PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು! - Vistara News

Lok Sabha Election 2024

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

PM Narendra Modi: ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

PM Narendra Modi Cm Siddaramaiah many questions to PM Modi Challenge for answer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಜ್ಯ ಪ್ರವಾಸದಲ್ಲಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್‌ ಹಾಗೂ ಕರ್ನಾಟಕ ಸರ್ಕಾರದ (Karnataka Congress Government) ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮೋದಿಯವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದು, ಉತ್ತರಿಸುವಂತೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ ಎಂದು ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗಳು ಏನು?

ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ‍್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕೋರುತ್ತೇನೆ. ನಿಮ್ಮ ಇತ್ತೀಚಿನ ಅತಿದೊಡ್ಡ ಸುಳ್ಳಿನ ಬಗ್ಗೆ ಕೆಲವು ಪ್ರಶ್ನೆಗಳನ್ನು ನಿಮಗೆ ಕೇಳಬೇಕೆಂದಿದ್ದೇನೆ, ನಿಮ್ಮ ಇಂದಿನ ಭಾಷಣದಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸುವಿರೆಂದು ನಂಬಿದ್ದೇನೆ.

‘’ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ’’ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ. ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿಸಿ.

ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ?

ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿತ್ತು. ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. 2019ರ ಬಜೆಟ್‌ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈಗ ನಿರ್ಮಲಾ ಸೀತಾರಾಮನ್ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ?

ಸಂಪತ್ತಿನ ಸಮಾನ ಹಂಚಿಕೆ ಎಂಬುದು ಉದಾತ್ತ ಚಿಂತನೆ

ಸಂಪತ್ತಿನ ಸಮಾನ ಹಂಚಿಕೆ ಎನ್ನುವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಎಚ್.ಡಿ. ದೇವೇಗೌಡರು. ಮೋದಿಯವರೇ ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ?

ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ?

ನರೇಂದ್ರ ಮೋದಿಯವರೇ ನಿಮ್ಮದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಾದುದೇನಲ್ಲ. 2019ರಲ್ಲಿ ನಿಮ್ಮದೇ ಸರ್ಕಾರ ಶೇಕಡಾ 30ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ ಎನ್ನುವುದು ನಿಮಗೆ ತಿಳಿದಿರಲಿ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಪ್ರಧಾನಿ ಮೋದಿಯವರೇ, ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ?

ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದೀರಾ?

ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ?

ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿಯವರೇ, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆ ಮಾಡಬೇಕೆಂದು ನಿಮಗೆ ಅನಿಸಲಿಲ್ಲವೇ?

ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ

ಹಿಂದಿನ ಪ್ರಧಾನಿಗಳಾದ ಜವಾಹರಲಾಲ್ ನೆಹರೂ 33, ಲಾಲ್ ಬಹದ್ದೂರ್ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್ ಗಾಂಧಿಯವರು 16, ವಿ.ಪಿ.ಸಿಂಗ್ ಅವರು 2, ಐ.ಕೆ.ಗುಜ್ರಾಲ್ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್ ಸಿಂಗ್ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ನಿಮ್ಮ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದೀರಿ. ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದರೆ ಇದೇನಾ?

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿಯವರೇ, ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿತು. ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಅನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು.

ಹತ್ತು ವರ್ಷಗಳಲ್ಲಿ ನೀವು ಆಸ್ತಿ ಮಾಡಿಕೊಟ್ಟಿದ್ದು ಯಾರಿಗೆ?

ಪ್ರಧಾನಿ ಮೋದಿಯವರೇ ನಿಮ್ಮ ಹತ್ತು ವರ್ಷಗಳಲ್ಲಿ ನೀವು ಆಸ್ತಿ ಮಾಡಿಕೊಟ್ಟಿದ್ದು ಅದಾನಿ – ಅಂಬಾನಿಗಳಿಗೆ ಮಾತ್ರ ಅಲ್ಲವೇ? ವಿಮಾನ ನಿಲ್ದಾಣಗಳು, ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್ ನಿಗಮಗಳು ಒಂದೇ ಎರಡೇ ಇವೆಲ್ಲವೂ ನಿಮ್ಮ ಕಾಲದಲ್ಲಿಯೇ ಅಲ್ಲವೇ ಅದಾನಿ-ಅಂಬಾನಿ ಮಡಿಲು ಸೇರಿದ್ದು? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Lok Sabha Election : ಉದ್ಧವ್ ಠಾಕ್ರೆ ಈ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಲು ನಿರಾಕರಿಸಿದ್ದರು. ಹೀಗಾಗಿ ಪಾಟಿಲ್​ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಸಮೀಪದ ಬಿಜೆಪಿಯ ಸಂಜಯ್ ಪಾಟೀಲ್ ಅವರನ್ನು 1,00,053 ಮತಗಳಿಂದ ಸೋಲಿ ಸಿದ್ದರು. ಇಲ್ಲಿ ಶಿವಸೇನೆ ಅಭ್ಯರ್ಥಿ ಚಂದ್ರಹರ್ ಪಾಟೀಲ್ ಕೇವಲ 60,860 ಮತಗಳನ್ನು ಪಡೆದಿದ್ದರು.

VISTARANEWS.COM


on

Lok Sabha Election
Koo

ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಮಹಾರಾಷ್ಟ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗೆದ್ದಿದ್ದ ಸಂಸದರೊಬ್ಬರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಹಳೆ ಪಕ್ಷದ ಒಟ್ಟು ಸದಸ್ಯರ 100ಕ್ಕೆ ಏರಿಕೆಯಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಶತಕದ ಸಂಭ್ರವನ್ನಾಚರಿಸಿದೆ. ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿ ಪಾಲುದಾರ ಶಿವಸೇನೆ (ಯುಬಿಟಿ) ಗೆ ಟಿಕೆಟ್​ ನೀಡಿದ್ದಕ್ಕೆ ಬೇಸರಗೊಂಡಿದ್ದ ಕಾಂಗ್ರೆಸ್ ಮುಖಂಡ ವಿಶಾಲ್ ಪಾಟೀಲ್ ಸಾಂಗ್ಲಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಅವರು ಮಾತೃಪಕ್ಷಕ್ಕೆ ವಾಪಸಾಗಿರುವ ಕಾರಣ ಕಾಂಗ್ರೆಸ್ ಸದಸ್ಯರ ಸಂಖ್ಯೆ ಹೆಚ್ಚಿದೆ.

ಉದ್ಧವ್ ಠಾಕ್ರೆ ಈ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಲು ನಿರಾಕರಿಸಿದ್ದರು. ಹೀಗಾಗಿ ಪಾಟಿಲ್​ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಸಮೀಪದ ಬಿಜೆಪಿಯ ಸಂಜಯ್ ಪಾಟೀಲ್ ಅವರನ್ನು 1,00,053 ಮತಗಳಿಂದ ಸೋಲಿ ಸಿದ್ದರು. ಇಲ್ಲಿ ಶಿವಸೇನೆ ಅಭ್ಯರ್ಥಿ ಚಂದ್ರಹರ್ ಪಾಟೀಲ್ ಕೇವಲ 60,860 ಮತಗಳನ್ನು ಪಡೆದಿದ್ದರು.

ಮಹಾರಾಷ್ಟ್ರದ ಜನರು ದ್ರೋಹ, ಅಹಂಕಾರ ಮತ್ತು ವಿಭಜನೆಯ ರಾಜಕೀಯವನ್ನು ಸೋಲಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರಂತಹ ನಮ್ಮ ಪ್ರೇರಣಾದಾಯಕ ನಾಯಕರಿಗೆ ಇದು ಸೂಕ್ತ ಗೌರವವಾಗಿದೆ. ಸಾಂಗ್ಲಿಯ ಚುನಾಯಿತ ಸಂಸದ ಶ್ರೀ ವಿಶಾಲ್ ಪಾಟೀಲ್ (@patilvishalvp) ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನು ಸ್ವಾಗತಿಸುತ್ತೇನೆ. ಸಂವಿಧಾನ ದೀರ್ಘಕಾಲ ಸುರಕ್ಷಿತವಾಗಿರಲಿ ಎಂದು ಬರೆಯಲಾಗಿದೆ.

ಪಾಟೀಲ್ ಅವರ ಬೆಂಬಲವು ಲೋಕಸಭೆಯಲ್ಲಿ 99 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್​ಗೆ ಗಮನಾರ್ಹ ಉತ್ತೇಜನ ಸಿಕ್ಕಿದೆ. ಈ ಪಕ್ಷ ಹಿಂದಿನ ಚುನಾವಣೆಯಲ್ಲಿ ಪಡೆದಿದ್ದ 52 ರಿಂದ ತನ್ನ ಸಂಖ್ಯೆಯನ್ನು ದುಪ್ಪಟ್ಟು ಮಾಡಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಗೆದ್ದಿವೆ. ಮತ್ತೊಂದೆಡೆ, ಬಿಜೆಪಿ-ಎನ್ಸಿಪಿ-ಶಿವಸೇನೆ ಮಹಾಯುತಿ ಮೈತ್ರಿಕೂಟವು ಕೇವಲ 17 ಸ್ಥಾನಗಳನ್ನು ಗಳಿಸಿತ್ತು.

ಇದನ್ನೂ ಓದಿ: Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚಿಸಲು ಇಂಡಿಯಾ ಬಣದ ಸದಸ್ಯರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಿದರು. “ನಮ್ಮ ಮೈತ್ರಿಕೂಟಕ್ಕೆ ದೊರೆತ ಅಪಾರ ಬೆಂಬಲಕ್ಕಾಗಿ ಇಂಡಿಯಾ ಬಣದ ಘಟಕಗಳು ಭಾರತದ ಜನರಿಗೆ ಧನ್ಯವಾದ ಅರ್ಪಿಸುತ್ತವೆ. ಜನಾದೇಶವು ಬಿಜೆಪಿ ಮತ್ತು ಅವರ ದ್ವೇಷ ಮತ್ತು ಭ್ರಷ್ಟಾಚಾರದ ರಾಜಕೀಯಕ್ಕೆ ಸೂಕ್ತ ಉತ್ತರ ನೀಡಿದೆ” ಎಂದು ಖರ್ಗೆ ಸಭೆಯ ನಂತರ ಹೇಳಿದರು.

“ಇದು ಭಾರತದ ಸಂವಿಧಾನವನ್ನು ರಕ್ಷಿಸಲು ಮತ್ತು ಬೆಲೆ ಏರಿಕೆ, ನಿರುದ್ಯೋಗ ಮತ್ತು ಕ್ರೋನಿ ಕ್ಯಾಪಿಟಲಿಸಂ ವಿರುದ್ಧ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಜನಾದೇಶವಾಗಿದೆ. ಮೋದಿ ನೇತೃತ್ವದ ಬಿಜೆಪಿಯ ಫ್ಯಾಸಿಸ್ಟ್ ಆಡಳಿತದ ವಿರುದ್ಧ ಭಾರತ ಬಣವು ಹೋರಾಟವನ್ನು ಮುಂದುವರಿಸುತ್ತದೆ” ಎಂದು ಅವರು ಹೇಳಿದರು.

Continue Reading

ದೇಶ

Lok Sabha Election 2024: ಈ 17 ಸಂಸದರು ಎನ್‌ಡಿಎಯಲ್ಲೂ ಇಲ್ಲ, ಇಂಡಿ ಕೂಟದಲ್ಲೂ ಇಲ್ಲ!

2024ರ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಗೆದ್ದಿರುವ ಈ 17 ಅಭ್ಯರ್ಥಿಗಳು ಎನ್ ಡಿ ಎನಲ್ಲೂ ಇಲ್ಲ ಇಂಡಿಯಾ ಮೈತ್ರಿಕೂಟಕ್ಕೂ ಸೇರಿಲ್ಲ. ಇದರಲ್ಲಿ 7 ಅಭ್ಯರ್ಥಿಗಳು ಸ್ವತಂತ್ರರು, ನಾಲ್ವರು ವೈಎಸ್‌ಆರ್‌ಸಿಪಿ ಪಕ್ಷಕ್ಕೆ ಸೇರಿದವರು. ಅಂತಿಮವಾಗಿ ಇವರ ಬೆಂಬಲ ಯಾರಿಗೆ ಸಿಗುತ್ತದೆ ಎಂಬುದು ಕುತೂಹಲಕರವಾಗಿದೆ.

VISTARANEWS.COM


on

By

Lok Sabha Election 2024
Koo

ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಈ ಬಾರಿ ಭಾರತೀಯ ಜನತಾ ಪಕ್ಷ (BJP) ಬಹುಮತದ ಸಂಖ್ಯೆಯನ್ನು ದಾಟಲು ವಿಫಲವಾದರೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಮ್ಯಾಜಿಕ್ ಸಂಖ್ಯೆಯನ್ನು ಭದ್ರಪಡಿಸುವಲ್ಲಿ ಯಶಸ್ವಿಯಾಯಿತು. ಇಂಡಿ ಒಕ್ಕೂಟದ (India alliance) ಅದ್ಭುತ ಪ್ರದರ್ಶನದಿಂದಾಗಿ 400ರ ಗುರಿ ತಲುಪುವ ಎನ್ ಡಿ ಎ ಯ ಕನಸು ನುಚ್ಚುನೂರಾಯಿತು.

ಬಿಜೆಪಿ 543 ಸ್ಥಾನಗಳಲ್ಲಿ 240 ಸ್ಥಾನಗಳನ್ನು ಗೆದ್ದಿದ್ದು 2019 ರ ಲೆಕ್ಕಾಚಾರದಿಂದ 60ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಂಡಿದೆ. ಆದರೆ ಆಂಧ್ರಪ್ರದೇಶದಲ್ಲಿ ಎನ್. ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಜನತಾ ದಳದ (ಯು) ಬೆಂಬಲದಿಂದ ಎನ್ ಡಿ ಎ ಸಂಖ್ಯೆ 292ಕ್ಕೆ ತಲುಪಿದೆ. 16 ಸ್ಥಾನಗಳ ಗೆಲುವುಗಳೊಂದಿಗೆ ಟಿಡಿಪಿ ಎನ್‌ಡಿಎಯಲ್ಲಿ ದೊಡ್ಡ ಪಕ್ಷಗಳಲ್ಲಿ ಒಂದಾಗಿ ಹೊರಹೊಮ್ಮಿದೆ.

ಮತ್ತೊಂದೆಡೆ ಕಾಂಗ್ರೆಸ್ ತನ್ನ 2019ರಲ್ಲಿದ್ದ ಸಂಖ್ಯೆಯನ್ನು ದ್ವಿಗುಣಗೊಳಿಸಿದೆ. ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ತನ್ನ ಭದ್ರಕೋಟೆಯನ್ನು ಮರಳಿ ಪಡೆದುಕೊಂಡಿದ್ದು, ಭಾರತ ಬ್ಲಾಕ್ ನ ಸಂಖ್ಯೆ 234 ಸ್ಥಾನಗಳಿಗೇರಲು ಸಹಾಯವಾಯಿತು.

ನಿತೀಶ್ ಮತ್ತು ನಾಯ್ಡು ಈ ಹಿಂದೆ ಬಿಜೆಪಿ ವಿರೋಧಿ ಮೈತ್ರಿಯಲ್ಲಿದ್ದ ಕಾರಣ ಇಂಡಿ ಬಣದ ಕೆಲವು ಪಕ್ಷಗಳು ಕೇಂದ್ರದಲ್ಲಿ ಸರ್ಕಾರ ರಚಿಸಲು ಪ್ರಯತ್ನಗಳನ್ನು ಮಾಡಲು ಬಯಸಿದ್ದವು. ಆದರೆ ಬಹುಮತದ ಹಕ್ಕು ಬೆಂಬಲಿಸಲು ಇಂಡಿ ಬ್ಲಾಕ್‌ನಲ್ಲಿ ಇಲ್ಲದ ಮತ್ತಷ್ಟು ಪಕ್ಷಗಳ ಬೆಂಬಲದ ಅಗತ್ಯವಿದೆ.

ಇಂಡಿಯಾ ಮತ್ತು ಎನ್ ಡಿ ಎನಲ್ಲಿ ಇವರಿಲ್ಲ!

ಕಾಂಗ್ರೆಸ್ ಮೈತ್ರಿ ಪಕ್ಷ ಇಂಡಿ ಒಕ್ಕೂಟ ಹಾಗೂ ಬಿಜೆಪಿ ನೇತೃತ್ವದ ಎನ್ ಡಿ ಎ ಒಕ್ಕೂಟ ಈ ಎರಡಕ್ಕೂ ಸೇರದ 17 ಮಂದಿ ಲೋಕಸಭೆ ಚುನಾವಣೆ 2024ರಲ್ಲಿ ಗೆದ್ದು ಸಂಸತ್ತು ಪ್ರವೇಶಿಸಿದ್ದಾರೆ.

ಸ್ವತಂತ್ರರು 7

ಬಿಹಾರ ಪೂರ್ನಿಯಾದ ಕ್ರಿಮಿನಲ್‌ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್, ಮಹಾರಾಷ್ಟ್ರ ಸಾಂಗ್ಲಿಯ ವಿಶಾಲ್ (ದಾದಾ) ಪ್ರಕಾಶಬಾಪು ಪಾಟೀಲ್ , ಪಂಜಾಬ್ ಖಾದೂರ್ ಸಾಹಿಬ್‌ನ ಸಿಖ್‌ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್, ಫರೀದ್ಕೋಟ್‌ನ ಸರಬ್ಜೀತ್ ಸಿಂಗ್ ಖಾಲ್ಸಾ, ದಮನ್ ಮತ್ತು ದಿಯು (UT)ನ ಪಟೇಲ್ ಉಮೇಶಭಾಯ್ ಬಾಬುಭಾಯ್ , ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಪ್ರತ್ಯೇಕತಾವಾದಿ ಅಬ್ದುಲ್ ರಶೀದ್ ಶೇಖ್, ಲಡಾಖ್‌ನ ಮೊಹಮ್ಮದ್ ಹನೀಫಾ.

ವೈಎಎಸ್‌ಆರ್‌ಸಿಪಿ 4

ಆಂಧ್ರಪ್ರದೇಶದ ಅರಕು(ಎಸ್ಟಿ) ಕ್ಷೇತ್ರದ ಗುಮ್ಮ ತನುಜಾ ರಾಣಿ, ಕಡಪದ ವೈ.ಎಸ್. ಅವಿನಾಶ್ ರೆಡ್ಡಿ, ತಿರುಪತಿ(SC)ಯ ಗುರುಮೂರ್ತಿ ಮಡ್ಡಿಲ, ರಾಜಂಪೇಟೆಯ ಪಿವಿ ಮಿಧುನ್ ರೆಡ್ಡಿ

ಇದನ್ನೂ ಓದಿ: Agnipath Scheme: ಸರ್ಕಾರ ರಚನೆಗೂ ಮುನ್ನ ನಿತೀಶ್‌ ಕುಮಾರ್‌ ಬಿಗ್‌ ಡಿಮ್ಯಾಂಡ್‌! ಬಿಜೆಪಿಗೆ ʼಅಗ್ನಿʼ ಪರೀಕ್ಷೆ ಗ್ಯಾರಂಟಿ!

ಎಐಎಂಐಎಂ 1

ತೆಲಂಗಾಣದ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ

ಆಜಾದ್ ಸಮಾಜ ಪಕ್ಷ (ಕಾನ್ಶಿ ರಾಮ್) 1

ಉತ್ತರಪ್ರದೇಶ ನಾಗಿನಾದ ಚಂದ್ರಶೇಖರ್

ಶಿರೋಮಣಿ ಅಕಾಲಿದಳ 1

ಪಂಜಾಬ್ ಭಟಿಂಡಾದ ಹರ್ಸಿಮ್ರತ್ ಕೌರ್ ಬಾದಲ್

ಭಾರತ್ ಆದಿವಾಸಿ ಪಕ್ಷ 1

ರಾಜಸ್ಥಾನದ ಬನ್ಸ್ವಾರಾದ ರಾಜ್ ಕುಮಾರ್ ರೋಟ್

ಜೋರಾಮ್ ಪೀಪಲ್ಸ್ ಮೂವ್ಮೆಂಟ್ 1

ಮಿಜೋರಾಂನ ರಿಚರ್ಡ್ ವನ್ಲಾಲ್ಮಂಗೈಹ

ವಾಯ್ಸ್ ಆಫ್ ದಿ ಪೀಪಲ್ ಪಾರ್ಟಿ 1

ಮೇಘಾಲಯ ಶಿಲಾಂಗ್‌ನ ಡಾ ರಿಕಿ ಆಂಡ್ರ್ಯೂ ಜೆ ಸಿಂಗಾನ್

Continue Reading

ಪ್ರಮುಖ ಸುದ್ದಿ

Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

Stock market Crash : ಷೇರು ಮಾರುಕಟ್ಟೆ ಪತನವು ಭಾರತ ಕಂಡ “ಅತಿದೊಡ್ಡ ಷೇರು ಮಾರುಕಟ್ಟೆ ಹಗರಣ” ಎಂದು ಆರೋಪಿಸಿರು ರಾಹುಲ್ ಗಾಂಧಿ, ಚುನಾವಣಾ ಫಲಿತಾಂಶಗಳು ಪ್ರಕಟವಾಗುವ ಕೆಲವೇ ದಿನಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಜನರಿಗೆ ಹೂಡಿಕೆ ಸಲಹೆಯನ್ನು ನೀಡಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

Stock market Crash
Koo

ನವದೆಹಲಿ: ಜೂನ್ 4 ರಂದು ಷೇರು ಮಾರುಕಟ್ಟೆ ಏಕಾಏಕಿ ಪತನಗೊಂಡು (Stock market Crash) ಹೂಡಿಕೆದಾರರಿಗೆ 30 ಲಕ್ಷ ಕೋಟಿ ರೂಪಾಯಿ ನಷ್ಟವಾಗಿರುವುದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಸೇರಿಕೊಂಡು ಮಾಡಿರುವ ಹಗರಣ ಎಂದು ಕಾಂಗ್ರೆಸ್​​ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಗುರುವಾರ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ಅವರು ಈ ಬಗ್ಗೆ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್​, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಚುನಾವಣಾ ಫಲಿತಾಂಶ ಪ್ರಕಟಣೆಗೆ ಕೆಲವೇ ದಿನಗಳ ಮೊದಲು ಷೇರು ಮಾರುಕಟ್ಟೆಯ ಬಗ್ಗೆ ಏಕೆ ಹೇಳಿಕೆ ನೀಡಿದ್ದರು. ಭಾರತೀಯ ಚುನಾವಣಾ ಇತಿಹಾಸದಲ್ಲಿಯೇ ಇದು ಮೊದಲ ಬಾರಿಗೆ ಆಗಿದೆ ಎಂದು ಹೇಳಿದರು.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಐದು ಕೋಟಿ ಕುಟುಂಬಗಳಿಗೆ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ನಿರ್ದಿಷ್ಟ ಹೂಡಿಕೆ ಸಲಹೆಯನ್ನು ಏಕೆ ನೀಡಿದರು? ಹೂಡಿಕೆ ಸಲಹೆ ನೀಡುವುದು ಅವರ ಕೆಲಸವೇ? ಷೇರುಗಳನ್ನು ತಿರುಚಿದ್ದಕ್ಕಾಗಿ ಸೆಬಿಯಿಂದ ತನಿಖಗೆ ಒಳಪಟ್ಟಿರುವ ವ್ಯವಹಾರ ಗುಂಪಿನ ಒಡೆತನದ ಒಂದೇ ಮಾಧ್ಯಮಕ್ಕೆ ಅವರಿಬ್ಬರೂ ಏಕೆ ಸಂದರ್ಶನ ನೀಡಿದರು ಎಂದು ರಾಹುಲ್​ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

ಲೋಕ ಚುನಾವಣೆಯ ಸಮಯದಲ್ಲಿ ಪ್ರಧಾನಿ, ಕೇಂದ್ರ ಗೃಹ ಸಚಿವರು ಮತ್ತು ಹಣಕಾಸು ಸಚಿವರು ಷೇರು ಮಾರುಕಟ್ಟೆಯ ಬಗ್ಗೆ ಹೇಳಿಕೆ ನೀಡಿದ್ದು ಇದೇ ಮೊದಲ ಬಾರಿಗೆ. ನಾವು ಈ ಬಗ್ಗೆ ತನಿಖೆ ನಡೆಸಲು ಜಂಟಿ ಸಮಿತಿಯನ್ನು ಒತ್ತಾಯಿಸುತ್ತೇವೆ. ಇದು ಹಗರಣ ಎಂದು ನಮಗೆ ಮನವರಿಕೆಯಾಗಿದೆ. ಭಾರತೀಯ ಚಿಲ್ಲರೆ ಹೂಡಿಕೆದಾರರ ವೆಚ್ಚದಲ್ಲಿ ಯಾರೋ ಸಾವಿರಾರು ಕೋಟಿ ರೂಪಾಯಿಗಳನ್ನು ಗಳಿಸಿದ್ದಾರೆ. ಇದಕ್ಕೆ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಕುಮ್ಮಕ್ಕು ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮೇ 23 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಷೇರು ಮಾರುಕಟ್ಟೆ ಹೊಸ ಎತ್ತರವನ್ನು ತಲುಪಲಿದೆ ಎಂದು ಹೇಳಿದ್ದರು. ಜೂನ್ 4 ರಂದು, ಬಿಜೆಪಿ ದಾಖಲೆಯ ಮತಗಳೊಂದಿಗೆ ಗೆಲ್ಲುವಾಗ ಷೇರು ಮಾರುಕಟ್ಟೆಯೂ ಹೊಸ ದಾಖಲೆಯ ಗರಿಷ್ಠ ಮಟ್ಟ ತಲುಪುತ್ತದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ” ಎಂದು ಎನ್​ಡಿಟಿವಿ ಸಂದರ್ಶನದಲ್ಲಿ ಹೇಳಿದ್ದರು.

ಇದನ್ನೂ ಓದಿ: Kangana Ranaut : ರೈತ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಕೋಪ;​ ನಟಿ, ಸಂಸದೆ ಕಂಗನಾ ರಣಾವತ್​ಗೆ ಏರ್​ಪೋರ್ಟ್​ ಭದ್ರತಾ ಸಿಬ್ಬಂದಿಯಿಂದಲೇ ಕಪಾಳಮೋಕ್ಷ

ಮೇ 13 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿ, ನನ್ನ ಅಭಿಪ್ರಾಯದಲ್ಲಿ, ಜೂನ್ 4 ರೊಳಗೆ ಷೇರು ಖರೀದಿಸಿ. ಮಾರುಕಟ್ಟೆಯಲ್ಲಿ ಷೇರು ಮೌಲ್ಯ ಹೆಚ್ಚಾಗಲಿದೆ” ಎಂದು ಎನ್​ಡಿಟಿವಿ ಸಂದರ್ಶನದಲ್ಲೇ ಹೇಳಿದ್ದರು. ಈ ಮಾಧ್ಯಮ ವ್ಯವಹಾರ ಸಂಸ್ಥೆಯೊಂದರ ಒಡೆತನಕ್ಕೆ ಸೇರಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ರಾಹುಲ್ ಹೇಳಿದ್ದಾರೆ.

ದೊಡ್ಡ ಹಗರಣ : ರಾಹುಲ್ ಆರೋಪ

ಕೋಟ್ಯಂತರ ಜನರ ದುಡ್ಡು ನಷ್ಟವಾಗಲು ನೇರವಾಗಿ ಪ್ರಧಾನಿ, ಕೇಂದ್ರ ಗೃಹ ಸಚಿವರೇ ಹೊಣೆ. ಚುನಾವಣಾ ಫಲಿತಾಂಶಗಳ ನೈಜ ಡೇಟಾವನ್ನು ಹೊಂದಿರುವವರು, ಐಬಿ ವರದಿಗಳನ್ನು ಹೊಂದಿರುವವರು, ತಮ್ಮದೇ ಆಂತರಿಕ ಅಂಕಿ ಅಂಶಗಳನ್ನು ಹೊಂದಿರುವವರು, ಚಿಲ್ಲರೆ ಹೂಡಿಕೆದಾರರಿಗೆ ಷೇರುಗಳನ್ನು ಖರೀದಿಸಲು ಸಲಹೆ ನೀಡಿರುವುದು ದೊಡ್ಡ ಹಗರಣ ಎಂದು ಅವರು ಆರೋಪಿಸಿದ್ದಾರೆ.

ಷೇರು ಖರೀದಿ ಮಾಡಲು ಹೇಳಿಕೆ ನೀಡುವ ಮೊಲದು ಚುನಾವಣೋತ್ತರ ಸಮೀಕ್ಷೆಗಳನ್ನು ಬಿತ್ತರಿಸಲಾಯಿತು. ನೈಜ ಅಂಕಿ- ಅಂಶ ಮೋದಿ ಸೇರಿದಂತೆ ಬಿಜೆಪಿಯ ಬಳಿ ಇತ್ತು. ಅವರಿಗೆ ಏನಾಗುತ್ತದೆ ಎಂದು ಗೊತ್ತಿತ್ತು. ಆದರೂ 5 ಲಕ್ಷ ಹೂಡಿಕೆದಾರರಿಗೆ ವಂಚನೆ ಮಾಡಲಾಗಿದೆ ಎಂದು ರಾಹುಲ್ ಅರೋಪಿಸಿದ್ದಾರೆ.

Continue Reading

ರಾಜಕೀಯ

Lok Sabha Election 2024: ಈ ಬಾರಿ ಲೋಕಸಭೆ ಪ್ರವೇಶಿಸಲಿದ್ದಾರೆ 41 ಪಕ್ಷಗಳ ಸಂಸದರು!

18ನೇ ಲೋಕಸಭೆಯಲ್ಲಿ (Lok Sabha Election 2024) ಈ ಬಾರಿ ಇಂಡಿಯಾ ಒಕ್ಕೂಟದ 233, ಎನ್ ಡಿಎ ಒಕ್ಕೂಟದ 293 ಹಾಗೂ ಇತರೆ ಪಕ್ಷಗಳ 17 ಮಂದಿ ಸೇರಿ 41 ಪಕ್ಷಗಳ ಒಟ್ಟು 543 ಸದಸ್ಯರು ಸಂಸತ್ತನ್ನು ಪ್ರವೇಶಿಸಲಿದ್ದಾರೆ. ಕಳೆದ ಬಾರಿ 543 ಸದಸ್ಯರ ಸದನದಲ್ಲಿ 36 ಪಕ್ಷಗಳ ಸಂಸದರು ಇದ್ದರು.

VISTARANEWS.COM


on

By

Lok Sabha Election 2024
Koo

ಸಂಸತ್ತಿನ ಕೆಳಮನೆಯಾದ ಲೋಕಸಭೆಗೆ (Lok Sabha Election 2024) ಈ ಬಾರಿ 41 ರಾಜಕೀಯ ಪಕ್ಷಗಳು (political parties) ಪ್ರತಿನಿಧಿಗಳು ಪ್ರವೇಶ ಪಡೆದಿದ್ದಾರೆ. ಬುಧವಾರ ವಿಸರ್ಜನೆಗೊಂಡ 17ನೇ ಲೋಕಸಭೆಯಲ್ಲಿ 36 ಪಕ್ಷಗಳ ಸಂಸದರಿದ್ದರು (MPs) ಎಂದು ಚುನಾವಣೋತ್ತರ ಅಂಕಿಅಂಶಗಳು ತೋರಿಸುತ್ತವೆ.

543 ಸದಸ್ಯರ ಸದನದಲ್ಲಿ ಬಿಜೆಪಿ (BJP) 240, ಕಾಂಗ್ರೆಸ್ (congress) 99 ಸ್ಥಾನಗಳನ್ನು ಹೊಂದಿದೆ. ಈ ಎರಡು ದೊಡ್ಡ ಪಕ್ಷಗಳು ಒಟ್ಟು 339 ಸಂಸದರನ್ನು ಹೊಂದಿವೆ. ಬಿಜೆಪಿ ಈ ಬಾರಿ 63 ಸ್ಥಾನಗಳನ್ನು ಕಳೆದುಕೊಂಡಿದೆ. 2014 ರಲ್ಲಿ ಬಿಜೆಪಿ 282 ಮತ್ತು 2019 ರಲ್ಲಿ 303 ಸ್ಥಾನಗಳನ್ನು ಗಳಿಸಿತ್ತು. ಕಾಂಗ್ರೆಸ್ 2014ರಲ್ಲಿ 44, 2019ರಲ್ಲಿ 52 ಸ್ಥಾನಗಳನ್ನು ಗಳಿಸಿತ್ತು. ಈ ಬಾರಿ 99 ಸ್ಥಾನಗಳಿಗೆ ಏರಿದೆ.

ಬಿಜೆಪಿ ತನ್ನ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಹಾಯದಿಂದ ಕೇಂದ್ರದಲ್ಲಿ ಸತತ ಮೂರನೇ ಬಾರಿ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಜೂನ್ 8ರಂದು ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. . ಲೋಕಸಭೆಯಲ್ಲಿ ಎನ್‌ಡಿಎ ಪಕ್ಷಗಳು ಒಟ್ಟು 293 ಸ್ಥಾನಗಳನ್ನು ಗೆದ್ದಿವೆ.

ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟವು 233 ಸಂಸದರನ್ನು ಹೊಂದಿದ್ದು, ಸಮಾಜವಾದಿ ಪಕ್ಷ (SP) ಉತ್ತರ ಪ್ರದೇಶದಿಂದ 37 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಅನಂತರ ಅತಿ ದೊಡ್ಡ ಪಕ್ಷವಾಗಿ ಸಮಾಜವಾದಿ ಪಕ್ಷ ಹೊರಹೊಮ್ಮಿದೆ. ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ 29 ಮತ್ತು ತಮಿಳುನಾಡಿನ ಡಿಎಂಕೆ 22 ಸ್ಥಾನಗಳನ್ನು ಗಳಿಸಿದೆ.

ಇದನ್ನೂ ಓದಿ: HD Kumaraswamy: ಎಚ್‌ಡಿ ಕುಮಾರಸ್ವಾಮಿ ಕೇಳಿದ ಕೃಷಿ ಖಾತೆ ಮೇಲೇ ನಿತೀಶ್‌ ಕಣ್ಣು; ಯಾರಿಗೆ ಒಲಿಯತ್ತೆ ಇಲಾಖೆ?


ರಾಷ್ಟ್ರೀಯ ಪಕ್ಷಗಳಿಗೆ ಶೇ. 64ರಷ್ಟು ಸ್ಥಾನ

ಥಿಂಕ್-ಟ್ಯಾಂಕ್ ಪಿ ಆರ್ ಎಸ್ ವಿಶ್ಲೇಷಣೆಯ ಪ್ರಕಾರ, “ರಾಷ್ಟ್ರೀಯ ಪಕ್ಷಗಳು” ಎಂದು ಗುರುತಿಸಲ್ಪಡುವ ರಾಜಕೀಯ ಸಂಘಟನೆಗಳು ಈ ಬಾರಿಯಾ ಚುನಾವಣೆಯಲ್ಲಿ 346 ಅಥವಾ ಶೇ. 64 ಸ್ಥಾನಗಳನ್ನು ಗಳಿಸಿದರೆ, ಪ್ರಾದೇಶಿಕ ಪಕ್ಷಗಳು 197 ಅಥವಾ ಶೇ. 33ರಷ್ಟು ಸ್ಥಾನಗಳನ್ನು ಗೆದ್ದವು. ಎನ್‌ಡಿಎ ಪಕ್ಷಗಳ ಏಳು ಸ್ವತಂತ್ರ ಅಭ್ಯರ್ಥಿಗಳು 17 ಸ್ಥಾನಗಳನ್ನು ಗೆದ್ದಿದ್ದಾರೆ.

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಪ್ರಕಾರ ಈ ಬಾರಿ ಲೋಕಸಭಾ ಚುನಾವಣೆಗಳಲ್ಲಿ 751 ಪಕ್ಷಗಳು ಸ್ಪರ್ಧಿಸಿದ್ದವು. 2009ಕ್ಕಿಂತ ಇದರಲ್ಲಿ 104ರಷ್ಟು ಹೆಚ್ಚಾಗಿದೆ. 368 ಪಕ್ಷಗಳಿಂದ ನಾಮನಿರ್ದೇಶಿತರು ಕಣದಲ್ಲಿದ್ದರು. 2014ರಲ್ಲಿ 464 ಮತ್ತು 2019ರಲ್ಲಿ 677 ಪಕ್ಷಗಳ ಬೆಂಬಲಿಗರು ಕಣದಲ್ಲಿದ್ದರು ಎಂದು ಎಡಿಆರ್ ತಿಳಿಸಿದೆ.

Continue Reading
Advertisement
T 20 Wordl Cup
ಕ್ರೀಡೆ2 hours ago

T20 World Cup : ಕ್ರಿಕೆಟ್​ ಕೂಸು ಅಮೆರಿಕ ತಂಡದ ವಿರುದ್ಧ ಸೋತ ಪಾಕಿಸ್ತಾನ

Stock Market Crash
ಪ್ರಮುಖ ಸುದ್ದಿ5 hours ago

Stock Market Crash : ವಿದೇಶಿ ಹೂಡಿಕೆಗಳು ಬರದಂತೆ ರಾಹುಲ್ ಗಾಂಧಿ ಪಿತೂರಿ ಮಾಡುತ್ತಿದ್ದಾರೆ; ಬಿಜೆಪಿಯಿಂದ ತಿರುಗೇಟು

sunil chhetri
ಪ್ರಮುಖ ಸುದ್ದಿ5 hours ago

Sunil Chhetri : ಕಣ್ಣೀರು ಹಾಕುತ್ತಲೇ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಡಿ ವಿದಾಯ ಹೇಳಿದ ಸುನಿಲ್​ ಛೆಟ್ರಿ

Shri Bhandara Keri Mutt Shri Vidyesh Theertha Swamiji ashirvachan
ಕರ್ನಾಟಕ6 hours ago

Mysore News: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ

Gadag News
ಕರ್ನಾಟಕ6 hours ago

Gadag News : ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

Rain News
ಕರ್ನಾಟಕ7 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

Disciplinary action if cases of mother and child deaths recur DC Diwakar warns
ಆರೋಗ್ಯ7 hours ago

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

BJP State Spokesperson Hariprakash konemane pressmeet at yallapura
ಕರ್ನಾಟಕ7 hours ago

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Trekking tragedy
ಬೆಂಗಳೂರು7 hours ago

Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Unemployment Rate
ಪ್ರಮುಖ ಸುದ್ದಿ7 hours ago

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ16 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌