DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್ - Vistara News

ಕ್ರೀಡೆ

DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

DC vs GT: ಗುಜರಾತ್​ ವಿರುದ್ಧದ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಟ್ರಿಸ್ಟಾನ್ ಸ್ಟಬ್ಸ್ ಕೇವಲ 7 ಎಸೆತಗಳಿಂದ 26 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 2 ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಯಿತು.

VISTARANEWS.COM


on

DC vs GT
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ವಿರಾಟ್​ ಕೊಹ್ಲಿ(Virat Kohli) ಅವರು ಇದೇ ವರ್ಷಾರಂಭದಲ್ಲಿ ಅಫಘಾನಿಸ್ತಾನ ವಿರುದ್ಧದ ಟಿ20 ಪಂದ್ಯದಲ್ಲಿ ಸೂಪರ್​ ಮ್ಯಾನ್​ ರೀತಿಯಲ್ಲಿ ಹಾರಿ ಸಿಕ್ಸರ್​ ತಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೇ ರೀತಿಯಲ್ಲಿ ನಿನ್ನೆ (ಬುಧವಾರ) ನಡೆದ ಗುಜರಾತ್​ ಟೈಟಾನ್ಸ್​(DC vs GT) ವಿರುದ್ಧದ ಐಪಿಎಲ್(IPL 2024)​ ಪಂದ್ಯದಲ್ಲಿಯೂ ಡೆಲ್ಲಿ ತಂಡದ ಆಟಗಾರ ಟ್ರಿಸ್ಟಾನ್ ಸ್ಟಬ್ಸ್(Tristan Stubbs) ಕೂಡ ಸಿಕ್ಸರ್​ ತಡೆದು ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಟ್ರಿಸ್ಟಾನ್ ಸ್ಟಬ್ಸ್ ಫೀಲ್ಡಿಂಗ್​ನ ಈ ಫೋಟೊ ಎಲ್ಲಡೆ ವೈರಲ್​ ಆಗಿದ್ದು ಮಾಜಿ ಕ್ರಿಕೆಟಿಗರು ಕೊಹ್ಲಿ 2.0 ವರ್ಷನ್​ ಎಂದು ಹೇಳಿದ್ದಾರೆ.

ಗುಜರಾತ್ ಇನ್ನಿಂಗ್ಸ್‌ನ 19 ನೇ ಓವರ್‌ನಲ್ಲಿ ಈ ಘಟನೆ ಸಂಭವಿಸಿತು. ರೋಮಾಂಚನಕಾರಿ ಕ್ಲೈಮ್ಯಾಕ್ಸ್​ನಲ್ಲಿ ರಶೀದ್ ಖಾನ್ ಸ್ಟ್ರೈಕ್‌ನಲ್ಲಿದ್ದರು. ರಸಿಖ್ ಸಲಾಮ್‌ ಎಸೆದ ನಿಧಾನಗತಿಯ ಎಸೆತವನ್ನು ರಶೀದ್​ ಖಾನ್​ ಸಿಕ್ಸರ್​ಗೆ ಬಡಿದಟ್ಟಿದರು. ಈ ವೇಳೆ ಬೌಂಡರಿ ಲೈನ್​ನಲ್ಲಿ ನಿಂತಿದ್ದ ಟ್ರಿಸ್ಟಾನ್ ಸ್ಟಬ್ಸ್ ಎತ್ತರಕ್ಕೆ ಜಿಗಿದು ಸಿಕ್ಸರ್​ ತಡೆದರು. ಅವರು ಈ ಸಿಕ್ಸರ್​ ತಡೆದಯೇ ಹೋಗಿದ್ದರೆ ಡೆಲ್ಲಿ ಸೋಲು ಕಾಣುತ್ತಿತ್ತು. ಡೆಲ್ಲಿ ಗೆದ್ದದ್ದು ಕೇವಲ 4 ರನ್​ ಅಂತರದಿಂದ.

ಗುಜರಾತ್​ ವಿರುದ್ಧದ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಟ್ರಿಸ್ಟಾನ್ ಸ್ಟಬ್ಸ್ ಕೇವಲ 7 ಎಸೆತಗಳಿಂದ 26 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 2 ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಯಿತು.

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್​ ರಿಷಭ್​ ಪಂತ್​(88*) ಮತ್ತು ಅಕ್ಷರ್​ ಪಟೇಲ್​(66) ಅವರ ಸಮಯೋಚಿತ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 224 ರನ್​ ಪೇರಿಸಿತು. ಜವಾಬಿತ್ತ ಗುಜರಾತ್ ದಿಟ್ಟ ಹೋರಾಟ ನಡೆಸಿದರೂ 8 ವಿಕೆಟ್​ಗೆ 220 ರನ್​ ಬಾರಿಸಿ ಸಣ್ಣ ಅಂತರದಿಂದ ​ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

ಚೇಸಿಂಗ್​ ವೇಳೆ ಕೆಲ ಕ್ರಮಾಂಕದಲ್ಲಿ ಶಕ್ತಿ ಮೀರಿ ಬ್ಯಾಟಿಂಗ್​ ನಡೆಸಿದ ಡೇವಿಡ್​ ಮಿಲ್ಲರ್​ ಅರ್ಧಶತಕ ಬಾರಿಸುವ ಮೂಲಕ ಒಂದು ಹಂತದಲ್ಲಿ ಗುಜರಾತ್​ ಪಾಳಯದಲ್ಲಿ ಗೆಲುವಿನ ಆಸೆ ಚಿಗುರೊಡೆಯುವಂತೆ ಮಾಡಿದರು. ಆದರೆ ಉಳಿದ ಆಟಗಾರರಿಂದ ಉತ್ತಮ ಸಾಥ್​ ಸಿಗದ ಕಾರಣ ದೊಡ್ಡ ಹೊಡೆತಗಳಿಗೆ ಕೈ ಹಾಕಿ ರಾಸಿಖ್ ಸಲಾಂ ಅವರಿಗೆ ಕ್ಯಾಚ್​ ನೀಡಿ ವಿಕೆಟ್​ ಕೈಚೆಲ್ಲಿದರು. ಈ ವಿಕೆಟ್​ ಪತನದ ಬಳಿಕ ರಶೀದ್​ ಖಾನ್​ ಮತ್ತು ಸಾಯಿ ಕಿಶೋರ್​ ಸಿಡಿದು ನಿಂತರು. ಅಂತಿಮ ಓವರ್​ನಲ್ಲಿ ಗೆಲುವಿಗೆ 19 ರನ್​ ತೆಗೆಯುವ ಸವಾಲಿನಲ್ಲಿ ರಶೀದ್​ ಅವರು ಮುಕೇಶ್​ ಕುಮಾರ್​ಗೆ ಸತತ 2 ಬೌಂಡರಿ ಮತ್ತು ಒಂದು ಸಿಕ್ಸರ್​ ಬಾರಿಸಿ ಪಂದ್ಯವನ್ನು ರೋಚಕ ಹಂತಕ್ಕೆ ತಂದು ನಿಲ್ಲಿಸಿದರು. ಅಂತಿಮ ಎಸೆತದಲ್ಲಿ ಗೆಲುವಿಗೆ 5 ರನ್​ ಬೇಕಿದ್ದಾಗ ಇದನ್ನು ಬಾರಿಸುವಲ್ಲಿ ರಶೀದ್​ ಎಡವಿದರು. ಡೆಲ್ಲಿ ರೋಚಕ 4 ರನ್​ಗಳ ಗೆಲುವು ಸಾಧಿಸಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Hardik Pandya & Natasa Stankovic: ಹಾರ್ದಿಕ್​ ಪಾಂಡ್ಯಗೆ ಕೈ ಕೊಟ್ಟರೇ ಪತ್ನಿ ನತಾಶಾ!

Hardik Pandya & Natasa Stankovic: ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು.

VISTARANEWS.COM


on

Hardik Pandya & Natasa Stankovic
Koo

ಮುಂಬಯಿ: ಟಿ20 ವಿಶ್ವಕಪ್​ ಟೂರ್ನಿಗೆ ಸಜ್ಜಾಗುತ್ತಿರುವಾಗಲೇ ಟೀಮ್​ ಇಂಡಿಯಾದ ಉಪನಾಯಕ, ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರ ಖಾಸಗಿ ಬದುಕಿನಲ್ಲಿ ಬಿರುಕೊಂದು ಮೂಡಿದಂತಿದೆ. ಹೌದು, ಅವರ ಪತ್ನಿ ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರು ಪಾಂಡ್ಯ(Hardik Pandya & Natasa Stankovic) ಅವರಿಂದ ದೂರವಾಗಲು ಬಯಸಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.


ಅಂದು ಗೌನ್‌ ರೀತಿಯ ಬಿಳಿ ಉಡುಗೆಯನ್ನುಟ್ಟ ನತಾಶಾ ಮತ್ತು ಕಪ್ಪು ಸೂಟ್‌ನಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯಾ ವಿವಾಹ ವೇದಿಕೆಯ ಕಡೆ ಡ್ಯಾನ್ಸ್‌ ಮಾಡಿಕೊಂಡು ಬರುವ ವಿಡಿಯೋವೊಂದು ಭರ್ಜರಿ ಸದ್ದು ಮಾಡಿತ್ತು. ಇದೀಗ ಜೋಡಿ ಬೇರೆಯಾಗುತ್ತಿದ್ದಾರೆ ಎನ್ನಲಾಗಿದೆ. ಈ ಅನುಮಾನ ಹುಟ್ಟಿಕೊಳ್ಳಲು ಕಾರಣವೂ ಇದೆ.


ಇದನ್ನೂ ಓದಿ Hardik Pandya : ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್​​ನಲ್ಲಿ ಮತ್ತೆ ವಿಫಲ; ಬೆಂಡೆತ್ತಿದ ಅಭಿಮಾನಿಗಳು

ಹಾರ್ದಿಕ್​ ಪಾಂಡ್ಯ ಕಳೆದ 2 ಆವೃತ್ತಿಯಲ್ಲಿ ಗುಜರಾತ್​ ಟೈಟಾನ್ಸ್​ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಪ್ರತಿ ಪಂದ್ಯದಲ್ಲಿಯೂ ನತಾಶಾ ಸ್ಟೇಡಿಯಂಗೆ ಬಂದು ಗಂಡನಿಗೆ ಬೆಂಬಲ ಸೂಚಿಸಿದ್ದರು. ಆದರೆ ಈ ಬಾರಿ ಮುಂಬೈ ತಂಡವನ್ನು ಮುನ್ನಡೆಸಿ ವೇಳೆ ಒಮ್ಮೆಯೂ ಕೂಡ ನತಾಶಾ ಪಂದ್ಯ ನೋಡಲು ಸ್ಟೇಡಿಯಂಗೆ ಬಂದಿರಲಿಲ್ಲ. ಇದೀಗ ನತಾಶಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಮ್ಮ ಹೆಸರನ್ನು ಕೂಡ ಬದಲಿಸಿದ್ದಾರೆ ಹೀಗಾಗಿ ಈ ಜೋಡಿ ಬೇರ್ಪಡಲಿದ್ದಾರೆ ಎನ್ನಲಾಗಿದೆ.


ಹೌದು, ನತಾಶಾ ಸ್ಟಾಂಕೋವಿಕ್ ಪಾಂಡ್ಯ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಹೆಸರನ್ನು ಹೊಂದಿದ್ದರು. ಆದರೆ, ಇದೀಗ ಪಾಂಡ್ಯ ಅವರ ಹೆಸರನ್ನು ತೆಗೆದುಹಾಕಿದ್ದಾರೆ. ಮಾರ್ಚ್ 4 ರಂದು ನತಾಶಾ ಅವರ ಹುಟ್ಟುಹಬ್ಬವಿತ್ತು ಮತ್ತು ಆ ದಿನ ಹಾರ್ದಿಕ್ ಕೂಡ ಯಾವುದೇ ಪೋಸ್ಟ್ ಹಾಕಿಲ್ಲ. ನತಾಶಾ ಅವರು ಅಗಸ್ತ್ಯನೊಂದಿಗೆ ಇರುವ ಪೋಸ್ಟ್ ಹೊರತುಪಡಿಸಿ ತನ್ನ ಮತ್ತು ಹಾರ್ದಿಕ್ ಜತೆಗಿರುವ ಇತ್ತೀಚಿನ ಎಲ್ಲ ಪೋಸ್ಟ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಹಾರ್ದಿಕ್ ಮತ್ತು ನತಾಶಾ ನಡುವೆ ಬಿರುಕು ಮೂಡಿರುವುದು ನಿಜ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.


ರೋಹಿತ್ ಶರ್ಮಾರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಿ ತಾವೇ ತಂಡ ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಅಭಿಮಾನಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಜತೆಗೆ ಪಾಂಡ್ಯ ಕೆಟ್ಟ ನಾಯಕತ್ವದಿಂದ ಮುಂಬೈ ಹಿಂದೆದು ಕಾಣದ ಘೋರ ವೈಫಲ್ಯ ಕಂಡಿತ್ತು ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಈ ಬಾರಿ ಆಡಿದ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಿಯಾಯಿತು.

Continue Reading

ಕ್ರೀಡೆ

RR vs SRH: ಹೈದರಾಬಾದ್-ರಾಜಸ್ಥಾನ್ ನಡುವಣ ಇಂದಿನ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇದೆಯೇ?

RR vs SRH: ಈ ಬಾರಿಯ ಲೀಗ್​ನಲ್ಲಿ ಇತ್ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಅತ್ಯಂತ ರೋಚವಾಗಿ ಸಾಗಿದ ಈ ಪಂದ್ಯವನ್ನು ಸನ್​ರೈಸರ್ಸ್​ ಹೈದರಾಬಾದ್​ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಭುವನೇಶ್ವರ್​ ಕುಮಾರ್​ ಅಂತಿಮ ಎಸೆತದಲ್ಲಿ ರೋಮ್ಮನ್​ ಪೋವೆಲ್​ ಅವರನ್ನು ಎಲ್​ಬಿಡ್ಲ್ಯು ಮಾಡುವ ಮೂಲಕ ಈ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು

VISTARANEWS.COM


on

RR vs SRH
Koo

ಚೆನ್ನೈ: ಕೆಕೆಆರ್​ ವಿರುದ್ಧದ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಸೋಲು ಕಂಡ ಸನ್​ರೈಸರ್ಸ್​ ಹೈದರಾಬಾದ್(RR vs SRH)​ ಮತ್ತು ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಗೆಲುವು ಕಂಡ ರಾಜಸ್ಥಾನ್​ ರಾಯಲ್ಸ್​ ತಂಡಗಳು ಇಂದು ನಡೆಯುವ ದ್ವಿತೀಯ ಕ್ವಾಲಿಫೈಯರ್(SRH Vs RR Qualifier 2)​ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಯಾರೇ ಗೆದ್ದರೂ ಕೂಡ ಇದೇ ಮೈದಾನದಲ್ಲಿ ಭಾನುವಾರ ನಡೆಯುವ ಫೈನಲ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿದೆ. ಈ ತಂಡ ಯಾವುದು ಎನ್ನುವುದು ಇಂದಿನ ಪಂದ್ಯದ ಕುತೂಹಲ.

ಹವಾಮಾನ ವರದಿ


ಚೆನ್ನೈನಲ್ಲಿ(MA Chidambaram Stadium Weather Report) ಇಂದು ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್​​ ಮತ್ತು ರಾತ್ರಿಯಲ್ಲಿ ಕನಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಗಿದೆ. ಸಮುದ್ರ ಭಾಗದಲ್ಲಿ ಈ ಸ್ಟೇಡಿಯಂ ಇರುವ ಕಾರಣ ರಾತ್ರಿ ಇಲ್ಲಿ ಮಂಜು ಕೂಡ ಬೀಳಲಿದೆ. ಪಂದ್ಯಕ್ಕೆ ಯಾವುದೇ ಮಳೆಯ ಭೀತಿ ಇಲ್ಲ. ಸಂಪೂರ್ಣವಾಗಿ ಪಂದ್ಯ ಸಾಗಲಿದೆ.


ಒಂದೊಮ್ಮೆ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾದರೆ 120 ನಿಮಿಷಗಳ (2 ಗಂಟೆ) ಅವಧಿಗೆ ಪಂದ್ಯವನ್ನು ವಿಸ್ತರಿಸಬಹುದಾಗಿದೆ. ಆಗ 9.40ಕ್ಕೆ ಪಂದ್ಯ ಆರಂಭವಾಗುವುದಿದ್ದರೂ ಓವರ್‌ಗಳಲ್ಲಿ ಯಾವುದೇ ಕಡಿತ ಇರುವುದಿಲ್ಲ. ಸ್ಪಷ್ಟ ಫ‌ಲಿತಾಂಶಕ್ಕೆ ತಲಾ 5 ಓವರ್‌ಗಳ ಆಟ ನಡೆಯಬೇಕಿದೆ. ಹೆಚ್ಚುವರಿ ಅವಧಿಯಲ್ಲೂ ಇದು ಸಾಧ್ಯವಾಗದೇ ಹೋದರೆ ಲೀಗ್‌ ಹಂತದ ಅಂಕಪಟ್ಟಿಯಲ್ಲಿ ಮೇಲಿದ್ದ ತಂಡವನ್ನು ಜಯಶಾಲಿ ಎಂದು ಘೋಷಿಸಲಾಗುತ್ತದೆ. ಇದರ ಲಾಭ ಸನ್​ರೈಸರ್ಸ್​ ಹೈದರಾಬಾದ್​ ತಂಡಕ್ಕೆ ಸಿಗಲಿದೆ. ಹೈದರಾಬಾದ್​ ತಂಡ ಲೀಗ್​ ಹಂತದಲ್ಲಿ ದ್ವಿತೀಯ ಸ್ಥಾನಿಯಾಗಿತ್ತು.

ಇದನ್ನೂ ಓದಿ IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

ಬಲಾಬಲ


ಉಭಯ ತಂಡಗಳು ಇದುವರೆಗಿನ ಐಪಿಎಲ್ ಪಂದ್ಯದಲ್ಲಿ ಒಟ್ಟು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಹೈದರಾಬಾದ್​ 10, ರಾಜಸ್ಥಾನ್​ 9 ಪಂದ್ಯಗಳನ್ನು ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹೈದರಾಬಾದ್​ ಬಲಿಷ್ಠವಾಗಿದೆ. ಜತೆಗೆ ಈ ಬಾರಿ ತಂಡ ಬಲಿಷ್ಠವಾಗಿಯೂ ಗೋಚರಿಸಿದೆ.

ಲೀಗ್​ನಲ್ಲಿ 1 ರನ್​ ಗೆಲುವು


ಈ ಬಾರಿಯ ಲೀಗ್​ನಲ್ಲಿ ಇತ್ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಅತ್ಯಂತ ರೋಚವಾಗಿ ಸಾಗಿದ ಈ ಪಂದ್ಯವನ್ನು ಸನ್​ರೈಸರ್ಸ್​ ಹೈದರಾಬಾದ್​ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಭುವನೇಶ್ವರ್​ ಕುಮಾರ್​ ಅಂತಿಮ ಎಸೆತದಲ್ಲಿ ರೋಮ್ಮನ್​ ಪೋವೆಲ್​ ಅವರನ್ನು ಎಲ್​ಬಿಡ್ಲ್ಯು ಮಾಡುವ ಮೂಲಕ ಈ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಈ ಸೋಲಿಗೆ ರಾಜಸ್ಥಾನ್​ ಕ್ವಾಲಿಫೈಯರ್​ ಪಂದ್ಯದಲ್ಲಿ ಸೇಡು ತೀರಿಸಲು ಪಣ ತೊಟ್ಟಿದೆ.

ಪಿಚ್​ ರಿಪೋರ್ಟ್​


ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು. ಹೀಗಾಗಿ ಪಿಚ್​ ವರ್ತನೆಯನ್ನು ಸ್ಪಷ್ಟವಾಗಿ ಹೇಳುವುದು ಕೊಂಚ ಕಷ್ಟವಾಗಿದೆ. ಮಂಜಿನ ಕಾಟ ಇರುವ ಕಾರಣ ಟಾಸ್‌ ಗೆಲ್ಲುವ ತಂಡ ಬೌಲಿಂಗ್‌ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು.

Continue Reading

ಪ್ರಮುಖ ಸುದ್ದಿ

Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

Rotary June Run : ಮ್ಯಾರಥಾನ್​ನಲ್ಲಿ ಸುಮಾರು 2 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ನೋಂದಣಿ ಪ್ರಾರಂಭಗೊಂಡಿದ್ದು ಸಾವಿರ ಮಂದಿ ಆಸಕ್ತಿ ತೋರಿದ್ದಾರೆ. ಕ್ಯೂಆರ್​​ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. 10 ಕಿಲೋ ಮೀಟರ್​, 5 ಕಿಲೋ ಮೀಟರ್​, 3 ಕಿಲೋ ಮೀಟರ್​ ಹಾಗೂ 1 ಕಿಲೋಮೀಟರ್ ವಿಭಾಗದಲ್ಲಿ ಓಟ ನಡೆಯಲಿದೆ.

VISTARANEWS.COM


on

Rotary June Run
Koo

ಬೆಂಗಳೂರು: ರೋಟರಿ ಜಿಲ್ಲೆ 3192ರ ವತಿಯಿಂದ ಜೂನ್​ 9ರಂದು (ಭಾನುವಾರ) ಬೆಳಗ್ಗೆ 5 ಗಂಟೆಗೆ ನಗರದ ವಿಜ್ಞಾನ ಮತ್ತು ಕೃಷಿ ವಿಶ್ವವಿದ್ಯಾಲಯ (ಜಿಕೆವಿಕೆ) ಆವರಣದಲ್ಲಿ ‘ರೋಟರಿ ಜೂನ್​ ರನ್’​ (Rotary June Run) ಮ್ಯಾರಥಾನ್​ ಆಯೋಜಿಸಲಾಗಿದೆ. ‘ವಿಸ್ತಾರ ನ್ಯೂಸ್​’ ಈ ಮ್ಯಾರಥಾನ್​ಗೆ ಮಾಧ್ಯಮ ಸಹಯೋಗ ನೀಡುತ್ತಿದೆ. ಸಮಾಜಮುಖಿ ಕಾರ್ಯಗಳಿಗೆ ನಿಧಿ ಸಂಗ್ರಹ ಮಾಡುವ ಉದ್ದೇಶದಿಂದ ಈ ಮ್ಯಾರಥಾನ್ ಆಯೋಜಿಸಲಾಗಿದ್ದು, ಸಾವಿರಾರು ಓಟದ ಆಸಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮ್ಯಾರಥಾನ್​ನಲ್ಲಿ ಸುಮಾರು 2 ಸಾವಿರ ಓಟದ ಆಸಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ನೋಂದಣಿ ಪ್ರಾರಂಭಗೊಂಡಿದ್ದು, ಸುಮಾರು ಒಂದು ಸಾವಿರ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಕ್ಯೂಆರ್​​ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. 10 ಕಿಲೋ ಮೀಟರ್​, 5 ಕಿಲೋ ಮೀಟರ್​, 3 ಕಿಲೋ ಮೀಟರ್​ ಹಾಗೂ 1 ಕಿಲೋಮೀಟರ್ ವಿಭಾಗದಲ್ಲಿ ಓಟದ ಸ್ಪರ್ಧೆ ನಡೆಯಲಿದೆ.

ಕಾರ್ಯಕ್ರಮದ ಅತಿಥಿಗಳಾಗಿ ವಿಸ್ತಾರ ನ್ಯೂಸ್​​ ಕಾರ್ಯನಿರ್ವಾಹಕ ನಿರ್ದೇಶಕರಾದ ಕಿರಣ್​ ಕುಮಾರ್ ಡಿ. ಕೆ ಮತ್ತು ಸಹಾಯಕ ಸಂಪಾದಕ ಚಂದನ್ ಶರ್ಮಾ ಅವರು ಪಾಲ್ಗೊಳ್ಳಲಿದ್ದಾರೆ. ಇವರು ಬೆಳಗ್ಗೆ 5 ಗಂಟೆಗೆ ಓಟಕ್ಕೆ ಚಾಲನೆ ನೀಡಲಿದ್ದಾರೆ. 10 ವರ್ಷಗಳಿಂದ ರೋಟರಿ ಸಂಸ್ಥೆಯು ಈ ಓಟವನ್ನು ಆಯೋಜಿಸಿಕೊಂಡು ಬರುತ್ತಿದೆ. ಕೊರೊನಾ ಕಾಲದಲ್ಲಿ ಮ್ಯಾರಥಾನ್​ಗೆ ಅಡಚಣೆಯಾಗಿರುವುದು ಬಿಟ್ಟರೆ ನಿರಂತರವಾಗಿ ಸಮಾಜ ಮುಖಿ ಕಾರ್ಯಗಳ ಉದ್ದೇಶವನ್ನು ಇಟ್ಟುಕೊಂಡು ಓಟ ಆಯೋಜಿಸಿಕೊಂಡು ಬರಲಾಗಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.

ಓಟದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವವರು ವೆಬ್​ಸೈಟ್​ ಅಥವಾ ಕ್ಯೂಆರ್ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಓಟದ ಆಸಕ್ತರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ.

ಸಾಮಾಜಿಕ ಕಾರ್ಯಕ್ಕಾಗಿ ನಿಧಿ ಸಂಗ್ರಹ

ಮ್ಯಾರಥಾನ್​ ವೇಳೆ ಸಂಗ್ರಹವಾಗುವ ನಿಧಿಯನ್ನು ಪರಿಸರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಯೋಜನೆಗಳು ಸೇರಿದಂತೆ ಸಮಾಜಮುಖಿ ಕಾರ್ಯಗಳಿಗಾಗಿ ವಿನಿಯೋಗಿಸಲಾಗುವುದು. ಪರಿಸರಕ್ಕೆ ಸಂಬಂದಿಸಿದಂತೆ ಚಿತ್ರದುರ್ಗ
ಜಿಲ್ಲೆಯ ಚಳ್ಳಕೆರೆ ಸಮೀಪದ ಸುಮಾರು 1200 ಎಕರೆ ಬರಡು ಭೂಮಿಯಲ್ಲಿ
ಸಸಿಗಳನ್ನು ನೆಡಲಾಗುವುದು. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ‘ಹ್ಯಾಪಿ ಸ್ಕೂಲ್’ ಯೋಜನೆಯಡಿ ಸರ್ಕಾರಿ ಶಾಲೆಗಳ
ಉನ್ನತೀಕರಣ, ಸೈಕಲ್ ವಿತರಣೆ, ಇ ಕಿಟ್ ವಿತರಣೆ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ, ಮಕ್ಕಳಿಗೆ ಆಟದ ಪ್ರದೇಶ ನಿರ್ಮಾಣ ನೀಡಲಾಗುವುದು. ಅದೇ ರೀತಿ ಹೆಣ್ಣು ಮಕ್ಕಳ ಶೌಚಾಲಯ ನಿರ್ಮಿಸಲಾಗುವುದು. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಡವರಿಗೆ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ, ಶಸ್ತ್ರ ಚಿಕಿತ್ಸೆ, ಕ್ಯಾನ್ಸರ್ ಚಿಕಿತ್ಸೆ, ಮುಟ್ಟಿನ ನೈರ್ಮಲ್ಯ ಇತರೆ ಯೋಜನೆಗಳಿಗಾಗಿ ಬಳಸಲಾಗುವುದು ಎಂದು ರೋಟರಿ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಟಿ ನಿರಂಜನ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

ಚಿತ್ರದುರ್ಗದಲ್ಲಿ 1200 ಎಕರೆ ಬರಡು ಭೂಮಿಯನ್ನು ದತ್ತು ತೆಗೆದುಕೊಳ್ಳಲಾಗಿದೆ. 400 ಎಕರೆ ಪ್ರದೇಶದಲ್ಲಿ ಗಿಡಗಳನ್ನು ನೆಡಲಾಗಿದೆ. ಇನ್ನೂ 800 ಎಕರೆ ಪ್ರದೇಶವನ್ನು ಅರಣ್ಯೀಕರಣ ಮಾಡಬೇಕಾಗಿದೆ. ಓಟದಲ್ಲಿ ಸಂಗ್ರಹಗೊಂಡಿರುವ ಮೊತ್ತವನ್ನು ಅಲ್ಲಿಗೆ ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ನಡೆದ ಗುರುದತ್ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಸಂಗ್ರಹಿಸಿದ ಹಣದಲ್ಲಿ ರೋಟರಿ 119ನೇ ವರ್ಷಾಚರಣೆಯ ಸಂದರ್ಭದಲ್ಲಿ 119 ರೋಗಿಗಳ ಹೃದಯ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನೆಡೆಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

T20 Cricket : ಬಾಂಗ್ಲಾದೇಶ ತಂಡವನ್ನು ಸೋಲಿಸಿ ಇತಿಹಾಸ ನಿರ್ಮಿಸಿದ ಕ್ರಿಕೆಟ್​ ಶಿಶು ಅಮೆರಿಕ

T20 Cricket: ಹ್ಯೂಸ್ಟನ್​ನಲ್ಲಿ ನಡೆದ 3 ಪಂದ್ಯಗಳ ಟಿ 20 ಐ ಸರಣಿಯಲ್ಲಿ ಯುಎಸ್ಎ ಸತತ ಎರಡನೇ ಬಾರಿಗೆ ಬಾಂಗ್ಲಾದೇಶ ತಂಡಕ್ಕೆ ಆಘಾತ ಕೊಟ್ಟಿತು. ಟಿ 20 ವಿಶ್ವಕಪ್​​ಗೆ ಮುಂಚಿತವಾಗಿ ಏಷ್ಯಾದ ತಂಡಕ್ಕೆ ಎಚ್ಚರಿಕೆ ಕೊಟ್ಟಿತು. ಆ ತಂಡ ತನ್ನ ತೂಕವನ್ನು ಮೀರಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ಪ್ರೈರಿ ವ್ಯೂ ಕ್ರಿಕೆಟ್ ಕಾಂಪ್ಲೆಕ್ಸ್ ನಲ್ಲಿ ನಡೆದ ಪಂದ್ಯದಲ್ಲಿ 145 ರನ್ ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ 19.3 ಓವರ್ ಗಳಲ್ಲಿ 138 ರನ್ ಗಳಿಗೆ ಆಲೌಟ್ ಆಗಿ ಮುಖಭಂಗ ಎದುರಿಸಿತು.

VISTARANEWS.COM


on

t20 cricket
Koo

ಬೆಂಗಳೂರು: 2024 ರ ಟಿ 20 ವಿಶ್ವಕಪ್​ಗೆ ಕೆಲವೇ ದಿನಗಳ ಮೊದಲು ನಡೆದ ಐತಿಹಾಸಿಕ ಟಿ20 ಕ್ರಿಕೆಟ್​ ಸರಣಿಯ (T20 Cricket) ಎರಡನೇ ಪಂದ್ಯದಲ್ಲಿ ಯುಎಸ್ಎ ತಂಡವು ಪೂರ್ಣ ಸಾಮರ್ಥ್ಯದ ಬಾಂಗ್ಲಾದೇಶ ತಂಡವನ್ನು ಆರು ರನ್​ಗಳಿಂದ ಸೋಲಿಸಿದೆ. ಈ ಮೂಲಕ ಕ್ರಿಕೆಟ್​ ಶಿಶು ಅಮೆರಿಕ ಐತಿಹಾಸಿಕ ಸಾಧನೆ ಮಾಡಿದೆ. 3 ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಿಂದ ಗೆದ್ದುಕೊಂಡಿದೆ. ಮೊದಲ ಪಂದ್ಯದಲ್ಲಿ ಸೋತಿದ್ದ ಬಾಂಗ್ಲಾದೇಶ ಈ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನೀಡಿದ ಹೊರತಾಗಿಯೂ ಗೆಲುವು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ.

ಹ್ಯೂಸ್ಟನ್​ನಲ್ಲಿ ನಡೆದ 3 ಪಂದ್ಯಗಳ ಟಿ 20 ಐ ಸರಣಿಯಲ್ಲಿ ಯುಎಸ್ಎ ಸತತ ಎರಡನೇ ಬಾರಿಗೆ ಬಾಂಗ್ಲಾದೇಶ ತಂಡಕ್ಕೆ ಆಘಾತ ಕೊಟ್ಟಿತು. ಟಿ 20 ವಿಶ್ವಕಪ್​​ಗೆ ಮುಂಚಿತವಾಗಿ ಏಷ್ಯಾದ ತಂಡಕ್ಕೆ ಎಚ್ಚರಿಕೆ ಕೊಟ್ಟಿತು. ಆ ತಂಡ ತನ್ನ ತೂಕವನ್ನು ಮೀರಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ಪ್ರೈರಿ ವ್ಯೂ ಕ್ರಿಕೆಟ್ ಕಾಂಪ್ಲೆಕ್ಸ್ ನಲ್ಲಿ ನಡೆದ ಪಂದ್ಯದಲ್ಲಿ 145 ರನ್ ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ 19.3 ಓವರ್ ಗಳಲ್ಲಿ 138 ರನ್ ಗಳಿಗೆ ಆಲೌಟ್ ಆಗಿ ಮುಖಭಂಗ ಎದುರಿಸಿತು.

ಕೆಕೆಆರ್​​ನ ಮಾಜಿ ವೇಗದ ಬೌಲರ್ ಅಲಿ ಖಾನ್ ಅವರು ಶಕೀಬ್ ಅಲ್ ಹಸನ್ ಸೇರಿದಂತೆ 3 ವಿಕೆಟ್​ಗಳನ್ನು ಕಬಳಿಸುವ ಮೂಲಕ ಅಮೆರಿಕದ ತಂಡಕ್ಕೆ ಐತಿಹಾಸಿಕ ಸರಣಿ ಗೆಲುವು ಸಾಧಿಸಲು ಸಹಾಯ ಮಾಡಿದರು. ಜೂನ್ 1 ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯ ವಹಿಸಲಿರುವ ಟಿ 20 ವಿಶ್ವಕಪ್​​ಗೆ ಮುಂಚಿತವಾಗಿ ಯುಎಸ್ಎ ರಾಷ್ಟ್ರೀಯ ತಂಡಕ್ಕೆ ಈ ಗೆಲುವು ದೊಡ್ಡ ಉತ್ತೇಜನವಾಗಿದೆ.

ಇದನ್ನೂ ಓದಿ: IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

ಮೇ 21 ರ ಮಂಗಳವಾರ ನಡೆದ ಮೊದಲ ಟಿ 20 ಪಂದ್ಯದಲ್ಲಿ 154 ರನ್​ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ನಂತರ ಯುಎಸ್ಎ ತಂಡವು ಎರಡನೇ ಟಿ 20 ಪಂದ್ಯವನ್ನು ಸಾಕಷ್ಟು ಆತ್ಮವಿಶ್ವಾಸದಿಂದ ಆಡಿತು. ಹ್ಯೂಸ್ಟನ್ ನಲ್ಲಿ ನಿಧಾನಗತಿಯ ಪಿಚ್ ನಲ್ಲಿ ಮೊತ್ತವನ್ನು ರಕ್ಷಿಸಿಕೊಂಡಿತು..

ಈ ಫಲಿತಾಂಶ ತುಂಬಾ ನಿರಾಶಾದಾಯಕವಾಗಿದೆ. ಆದರೆ ಮೂರನೇ ಪಂದ್ಯದಲ್ಲಿ ತಿರುಗೇಟು ಕೊಡುತ್ತೇವೆ. ಇದು ಕೌಶಲದ ಬಗ್ಗೆ ಅಲ್ಲ, ನಾವು ನಮ್ಮ ಮನಸ್ಥಿತಿಯನ್ನು ಬದಲಾಯಿಸಬೇಕಾಗಿದೆ” ಎಂದು ಬಾಂಗ್ಲಾದೇಶದ ನಾಯಕ ನಜ್ಮುಲ್ ಹುಸೇನ್ ಶಾಂಟೊ ಹೇಳಿದರು.

Continue Reading
Advertisement
We are ready for taluk and zilla panchayat and BBMP elections Says CM Siddaramaiah
ರಾಜಕೀಯ1 min ago

CM Siddaramaiah: ತಾಲೂಕು, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

road Accident
ತುಮಕೂರು5 mins ago

Road Accident: ಬೈಕ್‌ಗಳ ಅಪಘಾತ; ಮಗನ ಕಣ್ಣೆದುರೇ ರಕ್ತಕಾರಿ ತಾಯಿ ಮೃತ್ಯು; ಮೂವರು ಗಂಭೀರ

lok sabha election 2024 supreme court
ಪ್ರಮುಖ ಸುದ್ದಿ8 mins ago

Lok Sabha Election 2024: ಬೂತ್‌ವಾರು ಮತದಾನ ವಿವರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್‌

meghana Goankar
ಸಿನಿಮಾ13 mins ago

Meghana Gaonkar : ಮೇಘನಾ ಗಾಂವ್ಕರ್​ಗೆ ಖುಷಿಗೆ ʼದಿ ಜಡ್ಜ್‌ಮೆಂಟ್‌ʼ ಕಾರಣ, ಯಾಕೆ ಗೊತ್ತಾ?

Hardik Pandya & Natasa Stankovic
ಕ್ರೀಡೆ25 mins ago

Hardik Pandya & Natasa Stankovic: ಹಾರ್ದಿಕ್​ ಪಾಂಡ್ಯಗೆ ಕೈ ಕೊಟ್ಟರೇ ಪತ್ನಿ ನತಾಶಾ!

Sandalwood Movie
ಪ್ರಮುಖ ಸುದ್ದಿ33 mins ago

Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

Bank fraud Scam in Urban Co operative Bank of Karwar
ಕರ್ನಾಟಕ1 hour ago

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

RR vs SRH
ಕ್ರೀಡೆ1 hour ago

RR vs SRH: ಹೈದರಾಬಾದ್-ರಾಜಸ್ಥಾನ್ ನಡುವಣ ಇಂದಿನ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇದೆಯೇ?

COMEDK UGET Result 2024 Out
ಶಿಕ್ಷಣ1 hour ago

COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

Rotary June Run
ಪ್ರಮುಖ ಸುದ್ದಿ2 hours ago

Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌