Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ! - Vistara News

ವೈರಲ್ ನ್ಯೂಸ್

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Viral Video: ಮದುವೆ ಸಮಾರಂಭಗಳಲ್ಲಿ ಒಂದಲ್ಲ ಒಂದು ಎಡವಟ್ಟು ನಡೆದೇ ನಡೆಯುತ್ತೆ. ಇದರಲ್ಲಿ ಕೆಲವು ಗಂಭೀರ ರೂಪ ತಾಳಿದರೆ, ಇನ್ನು ಕೆಲವು ಎಲ್ಲರ ನಗೆಪಾಟಲಿಗೆ ಗುರಿಯಾಗುತ್ತದೆ. ಇಲ್ಲಿ ಸಿಕ್ಕಿರುವ ವಿಡಿಯೋವೊಂದು ಎಲ್ಲರೂ ನಗುವಂತೆ ಮಾಡಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮದುವೆ (wedding) ಮಂಟಪ ಸುಂದರವಾಗಿ ಅಲಂಕಾರಗೊಂಡಿತ್ತು. ವಧು ವರರು ಇಬ್ಬರೂ ವೇದಿಕೆಯಲ್ಲಿ ನಿಂತು ಒಂದೊಂದೇ ಶಾಸ್ತ್ರಗಳನ್ನು ಮಾಡುತ್ತಿದ್ದರು. ಇನ್ನೇನು ಹೂವಿನ ಮಾಲೆ (flower garland) ವಿನಿಮಯ ಮಾಡಿಕೊಳ್ಳಬೇಕಿತ್ತು. ವರನು (groom) ವಧುವಿಗೆ (bride) ಹೂವಿನ ಮಾಲೆ ಹಾಕಲು ಅವರಿಗೆ ಕುಳಿತು ಕೊಳ್ಳಲು ಇಟ್ಟಿದ್ದ ಸಿಂಹಾಸನದಿಂದ ಜಿಗಿದಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಎಲ್ಲರೂ ನಗುವಂತೆ ಮಾಡಿದೆ.

ಹಿಂದೂ ಸಂಪ್ರದಾಯದ ಮದುವೆಯಲ್ಲಿ ಹೂವಿನ ಮಾಲೆಯನ್ನು ಬದಲಾಯಿಸಿಕೊಳ್ಳುವ ಶಾಸ್ತ್ರವಿದೆ. ಈ ಸಂದರ್ಭದಲ್ಲಿ ವಧು ವರರು ಇಬ್ಬರಿಗೂ ಸಾಕಷ್ಟು ಸವಾಲುಗಳನ್ನು ಹತ್ತಿರದ ಸಂಬಂಧಿ, ಸ್ನೇಹಿತರು ತಂದೊಡ್ಡುತ್ತಾರೆ. ಅಂತೆಯೇ ಇಲ್ಲಿ ವಧು ಮತ್ತು ವರರು ಹೂವಿನ ಹಾರಗಳನ್ನು ವಿನಿಮಯ ಮಾಡಿಕೊಳ್ಳುವಾಗ ವಧುವಿನ ಕುಟುಂಬದವರು ವಧುವನ್ನು ಎತ್ತಿ ಹಿಡಿದು ವರನ ಮುಂದೆ ಸವಾಲು ಹಾಕಿದರು.

ಹಲವು ಬಾರಿ ವರ ಮಾಲೆ ಹಾಕಲು ಪ್ರಯತ್ನಿಸುತ್ತಾನೆ. ಆದರೆ ವಿಫಲನಾಗುತ್ತಾನೆ. ಕೊನೆಗೂ ವರನು ತನ್ನ ವಧುವನ್ನು ಗೆಲ್ಲುವ ಮಾರ್ಗವನ್ನು ಕಂಡುಕೊಂಡಿದ್ದಾನೆ. ಇದರ ವಿಡಿಯೋ ಎಕ್ಸ್ ನಲ್ಲಿ ಭಾರೀ ವೈರಲ್ ಆಗಿದ್ದು, ಇದಕ್ಕೆ ಸಾಕಷ್ಟು ಮಂದಿ ನೆಟ್ಟಿಗರು ಕಾಮೆಂಟ್ ಕೂಡ ಮಾಡಿದ್ದಾರೆ.

ಇದನ್ನೂ ಓದಿ: Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

ಏನಿದೆ ವಿಡಿಯೋದಲ್ಲಿ?

ಈ ವಿಡಿಯೋದಲ್ಲಿ ಸೆರೆಯಾಗಿರುವಂತೆ ವಧು ಈಗಾಗಲೇ ತನ್ನ ಗಂಡನ ಕುತ್ತಿಗೆಗೆ ಹೂವಿನ ಹಾರವನ್ನು ಹಾಕಿದ್ದಳು. ಈಗ ವರನ ಸರದಿ. ವಧುವಿನ ಸಂಬಂಧಿಗಳು ಅವಳನ್ನು ಎತ್ತಿ ಹಿಡಿದು ವರನಿಗೆ ಹೂಮಾಲೆ ಹಾಕುವ ಸವಾಲು ಹಾಕುತ್ತಾರೆ.


ವರನು ಮದುವೆಯ ಸಿಂಹಾಸನದ ಮೇಲೇರಿ ಜಿಗಿದ ಯಶಸ್ವಿಯಾಗಿ ವಧುವಿನ ಕುತ್ತಿಗೆಗೆ ಹಾರವನ್ನು ಹಾಕಿದನು. ವಧುವಿನ ಜೊತೆಗೆ ಸಂಬಂಧಿಕರು ತಮ್ಮ ಸಮತೋಲನವನ್ನು ಕಳೆದುಕೊಳ್ಳುತ್ತಾರೆ. ಪರಿಣಾಮವಾಗಿ ಎಲ್ಲರೂ ವೇದಿಕೆಯ ಮೇಲೆ ಬಿದ್ದರು. ಕೊನೆಯಲ್ಲಿ, ವರನು ಹೆಮ್ಮೆಯಿಂದ ನಿಂತಿರುವಾಗ ವಧು ನಕ್ಕಳು.

ಸರಿತಾ ಸರವಾಗ್ ಎಂಬವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಕೂಡ ಮಾಡಿದ್ದು, ಸಾಕಷ್ಟು ಮಂದಿ ತಾವು ನೋಡಿರುವ, ಅನುಭವದ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಇದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಹೂವಿನ ಮಾಲೆ ಹಾಕುವಾಗ ವರನ ತಂಡದ ವ್ಯಕ್ತಿಯೊಬ್ಬರು ಅವನನ್ನು ಮೇಲೆತ್ತುತ್ತಾನೆ. ಆಗ ಆತ ವಧುವಿನ ಮೇಲೆ ಬೀಳುವುದರಲ್ಲಿದ್ದ. ಆದರೆ ವಧುವಿನ ಸಮಯಪ್ರಜ್ಞೆಯಿಂದ ಘಟನೆಯು ದುರಂತ ತಿರುವು ಪಡೆಯುವುದು ತಪ್ಪಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಪ್ಪಳ

SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

SSLC Toper : ಓದಲು-ಬರೆಯಲು ಬಾರದ ಮಾಲಿಯೊಬ್ಬ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳನ್ನು ಗಳಿಸಿ ಟಾಪರ್‌ ಆಗಿದ್ದಾನೆ. ಇದು ಎಲ್ಲರ ಅಚ್ಚರಿಗೆ ಕಾರಣವಾಗಿದ್ದು, ನ್ಯಾಯಾಧೀಶರೊಬ್ಬರು ಇದರ ಅಸಲಿಯತ್ತು ಏನೆಂದು ತಿಳಿಯಲು ದೂರು ನೀಡಿದ್ದಾರೆ.

VISTARANEWS.COM


on

By

SSLC Toper
ಸಾಂದರ್ಭಿಕ ಚಿತ್ರ
Koo

ಕೊಪ್ಪಳ: ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಮಾಲಿ (Scavenger) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆತನಿಗೆ ಓದೋಕು-ಬರೆಯೋಕೂ ಬರುತ್ತಿರಲಿಲ್ಲ. ಆದರೆ ಓದು ಬರಹ ಬರದ ಮಾಲಿಯೊಬ್ಬ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಟಾಪರ್‌ (SSLC Toper) ಆಗಿದ್ದ. ಮಾತ್ರವಲ್ಲ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ಮಾಲಿ ಕೆಲಸದಿಂದ ಕೋರ್ಟ್‌ ಜವಾನನಾಗಿ ನೌಕರಿಯನ್ನು ಗಿಟ್ಟಿಸಿಕೊಂಡಿದ್ದ. ಎಲ್ಲರ ಅಚ್ಚರಿಗೆ ಕಾರಣವಾಗಿದ್ದ ಟಾಪರ್‌ನ ಅಸಲಿಯತ್ತು ನ್ಯಾಯಾಧೀಶರ ಕಂಪ್ಲೇಟ್‌ನಿಂದ ಹೊರಬಿದ್ದಿದೆ.

ಕೊಪ್ಪಳದ ಪ್ರಭು ಲೋಕರೆ ಎಂಬಾತ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಮಾಲಿ ಆಗಿ ಕೆಲಸ ಮಾಡುತ್ತಿದ್ದ. ಪ್ರಭು ಬಾಗಲಕೋಟೆಯ ಕೇಂದ್ರದಲ್ಲಿ ಬಾಹ್ಯ ಅಭ್ಯರ್ಥಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ. ಇತ್ತೀಚೆಗೆ ಬಂದ ಫಲಿತಾಂಶದಲ್ಲಿ 625ಕ್ಕೆ 623 ಅಂಕ ಪಡೆದು ಟಾಪರ್‌ ಆಗಿದ್ದ. ವಾಸ್ತವದಲ್ಲಿ ಪ್ರಭುಗೆ ಕನ್ನಡ, ಇಂಗ್ಲಿಷ್, ಹಿಂದಿ ಓದಲು ಅಥವಾ ಬರೆಯಲು ಕೂಡ ಬರೋದಿಲ್ಲ. ಆದರೂ ಪರೀಕ್ಷೆಯಲ್ಲಿ ಪ್ರಭು 623 ಅಂಕ ಪಡೆದಿದ್ದು ಎಲ್ಲರ ಅಚ್ಚರಿಗೆ ಸಾಕ್ಷಿಯಾಗಿತ್ತು. ಇತ್ತ ಈ ಸುದ್ದಿ ತಿಳಿದ ನ್ಯಾಯಾಧೀಶರಿಗೂ 623 ಅಂಕ ಹೇಗೆ ಬಂದು ಎಂಬ ಸಂದೇಹ ಬಂದಿತ್ತು.

ಎಸ್‌ಎಸ್‌ಎಲ್‌ಸಿಯಲ್ಲಿ ಪಡೆದಿದ್ದ ಅಂಕಗಳ ಆಧಾರದ ಮೇಲೆ ಅದಾಗಲೇ ಪ್ರಭು ಮಾಲಿ ಕೆಲಸದಿಂದ ಮತ್ತೊಂದು ನೌಕರಿಯನ್ನು ಗಿಟ್ಟಿಸಿಕೊಂಡಿದ್ದ. ಯಾದಗಿರಿಯ ಕೋರ್ಟ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾಗಿದ್ದ. ಪ್ರಭು ಜವಾನ ಹುದ್ದೆಗೆ ಆಯ್ಕೆಯಾಗಿದ್ದರಿಂದ ಕುತೂಹಲಗೊಂಡ ನ್ಯಾಯಾಧೀಶರು, ಇದರಿಂದ‌ ಅನುಮಾನಗೊಂಡು ನಗರ ಠಾಣೆಗೆ ದೂರು ನೀಡಿದ್ದಾರೆ.

ಓದು ಬರಹ ಬಾರದ ಪ್ರಭು ಹೆಚ್ಚು ಅಂಕ ತಗೆದುಕೊಂಡಿರುವುದು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ‌ಮೋಸ‌ ಮಾಡಿದಂತೆ. ಈತನೊಂದಿಗೆ ಲಾಭಕ್ಕಾಗಿ ಶಾಮೀಲಾದವರ ವಿರುದ್ಧ ತನಿಖೆ ನಡೆಸಬೇಕೇಂದು ನ್ಯಾಯಾಧೀಶರು ದೂರು ನೀಡಿದ್ದಾರೆ. ನ್ಯಾಯಾಧೀಶರ ಸೂಚನೆ ಮೇರೆಗೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಭು ಲೋಕರೆ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌

ಉತ್ತರಾಖಂಡ: ಸಿನಿಮಾಗಳಲ್ಲಿ ಹೀರೋ ಬಿಲ್ಡಿಂಗ್‌, ಕಾಪೌಂಡ್‌ ಅನ್ನು ಲೆಕ್ಕಿಸದೇ ವಾಹನ ನುಗ್ಗಿಸುವ ದೃಶ್ಯ ನೋಡಿರ್ತೀರಿ. ಅದರಲ್ಲೂ ಹೀರೋ ಒಂದುವೇಳೆ ಪೊಲೀಸ್‌ ಆಗಿದ್ದರೆ ತನ್ನ ಜೀಪ್‌ನಲ್ಲೇ ಅಪರಾಧಿಗಳನ್ನು ಚೇಸ್‌ ಮಾಡಿ ಹಿಡಿಯುವ ಹಲವಾರು ದೃಶ್ಯಗಳನ್ನು ನೋಡಿರ್ತೇವೆ. ಅಂತಹದ್ದೇ ಒಂದು ದೃಶ್ಯ ಋಷಿಕೇಶದಲ್ಲಿ ನಡೆದಿದೆ. ಪೊಲೀಸ್‌ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ(Sexual harassments) ಆರೋಪಿಯನ್ನು ಅರೆಸ್ಟ್‌ ಮಾಡಲೆಂದು ನೇರವಾಗಿ ಆಸ್ಪತ್ರೆ(Hospital)ಯ ಐಸಿಯು ಒಳಗೆ ತಮ್ಮ ಜೀಪನ್ನು ನುಗ್ಗಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ವಿಡಿಯೋ ಫುಲ್‌ ವೈರಲ್‌

ರಿಶಿಕೇಶ್‌ ಏಮ್ಸ್‌ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನಕ್ಕೆಂದು ಬಂದಿದ್ದ ಪೊಲೀಸರು ಜೀಪು ಸಮೇತ ಆಸ್ಪತ್ರೆಯೊಳಗೆ ನುಗ್ಗಿದ್ದಾರೆ. ನೇರವಾಗಿ ಆಸ್ಪತ್ರೆಯ ನಾಲ್ಕನೇ ಮಹಡಿಗೆ ಬಂದ ಪೊಲೀಸರು ಐಸಿಯು ಒಳಗೆ ಜೀಪು ಚಲಾಯಿಸಿದ್ದಾರೆ. ಈ ದೃಶ್ಯವನ್ನು ಆಸ್ಪತೆಯಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಎಕ್ಸ್‌ನಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲಾಗಿದೆ.

ನರ್ಸಿಂಗ್‌ ಅಧಿಕಾರಿಯಿಂದ ಲೈಂಗಿಕ ಕಿರುಕುಳ

ಏಮ್ಸ್‌ನ ನರ್ಸಿಂಗ್‌ ಅಧಿಕಾರಿ ಸತೀಶ್‌ ಕುಮಾರ್‌ ಎಂಬಾತ ವೈದ್ಯೆಯೊಬ್ಬರಿಗೆ ಎಂಎಂಎಸ್‌ ಕಳುಹಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿತ್ತು. ಆರೋಪಿ ಬಂಧನಕ್ಕೆಂದು ಏಮ್ಸ್‌ ಆಸ್ಪತ್ರೆಗೆ ಪೊಲೀಸರು ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಸತೀಶ್‌ ಕುಮಾರ್‌ ಎಸ್ಕೇಪ್‌ ಆಗಲು ಯತ್ನಿಸಿದ್ದ. ಇದು ತಿಳಿದ ಡೆಹ್ರಾಡೂನ್‌ ಪೊಲೀಸರು ಆಸ್ಪತ್ರೆಯ ಒಳಗೆ ಜೀಪ್‌ ಚಲಾಯಿಸಿದಾರೆ. ನೇರವಾಗಿ ನಾಲ್ಕನೇ ಮಹಡಿಗೆ ತಲುಪಿದ ಜೀಪ್‌ ಐಸಿಯು ಒಳಗೆ ಬಂದು ನಿಂತಿದೆ.

ಪೊಲೀಸ್‌ ವಾಹನ್‌ ಆಸ್ಪತ್ರೆ ಒಳಗೆ ಬರುತ್ತಿದ್ದಂತೆ ಅಲ್ಲಿದ್ದ ರೋಗಿಗಳು, ಜನರು ಒಂದು ಕ್ಷಣಕ್ಕೆ ಗಾಬರಿ ಆಗಿದ್ದಾರೆ. ರೋಗಿಗಳು ಮಲಗಿದ್ದ ಮಂಚ ಸರಿಸಿ ಪೊಲೀಸ್‌ ವಾಹನಕ್ಕೆ ಜಾಗ ಮಾಡಿಕೊಡುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇದಾಗಿಯೂ ಪೊಲೀಸ್‌ ವಾಹನ ಮಾತ್ರ ನಿಲ್ಲುವುದೇ ಇಲ್ಲ. ತನ್ನ ಗುರಿ ತಲುಪಿದ ಮೇಲಷ್ಟೇ ವಾಹನಕ್ಕೆ ಬ್ರೇಕ್‌ ಬೀಳುತ್ತದೆ.

ಪೊಲೀಸ್‌ ಕ್ರಮಕ್ಕೆ ಖಂಡನೆ

ಇನ್ನು ಪೊಲೀಸರ ಈ ಕ್ರಮಕ್ಕೆ ಹಲವರಿಂದ ಖಂಡನೆ ವ್ಯಕ್ತವಾಗಿದೆ. ಆಸ್ಪತ್ರೆಯಂತಹ ಸೂಕ್ಷ್ಮ ಸ್ಥಳಗಳಲ್ಲಿ ಇಂತಹ ವಾತಾವರಣ ಸೃಷ್ಟಿಸುವುದು ಸರಿಯಲ್ಲ. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸಬೇಕೆಂದು ಜನ ಆಗ್ರಹಿಸಿದ್ದಾರೆ. ಅಲ್ಲದೇ ಅಲ್ಲಿದ್ದ ರೋಗಿಗಳು ಹಾಗೂ ಅವರ ಕುಟುಂಬಸ್ಥರೂ ಪೊಲೀಸರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉತ್ತರಾಖಂಡ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಘಟನೆಯ ಬಗ್ಗೆ ಗಮನ ಹರಿಸಿದ್ದು,. ಕಿರುಕುಳಕ್ಕೊಳಗಾದ ಮಹಿಳಾ ವೈದ್ಯರನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ನೇರವಾಗಿ ನಿರ್ಣಯಿಸಲು AIIMS ಗೆ ಭೇಟಿ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

Viral Video: ಲೋವಾ ಸಾರ್ವಜನಿಕ ಸುರಕ್ಷತಾ ವಿಭಾಗದ ಅಧಿಕಾರಿಗಳು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿರುಗಾಳಿಗೆ ನಾಲ್ವರು ಗ್ರೀನ್‌ಫೀಲ್ಡ್‌ನಲ್ಲೇ ಮೃತಪಟ್ಟಿದ್ದಾರೆ. ಮತ್ತೊರ್ವ ಮಹಿಳೆ ಕಾರು ಸಮೇತ ಬಿರುಗಾಳಿ ರಭಸಕ್ಕೆ 25ಮೈಲು ದೂರ ಹಾರಿ ಹೋಗಿ ಬಿದಿದ್ದು, ಕಾರಿನೊಳಗೇ ಮೃತಪಟ್ಟಿದ್ದಾಳೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾದ ಪರಿಣಾಮ 46 ವರ್ಷದ ಮೊನಿಕಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

VISTARANEWS.COM


on

Viral Video
Koo

ಅಮೆರಿಕ: ಭೀಕರ ಬಿರುಗಾಳಿ(Tornadoes)ಯ ರಭಸಕ್ಕೆ ಐವರು ಬಲಿಯಾಗಿದ್ದು, 35ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕ(America)ದ ಲೋವಾ ನಗರದದ ಗ್ರೀನ್‌ಫೀಲ್ಡ್‌(Greenfield)ನಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಈ ಭೀಕರ ಬಿರುಗಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಗಾಯಾಳುಗಳ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿದ್ದಾರೆ.

ಲೋವಾ ಸಾರ್ವಜನಿಕ ಸುರಕ್ಷತಾ ವಿಭಾಗದ ಅಧಿಕಾರಿಗಳು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿರುಗಾಳಿಗೆ ನಾಲ್ವರು ಗ್ರೀನ್‌ಫೀಲ್ಡ್‌ನಲ್ಲೇ ಮೃತಪಟ್ಟಿದ್ದಾರೆ. ಮತ್ತೊರ್ವ ಮಹಿಳೆ ಕಾರು ಸಮೇತ ಬಿರುಗಾಳಿ ರಭಸಕ್ಕೆ 25ಮೈಲು ದೂರ ಹಾರಿ ಹೋಗಿ ಬಿದಿದ್ದು, ಕಾರಿನೊಳಗೇ ಮೃತಪಟ್ಟಿದ್ದಾಳೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾದ ಪರಿಣಾಮ 46ವರ್ಷದ ಮೊನಿಕಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಗ್ರೀನ್‌ ಫೀಲ್ಡ್‌ ನಗರದಲ್ಲಿ ಸುಮಾರು 55 ಮೈಲುಗಳವರೆಗೆ ಈ ಬಿರುಗಾಳಿ ಬೀಸಿದ್ದು, ಅನೇಕ ಮನೆ, ಕಟ್ಟಡಗಳು ಹಾನಿಗೊಳಗಾಗಿವೆ. ಸಾವಿರಾರು ಜನ ಬಿರುಗಾಳಿ ರಭಸಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ ಡಲ್ಲಾಸ್‌ ಸೇರಿದಂತೆ ಟೆಕ್ಸಾಸ್‌ನ ಕೆಲವು ಭಾಗಗಳಲ್ಲಿ ಭೀಕರ ಪ್ರವಾಹವಾಗುವ ಎಚ್ಚರಿಕೆಯನ್ನು ರಾಷ್ಟ್ರೀಯ ಹವಾಮಾನ ಇಲಾಖೆ ನೀಡಿದೆ.

ಹವಾಮಾನ ಬದಲಾವಣೆಯು ಪ್ರಪಂಚದಾದ್ಯಂತ ಚಂಡಮಾರುತಗಳ ತೀವ್ರತೆಯನ್ನು ಹೆಚ್ಚಿಸುತ್ತದೆ. ಅಮೆರಿಕದಲ್ಲಿ ಆಗಾಗ ಸುಂಟರಗಾಳಿ ಸಂಭವಿಸುತ್ತಿರುತ್ತದೆ. ಏಪ್ರಿಲ್‌ನಲ್ಲಿ ಅಮೆರಿಕದಲ್ಲಿ ಎರಡನೇ ಅತಿ ದೊಡ್ಡ ಸುಂಟರಗಾಳಿ ಇದಾಗಿದೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಳೆದ ವಾರ ಮುಂಬೈನಲ್ಲೂ ಭಾರೀ ಗಾಳಿ ಸಹಿತ ಮಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಮಧ್ಯಾಹ್ನ 3 ಗಂಟೆ ಹೊತ್ತಿಗೇ ವಾತಾವರಣದಲ್ಲಿ ಉಂಟಾದ ದಿಢೀರ್ ಬದಲಾವಣೆ ಉಂಟಾಗಿತ್ತು. ದ್ವಿಚಕ್ರ ವಾಹನಗಳಲ್ಲಿ ಕುಳಿತು ಸಾಗುತ್ತಿದ್ದ ಜನರು ಭಾರೀ ಗಾಳಿ, ಮಳೆಯಿಂದಾಗಿ ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ರಕ್ಷಣೆಗಾಗಿ ಅಂಗಡಿ ಮುಂಗಟ್ಟುಗಳತ್ತ ಓಡಿದರು. ಮುಂಬೈ ನಗರದ ಘಾಟ್‌ಕೋಪರ್, ಬಾಂದ್ರಾ, ಕುರ್ಲಾ, ಧಾರಾವಿ ಪ್ರದೇಶಗಳಲ್ಲಿ ಭಾರೀ ಮಳೆ ಆಗಿದೆ. ಕ್ಷಣಾರ್ಧದಲ್ಲಿ ಸಂಚಾರದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿತ್ತು.

ಇದನ್ನೂ ಓದಿ:bomb Hoax: ಶಾಲೆ, ದೇವಸ್ಥಾನದ ಬಳಿಕ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ಗೂ ಬಾಂಬ್‌ ಬೆದರಿಕೆ

ಮುಂಬೈ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಲ್ಯಾಂಡಿಂಗ್ ಹಾಗೂ ಟೇಕಾಫ್‌ಗೆ ಭಾರೀ ಅಡ್ಡಿ ಉಂಟಾಗಿತ್ತು. ದೇಶದ ಅತ್ಯಂತ ಹೆಚ್ಚು ಚಟುವಟಿಕೆಯಿಂದ ಕೂಡಿರುವ ಈ ವಿಮಾನ ನಿಲ್ದಾಣದಲ್ಲಿ ವಿಮಾನಯಾನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಯ್ತು. ಮುಂಬೈ ಮಹಾ ನಗರಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿತ್ತು.

Continue Reading

ಕ್ರೀಡೆ

Viral Video: ಔಟಾದ ಸಿಟ್ಟಿನಲ್ಲಿ ಡಗೌಟ್​​ ಸ್ಟ್ಯಾಂಡ್​ಗೆ ಕೈ ಬಡಿದ ಯಶಸ್ವಿ ಜೈಸ್ವಾಲ್

Viral Video: ಚೇಸಿಂಗ್​ ವೇಳೆ ಜೈಸ್ವಾಲ್​ ಉತ್ತಮವಾಗಿ ಬ್ಯಾಟಿಂಗ್​ ನಡೆಸುತ್ತಿದ್ದರು. 45 ರನ್​ ಗಳಿಸಿದ್ದ ವೇಳೆ ರಿವರ್ಸ್​ ಸ್ವೀಪ್​ ಮಾಡುವ ಯತ್ನಕ್ಕೆ ಕೈ ಹಾಕಿ ಇದರಲ್ಲಿ ವಿಫಲವಾಗಿ ಕ್ಯಾಚ್​ಗೆ ಬಲಿಯಾದರು. ಒಂದೆಡೆ ಅರ್ಧಶತಕ ತಪ್ಪಿದ ಮತ್ತು ತಂಡಕ್ಕೆ ಹಿನ್ನಡೆಯಾದ ಸಿಟ್ಟಿನಲ್ಲಿ ಡ್ರೆಸ್ಸಿಂಗ್​ ರೂಮ್​ಗೆ ತೆರಳುವ ವೇಳೆ ಜೈಸ್ವಾಲ್ ಡಗೌಟ್​ನ ಸ್ಟ್ಯಾಂಡ್​​ನ ಬೇಲಿಗೆ ತಮ್ಮ ಕೈಯನ್ನು ಜೋರಾಗಿ ಬಡಿದಿದ್ದಾರೆ.

VISTARANEWS.COM


on

viral video
Koo

ಅಹಮದಾಬಾದ್​: ಆರ್​ಸಿಬಿ(RCB) ವಿರುದ್ಧ ನಿನ್ನೆ(ಬುಧವಾರ) ನಡೆದ ಐಪಿಎಲ್​ನ(IPL 2024) ಎಲಿಮಿನೇಟರ್(​RCB vs RR Eliminator) ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್(Rajasthan Royals)​ ತಂಡ ನಾಲ್ಕು ವಿಕೆಟ್​ಗಳ ಗೆಲುವು ಸಾಧಿಸಿ ಕ್ವಾಲಿಫೈಯರ್​ ಹಂತಕ್ಕೆ ತೇರ್ಗಡೆಗೊಂಡಿತು. ಆದರೆ, ಇದೇ ಪಂದ್ಯದಲ್ಲಿ ಔಟಾದ ಹತಾಶೆಯಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್(Yashasvi Jaiswal)​ ತಾಳ್ಮೆ ಕಳೆದುಕೊಂಡ(Yashasvi Jaiswal Loses Cool) ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

ಚೇಸಿಂಗ್​ ವೇಳೆ ಜೈಸ್ವಾಲ್​ ಉತ್ತಮವಾಗಿ ಬ್ಯಾಟಿಂಗ್​ ನಡೆಸುತ್ತಿದ್ದರು. 45 ರನ್​ ಗಳಿಸಿದ್ದ ವೇಳೆ ರಿವರ್ಸ್​ ಸ್ವೀಪ್​ ಮಾಡುವ ಯತ್ನಕ್ಕೆ ಕೈ ಹಾಕಿ ಇದರಲ್ಲಿ ವಿಫಲವಾಗಿ ಕ್ಯಾಚ್​ಗೆ ಬಲಿಯಾದರು. ಒಂದೆಡೆ ಅರ್ಧಶತಕ ತಪ್ಪಿದ ಮತ್ತು ತಂಡಕ್ಕೆ ಹಿನ್ನಡೆಯಾದ ಸಿಟ್ಟಿನಲ್ಲಿ ಡ್ರೆಸ್ಸಿಂಗ್​ ರೂಮ್​ಗೆ ತೆರಳುವ ವೇಳೆ ಜೈಸ್ವಾಲ್ ಡಗೌಟ್​ನ ಸ್ಟ್ಯಾಂಡ್​​ನ ಬೇಲಿಗೆ ತಮ್ಮ ಕೈಯನ್ನು ಜೋರಾಗಿ ಬಡಿದಿದ್ದಾರೆ. ಅಲ್ಲದೆ ಜೋರಾಗಿ ಕಿರುಚಾಟ ಕೂಡ ನಡೆಸಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದ್ದು ನೆಟ್ಟಿಗರು ಈ ರೀತಿಯ ವರ್ತನೆ ಸರಿಯಲ್ಲ ಎಂದು ಬುದ್ಧಿಮಾತು ಹೇಳಿದ್ದಾರೆ.

ಕಳೆದ ವರ್ಷದ ಐಪಿಎಲ್​ ಟೂರ್ನಿಯಲ್ಲಿ ಜೈಸ್ವಾಲ್​ 14 ಪಂದ್ಯ ಆಡಿ 625 ರನ್ ಗಳಿಸಿದ್ದರು. ಆದರೆ ಈ ಆವೃತ್ತಿಯಲ್ಲಿ ಅಷ್ಟಾಗಿ ಉತ್ತಮ ಪ್ರದರ್ಶನ ನೀಡಿಲ್ಲ. ಮುಂಬೈ ವಿರುದ್ಧದ ಪಂದ್ಯದಲ್ಲಿ ತಕವೊಂದನ್ನು ಬಾರಿಸಿದ್ದು ಬಿಟ್ಟರೆ ಇವರ ಬ್ಯಾಟ್​ನಿಂದ ದೊಡ್ಡ ಇನಿಂಗ್ಸ್​ ಕಂಡುಬಂದಿಲ್ಲ. ಮುಂದಿನ ತಿಂಗಳು ನಡೆಯುವ ಟಿ20 ವಿಶ್ವಕಪ್​ಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಜೈಸ್ವಾಲ್​ ಕೂಡ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

ಎಲಿಮಿನೇಟರ್​ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ವಿಕೆಟಿಗೆ 172 ರನ್‌ ಗಳಿಸಿತು. ರಾಜಸ್ಥಾನ್‌ 19 ಓವರ್‌ಗಳಲ್ಲಿ 6 ವಿಕೆಟಿಗೆ 174 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು. ಚೇಸಿಂಗ್​ ವೇಳೆ ರಾಜಸ್ಥಾನ್‌ ಬಿರುಸಿನ ಆಡವಾಡಿತು. ಜೈಸ್ವಾಲ್‌ (45)-ಕ್ಯಾಡ್‌ಮೋರ್‌ (20) ಮೊದಲ ವಿಕೆಟ್​ಗೆ 46 ರನ್‌ ಜತೆಯಾಟ ನಿಭಾಯಿಸಿದರು. ಆ ಬಳಿಕ ಜೈಸ್ವಾಲ್‌-ಸ್ಯಾಮ್ಸನ್‌ ಜತೆಗೂಡಿ 35 ರನ್‌ ಕಲೆಹಾಕಿದರು. 112ಕ್ಕೆ 4 ವಿಕೆಟ್‌ ಬಿದ್ದಾಗ ಪಂದ್ಯ ಕುತೂಹಲ ಘಟ್ಟ ತಲುಪಿತು. ಆದರೆ ಪರಾಗ್‌-ಹೆಟ್‌ಮೈರ್‌ ಸಿಡಿದು ನಿಂತು 45 ರನ್‌ ಜತೆಯಾಟ ನಿಭಾಯಿಸಿ ಆರ್‌ಸಿಬಿಗೆ ಸೋಲುಣಿಸಿದರು. ಮೂರು ಓವರ್​ ತನಕ ಉತ್ತಮ ಲಯದಲ್ಲಿದ್ದ ಕ್ಯಾಮರೂನ್​ ಗ್ರೀನ್​ ನಾಲ್ಕನೇ ಓವರ್​ನಲ್ಲಿ ದುಬಾರಿಯಾದರು. ಹೆಟ್‌ಮೈರ್‌ ಈ ಓವರ್​ನಲ್ಲಿ ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಬಿಸಿ ಮುಟ್ಟಿಸಿದರು.

ಈ ಸೋಲಿನೊಂದಿಗೆ ಆರ್​ಸಿಬಿ ತಂಡದ 2024ರ ಐಪಿಎಲ್​ ಅಭಿಯಾನ ಮುಕ್ತಾಯಗೊಂಡಿತು. ಪ್ಲೇಆಫ್ ಹಂತಕ್ಕೆ ಪ್ರವೇಶ ಪಡೆದಿರುವುದೇ ರೆಡ್​ ಆರ್ಮಿಯ ದೊಡ್ಡ ಸಾಧನೆ ಎನಿಸಿಕೊಂಡಿತು. ಜತೆಗೆ ಆರ್​​ಸಿಬಿಯ ಅಪಾರ ಅಭಿಮಾನಿಗಳ ಹೃದಯ ಛಿದ್ರಗೊಂಡಿತು. ಈ ಬಾರಿಯಾದರೂ ಕಪ್​ ಗೆಲ್ಲಬೇಕೆಂಬ ಆಸೆ ಕಮರಿತು. ಕಷ್ಟದಲ್ಲಿ ಪ್ಲೇಆಫ್​ ಹಂತಕ್ಕೇರಿದ ಹೊರತಾಗಿಯೂ ಮುಂದಿನ ಹಂತಕ್ಕೆ ಹೋಗಲು ಸಾಧ್ಯವಾಗದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ಚೆನ್ನೈ ವಿರುದ್ಧದ ಲೀಗ್ ಪಂದ್ಯದಲ್ಲಿ ಹೆಚ್ಚು ನಿಖರವಾಗಿ ಆಡಿದ್ದ ಆರ್​ಸಿಬಿ ಈ ಪಂದ್ಯದಲ್ಲಿ ನಿರ್ಲಕ್ಷ್ಯ ತೋರಿತು. ಬ್ಯಾಟಿಂಗ್​ನಲ್ಲಿ ಅನಗತ್ಯವಾಗಿ ವಿಕೆಟ್​ ಒಪ್ಪಿಸಿದರೆ ಬೌಲಿಂಗ್ ವೇಳೆಯೂ ಕ್ಯಾಚ್​ ಕೈಚೆಲ್ಲಿ, ಕಳಪೆ ಫೀಲ್ಡಿಂಗ್ ಮಾಡಿ, ರನ್​ಔಟ್​ ಚಾನ್ಸ್​ ಕಳೆದುಕೊಂಡಿತು. ಇದು ಸೋಲಿಗೆ ಕಾರಣವಾಯಿತು.

Continue Reading

ವೈರಲ್ ನ್ಯೂಸ್

Viral Video: ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌

Viral Video:ರಿಶಿಕೇಶ್‌ ಏಮ್ಸ್‌ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನಕ್ಕೆಂದು ಬಂದಿದ್ದ ಪೊಲೀಸರು ಜೀಪು ಸಮೇತ ಆಸ್ಪತ್ರೆಯೊಳಗೆ ನುಗ್ಗಿದ್ದಾರೆ. ನೇರವಾಗಿ ಆಸ್ಪತ್ರೆಯ ನಾಲ್ಕನೇ ಮಹಡಿಗೆ ಬಂದ ಪೊಲೀಸರು ಐಸಿಯು ಒಳಗೆ ಜೀಪು ಚಲಾಯಿಸಿದ್ದಾರೆ. ಈ ದೃಶ್ಯವನ್ನು ಆಸ್ಪತೆಯಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಎಕ್ಸ್‌ನಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲಾಗಿದೆ

VISTARANEWS.COM


on

Viral Video
Koo

ಉತ್ತರಾಖಂಡ: ಸಿನಿಮಾಗಳಲ್ಲಿ ಹೀರೋ ಬಿಲ್ಡಿಂಗ್‌, ಕಾಪೌಂಡ್‌ ಅನ್ನು ಲೆಕ್ಕಿಸದೇ ವಾಹನ ನುಗ್ಗಿಸುವ ದೃಶ್ಯ ನೋಡಿರ್ತೀರಿ. ಅದರಲ್ಲೂ ಹೀರೋ ಒಂದುವೇಳೆ ಪೊಲೀಸ್‌ ಆಗಿದ್ದರೆ ತನ್ನ ಜೀಪ್‌ನಲ್ಲೇ ಅಪರಾಧಿಗಳನ್ನು ಚೇಸ್‌ ಮಾಡಿ ಹಿಡಿಯುವ ಹಲವಾರು ದೃಶ್ಯಗಳನ್ನು ನೋಡಿರ್ತೇವೆ. ಅಂತಹದ್ದೇ ಒಂದು ದೃಶ್ಯ ಋಷಿಕೇಶದಲ್ಲಿ ನಡೆದಿದೆ. ಪೊಲೀಸ್‌ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ(Sexual harassments) ಆರೋಪಿಯನ್ನು ಅರೆಸ್ಟ್‌ ಮಾಡಲೆಂದು ನೇರವಾಗಿ ಆಸ್ಪತ್ರೆ(Hospital)ಯ ಐಸಿಯು ಒಳಗೆ ತಮ್ಮ ಜೀಪನ್ನು ನುಗ್ಗಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ವಿಡಿಯೋ ಫುಲ್‌ ವೈರಲ್‌

ರಿಶಿಕೇಶ್‌ ಏಮ್ಸ್‌ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನಕ್ಕೆಂದು ಬಂದಿದ್ದ ಪೊಲೀಸರು ಜೀಪು ಸಮೇತ ಆಸ್ಪತ್ರೆಯೊಳಗೆ ನುಗ್ಗಿದ್ದಾರೆ. ನೇರವಾಗಿ ಆಸ್ಪತ್ರೆಯ ನಾಲ್ಕನೇ ಮಹಡಿಗೆ ಬಂದ ಪೊಲೀಸರು ಐಸಿಯು ಒಳಗೆ ಜೀಪು ಚಲಾಯಿಸಿದ್ದಾರೆ. ಈ ದೃಶ್ಯವನ್ನು ಆಸ್ಪತೆಯಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಎಕ್ಸ್‌ನಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲಾಗಿದೆ.

ನರ್ಸಿಂಗ್‌ ಅಧಿಕಾರಿಯಿಂದ ಲೈಂಗಿಕ ಕಿರುಕುಳ

ಏಮ್ಸ್‌ನ ನರ್ಸಿಂಗ್‌ ಅಧಿಕಾರಿ ಸತೀಶ್‌ ಕುಮಾರ್‌ ಎಂಬಾತ ವೈದ್ಯೆಯೊಬ್ಬರಿಗೆ ಎಂಎಂಎಸ್‌ ಕಳುಹಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿತ್ತು. ಆರೋಪಿ ಬಂಧನಕ್ಕೆಂದು ಏಮ್ಸ್‌ ಆಸ್ಪತ್ರೆಗೆ ಪೊಲೀಸರು ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಸತೀಶ್‌ ಕುಮಾರ್‌ ಎಸ್ಕೇಪ್‌ ಆಗಲು ಯತ್ನಿಸಿದ್ದ. ಇದು ತಿಳಿದ ಡೆಹ್ರಾಡೂನ್‌ ಪೊಲೀಸರು ಆಸ್ಪತ್ರೆಯ ಒಳಗೆ ಜೀಪ್‌ ಚಲಾಯಿಸಿದಾರೆ. ನೇರವಾಗಿ ನಾಲ್ಕನೇ ಮಹಡಿಗೆ ತಲುಪಿದ ಜೀಪ್‌ ಐಸಿಯು ಒಳಗೆ ಬಂದು ನಿಂತಿದೆ.

ಪೊಲೀಸ್‌ ವಾಹನ್‌ ಆಸ್ಪತ್ರೆ ಒಳಗೆ ಬರುತ್ತಿದ್ದಂತೆ ಅಲ್ಲಿದ್ದ ರೋಗಿಗಳು, ಜನರು ಒಂದು ಕ್ಷಣಕ್ಕೆ ಗಾಬರಿ ಆಗಿದ್ದಾರೆ. ರೋಗಿಗಳು ಮಲಗಿದ್ದ ಮಂಚ ಸರಿಸಿ ಪೊಲೀಸ್‌ ವಾಹನಕ್ಕೆ ಜಾಗ ಮಾಡಿಕೊಡುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇದಾಗಿಯೂ ಪೊಲೀಸ್‌ ವಾಹನ ಮಾತ್ರ ನಿಲ್ಲುವುದೇ ಇಲ್ಲ. ತನ್ನ ಗುರಿ ತಲುಪಿದ ಮೇಲಷ್ಟೇ ವಾಹನಕ್ಕೆ ಬ್ರೇಕ್‌ ಬೀಳುತ್ತದೆ.

ಇದನ್ನೂ ಓದಿ:ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

ಪೊಲೀಸ್‌ ಕ್ರಮಕ್ಕೆ ಖಂಡನೆ

ಇನ್ನು ಪೊಲೀಸರ ಈ ಕ್ರಮಕ್ಕೆ ಹಲವರಿಂದ ಖಂಡನೆ ವ್ಯಕ್ತವಾಗಿದೆ. ಆಸ್ಪತ್ರೆಯಂತಹ ಸೂಕ್ಷ್ಮ ಸ್ಥಳಗಳಲ್ಲಿ ಇಂತಹ ವಾತಾವರಣ ಸೃಷ್ಟಿಸುವುದು ಸರಿಯಲ್ಲ. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸಬೇಕೆಂದು ಜನ ಆಗ್ರಹಿಸಿದ್ದಾರೆ. ಅಲ್ಲದೇ ಅಲ್ಲಿದ್ದ ರೋಗಿಗಳು ಹಾಗೂ ಅವರ ಕುಟುಂಬಸ್ಥರೂ ಪೊಲೀಸರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉತ್ತರಾಖಂಡ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಘಟನೆಯ ಬಗ್ಗೆ ಗಮನ ಹರಿಸಿದ್ದು,. ಕಿರುಕುಳಕ್ಕೊಳಗಾದ ಮಹಿಳಾ ವೈದ್ಯರನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ನೇರವಾಗಿ ನಿರ್ಣಯಿಸಲು AIIMS ಗೆ ಭೇಟಿ ನೀಡಿದರು.

Continue Reading
Advertisement
Jagannath Puri Temple
ಪ್ರವಾಸ6 mins ago

Jagannath Puri Temple: ಪುರಿ ಜಗನ್ನಾಥ ದೇವಸ್ಥಾನದ 7 ಅಚ್ಚರಿಯ ಸಂಗತಿಗಳಿವು!

Medical negligence death case due to doctor negligence Dead body handed over without paying 30 lakh rupees
ಕ್ರೈಂ7 mins ago

Medical negligence: ಅವಳಿ ಮಕ್ಕಳಿಗೆ ಜನ್ಮ ನೀಡಿ ಸಾವು ಕೇಸ್‌; 30 ಲಕ್ಷ ರೂ. ಕಟ್ಟಿಸಿಕೊಳ್ಳದೆ ಮೃತದೇಹ ಹಸ್ತಾಂತರ

Chardham Yatra
ಪ್ರವಾಸ8 mins ago

Chardham Yatra 2024: ಚಾರ್‌ಧಾಮ್‌, ಕೇದಾರನಾಥನ ದರ್ಶನ ಮಾಡಲು ಬಯಸಿದ್ದೀರಾ? ನಿಮಗೆ ಬೇಕಾದ ಮಾಹಿತಿ ಇಲ್ಲಿದೆ

Nissan Magnite GEZA CVT
ಆಟೋಮೊಬೈಲ್14 mins ago

Magnite GEZA CVT : ಮ್ಯಾಗ್ನೈಟ್ ಗೆಝಾ ಸಿವಿಟಿ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಿದ ನಿಸ್ಸಾನ್

Mouth Sleeping
ಆರೋಗ್ಯ24 mins ago

Mouth Sleeping: ನಿದ್ದೆಯಲ್ಲಿದ್ದಾಗ ಬಾಯಿಯಿಂದ ಉಸಿರಾಡುತ್ತೀರಾ? ಹಾಗಾದರೆ ಮುಂದೆ ಸಮಸ್ಯೆಯಾಗಬಹುದು!

SSLC Toper
ಕೊಪ್ಪಳ38 mins ago

SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

Chemical Factory
ದೇಶ46 mins ago

Chemical Factory: ಕೆಮಿಕಲ್‌ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ನಾಲ್ವರ ಸಾವು, 25 ಮಂದಿಗೆ ಗಾಯ

Star Holiday Fashion
ಫ್ಯಾಷನ್54 mins ago

Star Holiday Fashion: ಪರ್ಫೆಕ್ಟ್ ಸಮ್ಮರ್‌ ಹಾಲಿ ಡೇ ಲುಕ್‌ನಲ್ಲಿ ನಟಿ ಅಮೂಲ್ಯ

Prajwal Revanna Case Surrender Now Devegowda warning to Prajwal
ರಾಜಕೀಯ58 mins ago

Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

IPL 202
ಕ್ರೀಡೆ59 mins ago

IPL 2024: ಮುಂದಿನ ಆವೃತ್ತಿಯಲ್ಲಿ ಕೊಹ್ಲಿ ಈ ಫ್ರಾಂಚೈಸಿ ಪರ ಆಡಿದರೆ ಉತ್ತಮ ಎಂದ ಆರ್​ಸಿಬಿ ಮಾಜಿ ನಾಯಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ13 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌