Rajkumar Birth Anniversary: ವರನಟ ಡಾ. ರಾಜ್​ಕುಮಾರ್ ಅವರ ಟಾಪ್‌ 10 ಸಿನಿಮಾಗಳಿವು! - Vistara News

ಸಿನಿಮಾ

Rajkumar Birth Anniversary: ವರನಟ ಡಾ. ರಾಜ್​ಕುಮಾರ್ ಅವರ ಟಾಪ್‌ 10 ಸಿನಿಮಾಗಳಿವು!

Rajkumar Birth Anniversary:  ತಾವು ಮಾಡುವ ಪಾತ್ರಗಳು ಸಮಾಜಕ್ಕೆ ಕೆಟ್ಟ ಸಂದೇಶ ನೀಡಬಾರದು ಅನ್ನೋ ಕಾಳಜಿ ರಾಜ್ ಕುಮಾರ್ ಅವರಿಗೆ ಇತ್ತು. ಹೀಗಾಗಿಯೇ ಸಿನಿಮಾಗಳಲ್ಲಿ ರಾಜ್ ಕುಡಿದಿಲ್ಲ, ಸಿಗರೇಟ್ ಸೇದಿಲ್ಲ, ರೇಪ್ ಸೀನ್, ಕಿಸ್ಸಿಂಗ್ ಸೀನ್ ಗಳಲ್ಲಿ ನಟಿಸಿಲ್ಲ. ಅದಷ್ಟೇ ಸಂಭಾವನೆ ಕೊಟ್ಟರೂ ನಾನು ಇಂತಹ ಪಾತ್ರಗಳಲ್ಲಿ ನಟಿಸಲ್ಲ ಎಂದು ಅವರು ಕಡ್ಡಿ ಮುರಿದಂತೆ ಹೇಳಿದ್ದರು. ಪಾತ್ರಗಳಿಗೆ ಜೀವ ತುಂಬುವ ರಾಜ್ ಅದಕ್ಕಾಗಿ ಕಠಿಣ ನಿಯಮಗಳನ್ನು ಪಾಲಿಸುತ್ತಿದ್ದರು. ‘ಮಂತ್ರಾಲಯ ಮಹಾತ್ಮೆ’ ಸಿನಿಮಾಕ್ಕಾಗಿ ಅವರು ಬಾಡೂಟವನ್ನೇ ಬಿಟ್ಟಿದ್ದರು.

VISTARANEWS.COM


on

Rajkumar Birth Anniversary TOP 10 Movies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದು ದಿವಂಗತ ಡಾ. ರಾಜ್ ಕುಮಾರ್ (Rajkumar Birth Anniversary) ಅವರ ಜಯಂತ್ಯೋತ್ಸವ. ಕನ್ನಡ (Kannada) ಕಲಾರಸಿಕರ ಹೃದಯ ಸಾಮ್ರಾಟ. ಕನ್ನಡಿಗರಿಗೆಲ್ಲರಿಗೂ ಅವರೊಂದು ಶಕ್ತಿ. ಅವರು ಕನ್ನಡ ಭಾಷೆಯ ಅಸ್ಮಿತೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರನ್ನು ರಂಜಿಸಿದರು. ನಗಿಸಿ, ಅಳಿಸಿ, ಆಲೋಚನೆಗೆ ಹಚ್ಚಿ, ಛಲ ತುಂಬಿ, ಮಾರ್ಗದರ್ಶನ ನೀಡಿದರು. 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ಅಪ್ರತಿಮ ಸೂಪರ್‌ಸ್ಟಾರ್. 1954ರಲ್ಲಿ ತೆರೆಕಂಡ ‘ಬೇಡರ ಕಣ್ಣಪ್ಪ’ ಚಿತ್ರದಿಂದ ಮುತ್ತುರಾಜ್ ಕನ್ನಡ ಸಿನಿರಸಿಕರಿಗೆ ಪರಿಚಿತರಾದರು. ಇದೀಗ ರಾಜ್‌ ಅವರ ಟಾಪ್‌ 10 ಸಿನಿಮಾಗಳ ಮಾಹಿತಿ ತಿಳಿಯೋಣ.

ಕಸ್ತೂರಿ ನಿವಾಸ (KASTHURI NIVAAS)

ಕಸ್ತೂರಿ ನಿವಾಸ ಕನ್ನಡದ ಕ್ಲಾಸಿಕ್ ಸಿನಿಮಾಗಳಲ್ಲೊಂದು. ರಾಜ್ಯದ ಹಲವಾರು ಚಿತ್ರಮಂದಿರಗಳಲ್ಲಿ ಚಿತ್ರ 175 ದಿನ ಪೂರೈಸಿದರೆ, 16 ಚಿತ್ರಮಂದಿರಗಳಲ್ಲಿ 100 ವಾರ ಪೂರೈಸಿ ದಾಖಲೆಯನ್ನ ಬರೆಯಿತು. ಕಸ್ತೂರಿ ನಿವಾಸ’ ಚಿತ್ರಕ್ಕೆ ಜಿಕೆ ವೆಂಕಟೇಶ್ ಸಂಗೀತ ನೀಡಿದ್ದರು. ವಿಶೇಷ ಅಂದರೆ ಚಿತ್ರದ ಆರಕ್ಕೆ ಆರು ಹಾಡು ಕೂಡ ಸೂಪರ್ ಹಿಟ್. ಚಿತ್ರದಲ್ಲಿನ ‘ಆಡಿಸಿ ನೋಡು ಬೀಳಿಸಿ ನೋಡು’.. ಹಾಡು ಸಂಗೀತ ಪ್ರಿಯರ ಮೇಲೆ ತನ್ನ ಹಿಡಿತ ಸಾಧಿಸಿದೆ ಅಂದರೆ ಎಂತಹವರಿಗೆ ಆದರೂ ಅದು ಅಚ್ಚರಿಯ ಸಂಗತಿಯೇ ಸರಿ. ದೊರೈ-ಭಗವಾನ್ ನಿರ್ದೇಶನ ಈ ಸಿನಿಮಾಗಿದೆ. ಶಿವಾಜಿ ಗಣೇಶನ್ ತಮಿಳಿನಲ್ಲಿ ಚಿತ್ರವನ್ನ ರಿಮೇಕ್ ಮಾಡಿದರು. ಹಿಂದಿಯಲ್ಲಿ ಸಂಜೀವ್ ಕುಮಾರ್ ಡಾ.ರಾಜ್ ಕುಮಾರ್ ಅವರ ಪಾತ್ರಕ್ಕೆ ಜೀವ ತುಂಬುವ ಪ್ರಯತ್ನವನ್ನ ಶಾಂದಾರ್ ಚಿತ್ರದಲ್ಲಿ ಮಾಡಿದರು.

ಬಂಗಾರದ ಮನುಷ್ಯ (1972) (Bangarada Manushya)

ಬಂಗಾರದ ಮನುಷ್ಯ T. K. ರಾಮರಾವ್ ಅವರ ಕಾದಂಬರಿಯನ್ನು ಆಧರಿಸಿದ 1972ರ ಕನ್ನಡ ಭಾಷೆಯ ಚಲನಚಿತ್ರವಾಗಿದೆ. ಶ್ರೀನಿಧಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸಿದ್ದಲಿಂಗಯ್ಯ ನಿರ್ದೇಶಿಸಿದ್ದರು. ಈ ಮೊದಲು ಸಿದ್ದಲಿಂಗಯ್ಯ ಅವರು ʻಮೇಯರ್ ಮುತ್ತಣ್ಣʼ ಸಿನಿಮಾಗೂ ನಿರ್ದೇಶಿಸಿದ್ದರು. ರಾಜೀವನಾಗಿ ಡಾ ರಾಜ್‌ಕುಮಾರ್, ಲಕ್ಷ್ಮಿಯಾಗಿ ಭಾರತಿ, ರಾಚುತಪ್ಪನಾಗಿ ಬಾಲಕೃಷ್ಣ, ಶರಾವತಿಯಾಗಿ ಆರತಿ, ಗ್ರಾಮದ ಮುಖಂಡನ ಮಗನಾಗಿ ದ್ವಾರಕೀಶ್ ನಟಿಸಿದ್ದರು. ಆರ್.ಲಕ್ಷ್ಮಣ್ ನಿರ್ಮಾಣ ಇದ್ದರೆ, ಜಿ ಕೆ ವೆಂಕಟೇಶ್ ಸಂಗೀತ ನಿರ್ದೇಶಕರಾಗಿದ್ದರು.

ಬರೋಬ್ಬರಿ 2 ವರ್ಷ ಪ್ರದರ್ಶನ ಕಂಡ ಸಿನಿಮಾ ಇದು. ಡಾ. ರಾಜ್‌ಕುಮಾರ್ ಹಾಗೂ ಭಾರತೀ ವಿಷ್ಣುವರ್ಧನ್ ನಟನೆಯ ಈ ಚಿತ್ರ ಬೆಂಗಳೂರಿನ ಸ್ಟೇಟ್ಸ್ ಥಿಯೇಟರ್‌ನಲ್ಲಿ (ಈಗಿನ ಭೂಮಿಕಾ ಥಿಯೇಟರ್) ಎರಡು ವರ್ಷ, ಮೈಸೂರಿನ ಚಾಮುಂಡೇಶ್ವರಿ ಥಿಯೇಟರ್‌ನಲ್ಲಿ 60 ವಾರಗಳ ಕಾಲ ಪ್ರದರ್ಶನಗೊಂಡಿತ್ತು. ಇನ್ನು ಕೆಲವೆಡೆ 1 ವರ್ಷ, ಮತ್ತೆ ಕೆಲವೆಡೆ 25 ವಾರ ಓಡಿತ್ತು.ಪಟ್ಟಣದಿಂದ ಹಳ್ಳಿ ಸೇರಿ ರಾಜೀವ(ಡಾ. ರಾಜ್‌ಕುಮಾರ್) ಬರಡು ಭೂಮಿಯಲ್ಲಿ ಕೃಷಿ ಮಾಡಿ ಗೆಲ್ಲುವ ಕಥೆ ಅನೇಕರಿಗೆ ಸ್ಫೂರ್ತಿಯಾಗಿತ್ತು.ಅಂದಾಜು 13 ಲಕ್ಷ ರೂಪಾಯಿ ಖರ್ಚು ಮಾಡಿ ಸಿನಿಮಾ ನಿರ್ಮಿಸಲಾಗಿತ್ತು. ಆದರೆ ಹಲವು ಪಟ್ಟು ಸಿನಿಮಾ ಲಾಭ ಮಾಡಿತ್ತು. ಬರೋಬ್ಬರಿ 2.5 ಕೋಟಿ ರೂ. ಗಳಿಕೆ ಕಂಡಿತ್ತು ಎನ್ನುವ ಅಂದಾಜಿದೆ. ಇವತ್ತಿನ ಲೆಕ್ಕದಲ್ಲಿ ಕಲೆಕ್ಷನ್ 100 ಕೋಟಿ ರೂ.ಗೂ ಹೆಚ್ಚು ಎನ್ನಬಹುದು.

ಇದನ್ನೂ ಓದಿ: Jai Sriram Slogan: ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

ಗಂಧದಗುಡಿ ( GANDHADA GUDI)

ಕನ್ನಡ ನಾಡಿನ ಹಚ್ಚ ಹಸಿರು, ವನ್ಯಜೀವಿಗಳ ಲೋಕ, ಅರಣ್ಯ ಸಂರಕ್ಷಣೆಯ ಮಹತ್ವವನ್ನು ಸಾರಿದ ಗಂಧದಗುಡಿ 1973ರ ಸೆಪ್ಟಂಬರ್‌ನಲ್ಲಿ ಬಿಡುಗಡೆಯಾಗಿತ್ತು. ಕನ್ನಡ ಚಿತ್ರರಂಗದಲ್ಲಿ ನಟರಾಗಿ ನಂತರ ನಿರ್ಮಾಪಕರಾಗಿ ಬೆಳೆದವರು ಮೈಸೂರಿನವೇ ಆದ ಎಂ.ಪಿ.ಶಂಕರ್‌. ಅವರಿಗೂ ಕಾಡಿನ ಕುರಿತು ಏನಾದರೂ ಸಿನೆಮಾ ಮಾಡಬೇಕು ಎನ್ನುವ ಬಯಕೆ. ಅದಕ್ಕಾಗಿ 1969ರಲ್ಲಿ ಕಾಡಿನ ರಹಸ್ಯ ಎನ್ನುವ ಚಿತ್ರ ಮಾಡಿದ್ದರು. 1972ರಲ್ಲಿಯೇ ಮೈಸೂರು ಜಿಲ್ಲೆಯ ನಾಗರಹೊಳೆ, ಬಂಡೀಪುರ ಪ್ರದೇಶದಲ್ಲಿ ಶೂಟಿಂಗ್‌. ರಾಜಕುಮಾರ್‌ ಜತೆಗೆ ವಿಷ್ಣುವರ್ಧನ್‌ ಕೂಡ ಇದ್ದರು. ದೊಡ್ಡ ತಾರಾಗಣದ ಚಿತ್ರ. ವಿಜಯ್‌ ನಿರ್ದೇಶನ. ಡಿ.ವಿ.ರಾಜಾರಾಂ ಅವರ ಕ್ಯಾಮರಾ. ರಾಜನ್‌ ನಾಗೇಂದ್ರ ಅವರ ಸಂಗೀತವಿದ್ದ ಚಿತ್ರ.

ಭಕ್ತ ಕುಂಬಾರ

ಹುಣಸೂರು ಕೃಷ್ಣಮೂರ್ತಿ ನಿರ್ದೇಶಿಸಿದ 1974 ರ ಕನ್ನಡ ಚಲನಚಿತ್ರವಾಗಿದೆ. ಚಿತ್ರದಲ್ಲಿ ರಾಜಕುಮಾರ್ ಮತ್ತು ಲೀಲಾವತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜಿ ಕೆ ವೆಂಕಟೇಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕರ್ನಾಟಕದಲ್ಲಿ ಅದ್ಭುತ ಯಶಸ್ಸಿನ ನಂತರ ಈ ಚಿತ್ರವನ್ನು ನಂತರ ತೆಲುಗಿನಲ್ಲಿ ವಿ. ಮಧುಸೂಧನ್ ರಾವ್ ಅವರು ʻಚಕ್ರಧಾರಿʼ ಎಂದು ಸಿನಿಮಾ ಮಾಡಿದರು. 1977ರಲ್ಲಿ ಅಕ್ಕಿನೇನಿ ನಾಗೇಶ್ವರ ರಾವ್ ನಟಿಸಿದರು.
ಗೋರಾ ಪಾತ್ರದಲ್ಲಿ ಡಾ ರಾಜ್‌ಕುಮಾರ್, ಗೋರ ಪತ್ನಿಯಾಗಿ ಲೀಲಾವತಿ, ಸಂತ ಜ್ಞಾನದೇವನಾಗಿ ರಾಜಶಂಕರ್,
ಗೋರನ ನೆರೆಯವನಾಗಿ ಬಾಲಕೃಷ್ಣ, ಕೃಷ್ಣನಾಗಿ ವಜ್ರಮುನಿ ಪಾತ್ರ ನಿಭಾಯಿಸಿದ್ದರು.
ನಿರ್ದೇಶಕ: ಹುಣಸೂರು ಕೃಷ್ಣಮೂರ್ತಿ
ನಿರ್ಮಾಪಕ: ಲಕ್ಷ್ಮಿ ಫಿಲ್ಮ್ಸ್ ಕಂಬೈನ್ಸ್
ಸಂಗೀತ ನಿರ್ದೇಶಕ: ಜಿ ಕೆ ವೆಂಕಟೇಶ್

ಮಯೂರ (Mayura)

ಮಯೂರ 975 ರ ಕನ್ನಡ ಐತಿಹಾಸಿಕ ನಾಟಕ ಚಲನಚಿತ್ರವಾಗಿದೆ. ಇಂದಿನ ಆಧುನಿಕ ಕರ್ನಾಟಕ ರಾಜ್ಯವನ್ನು ಆಳುವ ಸಾಮ್ರಾಜ್ಯವಾದ ಕದಂಬ ರಾಜವಂಶದ ರಾಜಕುಮಾರ ಮಯೂರಶರ್ಮಾ ಪಾತ್ರವನ್ನು ನಿರ್ವಹಿಸಿದ್ದರು ರಾಜ್‌. ರಾಜ್‌ಕುಮಾರ್ ಅವರ ಅತ್ಯಂತ ಜನಪ್ರಿಯ ಚಲನಚಿತ್ರಗಳಲ್ಲಿ ಇದು ಒಂದಾಗಿದೆ. ಈ ಚಿತ್ರವು ಬ್ರಾಹ್ಮಣ ಯುವಕನಾದ ಮಯೂರನ ಜೀವನವನ್ನು ಚಿತ್ರಿಸುತ್ತದೆ. ಮಯೂರನಾಗಿ ರಾಜಕುಮಾರ್, ಪಲ್ಲವರ ಯುವರಾಜನಾಗಿ ಶ್ರೀನಾಥ್, ರಾಜಕುಮಾರ ವಿಷ್ಣುಗೋಪನಾಗಿ ವಜ್ರಮುನಿ ಪಾತ್ರ ನಿಭಾಯಿಸಿದ್ದರು.
ನಿರ್ದೇಶಕ: ವಿಜಯ್
ನಿರ್ಮಾಪಕ: ಟಿ.ಪಿ. ವೇಣುಗೋಪಾಲ್
ಸಂಗೀತ ನಿರ್ದೇಶಕ: ಜಿ ಕೆ ವೆಂಕಟೇಶ್

ಸನಾದಿ ಅಪ್ಪಣ್ಣ (1977) (sanaadi appanna)

ಸನಾದಿ ಅಪ್ಪಣ್ಣ (ಸನಾದಿ ಅಪ್ಪಣ್ಣ) ವಿಜಯ್ ನಿರ್ದೇಶಿಸಿದ 1977ರ ಭಾರತೀಯ ಕನ್ನಡ ಚಲನಚಿತ್ರವಾಗಿದ್ದು, ಕೃಷ್ಣಮೂರ್ತಿ ಪುರಾಣಿಕ್ ಅವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ‘ಸನಾದಿ ಅಪ್ಪಣ್ಣ’ ಚಿತ್ರವು ಕೃಷ್ಣಮೂರ್ತಿ ಪುರಾಣಿಕ್ ಅವರ ‘ಕುಣಿಯಿತು ಹೆಜ್ಜೆ ನಲಿಯಿತು ಗೆಜ್ಜೆ’ ಕಾದಂಬರಿಯನ್ನು ಆಧರಿಸಿದ್ದು. ಈ ಕಥೆಯ ಹಂದರ ಬಾಗಲಕೋಟೆಯ ಶಹನಾಯಿ ವಾದಕ ಅಪ್ಪಣ್ಣನವರ ಜೀವನ ವೃತ್ತಾಂತವನ್ನು ಒಳಗೊಂಡಿರುವಂತಹುದು. ವಿಜಯ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು, ಜಿ.ಕೆ.ವೆಂಕಟೇಶ್ ಅವರ ಸಂಗೀತ ನಿರ್ದೇಶನವಿದೆ. ಶಹನಾಯಿ ವಾದಕ ಅಪ್ಪಣ್ಣನ ಪಾತ್ರದಲ್ಲಿ ರಾಜಕುಮಾರ್ ಅವರು ತೆರೆಯನ್ನು ಆವರಿಸಿಕೊಂಡರೆ, ಚಿತ್ರದುದ್ದಕ್ಕೂ ಶಹನಾಯಿಯ ವಾದನವನ್ನು ಹಿನ್ನೆಲೆಯಲ್ಲಿ ಮಾಡಿರುವವರು ಬಿಸ್ಮಿಲ್ಲಾ ಖಾನ್.

ಇದನ್ನೂ ಓದಿ: Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

ಪಾತ್ರವರ್ಗ ಮತ್ತು ಸಿಬ್ಬಂದಿ:
ಅಪ್ಪಣ್ಣನಾಗಿ ರಾಜ್‌ಕುಮಾರ್, ಬಸಂತಿಯಾಗಿ ಜಯಪ್ರದಾ, ರಾವ್ ಅಪ್ಪಣ್ಣನ ಮಗನಾಗಿ ಅಶೋಕ್, ಅಪಶ್ರುತಿ ಅಯ್ಯಣ್ಣನಾಗಿ ಬಾಲಕೃಷ್ಣ, ಯುವಕ ಅಶೋಕ್ ಪಾತ್ರದಲ್ಲಿ ಪುನೀತ್ ರಾಜ್‌ಕುಮಾರ್
ನಿರ್ದೇಶಕ: ಎಚ್.ಆರ್.ಭಾರ್ಗವ
ನಿರ್ಮಾಪಕ: ದ್ವಾರಕೀಶ್
ಸಂಗೀತ ನಿರ್ದೇಶಕ: ರಾಜನ್-ನಾಗೇಂದ್ರ

ಬಬ್ರುವಾಹನ (Babruvahana )

ಬಬ್ರುವಾಹನ 1977 ರಲ್ಲಿ ಬಿಡುಗಡೆಯಾದ ಪೌರಾಣಿಕ ಕನ್ನಡ ಚಲನಚಿತ್ರ. ಮೇಕಿಂಗ್ ಮತ್ತು ಸಂಗೀತಕ್ಕೆ ಹೆಸರುವಾಸಿಯಾದ ಸಿನಿಮಾ. ರಾಜ್‌ಕುಮಾರ್ ಅವರೇ ಹಾಡಿರುವ ‘ಈ ಸಮಯ ಆನಂದಮಯ’, ‘ಆರಾಧಿಸುವೆ ಮದನಾರಿ’ ಮತ್ತು ‘ಬರಸಿಡಿಲು ಬಡಿದನಾಥೆ’ ನಂತಹ ಕೆಲವು ಹಾಡುಗಳು ಸಖತ್‌ ಹಿಟ್‌ ಕಂಡವು. ಅರ್ಜುನ ಮತ್ತು ಮಗ ಬಬ್ರುವಾಹನ ಪಾತ್ರದಲ್ಲಿ ರಾಜ್‌ಕುಮಾರ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಿ ಸರೋಜಾದೇವಿ ಚಿತ್ರಾಂಗದೆಯಾಗಿ ಕಾಣಿಸಿಕೊಂಡಿದ್ದರು. ಹುಣಸೂರು ಕೃಷ್ಣಮೂರ್ತಿ ಅವರ ನಿರ್ದೇಶನ ಮತ್ತು ಚಿತ್ರಕಥೆಯನ್ನು ಒಳಗೊಂಡಿರುವ ಈ ಚಿತ್ರವನ್ನು ಕೆಸಿಎನ್ ಚಂದ್ರಶೇಖರ್ ನಿರ್ಮಿಸಿದ್ದಾರೆ.

ಪಾತ್ರವರ್ಗ ಮತ್ತು ಸಿಬ್ಬಂದಿ:
ರಾಜಕುಮಾರ್, ಬಿ.ಸರೋಜಾದೇವಿ, ಕಾಂಚನಾ, ಜಯಮಾಲಾ, ವಜ್ರಮುನಿ, ರಾಮಕೃಷ್ಣ, ತೂಗುದೀಪ ಶ್ರೀನಿವಾಸ್.
ನಿರ್ದೇಶಕ: ಹುಣಸೂರು ಕೃಷ್ಣ ಮೂರ್ತಿ
ನಿರ್ಮಾಪಕ: ರಾಜಕಮಲ್ ಆರ್ಟ್ಸ್
ಸಂಗೀತ ನಿರ್ದೇಶಕ: ಟಿ.ಜಿ. ಲಿಂಗಪ್ಪ

ಕವಿರತ್ನ ಕಾಳಿದಾಸ (1983)

ಕವಿರತ್ನ ಕಾಳಿದಾಸ 1983ರ ಕನ್ನಡ ಐತಿಹಾಸಿಕ ಚಲನಚಿತ್ರ. 4 ನೇ ಶತಮಾನದ ಶಾಸ್ತ್ರೀಯ ಸಂಸ್ಕೃತ ಬರಹಗಾರ ಕಾಳಿದಾಸನ ಜೀವನವನ್ನು ಆಧರಿಸಿದೆ. ತ್ತು. ಈ ಚಿತ್ರವನ್ನು ರೇಣುಕಾ ಶರ್ಮಾ ಬರೆದು ನಿರ್ದೇಶಿಸಿದ್ದಾರೆ. ವಿ ಎಸ್ ಗೋವಿಂದ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಾಜ್‌ಕುಮಾರ್ ಅವರು ಕಾಳಿದಾಸನ ಪಾತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಜಯಪ್ರದಾ ಅವರು ವಿದ್ಯಾಧರೆಯಾಗಿ ಮತ್ತು ಶ್ರೀನಿವಾಸ ಮೂರ್ತಿ ರಾಜ ಭೋಜ ಪಾತ್ರದಲ್ಲಿ ನಟಿಸಿದ್ದರು. ‘ವಜ್ರೇಶ್ವರಿ ಕಂಬೈನ್ಸ್’ ಬ್ಯಾನರ್ ಅಡಿಯಲ್ಲಿ ಪಾರ್ವತಮ್ಮ ರಾಜ್‌ಕುಮಾರ್ ವಿತರಿಸಿದ್ದರು.

ಪಾತ್ರವರ್ಗ ಮತ್ತು ಸಿಬ್ಬಂದಿ: ಕಾಳಿದಾಸನಾಗಿ ರಾಜ್‌ಕುಮಾರ್, ವಿಧ್ಯಾಧಾರೆಯಾಗಿ ಜಯಪ್ರದ, ರಾಜ ಭೋಜನಾಗಿ ಶ್ರೀನಿವಾಸ ಮೂರ್ತಿ. ನಿರ್ದೇಶಕರು: ರೇಣುಕಾ ಶರ್ಮಾ ನಿರ್ಮಾಪಕ: ವಿ ಎಸ್ ಗೋವಿಂದ ಸಂಗೀತ ನಿರ್ದೇಶಕ: ಎಂ.ರಂಗರಾವ್

ಜೀವನ ಚೈತ್ರ (1992) (Jeevana Chaitra)

ಜೀವನ ಚೈತ್ರ 1992ರಲ್ಲಿ ಬಿಡುಗಡೆಯಾದ ಸಿನಿಮಾ. ದೊರೈ- ಭಗವಾನ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಮದ್ಯಪಾನದ ದುಷ್ಪರಿಣಾಮಗಳ ಬಗ್ಗೆ ಚಿತ್ರದಲ್ಲಿ ಸಾಮಾಜಿಕ ಕಳಕಳಿಯ ಸಂದೇಶವಿದೆ. ಮದ್ಯಸೇವನೆಯ ವಿರುದ್ಧ ಹೋರಾಡುವ ಪಾತ್ರದಲ್ಲಿ ಡಾ ರಾಜ್‌ಕುಮಾರ್ ಅಭಿನಯಿಸಿದ್ದಾರೆ. ಮಾಧವಿ ಈ ಚಿತ್ರದ ನಾಯಕಿ. ಇದು ಒಂದು ರೀತಿಯಲ್ಲಿ ಅಣ್ಣಾವ್ರ ಕಂಬ್ಯಾಕ್‌ ಸಿನಿಮಾವೂ ಆಗಿತ್ತು.ಇದು ಕಾದಂಬರಿ ಆಧರಿತ ಸಿನಿಮಾ. ವಿಶಾಲಾಕ್ಷಿ ದಕ್ಷಿಣಾಮೂರ್ತಿಯವರ ಜೀವನಚೈತ್ರ ಕಾದಂಬರಿಯೇ ಸಿನಿಮಾವಾಗಿತ್ತು.

ಪಾತ್ರವರ್ಗ ಮತ್ತು ಸಿಬ್ಬಂದಿ:
ಡಾ ರಾಜಕುಮಾರ್, ಮಾಧವಿ, ಕೆ.ಎಸ್.ಅಶ್ವಥ್, ಪಂಡರಿ ಬಾಯಿ
ನಿರ್ದೇಶಕ: ದೊರೈ – ಭಗವಾನ್
ನಿರ್ಮಾಪಕಿ: ಪಾರ್ವತಮ್ಮ ರಾಜ್‌ಕುಮಾರ್
ಸಂಗೀತ ನಿರ್ದೇಶಕ: ಉಪೇಂದ್ರ ಕುಮಾರ್

ಆಕಸ್ಮಿಕ (1993) Aakasmika

1993 ರ ಕನ್ನಡ ಆಕ್ಷನ್-ಡ್ರಾಮಾ ಚಲನಚಿತ್ರವಾಗಿದ್ದು, ಇದನ್ನು ನಾಗಾಭರಣ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ರಾಜಕುಮಾರ್, ಗೀತಾ ಮತ್ತು ಮಾಧವಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಂಸಲೇಖ ಸಂಗೀತ ಜತೆಗೆ ಸಾಹಿತ್ಯವನ್ನು ಬರೆದಿದ್ದಾರೆ. ʻಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು..’ ಹಾಡು ಕೇಳಿದರೆ ಎಂಥವರಿಗಾದರೂ ಒಮ್ಮೆ ರೋಮಾಂಚನ ಆಗುತ್ತದೆ. ಈ ಹಾಡಿಗೆ ಇರುವ ತಾಕತ್ತು ಅಂಥದ್ದು. ಹಾಡಿನ ಪ್ರತಿ ಸಾಲುಗಳು ಕನ್ನಡ ನಾಡಿನ ಬಗ್ಗೆ ಇರುವುದು ಒಂದು ವಿಶೇಷವಾದರೆ, ರಾಜ್​ಕುಮಾರ್ ಅವರ ಕಂಠದಲ್ಲಿ ಈ ಸಾಂಗ್ ಮೂಡಿ ಬಂದಿದೆ ಅನ್ನೋದು ಮತ್ತೊಂದು ವಿಶೇಷ. ಈ ಸಿನಿಮಾದ ಹಿಟ್‌ ಸಾಂಗ್‌ ಇದು.

ರಾಜ್​ಕುಮಾರ್ ರಿಯಲ್ ಹೀರೊ

ತಾವು ಮಾಡುವ ಪಾತ್ರಗಳು ಸಮಾಜಕ್ಕೆ ಕೆಟ್ಟ ಸಂದೇಶ ನೀಡಬಾರದು ಅನ್ನೋ ಕಾಳಜಿ ರಾಜ್ ಕುಮಾರ್ ಅವರಿಗೆ ಇತ್ತು. ಹೀಗಾಗಿಯೇ ಸಿನಿಮಾಗಳಲ್ಲಿ ರಾಜ್ ಕುಡಿದಿಲ್ಲ, ಸಿಗರೇಟ್ ಸೇದಿಲ್ಲ, ರೇಪ್ ಸೀನ್, ಕಿಸ್ಸಿಂಗ್ ಸೀನ್ ಗಳಲ್ಲಿ ನಟಿಸಿಲ್ಲ. ಅದಷ್ಟೇ ಸಂಭಾವನೆ ಕೊಟ್ಟರೂ ನಾನು ಇಂತ ಪಾತ್ರಗಳಲ್ಲಿ ನಟಿಸಲ್ಲ ಎಂದು ಅವರು ಕಡ್ಡಿ ಮುರಿದಂತೆ ಹೇಳಿದ್ದರು. ಪಾತ್ರಗಳಿಗೆ ಜೀವ ತುಂಬುವ ರಾಜ್ ಅದಕ್ಕಾಗಿ ಕಠಿಣ ನಿಯಮಗಳನ್ನು ಪಾಲಿಸುತ್ತಿದ್ದರು. ‘ಮಂತ್ರಾಲಯ ಮಹಾತ್ಮೆ’ ಸಿನಿಮಾಕ್ಕಾಗಿ ಅವರು ಬಾಡೂಟವನ್ನೇ ಬಿಟ್ಟಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

Shreerastu Shubhamastu Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಶ್ರೀರಸ್ತು ಶುಭಮಸ್ತು ಕನ್ನಡ ಸೀರಿಯಲ್‌ ಸಾಕಷ್ಟು ಪ್ರೇಕ್ಷಕರ ಗಮನ ಸೆಳೆದಿದೆ. ಈ ಸಿರೀಯಲ್‌ನಲ್ಲಿ ಖಳನಾಯಕಿ ಶಾರ್ವರಿ ಪಾತ್ರ ಹೆಚ್ಚು ಜನಪ್ರಿಯತೆ ಪಡೆದುಕೊಂಡಿತ್ತು.ಈಗ ನೇತ್ರಾ ಜಾಧವ್ ಅವರು ಧಾರಾವಾಹಿಯಿಂದ ಹೊರ ನಡೆದಿದ್ದು, ಸದ್ಯ ನಟಿ ಸ್ವಪ್ನ ದೀಕ್ಷಿತ್ ಅವರು ಶಾರ್ವರಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

VISTARANEWS.COM


on

Shreerastu Shubhamastu Serial Netra Jadhav out
Koo

ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ (Shreerastu Shubhamastu Serial) ಇಷ್ಟು ದಿನಗಳವರೆಗೂ ಶಾರ್ವರಿ ಪಾತ್ರವನ್ನು ನಟಿ ನೇತ್ರಾ ಜಾಧವ್ (Netra Jadhav) ಅವರು ನಡೆಸಿಕೊಡುತ್ತಿದ್ದರು.

ಧಾರಾವಾಹಿಯಲ್ಲಿ ದೆಹಲಿಗೆ ಹೋಗಿ ಬರುತ್ತೇನೆ ಎಂದು ಹೊರಟʻ ಶಾರ್ವರಿʼ, ವಾಪಸ್ ಬಂದಿದ್ದು, ಸ್ವಪ್ನಾ ದೀಕ್ಷಿತ್ ಆಗಿ.

ಈಗ ನೇತ್ರಾ ಜಾಧವ್ ಅವರು ಧಾರಾವಾಹಿಯಿಂದ ಹೊರ ನಡೆದಿದ್ದು, ಸದ್ಯ ನಟಿ ಸ್ವಪ್ನ ದೀಕ್ಷಿತ್ ಅವರು ಶಾರ್ವರಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ರಥ ಸಪ್ತಮಿ, ಸುಂದರಿ, ಸಾಗುತ ದೂರ ದೂರ , ಆಕೃತಿ ಹೀಗೆ ಕನ್ನಡ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದರು ನೇತ್ರಾ.

ಶ್ರೀರಸ್ತು ಧಾರಾವಾಹಿಯಲ್ಲಿ ಶಾರ್ವರಿ ಪಾತ್ರ ಹೇಗೆಂದರೆ ಮುಂದೆ ಒಳ್ಳೆಯವರಂತೆ ನಟಿಸುತ್ತ, ಒಳಗೊಳಗೆ ಪಿತೂರಿ ಮಾಡುವ ಪಾತ್ರ. ಇಷ್ಟು ದಿನ ಶಾರ್ವರಿ ದೆಹಲಿಯಲ್ಲಿರುವ ತಮ್ಮ ಕಂಪನಿಯಲ್ಲಿ ಸಮಸ್ಯೆ ಆಗಿತ್ತು ಎಂಬ ಕಾರಣಕ್ಕೆ ಮಾಧವ್ ಬದಲು ತಾನು ಹೋಗಿರುತ್ತಾಳೆ. ಇದೀಗ ಮತ್ತೆ ಮನೆಗೆ ವಾಪಸ್‌ ಆಗಿದ್ದಾಳೆ.

Continue Reading

ಸ್ಯಾಂಡಲ್ ವುಡ್

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

Sreenath Bhasi Movie: ಶ್ರೀನಾಥ್ ಭಾಸಿ (Sreenath Bhasi) ಅವರು ವೈರಸ್, ಹೋಮ್, ಕುಂಬಳಂಗಿ ನೈಟ್ಸ್ ಅಂತಹ ಅದ್ಭುತ ಸಿನಿಮಾಗಳಲ್ಲಿ‌ ನಟಿಸಿ ಸೈ ಎನಿಸಿಕೊಂಡವರು. ಮಾಲಿವುಡ್ ಸ್ಟಾರ್ ನಟ ನಮ್ಮ‌ ಕನ್ನಡದ ಪ್ರೊಡ್ಯೂಸರ್ ಹಾಗೂ ಡೈರೆಕ್ಟರ್ ಶಶೀಧರ ಕೆ ಎಮ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಮಲಯಾಳಂ ಸಿನಿಮಾ ʻಸಿಬಿಲ್ ಸ್ಕೋರ್ʼ ಸಿನಿಮಾದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲ್ಲಿದ್ದಾರೆ.

VISTARANEWS.COM


on

Sreenath Bhasi Movie Shashidhar direction new Movie
Koo

ಬೆಂಗಳೂರು: ʻಮಂಜುಮ್ಮೆಲ್ ಬಾಯ್ಸ್ʼ ಮಾಲಿವುಡ್ ಇಂಡಸ್ಟ್ರೀಗೆ ಈ ವರ್ಷ ಸಿಕ್ಕಂತಹ ಸೂಪರ್ ಡೂಪರ್ ಹಿಟ್ ಸಿನಿಮಾ. ವಿಶ್ವಾದ್ಯಂತ ಪ್ರೇಕ್ಷಕರು ಸಿನಿಮಾವನ್ನ ನೋಡಿ ಇಷ್ಟಪಡುತ್ತಿದ್ದಾರೆ. ಪಾತ್ರಧಾರಿಗಳ ಬಗ್ಗೆ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಇಂಚಿಂಚೂ ಮಾತನಾಡುತ್ತಿದ್ದಾರೆ. ಇದೇ ವೇಳೆ ʻಡಾಟರ್ ಆಫ್ ಪಾರ್ವತಮ್ಮʼ, ವೀರಂ, ʻಶುಗರ್ ಲೆಸ್ʼ ಚಿತ್ರಗಳನ್ನ ನಿರ್ಮಾಣ ಮಾಡಿದ್ದ ಶಶಿಧರ ಅವರು ಶುಗರ್ ಲೆಸ್ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇದೀಗ ಮಲಯಾಳಂನಲ್ಲಿ ತಮ್ಮ ಮೊದಲ‌ ಚಿತ್ರವನ್ನ ನಿರ್ದೇಶನ‌ ಮಾಡಲು‌ ಹೊರಟಿದ್ದಾರೆ. ಈ ಮೂಲಕ ಇದು ಶಶಿಧರ ಅವರ ಸಿನಿಜರ್ನಿಯ (Sreenath Bhasi Movie) ಎರಡನೇ ಡೈರೆಕ್ಷನ್‌ನ ಸಿನಿಮಾವಾಗಲಿದೆ.

ಸಿಬಿಲ್ ಸ್ಕೋರ್‌ನಲ್ಲಿ ಶ್ರೀನಾಥ್ ಭಾಸಿ

ಶ್ರೀನಾಥ್ ಭಾಸಿ (Sreenath Bhasi) ಅವರು ವೈರಸ್, ಹೋಮ್, ಕುಂಬಳಂಗಿ ನೈಟ್ಸ್ ಅಂತಹ ಅದ್ಭುತ ಸಿನಿಮಾಗಳಲ್ಲಿ‌ ನಟಿಸಿ ಸೈ ಎನಿಸಿಕೊಂಡವರು. ಮಾಲಿವುಡ್ ಸ್ಟಾರ್ ನಟ, ನಮ್ಮ‌ ಕನ್ನಡದ ಪ್ರೊಡ್ಯೂಸರ್ ಹಾಗೂ ಡೈರೆಕ್ಟರ್ ಶಶಿಧರ ಕೆ ಎಮ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಮಲಯಾಳಂ ಸಿನಿಮಾ ʻಸಿಬಿಲ್ ಸ್ಕೋರ್ʼದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲ್ಲಿದ್ದಾರೆ.

ಇದನ್ನೂ ಓದಿ: Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

ಈ‌ ಸಿನಿಮಾವನ್ನು ಕನ್ನಡದ ನಿರ್ದೇಶಕರೇ ನಿರ್ದೇಶನ ಮಾಡುತ್ತಿದ್ದು, ಹಾಗೇ ಮಲಯಾಳಂ ಸಿನಿಮಾ ಆಗಿರುವುದರಿಂದ ಈ ಸಿನಿಮಾದಲ್ಲಿ ಟೆಕ್ನಿಶಿಯನ್ಸ್ ಆರ್ಟಿರ್ಸ್ಟ್ ಕನ್ನಡ ಹಾಗೂ ಮಲಯಾಳಂನವರಾಗಿರುತ್ತಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸೋಹನ್ ಸೀನುಲಾಲ್, ದೀಪಕ್ ಪ್ರಿನ್ಸ್ ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.

ದಿ ಎಮೋಷನ್ಸ್ ಫ್ಯಾಕ್ಟರಿ ಗ್ರೂಪ್(EFG) ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾಗೆ ವಿವೇಕ್ ಶ್ರೀಕಂಠಯ್ಯ ಬಂಡವಾಳ ಹೂಡುತ್ತಿದ್ದಾರೆ. ಕೋ ಪ್ರೊಡ್ಯೂಸರ್ ಆಗಿ ವಿಕ್ರಮ್, ಲೈನ್ ಪ್ರೊಡ್ಯೂಸರ್ ಆಗಿ ದೀಪು ಕರುಣಾಕರಣ್ ಎಕ್ಸೆಕ್ಯೂಟೀವ್ ಪ್ರೊಡ್ಯೂಸರ್ ಆಗಿ ಶಾಜಿ ಫ್ರಾನ್ಸಿಸ್ ಕೈ ಜೋಡಿಸಿದ್ದಾರೆ. ಸಿನಿಮಾದ ಛಾಯಾಗ್ರಹಣ ಪ್ರದೀಪ್ ನಾಯರ್, ಡೈಲಾಗ್ಸ್ ಅರ್ಜುನ್ ಟಿ ಸತ್ಯನ್, ಸೋಬಿನ್ ಕೆ ಸೋಮನ್ ಸಂಕಲನವಿದೆ. ಇನ್ನೂ ಕ್ರಿಯೇಟಿವ್ ಹೆಡ್ ಆಗಿ ಶರತ್ ವಿನಾಯಕ್ ಸಿನಿಮಾಗೆ ಜತೆಯಾಗಿದ್ದಾರೆ.

Continue Reading

ಸಿನಿಮಾ

Cannes Film Festival: ಕಾನ್ ಚಿತ್ರೋತ್ಸವದಲ್ಲಿ ಅನಸೂಯಾ ಸೇನ್‌ಗುಪ್ತಾ ಅತ್ಯುತ್ತಮ ನಟಿ! ಈ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ತಾರೆ!

Cannes Film Festival: ಕಾನ್‌ಸ್ಟಾಂಟಿನ್ ಬೊಜಾನೋವ್ (Konstantin Bojanov) ನಿರ್ದೇಶನದ `ದಿ ಶೇಮ್‌ಲೆಸ್’ (The Shameless) ಚಿತ್ರ ರಾಣಿ ಎಂಬ ಭಾರತೀಯ ಲೈಂಗಿಕ ಕಾರ್ಯಕರ್ತೆಯ ಕುರಿತಾದ ಸಿನಿಮಾ. ರಾಣಿ ಎಂ ತೀರ್ಥಯಾತ್ರೆಗೆ ಹೋಗಿರುತ್ತಾಳೆ. ಆ ಬಳಿಕ ಬೆಂಗಳೂರಿನಲ್ಲಿ ಆಕೆ ಕೊಲೆಯಾಗುತ್ತಾಳೆ. ಪ್ರತಿ ವರ್ಷದಂತೆ ಈ ಬಾರಿಯೂ ಕಾನ್‌ ಚಲನಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳ ಉಪಸ್ಥಿತಿ ಕಂಡುಬಂದಿತ್ತು. ಈ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಕೂಡ ಭಾಗವಹಿಸಿದ್ದರು. ಅದಿತಿ ರಾವ್ ಹೈದರಿ ಕೂಡ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು.

VISTARANEWS.COM


on

Cannes Film Festival Anasuya Sengupta gets Best Actress award
Koo

ಬೆಂಗಳೂರು: ಚೀನಾದ ನಿರ್ದೇಶಕ ʻಹೂ ಗುವಾನ್ʼ ಅವರ (Hu Guan) ಬ್ಲ್ಯಾಕ್ ಡಾಗ್ (Black Dog) ಸಿನಿಮಾ ಕಾನ್‌ ಅನ್ ಸರ್ಟೈನ್ ರಿಗಾರ್ಡ್ ಪ್ರಶಸ್ತಿಯನ್ನು (Un Certain Regard prize) ಗೆದ್ದುಕೊಂಡಿತು. ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿ ʻದಿ ಶೇಮ್‌ಲೆಸ್ʼ ಚಿತ್ರಕ್ಕಾಗಿ ಅನಸೂಯಾ ಸೇನ್‌ಗುಪ್ತಾ (Anasuya Sengupta) ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡರು. ಕಾನ್‌ ಫೆಸ್ಟಿವಲ್‌ನಲ್ಲಿ ಈ ಗೌರವಕ್ಕೆ ಪಾತ್ರರಾದ ಭಾರತೀಯ ಮೊದಲ ತಾರೆ ಇವರು. ಅನ್ ಸರ್ಟೈನ್ ರಿಗಾರ್ಡ್ ಎಂಬುದು ಕಾನ್‌ ಚಲನಚಿತ್ರೋತ್ಸವದ ಅಧಿಕೃತ ಆಯ್ಕೆಯ ಒಂದು ವಿಭಾಗವಾಗಿದೆ.

ಶುಕ್ರವಾರ ರಾತ್ರಿ (ಮೇ.24) ನಡೆದ ಕಾನ್‌ ಫಿಲ್ಮ್ ಫೆಸ್ಟಿವಲ್‌ನಲ್ಲಿ ಅನಸೂಯಾ ಸೇನ್‌ಗುಪ್ತಾ ʻದಿ ಶೇಮ್‌ಲೆಸ್ʼ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡರು. ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರಾಗಿದ್ದಾರೆ. ಮುಖ್ಯವಾಗಿ ಮುಂಬೈನಲ್ಲಿ ಪ್ರೊಡಕ್ಷನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು ಅನುಸೂಯಾ. ಅನಸೂಯಾ ಸೇನ್‌ಗುಪ್ತಾ ಅವರು ಬಲ್ಗೇರಿಯನ್ ನಿರ್ದೇಶಕ ʻಕಾನ್‌ಸ್ಟಾಂಟಿನ್ ಬೊಜಾನೋವ್ʼ (Constantin Bojanov’s ) ಅವರ ಚಲನಚಿತ್ರ ʻದಿ ಶೇಮ್‌ಲೆಸ್‌ನಲ್ಲಿʼನ ಅವರ ಪಾತ್ರಕ್ಕಾಗಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈ ಚಿತ್ರವನ್ನು ಭಾರತ ಮತ್ತು ನೇಪಾಳದಲ್ಲಿ ಒಂದೂವರೆ ತಿಂಗಳ ಕಾಲ ಚಿತ್ರೀಕರಣ ಮಾಡಲಾಗಿತ್ತು ಎಂದು ವರದಿಯಾಗಿದೆ.

ಕಾನ್‌ಸ್ಟಾಂಟಿನ್ ಬೊಜಾನೋವ್ (Konstantin Bojanov) ನಿರ್ದೇಶನದ `ದಿ ಶೇಮ್‌ಲೆಸ್’ (The Shameless) ಚಿತ್ರ ರಾಣಿ ಎಂಬ ಭಾರತೀಯ ಲೈಂಗಿಕ ಕಾರ್ಯಕರ್ತೆಯ ಕುರಿತಾದ ಸಿನಿಮಾ. ರಾಣಿ ತೀರ್ಥಯಾತ್ರೆಗೆ ಹೋಗಿರುತ್ತಾಳೆ. ಆ ಬಳಿಕ ಬೆಂಗಳೂರಿನಲ್ಲಿ ಆಕೆ ಕೊಲೆಯಾಗುತ್ತಾಳೆ. ಇದು ಚಿತ್ರದ ತಿರುಳು.

ಇದನ್ನೂ ಓದಿ: Cannes 2024: ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಕನ್ನಡದ ಕಿರು ಚಿತ್ರ ಪ್ರದರ್ಶನ

ಅತ್ಯುತ್ತಮ ನಟಿ
ಅನಸೂಯಾ ಸೇನ್‌ಗುಪ್ತಾ

ಅತ್ಯುತ್ತಮ ನಟ
ಅಬೋ ಸಂಗಾರೆ

ಅತ್ಯುತ್ತಮ ನಿರ್ದೇಶಕ
ರಾಬರ್ಟೊ ಮಿನರ್ವಿನಿ (ROBERTO MINERVINI)

ಕಾನ್‌ ಚಲನಚಿತ್ರೋತ್ಸವದಲ್ಲಿ 18 ಫೀಚರ್‌ ಫಿಲ್ಮ್ಸ್‌ ಒಳಗೊಂಡಿತ್ತು. ಜ್ಯೂರಿಗಳಾಗಿ ಕೆನಡಾದ ನಟ, ನಿರ್ದೇಶಕ, ಚಿತ್ರಕಥೆಗಾರ ಮತ್ತು ನಿರ್ಮಾಪಕ ಕ್ಸೇವಿಯರ್ ಡೋಲನ್ ಇದ್ದರು. ಫ್ರೆಂಚ್-ಸೆನೆಗಲೀಸ್ ಚಿತ್ರಕಥೆಗಾರ ಮತ್ತು ನಿರ್ದೇಶಕ ಮೈಮೌನಾ ಡೌಕೋರೆ, ಮೊರೊಕನ್ ನಿರ್ದೇಶಕ ಅಸ್ಮೇ ಎಲ್ ಮೌದಿರ್, ಜರ್ಮನ್-ಲಕ್ಸೆಂಬರ್ಗ್ ನಟ ವಿಕಿ ಕ್ರಿಪ್ಸ್ ಮತ್ತು ಅಮೇರಿಕನ್ ಚಲನಚಿತ್ರ ವಿಮರ್ಶಕ ಟಾಡ್ ಮೆಕಾರ್ಥಿ ತೀರ್ಪುಗಾರರಾಗಿದ್ದರು.

ಪ್ರತಿ ವರ್ಷದಂತೆ ಈ ಬಾರಿಯೂ ಕಾನ್‌ ಚಲನಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳ ಉಪಸ್ಥಿತಿ ಕಂಡುಬಂದಿತ್ತು. ಈ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಕೂಡ ಭಾಗವಹಿಸಿದ್ದರು. ಅದಿತಿ ರಾವ್ ಹೈದರಿ ಕೂಡ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. ಮೇ 25ಕ್ಕೆ ಚಿತ್ರೋತ್ಸವ ಮುಕ್ತಾಯವಾಗಿದೆ. ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆದಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಂಡಿವೆ. ಅವುಗಳಲ್ಲಿ ʻಆಲ್ ವಿ ಇಮ್ಯಾಜಿನ್ ಆಸ್ ಲೈಟ್ʼ,ʻಸಂತೋಷ್ʼ ಕನ್ನಡ ಕಿರುಚಿತ್ರ ʻಸನ್‌ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋʼ, ʻಮಂಥನ್ʼ, ʻಸಿಸ್ಟರ್ ಮಿಡ್‌ನೈಟ್ʼ , ʻಇನ್ ರಿಟ್ರೀಟ್ʼ `ದಿ ಶೇಮ್‌ಲೆಸ್’ ಪ್ರದರ್ಶನ ಕಂಡಿವೆ.

Continue Reading

ಕಾಲಿವುಡ್

Karthi next film: ಇಂದು ನಟ ಕಾರ್ತಿ ಬರ್ತ್‌ಡೇ: ತಮ್ಮನ ಚಿತ್ರಕ್ಕೆ ಅಣ್ಣ ಸೂರ್ಯ ಬಂಡವಾಳ!

Karthi next film: ವಿಜಯ್ ಸೇತುಪತಿ ಹಾಗೂ ತ್ರಿಷಾ ಕೃಷ್ಣನ್ ನಟನೆಯ ‘96’ ಚಿತ್ರವನ್ನು ಪ್ರೇಮ್ ಕುಮಾರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ‘96’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು.  ‘96’ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಗೋವಿಂದ್ ವಸಂತ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 96 ಸಿನಿಮಾಗೆ ಸ್ಟಂಟ್‌ ಮಾಸ್ಟರ್‌ ಇರಲಿಲ್ಲ. ಈ ಚಿತ್ರಕ್ಕೂ ಇಲ್ಲ.

VISTARANEWS.COM


on

Karthi next film Suriya to produce Meiyazhagan
Koo

ಬೆಂಗಳೂರು: ಇಂದು ನಟ ಸೂರ್ಯ ಅವರ ಸಹೋದರ ಕಾರ್ತಿ ಜನುಮದಿನ. ನಟ ಸೂರ್ಯ ತನ್ನ ಸಹೋದರ, ನಟ ಕಾರ್ತಿ ಅವರಿಗೆ ಒಂದು ದಿನ ಮುಂಚಿತವಾಗಿ ವಿಶ್‌ ಮಾಡಿದ್ದಾರೆ. ಜತೆಗೆ ಕಾರ್ತಿ ಅವರ ಮುಂಬರುವ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಿದರು. ಪ್ರೇಮ್ ಕುಮಾರ್ ನಿರ್ದೇಶಿಸಿರುವ ಮತ್ತು ಸೂರ್ಯ ಅವರೇ ಸ್ವತಃ ನಿರ್ಮಿಸಿದ, ʻಮೇಯಳಗನ್ʼ (Meiyazhagan ) ಸಿನಿಮಾದಲ್ಲಿ ಕಾರ್ತಿ (Karthi next film) ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ತಿ ಮತ್ತು ಅರವಿಂದ್ ಸ್ವಾಮಿ (Arvind Swamy) ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಪೋಸ್ಟರ್ ಒಂದರಲ್ಲಿ ಅರವಿಂದ್ ಅವರು ಸೈಕಲ್ ಮೇಲೆ ಕುಳಿತಿದ್ದಾರೆ. ಹಿಂದೆ ಕಾರ್ತಿ ಕೂತ್ತಿದ್ದಾರೆ. ಸವಾರಿ ಮಾಡುವಾಗ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಕಾಣಬಹುದು. ಎರಡನೇ ಪೋಸ್ಟರ್‌ನಲ್ಲಿ, ಕಾರ್ತಿ ಅವರು ಎತ್ತಿನ ಎದುರು ನಿಂತಿದ್ದಾರೆ. ಅವರು ನಗುತ್ತಿದ್ದಾರೆ. ಇದು ಹಳ್ಳಿಯ ಕಥೆ ಇರಬಹುದು ಎನ್ನಲಾಗುತ್ತಿದೆ.

ವಿಜಯ್ ಸೇತುಪತಿ ಹಾಗೂ ತ್ರಿಷಾ ಕೃಷ್ಣನ್ ನಟನೆಯ ‘96’ ಚಿತ್ರವನ್ನು ಪ್ರೇಮ್ ಕುಮಾರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ‘96’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು.  ‘96’ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಗೋವಿಂದ್ ವಸಂತ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 96 ಸಿನಿಮಾಗೆ ಸ್ಟಂಟ್‌ ಮಾಸ್ಟರ್‌ ಇರಲಿಲ್ಲ. ಈ ಚಿತ್ರಕ್ಕೂ ಇಲ್ಲ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ಕಂಗುವ ಸಿನಿಮಾ

ಸೂರ್ಯ ಸದ್ಯ ಕಂಗುವ ಸಿನಿಮಾದಲ್ಲಿ ನಟಿಸಲಿದ್ದಾರೆ, ಅವರು ದ್ವಿಪಾತ್ರದಲ್ಲಿ ನಟಿಸಲಿದ್ದಾರೆ. ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ವರದಿಯ ಪ್ರಕಾರ ಬರೋಬ್ಬರಿ 10,000 ಜನರನ್ನು ಈ ದೃಶ್ಯದಲ್ಲಿ ಬಳಸಿಕೊಳ್ಳಲಾಗಿದೆ ಎಂದು ವರದಿಯಾಗಿತ್ತು.

ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading
Advertisement
Pune Porsche accident
ಕ್ರೈಂ6 mins ago

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಬಾಲಕನ ಅಜ್ಜನೂ ಪೊಲೀಸ್‌ ವಶಕ್ಕೆ

Summer Special Trains
ಬೆಂಗಳೂರು14 mins ago

Summer Special Trains : ನೈರುತ್ಯ ರೈಲ್ವೆಯಿಂದ ಬೇಸಿಗೆ ವಿಶೇಷ ರೈಲುಗಳ ಸಂಚಾರ; ಪಟ್ಟಿ ಇಲ್ಲಿದೆ

Lockup Death
ಕರ್ನಾಟಕ15 mins ago

Lockup Death: ದಾವಣಗೆರೆ ಯುವಕನ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ, ಎಫ್ಐಆರ್ ಇಲ್ಲದೆ ಕರೆ ತಂದಿದ್ದು ತಪ್ಪು ಎಂದ ಸಿಎಂ

Hardik Pandya
ಕ್ರೀಡೆ39 mins ago

Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

Prajwal Revanna Case Why did Deve Gowda write a letter to Prajwal and HD Kumaraswamy reveals secret
ರಾಜಕೀಯ40 mins ago

Prajwal Revanna Case: ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

Murder case in Mysuru
ಮೈಸೂರು43 mins ago

Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

Gold Rate Today
ಚಿನ್ನದ ದರ45 mins ago

Gold Rate Today: ಚಿನ್ನದ ದರ ಇಂದು ಯಥಾಸ್ಥಿತಿ; 22K- 24K ಬಂಗಾರದ ದರಗಳು ಹೀಗಿವೆ

Shreerastu Shubhamastu Serial Netra Jadhav out
ಕಿರುತೆರೆ57 mins ago

Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

Road Accident
ಕ್ರೈಂ1 hour ago

Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Sreenath Bhasi Movie Shashidhar direction new Movie
ಸ್ಯಾಂಡಲ್ ವುಡ್1 hour ago

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌