Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ - Vistara News

ಪ್ರಮುಖ ಸುದ್ದಿ

Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಪ್ರಸಾದ್ ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ನಿರಂತರ ಜನಸೇವೆ ಸಲ್ಲಿಸಿದ್ದರು. ಕಳೆದ ಬಾರಿ ಬಿಜೆಪಿ ಸೇರಿ ಸಂಸದರಾಗಿದ್ದ ಅವರು ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಘೋಷಿಸಿದ್ದರು.

VISTARANEWS.COM


on

srinivasa prasad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 7 ಬಾರಿ ಸಂಸದರಾಗಿದ್ದ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ ಎಂದೇ ಖ್ಯಾತರಾಗಿದ್ದ ಹಿರಿಯ ರಾಜಕಾರಣಿ, ಮುತ್ಸದ್ಧಿ ವಿ.ಶ್ರೀನಿವಾಸ್ ಪ್ರಸಾದ್ (Srinivasa Prasad) ಇಂದು ಮುಂಜಾನೆ ನಿಧನರಾಗಿದ್ದಾರೆ (Srinivasa Prasad). ಚಾಮರಾಜನಗರ ಸಂಸದರಾಗಿ (Chamarajanagar MP) ಬಹು ದೀರ್ಘ ಕಾಲದಿಂದ ಸೇವೆ ಸಲ್ಲಿಸುತ್ತಿದ್ದ ಪ್ರಸಾದ್ ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಘೋಷಿಸಿದ್ದರು.

ಈ ಹಿರಿಯ ನಾಯಕ, ಸಂಸದ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ನಿರಂತರ ಜನಸೇವೆ ಅವರದಾಗಿತ್ತು.

ಕಾಲೇಜು ದಿನಗಳಲ್ಲಿ ಫುಟ್ಬಾಲ್ ಆಟಗಾರನಾಗಿದ್ದ ಶ್ರೀನಿವಾಸ ಪ್ರಸಾದ್‌, ಶಾರದಾ ವಿಲಾಸ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪಡೆದವರು. ಯೌವನದಲ್ಲೇ ಮುಂಚೂಣಿ ನಾಯಕನಾಗಿದ್ದು ಫುಟ್ಬಾಲ್ ಟೀಮ್​ ಜತೆಗೆ ಏರಿಯಾ ಹುಡುಗರ ಕ್ಯಾಪ್ಟನ್ ಆಗಿದ್ದರು. ಬಲ್ಲಾಳ್ ಸರ್ಕಲ್‌ ನಲ್ಲಿ ಪಡ್ಡೆ ಹುಡುಗರ ಜತೆ ಇರುತ್ತಿದ್ದ ಪ್ರಸಾದ್ ಆಜಾನುಬಾಹುವಾಗಿದ್ದರಲ್ಲದೆ, ಹುಡುಗಿಯರ ಗಮನ ಸೆಳೆಯುತ್ತಿದ್ದರು.

ಅವರ ಪೂರ್ತಿ ಹೆಸರು ವೆಂಕಟಯ್ಯ ಶ್ರೀನಿವಾಸ ಪ್ರಸಾದ್. ಮೈಸೂರಿನ ಅಶೋಕಪುರಂನಲ್ಲಿ 1947ರ ಆಗಸ್ಟ್‌ 6ರಂದು ಜನಿಸಿದ ಇವರ ತಂದೆ ವೆಂಕಟಯ್ಯ, ಪತ್ನಿ ಭಾಗ್ಯಲಕ್ಷ್ಮಿ. ಮೂವರು ಮಕ್ಕಳಿದ್ದಾರೆ. ಮಗಳು ಪ್ರತಿಮಾ ಪ್ರಸಾದ್ ಐ.ಆರ್​.ಎಸ್. ಅಧಿಕಾರಿ, ಪೂರ್ಣಿಮಾ ಪ್ರಸಾದ್ ಮಾಜಿ ಶಾಸಕ ಹರ್ಷವರ್ಧನ್ ಪತ್ನಿ ಹಾಗೂ ಪೂನಂ ಪ್ರಸಾದ್ ಬಿಜೆಪಿ ಮುಖಂಡ ಡಾ.ಮೋಹನ್ ಪತ್ನಿ.

ಅವರು ಜನಪ್ರತಿನಿಧಿಯಾಗಿದ್ದ ಅವಧಿಗಳು:

ಬಿಜೆಪಿ: 2019- 2024
ಕಾಂಗ್ರೆಸ್​: 1983-1996, 1997-1998, 2006-2017
ಜೆಡಿಎಸ್​: 2004-2006
ಜೆಡಿಯು: 1999-2004
ಸಂಯುಕ್ತ ಪಾರ್ಟಿ: 1998-1999
ಪಕ್ಷೇತರ: 1996-1997
ಕಾಂಗ್ರೆಸ್: 1979-1983
ಜನತಾ ಪಾರ್ಟಿ: 1977-1979

ದಲಿತರ ದನಿ

ಶ್ರೀನಿವಾಸ ಪ್ರಸಾದ್ ರಾಜ್ಯದ ಅಗ್ರಮಾನ್ಯ ದಲಿತ ನಾಯಕರಾಗಿದ್ದರಲ್ಲದೆ, ಎಲ್ಲಿಯೇ ದಲಿತರ ಮೇಲೆ ದೌರ್ಜನ್ಯ ನಡೆದರೂ ಮೊದಲು ಖಂಡಿಸುತ್ತಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳ ಪ್ರಖರ ವಾಗ್ಮಿಯಾಗಿದ್ದು, ವಿದ್ಯಾರ್ಥಿಗಳಲ್ಲಿ ದಲಿತ ಪ್ರಜ್ಞೆ ಮೂಡಿಸಿದ ನಾಯಕ. ಸಂವಿಧಾನ ಬದಲಾವಣೆ ಸಂಬಂಧ ಅನಂತಕುಮಾರ್ ಹೆಗಡೆ ಮಾತನಾಡಿದ್ದ ಬಗ್ಗೆ ವೇದಿಕೆ ಮೇಲೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಪ್ರಶ್ನಿಸಿದ್ದರು.

Srinivasa Prasad

ಸ್ವಾಭಿಮಾನಿ ಶ್ರೀನಿವಾಸ ಪ್ರಸಾದ್

2013ರಿಂದ 2018ರ ಅವಧಿಗೆ ನಂಜನಗೂಡು ಶಾಸಕರಾಗಿದ್ದ ಪ್ರಸಾದ್ ಅವರನ್ನು 2017ರ ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಕೈಬಿಟ್ಟಿದ್ದರು. ಇದರಿಂದ ಸಿಟ್ಟಿಗೆದ್ದ ಶ್ರೀನಿವಾಸ ಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಸಮರ ಸಾರಿದ್ದರು. ಸ್ವಾಭಿಮಾನಿ ಸಮಾವೇಶ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮ ಸಂಘಟಿಸಿ ನಂಜನಗೂಡು, ವರುಣ, ತಿ.ನರಸೀಪುರ, ಚಾಮರಾಜನಗರದಲ್ಲಿ ಸಮಾವೇಶ ಮಾಡಿದ್ದರು.

ಬೂಸಾ ಚಳವಳಿಯಲ್ಲಿ ಮೂಡಿದ ಬಂಡಾಯ ನಾಯಕ

1974ನೇ ಇಸವಿಯಲ್ಲಿ ಆಗ ಸಚಿವರಾಗಿದ್ದ ಬಿ.ಬಸವಲಿಂಗಪ್ಪ ಹೇಳಿಕೆಯಿಂದ ಬೂಸಾ ಚಳವಳಿಯೇ ನಡೆದು ಹೋಯ್ತು. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಬಿ.ಬಸವಲಿಂಗಪ್ಪ ರಾಜೀನಾಮೆ ಪಡೆದಿದ್ದರು. ನೇರ, ನಿಷ್ಠುರ ನಡೆ-ನುಡಿಗೆ, ದಕ್ಷ ಆಡಳಿತಕ್ಕೆ ಹೆಸರಾಗಿದ್ದ ಸ್ವಾಭಿಮಾನಿ ನಾಯಕ ಬಿ.ಬಸವಲಿಂಗಪ್ಪ ಅವರಿಂದ ರಾಜೀನಾಮೆ ಪಡೆದದ್ದು ದಲಿತರನ್ನು ರೊಚ್ಚಿಗೆಬ್ಬಿಸಿತ್ತು. ಆಗ ಫುಟ್ಬಾಲ್ ಆಡಿಕೊಂಡಿದ್ದ ಅಶೋಕಪುರಂನ 26ರ ಹರೆಯದ ಯುವಕನ ರಕ್ತವೂ ಕುದಿಯಿತು. ಆ ಕುದಿಯ ಕಾರಣಕ್ಕೆ ರಾಜಕೀಯಕ್ಕೆ ಎಂಟ್ರಿಯಾದವರು ಶ್ರೀನಿವಾಸ ಪ್ರಸಾದ್.

ಕೃಷ್ಣರಾಜ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಯುವಕ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಿ ಆ ಮೂಲಕ ಜಿಲ್ಲೆಯ ನಾಯಕ ದೇವರಾಜ ಅರಸುಗೆ ಮುಖಭಂಗ ಮಾಡಿದ್ದ. ರಾಜಕೀಯವಾಗಿ ಗಮನ ಸೆಳೆದಿದ್ದ. 1978ರ ವಿಧಾನಸಭೆ ಚುನಾವಣೆಗೆ ತಿ.ನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡರು. 1980ರಲ್ಲಿ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿ, 33 ಹರೆಯದಲ್ಲೇ ಸಂಸತ್ ಪ್ರವೇಶ ಮಾಡಿದರು. 9 ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ, 7 ಸಲ ಗೆಲುವು ಕಂಡರು.

ರಾಜಕೀಯದ ಏಳುಬೀಳು

  • ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದ.
  • ನಂಜನಗೂಡು ಕ್ಷೇತ್ರದಿಂದ 2 ಬಾರಿ ಶಾಸಕ.
  • 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ
  • 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವ
  • 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ
  • 2017ರಲ್ಲಿ ನಂಜನಗೂಡು ಉಪಚುನಾವಣೆಯಲ್ಲಿ ಸೋಲು
  • 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.
  • 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ
  • ಇದನ್ನೂ ಓದಿ: Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Smartphone Charging Tips: ನಿಮ್ಮ ಸ್ಮಾರ್ಟ್ ಪೋನ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಹೀಗೆ ಮಾಡಿ

Smartphone Charging Tips ಸ್ಮಾರ್ಟ್ ಫೋನ್ ಗಳ ಬ್ಯಾಟರಿ ಹೆಚ್ಚು ಕಾಲ ಬಾಳಿಕೆ ಬರುವುದಿಲ್ಲ ಎಂಬ ದೂರು ಎಲ್ಲರ ಬಾಯಲ್ಲೂ ಇದೆ. ಈ ಸಮಸ್ಯೆಯನ್ನು ನಿವಾರಿಸಲು ಸ್ಯಾಮ್ ಸಂಗ್, ರಿಯಲ್ ಮಿ ಮತ್ತು ಇತರ ಆ್ಯಂಡ್ರಾಯ್ಡ್ ಸ್ಮಾರ್ಟ್ ಫೋನ್ ತಯಾರಕರು ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಹಾಗಾಗಿ ನೀವು ಚಾರ್ಜ್ ಮಾಡುವಾಗ ಈ ನಿಯಮವನ್ನು ಪಾಲಿಸಿ ನೋಡಿ. ಹೀಗೆ ಮಾಡಿದರೆ ನಿಮ್ಮ ಸ್ಮಾರ್ಟ್ ಫೋನ್ ಹೆಚ್ಚು ಬಾಳಿಕೆ ಬರುವುದು ಖಚಿತ.

VISTARANEWS.COM


on

Smartphone Charging Tips
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲ್ಲರ ಕೈಯಲ್ಲೂ ಸ್ಮಾರ್ಟ್ ಪೋನ್ ! ತಂತ್ರಜ್ಞಾನವಿಲ್ಲದೇ ಬದುಕು ನಡೆಸುವುದು ಕೂಡ ಕಷ್ಟವಾಗಿದೆ. ದುಬಾರಿ ಬೆಲೆ ತೆತ್ತು ಖರೀದಿಸಿದ ಈ ಸ್ಮಾರ್ಟ್ ಫೋನ್ ಗಳ ಬ್ಯಾಟರಿ ಹೆಚ್ಚು ಕಾಲ ಬಾಳಿಕೆ ಬರುವುದಿಲ್ಲ. ಇದು ಎಲ್ಲಾ ಜನರ ಸಮಸ್ಯೆಯಾಗಿದೆ. ಸ್ಮಾರ್ಟ್ ಫೋನ್ ಬಳಸಲು ಖುಷಿಯಾಗುತ್ತದೆ. ಆದರೆ ಸಮಸ್ಯೆ ಎದುರಾಗುವುದು ಅದರ ಬ್ಯಾಟರಿಯದ್ದು. ಮನೆಯಿಂದ ಹೊರಗೆ ಹೋಗುವಾಗ ಸಂಪೂರ್ಣವಾಗಿ ಚಾರ್ಜ್‌ ಮಾಡಿಕೊಂಡು ಹೋಗಿದ್ದರೂ, ಪದೇ ಪದೇ ಜಾರ್ಜ್‌ ಇದೆಯಾ…? ಎಂದು ಕಣ್ಣು ಮೊಬೈಲ್‌ ಪರದೆಯ ಮೇಲೆ ಓಡಾಡುತ್ತಾ ಇರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಸ್ಯಾಮ್ ಸಂಗ್, ರಿಯಲ್ ಮಿ ಮತ್ತು ಇತರ ಆ್ಯಂಡ್ರಾಯ್ಡ್ ಸ್ಮಾರ್ಟ್ ಫೋನ್ (Smartphone Charging Tips) ತಯಾರಕರು ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಹಾಗಾಗಿ ನೀವು ಚಾರ್ಜ್ ಮಾಡುವಾಗ ಈ ನಿಯಮವನ್ನು ಪಾಲಿಸಿ.

ಫೋನ್‌ ಬಿಸಿಯಾದರೆ ಜಾರ್ಜ್‌ ಆಫ್‌ ಮಾಡಿ!

ಸ್ಮಾರ್ಟ್ ಫೋನ್ ಗಳಿಗೆ ನಿಯಮಿತವಾಗಿ ಚಾರ್ಜ್ ಮಾಡಿ. ಸ್ಯಾಮ್ಸಂಗ್ ಲಿಥಿಯಂ-ಐಯಾನ್ ಬ್ಯಾಟರಿಗಳು 50 ಪ್ರತಿಶತದಷ್ಟು ಚಾರ್ಜ್ ಆಗಿದ್ದರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತವೆ. ಆದ್ದರಿಂದ ನಿಮ್ಮ ಮೊಬೈಲ್ ಗೆ ಫುಲ್ ಚಾರ್ಜ್ ಮಾಡಬೇಡಿ. ಹಾಗೇ ನೀವು ಮೊಬೈಲ್ ಹೆಚ್ಚು ಬಳಸದೇ ಇದ್ದರೆ 20ರಿಂದ 80 ಪ್ರತಿಶತದಷ್ಟು ಚಾರ್ಜ್ ಮಾಡಿದರೆ ಸಾಕು. ಅಲ್ಲದೇ ನೀವು ಬ್ಯಾಟರಿ ಚಾರ್ಜ್ ಹಾಕಿದಾಗ ಅದು ತುಂಬಾ ಬಿಸಿಯಾದರೆ ತಕ್ಷಣ ಚಾರ್ಜಿಂಗ್ ಅನ್ನು ಆಫ್ ಮಾಡಿ. ಇದರಿಂದ ಬ್ಯಾಟರಿ ಹೆಚ್ಚು ಕಾಲ ಬಾಳಿಕೆ ಬರುತ್ತದೆ.

ತಾಪಮಾನ ಗಮನಿಸಿ:

ಫೋನ್ ಕಾರ್ಯ ನಿರ್ವಹಿಸಲು 15 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನವಿರಬೇಕು ಎಂದು ರಿಯಲ್ ಮಿ ಶಿಫಾರಸು ಮಾಡುತ್ತದೆ. ಹಾಗಾಗಿ ಇಂತಹ ತಾಪಮಾನವಿದ್ದ ಕಡೆ ಮೊಬೈಲ್ ಚಾರ್ಜ್ ಹಾಕುವುದು ಉತ್ತಮ. ಇದರಿಂದ ಬ್ಯಾಟರಿ ಹೆಚ್ಚು ಬಾಳಿಕೆ ಬರುತ್ತದೆಯಂತೆ.

ಫೋನ್ ಜತೆ ನೀಡಲಾದ ಅಡಾಪ್ಟರ್ ಮೂಲಕವೇ ಚಾರ್ಜ್ ಮಾಡಿ:

ನಿಮ್ಮ ಮೊಬೈಲ್ ಚಾರ್ಜಿಂಗ್ ವೇಗವಾಗಿ ಆಗಲು ಮತ್ತು ಯಾವುದೇ ಅಪಘಾತಗಳನ್ನು ತಪ್ಪಿಸಲು ನಿಮ್ಮ ಫೋನ್ ಗೆ ನೀಡಲಾದ ಅಡಾಪ್ಟರ್ ಅಥವಾ ಕೇಬಲ್ ಮೂಲಕ ಮಾತ್ರ ನೀವು ಚಾರ್ಜ್ ಮಾಡಬೇಕು. ಇಲ್ಲವಾದರೆ ಸ್ಮಾರ್ಟ್ ಫೋನ್ ತಯಾರಕರಿಂದ ನಿಮ್ಮ ಫೋನ್ ಗೆ ಹೊಂದುವಂತಹ ಚಾರ್ಜರ್ ಅಥವಾ ಕೇಬಲ್ ಅನ್ನು ಖರೀದಿಸುವುದು ಉತ್ತಮ.

ಇದನ್ನೂ ಓದಿ: Viral Video: ಬಿಜೆಪಿ ಶಾಲು ಧರಿಸಿ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ! ಸೋಲೇ ಕಾರಣ!

ಹಿಂಬದಿಯ ಕವರ್ ತೆಗೆದರೆ ಉತ್ತಮ:

ಸ್ಮಾರ್ಟ್ ಫೋನ್ ಚಾರ್ಜ್ ಮಾಡುವಾಗ ಅದರ ಹಿಂಬದಿಯ ಪ್ಯಾನೆಲ್ ನ ತಾಪಮಾನ ಹೆಚ್ಚಾಗುತ್ತದೆ. ಹಾಗಾಗಿ ನೀವು ನಿಮ್ಮ ಮೊಬೈಲ್ ಗೆ ಹಾಕಿದ ಹಿಂಬದಿಯ ಕವರ್ ಗಳನ್ನು ತೆಗೆದು ಹಾಕಿ ಚಾರ್ಜ್ ಮಾಡಿದರೆ ಒಳ್ಳೆಯದು.
ನಿಮ್ಮ ಮೊಬೈಲ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಮತ್ತು ಚಾರ್ಜ್ ಕಡಿಮೆಯಾಗದಿರಲು ಅದರ ಬ್ರೈಟ್ ನೆಸ್ ಮೋಡ್ ಅನ್ನು ಕಡಿಮೆ ಮಾಡಬಹುದು. ಅಥವಾ ಪವರ್ ಸೇವಿಂಗ್ ಮೋಡ್ ಗೆ ಹಾಕಬಹುದು. ಹಾಗೇ ಮೊಬೈಲ್ ಡೇಟಾದ ಬದಲು ವೈಫೈ ಅನ್ನು ಬಳಸಬಹುದು. ಹಾಗೇ ಆಟೋ ಸಿಂಕ್ ಅನ್ನು ಆಫ್ ಮಾಡಿ. ಅಲ್ಲದೇ ಜಿಪಿಎಸ್, ಇತರ ಆ್ಯಪ್ ಗಳು ಮತ್ತು ಗೇಮ್ ಗಳನ್ನು ಕಡಿಮೆ ಡೌನ್ ಲೋಡ್ ಮಾಡಿ.

Continue Reading

ಬೆಂಗಳೂರು

ಬೈಕ್‌ ಮರೆತು ಬಂದಿದ್ದನ್ನು ಪ್ರಶ್ನಿಸಿದ ಮಗನನ್ನೇ ಕೊಂದ ತಂದೆ; ಕುಡಿದ ಮತ್ತಲ್ಲಿ ನಡೆಯಿತು ದುರಂತ!

ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ಬೈಕ್‌ ವಿಚಾರವಾಗಿ ತಂದೆ ಹಾಗೂ ಮಗನ ಮಧ್ಯೆ ಜಗಳ ನಡೆದಿದೆ. ಬೈಕ್‌ನಲ್ಲಿ ಹೊರಗಡೆ ಹೋದ ತಂದೆಯು ವಾಪಸ್‌ ಬರುವಾಗ ಬೈಕ್‌ ತರದಿದ್ದಕ್ಕೆ ಮಗ ಪ್ರಶ್ನಿಸಿದ್ದಾನೆ. ಆಗ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಸಿಟ್ಟಿನಲ್ಲಿ ತಂದೆಯು ಮಗನಿಗೆ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಗ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Bengaluru Crime News
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್‌ ವಿಚಾರವಾಗಿ ತಂದೆಯೊಬ್ಬ ಮಗನನ್ನೇ ಕೊಲೆ ಮಾಡಿದ್ದಾನೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ಸೋಮವಾರ (ಜೂನ್‌ 10) ಘಟನೆ ನಡೆದಿದೆ. ಬೈಕ್‌ ತೆಗೆದುಕೊಂಡು ಹೊರಗೆ ಹೋದ ತಂದೆ, ಬೈಕ್‌ನ ಕೀ ಕಳೆದುಕೊಂಡು, ಅದನ್ನು ಮನೆಗೆ ತೆಗೆದುಕೊಂಡು ಹೋಗದೆ, ಬರಿಗೈಯಲ್ಲಿ ಮನೆಗೆ ತೆರಳಿದ್ದಾನೆ. ಇದೇ ವಿಚಾರವಾಗಿ ಮಗ ಹಾಗೂ ತಂದೆ ಮಧ್ಯೆ ಜಗಳ ನಡೆದಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ.

ಅಂಜನ್‌ ಕುಮಾರ್‌ (27) ಹತ್ಯೆಗೀಡಾದ ಯುವಕ. ಕೊಲೆ ಆರೋಪಿ ವೆಂಕಟೇಶ್‌ (57) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ (ಜೂನ್‌ 9) ಸಂಜೆ ವೆಂಕಟೇಶ್‌ ಬೈಕ್‌ ತೆಗೆದುಕೊಂಡು ಹೋಗಿದ್ದರು. ಸಂಜೆ ಹೊರಗೆ ಹೋಗಿ ಮದ್ಯಪಾನ ಮಾಡಿದ್ದ ಅವರು ಅದೇ ನಶೆಯಲ್ಲಿ ಬೈಕ್‌ ಕೀ ಕಳೆದುಕೊಂಡಿದ್ದರು. ಇದೇ ಕಾರಣಕ್ಕಾಗಿ ಬೈಕ್‌ ಬಿಟ್ಟು ಮನೆಗೆ ತೆರಳಿದ್ದರು. ಸೋಮವಾರ ಬೆಳಗ್ಗೆ ಮಗ ಅಂಜನ್‌ ಬೈಕ್‌ ಎಲ್ಲಿ ಎಂದು ಪ್ರಶ್ನಿಸಿದ್ದ. ಆಗ ಇಬ್ಬರ ಮಧ್ಯೆ ಜಗಳ ನಡೆದಿದೆ.

ವೆಂಕಟೇಶ್‌ ಅವರಿಗೆ ಪುತ್ರಿಯೂ ಇದ್ದು, ಆಕೆಗಾಗಿ ಸ್ಕೂಟಿ ಕೊಡಿಸಿದ್ದರು. ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ವೆಂಕಟೇಶ್‌, ಮಗಳಿಗಾಗಿ ಖರೀದಿಸಿದ ಸ್ಕೂಟಿಯನ್ನು ಮರೆತುಬಂದಿದ್ದರು. ಇದನ್ನು ಅಂಜನ್‌ ಪ್ರಶ್ನಿಸಿದಾಗ ಇಬ್ಬರ ಮಧ್ಯೆ ಜಗಳ ನಡೆದಿದೆ. ಸಿಟ್ಟಿನಲ್ಲಿ ತಂದೆ ಎಂಬುದನ್ನೂ ನೋಡದ ಅಂಜನ್‌ ಹೆಲ್ಮೆಟ್‌ನಿಂದ ಹಲ್ಲೆ ಮಾಡಿದ್ದರು. ಇದರಿಂದ ಕುಪಿತಗೊಂಡ ವೆಂಕಟೇಶ್‌, ಅಡುಗೆ ಮನೆಯಿಂದ ಚಾಕು ತಂದು ಅಂಜನ್‌ಗೆ ಇರಿದಿದ್ದಾರೆ.

ಅಂಜನ್‌ನ ಎಡಭಾಗಕ್ಕೆ ಚಾಕು ಇರಿದ ಕಾರಣ ತೀವ್ರ ರಕ್ತಸ್ರಾವದಿಂದ ಆತ ಮೃತಪಟ್ಟಿದ್ದಾನೆ. ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ವೆಂಕಟೇಶ್‌ನನ್ನು ಬಂಧಿಸಿದ್ದಾರೆ. ಬೈಕ್‌ ವಿಚಾರವಾಗಿ ಆರಂಭದಲ್ಲಿ ವಾಗ್ವಾದ ನಡೆದಿದೆ. ವಾಗ್ವಾದವು ಜಗಳಕ್ಕೆ ತಿರುಗಿದ್ದು, ಮೊದಲು ಅಂಜನ್‌ ಹಲ್ಲೆ ನಡೆಸಿದ್ದಾನೆ. ಇದಾದ ಬಳಿಕ ವೆಂಕಟೇಶ್‌ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

Continue Reading

ಪ್ರಮುಖ ಸುದ್ದಿ

salaries of prime minister: ರಾಷ್ಟ್ರಪತಿ, ಪ್ರಧಾನಿಗೆ ಸಂಬಳ, ಸೌಲಭ್ಯ ಎಷ್ಟಿರುತ್ತವೆ ಗೊತ್ತೆ?

salaries of prime minister ಸಂಬಳದ ವಿಷಯಕ್ಕೆ ಬಂದಾಗ ಎಲ್ಲರ ತಲೆಯಲ್ಲಿಯೂ ಒಂದು ಯೋಚನೆ ಇರುತ್ತದೆ. ಈ ದೇಶದ ಆಡಳಿತವನ್ನು ನಡೆಸುವ ಪ್ರಧಾನ ಮಂತ್ರಿಗಳು, ರಾಷ್ಟ್ರಪತಿಗಳಿಗೆ ಸಂಬಳ ಎಷ್ಟಿರಬಹುದು ಎಂದು. ಅವರ ಸಂಬಳ, ಸಿಗುವ ಸವಲತ್ತುಗಳ ಕುರಿತು ಒಂದಷ್ಟು ಮಾಹಿತಿಗಳು ಇಲ್ಲಿವೆ ನೋಡಿ. ಪ್ರಧಾನಿ ಮತ್ತು ರಾಷ್ಟ್ರಪತಿಗೆ ಇರುವ ಸೌಕರ್ಯದ ಮಾಹಿತಿಯನ್ನು ತಿಳಿದುಕೊಂಡಿರಿ.

VISTARANEWS.COM


on

salaries of prime minister
Koo

ದೆಹಲಿ: ನೀವು ಯಾವುದಾದರೂ ಕೆಲಸದಲ್ಲಿ ಇದ್ದರೆ ನಿಮಗೆಷ್ಟು ಸಂಬಳ ಕೊಡುತ್ತಾರೆ ಎಂದು ಯಾರಾದರೂ ಕೇಳಿಯೇ ಕೇಳುತ್ತಾರೆ. ಕೆಲಸಕ್ಕಿಂತ ಹೆಚ್ಚಾಗಿ ಸಂಬಳವೇ ಎಲ್ಲರ ಕಣ್ಣನ್ನು ಸೆಳೆಯುತ್ತದೆ. ಇನ್ನು ಕೆಲವರಿಗೆ ಹೀಗೆ ಕೇಳುವುದು ಒಂದು ಕುತೂಹಲವಾಗಿರುತ್ತದೆ. ಸಣ್ಣಪುಟ್ಟ ಕಂಪನಿಯಲ್ಲಿ ಕೆಲಸ ಮಾಡುವವರನ್ನು ಬಿಡದವರು ಇನ್ನು ದೇಶದ ಆಡಳಿತದ ಚುಕ್ಕಾಣಿ ಹಿಡಿದವರನ್ನು ಬಿಡುತ್ತಾರಾ….? ದೇಶದಲ್ಲಿ ಹಲವಾರು ಉನ್ನತ ಹುದ್ದೆಗಳಿವೆ. ಅದರಲ್ಲಿ ದೇಶದ ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿ ಬಹಳ ಮುಖ್ಯವಾದ ಹುದ್ದೆಗಳಾಗಿವೆ. ಸಾಮಾನ್ಯ ಹುದ್ದೆಗಳನ್ನು ಪಡೆದಿರುವವರಿಗೆ ತಿಂಗಳಿಗೆ ಕೈತುಂಬಾ ಸಂಬಳ ಬರುತ್ತದೆ. ಹಾಗಾದ್ರೆ ದೇಶದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಹುದ್ದೆಗೆ ಎಷ್ಟು ಸಂಬಳವಿರಬಹುದು (salaries of prime minister) ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ಅದರ ವಿವರ ಇಲ್ಲಿದೆ ನೋಡಿ.

ರಾಷ್ಟ್ರಪತಿ

ದೇಶದ ಮೂರು ಉನ್ನತ ಹುದ್ದೆಗಳಲ್ಲಿ ರಾಷ್ಟ್ರಪತಿ ಹುದ್ದೆ ಒಂದು. 2018ರಲ್ಲಿ ಭಾರತದ ರಾಷ್ಟ್ರಪತಿಗಳ ವೇತನವನ್ನು ತಿಂಗಳಿಗೆ 1.50 ಲಕ್ಷದಿಂದ 5 ಲಕ್ಷಕ್ಕೆ ಪರಿಷ್ಕರಿಸಲಾಯಿತು.  ಹಾಗೇ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ತಮ್ಮ ಬಜೆಟ್ ನಲ್ಲಿ ಭಾರತೀಯ ರಾಷ್ಟ್ರಪತಿಗಳ ಗೌರವಧನವನ್ನು ಜನವರಿ 2006ರಿಂದ ಜಾರಿಗೆ ಬರುವಂತೆ ಕೊನೆಯ ಬಾರಿಗೆ ಪರಿಷ್ಕರಿಸಲಾಗಿರುವುದಾಗಿ ತಿಳಿಸಿದ್ದರು. ಹಾಗಾಗಿ ಗೃಹ ವ್ಯವಹಾರ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ  ರಾಷ್ಟ್ರಪತಿಗಳ ಸವಲತ್ತಿನ ವಿವರ ಹೀಗಿದೆ:

-ರಾಷ್ಟ್ರಪತಿ ವಿಮಾನ, ರೈಲು ಅಥವಾ ಸ್ಟೀಮರ್ ಗಳ ಮೂಲಕ ದೇಶದ ಯಾವ ಪ್ರದೇಶಕ್ಕೂ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದು. ಹಾಗೇ ಅವರ ಜೊತೆ ಸಹಾಯಕ್ಕಾಗಿ ಒಬ್ಬ ವ್ಯಕ್ತಿಯನ್ನು ಕರೆತರಬಹುದಾಗಿದೆ. ಅವರ ಖರ್ಚನ್ನು ಸರ್ಕಾರವೇ ಭರಿಸುತ್ತದೆ.

-ರಾಷ್ಟ್ರಪತಿ ವೈದ್ಯಕೀಯ ಸೇವೆಗಳನ್ನು ಉಚಿತವಾಗಿ ಪಡೆಯಬಹುದಾಗಿದೆ.

-ಸುಸಜ್ಜಿತ ಬಾಡಿಗೆ ಮುಕ್ತ ಮನೆ, ಎರಡು ಉಚಿತ ಲ್ಯಾಂಡ್ ಲೈನ್ ಗಳು ( ಇದರಲ್ಲಿ ಒಂದು ಇಂಟರ್ ನೆಟ್ ಸಂಪರ್ಕಕ್ಕಾಗಿ ), ಮೊಬೈಲ್ ಫೋನ್, ಮನೆಯ ನಿರ್ವಹಣೆಯ ಜೊತೆಗೆ ಐದು ವೈಯಕ್ತಿಕ ಸಿಬ್ಬಂದಿಗಳನ್ನು ನೀಡಲಾಗುತ್ತದೆ.

-ಒಂದು ವೇಳೆ ರಾಷ್ಟ್ರಪತಿ, ಹುದ್ದೆಯಲ್ಲಿರುವಾಗಲೇ ಮರಣ ಹೊಂದಿದರೆ ಅವರ ಸಂಗಾತಿಗೆ ನಿವೃತ್ತಿಯ ವೇಳೆ ರಾಷ್ಟ್ರಪತಿಗೆ ನೀಡಲಾಗುವಂತಹ ಕುಟುಂಬ ಪಿಂಚಣಿಯನ್ನು ಐವತ್ತು ಪ್ರತಿಶತ ಪಿಂಚಣಿ ದರದಲ್ಲಿ ಜೀವಮಾನವಿಡೀ ನೀಡಲಾಗುವುದು.

-ಹಾಗೇ ರಾಷ್ಟ್ರಪತಿಯ ಸಂಗಾತಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಸಹ ನೀಡಲಾಗುವುದು.

ಉಪರಾಷ್ಟ್ರಪತಿ

ಬಜೆಟ್ ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಉಪರಾಷ್ಟ್ರಪತಿಯ ಗೌರವಧನವನ್ನು ತಿಂಗಳಿಗೆ 1.25 ಲಕ್ಷದಿಂದ 4 ಲಕ್ಷಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದರು. ಅದಕ್ಕೆ ಸಂಬಂಧಿಸಿದ ಸವಲತ್ತುಗಳ ವಿವರ ಇಲ್ಲಿದೆ:

– ಉಪರಾಷ್ಟ್ರಪತಿಯು ಉಚಿತ ವಸತಿ, ವೈಯಕ್ತಿಕ ಭದ್ರತೆ, ವೈದ್ಯಕೀಯ ಆರೈಕೆ, ರೈಲು ಮತ್ತು ವಿಮಾನ ಪ್ರಯಾಣ, ಸ್ಥಿರ ದೂರವಾಣಿ ಸಂಪರ್ಕ, ಮೊಬೈಲ್ ಫೋನ್ ಸೇವೆ ಮತ್ತು ಸಿಬ್ಬಂದಿಯನ್ನು ಪಡೆಯಬಹುದಾಗಿದೆ.

-ನಿವೃತ್ತಿಯ ನಂತರ ಅವರು ಖಾಸಗಿ ಕಾರ್ಯದರ್ಶಿ, ಹೆಚ್ಚುವರಿ ಖಾಸಗಿ ಕಾರ್ಯದರ್ಶಿ, ವೈಯಕ್ತಿಕ ಸಹಾಯಕ ಮತ್ತು ಇಬ್ಬರು ಪ್ಯೂನ್ ಗಳನ್ನು ಒಳಗೊಂಡಿರುವ ಕಾರ್ಯದರ್ಶಿ ಸಿಬ್ಬಂದಿಯನ್ನು ಹೊಂದಬಹುದಾಗಿದೆ. ಮತ್ತು ಅಂತಹ ಕಾರ್ಯದರ್ಶಿ ಸಿಬ್ಬಂದಿಗಳ ನಿರ್ವಹಣೆಗಾಗಿ ಅವರು ಸಂಬಳವನ್ನು ನೀಡಬೇಕಾಗುತ್ತದೆಯಂತೆ.

ಇದನ್ನೂ ಓದಿ:Assault Case: ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ತಡೆಗಟ್ಟಿ ಹಲ್ಲೆ ಮಾಡಿದ ಕ್ರೂರಿಗಳು!

ಪ್ರಧಾನ ಮಂತ್ರಿ

ಭಾರತದ ಪ್ರಧಾನ ಮಂತ್ರಿಗಳು ತಿಂಗಳಿಗೆ 1.66 ಲಕ್ಷ ರೂ. ಸಂಬಳವನ್ನು ಪಡೆಯುತ್ತಾರೆ. ಇತರ ಭತ್ಯೆಗಳು ಬೇರೆ ಇರುತ್ತವೆ. ಅವರಿಗೆ ನೀಡಲಾದ ಸವಲತ್ತುಗಳ ವಿವರ ಇಲ್ಲಿದೆ:

-ಅವರ ಭದ್ರತೆಗೆ ವೈಯಕ್ತಿಕ ಸಿಬ್ಬಂದಿಗಳ ವಿಶೇಷ ರಕ್ಷಣಾ ತಡವನ್ನು ನಿಯೋಜಿಸಲಾಗುತ್ತದೆ.

-ಪ್ರಧಾನಿಯವರು ಪ್ರಯಾಣಿಸಲು ಒಂದು ವಿಶೇಷವಾದ ವಿಮಾನ –ಏರ್ ಇಂಡಿಯಾ ಒನ್ ಅನ್ನು ನೀಡಲಾಗುತ್ತದೆ.

– ರೇಸ್ ಕೋರ್ಸ್ ರಸ್ತೆಯ 7 ರಲ್ಲಿ ಅವರಿಗೆ ಅಧಿಕೃತ ನಿವಾಸವನ್ನು ನೀಡಲಾಗುತ್ತದೆ.

  • – ಉಚಿತ ವೈದ್ಯಕೀಯ ಸೌಲಭ್ಯ, ಉಚಿತ ಸಾರಿಗೆ ಸೌಲಭ್ಯ ಇತ್ಯಾದಿ ಸೌಕರ್ಯಗಳು ಪ್ರಧಾನಿಗಿರುತ್ತವೆ.
  • – ನಿವೃತ್ತಿಯ ಬಳಿಕವೂ ಪ್ರಧಾನಿಯಾಗಿದ್ದವರು ಮತ್ತು ಅವರ ಕುಟುಂಬಕ್ಕೆ ಉಚಿತ ಸೌಕರ್ಯ ಮುಂದುವರಿಯುತ್ತವೆ.
Continue Reading

ಕರ್ನಾಟಕ

Shakti Scheme: ಉಚಿತ ಪ್ರಯಾಣದ ಶಕ್ತಿ ಯೋಜನೆಗೆ 1 ವರ್ಷ; ಖರ್ಚಾಗಿದ್ದೆಷ್ಟು? ಉಪಯೋಗ ಪಡೆದವರೆಷ್ಟು?

Shakti Scheme: ಹೆಣ್ಣುಮಕ್ಕಳು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾದ ಶಕ್ತಿ ಯೋಜನೆಗೆ ಸೋಮವಾರ ಒಂದು ವರ್ಷ ತುಂಬಿದೆ. ಯೋಜನೆ ಜಾರಿ ಆರಂಭದಲ್ಲಿ ಸಂಚಲನ ಮೂಡಿಸಿದ, ಗೊಂದಲ, ಗಲಾಟೆಗಳಿಗೂ ಕಾರಣವಾದ ಯೋಜನೆ ಈಗ ಯಶಸ್ವಿಯಾಗಿದೆ. ಇದರಿಂದ ಕೋಟ್ಯಂತರ ಹೆಣ್ಣುಮಕ್ಕಳು ಲಾಭವನ್ನೂ ಪಡೆದಿದ್ದಾರೆ.

VISTARANEWS.COM


on

Shakti Scheme
Koo

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ಹೆಣ್ಣುಮಕ್ಕಳ ಅನುಕೂಲಕ್ಕಾಗಿ ಜಾರಿಗೆ ತಂದ ಶಕ್ತಿ ಯೋಜನೆ ಜಾರಿಯಾಗಿ ಸೋಮವಾರಕ್ಕೆ (ಜೂನ್‌ 11) ಒಂದು ವರ್ಷ ತುಂಬಿದೆ. ಹೆಣ್ಣುಮಕ್ಕಳು ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾದ, ರಾಜ್ಯ ಸರ್ಕಾರದ ಐದು ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಿಂದ ಜೂನ್‌ 9ರವರೆಗೆ 225 ಕೋಟಿ ಬಾರಿ ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ.

2023ರ ಜೂನ್‌ 11ರಂದು ರಾಜ್ಯ ಸರ್ಕಾರವು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಹಾಗೂ ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್‌ಗಳಲ್ಲಿ ಜೂನ್‌ 9ರವರೆಗೆ 225.15 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು ಜೂನ್‌ 9ರವರೆಗೆ 5,481.40 ಕೋಟಿ ರೂಪಾಯಿಯನ್ನು ನಾಲ್ಕೂ ನಿಗಮಗಳಿಗೆ ವಿನಿಯೋಗ ಮಾಡಿದೆ.

Shakti scheme and CM Siddaramaiah

2023ರ ವಿಧಾನಸಭೆ ಚುನಾವಣೆಗೂ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕ ಕಾಂಗ್ರೆಸ್‌ ಘೋಷಣೆ ಮಾಡಿತ್ತು. ಚುನಾವಣೆ ವೇಳೆ ಗ್ಯಾರಂಟಿ ಯೋಜನೆಗಳ ಕುರಿತು ಅಬ್ಬರದ ಪ್ರಚಾರ ಕೈಗೊಂಡಿತ್ತು. ಐದು ಯೋಜನೆಗಳಲ್ಲಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾದ ಶಕ್ತಿ ಯೋಜನೆಯೂ ಒಂದಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಅದರಂತೆ, ಶಕ್ತಿ ಯೋಜನೆಯು ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಇದರಿಂದ ಕೋಟ್ಯಂತರ ಮಹಿಳೆಯರು ಲಾಭ ಪಡೆದಿದ್ದಾರೆ.

ಶಕ್ತಿ ಯೋಜನೆಗೆ ಆರಂಭದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಇನ್ನು ಬಸ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೆಣ್ಣುಮಕ್ಕಳು ಓಡಾಟ ಆರಂಭಿಸಿದ ಕಾರಣ ಬಸ್‌ನಲ್ಲಿ ಕಂಡಕ್ಟರ್‌ ಜತೆ ಜಗಳ, ಪ್ರಯಾಣಿಕರೇ ಬಡಿದಾಡಿಕೊಂಡ ಪ್ರಕರಣಗಳು ಸುದ್ದಿಯಾಗಿದ್ದವು. ಇದಾದ ಬಳಿಕ ಪರಿಸ್ಥಿತಿಯು ನಿಯಂತ್ರಣಕ್ಕೆ ಬಂದಿದೆ. ಶಕ್ತಿ ಯೋಜನೆ ಜಾರಿಗೂ ಮೊದಲು ಕರ್ನಾಟಕದ ಸಾರಿಗೆ ಬಸ್‌ಗಳಲ್ಲಿ ನಿತ್ಯ 84.5 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಆದರೆ, ಯೋಜನೆ ಜಾರಿ ಬಳಿಕ ನಿತ್ಯ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ 1.06 ಕೋಟಿಗೆ ಏರಿಕೆಯಾಗಿದೆ. ಇದರಿಂದ ಸಾರಿಗೆ ನಿಗಮಗಳಿಗೂ ಲಾಭವಾಗಿದೆ.

ಇದನ್ನೂ ಓದಿ: Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Continue Reading
Advertisement
Smartphone Charging Tips
ತಂತ್ರಜ್ಞಾನ14 mins ago

Smartphone Charging Tips: ನಿಮ್ಮ ಸ್ಮಾರ್ಟ್ ಪೋನ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಹೀಗೆ ಮಾಡಿ

Bengaluru Crime News
ಬೆಂಗಳೂರು19 mins ago

ಬೈಕ್‌ ಮರೆತು ಬಂದಿದ್ದನ್ನು ಪ್ರಶ್ನಿಸಿದ ಮಗನನ್ನೇ ಕೊಂದ ತಂದೆ; ಕುಡಿದ ಮತ್ತಲ್ಲಿ ನಡೆಯಿತು ದುರಂತ!

RSA vs BAN
ಕ್ರೀಡೆ20 mins ago

RSA vs BAN: ಹ್ಯಾಟ್ರಿಕ್​ ಗೆಲುವು ಸಾಧಿಸಿ ಸೂಪರ್​-8 ಹಂತಕ್ಕೆ ಲಗ್ಗೆಯಿಟ್ಟ ದಕ್ಷಿಣ ಆಫ್ರಿಕಾ

Delhi Tour
ಲೈಫ್‌ಸ್ಟೈಲ್22 mins ago

Delhi Tour: ದೆಹಲಿಗೆ ಪ್ರವಾಸಕ್ಕೆ ಹೋದಾಗ ಮಿಸ್ ಮಾಡದೇ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಿ!

Rashtrapati Bhavan
ದೇಶ33 mins ago

Rashtrapati Bhavan: ಮೋದಿ ಪ್ರಮಾಣ ವಚನ ಸಮಾರಂಭದ ವೇಳೆ ಕಾಣಿಸಿಕೊಂಡಿದ್ದು ಚಿರತೆಯಲ್ಲ; ಪೊಲೀಸರ ಸ್ಪಷ್ಟನೆ

salaries of prime minister
ಪ್ರಮುಖ ಸುದ್ದಿ34 mins ago

salaries of prime minister: ರಾಷ್ಟ್ರಪತಿ, ಪ್ರಧಾನಿಗೆ ಸಂಬಳ, ಸೌಲಭ್ಯ ಎಷ್ಟಿರುತ್ತವೆ ಗೊತ್ತೆ?

Vastu Tips
ಧಾರ್ಮಿಕ45 mins ago

Vastu Tips: ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಿಸಿಕೊಳ್ಳಲು ಈ ವಾಸ್ತು ಸಲಹೆ ಪಾಲಿಸಿ

Shakti Scheme
ಕರ್ನಾಟಕ50 mins ago

Shakti Scheme: ಉಚಿತ ಪ್ರಯಾಣದ ಶಕ್ತಿ ಯೋಜನೆಗೆ 1 ವರ್ಷ; ಖರ್ಚಾಗಿದ್ದೆಷ್ಟು? ಉಪಯೋಗ ಪಡೆದವರೆಷ್ಟು?

Somnath Bharti
Lok Sabha Election 20241 hour ago

Somnath Bharti: ಮೋದಿ ಪ್ರಧಾನಿಯಾದರೆ ತಲೆ ಬೋಳಿಸುವುದಾಗಿ ಪ್ರತಿಜ್ಞೆ ಮಾಡಿದ್ದ ಆಪ್‌ ನಾಯಕ ಯೂ ಟರ್ನ್‌; ನೀಡಿದ ಸಮರ್ಥನೆ ಏನು?

Tax Devolution
ಕರ್ನಾಟಕ1 hour ago

Tax Devolution: ರಾಜ್ಯಗಳಿಗೆ 1.39 ಲಕ್ಷ ಕೋಟಿ ರೂ. ಹಂಚಿದ ಮೋದಿ ಸರ್ಕಾರ; ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌