DC vs GT: ಡೆಲ್ಲಿ ದಾಳಿಗೆ ಚೆಲ್ಲಾಪಿಲ್ಲಿಯಾದ ಗುಜರಾತ್​; 6 ವಿಕೆಟ್​ ಹೀನಾಯ ಸೋಲು - Vistara News

ಕ್ರೀಡೆ

DC vs GT: ಡೆಲ್ಲಿ ದಾಳಿಗೆ ಚೆಲ್ಲಾಪಿಲ್ಲಿಯಾದ ಗುಜರಾತ್​; 6 ವಿಕೆಟ್​ ಹೀನಾಯ ಸೋಲು

DC vs GT: ಈ ಹಿಂದಿನ ಪಂದ್ಯಗಳಲ್ಲಿ ಕಳಪೆ ಬೌಲಿಂಗ್​ ಮೂಲಕ ಭಾರೀ ಟೀಕೆ ಎದುರಿಸಿದ್ದ ಡೆಲ್ಲಿ ಬೌಲರ್​ಗಳು ಈ ಪಂದ್ಯದಲ್ಲಿ ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ಸಂಘಟಿಸಿದರು. ಮುಕೇಶ್​ ಕುಮಾರ್​ 14 ರನ್​ಗೆ 3 ವಿಕೆಟ್​ ಕಿತ್ತರೆ, ಟ್ರಿಸ್ಟಾನ್ ಸ್ಟಬ್ಸ್ ಒಂದೇ ಒವರ್​ನಲ್ಲಿ 2 ಪ್ರಮುಖ ವಿಕೆಟ್​ ಬೇಟೆಯಾಡಿದರು. ಅನುಭವಿ ಇಶಾಂತ್​ ಶರ್ಮ ಕೇವಲ 8 ರನ್​ ವೆಚ್ಚದಲ್ಲಿ 2 ವಿಕೆಟ್​ ಉರುಳಿಸಿದರು.

VISTARANEWS.COM


on

DC vs GT
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್: ಮುಕೇಶ್​ ಕುಮಾರ್(3)​ ಮತ್ತು ಇಶಾಂತ್​ ಶರ್ಮ(2) ಅವರ ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿಗೆ ನಲುಗಿದ ಗುಜರಾತ್​ ಟೈಟಾನ್ಸ್(Gujarat Titans)​ ತಂಡ ಡೆಲ್ಲಿ ಕ್ಯಾಪಿಟಲ್ಸ್​(DC vs GT) ವಿರುದ್ಧದ ಬುಧವಾರದ ಐಪಿಎಲ್(IPL 2024)​ ಪಂದ್ಯದಲ್ಲಿ 6 ವಿಕೆಟ್​ಗಳ ಹೀನಾಯ ಸೋಲು ಕಂಡಿದೆ. ​

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಡೆಲ್ಲಿ(Delhi Capitals) ತಂಡದ ನಾಯಕ ಪಂತ್​ ಅವರ ಆಯ್ಕೆಯನ್ನು ಬೌಲರ್​ಗಳು ತಮ್ಮ ಘಾತಕ ದಾಳಿಯ ಮೂಲಕ ಸಮರ್ಥಿಸಿಕೊಂಡರು. ಎದುರಾಳಿ ಗುಜರಾತ್​ ತಂಡವನ್ನು 89 ರನ್​ಗಳಿಗೆ ಆಲೌಟ್​ ಮಾಡಿದರು. ಇದು ಈ ಬಾರಿಯ ಟೂರ್ನಿಯಲ್ಲಿ ತಂಡವೊಂದು ಗಳಿಸಿದ ಮೊದಲ ಕನಿಷ್ಠ ಮೊತ್ತವಾಗಿದೆ. ಸಾಧಾರಣ ಮೊತ್ತವನ್ನು ಬೆನ್ನತ್ತಿದ ಡೆಲ್ಲಿ 8.5 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 92 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು.

ಚೇಸಿಂಗ್​ ವೇಳೆ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಬಿರುಸಿನ ಬ್ಯಾಟಿಂಗ್​ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಇವರ ಈ ಆಕ್ರಮಣಕಾರಿ ಬ್ಯಾಟಿಂಗ್​ನಿಂದಾಗಿ 2 ಓವರ್​ ಮುಕ್ತಾಯಗೊಳ್ಳುವ ಮುನ್ನವೇ ತಂಡಕ್ಕೆ 25 ರನ್​ ಹರಿದುಬಂತು. ಆದರೆ ಇವರ ಈ ಆಟ ಹೆಚ್ಚು ಹೊತ್ತು ಸಾಗಲಿಲ್ಲ. ಸ್ಪೆನ್ಸರ್ ಜಾನ್ಸನ್ ಎಸೆದ ವೈಡ್​ ಲೆಂತ್​ ಬಾಲ್​ನ ಮರ್ಮವನರಿಯದೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಅವರ ಗಳಿಕ 10 ಎಸೆತಗಳಿಂದ 20 ರನ್. ಈ ವಿಕೆಟ್​ ಪತನದ ಬಳಿಕ ಆಡಲಿಳಿದ ಅಭಿಷೇಕ್​ ಪೋರೆಲ್(15)​ ಮತ್ತು ಶಾಯ್ ಹೋಪ್(19)​ ಬೇಗನೆ​ ವಿಕೆಟ್​ ಕಳೆದುಕೊಂಡು ತಂಡಕ್ಕೆ ಆತಂಕ ತಂದೊಡ್ಡಿದರು. ಈ ವೇಳೆ ತಾಳ್ಮೆಯುತ ಬ್ಯಾಟಿಂಗ್​ ನಡೆಸಿದ ನಾಯಕ ಪಂತ್​(16) ಮತ್ತು ಸುಮೀತ್​ ಕುಮಾರ್​(9) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಗುಜರಾತ್​ ಪರ ಸಂದೀಪ್​ ವಾರಿಯರ್​ 2 ವಿಕೆಟ್​ ಕಿತ್ತರು.

ರಶೀದ್​ ಖಾನ್​ ಏಕಾಂಗಿ ಹೋರಾಟ


ಇನಿಂಗ್ಸ್​ ಆರಂಭಿಸಿದ ಗುಜರಾತ್​ ತಂಡದ ಬ್ಯಾಟರ್​ಗಳು ಡೆಲ್ಲಿ ಬೌಲರ್​ಗಳಾದ ಇಶಾಂತ್​ ಶರ್ಮ, ಮುಕೇಶ್​ ಕುಮಾರ್​ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರ ಕರಾರುವಾಕ್ ಬೌಲಿಂಗ್ ಎದುರು ಅಬ್ಬರಿಸಲು ವಿಫಲರಾದರು. ನಾಯಕ ಶುಭಮನ್​​ ಗಿಲ್​(8), ವೃದ್ಧಿಮಾನ್​ ಸಾಹಾ(2), ಡೇವಿಡ್​ ಮಿಲ್ಲರ್​(2), ಅಭಿನವ್​ ಮನೋಹರ್​(8) ಮತ್ತು ಈ ಆವೃತ್ತಿಯಲ್ಲಿ ಮೊದಲ ಪಂದ್ಯವಾನ್ನಾಡಿದ ಶಾರುಖ್ ಖಾನ್(0) ಸಿಂಗಲ್​ ಡಿಜಿಟ್​ಗೆ ಸೀಮಿತರಾಗಿ ಪೆವಿಲಿಯನ್​ ಪರೇಡ್​ ನಡೆಸಿದರು.

ಇದನ್ನೂ ಓದಿ IPL 2024: ಕೆಕೆಆರ್ ಸೋಲು ಕಂಡು ಕಣ್ಣೀರು ಸುರಿಸಿದ ನಟ ಶಾರೂಖ್ ಖಾನ್‌; ಫೋಟೊ ವೈರಲ್​

ಇನ್ನೇನು ತಂಡ 50ರನ್​ ಒಳಗಡೆ ಗಂಟು-ಮೂಟೆ ಕಟ್ಟುತ್ತದೆ ಎನ್ನುವ ಹಂತದಲ್ಲಿ 8ನೇ ಕ್ರಮಾಂಕದಲ್ಲಿ ಆಡಲಿಳಿದ ರಶೀದ್​ ಖಾನ್​ ಏಕಾಂಗಿ ಹೋರಾಟ ನಡೆಸಿ 24 ಎಸೆತಗಳಿಂದ 31 ರನ್​ ಚಚ್ಚಿ ತಂಡದ ಮೊತ್ತವನ್ನು 80ರ ಗಡಿ ದಾಟಿಸಿ ಮಾನ ಉಳಿಸಿದರು. ಒಟ್ಟಾರೆಯಾಗಿ ತಂಡದ ಪರ ಮೂರು ಮಂದಿ ಮಾತ್ರ ಎರಡಂಕಿ ಮೊತ್ತ ಕಲೆಹಾಕುವಲ್ಲಿ ಯಶಸ್ಸು ಕಂಡರು. ಸಾಯಿ ಸುದರ್ಶನ್​(12) ಮತ್ತು ರಾಹುಲ್​ ತೆವಾಟಿಯ(10) ರನ್​ ಬಾರಿಸಿದರು.

ಡೆಲ್ಲಿ ಬೌಲರ್​ಗಳ ಸಂಘಟಿತ ಹೋರಾಟ


ಈ ಹಿಂದಿನ ಪಂದ್ಯಗಳಲ್ಲಿ ಕಳಪೆ ಬೌಲಿಂಗ್​ ಮೂಲಕ ಭಾರೀ ಟೀಕೆ ಎದುರಿಸಿದ್ದ ಡೆಲ್ಲಿ ಬೌಲರ್​ಗಳು ಈ ಪಂದ್ಯದಲ್ಲಿ ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ಸಂಘಟಿಸಿದರು. ಮುಕೇಶ್​ ಕುಮಾರ್​ 14 ರನ್​ಗೆ 3 ವಿಕೆಟ್​ ಕಿತ್ತರೆ, ಟ್ರಿಸ್ಟಾನ್ ಸ್ಟಬ್ಸ್ ಒಂದೇ ಒವರ್​ನಲ್ಲಿ 2 ಪ್ರಮುಖ ವಿಕೆಟ್​ ಬೇಟೆಯಾಡಿದರು. ಅನುಭವಿ ಇಶಾಂತ್​ ಶರ್ಮ ಕೇವಲ 8 ರನ್​ ವೆಚ್ಚದಲ್ಲಿ 2 ವಿಕೆಟ್​ ಉರುಳಿಸಿದರು. ಖಲೀಲ್​ ಅಹ್ಮದ್​ ಒಂದು ಮೇಡನ್​ ಸಹಿತ 18 ನೀಡಿ 1 ವಿಕೆಟ್​ ಪಡೆದರು. ಅಕ್ಷರ್​ ಕೂಡ ಒಂದು ವಿಕೆಟ್​ ಕಲೆಹಾಕಿದರು. ಆದರೆ ಕುಲ್​ದೀಪ್​ 4 ಓವರ್​ ಎಸೆದರೂ ವಿಕೆಟ್​ ಕೀಳುವಲ್ಲಿ ವಿಫಲರಾದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs RR: ಆರ್​ಸಿಬಿ-ರಾಜಸ್ಥಾನ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

RCB vs RR: ಒಂದೊಮ್ಮೆ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾದರೆ 120 ನಿಮಿಷಗಳ (2 ಗಂಟೆ) ಅವಧಿಗೆ ಪಂದ್ಯವನ್ನು ವಿಸ್ತರಿಸಬಹುದಾಗಿದೆ. ಆಗ 9.40ಕ್ಕೆ ಪಂದ್ಯ ಆರಂಭವಾಗುವುದಿದ್ದರೂ ಓವರ್‌ಗಳಲ್ಲಿ ಯಾವುದೇ ಕಡಿತ ಇರುವುದಿಲ್ಲ. ಸ್ಪಷ್ಟ ಫ‌ಲಿತಾಂಶಕ್ಕೆ ತಲಾ 5 ಓವರ್‌ಗಳ ಆಟ ನಡೆಯಬೇಕಿದೆ.

VISTARANEWS.COM


on

RR vs RCB
Koo

ಅಹಮದಾಬಾದ್​: ನಾಳೆ(ಬುಧವಾರ) ನಡೆಯುವ 17ನೇ ಆವೃತ್ತಿಯ ಐಪಿಎಲ್​ನ(IPL 2024) ಎಲಿಮಿನೇಟರ್​ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್(RCB vs RR)​ ಮತ್ತು ಆರ್​ಸಿಬಿ ಮುಖಾಮುಖಿಯಾಗಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ(Narendra Modi Stadium) ನಡೆಯಲಿದೆ. ಇದೇ ಮೈದಾನದಲ್ಲಿ ನಡೆಯಬೇಕಿದ್ದ ಲೀಗ್​ ಪಂದ್ಯವೊಂದು ಮಳೆಯಿಂದ ರದ್ದಾಗಿತ್ತು. ಹೀಗಾಗಿ ಅಭಿಮಾನಿಗಳಿಗೆ ಈ ಪಂದ್ಯಕ್ಕೂ ಮಳೆ(Rain Forecast) ಇದೆಯಾ ಎಂಬ ಚಿಂತೆ ಕಾಡಿದೆ. ಆದರೆ ಹವಾಮಾನ(Ahmedabad Weather) ಇಲಾಖೆ ಸಿಹಿ ಸುದ್ದಿ ನೀಡಿದೆ.

ಹವಾಮಾನ ವರದಿ


ಹವಾಮಾನ ಇಲಾಖೆಯ ವರದಿಯ ಪ್ರಕಾರ, ಅಹಮದಾಬಾದ್‌ನಲ್ಲಿ ಮೇ 22 ರಂದು ತಾಪಮಾನವು 45 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಬಹುದು ಮತ್ತು ಮಳೆಯಾಗುವ ಸಾಧ್ಯತೆ 0% ರಷ್ಟು ಇರುತ್ತದೆ ಎಂದು ತಿಳಿಸಿದೆ. ಹೀಗಾಗಿ ಪಂದ್ಯವನ್ನು ಅಭಿಮಾನಿಗಳು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಬಹುದು. ರಾತ್ರಿ 8 ಗಂಟೆಗೆ ತಾಪಮಾನವು 42 ಡಿಗ್ರಿ ಸೆಲ್ಸಿಯಸ್‌ಗೆ ಮತ್ತು ರಾತ್ರಿ 10 ಗಂಟೆಗೆ 39 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ. ಪಂದ್ಯದ ಸಮಯದಲ್ಲಿ ಗಾಳಿಯ ಪ್ರಮಾಣ ಸುಮಾರು 16-21% ಇದರು ಸಾಧತೆ ಇದೆ.

ಒಂದೊಮ್ಮೆ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾದರೆ 120 ನಿಮಿಷಗಳ (2 ಗಂಟೆ) ಅವಧಿಗೆ ಪಂದ್ಯವನ್ನು ವಿಸ್ತರಿಸಬಹುದಾಗಿದೆ. ಆಗ 9.40ಕ್ಕೆ ಪಂದ್ಯ ಆರಂಭವಾಗುವುದಿದ್ದರೂ ಓವರ್‌ಗಳಲ್ಲಿ ಯಾವುದೇ ಕಡಿತ ಇರುವುದಿಲ್ಲ. ಸ್ಪಷ್ಟ ಫ‌ಲಿತಾಂಶಕ್ಕೆ ತಲಾ 5 ಓವರ್‌ಗಳ ಆಟ ನಡೆಯಬೇಕಿದೆ. ಹೆಚ್ಚುವರಿ ಅವಧಿಯಲ್ಲೂ ಇದು ಸಾಧ್ಯವಾಗದೇ ಹೋದರೆ ಲೀಗ್‌ ಹಂತದ ಅಂಕಪಟ್ಟಿಯಲ್ಲಿ ಮೇಲಿದ್ದ ತಂಡವನ್ನು ಜಯಶಾಲಿ ಎಂದು ಘೋಷಿಸಲಾಗುತ್ತದೆ.

ಮುಖಾಮುಖಿ


ಆರ್​ಸಿಬಿ ಮತ್ತು ರಾಜಸ್ಥಾನ್​ ತಂಡಗಳು ಇದುವರೆಗಿನ ಐಪಿಎಲ್​ ಆವೃತ್ತಿಯಲ್ಲಿ ಒಟ್ಟು 31 ಬಾರಿ(RR vs RCB Head To Head Record) ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 15, ರಾಜಸ್ಥಾನ್​ 13 ಗೆಲುವು ಸಾಧಿಸಿದೆ. 3 ಪಂದ್ಯಗಳು ಫಲಿತಾಂಶ ಇಲ್ಲದೆ ಕೊನೆಗೊಂಡಿದೆ. ಈ ಲೆಕ್ಕಾಚಾರದಲ್ಲಿ ಆರ್​ಸಿಬಿ ಬಲಿಷ್ಠ ಎನ್ನಲಡ್ಡಿಯಿಲ್ಲ. ಈ ಬಾರಿಯ ಮುಖಾಮುಖಿಯಲ್ಲಿ ರಾಜಸ್ಥಾನ್​ ಗೆಲುವು ಸಾಧಿಸಿತ್ತು.

ಇದನ್ನೂ ಓದಿ RCB vs RR: ಆರ್​ಸಿಬಿ-ರಾಜಸ್ಥಾನ್ ತಂಡಗಳ​ ಐಪಿಎಲ್​ ​ಪ್ಲೇ ಆಫ್/ನಾಕೌಟ್ ದಾಖಲೆ ಹೇಗಿದೆ?

ರಾಜಸ್ಥಾನ್​ ರಾಯಲ್ಸ್​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ 2022ರಲ್ಲಿ ನಡೆದಿದ್ದ ಐಪಿಎಲ್​ ಟೂರ್ನಿಯ ಕ್ವಾಲಿಫೈಯರ್​-2 ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿತ್ತು. ಪಂದ್ಯದಲ್ಲಿ ರಾಜಸ್ಥಾನ್​ 7 ವಿಕೆಟ್​ ಅಂತರದ ಭರ್ಜರಿ ಗೆಲುವು ಸಾಧಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಈ ಸೋಲಿಗೆ ಆರ್​ಸಿಬಿ ಈ ಬಾರಿಯ ಎಲಿಮಿನೇಟರ್​ ಪಂದ್ಯದಲ್ಲಿ ಸೇಡು ತೀರಿಸಿಕೊಂಡೀತೇ? ಎಂದು ಕಾದು ನೋಡಬೇಕಿದೆ.

ಸಂಭಾವ್ಯ ತಂಡಗಳು


ಆರ್​ಸಿಬಿ:
 ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮರೂನ್​ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆ), ಕರ್ಣ್ ಶರ್ಮಾ, ಯಶ್ ದಯಾಳ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್.

ರಾಜಸ್ಥಾನ್​ ರಾಯಲ್ಸ್​: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ನಾಂದ್ರೆ ಬರ್ಗರ್.

Continue Reading

ಕ್ರೀಡೆ

RCB vs RR: ಆರ್​ಸಿಬಿ-ರಾಜಸ್ಥಾನ್ ತಂಡಗಳ​ ಐಪಿಎಲ್​ ​ಪ್ಲೇ ಆಫ್/ನಾಕೌಟ್ ದಾಖಲೆ ಹೇಗಿದೆ?

RCB vs RR: ಆರ್​ಸಿಬಿ ಮತ್ತು ರಾಜಸ್ಥಾನ್​ ತಂಡಗಳು ಇದುವರೆಗಿನ ಐಪಿಎಲ್​ ಆವೃತ್ತಿಯಲ್ಲಿ ಒಟ್ಟು 31 ಬಾರಿ(RR vs RCB Head To Head Record) ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 15, ರಾಜಸ್ಥಾನ್​ 13 ಗೆಲುವು ಸಾಧಿಸಿದೆ. 3 ಪಂದ್ಯಗಳು ಫಲಿತಾಂಶ ಕಂಡಿಲ್ಲ.

VISTARANEWS.COM


on

RCB vs RR
Koo

ಅಹಮದಾಬಾದ್​: ಐಪಿಎಲ್​ ಆವೃತ್ತಿಯ ಚೊಚ್ಚಲ ಚಾಂಪಿಯನ್​ ರಾಜಸ್ಥಾನ್​ ರಾಯಲ್ಸ್​(RCB vs RR) ಮತ್ತು ಮೂರು ಬಾರಿ ಫೈನಲ್​ ಪ್ರವೇಶಿಸಿದರೂ ಕಪ್​ ಗೆಲ್ಲದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡಗಳು ನಾಳೆ(ಬುಧವಾರ) ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇತ್ತಂಡಗಳ ಇದುವರೆಗಿನ ಐಪಿಎಲ್​ನ ಸಾಧನೆಗಳ ಹಿನ್ನೋಟ ಇಂತಿದೆ.

ಸೇಡು ತೀರಿಸಿಕೊಂಡೀತೇ ಆರ್​ಸಿಬಿ?


ರಾಜಸ್ಥಾನ್​ ರಾಯಲ್ಸ್​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ 2022ರಲ್ಲಿ ನಡೆದಿದ್ದ ಐಪಿಎಲ್​ ಟೂರ್ನಿಯ ಕ್ವಾಲಿಫೈಯರ್​-2 ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿತ್ತು. ಪಂದ್ಯದಲ್ಲಿ ರಾಜಸ್ಥಾನ್​ 7 ವಿಕೆಟ್​ ಅಂತರದ ಭರ್ಜರಿ ಗೆಲುವು ಸಾಧಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಈ ಸೋಲಿಗೆ ಆರ್​ಸಿಬಿ ಈ ಬಾರಿಯ ಎಲಿಮಿನೇಟರ್​ ಪಂದ್ಯದಲ್ಲಿ ಸೇಡು ತೀರಿಸಿಕೊಂಡೀತೇ? ಎಂದು ಕಾದು ನೋಡಬೇಕಿದೆ.

ಆರ್​ಸಿಬಿ ನಾಕೌಟ್​/ ಪ್ಲೇ ಆಫ್​ ಸಾಧನೆ


2009ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

201ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2011ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

2015ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2016ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

2020ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2021ರಲ್ಲಿ ಲೀಗ್​ನಲ್ಲಿ 3ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2022ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

ರಾಜಸ್ಥಾನ್​ ನಾಕೌಟ್​/ ಪ್ಲೇ ಆಫ್​ ಸಾಧನೆ


2008ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಚಾಂಪಿಯನ್​

2013ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2015ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2018ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2022ರಲ್ಲಿ ಲೀಗ್​ನಲ್ಲಿ 2ನೇ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

ಇದನ್ನೂ ಓದಿ RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

ಮುಖಾಮುಖಿ


ಆರ್​ಸಿಬಿ ಮತ್ತು ರಾಜಸ್ಥಾನ್​ ತಂಡಗಳು ಇದುವರೆಗಿನ ಐಪಿಎಲ್​ ಆವೃತ್ತಿಯಲ್ಲಿ ಒಟ್ಟು 31 ಬಾರಿ(RR vs RCB Head To Head Record) ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 15, ರಾಜಸ್ಥಾನ್​ 13 ಗೆಲುವು ಸಾಧಿಸಿದೆ. 3 ಪಂದ್ಯಗಳು ಫಲಿತಾಂಶ ಇಲ್ಲದೆ ಕೊನೆಗೊಂಡಿದೆ. ಈ ಲೆಕ್ಕಾಚಾರದಲ್ಲಿ ಆರ್​ಸಿಬಿ ಬಲಿಷ್ಠ ಎನ್ನಲಡ್ಡಿಯಿಲ್ಲ. ಈ ಬಾರಿಯ ಮುಖಾಮುಖಿಯಲ್ಲಿ ರಾಜಸ್ಥಾನ್​ ಗೆಲುವು ಸಾಧಿಸಿತ್ತು.

ಸಂಭಾವ್ಯ ತಂಡಗಳು


ಆರ್​ಸಿಬಿ:
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮರೂನ್​ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆ), ಕರ್ಣ್ ಶರ್ಮಾ, ಯಶ್ ದಯಾಳ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್.

ರಾಜಸ್ಥಾನ್​ ರಾಯಲ್ಸ್​: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ನಾಂದ್ರೆ ಬರ್ಗರ್.

Continue Reading

ಕ್ರಿಕೆಟ್

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Shane Watson Apologize: ಬೆಂಗಳೂರಿನ ಬಗ್ಗೆಯೂ ಅನುಭವ ಹಂಚಿಕೊಂಡ ವಾಟ್ಸನ್​, ಆರ್​ಸಿಬಿ ತಂಡಕ್ಕೆ ಇಲ್ಲಿ ಸಿಕ್ಕಪಟ್ಟೇ ಕ್ರೇಜಿ ಫ್ಯಾನ್ಸ್​ ಇದ್ದಾರೆ. ನಾನು ಕೂಡ ಈ ತಂಡದ ಪರ ಆಡಿರುವ ಕಾರಣ ಬೆಂಗಳೂರು ಮತ್ತು ಇಲ್ಲಿನ ಜನರ ನಂಟು ಈಗಲೂ ಇದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಕ್ಷಣಗಳು ಅವಿಸ್ಮರಣೀಯ ಎಂದರು.

VISTARANEWS.COM


on

Shane Watson Apologize
Koo

ಬೆಂಗಳೂರು: ಆಸ್ಟ್ರೇಲಿಯಾ ಹಾಗೂ ಆರ್​ಸಿಬಿ ತಂಡದ ಮಾಚಿ ಆಟಗಾರ ಶೇನ್​ ವಾಟ್ಸನ್(Shane Watson)​ ಅವರು ಇಂದು(ಮಂಗಳವಾರ) ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ(Presidency University in Bengaluru) ‘ವ್ಯಾಟ್ಸನ್​ ದಿ ವಿನ್ನರ್ಸ್ ಮೈಂಡ್ ಸೆಟ್’ ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಿದರು. ಇದೇ ವೇಳೆ 2016ರ ಫೈನಲ್​ನಲ್ಲಿ ಕಳಪೆ ಪ್ರದರ್ಶನ ತೋರಿದ್ದಕ್ಕೆ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ(Shane Watson Apologize) ಕೇಳಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದೆ.


ಪುಸ್ತಕ ಬಿಡಿಗಡೆಗೊಳಿಸಿದ ಬಳಿಕ ಮಾತನಾಡಿದ ವಾಟ್ಸನ್​, ಕಾಲೇಜಿಗೆ ಭೇಟಿ ನೀಡಿರುವುದು ನಿಜಕ್ಕೂ ಅದ್ಭುತ. ವಿದ್ಯಾರ್ಥಿಗಳು ಕ್ರಿಕೆಟ್​ ಆಡುವ ಮತ್ತು ವೀಕ್ಷಿಸುವ ಜತೆಗೆ ಶಿಕ್ಷಣದಲ್ಲಿಯೂ ಗಮನಹರಿಸಿ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ವಾಟ್ಸನ್​ ತಮ್ಮ ವಿದ್ಯಾರ್ಥಿ ಜೀವನದ ದಿನಗಳನ್ನು ಮೆಲುಕು ಹಾಕಿದರು.

ಬೆಂಗಳೂರಿನ ಬಗ್ಗೆಯೂ ಅನುಭವ ಹಂಚಿಕೊಂಡ ಅವರು, ಆರ್​ಸಿಬಿ ತಂಡಕ್ಕೆ ಇಲ್ಲಿ ಸಿಕ್ಕಪಟ್ಟೇ ಕ್ರೇಜಿ ಫ್ಯಾನ್ಸ್​ ಇದ್ದಾರೆ. ನಾನು ಕೂಡ ಈ ತಂಡದ ಪರ ಆಡಿರುವ ಕಾರಣ ಬೆಂಗಳೂರು ಮತ್ತು ಇಲ್ಲಿನ ಜನರ ನಂಟು ಈಗಲೂ ಇದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಕ್ಷಣಗಳು ಅವಿಸ್ಮರಣೀಯ. ಆದರೆ ನನ್ನ ಮನಸ್ಸಲ್ಲಿ ಈಗಲೂ ಇರುವ ನೋವೆಂದರೆ 2016ರ ಐಪಿಎಲ್​ ಫೈನಲ್​ನಲ್ಲಿ ನಾನು ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾದದ್ದು. ನಾನು ಆಡುತ್ತಿದ್ದರೆ ಆರ್​ಸಿಬಿ ಕಪ್​ ಗೆಲ್ಲುತ್ತಿತ್ತು. ಇದೇ ವಿಚಾರವಾಗಿ ನಾನು ನಿಮ್ಮಲ್ಲಿ ಕ್ಷಮೆ ಕೋರುತ್ತೇನೆ ಎಂದು ಹೇಳಿದರು. ಆ ಫೈನಲ್​ ಪಂದ್ಯದಲ್ಲಿ ವಾಟ್ಸನ್​ 11 ರನ್​ ಗಳಿಸಿ ಔಟಾಗಿದ್ದರು.

ಇದನ್ನೂ ಓದಿ RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?


ಈ ಬಾರಿ ಆರ್​ಸಿಬಿ ತಂಡ ಉತ್ತಮವಾಗಿ ಆಡಿದೆ. ಆರಂಭಿಕ ಹಂತದಲ್ಲಿ 7 ಸೋಲು ಕಂಡರೂ ಕೂಡ ಆ ಬಳಿಕ ಸತತವಾಗಿ 6 ಮತ್ತು ಒಟ್ಟಾರೆ 7 ಗೆಲುವಿನೊಂದಿಗೆ ಪ್ಲೇ ಆಫ್​ ಪ್ರವೇಶಿಸಿದೆ. ನಾಳೆ ರಾಜಸ್ಥಾನ್​ ವಿರುದ್ಧ ಆಡಲಿದೆ. ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು. ಇದೇ ವೇಳೆ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಕುಲಪತಿ ಡಾ. ನಿಸ್ಸಾರ್ ಅಹಮದ್ ಜತೆ ವಾಟ್ಸನ್​ ಕ್ರಿಕೆಟ್ ಆಡಿ ಸಂಭ್ರಮಿಸಿದರು.


ಸದ್ಯ ನಿವೃತ್ತಿ ಜೀವನ ನಡೆಸುತ್ತಿರುವ ವಾಟ್ಸನ್​ ಕ್ರಿಕೆಟ್​ ಕಾಮೆಂಟ್ರಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಐಪಿಎಲ್​ ಮಾತ್ರವಲ್ಲದೆ ಇತರ ಕ್ರಿಕೆಟ್​ ಲೀಗ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್​ ಪಂದ್ಯಗಳ ಕಾಮೆಂಟ್ರಿ ಮಾಡುತ್ತಿದ್ದಾರೆ. ‘ವ್ಯಾಟ್ಸನ್​ ದಿ ವಿನ್ನರ್ಸ್ ಮೈಂಡ್ ಸೆಟ್’ ಈ ಪುಸ್ತಕದಲ್ಲಿ ಆರ್​ಸಿಬಿ ಮತ್ತು ಐಪಿಎಲ್​ ಕುರಿತ ವಿಚಾರವು ಅಡಕವಾಗಿದೆ.

Continue Reading

ಕ್ರೀಡೆ

RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

RCB IPL Records: ಪ್ರತಿ ಆವೃತ್ತಿಯಲ್ಲಿಯೂ ಈ ಸಲ ಕಪ್​ ನಮ್ದೇ ಎಂದು ಅಭಿಯಾನ ಆರಂಭಿಸುವ ಆರ್​ಸಿಬಿ ನಿರಾಸೆ ಕಂಡಿದ್ದೇ ಹೆಚ್ಚು. ಒಟ್ಟು ಮೂರು ಬಾರಿ ಫೈನಲ್​, 5 ಬಾರಿ ಪ್ಲೇ ಆಫ್​ಗೆ ಪ್ರವೇಶ ಪಡೆದಿತ್ತು. ಆದರೆ ಒಮ್ಮೆಯೂ ಕಪ್​ ಮಾತ್ರ ಗೆಲ್ಲಲು ಸಾಧ್ಯವಾಗಿಲ್ಲ.

VISTARANEWS.COM


on

RCB IPL Records
Koo

ಅಮಹದಾಬಾದ್​: ಕೋಟೆಯ ಎಲ್ಲ ಬಾಗಿಲುಗಳನ್ನು ಮುಚ್ಚಿದರೂ, ಬೆಳಕು ತೂರುವುದಕ್ಕೊಂದು ಸಣ್ಣ ಕಿಂಡಿ ಇದ್ದರು ಸಾಕು ಜೀವನ ಹೋರಾಟ ಮುಂದುವರೆಸುವುದಕ್ಕೆ ಎನ್ನುವ ಮಾತನ್ನು ಆರ್​ಸಿಬಿ(RCB IPL Records) ನಿಜ ಮಾಡಿದೆ. ಆರಂಭಿಕ ಹಂತದಲ್ಲಿ 7 ಸೋಲು ಕೊಂಡು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಿಯಾಗಿ ಇನ್ನೇನು ಟೂರ್ನಿಯಿಂದ ಹೊರಬೀಳುತ್ತದೆ ಎನ್ನುವ ಸ್ಥಿತಿ ಎದುರಿಸಿತ್ತು. ಆದರೆ ಹೋರಾಡುವ ಛಲ ಮತ್ತು ನಂಬಿಕೆಯೊಂದನ್ನು ಗಟ್ಟಿಯಾಗಿರಿಸಿದ್ದ ಆಗಾರರು ತಂಡವನ್ನು ಪ್ಲೇ ಆಫ್​ ಪ್ರವೇಶಿಸುವಂತೆ ಮಾಡಿದರು. ಇದೀಗ ನಾಳೆ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಆಟಗಾರರು ರಾಜಸ್ಥಾನ್​ ವಿರುದ್ಧದ ಕಣಕ್ಕಿಳಿಯಲು ಸಜ್ಜಾಗಿಗೆ ನಿಂತಿದ್ದಾರೆ. ಆರ್​ಸಿಬಿಯ ಇದುವರೆಗಿನ 16 ಐಪಿಎಲ್​ನ ಸಾಧನೆಯ ಇಣುಕು ನೋಡ ಇಂತಿದೆ.

ಮೂರು ಭಾರಿ ಫೈನಲ್​


ಪ್ರತಿ ಆವೃತ್ತಿಯಲ್ಲಿಯೂ ಈ ಸಲ ಕಪ್​ ನಮ್ದೇ ಎಂದು ಅಭಿಯಾನ ಆರಂಭಿಸುವ ಆರ್​ಸಿಬಿ ನಿರಾಸೆ ಕಂಡಿದ್ದೇ ಹೆಚ್ಚು. ಒಟ್ಟು ಮೂರು ಬಾರಿ ಫೈನಲ್​ ಪ್ರವೇಶಿಸಿದರೂ ಕಪ್​ ಮಾತ್ರ ಗೆಲ್ಲಲು ಸಾಧ್ಯವಾಗಿಲ್ಲ. ಮೂರೂ ಫೈನಲ್​ ಪ್ರವೇಶದ ವೇಳೆಯೂ ತಂಡದಲ್ಲಿ ವಿಶ್ವದ ಬಲಿಷ್ಠ ಆಟಗಾರರು ಈ ತಂಡದಲ್ಲಿದ್ದರು. ಆದರೂ ಕೂಡ ಲಕ್​ ಎನ್ನುವುದು ಮಾತ್ರ ತಂಡಕ್ಕೆ ಕೈ ಹಿಡಿಯುತ್ತಿರಲಿಲ್ಲ. ಲೀಗ್​ ಹಂತದಲ್ಲಿ ಎಷ್ಟೇ ಸೊಗಸಾದ ಆಟವಾಡಿದ್ದರೂ ಕೂಡ ಫೈನಲ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿ ಕಪ್​ ಗೆಲ್ಲಲು ವಿಫಲವಾಗಿತ್ತು. ಒಟ್ಟು 5 ಬಾರಿ ಪ್ಲೇ ಆಫ್​ಗೆ ಪ್ರವೇಶ ಪಡೆದಿತ್ತು.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

ಆರ್​ಸಿಬಿ ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿದ್ದು, 2009ರಲ್ಲಿ. ಎದುರಾಳಿ ಆ್ಯಡಂ ಗಿಲ್‌ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್(Deccan Chargers). ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಡೆಕ್ಕನ್​ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 143 ರನ್​ ಬಾರಿಸಿತು. ಅಲ್ಪ ಮೊತ್ತವನ್ನು ಬೆನ್ನಟ್ಟಿದ ಆರ್​ಸಿಬಿ 9 ವಿಕೆಟ್​ಗೆ ಕೇವಲ 137 ರನ್​ ಮಾತ್ರ ಗಳಿಸಲಷ್ಟೇ ಶಕ್ತವಾಗಿ 6 ರನ್​ ಅಂತರದಿಂದ ಸೋಲು ಕಂಡಿತ್ತು.

ಎರಡನೇ ಬಾರಿ ಆರ್​ಸಿಬಿ ಫೈನಲ್​ ಪ್ರವೇಶಿಸಿದ್ದು 2011ರಲ್ಲಿ. ಮೊದಲ ಬಾರಿಗೆ ಕಪ್​ ಗೆಲ್ಲಲು ವಿಫಲವಾಗಿದ್ದ ಆರ್​ಸಿಬಿ ತನ್ನ 2ನೇ ಪ್ರಯತ್ನದಲ್ಲಿ ಕಪ್​ ಗೆಲ್ಲಲಿದೆ ಎಂದು ಅಭಿಮಾನಿಗಳು ಬಲವಾಗಿ ನಂಬಿದ್ದರು. ಆದರೆ ಇಲ್ಲಿಯೂ ಆರ್​ಸಿಬಿ ವಿಫಲವಾಗಿತ್ತು. ಹಾಲಿ ಚಾಂಪಿಯನ್​ ಆಗಿದ್ದ ಚೆನ್ನೈ ಸೂಪರ್​ ಕಿಂಗ್ಸ್​ ಫೈನಲ್​ನಲ್ಲಿ ಗೆದ್ದು ಸತತವಾಗಿ 2ನೇ ಟ್ರೋಫಿ ಗೆದ್ದ ಸಾಧನೆ ಮಾಡಿತ್ತು. ಈ ಪಂದ್ಯದಲ್ಲಿ ಆರ್​ಸಿಬಿಗೆ 58 ರನ್​ ಸೋಲು ಎದುರಾಗಿತ್ತು.

ಆರ್​ಸಿಬಿ ಅಭಿಮಾನಿಗಳಿಗೆ ಮೂರನೇ ಬಾರಿಗೆ ನಿರಾಸೆಯಾದ ಐಪಿಎಲ್​ ಆವೃತ್ತಿ ಎಂದರೆ 2016ನೇ ಆವೃತ್ತಿ. ಬಲಿಷ್ಠ ಆಟಗಾರ ಕ್ರಿಸ್​ ಗೇಲ್​, ಎಬಿಡಿ ವಿಲಿಯರ್ಸ್​, ಶೇನ್ ವಾಟ್ಸನ್​ ಮತ್ತು ವಿರಾಟ್​ ಕೊಹ್ಲಿಯಂತಹ ಸ್ಟಾರ್​ ಆಟಗಾರರು ತಂಡದಲ್ಲಿದ್ದರೂ ಕೂಡ ಕಪ್​ ಗೆಲ್ಲುವಲ್ಲಿ ಆರ್​ಸಿಬಿ ವಿಫಲವಾಗಿತ್ತು. ಮೊದಲು ಬ್ಯಾಟಿಂಗ್​ ನಡೆಸಿದ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ 7 ವಿಕೆಟ್​ಗೆ 208 ರನ್​ ಬಾರಿಸಿತು. ದಿಟ್ಟವಾಗಿ ಗುರಿ ಬೆನ್ನಟ್ಟಿಕೊಂಡು ಹೋದ ಆರ್​ಸಿಬಿ ಮೊದಲ ವಿಕೆಟ್​ಗೆ 114 ರನ್​ ಒಟ್ಟುಗೂಡಿಸಿತು. ಈ ವೇಳೆ ಆರ್​ಸಿಬಿ ಅಭಿಮಾನಿಗಳೆಲ್ಲ ಈ ಸಲ ಕಪ್​ ನಮ್ದೇ ಎಂದು ನಂಬಿದ್ದರು. ಆದರೆ, ನಂಬುಗೆಯ ಬ್ಯಾಟರ್​ಗಳೆಲ್ಲ ಸತತವಾಗಿ ವಿಕೆಟ್​ ಒಪ್ಪಿಸಿ ತಂಡದ ಸೋಲಿಗೆ ಕಾರಣವಾದರು. ಭರ್ತಿ 200 ರನ್​ ಗಳಿಸಿ 8 ರನ್​ ಅಂತರದ ಸೋಲು ಕಂಡಿತ್ತು.

ಈ ಬಾರಿ ಹೊಸ ಅಧ್ಯಾಯ ಎಂದು ಹೇಳಿ ಅಭಿಯಾನ ಆರಂಭಿಸಿದ ಆರ್​ಸಿಬಿ ಎಲಿಮಿನೇಟರ್​ ಪಂದ್ಯದಲ್ಲಿಯೂ ಗೆದ್ದು ಆ ಬಳಿಕ ಕ್ವಾಲಿಫೈಯರ್​ನಲ್ಲಿಯೂ ಜಯಶಾಲಿಯಾಗಿ ಫೈನಲ್​ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಗೆಲ್ಲುವಂತಾಗಲಿ ಎನ್ನುವುದು ಕೋಟಿ ಆರ್​ಸಿಬಿ ಅಭಿಮಾನಿಗಳ ಹಾರೈಕೆಯಾಗಿದೆ.

Continue Reading
Advertisement
Cauvery Dispute
ಕರ್ನಾಟಕ3 mins ago

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Brand Bangalore and BJP Slams DK Shivakumar and Congress Government
ರಾಜಕೀಯ4 mins ago

Brand Bangalore: ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ; ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಕುಟುಕಿದ ಬಿಜೆಪಿ

Eye Care Tips
ಆರೋಗ್ಯ9 mins ago

Eye Care Tips: ಕಣ್ಣಿನ ಸುಸ್ತಿಗೆ ನೀವು ಇಷ್ಟಾದರೂ ಮಾಡಿ, ಕಣ್ಣಿಗೆ ಅಗತ್ಯ ವಿಶ್ರಾಂತಿ ನೀಡಿ!

Turbulence
ಪ್ರಮುಖ ಸುದ್ದಿ20 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Used Car Sale
ಪ್ರಮುಖ ಸುದ್ದಿ31 mins ago

Used Car Sale : ನಿಮ್ಮ ಕಾರನ್ನು ಜಾಸ್ತಿ ಬೆಲೆಗೆ ಮಾರಬೇಕೇ? ಈ ಕೆಲವು ತಂತ್ರಗಳನ್ನು ಅನುಸರಿಸಿ

Summer Star Fashion
ಫ್ಯಾಷನ್39 mins ago

Summer Star Fashion: ಏನಿದು ನಟಿ ಅದಿತಿ ರಾವ್‌ ಹೈದರಿಯ ಕೋ-ಆರ್ಡ್ ಕೊಸ್ಟಾ ಪ್ಯಾಂಟ್‌ ಟ್ರೆಂಡ್‌?

Lok Sabha Elections 2024 7 celebs who didn’t vote in Lok Sabha Elections
ಬಾಲಿವುಡ್41 mins ago

Lok Sabha Elections 2024: ಈ ಬಾಲಿವುಡ್‌ ಸ್ಟಾರ್ಸ್‌ಗಳು ಈ ಬಾರಿ ವೋಟ್‌ ಹಾಕಲೇ ಇಲ್ಲ!

RR vs RCB
ಕ್ರೀಡೆ49 mins ago

RCB vs RR: ಆರ್​ಸಿಬಿ-ರಾಜಸ್ಥಾನ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

Mangalore Tour
ಪ್ರವಾಸ52 mins ago

Mangalore Tour: ಮಂಗಳೂರಿಗೆ ಬಂದರೆ ಈ ಸ್ಥಳಗಳಿಗೆ ಭೇಟಿ ಕೊಡಲು ಮರೆಯದಿರಿ

2nd Pux Exam
ಬೆಂಗಳೂರು60 mins ago

2nd Puc Exam : ಆನ್‌ಲೈನ್‌ನಲ್ಲೆ ಸಿಗುತ್ತೆ ಪಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌