Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ - Vistara News

ರಾಜಕೀಯ

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Karnataka Drought: ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ 4,860 ಕೋಟಿ ರೂಪಾಯಿ ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇ ಪದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

VISTARANEWS.COM


on

Karnataka Drought Relief HDK accuses Congress government of lying says HD Kumarswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ಬರ ಪರಿಹಾರ (Karnataka Drought Relief) ವಿಷಯದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ. ಯುಪಿಎ ನೇತೃತ್ವದ ಕಾಂಗ್ರೆಸ್ ಸರ್ಕಾರ ಶೇ. 8ರಷ್ಟು ಬರ ಪರಿಹಾರವನ್ನು ಕೊಟ್ಟಿದ್ದರೆ, ಎನ್‌ಡಿಎ ಸರ್ಕಾರ ಈಗಿನ ಅನುದಾನವನ್ನು ಹೊರತುಪಡಿಸಿಯೇ ಶೇ. 38ರಷ್ಟು ಹಣವನ್ನು ಕರ್ನಾಟಕಕ್ಕೆ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ‌ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಅತ್ಯಲ್ಪ ಪರಿಹಾರ ಕೊಟ್ಟು ರಾಜ್ಯದ ಜನರಿಗೆ ವಂಚನೆ ಎಸಗಿದ್ದು ಯುಪಿಎ ಸರ್ಕಾರ ಎಂದು ಹೇಳಿದರು.

ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ಕಡಿಮೆ ಹಣ ಕೊಟ್ಟಿದೆ ಎಂಬ ಕಾಂಗ್ರೆಸ್‌ ಸರ್ಕಾರದ ಆರೋಪವನ್ನು ಟೀಕಿಸಿದ ಮಾಜಿ ಮುಖ್ಯಮಂತ್ರಿ‌ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ 4,860 ಕೋಟಿ ರೂಪಾಯಿ ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇ ಪದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನನಗಿರುವ ಮಾಹಿತಿ ಪ್ರಕಾರ ಮನಮೋಹನ್ ಸಿಂಗ್ ಅವರ ಯುಪಿಎ ಸರಕಾರದ 2004ರಿಂದ 2013ರವರೆಗಿನ ಅವಧಿಯಲ್ಲಿ ವಿವಿಧ ಸಂದರ್ಭದಲ್ಲಿ ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಬರ ಪರಿಹಾರಕ್ಕಾಗಿ ಕೇವಲ ಶೇ. 8ರಷ್ಟು ಹಣ ನೀಡಿದ್ದಾರೆ. ನರೇಂದ್ರ ಮೋದಿ ಅವರು ಬಂದ ಮೇಲೆ ಅಂದರೆ, 2014ರಿಂದ ಇಲ್ಲಿಯವರೆಗೆ ಈಗ ಬಿಡುಗಡೆ ಆಗಿರುವ 3,454 ಕೋಟಿ ರೂಪಾಯಿ ಹೊರತುಪಡಿಸಿ ಶೇ. 38ರಷ್ಟು ಬರ ಪರಿಹಾರ ಹಣ ರಾಜ್ಯಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರ 8% ಕೊಟ್ಟರೆ, ಎನ್‌ಡುಎ ಸರ್ಕಾರ 38% ಹಣ ಕೊಟ್ಟಿದೆ. ಅನ್ಯಾಯ ಯಾರಿಂದ ಆಗಿದೆ ಎಂಬುದು ಇಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ ಎಂದು‌ ಎಚ್.ಡಿ. ಕುಮಾರಸ್ವಾಮಿ ಅವರು ಅಂಕಿ-ಅಂಶ ನೀಡಿದರು.

ಇವರು ಕೇಂದ್ರ ಸರ್ಕಾರದ ಸುಳ್ಳುಗಳನ್ನು ಹೇಳುತ್ತಾ ಅಪಪ್ರಚಾರ ಮಾಡುವುದನ್ನು ಬಿಟ್ಟು ಕೇಂದ್ರದಿಂದ ಬಂದಿರುವ ಹಣವನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡಲಿ ಎಂದು ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.‌

ಹಾಸನ ಪ್ರಕರಣ: ಉಪ್ಪು ತಿಂದವರು ನೀರು ಕುಡಿಯುತ್ತಾರೆ

ಹಾಸನ ಜಿಲ್ಲೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ನಡೆದಿದೆ ಎನ್ನಲಾದ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

ತನಿಖೆಯ ಮೂಲಕ ಎಲ್ಲ ಸತ್ಯಾಂಶಗಳು ಹೊರಗೆ ಬರಲಿ. ಯಾರೇ ತಪ್ಪೆಸಗಿದ್ದರೂ, ಅವರು ಯಾರೇ ಆಗಿದ್ದರೂ ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸುವ ಪ್ರಶ್ನೆ ಬರುವುದಿಲ್ಲ. ಆದ್ದರಿಂದ ತನಿಖೆಯ ವರದಿ ಸಂಪೂರ್ಣವಾಗಿ ಹೊರ ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Postal Ballots: ಕೈ ಹಿಡಿದ ಅಂಚೆ ಮತಗಳು..ಕೊನೆಯ ಕ್ಷಣದಲ್ಲಿ ಸೋತು ಗೆದ್ದ ಅಭ್ಯರ್ಥಿಗಳಿವರು

Postal Ballots:ಶಿವಸೇನೆಯ ಶಿಂಧೆ ಬಣದ ರವೀಂದ್ರ ವೈಕಾರ್‌ ಮತ್ತು ಬಿಜೆಪಿ ರಬೀಂದ್ರ ನಾರಾಯಣ್‌ ಬೆಹೆರಾ ಅಂಚೆ ಮತಗಳ ಸಹಾಯದಿಂದ ಗೆಲುವು ಬೀರಿದ ಅಭ್ಯರ್ಥಿಗಳು. ಇವರಿಬ್ಬರೂ ಇವಿಎಂ ಮತಗಳ ಎಣಿಕೆಯಲ್ಲಿ ಸೋಲುಂಡಿದ್ದರು. ಬಳಿಕ ಅಂಚೆ ಮತಗಳ ಎಣಿಕೆಯಲ್ಲಿ ಗೆಲುವು ಸಾಧಿಸಿದ್ದರು.

VISTARANEWS.COM


on

Postal Ballets
Koo

ನವದೆಹೆಲಿ: ಚುನಾವಣೆ(Election Results 2024) ಅಂದರೆ ಹಾಗೇನೆ. ಸೋಲು ಗೆಲುವಿನ ಆಟ.. ಇನ್ನೇನು ಸೋತೇ ಬಿಟ್ಟೆವು ಅನ್ನೋವಾಗ ಗೆದ್ದವರೂ ಇದ್ದಾರೆ. ಗೆಲುವು ನಮ್ಮದೇ ಅಂತಾ ಬೀಗುತ್ತಿದ್ದವರು ಕೊನೆಯ ಕ್ಷಣದಲ್ಲಿ ಸೋತಿರುವ ನಿದರ್ಶನಗಳೂ ಇವೆ. ಹೀಗೆ ಕೊನೆಯ ಕ್ಷಣದಲ್ಲಿ ಗೆಲುವಿನ ನಗೆ ಬೀರಿವ ಇಬ್ಬರು ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ. ಮತಯಂತ್ರಗಳ ಮತ ಎಣಿಕೆಯಲ್ಲಿ ಸೋಲುಂಡಿದ್ದ ಈ ಇಬ್ಬರು ಅಂಚೆ ಮತಗಳ ಎಣಿಕೆ(Postal Ballots)ಯಲ್ಲಿ ಗೆಲುವಿನ ನಗೆ ಬೀರಿದ್ದಾರೆ.

ಶಿವಸೇನೆಯ ಶಿಂಧೆ ಬಣದ ರವೀಂದ್ರ ವೈಕಾರ್‌ ಮತ್ತು ಬಿಜೆಪಿ ರಬೀಂದ್ರ ನಾರಾಯಣ್‌ ಬೆಹೆರಾ ಅಂಚೆ ಮತಗಳ ಸಹಾಯದಿಂದ ಗೆಲುವು ಬೀರಿದ ಅಭ್ಯರ್ಥಿಗಳು. ಇವರಿಬ್ಬರೂ ಇವಿಎಂ ಮತಗಳ ಎಣಿಕೆಯಲ್ಲಿ ಸೋಲುಂಡಿದ್ದರು. ಬಳಿಕ ಅಂಚೆ ಮತಗಳ ಎಣಿಕೆಯಲ್ಲಿ ಗೆಲುವು ಸಾಧಿಸಿದ್ದರು. ಇಡೀ ದೇಶದಲ್ಲಿಯೇ ಈ ಬಾರಿ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆದ್ದವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿರುವವರು ಶಿವಸೇನಾ (ಶಿಂಧೆ ಬಣ) ಅಭ್ಯರ್ಥಿ ರವೀಂದ್ರ ವೈಕರ್. ಇವರು ಮುಂಬೈ ವಾಯುವ್ಯ ಕ್ಷೇತ್ರದಲ್ಲಿ ಕೇವಲ 48 ಮತಗಳಿಂದ ಶಿವಸೇನಾ UBT ಅಭ್ಯರ್ಥಿ ಅಮೋಲ್ ಗಜಾನನ್ ಕೀರ್ತಿಕರ್ ಅವರನ್ನು ಸೋಲಿಸಿ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಈ ಹಿಂದೆ ಅಂದರೆ 1989 ಮತ್ತು 1998 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಅನಕಾಪಲ್ಲಿಯಿಂದ ಕೊನತ್ತಲ ರಾಮಕೃಷ್ಣ ಮತ್ತು ಬಿಹಾರದ ರಾಜಮಹಲ್‌ನಿಂದ ಸೋಮ್ ಮರಾಂಡಿ ಅವರು ಕ್ರಮವಾಗಿ ಒಂಬತ್ತು ಮತಗಳಿಂದ ಗೆಲ್ಲುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಅವರ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ಕಡಿಮೆ ಮತಗಳ ಅಂತರದಿಂದ ರವೀಂದ್ರ ವೈಕರ್‌ ಗೆಲುವು ಸಾಧಿಸಿದ್ದಾರೆ. ಇನ್ನು ರಬೀಂದ್ರ ನಾರಾಯಣ್‌ ಬೆಹರಾ ಒಡಿಶಾದ ಜಾಜ್‌ಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಅಂಚೆ ಮತಗಳು

ಅಂಚೆ ಮತಪತ್ರಗಳನ್ನು ಸಾಮಾನ್ಯವಾಗಿ ತಮ್ಮ ಕ್ಷೇತ್ರಗಳಿಂದ ದೂರದಲ್ಲಿರುವ ಸರ್ಕಾರಿ ನೌಕರರು, ಕೈದಿಗಳು ಮತ್ತು ಚುನಾವಣಾ ಕರ್ತವ್ಯದಲ್ಲಿರುವವರು ಮತದಾನಕ್ಕೆ ಬಳಸುತ್ತಾರೆ. 2019 ರ ಲೋಕಸಭೆ ಚುನಾವಣೆಯವರೆಗೆ, ಇವಿಎಂ ಎಣಿಕೆಗೆ 30 ನಿಮಿಷಗಳ ಮೊದಲು ಅಂಚೆ ಮತಗಳ ಎಣಿಕೆಯನ್ನು ಮಾಡಲಾಗುತ್ತಿತ್ತು. ಇವಿಎಂ ಎಣಿಕೆ ಪೂರ್ಣಗೊಳ್ಳುವ ಮೊದಲು ಎಲ್ಲಾ ಅಂಚೆ ಮತಪತ್ರಗಳನ್ನು ಎಣಿಕೆ ಮಾಡಬೇಕಿತ್ತು.

ಆದರೆ 2019 ರ ಚುನಾವಣೆಯ ನಂತರ ಚುನಾವಣಾ ಆಯೋಗವು ಮಾರ್ಗಸೂಚಿಗಳನ್ನು ಬದಲಿಸಿದೆ. ಏಕೆಂದರೆ ವಿದ್ಯುನ್ಮಾನವಾಗಿ ರವಾನೆಯಾಗುವ ಅಂಚೆ ಮತಪತ್ರ ವ್ಯವಸ್ಥೆ (ಇಟಿಪಿಬಿಎಸ್) ಪರಿಚಯಿಸಿದ ನಂತರ ಅಂಚೆ ಮತಪತ್ರಗಳ ಸಂಖ್ಯೆ ಹೆಚ್ಚಾಯಿತು. ಅಂಚೆ ಮತಗಳ ಎಣಿಕೆ ಪೂರ್ಣಗೊಳ್ಳುವವರೆಗೆ ಇವಿಎಂ ಮತಗಳ ಎಣಿಗೆ ಶುರು ಮಾಡಲು ಕಾಯಬೇಕಿಲ್ಲ ಎಂದು ಮೇ 18, 2019 ರಂದು ಅದು ಎಲ್ಲಾ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿತು.

ಇನ್ನು ಇವಿಎಂ ಮತಗಳ ಎಣಿಕೆ ನಡೆಯುತ್ತಿರುವುದರಿಂದ ಆರಂಭದಲ್ಲೇ ಶಿವಸೇನೆಯ (ಯುಬಿಟಿ) ಕೀರ್ತಿಕರ್ ಮುನ್ನಡೆಯಲ್ಲಿದ್ದರು. ಆದರೆ ಮತ ಎಣಿಕೆ ಮುಂದುವರೆದಂತೆ ಮುನ್ನಡೆ ಕುಗ್ಗತೊಡಗಿತು. ಅಂತ್ಯದ ವೇಳೆಗೆ, ಕೇವಲ ಒಂದು ಮತದ ವ್ಯತ್ಯಾಸವಾಗಿತ್ತು – ಕೀರ್ತಿಕರ್ ವೈಕರ್ ಅವರ 4,51,094 ವಿರುದ್ಧ 4,51,095 ಮತಗಳನ್ನು ಪಡೆದರು. ನಂತರ ಅಂಚೆ ಮತಪತ್ರಗಳನ್ನು ಸೇರಿಸಲಾಯಿತು. ವೈಕರ್ ಅವರಿಗೆ 1,550 ಅಂಚೆ ಮತಪತ್ರಗಳನ್ನು ಹಾಕಿದ್ದರೆ, ಕೀರ್ತಿಕರ್ 1,501 ಅನ್ನು ಹೊಂದಿದ್ದರು ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.

ಇದನ್ನೂ ಓದಿ:Praveen Nettaru Murder: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ವಿದೇಶಕ್ಕೆ ಪರಾರಿಯಾಗುತ್ತಿದ್ದಾಗಲೇ ಬಂಧನ

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Valmiki Corporation Scam: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಅವರ ಡೆತ್‌ನೋಟ್‌ ಬಯಲಾದ ಬಳಿಕ ಬೆಳಕಿಗೆ ಬಂದ ಹಗರಣದ ಬಳಿಕ ಇಷ್ಟು ದಿನ ನಾಗೇಂದ್ರ ಯಾರ ಕೈಗೂ ಸಿಕ್ಕಿರಲಿಲ್ಲ, ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.

VISTARANEWS.COM


on

valmiki corporation scam nagendra siddaramaiah
Koo

ಬೆಂಗಳೂರು: ವಾಲ್ಮೀಕಿ ನಿಗಮದ (Valmiki Corporation Scam) ಹಗರಣಕ್ಕೆ ಸಂಬಂಧಿಸಿ ನಿನ್ನೆ ಸಚಿವ ನಾಗೇಂದ್ರ (Minister B Nagendra) ಜೊತೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮಾತುಕತೆ ನಡೆಸಿದ್ದು, ಇಂದು ರಾಜೀನಾಮೆ (Resignation) ಕೊಡಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಭೇಟಿ ವೇಳೆ, ನಾಳೆ ಈ ಕುರಿತು ಇನ್ನಷ್ಟು ಮಾತನಾಡಲು ಬರುವಂತೆ ಸಿಎಂ ತಿಳಿಸಿದ್ದು, ಇಂದು ಬಹುತೇಕ ರಾಜೀನಾಮೆಗೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ನಿನ್ನೆಯೇ ಸಿಎಂ ರಾಜೀನಾಮೆಗೆ ಸಿಎಂ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ನಾಗೇಂದ್ರ, ಸಿಎಂ ಇಂದು ಬರೋದಕ್ಕೆ ತಿಳಿಸಿದ್ದಾರೆ ಅನ್ನುತ್ತಿದ್ದಾರೆ. ಬಹುತೇಕ ಇಂದು ಸ್ಪಷ್ಟ ಚಿತ್ರಣ ಸಿಗಲಿದೆ. ಒಂದು ವೇಳೆ ಸಿಎಂ ಸೂಚನೆ ಮೇರೆಗೆ ಇಂದು ರಾಜೀನಾಮೆ ಕೊಟ್ಟರೆ ಸರ್ಕಾರದ ಮೊದಲ ವಿಕೆಟ್ ಪತನವಾಗಲಿದೆ.

ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಅವರ ಡೆತ್‌ನೋಟ್‌ ಬಯಲಾದ ಬಳಿಕ ಬೆಳಕಿಗೆ ಬಂದ ಹಗರಣದ ಬಳಿಕ ಇಷ್ಟು ದಿನ ನಾಗೇಂದ್ರ ಯಾರ ಕೈಗೂ ಸಿಕ್ಕಿರಲಿಲ್ಲ, ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ನಿನ್ನೆ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಾಗೇಂದ್ರ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ವಾಲ್ಮೀಕಿ ನಿಗಮ ಆಕ್ರಮ ಹಣ ವರ್ಗಾವಣೆ ವಿಚಾರ ಕುರಿತು ಸಿಎಂ ಚರ್ಚಿಸಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅನ್ನು ಸಚಿವ ನಾಗೇಂದ್ರ ಭೇಟಿಯಾಗಿದ್ದು, ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಚಿವ ಜಮೀರ್ ಸಹ ಉಪಸ್ಥಿತರಿದ್ದರು. ವಾಲ್ಮೀಕಿ ನಿಗಮದ 185 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರತಿಪಕ್ಷಗಳು ಬಿಗಿ ಪಟ್ಟು ಹಿಡಿದಿವೆ. ಬಿಜೆಪಿ ನಾಗೇಂದ್ರ ವಿರುದ್ಧ ರಣಕಹಳೆ ಮೊಳಗಿಸಿದೆ. ಈಗಾಗಲೇ ಈ ಪ್ರಕರಣಕ್ಕೆ ಸಿಬಿಐ ಎಂಟ್ರಿಯಾಗಿದೆ. ಹೀಗಾಗಿ ಏನಾದರೂ ಒಂದು ಕ್ರಮ ತೆಗೆದುಕೊಳ್ಳುವುದು ಸಿಎಂಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ನಾಗೇಂದ್ರರನ್ನು ಕರೆಸಿ ಚರ್ಚೆ ಮಾಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಈಗಾಗಲೇ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಬೇಕಾಗಿತ್ತು ಎಂದು ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಸೂಚಿಸಿದ್ದಾರೆ. ಸಂಪುಟದ ಸಹೋದ್ಯೋಗಿಗಳೇ ಮುಗುಂ ಆಗಿದ್ದಾರೆ. ಹೀಗಾಗಿ, ಸಿಬಿಐಯಲ್ಲಿ ಎಫ್ಐಆರ್ ದಾಖಲು ಆಗುತ್ತಿದ್ದಂತೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

45 ಕೋಟಿ ರೂ. ಸೀಜ್

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ವರ್ಗಾವಣೆ ಕೇಸ್ ಸಂಬಂಧಿಸಿ SITಯಿಂದ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ರೂ. ಸೀಜ್ ಮಾಡಲಾಗಿದೆ. ಬಂಧಿತ ಆರೋಪಿ ಸತ್ಯನಾರಾಯಣ್‌ ಒಡೆತನದ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಖಾತೆಗೆ ನಿಗಮದಿಂದ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ.ನಲ್ಲಿ ಬಹುಪಾಲು ಹಣ ಡ್ರಾ ಆಗಿದೆ. ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್‌ಐಟಿ ತನಿಖೆ ಮುಂದುವರಿಸಿದೆ.

ಸದ್ಯ ಈ ಪ್ರಕರಣದಲ್ಲಿ ಇದುವರೆಗೆ ಐವರನ್ನು ಎಸ್‌ಐಟಿ ಬಂಧಿಸಿದೆ. ಪದ್ಮನಾಭ, ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಸತ್ಯನಾರಾಯಣ ಬಂಧನವಾಗಿದೆ. ಐವರನ್ನು ಕಸ್ಟಡಿಗೆ ಪಡೆದು SIT ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: Valmiki Corporation Scam : ವಾಲ್ಮಿಕಿ ನಿಗಮ ಹಗರಣ; ಆಂಧ್ರದ ಫಸ್ಟ್​​ ಬ್ಯಾಂಕ್ ಅಧ್ಯಕ್ಷ . ಸಚಿವ ನಾಗೇಂದ್ರ ಆಪ್ತರ ಬಂಧನ

Continue Reading

ದೇಶ

Election results 2024: 280 ಸಂಸದರು ಮೊದಲ ಬಾರಿಗೆ ಲೋಕಸಭೆಗೆ ಎಂಟ್ರಿ! ಲಿಸ್ಟ್‌ನಲ್ಲಿದ್ದಾರೆ ಮಾಜಿ ಸಿಎಂಗಳು, ಸಿನಿ ತಾರೆಯರು, ಹೈಕೋರ್ಟ್‌ ಜಡ್ಜ್‌

Election results 2024:ಈ ಬಾರಿ ಒಟ್ಟು 280 ನೂತನ ಸಂಸದರು ಲೋಕಸಭೆಗ ಮೊದಲ ಬಾರಿಗೆ ಕಾಲಿಡುತ್ತಿದ್ದಾರೆ. ಇವರಲ್ಲಿ ಮಾಜಿ ಮುಖ್ಯಮಂತ್ರಿಗಳು, ಸಿನಿಮಾ ತಾರೆಯರು, ಕಾರ್ಯಕರ್ತರು ಹಾಗೂ ಮಾಜಿ ಹೈಕೋರ್ಟ್‌ ನ್ಯಾಯಮೂರ್ತಿಗಳೂ ಸೇರಿದ್ದಾರೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ(Election results 2024) ಹೊರಬಿದ್ದು, ಮತ್ತೊಮ್ಮೆ ನರೇಂದ್ರ ಮೋದಿ(Narendra Modi) ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲು ಸಜ್ಜಾಗಿದೆ. ಇನ್ನು ಈ ಬಾರಿ ಒಟ್ಟು 280 ನೂತನ ಸಂಸದರು ಲೋಕಸಭೆಗ ಮೊದಲ ಬಾರಿಗೆ ಕಾಲಿಡುತ್ತಿದ್ದಾರೆ. ಇವರಲ್ಲಿ ಮಾಜಿ ಮುಖ್ಯಮಂತ್ರಿಗಳು, ಸಿನಿಮಾ ತಾರೆಯರು, ಕಾರ್ಯಕರ್ತರು ಹಾಗೂ ಮಾಜಿ ಹೈಕೋರ್ಟ್‌ ನ್ಯಾಯಮೂರ್ತಿಗಳೂ ಸೇರಿದ್ದಾರೆ.

ಇನ್ನು ಈ ಬಾರಿ ಉತ್ತರಪ್ರದೇಶದಿಂದ ಒಟ್ಟು 80 ಕ್ಷೇತ್ರಗಳಲ್ಲಿ ಬರೋಬ್ಬರಿ 45 ನೂತನ ಸಂಸದರು ಲೋಕಸಭೆಗೆ ಕಾಲಿಡುತ್ತಿದ್ದಾರೆ. ಅವರಲ್ಲಿ ಮೀರತ್‌ನಿಂದ ಚುನಾಯಿತರಾಗಿರುವ ಜನಪ್ರಿಯ ರಾಮಾಯಣ ಧಾರವಾಹಿಯ ನಟ ಅರುಣ್‌ ಗೋವಿಲ್‌, ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಅವರನ್ನು ಸೋಲಿಸಿದ ಕಾಂಗ್ರೆಸ್ ನಾಯಕ ಕಿಶೋರಿ ಲಾಲ್ ಶರ್ಮಾ ಮತ್ತು ದಲಿತ ಹಕ್ಕುಗಳ ಕಾರ್ಯಕರ್ತ ಚಂದ್ರಶೇಖರ್ ಆಜಾದ್ ಆಜಾದ್ ಸಮಾಜ ಪಕ್ಷದ ನಗೀನಾ ಸೇರಿದ್ದಾರೆ.

ಈ ಬಾರಿ ಬಿಜೆಪಿಯು ಚುನಾವಣಾ ಹಿಮ್ಮುಖವನ್ನು ಎದುರಿಸಿದ ಮಹಾರಾಷ್ಟ್ರದಲ್ಲಿ ಶಾಲಾ ಶಿಕ್ಷಕ ಭಾಸ್ಕರ್ ಭಾಗೆ ಸೇರಿದಂತೆ 33 ನೂತನ ಸಂಸದರು ಲೋಕಸಭೆಗೆ ಚುನಾಯಿತರಾಗಿದ್ದಾರೆ. ಭಾಸ್ಕರ್‌ ಭಾಗೆ ಅವರು ಶರದ್ ಪವಾರ್ ಅವರ ಎನ್‌ಸಿಪಿಯಿಂದ ಬುಡಕಟ್ಟು ಸ್ಥಾನವಾದ ದಿಂಡೋರಿಯಲ್ಲಿ ಕಣಕ್ಕಿಳಿದಿದ್ದರು. ಅವರು ಬಿಜೆಪಿ ನಾಯಕಿ ಭಾರತಿ ಪವಾರ್ ಅವರನ್ನು ಸೋಲಿಸಿದ್ದರು. ಮಹಾರಾಷ್ಟ್ರದಿಂದ ಮೊದಲ ಅವಧಿಯ ಸದಸ್ಯರ ಪೈಕಿ ಮುಂಬೈ ಉತ್ತರದಿಂದ ಚುನಾಯಿತರಾದ ಬಿಜೆಪಿಯ ಪಿಯೂಷ್ ಗೋಯಲ್, ಅಮರಾವತಿಯಲ್ಲಿ ಬಿಜೆಪಿಯ ನವನೀತ್ ರಾಣಾ ಅವರನ್ನು ಸೋಲಿಸಿದ ಕಾಂಗ್ರೆಸ್ ನಾಯಕ ಬಲ್ವಂತ್ ವಾಂಖೆಡೆ, ಅಕೋಲಾದಿಂದ ಮಾಜಿ ಕೇಂದ್ರ ಸಚಿವ ಸಂಜಯ್ ಧೋತ್ರೆ ಅವರ ಪುತ್ರ ಬಿಜೆಪಿಯ ಅನುಪ್ ಧೋತ್ರೆ, ಸಾಂಗಲಿಯಿಂದ ವಿಶಾಲ್ ಪಾಟೀಲ್ ಸೇರಿದ್ದಾರೆ.

ಚುನಾಯಿತರಾದ ಮಾಜಿ ಮುಖ್ಯಮಂತ್ರಿಗಳು

ಇನ್ನು ಈ ಬಾರಿ ವಿವಿಧ ರಾಜ್ಯಗಳಿಂದ ಮಾಜಿ ಮುಖ್ಯಮಂತ್ರಿಗಳೂ ಕಣಕ್ಕಿಳಿದು ತಮ್ಮ ರಾಜಕೀಯ ಭವಿಷ್ಯ ಪರೀಕ್ಷಿಸಿದ್ದರು. ಈ ಬಾರಿ ಮಾಜಿ ಮುಖ್ಯಮಂತ್ರಿಗಳಾದ ನಾರಾಯಣ ರಾಣೆ (ರತ್ನಗಿರಿ-ಸಿಂಧುದುರ್ಗ), ತ್ರಿವೇಂದ್ರ ಸಿಂಗ್ ರಾವತ್ (ಹರಿದ್ವಾರ), ಮನೋಹರ್ ಲಾಲ್ (ಕರ್ನಾಲ್), ಬಿಪ್ಲಬ್ ಕುಮಾರ್ ದೇಬ್ (ತ್ರಿಪುರ ಪಶ್ಚಿಮ), ಜಿತನ್ ರಾಮ್ ಮಾಂಝಿ (ಗಯಾ), ಬಸವರಾಜ ಬೊಮ್ಮಾಯಿ (ಹಾವೇರಿ), ಜಗದೀಶ್ ಶೆಟ್ಟರ್ (ಬೆಳಗಾವಿ) , ಚರಂಜಿತ್ ಸಿಂಗ್ ಚನ್ನಿ (ಜಲಂಧರ್) ಲೋಕಸಭೆಗೆ ಮೊದಲ ಬಾರಿಗೆ ಚುನಾಯಿತರಾಗಿದ್ದಾರೆ.

ಇನ್ನು ಈ ಬಾರಿ ಇಬ್ಬರು ಸಿನಿಮಾ ತಾರೆಯರು ರಾಜಕೀಯ ಅದೃಷ್ಟ ಪರೀಕ್ಷೆಯಲ್ಲಿ ಗೆಲುವು ಸಾಧಿಸಿ ಸಂಸತ್‌ನ ಕೆಳಮನೆಗೆ ಕಾಲಿಡುತ್ತಿದ್ದಾರೆ. ಕೇರಳದ ತ್ರಿಶೂರ್‌ನಿಂದ ಸುರೇಶ್ ಗೋಪಿ ಮತ್ತು ಹಿಮಾಚಲಪ್ರದೇಶದ ಮಂಡಿಯಿಂದ ಕಂಗನಾ ರಣಾವತ್ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸುತ್ತಿರುವ ಸಿನಿಮಾ ತಾರೆಯರು.

ರಾಜ್ಯಸಭಾ ಸದಸ್ಯರಾದ ಅನಿಲ್ ದೇಸಾಯಿ (ಶಿವಸೇನೆ ಯುಬಿಟಿ), ಭೂಪೇಂದ್ರ ಯಾದವ್, ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವಿಯಾ ಮತ್ತು ಪರ್ಷೋತ್ತಮ್ ರೂಪಾಲಾ ಕೂಡ ಲೋಕಸಭೆಗೆ ಚೊಚ್ಚಲ ಪ್ರವೇಶ ಮಾಡಿದ್ದಾರೆ. ಇನ್ನು ಈ ಬಾರಿ ಹಿಂದಿನ ರಾಜಮನೆತನದ ಛತ್ರಪತಿ ಶಾಹು (ಕೊಲ್ಹಾಪುರ), ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (ಮೈಸೂರು), ಮತ್ತು ಕೃತಿ ದೇವಿ ದೆಬ್ಬರ್ಮನ್ (ತ್ರಿಪುರ ಪೂರ್ವ)ಮೊದಲ ಬಾರಿಗೆ ಸಂಸತ್ತಿಗೆ ಪ್ರವೇಶಿಸಲಿದ್ದಾರೆ. ಬಂಗಾಳದ ತಾಲ್ಮುಕ್ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕೋಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಅವರು ಮೊದಲ ಬಾರಿಗೆ ಸಂಸದರಾಗಿದ್ದಾರೆ.

ಇದನ್ನೂ ಓದಿ:Norway Tour: ಜಗತ್ತಿನ ಕೊನೆಯ ದೇಶ ಇದು! ಇಲ್ಲಿ 6 ತಿಂಗಳು ಹಗಲು, 6 ತಿಂಗಳು ರಾತ್ರಿ!

Continue Reading

Lok Sabha Election 2024

Election Results 2024: ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ಇವರು ಸಂಸತ್‌ಗೆ ಹಾಜರಾಗಬಹುದೆ? ಕಾನೂನು ಏನು ಹೇಳುತ್ತದೆ?

Election Results 2024: ಜೈಲಿನಿಂದಲೇ ಸ್ಪರ್ಧಿಸಿ ಖಲಿಸ್ತಾನಿ ಪರ ಬೋಧಕ ಅಮೃತ್‌ಪಾಲ್‌ ಸಿಂಗ್ ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಮತ್ತು ಭಯೋತ್ಪಾದಕರಿಗೆ ಹಣಕಾಸಿನ ನೆರವು ಒದಗಿಸಿದ ಆರೋಪ ಎದುರಿಸುತ್ತಿರುವ ಎಂಜಿನಿಯರ್ ರಶೀದ್ ಎಂದೇ ಜನಪ್ರಿಯವಾಗಿರುವ ಶೇಖ್ ಅಬ್ದುಲ್ ರಶೀದ್ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಿಂದ ಗೆದ್ದಿದ್ದಾರೆ. ಮುಂದೆ ಇವರು ಸಂಸತ್‌ನ ಕಲಾಪಕ್ಕೆ ಹಾಜರಾಗಬಹುದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Election Results 2024
Koo

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ (Election Results 2024). ಸಮೀಕ್ಷೆಗಳನ್ನು ತಲೆ ಕೆಳಗಾಗಿಸಿದ ಈ ರಿಸಲ್ಟ್‌ ಹಲವು ಅಚ್ಚರಿಗಳಿಗೂ ಕಾರಣವಾಗಿದೆ. ಈ ಪೈಕಿ ಭಯೋತ್ಪಾದನೆ ಆರೋಪದ ಮೇಲೆ ಪ್ರಸ್ತುತ ಜೈಲಿನಲ್ಲಿರುವ ಇಬ್ಬರು ಅಭ್ಯರ್ಥಿಗಳು ಚುನಾವಣೆಯಲ್ಲಿ ವಿಜೇತರಾಗಿ ಹೊರ ಹೊಮ್ಮಿರುವುದು ಕೂಡ ಒಂದು. ಖಲಿಸ್ತಾನಿ ಪರ ಬೋಧಕ (Pro-Khalistani preacher) ಅಮೃತ್‌ಪಾಲ್‌ ಸಿಂಗ್ (Amrit pal Singh) ಪಂಜಾಬ್‌ನ ಖದೂರ್ ಸಾಹಿಬ್ (Khadoor Sahib) ಕ್ಷೇತ್ರದಿಂದ ಮತ್ತು ಭಯೋತ್ಪಾದಕರಿಗೆ ಹಣಕಾಸಿನ ನೆರವು ಒದಗಿಸಿದ ಆರೋಪ ಎದುರಿಸುತ್ತಿರುವ ಎಂಜಿನಿಯರ್ ರಶೀದ್ ಎಂದೇ ಜನಪ್ರಿಯವಾಗಿರುವ ಶೇಖ್ ಅಬ್ದುಲ್ ರಶೀದ್ (Sheikh Abdul Rashid) ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ (Baramulla) ಕ್ಷೇತ್ರದಿಂದ ಗೆದ್ದಿದ್ದಾರೆ.

ಹೊಸ ಸದನದ ಕಾರ್ಯಕಲಾಪಗಳಿಗೆ ಇವರು ಹಾಜರಾಗುವಂತಿಲ್ಲವಾದರೂ ಸಂಸತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಂವಿಧಾನಿಕ ಹಕ್ಕನ್ನು ಹೊಂದಿದ್ದಾರೆ.

ಕಾನೂನು ಏನು ಹೇಳುತ್ತದೆ?

ಜೈಲಿನಲ್ಲಿರುವ ಹೊಸದಾಗಿ ಚುನಾಯಿತರಾದ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ. ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವುದು ಅವರ ಸಾಂವಿಧಾನಿಕ ಹಕ್ಕು. ಎಂಜಿನಿಯರ್ ರಶೀದ್ ಮತ್ತು ಅಮೃತ್‌ಪಾಲ್‌ ಸಿಂಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗಬೇಕಾದರೆ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು. ಪ್ರಮಾಣ ವಚನ ಸ್ವೀಕರಿಸಿದ ನಂತರ, ಅವರು ಜೈಲಿಗೆ ಮರಳಬೇಕಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಸದನಕ್ಕೆ ಹಾಜರಾಗಲು ಸಾಧ್ಯವಾಗದಿರುವ ಬಗ್ಗೆ ಸ್ಪೀಕರ್‌ಗೆ ತಿಳಿಸಲಾಗುವುದು. ನಂತರ ಸ್ಪೀಕರ್ ಈ ಮನವಿಗಳನ್ನು ಸದಸ್ಯರ ಗೈರು ಹಾಜರಿಯ ಸದನ ಸಮಿತಿಗೆ ಕಳುಹಿಸುತ್ತಾರೆ. ಸಮಿತಿಯು ನಂತರ ಸದನದ ಕಲಾಪಗಳಿಗೆ ಗೈರು ಹಾಜರಾಗಲು ಅವಕಾಶ ನೀಡಬೇಕೆ ಅಥವಾ ಬೇಡವೇ ಎಂದು ಶಿಫಾರಸು ಮಾಡುತ್ತದೆ. ನಂತರ ಶಿಫಾರಸನ್ನು ಸ್ಪೀಕರ್ ಸದನದ ಮತಕ್ಕೆ ಹಾಕುತ್ತಾರೆ. ಒಂದು ವೇಳೆ ಎಂಜಿನಿಯರ್ ರಶೀದ್ ಅಥವಾ ಅಮೃತ್‌ಪಾಲ್‌ ಸಿಂಗ್ ಅವರಿಗೆ ಕನಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದರೆ, ತಕ್ಷಣವೇ ಅವರು ಸಂಸದ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎಂದು ವಿವರಿಸಿದ್ದಾರೆ.

ಅಮೃತ್‌ಪಾಲ್‌ ಸಿಂಗ್ ಹಿನ್ನೆಲೆ

ಅಮೃತಸರದ ಜಲ್ಲುಪುರ್‌ ಖೇರಾ ಎಂಬ ಗ್ರಾಮದಲ್ಲಿ 1993ರಲ್ಲಿ ಜನಿಸಿದ ಅಮೃತ್‌ಪಾಲ್‌, 12ನೇ ತರಗತಿವರೆಗೆ ಓದಿದ್ದಾನೆ. 2012ರಲ್ಲಿ ಭಾರತ ತೊರೆದು, ದುಬೈಯಲ್ಲಿ ತನ್ನ ಚಿಕ್ಕಪ್ಪನ ಟ್ರಾನ್ಸ್‌ಪೋರ್ಟ್‌ ಕಂಪನಿಯಲ್ಲಿ ದುಡಿದ. ಈತ ಪಂಜಾಬ್‌ನ ಪೊಲೀಸರ ಹಾಗೂ ರಾಜಕಾರಣಿಗಳ ಗಮನಕ್ಕೆ ಬಂದುದೇ ಕೆಲವು ದಿನಗಳ ಹಿಂದೆ- ʼವಾರಿಸ್‌ ಪಂಜಾಬ್‌ ದೇʼ ಸಂಘಟನೆಯ ಮುಖ್ಯಸ್ಥನಾಗಿ ನಿಯುಕ್ತನಾದ ಸಂದರ್ಭದಲ್ಲಿ. ಈ ಸಂಘಟನೆಯನ್ನು ಸ್ಥಾಪಿಸಿದವನು ನಟ, ಚಳವಳಿಗಾರ ದೀಪ್‌ ಸಿಧು. ಇವನು 2022ರ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಇವನನ್ನು ಸರ್ಕಾರ ಸಾಯಿಸಿದೆ ಎಂದು ಅಮೃತ್‌ಪಾಲ್‌ ಮತ್ತು ಬೆಂಬಲಿಗರು ಆರೋಪಿಸುತ್ತ ಬಂದಿದ್ದಾರೆ. ಅಮೃತ್‌ಪಾಲ್‌ ಯಾವತ್ತೂ ಸಿಧುವನ್ನು ಭೇಟಿ ಮಾಡಿದವನೇ ಅಲ್ಲ. ಆದರೆ ಆನ್‌ಲೈನ್‌ನಲ್ಲಿ ತನ್ನನ್ನು ಅತ್ಯಂತ ಪ್ರಭಾವಿಸಿದ್ದ ಎಂದು ಹೇಳಿಕೊಳ್ಳುತ್ತಾನೆ. ಸಿಧುವಿನ ಸಾವಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಸಿಧುವಿನ ಸಲಹೆಯಂತೆ ತಾನು ಗಡ್ಡ ಟ್ರಿಮ್‌ ಮಾಡಿಕೊಳ್ಳುವುದು ಬಿಟ್ಟಿರುವುದಾಗಿ ಹೇಳಿದ್ದ.

ಹಲವು ಸಮಯದಿಂದ ಆತ ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ತಾನ್ ಪರ ಪೋಸ್ಟ್‌ಗಳನ್ನು ಹಾಕುತ್ತಿದ್ದ. 2021ರಲ್ಲಿ ಕೆಂಪು ಕೋಟೆಯ ಮೇಲೆ ನಡೆದ ಗುಂಪು ದಾಳಿಯ ವೇಳೆ ಅದರ ನೇತೃತ್ವ ವಹಿಸಿದ್ದ ದೀಪ್‌ ಸಿಧುವಿನ ಕೃತ್ಯವನ್ನು ಈತ ಸಮರ್ಥಿಸಿಕೊಂಡಿದ್ದ. 2022ರಲ್ಲಿ ಪಂಜಾಬ್‌ನಲ್ಲಿ ಅಮೃತ್‌ಪಾಲ್‌ನನ್ನು ಅರೆಸ್ಟ್‌ ಮಾಡಲಾಗಿತ್ತು.

ಯಾರು ಈ ಶೇಖ್ ಅಬ್ದುಲ್ ರಶೀದ್?

ಇಂಜಿನಿಯರ್ ರಶೀದ್ ಪ್ರಸ್ತುತ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಅವಾಮಿ ಇತ್ತೆಹಾದ್ ಪಕ್ಷದ ಮುಖ್ಯಸ್ಥ, ಎರಡು ಬಾರಿ ಶಾಸಕನಾಗಿದ್ದ ರಶೀದ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) 2019 ರಲ್ಲಿ ಭಯೋತ್ಪಾದನೆ-ಧನಸಹಾಯ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಆತ ನ್ಯಾಷನಲ್‌ ಕಾನ್ಫರೆನ್ಸ್‌ನ ಓಮರ್‌ ಅಬ್ದುಲ್ಲಾ ವಿರುದ್ಧ ಸ್ಪರ್ಧಿಸಿ 4,7,2481 ಮತಗಳನ್ನು ಗಳಿಸಿದ್ದಾನೆ. ಒಮ್ಮೆಯೂ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡದ ರಶೀದ್ 2,04,142 ಮತಗಳ ಭಾರೀ ಅಂತರದಿಂದ ಗೆದ್ದಿದ್ದಾನೆ.

ಇದನ್ನೂ ಓದಿ: Lok Sabha Election 2024: ಚುನಾವಣಾ ಕಣಕ್ಕೆ ಧುಮುಕಿದ ಖಲಿಸ್ತಾನಿ ನಾಯಕ ಅಮೃತ್​ಪಾಲ್​ ಸಿಂಗ್‌; ಯಾವ ಕ್ಷೇತ್ರ?

Continue Reading
Advertisement
Postal Ballets
ದೇಶ10 mins ago

Postal Ballots: ಕೈ ಹಿಡಿದ ಅಂಚೆ ಮತಗಳು..ಕೊನೆಯ ಕ್ಷಣದಲ್ಲಿ ಸೋತು ಗೆದ್ದ ಅಭ್ಯರ್ಥಿಗಳಿವರು

Megha Shetty Pose With R Madhavan
ಕಿರುತೆರೆ18 mins ago

Megha Shetty: ನಟ ಮಾಧವನ್​ ಭೇಟಿ ಮಾಡಿ ಖುಷಿ ಹಂಚಿಕೊಂಡ ಮೇಘಾ ಶೆಟ್ಟಿ!

valmiki corporation scam nagendra siddaramaiah
ಕರ್ನಾಟಕ38 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Sunil Chhetri
ಕ್ರೀಡೆ44 mins ago

Sunil Chhetri: ಭಾರತದ ಫುಟ್ಬಾಲ್ ಐಕಾನ್​​ ಸುನೀಲ್‌ ಚೆಟ್ರಿಗೆ ಇಂದು ವಿದಾಯ ಪಂದ್ಯ

Lok Sabha Election 2024
ದೇಶ46 mins ago

Election results 2024: 280 ಸಂಸದರು ಮೊದಲ ಬಾರಿಗೆ ಲೋಕಸಭೆಗೆ ಎಂಟ್ರಿ! ಲಿಸ್ಟ್‌ನಲ್ಲಿದ್ದಾರೆ ಮಾಜಿ ಸಿಎಂಗಳು, ಸಿನಿ ತಾರೆಯರು, ಹೈಕೋರ್ಟ್‌ ಜಡ್ಜ್‌

Dolly Dhananjay Will He Get Married says During Kotee Trailer Launch
ಸ್ಯಾಂಡಲ್ ವುಡ್47 mins ago

Dolly Dhananjay: ರೋಡಲ್ಲಿ ಹೋಗೋರೆಲ್ಲ ನನ್ನ ಮದ್ವೆ ಬಗ್ಗೆನೇ ಕೇಳ್ತಾರೆ ಎಂದ  ಡಾಲಿ ಧನಂಜಯ್!

Hinduism Beliefs
ಧಾರ್ಮಿಕ49 mins ago

Hinduism Beliefs: ಸತ್ತ ವ್ಯಕ್ತಿಯ ದೇಹವನ್ನು ಏಕಾಂಗಿಯಾಗಿ ಬಿಡಬಾರದು ಅನ್ನೋದು ಯಾಕೆ ಗೊತ್ತೇ?

Job Alert
ಉದ್ಯೋಗ49 mins ago

Job Alert: ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Norway Tour
ಪ್ರವಾಸ1 hour ago

Norway Tour: ಜಗತ್ತಿನ ಕೊನೆಯ ದೇಶ ಇದು! ಇಲ್ಲಿ 6 ತಿಂಗಳು ಹಗಲು, 6 ತಿಂಗಳು ರಾತ್ರಿ!

Rohit Sharma
ಕ್ರೀಡೆ1 hour ago

Rohit Sharma: ಹಲವು ದಾಖಲೆಗಳ ಸರದಾರನಾದ ಹಿಟ್​ಮ್ಯಾನ್​ ರೋಹಿತ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌