Board Exam Result: 93.5% ಫಲಿತಾಂಶ ನೋಡಿ ಮೂರ್ಛೆ ಹೋದ ವಿದ್ಯಾರ್ಥಿ! ಐಸಿಯುಗೆ ದಾಖಲು - Vistara News

ವೈರಲ್ ನ್ಯೂಸ್

Board Exam Result: 93.5% ಫಲಿತಾಂಶ ನೋಡಿ ಮೂರ್ಛೆ ಹೋದ ವಿದ್ಯಾರ್ಥಿ! ಐಸಿಯುಗೆ ದಾಖಲು

Board Exam Result: ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳು ಸಂತೋಷದಿಂದ ಜಿಗಿಯುವುದು ಸ್ವಾಭಾವಿಕ. ವಿಶೇಷವಾಗಿ, 90%ಕ್ಕಿಂತ ಹೆಚ್ಚಿರುವಾಗ ಇನ್ನಷ್ಟು ಸಂತಸವಾಗುತ್ತದೆ. ಆದರೆ ಮೀರತ್‌ನ 10ನೇ ತರಗತಿಯ ವಿದ್ಯಾರ್ಥಿ ತನ್ನ ಫಲಿತಾಂಶಗಳನ್ನು ನೋಡಿದ ನಂತರ ಮೂರ್ಛೆ ಹೋದ.

VISTARANEWS.COM


on

board exam tension viral news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ತನ್ನ ಯುಪಿ ಬೋರ್ಡ್ (UP Board Exam, Public Exam) 10ನೇ ತರಗತಿಯ ಪರೀಕ್ಷೆಯಲ್ಲಿ 93.5% ಅಂಕಗಳನ್ನು ಪಡೆದ ಪಾಸಾದ ವಿದ್ಯಾರ್ಥಿಯೊಬ್ಬ (Student), ಫಲಿತಾಂಶ ನೋಡಿದ ಕ್ಷಣವೇ ನಂಬಲಾಗದೆ ಮೂರ್ಛೆ ಹೋಗಿದ್ದಾನೆ. ನಂತರ ಈತನನ್ನು ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಯಿತು.

ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳು ಸಂತೋಷದಿಂದ ಜಿಗಿಯುವುದು ಸ್ವಾಭಾವಿಕ. ವಿಶೇಷವಾಗಿ, 90%ಕ್ಕಿಂತ ಹೆಚ್ಚಿರುವಾಗ ಇನ್ನಷ್ಟು ಸಂತಸವಾಗುತ್ತದೆ. ಆದರೆ ಮೀರತ್‌ನ 10ನೇ ತರಗತಿಯ ವಿದ್ಯಾರ್ಥಿ ತನ್ನ ಫಲಿತಾಂಶಗಳನ್ನು ನೋಡಿದ ನಂತರ ಮೂರ್ಛೆ ಹೋದ. ಬೋರ್ಡ್ ಪರೀಕ್ಷೆಗಳ ಸಮಯದಲ್ಲಿ ವಿದ್ಯಾರ್ಥಿಗಳು ಅನುಭವಿಸುವ ಒತ್ತಡವನ್ನು ಇದು ಎತ್ತಿ ತೋರಿಸಿದೆ.

ತನ್ನ ಯುಪಿ ಬೋರ್ಡ್ 10ನೇ ತರಗತಿಯ ಪರೀಕ್ಷೆಯಲ್ಲಿ 93.5% ಪಡೆದ ನಂತರ, ಐಸಿಯುಗೆ ದಾಖಲಾದ ವಿದ್ಯಾರ್ಥಿ ನಂತರ ಚೇತರಿಸಿಕೊಂಡಿದ್ದಾನೆ. ಮೀರತ್‌ನ ಮೋದಿಪುರಂನಲ್ಲಿರುವ ಮಹರ್ಷಿ ದಯಾನಂದ ಇಂಟರ್ ಕಾಲೇಜಿನ 16 ವರ್ಷದ ಅನ್ಶುಲ್ ಕುಮಾರ್ ತನ್ನ ಪರೀಕ್ಷೆಗಳಲ್ಲಿ 93.5% ಅಂಕಗಳನ್ನು ಗಳಿಸಿದ್ದಾನೆ. ಆದರೆ ಸಂತೋಷದ ಕ್ಷಣವೇ ಆತನ ಕುಟುಂಬಕ್ಕೆ ದುಃಖದಾಯಕವಾಯಿತು. ಆತನ ಸ್ಥಿತಿ ಸುಧಾರಿಸದ ಕಾರಣ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಯ ನಂತರ ಕುಮಾರ್ ಬೇಗನೆ ಪ್ರಜ್ಞೆಯನ್ನು ಪಡೆದ.

ಉತ್ತರ ಪ್ರದೇಶದಲ್ಲಿ 10ನೇ ತರಗತಿ ಮತ್ತು 12ನೇ ತರಗತಿಯ ಫಲಿತಾಂಶಗಳನ್ನು ಏಪ್ರಿಲ್ 20, 2024ರಂದು ಬಿಡುಗಡೆ ಮಾಡಲಾಯಿತು. 10 ನೇ ತರಗತಿಯಲ್ಲಿ 89.55% ಮತ್ತು 12 ನೇ ತರಗತಿಯಲ್ಲಿ 82.60% ಮಂದಿ ಉತ್ತೀರ್ಣರಾಗಿದ್ದಾರೆ. ಶುಭಂ ವರ್ಮಾ ಮತ್ತು ಪ್ರಾಚಿ ನಿಗಮ್ ಯುಪಿಎಂಎಸ್‌ಪಿ 10 ಮತ್ತು 12 ನೇ ತರಗತಿಯಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದರು.

ಇದನ್ನೂ ಓದಿ: Drought Relief: ಒಂದು ವಾರದಲ್ಲಿ ಕರ್ನಾಟಕಕ್ಕೆ ಬರ ಪರಿಹಾರ; ಸುಪ್ರೀಂಗೆ ಕೇಂದ್ರ ಮಹತ್ವದ ಮಾಹಿತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಕಂಪನಿಯಲ್ಲಿ 1 ವರ್ಷ ವೇತನ ಸಹಿತ ರಜೆ ಪಡೆದ ಉದ್ಯೋಗಿ; ಈ ಲಕ್‌ ನಿಮ್ಮದಾಗಬೇಕೆ? ಹೀಗೆ ಮಾಡಿ

ಚೀನಾದ ವ್ಯಕ್ತಿಯೊಬ್ಬ 365 ದಿನಗಳ ಅಂದರೆ ವರ್ಷಪೂರ್ತಿ ರಜೆಯನ್ನು ಪಡೆಯುವ ಅವಕಾಶ ಪಡೆದುಕೊಂಡಿದ್ದಾನೆ. ಅದು ಸಂಬಳ ಸಮೇತ. ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral News) ಆಗಿರುವ ಈ ವಿಡಿಯೋ ನೋಡಿ ಆತ ನಿಜವಾಗಲೂ ಅದೃಷ್ಟವಂತ ಎಂದು ಹಲವಾರು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

VISTARANEWS.COM


on

By

Viral News
Koo

ಕಂಪನಿಯಲ್ಲಿ ಗರಿಷ್ಠ ಎಂದರೆ ಒಂದೆರಡು ತಿಂಗಳು ರಜೆ (leave) ತೆಗೆಯಬಹುದು. ಅದೂ ಅನಾರೋಗ್ಯದ ನಿಮಿತ್ತ ಮಾತ್ರ. ಆದರೆ ಇಲ್ಲೊಬ್ಬ ಕಂಪನಿಯಿಂದ 365 ದಿನಗಳ ಪಾವತಿ ರಜೆ (Paid Leaves) ಪಡೆದಿದ್ದಾನೆ. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral News) ಆಗಿದ್ದು, ಸಾಕಷ್ಟು ಮಂದಿ ಇಂತಹ ರಜೆ ನಮಗೆ ಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರೋಗ್ಯಕರ ಕೆಲಸ ಮತ್ತು ಜೀವನದ ಸಮತೋಲನ ಕಾಪಾಡಿಕೊಳ್ಳಲು ಹೆಚ್ಚಿನ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಪಾವತಿ ರಜೆಗಳನ್ನು ಒದಗಿಸುತ್ತವೆ. ಇದು ಎಲ್ಲ ಕಂಪನಿಗಳಲ್ಲಿ ಒಂದೇ ರೀತಿ ಇರುವುದಿಲ್ಲ. ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತದೆ. ಆದರೆ ಈ ರಜೆಯನ್ನು ಒಂದು ವರ್ಷದವರೆಗೆ ವಿಸ್ತರಿಸುವ ಅವಕಾಶ ಎಲ್ಲೂ ಇರುವುದಿಲ್ಲ.

ಆದರೆ ಇಲ್ಲೊಬ್ಬ ಮಾತ್ರ 365 ದಿನಗಳ ಅಂದರೆ ವರ್ಷಪೂರ್ತಿ ರಜೆಯನ್ನು ಪಡೆಯುವ ಅವಕಾಶ ಪಡೆದುಕೊಂಡಿದ್ದಾನೆ. ಅದು ಸಂಬಳ ಸಮೇತ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ ನೋಡಿ ಆತ ನಿಜವಾಗಲೂ ಅದೃಷ್ಟವಂತ ಎಂದು ಹಲವಾರು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಚೀನಾದ ಶೆನ್‌ಜೆನ್ ಪ್ರದೇಶದ ವ್ಯಕ್ತಿಯೊಬ್ಬ ಕಂಪನಿಯ ಪಾರ್ಟಿಯಲ್ಲಿ ಲಕ್ಕಿ ಡ್ರಾ ಗೆದ್ದ ಅನಂತರ 365 ದಿನಗಳ ವೇತನ ಸಹಿತ ರಜೆಯನ್ನು ಗಳಿಸಿದ್ದಾನೆ.

ಸಂಸ್ಥೆಯಲ್ಲಿ ನಡೆದ ಭಾನುವಾರದ ಭೋಜನಕೂಟದಲ್ಲಿ ಭಾಗವಹಿಸಿದ ಉದ್ಯೋಗಿ ಆ ರಾತ್ರಿ ದೊಡ್ಡ ಸೌಲಭ್ಯವನ್ನು ಪಡೆದನು. 365 ದಿನಗಳವರೆಗೆ ದೀರ್ಘ ರಜೆಯನ್ನು ನೀಡುವ ಚೆಕ್ ಅವರಿಗೆ ಸಿಕ್ಕಿತ್ತು. ಆ ಚೆಕ್‌ನಲ್ಲಿ “365 ದಿನಗಳ ಪಾವತಿಸಿದ ರಜೆ” ಎಂದು ಬರೆಯಲಾಗಿದೆ.

ಇದಕ್ಕೆ ಸಾಕಷ್ಟು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಈ ಘಟನೆ ಕಳೆದ ವರ್ಷದ್ದು. ಆದರೂ ಅದೀಗ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತರ ಉದ್ಯೋಗಿಗಳು ಆತನ ಬಗ್ಗೆ ಖಂಡಿತ ಅಸೂಯೆ ಪಟ್ಟಿರುತ್ತಾರೆ ಎಂದು ಹೇಳಿದ್ದಾರೆ. ಇನ್ನು ಕೆಲವರು “ನಮಗೆ ಅದು ಬೇಕು” ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನು ಕೆಲವರು ಇಷ್ಟೊಂದು ರಜೆಯೇ ಎಂದು ಈ ಗೆಲುವಿನ ಬಗ್ಗೆ ಭಯ ವ್ಯಕ್ತಪಡಿಸಿದ್ದು, ಇದು ಅಪಾಯಕಾರಿ ಎಂದು ಹೇಳಿದ್ದಾರೆ. ಇದರಿಂದ ಉದ್ಯೋಗಿಗಳ ಉದ್ಯೋಗ ಭವಿಷ್ಯಕ್ಕೆ ಅಪಾಯ ಉಂಟಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನೊಬ್ಬರು ಕಾಮೆಂಟ್ ನಲ್ಲಿ 366 ನೇ ದಿನ: ಕ್ಷಮಿಸಿ, ಕಡಿಮೆ ಕಾರ್ಯಕ್ಷಮತೆ ಮತ್ತು ಅಸಮರ್ಥತೆಯ ಕಾರಣದಿಂದ ನಿಮ್ಮನ್ನು ವಜಾಗೊಳಿಸಲು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ತಂಡ ಗೆದ್ದ ಸಂತಸದಲ್ಲಿ ಬಣ್ಣದ ಚಿಟ್ಟೆಯಂತೆ ಹಾರಾಡಿ ಸಂಭ್ರಮಿಸಿದ ಹೈದರಾಬಾದ್​ ಮಾಲಕಿ ಕಾವ್ಯಾ ಮಾರನ್

365 ದಿನಗಳ ವೇತನ ಸಹಿತ ರಜೆಯ ಪ್ರಸ್ತಾಪವನ್ನು ಇದು ಹೊಂದಿರಲಿಲ್ಲ. ಇದು ಹೆಚ್ಚಿನದನ್ನು ಹೊಂದಿತ್ತು. ವರದಿಗಳ ಪ್ರಕಾರ ಕಂಪೆನಿಯ ವಿಜೇತ ಉದ್ಯೋಗಿಗೆ ಪಾವತಿಸಿದ ರಜೆ ಮತ್ತು ಇನ್ನೊಂದು ವಿಶಿಷ್ಟ ಕೊಡುಗೆಯ ಬಗ್ಗೆ ಚರ್ಚಿಸಲು ತೀರ್ಮಾನಿಸಿತ್ತು. ಆತ ದೀರ್ಘವಾದ ರಜೆಯನ್ನು ಆನಂದಿಸುತ್ತಾನೋ ಅಥವಾ ಕೆಲಸ ಮಾಡುವ ಮೂಲಕ ಹಣವನ್ನು ಎನ್‌ಕ್ಯಾಶ್ ಮಾಡಲು ಬಯಸುತ್ತಾನೋ ಎಂಬ ಲೆಕ್ಕಾಚಾರ ಇದರಲ್ಲಿತ್ತು ಎನ್ನಲಾಗಿದೆ.

Continue Reading

ಕ್ರೀಡೆ

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Shreyanka Patil: ಆರ್​ಸಿಬಿ(RCB) ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್(Shreyanka Patil)​ ಅವರು ಗೌರಿ(Gowri) ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್(Samarjit Lankesh) ಜತೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Shreyanka Patil
Koo

ಬೆಂಗಳೂರು: ಟೀಮ್​ ಇಂಡಿಯಾದ ಹಾಗೂ ಆರ್​ಸಿಬಿ(RCB) ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್(Shreyanka Patil)​ ಅವರು ಗೌರಿ(Gowri) ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್(Samarjit Lankesh) ಜತೆ ಮಸ್ತ್​ ಸ್ಟೆಪ್ಸ್(shreyanka patil dance)​ ಹಾಕಿದ ವಿಡಿಯೊವೊಂದು ವೈರಲ್​ ಆಗಿದೆ.

ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದ ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಶ್ರೇಯಾಂಕಾ ಪಾಟೀಲ್ ಕೂಡ ಭಾಗಿಯಾಗಿದ್ದರು. ಇದೇ ವೇಳೆ ಅವರು ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕಾ ಪಾಟೀಲ್ ಹುಕ್ ಸ್ಟೆಪ್ ಹಾಕಿ ಮಿಂಚಿದರು. ಶ್ರೇಯಾಂಕಾ ಮತ್ತು ಸಮರ್ಜಿತ್ ಡ್ಯಾನ್ಸ್‌ಗೆ ವಿದ್ಯಾರ್ಥಿಗಳು ಕೂಡಾ ಫಿದಾ ಆಗಿದ್ದರು.

ಈ ನೃತ್ಯದ ವಿಡಿಯೊವನ್ನು ಸಮರ್ಜಿತ್ ಲಂಕೇಶ್ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಧನ್ಯವಾದ ಕೂಡ ತಿಳಿಸಿದ್ದಾರೆ. “ನಮ್ಮ ಚಿತ್ರದ ಟೀಸರ್ ಬಿಡುಗಡೆಗೆ ತುಂಬಾ ಶಕ್ತಿ ತಂದಿದ್ದಕ್ಕಾಗಿ. ಮೈದಾನದಲ್ಲಿ ಮತ್ತು ಹೊರಗೆ ಅದ್ಭುತವಾದ ಪ್ರದರ್ಶನ ತೋರಿದ್ದಕ್ಕೆ ಈ ನರ್ತಕಿಯನ್ನು ಮರೆಯಬಾರದು… ನಮ್ಮ RCB ರಾಣಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿರುವ ಚಿತ್ರ ಇದಾಗಿದೆ. ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.


ʻʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ. ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆದಿದ್ದಾರೆ.

21 ವರ್ಷದ ಶ್ರೇಯಾಂಕಾ ಪಾಟೀಲ್ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಆರ್‌ಸಿಬಿ ಮಹಿಳಾ ತಂಡಕ್ಕೆ ಆಯ್ಕೆಯಾದರು. ಇಲ್ಲಿ ತೋರಿದ ಪ್ರದರ್ಶನದಿಂದ ಅವರು ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿಯೂ ಆಡುವಂತೆ ಮಾಡಿತ್ತು. ಹಂತ ಹಂತವಾಗಿ ಬೆಳೆದ ಇವರು 2023ರಲ್ಲಿ 21 ವಷದೊಳಗಿನ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅವಕಾಶ ಪಡೆದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

Continue Reading

ಕ್ರೈಂ

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

ಮುಜಾಫರ್‌ನಗರದ ಹಳ್ಳಿಯೊಂದರಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ 50 ವರ್ಷದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕನನ್ನು (Teenage Boy Arrested) ಬಂಧಿಸಲಾಗಿದೆ.

VISTARANEWS.COM


on

By

Teenage boy arrested
Koo

ಉತ್ತರಪ್ರದೇಶ: ಅತ್ಯಾಚಾರಿಯನ್ನು (rapist) ಕೊಂದ ಹದಿಹರೆಯದ ಬಾಲಕನನ್ನು (Teenage Boy Arrested) ಉತ್ತರಪ್ರದೇಶದ (Uttar Pradesh) ಮುಜಾಫರ್‌ನಗರದಲ್ಲಿ (Muzaffarnagar) ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 302 (Murder) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಮುಜಾಫರ್‌ನಗರದ ಹಳ್ಳಿಯೊಂದರಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ 50 ವರ್ಷದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕನನ್ನು ಬಂಧಿಸಲಾಗಿದೆ. ಮೇ 20ರಂದು ಬಾಲಕನ ಮನೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸ್ ತನಿಖೆಯ ಅನಂತರ ಹದಿಹರೆಯದವರನ್ನು ಶನಿವಾರ ಬಂಧಿಸಲಾಯಿತು.

ವ್ಯಕ್ತಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ ಅನಂತರ ಬಾಲಕನ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಎಸ್ಪಿ (ಗ್ರಾಮೀಣ) ಆದಿತ್ಯ ಬನ್ಸಾಲ್ ಅವರು, ವಾರಗಳ ಹಿಂದೆ ಮೃತರು ಅಪ್ರಾಪ್ತ ವಯಸ್ಕನನ್ನು ಅಶ್ಲೀಲ ವಿಡಿಯೋ ಕ್ಲಿಪ್ ಅನ್ನು ರೆಕಾರ್ಡ್ ಮಾಡಿದ್ದರು. ಬಾಲಕನಿಗೆ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಮತ್ತು ಪದೇ ಪದೇ ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು.

ಸೋಮವಾರ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ ಅನಂತರ, ವ್ಯಕ್ತಿ ತನ್ನ ಮನೆಗೆ ಬರುವಂತೆ ಬಾಲಕನಿಗೆ ಒತ್ತಾಯಿಸಿದ್ದನು. ಆತ ಕಿರುಕುಳ ನೀಡುತ್ತಿದ್ದುದರಿಂದ ಹುಡುಗ ತನ್ನ ಪಕ್ಕದಲ್ಲಿದ್ದ ಹರಿತವಾದ ವಸ್ತುವನ್ನು ಎತ್ತಿಕೊಂಡು ಹೋಗಿ ವ್ಯಕ್ತಿಯ ತಲೆ ಮತ್ತು ಗಂಟಲಿನ ಮೇಲೆ ಹಲ್ಲೆ ನಡೆಸಿದ್ದ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಆತನ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರೀತಿಗೆ ವಿರೋಧ; ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿಯ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಅಜಯ್ ಮನೋಹರ ಸೂರ್ಯವಂಶಿ (22) ಮೃತ ವ್ಯಕ್ತಿ. ಕೆಲವು ವರ್ಷಗಳಿಂದ ಈತ ಯುವತಿಯೊಬ್ಬಳನ್ನು ಪ್ರೀತಿಸುತಿದ್ದ, ಆದರೆ ತನ್ನ ತಂಗಿಯನ್ನು ಮರೆತು ಬಿಡುವಂತೆ ಆಕೆಯ ಅಣ್ಣ ಯುವಕನಿಗೆ ಧಮ್ಕಿ ಹಾಕಿದ್ದ. ಹೀಗಾಗಿ ಆತನ ಭಯಕ್ಕೆ ಹೆದರಿ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಹೊಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಸಹಾಯದಿಂದ ಯುವತಿಯರಿಗೆ ಬಲೆ; ಮಹಿಳೆಯಂತೆ ಮಾತನಾಡಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಹಿಟ್‌ ಆ್ಯಂಡ್‌ ರನ್‌: ಪಾದಚಾರಿ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕ್ರೀಡೆ

Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Hardik Pandya: ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Hardik Pandya
Koo

ಲಂಡನ್​: ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರ ವಿವಾಹ ಮುರಿದು ಬಿದ್ದಿದೆಯೇ?, ಈ ಜೋಡಿ ವಿಚ್ಛೇದನಕ್ಕೆ ಪಡೆಯಲಿದೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ನತಾಶಾ ರಹಸ್ಯ ಪೋಸ್ಟ್ ಒಂದನ್ನು ಮಾಡಿದ್ದಾರೆ. ಈ ಪೋಸ್ಟ್​ ನೋಡುವಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿದೆ.

ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿದೆ. ಈ ಫೋಟೊವನ್ನು ಅವರು ತಮ್ಮ ಮುಂದಿನ ಜೀವನದ ಅರ್ಥ ಕಲ್ಪಿಸುವ ನಿಟ್ಟಿನಲ್ಲಿಯೇ ಹಾಕಿದಂತಿದೆ.


ವಿಚ್ಛೇದನದ ಸುದ್ದಿಯ ನಡುವೆ, ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದಾರೆ. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಸಾರ್ವಜನಿಕಗಾಗಿ ಹೋಗುತ್ತಿರುವ ವಿಡಿಯೊ ವೈರಲ್ ಆಗಿದ್ದು ಪಾಪರಾಜಿಗಳು (ಕ್ಯಾಮೆರಾಮನ್​ಗಳು) ಅವರಿಬ್ಬರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ನಟಿ ದಿಶಾ ಪಠಾಣಿ ಅವರ ವದಂತಿಯ ಗೆಳೆಯ ಅಲೆಕ್ಸಾಂಡರ್ ಅಲೆಕ್ಸ್ಲಿಕ್​ ಮತ್ತು ನತಾಶಾ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಪಾಪರಾಜಿಗಳಿಂದ ಸಾಕಷ್ಟು ವಿನಂತಿಗಳನ್ನು ಪಡೆದ ನಂತರ ನತಾಶಾ ಪೋಸ್ ನೀಡಿದ್ದಾರೆ. ಹೀಗಾಗಿ ಪಾಂಡ್ಯಾ ಜತೆಗಿನ ಡೈವೋರ್ಸ್​ ಪ್ರಕರಣವನ್ನು ಇನ್ನಷ್ಟು ಆಸಕ್ತಿದಾಯಕವಾಗಿದೆ. ಐಪಿಎಲ್ 2024 ರಲ್ಲಿ ಹಾರ್ದಿಕ್ ತಮ್ಮ ಉನ್ನತ ನಿರೀಕ್ಷೆಗಳಿಗೆ ತಕ್ಕ ಹಾಗೆ ಆಡಿಲ್ಲ. ಪತಿ ಸೋಲುತ್ತಿದ್ದರೂ ಒಂದೇ ಒಂದು ಬಾರಿಯೂ, ನತಾಶಾ ತಮ್ಮ ಪತಿಯ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ಟ್ಯಾಂಡ್​ಗಳಿಗೆ ಬಂದಿರಲಿಲ್ಲ.

ಇದನ್ನೂ ಓದಿ Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

Continue Reading
Advertisement
Prajwal Revanna Case Will SIT team go abroad for arrest Prajwal
ಕ್ರೈಂ5 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

Robert Vadra
ದೇಶ5 mins ago

Robert Vadra: “ಮಣಿಶಂಕರ್‌ ಅಯ್ಯರ್‌ ಬಾಯಿ ಬಡುಕ…ಕೇಜ್ರಿವಾಲ್‌ ಅವಕಾಶವಾದಿ”-ರಾಬರ್ಟ್‌ ವಾದ್ರಾ ಅಚ್ಚರಿಯ ಹೇಳಿಕೆ

Gautam Gambhir
ಕ್ರೀಡೆ19 mins ago

Gautam Gambhir : ಟ್ರೋಫಿ ಗೆದ್ದ ಸಂಭ್ರಮ; ಗಂಭೀರ್​ಗೆ ಖಾಲಿ ಚೆಕ್​ ಕೊಟ್ಟರೇ ಶಾರುಖ್​ ಖಾನ್​ ?

Netraa Jadhav Out From Serial perform Yakshagana on the special occasion
ಕಿರುತೆರೆ33 mins ago

Netraa Jadhav: ಸೀರಿಯಲ್‌ನಿಂದ ಔಟ್‌ ಆಗುತ್ತಿದ್ದಂತೆ ʻಯಕ್ಷಗಾನʼದಲ್ಲಿ ಶಾರ್ವರಿ ಶೈನ್‌!

Pune Porsche accident
ದೇಶ53 mins ago

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಇಬ್ಬರು ವೈದ್ಯರು ಅರೆಸ್ಟ್‌

Chris Gayle
ಕ್ರಿಕೆಟ್53 mins ago

Chris Gayle : ಎಣ್ಣೆ ಹೊಡಿತಾ ಕೆಕೆಆರ್ ತಂಡಕ್ಕೆ ಶುಭಾಶಯ ತಿಳಿಸಿದ ಕ್ರಿಸ್​ ಗೇಲ್; ಇಲ್ಲಿದೆ ವಿಡಿಯೊ

Comedy Khiladigalu anchor anushree and Jaggesh Remembers Dogs
ಕಿರುತೆರೆ1 hour ago

Comedy Khiladigalu: ನನ್ನ ಮಗ ಚಿನ್ನುವನ್ನು ಇದೇ ಕೈಯಲ್ಲಿ ಕಳ್ಕೊಂಡೆ: ಅನುಶ್ರೀ ಭಾವುಕ!

kalaburagi illegal relationship
ಕ್ರೈಂ1 hour ago

Illegal Relationship:`ಅತ್ತಿಗೆಯಿಂದ ದೂರ ಇರುʼ ಎಂದ ಮೈದುನನ ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ

IPL 2024
ಕ್ರೀಡೆ1 hour ago

IPL 2024 : ಕೆಕೆಆರ್​ ಗೆದ್ದ ಬಳಿಕ ವಿವಾದಿತ ಫ್ಲೈಯಿಂಗ್ ಕಿಸ್​ ಕೊಟ್ಟ ಶಾರುಖ್ ಖಾನ್​; ಇದಕ್ಕೂ ಒಂದು ಕಾರಣವಿದೆ

Ranbir Kapoor and Alia Bhatt flew to Italy
ಬಾಲಿವುಡ್2 hours ago

Anant Ambani Radhika: ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌: ಇಟಲಿಗೆ ಹೊರಟ ಆಲಿಯಾ ಭಟ್ ದಂಪತಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು18 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ7 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌