Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ - Vistara News

Lok Sabha Election 2024

Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

Namma Metro: ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲ 4 ಟರ್ಮಿನಲ್‌ಗಳಿಂದ ಕೊನೆಯ ರೈಲು ಸೇವೆ ರಾತ್ರಿ 11.55ಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಶುಕ್ರವಾರ 11 ಗಂಟೆ ಇದ್ದ ಅವಧಿಯನ್ನು ವಿಸ್ತರಣೆ ಮಾಡಿ 12.35ಕ್ಕೆ (ಶನಿವಾರ) ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಾಹಿತಿ ನೀಡಿದೆ.

VISTARANEWS.COM


on

on April 26 Namma Metro Service extended till late night
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ (Namma Metro) ವತಿಯಿಂದ ಅಂದು ಪ್ರಯಾಣಿಕರ ಅನುಕೂಲಕ್ಕಾಗಿ ತನ್ನ ಸೇವಾ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ನೀಡಿದೆ.

ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲ 4 ಟರ್ಮಿನಲ್‌ಗಳಿಂದ ಕೊನೆಯ ರೈಲು ಸೇವೆ ರಾತ್ರಿ 11.55ಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಶುಕ್ರವಾರ 11 ಗಂಟೆ ಇದ್ದ ಅವಧಿಯನ್ನು ವಿಸ್ತರಣೆ ಮಾಡಿ 12.35ಕ್ಕೆ (ಶನಿವಾರ) ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

Narendra Modi: ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಗಿದಿದೆ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸೇರಿ ಎಲ್ಲ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ವಿಶ್ವಾಸದ ಮಾತುಗಳನ್ನಾಡಿದ್ದಾರೆ.

“ನಮ್ಮ ಗುರಿ ತುಂಬ ದೊಡ್ಡದಿದೆ. ಇಷ್ಟೊಂದು ದೊಡ್ಡ ದೇಶದಲ್ಲಿ ಜನರ ಯಾರಿಗೆ ಮತ ಹಾಕಬೇಕು ಎಂಬುದನ್ನು ಸುಲಭವಾಗಿ ತೀರ್ಮಾನಿಸುತ್ತಾರೆ. ಜನರಿಗೆ ಇರುವ ಅನುಭವವು ಅವರು ಸುಲಭವಾಗಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ದೇಶದ ಜನರಿಗೆ ಎಲ್ಲವೂ ಗೊತ್ತಿದೆ. ಯಾವುದೇ ಪಕ್ಷ, ವ್ಯಕ್ತಿ ಇರಲಿ, ಜನರು ಯಾರನ್ನು ಗೆಲ್ಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಹಾಗಾಗಿಯೇ, ನಾವು ಮುಂದಿನ ದಿನಗಳಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಂಡಿದ್ದೇವೆ. ದೇಶದ ಆಡಳಿತ, ಅಭಿವೃದ್ಧಿಯ ನೀಲನಕ್ಷೆ ನಮ್ಮ ಬಳಿ ಇದೆ” ಎಂದು ಮೋದಿ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

“ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕಾರ್ಯಸೂಚಿಯನ್ನು ಹಾಕಿಕೊಂಡು ಬನ್ನಿ ಎಂಬುದಾಗಿ ನಮ್ಮ ಸಚಿವರಿಗೆ ಸೂಚಿಸಿದ್ದೇನೆ” ಎಂದು ಮೋದಿ ತಿಳಿಸಿದರು.

“ನಮ್ಮ ಮುಂದಿನ ಆಡಳಿತವು ಒಂದು ಪ್ರದೇಶ, ಕೆಲವು ಭಾಗಗಳಿಗೆ ಸೀಮಿತವಾಗಿರುವುದಿಲ್ಲ. ದೊಡ್ಡ ಗುರಿಯನ್ನು ಕ್ಷಿಪ್ರವಾಗಿ ಸಾಧಿಸುವ ಛಲವನ್ನು ನಾವು ಹೊಂದಿದ್ದೇವೆ. ಗುರಿ ದೊಡ್ಡದಾಗಿ ಇಟ್ಟುಕೊಂಡು, ಅದರ ವೇಗಕ್ಕೆ ತಕ್ಕಂತೆ ಮುನ್ನಡೆಯುವುದು ನಮ್ಮ ಉದ್ದೇಶವಾಗಿದೆ. ಗುರಿ, ಉದ್ದೇಶ ಹಾಗೂ ವೇಗದ ಜತೆ ಸಾಗುವುದು ಕೂಡ ಒಂದು ಕೌಶಲವಾಗಿದೆ. ಆ ದಿಸೆಯಲ್ಲಿ ನಾವು ಮಹತ್ವದ ಸಂಗತಿಗಳನ್ನು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ” ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Continue Reading

ಪ್ರಮುಖ ಸುದ್ದಿ

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು ಎಂಬುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಆ ಮೂಲಕ ಕಾಂಗ್ರೆಸ್‌ ಪಕ್ಷವು ಹಿಂದು ವಿರೋಧಿ ಎನ್ನುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

Priyanka Vadra
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಧರ್ಮ, ಜಾತಿ, ರಾಮಮಂದಿರ, ಮೀಸಲಾತಿ ಸೇರಿ ಹತ್ತಾರು ವಿಷಯಗಳು ಮುನ್ನೆಲೆಗೆ ಬಂದಿವೆ. ಅದರಲ್ಲೂ, ಕಾಂಗ್ರೆಸ್‌ ಹಿಂದು ವಿರೋಧಿ ಎಂಬುದಾಗಿ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ (Priyanka Vadra) ತಿರುಗೇಟು ನೀಡಿದ್ದಾರೆ. “ಮಹಾತ್ಮ ಗಾಂಧೀಜಿ (Mahatma Gandhi) ಅವರು ಕೊನೆಯುಸಿರೆಳೆಯುವ ಮೊದಲೂ ಹೇ ರಾಮ್‌ ಎಂದಿದ್ದರು. ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಹಾಗೆಯೇ, ಹಿಂದು ಧರ್ಮದ ಆಶಯಗಳಂತೆ ಸ್ವಾತಂತ್ರ್ಯ ಹೋರಾಟ ಮಾಡಲಾಗಿದೆ” ಎಂದಿದ್ದಾರೆ.

ಇಂಡಿಯಾ ಟುಡೇಗೆ ಸಂದರ್ಶನ ನೀಡಿದ ವೇಳೆ ಅವರು ಈ ರೀತಿಯ ಪ್ರಸ್ತಾಪ ಮಾಡಿದ್ದಾರೆ. “ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್‌ ಹಿಂದು ವಿರೋಧಿ ಎಂಬಂತೆ ಬ್ರ್ಯಾಂಡ್‌ ಮಾಡಲಾಗುತ್ತಿದೆ. ಅಷ್ಟಕ್ಕೂ ನಮ್ಮ ಪಕ್ಷದ ದೊಡ್ಡ ನಾಯಕ ಯಾರು? ಮಹಾತ್ಮ ಗಾಂಧೀಜಿ ಅವರು ನಮ್ಮ ಪಕ್ಷದ ಧುರೀಣರು. ಸತ್ಯ ಹಾಗೂ ಅಹಿಂಸೆಯ ಆಧಾರದ ಮೇಲೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯಿತು. ಸತ್ಯಮೇವ ಜಯತೆ ಎಂಬ ತತ್ವದಂತೆ ಹೋರಾಟ ಮಾಡಲಾಯಿತು. ಹಿಂದು ಧರ್ಮದ ಬೋಧನೆ, ಆಶಯಗಳಂತೆ ಹೋರಾಟ ಮಾಡಲಾಯಿತು” ಎಂದು ಹೇಳಿದರು.

“ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು. ಇಷ್ಟೆಲ್ಲ ಇರುವಾಗ ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಖಂಡಿತವಾಗಿಯೂ ನಾವು ಹಿಂದು ವಿರೋಧಿಗಳು ಅಲ್ಲ. ರಾಹುಲ್‌ ಗಾಂಧಿ ಅವರು ಬೇರೆಯವರಿಗಿಂತ ಹಿಂದುತ್ವವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ” ಎಂದು ಸಂದರ್ಶನದ ವೇಳೆ ಪ್ರಿಯಾಂಕಾ ವಾದ್ರಾ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ತೆರಳದಿರುವ ಕುರಿತು ಬಿಜೆಪಿ ಆರೋಪಗಳ ಬಗೆಗಿನ ಪ್ರಶ್ನೆಗೂ ಪ್ರಿಯಾಂಕಾ ವಾದ್ರಾ ಉತ್ತರಿಸಿದರು. “ಬಿಜೆಪಿಯು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನ ಪಡೆಯಿತು. ಇದಾದ ಬಳಿಕ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳಲಾಯಿತು. ಹಾಗಾಗಿ, ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಹೋಗದಿರುವುದು ತಪ್ಪು ನಿರ್ಧಾರ ಎಂಬುದಾಗಿ ಹೇಳಲು ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. “ದೇಶದಲ್ಲಿ ಧರ್ಮ ಸೇರಿ ಹಲವು ಸೂಕ್ಷ್ಮ ವಿಚಾರಗಳನ್ನು ಬಿಜೆಪಿ, ನರೇಂದ್ರ ಮೋದಿ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ, ಧರ್ಮರಹಿತವಾಗಿ ಎಲ್ಲರಿಗೂ ಯೋಜನೆಗಳನ್ನು ಕಲ್ಪಿಸುವುದು ಕಾಂಗ್ರೆಸ್‌ ಗ್ಯಾರಂಟಿಯಾಗಿದೆ” ಎಂದರು.

ಇದನ್ನೂ ಓದಿ: Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Continue Reading

ದೇಶ

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Kangana Ranaut: ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಇದರ ಬೆನ್ನಲ್ಲೇ ಅವರು, ಚುನಾವಣೆಯಲ್ಲಿ ಗೆದ್ದರೆ ನಟನೆ ಬಿಡುವುದಾಗಿ ಘೋಷಿಸಿದ್ದಾರೆ.

VISTARANEWS.COM


on

Kangana Ranaut
Koo

ನವದೆಹಲಿ: ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರು ರಾಜಕೀಯಕ್ಕೆ ಧುಮುಕಿದ್ದು, ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಜೂನ್‌ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ (Lok Sabha Election 2024) ನಡೆಯುವ ಕಾರಣ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಕಂಗನಾ ರಣಾವತ್‌ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ನಟನೆಯನ್ನು ಬಿಟ್ಟುಬಿಡುತ್ತೇನೆ” ಎಂಬುದಾಗಿ ಹೇಳಿದ್ದಾರೆ.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ರಣಾವತ್‌ ಅವರು ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಪಂಗಾ, ಮಣಿಕರ್ಣಿಕಾ: ದಿ ಕ್ವೀನ್‌ ಆಫ್‌ ಜಾನ್ಸಿ, ಜಡ್ಜ್‌ಮೆಂಟಲ್‌ ಹೈ ಕ್ಯಾ, ತನು ವೆಡ್ಸ್‌ ಮನು ರಿಟರ್ನ್ಸ್‌ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು ಅಭಿನಯದ ತಲೈವಿ ಸಿನಿಮಾಗೆ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿತ್ತು.

91 ಕೋಟಿ ರೂ. ಆಸ್ತಿಗೆ ಒಡತಿ

ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಕಂಗನಾ ರಣಾವತ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇವರು ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಇದನ್ನೂ ಓದಿ: Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

Continue Reading

ದೇಶ

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ ಎಂಬುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿದೆ.

VISTARANEWS.COM


on

Constitution
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳ ನಾಯಕರ ಹೇಳಿಕೆಗಳು ಮೊನಚಾಗಿವೆ. ಆರೋಪ, ಪ್ರತ್ಯಾರೋಪ, ವಾಗ್ದಾಳಿ, ವಾಗ್ಬಾಣಗಳ ಜತೆಗೆ ವೈಯಕ್ತಿಕ ನಿಂದನೆ, ಆರೋಪಗಳು ಕೂಡ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. “ರಾಹುಲ್‌ ಗಾಂಧಿ ಅವರು ಸಭೆ-ಸಮಾವೇಶಗಳಲ್ಲಿ ಜನರಿಗೆ ಚೀನಾ ಸಂವಿಧಾನ ಪ್ರದರ್ಶಿಸುತ್ತಿದ್ದಾರೆ” ಎಂದು ಸಿಎಂ ಆರೋಪಿಸಿದ್ದಾರೆ. ಇದು ಈಗ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ.

“ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ. ರಾಹುಲ್‌ ಗಾಂಧಿ ಅವರು ಚೀನಾ ಸಂವಿಧಾನವನ್ನು ಜನರಿಗೆ ಪ್ರದರ್ಶಿಸುತ್ತಿದ್ದಾರೆಯೇ? ಈ ಕುರಿತು ಪರಿಶೀಲನೆ ಆಗಬೇಕು” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅಸ್ಸಾಂ ಮುಖ್ಯಮಂತ್ರಿ ಪೋಸ್ಟ್‌ ಮಾಡಿದ್ದಾರೆ.

“ನಮ್ಮ ಸಂವಿಧಾನವು ನೀಲಿ ಕವರ್‌ ಹೊಂದಿದ್ದು, ಮೂಲಭೂತ ಕರ್ತವ್ಯಗಳ ಬಗ್ಗೆ ಉಲ್ಲೇಖವಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂಬುದಾಗಿ ಮೂಲಭೂತ ಕರ್ತವ್ಯವು ತಿಳಿಸುತ್ತದೆ. ಆದರೆ, ರಾಹುಲ್‌ ಗಾಂಧಿ ಅವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೇ ಕಾರಣಕ್ಕಾಗಿ ಅವರು ಚೀನಾ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ತಿರುಗಾಡುತ್ತಿರಬಹುದು” ಎಂದು ಕೂಡ ಹಿಮಂತ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ.

ಕಾಂಗ್ರೆಸ್‌ ತಿರುಗೇಟು

ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗೆ ಕಾಂಗ್ರೆಸ್‌ ಶಾಸಕ ಅಬ್ದುಲ್‌ ರಶೀದ್‌ ಮೊಂಡಲ್‌ ತಿರುಗೇಟು ನೀಡಿದ್ದಾರೆ. “ಭಾರತ ಸಂವಿಧಾನದ ಕವರ್‌ಗಳ ಬಣ್ಣವು ಬೇರೆ ಬೇರೆ ಇದೆ. ಕವರ್‌ ಬಣ್ಣ ಬೇರೆಯಾದರೂ ಸಂವಿಧಾನದ ಆಶಯಗಳು ಒಂದೇ ಆಗಿವೆ. ಅಷ್ಟಕ್ಕೂ ನಾವು ಬಣ್ಣವನ್ನು ಓದುವುದಿಲ್ಲ. ಸಂವಿಧಾನದ ಆಶಯ, ಉದ್ದೇಶಗಳನ್ನು ಪಾಲಿಸುತ್ತೇವೆ” ಎಂದಿದ್ದಾರೆ. “ಭಾರತ ಸಂವಿಧಾನದ ಪಾಕೆಟ್‌ ಎಡಿಷನ್‌ನ ಪ್ರತಿಯು ನೀಲಿ ಬಣ್ಣದ ಕವರ್‌ ಹೊಂದಿದೆ” ಎಂದು ಕೂಡ ಕೆಲ ಜಾಲತಾಣಿಗರು ಹಿಮಂತ ಬಿಸ್ವಾ ಶರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Continue Reading
Advertisement
viral video
ವೈರಲ್ ನ್ಯೂಸ್17 mins ago

Viral Video: ಅಬ್ಬಾ..ಹಸುಗಳ ಫೈಟ್‌ಗೆ ಬಾಲಕಿ ಅಪ್ಪಚ್ಚಿ! ಶಾಕಿಂಗ್‌ ವಿಡಿಯೋ ವೈರಲ್‌

Murder case
ಕ್ರೈಂ19 mins ago

Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

Sobhita Dhulipala golden new look from Cannes Film Festival
ಬಾಲಿವುಡ್33 mins ago

Cannes 2024: ಆಸ್ಕರ್‌ ಪ್ರಶಸ್ತಿಯ ಆಕಾರದಂತೆ ಕಂಡ ಶೋಭಿತಾ ಧೂಲಿಪಾಲ!

IPL 2024 Man commits suicide after taking loan for IPL betting
ರಾಯಚೂರು40 mins ago

IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

MLC Election
ಕರ್ನಾಟಕ43 mins ago

MLC Election: ವಿಧಾನ ಪರಿಷತ್‌ ಚುನಾವಣೆ; ನೈಋತ್ಯ ಶಿಕ್ಷಕರ ಕ್ಷೇತ್ರದ 1 ನಾಮಪತ್ರ ತಿರಸ್ಕೃತ

Kannada New Movie anartha cinema teaser Out
ಸ್ಯಾಂಡಲ್ ವುಡ್1 hour ago

Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

Air india
ದೇಶ1 hour ago

Air India: ಏರ್‌ ಇಂಡಿಯಾ ವಿಮಾನದಲ್ಲಿ ಮತ್ತೆ ಅವಘಡ; ತಪ್ಪಿದ ಭಾರೀ ದುರಂತ; ತುರ್ತು ಭೂ ಸ್ಪರ್ಶ

Aishwarya Rai undergo surgery post her return from Cannes Film Festival
ಬಾಲಿವುಡ್2 hours ago

Aishwarya Rai:   ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಮುಗಿದ ಬಳಿಕ ಐಶ್ವರ್ಯಾ ರೈ ಕೈಗೆ ಶಸ್ತ್ರ ಚಿಕಿತ್ಸೆ

IPL 2024
ಐಪಿಎಲ್ 20242 hours ago

IPL 2024: ಸಿಎಸ್‌ಕೆ ತಂಡವನ್ನು ಸೋಲಿಸಿದ ಆರ್‌ಸಿಬಿ; ಪ್ಲೇ ಆಫ್‌ನಲ್ಲಿ ಯಾರು ಯಾರಿಗೆ ಎದುರಾಳಿ? ಇಲ್ಲಿದೆ ವೇಳಾಪಟ್ಟಿ

viral video
ವೈರಲ್ ನ್ಯೂಸ್2 hours ago

Viral Video: ಛೀ…ಈತನೆಂಥಾ ಕಾಮುಕ! ಸಾರ್ವಜನಿಕ ಸ್ಥಳದಲ್ಲಿ ಈ ಪಾಪಿ ಬಾಲಕಿಗೆ ಮಾಡಿದ್ದೇನು ಗೊತ್ತಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌