Sahil Khan: ಪೊಲೀಸರಿಂದ ತಪ್ಪಿಸಿಕೊಳ್ಳಲು 1,800 ಕಿ.ಮೀ ಪ್ರಯಾಣಿಸಿದ್ದ ನಟ ಸಾಹಿಲ್ ಖಾನ್! - Vistara News

ಬಾಲಿವುಡ್

Sahil Khan: ಪೊಲೀಸರಿಂದ ತಪ್ಪಿಸಿಕೊಳ್ಳಲು 1,800 ಕಿ.ಮೀ ಪ್ರಯಾಣಿಸಿದ್ದ ನಟ ಸಾಹಿಲ್ ಖಾನ್!

Sahil Khan: ಏಪ್ರಿಲ್ 25 ರಂದು ಸಾಹಿಲ್ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ನಟ ಸಾಹಿಲ್ ಖಾನ್ ಓಡಿ ಹೋಗಲು ಪ್ರಯತ್ನಿಸಿದ್ದರು ಎಂದು ವರದಿಯಾಗಿದೆ. ಗುರುತು ಹಿಡಿಯಬಾರದೆಂದು ತಪ್ಪಿಸಿಕೊಳ್ಳಲು, ಖಾನ್ ವೇಷ ಬದಲಾಯಿಸಿಕೊಂಡಿದ್ದರಂತೆ. ಸ್ಕಾರ್ಫ್‌ ಧರಿಸಿ ಪ್ರಯಾಣ ಬೆಳೆಸಿದ್ದರು ಎಂದು ವರದಿಯಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ಸಾಹಿಲ್ ಖಾನ್ 4 ದಿನಗಳಲ್ಲಿ 1,800 ಕಿಮೀ ಪ್ರಯಾಣಿಸಿದ್ದಾರೆ.

VISTARANEWS.COM


on

Sahil Khan Travelled 1,800 km In 4 Days To Avoid Arrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುಂಚೆ ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ಹರಸಾಹಸ ಪಟ್ಟಿದ್ದರಂತೆ. ನಾಲ್ಕು ದಿನಗಳಲ್ಲಿ ಐದು ರಾಜ್ಯಗಳಂತೆ 1,800 ಕಿ. ಮೀ ಟ್ರಾವೆಲ್‌ ಮಾಡಿದ್ದಾರೆ ಎಂದು ವರದಿಯಾಗಿದೆ. ಕೊನೆಗೂ ಪೊಲೀಸರು ನಟನನ್ನು ಟ್ರ್ಯಾಕ್‌ ಮಾಡಿ ಛತ್ತೀಸ್‌ಗಢದ ಜಗದಾಲ್‌ಪುರದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಏಪ್ರಿಲ್ 25ರಂದು ಸಾಹಿಲ್ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ನಟ ಓಡಿ ಹೋಗಲು ಪ್ರಯತ್ನಿಸಿದ್ದರು ಎಂದು ವರದಿಯಾಗಿದೆ. ಗೋವಾಗೆ ಮೊದಲು ನಟ ಹೊರಟು ಅಲ್ಲಿಂದ ಮಹಾರಾಷ್ಟ್ರ ಬಳಿಕ ಕರ್ನಾಟಕದ ಹುಬ್ಬಳ್ಳಿಗೆ ತೆರಳಿ ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದರು. ಗುರುತು ಹಿಡಿಯಬಾರದೆಂದು ತಪ್ಪಿಸಿಕೊಳ್ಳಲು, ಖಾನ್ ವೇಷ ಬದಲಾಯಿಸಿಕೊಂಡಿದ್ದರಂತೆ. ಸ್ಕಾರ್ಫ್‌ ಧರಿಸಿ ಪ್ರಯಾಣ ಬೆಳೆಸಿದ್ದರು ಎಂದು ವರದಿಯಾಗಿದೆ.

ಇಷ್ಟಾದರೂ ಹೈದರಾಬಾದ್‌ನಲ್ಲಿರುವಾಗ ಪೊಲೀಸರು ಅವರ ಸ್ಥಳವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಕೊನೆಗೂ ಛತ್ತೀಸ್‌ಗಢದ ಜಗದಲ್‌ಪುರದ ಆರಾಧ್ಯ ಇಂಟರ್‌ನ್ಯಾಶನಲ್ ಹೋಟೆಲ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ಸಾಹಿಲ್ ಖಾನ್ 4 ದಿನಗಳಲ್ಲಿ 1,800 ಕಿಮೀ ಪ್ರಯಾಣಿಸಿದ್ದಾರೆ.

ಇದನ್ನೂ ಓದಿ: Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

ಮುಂಬೈ ಪೊಲೀಸರು 72 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದಾರೆ. ನಟನನ್ನು ಬಂಧಿಸಿದ ಬಳಿಕ ಪೊಲೀಸರು ನಟನಿಂದ ಎರಡು ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಮುಂಬೈ ನ್ಯಾಯಾಲಯ ಖಾನ್ ಅವರನ್ನು ಮೇ 1 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಏನಿದು ಪ್ರಕರಣ?

ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಪೂರ್ವ ಬಂಧನದ ಜಾಮೀನು ಅರ್ಜಿಯನ್ನು (pre-arrest bail was rejected ) ತಿರಸ್ಕರಿಸಿತ್ತುಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ ಪೊಲೀಸರು ಸಾಹಿಲ್ ಅವರು ಆ್ಯಪ್‌ನ ಸಹ ಮಾಲೀಕರು ಆಗಿದ್ದರು ಎಂದು ಹೇಳಿದ್ದರು.

ನಟ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿತ್ತು. ಮಾತ್ರವಲ್ಲ ನಟ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು. ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

2023ರಲ್ಲಿ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗ ಡಿಸೆಂಬರ್ 15 ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿತ್ತು. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೇ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

India Highest Paid Item Girl : ಅತಿ ಹೆಚ್ಚು ಸಂಭಾವನೆ ಪಡೆಯುವ ಐಟಂ ಗರ್ಲ್ ಯಾರು? ಮಲೈಕಾ, ಸನ್ನಿ, ನೋರಾ ಅಲ್ವೇ ಅಲ್ಲ!

India Highest Paid Item Girl : ಈ ಹಿಂದೆ ಕೆಲವೇ ಕೆಲವು ನಟಿಯರು ಮಾತ್ರ ಅದರಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಈಗ ಟಾಪ್ ನಟಿಯರೂ ಈ ರೀತಿಯ ಹಾಡಿಗೆ ಹೆಜ್ಜೆ ಹಾಕುತ್ತಾರೆ. ಐಟಂ ಸಾಂಗ್‌ಗಳನ್ನು ಮಾಡಲು ಹೀರೋಗಿಂತ ಹೆಚ್ಚಿನ ಸಂಭಾವನೆ ಪಡೆದ ಉದಾಹರಣೆ ಸಾಕಷ್ಟಿದೆ. ಕರೀನಾ ಕಪೂರ್ ಐಟಂ ಡ್ಯಾನ್ಸ್​ಗೆ 1.5 ಕೋಟಿ ರೂಪಾಯಿ ಪಡೆಯುತ್ತಾರೆ. ತಮನ್ನಾ ಭಾಟಿಯಾ ಒಂದು ಹಾಡಿಗೆ ರೂ. 1 ಕೋಟಿ ರೂ., ಕತ್ರಿನಾ ಕೈಫ್ ವಿಶೇಷ ಸಾಂಗ್​ನಲ್ಲಿ ಕಾಣಿಸಿಕೊಳ್ಳಲು 2 ಕೋಟಿ ರೂಪಾಯಿ ಪಡೆಯುತ್ತಾರೆ.

VISTARANEWS.COM


on

India Highest Paid Item Girl not Malaika Nora, Katrina, Sunny
Koo

ಬೆಂಗಳೂರು: ಮಲೈಕಾದಿಂದ ಹಿಡಿದು ಸನ್ನಿ ಲಿಯೋನ್‌ವರೆಗೆ (India Highest Paid Item Girl ) ಅನೇಕ ನಟಿಯರು ಚಿತ್ರಗಳಲ್ಲಿ ಐಟಂ ಹಾಡುಗಳನ್ನು ಮಾಡಿದ್ದಾರೆ. 4ರಿಂದ 5 ನಿಮಿಷದ ಹಾಡಿಗೆ ಹೆಜ್ಜೆ ಹಾಕುವುದಕ್ಕೆ ಕೋಟಿಗಟ್ಟಲೆ ಸಂಭಾವನೆ ಪಡೆದ ಅನೇಕ ಹೀರೋಯಿನ್​ಗಳು ಇದ್ದಾರೆ. ಕಳೆದ ಕೆಲ ವರ್ಷಗಳಲ್ಲಿ ಐಟಂ ಸಾಂಗ್‌ಗಳು ಸಿನಿಮಾದಲ್ಲಿ ವಿಶೇಷ ಸ್ಥಾನ ಪಡೆದುಕೊಳ್ಳುತ್ತಿವೆ. ಈ ಹಿಂದೆ ಕೆಲವೇ ಕೆಲವು ನಟಿಯರು ಮಾತ್ರ ಅದರಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಈಗ ಟಾಪ್ ನಟಿಯರೂ ಈ ರೀತಿಯ ಹಾಡಿಗೆ ಹೆಜ್ಜೆ ಹಾಕುತ್ತಾರೆ. ಐಟಂ ಸಾಂಗ್‌ಗಳನ್ನು ಮಾಡಲು ಹೀರೋಗಿಂತ ಹೆಚ್ಚಿನ ಸಂಭಾವನೆ ಪಡೆದ ಉದಾಹರಣೆ ಸಾಕಷ್ಟಿದೆ.

ಐಟಂ ಸಾಂಗ್‌ಗೆ ಹೆಜ್ಜೆ ಹಾಕುವವರ ಸಂಭಾವನೆ ಗಗನಕ್ಕೇರಿದೆ. ಈ ಒಬ್ಬ ‘ಐಟಂ ಗರ್ಲ್’ ಈಗ ಅನೇಕ ನಾಯಕ ನಟಿಯರಿಗಿಂತ ಹೆಚ್ಚು ಸಂಭಾವನೆ ಪಡೆಯುತ್ತಾರೆ. ಪುಷ್ಪಾ ದಿ ರೈಸ್‌ ಸಿನಿಮಾದ ಊ ಅಂಟವಾ ಹಾಡಿಗೆ ಚಿತ್ರದಲ್ಲಿ ಐದು ನಿಮಿಷಗಳ ಕಾಲ ಕಾಣಿಸಿಕೊಂಡಿದ್ದಕ್ಕಾಗಿ ದಕ್ಷಿಣದ ಸೂಪರ್‌ಸ್ಟಾರ್ ಸಮಂತಾ ರುತ್ ಪ್ರಭು 5 ಕೋಟಿ ರೂ. ಸಂಭಾವನೆ ಪಡೆದುಕೊಂಡರು. ಭಾರತೀಯ ಚಿತ್ರರಂಗದ ಯಾವ ನಟಿಯರೂ ಈ ರೀತಿ ಹಣ ಗಳಿಕೆ ಮಾಡಿಲ್ಲ. ಐಟಂ ಸಾಂಗ್‌ಗಳಿಗಾಗಿ ಹೆಚ್ಚು ಸಂಭಾವನೆ ಪಡೆಯುವ ಇತರ ನಟಿಯರೆಂದರೆ ನೋರಾ ಫತೇಹಿ ಮತ್ತು ಸನ್ನಿ ಲಿಯೋನ್. ಇಬ್ಬರೂ ಪ್ರತಿ ಹಾಡಿಗೆ 2 ಕೋಟಿ ರೂ ಪಡೆದುಕೊಳ್ಳುತ್ತಿದ್ದಾರೆ. ಒಂದು ಕಾಲದಲ್ಲಿ ಬಾಲಿವುಡ್ ಐಟಂ ಸಾಂಗ್‌ಗಳ ರಾಣಿ ಮಲೈಕಾ ಅರೋರಾ ಇಂದು 50 ಲಕ್ಷದಿಂದ 1 ಕೋಟಿ ರೂ. ಚಾರ್ಚ್‌ ಮಾಡುತ್ತಾರೆ.

ವಿಚಿತ್ರವೆಂದರೆ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಅವರು ಚಿತ್ರದಲ್ಲಿ ನಟಿಸಿದ್ದಕ್ಕಾಗಿ ಕಡಿಮೆ ಸಂಭಾವನೆ ಪಡೆದುಕೊಂಡಿದ್ದಾರೆ. ಪುಷ್ಪಾ ದಿ ರೈಸ್ ಚಿತ್ರದಲ್ಲಿ ಶ್ರೀವಲ್ಲಿ ಪಾತ್ರಕ್ಕಾಗಿ ರಶ್ಮಿಕಾ ಕೇವಲ 2 ಕೋಟಿ ರೂ. ಸಂಭಾವನೆ ಪಡೆದರೆ, ಜಾನ್ವಿ ಕಪೂರ್, ತಮನ್ನಾ ಭಾಟಿಯಾ ಮತ್ತು ಪೂಜಾ ಹೆಗ್ಡೆಯಂತಹ ಇತರ ಜನಪ್ರಿಯ ನಟಿಯರೆಲ್ಲರೂ ಪ್ರತಿ ಚಿತ್ರಕ್ಕೆ 5 ಕೋಟಿ ರೂ.ಗಿಂತ ಕಡಿಮೆ ಸಂಭಾವನೆ ಪಡೆಯುತ್ತಾರೆ ಕೇವಲ ಒಂದು ಹಾಡಿಗೆ ಸಮಂತಾ ಗಳಿಸಿದ ಗಳಿಸಿದ್ದು ಬರೋಬ್ಬರಿ 5 ಕೋಟಿ ರೂ.

ಇದನ್ನೂ ಓದಿ: Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

ಕರೀನಾ ಕಪೂರ್ ಐಟಂ ಡ್ಯಾನ್ಸ್​ಗೆ 1.5 ಕೋಟಿ ರೂಪಾಯಿ ಪಡೆಯುತ್ತಾರೆ. ತಮನ್ನಾ ಭಾಟಿಯಾ ಒಂದು ಹಾಡಿಗೆ ರೂ. 1 ಕೋಟಿ ರೂ., ಕತ್ರಿನಾ ಕೈಫ್ ವಿಶೇಷ ಸಾಂಗ್​ನಲ್ಲಿ ಕಾಣಿಸಿಕೊಳ್ಳಲು 2 ಕೋಟಿ ರೂಪಾಯಿ ಪಡೆಯುತ್ತಾರೆ. ಸಮಂತಾ ಆರಂಭದಲ್ಲಿ ಐಟಂ ಸಾಂಗ್‌ ಮಾಡಲು ಹಿಂಜರಿದಿದ್ದರು. ನಂತರ ಒಪ್ಪಿ ಖುಷಿಯಿಂದ ಡ್ಯಾನ್ಸ್ ಮಾಡಿದರು ಎಂದು ವರದಿಯಾಗಿದೆ.

Continue Reading

ಸಿನಿಮಾ

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

ಬಾಲಿವುಡ್ ನ ಆದರ್ಶ ಜೋಡಿಯಲ್ಲಿ ಶಾರುಖ್ ಮತ್ತು ಗೌರಿ ಅವರೂ ಸೇರಿದ್ದಾರೆ. ಈ ಜೋಡಿ ಮದುವೆಯಾಗಿ 33 ವರ್ಷಗಳಾಗಿದ್ದು ಮೂವರು ಮಕ್ಕಳ ಪೋಷಕರಾಗಿದ್ದರೆ. ಧರ್ಮದ ವಿಚಾರದಲ್ಲಿ ಗೌರಿ (Gauri Khan) ಈಗಲೂ ಹಿಂದುವಾಗಿಯೇ ಉಳಿದಿದ್ದಾರೆ. ಇದಕ್ಕೆ ಕಾರಣ ಏನೆಂಬುದನ್ನು ಅವರೇ ಹೇಳಿದ್ದಾರೆ.

VISTARANEWS.COM


on

By

Gauri Khan
Koo

ಬಾಲಿವುಡ್ ನ (bollywood) ಆದರ್ಶ ದಂಪತಿಗಳ ಸಾಲಿನಲ್ಲಿ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ (Shah Rukh Khan), ಗೌರಿ ಖಾನ್ (Gauri Khan) ದಂಪತಿಯೂ ಇದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರಿಬ್ಬರ ನಡುವಿನ ಪ್ರೀತಿ ಮತ್ತು ಹೊಂದಾಣಿಕೆ. ಇದು ಅವರ ಅಭಿಮಾನಿಗಳ ಮನಸ್ಸನ್ನು ಗೆಲ್ಲುವಂತೆ ಮಾಡಿದೆ.

ಅಭಿಮಾನಿಗಳನ್ನು ಪ್ರೀತಿ, ವಾತ್ಸಲ್ಯದಿಂದ ಕಾಣುವ ಈ ದಂಪತಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಾನು ನಿಮ್ಮೊಂದಿಗೆ ಬೆಳೆಯಲು ಬಯಸುತ್ತೇನೆ ಎಂದು ಹೇಳಿ ಮತ್ತೆ ಎಲ್ಲರ ಮನ ಗೆದ್ದಿದ್ದಾರೆ.

ಗೌರಿ ಮತ್ತು ಶಾರುಖ್ ಖಾನ್ ಅವರ ಧರ್ಮ ಬೇರೆಬೇರೆಯಾದರೂ ಇದು ಅವರಿಬ್ಬರ ನಡುವಿನ ಪ್ರೀತಿಗೆ ಅಡ್ಡಿಯಾಗಲಿಲ್ಲ. ಮದುವೆಯ ಮೊದಲು ಕೆಲವು ತೊಂದರೆಗಳು ಎದುರಾದರೂ ಮದುವೆಯ ಬಳಿಕ ದಂಪತಿ ಎಂದರೆ ಹೀಗಿರಬೇಕು ಎನ್ನುವಷ್ಟು ಇವರಿಬ್ಬರೂ ಮಾದರಿಯಾಗಿದ್ದಾರೆ.

ಕಿಂಗ್ ಖಾನ್ ಮೊದಲಿನಿಂದಲೂ ತನ್ನ ರಾಣಿಗೆ ಆದರ್ಶ ಪತಿ. ಶಾರುಖ್ ಖಾನ್ ಮುಸ್ಲಿಂ ಆಗಿರುವುದರಿಂದ ಮದುವೆಯಾದ ಬಳಿಕ ಗೌರಿ ಮುಸ್ಲಿಂ ಆಗಿ ಮತಾಂತರವಾಗುತ್ತಾರೆ ಎನ್ನುವ ಹೇಳಿಕೆಗಳು ಜೋರಾಗಿ ಕೇಳಿ ಬಂದಿತ್ತು. ಹೀಗಾಗಿ ಅವರಿಗೂ ಪದೇಪದೇ ತಾವು ಮುಸ್ಲಿಂ ಆಗಿ ಮತಾಂತರಗೊಳ್ಳುವುದಿಲ್ಲ ಎಂದು ಹೇಳಬೇಕಾದ ಸಂದರ್ಭಗಳು ಎದುರಾಗಿತ್ತು.

ಇತ್ತೀಚೆಗೆ ಕರಣ್ ಜೋಹರ್ ಅವರ ಕಾರ್ಯಕ್ರಮ ಕಾಫಿ ವಿತ್ ಕರಣ್‌ನಲ್ಲಿಹೃತಿಕ್ ರೋಷನ್ ಅವರ ಪತ್ನಿ ಸುಸ್ಸಾನ್ನೆ ಖಾನ್ ಅವರೊಂದಿಗೆ ಗೌರಿ ಆಗಮಿಸಿದ್ದರು. ಅಲ್ಲಿ ಗೌರಿ ಮುಸ್ಲಿಂ ಆಗಿ ಮತಾಂತರಗೊಳ್ಳದಿರುವ ಕುರಿತು ಚರ್ಚೆ
ನಡೆದಿತ್ತು.

ಯಾಕೆ ಮತಾಂತರವಾಗಲಿಲ್ಲ?

ಶಾರುಖ್ ಖಾನ್ ಅವರ ಧರ್ಮಕ್ಕೆ ನಾನು ಮತಾಂತರವಾಗುವುದಿಲ್ಲ ಎಂದು ಗೌರಿ ಖಾನ್ ಹೇಳಿರುವ ಹಳೆಯ ವಿಡಿಯೋ ಈಗ ಮತ್ತೆ ಸದ್ದು ಮಾಡಿದೆ. ಇದರಲ್ಲಿ ಅವರು ತಾವು ಇಸ್ಲಾಂ ಧರ್ಮಕ್ಕೆ ಮತಾಂತರವಾಗದೇ ಉಳಿಯಲು ಕಾರಣವನ್ನೂ ಕೊಟ್ಟಿದ್ದಾರೆ.

ನಮ್ಮಿಬ್ಬರ ಮಧ್ಯೆ ಸಮತೋಲನವಿದೆ. ನಾನು ಶಾರುಖ್ ಅವರ ಧರ್ಮವನ್ನು ಗೌರವಿಸುತ್ತೇನೆ. ಮತ್ತು ಅವರೂ ನನ್ನ ಧರ್ಮವನ್ನು ಗೌರವಿಸುತ್ತಾರೆ. ಹೀಗಾಗಿ ನಾನು ಮತಾಂತರಗೊಂಡು ಮುಸ್ಲಿಂ ಆಗಬೇಕು ಈ ಎನ್ನುವುದರಲ್ಲಿ ಅರ್ಥವಿಲ್ಲ. ಪರಸ್ಪರ ಜೊತೆಯಾಗಿ ಬಾಳಲು ಅದು ಅನಿವಾರ್ಯ ಎಂಬುದನ್ನು ನಾನು ನಂಬುವುದಿಲ್ಲ. ಪ್ರತಿಯೊಬ್ಬರೂ ವೈಯಕ್ತಿಕ ಮತ್ತು ಅವರ ಧರ್ಮವನ್ನು ಅನುಸರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?


ಶಾರುಖ್‌ನಂತೆ ನನ್ನ ಧರ್ಮವನ್ನು ಯಾವತ್ತೂ ಅಗೌರವಗೊಳಿಸುವುದಿಲ್ಲ. ಮಗ ಆರ್ಯನ್ ತನ್ನ ತಂದೆಯ ಧರ್ಮವನ್ನು ಅನುಸರಿಸುತ್ತಾನೆ. ಆರ್ಯನ್ ಗೆ ಶಾರುಖ್‌ ಎಂದರೆ ತುಂಬಾ ಇಷ್ಟ.ಹೀಗಾಗಿ ಆತ ಅವರ ಧರ್ಮವನ್ನು ಅನುಸರಿಸುತ್ತಾನೆ ಎಂದು ನಾನು ಭಾವಿಸುತ್ತೇನೆ. ನಾನು ಮುಸ್ಲಿಂ ಎಂದು ಅವರಿಬ್ಬರು ಯಾವಾಗಲೂ ಹೇಳುತ್ತಿರುತ್ತಾರೆ. ಅದನ್ನು ನಾನು ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ ಗೌರಿ ಖಾನ್.

ಶಾರುಖ್ ಖಾನ್ ಹಾಗೂ ಗೌರಿ ಖಾನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು 33 ವರ್ಷಗಳಾಗಿವೆ. ಬಾಲಿವುಡ್‌ನ ಈ ಸುವರ್ಣ ದಂಪತಿಗೆ ಆರ್ಯನ್ ಖಾನ್, ಸುಹಾನಾ ಖಾನ್ ಮತ್ತು ಅಬ್ರಾಮ್ ಖಾನ್ ಎಂಬ ಮೂರು ಮಕ್ಕಳಿದ್ದಾರೆ.

Continue Reading

ಕ್ರಿಕೆಟ್

Andre Russell Dance: ಬಾಲಿವುಡ್ ನಟಿ ಅನನ್ಯಾ ಪಾಂಡೆ ಜತೆ ‘ಲುಟ್ ಪಟ್ ಗಯಾ’ ಹಾಡಿಗೆ ಡ್ಯಾನ್ಸ್​ ಮಾಡಿದ ಆ್ಯಂಡ್ರೆ ರಸೆಲ್​

Andre Russell Dance: ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Andre Russell Dance:
Koo

ಮುಂಬಯಿ: ಭಾನುವಾರ(ಮೇ 26) ನಡೆದಿದ್ದ ಐಪಿಎಲ್​ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿ ಮೂರನೇ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿತು. ಈ ಗೆಲುವಿನ ಬಳಿಕ ಕೆಕೆಆರ್​ ತಂಡ ಪಬ್​ನಲ್ಲಿ ಪಾರ್ಟಿ ಮಾಡಿತ್ತು. ಇದೇ ವೇಳೆ ಆ್ಯಂಡ್ರೆ ರಸೆಲ್(Andre Russell Dance)​ ಅವರು ಬಾಲಿವುಡ್ ನಟಿ ಅನನ್ಯಾ ಪಾಂಡೆ(Ananya Pandey) ಜತೆ ಶಾರೂಖ್ ಖಾನ್ ಅಭಿನಯದ ಡಂಕಿ ಚಿತ್ರದ​ ‘ಲುಟ್ ಪಟ್ ಗಯಾ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

ವೆಸ್ಟ್​ ಇಂಡೀಸ್​ ತಂಡ ಸ್ಫೋಟಕ ಬ್ಯಾಟರ್​ ರಸೆಲ್(Andre Russell) ಬಾಲಿವುಡ್​ ನಟಿ ಅವಿಕಾ ಗೋರ್(Avika Gor) ಜತೆ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ವಿಡಿಯೊ ಕೂಡ ಕೆಲವು ದಿನಗಳ ಹಿಂದೆ ವೈರಲ್​ ಆಗಿತ್ತು. ​’ಲಡ್ಕಿ ತು ಕಮಲ್ ಕಿ’ ಎನ್ನುವ ಹಾಡಿಗೆ ರೆಸೆಲ್ ಅವಿಕಾ ಸೇರಿ ಹೆಜ್ಜೆ ಹಾಕಿರುವ ಈ ಹಾಡು ಯೂಟ್ಯೂಬ್​ನಲ್ಲಿ ಮೇ 9 ರಂದು ಬಿಡುಗಡೆಯಾಗಿತ್ತು.

ಈ ಹಾಡಿನಲ್ಲಿ ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚುವ ಜತೆಗೆ ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಅವಿಕಾ ಗೋರ್ ಭಾರತೀಯ ನಟಿಯಾಗಿದ್ದು, ಅವರು ಮುಖ್ಯವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ಮೂರನೇ ಟ್ರೋಫಿ ಗೆದ್ದ ಕೆಕೆಆರ್​


ಚೆನ್ನೈಯ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದ್ದ ಅತ್ಯಂತ ನೀರಸ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಹೈದರಾಬಾದ್​ ತಂಡ 18.3 ಓವರ್​ಗಳಲ್ಲಿ 113 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಚೇಸಿಂಗ್​ ನಡೆಸಿದ ಕೆಕೆಆರ್​ ಕೇವಲ 10.3 ಓವರ್​ನಲ್ಲಿ 2 ವಿಕೆಟ್​ ನಷ್ಟಕ್ಕೆ 114 ರನ್​ ಬಾರಿಸಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಇದು ಕೆಕೆಆರ್​ಗೆ ಒಲಿದ ಮೂರನೇ ಐಪಿಎಲ್​ ಟ್ರೋಫಿ.

Continue Reading

ಬಾಲಿವುಡ್

Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

Dhadak 2:ಕರಣ್‌ ಕೊನೆಯದಾಗಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾ ನಿರ್ದೇಶಿಸಿದ್ದರು. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಕಮರ್ಷಿಯಲ್ ಹಿಟ್ ಆಗಿತ್ತು. ಪ್ರಸ್ತುತ ಅವರು ಹಲವಾರು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮತ್ತೊಂದೆಡೆ, ಕರಣ್ ಜೋಹರ್ ಅವರ ಸಲ್ಮಾನ್ ಖಾನ್ ಅವರ ‘ದಿ ಬುಲ್’ ಶೀರ್ಷಿಕೆಯ ಚಿತ್ರ ಸೆಟ್ಟೇರಲು ಸಜ್ಜಾಗಿದೆ.

VISTARANEWS.COM


on

Karan Johar announces Dhadak 2
Koo

ಬೆಂಗಳೂರು:  ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ (Karan Johar ) ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಕರಣ್ ಜೋಹರ್ ತಮ್ಮ ಹೊಸ ಚಿತ್ರಕ್ಕೆ ‘ಧಡಕ್ 2’ (Dhadak 2) ಎಂದು ಹೆಸರಿಟ್ಟಿದ್ದಾರೆ. ಕರಣ್‌ ಜೋಹರ್ ನಿರ್ಮಿಸಿದ ಈ ಚಿತ್ರದಲ್ಲಿ ಸಿದ್ಧಾಂತ್ ಚತುರ್ವೇದಿ ಮತ್ತು ʻಅನಿಮಲ್‌ʼ ಸಿನಿಮಾ ಖ್ಯಾತಿಯ ತೃಪ್ತಿ ಡಿಮ್ರಿ ನಟಿಸಲಿದ್ದಾರೆ. ಶಾಜಿಯಾ ಇಕ್ಬಾಲ್ ನಿರ್ದೇಶಿಸಲಿದ್ದಾರೆ.

ʻಗಲ್ಲಿ ಬಾಯ್’ ಖ್ಯಾತಿಯ ಸಿದ್ಧಾಂತ್​ ಚತುರ್ವೇದಿ ಅವರು ತೆರೆ ಹಂಚಿಕೊಳ್ಳಲಿದ್ದಾರೆ. ‘ಧಡಕ್​ 2’ ಸಿನಿಮಾದಲ್ಲಿ ಜಾತಿಯ ಕುರಿತಾದ ಕಹಾನಿ ಇರಲಿದೆ ಎಂಬುದನ್ನು ಅವರು ತಿಳಿಸಿದ್ದಾರೆ.ಕರಣ್​ ಜೋಹರ್​ ಅವರ ‘ಧರ್ಮ ಪ್ರೊಡಕ್ಷನ್ಸ್​’ ಮೂಲಕ ‘ಧಡಕ್​ 2’ ಸಿನಿಮಾ ನಿರ್ಮಾಣ ಆಗುತ್ತಿದೆ. ಕರಣ್ ಜೋಹರ್ “ಒಂದು ಕಾಲದಲ್ಲಿ ಒಬ್ಬನಿದ್ದ ರಾಜ, ಒಬ್ಬಳಿದ್ದಳು ರಾಣಿ. ಆದರೆ ಅವರಿಬ್ಬರದ್ದೂ ಬೇರೆ ಜಾತಿ. ಕಥೆ ಮುಗಿಯಿತುʼʼಎಂದು ವಿಡಿಯೊ ಜತೆ ಕ್ಯಾಪ್ಞನ್‌ ಶೇರ್‌ ಮಾಡಿಕೊಂಡಿದ್ದಾರೆ. ಧಡಕ್ 2 ಚಿತ್ರಮಂದಿರಗಳಲ್ಲಿ 2024ರ ನವೆಂಬರ್‌ 22ರಂದು ಬಿಡುಗಡೆಯಾಗುತ್ತಿದೆ.

ಜೀ ಸ್ಟುಡಿಯೋಸ್, ಧರ್ಮ ಪ್ರೊಡಕ್ಷನ್ಸ್ ಮತ್ತು ಕ್ಲೌಡ್ 9 ಪಿಕ್ಚರ್ಸ್ ನಿರ್ಮಿಸಿರುವ ‘ಧಡಕ್ 2’ ಸಿದ್ಧಾಂತ್ ಚತುರ್ವೇದಿ ಮತ್ತು ತೃಪ್ತಿ ಡಿಮ್ರಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

2018ರಲ್ಲಿ ಕರಣ್​ ಜೋಹರ್​ ನಿರ್ಮಾಣ ಮಾಡಿದ್ದ ‘ಧಡಕ್​’ ಸಿನಿಮಾದಲ್ಲಿ ಕೂಡ ಜಾತಿಗೆ ಸಂಬಂಧಿಸಿದ ಕಥೆ ಇತ್ತು. ಆ ಸಿನಿಮಾ ಮೂಲಕ ನಟಿ ಜಾನ್ವಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡಿದರು. ಅದು ಮರಾಠಿಯ ‘ಸೈರಾಟ್​’ ಸಿನಿಮಾದ ರಿಮೇಕ್​ ಆಗಿತ್ತು.

ಇದನ್ನೂ ಓದಿ: Sahara Movie Trailer: ಕ್ರಿಕೆಟ್ ಆಧಾರಿತ `ಸಹಾರಾ’ ಸಿನಿಮಾ ಟ್ರೈಲರ್‌ ಔಟ್‌ ಮಾಡಿದ RCB ಮಾಜಿ ಆಟಗಾರ

ಕರಣ್‌ ಕೊನೆಯದಾಗಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾ ನಿರ್ದೇಶಿಸಿದ್ದರು. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಕಮರ್ಷಿಯಲ್ ಹಿಟ್ ಆಗಿತ್ತು. ಪ್ರಸ್ತುತ ಅವರು ಹಲವಾರು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮತ್ತೊಂದೆಡೆ, ಕರಣ್ ಜೋಹರ್ ಅವರ ಸಲ್ಮಾನ್ ಖಾನ್ ಅವರ ‘ದಿ ಬುಲ್’ ಶೀರ್ಷಿಕೆಯ ಚಿತ್ರ ಸೆಟ್ಟೇರಲು ಸಜ್ಜಾಗಿದೆ.

Continue Reading
Advertisement
Love Jihad
ಪ್ರಮುಖ ಸುದ್ದಿ2 mins ago

Love Jihad: ಲವ್ ಜಿಹಾದ್ ಕೇಸ್ ಹೆಚ್ಚಳ; ಹಿಂದು ಯುವತಿಯರ ರಕ್ಷಣೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Karan Bhushan Singh
ದೇಶ13 mins ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ16 mins ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Viral Run Out Video
ಕ್ರೀಡೆ22 mins ago

Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

Ambareesh Birthday during Sumalatha Ambareesh Talks About Abhishek Ambareesh And Aviva
ಸ್ಯಾಂಡಲ್ ವುಡ್29 mins ago

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

All Eyes on Rafah
ರಾಜಕೀಯ34 mins ago

All Eyes on Rafah: 30 ಮಿಲಿಯನ್ ಜನರನ್ನು ತಲುಪಿದ ‘ಆಲ್ ಐಸ್ ಆನ್ ರಫಾ’ ಪೋಸ್ಟ್‌!

Bomb Threat
ಪ್ರಮುಖ ಸುದ್ದಿ36 mins ago

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Hardik Pandya
ಕ್ರೀಡೆ1 hour ago

Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Viral Video
ವೈರಲ್ ನ್ಯೂಸ್2 hours ago

Viral Video: ಇವನೇ ನಿಜವಾದ ಹೀರೋ! ಇವರ ಧೈರ್ಯ, ಶೌರ್ಯಕ್ಕೆ ಸರಿಸಾಟಿಯೇ ಇಲ್ಲ; ವೈರಲಾಯ್ತು ವಿಡಿಯೋ

TOP 5 Movies big budget Movie in OTT
ಒಟಿಟಿ2 hours ago

TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ20 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌