Road Accident: ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು - Vistara News

ರಾಯಚೂರು

Road Accident: ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

Road Accident: ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

VISTARANEWS.COM


on

bolero hit 3 death road accident raichur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಹನುಮ ಮಾಲಾಧಾರಿಗಳಿಗೆ (Hanuman Devotees) ಬೊಲೇರೋ ವಾಹನ (Bolero Hit) ಡಿಕ್ಕಿಯಾಗಿ ಸ್ಥಳದಲ್ಲಿಯೇ (Road Accident) ಮೂರು ಜನ ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

ಅಯ್ಯನಗೌಡ (28) ಮಹೇಶ (22), ಉದಯಕುಮಾರ (28) ಮೃತ ದುರ್ದೈವಿಗಳು. ರಮೇಶ ಭೂಷಣ ಎಂಬ ಇಬ್ಬರಿಗೆ ಗಂಭೀರ ಗಾಯವಾಗಿದೆ. ಎಲ್ಲರೂ ರಾಯಚೂರಿನ ಹೆಗಸನಹಳ್ಳಿ ನಿವಾಸಿಗಳು. ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ವಿಮಾನದಲ್ಲಿ ಬಂತು 10 ಅನಕೊಂಡ! ಬ್ಯಾಂಕಾಕ್‌ನಿಂದ ಅಕ್ರಮ ಆಮದು, ಬಂಧನ

ಬೆಂಗಳೂರು: ಬೆಂಗಳೂರು ಏರ್ ಕಸ್ಟಮ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಕದ್ದು ತರಲಾಗುತ್ತಿದ್ದ 10 ಅನಕೊಂಡಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿವೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತರಲಾಗಿದ್ದ 10 ಹಳದಿ ಆನಕೊಂಡಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಲಗೇಜ್ ಬ್ಯಾಗ್‌ನಲ್ಲಿ ಈ ಆನಕೊಂಡಗಳನ್ನು ತಂದಿದ್ದರು. ಏರ್ ಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ. ಸದ್ಯ ಅನಕೊಂಡಗಳನ್ನು ರಕ್ಷಿಸಿ ಆರೋಪಿಯನ್ನು ಏರ್ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಹಳದಿ ಬಣ್ಣ ಉಳ್ಳ ಆನಕೊಂಡ ಹಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

ಹಳದಿ ಅನಕೊಂಡವನ್ನು ಪರಾಗ್ವೆಯನ್ ಅನಕೊಂಡ ಎಂದೂ ಕರೆಯುತ್ತಾರೆ. ಇದು ದಕ್ಷಿಣ ಅಮೆರಿಕಾಕ್ಕೆ ಸೇರಿದ ಬೋವಾ ಜಾತಿಯ ಹಾವು. ಇದು ವಿಶ್ವದ ಅತಿದೊಡ್ಡ ಹಾವುಗಳಲ್ಲಿ ಒಂದು. ಆದರೆ ಅದರ ಹತ್ತಿರದ ಸಂಬಂಧಿ ಹಸಿರು ಅನಕೊಂಡಕ್ಕಿಂತ ಚಿಕ್ಕದು. ಇವುಗಳ ಮರಿಗಳನ್ನು ಕದ್ದು ಸಾಗಿಸುವ ವ್ಯಾಪಕ ಜಾಲ ಅಂತಾರಾಷ್ಟ್ರೀಯವಾಗಿ ಸಕ್ರಿಯವಾಗಿದೆ. ಈ ನಿಟ್ಟಿನಲ್ಲಿ ಕಸ್ಟಮ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭಾರತದಲ್ಲಿ ವಿದೇಶದ ವಿಶಿಷ್ಟ ಪ್ರಾಣಿಗಳನ್ನು (Exotic Animals) ಆಮದು ಮಾಡುವುದು ಹಾಗೂ ಸಾಕುವುದನ್ನು ನಿಷೇಧಿಸಲಾಗಿದೆ.

ʻಚುನಾವಣೆ ಪ್ರಚಾರ ಮಾಡಿದ್ರೆ ಹುಷಾರ್!‌ʼ ಎಂದು ಲಾಂಗ್‌ ಝಳಪಿಸಿದ ಜೆಡಿಎಸ್‌ ನಾಯಕ

ಚಿಕ್ಕಬಳ್ಳಾಪುರ: ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ‌ ಚಿಂತಾಮಣಿಯಲ್ಲಿ ಜೆಡಿಎಸ್‌ ನಾಯಕನೊಬ್ಬ ಎದುರಾಳಿಗಳ ಮುಂದೆ ಲಾಂಗ್‌ ಝಳಪಿಸಿ ಆವಾಜ್ ಹಾಕಿದ್ದಾನೆ. ಚುನಾವಣೆ ಪ್ರಚಾರ, ಮತದಾನದಲ್ಲಿ ಪಾಲ್ಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೆಡಿಎಸ್ ಮುಖಂಡನಿಂದ ಕಾಂಗ್ರೆಸ್ ಬೆಂಬಲಿಗರಿಗೆ ಬೆದರಿಕೆ ಹಾಕಿದ ಆರೋಪವಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವದಲ್ಲಿ ಲಾಂಗು ಹಿಡಿದು ಬೆದರಿಕೆ ಹಾಕಿದ್ದಾನೆ. ಇದರ ವಿಡಿಯೋ ಸಾಕ್ಷಿ ಲಭ್ಯವಾಗಿದೆ.

ಕೋದಂಡಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ನಡೆಯುತಿದ್ದ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕೆ.ವಿ‌ ಶ್ರೀನಿವಾಸರೆಡ್ಡಿ (ಕೆವಿಎಸ್) ಎಂಬಾತ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾನೆ. “ಏ ನನ್ನ ಮಕ್ಳಾ, ಚುನಾವಣಾ ಪ್ರಚಾರ ಅಥವಾ ಮತದಾನದಲ್ಲಿ ಪಾಲ್ಗೊಂಡರೆ‌ ಕತ್ತರಿಸುತ್ತೇನೆ” ಎಂದು ಬೆದರಿಕೆ‌ ಹಾಕಿದ್ದಾನೆ ಎನ್ನಲಾಗಿದೆ. ಎದುರಾಳಿಗಳಾದ ಕಲ್ಯಾಣ್‌ ರೆಡ್ಡಿ ಹಾಗು ಆತನ ಕುಟುಂಬದವರನ್ನು ಅಟ್ಟಾಡಿಸಿ ಬೆದರಿಸಿದ್ದಾನೆ.

ಈ ಕುರಿತು ಶ್ರೀನಿವಾಸರೆಡ್ಡಿ ವಿರುದ್ಧ ಕಲ್ಯಾಣ್ ಕುಮಾರ್ ಪ್ರಾಣಬೆದರಿಕೆ ದೂರು ದಾಖಲಿಸಿದ್ದಾರೆ. ಕಲ್ಯಾಣ್ ಕುಮಾರ್ ಹಾಲಿ ಸಚಿವ ಡಾ. ಎಂ. ಸಿ‌ ಸುಧಾಕರ್ ಬೆಂಬಲಿಗರಾಗಿದ್ದು, ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Rain News : ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, 8 ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮೇ 22ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ (rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರ ಕೂಡಿದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯು ಸಾಧಾರಣವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 29 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

8 ಜಿಲ್ಲೆಗಳಲ್ಲಿ ಮಳೆ ರುದ್ರ ನರ್ತನ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದಷ್ಟು ಈ ಭಾಗದ ಜನರು ಮರದಡಿ ನಿಲ್ಲುವುದು, ಮಳೆ ಸಮಯದಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Karnataka Rain : ರಾಜ್ಯದಲ್ಲಿ ಮಳೆ ಅವಾಂತರವು (Rain news) ಮುಂದುವರಿದಿದೆ. ಭಾರಿ ಮಳೆಗೆ ಹಲವೆಡೆ ಮರಗಳು ಉರುಳಿದ್ದರೆ, ಬೆಳೆಗೆಳು ನೆಲಸಮವಾಗಿತ್ತು. ಇತ್ತ ವಿದ್ಯುತ್‌ ಸಂಪರ್ಕ ಇಲ್ಲದೆ ರೋಗಿಗಳಿಗೆ ವೈದ್ಯರು ಕತ್ತಲಲ್ಲೇ ಚಿಕಿತ್ಸೆ ಕೊಡುವಂತೆ ಆಯಿತು. ಮನೆಗಳಿಗೆ ಮಳೆ ನೀರಿನ ಜತಗೆ ಚರಂಡಿ ನೀರು ನುಗ್ಗಿತ್ತು.ರಸ್ತೆ ಎಲ್ಲವೂ ಕೆರೆಯಂತಾಗಿತ್ತು.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

ವಿಜಯನಗರದಲ್ಲಿ ಕೊಚ್ಚಿ ಹೋದ ರೋಡ್‌

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮಳೆ ನೀರಿನ ರಭಸಕ್ಕೆ ರಸ್ತೆಯೇ ಕೊಚ್ಚಿ ಹೋಗಿತ್ತು. ಇದರಿಂದಾಗಿ ಕೂಡ್ಲಿಗಿ ತಾಲೂಕಿನ ಯಂಬ್ಳಿ- ಆಲೂರು ಗ್ರಾಮಗಳ ಮಾರ್ಗ ರಸ್ತೆ ಸಂಪರ್ಕ ಕಟ್ ಆಗಿತ್ತು. ರಸ್ತೆ ಸಂಪರ್ಕ ಇಲ್ಲದೆ ವಾಹನ ಸವಾರರು ಪರದಾಡಬೇಕಾಯಿತು.

ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಲಾರಿ ಹಾಗೂ ಬಸ್

ಮಳೆಯಿಂದ ಜಲಾವೃತವಾದ ರಸ್ತೆಯಲ್ಲಿ ಸಂಚಾರಿಸಿದ ಪರಿಣಾಮ ಲಾರಿ- ಬಸ್ಸು ಕೆಸರಿನಲ್ಲಿ ಸಿಲುಕಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ನಡೆದಿದೆ. ಶಿರಾ- ಅಮರಾಪುರ ರಸ್ತೆ ಕಾಮಗಾರಿ ನಿಧಾನವಾಗಿ ನಡೆಯುತ್ತಿರುವುದರಿಂದ ಬಿಡ್ಜ್ ಕಾಮಗಾರಿ ಬಳಿ‌ ರಸ್ತೆಯು ಜಲಾವೃತಗೊಂಡು ಸವಾರರು ಪರದಾಡುವಂತಾಗಿದೆ.

ಇನ್ನೂ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅರಸಿಕೆರೆ ಗ್ರಾಮದಲ್ಲಿ ಗಾಳಿ- ಮಳೆ ರಭಸಕ್ಕೆ ಅಡಿಕೆ ಮರಗಳು ನೆಲಕ್ಕುರುಳಿದ್ದವು. ರೈತ ಪ್ರಕಾಶ್ ಎಂಬುವರಿಗೆ ಸೇರಿದ 12 ವರ್ಷದ ಹಳೇ ಅಡಿಕೆ ಮರಗಳು ಫಸಲಿಗೆ ಬಂದಿತ್ತು. ಇದೀಗ ಮಳೆಯಿಂದಾಗಿ ಅಂದಾಜು 2 ಲಕ್ಷ ರೂಪಾಯಿ ನಷ್ಟವಾಗಿದೆ.

ಮೈಸೂರಿನಲ್ಲಿ ಕೆರೆಯಂತಾದ ಜಮೀನುಗಳು

ಮೈಸೂರು ಜಿಲ್ಲೆಯಲ್ಲಿ ಮಳೆಯು ಮುಂದುವರಿದ್ದು, ಹುಣಸೂರು ತಾಲೂಕಿನ ಜಮೀನುಗಳಲ್ಲಿ ಜಲಾವೃತಗೊಂಡಿತ್ತು. ನೂರಾರು ಎಕರೆ ಬೆಳೆದ ಶುಂಠಿ, ತಂಬಾಕು ಬೆಳೆ ನಾಶವಾಗಿತ್ತು. ಗ್ರಾಮದ ಜಮೀನುಗಳು ಕೆರೆಗಳಂತಾಗಿತ್ತು. ಇತ್ತ ಬಿರುಗಾಳಿ ಮಳೆಗೆ ಮನೆ ಚಾವಣಿ, ಬ್ಯಾರನ್‌ ಹಾರಿಹೋಗಿತ್ತು. ಮೈಸೂರಿನ ಅತ್ತಿಕುಪ್ಪೆಯಲ್ಲಿ ಕೆರೆ ಕೋಡಿ ಒಡೆದು ಬೆಳೆ ನಾಶವಾಗಿತ್ತು. ಇದರಿಂದಾಗಿ ತೆಂಗಿನ ಸಸಿಗಳು ಕೊಚ್ಚಿಹೋಗಿದ್ದವು. ಹನಗೋಡು ಹೋಬಳಿ ಕಚುವಿನಹಳ್ಳಿ ಗ್ರಾಮದ ಜಯಮ್ಮ ಮತ್ತು ಲಲಿತಮ್ಮರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರನ್ ಗೋಡೆ ಕುಸಿದಿತ್ತು. ಚಿಲ್ಕುಂದ ಗ್ರಾಮದಲ್ಲಿ ಬಿರುಗಾಳಿಗೆ ರಾಮಶೆಟ್ಟರ ಮನೆ ಚಾವಣಿ ಹಾಗೂ ಚಂದ್ರುರವರ ಕೊಟ್ಟಿಗೆಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿ ಹೋಗಿದೆ. ಇತ್ತ ಸುಜ್ಜಲೂರು ಗ್ರಾಮದಲ್ಲಿ ಮನೆಗಳಿಗೆ ಚರಂಡಿ ನೀರು ನುಗ್ಗಿತ್ತು.

ಕೆರೆ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರು

ಮೈಸೂರು ಮಳೆ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಕೆರೆ‌ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರುವೊಂದನ್ನು ಯುವಕರು ರಕ್ಷಿಸಿದ ಘಟನೆ ಪಿರಿಯಾಪಟ್ಟಣ ತಾಲೂಕು ತರಿಕಲ್ ಗ್ರಾಮದಲ್ಲಿ ನಡೆದಿದೆ. ಹಾರನಹಳ್ಳಿ ಗ್ರಾಮದ ಶಿವಣ್ಣ ಅವರ ಹಸುವಿನ ಕರುವನ್ನು ರಕ್ಷಣೆ ಮಾಡಲಾಗಿತ್ತು. ಬಾಲಗೆರೆ ತುಂಬಿ ಕೋಡಿ ಒಡೆದ ಪರಿಣಾಮ ಬೆಟ್ಟದಪುರ- ಕುಶಾಲನಗರ ರಸ್ತೆ ಮೇಲೆ ಮಂಡಿಯುದ್ದ‌ ನೀರು ನಿಂತಿತ್ತು. ಮಳೆ‌ ನೀರಿನಲ್ಲಿ ತಂಬಾಕು ಸಸಿಗಳು, ಗಿಡಕ್ಕೆ ಸಿಂಪಡಿಸಲು ತಂದಿದ್ದ ರಸಾಯನಿಕ ವಸ್ತುಗಳು ಹಾಳಾಗಿದ್ದವು.

ವಿಜಯನಗರದಲ್ಲಿ ನೆಲಸಮವಾದ ವೀಳ್ಯದೆಲೆ ಬಳ್ಳಿ

ಭಾರಿ ಮಳೆಗೆ ವೀಳ್ಯದೆಲೆ ಬಳ್ಳಿ ತೋಟ ನೆಲಸಮವಾಗಿತ್ತು. ವಿಜಯನಗರದ ಕೂಡ್ಲಿಗಿ ತಾಲೂಕಿನ ಎಚ್. ಮ್ಯಾಸರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ದುಡಿಯುವ ಮಗನಂತೆ ಬೆಳೆದು ನಿಂತಿದ್ದ ಎಲೆಬಳ್ಳಿ ತೋಟ ನೆಲಕಚ್ಚಿತ್ತು. ಮಲ್ಲಮ್ಮ ಗಂಡ ಪೂಜಾರಿ ಮಾರಣ್ಣಗೆ ಸೇರಿದ ಒಂದು ಎಕರೆ ಎಲೆಬಳ್ಳಿ ತೋಟ ನೆಲಕ್ಕುರುಳಿದ್ದನ್ನು ಕಂಡು ಕಣ್ಣೀರುಇಟ್ಟರು.

ಮನೆಗಳಿಗೆ ನುಗ್ಗಿದ ಚರಂಡಿ ನೀರು

ಕೊಡಗು ಜಿಲ್ಲೆಯ ಗುಮ್ಮನ ಕೊಲ್ಲಿ ಚೌಡೇಶ್ವರಿ ಬಡಾವಣೆಯ ತಗ್ಗು ಪ್ರದೇಶಕ್ಕೆ ಚರಂಡಿ ನೀರು ನುಗ್ಗಿತ್ತು. ಚರಂಡಿ ನೀರು ಉಕ್ಕಿ ರಸ್ತೆ ಮೇಲೆ ಹರಿದ ಪರಿಣಾಮ ಮನೆಯಂಗಳಕ್ಕೆ ನೀರು ನುಗ್ಗಿತ್ತು. ಪ್ರವಾಹದಂತೆ ರಸ್ತೆ ತುಂಬೆಲ್ಲ ನೀರು ನಿಂತಿತ್ತು. ಇತ್ತ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಅಜ್ಜನಕಟ್ಟೆಯಲ್ಲಿ 20 ಕ್ಕೂ ಹೆಚ್ಚು ಕುಟುಂಬಗಳು ಜಲದಿಗ್ಬಂಧನದಿಂದ ಓಡಾಡಲು ಪರದಾಡಬೇಕಾಯಿತು. ಇತ್ತ ಶಾಲಾ ಮಕ್ಕಳು ಕೆಸರಲ್ಲಿ ಬೀಳುವ ಆತಂಕದಲ್ಲಿಯೇ ಮನೆಯಿಂದ ಹೊರ ಬರುತ್ತಿದ್ದರು.ಕಾಲೋನಿಯಲ್ಲಿ ಎಮರ್ಜೆನ್ಸಿ ಅಂದರೆ ಆಂಬುಲೆನ್ಸ್ ಕೂಡ ಬರಲು ಆಗುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಯಚೂರು

Dog Attack: ಆಟವಾಡುತ್ತಿದ್ದವಳ ಕಿತ್ತು ತಿಂದ ಬೀದಿ ನಾಯಿ; ರಕ್ತಸ್ರಾವವಾಗಿ 4 ವರ್ಷದ ಬಾಲಕಿ ಸಾವು

Dog Attack : ಬೀದಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಸಿಕ್ಕ ಸಿಕ್ಕವರ ಮೇಲೆ ಎಗರಿ ದಾಳಿ ಮಾಡುತ್ತಿದ್ದ ಬೀದಿ ನಾಯಿಯನ್ನು ಹಿಡಿದು ಗ್ರಾಮಸ್ಥರು ಕೊಂದು ಹಾಕಿದ್ದಾರೆ.

VISTARANEWS.COM


on

By

Dog Attack in raichur
Koo

ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ (Dog Attack) ನಡೆಸಿ ಅಟ್ಟಾಡಿಸಿ ಕಿತ್ತು ತಿಂದಿತ್ತು. ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ನಾಲ್ಕು ವರ್ಷದ ಬಾಲಕಿ ಇದೀಗ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

ರಾಯಚೂರಿನ ಕೊರವಿಹಾಳ ಗ್ರಾಮದಲ್ಲಿ ಬೀದಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಲಾವಣ್ಯ(4) ನಾಯಿ ಕಡಿತಕ್ಕೆ ಬಲಿಯಾದವಳು.

ಕೊರವಿಹಾಳ ಗ್ರಾಮದ ಕೀರಲಿಂಗ ಎಂಬುವವರ ಮಗಳು ಲಾವಣ್ಯ ಕಳೆದ ಶನಿವಾರ ಮೃತಪಟ್ಟಿದ್ದು, ಘಟನೆಯು ತಡವಾಗಿ ಬೆಳಕಿಗೆ ಬಂದಿದೆ. ಲಾವಣ್ಯ ಸೇರಿ ನಾಲ್ಕೈದು ಮಕ್ಕಳು ಮನೆ ಮುಂದೆ ಆಟವಾಡುತ್ತಿದ್ದರು. ಈ ವೇಳೆ ಬೀದಿ ನಾಯಿಯೊಂದು ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ದಾಳಿ ಸಮಯದಲ್ಲಿ ಲಾವಣ್ಯಳ ಕತ್ತಿನ ಹಿಂಭಾಗಕ್ಕೆ ದಾಳಿ ಮಾಡಿದ ನಾಯಿ ಕ್ರೂರವಾಗಿ ಕಚ್ಚಿತ್ತು.

ಕಳೆದ 15 ದಿನಗಳ ಹಿಂದೆ ನಡೆದ ಈ ದಾಳಿಯಲ್ಲಿ ಕೊರವಿಹಾಳ ಗ್ರಾಮದ ಏಳು ಮಕ್ಕಳಿಗೆ ನಾಯಿ ಕಚ್ಚಿತ್ತು. ಇತ್ತ ನಾಯಿ ದಾಳಿಯಿಂದ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಲಾವಣ್ಯಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾವಣ್ಯ ಕಳೆದ ಶನಿವಾರ ಏಕಾಏಕಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: Dogs Attack: ನಾಯಿಗಳು ದಾಳಿ ಮಾಡಲು ಬಂದರೆ ಏನು ಮಾಡಬೇಕು? ಹೇಗೆ ರಕ್ಷಿಸಿಕೊಳ್ಳಬೇಕು?

ರೊಚ್ಚಿಗೆದ್ದು ನಾಯಿಯನ್ನೆ ಕೊಂದರು

ಒಬ್ಬಂಟಿಯಾಗಿ ಓಡಾಡುವರನ್ನು ಕಂಡರೆ ಸಾಕು ರೊಚ್ಚಿಗೆದ್ದ ಬೀದಿ ನಾಯಿಗಳು (Street Dog Attack ) ಅಟ್ಟಾಡಿಸಿಕೊಂಡು ಹೋಗಿ ದಾಳಿ ಮಾಡುತ್ತಿರುವುದು ಕಂಡು ಬಂದಿತ್ತು. ವಯೋವೃದ್ಧರು ಹಾಗೂ ಶಾಲಾ ಮಕ್ಕಳು ಒಬ್ಬೊಬ್ಬರೇ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿತ್ತು. ಸಿಕ್ಕ ಸಿಕ್ಕವರ ಮೇಲೆ ಎರಗಿ ಕಚ್ಚುತ್ತಿದ್ದ ನಾಯಿಯಿಂದ ಇತರೆ ಮಕ್ಕಳ ಪೋಷಕರು ಆತಂಕಕ್ಕೆ ಒಳಗಾಗಿದ್ದರು. ಈ ಎಲ್ಲ ಘಟನೆ ಬಳಿಕ ರೊಚ್ಚಿ ಗೆದ್ದ ಗ್ರಾಮಸ್ಥರು ದಾಳಿ ಮಾಡಿದ್ದ ಬೀದಿ ನಾಯಿಯನ್ನು ಹಿಡಿದು ಕೊಂದು ಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Soldier death: ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್‌ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್‌ ಆಕಸ್ಮಿಕವಾಗಿ ಸಿಡಿದಿದೆ.

VISTARANEWS.COM


on

cisf soldier death raichur
Koo

ರಾಯಚೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಂದೂಕು ಆಕಸ್ಮಿಕವಾಗಿ (Gun misfire) ಸಿಡಿದು ರಾಯಚೂರು (Raichur news) ಮೂಲದ ಯೋಧರೊಬ್ಬರು (Soldier death) ಸಾವಿಗೀಡಾಗಿದ್ದಾರೆ. ಮಾನ್ವಿ ತಾಲೂಕಿನ ಆರ್.ಜಿ ಕ್ಯಾಂಪ್‌ನ ಯೋಧ ರವಿಕಿರಣ್ (37) ಮೃತಪಟ್ಟವರು. ಚೆನ್ನೈ ಏರ್‌ಪೋರ್ಟ್ ಸಮೀಪದ ಕಲ್ಪಾಕ್ಕಂ ಬಳಿ ಈ ದುರ್ಘಟನೆ ನಡೆದಿದೆ.

ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್‌ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್‌ ಆಕಸ್ಮಿಕವಾಗಿ ಸಿಡಿದಿದೆ. ಇಂಡಿಯನ್ ಸ್ಮಾಲ್ ಆರ್ಮ್ಸ್ ಸಿಸ್ಟಮ್ ರೈಫಲ್‌ನ ಬುಲೆಟ್ ರವಿಕಿರಣ್ ಕುತ್ತಿಗೆಯ ಭಾಗಕ್ಕೆ ತಗುಲಿದೆ.

ಚೆನ್ನೈನಲ್ಲಿ ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಾಗಿದೆ. ಇಂದು ಆರ್.ಜಿ ಕ್ಯಾಂಪ್‌ಗೆ ಯೋಧ ರವಿಕಿರಣ್‌ ಪಾರ್ಥಿವ ಶರೀರ ಬರಲಿದೆ.

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (missing case) ಘಟನೆ ದಾವಣೆಗೆರೆಯಲ್ಲಿ ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ಮಂಡ್ಯ: 2023ರ ಡಿಸೆಂಬರ್‌ ತಿಂಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ, ದುಷ್ಕೃತ್ಯಗಳಿಗೆ ಕೇಂದ್ರ ತಾಣವಾಗಿದ್ದ ಮಂಡ್ಯದಲ್ಲಿ ಇನ್ನೂ ಈ ದಂಧೆ ನಿಂತಂತೆ ಕಾಣುತ್ತಿಲ್ಲ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ. ಮೈಸೂರು ಮೂಲದ ಮಹಿಳೆಗೆ ಈಗಾಗಲೇ 2 ಹೆಣ್ಣು ಮಗು ಜನಿಸಿತ್ತು. 3ನೇ ಮಗು ಹೆಣ್ಣು ಮಗು ಎಂದು ತಿಳಿದು ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಆಗಮಿಸಿದ್ದರು. ಇದೀಗ ನಾಲ್ಕು ತಿಂಗಳ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ.

ಗರ್ಭಪಾತ ಮಾಡಿಸಿದ ಆನಂದ್ ಮತ್ತು ಅಶ್ವಿನಿ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಂಪತಿ ಹೊರಗುತ್ತಿಗೆ ನೌಕರರಾಗಿದ್ದಾರೆ. ಅಶ್ವಿನಿ ಡಿ ದರ್ಜೆ ನೌಕರೆಯಾಗಿದ್ದರೆ, ಆನಂದ ಆಂಬ್ಯುಲೆನ್ಸ್ ಚಾಲಕನಾಗಿದ್ದ. ತಾಲುಕು ಆರೋಗ್ಯ ಅಧಿಕಾರಿಗಳ ಕಚೇರಿ ಬಳಿಯ ಮನೆಯಲ್ಲಿ ಕೃತ್ಯ ನಡೆಸುತ್ತಿದ್ದಾಗ ದಂಪತಿಗಳು ಸಿಕ್ಕಿಬಿದ್ದಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಿರುವ ವಸತಿ ಗೃಹದಲ್ಲಿ ಕಳೆದ 9 ವರ್ಷಗಳಿಂದ ದಂಪತಿ ವಾಸವಿದ್ದರು.

ಇದನ್ನೂ ಓದಿ | Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

ಪ್ರಕರಣದ ಹಿನ್ನೆಲೆಯಲ್ಲಿ ಪಾಂಡವಪುರಕ್ಕೆ ಮಂಡ್ಯ ಡಿಸಿ ಕುಮಾರ್, ಎಸ್.ಪಿ. ಯತೀಶ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿ ಭ್ರೂಣ ಹತ್ಯೆ ನಡೆಯುತ್ತಿದ್ದ ಮನೆ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿಯಾದ ದಂಪತಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.

ಭ್ರೂಣಹತ್ಯೆ ದಂಧೆಯನ್ನು ಸಿಐಡಿಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ

ರಾಜ್ಯದಲ್ಲಿ 2023ರ ಡಿಸೆಂಬರ್‌ನಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ (CID Investigation) ರಾಜ್ಯ ಸರ್ಕಾರ ಒಪ್ಪಿಸಿತ್ತು. ರಾಮನಗರ ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ 9ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ಜಾಲ ಇನ್ನಷ್ಟು ಪ್ರದೇಶಗಳಲ್ಲಿ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದೇ ರೀತಿ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ನಡೆಯುತ್ತಿದ್ದ ಜಾಲವನ್ನು ಮಟ್ಟ ಹಾಕುವಲ್ಲಿ ವ್ಯವಸ್ಥೆ ವೈಫಲ್ಯವಾಗಿರುವುದು ಕೂಡ ಬಹಿರಂಗೊಂಡಿತ್ತು. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು.

Continue Reading
Advertisement
road rage bangalore
ಕ್ರೈಂ10 mins ago

Road Rage: ರಾಜಧಾನಿಯಲ್ಲಿ ಹೆಚ್ಚುತ್ತಿದೆ ರೋಡ್‌ ರೇಜ್‌, ಮತ್ತೊಂದು ಹಲ್ಲೆ

Viral Video
ವೈರಲ್ ನ್ಯೂಸ್17 mins ago

Viral Video: ಛೇ…ಇವರೆಂಥಾ ರಾಕ್ಷಸರು! ಕೈ ಕಾಲು ಕಟ್ಟಿ ಥಳಿಸಿ ಯುವಕನ ಹತ್ಯೆ-ವಿಡಿಯೋ ನೋಡಿ

Indian 2
ಸಿನಿಮಾ29 mins ago

Indian 2: ಕಮಲ್‌ ಹಾಸನ್‌ ಅಭಿನಯದ ʼಇಂಡಿಯನ್‌ 2ʼ ಚಿತ್ರದ ಮೊದಲ ಹಾಡು ರಿಲೀಸ್‌; ಕುದುರೆ ಏರಿ ಬಂದ ಉಳಗನಾಯಗನ್‌

dhavala dharini column buddha ಧವಳ ಧಾರಿಣಿ
ಅಂಕಣ52 mins ago

ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

Karnataka Weather
ಕರ್ನಾಟಕ2 hours ago

Karnataka Weather: ಇಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Brain Tumour In Kids
ಆರೋಗ್ಯ2 hours ago

Brain Tumour In Kids: ಮಕ್ಕಳ ಜೀವ ಹಿಂಡುವ ಮೆದುಳಿನ ಟ್ಯೂಮರ್‌ನ ಲಕ್ಷಣಗಳಿವು

Buddha Purnima
ಧಾರ್ಮಿಕ2 hours ago

Buddha Purnima: ಇಂದು ಬುದ್ಧ ಪೂರ್ಣಿಮೆ; ಬುದ್ಧನ ಬೋಧನೆಯನ್ನು ಸ್ಮರಿಸಿಕೊಳ್ಳುವ ದಿನ

Health Benefits Of Okra
ಆರೋಗ್ಯ3 hours ago

Health Benefits Of Okra: ಬೆಂಡೆಕಾಯಿ ತಿನ್ನುತ್ತೀರಿ ನಿಜ; ಅದರಿಂದಾಗುವ ಪ್ರಯೋಜನಗಳೇನು ಗೊತ್ತಿದೆಯಾ?

dina bhavishya read your daily horoscope predictions for May 23 2024
ಭವಿಷ್ಯ3 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

IPL 2024
ಕ್ರೀಡೆ8 hours ago

IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ3 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌