Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ - Vistara News

ಕ್ರೀಡೆ

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Champions Trophy 2025: ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ಆತಿಥ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯನ್ನು ಆಯ್ಕೆ ಮಾಡಿಕೊಂಡಿದೆ.

VISTARANEWS.COM


on

Champions Trophy 2025
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ಮುಂದಿನ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ(Champions Trophy 2025) ಪಾಕಿಸ್ತಾನ ಕ್ರಿಕೆಟ್ ಮಂಡಳಿಯು(PCB) ಸ್ಥಳ ನಿಗದಿಪಡಿಸಿದೆ. ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯನ್ನು ಆಯ್ಕೆ ಮಾಡಿಕೊಂಡಿದೆ. ಜತೆಗೆ ಭಾರತದ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ‘ಹೈಬ್ರಿಡ್ ಮಾದರಿ’ಯ ಊಹಾಪೋಹದ ಹೊರತಾಗಿಯೂ ಪಂದ್ಯಾವಳಿ ಸಂಪೂರ್ಣವಾಗಿ ಪಾಕ್​ನಲ್ಲಿಯೇ ನಡೆಯಲಿದೆ ಎಂಬ ವಿಶ್ವಾಸ ಕೂಡ ವ್ಯಕ್ತಪಡಿಸಿದೆ. 2017 ರಲ್ಲಿ ಇಂಗ್ಲೆಂಡ್‌ನಲ್ಲಿ ಕೊನೆಯ ಬಾರಿಗೆ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯುವ ನಿರೀಕ್ಷೆ ಇದೆ.

“ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ನಾವು ಪಾಕಿಸ್ತಾನದಲ್ಲಿ ಪಂದ್ಯಗಳ ವೇಳಾಪಟ್ಟಿಯನ್ನು ಐಸಿಸಿಗೆ ಕಳುಹಿಸಿದ್ದೇವೆ” ಎಂದು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಸೋಮವಾರ ಲಾಹೋರ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಐಸಿಸಿಯ ಭದ್ರತಾ ತಂಡವು ಪಾಕಿಸ್ತಾನಕ್ಕೆ ಬಂದು ನಮ್ಮ ಜತೆ ಸಭೆ ನಡೆಸಿದೆ. ಈ ಸಭೆ ಉತ್ತಮವಾಗಿತ್ತು.ಅವರಿಗೆ ಇಲ್ಲಿನ ವ್ಯವಸ್ಥೆಗಳನ್ನು ನೋಡಿ ತೃಪ್ತಿಯಾಗಿದೆ. ನಾವು ಪಾಕಿಸ್ತಾನದಲ್ಲಿ ಉತ್ತಮ ಪಂದ್ಯಾವಳಿಯನ್ನು ಆಯೋಜಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನಖ್ವಿ ಇದೇ ವೇಳೆ ಮಾಹಿತಿ ನೀಡಿದರು.

ಕಳೆದ ವರ್ಷ ಏಷ್ಯಾಕಪ್‌ನಲ್ಲಿ ‘ಹೈಬ್ರಿಡ್ ಮಾಡೆಲ್’ ಹೋಸ್ಟಿಂಗ್ ಅನ್ನು ಬಳಸಲಾಗಿತ್ತು. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ನೇತೃತ್ವದ ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಪಂದ್ಯಾವಳಿಯ ಅಧಿಕೃತ ಆತಿಥೇಯ ಪಾಕಿಸ್ತಾನವಾಗಿದ್ದರೂ ಸಹ ಶ್ರೀಲಂಕಾದಲ್ಲಿ ಭಾರತದ ಪಂದ್ಯಗಳನ್ನು ನಡೆಸಿತ್ತು. ಆದರೆ ಈ ಬಾರಿ ಇದು ಸಾಧ್ಯವಿಲ್ಲ ಎಂದು ನಖ್ವಿ ಹೇಳಿದ್ದಾರೆ.

ಇದನ್ನೂ ಓದಿ Champions Trophy 2025 : ಪಾಕಿಸ್ತಾನಕ್ಕೆ ನಾವು ಹೋಗುವುದಿಲ್ಲ; ಭಾರತದ ಸ್ಪಷ್ಟ ನುಡಿ

ಪಾಕಿಸ್ತಾನ ಕ್ರಿಕೆಟ್​ ಸ್ಟೇಡಿಯಂ ಕೆಲ ಸುಧಾರಣೆ ಕಾಣಬೇಕಿದೆ. ಕರಾಚಿಯ ಸ್ಟೇಡಿಯಂ ಕೆಟ್ಟ ಸ್ಥಿತಿಯಲ್ಲಿದೆ. ಆದ್ದರಿಂದ ಮೇ 7 ರಿಂದ ಇದರ ನವೀಕರಣ ಕೆಲಸ ಆರಂಭಗೊಳ್ಳಲಿದೆ. ವಿನ್ಯಾಸಕ್ಕೆ ಸಹಾಯ ಮಾಡುವ ಅಂತಾರಾಷ್ಟ್ರೀಯ ಕಂಪನಿಗಳಿಂದ ಬಿಡ್‌ಗಳನ್ನು ಅಂತಿಮಗೊಳಿಸುತ್ತೇವೆ ಎಂದರು.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮುರಿದುಹೋಗಿವೆ. ಪರಸ್ಪರ ಪಂದ್ಯಗಳನ್ನು ಆಡುತ್ತಿಲ್ಲ. ಈ ನಿರ್ಧಾರ ಎರಡೂ ಸರ್ಕಾರಗಳ ಅಡಿಯಲ್ಲಿ ನಡೆಯಿತು. ಆದಾಗ್ಯೂ, ಪಾಕಿಸ್ತಾನವು ಕಳೆದ ಏಕದಿನ ವಿಶ್ವಕಪ್ ಸೇರಿದಂತೆ ಅನೇಕ ಐಸಿಸಿ ಪಂದ್ಯಾವಳಿಗಳಿಗಾಗಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಿತ್ತು.

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಟೂರ್ನಿಗೆ ಅರ್ಹತೆ ಪಡೆದ ತಂಡಗಳಾಗಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

TK Chathunni: ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ, ಕೋಚ್​ ಟಿ.ಕೆ. ಚತುನ್ನಿ ನಿಧನ

TK Chathunni: 1979 ರಲ್ಲಿ ಚತುನ್ನಿ ಕೇರಳದ ಸಂತೋಷ್ ಟ್ರೋಫಿ ತಂಡದ ತರಬೇತುದಾರರಾಗಿದ್ದರು. ಜತೆಗೆ ಮೋಹನ್ ಬಗಾನ್, ಡೆಂಪೊ ಗೋವಾ ಮತ್ತು ಎಫ್‌ಸಿ ಕೊಚ್ಚಿನ್ ಸೇರಿದಂತೆ ಹಲವಾರು ಪ್ರಸಿದ್ಧ ತಂಡಗಳಿಗೆ ತರಬೇತಿ ನೀಡಿದ ಹಿರಿಮೆಯೂ ಅವರದ್ದಾಗಿದೆ

VISTARANEWS.COM


on

TK Chathunni
Koo

ನವದೆಹಲಿ: ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಟಿ.ಕೆ.ಚತುನ್ನಿTK Chathunni) (75) ಅವರು ಬುಧವಾರ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕೇರಳದ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು( ಬುಧವಾರ) ಬೆಳಗ್ಗೆ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ಖಚಿತಪಡಿಸಿದೆ.

ಗೋಲ್‌ಕೀಪರ್‌ ಆಗಿದ್ದ ಚತುನ್ನಿ, ಕೇರಳ ಮತ್ತು ಗೋವಾ ತಂಡದ ಪರ ಪ್ರತಿಷ್ಠಿತ ಸಂತೋಷ್‌ ಟ್ರೋಫಿ ಟೂರ್ನಿಯಲ್ಲಿ ಆಡಿದ್ದರು. ಆಟಗಾರನಾಗಿ ಮಾತ್ರವಲ್ಲದೆ ಭಾರತೀಯ ಫುಟ್‌ಬಾಲ್‌ನ ಅತ್ಯುತ್ತಮ ತರಬೇತುದಾರರಾಗಿಯೂ ಉತ್ತಮ ಸೇವೆ ಸಲ್ಲಿಸಿದ್ದಾರೆ. 40 ವರ್ಷಗಳ ಕಾಲ ಅವರು ಸೇವೆ ಸಲ್ಲಿಸಿದ್ದಾರೆ.

ಇವರ ಮಾರ್ಗದರ್ಶನಲ್ಲಿ ಐ.ಎಂ.ವಿಜಯನ್, ಬ್ರೂನೊ ಕುಟಿನ್ಹೊ, ಜೊ ಪಾಲ್ ಅಂಚೇರಿ, ಸಿ.ವಿ.ಪಾಪ್ಪಚ್ಚನ್ ಹಾಗೂ ಶರಫಾಲಿಯಂತಹ ಖ್ಯಾತ ಫುಟ್​ಬಾಲ್ ಕ್ರೀಡಾಪಟುಗಳು ಬೆಳಕಿಗೆ ಬಂದಿದ್ದರು. 1979 ರಲ್ಲಿ ಅವರು ಕೇರಳದ ಸಂತೋಷ್ ಟ್ರೋಫಿ ತಂಡದ ತರಬೇತುದಾರರಾಗಿದ್ದರು. ಜತೆಗೆ ಮೋಹನ್ ಬಗಾನ್, ಡೆಂಪೊ ಗೋವಾ ಮತ್ತು ಎಫ್‌ಸಿ ಕೊಚ್ಚಿನ್ ಸೇರಿದಂತೆ ಹಲವಾರು ಪ್ರಸಿದ್ಧ ತಂಡಗಳಿಗೆ ತರಬೇತಿ ನೀಡಿದ ಹಿರಿಮೆಯೂ ಅವರದ್ದಾಗಿದೆ.

ಇದನ್ನೂ ಓದಿ Harbhajan Singh: ಪಾಕ್​ ಆಟಗಾರನಿಗೆ ‘ನಾಲಾಯಕ್’ ಎಂದ ಹರ್ಭಜನ್​ ಸಿಂಗ್

‘ಫುಟ್ಬಾಲ್ ಮೈ ಸೋಲ್’ ಎಂಬ ಆತ್ಮಚರಿತ್ರೆಯನ್ನೂ ಕೂಡ ಬರೆದಿದ್ದಾರೆ. ಚತುನ್ನಿ ಅವರ ನಿಧನಕ್ಕೆ ಭಾರತೀಯ ಫುಟ್​ಬಾಲ್​ ಫೆಡರೇಶನ್​ ಸೇರಿ ಅನೇಕ ಹಾಲಿ ಮತ್ತು ಮಾಜಿ ಆಟಗಾರರು ಸಂತಾಪ ಸೂಚಿಸಿದ್ದಾರೆ.

ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌

ದೋಹಾ: ಮಂಗಳವಾರ ನಡೆದಿದ್ದ ಫಿಫಾ ವಿಶ್ವಕಪ್(FIFA World Cup) ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾರತ ತಂಡ ಕತಾರ್(India vs Qatar) ವಿರುದ್ಧ 2-1 ಗೋಲುಗಳ ಅಂತರದಿಂದ ಸೋತು ಐತಿಹಾಸಿಕ ಮೂರನೇ ಸುತ್ತಿಗೆ ಪ್ರವೇಶ ಪಡೆಯುವ ಅವಕಾಶ ಕಳೆದುಕೊಂಡಿತ್ತು. ಭಾರತದ ಈ ಸೋಲಿಗೆ ಈ ಪಂದ್ಯದಲ್ಲಿ ರೆಫರಿ ನೀಡಿರುವ ವಿವಾದಾತ್ಮಕ(Controversial Goal) ಗೋಲು ಪ್ರಮುಖ ಕಾರಣ ಎಂದು ರೆಫರಿ ಮತ್ತು ಸಂಘಟಕರ ವಿರುದ್ಧ ಎಲ್ಲಡೆ ವಿರೋಧ ವ್ಯಕ್ತವಾಗಿದೆ. ಈ ಕುರಿತು ದೂರು ದಾಖಲಿಸಿರುವ ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌(All India Football Federation) (ಎಐಎಫ್‌ಎಫ್‌) ತನಿಖೆಯನ್ನು ಬಯಸಿದೆ.

ಕತಾರ್‌ನ ಆಟಗಾರ ಅಬ್ದುಲ್ಲಾ ಅಲರಾಕ್ ಅವರ ‘ಫ್ರಿ-ಕಿಕ್’ ಅನ್ನು ಯೂಸೆಫ್ ಅಯೆಮ್ ಹೆಡರ್ ಮೂಲಕ ಭಾರತದ ಗೋಲು ಪೆಟ್ಟಿಗೆಗೆ ಸೇರಿಸಲು ಯತ್ನಿಸಿದರು. ಈ ವೇಳೆ ಭಾರತೀಯ ಗೋಲು ಕೀಪರ್ ಗುರ್ಪಿತ್ ಸಿಂಗ್ ಸಂಧು ಅವರು ಗೋಲು ಪೋಸ್ಟ್ ಸಮೀಪದಲ್ಲಿ ಚೆಂಡನ್ನು ತಡೆಯಲು ಯತ್ನಿಸಿದಾಗ ಕೈಯಿಂದ ಕೈಚೆಲ್ಲಿದ ಚೆಂಡು ಗೆರೆ ದಾಟಿ ಹೊರಗೆ ಹೋಯಿತು. ಇದು ರಿಪ್ಲೇಯಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಆದರೆ ಈ ವೇಳೆ ಮೋಸದಾಟದ ಮೂಲಕ ಕತಾರ್ ಆಟಗಾರ ಹಶ್ಮಿ ಹುಸೇನ್ ಚೆಂಡನ್ನು ಮತ್ತೆ ಒಳಕ್ಕೆ ಒದ್ದಿದ್ದಾರೆ. ಈ ವೇಳೆ ಮತೋರ್ವ ಆಟಗಾರ ಯೂಸುಫ್ ಐಮೆನ್ ಚೆಂಡನ್ನು ಬಲೆಯೊಳಗೆ ಸೇರಿಸಿದ್ದಾರೆ. ರೆಫರಿ ಗೋಲ್​ ಎಂದು ತೀರ್ಪು ನೀಡಿದರು.

ಚೆಂಡು ಭಾರತೀಯ ಗೋಲು ಕೀಪರ್ ಕೈಗೆ ತಾಗಿ ಹೊರ ಹೋಗಿರುವುದು ಸ್ಪಷ್ಟವಾಗಿ ಕಂಡು ಬಂದರೂ ಕೂಡ ರೆಫರಿಗಳು ಕತಾರ್​ಗೆ ಯಾವ ಮಾನದಂಡದಲ್ಲಿ ಗೋಲು ನೀಡಿದರು ಎನ್ನುವುದು ಈಗ ಚರ್ಚೆಗೆ ಕಾರಣವಾಗಿದೆ. ಫಿಫಾ ನಿಯಮದ ಪ್ರಕಾರ ಚೆಂಡು ಗೆರೆ ದಾಟಿದ ಬಳಿಕ ಆಟ ಅಲ್ಲಿಗೆ ನಿಲುಗಡೆಗೊಳ್ಳಬೇಕು. ಜತೆಗೆ ಕತಾರ್‌ಗೆ ‘ಕಾರ್ನರ್-ಕಿಕ್’ ನೀಡಬೇಕಿತ್ತು. ಆದರೆ ಇಲ್ಲಿ ಹೀಗಾಗಲಿಲ್ಲ.

Continue Reading

ಕ್ರೀಡೆ

Virat Kohli: ಅಮೆರಿಕ ವಿರುದ್ಧವಾದರೂ ವಿಶ್ವ ದಾಖಲೆ ನಿರ್ಮಿಸಲಿದ್ದಾರಾ ಕಿಂಗ್​ ಕೊಹ್ಲಿ?

Virat Kohli: ಸತತವಾಗಿ 2 ಪಂದ್ಯಗಳಲ್ಲಿ ಬ್ಯಾಟಿಂಗ್​ ವೈಫಲ್ಯ ಕಂಡ ಬೆನ್ನಲ್ಲೇ ವಿರಾಟ್​ ಕೊಹ್ಲಿ ಅವರು ನ್ಯೂಯಾರ್ಕ್​ನಲ್ಲಿರುವ ಸಚಿನ್​ ತೆಂಡೂಲ್ಕರ್​ ಅವರನ್ನು ಭೇಟಿಯಾಗಿದ್ದಾರೆ. ಉಭಯ ಆಟಗಾರರ ಭೇಟಿಯ ಫೋಟೊ ವೈರಲ್​ ಆಗಿದೆ. ಮೂಲಗಳ ಪ್ರಕಾರ ಬ್ಯಾಟಿಂಗ್​ ಸಲಹೆ ಪಡೆಯಲೆಂದೇ ಕೊಹ್ಲಿ ಸಚಿನ್​ ಭೇಟಿಯಾಗಿದ್ದು ಎನ್ನಲಾಗಿದೆ.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಕಳೆದ ಎರಡು ಪಂದ್ಯಗಳಲ್ಲಿ ಒಂದಂಕಿಗೆ ಸೀಮಿತರಾಗಿ ಘೋರ ಬ್ಯಾಟಿಂಗ್​ ವೈಫಲ್ಯ ಕಂಡಿದ್ದ ಟೀಮ್​ ಇಂಡಿಯಾದ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ(Virat Kohli) ಅಮೆರಿಕ(United States vs India) ವಿರುದ್ಧ ಇಂದು(ಬುಧವಾರ) ನಡೆಯುವ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್​ ಪ್ರದರ್ಶನ ತೋರುವ ಆತ್ಮವಿಶ್ವಾಸದಲ್ಲಿದ್ದಾರೆ. ಜತೆಗೆ ವಿಶ್ವ ದಾಖಲೆಯೊಂದನ್ನು ನಿರ್ಮಿಸುವ ಅವಕಾಶವೂ ಅವರ ಮುಂದಿದೆ.

ಹೌದು, ವಿರಾಟ್​ ಕೊಹ್ಲಿ ಅವರು ಇಂದಿನ ಪಂದ್ಯದಲ್ಲಿ 8 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಮೊದಲ ಆಟಗಾರ ಎನ್ನುವ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಲಿದ್ದಾರೆ. ಸದ್ಯ ಈ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ಹೆಸರಿನಲ್ಲಿದೆ. ಜಯವರ್ಧನೆ 111 ಬೌಂಡರಿ ಬಾರಿಸಿದ್ದರೆ, ಕೊಹ್ಲಿ ಸದ್ಯ 103* ಬೌಂಡರಿ ಬಾರಿಸಿದ್ದಾರೆ. 

ಕಳೆದ ಐರ್ಲೆಂಡ್​ ಮತ್ತು ಪಾಕ್​ ವಿರುದ್ಧದ ಪಂದ್ಯದಲ್ಲಿಯೇ ಕೊಹ್ಲಿಗೆ ಈ ದಾಖಲೆ ನಿರ್ಮಿಸುವ ಅವಕಾಶವಿತ್ತು. ಆದರೆ ಕೊಹ್ಲಿ ಪಾಕ್​ ವಿರುದ್ಧ ಒಂದು ಬೌಂಡರಿ ಮಾತ್ರ ಬಾರಿಸಿದ್ದರು. ಇದೀಗ ಈ ಪಂದ್ಯದಲ್ಲಾದರೂ ಅವರು ಉತ್ತಮ ಬ್ಯಾಟಿಂಗ್​ ನಡೆಸಿ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಲಿದ್ದಾರಾ? ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IND vs USA: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ; ಯಾರಿಗೆ ಕೊಕ್​?

ಜೈಸ್ವಾಲ್​ ಓಪನಿಂಗ್​?


ಈಗಾಗಲೇ ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದಕ್ಕೆ ಹಲವು ಮಾಜಿ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ದ್ವಿತೀಯ ಕ್ರಮಾಂಕದಲ್ಲಿ ಆಡಿದರೇ ಸೂಕ್ತ ಎಂದಿದ್ದಾರೆ. ಇಂದಿನ ಪಂದ್ಯದಲ್ಲಿ ಜೈಸ್ವಾಲ್​ಗೆ ಅವಕಾಶ ನೀಡಿದ್ದೇ ಆದರೆ, ರೋಹಿತ್​ ಜತೆ ಜೈಸ್ವಾಲ್​ ಇನಿಂಗ್ಸ್​ ಆರಂಭಿಸಬಹುದು.

ಟ20 ವಿಶ್ವಕಪ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಬ್ಯಾಟರ್​ಗಳು

ಆಟಗಾರದೇಶಇನಿಂಗ್ಸ್​ಬೌಂಡರಿ
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್ ಕೊಹ್ಲಿಭಾರತ29104*
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ಡೇವಿಡ್​ ವಾರ್ನರ್ಆಸ್ಟ್ರೇಲಿಯಾ3797*
ರೋಹಿತ್​ ಶರ್ಮ​ಭಾರತ3896*
ಕ್ರಿಸ್​ ಗೇಲ್​ವೆಸ್ಟ್​ ಇಂಡೀಸ್​3178
ಜಾಸ್​ ಬಟ್ಲರ್​ಇಂಗ್ಲೆಂಡ್​2974*
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್​2669*
ಬ್ರೆಂಡನ್ ಮೆಕಲಮ್ನ್ಯೂಜಿಲ್ಯಾಂಡ್2567
ಕುಮಾರ್ ಸಂಗಕ್ಕಾರಶ್ರೀಲಂಕಾ3163

ಸಚಿನ್​ ಭೇಟಿಯಾದ ಕೊಹ್ಲಿ


ಸತತವಾಗಿ 2 ಪಂದ್ಯಗಳಲ್ಲಿ ಬ್ಯಾಟಿಂಗ್​ ವೈಫಲ್ಯ ಕಂಡ ಬೆನ್ನಲ್ಲೇ ವಿರಾಟ್​ ಕೊಹ್ಲಿ ಅವರು ನ್ಯೂಯಾರ್ಕ್​ನಲ್ಲಿರುವ ಸಚಿನ್​ ತೆಂಡೂಲ್ಕರ್​ ಅವರನ್ನು ಭೇಟಿಯಾಗಿದ್ದಾರೆ. ಉಭಯ ಆಟಗಾರರ ಭೇಟಿಯ ಫೋಟೊ ವೈರಲ್​ ಆಗಿದೆ. ಮೂಲಗಳ ಪ್ರಕಾರ ಬ್ಯಾಟಿಂಗ್​ ಸಲಹೆ ಪಡೆಯಲೆಂದೇ ಕೊಹ್ಲಿ ಸಚಿನ್​ ಭೇಟಿಯಾಗಿದ್ದು ಎನ್ನಲಾಗಿದೆ.

2 ಬದಲಾವಣೆ


ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾ ತನ್ನ ಆಡುವ ಬಳಗಲ್ಲಿ 2 ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆಲ್​ರೌಂಡರ್​ಗಳಾದ ಶಿವಂ ದುಬೆ(Shivam Dube) ಮತ್ತು ರವೀಂದ್ರ ಜಡೇಜಾ(Ravindra Jadeja) ಅವರನ್ನು ಕೈಬಿಡಲಾಗುವುದು ಎಂಬ ಮಾತುಗಳು ಕೇಳಿಬಂದಿವೆ.

​ಶಿವಂ ದುಬೆ ಆಲ್​ರೌಂಡರ್​ ಕೋಟದಲ್ಲಿ ಕಳೆದ 2 ಪಂದ್ಯಗಳಲ್ಲಿ ಆಡಿದ್ದರೂ ಕೂಡ ಬೌಲಿಂಗ್​ ನಡೆಸಿರಲಿಲ್ಲ. ಅಲ್ಲದೆ ಪಾಕ್​ ವಿರುದ್ಧ ಬ್ಯಾಟಿಂಗ್​ ಅವಕಾಶ ಸಿಕ್ಕರೂ ಇದನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಕೇವಲ 3 ರನ್​ ಗಳಿಸಿದ್ದರು. ಜತೆಗೆ ಕಳಪೆ ಫೀಲ್ಡಿಂಗ್​ ಮೂಲಕ ಕ್ಯಾಚ್​ ಒಂದನ್ನು ಕೂಡ ಕೈಚೆಲ್ಲಿದ್ದರು. ಜಡೇಜಾ ಕೂಡ ಆಡಿದ 2 ಪಂದ್ಯಗಳಲ್ಲಿಯೂ ವಿಕೆಟ್​ ಲೆಸ್​ ಎನಿಸಿಕೊಂಡಿದ್ದಾರೆ. ಹೀಗಾಗಿ ಉಭಯ ಆಟಗಾರರನ್ನು ಕೈ ಬಿಟ್ಟು ಇವರ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್​ ಮತ್ತು ಕುಲ್​ದೀಪ್​ ಯಾದವ್​ ಅವರನ್ನು ಆಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Continue Reading

ಕ್ರೀಡೆ

FIFA World Cup: ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌

FIFA World Cup: ಚೆಂಡು ಭಾರತೀಯ ಗೋಲು ಕೀಪರ್ ಕೈಗೆ ತಾಗಿ ಹೊರ ಹೋಗಿರುವುದು ಸ್ಪಷ್ಟವಾಗಿ ಕಂಡು ಬಂದರೂ ಕೂಡ ರೆಫರಿಗಳು ಕತಾರ್​ಗೆ ಯಾವ ಮಾನದಂಡದಲ್ಲಿ ಗೋಲು ನೀಡಿದರು ಎನ್ನುವುದು ಈಗ ಚರ್ಚೆಗೆ ಕಾರಣವಾಗಿದೆ. ಫಿಫಾ ನಿಯಮದ ಪ್ರಕಾರ ಚೆಂಡು ಗೆರೆ ದಾಟಿದ ಬಳಿಕ ಆಟ ಅಲ್ಲಿಗೆ ನಿಲುಗಡೆಗೊಳ್ಳಬೇಕು. ಜತೆಗೆ ಕತಾರ್‌ಗೆ ‘ಕಾರ್ನರ್-ಕಿಕ್’ ನೀಡಬೇಕಿತ್ತು. ಆದರೆ ಇಲ್ಲಿ ಹೀಗಾಗಲಿಲ್ಲ.

VISTARANEWS.COM


on

FIFA World Cup
Koo

ದೋಹಾ: ಮಂಗಳವಾರ ನಡೆದಿದ್ದ ಫಿಫಾ ವಿಶ್ವಕಪ್(FIFA World Cup) ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾರತ ತಂಡ ಕತಾರ್(India vs Qatar) ವಿರುದ್ಧ 2-1 ಗೋಲುಗಳ ಅಂತರದಿಂದ ಸೋತು ಐತಿಹಾಸಿಕ ಮೂರನೇ ಸುತ್ತಿಗೆ ಪ್ರವೇಶ ಪಡೆಯುವ ಅವಕಾಶ ಕಳೆದುಕೊಂಡಿತ್ತು. ಭಾರತದ ಈ ಸೋಲಿಗೆ ಈ ಪಂದ್ಯದಲ್ಲಿ ರೆಫರಿ ನೀಡಿರುವ ವಿವಾದಾತ್ಮಕ(Controversial Goal) ಗೋಲು ಪ್ರಮುಖ ಕಾರಣ ಎಂದು ರೆಫರಿ ಮತ್ತು ಸಂಘಟಕರ ವಿರುದ್ಧ ಎಲ್ಲಡೆ ವಿರೋಧ ವ್ಯಕ್ತವಾಗಿದೆ. ಈ ಕುರಿತು ದೂರು ದಾಖಲಿಸಿರುವ ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌(All India Football Federation) (ಎಐಎಫ್‌ಎಫ್‌) ತನಿಖೆಯನ್ನು ಬಯಸಿದೆ.

ಈ ಪಂದ್ಯದಲ್ಲಿ ಲಾಲಿಯನ್ಜುವಾಲಾ ಚಾಂಗ್ಟೆ ಅವರು 37 ನೇ ನಿಮಿಷದಲ್ಲಿ ದಾಖಲಿಸಿದ ಗೋಲಿನಿಂದ ಭಾರತ ಮುಂದಿತ್ತು. ಆದರೆ, 73ನೇ ನಿಮಿಷದಲ್ಲಿ ಕತಾರ್‌ನ ಯೂಸುಫ್ ಐಮೆನ್ ವಿವಾದಾತ್ಮಕ ಗೋಲು ಗಳಿಸಿದರು. ಇದು ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬೀರುವಂತಾಯಿತು.

ಏನಿದು ಘಟನೆ?


ಕತಾರ್‌ನ ಆಟಗಾರ ಅಬ್ದುಲ್ಲಾ ಅಲರಾಕ್ ಅವರ ‘ಫ್ರಿ-ಕಿಕ್’ ಅನ್ನು ಯೂಸೆಫ್ ಅಯೆಮ್ ಹೆಡರ್ ಮೂಲಕ ಭಾರತದ ಗೋಲು ಪೆಟ್ಟಿಗೆಗೆ ಸೇರಿಸಲು ಯತ್ನಿಸಿದರು. ಈ ವೇಳೆ ಭಾರತೀಯ ಗೋಲು ಕೀಪರ್ ಗುರ್ಪಿತ್ ಸಿಂಗ್ ಸಂಧು ಅವರು ಗೋಲು ಪೋಸ್ಟ್ ಸಮೀಪದಲ್ಲಿ ಚೆಂಡನ್ನು ತಡೆಯಲು ಯತ್ನಿಸಿದಾಗ ಕೈಯಿಂದ ಕೈಚೆಲ್ಲಿದ ಚೆಂಡು ಗೆರೆ ದಾಟಿ ಹೊರಗೆ ಹೋಯಿತು. ಇದು ರಿಪ್ಲೇಯಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಆದರೆ ಈ ವೇಳೆ ಮೋಸದಾಟದ ಮೂಲಕ ಕತಾರ್ ಆಟಗಾರ ಹಶ್ಮಿ ಹುಸೇನ್ ಚೆಂಡನ್ನು ಮತ್ತೆ ಒಳಕ್ಕೆ ಒದ್ದಿದ್ದಾರೆ. ಈ ವೇಳೆ ಮತೋರ್ವ ಆಟಗಾರ ಯೂಸುಫ್ ಐಮೆನ್ ಚೆಂಡನ್ನು ಬಲೆಯೊಳಗೆ ಸೇರಿಸಿದ್ದಾರೆ. ರೆಫರಿ ಗೋಲ್​ ಎಂದು ತೀರ್ಪು ನೀಡಿದರು.

ರೆಫರಿ ನಿರ್ಧಾರಕ್ಕೆ ಭಾರತೀಯ ಆಟಗಾರರು ಮೈದಾನದಲ್ಲೇ ತೀವ್ರ ಪ್ರತಿರೋಧ ತೋರಿದರೂ, ರೆಫರಿಗಳು ಪರಿಗಣಿಸಲೇ ಇಲ್ಲ. ಇದರಿಂದಾಗಿ ಪಂದ್ಯದಲ್ಲಿ ಭಾರತ ಹಿನ್ನಡೆ ಅನುಭವಿಸಿತು. ಬಳಿಕ 85ನೇ ನಿಮಿಷದಲ್ಲಿ ಅಹ್ಮದ್ ಅಲ್-ರಾವಿ ಗಳಿಸಿದ ಗೋಲಿನಿಂದ ಕತಾರ್ ಗೆಲುವು ಸಾಧಿಸಿತ್ತು.

ಇದನ್ನೂ ಓದಿ FIFA World Cup: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ಭುವನೇಶ್ವರ, ಗುವಾಹಟಿ ಆತಿಥ್ಯ

ಚೆಂಡು ಭಾರತೀಯ ಗೋಲು ಕೀಪರ್ ಕೈಗೆ ತಾಗಿ ಹೊರ ಹೋಗಿರುವುದು ಸ್ಪಷ್ಟವಾಗಿ ಕಂಡು ಬಂದರೂ ಕೂಡ ರೆಫರಿಗಳು ಕತಾರ್​ಗೆ ಯಾವ ಮಾನದಂಡದಲ್ಲಿ ಗೋಲು ನೀಡಿದರು ಎನ್ನುವುದು ಈಗ ಚರ್ಚೆಗೆ ಕಾರಣವಾಗಿದೆ. ಫಿಫಾ ನಿಯಮದ ಪ್ರಕಾರ ಚೆಂಡು ಗೆರೆ ದಾಟಿದ ಬಳಿಕ ಆಟ ಅಲ್ಲಿಗೆ ನಿಲುಗಡೆಗೊಳ್ಳಬೇಕು. ಜತೆಗೆ ಕತಾರ್‌ಗೆ ‘ಕಾರ್ನರ್-ಕಿಕ್’ ನೀಡಬೇಕಿತ್ತು. ಆದರೆ ಇಲ್ಲಿ ಹೀಗಾಗಲಿಲ್ಲ.

ತನಿಖೆಗೆ ಆಗ್ರಹ


ರೆಫರಿ ವಿವಾದಾತ್ಮಕ ತೀರ್ಪಿನ ಕುರಿತು ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ (ಎಐಎಫ್‌ಎಫ್‌) ದೂರು ದಾಖಲಿಸಿ ತನಿಖೆಗೆ ಬಯಸಿದೆ.

Continue Reading

ಕ್ರೀಡೆ

Harbhajan Singh: ಪಾಕ್​ ಆಟಗಾರನಿಗೆ ‘ನಾಲಾಯಕ್’ ಎಂದ ಹರ್ಭಜನ್​ ಸಿಂಗ್

Harbhajan Singh: ಎಎನ್​ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್​ ಸಿಂಗ್ ಅವರು ಕಮ್ರಾನ್​ ಅಕ್ಮಲ್​ ಒಬ್ಬ ನಾಲಾಯಕ್​, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.

VISTARANEWS.COM


on

Harbhajan Singh
Koo

ಮುಂಬಯಿ: ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಜನಾಂಗೀಯ ನಿಂದನೆ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಕಮ್ರಾನ್​ ಅಕ್ಮಲ್(Kamran Akmal) ವಿರುದ್ಧ ಹರ್ಭಜನ್​ ಸಿಂಗ್(Harbhajan Singh) ಮತ್ತೆ ಕಿಡಿ ಕಾರಿದ್ದಾರೆ. ನಿನೋಬ್ಬ ನಾಲಾಯಕ್(Nalaayak)​ ಎಂದು ಹೇಳಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಎಎನ್​ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್​ ಸಿಂಗ್ ಅವರು ಕಮ್ರಾನ್​ ಅಕ್ಮಲ್​ ಒಬ್ಬ ನಾಲಾಯಕ್​, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.

ಇದಕ್ಕೂ ಮುನ್ನ ಹರ್ಭಜನ್​ ಸಿಂಗ್​ ಅವರು ಟ್ವೀಟ್​ ಮಾಡಿ ಅಕ್ಮಲ್​ ವಿರುದ್ಧ ಆಕ್ರೋಶ ಹೊರಹಾಕಿದ್ದರು. ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ IND vs USA: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ; ಯಾರಿಗೆ ಕೊಕ್​?

ಕ್ಷಮೆ ಕೇಳಿದ್ದ ಅಕ್ಮಲ್​


ವಿವಾದಾತ್ಮಕ ಹೇಳಿಕೆಗೆ ಭಾರೀ ಟಿಕೆ ಮತ್ತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಮ್ರಾನ್​ ಅಕ್ಮಲ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕ್ಷಮೆ ಯಾಚಿಸಿದ್ದರು. “ಇತ್ತೀಚಿನ ನನ್ನ ಹೇಳಿಕೆಗೆ ಹರ್ಭಜನ್ ಸಿಂಗ್ ಮತ್ತು ಸಿಕ್ಖ್ ಸಮುದಾಯದ ಬಳಿ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತಿದ್ದೇನೆ. ನನ್ನ ಮಾತುಗಳು ಅಗೌರವ ಮತ್ತು ಅಸಮರ್ಪಕ. ವಿಶ್ವಾದ್ಯಂತ ಇರುವ ಸಿಕ್ಖ್ ಸಮುದಾಯದ ಮೇಲೆ ನನಗೆ ಅಪಾರ ಗೌರವ ಇದೆ. ಯಾರನ್ನೂ ನೋಯಿಸುವ ಉದ್ದೇಶ ನನಗೆ ಇರಲಿಲ್ಲ. ನಿಜವಾಗಿಯೂ ಕ್ಷಮೆ ಯಾಚಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದರು.

ಏನಿದು ಪ್ರಕರಣ?


ಭಾನುವಾರ ಪಾಕ್​ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಭಾರತ ತಂಡದ ವೇಗಿ ಅರ್ಶ್​ದೀಪ್ ಅವರು ಪಂದ್ಯದ ಕೊನೆಯ ಓವರ್ ಬೌಲಿಂಗ್ ಮಾಡುತ್ತಿದ್ದ ವೇಳೆ ಅಕ್ಮಲ್​ “ಕುಚ್ ಭೀ ಹೋ ಸಕ್ತಾ ಹೈ.. 12 ಬಜ್ ಗಯೇ ಹೈ (ಏನು ಬೇಕಾದರೂ ಸಂಭವಿಸಬಹುದು. 12 ರ ನಂತರ ಯಾವುದೇ ಸಿಖ್ಖರನ್ನು ನೀಡಲಾಗುವುದಿಲ್ಲ) ಎಂದು ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ಭಾನುವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ, ಪಾಕ್​ ಬೌಲರ್​ಗಳ ನಿಖರ ದಾಳಿಗೆ ತಡೆಯೊಡ್ಡುವಲ್ಲಿ ವಿಫಲವಾಗಿ ಕೇವಲ 119 ರನ್ನಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಪಾಕ್ ಕೂಡ ಭಾರತದ ಬೌಲಿಂಗ್ ದಾಳಿಗೆ ನಲುಗಿ 7 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ ಸೋಲು ಕಂಡಿತು. ಮೊಹಮ್ಮದ್ ರಿಜ್ವಾನ್(31) ಒಂದು ಹಂತದ ವರೆಗೆ ಭಾರತೀಯ ಬೌಲರ್​ಗಳನ್ನು ಕಾಡಿದರೂ ಕೂಡ ಬುಮ್ರಾ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಇಲ್ಲಿಂದ ಪಾಕ್​ ಕುಸಿತ ಕೂಡ ಆರಂಭವಾಯಿತು. ಭಾರತ ಪಂದ್ಯವನ್ನು ಗೆದ್ದು ಬೀಗುವಲ್ಲಿ ಯಶಸ್ಸು ಕಂಡಿತ್ತು.

Continue Reading
Advertisement
karnataka weather Forecast
ಮಳೆ5 mins ago

Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

TK Chathunni
ಕ್ರೀಡೆ8 mins ago

TK Chathunni: ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ, ಕೋಚ್​ ಟಿ.ಕೆ. ಚತುನ್ನಿ ನಿಧನ

Ready Saree Fashion Tips
ಫ್ಯಾಷನ್25 mins ago

Ready Saree Fashion Tips: ರೆಡಿ ಸೀರೆ ಪ್ರಿಯರು ಮರೆಯದೇ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Virat Kohli
ಕ್ರೀಡೆ35 mins ago

Virat Kohli: ಅಮೆರಿಕ ವಿರುದ್ಧವಾದರೂ ವಿಶ್ವ ದಾಖಲೆ ನಿರ್ಮಿಸಲಿದ್ದಾರಾ ಕಿಂಗ್​ ಕೊಹ್ಲಿ?

Chandrababu Naidu
ದೇಶ58 mins ago

Chandrababu Naidu: ವಯಸ್ಸಲ್ಲಿ ಕಿರಿಯರಾದ ಮೋದಿ ಪಾದ ಮುಟ್ಟಲು ಮುಂದಾದ ಚಂದ್ರಬಾಬು ನಾಯ್ಡು; Video ಇದೆ

Benefits Of Eating Guava
ಆರೋಗ್ಯ1 hour ago

Benefits Of Eating Guava: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

Actor Darshan
ಪ್ರಮುಖ ಸುದ್ದಿ1 hour ago

Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

FIFA World Cup
ಕ್ರೀಡೆ1 hour ago

FIFA World Cup: ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌

Terror attack
ದೇಶ1 hour ago

Terror attack: ಮಗುವಿಗಾಗಿ ಪ್ರಾರ್ಥಿಸಲು ಹೋಗಿದ್ದ ದಂಪತಿ; ಪತ್ನಿ ಎದುರೇ ಉಗ್ರರ ಗುಂಡಿಗೆ ಬಲಿಯಾದ ಪತಿ

Actor Darshan wife Vijayalakshmi will get divorce
ಸ್ಯಾಂಡಲ್ ವುಡ್2 hours ago

Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌