IPL 2024 POINTS TABLE: ಹೈದರಾಬಾದ್​ಗೆ ಭರ್ಜರಿ ಗೆಲುವು; ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ - Vistara News

ಕ್ರೀಡೆ

IPL 2024 POINTS TABLE: ಹೈದರಾಬಾದ್​ಗೆ ಭರ್ಜರಿ ಗೆಲುವು; ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ

IPL 2024 POINTS TABLE: ಹೈದರಾಬಾದ್​ ಗೆಲುವಿನಿಂದ 2ನೇ ಸ್ಥಾನದಲ್ಲಿದ್ದ ಕೆಕೆಆರ್​ ತಂಡ ಒಂದು ಸ್ಥಾನ ಕುಸಿತ ಕಂಡು ಮೂರನೇ ಸ್ಥಾನ ಪಡೆದಿದೆ. ಇಂದು ನಡೆಯುವ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಕೆಆರ್​ ಗೆಲುವು ಸಾಧಿಸಿದರೆ ಮತ್ತೆ 2ನೇ ಸ್ಥಾನ ಪಡೆಯಲಿದೆ.

VISTARANEWS.COM


on

IPL 2024 POINTS TABLE
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 17ನೇ ಆವೃತ್ತಿಯ ಐಪಿಎಲ್(IPL 2024)​ ಟೂರ್ನಿಯಲ್ಲಿ ಪ್ಲೇ ಆಪ್​ ರೇಸ್​ ಆರಂಭವಾಗಿದ್ದು ಎಲ್ಲ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಶನಿವಾರ ನಡೆದ ಐಪಿಎಲ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಭರ್ಜರಿ 67 ರನ್​ಗಳ ಗೆಲುವು ಸಾಧಿಸಿದ ಸನ್​ರೈಸರ್ಸ್​ ಹೈದರಾಬಾದ್​ ತಂಡ 10 ಅಂಕ ಪಡೆದು(IPL 2024 POINTS TABLE) 2ನೇ ಸ್ಥಾನಕ್ಕೇರಿದೆ.

ಹೈದರಾಬಾದ್​ ಗೆಲುವಿನಿಂದ 2ನೇ ಸ್ಥಾನದಲ್ಲಿದ್ದ ಕೆಕೆಆರ್​ ತಂಡ ಒಂದು ಸ್ಥಾನ ಕುಸಿತ ಕಂಡು ಮೂರನೇ ಸ್ಥಾನ ಪಡೆದಿದೆ. ಇಂದು ನಡೆಯುವ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಕೆಆರ್​ ಗೆಲುವು ಸಾಧಿಸಿದರೆ ಮತ್ತೆ 2ನೇ ಸ್ಥಾನ ಪಡೆಯಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​76112 (+0.677)
ಹೈದರಾಬಾದ್​​75210 (+0.914)
ಕೆಕೆಆರ್​6428 (+1.399)
ಚೆನ್ನೈ ಸೂಪರ್​ ಕಿಂಗ್ಸ್​​​​7428 (+0.726)
ಲಕ್ನೋ7438 (+0.123)
ಮುಂಬೈ7346 (-0.133)
ಡೆಲ್ಲಿ ಕ್ಯಾಪಿಟಲ್ಸ್​​​8356 (-0.477)
ಗುಜರಾತ್7346 (-1.303)
ಪಂಜಾಬ್​7254 (-0.251)
ಆರ್​ಸಿಬಿ7162 (-1.185)

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಹೈದರಾಬಾದ್​ ತಂಡಕ್ಕೆ ಆರಂಭಿಕರಾದ ಟ್ರಾವಿಸ್​ ಹೆಡ್​(89) ಮತ್ತು ಅಭಿಷೇಕ್​ ಶರ್ಮ(46) ಜಿದ್ದಿಗೆ ಬಿದ್ದವರಂತೆ ಬ್ಯಾಟ್ ಬೀಸಿ ಅಮೋಘ ಆರಂಭ ಒದಗಿಸಿದರು. ಇವರ ಈ ಬ್ಯಾಟಿಂಗ್​ ಪರಾಕ್ರಮದಿಂದ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 266 ರನ್​ ಬಾರಿಸಿತು. ಸವಾಲಿನ ಮೊತ್ತವನ್ನು ದಿಟ್ಟ ರೀತಿಯಲ್ಲಿ ಬೆನ್ನಟ್ಟಿಕೊಂಡು ಹೋದ ಡೆಲ್ಲಿ ಕ್ಯಾಪಿಟಲ್ಸ್​ ಅಂತಿಮವಾಗಿ 19.1 ಓವರ್​ಗಳಲ್ಲಿ 199 ರನ್​ಗೆ ಸರ್ವಪತನ ಕಂಡಿತು.

ಇದನ್ನೂ ಓದಿ IPL 2024: ಟಿ20 ಕ್ರಿಕೆಟ್​ನಲ್ಲೇ ನೂತನ ದಾಖಲೆ ಬರೆದ ಸನ್​ರೈರ್ಸ್​ ಹೈದರಾಬಾದ್

ಸಂಕಷ್ಟದಲ್ಲಿದ್ದ ಡೆಲ್ಲಿಗೆ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಮತ್ತು ಅಭಿಷೇಕ್​ ಪೋರೆಲ್​ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ ಆಸರೆಯಾದರು. ಉಭಯ ಆಟಗಾರರ ಈ ಬ್ಯಾಟಿಂಗ್​ ಆರ್ಭಟದಿಂದ ಡೆಲ್ಲಿ ಕೂಡ ಹೈದರಾಬಾದ್​ ತಂಡದಂತೆ 7 ಓವರ್​ಗೂ ಮುನ್ನ 100 ರನ್​ಗಳ ಗಡಿ ದಾಟಿತು. ಈ ವೇಳೆ ಡೆಲ್ಲಿ ಗೆಲುವಿನ ಆಸೆಯೊಂದು ಚಿಗುರಿಕೊಂಡಿತು. ಆದರೆ, ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸುತ್ತಿದ್ದ ಈ ಜೋಡಿಯನ್ನು ಮಯಾಂಕ್‌ ಮಾರ್ಕಂಡೆ ಬೇರ್ಪಡಿಸಿದರು. ಸತತ ಸಿಕ್ಸರ್​ ಚಚ್ಚಿಕೊಂಡಿದ್ದ ಮಾರ್ಕಂಡೆ ಕೊನೆಗೂ ಮ್ಯಾಕ್‌ಗುರ್ಕ್ ವಿಕೆಟ್​ ಕಿತ್ತು ತಂಡಕ್ಕೆ ಮುನ್ನಡೆ ತಂದುಕೊಟ್ಟರು.

ಮ್ಯಾಕ್‌ಗುರ್ಕ್ ಕೇವಲ 15 ಎಸೆತಗಳಿಂದ ಅರ್ಧಶತಕ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತಿ ವೇಗವಾಗಿ ಅರ್ಧಶತಕ ಬಾರಿಸಿದ ದಾಖಲೆ ಬರೆದರು. ಎಬಿಡಿ ವಿಲಿಯರ್ಸ್​ ರೀತಿ ಬ್ಯಾಟಿಂಗ್​ ನಡೆಸಿದ ಮ್ಯಾಕ್‌ಗುರ್ಕ್ ಒಟ್ಟು 18 ಎಸೆತಗಳಿಂದ 65 ರನ್​ ಚಚ್ಚಿದರು. ಈ ವೇಳೆ 7 ಸೊಗಸಾದ ಸಿಕ್ಸರ್​ ಮತ್ತು 5 ಆಕರ್ಷಕ ಬೌಂಡರಿ ದಾಖಲಾಯಿತು. ಈ ವಿಕೆಟ್​ ಬಿದ್ದು 26 ರನ್​ ಒಟ್ಟುಗೂಡುವಷ್ಟರಲ್ಲಿ ಉತ್ತಮವಾಗಿ ಆಡುತ್ತಿದ್ದ ಅಭಿಷೇಕ್​ ವಿಕೆಟ್​ ಕೂಡ ಪತನಗೊಂಡಿತು. ಈ ಜೋಡಿ ಮೂರನೇ ವಿಕೆಟ್​ಗೆ 84 ರನ್​ಗಳ ಅತ್ಯಮೂಲ್ಯ ಜತೆಯಾಟ ನಡೆಸಿತು. ಅಭಿಷೇಕ್ 22 ಎಸೆತಗಳಿಂದ 42 ರನ್( 7 ಬೌಂಡರಿ, 1 ಸಿಕ್ಸ್​)​ ಬಾರಿಸಿದರು. ಈ ವಿಕೆಟ್​ ಪತನಗೊಳ್ಳುತ್ತಿದ್ದಂತೆ ಡೆಲ್ಲಿ ಸೋಲು ಕೂಡ ಖಚಿತಗೊಂಡಿತು. ಹೈದರಾಬಾದ್​ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ಎಡಗೈ ವೇಗಿ ಟಿ.ನಟರಾಜನ್​ ಕೇವಲ 19 ರನ್​ ನೀಡಿ ಪ್ರಮುಖ 4 ವಿಕೆಟ್​ ಕಿತ್ತು ಮಿಂಚಿದರು. ಮಾರ್ಕಂಡೆ 2 ವಿಕೆಟ್​ ಪಡೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

IPL 2024: ಆರ್​ಸಿಬಿ ಅಭಿಮಾನಿಗಳ ತಮ್ಮ ವಿರುದ್ದ ಗೂಂಡಾಗಿರಿ ಮಾಡಿರುವ ಬಗ್ಗೆ ಸಿಎಸ್​​ಕೆ ಅಭಿಮಾನಿಗಳು ದೂರು ನೀಡಿದ್ದು. ಇದು ಒಂದು ಹಂತದಲ್ಲಿ ಎಕ್ಸ್ ನಲ್ಲಿ ಟ್ರೆಂಡಿಂಗ್ ಆಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು, ಭಾರತದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಆರ್​ಸಿಬಿಯ ಅಭಿಮಾನಿಗಳ ದುರಂಹಕಾರವೇ ಪ್ಲೇಆಫ್​ನ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಆರ್​ಸಿಬಿ ಅಭಿಮಾನಿಗಳು ಆದಷ್ಟು ಮೌನವಾಗಿರಬೇಕು. ಸಿಎಸ್​ಕೆ ತಂಡವನ್ನು ಸೋಲಿಸಿದ ನಂತರ ಅನಗತ್ಯ ವೀಡಿಯೊ ಪೋಸ್ಟ್ ಮಾಡಬಾರದಾಗಿತ್ತು ಎಂದು ಹೇಳಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ 17ನೇ (IPL 2024 ) ಆವೃತ್ತಿಯ ಲೀಗ್ ಹಂತದ ಕೊನೆಯಲ್ಲಿ ಸತತ ಆರು ಪಂದ್ಯಗಳನ್ನು ಗೆದ್ದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಹಂತಕ್ಕೆ ಏರಿತ್ತು. ಎಲಿಮಿನೇಟರ್ ನಲ್ಲಿ ರಾಜಸ್ಥಾನ್​ ರಾಯಲ್ಸ್ ತಂಡವನ್ನು ಸೋಲಿಸಿ ಕ್ವಾಲಿಫೈಯರ್ 2 ಗೆ ಪ್ರವೇಶಿಸುವ ಭರವಸೆ ಹೊಂದಿತ್ತು. ಆದಾಗ್ಯೂ, ಸಂಜು ಸ್ಯಾಮ್ಸನ್ ನೇತೃತ್ವದ ತಂಡವು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹಣಾಹಣಿಯಲ್ಲಿ ಫಾಫ್​ ಡು ಪ್ಲೆಸಿಸ್ ಬಳಗವನ್ನು ಮಣಿಸಿತು. ನಾಲ್ಕು ವಿಕೆಟ್​ಗಳಿಂದ ಸೋತ ಆರ್​ಸಿಬಿ ನಿರಾಸೆಗೆ ಒಳಗಾಯಿತು. ಇದರೊಂದಿಗೆ ತಮ್ಮ ಮೊದಲ ಐಪಿಎಲ್ ಟ್ರೋಫಿಗಾಗಿ ಆರ್​ಸಿಬಿಯ ಕಾಯುವಿಕೆ ಮುಂದುವರಿಯಿತು. ಆದರೆ, ಆರ್​​ಸಿಬಿ ಈ ಸೋಲಿಗೆ ದುರಂಹಕಾರವೇ ಕಾರಣ ಎಂಬುದಾಗಿ ತಮಿಳುನಾಡು ಮೂಲದ ಮಾಜಿ ಆಟಗಾರ ಹೇಳಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲಲೇಬೇಕಾದ ಲೀಗ್​​ ಪಂದ್ಯದಲ್ಲಿ ಆರ್​ಸಿಬಿ ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡಿತು. ಹೀಗಾಗಿ ಪ್ಲೇಆಫ್ಗೆ ಅರ್ಹತೆ ಪಡೆಯಿತು. ಇದರೊಂದಿಗೆ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವು ನಿರಾಶಾದಾಯಕವಾಗಿ ಋತುವನ್ನು ಕೊನೆಗೊಳಿಸಿತು. ಏತನ್ಮಧ್ಯೆ, ಪಂದ್ಯದ ನಂತರ, ಸಿಎಸ್​ಕೆ ಅಭಿಮಾನಿಗಳು ದೂರೊಂದನ್ನು ನೀಡಿದ್ದರು. ಆರ್​ಸಿಬಿ ಅಭಿಮಾನಿಗಳ ತಮ್ಮ ವಿರುದ್ದ ಗೂಂಡಾಗಿರಿ ಮಾಡಿರುವ ಬಗ್ಗೆ ದೂರು ನೀಡಿದ್ದು. ಇದು ಒಂದು ಹಂತದಲ್ಲಿ ಎಕ್ಸ್ ನಲ್ಲಿ ಟ್ರೆಂಡಿಂಗ್ ಆಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು, ಭಾರತದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಆರ್​ಸಿಬಿಯ ಅಭಿಮಾನಿಗಳ ದುರಂಹಕಾರವೇ ಪ್ಲೇಆಫ್​ನ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಆರ್​ಸಿಬಿ ಅಭಿಮಾನಿಗಳು ಆದಷ್ಟು ಮೌನವಾಗಿರಬೇಕು. ಸಿಎಸ್​ಕೆ ತಂಡವನ್ನು ಸೋಲಿಸಿದ ನಂತರ ಅನಗತ್ಯ ವೀಡಿಯೊ ಪೋಸ್ಟ್ ಮಾಡಬಾರದಾಗಿತ್ತು ಎಂದು ಹೇಳಿದ್ದಾರೆ.

ಸಿಎಸ್​ಕೆ ತಂಡವನ್ನು ಸೋಲಿಸಿದ ನಂತರ ಫ್ರ್ಯಾಂಚೈಸಿಯ ಆಟಗಾರರು ಮತ್ತು ಅಭಿಮಾನಿಗಳ ಜಂಭ ಹೆಚ್ಚಾಗಿತ್ತು. ಅದುವೇ ಎಲಿಮಿನೇಟರ್ ನಲ್ಲಿ ಆರ್​ಆರ್​​ ವಿರುದ್ಧ ಸೋಲಿಗೆ ಕಾರಣ ಎಂದು 64 ವರ್ಷದ ಆಟಗಾರ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

“ಜೀವನದಲ್ಲಿ ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವಾಗ ನಿಮ್ಮ ಬಾಯಿ ಮುಚ್ಚಿಕೊಂಡು ಮುಂದುವರಿಯಿರಿ. ನೀವು ಮಾಡುತ್ತಿರುವ ಯಾವುದೇ ಕೆಲಸದ ವೇಳೆ ಗದ್ದಲ ಮಾಡಿದಾಗ ಆ ಕೆಲಸವನ್ನು ಉತ್ತಮವಾಗಿ ಮಾಡಲು ಸಾಧ್ಯವಿಲ್ಲ. ಆರ್​​ಸಿಬಿ ಅಭಿಮಾನಿಗಳು ಅನಗತ್ಯ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದರು. ಅತಿಯಾಗಿ ತೋರಿಸುತ್ತಿದ್ದರು. ಅದಕ್ಕಾಗಿಯೇ ಅಶ್ವಿನ್ ಮುಂದಿನ ಪಂದ್ಯದಲ್ಲಿ ಆರ್​ಸಿಬಿಯ ಜಂಭ ಇಳಿಸಿದರು. ಅದಕ್ಕಾಗಿಯೇ ಕ್ರಿಕೆಟ್​​ನಲ್ಲಿ ನಿಮ್ಮ ಬಾಯಿ ಮುಚ್ಚಿ ಆಡಬೇಕು ಎಂದು ಹೇಳುವುದು ಎಂದು ಶ್ರೀಕಾಂತ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ.

ಟೀಕೆಗಳನ್ನು ಸ್ವೀಕರಿಸಿ: ಕ್ರಿಸ್ ಶ್ರೀಕಾಂತ್

ಆರ್​ಸಿಬಿ ಆಟಗಾರರು ಚಪ್ಪಾಳೆಗಳನ್ನು ಪಡೆದಂತೆ ಟೀಕೆಗಳನ್ನು ಸ್ವೀಕರಿಸುವಂತೆ ಶ್ರೀಕಾಂತ್ ಕೋರಿಕೊಂಡರು. ತಂಡವು ಸತತವಾಗಿ ಆರು ಗೆಲುವುಗಳನ್ನು ಅತಿಯಾಗಿ ಸಂಭ್ರಮಿಸಲು ಪ್ರಾರಂಭಿಸಿತು. ಅಗತ್ಯವಿಲ್ಲದ ಆಕ್ರಮಣಶೀಲತೆಯನ್ನು ತೋರಿಸಿತು ಎಂದು ಅವರು ಶ್ರೀಕಾಂತ್​ ಹೇಳಿದರು.

ನೀವು ಉತ್ತಮವಾಗಿ ಆಡಿದ್ದರೆ, ಅಭಿನಂದನೆಗಳು, ನೀವು ಕಳಪೆಯಾಗಿ ಆಡಿದ್ದರೆ ಟೀಕೆಗಳನ್ನು ಸ್ವೀಕರಿಸಿ. ನೀವು ಎಂದಿಗೂ ಬಾಯಿ ತೆರೆದು ಆಕ್ರಮಣಶೀಲತೆಯನ್ನು ತೋರಿಸಬಾರದು. ಸಿಎಸ್​​ಕೆ ಮತ್ತು ಮುಂಬೈ ಎರಡೂ ಪ್ರಶಸ್ತಿಗಳನ್ನು ಗೆದ್ದಿವೆ. ಆದರೆ ಎಂದಿಗೂ ಸದ್ದು ಮಾಡಿಲ್ಲ. ಆದರೆ ಆರ್​ಸಿಬಿ ಆರು ಪಂದ್ಯಗಳನ್ನು ಗೆದ್ದಿತು. ಅವರು ಅರ್ಹತೆ ಪಡೆದ ತಕ್ಷಣ ಅವರು ಔಟ್ ಆಗಿದ್ದಾರೆ “ಎಂದು ಅವರು ಹೇಳಿದರು.

Continue Reading

ಪ್ರಮುಖ ಸುದ್ದಿ

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

IPL 2024 : ಆರ್​​ಸಿಬಿಗೆ 16 ಪಂದ್ಯಗಳಲ್ಲಿ 10 ಪ್ಲೇಆಫ್ ಸೋಲುಗಳಿಂದ ಕಳಪೆ ದಾಖಲೆ ಮಾಡಿದೆ. ಸಿಎಸ್​ಕೆ ತಂಡ ಆಡಿದ 26 ಪ್ಲೇಆಫ್ ಪಂದ್ಯಗಳಲ್ಲಿ 9 ಸೋಲುಗಳನ್ನು ಎದುರಿಸಿದೆ. 11 ಪಂದ್ಯಗಳಲ್ಲಿ ಒಂಬತ್ತು ಸೋಲುಗಳನ್ನು ಅನುಭವಿಸಿದ ಡಿಸಿ ಪ್ಲೇಆಫ್ ಸೋಲುಗಳ ಭಯದಿಂದ ನರಳಿದೆ. ಭರವಸೆಯ ಆರಂಭದ ಹೊರತಾಗಿಯೂ ಆ ತಂಡ ನಿರ್ಣಾಯಕ ಹಂತಗಳಲ್ಲಿ ವಿಫಲವಾಗಿದೆ. ತಮ್ಮ ತಂಡದ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಲಲು ವಿಫಲವಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Banglore) ಮೇ 22,2024 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (Rajasthan Royals ) ವಿರುದ್ಧ ಸೋತ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ (IPL 2024) ಕಳಪೆ ದಾಖಲೆ ನಿರ್ಮಿಸಿದೆ. ಈ ಸೋಲು ಐಪಿಎಲ್ ಪ್ಲೇಆಫ್​​ನಲ್ಲಿ ಆರ್ಸಿಬಿಯ 10ನೇ ಸೋಲಾಗಿದೆ. ಇದು ಐಪಿಎಲ್​ನಲ್ಲಿ ಯಾವುದೇ ತಂಡದ ಅತ್ಯಂತ ಕಳಪೆ ಸಾಧನೆಯಾಗಿದೆ. ಆರ್​ಸಿಬಿ 16 ಪ್ಲೇಆಫ್ ಪಂದ್ಯಗಳಲ್ಲಿ ಭಾಗವಹಿಸಿದ್ದು, ಅತಿ ಹೆಚ್ಚು ಪ್ಲೇಆಫ್ ಸೋಲುಗಳನ್ನು ಕಂಡ ತಂಡವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​ಕೆ) 26 ಪ್ಲೇಆಫ್ ಪಂದ್ಯಗಳಲ್ಲಿ ಒಂಬತ್ತು ಸೋಲುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಅವರ ನಂತರ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮುಂಬೈ ಇಂಡಿಯನ್ಸ್ (Mumbai Indians) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ಪ್ಲೇಆಫ್ ಸೋಲಿನ ವಿಷಯದಲ್ಲಿ ಕ್ರಮವಾಗಿ ಮೂರನೇ, ನಾಲ್ಕನೇ ಮತ್ತು ಐದನೇ ಸ್ಥಾನದಲ್ಲಿವೆ.

ಐಪಿಎಲ್​​ನಲ್ಲಿ ಆರ್​ಸಿಬಿ ಕಳಪೆ ದಾಖಲೆ

ಆರ್​​ಸಿಬಿಗೆ 16 ಪಂದ್ಯಗಳಲ್ಲಿ 10 ಪ್ಲೇಆಫ್ ಸೋಲುಗಳಿಂದ ಕಳಪೆ ದಾಖಲೆ ಮಾಡಿದೆ. ಸಿಎಸ್​ಕೆ ತಂಡ ಆಡಿದ 26 ಪ್ಲೇಆಫ್ ಪಂದ್ಯಗಳಲ್ಲಿ 9 ಸೋಲುಗಳನ್ನು ಎದುರಿಸಿದೆ. 11 ಪಂದ್ಯಗಳಲ್ಲಿ ಒಂಬತ್ತು ಸೋಲುಗಳನ್ನು ಅನುಭವಿಸಿದ ಡಿಸಿ ಪ್ಲೇಆಫ್ ಸೋಲುಗಳ ಭಯದಿಂದ ನರಳಿದೆ. ಭರವಸೆಯ ಆರಂಭದ ಹೊರತಾಗಿಯೂ ಆ ತಂಡ ನಿರ್ಣಾಯಕ ಹಂತಗಳಲ್ಲಿ ವಿಫಲವಾಗಿದೆ. ತಮ್ಮ ತಂಡದ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಲಲು ವಿಫಲವಾಗಿದೆ.

ಇದನ್ನೂ ಓದಿ: T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

ಮುಂಬೈ ಇಂಡಿಯನ್ಸ್ 20 ಪಂದ್ಯಗಳಲ್ಲಿ ಏಳು ಬಾರಿ ಸೋತಿದೆ. ತಮ್ಮ ದೃಢತೆಗೆ ಹೆಸರುವಾಸಿಯಾದ ಎಸ್​ಆರ್​ಎಚ್, 12 ಪಂದ್ಯಗಳಲ್ಲಿ ಏಳು ಬಾರಿ ಸೋತು ಪ್ಲೇಆಫ್ ಹಿನ್ನಡೆಗಳನ್ನು ಅನುಭವಿಸಿದೆ. ತಮ್ಮ ತೂಕಕ್ಕಿಂತ ಹೆಚ್ಚು ರನ್​ಗಳನ್ನು ಹೊಡೆಯುತ್ತಿದ್ದರೂ ಋತುವಿನ ಯಶಸ್ಸನ್ನು ಪುನರಾವರ್ತಿಸಲು ಅವರು ಹೆಣಗಾಡಿದ್ದಾರೆ.

ಆರ್​ಆರ್​ ತಂಡ ಈಗ ಚೆನ್ನೈನಲ್ಲಿ ಮೇ 24 ರಂದು ನಡೆಯಲಿರುವ ಕ್ವಾಲಿಫೈಯರ್ 2 ರಲ್ಲಿ ಸನ್ರೈಸರ್ಸ್​​ ಹೈದರಾಬಾದ್ ಅನ್ನು ಎದುರಿಸಲಿದೆ. ವಿಜೇತರು ಮೇ 26 ರಂದು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಫೈನಲ್​​ಗೆ ಮುನ್ನಡೆಯಲಿದ್ದಾರೆ.

IPL 2024 : ಮಾಜಿ ನಾಯಕ ಶೇನ್​ ವಾರ್ನ್​ ದಾಖಲೆ ಸರಿಗಟ್ಟಿದ ಸಂಜು ಸ್ಯಾಮ್ಸನ್​

ಅಹಮದಾಬಾದ್​​: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಐಪಿಎಲ್​ನ ರಾಜಸ್ಥಾನ್​ ರಾಯಲ್ಸ್​​ ಫ್ರ್ಯಾಂಚೈಸಿ ಇತಿಹಾಸದ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದುಕೊಂಡಿದ್ದಾರೆ. ಅವರು ಮಾಜಿ ನಾಯಕ ಹಾಗೂ ವಿಶ್ವ ಪ್ರಸಿದ್ಧ ಸ್ಪಿನ್ನರ್​ ದಿ. ಶೇನ್ ವಾರ್ನ್ ಅವರ ಸಾಧನೆಯೊಂದನ್ನು ಸರಿಗಟ್ಟಿದ್ದಾರೆ. ಬುಧವಾರ ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024 ಎಲಿಮಿನೇಟರ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಿರ್ಣಾಯಕ ಗೆಲುವು ಸಾಧಿಸಿದ ಬಳಿಕ ಸಂಜು ಈ ಸಾಧನೆಗೆ ಪಾತ್ರರಾಗಿದ್ದಾರೆ.

ಈ ಗೆಲುವಿನೊಂದಿಗೆ ನಾಯಕನಾಗಿ ಸಂಜು ಸ್ಯಾಮ್ಸನ್ ಅವರ ಒಟ್ಟು ಗೆಲುವು 31 ಪಂದ್ಯಗಳಿಗೆ ತಲುಪಿತು. ಇದು 2008 ರಲ್ಲಿ ತಂಡವನ್ನು ಉದ್ಘಾಟನಾ ಐಪಿಎಲ್ ಪ್ರಶಸ್ತಿಗೆ ಮುನ್ನಡೆಸಿದ್ದ ಸ್ಪಿನ್ ಮಾಂತ್ರಿಕ ವಾರ್ನ್ ಅವರ ದಾಖಲೆಯನ್ನು ಸರಿಗಟ್ಟಿದಂತಾಗಿದೆ. ರಾಜಸ್ಥಾನ್ ತಂಡದ ಇತರ ಮಾಜಿ ನಾಯಕರುಗಳಾದ ರಾಹುಲ್ ದ್ರಾವಿಡ್ (18 ಗೆಲುವುಗಳು), ಶೇನ್ ವ್ಯಾಟ್ಸನ್ (8 ಗೆಲುವುಗಳು), ಅಜಿಂಕ್ಯ ರಹಾನೆ (9 ಗೆಲುವುಗಳು) ಮತ್ತು ಸ್ಟೀವ್ ಸ್ಮಿತ್ (15 ಗೆಲುವು) ಅವರಂತಹ ಆಟಗಾರರನ್ನು ಪರಿಗಣಿಸಿದಾಗ ಈ ಸಾಧನೆಯ ಮಹತ್ವದ್ದಾಗಿದೆ.

Continue Reading

ಕ್ರೀಡೆ

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

T20 World Cup 2024: ಮೆನ್ ಇನ್ ಬ್ಲೂ ಪ್ರತಿಭೆಗಳನ್ನು ಹೊಂದಿರುತ್ತದೆ. ಅಂತಿಮವಾಗಿ ಅವರು ಮುಂಬರುವ ಟಿ 20 ವಿಶ್ವಕಪ್ 2024ರಲ್ಲಿ ವಿರೋಧ ತಂಡಗಳಿಗೆ ಗಮನಾರ್ಹ ಬೆದರಿಕೆ ಒಡ್ಡುವುದಿಲ್ಲ ಎಂದು ಲಾಯ್ಡ್ ಹೇಳಿದ್ದಾರೆ. ಈ ದಿಟ್ಟ ಹೇಳಿಕೆಯು ಐಸಿಸಿ ಪಂದ್ಯಾವಳಿಗಳಲ್ಲಿ ಭಾರತದ ಪ್ರದರ್ಶನದ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಹುಟ್ಟುಹಾಕಿದೆ.

VISTARANEWS.COM


on

T20 world cup 2024
Koo

ಬೆಂಗಳೂರು: ಜೂನ್ 1 ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಸಹ-ಆತಿಥ್ಯ ವಹಿಸಲಿರುವ ಐಸಿಸಿ ಟಿ 20 ವಿಶ್ವಕಪ್ 2024ರಲ್ಲಿ (T20 World Cup 2024) ಭಾರತ ಕಪ್ ಗೆಲ್ಲುವುದಿಲ್ಲ. ಆಯ್ಕೆ ಮಾಡಿರುವ ಭಾರತ ತಂಡ ಪ್ರಭಾವಿಯಾಗಿಲ್ಲ ಎಂದು ಇಂಗ್ಲೆಂಡ್​ನ ಮಾಜಿ ಕ್ರಿಕೆಟಿಗ ಡೇವಿಡ್ ಲಾಯ್ಡ್ ಹೇಳಿಕೆ ನೀಡಿದ್ದಾರೆ. ಭಾರತ ತಂಡ ಸಾಮಾನ್ಯ ತಂಡವಾಗಿದೆ. ಹೀಗಾಗಿ ಈ ತಂಡಕ್ಕೆ ಗೆಲುವಿನ ಅವಕಾಶ ಕಡಿಮೆಯಿದೆ ಎಂದು ಅವರು ಹೇಳಿದ್ದಾರೆ. ಗಮನಾರ್ಹವಾಗಿ, ಭಾರತ ಕ್ರಿಕೆಟ್ ತಂಡವು 2013 ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ. ಆದಾಗ್ಯೂ, ಭಾರತವು ತವರು ನೆಲದಲ್ಲಿ ನಡೆದ 2023ರ ಐಸಿಸಿ ವಿಶ್ವಕಪ್​ನಲ್ಲಿ ರನ್ನರ್-ಅಪ್ ಆಗಿತ್ತು. ಎರಡು ಬಾರಿ ಡಬ್ಲ್ಯುಟಿಸಿಯ ಫೈನಲ್ ತಲುಪಿ ರನ್ನರ್ ಅಪ್​ ಸ್ಥಾನ ಪಡೆದುಕೊಂಡಿತ್ತು.

ಟಿ20 ವಿಶ್ವಕಪ್​ ಕುರಿತು ಹೇಳುವುದಾದರೆ 2007ರ ಆವೃತ್ತಿಯ ವಿಜೇತ ತಂಡ 2021ರ ಲೀಗ್ ಹಂತದಲ್ಲೇ ಹೊರಕ್ಕೆ ಬಿದ್ದಿತ್ತು. ಪ್ರತಿಷ್ಠಿತ ಪಂದ್ಯಾವಳಿಯ 2022ರ ಆವೃತ್ತಿಯಲ್ಲಿ ಸೆಮಿಫೈನಲ್​​ನಲ್ಲಿ ಇಂಗ್ಲೆಂಡ್​ಗೆ ಶರಣಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ಕೊರತೆ ಮುಂದುವರಿದಿದೆ.

ಭಾರತ ತಂಡದ ಸಾಮರ್ಥ್ಯವನ್ನು ಊಹಿಸಬಹುದು

ಲಾಯ್ಡ್​ ಅವರು ಟೀಮ್ ಇಂಡಿಯಾ ಆಯ್ಕೆ ವಿಧಾನವನ್ನು ಟೀಕಿಸಿದರು ಭಾರತ ತಂಡವನ್ನು ಬ್ಯಾಟ್ ಮತ್ತು ಬೌಲಿಂಗ್​ನಲ್ಲಿ ಅಪಾಯಗಳನ್ನು ತಡೆಯುವ ಸಾಮರ್ಥ್ಯ ಇರುವ ತಂಡ ಅಲ್ಲ ಎಂದಿದ್ದಾರೆ. ಈ ತಂಡದ ಸಾಮರ್ಥ್ಯವನ್ನು ಯಾರು ಬೇಕಾದರೂ ಊಹಿಸಬಹುದು ಎಂದು ಹೇಳಿದರು. ಕಳೆದ ದಶಕದಲ್ಲಿ ಭಾರತ ತಂಡದ ಸ್ಥಿರತೆಯ ಕೊರತೆಯನ್ನು ಸಹ ಲಾಯ್ಡ್ ಎತ್ತಿ ತೋರಿಸಿದರು. ಐಸಿಸಿ ಸ್ಪರ್ಧೆಗಳಲ್ಲಿ ಟೀಮ್ ಇಂಡಿಯಾದ ಕಳಪೆ ಪ್ರದರ್ಶನದ ಪ್ರವೃತ್ತಿಯನ್ನು ಬೊಟ್ಟು ಮಾಡಿದ್ದಾರೆ.

ಭಾರತವು ಪ್ರತಿಭಾವಂತ ಆಟಗಾರರನ್ನು ಹೊಂದಿದೆ. ಆದರೆ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಅವರ ಅಪಾಯ-ಮುಕ್ತ ಕಾರ್ಯತಂತ್ರ ಸರಿಯಾಗಿಲ್ಲ. ಕಳೆದ ದಶಕದಲ್ಲಿ ಸ್ಟಾರ್-ಸ್ಟಡೆಡ್ ಲೈನ್ಅಪ್ ಹೊಂದಿದ್ದರೂ ಐಸಿಸಿ ಸ್ಪರ್ಧೆಗಳಲ್ಲಿ ಪ್ರಬಲ ಶಕ್ತಿಯಾಗುವ ಸಾಮರ್ಥ್ಯ ಹೊಂದಿಲ್ಲ ಎಂದು ಇಂಗ್ಲೆಂಡ್​​ನ ಮಾಜಿ ವೇಗಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

ಮೆನ್ ಇನ್ ಬ್ಲೂ ಪ್ರತಿಭೆಗಳನ್ನು ಹೊಂದಿರುತ್ತದೆ. ಅಂತಿಮವಾಗಿ ಅವರು ಮುಂಬರುವ ಟಿ 20 ವಿಶ್ವಕಪ್ 2024ರಲ್ಲಿ ವಿರೋಧ ತಂಡಗಳಿಗೆ ಗಮನಾರ್ಹ ಬೆದರಿಕೆ ಒಡ್ಡುವುದಿಲ್ಲ ಎಂದು ಲಾಯ್ಡ್ ಹೇಳಿದ್ದಾರೆ. ಈ ದಿಟ್ಟ ಹೇಳಿಕೆಯು ಐಸಿಸಿ ಪಂದ್ಯಾವಳಿಗಳಲ್ಲಿ ಭಾರತದ ಪ್ರದರ್ಶನದ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಹುಟ್ಟುಹಾಕಿದೆ.

ಟಿ20 ವಿಶ್ವಕಪ್​​ನಲ್ಲಿ ಬೆದರಿಕೆ ಒಡ್ಡುವುದಿಲ್ಲ; ಡೇವಿಡ್ ಲಾಯ್ಡ್

ಟಾಕ್ಸ್ಪೋರ್ಟ್ ಕ್ರಿಕೆಟ್ ಪಾಡ್​ಕಾಸ್ಟ್​ನಲ್ಲಿ ಡೇವಿಡ್ ಲಾಯ್ಡ್ ಹೀಗೆ ಹೇಳಿದ್ದಾರೆ. “ಇದು ಸಾಕಷ್ಟು ಊಹಿಸಬಹುದಾದ ತಂಡ. ಕುಡುಗೋಲುಗಳು ಕಡಿಮೆಯಾಗಿಲ್ಲ. ಎದುರಾಳಿಗಳು ಗುಣಮಟ್ಟ ಸ್ವೀಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಆದರೆ ಅವರು ಬ್ಯಾಟ್ ಅಥವಾ ಚೆಂಡಿನೊಂದಿಗೆ ಅಪಾಯವನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

ಮುಂಬರುವ ಟಿ 20 ವಿಶ್ವಕಪ್ 2024 ರಲ್ಲಿ ಭಾರತವನ್ನು ಪಾಕಿಸ್ತಾನ ಐರ್ಲೆಂಡ್, ಯುಎಸ್ಎ ಮತ್ತು ಕೆನಡಾ ಜೊತೆಗೆ ಎ ಗುಂಪಿನಲ್ಲಿ ಇದೆ. ಭಾರತೀಯ ತಂಡವು ಜೂನ್ 5 ರಂದು ನ್ಯೂಯಾರ್ಕ್​ನಲ್ಲಿ ಐರ್ಲೆಂಡ್ ವಿರುದ್ಧ ತಮ್ಮ ಅಭಿಯಾನ ಪ್ರಾರಂಭಿಸಿದೆ. ನಂತರ ಜೂನ್ 9 ರಂದು ಪಾಕಿಸ್ತಾನದ ವಿರುದ್ಧ ಬೃಹತ್ ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಜೂನ್ 1ರಂದು ಅಮೆರಿಕದಲ್ಲಿ ಬಾಂಗ್ಲಾದೇಶ ವಿರುದ್ಧ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯವನ್ನು ಆಡಲಿದೆ.

ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಶಿವಮ್ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಆಟಗಾರರುಃ ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತದ ಗುಂಪು ಹಂತದ ಹಣಾಹಣಿ

ಜೂನ್ 05: ಭಾರತ vs ಐರ್ಲೆಂಡ್, ನಸ್ಸೌ ಕೌಂಟಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ನ್ಯೂಯಾರ್ಕ್​​
ಜೂನ್ 09: ಭಾರತ vs ಪಾಕಿಸ್ತಾನ, ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ನ್ಯೂಯಾರ್ಕ್
ಜೂನ್ 12: ಭಾರತ vs ಯುಎಸ್ಎ, ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ನ್ಯೂಯಾರ್ಕ್
ಜೂನ್ 14: ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್​​ನ ಭಾರತ vs ಕೆನಡಾ

Continue Reading

ಪ್ರಮುಖ ಸುದ್ದಿ

IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

IPL 2024 : ಜಾಹೀರಾತಿನಲ್ಲಿ ತನ್ನ ಮರೆಗುಳಿತನಕ್ಕೆ ಹೆಸರುವಾಸಿಯಾದ ರೋಹಿತ್ ತನ್ನ ಫೋನ್ ಅನ್ನು ತಂಡದ ಬಸ್​ನಲ್ಲಿ ಬಿಟ್ಟು ಹೋಗುವ ಹಾಸ್ಯಮಯವಾಗಿ ಸಂದರ್ಭವನ್ನು ತೋರಿಸಲಾಗಿದೆ. ಇದು ಮ್ಯೂಚುವಲ್​​ಫಂಡ್​ಸಹಿಹೈ ಎಂಬ ಪೋರ್ಟಲ್​ ಕುರಿತಾದ ಜಾಹೀರಾಗಿದೆ. ಸಚಿನ್ ತೆಂಡೂಲ್ಕರ್ ಮತ್ತು ಧೋನಿ ಮೂಲಕ ಇದನ್ನು ಹೆಚ್ಚು ರಸವತ್ತಾಗಿ ತೋರಿಸಲಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ತಾವು ಆರಾಧಿಸುವ ಕ್ರಿಕೆಟಿಗರನ್ನು ಸಮಯ ಸಿಕ್ಕಾಗೆಲ್ಲ ನೋಡುವುದು ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಅತ್ಯಂತ ಸಂತೋಷದ ಸುದ್ದಿ. ಆದರೆ ಮೂರು ಪ್ರಖ್ಯಾತ ಕ್ರಿಕೆಟಿಗರನ್ನು ಒಂದೇ ವೇದಿಕೆಯಲ್ಲಿ ನೋಡುವುದರಲ್ಲಿ ಸಿಗುವ ಆನಂದ ಇನ್ನೆಲ್ಲೂ ಸಿಗುವುದಿಲ್ಲ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸಮಯದಲ್ಲಿ ಪ್ರಸಾರವಾದ ಮ್ಯೂಚುವಲ್ ಫಂಡ್​ ಒಂದರ ಜಾಹೀರಾತು ಒಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಯಾಕೆಂದರೆ ಈ ಜಾಹೀರಾತಿನಲ್ಲಿ, ಮೂರು ತಲೆಮಾರಿನ ಭಾರತೀಯ ಕ್ರಿಕೆಟ್ ನಾಯಕರಾದ ಸಚಿನ್ ತೆಂಡೂಲ್ಕರ್, ಎಂ. ಎಸ್. ಧೋನಿ ಮತ್ತು ರೋಹಿತ್ ಶರ್ಮಾ ಒಟ್ಟಿಗೆ ಸೇರಿ ಕಾಣಿಸಿಕೊಂಡಿದ್ದಾರೆ. ಇದು ಸಂಚಲನ ಮೂಡಿಸಿದೆ.

ಜಾಹೀರಾತಿನಲ್ಲಿ ತನ್ನ ಮರೆಗುಳಿತನಕ್ಕೆ ಹೆಸರುವಾಸಿಯಾದ ರೋಹಿತ್ ತನ್ನ ಫೋನ್ ಅನ್ನು ತಂಡದ ಬಸ್​ನಲ್ಲಿ ಬಿಟ್ಟು ಹೋಗುವ ಹಾಸ್ಯಮಯವಾಗಿ ಸಂದರ್ಭವನ್ನು ತೋರಿಸಲಾಗಿದೆ. ಇದು ಮ್ಯೂಚುವಲ್​​ಫಂಡ್​ಸಹಿಹೈ ಎಂಬ ಪೋರ್ಟಲ್​ ಕುರಿತಾದ ಜಾಹೀರಾಗಿದೆ. ಸಚಿನ್ ತೆಂಡೂಲ್ಕರ್ ಮತ್ತು ಧೋನಿ ಮೂಲಕ ಇದನ್ನು ಹೆಚ್ಚು ರಸವತ್ತಾಗಿ ತೋರಿಸಲಾಗಿದೆ.

ಭಾರತದ ಮಾಜಿ ಆಟಗಾರರಾದ ಸಚಿನ್ ಮತ್ತು ಎಂ. ಎಸ್. ಧೋನಿ, ನಿವೃತ್ತಿ ನಂತರದ ಹೂಡಿಕೆ ಯೋಜನೆಯ ಬಗ್ಗೆ ರೋಹಿತ್​ಗೆ ಸಲಹೆ ನೀಡಲು ಮುಂದುವರಿಯುತ್ತಾರೆ. ಆದರೆ, ರೋಹಿತ್​ ಅದಾಗಲೇ ತಾವು ಹೂಡಿಕೆ ಮಾಡುತ್ತಿರುವಾಗಿ ಹೇಳುವ ಮೂಲಕ ಜಾಹೀರಾತು ಮುಂದುವರಿಯುತ್ತದೆ.

ಭಾರತದ ಮಾಜಿ ನಾಯಕ ಎಂ. ಎಸ್. ಧೋನಿ ಮತ್ತು ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರು ಮ್ಯೂಚುವಲ್ ಫಂಡ್​ಗಳನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಆದರೆ, ಈ ಹೊಸ ಜಾಹೀರಾತಿನಲ್ಲಿ ರೋಹಿತ್ ಶರ್ಮಾ ಅವರನ್ನೂ ಸೇರಿಸಿಕೊಳ್ಳಲಾಗಿದೆ.

ಜಾಹೀರಾತಿನಲ್ಲಿ ಹಾಸ್ಯಮಯ ಅಂಶಗಳಿವೆ ಇದು ರೋಹಿತ್ ಅ ಮರೆತುಹೋಗುವ ಅಭ್ಯಾಸವನ್ನು ಎತ್ತಿ ತೋರಿಸುತ್ತದೆ. ಮೂವರು ಕ್ರಿಕೆಟ್ ಐಕಾನ್​ಗಳು ಲಘೂ ಹಾಸ್ಯದಲ್ಲಿ ತೊಡಗಿಕೊಂಡಿರುದು ಕಾಣುತ್ತದೆ. ಈ ಪ್ರಸಿದ್ಧ ಆಟಗಾರರು ಒಂದೇ ತೆರೆಯ ಮೇಲೆ ಕಾಣಿಸಿಕೊಳ್ಳುವುದು ವೀಕ್ಷಕರಿಗೆ ಒಂದು ಅದ್ಭುತ ಹಳಹಳಿಕೆಯಾಗಿರುತ್ತದೆ.

ಐಪಿಎಲ್ 2024 ನಂತರ ರೋಹಿತ್ ಶರ್ಮಾ ಭವಿಷ್ಯವೇನು?

2024 ರ ಐಪಿಎಲ್ ಆವೃತ್ತಿಯಲ್ಲಿ ರೋಹಿತ್ ಶರ್ಮಾ ಅದ್ಭುತ ಪ್ರದರ್ಶನ ತೋರಿದ್ದರು. ಅವರು ಪಂದ್ಯಾವಳಿಯನ್ನು ಆಕ್ರಮಣಕಾರಿ ವಿಧಾನದೊಂದಿಗೆ ಪ್ರಾರಂಭಿಸಿದರು. ಆದರೆ ಅಂತಿಮ ಹಂತಗಳಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ಹೆಣಗಾಡಿದರು. ಇದರ ಹೊರತಾಗಿಯೂ, ಅವರು ತವರು ನೆಲದಲ್ಲಿ ಸಿಎಸ್​​ಕೆ ವಿರುದ್ಧ ಶತಕ ಗಳಿಸುವಲ್ಲಿ ಯಶಸ್ವಿಯಾದರು. ಎಲ್ಎಸ್​ಜಿ ವಿರುದ್ಧ ಬಲವಾದ ಪ್ರದರ್ಶನದೊಂದಿಗೆ ಋತುವನ್ನು ಮುಗಿಸಿದರು. ಒಟ್ಟಾರೆಯಾಗಿ, ಶರ್ಮಾ 14 ಪಂದ್ಯಗಳಲ್ಲಿ 150 ರ ಸ್ಟ್ರೈಕ್ ರೇಟ್ ನೊಂದಿಗೆ 417 ರನ್ ಗಳಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ನಿರಾಶಾದಾಯಕ ಋತು ಹೊಂದಿದ್ದು, 14 ಪಂದ್ಯಗಳಲ್ಲಿ ಕೇವಲ 4 ಗೆಲುವುಗಳೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಜೂನ್ 1 ರಿಂದ ಯುಎಸ್ಎಯಲ್ಲಿ ಪ್ರಾರಂಭವಾಗುವ ಟಿ 20 ವಿಶ್ವಕಪ್ 2024 ರಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.

Continue Reading
Advertisement
Maarige Daari
ಪ್ರಮುಖ ಸುದ್ದಿ7 mins ago

Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

Mansoon
ಪ್ರಮುಖ ಸುದ್ದಿ19 mins ago

Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

bbmp waste disposal
ಬೆಂಗಳೂರು35 mins ago

Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Aishwarya Rai
Latest40 mins ago

Aishwarya Rai : ಮುದ್ದಿನ ಮಗಳು ಆರಾಧ್ಯಳ ಜತೆ ಅಮ್ಮನ ಬರ್ತ್​​ಡೇ ಆಚರಿಸಿದ ಐಶ್ವರ್ಯಾ ರೈ; ಇಲ್ಲಿವೆ ಚಿತ್ರಗಳು

Drowned in water
ಕಲಬುರಗಿ42 mins ago

Drowned in water : ಕುಡಿದ ಮತ್ತಿನಲ್ಲಿ ಈಜಲು ಹೋದ ಯುವಕ ನೀರುಪಾಲು; ಸಾವಿನ ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Viral Video
ಪ್ರಮುಖ ಸುದ್ದಿ1 hour ago

Viral Video: ಚಲಿಸುವ ಬೈಕ್​ನಲ್ಲಿ ಆಲಿಂಗನ, ಬಿಸಿ ಚುಂಬನ; ಲಜ್ಜೆಯಿಲ್ಲದ ಜೋಡಿಯ ಸ್ಟಂಟ್​ ವಿಡಿಯೊ ವೈರಲ್​

suspicious death Self Harming By Hight court lawyer
ಕ್ರೈಂ2 hours ago

Suspicious Death: ವಕೀಲೆಯ ಅನುಮಾನಾಸ್ಪದ ಸಾವಿನ ಪ್ರಕರಣ; ಪೋಸ್ಟ್ ಮಾರ್ಟಮ್ ರಿಪೋರ್ಟ್ ಹೇಳಿದ್ದೇನು?

bulldozer justice
ಪ್ರಮುಖ ಸುದ್ದಿ2 hours ago

Bulldozer justice : ಅಸ್ಸಾಂ ಸರ್ಕಾರಕ್ಕೆ ತಿರುಗುಬಾಣವಾದ ಬುಲ್ದೋಜರ್ ನ್ಯಾಯ! ನೆಲಸಮಗೊಳಿಸಿದ ಮನೆ ಮಾಲೀಕರಿಗೆ 30 ಲಕ್ಷ ಪರಿಹಾರ!

assault case koratagere
ಕ್ರೈಂ2 hours ago

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Rameshwaram Cafe
ಪ್ರಮುಖ ಸುದ್ದಿ2 hours ago

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌