Kannada New Movie: ಹಂಸಲೇಖ ಸಮ್ಮುಖದಲ್ಲಿ `ಕಲ್ಜಿಗ’ ಚಿತ್ರದ ಟೈಟಲ್‌ ಪೋಸ್ಟರ್‌ ಔಟ್‌! - Vistara News

ಸ್ಯಾಂಡಲ್ ವುಡ್

Kannada New Movie: ಹಂಸಲೇಖ ಸಮ್ಮುಖದಲ್ಲಿ `ಕಲ್ಜಿಗ’ ಚಿತ್ರದ ಟೈಟಲ್‌ ಪೋಸ್ಟರ್‌ ಔಟ್‌!

Kannada New Movie: ಇನ್ನುಳಿದಂತೆ, ʻಗಿರ್ ಗಿಟ್ʼ, ʻಸರ್ಕಸ್ʼ, ʻಗಮ್ಜಾಲ್ʼ ಮುಂತಾದ ಚಿತ್ರಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಸುಮನ್ ಸುವರ್ಣ `ಕಲ್ಜಿಗ’ದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ತುಳು ಚಿತ್ರರಂಗದಲ್ಲಿ ಕಿಂಗ್ ಆಫ್ ಆಕ್ಷನ್ ಎಂಬ ಬಿರುದಾಂಕಿತರಾಗಿರುವ ಅರ್ಜುನ್ ಕಾಪಿಕಾಡ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ.

VISTARANEWS.COM


on

Kannada New Movie Kaljiga Title Poster Out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ (Kannada New Movie) ಈಗಾಗಲೇ ಅನೇಕರು ಆಗಮಿಸಿದ್ದಾರೆ. ಒಂದಷ್ಟು ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಚಿತ್ರತಂಡ, ನಾನಾ ಕ್ಷೇತ್ರದ ಗಣ್ಯರು ಮತ್ತು ನಾದಬ್ರಹ್ಮ ಹಂಸಲೇಖ ಸಮ್ಮುಖದಲ್ಲಿ ʻಕಲ್ಜಿಗʼದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆಗೊಂಡಿದೆ.

ಹಿಮಾನಿ ಫಿಲ್ಮ್ಸ್‌ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಕಲ್ಜಿಗ ಚಿತ್ರವನ್ನು ಸುಮನ್ ಸುವರ್ಣ ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ, ಬಹು ಕಾಲದ ನಂತರ ನಾದಬ್ರಹ್ಮ ಹಂಸಲೇಖ ಈ ಸಿನಿಮಾ ಮೂಲಕ ಸಂಗೀತ ನಿರ್ದೇಶನಕ್ಕೆ ಮರಳಿದ್ದಾರೆ. ಗೀತರಚನೆಯತ್ತಲೂ ಹೊರಳಿಕೊಂಡಿದ್ದಾರೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಖುದ್ದು ಹಂಸಲೇಖ ಅವರೇ ಹಾಜರಿದ್ದರು. ಈ ಸಂದರ್ಭದಲ್ಲಿ ಚಿತ್ರತಂಡವನ್ನು ಮೆಚ್ಚಿಕೊಳ್ಳುತ್ತಲೇ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ನಲವತ್ತಕ್ಕೂ ಹೆಚ್ಚು ಸಿನಿಮಾಗಳ ಆಫರ್ ಗಳನ್ನು ತಿರಸ್ಕರಿಸಿ, ಕಲ್ಜಿಗ ಚಿತ್ರದತ್ತ ಆಕರ್ಷಿತರಾದುದಕ್ಕೆ ಕಾರಣಗಳನ್ನು ಬಿಚ್ಚಿಟ್ಟರು. ಒಟ್ಟಾರೆಯಾಗಿ, ನಾದಬ್ರಹ್ಮನ ಮಾತುಗಳಲ್ಲಿ ಒಂದಿಡೀ ಚಿತ್ರ ಮೂಡಿ ಬಂದಿರಬಹುದಾದ ರೀತಿಯ ಬಗ್ಗೆ ಮೆಚ್ಚುಗೆ ಹೊಮ್ಮುತ್ತಿತ್ತು.

ಇನ್ನುಳಿದಂತೆ, ʻಗಿರ್ ಗಿಟ್ʼ, ʻಸರ್ಕಸ್ʼ, ʻಗಮ್ಜಾಲ್ʼ ಮುಂತಾದ ಚಿತ್ರಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಸುಮನ್ ಸುವರ್ಣ `ಕಲ್ಜಿಗ’ದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ತುಳು ಚಿತ್ರರಂಗದಲ್ಲಿ ಕಿಂಗ್ ಆಫ್ ಆಕ್ಷನ್ ಎಂಬ ಬಿರುದಾಂಕಿತರಾಗಿರುವ ಅರ್ಜುನ್ ಕಾಪಿಕಾಡ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಅಪ್ಪಟ ಕನ್ನಡತಿ ಸುಶ್ಮಿತಾ ಭಟ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಎಸ್ ಕೆ ಗ್ರೂಪ್ ಎಂಬ ಮಾರ್ಕೆಟಿಂಗ್ ಸಂಸ್ಥೆಯ ಮಾಲೀಕರಾಗಿರುವ ಶರತ್ ಕುಮಾರ್ ಎ.ಕೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಸದ್ಯದ ಮಟ್ಟಿಗೆ ಕಲ್ಜಿಗದ ಆಂತರ್ಯವನ್ನು ಚಿತ್ರತಂಡ ಗೌಪ್ಯವಾಗಿಟ್ಟಿದೆ.

ಇದನ್ನೂ ಓದಿ:

ಈಗಾಗಲೇ ಉಡುಪಿ, ಮಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಇದೀಗ ಮುಕ್ಕಾಲು ಭಾಗ ಪೋಸ್ಟ್ ಪ್ರೊಡಕ್ಷನ್ ಕಾರ್ಯವೂ ಸಮಾಪ್ತಿಗೊಂಡಿದೆ. ಮಂಗಳೂರು ಸೀಮೆಯ ಕನ್ನಡ ಭಾಷಾ ಶೈಲಿಯಲ್ಲಿ ತಯಾರಾಗಿರುವ ಈ ಚಿತ್ರವನ್ನು ತುಳುವಿಗೆ ಡಬ್ ಮಾಡಲಾಗಿದೆಯಂತೆ. ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ನಂತರದಲ್ಲಿ ಘಟಿಸುವ ರೋಚಕ ಕಥನ ಕಲ್ಜಿಗದಲ್ಲಿದೆಯಂತೆ. ಈ ಪೋಸ್ಟರ್ ಮತ್ತು ಟೈಟಲ್ ಅನಾವರಣದ ವೇದಿಕೆಯಲ್ಲಿ ಚಿತ್ರತಂಡದ ಕಡೆಯಿಂದ ಇವಿಷ್ಟು ಮಾಹಿತಿಗಳು ಜಾಹೀರಾಗಿವೆ.

ಈ ಸಂದರ್ಭದಲ್ಲಿ ಛಾಯಾಗ್ರಾಹಕ ಸಚಿನ್ ಶೆಟ್ಟಿ, ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಿರ್ಮಾಪಕ ಸಂತೋಷ್ ಕುಮಾರ್, ನಿರ್ವತ್ತ ಪೊಲೀಸ್ ಅಧಿಕಾರಿ ಶಿವಪ್ರಕಾಶ್ ಮತ್ತು ಚಿತ್ರತಂಡ ಹಾಜರಿತ್ತು. ಹಂಸಲೇಖ ಸಂಗೀತ, ಸಾಹಿತ್ಯ, ಸಚಿನ್ ಶೆಟ್ಟಿ ಛಾಯಾಗ್ರಹಣ, ಪ್ರಸಾದ್ ಕೆ ಶೆಟ್ಟಿ ಹಿನ್ನೆಲೆ ಸಂಗೀತ, ಯಶ್ವಿನ್ ಕೆ ಶೆಟ್ಟಿಗಾರ್ ಸಂಕಲನ ಈ ಚಿತ್ರಕ್ಕಿದೆ. ಕಾಂತಾರ ಖ್ಯಾತಿಯ ಸನೀಲ್ ಗುರು ಕ್ರಿಯೇಟಿವ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ರಾಧಾಕೃಷ್ಣ ಮಾಣಿಲ, ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಂದೀಪ್ ಶೆಟ್ಟಿ `ಕಲ್ಜಿಗ’ಕ್ಕೆ ಕೈ ಜೋಡಿಸಿದ್ದಾರೆ. ಈಗಾಗಲೇ ಕಲ್ಜಿಗ ಸೆಪೆಂಬರ್ ತಿಂಗಳಲ್ಲಿ ತೆರೆಗಾಣೋದು ಖಾತರಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Actress Murder: ಮೂಲಗಳ ಪ್ರಕಾರ ಆದರೆ ವಿದ್ಯಾ ಅವರು ಕಾಂಗ್ರೆಸ್‌ನಲ್ಲಿದ್ದರೂ ಕೆಲ ನಾಯಕರೊಂದಿಗೆ ಆಪ್ತರಾಗಿದ್ದುದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು.

VISTARANEWS.COM


on

Mysuru News actress Vidhya Nandish congress leader killed by her husband
Koo

ಬೆಂಗಳೂರು: ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ (Actress Murder) ಭೀಕರವಾಗಿ ಕೊಲೆಯಾಗಿದ್ದಾರೆ. ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಇದೀಗ ಪತಿಯೇ ತನ್ನ ಪತ್ನಿಯನ್ನು (Vidhya Nandish) ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

ಇನ್ನು ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿಭಾಯಿಸಿದ್ದರು. ಇದೀಗ ಕೌಟುಂಬಿಕ ಕಲಹದಿಂದಾಗಿ ನಟಿ ಹತ್ಯೆಯಾಗಿದ್ದಾರೆ. ಸಿನಿಮಾ ಮಾತ್ರವಲ್ಲ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ ಆದರೆ ವಿದ್ಯಾ ಅವರು ಕಾಂಗ್ರೆಸ್‌ನಲ್ಲಿದ್ದರೂ ಕೆಲ ನಾಯಕರೊಂದಿಗೆ ಆಪ್ತರಾಗಿದ್ದುದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು.

ಇದನ್ನೂ ಓದಿ: Farmer Self Harming: ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

ವಿದ್ಯಾ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ವಿದ್ಯಾ ನಂದೀಶ್ ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾಗ ಗಲಾಟೆ ನಡೆದಿದೆ ಎನ್ನಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಅದು ವಿಕೋಪಕ್ಕೆ ಹೋಗಿದೆ ಕೊಲೆ ಸಂಭವಿಸಿದೆ ಎಂದು ವರದಿಯಾಗಿದೆ. ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್‌ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

Actor Upendra: ಈ ಸಿನಿಮಾದಲ್ಲಿ 3ಡಿ ಬಾಡಿ ಸ್ಕ್ಯಾನ್ ಬಳಸಿದ್ದಾರೆ. ಸುಮಾರು 200 ಕ್ಯಾಮೆರಾಗಳನ್ನು ಬಳಸಿ ಶೂಟ್ ಮಾಡಲಾಗಿದ್ದು, ಈ ತಂತ್ರಜ್ಞಾನ ಬಳಸಿದ್ದು ಏಪ್ಯಾದಲ್ಲಿಯೇ ಮೊದಲ ಸಿನಿಮಾ ಎನ್ನಲಾಗಿದೆ. ʻಅವತಾರ್ 2′ ಸಿನಿಮಾಗೆ ಈ ತಂತ್ರಜ್ಞಾನವನ್ನು ಬಳಸಲಾಗಿತ್ತು. ಇಷ್ಟೇ ಅಲ್ಲದೆ ಸುಮಾರು 14 ಸಾವಿರ ವಿಎಫ್‌ಎಕ್ಸ್ ಶಾಟ್ಸ್ ಬಳಸಲಾಗಿದೆ.

VISTARANEWS.COM


on

Actor Upendra Ajaneesh Visited Hangary To Record Music
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ರಿಯಲ್‌ ಸ್ಟಾರ್‌ ಉಪೇಂದ್ರ (Actor Upendra) ಅವರ ‘ಯುಐ’ ಸಿನಿಮಾ ಚಿತ್ರೀಕರಣ ಮುಗಿದು ಇದೀಗ ಈ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರ್ಜರಿಯಾಗಿ ನಡೆಯುತ್ತಿದೆ. ಕಳೆದ ವರ್ಷವಷ್ಟೇ ‘UI’ ಸಿನಿಮಾವನ್ನು ಅನೌನ್ಸ್ ಮಾಡುವುದಾಗಿ ಘೋಷಿಸಿದ್ದರು. ಇದೂವರೆಗೂ ಉಪ್ಪಿ ನಿರ್ದೇಶಿಸಿದ ಸಿನಿಮಾಗಳಲ್ಲೇ ಹೆಚ್ಚಿನ ಬಜೆಟ್‌ ಸಿನಿಮಾದಾಗಿದೆ. ಇದೀಗ ಈ ಸಿನಿಮಾ ಬಜೆಟ್ ಸುಮಾರು 100 ಕೋಟಿ ರೂ. ಎಂದು ವರದಿಗಳಾಗಿವೆ. ಇದೀಗ ನಿರ್ದೇಶಕ ಉಪೇಂದ್ರ ಮತ್ತು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಯೂರೋಪಿಯಾ ದೇಶವಾದ ಹಂಗೆರಿಗೆ ಹೋಗಿದ್ದಾರೆ.ಅಜನೀಶ್ ಲೋಕನಾಥ್ ಲೈವ್ ಮ್ಯೂಸಿಕ್ ರೆಕಾರ್ಡ್ ಮಾಡಲು ಹಂಗೆರಿಯನ್ನು ಆರಿಸಿಕೊಂಡಿದ್ದಾರೆ.

ತಮ್ಮ ಸಿನಿಮಾದ ಹಾಡುಗಳಿಗೆ ಉಪೇಂದ್ರ ಅವರೇ ಸಾಹಿತ್ಯವನ್ನು ಬರೆಯುತ್ತಾರೆ. ಹಾಗಾಗಿ ಸಂಗೀತ ನಿರ್ದೇಶಕರ ಜೊತೆಗೆ ಉಪ್ಪಿ ಸಹ ಹಂಗೆರಿಗೆ ತೆರಳಿದ್ದಾರೆ. ಅಲ್ಲದೆ ಅಲ್ಲಿ ಸಿನಿಮಾದ ಇನ್ನಿತರೆ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳನ್ನು ಸಹ ಮಾಡಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ‘ಎ’ ಸಂಗೀತದೊಂದಿಗೆ ಆರಂಭವಾಗುವ ವಿಡಿಯೊನಲ್ಲಿ ಉಪ್ಪಿ ಹಾಗೂ ಅಜನೀಶ್ ಲೋಕನಾಥ್ ಹಂಗೆರಿಯ ನಗರವೊಂದರಲ್ಲಿ ನಿಂತು ಚರ್ಚೆ ಮಾಡುತ್ತಿರುವ ದೃಶ್ಯಗಳಿವೆ.

ಇದನ್ನೂ ಓದಿ: Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

ವರ್ಷಗಳ ನಂತರ ನಿರ್ದೇಶನದತ್ತ ಮುಖ ಮಾಡಿರುವ ಉಪ್ಪಿ, ಜತೆಗೆ ಈ ಚಿತ್ರದಲ್ಲಿ ಯುವ ತಂತ್ರಜ್ಞರು‌ ಕೆಲಸ ಮಾಡುತ್ತಿದ್ದಾರೆ. ಉಪ್ಪಿ ಕ್ಯಾಪ್‌ ಹಾಕಿ, ಮೈಕ್‌ ಹಿಡಿದು ನಿರ್ದೇಶನಕ್ಕೆ ಇಳಿದಿದ್ದು, ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಇತಿಹಾಸ ಮರುಕಳಿಸಲಿದೆಯಾ ಎಂದು ಅಭಿಮಾನಿಗಳು ಚರ್ಚೆ ನಡೆಸುತ್ತಿದ್ದಾರೆ.

ʻತರ್ಲೆ ನನ್ಮಗʼ, ʻಆಪರೇಷನ್ ಅಂತʼ, ʻಶ್ʼ..!, ʻಓಂʼ, ʻಉಪ್ಪಿ-2ʼ, ʻಸೂಪರ್ʼ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ʻಉಪ್ಪಿ 2ʼ ನಂತರ ಬುದ್ಧಿವಂತನ ನಿರ್ದೇಶನದಲ್ಲಿ ಯಾವ ಸಿನಿಮಾ ಕೂಡ ತೆರೆಗೆ ಬರಲಿಲ್ಲ.

ಈ ಸಿನಿಮಾದಲ್ಲಿ 3ಡಿ ಬಾಡಿ ಸ್ಕ್ಯಾನ್ ಬಳಸಿದ್ದಾರೆ. ಸುಮಾರು 200 ಕ್ಯಾಮೆರಾಗಳನ್ನು ಬಳಸಿ ಶೂಟ್ ಮಾಡಲಾಗಿದ್ದು, ಈ ತಂತ್ರಜ್ಞಾನ ಬಳಸಿದ್ದು ಏಪ್ಯಾದಲ್ಲಿಯೇ ಮೊದಲ ಸಿನಿಮಾ ಎನ್ನಲಾಗಿದೆ. ʻಅವತಾರ್ 2′ ಸಿನಿಮಾಗೆ ಈ ತಂತ್ರಜ್ಞಾನವನ್ನು ಬಳಸಲಾಗಿತ್ತು. ಇಷ್ಟೇ ಅಲ್ಲದೆ ಸುಮಾರು 14 ಸಾವಿರ ವಿಎಫ್‌ಎಕ್ಸ್ ಶಾಟ್ಸ್ ಬಳಸಲಾಗಿದೆ.

ಸದ್ಯ ಕನ್ನಡದಲ್ಲಿ ನಿರ್ಮಾಣ ಆಗುತ್ತಿರುವ ದುಬಾರಿ ಸಿನಿಮಾಗಳಲ್ಲಿ ‘UI’ ಕೂಡ ಒಂದು. ತನ್ನ ಕನಸನ್ನು ಸಿನಿಪ್ರಿಯರು ಒಟಿಟಿಯಲ್ಲಿ ಅಲ್ಲದೆ ಥಿಯೇಟರ್‌ನಲ್ಲೇ ಸಿನಿಮಾ ನೋಡಬೇಕು ಅಂತ ಉಪ್ಪಿ ಆಸೆ ಪಟ್ಟು ಅದ್ಧೂರಿಯಾಗಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಸದ್ಯ ಎಡಿಟಿಂಗ್ ಹಂತದಲ್ಲಿದ್ದು, ಮುಂದಿನ ತಿಂಗಳಿಂದ ಪ್ರಚಾರ ಶುರು ಮಾಡುವ ಸಾಧ್ಯತೆಯಿದೆ.ಟಗರು, ಸಲಗ ಖ್ಯಾತಿಯ ಕೆ.ಪಿ. ಶ್ರೀಕಾಂತ್ ಹಾಗೂ ಲಹರಿ ಸಂಸ್ಥೆಯವರು ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ದುಬೈನಲ್ಲಿ ʻಡಿ ಬಾಸ್‌ʼ ವೆಡ್ದಿಂಗ್‌ ಆ್ಯನಿವರ್ಸರಿ ಸೆಲೆಬ್ರೇಷನ್‌: ಇತ್ತ ಪವಿತ್ರಾ ಗೌಡ ಕರ್ಮದ ಬಗ್ಗೆ ಪಾಠ!

Actor Darshan: ಇನ್ನೊಂದೆಡೆ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾ ಗೌಡ ಅವರು ಕೋಪ ಹೊರಹಾಕಿದ್ರಾ ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ದರ್ಶನ್ ಅವರು ಈ ಹಿಂದೆ ಸಂದರ್ಶನವೊಂದರಲ್ಲಿ ಕರ್ಮದ ಬಗ್ಗೆ ಮಾತಾಡಿರುವ ವೈರಲ್ ವಿಡಿಯೊವನ್ನು ಈಗ ಪವಿತ್ರಾ ಗೌಡ (Pavithra Gowda) ಶೇರ್ ಮಾಡಿ ‘ಕರ್ಮ’ ಎಂದು ಕ್ಯಾಪ್ಷನ್‌ ನೀಡಿದ್ದಾರೆ. ಈಗ ವಿವಾಹ ವಾರ್ಷಿಕೋತ್ಸವವನ್ನು ಗ್ರ್ಯಾಂಡ್ ಆಗಿ ಮಾಡಿದ್ದಾರೆ.

VISTARANEWS.COM


on

Darshan And Vijayalakshmi Celebrate Wedding Anniversary In Dubai pavitra gowda posted karma status
Koo

ಬೆಂಗಳೂರು: ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ (Darshan) ಅವರು ‘ಡೆವಿಲ್​: ದಿ ಹೀರೊ’ ಸಿನಿಮಾದ ಕೆಲಸಗಳ ನಡುವೆ ಬಿಡುವು ಪಡೆದ ದುಬೈಗೆ ತೆರಳಿದ್ದಾರೆ. ಅಲ್ಲಿ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಜತೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ದುಬೈನಲ್ಲಿರುವ ಅಭಿಮಾನಿಗಳು ಸೆಲೆಬ್ರೇಷನ್ ಮಾಡಿದ್ದು, ನಟ ದರ್ಶನ್ ಪತ್ನಿ ಜೊತೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಫೋಟೋ, ವಿಡಿಯೋಗಳು ಎಲ್ಲೆಡೆ ವೈರಲ್ ಆಗುತ್ತಿವೆ.ಈ ಬಾರಿ ನಿರ್ಮಾಪಕಿ ಶೈಲಜಾ ನಾಗ್ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ಕೋರಿ ಫೋಟೊ ಹಾಕಿದ್ದರು. ಅದರ ಸ್ಕ್ರೀನ್‌ಶಾಟ್ ಅನ್ನು ವಿಜಯಲಕ್ಷ್ಮೀ ದರ್ಶನ್ ತಮ್ಮ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದಾರೆ.ವಿಜಯಲಕ್ಷ್ಮೀ ಆ ಫೋಟೋ ಹಂಚಿಕೊಂಡ ಎರಡು ಗಂಟೆಯ ಬಳಿಕ ಪವಿತ್ರಾ ಗೌಡ ಕರ್ಮದ ಬಗ್ಗೆ ದರ್ಶನ್ ಮಾತನಾಡಿರುವ ಸ್ಟೇಟಸ್ ಹಾಕಿದ್ದಾರೆ. ಈ ವಿಚಾರಕ್ಕೆ ಅವರ ಅಭಿಮಾನಿಗಳು ಕೆಂಡಾಮಂಡಲರಾಗಿದ್ದಾರೆ.

ಇನ್ನೊಂದೆಡೆ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾ ಗೌಡ ಅವರು ಕೋಪ ಹೊರಹಾಕಿದ್ರಾ ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ದರ್ಶನ್ ಅವರು ಈ ಹಿಂದೆ ಸಂದರ್ಶನವೊಂದರಲ್ಲಿ ಕರ್ಮದ ಬಗ್ಗೆ ಮಾತಾಡಿರುವ ವೈರಲ್ ವಿಡಿಯೊವನ್ನು ಈಗ ಪವಿತ್ರಾ ಗೌಡ (Pavithra Gowda) ಶೇರ್ ಮಾಡಿ ‘ಕರ್ಮ’ ಎಂದು ಕ್ಯಾಪ್ಷನ್‌ ನೀಡಿದ್ದಾರೆ. ಈಗ ವಿವಾಹ ವಾರ್ಷಿಕೋತ್ಸವವನ್ನು ಗ್ರ್ಯಾಂಡ್ ಆಗಿ ಮಾಡಿದ್ದಾರೆ. ದುಬೈನಲ್ಲಿರುವ ಅಭಿಮಾನಿಗಳು ಸೆಲೆಬ್ರೇಷನ್ ಮಾಡಿದ್ದು, ನಟ ದರ್ಶನ್ ಪತ್ನಿ ಜೊತೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: Actor Darshan: ಮೇ 10ಕ್ಕೆ ಗುಡ್‌ನ್ಯೂಸ್‌ ಕೊಡ್ತಿದ್ದಾರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌! ಏನದು?

ವೈರಲ್‌ ವಿಡಿಯೊ ಏನು?

ಕರ್ಮ ಎನ್ನುವುದು ಬ್ಯಾಗೇಜ್ ಥರ. ಏನನ್ನ ನೀವೂ ಅದರಲ್ಲಿ ಫಿಲ್ ಮಾಡ್ತೀರ ಅದೇ ನಿಮಗೆ ಸಿಗುತ್ತೆ. ನಾವೆಲ್ಲಾ ಚಿಕ್ಕವರಿರುವಾಗ ನಮ್ಮ ಅಜ್ಜಿ, ತಾತ ಹೇಳ್ತಾ ಇದ್ದರು. ಈಗ ಕರ್ಮ ಮಾಡ್ತಾ ಇದ್ದೀಯಾ ಮುಂದಿನ ಜನ್ಮಕ್ಕೆ ಕ್ಯಾರಿ ಆಗುತ್ತೆ ಅಂತ. ಆಗೆಲ್ಲಾ ಮುಂದಿನ ಜನ್ಮಕ್ಕೆ ಕ್ಯಾರಿ ಆಗ್ತಾ ಇತ್ತು. ಈಗ ಅಲ್ಲೆ ಡ್ರಾ ಅಲ್ಲೇ ಬಹುಮಾನ’ ಎಂಬ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಪವಿತ್ರಾ ಗೌಡ ಕರ್ಮದ ಬಗ್ಗೆ ದರ್ಶನ್ ಮಾತನಾಡಿರುವ ಸ್ಟೇಟಸ್ ಹಾಕಿದ್ದಾರೆ. ಈ ವಿಚಾರಕ್ಕೆ ಅವರ ಅಭಿಮಾನಿಗಳು ಕೋಪವಾಗಿದ್ದಾರೆ. ಆದರೆ ಇಲ್ಲಿ ಪವಿತ್ರಾ ಗೌಡ ಯಾರಿಗೆ ಕರ್ಮದ ಪಾಠ ಮಾಡಿದ್ರು ಗೊತ್ತಿಲ್ಲ. ಪಕ್ಕಾ ಇದು ವಿಜಯಲಕ್ಷ್ಮೀ ಅವರಿಗೆ ಎಂದು ಕಮೆಂಟ್‌ ಮಾಡಿದ್ದಾರೆ.

ಮಾಡೆಲ್‌ ಪವಿತ್ರ ಗೌಡ ಅವರು ಕೆಲವು ದಿನಗಳ ಹಿಂದೆಯಷ್ಟೇ ನಟ ದರ್ಶನ್ (Darshan Thoogudeepa) ಜತೆಗಿನ ಫೋಟೊಗಳನ್ನು ಹಂಚಿಕೊಂಡಿದ್ದರು. ಇದಾದ ಮೇಲೆ ಆ ಪೋಸ್ಟ್‌ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಖಡಕ್‌ ಆಗಿಯೇ ಪ್ರತಿಕ್ರಿಯಿಸಿದ್ದರು.

ವಿಜಯಲಕ್ಷ್ಮಿ ಬರೆದುಕೊಂಡಿದ್ದೇನು?
ವಿಜಯಲಕ್ಷ್ಮಿ ಈ ಬಗ್ಗೆ ಪೋಸ್ಟ್‌ ಮಾಡಿ ʻʻಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ಈ ಮಹಿಳೆಗೆ ಸೆನ್ಸ್‌ ಮೊದಲು ಇರಬೇಕು. ಇದೀಗ ಆಕೆಯ ಕ್ಯಾರೆಕ್ಟರ್‌ ಹಾಗೂ ನೈತಿಕ ನಿಲುವಿನ ಬಗ್ಗೆ ತೋರಿಸುತ್ತಿದೆ. ವಿವಾಹಿತನೆಂದು ತಿಳಿದರೂ ಕೂಡ ತಮ್ಮ ವೈಯಕ್ತಿಕ ಅಗತ್ಯತೆಯಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಈ ಎಲ್ಲ ಫೋಟಗಳು ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಖುಷಿ ಗೌಡ ಅವರದ್ದು. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಧ್ವನಿ ಎತ್ತಲು ಸೋಷಿಯಲ್‌ ಮೀಡಿಯಾವನ್ನು ಬಖಸುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಅಂದರೆ ಸಂಜಯಸಿಂಗ್ , ಖುಷಿಗೌಡ, ಪವಿತ್ರ ಗೌಡ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದುʼʼಎಂದು ಬರೆದುಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: `ಸಂಜು ವೆಡ್ಸ್ ಗೀತಾ’ ಚಿತ್ರದ ನಿರ್ಮಾಪಕರಿಂದ ಬರ್ತಿದೆ ಮತ್ತೊಂದು ಅದ್ಧೂರಿ ಚಿತ್ರ!

Kannada New Movie: ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ, ಮೂಲತಃ ಕನ್ನಡಿಗರೆ ಆಗಿರುವ ಕಿಶೋರ್ ಭಾರ್ಗವ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರವೊಂದನ್ನು ನಿರ್ದೇಶಿಸಿರುವ ಕಿಶೋರ್ ಭಾರ್ಗವ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಮುಂಗಾರು ಕಳೆದ ಮೇಲೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿರುವ ನಿರ್ಮಾಪಕ ಪ್ರಮೋದ್ ನಾರಾಯಣ್, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

VISTARANEWS.COM


on

Kannada New Movie sanju weds geetha another movie came
Koo

ಬೆಂಗಳೂರು: ಕನ್ನಡ ಚಿತ್ರರಂಗದ ಸೂಪರ್ ಹಿಟ್ ಚಿತ್ರ “ಸಂಜು ವೆಡ್ಸ್ ಗೀತಾ“, ” ಹಾಗೆ ಸುಮ್ಮನೆ” ಚಿತ್ರಗಳ ನಿರ್ಮಾಪಕರಾದ (Kannada New Movie) ಪ್ರಮೋದ್ ನಾರಾಯಣ್ ಅವರ ನಿರ್ಮಾಣದಲ್ಲಿ ನೂತನ ಚಿತ್ರವೊಂದು ಆರಂಭವಾಗಲಿದೆ. “ಕವಲುದಾರಿ”, “ಆಪರೇಷನ್ ಅಲುಮೇಲಮ್ಮ” ಚಿತ್ರಗಳ ಮೂಲಕ ಜನಪ್ರಿಯರಾಗಿ ತಮ್ಮದೇ ಆದ ಅಭಿಮಾನಿ ವಲಯ ಹೊಂದಿರುವ ರಿಷಿ ಈ ಚಿತ್ರದ ನಾಯಕರಾಗಿ ಅಭಿನಯಿಸುತ್ತಿದ್ದಾರೆ.

ರಾಕಡ್ ಫಿಲಂಸ್ ಮುಂಬೈ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜೊಯ್ ದೀಪ್ ಬಿಸ್ವಾಸ್ ಹಾಗೂ ಸೋನಾಲಿ ಬಿಸ್ವಾಸ್ ನಿರ್ಮಾಣಕ್ಕೆ ಸಾಥ್ ನೀಡುತ್ತಿದ್ದಾರೆ. ವಸಂತ್ ಹಂಗೆ ಮತ್ತು ಕೆ.ಸಿ.ಶಿವಾನಂದ್ ಈ ನೂತನ ಚಿತ್ರದ ಸಹ ನಿರ್ಮಾಪಕರು.

ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ, ಮೂಲತಃ ಕನ್ನಡಿಗರೇ ಆಗಿರುವ ಕಿಶೋರ್ ಭಾರ್ಗವ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರವೊಂದನ್ನು ನಿರ್ದೇಶಿಸಿರುವ ಕಿಶೋರ್ ಭಾರ್ಗವ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಮುಂಗಾರು ಕಳೆದ ಮೇಲೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿರುವ ನಿರ್ಮಾಪಕ ಪ್ರಮೋದ್ ನಾರಾಯಣ್, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಡಿಸ್ನಿ ಹಾಟ್‌ಸ್ಟಾರ್‌ ನಿರ್ಮಾಣದ “ಸೈತಾನ್” ವೆಬ್ ಸಿರೀಸ್ ಮೂಲಕ ರಿಷಿ ತೆಲುಗಿನಲ್ಲೂ ಹೆಸರು ಮಾಡಿದ್ದಾರೆ. ತಮಿಳುನಾಡಿನಲ್ಲೂ ರಿಷಿ ಜನಪ್ರಿಯ. ಎಲ್ಲಾ ಭಾಷೆಗಳ ಅಭಿಮಾನಿಗಳಿಗೂ ಪ್ರಿಯವಾಗುವಂತಹ ಕಥೆ ನಮ್ಮ ಚಿತ್ರದಲ್ಲಿರುತ್ತದೆ ಎನ್ನುತ್ತಾರೆ ನಿರ್ಮಾಪಕ ಪ್ರಮೋದ್ ನಾರಾಯಣ್.

ಈಗಾಗಲೇ ರಿಷಿ ನಟನೆಯ ʻರಾಮನ ಅವತಾರ ಸಿನಿಮಾ ಎರಡನೇ ವಾರ ಚಿತ್ರಮಂದಿರದಲ್ಲಿ ಓಡುತ್ತಿದೆ. ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ರಾಮನ ಅವತಾರ’ ಸಿನಿಮಾಗೆ ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರ ಮೊದಲ ಅನುಭವ.

ʻಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಅವರು ‘ಸ್ಟಾರ್ ಫ್ಯಾಬ್ ಪ್ರೊಡಕ್ಷನ್’​ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್‌ ಅಡಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ. ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೆ ಛಾಯಾಗ್ರಾಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ.

Continue Reading
Advertisement
Chitta Ranjan Dash
ದೇಶ19 mins ago

Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

Road Accident
ಕ್ರೈಂ21 mins ago

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

DK Shivakumar statement in KPCC. no leadership if the booth lead is not given DK Shivakumar warns leaders
ರಾಜಕೀಯ29 mins ago

‌DK Shivakumar: ಬೂತ್ ಲೀಡ್ ಕೊಡಿಸದಿದ್ದರೆ ನಾಯಕತ್ವ ಇಲ್ಲ; ಜಾಗ ಖಾಲಿ ಮಾಡಿ: ಮುಖಂಡರಿಗೆ ಡಿಕೆಶಿ ವಾರ್ನಿಂಗ್

Mysuru News actress Vidhya Nandish congress leader killed by her husband
ಕ್ರೈಂ50 mins ago

Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Anant Ambani Radhika 2nd pre wedding bash
ಬಾಲಿವುಡ್58 mins ago

Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

NIA raid rameshwaram cafe blast
ಪ್ರಮುಖ ಸುದ್ದಿ1 hour ago

Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

Viral Video
ವೈರಲ್ ನ್ಯೂಸ್1 hour ago

Viral Video: ಮದುವೆಗೆ ಬಂದ ಮಾಜಿ ಪ್ರಿಯಕರ; ಆಮೇಲೆ ನಡೆದಿದ್ದೇ ಬೇರೆ- ಸಿನಿಮಾ ಸ್ಟೈಲ್‌ನಲ್ಲಿ ಟ್ವಿಸ್ಟ್‌ ಎಂದ ನೆಟ್ಟಿಗರು

Love Case Father throws hot water on man who loved his daughter for coming home
ಕೊಡಗು1 hour ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

RCB IPL Records
ಕ್ರೀಡೆ2 hours ago

RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

Emirates Flight
ದೇಶ2 hours ago

Emirates Flight: ವಿಮಾನ ಡಿಕ್ಕಿ ಹೊಡೆದು 36 ಫ್ಲೆಮಿಂಗೊ ಪಕ್ಷಿಗಳಿಗೆ ದಾರುಣ ಅಂತ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌