Drowned: ನೀರಿನ ಸಂಪ್‌ನಲ್ಲಿ ಮುಳುಗಿ ತಾಯಿ- ಮಗು ಸಾವು, ಮುಚ್ಚಳ ಹಾಕದೆ ಬಿಟ್ಟಿದ್ದ ಮಾಲಿಕ - Vistara News

ಕ್ರೈಂ

Drowned: ನೀರಿನ ಸಂಪ್‌ನಲ್ಲಿ ಮುಳುಗಿ ತಾಯಿ- ಮಗು ಸಾವು, ಮುಚ್ಚಳ ಹಾಕದೆ ಬಿಟ್ಟಿದ್ದ ಮಾಲಿಕ

Drowned: ಮನೆಯ ಮಾಲಿಕ, ಉದ್ಯಮಿ ಸ್ಥಳದಲ್ಲಿ ನೀರಿನ ಸಂಪ್ ತೆಗೆಸಿ ಅದನ್ನು ಮುಚ್ಚದೆ ಹಾಗೆಯೇ ಬಿಟ್ಟಿದ್ದರು. ಸಂಪ್‌ನ ತುಂಬಾ ನೀರು ಇದೆ ಎಂದು ಗೊತ್ತಿದ್ದರೂ ಅದನ್ನು ಮುಚ್ಚುವ ಕೆಲಸ ಮಾಡಿರಲಿಲ್ಲ.

VISTARANEWS.COM


on

open sump drowned
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಶ್ರೀಮಂತರ ಮನೆಯವರ ನಿರ್ಲಕ್ಷ್ಯಕ್ಕೆ ತಾಯಿ- ಮಗು (mother- child death) ಬಲಿಯಾಗಿದ್ದಾರೆ. ತೆರೆದೇ ಇದ್ದ ನೀರಿನ ಸಂಪ್‌ನಲ್ಲಿ ಬಿದ್ದು ಮುಳುಗಿ (Drowned) ತಾಯಿ ಮಗು ಸಾವಿಗೀಡಾಗಿದ್ದಾರೆ. ಯಲಹಂಕ ನ್ಯೂಟೌನ್ ಬಳಿಯ ಈಸ್ಟ್ ಕಾಲೋನಿಯಲ್ಲಿ ಘಟನೆ ನಡೆದಿದೆ.

ಕವಿತಾ (40) ಹಾಗೂ ಪವನ್ (8) ಮೃತರು. ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಭೇಟಿ ಕೊಟ್ಟು ಶವಗಳನ್ನು ಹೊರಗೆ ತೆಗೆದಿದ್ದಾರೆ.

ಮೃತ ಕವಿತಾ ಅದೇ ಏರಿಯಾದ ಉದ್ಯಮಿಯೊಬ್ಬರ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದರು. ನಿನ್ನೆ‌ ಸಹ ಅದೇ ಮನೆಯವರ ‌ಮನೆಯ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಈಕೆ ಕಾಂಪೌಂಡ್ ಒಂದಕ್ಕೆ ನೀರು ಹಾಕಲು ಹೋಗಿದ್ದರು. ಮನೆಯ ಮಾಲಿಕ, ಉದ್ಯಮಿ ಸ್ಥಳದಲ್ಲಿ ನೀರಿನ ಸಂಪ್ ತೆಗೆಸಿ ಅದನ್ನು ಮುಚ್ಚದೆ ಹಾಗೆಯೇ ಬಿಟ್ಟಿದ್ದರು. ಸಂಪ್‌ನ ತುಂಬಾ ನೀರು ಇದೆ ಎಂದು ಗೊತ್ತಿದ್ದರೂ ಅದನ್ನು ಮುಚ್ಚುವ ಕೆಲಸ ಮಾಡಿರಲಿಲ್ಲ.

ತಾಯಿ ಕಾಂಪೌಂಡ್‌ಗೆ ನೀರು ಹಾಕುತ್ತಿದ್ದಾಗ ಮಗು ಆಟವಾಡುತ್ತ ಹೋಗಿ ಸಂಪ್‌ಗೆ ಬಿದ್ದಿದೆ. ಮಗುವನ್ನು ಕಾಪಾಡಲು ಮುಂದಾದ ತಾಯಿ ತಾನೂ ಸಂಪ್‌ಗೆ ಇಳಿದಿದ್ದಾಳೆ. ನಂತರ ಮೇಲೆ ಬರುವುದಕ್ಕೆ ಆಗದೆ ತಾಯಿ ಮಗು ಸಂಪ್‌ನಲ್ಲಿಯೇ ಜೀವ ಬಿಟ್ಟಿದ್ದಾರೆ. ಸಂಪ್‌ಗೆ ಮುಚ್ಚಳವಾಗಲೀ ಯಾವುದೇ ಲಾಕ್ ಆಗಲೀ ಹಾಕದೆ ಬಿಟ್ಟಿದ್ದ ಸೈಟ್ ಮಾಲೀಕನ ನಿರ್ಲಕ್ಷ್ಯ ಈ ಪ್ರಕರಣದಲ್ಲಿ ಎದ್ದು ಕಂಡಿದೆ.

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

ಗದಗ: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದಲ್ಲೇ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಬರ್ಬರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಕೃತ್ಯದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

murder case gadag

ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್‌ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.

ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.

ಶ್ವಾನದಳ, ಫಾರೆನ್ಸಿಕ್‌ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.‌

ಇದನ್ನೂ ಓದಿ: Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

VISTARANEWS.COM


on

ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.
ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.
2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.
2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.
ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

Continue Reading

ಅವಿಭಾಗೀಕೃತ

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

VISTARANEWS.COM


on

ಮುಂಬೈ: ಮಹಿಳಾ ಮೀಸಲಾತಿ ಕುರಿತು ಮುಂಬೈನಲ್ಲಿ ಬಿಜೆಪಿ ಪ್ರತಿಭಟನ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರನ್ನು ಮಹಿಳೆಯೊಬ್ಬರು ಸಚಿವರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಾಕಷ್ಟು ವೈರಲ್‌ ಆಗಿದೆ.
ಮುಂಬೈನ ವೊರ್ಲಿ ಪ್ರದೇಶದಲ್ಲಿ ಸಚಿವ ಗಿರೀಶ್ ಮಹಾಜನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಅಡಚಣೆ ಉಂಟಾಗಿತ್ತು. ಇದರಿಂದ ರೊಚ್ಚಿಗೆದ್ದ ಈ ಮಹಿಳೆ ಸಚಿವರನ್ನು ಉದ್ದೇಶಿಸಿ ನಿಮ್ಮಿಂದಲೇ ಟ್ರಾಫಿಕ್ ಜ್ಯಾಮ್ ಉಂಟಾಗುತ್ತಿದ್ದು,ಫ್ರೆಂ ಹಿಯರ್.. ಗೆಟ್‌ ಔಟ್‌ ಎಂದು ನಿಂದಿಸಿದ್ದಾರೆ.
ಈ ರೀತಿ ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸುವ ಬದಲು ಸಮೀಪದ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಈ ಮಹಿಳೆಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದಾಗ ಮಾತನಾಡಲು ನಿರಾಕರಿಸಿದ ಮಹಿಳೆ ತನ್ನೊಂದಿಗೆ ಯಾರೂ ಮಾತನಾಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಈ ವಿಡಿಯೊವನ್ನು ಹಂಚಿಕೊಂಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರ್ಷವರ್ಧನ್ ಸಪ್ನಲ್, ಮಹಿಳಾ ಮೀಸಲಾತಿ ಕುರಿತು ಆಡಳಿತ ಪಕ್ಷದ ಅಭಿಯಾನದ ನೈಜ ಮುಖವನ್ನು ಬಹಿರಂಗಪಡಿಸಿದೆ ಎಂದು
ಟೀಕಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಮಹಿಳೆಯರನ್ನು ದಾರಿ ತಪ್ಪಿಸುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದು ಅದಕ್ಕಾಗಿ ಮಹಿಳಾ ಮೀತಿ ವಿಷಯವನ್ನು ಒಂದು ಸಾಧನವಾಗಿ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

Latest

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

VISTARANEWS.COM


on

ಬೆಂಗಳೂರು: ನನ್ನ ಮೇಲೆ ನಡೆದ ಇಡಿ ದಾಳಿಗೂ ನನ್ನ ತಂದೆ, ಶಾಸಕ ಬಿಡಿಎ ಅಧ್ಯಕ್ಷರೂ ಆದ ಎನ್.ಎ. ಹ್ಯಾರಿಸ್‌ ಅವರಿಗೂ ಯಾವುದೇ ಸಂಬಂಧವಿಲ್ಲ. ನನ್ನ ಹಾಗೂ ನನ್ನ ತಮ್ಮನ ಮನೆಗಳ ಮೇಲೆ ದಾಳಿ ನಡೆದಿದೆ ಎಂದು ಯುವ ಕಾಂಗ್ರೆಸ್‌ ಮುಖಂಡ ನಳಪಾಡ್‌ ಸ್ಪಷ್ಟಪಡಿಸಿದ್ದಾರೆ. ಶ್ರೀಕಿ ಜತೆ ಬಿಟ್‌ ಕಾಯಿನ್‌ ಅವ್ಯವಹಾರ ನಡೆಸಿರುವುದಕ್ಕೆ ಸಂಬಂಧಪಟ್ಟಂತೆ ನಿನ್ನೆ ನಳಪಾಡ್‌ ಅವರ ಮೇಲೆ ಜಾರಿ ನಿರ್ಧೇಶನಾಲಯ ದಾಳಿ ನಡೆಸಿತ್ತು. ಇಂದು ಪ್ರತಿಕ್ರಿಯೆ ನೀಡಿದ ಅವರು, ಶ್ರೀಕಿ ನನಗೆ ಪರಿಚಯ ಇಲ್ಲ ಎಂದು ಹೇಳುವುದಿಲ್ಲ. ಶ್ರೀಕಿ ಜತೆಯಲ್ಲಿ ಕುಳಿತು ಊಟ ಮಾಡಿರಬಹುದು ಅಷ್ಟೇ. ನನ್ನ ತಂದೆ ಹ್ಯಾರಿಸ್‌ ಅವರಿಗೆ ಸಚಿವ ಹುದ್ದೆ ತಪ್ಪಿಸಲು ವಿಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಎಂದು ಹೇಳಿದ್ದಾರೆ.

Continue Reading

Latest

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

VISTARANEWS.COM


on

ಗುಜರಾತ್‌: ಗುಜರಾತ್‌ನಲ್ಲಿ ಪತ್ತೆಯಾದ ಈ ಬೃಹತ್ ಸೈಬರ್ ವಂಚನೆ ಪ್ರಕರಣವು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಆತಂಕಕ್ಕೆ ತಳ್ಳಿದೆ. ಸುಮಾರು 2,500 ಕೋಟಿ ರೂ. ಮೊತ್ತದ ಈ ಹಗರಣದಲ್ಲಿ ಭಾಗಿಯಾಗಿದ್ದ 20 ಆರೋಪಿಗಳನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದು, ಇವರಲ್ಲಿ ಎಚ್.ಡಿಎಫ್.ಸಿ, ಯೆಸ್ ಮತ್ತು ಆಕ್ಸಿಸ್ ಬ್ಯಾಂಕ್‌ನಂತಹ ಪ್ರತಿಷ್ಠಿತ ಸಂಸ್ಥೆಗಳ ಅಧಿಕಾರಿಗಳೂ ಸೇರಿರುವುದು ಗಂಭೀರ ವಿಚಾರವಾಗಿದೆ.

ಈ ಬ್ಯಾಂಕ್ ಅಧಿಕಾರಿಗಳು ಸೈಬರ್ ಕ್ರಿಮಿನಲ್‌ಗಳೊಂದಿಗೆ ಶಾಮೀಲಾಗಿ, ನಕಲಿ ದಾಖಲೆಗಳನ್ನು ಬಳಸಿ ಸುಮಾರು 85ಕ್ಕೂ ಹೆಚ್ಚು ‘ಮ್ಯೂಲ್ ಅಕೌಂಟ್’ಗಳನ್ನು (ನಕಲಿ ಖಾತೆ) ತೆರೆದಿದ್ದರು. ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುತ್ತಿದ್ದ ಇವರು, ವ್ಯವಸ್ಥೆಯಲ್ಲಿ ಬರುವ ಎಚ್ಚರಿಕೆಗಳನ್ನು (Internal Alerts) ಬೇಕೆಂದೇ ನಿರ್ಲಕ್ಷಿಸುತ್ತಿದ್ದರು. ಬಳಿಕ ಈ ಹಣವನ್ನು ಹವಾಲಾ ದಂಧೆಯ ಮೂಲಕ ಬೇರೆಡೆ ರವಾನಿಸಿ, ವಂಚಕರಿಂದ ದೊಡ್ಡ ಮೊತ್ತದ ಕಮಿಷನ್ ಪಡೆಯುತ್ತಿದ್ದರು.

ಗೊಂಡಲ್ ಮಾರ್ಕೆಟಿಂಗ್ ಯಾರ್ಡ್‌ನ ಕಂಪನಿಯೊಂದರ ಖಾತೆಯಲ್ಲಿ ನಡೆದ 200 ಕೋಟಿ ರೂ.ಗಳ ಸಂಶಯಾಸ್ಪದ ವ್ಯವಹಾರವು ಈ ಮಹಾ ಹಗರಣವನ್ನು ಬಯಲಿಗೆಳೆದಿದೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 535 ದೂರುಗಳು ದಾಖಲಾಗಿದ್ದು, 35 ನಕಲಿ ಸಂಸ್ಥೆಗಳನ್ನು ಪೊಲೀಸರು ಗುರುತಿಸಿದ್ದಾರೆ. ತನಿಖೆ ಮುಂದುವರಿದಂತೆ ಇನ್ನೂ ಹೆಚ್ಚಿನ ಬ್ಯಾಂಕ್ ನೌಕರರು ಸಿಕ್ಕಿಬೀಳುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Latest3 hours ago

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

Latest4 hours ago

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

Latest4 hours ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest1 day ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest1 day ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌