Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ - Vistara News

ಕ್ರೈಂ

Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

Neha Murder Case: ಕಾವೇರಿ ನಿವಾಸದಲ್ಲಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಇದು ಚುನಾವಣೆ ಸಮಯ ಆಗಿದ್ದು, ಜಾಗ್ರತೆ ವಹಿಸಲು ಸೂಚನೆ ನೀಡಿದ್ದಾರೆ.

VISTARANEWS.COM


on

Take strict action in Neha Murder Case CM instructs to DG
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯೊಬ್ಬಳನ್ನು ಪ್ರೀತಿಸಲು ನಿರಾಕರಣೆ ಮಾಡಿದಳು ಎಂಬ ಕಾರಣಕ್ಕೆ ಮಾಡಿದ ಹತ್ಯೆ (‌Neha Murder Case) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಪೊಲೀಸ್ ಮಹಾ ನಿರ್ದೇಶಕರು ಹಾಗೂ ಬೆಂಗಳೂರು ಪೊಲೀಸ್‌ ಆಯುಕ್ತರ ಜತೆಗೆ ಚರ್ಚೆ ನಡೆಸಿದ್ದಾರೆ. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕಾವೇರಿ ನಿವಾಸದಲ್ಲಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿದರು. ಚರ್ಚೆ ವೇಳೆ ಘಟನೆ ಕುರಿತು ಅಲೋಕ್ ಮೋಹನ್ ಅವರು ಸಿಎಂಗೆ ಹೆಚ್ಚಿನ ಮಾಹಿತಿ ನೀಡಿದರು.

Hubli Murder Case

ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಈಗ ಚುನಾವಣಾ ಸಮಯವಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಯಾವುದೇ ರೀತಿಯಾದಂತಹ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಇಂತಹ ಘಟನೆಗಳು ಮತ್ತೆ ಮತ್ತೆ ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚದಂತೆ ನೋಡಿಕೊಳ್ಳಲು ಬೆಂಗಳೂರು ಪೊಲೀಸ್ ಆಯುಕ್ತರಿಗೂ ಎಚ್ಚರಿಕೆ ನೀಡಿದ್ದಾರೆ.

ನೇಹಾ ಹತ್ಯೆಗೆ ಸಿಎಂ ಸಂತಾಪ

ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ ಮಗಳು ನೇಹಾ ಹಿರೇಮಠ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.

ಸಿಎಂ ಟ್ವೀಟ್‌ನಲ್ಲೇನಿದೆ?

“ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು.

ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ.

ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ‌ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲ ಎನ್ನುವಂತಾಗಿದೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಆರೋಪಿ ಫಯಾಜ್‌ ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಈಗ ಕೊಲೆ ಮಾಡಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್‌ ಮುತಾಲಿಕ್‌, ಫಯಾಜ್‌ ಐಸಿಸ್‌ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಚಾಕು ಹಾಕಲು ಆತ ಎಲ್ಲಿ ತರಬೇತಿ ಪಡೆದಿದ್ದಾನೆ? ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಬೆಳೆಸಿದ ವಿಷಬೀಜವಿದು. ಕಾಂಗ್ರೆಸ್ ಹುಟ್ಟಿದಾಗ ಆ ಪಕ್ಷದ ನಾಯಕರು ಬ್ರಿಟಿಷರ ಪರವಿದ್ದರು. ಈಗ ಮುಸ್ಲಿಮರು, ಕೊಲೆಗಡುಕರ ಪರ‌ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿ ಕಳಕಳಿ ಇದ್ದರೆ ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು. ಕೊಲೆಗಡುಕನ ಮನೆಗೆ ಬುಲ್ಡೋಜರ್ ಹಚ್ಚಿಸಿ ಕಿತ್ತು ಬಿಸಾಕಬೇಕು. ಜಮಾತೆ ಇಸ್ಲಾಮಿನವರು ಕೂಡಲೇ ಫತ್ವಾ ಹೊರಡಿಸಿ ಅವರ ಮನೆಯನ್ನು ಬಹಿಷ್ಕರಿಸಬೇಕು. ವಕೀಲರು ಅವನ ಪರ ವಾದ ಮಾಡಲು ನಿಲ್ಲಬಾರದು. ಎಲ್ಲಿಯವರೆಗೆ ಕಾಂಗ್ರೆಸ್ ಇರುತ್ತೆದೆಯೋ ಅಲ್ಲಿಯವರೆಗೆ ಈ ರೀತಿ ಕೊಲೆಗಳು ಆಗುತ್ತಲೇ ಇರುತ್ತವೆ ಎಂದು ಪ್ರಮೋದ್‌ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮತ್ತೊಂದು ಬಿಹಾರವಾಗುತ್ತಿದೆ: ಬಸವರಾಜ ಬೊಮ್ಮಾಯಿ

ಹಾಡಹಗಲೇ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್‌ಗೆ ಭೇಟಿ ನೀಡಿ ನೇಹಾ ಕುಟುಂಬದವರಿಗೆ ಸಾಂತ್ವನ ಹೇಳಿದ ಬಸವರಾಜ ಬೊಮ್ಮಾಯಿ, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗದಗಿನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದವರು ಕಗ್ಗೊಲೆಯಾಗಿದೆ. ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಿದವರ ಮೇಲೆ ಹಲ್ಲೆಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ಈ ಸರ್ಕಾರದಲ್ಲಿ ಗೂಂಡಾಗಳನ್ನು ರಕ್ಷಿಸುವವರು ಇದ್ದಾರೆ ಎನ್ನುವ ನಂಬಿಕೆ ಇರುವುದರಿಂದ ಈ ರೀತಿ ಘಟನೆ ನಡೆಯುತ್ತಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು ಎಂದು ಹೇಳಿದರು.

ಇದನ್ನು ಕೇವಲ ವೈಯಕ್ತಿಕ ಘಟನೆ ಎಂದು ನೋಡಬಾರದು. ಇಂಥದ್ದು ಇಡೀ ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ? ಈ ಸರ್ಕಾರದ ಅವಧಿಯಲ್ಲಿ ವಿಧಾನಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ. ಗದಗಿನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ಹುಬ್ಬಳ್ಳಿ ಕಮಿಷನರ್ ಹೇಳಿಕೆಗಳನ್ನು ನೋಡಿದಾಗ ಅವರು ಯಾವುದೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ನೇಹಾ ಹತ್ಯೆ ಪ್ರಕರಣವನ್ನು ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಲ್ಲ ಕುಟುಂಬಗಳು ಭಯಭೀತರಾಗಿದ್ದಾರೆ. ಅಪರಾಧ ವಿಭಾಗದ ಡಿಜಿಪಿ ಇದರ ಮುಂದಾಳತ್ವ ವಹಿಸಿ ತನಿಖೆ ನಡೆಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣದ ತಾರ್ಕಿಕ ಅಂತ್ಯ ಆಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕುಟುಂಬಕ್ಕೆ ಸಾಂತ್ವನ

ಹತ್ಯೆಗೀಡಾದ ನೇಹಾ ಅವರ ತಂದೆಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಈ ರೀತಿಯ ಘಟನೆ ದುರದೃಷ್ಟಕರ ನಾವು ನಿಮ್ಮೊಂದಿಗಿದ್ದೇವೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Shoot Out: ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

Shoot Out: ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು.

VISTARANEWS.COM


on

shoot out doddaballapur murder case
ಆರೋಪಿ ಶ್ರೀನಿವಾಸ್‌ ಅಲಿಯಾಸ್‌ ಮಿಟ್ಟೆ, ಮೃತ ಹೇಮಂತ್
Koo

ದೊಡ್ಡಬಳ್ಳಾಪುರ: ಕೊಲೆ ಆರೋಪಿಯೊಬ್ಬನ (Murder Suspect) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Encounter) ಬಂಧಿಸಿದ್ದಾರೆ. ಹೇಮಂತ್‌ ಕುಮಾರ್‌ ಗೌಡ ಎಂಬ ಯುವಕನ ಕೊಲೆ (Murder Case) ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ (Shoot out) ಬಂಧಿಸಲಾಗಿದೆ.

ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ‌ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ‌ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಸಾಧಿಕ್ ಪಾಷ ಅವರಿಂದ ಫೈರಿಂಗ್ ನಡೆದಿದೆ.

ಈತ ಕೊಲೆ ಕೇಸ್‌ನ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್​ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿಯ ಅನುಮಾನಾಸ್ಪದ ಸಾವು

ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.

ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಬೆಳಗಾವಿ : ಬೆಳಗಾವಿಯಲ್ಲಿ (Belgavi News) ಹಾಡಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಯುವಕನ (Murder Case) ಕೊಲೆ ಮಾಡಲಾಗಿದೆ. ಬೆಳಗಾವಿ ನಗರದ ಮಹಾಂತೇಶ ನಗರದ ಬ್ರಿಡ್ಜ್‌ ಬಳಿ ಘಟನೆ ನಡೆದಿದೆ. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತಪಟ್ಟವನು. ಮುಜಮಿಲ್ ಸತ್ತಿಗೇರಿ ಕೊಲೆ ಆರೋಪಿಯಾಗಿದ್ದಾನೆ.

ಇದೇ ಬಡಾವಣೆಯ ಯುವತಿ ಜತೆಗೆ ಇಬ್ರಾಹಿಂ ಪ್ರೀತಿ -ಪ್ರೇಮ ಅಂತ ಓಡಾಡುತ್ತಿದ್ದ . ಗುರುವಾರ ತನ್ನ ಹುಡುಗಿ ಜತೆಗೆ ಇಬ್ರಾಹಿಂ ಬೈಕ್‌ನಲ್ಲಿ ಹೊರಟ್ಟಿದ್ದ. ಇದನ್ನು ನೋಡಿದ ಯುವತಿಯ ಸಹೋದರ ಮುಜಮಿಲ್ ಸತ್ತಿಗೇರಿ ಎಂಬಾತ ಸ್ಕ್ರೂಡ್ರೈವರ್‌ನಿಂದ ಚುಚ್ಚಿದ್ದಾನೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳು ಇಬ್ರಾಹಿಂನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ರಾಹಿಂ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Continue Reading

ಕ್ರೈಂ

Illegal hunting: ಶಿಕಾರಿಗೆ ತೆರಳಿದ ಯುವಕನಿಗೆ ಗುಂಡು ತಗುಲಿ ಸಾವು, ಆಕಸ್ಮಿಕವೋ ಕೊಲೆಯೋ?

Illegal hunting: ಅಕ್ರಮ ಬೇಟೆಗೆ ಬಂದವರು ಯಾವುದೋ ಪ್ರಾಣಿ ಎಂದು ಭಾವಿಸಿ ಗುಂಡು ಹೊಡೆದಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಬೇರೆ ಅಪರಾಧದ ಆಯಾಮಗಳ ಕುರಿತು ಕೂಡ ತನಿಖೆ ನಡೆಯುತ್ತಿದೆ.

VISTARANEWS.COM


on

illegal hunting chikkamagaluru
Koo

ಚಿಕ್ಕಮಗಳೂರು: ಶಿಕಾರಿಗೆ (Illegal hunting) ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ (misfire) ಆದ ಪರಿಣಾಮ, ಯುವಕ ಸ್ಥಳದಲ್ಲೇ (crime news) ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ (Chikkamagaluru crime) ತಾಲೂಕಿನ ಉಲುವಾಗಿಲು ಗ್ರಾಮದ ಕಾಫಿ ತೋಟದಲ್ಲಿ ದುರ್ಘಟನೆ ನಡೆದಿದೆ.

ಕೆರೆಮಕ್ಕಿ ಗ್ರಾಮದ ಸಂಜು (33) ಸಾವಿಗೀಡಾದ ಯುವಕ. ಕಾಫಿ ತೋಟದ ಅಂಚಿನಲ್ಲಿರುವ ಕಾಡಿಗೆ ಅಕ್ರಮವಾಗಿ ಪ್ರಾಣಿ ಬೇಟೆಗೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಇದೇ ಥರ ಅಕ್ರಮ ಬೇಟೆಗೆ ಬಂದವರು ಯಾವುದೋ ಪ್ರಾಣಿ ಎಂದು ಭಾವಿಸಿ ಗುಂಡು ಹೊಡೆದಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಬೇರೆ ಅಪರಾಧದ ಆಯಾಮಗಳ ಕುರಿತು ಕೂಡ ತನಿಖೆ ನಡೆಯುತ್ತಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಂಜಲಿ ಹಂತಕನ ಬಂಧನ, ಸಾರ್ವಜನಿಕರಿಂದ ಗೂಸಾ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubli news) ನೇಹಾ ಹಿರೇಮಠ (Neha Hiremath murder) ಕೊಲೆ ಮಾದರಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಎಂಬಾಕೆಯನ್ನು ಚುಚ್ಚಿ ಸಾಯಿಸಿದ (Anjali Murder Case) ಆರೋಪಿ ಗಿರೀಶ್‌ನನ್ನು ಬಂಧಿಸಲಾಗಿದೆ. ಈತ ಮೂರು ದಿನಗಳಿಂದ ತಲೆ ತಪ್ಪಿಸಿಕೊಂಡು (Abscond) ಪರಾರಿಯಾಗಿದ್ದ.

ಆರೋಪಿಯನ್ನು‌ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಕೊಲೆಗಾರ ಗಿರೀಶ್‌ನನ್ನು ಸಾರ್ವಜನಿಕರು ಥಳಿಸಿದ್ದಾರೆ. ದಾವಣಗೆರೆಯಲ್ಲಿದ್ದ ಈತನನ್ನು ಬಂಧಿಸಲು ಪೊಲೀಸರು ತೆರಳಿದ್ದ ಸಂದರ್ಭ, ಸಾರ್ವಜನಿಕರು ರೊಚ್ಚಿಗೆದ್ದು ಹಂತಕ ಗಿರೀಶ್‌ನನ್ನು ಥಳಿಸಿದರು. ಗಾಯಗೊಂಡ ಗಿರೀಶ್‌ನನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

Anjali Murder Case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಸ್ನೇಹಿತನೂ ಕೊಲೆ ಆರೋಪಿ

ಹಂತಕ ಗಿರೀಶ್‌ನ‌ ಸ್ನೇಹಿತ ಕೂಡ ಕೊಲೆ ಆರೋಪಿ (Murder suspect) ಎಂಬುದು ಬಯಲಿಗೆ ಬಂದಿದೆ. ತನ್ನ ಸ್ನೇಹಿತನಿಂದಲೇ ಈತ ಪ್ರೇರಣೆ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು.‌ ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.

ಶಶಿ ಈ ಕೊಲೆ ಮಾಡಿದ ಬಳಿಕ ಅದೇ ರೀತಿ ಅಂಜಲಿಯನ್ನು ಮುಗಿಸಲು ಗಿರೀಶ್‌ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತ ಮಾಡಿರುವ ಕೊಲೆಯಿಂದಲೇ ಪ್ರೇರಣೆ ಪಡೆದಿದ್ದ ಎಂದು ತರ್ಕಿಸಲಾಗಿದೆ. ಸ್ನೇಹಿತ ಕೊಲೆ ಮಾಡಿದ ಮೂರು ದಿನಗಳ ಬಳಿಕ ಗಿರೀಶನಿಂದ ಕೊಲೆ ಸಂಭವಿಸಿದೆ. ಇವರಿಬ್ಬರೂ‌ ಕೂಡಾ ಬೈಕ್ ಕಳ್ಳತನದ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Continue Reading

ದೇಶ

ವೈದ್ಯರ ಸಲಹೆಯಂತೆ 5 ದಿನದ ಹಸುಳೆಯನ್ನು ಬಿಸಿಲಿನಲ್ಲಿ ಮಲಗಿಸಿದರು; ಬೆಂದು ಕರಟಿಹೋಯ್ತು ಕಂದಮ್ಮನ ಜೀವ

Medical Negligence: 5 ದಿನಗಳ ಹೆಣ್ಣು ಮಗುವೊಂದು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೈನ್‌ಪುರಿಯ ಆಸ್ಪತ್ರೆಯೊಂದರ ವೈದ್ಯರ ಸಲಹೆಯಂತೆ ನವಜಾತ ಶಿಶುವನ್ನು ತುಂಬಾ ಹೊತ್ತು ಸೂರ್ಯನ ಬಿಸಿಲು ತಾಕುವಂತೆ ತೆರೆದ ಸ್ಥಳದಲ್ಲಿ ಇರಿಸಲಾಗಿತ್ತು. ಇದರಿಂದ ಮಗು ಮೃತಪಟ್ಟಿದ್ದು, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಲೆ ಮರೆಸಿಕೊಂಡಿದ್ದಾರೆ. ಸದ್ಯ ವೈದ್ಯರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

VISTARANEWS.COM


on

Medical Negligence
Koo

ಲಕ್ನೋ: ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯದಿಂದ ತೊಂದರೆ ಅನುಭವಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ (Medical Negligence). ಇದಕ್ಕೆ ತಾಜಾ ಉದಾಹರಣೆ ಇದು. 5 ದಿನಗಳ ಹೆಣ್ಣು ಮಗುವೊಂದು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೈನ್‌ಪುರಿಯ ಆಸ್ಪತ್ರೆಯೊಂದರ ವೈದ್ಯರ ಸಲಹೆಯಂತೆ ನವಜಾತ ಶಿಶುವನ್ನು ತುಂಬಾ ಹೊತ್ತು ಸೂರ್ಯನ ಬಿಸಿಲು ತಾಕುವಂತೆ ತೆರೆದ ಸ್ಥಳದಲ್ಲಿ ಇರಿಸಲಾಗಿತ್ತು. ಇದರಿಂದ ಮಗು ಮೃತಪಟ್ಟಿದ್ದು, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಲೆ ಮರೆಸಿಕೊಂಡಿದ್ದಾರೆ (Viral News).

ಈ ಹೃದಯ ವಿದ್ರಾವಕ ಘಟನೆ ಮೈನ್‌ಪುರಿಯ ಘಿರೊರ್‌ ಥಾನಾ ಪ್ರದೇಶದಲ್ಲಿ ನಡೆದಿದೆ. ಭುಗೈ ಎಂಬ ಹಳ್ಳಿಯ ರಿತಾ ಎನ್ನುವ ಮಹಿಳೆ ಇತ್ತೀಚೆಗೆ ಮೈನ್‌ಪುರಿಯ ರಾಧಾರಮಣ್‌ ರಸ್ತೆಯಲ್ಲಿರುವ ಸಾಯಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸಿಸೇರಿಯನ್‌ ಮೂಲಕ ಈ ಮಗು ಜನಿಸಿತ್ತು. ಜನಿಸುವಾಗಲೇ ಮಗುವಿಗೆ ಕೆಲ ಆರೋಗ್ಯ ಸಮಸ್ಯೆಗಳಿದ್ದವು. ಇದಕ್ಕೆ ವೈದ್ಯರು ಪ್ರತಿ ದಿನ ಅರ್ಧ ಗಂಟೆ ಮಗುವನ್ನು ಬಿಸಿಲಿನಲ್ಲಿ ಇರಿಸುವಂತೆ ಮನೆಯವರಿಗೆ ಸಲಹೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಬಿಸಿಲಿನ ತಾಪಕ್ಕೆ ಅಸುನೀಗಿದ ಹಸುಳೆ

ವೈದ್ಯರ ಸಲಹೆಯಂತೆ ಮಗುವಿನ ಮನೆಯವರು 5 ದಿನಗಳ ಹಸುಳೆಯನ್ನು ಆಸ್ಪತ್ರೆಯ ಟೆರೇಸ್‌ಗೆ ಒಯ್ದು ಬಿಸಿಲಿನಲ್ಲಿ ಮಲಗಿಸಿದ್ದರು. ಬೆಳಗ್ಗೆ ಸುಮಾರು 11.30ಕ್ಕೆ ಟೆರೇಸ್‌ನಲ್ಲಿ ಇರಿಸಿ ಅರ್ಧ ಗಂಟೆ ಆದ ಮೇಲೆ ಮಗುವನ್ನು ವಾರ್ಡ್‌ಗೆ ಕರೆದೊಯ್ದಿದ್ದರು. ಇದಾಗಿ ಕೆಲ ಹೊತ್ತಿನಲ್ಲೇ ಮಗು ಮೃತಪಟ್ಟಿತ್ತು ಎಂದು ಮೂಲಗಳು ತಿಳಿಸಿವೆ.

ಹೇಳಿ ಕೇಳಿ ಇದು ಬಿರು ಬೇಸಗೆ ಕಾಲ. ಇತ್ತೀಚೆಗಂತೂ ಉಷ್ಣಾಂಶ ವಿಪರೀತ ಎನ್ನುವಷ್ಟು ಏರಿಕೆಯಾಗಿದೆ. ಹೀಗಾಗಿ ಅತಿಯಾದ ತಾಪಮಾನ ತಾಳಲಾರದೆ ಮಗು ಅಸುನೀಗಿದೆ. ಅಲ್ಲದೆ ಈ ಪ್ರದೇಶದಲ್ಲಿ ಉಷ್ಣಾಂಶ 42 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು. ವಯಸ್ಕರಿಗೇ ಈ ಬಿಸಿಲಿನ ಝಳವನ್ನು ತಾಳಲು ಸಾಧ್ಯವಾಗುತ್ತಿಲ್ಲ. ಇನ್ನು 5 ದಿನಗಳ ಹಸುಳೆ ಹೇಗೆ ತಡೆದುಕೊಳ್ಳುತ್ತದೆ ಎಂದು ಮನೆಯವರು ಪ್ರಶ್ನಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ತಮ್ಮ ಮಗುವಿನ ಸಾವಿಗೆ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆ

ಪ್ರತಿದಿನ ಅರ್ಧ ಗಂಟೆ ಬಿಸಿಲಿನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದರಿಂದಲೇ ಮಗು ಅಸುನೀಗಿದೆ ಎಂದಿರುವ ಕುಟುಂಬಸ್ಥರು ಆಸ್ಪತ್ರೆಯ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಜತೆಗೆ ಆಸ್ಪತ್ರೆಯ ಆಡಳಿತದ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತ ಮಗು ಮೃತಪಡುತ್ತಿದ್ದಂತೆ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ತಲೆ ಮರೆಸಿಕೊಂಡಿದ್ದಾರೆ. ಸಿಎಂಒ ಆದೇಶದ ಮೇರೆಗೆ ಸದ್ಯ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ ಮತ್ತು ವೈದ್ಯರ ವಿರುದ್ಧ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಇದನ್ನೂ ಓದಿ: Medical Negligence : ವೈದ್ಯರ ನಿರ್ಲಕ್ಷ್ಯಕ್ಕೆ 4 ತಿಂಗಳ ಮಗು ಬಲಿ? ಆಕ್ಸಿಜನ್‌ ಹಾಕಿದ 10 ನಿಮಿಷಕ್ಕೆ ಮೃತ್ಯು!

ಕೇರಳದಲ್ಲಿ ಮತ್ತೊಂದು ಪ್ರಕರಣ

ಇತ್ತ ಕೇರಳದಲ್ಲಿಯೂ ವೈದ್ಯರು ಎಡವಟ್ಟು ಮಾಡಿಕೊಂಡಿದ್ದಾರೆ. ಕೋಝಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿನ ಡಾಕ್ಟರ್‌ ಮಗುವಿನ ಕೈ ಬೆರಳಿನ ಬದಲು ನಾಲಿಗೆಯ ಶಸ್ತ್ರಚಿಕಿತ್ಸೆಯ ಮಾಡಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರು ಅಸಮಾಧಾನ ಹೊರ ಹಾಕುತ್ತಿದ್ದಂತೆ ವೈದ್ಯರು ಬಂದು ತಪ್ಪಿಗೆ ಕ್ಷಮೆ ಯಾಚಿಸಿದ್ದು, ಮತ್ತೆ ಮಗುವನ್ನು ಕರೆದುಕೊಂಡು ಹೋಗಿ ಬೆರಳಿನ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಮಗುವಿನ ಕೈಯಲ್ಲಿರುವ ಆರನೇ ಬೆರಳನ್ನು ತೆಗೆಯಲು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

Continue Reading

ಕ್ರೈಂ

Anjali Murder Case: ಅಂಜಲಿ ಹಂತಕನಿಗೆ ಸಾರ್ವಜನಿಕರಿಂದ ಗೂಸಾ, ಬಂಧನ

Anjali Murder Case: ದಾವಣಗೆರೆಯಲ್ಲಿದ್ದ ಈತನನ್ನು ಬಂಧಿಸಲು ಪೊಲೀಸರು ತೆರಳಿದ್ದ ಸಂದರ್ಭ, ಸಾರ್ವಜನಿಕರು ರೊಚ್ಚಿಗೆದ್ದು ಹಂತಕ ಗಿರೀಶ್‌ನನ್ನು ಥಳಿಸಿದರು. ಗಾಯಗೊಂಡ ಗಿರೀಶ್‌ನನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

VISTARANEWS.COM


on

anjali murder case girish
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubli news) ನೇಹಾ ಹಿರೇಮಠ (Neha Hiremath murder) ಕೊಲೆ ಮಾದರಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಎಂಬಾಕೆಯನ್ನು ಚುಚ್ಚಿ ಸಾಯಿಸಿದ (Anjali Murder Case) ಆರೋಪಿ ಗಿರೀಶ್‌ನನ್ನು ಬಂಧಿಸಲಾಗಿದೆ. ಈತ ಮೂರು ದಿನಗಳಿಂದ ತಲೆ ತಪ್ಪಿಸಿಕೊಂಡು (Abscond) ಪರಾರಿಯಾಗಿದ್ದ.

ಆರೋಪಿಯನ್ನು‌ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಕೊಲೆಗಾರ ಗಿರೀಶ್‌ನನ್ನು ಸಾರ್ವಜನಿಕರು ಥಳಿಸಿದ್ದಾರೆ. ದಾವಣಗೆರೆಯಲ್ಲಿದ್ದ ಈತನನ್ನು ಬಂಧಿಸಲು ಪೊಲೀಸರು ತೆರಳಿದ್ದ ಸಂದರ್ಭ, ಸಾರ್ವಜನಿಕರು ರೊಚ್ಚಿಗೆದ್ದು ಹಂತಕ ಗಿರೀಶ್‌ನನ್ನು ಥಳಿಸಿದರು. ಗಾಯಗೊಂಡ ಗಿರೀಶ್‌ನನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

Anjali Murder Case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಸ್ನೇಹಿತನೂ ಕೊಲೆ ಆರೋಪಿ

ಹಂತಕ ಗಿರೀಶ್‌ನ‌ ಸ್ನೇಹಿತ ಕೂಡ ಕೊಲೆ ಆರೋಪಿ (Murder suspect) ಎಂಬುದು ಬಯಲಿಗೆ ಬಂದಿದೆ. ತನ್ನ ಸ್ನೇಹಿತನಿಂದಲೇ ಈತ ಪ್ರೇರಣೆ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು.‌ ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.

ಶಶಿ ಈ ಕೊಲೆ ಮಾಡಿದ ಬಳಿಕ ಅದೇ ರೀತಿ ಅಂಜಲಿಯನ್ನು ಮುಗಿಸಲು ಗಿರೀಶ್‌ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತ ಮಾಡಿರುವ ಕೊಲೆಯಿಂದಲೇ ಪ್ರೇರಣೆ ಪಡೆದಿದ್ದ ಎಂದು ತರ್ಕಿಸಲಾಗಿದೆ. ಸ್ನೇಹಿತ ಕೊಲೆ ಮಾಡಿದ ಮೂರು ದಿನಗಳ ಬಳಿಕ ಗಿರೀಶನಿಂದ ಕೊಲೆ ಸಂಭವಿಸಿದೆ. ಇವರಿಬ್ಬರೂ‌ ಕೂಡಾ ಬೈಕ್ ಕಳ್ಳತನದ ಆರೋಪಿಗಳಾಗಿದ್ದಾರೆ.

ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿಯ ಅನುಮಾನಾಸ್ಪದ ಸಾವು

ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.

ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಬೆಳಗಾವಿ : ಬೆಳಗಾವಿಯಲ್ಲಿ (Belgavi News) ಹಾಡಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಯುವಕನ (Murder Case) ಕೊಲೆ ಮಾಡಲಾಗಿದೆ. ಬೆಳಗಾವಿ ನಗರದ ಮಹಾಂತೇಶ ನಗರದ ಬ್ರಿಡ್ಜ್‌ ಬಳಿ ಘಟನೆ ನಡೆದಿದೆ. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತಪಟ್ಟವನು. ಮುಜಮಿಲ್ ಸತ್ತಿಗೇರಿ ಕೊಲೆ ಆರೋಪಿಯಾಗಿದ್ದಾನೆ.

ಇದೇ ಬಡಾವಣೆಯ ಯುವತಿ ಜತೆಗೆ ಇಬ್ರಾಹಿಂ ಪ್ರೀತಿ -ಪ್ರೇಮ ಅಂತ ಓಡಾಡುತ್ತಿದ್ದ . ಗುರುವಾರ ತನ್ನ ಹುಡುಗಿ ಜತೆಗೆ ಇಬ್ರಾಹಿಂ ಬೈಕ್‌ನಲ್ಲಿ ಹೊರಟ್ಟಿದ್ದ. ಇದನ್ನು ನೋಡಿದ ಯುವತಿಯ ಸಹೋದರ ಮುಜಮಿಲ್ ಸತ್ತಿಗೇರಿ ಎಂಬಾತ ಸ್ಕ್ರೂಡ್ರೈವರ್‌ನಿಂದ ಚುಚ್ಚಿದ್ದಾನೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳು ಇಬ್ರಾಹಿಂನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ರಾಹಿಂ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Continue Reading
Advertisement
RCB vs CSK
ಕ್ರೀಡೆ12 mins ago

RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

shoot out doddaballapur murder case
ಕ್ರೈಂ35 mins ago

Shoot Out: ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

Narendra Modi
Lok Sabha Election 202438 mins ago

Narendra Modi: ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ವಿಪಕ್ಷಕ್ಕೆ ಪ್ರಧಾನಿ ಮೋದಿ ತಿರುಗೇಟು

Pakistan
ವಿದೇಶ43 mins ago

Pakistan: ಟಾಪ್‌ ಕಂಪನಿಗಳಲ್ಲಿ ಭಾರತೀಯರೇ CEO; ಆದರೆ ನಮ್ಮ ಮಕ್ಕಳು? ಪಾಕ್‌ ಸಂಸದನ ವಿಡಿಯೊ ವೈರಲ್‌

Rashmika Madanna Appreciation Post PM Modi Reacts
ಟಾಲಿವುಡ್44 mins ago

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಪೋಸ್ಟ್‌ಗೆ ಪ್ರಧಾನಿ ಮೋದಿ ಮೆಚ್ಚುಗೆ!

RCB vs CSK
ಕ್ರೀಡೆ50 mins ago

RCB vs CSK: ಚೆನ್ನೈ-ಆರ್​ಸಿಬಿ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿ ಏನು?

illegal hunting chikkamagaluru
ಕ್ರೈಂ1 hour ago

Illegal hunting: ಶಿಕಾರಿಗೆ ತೆರಳಿದ ಯುವಕನಿಗೆ ಗುಂಡು ತಗುಲಿ ಸಾವು, ಆಕಸ್ಮಿಕವೋ ಕೊಲೆಯೋ?

Cannes 2024 Aishwarya Rai turns lady in black in Falguni
ಸಿನಿಮಾ1 hour ago

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

These foods are really what our body needs in summer
ಆರೋಗ್ಯ2 hours ago

Health Tips in Kannada: ಬೇಸಿಗೆಯಲ್ಲಿ ನಿಜಕ್ಕೂ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು

Lok Sabha Election 2024
ದೇಶ2 hours ago

Lok Sabha Election 2024: ಬಿಜೆಪಿ 400+ ಸೀಟು ಗೆಲ್ಲುತ್ತಾ? ಸಟ್ಟಾ ಬಜಾರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ20 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು23 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌