Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು! - Vistara News

ಬಾಲಿವುಡ್

Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

Navya Naveli Nanda: ನವ್ಯಾ ಅವರು ಹೆಚ್ಚಾಗಿ ತಾಯಿ ಶ್ವೇತಾ ಬಚ್ಚನ್-ನಂದಾ ಮತ್ತು ಅಜ್ಜಿ ಜಯಾ ಬಚ್ಚನ್ ಅವರಿಂದ ಸಲಹೆ ಪಡೆಯುತ್ತಿರುವಾಗಿ ಹೇಳಿಕೊಂಡರು. ನವ್ಯಾ ನಂದಾ ಅವರು ನ್ಯೂಯಾರ್ಕ್‌ನ ಫೋರ್ಡ್‌ಹ್ಯಾಮ್ ವಿಶ್ವವಿದ್ಯಾಲಯದ ಪದವೀಧರರಾಗಿದ್ದಾರೆ. ಆರೋಗ್ಯ ಸಮಸ್ಯೆಗಳು ಮತ್ತು ಹೆಚ್ಚಿನದನ್ನು ಚರ್ಚಿಸುವ ಆನ್‌ಲೈನ್ ಪ್ಲಾಟ್‌ಫಾರ್ಮ್ ಆರಾ ಹೆಲ್ತ್‌ನ ಸಹ-ಮಾಲೀಕರಾಗಿದ್ದಾರೆ.

VISTARANEWS.COM


on

Aaradhya Bachchan is wiser more intelligent than I
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪೋಡ್‌ಕಾಸ್ಟ್‌ ʻವಾಟ್ ದಿ ಹೆಲ್ ನವ್ಯಾʼದಲ್ಲಿ ಜಯಾ ಬಚ್ಚನ್‌ ಅವರು ಮೊಮ್ಮಗಳು ನವ್ಯಾ ನವೇಲಿ ನಂದಾ (Navya Naveli Nanda) ಜತೆ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಆದರೀಗ ಶ್ವೇತಾ ಬಚ್ಚನ್ ಮಗಳು ನವ್ಯಾ ಅವರು ಮೊದಲ ಬಾರಿಗೆ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ಮಗಳ ಬಗ್ಗೆ ಮಾತನಾಡಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ತನ್ನ ಸೋದರಸಂಬಂಧಿ ಆರಾಧ್ಯ(Aaradhya Bachchan) ತುಂಬ ಬುದ್ಧಿವಂತೆ ಎಂದು ಹೇಳಿಕೊಂಡಿದ್ದಾರೆ.

ಆರಾಧ್ಯಗೆ ಏನು ಸಲಹೆ ನೀಡುತ್ತೀರಿ ಎಂದು ನವ್ಯಾಗೆ ಪ್ರಶ್ನೆ ಎದುರಾದಾಗ ಹೀಗೆ ಹೇಳಿದರು ನವ್ಯಾ. “ಆರಾಧ್ಯ ನನಗಿಂತ ಹೆಚ್ಚು ಬುದ್ಧಿವಂತಳು. ಇಂದಿನ ಮಕ್ಕಳು ಬಹಳ ಮುಂದಿದ್ದಾರೆ. ಅವಳ ವಯಸ್ಸಿನಲ್ಲಿ ನಾನು ಅಷ್ಟು ಬುದ್ಧಿವಂತನಾಗಿರಲಿಲ್ಲ. ಜಗತ್ತನ್ನು ಹಲವು ವಿಧಗಳಲ್ಲಿ ಬದಲಾಯಿಸಲು ಬಯಸುವ ಯುವತಿಯರ ಪೀಳಿಗೆಯನ್ನು ನಾವು ಈಗ ಹೊಂದಿದ್ದೇವೆ. ಅದು ನಾನು ಅವಳಲ್ಲಿಯೂ ನೋಡುತ್ತಿರುವ ಖುಷಿಯ ಸಂಗತಿ. ಅವಳಿಗೆ ನಾನು ಸಲಹೆ ಅಥವಾ ಸ್ಫೂರ್ತಿ ನೀಡುವುದಕ್ಕಿಂತ ಹೆಚ್ಚಾಗಿ, ಅವಳಿಂದ ನಾನು ಬಹಳಷ್ಟು ತಿಳಿದುಕೊಳ್ಳುತ್ತಿರುವೆ ಎಂದು ನಾನು ಭಾವಿಸುತ್ತೇನೆʼʼಎಂದರು.

ನವ್ಯಾ ಅವರು ಹೆಚ್ಚಾಗಿ ತಾಯಿ ಶ್ವೇತಾ ಬಚ್ಚನ್-ನಂದಾ ಮತ್ತು ಅಜ್ಜಿ ಜಯಾ ಬಚ್ಚನ್ ಅವರಿಂದ ಸಲಹೆ ಪಡೆಯುತ್ತಿರುವಾಗಿ ಹೇಳಿಕೊಂಡರು. ನವ್ಯಾ ನಂದಾ ಅವರು ನ್ಯೂಯಾರ್ಕ್‌ನ ಫೋರ್ಡ್‌ಹ್ಯಾಮ್ ವಿಶ್ವವಿದ್ಯಾಲಯದ ಪದವೀಧರರಾಗಿದ್ದಾರೆ. ಆರೋಗ್ಯ ಸಮಸ್ಯೆಗಳು ಮತ್ತು ಹೆಚ್ಚಿನದನ್ನು ಚರ್ಚಿಸುವ ಆನ್‌ಲೈನ್ ಪ್ಲಾಟ್‌ಫಾರ್ಮ್ ಆರಾ ಹೆಲ್ತ್‌ನ ಸಹ-ಮಾಲೀಕರಾಗಿದ್ದಾರೆ.

ಇದನ್ನೂ ಓದಿ: Aaradhya Bachchan: ಅಬ್ಬಾ.. ಅಂತೂ ಐಶ್ವರ್ಯಾ ರೈ ಪುತ್ರಿ ಹಣೆ ನೋಡಿದ್ವಲ್ಲ! ನಿಟ್ಟುಸಿರು ಬಿಟ್ಟ ನೆಟ್ಟಿಗರು!

ಬಾಲಿವುಡ್‌ ಹಿರಿಯ ನಟಿ ಜಯಾ ಬಚ್ಚನ್ (Actress Jaya Bachchan) ಅವರು ಮೊಮ್ಮಗಳ ʻನವ್ಯಾ ನವೇಲಿ ನಂದಾʼ ಪಾಡ್‌ಕಾಸ್ಟ್‌ನ ಸಂಚಿಕೆಯಲ್ಲಿ ನಟಿ ಜಯಾ ಬಚ್ಚನ್ ಈ ಮುಂಚೆಯೂ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದರು. ಔಟ್‌ ಡೋರ್‌ ಶೂಟಿಂಗ್‌ ವೇಳೆ ಪೊದೆಗಳ ಹಿಂದೆ ಅಡಗಿ ಕುಳಿತು ಸ್ಯಾನಿಟರಿ ಪ್ಯಾಡ್‌ಗಳನ್ನು ಬದಲಾಯಿಸಬೇಕಿತ್ತು ಎಂಬ ವಿಚಾರವನ್ನು ಹಂಚಿಕೊಂಡಿದ್ದರು.

ಜಯಾ ಬಚ್ಚನ್ ಮಾತನಾಡಿ ʻʻನಮ್ಮ ಕಾಲದಲ್ಲಿ ಹೊರಾಂಗಣ ಚಿತ್ರೀಕರಣದ ಸಂದರ್ಭದಲ್ಲಿ ನಮಗಾಗಿ ವ್ಯಾನ್‌ಗಳಿರಲಿಲ್ಲ(ಕ್ಯಾರವಾನ್‌). ಸರಿಯಾದ ಶೌಚಾಲಯದ ವ್ಯವಸ್ಥೆಗಳು ಇರುತ್ತಿರಲಿಲ್ಲ. ಮುಟ್ಟಾದ ಸಂದರ್ಭದಲ್ಲಿ ನಾವು ಪೊದೆಗಳನ್ನು ಹುಡುಕುತ್ತಿದ್ದೆವು. ಪ್ಯಾಡ್‌ಗಳನ್ನು ಬದಲಿಸಲು ನಮಗೆ ಸರಿಯಾದ ಸ್ಥಳ ಇರುತ್ತಿರಲಿಲ್ಲ. ಪ್ಯಾಡ್‌ಗಳನ್ನು ಎಸೆಯಲು ಪ್ಲಾಸ್ಟಿಕ್ ಚೀಲಗಳನ್ನು ತೆಗೆದುಕೊಂಡು ಹೋಗುತ್ತಿದ್ದೆವು. ನಂತರ ಮನೆಗೆ ಬಂದು ಎಸೆಯಬೇಕಿತ್ತು. ಆಗ ಮುಜುಗರದ ಸನ್ನಿವೇಶಗಳನ್ನು ನಾವು ಎದುರಿಸುತ್ತಿದ್ದೆವುʼʼ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

Anant Ambani Radhika: ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28-30ರವರೆಗೆ ನಡೆಯಲಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ 4380 ಕಿ. ಮೀ ದೂರ ಚಲಿಸಿದೆ ಎನ್ನಲಾಗಿದೆ. ಜಾಮ್‌ನಗರದಲ್ಲಿ ನಡೆದ ಆಚರಣೆಯಲ್ಲಿ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ರಿಹಾನ್ನಾ, ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಶಾರುಖ್ ಖಾನ್, ಆಲಿಯಾ ಭಟ್, ಕತ್ರಿನಾ ಕೈಫ್ ಸೇರಿದಂತೆ ಸುಮಾರು 1,200 ಅತಿಥಿಗಳು ಭಾಗವಹಿಸಿದ್ದರು.

VISTARANEWS.COM


on

Anant Ambani Radhika 2nd pre wedding bash
Koo

ಬೆಂಗಳೂರು: ಗುಜರಾತ್‌ನ ಜಾಮ್‌ನಗರದಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹಪೂರ್ವ (Anant Ambani Radhika) ಕಾರ್ಯಕ್ರಮವು (Pre Wedding) ಇತ್ತೀಚೆಗೆ ಅದ್ಧೂರಿಯಾಗಿ ನಡೆದಿತ್ತು. ಈ ವಿವಾಹ ಪೂರ್ವ ಸಮಾರಂಭದ ನಂತರ, ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ಗಾಗಿ ಎರಡನೇ ವಿವಾಹ ಪೂರ್ವ ಸಮಾರಂಭವನ್ನು ಆಯೋಜಿಸಲಿದ್ದಾರೆ ಎಂದು ವರದಿಯಾಗಿದೆ. ಜಾಮ್‌ನಗರದಲ್ಲಿ ನಡೆದ ಆಚರಣೆಯಲ್ಲಿ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ರಿಹಾನ್ನಾ, ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಶಾರುಖ್ ಖಾನ್, ಆಲಿಯಾ ಭಟ್, ಕತ್ರಿನಾ ಕೈಫ್ ಸೇರಿದಂತೆ ಸುಮಾರು 1,200 ಅತಿಥಿಗಳು ಭಾಗವಹಿಸಿದ್ದರು.

ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28ರಿಂದ 30ರವರೆಗೆ ನಡೆಯಲಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿದೆ. ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇರಲಿದ್ದಾರಂತೆ.

ಇದನ್ನೂ ಓದಿ: Anant Ambani Radhika Merchant: ಹೀಗಿದೆ ನೋಡಿ! ಅಂಬಾನಿ ಫ್ಯಾಮಿಲಿಯ ಪ್ರಿ-ವೆಡ್ಡಿಂಗ್‌ ಕಾರ್ನಿವಲ್‌ನ ರಾಯಲ್ ಡ್ರೆಸ್‌ಕೋಡ್ಸ್!

ಕಳೆದ ವರ್ಷ ಜನವರಿಯಲ್ಲಿ ಅನಂತ್ ಮತ್ತು ರಾಧಿಕಾ ನಿಶ್ಚಿತಾರ್ಥ ಸಾಂಪ್ರದಾಯಿಕ ಗೋಲ್‌ ಧನಾ ಕಾರ್ಯಕ್ರಮವಾಗಿ ನಡೆದಿತ್ತು. ಮದುವೆ ಜುಲೈ 12ರಂದು ನಡೆಯಲಿದೆ.

ಈ ಮುಂಚೆ ನಡೆದ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಮುಕೇಶ್‌ ಅಂಬಾನಿ ಅವರು ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Continue Reading

ಸಿನಿಮಾ

Katrina Kaif: ಕತ್ರಿನಾ ಕೈಫ್ ಈಗ ಪ್ರೆಗ್ನೆಂಟ್? ಪತಿ ಜತೆ ಲಂಡನ್‌ನಲ್ಲಿ ಜಾಲಿ ಮೂಡ್‌!

Katrina Kaif: ಜೀ ಲೆ ಜರಾ’ ಚಿತ್ರದ ಶೂಟಿಂಗ್ ಮುಗಿದ ನಂತರ ನಾನು ಮತ್ತು ವಿಕ್ಕಿ ಮೊದಲ ಮಗುವನ್ನು ಹೊಂದಲಿದ್ದೇವೆʼ ಎಂದು ಕತ್ರಿನಾ ತನ್ನ ಸ್ನೇಹಿತರಿಗೆ ಹೇಳಿರುವುದಾಗಿ ಮಾಧ್ಯಮವೊಂದು ಈ ಹಿಂದೆ ವರದಿ ಮಾಡಿತ್ತು. “ನಾನು ವಿಜಯ್ ಸೇತುಪತಿ ಮತ್ತು ಫರ್ಹಾನ್ ಅಖ್ತರ್ ಅವರೊಂದಿಗೆ ಮಾಡುತ್ತಿರುವ ಚಿತ್ರಗಳ ಶೂಟಿಂಗ್ ಮುಗಿಸಿದ ನಂತರವೇ ಮಗುವನ್ನು ಯೋಜಿಸುತ್ತೇನೆ” ಎಂದು ಕತ್ರಿನಾ ತಮ್ಮ ಸ್ನೇಹಿತರಿಗೆ ಹೇಳಿದ್ದರಂತೆ. ಈಗಾಗಲೇ `ಮೆರ್ರಿ ಕ್ರಿಸ್‌ಮಸ್’ ಬಿಡುಗಡೆಯಾಗಿದೆ.

VISTARANEWS.COM


on

Katrina Kaif And Vicky Kaushal Together In London
Koo

ಬೆಂಗಳೂರು: ವಿಕ್ಕಿ ಕೌಶಲ್ (Vicky Kaushal) ಮತ್ತು ಕತ್ರಿನಾ ಕೈಫ್ (Katrina Kaif) ಪ್ರಸ್ತುತ ಲಂಡನ್‌ನಲ್ಲಿ ವಕೇಶನ್‌ ಮೂಡ್‌ನಲ್ಲಿದ್ದಾರೆ. ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಲಂಡನ್‌ನಲ್ಲಿ ಓಡಾಡುತ್ತಿರುವ ವಿಡಿಯೊಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವಿಶೇಷ ಅಂದರೆ ಕತ್ರಿನಾ ಪ್ರಗ್ನೆಂಟ್‌ ಅಂತೆ ಕಂಡಿದ್ದಾರೆ. ಕತ್ರಿನಾ ಕೈಫ್ ಅವರು ಕಪ್ಪು ಬಣ್ಣದ ಬ್ಲೇಜರ್ ಹಾಕಿದ್ದಾರೆ. ಅವರ ಹೊಟ್ಟೆ ಉಬ್ಬಿದಂತೆ ಕಾಣಿಸಿದೆ ಅವರ ಅಭಿಮಾನಿಗಳಿಗೆ! ಇದರಿಂದ ಅನೇಕರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. 

ವಿಡಿಯೊ ಜತೆಗೆ “ನಮ್ಮ ಬಾಲಿವುಡ್ ಪವರ್ ಕಪಲ್ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಲಂಡನ್‌ನ ಬೇಕರ್ ಸ್ಟ್ರೀಟ್‌ನಲ್ಲಿ ಅಡ್ಡಾಡುತ್ತಿದ್ದಾರೆ. ವಿಕ್ಕಿ ಅವರು ಪತ್ನಿಯ ಕೈಯನ್ನು ಹಿಡಿದು ನಡೆಯುತ್ತಿದ್ದಾರೆʼʼ ಎಂದು ಅಭಿಮಾನಿಯೊಬ್ಬರು ಪೋಸ್ಟ್‌ ಮಾಡಿದ್ದಾರೆ. ವಿಕ್ಕಿ ಮೇ 16ರಂದು ಲಂಡನ್‌ನಲ್ಲಿ ತಮ್ಮ 36 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಕತ್ರಿನಾ ಕೈಫ್ ಫೋಟೊಗಳನ್ನು ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದರು.

ʻಜೀ ಲೆ ಜರಾ’ ಚಿತ್ರದ ಶೂಟಿಂಗ್ ಮುಗಿದ ನಂತರ ನಾನು ಮತ್ತು ವಿಕ್ಕಿ ಮೊದಲ ಮಗುವನ್ನು ಹೊಂದಲಿದ್ದೇವೆʼ ಎಂದು ಕತ್ರಿನಾ ತನ್ನ ಸ್ನೇಹಿತರಿಗೆ ಹೇಳಿರುವುದಾಗಿ ಮಾಧ್ಯಮವೊಂದು ಈ ಹಿಂದೆ ವರದಿ ಮಾಡಿತ್ತು. “ನಾನು ವಿಜಯ್ ಸೇತುಪತಿ ಮತ್ತು ಫರ್ಹಾನ್ ಅಖ್ತರ್ ಅವರೊಂದಿಗೆ ಮಾಡುತ್ತಿರುವ ಚಿತ್ರಗಳ ಶೂಟಿಂಗ್ ಮುಗಿಸಿದ ನಂತರವೇ ಮಗುವನ್ನು ಯೋಜಿಸುತ್ತೇನೆ” ಎಂದು ಕತ್ರಿನಾ ತಮ್ಮ ಸ್ನೇಹಿತರಿಗೆ ಹೇಳಿದ್ದರಂತೆ. ಈಗಾಗಲೇ `ಮೆರ್ರಿ ಕ್ರಿಸ್‌ಮಸ್’ ಬಿಡುಗಡೆಯಾಗಿದೆ.

ಇದನ್ನೂ ಓದಿ: Katrina Kaif : ಸಿಎಸ್​ಕೆ ಬ್ರಾಂಡ್ ಅಂಬಾಸಿಡರ್ ಆದ ಕತ್ರಿಕಾ ಕೈಫ್

ಇದನ್ನೂ ಓದಿ: Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

ಕತ್ರಿನಾ ಕೈಫ್-‌ವಿಕ್ಕಿ ಕೌಶಲ್‌ ತಮ್ಮ ಮೊದಲ ಮಗುವನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇಬ್ಬರೂ ಈ ಸುದ್ದಿಯನ್ನೇನೂ ಖಚಿತಪಡಿಸಿಲ್ಲ. ಇಬ್ಬರೂ 2021ರ ಡಿಸೆಂಬರ್‌ನಲ್ಲಿ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ವಿಕ್ಕಿ ಕೌಶಲ್ ಛಾವಾ, ಬ್ಯಾಡ್ ನ್ಯೂಸ್‌ ಮತ್ತು ಲವ್ & ವಾರ್‌ನಂತಹ ಸಿನಿಮಾಗಳು ಕೈಯಲ್ಲಿವೆ. ಕತ್ರಿನಾ ಕೈಫ್ ಕೊನೆಯದಾಗಿ ವಿಜಯ್ ಸೇತುಪತಿ ಜೊತೆಗೆ ʻಮೆರ್ರಿ ಕ್ರಿಸ್‌ಮಸ್‌ʼನಲ್ಲಿ ಕಾಣಿಸಿಕೊಂಡರು.

ವಿಕ್ಕಿ ಕೌಶಲ್ (Vicky Kaushal) ತಮ್ಮ ಮುಂದಿನ ಚಿತ್ರ `ಛಾವಾ’ದಲ್ಲಿ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿಯ ಪ್ರಕಾರ, ಮರಾಠಾ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ನಿಭಾಯಿಸಲಿದ್ದಾರೆ. “ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

Continue Reading

ಬಾಲಿವುಡ್

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

Cannes 2024: ಸೋಮವಾರ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಮಿನುಗುವ ಗೌನ್‌ನಲ್ಲಿ ರೆಡ್ ಕಾರ್ಪೆಟ್ ಮೇಲೆ ನಡೆದಾಗ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆಕರ್ಷಕವಾಗಿ ಕಾಣುತ್ತಿದ್ದರು. ಜಾಕ್ವೆಲಿನ್ ಹೊರತಾಗಿ, ಕಿಯಾರಾ ಆಡ್ವಾಣಿ ಮತ್ತು ಶೋಭಿತಾ ಧೂಲಿಪಾಲ. ಐಶ್ವರ್ಯಾ ರೈ ಭಾಗಿಯಾಗಿದ್ದರು. ಅದಿತಿ ರಾವ್ ಹೈದರಿ ಕೂಡ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮೇ 25ರಂದು ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ 77ನೇ ಆವೃತ್ತಿ ಮುಕ್ತಾಯವಾಗಲಿದೆ.

VISTARANEWS.COM


on

Cannes 2024 Sonam Kapoor dubs this outfit the best at Cannes this year
Koo

ಬೆಂಗಳೂರು: ನಟಿ ಸೋನಮ್ ಕಪೂರ್ (Sonam Kapoor) ದೆಹಲಿ ಮೂಲದ ಫ್ಯಾಷನ್ ಪ್ರಭಾವಿ ನ್ಯಾನ್ಸಿ ತ್ಯಾಗಿ ಅವರ (Nancy Tyagi) ಫ್ಯಾಷನ್‌ಗೆ ಫಿದಾ ಆಗಿದ್ದಾರೆ. ಈ ಬಾರಿಯ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ನ್ಯಾನ್ಸಿ ತ್ಯಾಗಿ ಭಾಗಿಯಾಗಿದ್ದರು. ಕಾನ್‌ ಫಿಲ್ಮ್‌ ಫೆಸ್ಟಿವಲ್‌ (Cannes 2024) ಫ್ಯಾಶನ್ ಸ್ಟೇಟ್‌ಮೆಂಟ್‌ಗಳಿಗೆ ಹೆಸರುವಾಸಿಯಾಗಿರುವ ಸೋನಮ್ ಅವರು ನ್ಯಾನ್ಸಿ ತ್ಯಾಗಿ ಅವರ ಪೋಸ್ಟ್‌ವನ್ನು ರಿ ಪೋಸ್ಟ್‌ ಮಾಡಿ ಹೊಗಳಿದ್ದಾರೆ.

ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಅವರ ಇತ್ತೀಚಿನ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ ಲುಕ್‌ಗಿಂತ ನ್ಯಾನ್ಸಿ ತ್ಯಾಗಿ ಅವರ ಸ್ಟೈಲ್‌ಗೆ ಫಿದಾ ಆಗಿದ್ದಾರೆ ಸೆಲೆಬ್ರಿಟಿಗಳು. “ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನ ಅತ್ಯುತ್ತಮ ಉಡುಗೆ” ಎಂದು ಹೇಳುವ ಮೂಲಕ ನ್ಯಾನ್ಸಿಯನ್ನು ಹೊಗಳಿದರು ಸೋನಮ್‌. ಮೊದಲ ದಿನ ನ್ಯಾನ್ಸಿ ತ್ಯಾಗಿ 1,000 ಮೀಟರ್‌ಗಿಂತಲೂ ಹೆಚ್ಚು ಫ್ಯಾಬ್ರಿಕ್‌ ಬಟ್ಟೆಯನ್ನು ಬಳಸಿ ತಯಾರಿಸಿದ ಸುಂದರವಾದ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಈ ಡ್ರೆಸ್ ಡಿಸೈನರ್ ಮಾಡಿದ್ದಲ್ಲ.. ಸ್ವತಃ ನಾನೇ ತಯಾರಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಈ ಗೌನ್‌ ತಯಾರಿಸಲು ನ್ಯಾನ್ಸಿ ತ್ಯಾಗಿ ಅವರಿಗೆ ಬರೋಬ್ಬರಿ ಒಂದು ತಿಂಗಳು ಬೇಕಾಯ್ತಂತೆ. ಇದೀಗ ಎರಡನೇ ದಿನ ಸೀರೆಯುಟ್ಟಿದ್ದಾರೆ.

“ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನ ನನ್ನ ಎರಡನೇ ಉಡುಗೆಯನ್ನು ನಾನು ವಿಶೇಷ ಸಮಾರಂಭದಲ್ಲಿ ಧರಿಸಿದ್ದೇನೆ, ಇದು ಸಂಪೂರ್ಣವಾಗಿ ನಾನೇ ಮಾಡಿದ ಮತ್ತೊಂದು ಸೃಷ್ಟಿಯಾಗಿದೆ. ಇದು ಕೈ ಕಸೂತಿಯನ್ನು ಒಳಗೊಂಡಿರುವ ಸೀರೆಯಾಗಿದೆʼʼ ಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ದೆಹಲಿ ಮೂಲದ ಫ್ಯಾಷನ್ ಬ್ಲಾಗರ್ ನ್ಯಾನ್ಸಿ ತ್ಯಾಗಿ ಮೊದಲಿನಿಂದಲೂ ತಾನು ರಚಿಸುವ ಬಟ್ಟೆಗಳ ವಿನ್ಯಾಸದ ವಿಡಿಯೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ.

ಇದನ್ನೂ ಓದಿ: Cannes 2024: ಆಸ್ಕರ್‌ ಪ್ರಶಸ್ತಿಯ ಆಕಾರದಂತೆ ಕಂಡ ಶೋಭಿತಾ ಧೂಲಿಪಾಲ!

ಇದನ್ನೂ ಓದಿ: Cannes Star Fashion: ಕ್ರಾಪ್‌ ಟುಕ್ಸೆಡೊ ಧರಿಸಿ ತಾಯಿಗೆ ಶ್ರದ್ಧಾಂಜಲಿ ಅರ್ಪಿಸಿದ ನಟ ಪ್ರತೀಕ್‌ ಬಬ್ಬರ್

ಸೋಮವಾರ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಮಿನುಗುವ ಗೌನ್‌ನಲ್ಲಿ ರೆಡ್ ಕಾರ್ಪೆಟ್ ಮೇಲೆ ನಡೆದಾಗ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆಕರ್ಷಕವಾಗಿ ಕಾಣುತ್ತಿದ್ದರು. ಜಾಕ್ವೆಲಿನ್ ಹೊರತಾಗಿ, ಕಿಯಾರಾ ಆಡ್ವಾಣಿ ಮತ್ತು ಶೋಭಿತಾ ಧೂಲಿಪಾಲ. ಐಶ್ವರ್ಯಾ ರೈ ಭಾಗಿಯಾಗಿದ್ದರು. ಅದಿತಿ ರಾವ್ ಹೈದರಿ ಕೂಡ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮೇ 25ರಂದು ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ 77ನೇ ಆವೃತ್ತಿ ಮುಕ್ತಾಯವಾಗಲಿದೆ.

Continue Reading

ಬಾಲಿವುಡ್

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Star Kids with Sanskrit Names: ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹೆಸರು ಸಂಸ್ಕೃತದಿಂದ ಬಂದಿದೆ. ಯಾಮಿ ಮಾತ್ರವಲ್ಲ ಈ ನಡುವೆ ಸ್ಟಾರ್ಸ್‌ಗಳು ತಮ್ಮ ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರುಗಳನ್ನೇ ತಮ್ಮ ಮಕ್ಕಳಿಗೆ ನಾಮಕರಣ ಮಾಡುತ್ತಿದ್ದಾರೆ. ಹಾಗಾದ್ರೆ ಯಾರೆಲ್ಲ ಎಂಬುದು ಮುಂದೆ ಓದಿ!

VISTARANEWS.COM


on

Star Kids with Sanskrit Names From Yami Gautam to Priyanka Chopra
Koo

ಬೆಂಗಳೂರು: ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ʻವೇದವಿದ್’ ಅಕ್ಷಯ ತೃತೀಯ ದಿನ ಹುಟ್ಟಿದ. ಅವನಿಗೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಬೇಕು ಎಂದು ನಟಿ ಶೇರ್‌ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಮಗುವಿನ ಹೆಸರಿಗೆ ಫಿದಾ (Star Kids with Sanskrit Names) ಆಗಿದ್ದಾರೆ. ʻವೇದವಿದ್ʼ ಹೆಸರು ಎಷ್ಟು ವಿಶಿಷ್ಟ ಮತ್ತು ಅಸಾಮಾನ್ಯ ಎಂದು ಹೇಳುತ್ತಿದ್ದಾರೆ. ಈ ಹೆಸರು ಸಂಸ್ಕೃತದಿಂದ ಬಂದಿದೆ. ಯಾಮಿ ಮಾತ್ರವಲ್ಲ ಈ ನಡುವೆ ಸ್ಟಾರ್ಸ್‌ಗಳು ತಮ್ಮ ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರುಗಳನ್ನೇ ತಮ್ಮ ಮಕ್ಕಳಿಗೆ ನಾಮಕರಣ ಮಾಡುತ್ತಿದ್ದಾರೆ. ಹಾಗಾದ್ರೆ ಯಾರೆಲ್ಲ ಎಂಬುದು ಮುಂದೆ ಓದಿ!

ವಮಿಕಾ ಕೊಹ್ಲಿ

ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ 2021ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಅವಳೇ ಈ ವಮಿಕಾ. ವಮಿಕಾ ಎಂಬುದು ದುರ್ಗಾ ದೇವಿಯ ಹೆಸರು. ದುರ್ಗಾ ದೇವಿಯನ್ನು ವಮಿಕಾ ಎಂದೂ ಕರೆಯುತ್ತಾರೆ. ಇದೇ ಕಾರಣದಿಂದ ಪುತ್ರಿಗೆ ವಮಿಕಾ ಎಂದು ಹೆಸರಿಡಲಾಗಿದೆ. ಅರ್ಧನಾರೀಶ್ವರನ ಒಂದು ಸ್ತ್ರೀ ಭಾಗ ವಮಿಕಾ ಎಂದು ಹಲವರು ತಿಳಿಸಿದ್ದಾರೆ. ಇನ್ನು ವಮಿಕಾ ಹೆಸರಿನಲ್ಲಿ ವಿರಾಟ್​ ಅವರ ಹೆಸರಿನ ʻವʼ ಅಕ್ಷರ ಮತ್ತು ಅನುಷ್ಕಾರ ಹೆಸರಿನ ʻಕಾʼ ಅಕ್ಷರ ಸಹ ಇದೆ. ಅಷ್ಟೇ ಅಲ್ಲದೆ, ವಮಿಕಾ ಅಂದರೆ ಯಶಸ್ಸು, ಶಾಂತಿಯನ್ನು ಸೂಚಿಸುತ್ತದೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ರಾಹಾ ಕಪೂರ್

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮಗಳಿಗೆ ರಾಹಾ ಕಪೂರ್ ಎಂದು ಹೆಸರಿಟ್ಟಿದ್ದಾರೆ. ಬಾಲಿವುಡ್‌ ಸ್ಟಾರ್‌ ದಂಪತಿ ರಣಬೀರ್ ಕಪೂರ್‌- ಅಲಿಯಾ ಭಟ್‌ ದಂಪತಿ ತಮ್ಮ ಪುತ್ರಿಗೆ ರಾಹಾ ಎಂದು ಹೆಸರಿಟ್ಟಿದ್ದಾರೆ. ರಾಹ ಎಂದರೆ ಅದರ ಮೂಲ ಅರ್ಥ ದೈವಿಕ ಮಾರ್ಗ ಎಂದು. ಸ್ವಾಹಿಲಿ ಭಾಷೆಯಲ್ಲಿ ಸಂತೋಷ ಎಂಬ ಅರ್ಥವಿದೆ. ಸಂಸ್ಕೃತದಲ್ಲಿ ಕುಲ ಎಂಬ ಅರ್ಥವಿದೆ. ಬಾಂಗ್ಲಾದಲ್ಲಿ ವಿಶ್ರಾಂತಿ, ಆರಾಮ ಹಾಗೂ ನಿರಾಳ ಎಂಬ ಅರ್ಥವಿದೆ. ಅರೇಬಿಕ್‌ನಲ್ಲಿ ಸಂತೋಷ, ಸ್ವಾತಂತ್ರ್ಯ ಹಾಗೂ ಆನಂದ ಎಂಬ ಅರ್ಥವಿದೆ.

ಅಕಾಯ್ ಕೊಹ್ಲಿ

ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಹಾಗೂ ನಟಿ ಅನುಷ್ಕಾ ಶರ್ಮಾ (Anushka Sharma) ದಂಪತಿಯ ಎರಡನೇ ಮಗುವಿಗೆ ಅಕಾಯ್ ಎಂದು ಹೆಸರಿಟ್ಟಿದ್ದಾರೆ. ಇದು ‘ಕಾಯಾ’ ಎಂಬ ಹಿಂದಿ ಪದದಿಂದ ಬಂದಿದೆ. ಇದರರ್ಥ ‘ದೇಹ’. ಅಕಾಯ್ ಎಂದರೆ ತನ್ನ ಭೌತಿಕ ದೇಹಕ್ಕಿಂತ ಹೆಚ್ಚಿನದನ್ನು ಹೊಂದಿರುವವನು. ಇನ್ನು ಟರ್ಕಿಶ್ ಭಾಷೆಯಲ್ಲಿ ‘ಅಕಾಯ್’ ಎಂಬ ಪದದ ಅರ್ಥ ‘ಹೊಳೆಯುವ ಚಂದ್ರ’ (Shining moon). ಒಟ್ಟಿನಲ್ಲಿ ದಂಪತಿ ತಮ್ಮ ಮಗನಿಗೆ ವಿಶಿಷ್ಟ ಹೆಸರನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

ಮಾಲತಿ ಮೇರಿ ಚೋಪ್ರಾ ಜೋನಾಸ್

ಮಾಲತಿ ಸಂಸ್ಕೃತ ಮೂಲದ ಪದವಾಗಿದ್ದು, ಹೂವಿನ ಸುವಾಸನೆ, ಬೆಳದಿಂಗಳು ಎಂಬರ್ಥವಿದೆ. ಮೇರಿ ಎಂದರೆ ಲ್ಯಾಟಿಲ್ ಸ್ಟೆಲಾ ಮೇರಿಸ್ ಎಂದರ್ಥ, ಅಂದರೆ ಸಮುದ್ರದ ತಾರೆ. ಫ್ರೆಂಚ್‌ನಲ್ಲಿ ಜೀಸ್‌ಸ್‌ನ ತಾಯಿ ಎಂಬರ್ಥ ಕೂಡ ಇದೆ.

ವೇದವಿದ್

ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ವೇದವಿದ್’ ಅಕ್ಷಯ ತೃತೀಯ ದಿನ ಹುಟ್ಟಿದ. ಅವನಿಗೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಬೇಕು ಎಂದು ನಟಿ ಶೇರ್‌ ಮಾಡಿಕೊಂಡಿದ್ದಾರೆ. ಈ ಹೆಸರಿನ ಅರ್ಥ ವೇದಗಳಲ್ಲಿ ಚೆನ್ನಾಗಿ ಪಾರಂಗತನಾದವನು ಎಂದು.

ಕ್ಲೀಂಕಾರ ಕೊನಿಡೆಲಾ

11 ವರ್ಷದ ಬಳಿಕ ರಾಮ್‌ಚರಣ್‌ (Ram Charan) ಹಾಗೂ ಉಪಾಸನಾ ಪೋಷಕರಾಗಿದ್ದರು. ಲಲಿತಾ ಸಹಸ್ರನಾಮ ನಾಮದಿಂದ ಮಗಳಿಗೆ ಹೆಸರನ್ನು ಇಟ್ಟರು. ಮಗುವಿನ ಹೆಸರು ‘ಕ್ಲೀಂಕಾರ ಕೊನಿಡೆಲಾ’ ‘ಕ್ಲೀಂಕಾರ’ ಪ್ರಕೃತಿಯ ಸಾಕಾರವನ್ನು ಪ್ರತಿನಿಧಿಸುತ್ತದೆ. ದೈವಿಕ ತಾಯಿಯಾದ ‘ಶಕ್ತಿ’ಯ ಪರಮೋಚ್ಚ ಶಕ್ತಿ ಎಂದು ಅರ್ಥ.

Continue Reading
Advertisement
Boiler Blast
ಕರ್ನಾಟಕ30 seconds ago

Boiler Blast: ಅಥಣಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮಹಿಳೆ ಸಾವು, ಇಬ್ಬರ ಸ್ಥಿತಿ ಗಂಭೀರ

Equity Market
ಪ್ರಮುಖ ಸುದ್ದಿ3 mins ago

Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Prajwal Revanna Case HD Kumaraswamy slams DK Shivakumar
ರಾಜಕೀಯ7 mins ago

Prajwal Revanna Case: ಡಿಕೆಶಿ ಒಪ್ಪಿಕೊಂಡಿದ್ದಕ್ಕಿಂತ ಸಾಕ್ಷಿ ಬೇಕಾ ಸಿದ್ದರಾಮಯ್ಯ? ಸಿಎಂಗೆ ಎಚ್‌ಡಿಕೆ ಪ್ರಶ್ನೆ

Allu Arjun Sneha spotted at a dhaba
South Cinema9 mins ago

Allu Arjun: ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ಅಲ್ಲು ಅರ್ಜುನ್‌ ದಂಪತಿ! ಫ್ಯಾನ್ಸ್‌ಗೆ ಅಚ್ಚರಿ

Money Guide
ಮನಿ-ಗೈಡ್24 mins ago

Money Guide: ಉಮಾಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಿ

Drown in pond
ಕರ್ನಾಟಕ37 mins ago

Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

Ebrahim Raisi
ವಿದೇಶ38 mins ago

Ebrahim Raisi: ಹೆಲಿಕಾಪ್ಟರ್‌ ಪತನದಲ್ಲಿ ಇರಾನ್‌ ಅಧ್ಯಕ್ಷ ದುರಂತ ಸಾವು; ಇಸ್ರೇಲ್ ಫಸ್ಟ್‌ ರಿಯಾಕ್ಷನ್‌ ಏನು?

2nd Puc Exam
ಬೆಂಗಳೂರು38 mins ago

2nd PUC Exam : ದ್ವಿತೀಯ ಪಿಯುಸಿ ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟ; ನೋಂದಣಿಗೂ ಡೇಟ್‌ ಫಿಕ್ಸ್‌

RCB vs RR
ಕ್ರೀಡೆ50 mins ago

RCB vs RR: ಆರ್​ಸಿಬಿ-ರಾಜಸ್ಥಾನ್ ತಂಡಗಳ​ ಐಪಿಎಲ್​ ​ಪ್ಲೇ ಆಫ್/ನಾಕೌಟ್ ದಾಖಲೆ ಹೇಗಿದೆ?

India Skills National Competition 2024 Grand Finale 58 Winners to Represent India at World Skills
ದೇಶ53 mins ago

India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌