Lok Sabha Election 2024: ಬಿಜೆಪಿ, ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳು ಯಾವುವು? ಇಲ್ಲಿದೆ ಅಂತಿಮ ಚಿತ್ರಣ - Vistara News

ರಾಜಕೀಯ

Lok Sabha Election 2024: ಬಿಜೆಪಿ, ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳು ಯಾವುವು? ಇಲ್ಲಿದೆ ಅಂತಿಮ ಚಿತ್ರಣ

Lok Sabha Election 2024: ಏಕತೆಯನ್ನು ತೋರ್ಪಡಿಸಲು ದೇಶದ ಎರಡು ಬಲಿಷ್ಠ ಪಕ್ಷಗಳು ತನ್ನದೇ ಆದ ಮೈತ್ರಿ ಕೂಟವನ್ನು ರಚಿಸಿಕೊಂಡಿದೆ. ಈ ಬಾರಿ ಲೋಕಸಭೆ ಚುನಾವಣೆ- 2024ಕ್ಕೆ ಮುಂಚಿತವಾಗಿ ಎನ್ ಡಿಎ ಮತ್ತು ಕಾಂಗ್ರೆಸ್ ತನ್ನ ಸಾಮರ್ಥ್ಯ ತೋರ್ಪಡಿಸಲು ಮೈತ್ರಿಗೆ ಹೆಚ್ಚಿನ ಗಮನ ಹರಿಸಿ ಶಕ್ತಿ ಪ್ರದರ್ಶನ ಮಾಡಿವೆ. ಬಿಜೆಪಿ ಮತ್ತು ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳ ಪಟ್ಟಿ ಇಲ್ಲಿದೆ.

VISTARANEWS.COM


on

Lok Sabha Election-2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಲೋಕಸಭಾ ಚುನಾವಣೆ 2024ರಲ್ಲಿ (Lok Sabha Election 2024) ಈ ಬಾರಿ ದೇಶದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಪರಸ್ಪರ ಹೋರಾಡುತ್ತಿದ್ದು, ಸಣ್ಣ ಪಕ್ಷಗಳನ್ನು ತನ್ನ ತೆಕ್ಕೆಯೊಳಗೆ ಸೇರಿಸಿಕೊಂಡಿವೆ. ಹಿಂದಿನ ಚುನಾವಣೆಯಲ್ಲಿ ಎರಡು ಬಾರಿ ಅಧಿಕಾರಕ್ಕೆ ಏರಿರುವ ಎನ್‌ಡಿಎಯನ್ನು (NDA) ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ (congress) ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟವನ್ನು (India alliance) ರಚಿಸಲಾಗಿದೆ. ಅದೇ ರೀತಿ ಎನ್‌ಡಿಎ ಕೂಡ ತನ್ನ ಸಾಮರ್ಥ್ಯವನ್ನು ವೃದ್ಧಿಸಲು ಕೆಲವು ಪಕ್ಷಗಳನ್ನು ತನ್ನೊಳಗೆ ಸೇರಿಸಿಕೊಂಡಿದೆ.

ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ ರಚನೆಯಾದ ಬಳಿಕ ಎನ್‌ಡಿಎ ಕೂಡ ಹಳೆಯ ಮತ್ತು ಹೊಸ ಘಟಕಗಳನ್ನು ಸೇರಿಸಿ ತನ್ನ ಸಾಮರ್ಥ್ಯವನ್ನು ವೃದ್ಧಿಸಿಕೊಂಡಿದೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ನವ ಭಾರತವನ್ನು (N-New India), ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ( D-Developed Nation) ಮಾಡಲು ಬಯಸುವ ಆಕಾಂಕ್ಷೆಯುಳ್ಳ ಭಾರತದ ಜನರು (A-Aspiration of People of India) ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂಡಿಯಾ ಮೈತ್ರಿ ಕೂಟ ರಚನೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಘೋಷಿದ್ದರು.


ಇದನ್ನೂ ಓದಿ: CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ


ಇಂಡಿಯಾ

2024ರ ಲೋಕಸಭೆ ಚುನಾವಣೆಗಾಗಿ ವಿರೋಧ ಪಕ್ಷಗಳು ಒಗ್ಗೂಡಿ ರಚಿಸಿದ ಮೈತ್ರಿ ಕೂಟ. 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು, ಸಂವಿಧಾನವನ್ನು ರಕ್ಷಿಸುವುದು, ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯನ್ನು ಉತ್ತೇಜಿಸುವುದು ಮತ್ತು ಜಾತ್ಯತೀತತೆಯನ್ನು ಎತ್ತಿಹಿಡಿಯುವುದು ಇದರ ಮುಖ್ಯ ಉದ್ದೇಶ ಎಂದು ಘೋಷಿಸಿದೆ.

ಇಂಡಿಯಾ ಒಕ್ಕೂಟದಲ್ಲಿವೆ 26 ಪಕ್ಷಗಳು

ಕಾಂಗ್ರೆಸ್ ನೇತೃತ್ವದಲ್ಲಿ 26 ವಿರೋಧ ಪಕ್ಷಗಳು ಒಗ್ಗೂಡಿವೆ. ಅವುಗಳೆಂದರೆ:

  • – ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ)
  • – ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)
  • – ಆಮ್ ಆದ್ಮಿ ಪಕ್ಷ (ಎಎಪಿ)
  • – ರಾಷ್ಟ್ರೀಯ ಜನತಾ ದಳ (RJD)
  • – ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ)
  • – ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಶರದ್ ಪವಾರ್ ಬಣ
  • – ಶಿವಸೇನೆ (UBT)
  • – ಸಮಾಜವಾದಿ ಪಕ್ಷ (SP)
  • – ರಾಷ್ಟ್ರೀಯ ಲೋಕದಳ (RLD)
  • – ಅಪ್ನಾ ದಳ (ಕಾಮೆರವಾಡಿ)
  • – ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಕಾನ್ಫರೆನ್ಸ್‌ (NC)
  • – ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP)
  • – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ)
  • – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)
  • – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) ಲಿಬರೇಶನ್
  • – ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP)
  • – ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK)
  • – ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ)
  • – ಕೊಂಗುನಾಡು ಮಕ್ಕಳ್ ದೇಸಿಯ ಕಚ್ಚಿ (KMDK)
  • – ಮನಿತನೇಯ ಮಕ್ಕಳ್ ಕಚ್ಚಿ (ಎಂಎಂಕೆ)
  • – ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML)
  • – ಕೇರಳ ಕಾಂಗ್ರೆಸ್ (ಎಂ)
  • – ಕೇರಳ ಕಾಂಗ್ರೆಸ್ (ಜೋಸೆಫ್)


ಎನ್‌ಡಿಎ ಬಣದಲ್ಲಿ 38 ಪಕ್ಷಗಳು

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆಡಳಿತಾರೂಢ ಎನ್‌ಡಿಎಯ 38 ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಭಾಗವಹಿಸುತ್ತಿದೆ. ಮೈತ್ರಿಯಲ್ಲಿ ಭಾರತೀಯ ಜನತಾ ಪಕ್ಷದ ಬಹುದೊಡ್ಡ ಶಕ್ತಿಯಾಗಿದೆ.

ಎನ್‌ಡಿಎ ಘಟಕದಲ್ಲಿ ಇವರು ಪಕ್ಷಗಳು ಹೀಗಿವೆ:

-ಭಾರತೀಯ ಜನತಾ ಪಕ್ಷ

  • – ಶಿವಸೇನೆ (ಏಕನಾಥ್ ಶಿಂಧೆ ಬಣ)
  • – ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಎನ್‌ಸಿಪಿ (ಅಜಿತ್ ಪವಾರ್ ಬಣ)
  • – ಜನತಾ ದಳ ಸಂಯುಕ್ತ (ನಿತೀಶ್‌ ಕುಮಾರ್‌)
  • – ಜೆಡಿಎಸ್‌ (ದೇವೇಗೌಡ)
  • – ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (ಪಶುಪತಿ ಕುಮಾರ್ ಪರಸ್ ಬಣ)
  • – ಅಪ್ನಾ ದಲ್ (ಸೋನೆಲಾಲ್)
  • -ನ್ಯಾಷನಲ್ ಪೀಪಲ್ಸ್ ಪಾರ್ಟಿ
  • – ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ನೈಫಿಯು ರಿಯೊ)
  • – ಜಾರ್ಖಂಡ್ ವಿದ್ಯಾರ್ಥಿಗಳ ಒಕ್ಕೂಟ
  • – ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ
  • – ಮಿಜೋ ನ್ಯಾಷನಲ್ ಫ್ರಂಟ್‌
  • – ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ
  • – ನಾಗಾ ಪೀಪಲ್ಸ್ ಫ್ರಂಟ್
  • – ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ),
  • -ಅಸೋಮ್ ಗಣ ಪರಿಷತ್
  • – ಪಟ್ಟಾಲಿ ಮಕ್ಕಳ್ ಕಚ್ಚಿ
  • – ತಮಿಳು ಮಾನಿಲ ಕಾಂಗ್ರೆಸ್
  • – ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್
  • – ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ (ಓಂ ಪ್ರಕಾಶ್ ರಾಜಭರ್)
  • – ಶಿರೋಮಣಿ ಅಕಾಲಿ ದಳ (ಸಂಯುಕ್ತ)
  • – ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ
  • – ಜನನಾಯಕ ಜನತಾ ಪಾರ್ಟಿ
  • – ಪ್ರಹಾರ್ ಜನಶಕ್ತಿ ಪಾರ್ಟಿ
  • – ರಾಷ್ಟ್ರೀಯ ಸಮಾಜ ಪಕ್ಷ
  • – ಜನ ಸುರಾಜ್ಯ ಶಕ್ತಿ ಪಾರ್ಟಿ
  • – ಕುಕಿ ಪೀಪಲ್ಸ್ ಅಲೈಯನ್ಸ್ (ಮಣಿಪುರ)
  • – ಯುನೈಟೆಡ್ ಡೆಮಾಕ್ರಟಿಕ್ ಪಕ್ಷ
  • – ಹಿಲ್ ಸ್ಟೇಟ್ ಪೀಪಲ್ಸ್, ಡೆಮಾಕ್ರಟಿಕ್ ಪಾರ್ಟಿ
  • – ನಿಶಾದ್ ಪಾರ್ಟಿ
  • – ಅಖಿಲ ಭಾರತ ಎನ್ ಆರ್ ಕಾಂಗ್ರೆಸ್
  • – ಹಿಂದೂಸ್ತಾನ್ ಅವಾಮ್ ಮೋರ್ಚಾ
  • – ಜನಸೇನಾ ಪಕ್ಷ
  • – ಹರಿಯಾಣ ಲೋಕ್‌ಹಿತ್ ಪಾರ್ಟಿ
  • -ಭಾರತ ಧರ್ಮ ಜನ ಸೇನೆ
  • -ಕೇರಳ ಕಾಮರಾಜ್ ಕಾಂಗ್ರೆಸ್
  • – ಪುಟ್ಟಿಯ ತಮಿಳಗಂ
  • – ಲೋಕ ಜನಶಕ್ತಿ ಪಕ್ಷ
  • – ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Nandini Milk: ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ. ಈಗಾಗಲೇ ಸರ್ಕಾರದ ಮೇಲೆ ಮುಗಿಬಿದ್ದಿರುವ ಪ್ರತಿಪಕ್ಷಗಳು, ಈಗ ಮತ್ತಷ್ಟು ಸಮಸ್ಯೆಗಳನ್ನು ಹೊತ್ತು ಜನರ ಮುಂದಿಡಲು ಪ್ರಯತ್ನ ಮಾಡುತ್ತಿವೆ. ಇದರ ಭಾಗವಾಗಿ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಪ್ರಾಯೋಜಕತ್ವಕ್ಕೆ ಹಣ ಹಾಕಿರುವ ಬಗ್ಗೆ ಆರ್.‌ ಅಶೋಕ್‌ ಪ್ರಶ್ನೆ ಮಾಡಿದ್ದಾರೆ. ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಎಂದು ಟೀಕಿಸಿದ್ದಾರೆ.

VISTARANEWS.COM


on

Nandini Milk No incentives for milk producers Ashok slams govt for sponsoring foreign cricket team
Koo

ಬೆಂಗಳೂರು: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಕೊಡದ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಗರಂ ಆಗಿದ್ದಾರೆ. ಒಂದು ಕಡೆ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡು ಮತ್ತೊಂದು ಕಡೆ ಕೆಎಂಎಫ್‌ ಸಂಸ್ಥೆಯ ನಂದಿನಿ ಹಾಲು (Nandini Milk) ಉತ್ಪಾದನೆಯಿಂದ ಬಂದ ಲಾಭದಲ್ಲಿ ಕೋಟ್ಯಂತರ ರೂಪಾಯಿ ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವವನ್ನು ಪಡೆದುಕೊಳ್ಳಲಾಗಿದೆ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಆರ್.‌ ಅಶೋಕ್‌, ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ. ಈಗಾಗಲೇ ಸರ್ಕಾರದ ಮೇಲೆ ಮುಗಿಬಿದ್ದಿರುವ ಪ್ರತಿಪಕ್ಷಗಳು, ಈಗ ಮತ್ತಷ್ಟು ಸಮಸ್ಯೆಗಳನ್ನು ಹೊತ್ತು ಜನರ ಮುಂದಿಡಲು ಪ್ರಯತ್ನ ಮಾಡುತ್ತಿವೆ. ಇದರ ಭಾಗವಾಗಿ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಪ್ರಾಯೋಜಕತ್ವಕ್ಕೆ ಹಣ ಹಾಕಿರುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಆರ್.‌ ಅಶೋಕ್‌ ಪೋಸ್ಟ್‌ನಲ್ಲೇನಿದೆ?

“ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ.

ಸಿಎಂ ಸಿದ್ದರಾಮಯ್ಯ ಅವರೇ, ಚುನಾವಣೆ ಸಂದರ್ಭದಲ್ಲಿ ನಂದಿನಿ ಹೆಸರಲ್ಲಿ ರಾಜಕೀಯ ಮಾಡಿ ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದೀರಲ್ಲ, ಇದೇನಾ ನೀವು ನಮ್ಮ ನಂದಿನಿ ಬ್ರ್ಯಾಂಡ್ ಉಳಿಸುವ ಪರಿ?

ಇದನ್ನೂ ಓದಿ: Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

ನಂದಿನಿ ಸಂಸ್ಥೆಯ ಕೋಟ್ಯಂತರ ರೂಪಾಯಿ ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಸರ್ಕಾರದ ಬಳಿ ಇದೆ. ಆದರೆ, ನಂದಿನಿ ಬ್ರ್ಯಾಂಡ್ ಅನ್ನ ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹ ಧನ ನೀಡಲು ತಮ್ಮ ಬಳಿ ಹಣವಿಲ್ಲ ಅಲ್ಲವೇ ಸಿದ್ದರಾಮಯ್ಯನವರೇ? ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು” ಎಂದು ಆರ್.‌ ಅಶೋಕ್‌ ರೈತರ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ.

Continue Reading

ರಾಜಕೀಯ

Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Phone tapping: ಫೋನ್‌ ಕದ್ದಾಲಿಕೆ ಆಗುತ್ತಿದೆ ಎಂದಾದರೆ ಈ ಬಗ್ಗೆ ಗೃಹ ಸಚಿವರಿಗೆ ಬರವಣಿಗೆ ಮೂಲಕ ದೂರು ಕೊಡಲಿ. ಅವರ ಕಾಲದಲ್ಲೆಲ್ಲ ಮಾಡಿದ್ದರಲ್ಲವೇ? ಯಾರ ಯಾರ ಕಾಲದಲ್ಲಿ ಫೋನ್‌ ಕದ್ದಾಲಿಕೆ ಮಾಡಿದ್ದಾರೆಂಬುದು ಗೊತ್ತಿದೆ. ಅಶೋಕ್‌ ಹೋಮ್ ಮಿನಿಸ್ಟರ್ ಆಗಿದ್ದವರು, ಕೆಲವರು ಚೀಫ್‌ ಮಿನಿಸ್ಟರ್ ಆಗಿದ್ದವರು ಮಾಡಿರುವ ಫೋನ್‌ ಟ್ಯಾಪಿಂಗ್‌ ಬಗ್ಗೆ ನಮಗೂ ರಿಪೋರ್ಟ್‌ ಬಂದಿತ್ತು ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಈ ಮೂಲಕ ವಿಧಾನಸಭಾ ವಿಪಕ್ಷ ನಾಯಕ ಆರ್.‌ ಅಶೋಕ್‌ಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

Phone tapping case Let Ashok file a complaint to Home Minister DK Shivakumar hits back at phone tapping allegations
Koo

ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ಕೇಳಿಬಂದಿರುವ ಫೋನ್‌ ಕದ್ದಾಲಿಕೆ (Phone tapping) ಆರೋಪವು ದಿನೇ ದಿನೆ ವಾಕ್ಸಮರಕ್ಕೆ ಕಾರಣವಾಗುತ್ತಿದೆ. ಈ ಬಗ್ಗೆ ಮೊದಲು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದರು. ಬಳಿಕ ಇದಕ್ಕೆ ಧ್ವನಿಗೂಡಿಸಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಹೇಳಿದ್ದರು. ಈಗ ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದು, ಅಶೋಕ್‌ ಅವರಿಗೆ ಗೃಹ ಸಚಿವರಿಗೆ ಬರವಣಿಗೆ ಮೂಲಕ ದೂರು ಕೊಡಲು ಹೇಳಿ ಎಂದು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಸರ್ಕಾರ ಫೋನ್‌ ಕದ್ದಾಲಿಕೆ ಮಾಡುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಕ್ಕೆ ತಿರುಗೇಟು ನೀಡಿದರು.

ಫೋನ್‌ ಕದ್ದಾಲಿಕೆ ಆಗುತ್ತಿದೆ ಎಂದಾದರೆ ಈ ಬಗ್ಗೆ ಗೃಹ ಸಚಿವರಿಗೆ ಬರವಣಿಗೆ ಮೂಲಕ ದೂರು ಕೊಡಲಿ. ಅವರ ಕಾಲದಲ್ಲೆಲ್ಲ ಮಾಡಿದ್ದರಲ್ಲವೇ? ಯಾರ ಯಾರ ಕಾಲದಲ್ಲಿ ಫೋನ್‌ ಕದ್ದಾಲಿಕೆ ಮಾಡಿದ್ದಾರೆಂಬುದು ಗೊತ್ತಿದೆ. ಅಶೋಕ್‌ ಹೋಮ್ ಮಿನಿಸ್ಟರ್ ಆಗಿದ್ದವರು, ಕೆಲವರು ಚೀಫ್‌ ಮಿನಿಸ್ಟರ್ ಆಗಿದ್ದವರು ಮಾಡಿರುವ ಫೋನ್‌ ಟ್ಯಾಪಿಂಗ್‌ ಬಗ್ಗೆ ನಮಗೂ ರಿಪೋರ್ಟ್‌ ಬಂದಿತ್ತು ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ನಿಮ್ಮ ಸುತ್ತ ಮುತ್ತ ಇರುವವರೇ ಮಾಹಿತಿ ನೀಡಿದ್ದಾರೆ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ಬಹಳ ಸಂತೋಷ. ಅವರು ಯಾರು ಯಾರು ಮಾಹಿತಿ ಕೊಟ್ಟಿದ್ದಾರೆಂಬುದರ ಬಗ್ಗೆ ಅಪ್ಡೇಟ್ ಕೊಡುವುದಕ್ಕೆ ಹೇಳಿ ಎಂದು ಮಾಧ್ಯಮವರಿಗೆ ಹೇಳಿದರು.

ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು

ಫೋನ್‌ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ. ಅವರು ತಪ್ಪು ಮಾಡಿಲ್ಲ ಎಂದಾದರೆ ಕೂಡಲೇ ಸಿಬಿಐಗೆ ತನಿಖೆ ಹೊಣೆಯನ್ನು ಒಪ್ಪಿಸಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಮಂಗಳವಾರ ಮಾಧ್ಯಮದವರ ಮುಂದೆ ಸವಾಲು ಹಾಕಿದ್ದರು.

ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.‌ ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು. ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ? ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

ಸರ್ಕಾರ ಮಾಡಿಲ್ಲವಾದರೆ ತನಿಖೆಗೆ ಕೊಡಲಿ

ಫೋನ್‌ ಟ್ಯಾಪ್‌ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್‌ ಅಧಿಕಾರಿಗಳು ಮಾಡಿ ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಆರ್‌. ಅಶೋಕ್ ಒತ್ತಾಯಿಸಿದ್ದರು.

Continue Reading

ದೇಶ

Aam Aadmi Party: ಆಪ್‌ಗೆ ಬರ್ತಿದ್ಯಾ ಖಲಿಸ್ತಾನಿ ಫಂಡಿಂಗ್ಸ್?‌ BKI ಉಗ್ರನ ಜೊತೆ ಪಕ್ಷ ಮುಖಂಡ ಫೊಟೋ

Aam Aadmi Party:ಕೆನಡಾದಲ್ಲಿ BKI ಮುಖಂಡ ಹರ್ಜೀತ್‌ ಸಿಂಗ್‌ ಭಜ್ವಾನನ್ನು ಪಂಜಾಬ್‌ನ ಆಪ್‌ ಶಾಸಕ ಕುಲ್ತಾರ್‌ ಸಿಂಗ್‌ ಸಂದ್ವಾನ್‌ ಭೇಟಿ ಆಗಿ ಮಾತುಕತೆ ನಡೆಸಿರುವ ಫೋಟೋವೊಂದು ಬಹಳ ಸದ್ದು ಮಾಡುತ್ತಿದೆ. ಇವರಿಬ್ಬರು 2022 ಸೆಪ್ಟೆಂಬರ್‌ನಲ್ಲಿ ಕೆನಡಾದ ಮಾಂಟ್ರೀಲ್‌ನಲ್ಲಿ ಭೇಟಿ ಆಗಿದ್ದರು. ಇನ್ನು ಪ್ರತ್ಯಕ್ಷದರ್ಶಿಯ ನೀಡಿರುವ ಮಾಹಿತಿ ಪ್ರಕಾರ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮನ್‌ ಮತ್ತು ದಿಲ್ಲಿ ಮುಖ್ಯಮಂತ್ರಿ ಕೂಡ ಆತನ ಜೊತೆ ಫೋನ್‌ನಲ್ಲಿ ಮಾತನಾಡಿದ್ದರು ಎಂದು ಹೇಳಲಾಗಿದೆ.

VISTARANEWS.COM


on

Aam Aadmi Party
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024) ನಡೆಯುತ್ತಿರುವಾಗಲೇ ಆಮ್‌ ಆದ್ಮಿ ಪಕ್ಷ(Aam Aadmi Party) ದಿನಕ್ಕೊಂದು ವಿವಾದಕೀಡಾಗುತ್ತಿದೆ. ಇದೀಗ ಮತ್ತೊಂದು ವಿವಾದವನ್ನು ಆಪ್‌ ಮೈಮೇಲೆ ಎಳೆದುಕೊಂಡಿದೆ. ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಬಬ್ಬರ್‌ ಖಾಲ್ಸಾ(BKI) ಮುಖ್ಯಸ್ಥನ ಜೊತೆ ಪಕ್ಷದ ಮುಖಂಡರು ಕಾಣಿಸಿಕೊಳ್ಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದು, ಆಪ್‌ ಕೆನಾಡಾ ಮೂಲದಿಂದ ದೇಣಿಗೆ ಸಂಗ್ರಹಿಸಲು ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ.

ಕೆನಡಾದಲ್ಲಿ BKI ಮುಖಂಡ ಹರ್ಜೀತ್‌ ಸಿಂಗ್‌ ಭಜ್ವಾನನ್ನು ಪಂಜಾಬ್‌ನ ಆಪ್‌ ಶಾಸಕ ಕುಲ್ತಾರ್‌ ಸಿಂಗ್‌ ಸಂದ್ವಾನ್‌ ಭೇಟಿ ಆಗಿ ಮಾತುಕತೆ ನಡೆಸಿರುವ ಫೋಟೋವೊಂದು ಬಹಳ ಸದ್ದು ಮಾಡುತ್ತಿದೆ. ಇವರಿಬ್ಬರು 2022 ಸೆಪ್ಟೆಂಬರ್‌ನಲ್ಲಿ ಕೆನಡಾದ ಮಾಂಟ್ರೀಲ್‌ನಲ್ಲಿ ಭೇಟಿ ಆಗಿದ್ದರು. ಇನ್ನು ಪ್ರತ್ಯಕ್ಷದರ್ಶಿಯ ನೀಡಿರುವ ಮಾಹಿತಿ ಪ್ರಕಾರ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮನ್‌ ಮತ್ತು ದಿಲ್ಲಿ ಮುಖ್ಯಮಂತ್ರಿ ಕೂಡ ಆತನ ಜೊತೆ ಫೋನ್‌ನಲ್ಲಿ ಮಾತನಾಡಿದ್ದರು ಎಂದು ಹೇಳಲಾಗಿದೆ.

BKI ನಿಂದ ಆಪ್‌ಗೆ 5 ಮಿಲಿಯನ್‌ ಡಾಲರ್‌ ದೇಣಿಗೆ

ಮೂಲಗಳ ಮಾಹಿತಿ ಪ್ರಕಾರ, BKI ಆಮ್‌ ಆದ್ಮಿ ಪಕ್ಷಕ್ಕೆ 5 ಮಿಲಿಯನ್‌ ಡಾಲರ್‌ ದೇಣಿಗೆ ನೀಡಿತ್ತು. ಇದಕ್ಕೆ ಬದಲಾಗಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳನ್ನು ಅರೆಸ್ಟ್‌ ಮಾಡದಂತೆ ಆಪ್‌ ಸರ್ಕಾರ ಒಪ್ಪಿತ್ತು. ಭಜ್ವಾ ಕೆನಾಡದಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿಯಾಗಿದ್ದು, ಪ್ರತ್ಯೇಕ ರಾಷ್ಟ್ರಕ್ಕಾಗಿ ಸಿಖ್ಖರನ್ನು ಪ್ರಚೋದಿಸುವುದೇ ಇವನ ಪ್ರಮುಖ ಕೆಲಸವಾಗಿದೆ. ಭಾರತೀಯ ರಾಜತಾಂತ್ರಿಕ ಅಧಿಕಾರಿಗಳ ಎದುರು ಈ ಖಲಿಸ್ತಾನಿ ಜಿಂದಾಬಾದ್‌ ಎಂದು ಘೋಷಣೆ ಕೂಗಿ ಗಮನಸೆಳೆದಿದ್ದ.

ಇನ್ನು ಆಪ್‌ ವಿದೇಶಿ ದೇಣಿಗೆ ಪಡೆಯುತ್ತಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿರುವ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ED) ಕೇಸ್‌ ದಾಖಲಿಸಿಕೊಂಡಿತ್ತು.

2014 ಮತ್ತು 2022 ರ ನಡುವೆ ಚುನಾವಣೆಗೆ ಹಣ ನೀಡಲು ಖಲಿಸ್ತಾನಿ ಗುಂಪುಗಳು ಕೇಜ್ರಿವಾಲ್ ಅವರ ಎಎಪಿಗೆ USD 16 ಮಿಲಿಯನ್ (ಅಂದಾಜು 133.54 ಕೋಟಿ ರೂ.) ನೀಡಿವೆ ಎಂದು ಎಸ್‌ಎಫ್‌ಜೆ ಉಗ್ರ ಗುರುಪತ್‌ವಂತ್ ಸಿಂಗ್ ಪನ್ನೂನ್ ಹೇಳಿದ್ದ ವೀಡಿಯೊ ಬಹಳ ಸುದ್ದಿ ಆಗಿತ್ತು. ಈ ಹಣಕಾಸಿನ ನೆರವಿನ ಬದಲಾಗಿ ಶಿಕ್ಷೆಗೊಳಗಾದ ಭಯೋತ್ಪಾದಕ ದೇವಿಂದರ್ ಪಾಲ್ ಸಿಂಗ್ ಭುಲ್ಲರ್ ಅವರನ್ನು ಬಿಡುಗಡೆ ಮಾಡಲು ಕೇಜ್ರಿವಾಲ್‌ ಒಪ್ಪಿದ್ದರು ಎಂದೂ ಆತ ಹೇಳಿದ್ದ. ಭುಲ್ಲರ್ 1993 ರಲ್ಲಿ ದೆಹಲಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದನು, ಆ ದಾಳಿ ಒಂಬತ್ತು ಜನರನ್ನು ಬಲಿ ತೆಗೆದುಕೊಂಡಿತು ಮತ್ತು 31 ಜನರು ಗಾಯಗೊಂಡಿದ್ದರು.

ಇದನ್ನೂ ಓದಿ:Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

ಪನ್ನುನ್ ಪ್ರಕಾರ, ವಿದೇಶಿ ದೇಣಿಗೆ ಸಂಗ್ರಹಿಸಲು ಕೇಜ್ರಿವಾಲ್ ಮೂರು ತಂಡಗಳನ್ನು ಹೊಂದಿದ್ದು, ಅದರ ಪ್ರಮುಖ ಕಿಂಗ್‌ ಪಿನ್‌ ಸ್ವತಃ ಅವರೇ ಆಗಿದ್ದಾರೆ. ಇನ್ನುಳಿದಂತೆ ತಂಡ 1 ರಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಹಿಂದಿನ ಎಎಪಿ ನಾಯಕ ಗುರುಪ್ರೀತ್ ಘುಗ್ಗಿ ಇದ್ದಾರೆ. ಘುಗ್ಗಿ ಅವರು ಬಬ್ಬರ್ ಖಾಲ್ಸಾ ಅಂತರಾಷ್ಟ್ರೀಯ ಕಾರ್ಯಕರ್ತ ರಾಜಿಂದರ್ ಸಿಂಗ್ ಅವರನ್ನು ಭೇಟಿಯಾಗಿದ್ದರು

Continue Reading

ದೇಶ

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

Lok Sabha Election 2024: ಮಚೇರ್ಲಾ ವಿಧಾನಸಭಾ ಕ್ಷೇತ್ರದ ಶಾಸಕ, ವೈಎಸ್‌ಆರ್‌ಸಿಪಿ(YSRCP) ನಾಯಕರೂ ಆಗಿರುವ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಏಕಾಏಕಿ ನಾಲ್ಕೈದು ಜನರೊಂದಿಗೆ ಮತಗಟ್ಟೆಯೊಳಗೆ ಬಂದ ರಾಮಕೃಷ್ಣ ರೆಡ್ಡಿಯವರನ್ನು ಕಂಡು ಚುನಾವಣಾಧಿಕಾರಿಗಳು ಎದ್ದು ನಿಲ್ಲುತ್ತಾರೆ. ಅಲ್ಲಿಂದ ನೇರವಾಗಿ ವಿವಿಪ್ಯಾಟ್‌ ಬಳಿ ಹೋದ ಶಾಸಕ ವಿವಿಪ್ಯಾಟ್‌ ಯಂತ್ರವನ್ನು ಎತ್ತಿ ನೆಲಕ್ಕೆ ಬಡಿದು ಧ್ವಂಸಗೊಳಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ಒಂದೆಡೆ ಲೋಕಸಭೆ ಚುನಾವಣೆ(Lok Sabha Election 2024)ಯ ಕಾವು ಹೆಚ್ಚಾಗ್ತಿದೆ. ಮತ್ತೊಂದೆಡೆ ನಾಯಕರು ಮಾಡುತ್ತಿರುವ ಎಡವಟ್ಟುಗಳೂ ದಿನಕ್ಕೊಂದು ಘಟನೆಯಂತೆ ಕಣ್ಣಮುಂದೆ ಬರುತ್ತಿರುತ್ತವೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶ(Andra Pradesh)ದಲ್ಲಿ ಮತದಾನಕ್ಕಾಗಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನೋರ್ವ ಕಪಾಳಮೋಕ್ಷ(Slapped) ಮಾಡಿದ ವಿಚಾರ ಬಹಳ ಸುದ್ದಿಯಾಗಿತ್ತು. ಇದೀಗ ಮತ್ತೋರ್ವ ಶಾಸಕ ವಿವಿಪ್ಯಾಟ್‌(VVPAT) ಅನ್ನೇ ಎತ್ತಿ ನೆಲಕ್ಕೆ ಬಡಿಯುವ ಮೂಲಕ ಎಲ್ಲರನ್ನು ಆಘಾತಕ್ಕೊಳಪಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral video) ಆಗುತ್ತಿದೆ

ಘಟನೆ ವಿವರ:

ಆಂಧ್ರಪ್ರದೇಶದ ಪಲ್ವೈ ಗೇಟ್‌ ಮತಗಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಮಚೇರ್ಲಾ ವಿಧಾನಸಭಾ ಕ್ಷೇತ್ರದ ಶಾಸಕ, ವೈಎಸ್‌ಆರ್‌ಸಿಪಿ(YSRCP) ನಾಯಕರೂ ಆಗಿರುವ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಏಕಾಏಕಿ ನಾಲ್ಕೈದು ಜನರೊಂದಿಗೆ ಮತಗಟ್ಟೆಯೊಳಗೆ ಬಂದ ರಾಮಕೃಷ್ಣ ರೆಡ್ಡಿಯವರನ್ನು ಕಂಡು ಚುನಾವಣಾಧಿಕಾರಿಗಳು ಎದ್ದು ನಿಲ್ಲುತ್ತಾರೆ. ಅಲ್ಲಿಂದ ನೇರವಾಗಿ ವಿವಿಪ್ಯಾಟ್‌ ಬಳಿ ಹೋದ ಶಾಸಕ ವಿವಿಪ್ಯಾಟ್‌ ಯಂತ್ರವನ್ನು ಎತ್ತಿ ನೆಲಕ್ಕೆ ಬಡಿದು ಧ್ವಂಸಗೊಳಿಸಿದ್ದಾರೆ.

ಮೇ 13ರಂದು ಆಂಧ್ರಪ್ರದೇಶದ ಎಲ್ಲಾ 25 ಕ್ಷೇತ್ರಗಳಿಗೆ ನಡೆದ ಮತದಾನದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಂದು ಎಲ್ಲಾ 175 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆದಿದ್ದು, ಅನೇಕ ಕಡೆಗಳಲ್ಲಿ ಹಿಂಸಾಚಾರ, ಅನುಚಿತ ಘಟನೆಗಳು ವರದಿಯಾಗಿದ್ದವು.

ಟಡಿಎಂ ಖಂಡನೆ:

ಇನ್ನು ವಿಡಿಯೋ ವೈರಲ್‌ ಆಗುತ್ತಿದ್ದಂತೆ ತೆಲುಗು ದೇಶಂ ಪಕ್ಷದ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಸೋಲು ಖಚಿತ ಎಂಬುದು ಮನವರಿಕೆ ಅಗುತ್ತಿದ್ದಂತೆ YSRCP ಮುಖಂಡರು ಈ ರೀತಿ ದಾಂದಲೆ ಎಬ್ಬಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಉತ್ರ ನಾರಾ ಲೋಕೇಶ್‌ ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದು, YSRCP ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಮತಯಂತ್ರವನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು. ಸೋಲಿನ ಭಯದಿಂದ ಹೀಗೆಲ್ಲ ವರ್ತಿಸುತ್ತಿದ್ದಾರೆ. ಜೂ.4ರಂದು ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ:ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

ಒಂದಲ್ಲ.. ಎರಡಲ್ಲಾ.. ಬರೋಬ್ಬರಿ 7ಮತಯಂತ್ರ ಧ್ವಂಸ

ಇನ್ನು ಈ ಬಗ್ಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಿದ್ದು, ಶಾಸಕ ರೆಡ್ಡಿ ಬರೋಬ್ಬರಿ 7 ಮತಗಟ್ಟೆಗಳಲ್ಲಿ ಮತಯಂತ್ರಗಳನ್ನು ಧ್ವಂಸಗೊಳಿಸುರುವ ವಿಡಿಯೋ ನಮಗೆ ಸಿಕ್ಕಿದೆ. ಎಲ್ಲಾ ಮತಗಟ್ಟೆಗಳ ವಿಡಿಯೋಗಳನ್ನು ಜಿಲ್ಲಾ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಖೇಶ್‌ ಕುಮಾರ್‌ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದೆ.

Continue Reading
Advertisement
Rishab shetty family visit Hariharpur Narasimhaswamy
ಸ್ಯಾಂಡಲ್ ವುಡ್10 mins ago

Rishab shetty: ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬದ ಭೇಟಿ: ನರಸಿಂಹಸ್ವಾಮಿಯ ದರ್ಶನ ಪಡೆದ ಡಿವೈನ್‌ ಸ್ಟಾರ್‌!

nisha cp yogeshwara
ವೈರಲ್ ನ್ಯೂಸ್15 mins ago

CP Yogeshwara: “ಹೊಡೀತಾರೆ, ಭಿಕ್ಷೆ ಬೇಡು ಅನ್ತಾರೆ….ʼʼ ಯೋಗೇಶ್ವರ್‌ ವಿರುದ್ಧ ಕಣ್ಣೀರು ಹಾಕುತ್ತಾ ರೆಬೆಲ್‌ ಆದ ಮಗಳು

Nandini Milk No incentives for milk producers Ashok slams govt for sponsoring foreign cricket team
ರಾಜಕೀಯ21 mins ago

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Viral video
ವೈರಲ್ ನ್ಯೂಸ್31 mins ago

Viral Video:‌ ಅಬ್ಬಾ..ಇದೆಂಥಾ ಹುಚ್ಚಾಟ; ಸ್ವಲ್ಪ ಮಿಸ್‌ ಆದ್ರೂ ಸಾವು ಗ್ಯಾರಂಟಿ-ಶಾಕಿಂಗ್‌ ವಿಡಿಯೋ ವೈರಲ್

AR Rahman says his mother thought his Oscar statuettes were made of gold
ಬಾಲಿವುಡ್35 mins ago

AR Rahman: ಪ್ರಶಸ್ತಿಗಳೆಲ್ಲ ಚಿನ್ನವೆಂದು ಭಾವಿಸಿ ಎಆರ್ ರೆಹಮಾನ್ ತಾಯಿ ಮಾಡಿದ್ದೇನು?

Phone tapping case Let Ashok file a complaint to Home Minister DK Shivakumar hits back at phone tapping allegations
ರಾಜಕೀಯ45 mins ago

Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Cannes 2024 Chidananda S Naik bows in Cannes with Kannada folk tale
ಸಿನಿಮಾ54 mins ago

Cannes 2024: ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಕನ್ನಡದ ಕಿರು ಚಿತ್ರ ಪ್ರದರ್ಶನ

Turbulence
ವಿದೇಶ1 hour ago

Singapore Airlines: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ: ಇಲ್ಲಿದೆ ನೋಡಿ ಭೀಕರತೆಯನ್ನು ಸಾರುವ ಫೋಟೊಗಳು

MDH, Everest Spices
ದೇಶ1 hour ago

MDH, Everest Spices: ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳಲ್ಲಿ ಮಾರಕ ರಾಸಾಯನಿಕ ಇಲ್ಲ; FSSAI ವರದಿಯಲ್ಲಿ ಬಯಲು

drink and drive RTO check
ಬೆಂಗಳೂರು2 hours ago

Drink and Drive: ಕುಡಿದು ವಾಹನ ಓಡಿಸಿದರೆ ಎರಡೆರಡು ಕಡೆ ಸಿಕ್ಕಿಹಾಕಿಕೊಳ್ತೀರಿ ಹುಷಾರ್!‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ6 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ19 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌