Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ - Vistara News

ರಾಜಕೀಯ

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ (Lok Sabha Election 2024) ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಮೊದಲ ಆದ್ಯತೆಯಾಗಿ ಹಂಚುತ್ತದೆ ಎಂಬ ಆರೋಪವನ್ನು ಮತ್ತೊಮ್ಮೆ ಪ್ರಸ್ತಾಪ ಮಾಡಿದ ಮೋದಿ (Narendra Modi), ನಾನು ಸತ್ಯ ಹೇಳಿದರೆ ಕಾಂಗ್ರೆಸ್‌ಗೆ ಮೆಣಸಿನ ಉರಿ ಬಿದ್ದಂತಾಗುತ್ತದೆ. ಈ ದೇಶದ ಸಂಪತ್ತಿನಲ್ಲಿ ಮುಸಲ್ಮಾನರಿಗೆ ಮೊದಲ ಪಾಲು ಸಿಗಬೇಕು ಎಂದು ಮನಮೋಹನ್‌ ಸಿಂಗ್‌ ತಾವು ಪ್ರಧಾನಿಯಾಗಿದ್ದ ಹೇಳಿದ್ದನ್ನು ನೀವು ಮರೆಯಬೇಡಿ ಎಂದಿದ್ದಾರೆ.

VISTARANEWS.COM


on

Narendra Modi and Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ. ಶೋಭಾ ಯಾತ್ರೆ ನಡೆಸಲೂ ಅಲ್ಲಿ ಅವಕಾಶ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ ಪ್ರಚಾರದ (Lok Sabha Election 2024) ವೇಳೆ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

Modi in Karnataka Congress snatches Rs 4000 under Kisan Samman says PM Narendra Modi

ಕಾಂಗ್ರೆಸ್‌ ಎಂದೂ ಅಭಿವೃದ್ಧಿ ರಾಜಕಾರಣವನ್ನು ಮಾಡಿಯೇ ಇಲ್ಲ. ಅದು ಮಾಡುತ್ತಿರುವುದು ವೋಟ್‌ ಬ್ಯಾಂಕ್‌ ಪಾಲಿಟಿಕ್ಸ್‌, ಒಂದು ಸಮುದಾಯದ ಓಲೈಕೆ ರಾಜಕಾರಣ ಎಂದೂ ಮೋದಿ ಟೀಕಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಮೊದಲ ಆದ್ಯತೆಯಾಗಿ ಹಂಚುತ್ತದೆ ಎಂಬ ಆರೋಪವನ್ನು ಮತ್ತೊಮ್ಮೆ ಪ್ರಸ್ತಾಪ ಮಾಡಿದ ಮೋದಿ, ನಾನು ಸತ್ಯ ಹೇಳಿದರೆ ಕಾಂಗ್ರೆಸ್‌ಗೆ ಮೆಣಸಿನ ಉರಿ ಬಿದ್ದಂತಾಗುತ್ತದೆ. ಈ ದೇಶದ ಸಂಪತ್ತಿನಲ್ಲಿ ಮುಸಲ್ಮಾನರಿಗೆ ಮೊದಲ ಪಾಲು ಸಿಗಬೇಕು ಎಂದು ಮನಮೋಹನ್‌ ಸಿಂಗ್‌ ತಾವು ಪ್ರಧಾನಿಯಾಗಿದ್ದ ಹೇಳಿದ್ದನ್ನು ನೀವು ಮರೆಯಬೇಡಿ. ನಿಮ್ಮ ಕೊರಳಿನ ಮಂಗಳಸೂತ್ರವನ್ನೂ ಅವರು ಬಿಡುವುದಿಲ್ಲ ಎಂದು ಎಚ್ಚರಿಸಿದರು.

Narendra Modi

ದಲಿತರ ಮೀಸಲು ಮುಸಲ್ಮಾನರಿಗೆ

ದಲಿತರು ಮತ್ತು ಆದಿವಾಸಿಗಳ ಮೀಸಲ ಪಾಲನ್ನು ಕಿತ್ತು ಕಾಂಗ್ರೆಸ್‌ ಮುಸಲ್ಮಾನರಿಗೆ ನೀಡಲು ಸದಾ ಪ್ರಯತ್ನಿಸುತ್ತಿರುತ್ತದೆ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರ ಮೀಸಲಿನ ಪಾಲನ್ನು ಕಿತ್ತು ಮುಸಲ್ಮಾನರಿಗೆ ನೀಡಿತ್ತು. ಮುಂದೆ ಅಲ್ಲಿ ಬಿಜೆಪಿ ಸರ್ಕಾರ ಬಂದಾಗ ಅದನ್ನು ರದ್ದುಪಡಿಸಿ ಎಸ್‌ಸಿ, ಎಸ್‌ಟಿಯವರಿಗೆ ನ್ಯಾಯ ದೊರಕಿಸಲಾಯಿತು. ಆಂಧ್ರ ಪ್ರದೇಶದ ಕಾಂಗ್ರೆಸ್‌ ಸರ್ಕಾರ ಕೂಡ ಎಸ್‌ಸಿ, ಎಸ್‌ಟಿ ಮೀಸಲು ಕಡಿಮೆ ಮಾಡಿ ಮುಸಲ್ಮಾನರ ಮೀಸಲು ಹೆಚ್ಚಿಸಲು ನಾಲ್ಕು ಬಾರಿ ವಿಧೇಯಕ ಮಂಡಿಸಿ ಕಾಯಿದೆ ರೂಪಿಸಿತ್ತು. ಆದರೆ ಕೋರ್ಟ್‌ ಮಧ್ಯಪ್ರವೇಶದ ಕಾರಣ ಅದು ಸಾಧ್ಯವಾಗಲಿಲ್ಲ. 2012ರಲ್ಲಿ ಕೇಂದ್ರದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಹೀಗೆಯೇ ಮಾಡಲು ಹೊರಟಿತ್ತು. ಎಸ್‌ಸಿ-ಎಸ್‌ಟಿ ಮತ್ತು ಆಸಿವಾಸಿಗಳಿಗೆ ನಾನು ಯಾವ ಕಾರಣಕ್ಕೂ ಮೀಸಲಿನಲ್ಲಿ ನಷ್ಟ ಮಾಡಲು ಬಿಡುವುದಿಲ್ಲ. ಇದು ಮೋದಿ ಗ್ಯಾರಂಟಿ ಎಂದು ಮೋದಿ ಘೋಷಿಸಿದರು.

ನುಸುಳುಕೋರರಿಗೆ ಸೌಲಭ್ಯ ಕೊಡಬೇಕೆ?

ನುಸುಳುಕೋರರಿಗೆ, ದೇಶದ್ರೋಹಿಗಳಿಗೆ ಕಾಂಗ್ರೆಸ್‌ ಈ ದೇಶದ ಸಂಪತ್ತು ಹಂಚಲು ಬಯಸುತ್ತದೆ ಎಂದು ತೀವ್ರ ವಾಗ್ದಾಳಿ ನಡೆಸಿದ ಮೋದಿ, ನೆರೆಯ ದೇಶದಿಂದ ಪದೇಪದೆ ದಾಳಿಗೆ ಒಳಗಾಗುವ ನಮ್ಮ ವೀರ ಸೈನಿಕರಿಗೆ ಯಾವುದೇ ನೆರವು ನೀಡುತ್ತಿರಲಿಲ್ಲ. ಆದರೆ ನಾವು ನಮ್ಮ ಯೋಧರಿಗೆ ಎಲ್ಲ ರೀತಿಯ ನೆರವು ನೀಡುತ್ತಿದ್ದೇವೆ. ಅವರ ಆತ್ಮಸ್ಥೈರ್ಯ ಹೆಚ್ಚಿಸುತ್ತಿದ್ದೇವೆ ಎಂದರು.
ಕಾಂಗ್ರೆಸ್‌ ಪ್ರಣಾಳಿಕೆಯನ್ನು ನೀವು ಎಚ್ಚರಿಕೆಯಿಂದ ಓದಿ. ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಸಂಪತ್ತಿನ ಸರ್ವೆ ನಡೆಸುತ್ತಾರಂತೆ. ಆ ಬಳಿಕ ಅದನ್ನು ಅಗತ್ಯ ಇದ್ದವರಿಗೆ ಹಂಚುತ್ತಾರಂತೆ. ಆ ಅಗತ್ಯ ಇದ್ದವರು ಯಾರು ಎಂಬುದು ನಿಮಗೆ ಗೊತ್ತಿರಲಿ ಎಂದು ಮೋದಿ ಹೇಳಿದರು.

ಉತ್ತರ ಪ್ರದೇಶದಲ್ಲೂ ಮೋದಿ ಗುಡುಗಿದ್ದರು

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿದ್ದ ಸಂಪತ್ತು ಮರುಹಂಚಿಕೆಯ ವಿಚಾರದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಉತ್ತರ ಪ್ರದೇಶದ ಅಲಗಢದಲ್ಲೂ ಗುಡುಗಿದ್ದರು. ಕಾಂಗ್ರೆಸ್‌ನವರಿಗೆ ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣು ಬಿದ್ದಿದೆ. ಮಾತೆಯರು, ಭಗಿನಿಯರ ಚಿನ್ನವನ್ನು ದೋಚುವ ದುರುದ್ದೇಶ ಇವರದ್ದು ಎಂದು ವಾಗ್ದಾಳಿ ನಡೆಸಿದ್ದರು.

“ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್ ತನ್ನಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ. ಮಹಿಳೆಯರು ಚಿನ್ನವನ್ನು ಆಭರಣಗಳ ರೂಪದಲ್ಲಿ ಧರಿಸಲು ಮಾತ್ರವಲ್ಲ, ಅದನ್ನು ರಸಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಈಗ ಅವರ ಕಣ್ಣು ಮಹಿಳೆಯರ ಮಂಗಳಸೂತ್ರದ ಮೇಲೆ ನೆಟ್ಟಿದೆ. ತಾಯಿ ಮತ್ತು ಸಹೋದರಿಯರ ಚಿನ್ನವನ್ನು ದೋಚುವುದು ಇವರ ಉದ್ದೇಶ. ಹೀಗಾಗಿ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲʼʼ ಎಂದು ಮೋದಿ ಹೇಳಿದ್ದರು.
ʼʼಒಂದು ವೇಳೆ ನೀವು ಹಳ್ಳಿಯಲ್ಲಿ ಪಿತ್ರಾರ್ಜಿತ ಮನೆಯನ್ನು ಹೊಂದಿದ್ದು, ನಗರದಲ್ಲಿ ಮಕ್ಕಳಿಗಾಗಿ ಚಿಕ್ಕ ಫ್ಲ್ಯಾಟ್‌ ಖರೀದಿಸಿದ್ದೀರಿ ಎಂದಿಟ್ಟುಕೊಳ್ಳೋಣ. ಆಗ ಅವರು ಎರಡರ ಪೈಕಿ ಒಂದನ್ನು ತಮ್ಮ ವಶಕ್ಕೆ ಪಡೆದುಕೊಳ್ಳಲಿದ್ದಾರೆ. ಇದು ಮಾವೋವಾದಿ ಮತ್ತು ಕಮ್ಯೂನಿಷ್ಟ್‌ ಮನೋಭಾವದ ಯೋಚನಾ ಲಹರಿ. ಹೀಗೆ ಮಾಡಿಯೇ ಅವರು ಹಲವು ದೇಶಗಳನ್ನು ನಾಶಪಡಿಸಿದ್ದಾರೆ. ಈಗ ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳ ʼಒಂಡಿಯಾʼ ಒಕ್ಕೂಟ ಆ ನಿಯಮವನ್ನು ಭಾರತದಲ್ಲಿ ಜಾರಿಗೊಳಿಸಲು ಮುಂದಾಗಿದೆʼʼ ಎಂದು ಪ್ರಧಾನಮಂತ್ರಿ ದೂರಿದ್ದರು. ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ ಆಸ್ತಿಯನ್ನು ವಿತರಿಸುವುದಾಗಿ ತಿಳಿಸಿತ್ತು. “”ಕಾಂಗ್ರೆಸ್ ಅಧಿಕಾರ ಬಂದರೆ, ಈ ದೇಶದಲ್ಲಿ ಯಾರು ಎಷ್ಟು ಆಸ್ತಿ ಹೊಂದಿದ್ದಾರೆ ಎಂದು ಸಮೀಕ್ಷೆ ಕೈಗೊಳ್ಳಲಾಗುವುದು. ಬಳಿಕ ಈ ಆಸ್ತಿಯನ್ನು ಮರು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದುʼʼ ಎಂದು ರಾಹುಲ್ ಗಾಂಧಿ ಹೇಳಿದ್ದರು. ಈ ಬಗ್ಗೆ ಮೋದಿ ತಮ್ಮ ಚುನಾವಣಾ ಭಾಷಣದಲ್ಲಿ ಪ್ರಸ್ತಾಪಿಸಿ ಕಾಂಗ್ರೆಸನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Lok Sabha Election 2024: ವಿಧಾನ ಪರಿಷತ್‌ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ; ಕಾಂಗ್ರೆಸ್‌ ಸೇರ್ಪಡೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

CT Ravi: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಅವರು ಹೇಗೆ ಹಗರಣ ಎಸಗಿದ್ದಾರೆ ಎಂಬುದರ ಕುರಿತು ಸಿ.ಟಿ.ರವಿ ಅವರು ವಿಸ್ತೃತವಾಗಿ ಹೇಳಿದ್ದಾರೆ. ಪತ್ರದ ಪೂರ್ತಿ ಸಾರಾಂಶ ಇಲ್ಲಿದೆ.

VISTARANEWS.COM


on

CT Ravi
Koo

ಬೆಂಗಳೂರು: ಮುಡಾ ನಿವೇಶನ ಪ್ರಕರಣಕ್ಕೆ (MUDA Site Scam) ಸಂಬಂಧಿಸಿದಂತೆ ಪ್ರತಿಪಕ್ಷಗಳ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸದನದಲ್ಲಿ ಉತ್ತರ ಕೊಡದಿರುವುದು, ಚರ್ಚೆಗೆ ಅವಕಾಶ ನೀಡದಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ, ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ. ರವಿ (CT Ravi) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಕ್ತ ಹಾಗೂ ಸುದೀರ್ಘ ಪತ್ರ ಬರೆಯುವ ಮೂಲಕ ಮುಡಾ ಪ್ರಕರಣವನ್ನು ವಿಸ್ತೃತವಾಗಿ ಬಹಿರಂಗಗೊಳಿಸಿದ್ದಾರೆ. ಹಾಗಾದರೆ, ಸಿ.ಟಿ.ರವಿ ಪತ್ರದಲ್ಲಿ ಏನಿದೆ? ಇಲ್ಲಿದೆ ಸಂಪೂರ್ಣ ಸಾರಾಂಶ.

ಮಾನ್ಯರೆ…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತರಾಯಿತ್ವ ಇರುವ ಆಡಳಿತ ಪಕ್ಷ, ಪ್ರತಿಪಕ್ಷಗಳ ಆರೋಪ, ಪ್ರಶ್ನೆಗಳಿಗೆ ಉತ್ತರಿಸುವ ಅತ್ಯುನ್ನತ ವೇದಿಕೆ ವಿಧಾನ ಮಂಡಲವೇ ಅಲ್ಲವೇ. ಅಲ್ಲಿ ಪ್ರತಿಪಕ್ಷಗಳಿಗೆ ಆರೋಪಿಸಲು, ಪ್ರಶ್ನಿಸಲು ಅವಕಾಶ ಕೊಡದೇ ಸದನದ ಹೊರಗೆ ಬಂದು ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಮತ್ತು ತಮ್ಮ ಸಾರ್ವಜನಿಕ ಬದುಕಿಗೆ ಸಂಬಂಧಿಸಿದಂತೆ ಅರ್ಧ ಸತ್ಯವನ್ನು ಮಾತ್ರ ಹೇಳಿದ್ದೀರಿ. ಪೂರ್ಣ ಸತ್ಯವನ್ನು ಪ್ರಜಾಪ್ರಭುತ್ವದ ಪ್ರಭುಗಳಿಗೆ ಮುಟ್ಟಿಸಲು ಮಾಧ್ಯಮದ ಮೂಲಕ ನಿಮಗೆ ಬಹಿರಂಗ ಪತ್ರ ಬರೆಯುತ್ತಿದ್ದೇನೆ.

ಮುಡಾ ಹಗರಣ

1935ರಲ್ಲಿ ಅಂದಿನ ಮೈಸೂರು ಸರ್ಕಾರ ಕೆಸರೆಗದ್ದೆ ಗ್ರಾಮದ ಸರ್ವೆ ನಂ. 462, 464 ರ ಜಮೀನನ್ನು ಹರಾಜು ಮಾಡುವಾಗ ಪರಿಶಿಷ್ಟ-1 ಎಂದು ಹರಾಜು ಮಾಡಿ ಕೇವಲ ಒಂದು ರೂ. ಕಿಮ್ಮತ್ತು ಕಟ್ಟಿಸಿಕೊಂಡು ಕ್ರಮವಾಗಿ 4 ಎಕರೆ 37 ಗುಂಟೆ ಮತ್ತು 3 ಎಕರೆ 16 ಗುಂಟೆ ಒಟ್ಟು 8 ಎಕರೆಗೂ ಹೆಚ್ಚು ಜಮೀನನ್ನು ಜವರ ಉರುಫ್ ನಿಂಗ ಎಂಬುವವರಿಗೆ ನೀಡಿದೆ. ಪರಿಶಿಷ್ಟ -1 ಅಂದರೆ ವಿಶೇಷವಾಗಿ ಪರಿಶಿಷ್ಟ ಜನಾಂಗಕ್ಕೆ ಕಡಿಮೆ ಕಿಮ್ಮತ್ತಿನಲ್ಲಿ ನೀಡಿರುವುದು ಇದು ಪಿಟಿಸಿಎಲ್ ಆಕ್ಟ್ ವ್ಯಾಪ್ತಿಗೆ ಬರುವುದಿಲ್ಲವೇ?

CT Ravi

1968 ರಲ್ಲಿ ಜವರ ಉರುಫ್ ನಿಂಗ ಅವರ ಮೂರು ಮಕ್ಕಳಲ್ಲಿ ಇಬ್ಬರು ಮಕ್ಕಳಾದ ಮಲ್ಲಯ್ಯ ಮತ್ತು ದೇವರಾಜು ಇವರು 300 ರೂ.ಗಳಿಗೆ ಮತ್ತೊಬ್ಬ ಸಹೋದರ ಮೈಲಾರಯ್ಯನವರಿಗೆ ಸರ್ವೆ ನಂ. 464, 462ರ ಜಮೀನಿನ ಹಕ್ಕು ಖುಲಾಸೆ ಪತ್ರ ನೋಂದಣಿ ಇಲಾಖೆ ಮುಖಾಂತರವೇ ನೋಂದಣಿ ಮಾಡಿಕೊಟ್ಟಿರುವುದು ಸತ್ಯವಲ್ಲವೇ? ಇದಕ್ಕೆ ಸಂಬಂಧಿಸಿದಂತೆ ಎಂ.ಆರ್. ದಾಖಲೆಗಳನ್ನು ಪರಿಶೀಲಿಸಬಹುದಾಗಿದ್ದು ಜಮೀನಿನ ವಾರಸುದಾರರು ಮೈಲಾರಯ್ಯ ಮತ್ತು ಅವರ ಕುಟುಂಬಕ್ಕೆ ಸೇರಿರುವುದಾಗಿತ್ತದೆ.

1992 ರಲ್ಲಿ ಮುಡಾ 4/1 ನೋಟಿಫಿಕೇಶನ್ ಆಗಿದ್ದು ನಂತರ 1997 ರ ಸಾಲಿನಲ್ಲಿ 6/1 ನೋಟಿಫಿಕೇಶನ್ ಆಗಿರುವುದು ಸತ್ಯವಲ್ಲವೇ? ನೀವು ವಿಲೇಜ್ ಮ್ಯಾಪ್ ತೋರಿಸಿ ಈ ಜಮೀನು ಗ್ರಾಮದ ಅಂಚಿನಲ್ಲಿ ಬರುತ್ತದೆ ಎಂದು ಅರ್ಧಸತ್ಯವನ್ನು ಹೇಳಿದ್ದೀರಿ, ಆದರೆ ಲೇಔಟ್ ಪ್ಲಾನ್‌ನಲ್ಲಿ ಲೇಔಟ್‌ನ ಮಧ್ಯದಲ್ಲೇ ಈ ಜಮೀನು ಬಂದರೂ ತಪ್ಪು ಮಾಹಿತಿ ನೀಡಿ ಡಿ ನೋಟಿಫಿಕೇಶನ್ ಮಾಡಲಾಗಿದೆ. ಆ ಸಂದರ್ಭದಲ್ಲಿ ತಾವು ಉಪಮುಖ್ಯಮಂತ್ರಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು ನಿಜವಲ್ಲವೇ? ಆರ್.ಟಿ.ಸಿ. ಸ್ವಾಧೀನದ ಕಾಲಂನಲ್ಲಿ ಸರ್ವೇ ನಂ. 464 ಮುಡಾ ಎಂದಿರುವುದು ಸತ್ಯವಲ್ಲವೇ?

1999ರಿಂದ 2003ರವರೆಗೂ ಮುಡಾದವರು ಇಂಡೀಕರಣ ಮಾಡಿಸಿದ್ದು, ಅದರಲ್ಲಿ ಭೂ ಸ್ವಾಧೀನದಾರರು ಮೂಡಾ ಎಂದೇ ಇರುತ್ತದೆ. 2003 ರಲ್ಲಿ 35 ವರ್ಷಗಳ ಹಿಂದೆ ಮರಣ ಹೊಂದಿದ ಜವರ ಉರುಫ್ ನಿಂಗ ಇವರ ಹೆಸರಿಗೆ ಮರುಸ್ಥಾಪನೆ ಮಾಡಿಸಿ ನಂತರ ದೇವರಾಜುರವರ ಹೆಸರಿಗೆ ವರ್ಗಾವಣೆ ಮಾಡಿಸಿರುತ್ತಾರೆ. 2004 ಮತ್ತು 2005ರ ಸಾಲಿನ ಆರ್.ಟಿ.ಸಿ.ಯಲ್ಲಿ ಮಾತ್ರ ಕ್ರಮವಾಗಿ ದೇವರಾಜ ಮತ್ತು ಮಲ್ಲಿಕಾರ್ಜುನಸ್ವಾಮಿಯವರ ಹೆಸರು
ಇದೆ. ಈ ಸಂದರ್ಭದಲ್ಲಿಯೂ ತಾವು ಎರಡನೇ ಬಾರಿ ಉಪಮುಖ್ಯಮಂತ್ರಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು ನಿಜವಲ್ಲವೇ?

CT Ravi
CT Ravi

2006 ರಿಂದ ನಿರಂತರವಾಗಿ ಇಂದಿನವರೆಗೂ ಆರ್.ಟಿ.ಸಿ.ಯಲ್ಲಿ ಭೂಸ್ವಾಧೀನದಾರರ ಹೆಸರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಎಂದು ಇರುವುದು ಸತ್ಯವಲ್ಲವೇ? 2003 ರಿಂದಲೇ ಈ ಜಾಗದ ನಿವೇಶನ ಹಂಚಿಕೆಯಾಗಿ 12 ಕ್ಕೂ ಹೆಚ್ಚು ಜನರಿಗೆ ನಿವೇಶನ ಹಂಚಿರುವುದು ಸತ್ಯವಲ್ಲವೇ?

ಟೆಂಡರ್‌, ನಕ್ಷೆ ಪರಿಶೀಲಿಸಿ

ದಿನಾಂಕ-27-4-2001ರ ಕಂಟ್ರಾಕ್ಟ್ ಅಗ್ರಿಮೆಂಟ್‌ನಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದೇವನೂರು ಬಡಾವಣೆ ಅಭಿವೃದ್ಧಿ ಪಡಿಸಲು ಎಲ್ & ಟಿ ಕಂಪೆನಿಗೆ ಗುತ್ತಿಗೆ ನೀಡಿದ್ದು, ಟೆಂಡರ್ ಮೊತ್ತ 11,68,86,652/-ರೂಗಳಾಗಿದ್ದು ಕಾಮಗಾರಿ ಪ್ರಾರಂಭದ ದಿನಾಂಕ-18-5-2001 ಆಗಿದ್ದು ಕಾಮಗಾರಿ ಮುಕ್ತಾಯದ ದಿನಾಂಕ -17-5-2003 ಆಗಿರುತ್ತದೆ. ಅಂದರೆ ನಿಮ್ಮ ಭಾವಮೈದುವ ಜಮೀನು ಖರೀದಿಸುವ ಮೊದಲೇ ಸರ್ವೇ ನಂ. 464 ರ 3 ಎಕರೆ 16 ಗುಂಟೆ ಜಮೀನಿನಲ್ಲಿ ರಸ್ತೆ, ಪಾರ್ಕು, ನಿವೇಶನಗಳನ್ನಾಗಿ ಅಭಿವೃದ್ಧಿಪಡಿಸಿರುವುದು ಸತ್ಯವಲ್ಲವೇ? ಇದಕ್ಕೆ ಸಂಬಂಧಿಸಿದಂತೆ ಬಡಾವಣೆ ನಕ್ಷೆ, ಕಾಮಗಾರಿ ಟೆಂಡರ್, ಕಾಮಗಾರಿ ಗುತ್ತಿಗೆ ಪರಿಶೀಲಿಸಬಹುದು.

ನಿಮ್ಮ ಭಾವಮೈದುನ ಖರೀದಿಸುವುದಕ್ಕೆ ಮುಂಚಿತವಾಗಿಯೇ ಅಭಿವೃದ್ಧಿಗೊಂಡು ನಿವೇಶನ ಹಂಚಿಕೆಯಾದಂತಹ ಸರ್ವೆ ನಂ. 464 ರ 3 ಎಕರೆ 16 ಗುಂಟೆ 2004 ಕೃಷಿ ಜಮೀನಾಗಿ ಕಾಣಿಸಿದ್ದು ಹೇಗೆ? ಮತ್ತು ಸ್ಥಳಪರಿಶೀಲಿಸದೆಯೇ ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ಅನ್ಯಕಾಂತ ಮಾಡಲು ಪ್ರಭಾವ ಬೀರಿದ ವ್ಯಕ್ತಿ ತಾವೇ ಅಲ್ಲವೇ? ಆಗಲೂ ಸಹ ತಾವು ಉಪಮುಖ್ಯಮಂತ್ರಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ.

ನಿಮ್ಮ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಈ ಜಮೀನು ಖರೀದಿಸುವ ಸಂದರ್ಭದಲ್ಲಿ ನೀಡಿರುವ ವಿಳಾಸ ಮನೆ ನಂ. 1245, ಟಿ.ಕೆ. ಲೇಔಟ್, 4 ನೇ ಹಂತ, 3 ನೇ ಕ್ರಾಸ್, ಕುವೆಂಪುನಗರ, ಮೈಸೂರು ನಗರ ಈ ವಿಳಾಸವು ತಾವು ಈ ಹಿಂದೆ ವಾಸ ಮಾಡುತ್ತಿದ್ದ ಮನೆಯ ವಿಳಾಸವಲ್ಲವೇ?

ಮೈಲಾರಯ್ಯ ಮತ್ತು ಮಕ್ಕಳು ವಾರಸುದಾರರು ಆಗಿದ್ದರೂ ಸಹ ಎಂ.ಆರ್. ಪರಿಶೀಲಿಸದೇ ನಿಧನ ಹೊಂದಿ 35 ವರ್ಷಕ್ಕೂ ಹೆಚ್ಚುಕಾಲವಾಗಿದ್ದರೂ ಸಹ ಜವರ ಉರುಫ್ ನಿಂಗ ಅವರ ಹೆಸರಿಗೆ ಮರುಸ್ಥಾಪಿಸಿರುವುದು ಮತ್ತು ಜೆ. ದೇವರಾಜು ಹೆಸರಿಗೆ ಖಾತೆ ವರ್ಗಾವಣೆ ಮಾಡಿರುವುದು ನಿಯಮ ಬಾಹಿರವಲ್ಲವೇ? ಜೆ. ದೇವರಾಜುರವರು ಸರ್ಕಾರಿ ಉದ್ಯೋಗಿಯಾಗಿದ್ದರೂ ಸಹ ತಪ್ಪು ಮಾಹಿತಿ ನೀಡಿ ನಾನು ರೈತ, ಈ ಜಮೀನಿನಲ್ಲಿ ತೆಂಗಿನ ಸಸಿಗಳು ಸೇರಿದಂತೆ ಮಾವು ಇತ್ಯಾದಿ ಬೆಳೆಗಳು ಇದ್ದು, ನನಗೆ ಇದನ್ನು ಬಿಟ್ಟರೆ ಇನ್ಯಾವುದೇ ಆದಾಯವಿಲ್ಲವೆಂದು ಸುಳ್ಳು ಮಾಹಿತಿ ನೀಡಿ ತಮ್ಮ ಪ್ರಭಾವದಿಂದ ಡಿ ನೋಟಿಫಿಕೇಶನ್ ಮಾಡಿಸಲಾಗಿದೆ ಎಂಬ ಆರೋಪವಿದೆ.

ಸತ್ಯದ ಅರಿವು ಇರಲಿಲ್ಲವೇ?

2010 ರಲ್ಲಿ ತಮ್ಮ ಧರ್ಮಪತ್ನಿ ಪಾರ್ವತಮ್ಮನ ಹೆಸರಿಗೆ ತಮ್ಮ ಭಾವಮೈದುನ ದಾನಪತ್ರ ಮಾಡುವಾಗಲೇ ಮುಡಾ ಸರ್ವೇ ನಂ 464 ರ 3 ಎಕರೆ 16 ಗುಂಟೆ ಜಾಗವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿದ ಸತ್ಯದ ಅರಿವು ತಮಗಿರಲಿಲ್ಲವೇ?

2013ರ ಚುನಾವಣಾ ಪ್ರಮಾಣ ಪತ್ರದಲ್ಲಿ ನೀವು ಈ ಸತ್ಯವನ್ನು ಮುಚ್ಚಿಟ್ಟಿದ್ದೀರಿ. ಅದಕ್ಕೆ ನೀವು ಕೊಟ್ಟಿರುವ ಉತ್ತರ ಕಣ್ಣಪ್ಪಿನಿಂದ ಹೀಗೆ ಆಗಿದೆ ಎಂದಿದ್ದೀರಿ. ಆರ್.ಪಿ. ಆಕ್ಟ್ ಸೆಕ್ಷನ್ 125 ಎ ಪ್ರಕಾರ ಇದು ಶಿಕ್ಷಾರ್ಹ ಅಪರಾಧವಲ್ಲವೇ? (6 ತಿಂಗಳು ಸಜೆ ಮತ್ತು ದಂಡ) 2014 ರಲ್ಲಿ ನಿಮ್ಮ ಧರ್ಮಪತ್ನಿಯವರು ನನ್ನ ಜಮೀನು ಅತಿಕ್ರಮಣವಾಗಿದೆ ಎಂದು ದೂರು ನೀಡಿದಾಗ ಮುಡಾದವರು ಪರ್ಯಾಯವಾಗಿ ಅಂದಿನ 15 ಲಕ್ಷ ಮಾರುಕಟ್ಟೆ ದರದಂತೆ ಕೊಡುತ್ತೇವೆಂದು ಪತ್ರ ಬರೆದಿದ್ದು ನಿಜವಲ್ಲವೇ?

2010 ರಲ್ಲಿ ನಿಮ್ಮ ಧರ್ಮಪತ್ನಿಯವರಿಗೆ ದಾನಪತ್ರ ಆಗುವಾಗ ಅನ್ಯಕ್ರಾಂತವಾಗಿರುವ ಭೂಮಿಯನ್ನು ತಾವು ತಮ್ಮ 2018 ರ ಚುನಾವಣಾ ಪ್ರಮಾಣಪತ್ರದಲ್ಲಿ ಅನ್ಯಕಾಂತವಾದ ಜಾಗವನ್ನು ಕೃಷಿ ಭೂಮಿ ಹಾಗೂ ಇದರ ಮೌಲ್ಯ 25 ಲಕ್ಷ ರೂ. ಎಂದು ನಮೂದಿಸಲಾಗಿದೆ. 2023 ರ ಚುನಾವಣಾ ಪ್ರಮಾಣಪತ್ರದಲ್ಲಿ ಇದೇ ಜಾಗದ ಮೌಲ್ಯವನ್ನು 8 ಕೋಟಿಯೆಂದು ನಮೂದಿಸಿದ್ದೀರಿ.

ಈಗ ಮುಖ್ಯಮಂತ್ರಿಗಳಾಗಿರುವ ತಾವು ನಿವೇಶನವನ್ನು ವಾಪಸ್ ನೀಡಲು ಕೇಳುತ್ತಿರುವ ಮೌಲ್ಯ 65 ಕೋಟಿ ರೂ.ಗಳು. ಈಗ ನೀವು ಅವರ ಕುಟುಂಬ ಒಡೆದರೂ ಎಂದು ಹೇಳಿದ್ದೀರಿ ಮೈಲಾರಯ್ಯ ಮತ್ತು ಅವರ ಮಕ್ಕಳಿಗೆ ಸೇರಬೇಕಾದ ಆಸ್ತಿಯನ್ನು ಜೆ. ದೇವರಾಜು ಹೆಸರಿಗೆ ಖಾತೆ ಮಾಡಿಸಿ ಅಲ್ಲಿಂದ ನಿಮ್ಮ ಭಾವಮೈದುನ ನಂತರ ನಿಮ್ಮ ಧರ್ಮಪತ್ನಿ ಹೆಸರಿಗೆ ವರ್ಗಾಯಿಸಿಕೊಂಡಿರುವುದು ಮೈಲಾರಯ್ಯರವರ ಕುಟುಂಬದವರಿಗೆ ಮಾಡಿದ ಮೋಸವಲ್ಲವೇ?

UDD 08 TTP 2014, Dated 11-2-2015 ರಂತೆ ಅಧಿಸೂಚನೆ ಹೊರಡಿಸಿ, 50:50ರ ನಿಯಮ ರೂಪಿಸಿದ್ದು ನಿಯಮದಂತೆ ನಿವೇಶನ ಹಂಚಿಕೆ ಮಾಡುವಾಗ ಸರ್ಕಾರದ ಅನುಮತಿ ಪಡೆಯಲಾಗಿದೆಯೇ? ನಿಮ್ಮ ಧರ್ಮಪತ್ನಿ ಪಾರ್ವತಮ್ಮನವರಿಗೆ 50:50 ನಿಯಮದಂತೆ ನಿವೇಶನ ಪಡೆಯಲು ಸರ್ಕಾರದ ಅನುಮತಿ ಕಡ್ಡಾಯವಾಗಿದ್ದು, ಸರ್ಕಾರ ಅನುಮತಿ ನೀಡಿದೆಯೇ? ಇದೇ ರೀತಿ ರಾಜ್ಯದಲ್ಲಿ ಜಮೀನು ಕಳೆದುಕೊಂಡು ಪರಿಹಾರ ಪಡೆಯದೇ ಇರುವ ಪ್ರಕರಣಗಳಿಗೆ 50:50 ನಿಯಮದ ಅನುಪಾತದಂತೆ ನಿವೇಶನ ನೀಡಲಾಗಿದೆಯೇ?

ಸಿಬಿಐ ತನಿಖೆಗೆ ವಹಿಸಿ

ನೀವು ನನ್ನ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲ ಎಂದು ಹೇಳಿದ್ದೀರಿ. ನಮಗೆ ತಿಳಿದಿರುವಂತೆ ಸುಮಾರು 70 ಕ್ಕೂ ಹೆಚ್ಚು ದೂರುಗಳು ಲೋಕಾಯುಕ್ತರ ಮುಂದೆ ನಿಮ್ಮ ಮೇಲೆ ದಾಖಲಾಗಿದೆ. ಈ ತನಿಖೆ ನಿಷ್ಪಕ್ಷಪಾತವಾಗಿ ನಡೆದರೆ ಸತ್ಯಾಸತ್ಯತೆ ಹೊರಗೆ ಬರುತ್ತದೆ.

ಹಿಂದಿನ ತಮ್ಮ ಸರ್ಕಾರದ ಆರಂಭದ ಅವಧಿಯಲ್ಲಿ ಇಬ್ಬರು ಇಂಜಿನಿಯರ್‌ಗಳ ಮನೆಯಲ್ಲಿ ನೂರುಕೋಟಿಗಟ್ಟಲೇ ಹಣ ಸಿಕ್ಕಿದ್ದು, (ಡಿನೋಟಿಫಿಕೇಶನ್ ಸಂದರ್ಭದಲ್ಲಿ) ಹಾಗೂ ಇಂದಿನ ಪ್ರಸ್ತುತ ಸರ್ಕಾರದ ಆರಂಭದಲ್ಲಿಯೇ ಇಬ್ಬರು ಪ್ರಭಾವಿಗಳ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕಿದ್ದು, ಎಸ್‌ಹೆಚ್‌ಡಿಪಿ ಟೆಂಡರ್ ಪ್ಯಾಕೇಜ್ ಮಾಡಿ ನಾಲ್ಕು ಸಾವಿರ ಕೋಟಿ ಟೆಂಡರ್ ನಿಗದಿಪಡಿಸಿ ಬೇಕಾದವರಿಗೆ ನೀಡಿರುವುದು, ಬಿಬಿಎಂಪಿನಲ್ಲಿ ಎರಡು ಸಾವಿರ ಕೋಟಿ ಟೆಂಡರ್ ಪ್ಯಾಕೇಜ್ ಮಾಡಿ ಪರ್ಸೆಂಟೇಜ್ ನಿಗದಿಮಾಡಿರುವುದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ ಬೆಂಗಳೂರು ಎನ್ನುವ ಸಂಘಕ್ಕೆ ಟೆಂಡರ್ ನೀಡಿ ಪರ್ಸೆಂಟೇಜ್ ನಿಗದಿ ಮಾಡಿರುವುದು ತಮ್ಮ ಪ್ರಾಮಾಣಿಕ ಆಡಳಿತ ಮಾದರಿಗಳೇ?

ಪ್ರತಿಯೊಂದು ಆಯಕಟ್ಟಿನ ಹುದ್ದೆಗೂ ದರ ನಿಗದಿ ಮಾಡಿರುವ ಬಗ್ಗೆ ವಿಧಾನಸೌಧದ ಗೋಡೆಗಳೇ ಮಾತನಾಡುತ್ತಿವೆ.
ಅರ್ಕಾವತಿ ಬಡಾವಣೆಯಲ್ಲಿ ನೀಡು ಹೆಸರಿನಲ್ಲಿ ನಿಯಮ ಉಲ್ಲಂಘಿಸಿ 880 ಎಕರೆ ಜಮೀನನ್ನು ಡಿ ನೋಟಿಫಿಕೇಶನ್ ಮಾಡಿರುವುದು ಕಳಂಕವಲ್ಲವೇ? ರೀಡು ಪಿತಾಮಹ ಯಾರೆಂದು ಹೇಳಬಲ್ಲಿರಾ? ಅರ್ಕಾವತಿ ಪ್ರಕರಣದಲ್ಲಿ ನೀವೇ ನೇಮಕ ಮಾಡಿದ ಕೆಂಪಣ್ಣ ಆಯೋಗ ನೀಡು ಡಿ ನೋಟಿಫಿಕೇಶನ್ ಸಂಬಂಧಿಸಿದಂತೆ ವರದಿ ನೀಡಿದ್ದು, ತಾವು ಪ್ರಕರಣದ ಬಗ್ಗೆ ಸದನದ ಮುಂದೆ ಮಂಡಿಸಿ ಅಕ್ರಮ ನಡೆಸಿದವರ ಬಗ್ಗೆ ಕ್ರಮ ಯಾಕೆ ತೆಗೆದುಕೊಂಡಿಲ್ಲ? ತಾವು ಪ್ರಾಮಾಣಿಕರಲ್ಲವೇ ಯಾವಾಗ ಕ್ರಮ ತೆಗೆದುಕೊಳ್ಳುತ್ತೀರಿ?

ತಾವೇ ಭ್ರಷ್ಟರನ್ನು ಬೆಳೆಸಿ ನಿವೃತ್ತಿಯ ನಂತರವು ಕಡುಭ್ರಷ್ಟರಿಗೆ ಉನ್ನತ ಹುದ್ದೆಯನ್ನು ದಯಪಾಲಿಸಿರುವುದು ಸಾರ್ವಜನಿಕ ಜೀವನಕ್ಕೆ ಕಳಂಕವಲ್ಲವೇ? ಅಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರಾಜೇಂದ್ರಕುಮಾರ್ರವರು ನಿರಂತರವಾಗಿ ಸರ್ಕಾರಕ್ಕೆ ಮುಡಾ ಹಗರಣ ಕುರಿತಂತೆ 14 ಪತ್ರಗಳನ್ನು ಬರೆದರೂ ನಿರ್ಲಕ್ಷ ವಹಿಸಿದ್ದು, ಅಕ್ರಮಕ್ಕೆ ಬೆಂಬಲಿಸಿದಂತೆ ಅಲ್ಲವೇ?

ಎಲ್ಲಾ ಅಕ್ರಮಕ್ಕೆ ಫೋನ್ ಮಾಡಿ ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತಿದ್ದ ಪ್ರಭಾವಿ ಚಿಕ್ಕಬಾಸ್ ಯಾರೆಂದು ಹೆಸರು ಹೇಳಬೇಕೇ? ಮುಡಾದಲ್ಲಿ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ತಮ್ಮ ಹೆಸರು ಹಾಗೂ ಪ್ರಭಾವವನ್ನು ಬಳಸಿಕೊಂಡು ಸಾವಿರಾರು ಕೋಟಿ ರೂಪಾಯಿಗಳ ಅಕ್ರಮ ನಡೆಸಿ ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟು ಮಾಡಲಾಗಿದೆ. ಈ ಹಿಂದೆ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅವ್ಯವಹಾರ ಕುರಿತಂತೆ ಸಿಬಿಐ ತನಿಖೆ ನಡೆಸಲಾಗಿದೆ. ಮುಡಾದ ತನಿಖೆಯು ಸಿಬಿಐ ಮೂಲಕ ನಡೆದರೆ ಇದರ ಸತ್ಯಾಸತ್ಯತೆ ಬಹಿರಂಗವಾಗುತ್ತದೆ. ಇದರಲ್ಲಿ ನಿಮ್ಮದೇನು ತಪ್ಪಿಲ್ಲದಿದ್ದರೆ ಎಲ್ಲವೂ ಕ್ರಮಬದ್ದವಾಗಿದ್ದರೆ ಸಿಬಿಐಗೆ ತನಿಖೆಗೆ ವಹಿಸಲು ಭಯ ಏಕೆ?

ಪ್ರತಿಯೊಬ್ಬ ಭ್ರಷ್ಟಚಾರಿಯು ತಾನು ಸಿಕ್ಕಿಹಾಕಿಕೊಳ್ಳುತ್ತೇನೆಂದು ಅನ್ನಿಸಿದಾಗ ಭಯಗೊಳ್ಳುತ್ತಾನೆ. ಭಾವನಾತ್ಮಕ ರಕ್ಷಣೆಯನ್ನು ಜಾತಿಯ ಹೆಸರಿನಲ್ಲಿ ಪಡೆಯುವ ಪ್ರಯತ್ನ ಮಾಡುತ್ತಾನೆ. ತಾವು ಕೂಡ ಈಗ ಅಂತಹದೇ ಪ್ರಯತ್ನದಲ್ಲಿ ಇದ್ದೀರಿ. ನಾನು ಕೂಡ ದಾಖಲೆಯನ್ನು ಪರಿಶೀಲಿಸಿದ್ದೇನೆ. ಮುಡಾದಲ್ಲಿ ಸ್ವಜನಪಕ್ಷಪಾತ, ಭ್ರಷ್ಟಚಾರ, ಅಧಿಕಾರದ ದುರುಪಯೋಗ ನಡೆದಿರುವುದು ಅಂಗೈ ಹುಣ್ಣಿನಷ್ಟು ಸ್ಪಷ್ಟವಾಗಿ ಕಾಣಿಸುತ್ತಿದೆ. ಇನ್ನೊಮ್ಮೆ ವಿಶೇಷ ಅಧಿವೇಶನ ಇದಕ್ಕಾಗಿಯೇ ಕರೆಯಿರಿ. ರಾಜ್ಯದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆಯೇ ಚರ್ಚಿಸೋಣ. ಆಗಾಗ ತಾವು ಹೇಳುತ್ತಿದ್ದ ಮಾತನ್ನು ನೆನಪಿಸಿ ಈ ಪತ್ರವನ್ನು ಪೂರ್ಣಗೊಳಿಸುತ್ತೇನೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು, ಉಪ್ಪು ತಿಂದವನು ನೀರು ಕುಡಿಯಬೇಕು. ಇದು ನಿಮ್ಮದೇ ಮಾತು. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿಯೂ ಇದು ಅನ್ವಯವಾಗಲಿ.

ಸಿ.ಟಿ. ರವಿ….

ಇದನ್ನೂ ಓದಿ: HD Kumaraswamy: ಹಣ ಕಟ್ಟಿ 40 ವರ್ಷ ಆಗಿದೆ, ನನಗಿನ್ನೂ ಮುಡಾ ನಿವೇಶನವನ್ನೇ ಕೊಟ್ಟಿಲ್ಲ: ಎಚ್‌ಡಿಕೆ

Continue Reading

ದೇಶ

Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ

Mamata Banerjee: ನವದೆಹಲಿಯಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊರ ನಡೆದಿದ್ದಾರೆ. ʼʼನನಗೆ ಕೇವಲ ಐದು ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಲಾಯಿತು. ಕೆಲವರು ನನ್ನ ಮುಂದೆ 10-20 ನಿಮಿಷಗಳ ಕಾಲ ಮಾತನಾಡಿದರು” ಎಂದು ಮಮತಾ ಬ್ಯಾನರ್ಜಿ ಹೊರಬಂದ ನಂತರ ಆರೋಪಿಸಿದರು.

VISTARANEWS.COM


on

Mamata Banerjee
Koo

ನವದೆಹಲಿ: ಶನಿವಾರ (ಜುಲೈ 27) ನವದೆಹಲಿಯಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅಧ್ಯಕ್ಷತೆಯ ನೀತಿ ಆಯೋಗ (NITI Aayog)ದ 9ನೇ ಆಡಳಿತ ಮಂಡಳಿ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೊರ ನಡೆದಿದ್ದಾರೆ.

“ರಾಜ್ಯ ಸರ್ಕಾರಗಳ ವಿರುದ್ಧ ಕೇಂದ್ರ ಸರ್ಕಾರ ತಾರತಮ್ಯ ಮಾಡಬಾರದು ಎಂದು ಸಭೆಯಲ್ಲಿ ನಾನು ಹೇಳಿದೆ. ನಾನು ಮಾತನಾಡಲು ಬಯಸಿದ್ದೆ. ಆದರೆ ನನ್ನ ಮೈಕ್ ಮ್ಯೂಟ್ ಆಗಿತ್ತು. ನನಗೆ ಕೇವಲ ಐದು ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಲಾಯಿತು. ಕೆಲವರು ನನ್ನ ಮುಂದೆ 10-20 ನಿಮಿಷಗಳ ಕಾಲ ಮಾತನಾಡಿದರು” ಎಂದು ಮಮತಾ ಬ್ಯಾನರ್ಜಿ ಹೊರಬಂದ ನಂತರ ಸುದ್ದಿಗಾರರಿಗೆ ತಿಳಿಸಿದರು.

“ಪ್ರತಿಪಕ್ಷದಿಂದ ನಾನು ಮಾತ್ರ ಭಾಗವಹಿಸಿದ್ದೆ. ಆದರೆ ನನಗೆ ಮಾತನಾಡಲು ಅವಕಾಶ ನೀಡಲಿಲ್ಲ. ಇದು ಕೇಂದ್ರ ಮಾಡಿದ ಅವಮಾನ” ಎಂದು ಅವರು ದೂರಿದರು. ಪ್ರತಿಪಕ್ಷ ಆಡಳಿತದ ಹಲವು ರಾಜ್ಯಗಳು ಸಭೆಯನ್ನು ಬಹಿಷ್ಕರಿಸುವುದಾಗಿ ಈ ಹಿಂದೆಯೇ ಘೋಷಿಸಿದ್ದವು. ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಮತ್ತು ತೆಲಂಗಾಣದ ರೇವಂತ್ ರೆಡ್ಡಿ ಅವರು 2024ರ ಕೇಂದ್ರ ಬಜೆಟ್‌ನಲ್ಲಿ ತಮ್ಮ ರಾಜ್ಯಗಳ ವಿರುದ್ಧ ಪಕ್ಷಪಾತ ಧೋರಣೆ ತೋರಲಾಗಿದೆ ಎಂದು ಆರೋಪಿಸಿ ಸಭೆಯಲ್ಲಿ ಭಾಗವಹಿಸಲಿಲ್ಲ.

ಇನ್ನು ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ಕೇರಳ ಮುಖ್ಯಮಂತ್ರಿ, ಎಡಪಕ್ಷದ ನಾಯಕ ಪಿಣರಾಯಿ ವಿಜಯನ್ ಮತ್ತು ಆಮ್ ಆದ್ಮಿ ಪಕ್ಷ ನೇತೃತ್ವದ ಪಂಜಾಬ್ ಮತ್ತು ದೆಹಲಿ ಸರ್ಕಾರಗಳು ಸಹ ಸಭೆಯನ್ನು ಬಹಿಷ್ಕರಿಸಿವೆ. ತಮ್ಮ ಧ್ವನಿಯನ್ನು ಸಾಮಾನ್ಯ ವೇದಿಕೆಯಲ್ಲಿ ಎತ್ತಬೇಕು ಎನ್ನುವ ಕಾರಣಕ್ಕೆ ಸಭೆಯಲ್ಲಿ ಭಾಗವಹಿಸುತ್ತಿರುವುದಾಗಿ ಆರಂಭದಲ್ಲಿ ಮಮತಾ ಬ್ಯಾನರ್ಜಿ ತಿಳಿಸಿದ್ದರು. ಆದರೆ ಇದೀಗ ಮಾತನಾಡಲು ಅವಕಾಶವೇ ಸಿಕ್ಕಿಲ್ಲ ಎಂದು ಹೊರ ಬಂದಿದ್ದಾರೆ.

“ನೀತಿ ಆಯೋಗದ ಆಡಳಿತ ಮಂಡಳಿ ಸಭೆಯು ವಿಕಸಿತ್ ಭಾರತ್ @2047ರ ವಿಷನ್ ಡಾಕ್ಯುಮೆಂಟ್‌ನ ಅಪ್ರೋಚ್ ಪೇಪರ್ ಅನ್ನು ಚರ್ಚಿಸಲಿದೆ. ಸಭೆಯು ವಿಕಸಿತ್ ಭಾರತ್ @2047ರ ಗುರಿಯನ್ನು ಸಾಧಿಸುವಲ್ಲಿ ರಾಜ್ಯಗಳ ಪಾತ್ರದ ಕುರಿತು ವಿವರವಾದ ಚರ್ಚೆಗಳನ್ನು ಮಾಡಲಿದೆʼʼ ಎಂದು ಸಭೆಯ ಮುನ್ನ ಸರ್ಕಾರದ ಹೇಳಿಕೆ ನೀಡಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ 3ನೇ ರಾಷ್ಟ್ರೀಯ ಸಮ್ಮೇಳನದ ಶಿಫಾರಸುಗಳ ಬಗ್ಗೆಯೂ ಸಭೆ ಗಮನಹರಿಸಲು ನಿರ್ಧರಿಸಲಾಗಿದೆ ಎಂದೂ ತಿಳಿಸಿತ್ತು.

ಇದನ್ನೂ ಓದಿ: DK Shivakumar: ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ. ಶಿವಕುಮಾರ್

ಸಮ್ಮೇಳನದಲ್ಲಿ ಐದು ಪ್ರಮುಖ ವಿಷಯಗಳ ಬಗ್ಗೆ ಗಮನ ಕೇಂದ್ರೀಕರಿಸಿದೆ- ಕುಡಿಯುವ ನೀರು: ಪ್ರಮಾಣ ಮತ್ತು ಗುಣಮಟ್ಟ, ವಿದ್ಯುತ್: ಗುಣಮಟ್ಟ ಮತ್ತು ವಿಶ್ವಾಸಾರ್ಹತೆ, ಆರೋಗ್ಯ: ಕೈಗೆಟಕುವಿಕೆ ಮತ್ತು ಆರೈಕೆಯ ಗುಣಮಟ್ಟ, ಶಾಲಾ ಶಿಕ್ಷಣ: ಕೈಗೆಟಕುವಿಕೆ ಮತ್ತು ಗುಣಮಟ್ಟ ಮತ್ತು ಭೂಮಿ ಮತ್ತು ಆಸ್ತಿ: ಪ್ರವೇಶ, ಡಿಜಿಟಲೀಕರಣ, ನೋಂದಣಿ. ಜತೆಗೆ ಸ್ವಾತಂತ್ರ್ಯದ 100ನೇ ವರ್ಷವಾದ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಸವನ್ನಾಗಿಸುವ ಗುರಿ ಹೊಂದಲಾಗಿದೆ.

Continue Reading

ರಾಜಕೀಯ

HD Kumaraswamy: ಹಣ ಕಟ್ಟಿ 40 ವರ್ಷ ಆಗಿದೆ, ನನಗಿನ್ನೂ ಮುಡಾ ನಿವೇಶನವನ್ನೇ ಕೊಟ್ಟಿಲ್ಲ: ಎಚ್‌ಡಿಕೆ

HD Kumaraswamy: ಮುಡಾದಲ್ಲಿ ಕುಮಾರಸ್ವಾಮಿ ಅವರದ್ದೂ ಸೈಟಿದೆ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ನಾನು ಪ್ರಾಮಾಣಿಕ ಎಂದು ಎಷ್ಟು ದಿನ ಹೇಳಿಕೊಳ್ಳುತ್ತೀರಿ? ಇದು ಮುಗಿದ ಆಟ ಸಿದ್ದರಾಮಯ್ಯನವರೇ ಎಂದು ಕಿಡಿಕಾರಿದ್ದಾರೆ.

VISTARANEWS.COM


on

HD Kumaraswamy
Koo

ನವದೆಹಲಿ: ಮುಡಾದಲ್ಲಿ ತಮಗೂ ನಿವೇಶನವಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ನೀಡಿರುವ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಮೈಸೂರಿನಲ್ಲಿ ನನಗೆ ನಿವೇಶನ ಕೊಟ್ಟಿದ್ದಾರೆ ಎಂದಿದ್ದಾರೆ. ಆದರೆ, ಈವರೆಗೆ ಆ ನಿವೇಶನವನ್ನೇ ನನಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 2006ರಲ್ಲಿಯೇ ನಾನು ಸಿಎಂ ಆಗಿದ್ದೆ. ಅಧಿಕಾರ ದುರುಪಯೋಗ ಮಾಡಿಕೊಳ್ಳಬೇಕು ಎಂದು ನನಗೆ ಅನ್ನಿಸಿದಿದ್ದರೆ ಆಗಲೇ ಆ ನಿವೇಶನವನ್ನು ನನ್ನ ಹೆಸರಿಗೆ ಬರೆಸಿಕೊಳ್ಳಬಹುದಾಗಿತ್ತು. ಆದರೆ, ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಳ್ಳಲಿಲ್ಲ ಎಂದು ಹೇಳಿದರು.

ಈ ನಿವೇಶನದ ಬಗ್ಗೆ ರಾಮಕೃಷ್ಣ ಹೆಗಡೆ ಅವರ ಕಾಲದಿಂದಲೂ ತನಿಖೆ ನಡೆಯುತ್ತಿದೆ. ಲೋಕಾಯುಕ್ತ, ಸಿಐಡಿ ತನಿಖೆಗಳು ನಡೆದು ಹೋಗಿವೆ. 500 ನಿವೇಶನಗಳನ್ನು ದೇವೇಗೌಡರು ಪಡೆದುಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗಿತ್ತು. ಕೊನೆಗೆ ತನಿಖೆಯಲ್ಲಿ ಒಂದು ನಿವೇಶನವನ್ನಷ್ಟೇ ಪಡೆದುಕೊಂಡಿದ್ದಾರೆ ಎಂದು ಗೊತ್ತಾಯಿತು ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ | MUDA site scandal: ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್‌ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ

2012ರಲ್ಲಿ ನಾನು ಮುಡಾಕ್ಕೆ ಪತ್ರ ಬರೆದು ಹಂಚಿಕೆ ಮಾಡಿರುವ ನಿವೇಶನ ಕೊಡಿ ಎಂದು ಮನವಿ ಮಾಡಿದ್ದೆ. 2017ರಲ್ಲಿ ಮತ್ತೊಂದು ಪತ್ರವನ್ನೂ ಬರೆದಿದ್ದೆ. ನಾನು ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ. ಅಂಥ ಆಲೋಚನೆಯನ್ನೂ ಮಾಡಲಿಲ್ಲ. ನಾನೆಂದೂ ಸಿದ್ದರಾಮಯ್ಯ ಅವರಂತೆ ಅಧಿಕಾರ ದುರುಪಯೋಗ ಮಾಡಿಕೊಳ್ಳಲಿಲ್ಲ ಎಂದು ಟಾಂಗ್‌ ನೀಡಿದರು.

40 ವರ್ಷಗಳಾದ್ರೂ ನಿವೇಶನ ಕೊಟ್ಟಿಲ್ಲ

ಈ ನಿವೇಶನವನ್ನು ಅವರು ನನಗೆ ಧರ್ಮಕ್ಕೆ ಕೊಡುತ್ತಿಲ್ಲ. ನಾನು 34,000 ರೂ. ಹಣ ಕಟ್ಟಿದ್ದೇನೆ. ಆ ಹಣ ಕಟ್ಟಿ 40 ವರ್ಷಗಳೇ ಆಗಿದೆ. ಇದು ನಿಜವಾದ ಪರಿಸ್ಥಿತಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಇವತ್ತು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆರ್ಭಟ ನೋಡಿದೆ. ಈ ವ್ಯಕ್ತಿ ಯಾವ ಹಿನ್ನೆಲೆಯಿಂದ ಬಂದಿರುವುದು ಎನ್ನುವುದು ನನಗೆ ಗೊತ್ತಿದೆ. ಬೆಂಗಳೂರು ನಗರದಲ್ಲಿ ಈ ಮಹಾಶಯ ಏನೆಲ್ಲಾ, ಯಾವೆಲ್ಲಾ ಭ್ರಷ್ಟಾಚಾರ ಎಸಗಿದ್ದಾರೆ ಎಂದು ತೆಗೆದರೆ ಈ ವ್ಯಕ್ತಿಯ ಅಸಲಿ ಬಂಡವಾಳ ಗೊತ್ತಾಗುತ್ತದೆ. ಬೆಂಗಳೂರು ಸುತ್ತಮುತ್ತಾ ಮಾಡಿದ್ದಾರಲ್ಲ.. ಅದನ್ನಷ್ಟೇ ತೆಗೆದಿಟ್ಟರೆ ಸಾಕು ಎಂದು ಕುಮಾರಸ್ವಾಮಿ ಅವರು ಭೈರತಿ ಸುರೇಶ್‌ಗೆ ತಿರುಗೇಟು ಕೊಟ್ಟರು.

ನನ್ನ ಹೆಸರಿನಲ್ಲಿರುವ ನಿವೇಶನವನ್ನು ಬೇಕಿದ್ದರೆ ನೀವೇ ನಿಮ್ಮ ಮಗನಿಗೋ ಅಥವಾ ನಿಮ್ಮ ಧರ್ಮಪತ್ನಿ ಹೆಸರಿಗೋ ಅಥವಾ ನಿಮ್ಮ ಪರಮಾಪ್ತ ಭೈರತಿ ಸುರೇಶ್ ಹೆಸರಿಗೋ ಇಲ್ಲವೇ ಯಾವುದಾದರೂ ಅನಾಥಾಶ್ರಮಕ್ಕೋ ಬರೆದುಕೊಟ್ಟುಬಿಡಿ. ನನಗೆ ಯಾವ ತಕರಾರೂ ಇಲ್ಲ ಎಂದು ತಿಳಿಸಿದರು.

ನಿಂಗಪ್ಪ ಸ್ವರ್ಗದಿಂದ ಬಂದು ಸಿದ್ದರಾಮಯ್ಯಗೆ ಅರ್ಜಿ ಕೊಟ್ಟರಾ?

16/2 ಮಾಡಿದ ಮೇಲೆ ಪುನಾ ನಿವೇಶನವನ್ನು ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ನಿಂಗಪ್ಪ ಎನ್ನುವ ವ್ಯಕ್ತಿ ಜಮೀನನ್ನು ಡಿನೋಟಿಫಿಕೇಷನ್ ಮಾಡಿ ಎಂದು ಸ್ವರ್ಗದಿಂದ ಇಳಿದುಬಂದು ನಿಮಗೆ ಅರ್ಜಿ ಕೊಟ್ಟಿದ್ದರಾ ಸಿದ್ದರಾಮಯ್ಯ ಅವರೇ? ನಿಂಗಪ್ಪ ಸತ್ತ ಮೇಲೆ ಡಿನೋಟಿಫಿಕೇಶನ್ ಮಾಡಲು ಅರ್ಜಿ ಸಲ್ಲಿಸಲಾಗಿದೆ. 2001, 2003ರಲ್ಲಿ‌ ಸಿಎಂ ಪತ್ನಿಗೆ ಮೈಸೂರಿನ ವಿಜಯನಗರದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. 2005ರಲ್ಲಿ ಕೃಷಿಭೂಮಿ ಎಂದಿದ್ದ ಭೂಮಿಯನ್ನು ಇವರು ಹೇಗೆ ಖರೀದಿ ಮಾಡಿದರು? ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ಮಾಡದೆಯೇ ಭೂ ಪರಿವರ್ತನೆ ಮಾಡಿಕೊಟ್ಟರು. ಅದು ಹೇಗೆ ಮಾಡಿಕೊಟ್ಟರು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಆಗಲೂ ಈ ರಾಜ್ಯದ ಉಪ ಮುಖ್ಯಮಂತ್ರಿ ಆಗಿದ್ದರು. ಆಗ ಈ ಮಹಾನುಭಾವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು. ಈ ಹಗರಣವನ್ನು ಬಯಲು ಮಾಡಿದ್ದು, ಎಲ್ಲಾ ದಾಖಲೆಗಳನ್ನು ಹೊರಗೆ ಬಿಟ್ಟಿದ್ದು ಮುಖ್ಯಮಂತ್ರಿ ಕುರ್ಚಿಯ ಟವೆಲ್ ಹಾಕಿದ ಮಹಾಶಯರು ಎಂದು ಯಾರ ಹೆಸರನ್ನೂ ಹೇಳದೆ ಕಾಂಗ್ರೆಸ್‌ ಪಕ್ಷದ ಒಳರಾಜಕೀಯದ ಬಗ್ಗೆ ಸ್ಫೋಟಕ ವಿಷಯವನ್ನು ಬಹಿರಂಗ ಮಾಡಿದರು.

ನಿಮ್ಮವರೇ ಕೊಟ್ಟ ದಾಖಲೆಗಳನ್ನು ವಿಪಕ್ಷಗಳು ಚರ್ಚೆ ಮಾಡತ್ತಿವೆ. ಸರ್ಕಾರಿ ಭೂಮಿಯನ್ನು ನೀವೇ ಕಬಳಿಕೆ ಮಾಡಿ, ಈಗ 64 ಕೋಟಿ ಪರಿಹಾರ ಕೊಡಿ ಎಂದು ಯಾವ ನೈತಿಕತೆ ಮೇಲೆ ಕೇಳುತ್ತಿದ್ದೀರಿ ಸಿದ್ದರಾಮಯ್ಯನವರೇ..? ಇಂತಹ ಆರೋಪ ಹೊತ್ತು ಯಾವ ನೈತಿಕತೆ ಇಟ್ಟುಕೊಂಡು ಸಿಎಂ ಕುರ್ಚಿಯಲ್ಲಿ ಕೂತಿದ್ದೀರಿ ಸಿದ್ದರಾಮಯ್ಯನವರೇ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ವಾಲ್ಮಿಕಿ ಹಗರಣ ಸಿದ್ದರಾಮಯ್ಯ ಸರ್ಕಾರದ ಮಾನವನ್ನು ಬೀದಿಯಲ್ಲಿ ಹರಾಜು ಹಾಕಿದೆ. ಹಗರಣ ನಡೆದಿರುವ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಹಾಗಾದರೆ ಹಗರಣದ ಜವಾಬ್ದಾರಿ ಯಾರು ಹೊರಬೇಕು? ಈ ಹಗರಣವನ್ನು ಮಾಡಿರುವವರು ಅಯೋಗ್ಯ ಅಧಿಕಾರಿಗಳು ಎಂದು ಹೇಳಿಕೆ ನೀಡಿದ್ದಾರೆ. ಅಂತಹ ಅಯೋಗ್ಯ ಅಧಿಕಾರಿಗಳನ್ನು ಇಟ್ಟುಕೊಂಡವರನ್ನು ಏನೆಂದು ಕರೆಯಬೇಕು ಎಂದು ಕುಮಾರಸ್ವಾಮಿ ಅವರು ಡಿಸಿಎಂ ಡಿಕೆಶಿ ಮೇಲೆ ಚಾಟಿ ಬೀಸಿದರು.

ಅಧಿಕಾರಿ ಕಲ್ಲೇಶರನ್ನು ಅಮಾನತು ಮಾಡಿದ್ದೀರಿ. ಅವರ ಕೈಯಲ್ಲಿ ಜಾರಿ ನಿರ್ದೇಶನಾಲಯದ ವಿರುದ್ಧ ಪೋಲಿಸರಿಗೆ ದೂರು ಕೊಡಿಸಿ ಎಫ್‌ ಐಆರ್‌ ಮಾಡಿಸಿದ್ದೀರಿ. ಅದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ನಿಮಗೆ ಯಾರು ಈ ಐಡಿಯಾ ಕೊಟ್ಟರೋ ಗೊತ್ತಿಲ್ಲ, ಆದರೆ; ಅವರು ಸರಿಯಾದ ಐಡಿಯಾನಾದರೂ ನಿಮಗೆ ಕೊಡಬೇಕಿತ್ತು ಎಂದು ಸಿಎಂಗೆ ಕುಟುಕಿದರು ಕೇಂದ್ರ ಸಚಿವರು.

ಎಂಟು ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ತೆರಿಗೆ ಪಾಲು, ರಾಜ್ಯದ ಹಣ ಬಿಡುಗಡೆ ಮಾಡಿ ಎಂದು ಕೇಳಿದ್ದೇನೆ. ಈ ಬಗ್ಗೆ ಕೇಂದ್ರ ಸರ್ಕಾರ ಉತ್ತರ ಕೊಟ್ಟಿಲ್ಲ ಎಂದು ಹೇಳಿದ್ದೀರಲ್ಲ ಸಿದ್ದರಾಮಯ್ಯನವರೇ, ನಾನು ಪ್ರಾಮಾಣಿಕ ಎಂದು ಎಷ್ಟು ದಿನ ಹೇಳಿಕೊಳ್ಳುತ್ತೀರಿ. ಇದು ಮುಗಿದ ಆಟ ಸಿದ್ದರಾಮಯ್ಯನವರೇ… ಕಾಂಗ್ರೆಸ್‌ನವರು ಮೈಸೂರಿಂದ ಬೆಂಗಳೂರಿಗಲ್ಲ, ದೆಹಲಿಗೆ ಪಾದಯಾತ್ರೆ ಬರಲಿ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಇದನ್ನೂ ಓದಿ | Bengaluru South District: ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; ಹೆಸರು ಬದಲಾವಣೆಗೆ ಸಚಿವ ಸಂಪುಟ ಒಪ್ಪಿಗೆ

ಮುಡಾ ಹಗರಣದ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಜಂಟಿಯಾಗಿ ಹೋರಾಟ ನಡೆಸಲಿವೆ. ಈ ಬಗ್ಗೆ ರೂಪರೇಷೆ ಸಿದ್ಧ ಮಾಡಲು ಎನ್‌ಡಿಎ ಸಭೆ ಕರೆದಿದ್ದೇವೆ. ಆ ಸಭೆಯಲ್ಲಿ ಮುಂದಿನ ಹೋರಾಟ ಮತ್ತು ಪಾದಯಾತ್ರೆ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹಾಗೂ ಸಂಸದ ಮಲ್ಲೇಶ್ ಬಾಬು ಅವರು ಸಚಿವರ ಜತೆಯಲ್ಲಿ ಇದ್ದರು.

Continue Reading

ಕರ್ನಾಟಕ

B.S.Yediyurappa: ಯಡಿಯೂರಪ್ಪಗೆ ಮತ್ತೆ ಬಿಗ್‌ ರಿಲೀಫ್‌; ಪೋಕ್ಸೊ ಕೇಸ್‌ನಲ್ಲಿ ಬಂಧಿಸದಂತೆ ಹೈಕೋರ್ಟ್‌ ಸೂಚನೆ

B.S.Yediyurappa: ಪೋಕ್ಸೊ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮತ್ತು ತನಿಖೆ ರದ್ದುಪಡಿಸುವಂತೆ ಕೋರಿ ಬಿಎಸ್‌ವೈ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈರನ್ನು ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ.

VISTARANEWS.COM


on

B.S.Yediyurappa
Koo

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B.S.Yediyurappa) ಅವರಿಗೆ ಮತ್ತೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಯನ್ನು ಬಂಧಿಸದಂತೆ ಸಿಐಡಿಗೆ ಹೈಕೋರ್ಟ್‌ ಸೂಚನೆ ನೀಡಿದೆ. ಜತೆಗೆ ಪೋಕ್ಸೋ ವಿಶೇಷ ಕೋರ್ಟ್‌ಗೆ ಹಾಜರಾಗುವುದಕ್ಕೆ ನೀಡಿದ್ದ ವಿನಾಯಿತಿಯನ್ನು ಕೋರ್ಟ್ ಮುಂದುವರಿಸಿದೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮತ್ತು ತನಿಖೆ ರದ್ದುಪಡಿಸುವಂತೆ ಕೋರಿ ಬಿಎಸ್‌ವೈ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈರನ್ನು ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ.

ಇದನ್ನೂ ಓದಿ | Martin Movie: ವಿಎಫ್‌ಎಕ್ಸ್‌ಗೆ 50 ಲಕ್ಷ ಕಮಿಷನ್‌ ಆರೋಪ; ʻಮಾರ್ಟಿನ್‌ʼ ನಿರ್ದೇಶಕ ಎ.ಪಿ. ಅರ್ಜುನ್‌ಗೆ ಸಂಕಷ್ಟ!

ಪೋಕ್ಸೊ ಪ್ರಕರಣಕ್ಕೆ (POCSO Case) ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಹೀಗಾಗಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿತ್ತು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ದರ್ಶನ್‌ಗಾಗಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ವಿಜಯಲಕ್ಷ್ಮಿ!

Actor Darshan wife Vijayalakshmi Darshan Visit Kollur Temple
Actor Darshan wife Vijayalakshmi Darshan Visit Kollur Temple

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ಇದೀಗ ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ.

ಇದನ್ನೂ ಓದಿ | Koppala News: ಗಾಯಗೊಂಡ ರಣಹದ್ದಿಗೆ ಆರೈಕೆ ಮೂಲಕ ಮಾನವೀಯತೆ ತೋರಿದ ಸ್ನೇಕ್ ಪುಟ್ಟು

ನರಸಿಂಹ ಅಡಿಗ ನೇತೃತ್ವದಲ್ಲಿ ನವ ಚಂಡಿಕಾ ಹೋಮ, ಪಾರಾಯಣ ನಡೆದಿದೆ. ದರ್ಶನ್ ಬಂಧನ ಮುಕ್ತಿಗಾಗಿ ವಿಜಯಲಕ್ಷ್ಮೀ ಪ್ರಾರ್ಥನೆ ಮಾಡಿದ್ದಾರೆ. ಜುಲೈ 24ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್ ಅವರು ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ ಮಾಡಿದ್ರು. ಮಗನ ಸ್ಕೂಲ್ ಸೀಟ್ ವಿಚಾರಕ್ಕೆ ಚರ್ಚೆ ಮಾಡಿದ್ರು ಎನ್ನಲಾಗ್ತಿದೆ. ದರ್ಶನ್ ವಿಚಾರವಾಗಿ ಮಾತುಕತೆ ನಡೆದಿಲ್ಲ ಎನ್ನಲಾಗ್ತಿದೆ.

Continue Reading
Advertisement
Team India Coach
ಪ್ರಮುಖ ಸುದ್ದಿ10 mins ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Infiltration
ದೇಶ19 mins ago

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ICW 2024
ಫ್ಯಾಷನ್50 mins ago

ICW 2024: ಮುಂಬರುವ ವೆಡ್ಡಿಂಗ್‌ ಸೀಸನ್‌ ಮೆನ್ಸ್ ವೇರ್‌ ಅನಾವರಣಗೊಳಿಸಿದ ಇಂಡಿಯಾ ಕೌಚರ್‌ ವೀಕ್‌ 2024

Indian Army
ದೇಶ1 hour ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ2 hours ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ2 hours ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Aishwarya Rai Bachchan
ಸಿನಿಮಾ2 hours ago

Aishwarya Rai Bachchan: ಐಶ್ವರ್ಯಾ ರೈ ಧರಿಸಿರುವ V ಆಕಾರದ ಈ ವಜ್ರದುಂಗುರದ ವಿಶೇಷತೆ ಗೊತ್ತೆ?

Mukesh Ambani
ವಾಣಿಜ್ಯ2 hours ago

Mukesh Ambani: ಮುಕೇಶ್ ಅಂಬಾನಿಯ ಒಂದು ದಿನದ ಆದಾಯ 163 ಕೋಟಿ ರೂ! ಒಟ್ಟು ಸಂಪತ್ತೆಷ್ಟು?

Minister Dinesh Gundurao drives for the 5th Kannada Sahitya Sammelana in Bengaluru
ಬೆಂಗಳೂರು3 hours ago

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

The woman shows gray hair on her head. Hair with fragments of gray hair, hair roots requiring dyeing
ಆರೋಗ್ಯ3 hours ago

Ways to Prevent Gray Hair: 30 ದಾಟುವ ಮೊದಲೇ ಕೂದಲು ಬೆಳ್ಳಗಾಗುತ್ತಿದೆಯೇ? ಇದಕ್ಕಿದೆ ಸರಳ ಪರಿಹಾರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ7 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ8 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌