಿ. ವೆಂಕಟರಮಣನ್‌, ಆರ್‌. ನಿರ್ಮಲ್‌ ಕುಮಾರ್‌, ಎ.ರಾಜ್‌ ಮೋಹನ್‌, ಟಿ.ಕೆ. ಪ್ರಭು, ಸೆಲ್ವಿ ಎಸ್‌. ಕೀರ್ತನಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಚಿತ್ರನಟಿ ತ್ರಿಶಾ, ವಿಜಯ್‌ ತಂದೆತಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ವಿಜಯ್‌ ಪದಗ್ರಹಣ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.

Continue Reading

ಪ್ರಮುಖ ಸುದ್ದಿ

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

VISTARANEWS.COM


on

ವಿಜಯ್ ನೇತೃತ್ವದ ಟಿವಿಕೆ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್‌, ತಮಗೆ ಒಟ್ಟು 120 ಶಾಸಕರ ಬೆಂಬಲವಿರುವುದಾಗಿ ತಿಳಿಸಿದ್ದಾರೆ.

ಟಿವಿಕೆ ಮೈತ್ರಿಗೆ ದೊರೆತ ಶಾಸಕರ ಬೆಂಬಲ ಹೀಗಿದೆ:

  • ಟಿವಿಕೆ – 107
  • ಕಾಂಗ್ರೆಸ್‌ – 5
  • ಸಿಪಿಐ – 2
  • ಸಿಪಿಎಂ – 2
  • ವಿಸಿಕೆ – 2
  • ಐಯುಎಂಎಲ್‌ – 2

ಒಟ್ಟು 120 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಟಿವಿಕೆ ಮುಂದಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ನಾಲ್ಕನೇ ಬಾರಿಗೆ ವಿಜಯ್‌ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ನಾಳೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಚೆನ್ನೈ ನ ನೆಹರೂ ಮೈದಾನದಲ್ಲಿ ವಿಜಯ್‌ ಪದಗ್ರಹಣ ನಡೆಯುವ ನಿರೀಕ್ಷೆಯಿದೆ.

ಟಿವಿಕೆ ಬೆಂಬಲಿಗರಲ್ಲಿ ಈಗಾಗಲೇ ಸಂಭ್ರಮ ಮನೆಮಾಡಿದ್ದು, ಸಿಎಂ ಆಗಿ ವಿಜಯ್‌ ಪದಗ್ರಹಣದೊಂದಿಗೆ ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ.

Continue Reading

Latest

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

VISTARANEWS.COM


on

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ವಿಜಯ್‌ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಪ್ರಯತ್ನ ಮುಂದುವರಿಸಿದೆ. ವಿಸಿಕೆ ಬೆಂಬಲ ಪಡೆಯುವಲ್ಲಿ ವಿಜಯ್ ಪಡೆ ಬಹುತೇಕ ಯಶಸ್ವಿಯಾಗಿದೆ ಎನ್ನಲಾಗುತ್ತಿದೆ. ಚೆನ್ನೈನ ಮಾಮಲ್ಲಪುರಂನ ಖಾಸಗಿ ಹೋಟೆಲ್‌ನಲ್ಲಿ ಮಧ್ಯಾಹ್ನ ಟಿವಿಕೆ ಶಾಸಕರ ಸಭೆ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ವಿಸಿಕೆ ಸುದ್ದಿಗೋಷ್ಠಿ ನಡೆಸಲಿದ್ದು, ಬೆಂಬಲ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಕಾಂಗ್ರೆಸ್‌ ಹಾಗೂ ಎಡಪಕ್ಷಗಳು ಟಿವಿಕೆಗೆ ಬೆಂಬಲ ಸೂಚಿಸಿವೆ.
ಸದ್ಯ ವಿಜಯ್ ನೇತೃತ್ವದ ಮೈತ್ರಿಗೆ 116 ಶಾಸಕರ ಬೆಂಬಲವಿದೆ. ವಿಸಿಕೆ ಯ ಇಬ್ಬರು ಶಾಸಕರು ಬೆಂಬಲ ನೀಡಿದರೆ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಸಿಗಲಿದೆ.
ಇಂದು ಸಂಜೆ ವಿಜಯ್‌ ಅವರು ತಮಿಳುನಾಡು ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸುವ ಸಾಧ್ಯತೆಯಿದೆ.
ಸಂಖ್ಯಾಬಲ ಹೀಗಿದೆ:
ಟಿವಿಕೆ – 107
ಕಾಂಗ್ರೆಸ್‌ – 5
ಎಡಪಕ್ಷಗಳು – 4
ವಿಸಿಕೆ – 2

Continue Reading
Advertisement
Latest7 minutes ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest1 day ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌