DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ - Vistara News

ಪ್ರಮುಖ ಸುದ್ದಿ

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

DK Shivakumar: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ. ಬಿಜೆಪಿ ಹಾಗೂ ಈ ವಿಚಾರದಲ್ಲಿ ಎನ್‌ಡಿಎ ನಿಲುವೇನು ಎಂದು ತಿಳಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

DCM D K Shivakumar Latest statement in Belagavi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ/ಕೂಡ್ಲಿಗಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ. ಬಿಜೆಪಿ ಹಾಗೂ ಈ ವಿಚಾರದಲ್ಲಿ ಎನ್‌ಡಿಎ ನಿಲುವೇನು ಎಂದು ತಿಳಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ಬೆಳಗಾವಿಯಲ್ಲಿ ಮತ್ತು ಕೂಡ್ಲಿಗಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಪ್ರಜ್ವಲ್ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ. ಆದರೆ ಈ ಹಗರಣದ ಹಿನ್ನೆಲೆಯಲ್ಲಿ ಮೈತ್ರಿ ಬಗ್ಗೆ ತಮ್ಮ ನಿಲುವೇನು ಎಂಬುದರ ಬಗ್ಗೆ ಬಿಜೆಪಿ ಹಾಗೂ ಎನ್‌ಡಿಎ ನಾಯಕರು ಉತ್ತರ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

ಪೆನ್‌ಡ್ರೈವ್ ವಿಚಾರವಾಗಿ ತನಿಖೆಯಾಗಲಿ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ವಿಚಾರ ನಮ್ಮ ನಿಯಂತ್ರಣದಲ್ಲಿ ಇಲ್ಲ. ಏನೇ ಇದ್ದರು ತನಿಖಾಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರಾದ ಆರ್. ಅಶೋಕ್, ವಿಜಯೇಂದ್ರ ನುಣುಚಿಕೊಳ್ಳಬಾರದು. ಕುಮಾರಸ್ವಾಮಿ, ಅವರ ಕುಟುಂಬ ಹಾಗೂ ಅವರ ಪಕ್ಷದವರು ಏನಾದರೂ ಮಾಡಿಕೊಳ್ಳಲಿ” ಎಂದರು.

ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯುತ್ತಮವಾಗಿದೆ

ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ್ದ ಪ್ರಧಾನಮಂತ್ರಿಗಳು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಾಶವಾಗಿದೆ ಎಂದು ಆರೋಪಿಸಿದ್ದ ಬಗ್ಗೆ ಕೇಳಿದಾಗ, ಪ್ರಧಾನಮಂತ್ರಿಗಳು ಯಾವ ರೀತಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯುತ್ತಮವಾಗಿದೆ. ಈ ಕಾರಣಕ್ಕೆ ನಮ್ಮ ರಾಜ್ಯಕ್ಕೆ ಜನ ಬಹಳ ಉತ್ಸುಕತೆಯಿಂದ ಬರುತ್ತಿದ್ದಾರೆ. ಈ ಕಾರಣಕ್ಕೆ ವಾಜಪೇಯಿ ಅವರು ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಬಂದು ನಂತರ ಭಾರತದ ಇತರೆ ನಗರಗಳಿಗೆ ಹೋಗುತ್ತಿದ್ದಾರೆ ಎಂದಿದ್ದರು. ನಿಮಗೆ ಮತ ಸಿಗಲಿಲ್ಲ ಎಂದು ಕರ್ನಾಟಕ ರಾಜ್ಯದ ಬಗ್ಗೆ ಸುಳ್ಳು ಮಾತನಾಡಿದರೆ ಅದು ಭಾರತಕ್ಕೆ ಮಾಡುವ ಅಪಮಾನ. ವಿದೇಶಿಗರು ಕರ್ನಾಟಕದ ಮೂಲಕ ಭಾರತವನ್ನು ನೋಡುತ್ತಿದ್ದಾರೆ. ದೇಶದಲ್ಲೇ ಅತ್ಯುತ್ತಮ ಆಡಳಿತ ಹಾಗೂ ಪೊಲೀಸ್ ವ್ಯವಸ್ಥೆ ಇರುವ ರಾಜ್ಯ ಕರ್ನಾಟಕ ಎಂದು ತಿಳಿಸಿದರು.

ಇದನ್ನೂ ಓದಿ: Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

ಭರ್ಜರಿ ಜಯ ಸಾಧಿಸಲಿದೆ

ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ಯಾವ ರೀತಿ ಪ್ರತಿಕ್ರಿಯೆ ಬರುತ್ತಿದೆ ಎಂದು ಕೇಳಿದಾಗ, ಕಾಂಗ್ರೆಸ್ ಪಕ್ಷ ದಕ್ಷಿಣ ಭಾಗದ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲಿದ್ದು, ಉತ್ತರ ಭಾಗದ ಕ್ಷೇತ್ರಗಳಲ್ಲೂ ಭರ್ಜರಿ ಜಯ ಸಾಧಿಸಲಿದೆ. ಉತ್ತರ ಕ್ಷೇತ್ರಗಳಲ್ಲಿ ಜನ ನಮಗೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಸಂಸತ್ ಸ್ಥಾನಗಳಲ್ಲಿ ನಾವು ಈ ಹಿಂದಿನ ದಾಖಲೆ ಮುರಿಯುತ್ತೇವೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Wild Elephant Attack : ನಾಡಿಗೆ ಬಂದ ಕಾಡಾನೆಯಿಂದ ರೈತನ ಮೇಲೆ ದಾಳಿ, ಕಾಲು ಮುರಿತ

Wild Elephant Attack:ದಿವಾಕರ್ ಅವರನ್ನು ಅಟ್ಟಿಸಿಕೊಂಡು ಬಂದು ಕಾಲಿನ ಮೇಲೆ ತುಳಿದಿದೆ. ಅವರ ಬಲಗಾಲು ಮುರಿದಿದೆ. ಅವರ ಕಿರುಚಾಟಕ್ಕೆ ಹೆದರಿದ ಆನೆ ಕಾಫಿ ತೋಟದ ಮೂಲಕ ವಾಪಸ್​ ಹೋಗಿದೆ. ಹೀಗಾಗಿ ಅವರ ಪ್ರಾಣ ಉಳಿದಿದೆ. ಅವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಇಟಿಎಫ್ ತಂಡ ಭೇಟಿ, ಪರಿಶೀಲನೆ

VISTARANEWS.COM


on

wild elephant attack
Koo

ಹಾಸನ: ಕೂಲಿ ಕೆಲಸಕ್ಕೆ ಹೋಗುತ್ತಿದ್ದವನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಾಟೆಹಳ್ಳ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ರೈತನ ಕಾಲು ಮುರಿತವಾಗಿದೆ. ಬೆಳಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಆನೆ ದಾಳಿ (Wild Elephant Attack) ಮಾಡಿತ್ತು. 60 ವರ್ಷದ ದಿವಾಕರ್ ಶೆಟ್ಟಿ ಗಾಯಗೊಂಡವರು.

ದಿವಾಕರ್​ ಅವರು ಬೆಳಗ್ಗೆ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಡಿನಿಂದ ಬಂದಿದ್ದ ಒಂಟಿ ಸಲಗವು ದಾಳಿ ಮಾಡಿದೆ. ದಿವಾಕರ್ ಅವರನ್ನು ಅಟ್ಟಿಸಿಕೊಂಡು ಬಂದು ಕಾಲಿನ ಮೇಲೆ ತುಳಿದಿದೆ. ಅವರ ಬಲಗಾಲು ಮುರಿದಿದೆ. ಅವರ ಕಿರುಚಾಟಕ್ಕೆ ಹೆದರಿದ ಆನೆ ಕಾಫಿ ತೋಟದ ಮೂಲಕ ವಾಪಸ್​ ಹೋಗಿದೆ. ಹೀಗಾಗಿ ಅವರ ಪ್ರಾಣ ಉಳಿದಿದೆ. ಅವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಇಟಿಎಫ್ ತಂಡ ಭೇಟಿ, ಪರಿಶೀಲನೆ

ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ ಕಾಡಾನೆ

ಕಾಡಿನಿಂದ ನಾಡಿಗೆ ಮುಖ ಮಾಡಿರುವ ಆನೆಗಳು ಕಾಫಿ ತೋಟಗಳ ನಡುವೆ ನಿಂತಿವೆ. ಹೀಗಾಗಿ ಜೀವ ಭಯದಿಂದ ಕಾಫಿ ತೋಟದ ಕೆಲಸಕ್ಕೆ ಬರಲು ಕೂಲಿ ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಆನೆಗಳು ಮತ್ತು ಮಾನವನ ಸಂಘರ್ಷ ಹಲವಾರು ಸಮಯದಿಂದ ಈ ಪ್ರದೇಶದಲ್ಲಿ ನಡೆಯುತ್ತಿದೆ. ಅದಕ್ಕೊಂದು ಪರಿಹಾರ ಸಿಗುತ್ತಿಲ್ಲ. ಕಾಫಿ ತೋಟಗಳಿಗೆ ಆನೆಗಳು ಲಗ್ಗೆ ಇಡುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆನೆಗಳ ದಾಳಿಯಿಂದಾಗಿ ಹಲವಾರು ಕಾರ್ಮಿಕರು ಜರ್ಜರಿತರಾಗಿದ್ದಾರೆ. ಹೀಗಾಗಿ ಇದಕ್ಕೊಂದು ಪರಿಹಾರ ಇಲ್ಲ ಎನ್ನುವಂತಾಗಿದೆ.

ಇದನ್ನೂ ಓದಿ: Dengue Fever : ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ

ಹಂಪಿಗೆ ಬಂದ ಕರಡಿ

ಹಂಪಿ ಪರಿಸರದಲ್ಲಿ ಮತ್ತೆ ಕರಡಿ ಪ್ರತ್ಯಕ್ಷಗೊಂಡಿದ್ದು, ಇಲ್ಲಿನ ಪರಿಸರದ ಜನರಿಗೆ ಕರಡಿ ದಾಳಿಯ ಭಯ ಶುರುವಾಗಿದೆ. ಅಕ್ಕ – ತಂಗಿಯರ ಗುಡ್ಡದಿಂದ ಕಡ್ಡಿರಾಂಪುರಕ್ಕೆ ಹೋಗುವ ರಸ್ತೆಯಲ್ಲಿ ಕರಡಿಯೊಂದು ಕಂಡು ಬಂದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಹಂಪಿ- ಕಡ್ಡಿರಾಂಪುರ ರಸ್ತೆಯಿದ್ದು ಕಾಡು ಪ್ರಾಣಿಯ ದಾಳಿಯ ಭಯ ಹೆಚ್ಚಾಗಿದೆ. ಸೋಮವಾರ ಸಂಜೆ ವೇಳೆ ವಿಜಯ ವಿಠ್ಠಲ ಬಜಾರ್ ನಲ್ಲಿ ಕರಡಿ ಪ್ರತ್ಯಕ್ಷ ಆಗಿತ್ತು. ಇದೀಗ ಕಡ್ಡಿರಾಂಪೂರ ಗ್ರಾಮದ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ ಕರಡಿ ಪದೇ ಪದೇ ಬರುತ್ತಿರುವ ಕಾರಣ ಹೊಲ, ಗದ್ದೆಗಳಿಗೆ ಹೋಗುವ ರೈತರಲ್ಲಿ ಹೆಚ್ಚಿದ ಆತಂಕ ಶುರುವಾಗಿದೆ.

Continue Reading

ಪ್ರಮುಖ ಸುದ್ದಿ

NEET UG : 1563 ಅಭ್ಯರ್ಥಿಗಳ ಗ್ರೇಸ್ ಮಾರ್ಕ್​ ರದ್ದು, ಜೂನ್​ 23ರಂದು ಮರುಪರೀಕ್ಷೆ

NEET UG : ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

VISTARANEWS.COM


on

NEET UG
Koo

ನವದೆಹಲಿ: ನೀಟ್​ ಯುಜಿ (NEET UG) ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್​ (ಕೃಪಾಂಕ) ಪಡೆದಿರುವ 1,563 ಅಭ್ಯರ್ಥಿಗಳಿಗೆ ಜೂನ್​ 23ರಂದು ಮರು ಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರ ಮತ್ತು ಎನ್​ಟಿಎ (National Testing Agency) ಗುರುವಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್​ಗಳ ಪ್ರವೇಶಕ್ಕಾಗಿ ನೀಟ್-ಯುಜಿ, 2024 ಪರೀಕ್ಷೆಗೆ ಸಂಬಂಧಿಸಿದ ವಿವಾದಕ್ಕೆ ಕುರಿತ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಪೀಠಕ್ಕೆ ಕೇಂದ್ರ ಸರ್ಕಾರ ಹಾಗೂ ಎನ್​ಟಿಎ ಮಾಹಿತಿ ನೀಡಿದೆ.

ಗ್ರೇಸ್ ಅಂಕಗಳನ್ನು ನೀಡಿದ 1,563 ನೀಟ್-ಯುಜಿ 2024 ಅಭ್ಯರ್ಥಿಗಳ ಸ್ಕೋರ್ ಕಾರ್ಡ್​ಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಸಮಿತಿ ತೆಗೆದುಕೊಂಡಿದೆ. ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳುವ ಆಯ್ಕೆಯನ್ನು ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್​ಗೆ ಏಜೆನ್ಸಿ ತಿಳಿಸಿದೆ. ಪರೀಕ್ಷೆಗಳನ್ನು ಜೂನ್ 23 ರಂದು ನಡೆಸಲಾಗುವುದು ಮತ್ತು ಜೂನ್ 30 ರೊಳಗೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಎನ್​​ಟಿಎ ಸುಪ್ರೀಂ ಕೋರ್ಟ್​​ಗೆ ತಿಳಿಸಿದೆ.

ಜುಲೈ 6ರಿಂದ ಕೌನ್ಸೆಲಿಂಗ್​

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್​​ಗಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಜುಲೈ 6 ರಿಂದ ಪ್ರಾರಂಭವಾಗಲಿದೆ ಎಂದು ಎನ್​ಟಿಎ ತಿಳಿಸಿದೆ. ಮರುಪರೀಕ್ಷೆಗೆ ಸಂಬಂಧಿಸಿದಂತೆ ಎನ್​ಟಿಎ ಕೊಟ್ಟಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಗಣನೆಗೆ ತೆಗೆದುಕೊಂಡಿದೆ. ಇವೆಲ್ಲದರ ನಡುವೆ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ಕೌನ್ಸೆಲಿಂಗ್ ಮುಂದುವರಿಯುತ್ತದೆ ಮತ್ತು ನಾವು ಅದನ್ನು ನಿಲ್ಲಿಸುವುದಿಲ್ಲ. ಪರೀಕ್ಷೆ ನಡೆದ ಬಳಿಕ ಎಲ್ಲವೂ ಒಟ್ಟಾಗಿ ನಡೆಯುತ್ತದೆ. ಆದ್ದರಿಂದ ಭಯಪಡಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಯ ನೀಡಿದೆ.

ಬಹು ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳ ನಡುವೆ ಮೇ 5 ರಂದು ಪರೀಕ್ಷೆಯನ್ನು ನಡೆಸಲಾಯಿತು ಎಂದು ಎನ್​​ಟಿಎ ವಿರುದ್ಧ ಸುಪ್ರೀಂ ಕೋರ್ಟ್​​ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಪ್ರಶ್ನೆ ಪತ್ರಿಕೆ ಸೋರಿಕೆಯು ಸಂವಿಧಾನದ 14 ನೇ ವಿಧಿಯ (ಸಮಾನತೆಯ ಹಕ್ಕು) ಉಲ್ಲಂಘನೆಯಾಗಿದೆ. ಏಕೆಂದರೆ ಇದು ನ್ಯಾಯಯುತ ರೀತಿಯಲ್ಲಿ ಪರೀಕ್ಷೆ ಬರೆದ ಇತರ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತೆ. ಅಲ್ಲದೆ ಅಕ್ರಮವಾಗಿ ಬರೆದ ಅಭ್ಯರ್ಥಿಗಳಿಗೆ ಅನಗತ್ಯ ಪ್ರಯೋಜನವನ್ನು ನೀಡುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ನೀಟ್​ ಪರೀಕ್ಷೆಯಲ್ಲಿ ಅಕ್ರಮ

ಕೆಲವೊಂದು ಸಮಸ್ಯೆಗಳಿಂದಾಗಿ 1,563 ಅಭ್ಯರ್ಥಿಗಳಿಗೆ ಸಮಯ ನಷ್ಟವಾಗಿದೆ ಎಂದು ಕೃಪಾಂಕವನ್ನು ನೀಡಲಾಗಿತ್ತು. ಅಲ್ಲದೆ ಈ ಅಂಕಗಳನ್ನು ಪಡೆದ ಅಭ್ಯರ್ಥಿಗಳ ಗರಿಷ್ಠ ರ್ಯಾಂಕ್​ಗಳನ್ನು ಪಡೆದಿದ್ದರು. ಇದು ಅನುಮಾನಕ್ಕೆ ಕಾರಣವಾಯಿತು. ಪೂರ್ವಯೋಜಿತ ಕೃತ್ಯ ಹಾಗೂ ಪ್ರಶ್ನಾ ಪತ್ರಿಕೆಯ ಸೋರಿಕೆ ಎಂಬುದಾಗಿ ಗದ್ದಲವೆದ್ದಿತು. ದೇಶಾದ್ಯಂತ ಪರೀಕ್ಷೆ ಬರೆದ ಅಭ್ಯರ್ಥಿಗಳು ಮೋಸ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಈ ಅಕ್ರಮಗಳನ್ನು ಎತ್ತಿ ತೋರಿಸಿದ್ದವು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಎಸ್ಐಟಿ ತನಿಖೆ ನಡೆಸಬೇಕೆಂದು ಎಎಪಿ ಒತ್ತಾಯಿಸಿದೆ.

ಇದನ್ನೂ ಓದಿ: Tollgates: ಇನ್ನು ಫಾಸ್ಟ್‌ಟ್ಯಾಗ್‌‌ ಮರೆತುಬಿಡಿ; ಟೋಲ್‌ ಸಂಗ್ರಹಕ್ಕೆ ಬರುತ್ತಿದೆ ಸ್ಯಾಟಲೈಟ್‌ ಆಧಾರಿತ ವ್ಯವಸ್ಥೆ: ಏನಿದರ ಪ್ರಯೋಜನ?

ಈ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, “ಲಕ್ಷಾಂತರ ಮಕ್ಕಳು ನೀಟ್ ನಂತಹ ಪರೀಕ್ಷೆಗಳಿಗೆ ಕಠಿಣ ತಯಾರಿ ನಡೆಸುತ್ತಾರೆ/ ಅದಕ್ಕಾಗಿ ತಯಾರಿ ನಡೆಸಲು ತಮ್ಮ ಜೀವನದ ಅತ್ಯಂತ ಅಮೂಲ್ಯ ಕ್ಷಣಗಳನ್ನು ಕಳೆಯುತ್ತಾರೆ. ಇಡೀ ಕುಟುಂಬವು ಅವರ ಬೆನ್ನಿಗೆ ನಿಲ್ಲುತ್ತದೆ. ಆದರೆ ವರ್ಷದಿಂದ ವರ್ಷಕ್ಕೆ ಈ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಫಲಿತಾಂಶಗಳಿಗೆ ಸಂಬಂಧಿಸಿದ ಅಕ್ರಮಗಳು ವರದಿಯಾಗುತ್ತಿವೆ ಎಂದು ಹೇಳಿದ್ದರು.

Continue Reading

ಪ್ರಮುಖ ಸುದ್ದಿ

Dengue Fever : ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ

dengue fever: ನಾಗರಾಜ್​ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ನಾಗರಾಜ್ ಅವರು ಸಕ್ಕರೆ ಕಾಯಿಲೆ ಸಮಸ್ಯೆಯೂ ಇತ್ತು. ಜತೆಗೆ ಅವರ ರಕ್ತದಲ್ಲಿನ ಪ್ಲೇಟ್​ಲೆಟ್​ ಸಂಖ್ಯೆ 26,000ಕ್ಕೂ ಕಡಿಮೆಯಾಗಿತ್ತು. ನಾಗರಾಜ್​ ಅವರು ಮೃತಪಟ್ಟ ಸುದ್ದಿಯನ್ನು ಸಾಗರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಪ್ಪ ಅವರು ದೃಢಪಡಿಸಿದ್ದಾರೆ.

VISTARANEWS.COM


on

Dengue Fever
Koo

ಶಿವಮೊಗ್ಗ : ಡೆಂಗ್ಯೂ ಜ್ವರದಿಂದ (Dengue Fever) ಬಳಲುತ್ತಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್ (35) ಮೃತಪಟ್ಟವರು. ಈ ಮೂಲಕ ತಾಲೂಕಿನಲ್ಲಿ ಹೊಸ ಡೆಂಗ್ಯೂ ಜ್ವರಗಳ ಪ್ರಕರಣಕ್ಕೆ ಒಂದು ಬಲಿಯಾಗಿದೆ.

ನಾಗರಾಜ್ ಅವರು ಕೆಲವು ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದರು. ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ನಾಗರಾಜ್ ಅವರು ಸಕ್ಕರೆ ಕಾಯಿಲೆ ಸಮಸ್ಯೆಯೂ ಇತ್ತು. ಜತೆಗೆ ಅವರ ರಕ್ತದಲ್ಲಿನ ಪ್ಲೇಟ್​ಲೆಟ್​ ಸಂಖ್ಯೆ 26,000ಕ್ಕೂ ಕಡಿಮೆಯಾಗಿತ್ತು. ನಾಗರಾಜ್​ ಅವರು ಮೃತಪಟ್ಟ ಸುದ್ದಿಯನ್ನು ಸಾಗರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಪ್ಪ ಅವರು ದೃಢಪಡಿಸಿದ್ದಾರೆ.

ಕಲುಷಿತ ನೀರು ಕುಡಿದು ಒಂದೇ ಗ್ರಾಮದ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ : ಕಲುಷಿತ ನೀರು (Polluted Water ) ಸೇವಿಸಿದ್ದರಿಂದ ಉಂಟಾದ ಅಸ್ವಸ್ಥೆಯಿಂದ ಒಂದೇ ಗ್ರಾಮದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಲ್ಲಿನ ವೀರಪ್ಪಲ್ಲಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಿಂದ ಈ ನಾಲ್ವರು ಮೃತಪಟ್ಟಿದ್ದಾರೆ. ಅದೇ ರೀತಿ ವೀರಾಪುರ ಗ್ರಾಮದಲ್ಲಿಯೂ ‌ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಗ್ರಾಮದಲ್ಲಿ ಗಂಗಮ್ಮ (70) ಮುನಿನಾರಾಯಣಮ್ಮ (74), ಲಕ್ಷ್ಮಮ್ಮ (70). ನರಸಿಂಹಪ್ಪ (75) ಎಂಬುವರು ಮೃತಪಟ್ಟಿದ್ದರು.

ಇದನ್ನೂ ಓದಿ: Prajwal Revanna Case : ಭವಾನಿ ರೇವಣ್ಣ ಕಾರಿನ ಚಾಲಕ ಅಜಿತ್ ಸಂಬಂಧಿಕನಿಗೆ ಮನೆಗೆ ನುಗ್ಗಿ ಹಲ್ಲೆ

ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿರುವ ವರಲಕ್ಷ್ಮೀ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರಿತಿ ವಾಂತಿ, ಭೇದಿಯಿಂದ ಇಬ್ಬರು ಗ್ರಾಮಸ್ಥರು. ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವರಲಕ್ಷ್ಮಿ ಲಕ್ಷ್ಮೀದೇವಮ್ಮ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮ ಪಂಚಾಯ್ತಿ ವತಿಯಿಂದ ಪೂರೈಸಿದ್ದ ನೀರು ಕಲುಷಿತ ಗೊಂಡಿದ್ದ ಕಾರಣ ಆರೋಗ್ಯ ಸಮಸ್ಯೆ ಉಂಟಾಗಿದೆ. ನೀರು ಸರಬರಾಜು ಮಾಡಿರುವ ಕೋಟಗಲ್ ಗ್ರಾಮಪಂಚಾಯಿತಿ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೇ ವಾರದಲ್ಲಿ ಗ್ರಾಮದಲ್ಲಿ ನಾಲ್ಕು ಸರಣಿ ಸಾವಾದರೂ ಎಚ್ಚೆತ್ತುಕೊಳ್ಳದ ಪಿಡಿಒ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಚರಂಡಿಗಳು ಕಟ್ಟಿಕೊಂಡು ವಾಸನೆ ಬರುತ್ತಿವೆ. ಅದನ್ನೆಲ್ಲ ರಿಪೇರಿ ಮಾಡದ ಕಾರಣ ಕುಡಿಯುವ ನೀರಿನೊಂದಿಗೆ ಮಿಶ್ರಣಗೊಳ್ಳುತ್ತಿದೆ. ಅದರಿಂದಾಗಿಯೇ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

Continue Reading

ಪ್ರಮುಖ ಸುದ್ದಿ

Prajwal Revanna Case : ಭವಾನಿ ರೇವಣ್ಣ ಕಾರಿನ ಚಾಲಕ ಅಜಿತ್ ಸಂಬಂಧಿಕನ ಮನೆಗೆ ನುಗ್ಗಿ ಹಲ್ಲೆ

Prajwal Revanna Case : ಲ್ಲೆಯಿಂದ ಗಾಯಗೊಂಡಿರುವ ಮೋಹಿತ್ ಗೆ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಗೆ ನುಗ್ಗಿರುವ ಮೂರ್ನಾಲ್ಕು ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

prajwal revanna case
Koo

ಹಾಸನ : ಪ್ರಜ್ವಲ್​ ರೇವಣ್ಣ ಸೆಕ್ಸ್​ ವಿಡಿಯೊ ಹಗರಣದಲ್ಲಿ (Prajwal Revanna Case) ಪೊಲೀಸರಿಗೆ ಬೇಕಾಗಿರುವ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಮೇಲೆ ಕಳೆದ ಕೆಲವು ದಿನಗಳಿಂದ ದುಷ್ಕರ್ಮಿಗಳು ದಾಳಿ ನಡೆಸುತ್ತಿದ್ದಾರೆ. ಮನೆಗೆ ಕಲ್ಲು ಎಸೆಯುತ್ತಿದ್ದ ಆರೋಪಿಗಳು ಇದೀಗ ರಾತ್ರಿ ವೇಳೆ ಮನೆಗೆ ನುಗ್ಗಿ ಅಜಿತ್​ನ ಅಕ್ಕನ ಮಗ ಮೋಹಿತ್​ ಮೇಲೆ ಹಲ್ಲೆ ನಡೆಸಿದ್ದಾರೆ. ಬುಧವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆ ಮಂದಿಯ ಮುಂದೆಯೇ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೂಡಲಹಿಪ್ಪೆಯಲ್ಲಿ ಅಜಿತ್ ಅವರ ಮನೆಯಿದ್ದು, ಎರಡು ದಿನಗಳ ಹಿಂದೆ ಮುಂಜಾನೆ 4 ಗಂಟೆಗೆ ಮನೆ ಮೇಲೆ ಕಲ್ಲೆಸೆದಿದ್ದ ಕಿಡಿಗೇಡಿಗಳು ಪರಾರಿಯಾಗಿದ್ದರು. ಆದರೆ, ಬುಧವಾರ ರಾತ್ರಿ ಮನೆ ಮೇಲೆ ದಾಳಿ ಮಾಡಿ ಅಜಿತ್ ಸಂಬಂಧಿಗೆ ಹಲ್ಲೆ ಮಾಡಲಾಗಿದೆ. ಹಲ್ಲೆಯಿಂದ ಗಾಯಗೊಂಡಿರುವ ಮೋಹಿತ್ ಗೆ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಗೆ ನುಗ್ಗಿರುವ ಮೂರ್ನಾಲ್ಕು ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Tungabhadra Dam : ಅಬ್ಬರದ ಮಳೆ; ವಿಶ್ವ ವಿಖ್ಯಾತಿಯ ತುಂಗಭದ್ರಾ ಡ್ಯಾಮ್​​ನಲ್ಲಿ​ ಹೆಚ್ಚಿದ ಒಳ ಹರಿವು

ಸಂತ್ರಸ್ತೆಯನ್ನು ಅಪಹರಣ ಮಾಡಿರುವ ಪ್ರಕರಣ ದಲ್ಲಿ ಭವಾನಿ ರೇವಣ್ಣ ಕಾರು ಚಾಲಕ ತಲೆ ಮರೆಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಆರೋಪ ಪ್ರಕರಣ ದ ಸಂತ್ರಸ್ಥ ಮಹಿಳೆ ಕಿಡ್ನಾಪ್ ವಿಚಾರದಲ್ಲಿ ಅಜಿತ್ ವಿರುದ್ದ ವಾರಂಟ್ ಜಾರಿಯಾಗಿದೆ. ಹಲವು ಬಾರಿ ವಾರಂಟ್ ಜಾರಿಯಾದರೂ ಎಸ್​ಐಟಿ ಮುಂದೆ ಅಜಿತ್ ಹಾಜರಾಗಿಲ್ಲ.

ಪ್ರಜ್ವಲ್‌ ರೇವಣ್ಣಗೆ ಮತ್ತೆ 6 ದಿನ ಎಸ್‌ಐಟಿ ಕಸ್ಟಡಿ

ಬೆಂಗಳೂರು: ಆತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಮತ್ತೆ 6 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಕಸ್ಟಡಿಗೆ ನೀಡುವಂತೆ 42ನೇ ಎಸಿಎಂಎಂ ಕೋರ್ಟ್‌ಗೆ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು. ಮನವಿಯನ್ನು ಪುರಸ್ಕರಿಸಿರುವ ಕೋರ್ಟ್, ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಸೂಚಿಸಿದೆ.

10 ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ ರೇವಣ್ಣನನ್ನು ಜೂನ್‌ 10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಸೂಚಿಸಲಾಗಿತ್ತು. ಇನ್ನೂ ವಿಚಾರಣೆ ಬಾಕಿ ಇರುವುದರಿಂದ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಿದ್ದರಿಂದ, ಇದೀಗ ಮತ್ತೆ 6 ದಿನಗಳ ಕಾಲ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಕೋರ್ಟ್‌ ಸಮ್ಮತಿಸಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲಿನಲ್ಲಿ ಎರಡು ದಿನ ಕಾಲ ಕಳೆದಿದ್ದರು. ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿ ಸಾಮಾನ್ಯ ಕೈದಿಯಂತೆ ಪ್ರಜ್ವಲ್ ಇದ್ದರು. ಮಂಗಳವಾರ ರಾತ್ರಿ ಜೈಲಿನಲ್ಲಿ ನೀಡಿದ್ದ ಮುದ್ದೆ, ಚಪಾತಿ, ಅನ್ನ, ಸಾಂಬರ್‌, ಊಟ ಮಾಡಿದ್ದ ಪ್ರಜ್ವಲ್, ಬೇಗನೇ ನಿದ್ರೆಗೆ ಜಾರಿದ್ದರು. ಇಂದು ಬೆಳಗ್ಗೆ 5 ಗಂಟೆಗೆ ನಿದ್ದೆಯಿಂದ ಎದ್ದು ವಾಕಿಂಗ್ ಮಾಡಿದ್ದರು.

ಕೆಲ ಹೊತ್ತು ವಾಕಿಂಗ್ ಮಾಡಿ ಜೈಲ್ ಸಿಬ್ಬಂದಿ ಕೊಟ್ಟ ಕಾಫಿ ಕುಡಿದ ಬಳಿಕ ದಿನ ಪತ್ರಿಕೆಗಳನ್ನು ಓದಿ ಹೊರಗಿನ ವಿದ್ಯಮಾನಗಳ ಕಡೆ ಕಣ್ಣಾಡಿಸಿದರು. ಮತ್ತೆ ಜೈಲಿನ ಮೆನುವಿನಂತೆ ಪ್ರಜ್ವಲ್‌ಗೆ ಅವಲಕ್ಕಿ ಉಪ್ಪಿಟ್ಟು ನೀಡಲಾಗಿದೆ. ಹೊರಗೆ ಬಿಂದಾಸ್ ಆಗಿ ಓಡಾಡಿಕೊಂಡಿದ್ದ ಮಾಜಿ ಸಂಸದನಿಗೆ ಜೈಲುವಾಸದಲ್ಲಿ ಚಡಪಡಿಸುತ್ತಿರರುವುದು ಕಂಡುಬಂದಿದೆ.

Continue Reading
Advertisement
Actor Darshan case ram gopal varma Reaction
ಸ್ಯಾಂಡಲ್ ವುಡ್16 mins ago

Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ…

Gold Rate Today
ಚಿನ್ನದ ದರ29 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

Karnataka Rain Effect
ಮಳೆ29 mins ago

Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

Lionel Messi Retirement
ಕ್ರೀಡೆ43 mins ago

Lionel Messi Retirement: ನಿವೃತ್ತಿಯ ಸುಳಿವು ನೀಡಿದ ಲಿಯೋನೆಲ್​ ಮೆಸ್ಸಿ

wild elephant attack
ಪ್ರಮುಖ ಸುದ್ದಿ48 mins ago

Wild Elephant Attack : ನಾಡಿಗೆ ಬಂದ ಕಾಡಾನೆಯಿಂದ ರೈತನ ಮೇಲೆ ದಾಳಿ, ಕಾಲು ಮುರಿತ

Pema Khandu
ದೇಶ1 hour ago

Pema Khandu: ಅರುಣಾಚಲ ಪ್ರದೇಶದ ಸಿಎಂ ಆಗಿ ಪೇಮಾ ಖಂಡು ಪ್ರಮಾಣ ವಚನ ಸ್ವೀಕಾರ

Duniya Vijay nagaratna Divorce case verdict to be announced
ಸ್ಯಾಂಡಲ್ ವುಡ್1 hour ago

Duniya Vijay: ಇಂದು ದುನಿಯಾ ವಿಜಯ್‌-ನಾಗರತ್ನ ವಿಚ್ಛೇದನ ತೀರ್ಪು, ಕೀರ್ತಿ ಗೌಡ ಜತೆಗಿನ ದಾಂಪತ್ಯಕ್ಕೆ ಸಿಗುವುದೇ ಅಂಕಿತ?

Priyanka Chopra’s Brother-In-Law Kevin Jonas Diagnosed With Skin Cancer
ಸಿನಿಮಾ1 hour ago

Priyanka Chopra: ಪ್ರಿಯಾಂಕಾ ಚೋಪ್ರಾ ಮೈದುನ, ಗಾಯಕ ಕೆವಿನ್​ ಜೋನಸ್‌ಗೆ ಕ್ಯಾನ್ಸರ್!

Actor Darshan
ಮಂಡ್ಯ1 hour ago

Actor Darshan : ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

Sonakshi Sinha Zaheer Iqbal confirm their wedding in leaked audio
ಬಾಲಿವುಡ್1 hour ago

Sonakshi Sinha: ಸೋನಾಕ್ಷಿ ಸಿನ್ಹಾ – ಜಹೀರ್ ಇಕ್ಬಾಲ್ ಮದುವೆಯ ಆಮಂತ್ರಣದ ಆಡಿಯೊ ಕ್ಲಿಪ್‌ ಲೀಕ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌