Kantara Movie: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌! - Vistara News

ಸ್ಯಾಂಡಲ್ ವುಡ್

Kantara Movie: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

Kantara Movie: ‘ಕಾಂತಾರ: ಚಾಪ್ಟರ್ 1’ ಚಿತ್ರೀಕರಣಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಇತ್ತೀಚಿನ ವರದಿಗಳ ಪ್ರಕಾರ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 20 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ವರದಿಯಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ.

VISTARANEWS.COM


on

Kantara Movie Massive Set Constructed In Kundapura
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʼಕಾಂತಾರʼ ಪ್ಯಾನ್‌ (Kantara Movie) ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತ್ತು. ಹೀಗಾಗಿ ಪ್ರೀಕ್ವೆಲ್ ಕೂಡ ಕನ್ನಡದ ಜತೆಗೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿದೆ. ಕೆಲವು ದಿನಗಳ ಹಿಂದೆ ಹೊರ ಬಿದ್ದ ಫಸ್ಟ್‌ ಲುಕ್‌ ಪೋಸ್ಟರ್‌ ದೇಶದ ಗಮನ ಸೆಳೆದಿತ್ತು. ಇದನ್ನೂ ಹೊಂಬಾಳೆ ಫಿಲ್ಮ್ಸ್‌ (Hombale Films) ನಿರ್ಮಿಸಲಿದ್ದು, ಅಂದಾಜು 125 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ. ‘ಕಾಂತಾರ: ಚಾಪ್ಟರ್ 1’ ಚಿತ್ರೀಕರಣಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಇತ್ತೀಚಿನ ವರದಿಗಳ ಪ್ರಕಾರ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 200×200 ಅಡಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ.

ಒಂದು ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆ ಇದ್ದು, 20 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ವರದಿಯಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ.

ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಂದ ಸೆಟ್ ನಿರ್ಮಾಣಕ್ಕಾಗಿ 600 ನುರಿತ ಬಡಗಿಗಳು ಮತ್ತು ಸ್ಟಂಟ್ ಮಾಸ್ಟರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ರಾಮೋಜಿ ಫಿಲ್ಮ್‌ ಸಿಟಿಯ ನಂತರ ದೇಶದಲ್ಲೇ ಅತಿ ದೊಡ್ಡ ಸೆಟ್‌ ಇದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

ಕಾಂತಾರʼ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾ ಪಂಜುರ್ಲಿ ದೈವ ಮತ್ತು ಗುಳಿಗ ದೈವಗಳ ಮೂಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ.

ಕಾಂತಾರ ಒಂದು ದಂತಕಥೆʼ ಎಂದರೆ ಮೊದಲ ಭಾಗ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗಿತ್ತು. ಇದೀಗ ಪ್ರೀಕ್ವೆಲ್ ರೈಟ್ಸ್ ಕೂಡ ಅಮೇಜಾನ್ ಪ್ರೈಂ ವಿಡಿಯೋ ಪಾಲಾಗಿದೆ. ಕೆಲವು ಮೂಲಗಳ ಪ್ರಕಾರ ಚಿತ್ರದಲ್ಲಿ ಒಂದಕ್ಕಿಂತ ಹೆಚ್ಚು ನಾಯಕಿಯ ಪಾತ್ರ ಇರಲಿದೆ ಎನ್ನಲಾಗಿದೆ. ಇನ್ನು ಕೆಲವು ವರದಿಗಳು ನಾಯಕಿಯಾಗಿ ರುಕ್ಮಿಣಿ ವಸಂತ್‌ ಆಯ್ಕೆಯಾಗಿದ್ದಾರೆ ಎಂದಿವೆ. ಚಿತ್ರತಂಡ ಇನ್ನೂ ಈ ವಿಚಾರವನ್ನು ಅಧಿಕೃತವಾಗಿ ಘೋಷಿಸಿಲ್ಲ.

ಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಿ ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ವರದಿಗಳ ಪ್ರಕಾರ ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Kannada New Movie: ‘ಫಾರೆಸ್ಟ್’ ಸಿನಿಮಾದ ಮೊದಲ ಹಾಡು ರಿಲೀಸ್!

Kannada New Movie: ಈ ಹಿಂದೆ ‘ಡಬಲ್ ಇಂಜಿನ್’, ‘ಬಾಂಬೆ ಮಿಠಾಯಿ’, ‘ಬ್ರಹ್ಮಚಾರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಚಂದ್ರಮೋಹನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆ ಹೇಳುವಂತೆ ಇದೊಂದು ಫಾರೆಸ್ಟ್ ಅಡ್ವೆಂಚರಸ್ ಕಾಮಿಡಿ ಸಿನಿಮಾವಾಗಿದ್ದು, ಹಿರಿಯ ನಟ ಅವಿನಾಶ್ , ಪ್ರಕಾಶ್ ತುಮ್ಮಿನಾಡ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ದೀಪಕ್ ರೈ ಪಾಣಾಜೆ, ಸೂರಜ್ ಪಾಪ್ಸ್ ಸುನಿಲ್ ಕುಮಾರ್ ತಾರಾಬಳಗದಲ್ಲಿದ್ದಾರೆ.

VISTARANEWS.COM


on

Kannada New Movie Odo Odo Odo Kailash Kher
Koo

ಬೆಂಗಳೂರು: ಸ್ಯಾಂಡಲ್ ವುಡ್ ಉಪಾಧ್ಯಕ್ಷ (Kannada New Movie) ಚಿಕ್ಕಣ್ಣ ಸ್ನೇಹಿತರ ಜತೆಗೂಡಿನ ಕಾಡಿನ ಕತೆ ಹೇಳೋಕೆ ರೆಡಿ ಆಗಿದ್ದಾರೆ. ಶೇಕಡ 80 ರಷ್ಟು ಸಿನಿಮಾ ಕಾಡಿನಲ್ಲಿಯೇ ಸಾಗುತ್ತದೆ. ಅದಕ್ಕೇನೆ ಚಿತ್ರಕ್ಕೆ ʻಫಾರೆಸ್ಟ್ʼ ಅಂತಲೇ ಹೆಸರಿಡಲಾಗಿದೆ. ಈ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ʻಓಡೋ ಓಡೋʼ ಎಂದು ಶುರುವಾಗುವ ಹಾಡಿಗೆ ಪುನೀತ್ ಆರ್ಯ ಕ್ಯಾಚಿ ಮ್ಯಾಚಿ ಪದ ಪೊಣಿಸಿದ್ದಾರೆ, ಖ್ಯಾತ ಗಾಯಕ ಕೈಲಾಸ್ ಖೇರ್ ಹಾಗೂ ಹರ್ಷ ಉಪ್ಪಾರ್ ಧ್ವನಿಯಾಗಿದ್ದಾರೆ. ಧರ್ಮ ವಿಶ್ ಹಾಡಿಗೆ ಸಂಗೀತ ಒದಗಿಸಿದ್ದಾರೆ. ಓಡೋ ಓಡೋ ಹಾಡಿನಲ್ಲಿ ಚಿಕ್ಕಣ್ಣ ರಂಗಾಯಣ ರಘು, ಫಸ್ಟ್Rank ರಾಜು, ಅನೀಶ್ ತೇಜೇಶ್ವರ್ ಹಾಗೂ ಅರ್ಚನಾ ಕೊಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಈ ಹಿಂದೆ ‘ಡಬಲ್ ಇಂಜಿನ್’, ‘ಬಾಂಬೆ ಮಿಠಾಯಿ’, ‘ಬ್ರಹ್ಮಚಾರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಚಂದ್ರಮೋಹನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆ ಹೇಳುವಂತೆ ಇದೊಂದು ಫಾರೆಸ್ಟ್ ಅಡ್ವೆಂಚರಸ್ ಕಾಮಿಡಿ ಸಿನಿಮಾವಾಗಿದ್ದು, ಹಿರಿಯ ನಟ ಅವಿನಾಶ್ , ಪ್ರಕಾಶ್ ತುಮ್ಮಿನಾಡ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ದೀಪಕ್ ರೈ ಪಾಣಾಜೆ, ಸೂರಜ್ ಪಾಪ್ಸ್ ಸುನಿಲ್ ಕುಮಾರ್ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

‘ಫಾರೆಸ್ಟ್’ ಸಿನಿಮಾಕ್ಕೆ ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಕಾಂತರಾಜು ಎಂಬುವವರು ಹಣ ಹಾಕುತ್ತಿದ್ದಾರೆ. ಚಿತ್ರಕ್ಕೆ ವಿ ರವಿಕುಮಾರ್ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನದ ಹೊಣೆಯನ್ನು ಅರ್ಜುನ್ ಕಿಟ್ಟು ಹೊತ್ತುಕೊಂಡಿದ್ದಾರೆ. ಧರ್ಮವೀರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿರುವ ಚಿತ್ರತಂಡ, ಮಡಿಕೇರಿ, ಮಂಗಳೂರು, ಚಿಕ್ಕಮಗಳೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಫಾರೆಸ್ಟ್ ಚಿತ್ರತಂಡ ಆಗಸ್ಟ್ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ.

Continue Reading

ಕರ್ನಾಟಕ

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Kannada New Movie: “ಫ್ಯಾಮಿಲಿ ಡ್ರಾಮ” ಚಿತ್ರದ ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

VISTARANEWS.COM


on

Family drama Kannada movie song
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾಗಳಲ್ಲಿ ‘ಫ್ಯಾಮಿಲಿ ಡ್ರಾಮ’ ಕೂಡ ಒಂದು. ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ ಫ್ಯಾಮಿಲಿ ಡ್ರಾಮ ಸದ್ಯ ಇಂಟ್ರೆಸ್ಟಿಂಗ್ ಟೈಟಲ್ ಟ್ರ್ಯಾಕ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಯುವ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ‘ಫ್ಯಾಮಿಲಿ ಡ್ರಾಮಾ’ ಹಾಡು ಕೂಡ ಚಿತ್ರದ (Kannada New Movie) ಮೇಲಿನ ಕುತೂಹಲ ಹೆಚ್ಚಿಸಿದೆ. ಇತ್ತೀಚಿಗಷ್ಟೇ ರಿಲೀಸ್ ಆಗಿದ್ದ ಟ್ರೈಲರ್ ಸಖತ್ ಕ್ರಿಯೇಟಿವ್‌ ಆಗಿದ್ದು, ಇದೊಂದು ಮಾಮೂಲಿ ಸಿನಿಮಾವಲ್ಲ, ವಿನೂತನ ಮತ್ತು ವಿಭಿನ್ನವಾದ ಸಿನಿಮಾ ಎನ್ನುವುದನ್ನು ಹೇಳುತ್ತಿದೆ.

ಫ್ಯಾಮಿಲಿ ಡ್ರಾಮಾ, ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ಅಭಯ್, ಅನನ್ಯಾ ಅಮರ್, ಸಿಂಧು ಶ್ರೀನಿವಾಸ್ ಮೂರ್ತಿ, ರೇಖಾ, ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

ಬಹುತೇಕ ಹೊಸ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ಈ ಸಿನಿಮಾಗೆ ಡಬ್ಬುಗುಡಿ ಮುರಳಿಕೃಷ್ಣ ಅವರು ತಮ್ಮ ಡಿಎಂಕೆ (DMK) ಎಂಟರ್ಟೈನ್ಮೆಂಟ್ ಮೂಲಕ ಬಂಡವಾಳ ಹೂಡಿದ್ದಾರೆ.

ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

ಅಂದಹಾಗೆ ಈ ಹಾಡಿಗೆ ಚೇತನ್ ಅಮ್ಮಯ್ಯ ಸಂಗೀತ ಸಂಯೋಜನೆ ಮಾಡಿದ್ದು, ಶರತ್ ವಶಿಷ್ಠ ಹಾಗೂ ಚೇತನ್ ಅಮ್ಮಯ್ಯ ಜಂಟಿಯಾಗಿ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನಲ್ಲಿ ಪಾರ್ಟಿ ನಡೆಯುತ್ತಿದ್ದು ನಟ ಅಭಯ್, ಸಿಂಧು, ಅನಯ್ಯಾ ಎಂಡ್ ಗ್ಯಾಂಗ್ ಯಾರನ್ನೊ ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ. ಆದರೆ ಹಾಡಿನ ಕೊನೆಯಲ್ಲಿ ಅವರ ಸ್ಕೆಚ್ ಫ್ಲಾಪ್ ಆಗಿರುವ ಹಾಗೆ ಅನ್ನಿಸುತ್ತದೆ. ಆದರೆ ಮುಂದೇನಾಗುತ್ತೆ ಎನ್ನುವುದು ಸಿನಿಮಾದಲ್ಲಿಯೇ ನೋಡಬೇಕು. ಈ ಹಾಡು ಸಿನಿಮಾದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

ಇನ್ನು ನಿರ್ಮಾಪಕ ಮುರಳಿಕೃಷ್ಣ ಅವರು ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅಂದಹಾಗೆ ಮುರಳಿಕೃಷ್ಣ ಅವರು ಯುಎಸ್‌ನಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿದ್ದರೂ ತಮ್ಮ ನೆಲದ ಮೇಲಿನ ಪ್ರೀತಿ, ಸಿನಿಮಾಗಳ ಮೇಲಿನ ಆಸಕ್ತಿ ಕಳೆದುಕೊಂಡಿಲ್ಲ. ಉತ್ತಮ ಸಿನಿಮಾಗಳನ್ನು ಮಾಡಬೇಕು ಎನ್ನುವ ದೊಡ್ಡ ಕನಸು ಹೊತ್ತಿರುವ ಮುರುಳಿಯವರು ಚಿತ್ರರಂಗದ ಬಗ್ಗೆ ಒಂದಷ್ಟು ತಿಳಿದುಕೊಂಡು ‘ಫ್ಯಾಮಿಲಿ ಡ್ರಾಮ’ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ಕನ್ನಡದ ‘ಫ್ಯಾಮಿಲಿ ಡ್ರಾಮ’ ಸಿನಿಮಾ ರಿಲೀಸ್‌ನ ಬ್ಯುಸಿಯ ಜತೆಗೆ ನಿರ್ಮಾಪಕರು ಈಗಾಗಲೇ ತೆಲುಗಿನಲ್ಲಿ ಮೂರು ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ DMK ಎಂಟರ್ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಮೂಲಕ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಬೇಕು ಹಾಗೂ ದೊಡ್ಡ ಬಜೆಟ್‌ನ ಸ್ಟಾರ್ ಸಿನಿಮಾ ನಿರ್ಮಾಣ ಮಾಡುವ ದೊಡ್ಡ ಕನಸನ್ನು ಕಂಡಿದ್ದಾರೆ. ಅವರ ಮುಂದಿನ ಎಲ್ಲಾ ಯೋಜನೆಗಳಿಗೆ ‘ಫ್ಯಾಮಿಲಿ ಡ್ರಾಮ’ ಉತ್ತಮ ವೇದಿಕೆಯಾಗಲಿದೆ ಎನ್ನುವ ಭರವಸೆ ಹೊಂದಿದ್ದಾರೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

ಫ್ಯಾಮಿಲಿ ಡ್ರಾಮ ಉತ್ತಮ ಕಂಟೆಂಟ್ ಜತೆಗೆ ಟೆಕ್ನಿಕಲ್ ವಿಚಾರಗಳು ಸಹ ಗಮನ ಸೆಳೆಯುತ್ತಿದೆ. ಡಾರ್ಕ್ ಕಾಮಿಡಿ ಸಿನಿಮಾ ಇದಾಗಿದ್ದು, ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯಾಗಿದೆ. ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ ಫ್ಯಾಮಿಲಿ ಡ್ರಾಮ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಕೆಟ್ಟ ವ್ಯಕ್ತಿಯಲ್ಲ, ತಪ್ಪು ಮಾಡಿಲ್ಲ ಎಂದ ಕೆ. ಮಂಜು

Actor Darshan: ಕೊಲೆ ಪ್ರಕರಣದಲ್ಲಿ 12 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ದರ್ಶನ್‌. ನಾಳೆ ದರ್ಶನ್ ನ್ಯಾಯಾಂಗ ಬಂಧನದ ಕಂಪ್ಲೀಟ್ ಆಗಲಿದೆ. ನಾಳೆ ದರ್ಶನ್ ಪರ ವಕೀಲರು ಜಾಮೀನಿಗೆ ಅರ್ಜಿ ಹಾಕುವ ಸಾಧ್ಯತೆ ಇದೆ. ನಾಳೆ ದರ್ಶನ್ ನೆ ಜಾಮೀನು ಸಿಗದಿದ್ದರೆ ಮತ್ತೆ ಜೈಲು ಪಾಲಾಗಲಿದ್ದಾರೆ. ದರ್ಶನ್‌ಗೆ ಜೈಲಾ ಅಥವಾ ಬೇಲಾ ಅನ್ನೋದು ನಾಳೆ ನಿರ್ಧಾರವಾಗಲಿದೆ.

VISTARANEWS.COM


on

Actor Darshan K manju talks
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಫೇಮಸ್‌ ನಿರ್ಮಾಪಕ ಅಂದರೆ ಕೆ ಮಂಜು ಅವರು. ಇದೀಗ ದರ್ಶನ್‌ ಕುರಿತಾಗಿ ಹಲವಾರು ವಿಚಾರಗಳನ್ನು ಮಾಧ್ಯಮದ ಜತೆ ಹಂಚಿಕೊಂಡರು.ದರ್ಶನ್ ಜೈಲು ಸೇರಿದ ಬಳಿಕ ಅವರ ಆಪ್ತರು ಭೇಟಿ ನೀಡುತ್ತಿದ್ದಾರೆ. ದರ್ಶನ್‌ಗೆ ಸಮಾಧಾನದ ಮಾತುಗಳನ್ನು ಹೇಳಿ ಬರುತ್ತಿದ್ದಾರೆ.

ಇದೀಗ ಮಂಜು ಮಾತನಾಡಿ ʻʻಅವತ್ತಿನ ದರ್ಶನ್‌ ನೋಡುವಾಗಲೂ ಅದೇ ರೀತಿ ಇದ್ದಾರೆ. ಈಗಲೂ ಹಾಗೇ ಇದ್ದಾರೆ. ಅವರು ಕೆಟ್ಟವರಲ್ಲ. ನಮ್ಮ ನಿರ್ಮಾಪಕರಿಗೆ ಮೊದಲ ಆದ್ಯತೆ ನೀಡುತ್ತಾರೆ. ಕಥೆ ಕೇಳಿ ಸಿನಿಮಾ ಮಾಡುತ್ತಾರೆ. ಕೆಲವರು ಹೇಳುತ್ತಾರೆ. ಈ ಘಟನೆ ಬಗ್ಗೆ ಪ್ರೂಫ್‌ ಇದೆಯಾ? ದರ್ಶನ್‌ಗೆ ಅಡ್ವಾನ್ಸ್‌ ಕೊಟ್ಟೆ ಎಂದು ಪರ ಮಾತನಾಡುತ್ತಿಲ್ಲ. ತಪ್ಪಾಗಿಲ್ಲ ಅಂತಿಲ್ಲ. ಆದರೆ ನೋಡಿಲ್ಲ. ಈತರ ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಅತೀ ಶೀಘ್ರದಲ್ಲಿ ಹೊರಬರುತ್ತಾರೆʼʼಎಣದರು

ʻʻಈಗೇನು ಕ್ರೇಜ್ ಇರುತ್ತೋ ಅದರ ಡಬಲ್ ಇರುತ್ತೆ. ನಾನು ಹೇಳ್ತೀನಿ. ದರ್ಶನ್‌ಗೆ ಈಗೇನು ವ್ಯಾಪಾರವಿದೆ. ದರ್ಶನ್ ನೀವು ಅಂದ್ಕೊಂಡಿರೋ ಹಾಗೆ ಕೆಟ್ಟವರಲ್ಲ. ಅವರು ಒಳ್ಳೆಯದು ಮಾಡಿದ್ದಾರೆ. ನಾವು ನೋಡಿದ ಹಾಗೇ ಅವರು ಒಳ್ಳೆಯ ವ್ಯಕ್ತಿ. ಕೆಲವರೊಂದಿಗೆ ಭಿನ್ನಾಭಿಪ್ರಾಯಗಳಿವೆ. ಅದು ಬಿಟ್ಟರೆ ಬೇರೆ ಏನೂ ಇಲ್ಲ. ಚಿತ್ರರಂಗಕ್ಕೆ ಒಳ್ಳೆಯದಾಗುತ್ತೆ ಅಂತ ಹೇಳುವುದಕ್ಕೆ ಇಷ್ಟ ಪಡುತ್ತೇನೆತರ ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಅತೀ ಶೀಘ್ರದಲ್ಲಿ ಹೊರಬರುತ್ತಾರೆʼʼಎಂದರು.

ಇದನ್ನೂ ಓದಿ: Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

“ನಿರ್ಮಾಪಕರ ಅಡ್ವಾನ್ಸ್‌ಗೆ ದರ್ಶನ್‌ ಮೋಸ ಆಗಲ್ಲ. ದರ್ಶನ್ ವಿಚಾರದಲ್ಲಿ ವಿಜಯಲಕ್ಷಿ ಅವರ ನಿಲುವು ಮೆಚ್ಚಬೇಕು. ನಾವು ವಿಜಯಲಕ್ಷ್ಮಿ ಬೆಂಬಲಕ್ಕೆ ನಿಲ್ಲುತ್ತೇವೆ. ರೇಣುಕಾಸ್ವಾಮಿ ಕುಟುಂಬಕ್ಕೂ ನಮ್ಮಿಂದ ಆಗುವ ಸಹಾಯ ಮಾಡುತ್ತೇವೆ. ನಿರ್ಮಾಪಕರ ಪರವಾಗಿ ನಾನಂತು ಇರ್ತೀನಿʼʼಎಂದರು.

ಕೊಲೆ ಪ್ರಕರಣದಲ್ಲಿ 12 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ದರ್ಶನ್‌. ನಾಳೆ ದರ್ಶನ್ ನ್ಯಾಯಾಂಗ ಬಂಧನದ ಕಂಪ್ಲೀಟ್ ಆಗಲಿದೆ. ನಾಳೆ ದರ್ಶನ್ ಪರ ವಕೀಲರು ಜಾಮೀನಿಗೆ ಅರ್ಜಿ ಹಾಕುವ ಸಾಧ್ಯತೆ ಇದೆ. ನಾಳೆ ದರ್ಶನ್ ನೆ ಜಾಮೀನು ಸಿಗದಿದ್ದರೆ ಮತ್ತೆ ಜೈಲು ಪಾಲಾಗಲಿದ್ದಾರೆ. ದರ್ಶನ್‌ಗೆ ಜೈಲಾ ಅಥವಾ ಬೇಲಾ ಅನ್ನೋದು ನಾಳೆ ನಿರ್ಧಾರವಾಗಲಿದೆ.

Continue Reading

ಸಿನಿಮಾ

Kannada New Movie: ‘ಕಣಂಜಾರು’ ಟೀಸರ್ ಮೆಚ್ಚಿದ ಚಂದನವನ!

Kannada New Movie: ಈ ಹಿಂದೆ ಮಹಾನುಭಾವರು ಚಿತ್ರದಲ್ಲಿ ನಾಯಕ ಜೊತೆಗೆ ನಿರ್ಮಾಣ ಮಾಡಿದ್ದೆ, ಇದೊಂದು ಆಸಕ್ತಿ ಮತ್ತು ಕುತೂಹಲ ಕಾರಿ ಸಂಗತಿಯ ಕಥೆಯನ್ನು ಹೊಂದಿದ್ದರಿಂದ ನಾನೇ ನಿರ್ದೇಶನ ಮಾಡಲು ಮುಂದಾದೆ. ಚಿತ್ರದ ಉಳಿದ ಮಾಹಿತಿಯನ್ನು ಹಂತ ಹಂತವಾಗಿ ಬಿಡುಗಡೆ ಹಂಚಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ ಆರ್. ಬಾಲಚಂದ್ರ.

VISTARANEWS.COM


on

Kannada New Movie kannnajaru teaser teaser Out
Koo

ಬೆಂಗಳೂರು: ಆರ್ ಪಿ ಫಿಲ್ಮ್ಸ್ ಬ್ಯಾನರ್ ಅಡಿ ಆರ್. ಬಾಲಚಂದ್ರ ನಿರ್ಮಿಸಿ, ನಿರ್ದೇಶಿಸಿರುವ “ಕಣಂಜಾರು” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಹಿಂದೆ ಚಿತ್ರದ ಮೋಷನ್ ಪೋಸ್ಟರ್ ಮತ್ತು ಶೀರ್ಷಿಕೆ ಬಿಡುಗಡೆ ಮಾಡಿದ್ದ ತಂಡಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆರ್ ಪಿ ಫಿಲಂಸ್ ಯೂ ಟ್ಯೂಬ್ ಚಾನಲ್ ನಲ್ಲಿ ಟೀಸರ್ ಬಿಡುಗಡೆ ಆಗಿದೆ. ಟೀಸರ್ ನೋಡಿ ಸಾಕಷ್ಟು ಪ್ರೇಕ್ಷಕರು, ಚಂದನವನದ ಕಲಾವಿದರು ಹಾಗೂ ತಂತ್ರಜ್ಞರು ಚಿತ್ರತಂಡದ ಬೆನ್ನು ತಟ್ಟಿದ್ದಾರೆ.

ಥ್ರಿಲ್ಲರ್ ವಿಷಯವನ್ನು ಮುಂದಿಟ್ಟುಕೊಂಡು ಆರ್.ಬಾಲಚಂದ್ರ ನಿರ್ದೇಶನ ಮಾಡುವ ಜೊತೆಗೆ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಕಾರ್ಕಳ, ಉಡುಪಿ, ಹೊನ್ನಾವರ ಸೇರಿದಂತೆ ಮತ್ತಿತರ ಕಡೆ 55 ರಿಂದ 60 ದಿನಗಳ ಕಾಲ ಚಿತ್ರೀಕಣ ಮಾಡಲಾಗಿದೆ. ಕಾರ್ಕಳ ಬಳಿಯ ಊರಿನ ಹೆಸರು ಕಣಂಜಾರು. ಥ್ರಿಲ್ಲರ್ ವಿಷಯ ಆಗಿರುವುದರಿಂದ ಆ ಹೆಸರು ಇಡಲಾಗಿದೆ. ಅದು ಯಾಕೆ ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು ಎನ್ನುತ್ತಾರೆ ನಿರ್ಮಾಪಕರೂ ಆಗಿರುವ ಆರ್.ಬಾಲಚಂದ್ರ.

ಈ ಹಿಂದೆ ಮಹಾನುಭಾವರು ಚಿತ್ರದಲ್ಲಿ ನಾಯಕ ಜೊತೆಗೆ ನಿರ್ಮಾಣ ಮಾಡಿದ್ದೆ, ಇದೊಂದು ಆಸಕ್ತಿ ಮತ್ತು ಕುತೂಹಲ ಕಾರಿ ಸಂಗತಿಯ ಕಥೆಯನ್ನು ಹೊಂದಿದ್ದರಿಂದ ನಾನೇ ನಿರ್ದೇಶನ ಮಾಡಲು ಮುಂದಾದೆ. ಚಿತ್ರದ ಉಳಿದ ಮಾಹಿತಿಯನ್ನು ಹಂತ ಹಂತವಾಗಿ ಬಿಡುಗಡೆ ಹಂಚಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ ಆರ್. ಬಾಲಚಂದ್ರ.

ಇದನ್ನೂ ಓದಿ: Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

ಬಾಲಚಂದ್ರ, ಅಪೂರ್ವ, ಶರ್ಮಿತಾ ಗೌಡ,ಹಿರಿಯ ನಟ ರಾಮಕೃಷ್ಣ, ಪಿ.ಎಸ್ ಶ್ರೀಧರ್ ಹಾಗು ಮೇಘ ಸೇರಿದಂತೆ ಹೊಸ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ, ಶಶಾಂಕ್ ಶೇಷಗಿರಿ ಹಿನ್ನೆಲೆ ಸಂಗೀತ, ವೆಂಕಿ ಯುಡಿವಿ ಸಂಕಲನ, ಮಂಜುನಾಥ್ ಹೆಗ್ಡ್ ಕ್ಯಾಮರ ಚಿತ್ರಕ್ಕಿದೆ.

Continue Reading
Advertisement
Monsoon Jacket Styling Tips
ಫ್ಯಾಷನ್2 mins ago

Monsoon Jacket Styling Tips: ಮಳೆಗಾಲದ ಜಾಕೆಟ್‌ನಲ್ಲೂ ಸ್ಟೈಲಿಶ್‌ ಆಗಿ ಕಾಣಿಸುವುದು ಹೇಗೆ?

Dengue fever
ಕರ್ನಾಟಕ7 mins ago

Dengue fever: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

mamatheya thottilu inauguration programme at gangavathi
ಕರ್ನಾಟಕ9 mins ago

Koppala News: ʼಮಮತೆಯ ತೊಟ್ಟಿಲುʼವಿನ 4 ಅನಾಥ ಮಕ್ಕಳು ವಿದೇಶಿ ದಂಪತಿಗಳ ಮಡಿಲಿಗೆ!

Viral Video
Latest18 mins ago

Viral Video: ಸಾವು ಹೇಗೆಲ್ಲ ಹೊಂಚು ಹಾಕುತ್ತದೆ! ಈ ವಿಡಿಯೊ ನೋಡಿ

Viral Video
ವೈರಲ್ ನ್ಯೂಸ್23 mins ago

Viral Video: ವಿಮಾನದಲ್ಲಿ ದಢೂತಿ ಹೆಂಗಸಿನ ಡ್ಯಾನ್ಸ್‌! ನಗಲಾರದೆ ಅಳಲಾರದೆ ತೊಳಲಾಡಿದ ಪ್ರಯಾಣಿಕರು!

OTT Releases
ಸಿನಿಮಾ32 mins ago

OTT Releases: ಒಟಿಟಿಯಲ್ಲಿ ಈ ವಾರ ಮಿರ್ಜಾಪುರ ಸೀಸನ್ 3 ಸೇರಿದಂತೆ ಹಲವು ಸಿನಿಮಾ, ಸಿರೀಸ್‌ಗಳು!

Sexual Harassment
Latest39 mins ago

Sexual Harassment: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕಿರುಕುಳ

Woman Doctor
ದೇಶ50 mins ago

ಬೇರೆ ಹುಡುಗಿಗೆ ಮೋಸ ಆಗಬಾರದು; ಮದುವೆಯಾಗಲ್ಲ ಎಂದ ಗೆಳೆಯನ ಗುಪ್ತಾಂಗ ಕತ್ತರಿಸಿದ ಯುವತಿ! Video ಇದೆ

Designer Hairpins Fashion
ಫ್ಯಾಷನ್1 hour ago

Designer Hairpins Fashion: ಗ್ರ್ಯಾಂಡ್‌ ಲುಕ್‌ಗೆ ಸಾಥ್‌ ನೀಡುವ ಡಿಸೈನರ್‌ ಹೇರ್‌ಪಿನ್ಸ್

Amritpal Singh
ದೇಶ2 hours ago

Amritpal Singh: ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌ಗೆ ಪೆರೋಲ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌