Paris Olympics 2024: ಒಲಿಂಪಿಕ್ಸ್​ಗಾಗಿ ಸರ್ಕಾರಿ ಕಟ್ಟಡದಿಂದ ನೂರಾರು ವಲಸಿಗರ ತೆರವು - Vistara News

ಕ್ರೀಡೆ

Paris Olympics 2024: ಒಲಿಂಪಿಕ್ಸ್​ಗಾಗಿ ಸರ್ಕಾರಿ ಕಟ್ಟಡದಿಂದ ನೂರಾರು ವಲಸಿಗರ ತೆರವು

Paris Olympics 2024: ಒಲಿಂಪಿಕ್ಸ್‌ ವೇಳೆಗೆ ನಗರವನ್ನು ಅಂದಗೊಳಿಸಲು ಫ್ರಾನ್ಸ್‌ ರಾಜಧಾನಿಯಿಂದ ನಿರಾಶ್ರಿತರನ್ನು ಹೊರದಬ್ಬಲಾಗುತ್ತಿದೆ ಎಂದು ಕೆಲ ಸೇವಾಸಂಸ್ಥೆಗಳು ಇದೇ ವೇಳೆ ಅಧಿಕಾರಿಗಳ ವಿರುದ್ಧ ಆರೋಪ ಮಾಡಿವೆ. ಒಲಿಂಪಿಕ್ಸ್​ ಜುಲೈ 26 ರಿಂದ ಆಗಸ್ಟ್‌ 11ರವರೆಗೆ ನಡೆಯಲಿದೆ.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಏನ್ಸಿಯಂಟ್‌ ಒಲಿಂಪಿಯಾ (ಗ್ರೀಸ್‌): ಪ್ಯಾರಿಸ್‌ ಒಲಿಂಪಿಕ್‌(Paris Olympics 2024) ಕ್ರೀಡಾಕೂಡ ಆರಂಭಕ್ಕೆ ಇನ್ನು ಮೂರು ತಿಂಗಳು ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಕ್ರೀಡಾಜ್ಯೋತಿ(Olympic flame) ಸಂಪ್ರದಾಯದಂತೆ ದಕ್ಷಿಣ ಗ್ರೀಸ್‌ನ ಪುರಾತನ ಒಲಿಂಪಿಯಾದಲ್ಲಿ ಬೆಳಗಿದೆ. ಪೂರ್ವಾಭ್ಯಾಸದ ವೇಳೆ ಗ್ರೀಕ್‌ ನಟಿ ಮೇರಿ ಮಿನಾ ಅವರು ಪ್ಯಾರಾಬೋಲಿಕ್‌ ಪಾಲಿಶ್‌ ಮಾಡಿದ ಕನ್ನಡಿಯ ನೆರವಿನಿಂದ ಒಲಿಂಪಿಕ್‌ ಜ್ಯೋತಿಯನ್ನು ಬೆಳಗಿಸಿ, ಬಳಿಕ ಇದನ್ನು 2020ರ ಒಲಿಂಪಿಕ್‌ ರೋಯಿಂಗ್‌ ಚಾಂಪಿಯನ್‌ ಸ್ಟೆಫ‌ನಸ್‌ ನೌಸ್ಕೊಸ್‌ಗೆ ಹಸ್ತಾಂತರಿಸಿದ್ದರು. ಇದೀಗ ಫ್ರೆಂಚ್‌ ಅಧಿಕಾರಿಗಳು ಪ್ಯಾರಿಸ್‌ನ ದಕ್ಷಿಣ ಹೊರವಲಯದ ಸರ್ಕಾರಿ ಕಟ್ಟಡವೊಂದರಲ್ಲಿ ಆಶ್ರಯ ಪಡೆದಿದ್ದ ನೂರಾರು ವಲಸಿಗರನ್ನು ತೆರವುಗೊಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಒಲಿಂಪಿಕ್ಸ್‌ ವೇಳೆಗೆ ನಗರವನ್ನು ಅಂದಗೊಳಿಸಲು ಫ್ರಾನ್ಸ್‌ ರಾಜಧಾನಿಯಿಂದ ನಿರಾಶ್ರಿತರನ್ನು ಹೊರದಬ್ಬಲಾಗುತ್ತಿದೆ ಎಂದು ಕೆಲ ಸೇವಾಸಂಸ್ಥೆಗಳು ಇದೇ ವೇಳೆ ಅಧಿಕಾರಿಗಳ ವಿರುದ್ಧ ಆರೋಪ ಮಾಡಿವೆ. ಒಲಿಂಪಿಕ್ಸ್​ ಜುಲೈ 26 ರಿಂದ ಆಗಸ್ಟ್‌ 11ರವರೆಗೆ ನಡೆಯಲಿದೆ.

ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ


ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಇದನ್ನೂ ಓದಿ IPL 2024: ಕಾನ್ವೆ ಬದಲಿಗೆ ಚೆನ್ನೈ ತಂಡ ಸೇರ್ಪಡೆಗೊಂಡ ರಿಚರ್ಡ್ ಗ್ಲೀಸನ್

ಬೋಟ್‌ಗಳಲ್ಲೇ ಪರೇಡ್‌


ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಸಾರ್ವಜನಿಕ ನಿಧಿಯಿಂದ ಸ್ವಚ್ಛಗೊಂಡ ನದಿ

ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ. ಕಳೆದ ವಾರ ಕ್ರೀಡಾಪಟುಗಳು ಉಳಿದುಕೊಳ್ಳಲು ನಿರ್ಮಿಸಲಾಗಿರುವ ಕ್ರೀಡಾಗ್ರಾಮವನ್ನು ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮಾಕ್ರನ್‌ ಅವರು ಪರಿಶೀಲಿಸಿದ್ದರು. ಈ ವೇಳೆ ಅವರು ಸೀನ್​ ನದಿ ಸ್ವಚ್ಛಗೊಂಡಿದ್ದು, ತಾನು ಕೂಡ ಈ ನದಿಯಲ್ಲಿ ಈಜುವುದಾಗಿ ಭರವಸೆ ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Shane Watson Apologize: ಬೆಂಗಳೂರಿನ ಬಗ್ಗೆಯೂ ಅನುಭವ ಹಂಚಿಕೊಂಡ ವಾಟ್ಸನ್​, ಆರ್​ಸಿಬಿ ತಂಡಕ್ಕೆ ಇಲ್ಲಿ ಸಿಕ್ಕಪಟ್ಟೇ ಕ್ರೇಜಿ ಫ್ಯಾನ್ಸ್​ ಇದ್ದಾರೆ. ನಾನು ಕೂಡ ಈ ತಂಡದ ಪರ ಆಡಿರುವ ಕಾರಣ ಬೆಂಗಳೂರು ಮತ್ತು ಇಲ್ಲಿನ ಜನರ ನಂಟು ಈಗಲೂ ಇದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಕ್ಷಣಗಳು ಅವಿಸ್ಮರಣೀಯ ಎಂದರು.

VISTARANEWS.COM


on

Shane Watson Apologize
Koo

ಬೆಂಗಳೂರು: ಆಸ್ಟ್ರೇಲಿಯಾ ಹಾಗೂ ಆರ್​ಸಿಬಿ ತಂಡದ ಮಾಚಿ ಆಟಗಾರ ಶೇನ್​ ವಾಟ್ಸನ್(Shane Watson)​ ಅವರು ಇಂದು(ಮಂಗಳವಾರ) ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ(Presidency University in Bengaluru) ‘ವ್ಯಾಟ್ಸನ್​ ದಿ ವಿನ್ನರ್ಸ್ ಮೈಂಡ್ ಸೆಟ್’ ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಿದರು. ಇದೇ ವೇಳೆ 2016ರ ಫೈನಲ್​ನಲ್ಲಿ ಕಳಪೆ ಪ್ರದರ್ಶನ ತೋರಿದ್ದಕ್ಕೆ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ(Shane Watson Apologize) ಕೇಳಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದೆ.


ಪುಸ್ತಕ ಬಿಡಿಗಡೆಗೊಳಿಸಿದ ಬಳಿಕ ಮಾತನಾಡಿದ ವಾಟ್ಸನ್​, ಕಾಲೇಜಿಗೆ ಭೇಟಿ ನೀಡಿರುವುದು ನಿಜಕ್ಕೂ ಅದ್ಭುತ. ವಿದ್ಯಾರ್ಥಿಗಳು ಕ್ರಿಕೆಟ್​ ಆಡುವ ಮತ್ತು ವೀಕ್ಷಿಸುವ ಜತೆಗೆ ಶಿಕ್ಷಣದಲ್ಲಿಯೂ ಗಮನಹರಿಸಿ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ವಾಟ್ಸನ್​ ತಮ್ಮ ವಿದ್ಯಾರ್ಥಿ ಜೀವನದ ದಿನಗಳನ್ನು ಮೆಲುಕು ಹಾಕಿದರು.

ಬೆಂಗಳೂರಿನ ಬಗ್ಗೆಯೂ ಅನುಭವ ಹಂಚಿಕೊಂಡ ಅವರು, ಆರ್​ಸಿಬಿ ತಂಡಕ್ಕೆ ಇಲ್ಲಿ ಸಿಕ್ಕಪಟ್ಟೇ ಕ್ರೇಜಿ ಫ್ಯಾನ್ಸ್​ ಇದ್ದಾರೆ. ನಾನು ಕೂಡ ಈ ತಂಡದ ಪರ ಆಡಿರುವ ಕಾರಣ ಬೆಂಗಳೂರು ಮತ್ತು ಇಲ್ಲಿನ ಜನರ ನಂಟು ಈಗಲೂ ಇದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಕ್ಷಣಗಳು ಅವಿಸ್ಮರಣೀಯ. ಆದರೆ ನನ್ನ ಮನಸ್ಸಲ್ಲಿ ಈಗಲೂ ಇರುವ ನೋವೆಂದರೆ 2016ರ ಐಪಿಎಲ್​ ಫೈನಲ್​ನಲ್ಲಿ ನಾನು ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾದದ್ದು. ನಾನು ಆಡುತ್ತಿದ್ದರೆ ಆರ್​ಸಿಬಿ ಕಪ್​ ಗೆಲ್ಲುತ್ತಿತ್ತು. ಇದೇ ವಿಚಾರವಾಗಿ ನಾನು ನಿಮ್ಮಲ್ಲಿ ಕ್ಷಮೆ ಕೋರುತ್ತೇನೆ ಎಂದು ಹೇಳಿದರು. ಆ ಫೈನಲ್​ ಪಂದ್ಯದಲ್ಲಿ ವಾಟ್ಸನ್​ 11 ರನ್​ ಗಳಿಸಿ ಔಟಾಗಿದ್ದರು.

ಇದನ್ನೂ ಓದಿ RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?


ಈ ಬಾರಿ ಆರ್​ಸಿಬಿ ತಂಡ ಉತ್ತಮವಾಗಿ ಆಡಿದೆ. ಆರಂಭಿಕ ಹಂತದಲ್ಲಿ 7 ಸೋಲು ಕಂಡರೂ ಕೂಡ ಆ ಬಳಿಕ ಸತತವಾಗಿ 6 ಮತ್ತು ಒಟ್ಟಾರೆ 7 ಗೆಲುವಿನೊಂದಿಗೆ ಪ್ಲೇ ಆಫ್​ ಪ್ರವೇಶಿಸಿದೆ. ನಾಳೆ ರಾಜಸ್ಥಾನ್​ ವಿರುದ್ಧ ಆಡಲಿದೆ. ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು. ಇದೇ ವೇಳೆ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಕುಲಪತಿ ಡಾ. ನಿಸ್ಸಾರ್ ಅಹಮದ್ ಜತೆ ವಾಟ್ಸನ್​ ಕ್ರಿಕೆಟ್ ಆಡಿ ಸಂಭ್ರಮಿಸಿದರು.


ಸದ್ಯ ನಿವೃತ್ತಿ ಜೀವನ ನಡೆಸುತ್ತಿರುವ ವಾಟ್ಸನ್​ ಕ್ರಿಕೆಟ್​ ಕಾಮೆಂಟ್ರಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಐಪಿಎಲ್​ ಮಾತ್ರವಲ್ಲದೆ ಇತರ ಕ್ರಿಕೆಟ್​ ಲೀಗ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್​ ಪಂದ್ಯಗಳ ಕಾಮೆಂಟ್ರಿ ಮಾಡುತ್ತಿದ್ದಾರೆ. ‘ವ್ಯಾಟ್ಸನ್​ ದಿ ವಿನ್ನರ್ಸ್ ಮೈಂಡ್ ಸೆಟ್’ ಈ ಪುಸ್ತಕದಲ್ಲಿ ಆರ್​ಸಿಬಿ ಮತ್ತು ಐಪಿಎಲ್​ ಕುರಿತ ವಿಚಾರವು ಅಡಕವಾಗಿದೆ.

Continue Reading

ಕ್ರೀಡೆ

RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

RCB IPL Records: ಪ್ರತಿ ಆವೃತ್ತಿಯಲ್ಲಿಯೂ ಈ ಸಲ ಕಪ್​ ನಮ್ದೇ ಎಂದು ಅಭಿಯಾನ ಆರಂಭಿಸುವ ಆರ್​ಸಿಬಿ ನಿರಾಸೆ ಕಂಡಿದ್ದೇ ಹೆಚ್ಚು. ಒಟ್ಟು ಮೂರು ಬಾರಿ ಫೈನಲ್​, 5 ಬಾರಿ ಪ್ಲೇ ಆಫ್​ಗೆ ಪ್ರವೇಶ ಪಡೆದಿತ್ತು. ಆದರೆ ಒಮ್ಮೆಯೂ ಕಪ್​ ಮಾತ್ರ ಗೆಲ್ಲಲು ಸಾಧ್ಯವಾಗಿಲ್ಲ.

VISTARANEWS.COM


on

RCB IPL Records
Koo

ಅಮಹದಾಬಾದ್​: ಕೋಟೆಯ ಎಲ್ಲ ಬಾಗಿಲುಗಳನ್ನು ಮುಚ್ಚಿದರೂ, ಬೆಳಕು ತೂರುವುದಕ್ಕೊಂದು ಸಣ್ಣ ಕಿಂಡಿ ಇದ್ದರು ಸಾಕು ಜೀವನ ಹೋರಾಟ ಮುಂದುವರೆಸುವುದಕ್ಕೆ ಎನ್ನುವ ಮಾತನ್ನು ಆರ್​ಸಿಬಿ(RCB IPL Records) ನಿಜ ಮಾಡಿದೆ. ಆರಂಭಿಕ ಹಂತದಲ್ಲಿ 7 ಸೋಲು ಕೊಂಡು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಿಯಾಗಿ ಇನ್ನೇನು ಟೂರ್ನಿಯಿಂದ ಹೊರಬೀಳುತ್ತದೆ ಎನ್ನುವ ಸ್ಥಿತಿ ಎದುರಿಸಿತ್ತು. ಆದರೆ ಹೋರಾಡುವ ಛಲ ಮತ್ತು ನಂಬಿಕೆಯೊಂದನ್ನು ಗಟ್ಟಿಯಾಗಿರಿಸಿದ್ದ ಆಗಾರರು ತಂಡವನ್ನು ಪ್ಲೇ ಆಫ್​ ಪ್ರವೇಶಿಸುವಂತೆ ಮಾಡಿದರು. ಇದೀಗ ನಾಳೆ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಆಟಗಾರರು ರಾಜಸ್ಥಾನ್​ ವಿರುದ್ಧದ ಕಣಕ್ಕಿಳಿಯಲು ಸಜ್ಜಾಗಿಗೆ ನಿಂತಿದ್ದಾರೆ. ಆರ್​ಸಿಬಿಯ ಇದುವರೆಗಿನ 16 ಐಪಿಎಲ್​ನ ಸಾಧನೆಯ ಇಣುಕು ನೋಡ ಇಂತಿದೆ.

ಮೂರು ಭಾರಿ ಫೈನಲ್​


ಪ್ರತಿ ಆವೃತ್ತಿಯಲ್ಲಿಯೂ ಈ ಸಲ ಕಪ್​ ನಮ್ದೇ ಎಂದು ಅಭಿಯಾನ ಆರಂಭಿಸುವ ಆರ್​ಸಿಬಿ ನಿರಾಸೆ ಕಂಡಿದ್ದೇ ಹೆಚ್ಚು. ಒಟ್ಟು ಮೂರು ಬಾರಿ ಫೈನಲ್​ ಪ್ರವೇಶಿಸಿದರೂ ಕಪ್​ ಮಾತ್ರ ಗೆಲ್ಲಲು ಸಾಧ್ಯವಾಗಿಲ್ಲ. ಮೂರೂ ಫೈನಲ್​ ಪ್ರವೇಶದ ವೇಳೆಯೂ ತಂಡದಲ್ಲಿ ವಿಶ್ವದ ಬಲಿಷ್ಠ ಆಟಗಾರರು ಈ ತಂಡದಲ್ಲಿದ್ದರು. ಆದರೂ ಕೂಡ ಲಕ್​ ಎನ್ನುವುದು ಮಾತ್ರ ತಂಡಕ್ಕೆ ಕೈ ಹಿಡಿಯುತ್ತಿರಲಿಲ್ಲ. ಲೀಗ್​ ಹಂತದಲ್ಲಿ ಎಷ್ಟೇ ಸೊಗಸಾದ ಆಟವಾಡಿದ್ದರೂ ಕೂಡ ಫೈನಲ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿ ಕಪ್​ ಗೆಲ್ಲಲು ವಿಫಲವಾಗಿತ್ತು. ಒಟ್ಟು 5 ಬಾರಿ ಪ್ಲೇ ಆಫ್​ಗೆ ಪ್ರವೇಶ ಪಡೆದಿತ್ತು.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

ಆರ್​ಸಿಬಿ ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿದ್ದು, 2009ರಲ್ಲಿ. ಎದುರಾಳಿ ಆ್ಯಡಂ ಗಿಲ್‌ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್(Deccan Chargers). ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಡೆಕ್ಕನ್​ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 143 ರನ್​ ಬಾರಿಸಿತು. ಅಲ್ಪ ಮೊತ್ತವನ್ನು ಬೆನ್ನಟ್ಟಿದ ಆರ್​ಸಿಬಿ 9 ವಿಕೆಟ್​ಗೆ ಕೇವಲ 137 ರನ್​ ಮಾತ್ರ ಗಳಿಸಲಷ್ಟೇ ಶಕ್ತವಾಗಿ 6 ರನ್​ ಅಂತರದಿಂದ ಸೋಲು ಕಂಡಿತ್ತು.

ಎರಡನೇ ಬಾರಿ ಆರ್​ಸಿಬಿ ಫೈನಲ್​ ಪ್ರವೇಶಿಸಿದ್ದು 2011ರಲ್ಲಿ. ಮೊದಲ ಬಾರಿಗೆ ಕಪ್​ ಗೆಲ್ಲಲು ವಿಫಲವಾಗಿದ್ದ ಆರ್​ಸಿಬಿ ತನ್ನ 2ನೇ ಪ್ರಯತ್ನದಲ್ಲಿ ಕಪ್​ ಗೆಲ್ಲಲಿದೆ ಎಂದು ಅಭಿಮಾನಿಗಳು ಬಲವಾಗಿ ನಂಬಿದ್ದರು. ಆದರೆ ಇಲ್ಲಿಯೂ ಆರ್​ಸಿಬಿ ವಿಫಲವಾಗಿತ್ತು. ಹಾಲಿ ಚಾಂಪಿಯನ್​ ಆಗಿದ್ದ ಚೆನ್ನೈ ಸೂಪರ್​ ಕಿಂಗ್ಸ್​ ಫೈನಲ್​ನಲ್ಲಿ ಗೆದ್ದು ಸತತವಾಗಿ 2ನೇ ಟ್ರೋಫಿ ಗೆದ್ದ ಸಾಧನೆ ಮಾಡಿತ್ತು. ಈ ಪಂದ್ಯದಲ್ಲಿ ಆರ್​ಸಿಬಿಗೆ 58 ರನ್​ ಸೋಲು ಎದುರಾಗಿತ್ತು.

ಆರ್​ಸಿಬಿ ಅಭಿಮಾನಿಗಳಿಗೆ ಮೂರನೇ ಬಾರಿಗೆ ನಿರಾಸೆಯಾದ ಐಪಿಎಲ್​ ಆವೃತ್ತಿ ಎಂದರೆ 2016ನೇ ಆವೃತ್ತಿ. ಬಲಿಷ್ಠ ಆಟಗಾರ ಕ್ರಿಸ್​ ಗೇಲ್​, ಎಬಿಡಿ ವಿಲಿಯರ್ಸ್​, ಶೇನ್ ವಾಟ್ಸನ್​ ಮತ್ತು ವಿರಾಟ್​ ಕೊಹ್ಲಿಯಂತಹ ಸ್ಟಾರ್​ ಆಟಗಾರರು ತಂಡದಲ್ಲಿದ್ದರೂ ಕೂಡ ಕಪ್​ ಗೆಲ್ಲುವಲ್ಲಿ ಆರ್​ಸಿಬಿ ವಿಫಲವಾಗಿತ್ತು. ಮೊದಲು ಬ್ಯಾಟಿಂಗ್​ ನಡೆಸಿದ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ 7 ವಿಕೆಟ್​ಗೆ 208 ರನ್​ ಬಾರಿಸಿತು. ದಿಟ್ಟವಾಗಿ ಗುರಿ ಬೆನ್ನಟ್ಟಿಕೊಂಡು ಹೋದ ಆರ್​ಸಿಬಿ ಮೊದಲ ವಿಕೆಟ್​ಗೆ 114 ರನ್​ ಒಟ್ಟುಗೂಡಿಸಿತು. ಈ ವೇಳೆ ಆರ್​ಸಿಬಿ ಅಭಿಮಾನಿಗಳೆಲ್ಲ ಈ ಸಲ ಕಪ್​ ನಮ್ದೇ ಎಂದು ನಂಬಿದ್ದರು. ಆದರೆ, ನಂಬುಗೆಯ ಬ್ಯಾಟರ್​ಗಳೆಲ್ಲ ಸತತವಾಗಿ ವಿಕೆಟ್​ ಒಪ್ಪಿಸಿ ತಂಡದ ಸೋಲಿಗೆ ಕಾರಣವಾದರು. ಭರ್ತಿ 200 ರನ್​ ಗಳಿಸಿ 8 ರನ್​ ಅಂತರದ ಸೋಲು ಕಂಡಿತ್ತು.

ಈ ಬಾರಿ ಹೊಸ ಅಧ್ಯಾಯ ಎಂದು ಹೇಳಿ ಅಭಿಯಾನ ಆರಂಭಿಸಿದ ಆರ್​ಸಿಬಿ ಎಲಿಮಿನೇಟರ್​ ಪಂದ್ಯದಲ್ಲಿಯೂ ಗೆದ್ದು ಆ ಬಳಿಕ ಕ್ವಾಲಿಫೈಯರ್​ನಲ್ಲಿಯೂ ಜಯಶಾಲಿಯಾಗಿ ಫೈನಲ್​ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಗೆಲ್ಲುವಂತಾಗಲಿ ಎನ್ನುವುದು ಕೋಟಿ ಆರ್​ಸಿಬಿ ಅಭಿಮಾನಿಗಳ ಹಾರೈಕೆಯಾಗಿದೆ.

Continue Reading

ಕ್ರೀಡೆ

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

India Head Coach: ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ.

VISTARANEWS.COM


on

India Head Coach
Koo

ನವದೆಹಲಿ: ಟೀಮ್​ ಇಂಡಿಯಾದ(India Head Coach) ಮುಂದಿನ ಕೋಚ್​ ಯಾರಾಗಲಿದ್ದಾರೆ ಎಂಬ ಕತೂಹಲದ ಮಧ್ಯೆ ಬಿಸಿಸಿಐ(BCCI) ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಕೋಚ್​ ಆಗಿರುವ ಸ್ಟೀಫನ್ ಫ್ಲೆಮಿಂಗ್(Stephen Fleming) ಅವರನ್ನು ಕೋಚ್​ ಹುದ್ದೆ ಅಲಂಕರಿಸುವಂತೆ ಮನವೊಲಿಸಲು ಧೋನಿ(MS Dhoni) ಬಳಿ ಮನವಿ ಮಾಡಿದೆ ಎಂದು ವರದಿಯಾಗಿದೆ.

ಹಿಂದೂಸ್ತಾನ್ ಟೈಮ್ಸ್‌ನ ವರದಿಯ ಪ್ರಕಾರ ಧೋನಿ ಬಳಿ ಬಿಸಿಸಿಐ ಸ್ಟೀಫನ್ ಫ್ಲೆಮಿಂಗ್ ಅವರನ್ನು ಟೀಮ್​ ಇಂಡಿಯಾದ ಕೋಚ್​ ಆಗುವಂತೆ ಮಾತುಕತೆ ನಡೆಸಲು ಕೇಳಿಕೊಂಡಿದೆ ಎಂದು ತಿಳಿದುಬಂದಿದೆ. ಸ್ಟೀಫನ್ ಫ್ಲೆಮಿಂಗ್ ಅವರನ್ನು ಕೋಚ್​ ಹುದ್ದೆಗೆ ನೇಮಿಸಲು ಬಿಸಿಸಿಐ ಎಲ್ಲ ಯೋಜನೆ ನಡೆಸಿತ್ತು. ಇದೇ ವೇಳೆ ಅವರು ತಾನು ಫ್ರಾಂಚೈಸಿ ಕ್ರಿಕೆಟ್​ನಲ್ಲಿ ಇನ್ನೂ ಕೆಲ ಕಾಲ ಕರ್ತವ್ಯನಿರ್ವಹಸುವ ಆಸಕ್ತಿ ಹೊಂದಿದ್ದೇನೆ ಎಂದು ಹೇಳುವ ಮೂಲಕ ಭಾರತ ತಂಡದ ಕೋಚ್​ ಹುದ್ದೆಗೆ ನಿರಾಸಕ್ತಿ ತೋರಿದ್ದರು. ಆದರೆ ಇದೀಗ ಬಿಸಿಸಿಐ ಧೋನಿಯ ಮಧ್ಯಸ್ಥಿಕೆಯಲ್ಲಿ ಅವರ ಮನವೊಲಿಸಲು ಮುಂದಾಗಿದೆ ಎನ್ನಲಾಗಿದೆ.

ರವಿಶಾಸ್ತ್ರಿ ಕೋಚಿಂಗ್​ ಅವಧಿ ಮಕ್ತಾಯದ ಬಳಿಕ ಕೋಚ್​ ಆದ ದ್ರಾವಿಡ್​ ಕೂಡ ಆರಂಭದಲ್ಲಿ ಈ ಹುದ್ದೆಗೆ ಉತ್ಸುಕರಾಗಿರಲಿಲ್ಲ. ಈ ವೇಳೆ ಬಿಸಿಸಿಐ ಅಧ್ಯಕ್ಷರಾಗಿದ್ದ ಗಂಗೂಲಿ ಅವರು ಮನವೊಲಿಸಿ ದ್ರಾವಿಡ್​ ಅವರನ್ನು ಕೋಚ್​ ಹುದ್ದೆಗೇರುವಂತೆ ಮಾಡಿದ್ದರು. ಇದೀಗ ಫ್ಲೆಮಿಂಗ್ ಅವರನ್ನು ಕೂಡ ಧೋನಿಯ ಮೂಲಕ ಕೋಚ್​ ಹುದ್ದೆಗೇರುವಂತೆ ಮಾಡುವ ಪ್ರಯತ್ನದಲ್ಲಿದೆ.

ಇನ್ನೊಂದು ಮೂಲಗಳ ಪ್ರಕಾರ ಧೋನಿ ಅವರು ಭಾರತ ತಂಡದ ಕೋಚ್​ ಆಗಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಧೋನಿ 2021ರಲ್ಲಿ ಭಾರತದ ಆತಿಥ್ಯದಲ್ಲಿ ಯುಎಇಯಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಧೋನಿ ಭಾರತ ತಂಡದ ಮೆಂಟರ್​ ಆಗಿ ಕರ್ತವ್ಯ ನಿರ್ವಹಿಸಿದ್ದರು. ಹೀಗಾಗಿ ಧೋನಿ ಅವರನ್ನು ಕೂಡ ಕೋಚ್​ ಮಾಡುವ ಯೋಚನೆಯೊಂದನ್ನು ಬಿಸಿಸಿಐ ನಡೆಸಿದೆ ಎನ್ನಲಾಗಿದೆ. ಧೋನಿ ನಾಯಕತ್ವದಲ್ಲಿ ಭಾರತ ಏಕದಿನ, ಟಿ20 ಮತ್ತು ಐಸಿಸಿ ಚಾಂಪಿಯನ್ಸ್​ ಟ್ರೋಫಿ ಗೆದ್ದಿತ್ತು. ಇದಾಗ ಬಳಿಕ ಭಾರತ ತಂಡ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ.

ಇದನ್ನೂ ಓದಿ Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಕೋಚ್​, ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿರುವ ಜಸ್ಟಿನ್ ಲ್ಯಾಂಗರ್(Justin Langer) ಕೂಡ ಭಾರತ ತಂಡದ ಕೋಚಿಂಗ್​ ಬಗ್ಗೆ ಆಸಕ್ತರಾಗಿದ್ದಾರೆ. ಐಪಿಎಲ್​ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ಭಾರತ ತಂಡ ಕೋಚಿಂಗ್​ ಮಾಡುವುದು ಅಸಾಮಾನ್ಯ ಪಾತ್ರವಾಗಿದೆ. ನನಗೂ ಕೋಚಿಂಗ್​ ಮಾಡಲು ಕುತೂಹಲವಿದೆ. ಇಲ್ಲಿ ಅಪಾರ ಸಂಖ್ಯೆಯ ಕ್ರಿಕೆಟ್ ಪ್ರತಿಭೆಗಳಿದ್ದಾರೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ಗಮನಿಸುವಾಗ ಕೋಚಿಂಗ್​ ಹುದ್ದೆಗೆ ಅರ್ಜಿ ಸಲ್ಲಿಸುವ ಸೂಚನೆಯೊಂದು ಲಭಿಸಿದೆ. 

Continue Reading

ಕ್ರೀಡೆ

RCB: ಅಮೆರಿಕದ ಘಟಿಕೋತ್ಸವದಲ್ಲೂ ಆರ್​ಸಿಬಿಯದ್ದೇ ಹವಾ: ವಿಡಿಯೊ ವೈರಲ್​

RCB: ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದರು. “ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದರು.

VISTARANEWS.COM


on

RCB
Koo

ನ್ಯೂಯಾರ್ಕ್​: ಅಮೆರಿಕದಲ್ಲಿರುವ ಕರ್ನಾಟಕ ಮೂಲಕದ ಆರ್​ಸಿಬಿಯ(RCB) ಅಪಟ್ಟ ಅಭಿಮಾನಿಯೊಬ್ಬ(RCB fan) ತನ್ನ ಕಾಲೇಜಿನ ಘಟಿಕೋತ್ಸವ(ಕಾನ್ವೋಕೇಷನ್)(convocation) ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸುವಾಗ ಆರ್​ಸಿಬಿ ತಂಡದ ಜೆರ್ಸಿಯನ್ನು ಪ್ರದರ್ಶಸಿದ್ದಾನೆ. ಈ ವಿಡಿಯೊ ವೈರಲ್​ ಆಗಿದೆ.

ಯಾವುದೇ ಒಂದು ವಿಶ್ವವಿದ್ಯಾನಿಲಯದ ಅಥವಾ ಇತರ ಅಂಗೀಕೃತ ಉನ್ನತ ಶಿಕ್ಷಣ ಸಂಸ್ಥೆಗಳ ಅಧ್ಯಯನ ಘಟಕವೊಂದರ ಶಿಕ್ಷಣವನ್ನು ಯಶಸ್ವಿಯಾಗಿ ಮುಗಿಸಿದ ಬಳಿಕ ಇಲ್ಲವೇ ಯಾವುದಾದರೊಂದು ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಥವಾ ಪಾಂಡಿತ್ಯ ಸಾಧಿಸಿದ ಖ್ಯಾತ ವ್ಯಕ್ತಿಗಳಿಗೆ ಪದವಿ/ಪ್ರಶಸ್ತಿಯನ್ನು ನೀಡಲು ಏರ್ಪಡಿಸುವ ಸಾಂಪ್ರದಾಯಿಕ ಸಮಾರಂಭವನ್ನು ಘಟಿಕೋತ್ಸವ ಎಂದು ಕರೆಯಲಾಗುತ್ತದೆ. ಆರ್​ಸಿಬಿಯ ಈ ಅಭಿಮಾನಿ ಕೂಡ ಇತಂಹದ್ದೇ ಸಾಧನೆ ಮಾಡಿದ್ದ. ಆದರೆ ಆತನ ಸಾಧನೆಗಿಂತ ಆರ್​ಸಿಬಿ ಚೆನ್ನೈ ವಿರುದ್ಧ ಗೆದ್ದು ಪ್ಲೇ ಆಫ್​ ಪ್ರವೇಶಿಸಿದ್ದೇ ಆತನಿಗೆ ಎಲ್ಲಿಲ್ಲದ ಸಂತಸ ತಂದಿದೆ. ಕರಣ್​ ಎನ್ನುವಾತ ಈ ವಿಡಿಯೊವನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿದ್ದಾನೆ.

ಆರ್​ಸಿಬಿ ಅಭಿಮಾನಿಗಳು ತಮ್ಮ ಭಾವೋದ್ರಿಕ್ತ ಮತ್ತು ಅಚಲ ಬೆಂಬಲಕ್ಕೆ ಹೆಸರುವಾಸಿಯಾಗಿದ್ದಾರೆ. ಫ್ರ್ಯಾಂಚೈಸಿಯು ಭೌಗೋಳಿಕ ಗಡಿಗಳು ಮತ್ತು ಸಂಸ್ಕೃತಿಗಳನ್ನು ಮೀರಿದ ನಿಷ್ಠಾವಂತ ಅಭಿಮಾನಿಗಳನ್ನು ಹೊಂದಿದೆ. ಈ ಬಾರಿ ಆರಂಭಿಕ ಹಂತದಲ್ಲಿ ಸತತ ಸೋಲು ಕಂಡಿದ್ದ ಆರ್​ಸಿಬಿ ಆ ಬಳಿಕ ಪವಾಡ ಸೃಷ್ಟಿಸಿದಂತೆ ಸತತ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಪ್ರವೇಶಿಸಿತ್ತು. ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ರಾಜಸ್ಥಾನ್​ ವಿರುದ್ಧ ಆಡಲಿದೆ. ಗೆದ್ದರೆ 2ನೇ ಕ್ವಾಲಿಫೈಯರ್​ ಪಂದ್ಯವನ್ನಾಡಲಿದೆ.

ಶನಿವಾರ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಗಿತ್ತು. ಈ ಪಂದ್ಯ ಫೈನಲ್​ ಪಂದ್ಯಕ್ಕೂ ಮಿಗಿಲಾದ ಕಾತುಕ ಸೃಷ್ಟಿಸಿತ್ತು.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

ಆರ್​ಸಿಬಿ ಗೆಲುವಿನ ಬಳಿಕ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತ್ತು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಸಂಭ್ರಮಾಚರಣೆ ಕಂಡು ಬಂದಿತ್ತು. ಪಂದ್ಯ ಮುಕ್ತಾಯವಾದಾಗ ತಡರಾತ್ರಿಯಾಗಿದ್ದರೂ ಅಭಿಮಾನಿಗಳ ಸಡಗರಕ್ಕೆ ಕೊರತೆ ಇರಲಿಲ್ಲ. ಪುಟ್ಟ ಮಕ್ಕಳು ಸೇರಿದಂತೆ ಆರ್‌ಸಿಬಿ ಫ್ಯಾನ್ಸ್‌ ರಸ್ತೆಯಲ್ಲೇ ಕುಣಿದು ಕುಪ್ಪಳಿಸಿದ್ದರು. ಮಕ್ಕಳಂತೂ ಈ ಸಲ ಕಪ್ ನಮ್ದೆ ಎನ್ನುವ ಘೋಷಣೆ ಕೂಗುತ್ತಿರುವುದು ಕಂಡು ಬಂದಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದ ಎದುರಿನ ರಸ್ತೆ ಬ್ಲಾಕ್ ಮಾಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದರು. ಇದು ನಿಜವಾದ ಹೊಸ ಅಧ್ಯಾಯ ಎನ್ನುವ ಮಾತು ಎಲ್ಲೆಡೆ ಕೇಳಿ ಬಂದಿತ್ತು.

ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದರು. “ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದರು.

Continue Reading
Advertisement
Meghana Raj Mother Day Gift Shopping to mother
ಸ್ಯಾಂಡಲ್ ವುಡ್1 min ago

Meghana Raj: ಅಮ್ಮನಿಗೆ ಚಿನ್ನದ ಓಲೆ ಗಿಫ್ಟ್‌ ಕೊಟ್ಟ ಮೇಘನಾ ರಾಜ್‌; ಕಣ್ಣೀರಿಟ್ಟ ಪ್ರಮೀಳಾ

Prashant Kishor
ದೇಶ9 mins ago

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Ujjivan Small Finance Bank
ವಾಣಿಜ್ಯ10 mins ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಲಾಭಾಂಶ ಹೆಚ್ಚಳ

Kempegowda International Airport parking
ಬೆಂಗಳೂರು26 mins ago

Kempegowda International Airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲೂ ಹಣ ಕೊಡಬೇಕು!

Abhijit Gangopadhyay
ದೇಶ31 mins ago

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

2nd Puc Result
ಬೆಂಗಳೂರು46 mins ago

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

L2 Empuraan first look poster shared by Prithviraj Sukumaran
South Cinema56 mins ago

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

Shane Watson Apologize
ಕ್ರಿಕೆಟ್1 hour ago

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Viral Video
ವೈರಲ್ ನ್ಯೂಸ್1 hour ago

Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

DK Shivakumar speaks about KPCC president post
ಬೆಂಗಳೂರು1 hour ago

‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌