War 2 Movie: `ವಾರ್‌2', `ಬ್ರಹ್ಮಾಸ್ತ್ರ' ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ ! - Vistara News

ಸ್ಯಾಂಡಲ್ ವುಡ್

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

War 2 Movie: ಅಯಾನ್ ಅವರ ಮುಂಬರುವ ನಿರ್ದೇಶನದ ವಾರ್ 2 ಸಿನಿಮಾ ಚಿತ್ರೀಕರಣ ಈಗಾಗಲೇ ಶುರುವಾಗಿದೆ. ಹೃತಿಕ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಪ್ರಸ್ತುತ ಮುಂಬೈನಲ್ಲಿ ಶೂಟಿಂಗ್‌ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ, ಜ್ಯೂನಿಯರ್‌ ಎನ್‌ಟಿಆರ್‌ ಚೆನ್ನೈನಿಂದ ಮುಂಬೈಗೆ ಬಂದಿದ್ದರು. ಈ ವೇಳೆ ಚಿತ್ರೀಕರಣದ ಕೆಲವು ಫೋಟೊಗಳು ವೈರಲ್‌ ಆಗಿದ್ದವು. ನಿಯರ್‌ ಎನ್‌ಟಿಆರ್‌ ಇತ್ತೀಚಿನ ಬ್ಲಾಕ್‌ಬಸ್ಟರ್ ಆರ್‌ಆರ್‌ಆರ್‌ ಸಿನಿಮಾಗಾಗಿ 45 ಕೋಟಿ ರೂ. ಪಡೆದಿದ್ದರು. ವಾರ್‌ 2 ಸಿನಿಮಾಗಾಗಿ 100 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

VISTARANEWS.COM


on

War 2 A galaxy of stars descended at a Mumbai restaurant on Sunday evening
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿರ್ದೇಶಕ ಅಯಾನ್ ಮುಖರ್ಜಿ ಅವರು ʻಬ್ರಹ್ಮಾಸ್ತ್ರʼ ತಂಡ ಹಾಗೂ ʻವಾರ್‌ 2ʼ (War 2 Movie) ತಂಡಕ್ಕೆ ಡಿನ್ನರ್‌ ಪಾರ್ಟಿ ಆಯೋಜಿಸಿದ್ದರು. ಈ ವೇಳೆ ರಣಬೀರ್ ಕಪೂರ್, ಆಲಿಯಾ, ಹೃತಿಕ್‌ ರೋಷನ್‌ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಜತೆಯಾಗಿ ಕಂಡು ಬಂದರು.

ರಣಬೀರ್ ಕಪೂರ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಕಪ್ಪು ಬಣ್ಣದ ಎಸ್‌ಯುವಿಯಿಂದ ಹೊರಬರುತ್ತಿರುವ ವಿಡಿಯೊ ಪಾಪರಾಜಿಗಳು ಶೇರ್‌ ಮಾಡಿಕೊಂಡಿದ್ದಾರೆ. ಆಲಿಯಾ ಭಟ್ ಕೂಡ ಹಳದಿ ಬಣ್ಣದ ಉಡುಗೆಯನ್ನು ಧರಿಸಿದ್ದರು. ಕರಣ್ ಜೋಹರ್ ಮತ್ತು ಅಯಾನ್ ಮುಖರ್ಜಿ ಕೂಡ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಲವ್ ಬರ್ಡ್ಸ್ ಹೃತಿಕ್ ರೋಷನ್ ಮತ್ತು ಸಬಾ ಆಜಾದ್ ಕೂಡ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ಅಯಾನ್ ಅವರ ಮುಂಬರುವ ನಿರ್ದೇಶನದ ವಾರ್ 2 ಸಿನಿಮಾ ಚಿತ್ರೀಕರಣ ಈಗಾಗಲೇ ಶುರುವಾಗಿದೆ. ಹೃತಿಕ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಪ್ರಸ್ತುತ ಮುಂಬೈನಲ್ಲಿ ಶೂಟಿಂಗ್‌ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ, ಜ್ಯೂನಿಯರ್‌ ಎನ್‌ಟಿಆರ್‌ ಚೆನ್ನೈನಿಂದ ಮುಂಬೈಗೆ ಬಂದಿದ್ದರು. ಈ ವೇಳೆ ಚಿತ್ರೀಕರಣದ ಕೆಲವು ಫೋಟೊಗಳು ವೈರಲ್‌ ಆಗಿದ್ದವು.

ವರದಿಯ ಪ್ರಕಾರ, ಜ್ಯೂನಿಯರ್‌ ಎನ್‌ಟಿಆರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾ ಬಳಿಕ ಆದಿತ್ಯ ಚೋಪ್ರಾ ಅವರು ಅಯನ್ ಮುಖರ್ಜಿ ಅವರ ನಿರ್ದೇಶಕ್ಕೆ ಮನಸೋತು, ಈ ಸಿನಿಮಾ ಮಾಡಲು ಅವಕಾಶ ನೀಡಿದ್ದಾರೆ ಎನ್ನಲಾಗಿದೆ. ಜ್ಯೂನಿಯರ್‌ ಎನ್‌ಟಿಆರ್‌ ಇತ್ತೀಚಿನ ಬ್ಲಾಕ್‌ಬಸ್ಟರ್ ಆರ್‌ಆರ್‌ಆರ್‌ ಸಿನಿಮಾಗಾಗಿ 45 ಕೋಟಿ ರೂ. ಪಡೆದಿದ್ದರು. ವಾರ್‌ 2 ಸಿನಿಮಾಗಾಗಿ 100 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Jr NTR: `ವಾರ್‌ 2′ ಸಿನಿಮಾ ಶೂಟಿಂಗ್‌ ಫೋಟೊಗಳು ಲೀಕ್‌!

ಸಿದ್ದಾರ್ಥ್ ಆನಂದ್ ಅವರು ‘ವಾರ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದರು. ಮೊದಲ ಪಾರ್ಟ್​​ನಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಗೊಂಡಿದೆ. ಹೀಗಾಗಿ ‘ವಾರ್-2’ ಚಿತ್ರದಲ್ಲಿ ಹೃತಿಕ್ ಮಾಡಿರುವ ಕಬೀರ್ ಪಾತ್ರ ಮುಂದುವರಿಯುತ್ತಿದೆ. ಜ್ಯೂನಿಯರ್‌ ಎನ್‌ಟಿಆರ್‌ ಅವರು ತಮ್ಮ ಮೊದಲ ಬಾಲಿವುಡ್​ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ವಿಶೇಷ. ವಾರ್‌-2 ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಉತ್ತರ ಮತ್ತು ದಕ್ಷಿಣ ಭಾಗದ ಸೂಪರ್‌ಸ್ಟಾರ್‌ಗಳನ್ನು ಹೊಂದಿದೆ. ಕಿಯಾರಾ ಆಡ್ವಾಣಿ ಈ ಸಿನಿಮಾ ನಾಯಕಿ. ವಾರ್ 2 2025ರ ಆಗಸ್ಟ್ 14ರಂದು ಬಿಡುಗಡೆಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Anirudh Jatkar: ʻಜೊತೆ ಜೊತೆಯಲಿ’ ಧಾರಾವಾಹಿಯ ವಿವಾದದ ಬಗ್ಗೆ ಬೇಸರ ಹೊರ ಹಾಕಿದ ಅನಿರುದ್ಧ್!

Anirudh Jatkar: ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಜನಪ್ರಿಯರಾಗಿರುವ ಅನಿರುದ್ಧ್ (Kannada New Movie)​ ಜತ್ಕರ್ ನಾಯಕನಾಗಿ ನಟಿಸಿರುವ, ರೂಪ ಡಿ.ಎನ್ ನಿರ್ಮಾಣದ ಹಾಗೂ ಆನಂದರಾಜ್ ಎಂ ನಿರ್ದೇಶಿಸಿರುವ “Chef ಚಿದಂಬರ” ಚಿತ್ರ ಜೂನ್ 14ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ಧ್​ ಜತ್ಕರ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ.

VISTARANEWS.COM


on

Anirudh Jatkar again rise on voice jote joteyali serial issue
Koo

ಬೆಂಗಳೂರು: ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಜನಪ್ರಿಯರಾಗಿರುವ ಅನಿರುದ್ಧ್ (Kannada New Movie)​ ಜತ್ಕರ್ ನಾಯಕನಾಗಿ ನಟಿಸಿರುವ, ರೂಪ ಡಿ.ಎನ್ ನಿರ್ಮಾಣದ ಹಾಗೂ ಆನಂದರಾಜ್ ಎಂ ನಿರ್ದೇಶಿಸಿರುವ “Chef ಚಿದಂಬರ” ಚಿತ್ರ ಜೂನ್ 14ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂದರ್ಶನವನ್ನು ನೀಡುತ್ತಿದ್ದಾರೆ ಅನಿರುದ್ಧ್. ಈ ವೇಳೆ ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿದ್ದ ಅವರ ‘ಜೊತೆ ಜೊತೆಯಲಿ’ ಧಾರಾವಾಹಿ ವಿವಾದದ ಕುರಿತು ಮತ್ತೆ ಧ್ವನಿ ಎತ್ತಿದ್ದಾರೆ. ಯಶಸ್ವಿ ಧಾರಾವಾಹಿಯ ನಿರ್ದೇಶಕ ಹೀಗೆಲ್ಲ ಹೇಗೆ ಹೇಳುವುದಕ್ಕೆ ಸಾಧ್ಯ ಎಂದು ಅನಿರುದ್ಧ್ ಬೇಸರ ಹೊರ ಹಾಕಿದ್ದಾರೆ.

ಅನಿರುದ್ಧ್‌ ಮಾತನಾಡಿ ʻʻಪ್ರತಿ ಮನೆಯಲ್ಲೂ ಜಗಳ ಆಗುತ್ತದೆ. ಭಿನ್ನಾಭಿಪ್ರಾಯ ಬಂದೇ ಬರುತ್ತದೆ. ಹಾಗೇ ಕಿರುತೆರೆಯಲ್ಲಿಯೂ ಇದ್ದಿದ್ದೆ. ಆದರೆ ನಮಗಿಂತ ದೊಡ್ಡದು ಪ್ರಾಜೆಕ್ಟ್‌. ಆಗಿದ್ದು ಆಗೋಯ್ತು. ಮತ್ತೆ ಧಾರಾವಾಹಿಗೆ ಕರೀರಿ ಎಂದೆ. ನಿರ್ದೇಶನ ಕೂಡ ಅವರೇ ಮಾಡಲಿ ಎಂದೆ. ಆ ನಿರ್ದೇಶಕರ ಮುಂದೆ ಮಾಡಬೇಡಿ ಎಂದರು ತುಂಬ ಜನ. ಆದರೂ ನಾನು ಅದೆಲ್ಲ ಮರೆತು ಮುಂದೆ ಸಾಗಬೇಕು ಎಂದಿದ್ದೆ. ಆದರೆ ನನ್ನ ಬಗ್ಗ ಹೀಗೆ ಎಲ್ಲ ಕಡೆ ಅಪ್ರಪಚಾರ ಮಾಡಿಕೊಂಡು ಬಂದರು. ನಿರ್ದೇಶಕರು ಮಾಧ್ಯಮಗಳ ಮುಂದೆ ಏನೆಲ್ಲ ಮಾತನಾಡಿದ್ರೂ ನಾನು ನೋಡೇ ಇಲ್ಲ. ನನಗೆ ಬೇಕಾಗಿರಿಲ್ಲ. ಕ್ಲೈ ಮ್ಯಾಕ್ಸ್‌ ಕೂಡ ಆಗ ಶೂಟ್‌ ಆಗಿತ್ತು. ಇಷ್ಟೆಲ್ಲ ಆದಮೇಲೆ ಇದೆಲ್ಲ ಬೇಕಾಗಿತ್ತ ಅನ್ನಿಸತು. ಯಶಸ್ಸಿನ ಬೆಲೆ ನಿರ್ದೇಶಕರಿಗೆ ಗೊತ್ತಿರಲಿಲ್ಲ. ಇದನ್ನು ನಾನು ಬಹಳಷ್ಟು ಬಾರಿ ಗಮನಿಸಿದ್ದೀನಿ, ಬೇಜಾರು ಮಾಡಿಕೊಂಡಿದ್ದೀನಿ. ಅವರಿಗೆ ಹೇಳಿದ್ದೀನಿ ಕೂಡ. ಹಿಂದೆ ಒಂದಿಷ್ಟು ಧಾರಾವಾಹಿಗಳನ್ನು ಮಾಡಿದ್ದೀನಿ. ಮುಂದೆ ಒಂದಿಷ್ಟು ಮಾಡುತ್ತೀನಿ ಅನ್ನುವ ಧೋರಣೆ ಅಲ್ಲಿತ್ತು.” ಎಂದಿದ್ದಾರೆ.

ʻಜೊತೆ ಜೊತೆಯಲಿ ಧಾರಾವಾಹಿ ಪ್ರತಿ ವಾಕ್ಯ ಜನರಿಗೆ ಗೊತ್ತಿತ್ತು. ಅಷ್ಟೂ ಫೇಮಸ್‌ ಆಗಿತ್ತು. ಜೊತೆ ಜೊತೆಯಲಿ ಧಾರಾವಾಗಿ ಆಗುವಾಗ ನಾನು ತುಂಬ ಪರಫೆಕ್ಷನ್‌ ಅಲ್ಲಿ ಇರುತ್ತಿದ್ದೆ. ನನಗೆ ಅಪ್ರೋಚ್‌ ಕೂಡ ಚೆನ್ನಾಗಿ ಇರಬೇಕು. ಮತ್ತೆ ಸಮಯ ಕೂಡ ಸರಿಯಾಗಿರಬೇಕು. ಆದರೆ ಇದೆಲ್ಲ ನೋಡಿ ನನ್ನ ಗುಣ ಇಗೋ ಥರ ಇದೆ ಎಂದರೆ ಅದಕ್ಕೆ ನಾನೇನು ಮಾಡಲಿಕ್ಕೆ ಆಗಲ್ಲ. ಆ ಸೀರಿಯಲ್‌ನಲ್ಲಿ ಅವರದ್ದೇ ಹೆಸರು ಇರೋದು. ಅವಾರ್ಡ್ ತೆಗೆದುಕೊಳ್ಳುವುದು ಕೂಡ ಅವರೇ. ಡೈರೆಕ್ಷನ್ ಮಾಡುವುದಕ್ಕೆ ಬರೋದಿಲ್ಲ ಅವರು. ಸಂಚಿಕೆ ನಿರ್ದೇಶಕರು ಡೈರೆಕ್ಟ್ ಮಾಡುತ್ತಾರೆ.ನಿರ್ದೇಶನವೇ ಮಾಡದೆ ಅದು ಹೇಗೆ ಅವಾರ್ಡ್ ತೆಗೆದುಕೊಳ್ಳುತ್ತಾರೆ?” ʼʼಎಂದಿದ್ದಾರೆ.

ಶೂಟಿಂಗ್‌ ಸೆಟ್‌ನಲ್ಲಿ ನಿರ್ದೇಶಕರಿಗೆ ಅನಿರುದ್ಧ್‌ ಅವರು ನಿಂದಿಸಿ ಸೆಟ್‌ನಿಂದ ಹೊರಗೆ ನಡೆದಿದ್ದಾರೆ. ಸೆಟ್‌ನಲ್ಲಿ ಸ್ಕ್ರಿಪ್ಟ್‌ ವಿಚಾರಕ್ಕೆ ಅವರು ಪದೇಪದೆ ಜಗಳವಾಡುತ್ತಿದ್ದರು. ಇದರಿಂದಾಗಿ ನಿರ್ಮಾಪಕ ಆರೂರು ಜಗದೀಶ್‌ ತೀವ್ರ ನೊಂದಿದ್ದಾರೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಮುಂದೆ ಅನಿರುದ್ಧ ಬಗ್ಗೆ ದೂರು ದಾಖಲಾಗಿತ್ತು. ಆ ಬಳಿಕ ಕಿರುತೆರೆಯಿಂದ ಅನಿರುದ್ಧ ಅವರನ್ನು ಬ್ಯಾನ್‌ ಕೂಡ ಮಾಡಲಾಯ್ತು.

Continue Reading

ಸ್ಯಾಂಡಲ್ ವುಡ್

Kannada New Movie: ‘ಚಿಲ್ಲಿ ಚಿಕನ್​’ ಟ್ರೈಲರ್‌ ಔಟ್‌; ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ!

Kannada New Movie: ಇದೇ ಸಂದರ್ಭದಲ್ಲಿ ಚಿತ್ರದ ನಾಯಕಿ ರಿನಿ, ಮಣಿಪುರ ನಟ ಬಿಜು ತಾಂಜಿಂ, ಆಸಾಂ ಕಲಾವಿದ ಹಿರಾಕ್ ಸೋನಾವಾಲ್, ಉತ್ತರಕಾಂಡದ ನಟ ಜಿಂಪಾ ಭುಟಿಯಾ, ನಿರ್ಮಾಪಕ ದೀಪ್ ಭೀಮಾಜಿಹಾನಿ ತಮ್ಮ ಅನುಭವ ಹಂಚಿಕೊಂಡರು. ಅಂದಂಗೆ ಈಗಾಗಲೇ ಈ ಚಿತ್ರವನ್ನು ನೋಡಿದ ನಟ ರಮೇಶ್‌ ಅರವಿಂದ್, ಹೇಮಂತ್ ರಾವ್ ಹಾಗೂ ಬೇರೆ ಭಾಷೆಯ ಪ್ರಮುಖರು ಮೆಚ್ಚಿದ್ದಾರೆ. ಈ ತಂಡ ಬೆಂಗಳೂರಿನಲ್ಲಿ ಒಡೆದು ಹಾಕಿರುವ ಕಾವೇರಿ ಥಿಯೇಟರ್ ಬಗ್ಗೆ ಸಾಂಗ್ ಮಾಡಿ ಅದನ್ನು ಟ್ರಿಬ್ಯೂಟ್ ಕೊಡುತ್ತಿದೆ.

VISTARANEWS.COM


on

Kannada New Movie Chilli Chicken Official Trailer
Koo

ಬೆಂಗಳೂರು: ಹೋಟೆಲ್ ಕೆಲಸ ಮಾಡುವ (Kannada New Movie) ಐವರು ಹುಡುಗರ ಸುತ್ತ ನಡೆಯುವ ಕಥೆ ಇಟ್ಟುಕೊಂಡು ಪ್ರತೀಕ್ ಪ್ರಜೋಷ್ ಅವರು ನಿರ್ದೇಶಿಸಿರುವ ಚಿತ್ರ `ಚಿಲ್ಲಿ ಚಿಕನ್’. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ನಡೆಯಿತು.

ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಾ ಚೈನೀಸ್ ರೆಸ್ಟೋರೆಂಟ್ ಒಂದನ್ನು ಪ್ರಾರಂಭಿಸಬೇಕೆಂಬ ಕನಸು ಕಾಣುವ ಈ ಹುಡುಗರ ಕನಸಿಗೆ ಏನೆಲ್ಲಾ ಅಡೆ ತಡೆಗಳು ಬರುತ್ತವೆ ಎಂಬುದೇ ಒನ್ ಲೈನ್ ಕಥೆ. ಇದು ಬೆಂಗಳೂರಿನಲ್ಲಿ ನಡೆದ ನೈಜ ಘಟಕ ಆಧಾರಿತ ಸಿನಿಮಾ ಎಂಬುದು ವಿಶೇಷ. ಕಳೆದ ತಿಂಗಳು ಟೀಸರ್ ಬಿಡುಗಡೆ ಮಾಡಿದ್ದ ಈ ಚಿತ್ರತಂಡ ಇದೀಗ ಟ್ರೈಲರ್‌ ಹೊರತಂದಿದೆ. ಈ ಚಿತ್ರದ ಕಥೆ ಹುಟ್ಟಿರುವುದೇ ವಿಶೇಷವಾದ ಸ್ಥಳದಲ್ಲಿ.

ಹೌದು ರೆಸ್ಟೋರೆಂಟ್‌ವೊಂದರಲ್ಲಿ ಕುಳಿತಾಗ ಸಂಗೀತ ನಿರ್ದೇಶಕ ಸಿದ್ಧಾಂತ ಸುಂದರ್ ಅವರಿಗೆ ಈ ಕಾನ್ಸೆಪ್ಟ್ ಹೊಳೆದಿದೆ. ಅದನ್ನು ನಿರ್ದೇಶಕ ಪ್ರತೀಕ್ ಪ್ರಜೋಶ್ ಅವರಿಗೆ ಹೇಳುತ್ತಾರೆ. ಅವರು ಆ ಒಂದು ಲೈನ್ ಕಥೆಯ ಮೇಲೆ ಸಾಕಷ್ಟು ವರ್ಕ್ ಮಾಡಿ ಈಗ ಸಿನಿಮಾ ಮಾಡಿ ಬಿಡುಗಡೆಗೆ ಸಿದ್ದಗೊಳಿಸಿದ್ದಾರೆ.

ಸಿದ್ಧಾಂತ ಸುಂದರ್ ಮಾತನಾಡಿ ʻʻನೈಜ ಘಟನೆಯನ್ನು ಕಥೆ ಮಾಡಿ ಸಿನಿಮಾ ಮಾಡೋದು ಸುಲಭವಲ್ಲ. ಚಿತ್ರ ಚೆನ್ನಾಗಿ ಬಂದಿದೆ.‌ ಚಿತ್ರದಲ್ಲಿ 5 ಹಾಡುಗಳಿದ್ದು ಅವುಗಳಿಗೆ ಮಾರ್ಟಿನ್ ಯೋ ಸಾಹಿತ್ಯ ಬರೆದಿದ್ದಾರೆ. ಇದರಲ್ಲಿ ಒಳ್ಳೇ ಕಥೆ, ಜತೆಗೆ ಮನರಂಜನೆ ಎಲ್ಲಾ ಇದೆʼʼ ಎಂದು ಹೇಳಿದರು.

ನಿರ್ದೇಶಕ ಪ್ರತೀಕ್ ಪ್ರಜೋಶ್. ಮಾತನಾಡಿ ʻʻಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಸದ್ಯದಲ್ಲೇ ರಿಲೀಸಾಗಲಿದೆ. ನಿಮ್ಮಗಳ ಸಹಕಾರವಿರಲಿ ಎಂದಷ್ಟೇ ಹೇಳಿದರು. ಈ ಚಿತ್ರದ ನಾಯಕನಾಗಿ ಬಿ.ವಿ. ಶೃಂಗಾ ಅಭಿನಯಿಸಿದ್ದು, ಪಾತ್ರದ ಬಗ್ಗೆ ಮಾಹಿತಿ ನೀಡುವ ಅವರು ‘ನಾವೆಲ್ಲಾ ಇಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದು, ನಿಮ್ಮಗಳ ಸಹಕಾರ ಬೇಕು. ನಾನಿಲ್ಲಿ ರೆಸ್ಟೋರೆಂಟ್ ಮಾಲಿಕನ ಪಾತ್ರ ಮಾಡಿದ್ದೇನೆ. ಕಥೆ ಕೇಳಿದಾಗ ಇಂದಿನ ಜನರೇಷನ್ ಗೆ ಹೇಳಬೇಕಾದ ವಿಷಯವಿದೆ ಅನಿಸಿತು. ಇದರಲ್ಲಿ ಹ್ಯೂಮರ್, ಫ್ಯಾಮಿಲಿ ಡ್ರಾಮಾವನ್ನು ನಿರ್ದೇಶಕರು ಚನ್ನಾಗಿ ಬಳಸಿದ್ದಾರೆ. ನಂದಿಲ್ಲಿ ಮಿಡ್ಲ್ ಕ್ಲಾಸ್ ಕುಟುಂಬದಿಂದ ಬಂದು, ಚೈನೀಸ್ ರೆಸ್ಟೋರೆಂಟ್ ಮಾಡುವ ಆಸೆಯಿಂದ ಹೇಗೆಲ್ಲಾ ಅಲೆದಾಡುತ್ತಾನೆ ಎಂಬುದನ್ನು ನೋಡಬಹುದು’ʼ ಎಂದರು.

ಇದನ್ನೂ ಓದಿ: Kannada New Movie: ʻರಮೇಶ್ ಸುರೇಶ್‌ʼ ಸಿನಿಮಾದಲ್ಲಿ ಇಬ್ಬರು ನಿರ್ದೇಶಕರು, ಇಬ್ಬರು ನಾಯಕರು ; ಜೂನ್ 21ರಂದು ತೆರೆಗೆ!

ನಟಿ ನಿತ್ಯಶ್ರೀ ಮಾತನಾಡಿ ʻʻನನಗೆ ಕನ್ನಡದಲ್ಲಿ ಇದು 2ನೇ ಸಿನಿಮಾ. ತಮಿಳು, ತೆಲಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಒಂದಿಷ್ಟು ಸಿನಿಮಾ ಮಾಡಿದ್ದೇನೆ. ಚಿತ್ರಕ್ಕೆ ತಂಡದ ಶ್ರಮ ತುಂಬಾ ಇದ್ದು ಎಲ್ಲಾ ಕಲಾವಿದರು ಭಾಷೆ ಕಲೆತು ಅಭಿನಯ ಮಾಡುವ ಜೊತೆಗೆ ಡಬ್ಬಿಂಗ್ ಕೂಡ ಮಾಡಿದ್ದಾರೆ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಚಿತ್ರದ ನಾಯಕಿ ರಿನಿ, ಮಣಿಪುರ ನಟ ಬಿಜು ತಾಂಜಿಂ, ಆಸಾಂ ಕಲಾವಿದ ಹಿರಾಕ್ ಸೋನಾವಾಲ್, ಉತ್ತರಕಾಂಡದ ನಟ ಜಿಂಪಾ ಭುಟಿಯಾ, ನಿರ್ಮಾಪಕ ದೀಪ್ ಭೀಮಾಜಿಹಾನಿ ತಮ್ಮ ಅನುಭವ ಹಂಚಿಕೊಂಡರು. ಅಂದಂಗೆ ಈಗಾಗಲೇ ಈ ಚಿತ್ರವನ್ನು ನೋಡಿದ ನಟ ರಮೇಶ್‌ ಅರವಿಂದ್, ಹೇಮಂತ್ ರಾವ್ ಹಾಗೂ ಬೇರೆ ಭಾಷೆಯ ಪ್ರಮುಖರು ಮೆಚ್ಚಿದ್ದಾರೆ. ಈ ತಂಡ ಬೆಂಗಳೂರಿನಲ್ಲಿ ಒಡೆದು ಹಾಕಿರುವ ಕಾವೇರಿ ಥಿಯೇಟರ್ ಬಗ್ಗೆ ಸಾಂಗ್ ಮಾಡಿ ಅದನ್ನು ಟ್ರಿಬ್ಯೂಟ್ ಕೊಡುತ್ತಿದೆ. ಈ ಗೀತೆಗೆ ಪತ್ರಕರ್ತ ಶ್ರೀಧರ್ ಶಿವಮೊಗ್ಗ ಸಾಹಿತ್ಯ ಬರೆದಿದ್ದಾರೆ.

Continue Reading

ಸ್ಯಾಂಡಲ್ ವುಡ್

Niveditha Gowda: ದುಡ್ಡಿನ ಹಿಂದೆ ಹೋದವರು ಯಾರಂತ ಗೊತ್ತಾಗುತ್ತೆ; ಚಂದನ್‌ಗೆ ನಮ್ಮ ಸಪೋರ್ಟ್‌ ಎಂದ ಪ್ರಶಾಂತ್‌ ಸಂಬರಗಿ!

Niveditha Gowda: ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

VISTARANEWS.COM


on

Niveditha Gowda chandan matters told by Prashanth Sambargi
Koo

ಚಂದನ್‌ ಶೆಟ್ಟಿ (Niveditha Gowda) ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ.  ಬಿಗ್‌ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ “ಜೊತೆಯಾಗಿರಲು ಗಟ್ಟಿಯಾದ ಭರವಸೆ ಬೇಕು, ದೂರಾಗಲು ಚಿಕ್ಕದಾದ ಸಂಶಯ ಸಾಕು’ಎಂದು ಚಂದನ್‌ ಕುರಿತಾಗಿ ಬರೆದುಕೊಂಡಿದ್ದರು. ಇದೀಗ ಚಂದನ್‌ ಹಾಗೂ ನಿವೇದಿತಾ ಬಗ್ಗೆ ಯೂಟ್ಯೂಬ್ ಚಾನೆಲ್‌ವೊಂದರ ಸಂದರ್ಶನದಲ್ಲಿ ಕೆಲವು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ʻʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದಿದ್ದಾರೆ.

ಪ್ರಶಾಂತ್‌ ಸಂಬರಗಿ ಮಾತನಾಡಿ ʻʻನನಗೆ ಚಂದನ್‌ ಆತ್ಮೀಯ ಗೆಳೆಯ. ಚಂದನ್‌ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’  ಸಿನಿಮಾದಲ್ಲಿ ಚಂದನ್‌ ನಾಯಕ. ನಾನು ಅದರಲ್ಲಿ ಪೊಲೀಸ್‌ ಪಾತ್ರ ಮಾಡಿದ್ದೇನೆ. 15 ದಿನಗಳ ಕಾಲ ಒಟ್ಟಿಗೆ ಶೂಟಿಂಗ್‌ ಮಾಡಿದ್ದೇವೆ. ಖುಷಿ ಪಟ್ಟಿದ್ದೇವೆ, ಹೊಡೆದಾಡಿಕೊಂಡಿದ್ದೇವೆ,, ಮಜಾ ಮಾಡಿದ್ದೇವೆ. ಚಂದನ್‌ ಹಾಗೂ ನಿವೇದಿತಾ ಸ್ಯಾಂಡಲ್‌ವುಡ್‌ ಪವರ್‌ ಕಪಲ್‌. ಆದರೆ ಏಕಾಏಕಿ ಅವರು ದೂರ ಆದರು. ಎಲ್ಲರೂ ಈ ವಿಷಯ ಕೇಳಿ ಶಾಕ್‌ ಆದರು. ಆದರೆ ನನಗೆ ಈ ವಿಚಾರ ಹೊಸದಲ್ಲ. ಒಂದು ವರ್ಷದ ಹಿಂದೆಯೇ ಗೊತ್ತಿತ್ತುʼʼ ಎಂದರು.

ʻʻಚಂದನ್‌ ದಸರಾದಲ್ಲಿ ಪ್ರಪೋಸ್‌ ಮಾಡಿರುವ ಬಗ್ಗೆ ನನ್ನ ಧಿಕ್ಕಾರ ಕೂಡ ಇತ್ತು. ಆದರೂ ಕೊನೆಗೆ ಅವೆಲ್ಲ ಕ್ಷಮಿಸಿ ಮುಂದೆ ಒಳ್ಳೆಯದಾಗಲಿ ಎಂದು ಹಾರೈಸಿದೆ. ಈ ತಿಂಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಪ್ರಮೋಷನ್‌ಗೆ ಚಂದನ್‌ ಬರಲಿಲ್ಲ. ಹಲವು ಪ್ರಮೋಷನ್‌ಗೆ ಬರಲಿಲ್ಲ. 6 ತಿಂಗಳ ಹಿಂದೆಯೇ ಚಂದನ್‌ ಬಗ್ಗೆ ಹಿಂಟ್‌ ಸಿಕ್ಕಿತ್ತು. ಚಂದನ್‌ ಮನಸ್ಥಿತಿ ಸರಿಯಿಲ್ಲ ಎಂದು. ಒಂದು ಪ್ರಪೋಷನ್‌ ಲಾಂಚ್‌ಗೆ ಮನೆಯಲ್ಲಿ ಹಾಕಿರುವ ಡ್ರೆಸ್‌ ಹಾಕಿಕೊಂಡೇ ಚಂದನ್‌ ಬಂದಿದ್ದರು. ಇದಕ್ಕೆ ನಮ್ಮ ಭಿನ್ನಾಭಿಪ್ರಾಯ ಕೂಡ ಇತ್ತು. ನೀವು ಹೀರೊ ಆಗಿ ಹೀರೊ ತರಹ ಪ್ರೆಸೆಂಟ್‌ ಆಗಬೇಕು. ಈ ತರಹ ಅವತಾರದಲ್ಲಿ ಬರೋದು ಸರಿಯಲ್ಲ ಎಂದು ನಿರ್ದೇಶಕರು ಕೇಳಿದಾಗ, ಈ ವಿಚಾರ ಬಹಿರಂಗಪಡಿಸಿದ್ದರು. ನಂದು ಮತ್ತೆ ನಿವೇದಿತಾ ವಿಷನ್‌ ಮ್ಯಾಚ್‌ ಆಗ್ತಿಲ್ಲ. ಒಟ್ಟಿಗೆ ಬದುಕಲು ಆಗ್ತಿಲ್ಲ. ತುಂಬ ಸಮಸ್ಯೆಯಲ್ಲಿದ್ದೇನೆ. ಮುಂದೆ ಗೊತ್ತಾಗತ್ತೆ ಎಂದು ಚಂದನ್‌ ನಿರ್ದೇಶಕರ ಹತ್ತಿರ ಹೇಳಿಕೊಂಡಿದ್ದರು ʼ ಎಂದರು.

ಇದನ್ನೂ ಓದಿ: Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

ʻʻಚಂದನ್ ಅಮೆರಿಕಾಗೆ ಮ್ಯೂಸಿಕ್ ಕಾರ್ಯಕ್ರಮಕ್ಕೆ ಹೋಗಿದ್ದ. ಆಗ ನಿವೇದಿತಾ ಹೋಗಲಿಲ್ಲ. ನನ್ನ ಮೊದಲನೇ ಪ್ರಶ್ನೆ ಇದ್ದಿದ್ದು ಯಾಕೆ ಅವಳನ್ನು ಕರೆದುಕೊಂಡು ಹೋಗುತ್ತಿಲ್ಲ ಅಂತ. ಆದರೆ, ಬೇರೆ ಟ್ರಿಪ್‌ಗೆ ನೀನು ಕರ್ಕೊಂಡು ಹೋಗಿಲ್ಲ. ಬೇರೆಯವರು ಕರ್ಕೊಂಡು ಹೋಗ್ತಾರೆ. ನೀನು ನಿನ್ನ ಎಮೋಷನ್ಸ್‌ಗೆ ಸ್ಪಂದಿಸಿಲ್ಲ ಅಂದರೆ, ಬೇರೆ ಯಾರೋ ಕೊಡ್ತಾರೆ. ನೀನು ನಿನ್ನ ವಸ್ತುವನ್ನು ಕಾಪಾಡಿಕೋ ಅಂತ ಅನೇಕ ಬಾರಿ ಹೇಳಿದ್ದೇನೆ” ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

ʻʻನಿನ್ನೆ ನಗ್ತಾನೇ ಬಂದು ಹೋದರು. ಆದರೆ ಚಂದನ್‌ಗೆ ನೋವಾಗಿದೆ. ಇರುವ ಸ್ವಿಫ್ಟ್ ಕಾರು ಬಿಟ್ಟು ಬೆನ್ಜ್ ಕಾರು ಬೇಕು ಅಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ಬೆನ್ಜ್ ಹಿಂದೆ ಹೋಗಿರುವಂತವರು, ದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಅಂತ ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆ. ಚಂದನ್‌ಗೆ ನಮ್ಮ ಬ್ರದರ್ಲಿ ಸಪೋರ್ಟ್, ಎಮೋಷನಲ್ ಸಪೋರ್ಟ್ ಇದೆʼʼಎಂದರು ಪ್ರಶಾಂತ್‌ ಸಂಬರಗಿ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

Continue Reading

ಸ್ಯಾಂಡಲ್ ವುಡ್

Uttarakaanda Movie: ‘ಉತ್ತರಕಾಂಡ’ದ ವೀರವ್ವ ಪಾತ್ರದಲ್ಲಿ ಭಾವನಾ‌ ಮೆನನ್!

ಈ ವರ್ಷದ ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಉತ್ತರಕಾಂಡʼ (Uttarakaanda Movie)ವೂ ಒಂದು. ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌, ಡಾಲಿ‌ ಧನಂಜಯ್‌ ಮತ್ತೊಮ್ಮೆ ತೆರೆ ಮೇಲೆ ಒಂದಾಗುತ್ತಿರುವ ಕಾರಣಕ್ಕೆ ಈ ಸಿನಿಮಾ ಈಗಾಗಲೇ ಕುತೂಹಲ ಕೆರಳಿಸಿದೆ. ಏ. 15 ಸಿನಿಮಾದ ಶೂಟಿಂಗ್‌ ಆರಂಭಿಸಲಾಗಿದೆ.ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ.
ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ.

VISTARANEWS.COM


on

Uttarakaanda Movie in bhavana menon
Koo

ಬೆಂಗಳೂರು: ಬಹು ನಿರೀಕ್ಷಿತ ಚಿತ್ರ “ಉತ್ತರಕಾಂಡ” (Uttarakaanda Movie) ಇದೀಗ ಮತ್ತೊಮ್ಮೆ ಸುದ್ದಿ ಮಾಡಿದೆ.
ಬಹುಭಾಷಾ‌ ತಾರೆ ಭಾವನಾ ಮೆನನ್ ಉತ್ತರಕಾಂಡ ಚಿತ್ರದಲ್ಲಿ “ವೀರವ್ವ” ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭಾವನಾ‌ ಅವರ‌ ಹುಟ್ಟುಹಬ್ಬದ ಅಂಗವಾಗಿ‌ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದೆ. ಭಾವನಾ ಅವರನ್ನು ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಅವರೊಡನೆ ತೆರೆಯ ಮೇಲೆ ಕಾಣಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

ರೋಹಿತ್ ಪದಕಿ ನಿರ್ದೇಶನದ “ಉತ್ತರಕಾಂಡ” ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್, ದಿಗಂತ್ ಮಂಚಾಲೆ, ರಂಗಾಯಣ ರಘು, ಚೈತ್ರ ಆಚಾರ್,ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ.
ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ.

ಈ ವರ್ಷದ ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಉತ್ತರಕಾಂಡʼ (Uttarakaanda Movie)ವೂ ಒಂದು. ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌, ಡಾಲಿ‌ ಧನಂಜಯ್‌ ಮತ್ತೊಮ್ಮೆ ತೆರೆ ಮೇಲೆ ಒಂದಾಗುತ್ತಿರುವ ಕಾರಣಕ್ಕೆ ಈ ಸಿನಿಮಾ ಈಗಾಗಲೇ ಕುತೂಹಲ ಕೆರಳಿಸಿದೆ. ಏ. 15 ಸಿನಿಮಾದ ಶೂಟಿಂಗ್‌ ಆರಂಭಿಸಲಾಗಿದೆ.

ಇದನ್ನೂ ಓದಿ: Uttarakaanda Movie:  ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ ಕುಮಾರ್​

ಏ.18ರಂದು ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿತ್ತು. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ನಾಯಕಿ ಪಾತ್ರದಿಂದ ಹೊರ ಬಂದಿದ್ದ ರಮ್ಯಾ
ಚಿತ್ರತಂಡ ಆರಂಭದಲ್ಲಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರನ್ನು ಹೆಸರಿಸಿತ್ತು. ಮಾತ್ರವಲ್ಲ ರಮ್ಯಾ ಚಿತ್ರದ ಮುಹೂರ್ತದಲ್ಲಿಯೂ ಭಾಗವಹಿಸಿದ್ದರು. ಆದರೆ ಇತ್ತೀಚೆಗೆ ಅವರು ಚಿತ್ರತಂಡದಿಂದ ಹೊರಬಂದು ಶಾಕ್‌ ನೀಡಿದ್ದರು. ಕಳೆದ ವರ್ಷ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದಿದ್ದ ರಮ್ಯಾ ಕೆಲವು ದಿನಗಳ ಹಿಂದೆ ʼಉತ್ತರಕಾಂಡʼ ಸಿನಿಮಾದಿಂದಲೂ ಹೊರ ಬಂದಿದ್ದರು. ʼ‘ಡೇಟ್ಸ್​ ಕೊರತೆಯಿಂದಾಗಿ ನಾನು ʼಉತ್ತರಕಾಂಡʼದಲ್ಲಿ ಕೆಲಸ ಮಾಡುತ್ತಿಲ್ಲ (ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ). ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ʼ ಎಂದು ರಮ್ಯಾ ಕಾರಣ ತಿಳಿಸಿದ್ದರು. ಆ ಮೂಲಕ ಅನೇಕ ವರ್ಷಗಳ ಬಳಿಕ ಅವರನ್ನು ತೆರೆ ಮೇಲೆ ನೋಡಬೇಕೆಂಬ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

ವಿಳಂಬಕ್ಕೆ ಕಾರಣವೇನು?
ʼʼಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Continue Reading
Advertisement
Anirudh Jatkar again rise on voice jote joteyali serial issue
ಸ್ಯಾಂಡಲ್ ವುಡ್8 mins ago

Anirudh Jatkar: ʻಜೊತೆ ಜೊತೆಯಲಿ’ ಧಾರಾವಾಹಿಯ ವಿವಾದದ ಬಗ್ಗೆ ಬೇಸರ ಹೊರ ಹಾಕಿದ ಅನಿರುದ್ಧ್!

NEET UG
ಪ್ರೇಮಿಗಳ ದಿನಾಚರಣೆ21 mins ago

NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

Personality Development
ಪ್ರಮುಖ ಸುದ್ದಿ23 mins ago

Personality Development: ಈ 10 ಸೂತ್ರ ಪಾಲಿಸಿದರೆ ನೆಮ್ಮದಿಯ ಬದುಕು ಗ್ಯಾರಂಟಿ!

reasi terror attack
ಪ್ರಮುಖ ಸುದ್ದಿ48 mins ago

Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

T20 World Cup
Latest1 hour ago

T20 World Cup : ಪಾಕಿಸ್ತಾನಕ್ಕೆ ಸಂಕಷ್ಟ ತಂದಿಟ್ಟ ಭಾರತ; ಸೂಪರ್ 8 ಹಂತ ಪ್ರವೇಶವೂ ಕಷ್ಟ!

Kangana Ranaut Looks Gorgeous In A White Saree
ಬಾಲಿವುಡ್1 hour ago

Kangana Ranaut: ಪ್ರಮಾಣ ವಚನ ಸಮಾರಂಭದಲ್ಲಿ ಬಿಳಿ ಸೀರೆಯಲ್ಲಿ ಮಿಂಚಿದ ಕಂಗನಾ!

IND vs PAK
ಪ್ರಮುಖ ಸುದ್ದಿ1 hour ago

IND vs PAK : ಪಾಕಿಸ್ತಾನದ ಬೌಲರ್​ ವಿರುದ್ಧ ವಿಶೇಷ ದಾಖಲೆ ಮಾಡಿದ ರೋಹಿತ್ ಶರ್ಮಾ

IND vs PAK
ಕ್ರೀಡೆ2 hours ago

IND vs PAK : ಭಾರತಕ್ಕೆ ಗೆಲುವಿನ ಚಾನ್ಸ್ ಕೇವಲ ಶೇ. 8, ಪಾಕ್ ಗೆ ಶೇ.92 ಇತ್ತು; ಆದರೆ…

Poonam Pandey making cake with ice cream with hot look
ಬಾಲಿವುಡ್2 hours ago

Poonam Pandey: ಪೂನಂ ಪಾಂಡೆಯ ರೆಸಿಪಿಗಿಂತ ಏಪ್ರನ್ ಮೇಲೆ ನೆಟ್ಟಿಗರ ಕಣ್ಣು; ರಸಿಕರ ಕಣ್ಣರಳಿಸಿದ ಹಾಟ್‌ ಬೆಡಗಿ!

Vastu Tips
ಧಾರ್ಮಿಕ2 hours ago

Vastu Tips: ನೆಮ್ಮದಿಯಿಂದ ನಿದ್ದೆ ಮಾಡಬೇಕೆ? ಈ ವಾಸ್ತು ನಿಯಮ ಪಾಲಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌