Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು - Vistara News

ಮನಿ-ಗೈಡ್

Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

Money Guide: ಹೆಣ್ಣು ಈ ಸಮಾಜದ ಕಣ್ಣು ಎನ್ನುವ ಮಾತಿದೆ. ಹಿಂದಿನಿಂದಲೂ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ಮಹತ್ವದ, ಪೂಜನೀಯ ಸ್ಥಾನ-ಮಾನ ನೀಡಲಾಗಿತ್ತು. ಆದರೆ ಕ್ರಮೇಣ ಲಿಂಗ ತಾರತಮ್ಯ ಹೆಚ್ಚಾಗಿ ಮಹಿಳೆಯರನ್ನು ಮೂಲೆಗುಂಪು ಮಾಡಲಾಯಿತು. ಇದೀಗ ಮತ್ತೆ ಪರಿಸ್ಥಿತಿ ಬದಲಾಗಿದೆ. ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಸಾದನೆಯನ್ನು ತೋರುತ್ತಿದ್ದಾರೆ. ದೇಶದಲ್ಲಿ ಈಗಲೂ ಕಂಡು ಬರುವ ಲಿಂಗ ತಾರತಮ್ಯವನ್ನು ತೊಲಗಿಸಲು ಸರ್ಕಾರ ಜಾರಿಗೆ ತಂದ ಹಲವು ಯೋಜನೆಗಳ ಮಾಹಿತಿ ಇಲ್ಲಿದೆ.

VISTARANEWS.COM


on

Money Guide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೆಣ್ಣು ಮಕ್ಕಳನ್ನು ಈ ದೇಶದ ಆಸ್ತಿ ಎಂದು ಪರಿಗಣಿಸಲಾಗುತ್ತದೆ. ಇಂದು ಹೆಣ್ಣು ಮಕ್ಕಳು ತಮ್ಮ ಇತಿಮಿತಿಯನ್ನು ಮೀರಿ ಎಲ್ಲ ರಂಗದಲ್ಲಿಯೂ ಸಾಧನೆ ತೋರುತ್ತಿದ್ದಾರೆ. ಆದರೂ ಲಿಂಗ ಅಸಮಾನತೆ ಎನ್ನುವುದು ಪೂರ್ಣವಾಗಿ ಸಾಧಿಸಲು ಸಾಧ್ಯವಾಗಿಲ್ಲ. ಗ್ರಾಮಾಂತರ ಪ್ರದೇಶದಲ್ಲಿ ಇಂದಿಗೂ ಹೆಣ್ಣು-ಗಂಡು ಎಂಬ ತಾರತಮ್ಯ ಚಾಲ್ತಿಯಲ್ಲಿದೆ. ಇದೇ ಕಾರಣಕ್ಕೆ ಸಾಕಷ್ಟು ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಸರ್ಕಾರ ಈ ಪರಿಸ್ಥಿತಿಯನ್ನು ತೊಡೆದು ಹಾಕಲು, ಹೆಣ್ಣು ಮಕ್ಕಳನ್ನು ಸಬಲೀಕರಣಗೊಳಿಸಲು ಸಾಕಷ್ಟು ಯೋಜನೆ ಜಾರಿಗೊಳಿಸುತ್ತಿದೆ. ಇಂದಿನ ಮನಿಗೈಡ್‌ (Money Guide)ನಲ್ಲಿ ದೇಶದಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳಿಗಾಗಿ ಜಾರಿಯಲ್ಲಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ವಿವರಿಸಲಾಗಿದೆ.

ಬೇಟಿ ಬಚಾವೋ, ಬೇಟಿ ಪಡಾವೋ (BBBP) ಯೋಜನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2015ರಲ್ಲಿ ಪ್ರಾರಂಭಿಸಿದ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಲಿಂಗ ಆಧಾರಿತ ತಾರತಮ್ಯವನ್ನು ಪರಿಹರಿಸುವ ಮತ್ತು ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಇದು ಜಿಲ್ಲಾ ಮಟ್ಟದ ಉಪಕ್ರಮಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಲಿಂಗ ಆಧಾರಿತ ಗರ್ಭಪಾತವನ್ನು ತಡೆಗಟ್ಟುವುದು, ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಶಿಕ್ಷಣವನ್ನು ಬೆಂಬಲಿಸುವುದು ಮುಂತಾದ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ.

ಸಿಬಿಎಸ್ಇ ಉಡಾನ್ (CBSE Udaan) ಯೋಜನೆ

ಈ ಯೋಜನೆಯನ್ನು ಮುಖ್ಯವಾಗಿ 11 ಮತ್ತು 12ನೇ ತರಗತಿಯ ಹುಡುಗಿಯರನ್ನು ಗುರಿಯಾಗಿಸಿಕೊಂಡು ಜಾರಿಗೆ ತರಲಾಗಿದೆ. ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜುಗಳಲ್ಲಿ ದಾಖಲಾತಿಯನ್ನು ಹೆಚ್ಚಿಸಲು ಉಚಿತ ಕಲಿಕಾ ಉಪಕರಣಗಳ ವಿತರಣೆ, ವರ್ಚುವಲ್ ತರಗತಿ ಆಯೋಜನೆ ಮತ್ತು ವೃತ್ತಿ ಮಾರ್ಗದರ್ಶನವನ್ನು ನೀಡುತ್ತದೆ. ಈ ಯೋಜನೆಯ ಪ್ರಯೋಜನ ಪಡೆಯಲು 10ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತದಲ್ಲಿ ಕನಿಷ್ಠ ಶೇ. 70 ಅಂಕ ಪಡೆಯುವುದು ಕಡ್ಡಾಯ.

ಬಾಲಿಕಾ ಸಮೃದ್ಧಿ (Balika Samriddhi) ಯೋಜನೆ

ಈ ವಿದ್ಯಾರ್ಥಿ ವೇತನವನ್ನು ಆರ್ಥಿಕವಾಗಿ ದುರ್ಬಲ ಕುಟುಂಬಗಳ ಹೆಣ್ಣು ಮಕ್ಕಳಿಗೆ ನೀಡಲಾಗುತ್ತದೆ. ಅವರ ಶಿಕ್ಷಣಕ್ಕೆ ನೆರವಾಗುವುದು ಈ ಯೋಜನೆ ಉದ್ದೇಶ. ಜನನದ ಸಮಯದಲ್ಲಿ ನಗದು ಹಸ್ತಾಂತರ ಮತ್ತು 18 ವರ್ಷದವರೆಗೆ ವಾರ್ಷಿಕ ವಿದ್ಯಾರ್ಥಿ ವೇತನವನ್ನು ಒದಗಿಸಲಾಗುತ್ತದೆ.

ಸುಕನ್ಯಾ ಸಮೃದ್ಧಿ (Sukanya Samriddhi) ಯೋಜನೆ

ಸುಕನ್ಯಾ ಸಮೃದ್ಧಿ ಯೋಜನೆ ಹೆಣ್ಣು ಮಕ್ಕಳ ಉನ್ನತ ಶಿಕ್ಷಣ ಮತ್ತು ಮದುವೆಯ ವೆಚ್ಚಗಳಿಗೆ ಧನ ಸಹಾಯ ಮಾಡಲು ನೆರವಾಗುತ್ತದೆ. ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್‌ವೈ) ಹೆಣ್ಣು ಮಗು ಮತ್ತು ಅವಳ ಆರ್ಥಿಕ ಅಗತ್ಯಗಳಿಗಾಗಿ ಸರ್ಕಾರದ ಬೆಂಬಲಿತ ಸಣ್ಣ ಡೆಪಾಸಿಟ್ ಯೋಜನೆಯಾಗಿದೆ. ‘ಬೇಟಿ ಬಚಾವೋ ಬೇಟಿ ಪಡಾವೋ’ ಅಭಿಯಾನದ ಭಾಗವಾಗಿ ಇದನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಸೆಕ್ಷನ್ 80ಸಿ ಅಡಿಯಲ್ಲಿ ಆದಾಯ ತೆರಿಗೆ ಪ್ರಯೋಜನವನ್ನು ನೀಡುತ್ತದೆ. ಯೋಜನೆಯಿಂದ ಸಿಗುವ ಬಡ್ಡಿ ಅಥವಾ ಉಳಿತಾಯ ಹಣಕ್ಕೆ ತೆರಿಗೆ ಕಟ್ಟುವ ಆವಶ್ಯಕತೆ ಕೂಡ ಇರುವುದಿಲ್ಲ. ಹೆಣ್ಣು ಮಗುವಿನ ಜನನದ ನಂತರ ಆಕೆ 10 ವರ್ಷ ತುಂಬುವವರೆಗೆ ಯಾವುದೇ ಸಮಯದಲ್ಲಿ ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆಯಬಹುದು, ಅಲ್ಲಿ ನೀವು ಕನಿಷ್ಠ 250 ರೂಪಾಯಿಗಳನ್ನು ಡೆಪಾಸಿಟ್ ಮಾಡಬೇಕಾಗುತ್ತದೆ. ನಂತರದ ವರ್ಷಗಳಲ್ಲಿ, ಕನಿಷ್ಠ 250 ರೂಪಾಯಿ ಮತ್ತು ಗರಿಷ್ಠ 1.5 ಲಕ್ಷ ರೂಪಾಯಿ. ಒಂದು ಆರ್ಥಿಕ ವರ್ಷದಲ್ಲಿ ಡೆಪಾಸಿಟ್ ಇಡಬೇಕು.

ಮಾಧ್ಯಮಿಕ ಶಿಕ್ಷಣದ ಬಾಲಕಿಯರಿಗೆ ರಾಷ್ಟ್ರೀಯ ಪ್ರೋತ್ಸಾಹಕ (National Scheme of Incentive for Girls of Secondary Education) ಯೋಜನೆ

ಶಿಕ್ಷಣ ವಂಚಿತ ಹುಡುಗಿಯರ ಮಾಧ್ಯಮಿಕ ಶಿಕ್ಷಣವನ್ನು ಮುಂದುವರಿಸಲು ಪ್ರೋತ್ಸಾಹಿಸುವ ಈ ಯೋಜನೆಯು 10ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ 3,000 ರೂ.ಗಳ ಸ್ಥಿರ ಠೇವಣಿಯನ್ನು ನೀಡುತ್ತದೆ. ಅರ್ಹ ಅಭ್ಯರ್ಥಿಗಳು ಅವಿವಾಹಿತರಾಗಿರಬೇಕು, 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು ಮತ್ತು ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನೋಂದಾಯಿಸಿಕೊಳ್ಳಬೇಕು.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

ಇದಲ್ಲದೆ ವಿವಿಧ ರಾಜ್ಯಗಳಲ್ಲಿಯೂ ಹೆಣ್ಣು ಮಕ್ಕಳಿಗೆ ವಿಶೇಷ ಯೋಜನೆ ಜಾರಿಗೊಳಿಸಲಾಗಿದೆ. ಕರ್ನಾಟಕದ ಭಾಗ್ಯಶ್ರೀ ಯೋಜನೆ, ಮಧ್ಯಪ್ರದೇಶದ ಲಾಡ್ಲಿ ಲಕ್ಷ್ಮೀ ಯೋಜನೆ, ಮಹಾರಾಷ್ಟ್ರದ ಮಾಝಿ ಕನ್ಯಾ ಭಾಗ್ಯಶ್ರೀ ಯೋಜನೆ, ತಮಿಳುನಾಡಿನ ಮುಖ್ಯಮಂತ್ರಿಯ ಹೆಣ್ಣು ಮಕ್ಕಳ ರಕ್ಷಣೆ ಯೋಜನೆ ಇತ್ಯಾದಿ ಹೆಣ್ಣು ಮಕ್ಕಳ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ವೇತನದ ಜತೆಗೆ ಮಾಸಿಕವಾಗಿ 9,250 ರೂ. ಆದಾಯ ಬೇಕೆ? ಈ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: ಮಾಸಿಕ ಸಂಬಳವೊಂದನ್ನೇ ಆಶ್ರಯಿಸಿರುವ ಮಧ್ಯಮ ವರ್ಗದ ಜನರಿಗೆ ಅನಾರೋಗ್ಯ, ಅಪಘಾತದಂತಹ ಅನಿರೀಕ್ಷಿತ ಆಘಾತ ಮಾನಸಿಕ ಒತ್ತಡಕ್ಕೆ ಕಾರಣವಾಗಬಲ್ಲದು. ಹೀಗಾಗಿ ಇಂತಹ ಪರಿಸ್ಥಿತಿಯನ್ನು ಯಾವುದೇ ಗೊಂದಲಗಳಿಲ್ಲದೆ ದಾಟಬೇಕು ಎಂದಾದರೆ ಮಾಸಿಕ ವೇತನದ ಜತೆಗೆ ಇನ್ನೊಂದಷ್ಟು ಆದಾಯವೂ ಇರಬೇಕಾಗುತ್ತದೆ. ನೀವೂ ಇಂತಹ ಆದಾಯ ನಿರೀಕ್ಷಿಸುತ್ತಿದ್ದೀರಾ? ಹಾಗಾದರೆ ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ ನಿಮ್ಮ ನೆರವಿಗೆ ಬರುತ್ತದೆ. ಏನಿದು ಯೋಜನೆ? ಯಾರೆಲ್ಲ ಅರ್ಹರು? ನಿಮ್ಮ ಎಲ್ಲ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ದಿನ ಕಳೆದಂತೆ ಜೀವನ ವೆಚ್ಚವೂ ಅಧಿಕವಾಗುತ್ತಿದೆ. ಮಾಸಿಕ ಸಂಬಳವೊಂದನ್ನೇ ಆಶ್ರಯಿಸಿರುವ ಮಧ್ಯಮ ವರ್ಗದ ಜನರಿಗೆ ಅನಾರೋಗ್ಯ, ಅಪಘಾತದಂತಹ ಅನಿರೀಕ್ಷಿತ ಆಘಾತ ಮಾನಸಿಕ ಒತ್ತಡಕ್ಕೆ ಕಾರಣವಾಗಬಲ್ಲದು. ಹೀಗಾಗಿ ಇಂತಹ ಪರಿಸ್ಥಿತಿಯನ್ನು ಯಾವುದೇ ಗೊಂದಲಗಳಿಲ್ಲದೆ ದಾಟಬೇಕು ಎಂದಾದರೆ ಮಾಸಿಕ ವೇತನದ ಜತೆಗೆ ಇನ್ನೊಂದಷ್ಟು ಆದಾಯವೂ ಇರಬೇಕಾಗುತ್ತದೆ. ಇದಕ್ಕಾಗಿ ಎಲ್ಲರಿಗೂ ಪಾರ್ಟ್‌ ಟೈಂ ಜಾಬ್‌ ಮಾಡಲು ಸಾಧ್ಯವಿಲ್ಲ. ಇಂತಹವರಿಗಾಗಿ ನೆರವಾಗುವ ಯೋಜನೆಯೇ ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (Post Office Monthly Income Scheme). ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? ಇದಕ್ಕೆ ಯಾರೆಲ್ಲ ಅರ್ಹರು? ನೀವು ಇದರಲ್ಲಿ ಖಾತೆ ತೆರೆಯಬೇಕಾದರೆ ಏನು ಮಾಡಬೇಕು? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ (Money Guide).

ಏನಿದು ಯೋಜನೆ?

ಇದರಲ್ಲಿ ಏಕಾಂಗಿಯಾಗಿ ಅಥವಾ ತಮ್ಮ ಸಂಗಾತಿಯೊಂದಿಗೆ ಜಂಟಿಯಾಗಿ ಖಾತೆಗಳನ್ನು ತೆರೆಯಬಹುದು. ವೈಯಕ್ತಿಕ ಖಾತೆಯಲ್ಲಿ ಗರಿಷ್ಠ 9 ಲಕ್ಷ ರೂ. ಮತ್ತು ಜಂಟಿ ಖಾತೆಯಲ್ಲಿ 15 ಲಕ್ಷ ರೂ.ವರೆಗೆ ಠೇವಣಿ ಇಡಬಹುದು. ಕನಿಷ್ಠ ಠೇವಣಿ ಅವಧಿ ಐದು ವರ್ಷ. ಈ ಠೇವಣಿಯ ಮೇಲೆ ಗಳಿಸಿದ ಬಡ್ಡಿಯು ಮಾಸಿಕ ಆದಾಯದ ರೂಪದಲ್ಲಿ ನಿಮಗೆ ಲಭಿಸುತ್ತದೆ. ಜಂಟಿ ಖಾತೆದಾರರು 15 ಲಕ್ಷ ರೂ.ಗಳನ್ನು ಠೇವಣಿ ಮಾಡುವ ಮೂಲಕ ಮಾಸಿಕ 9,250 ರೂ.ಗಳವರೆಗೆ ಗಳಿಸಬಹುದು. ಇನ್ನು 9 ಲಕ್ಷ ರೂ.ಗಳ ಠೇವಣಿ ಹೂಡುವವರು ಮಾಸಿಕ 5,500 ರೂ. ಪಡೆದುಕೊಳ್ಳಲಿದ್ದಾರೆ. ಸರ್ಕಾರಿ ಬೆಂಬಲಿತ ಯೋಜನೆ ಇದಾಗಿರುವುದರಿಂದ ಇದರಲ್ಲಿನ ಹೂಡಿಕೆ ಸುರಕ್ಷಿತ.

ಪಿಒಎಂಐಎಸ್‌ ವೈಶಿಷ್ಟ್ಯ

  • ಕನಿಷ್ಠ 1,000 ರೂ. ಹೂಡಿಕೆ ಮೂಲಕ ಖಾತೆ ತೆರೆಯಬಹುದು.
  • ಗರಿಷ್ಠ ಹೂಡಿಕೆ ಸಿಂಗಲ್‌ ಅಕೌಂಟ್‌ಗೆ 9 ಲಕ್ಷ ರೂ. ಮತ್ತು ಜಾಯಿಂಟ್‌ ಅಕೌಂಟ್‌ಗೆ 15 ಲಕ್ಷ ರೂ.
  • ಠೇವಣಿಯ ಅವಧಿ 5 ವರ್ಷ.
  • ಗರಿಷ್ಠ ಮೊತ್ತದ ಮಿತಿಗೆ ಒಳಪಟ್ಟು ಈ ಯೋಜನೆಯಡಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ನಿರ್ವಹಿಸಬಹುದು.
  • ಒಂದು ವರ್ಷದ ನಂತರ ಖಾತೆಯನ್ನು ಅಕಾಲಿಕವಾಗಿ ಮುಚ್ಚಬಹುದು. 3 ವರ್ಷಗಳ ಅವಧಿ ಮುಗಿದ ನಂತರ ಖಾತೆಯನ್ನು ಮುಚ್ಚಿದರೆ ಠೇವಣಿಯ ಮೊತ್ತದಿಂದ ಶೇ. 1ರಷ್ಟು ಕಡಿತಗೊಳಿಸಲಾಗುತ್ತದೆ.
  • ಸದ್ಯ ಈ ಯೋಜನೆಯಲ್ಲಿ 7.4% ಬಡ್ಡಿ ರ ಲಭ್ಯ.

ಯಾರೆಲ್ಲ ತೆರೆಯಬಹುದು?

  • ವಯಸ್ಕರು (ಸಿಂಗಲ್‌ ಅಥವಾ ಜಾಯಿಂಟ್‌ ಅಕೌಂಟ್‌).
  • ಗರಿಷ್ಠ ಮೂರು ವ್ಯಕ್ತಿಗಳೊಂದಿಗೆ ಜಂಟಿಯಾಗಿ ಖಾತೆ ಹೊಂದಬಹುದು.
  • ಅಪ್ರಾಪ್ತ ವಯಸ್ಕ / ಮಾನಸಿಕ ಅಸ್ವಸ್ಥರ ಪರವಾಗಿ ಪೋಷಕರು ಖಾತೆ ತೆರೆಯಬಹುದು.
  • ಜಂಟಿ ಖಾತೆಯಲ್ಲಿನ ಎಲ್ಲರಿಗೂ ಹಣವನ್ನು ಸಮಾನವಾಗಿ ಹಂಚಲಾಗುತ್ತದೆ.

ಇದನ್ನು ಗಮನಿಸಿ

  • ಖಾತೆ ತೆರೆದ ದಿನಾಂಕದಿಂದ ಒಂದು ತಿಂಗಳು ಪೂರ್ಣಗೊಂಡ ನಂತರ ಮತ್ತು ಅವಧಿ ಮುಗಿಯುವ (Maturity) ತನಕ ಬಡ್ಡಿಯನ್ನು ಪಾವತಿಸಲಾಗುತ್ತದೆ.
  • ಠೇವಣಿ ಇಟ್ಟ 1 ವರ್ಷದೊಳಗೆ ಹಿಂಪಡೆಯಲು ಸಾಧ್ಯವಿಲ್ಲ.
  • ಸಂಬಂಧಪಟ್ಟ ಅಂಚೆ ಕಚೇರಿಯಲ್ಲಿ ಪಾಸ್‌ಬುಕ್‌ನೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಸಲ್ಲಿಸುವ ಮೂಲಕ ಖಾತೆ ತೆರೆದ ದಿನಾಂಕದಿಂದ 5 ವರ್ಷಗಳ ನಂತರ ಕ್ಲೋಸ್‌ ಮಾಡಬಹುದು.
  • ಒಂದು ವೇಳೆ ಖಾತೆದಾರನು ಅವಧಿ ಮುಕ್ತಾಯದ ಮುನ್ನವೇ ಮರಣ ಹೊಂದಿದರೆ, ಖಾತೆಯನ್ನು ಮುಚ್ಚಬಹುದು ಮತ್ತು ಮೊತ್ತವನ್ನು ನಾಮಿನಿಗೆ ಮರುಪಾವತಿಸಲಾಗುತ್ತದೆ.

ಯಾವೆಲ್ಲ ದಾಖಲೆಗಳು ಬೇಕು?

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಗೆ ನೋಂದಾಯಿಸಲು ವಿಳಾಸದ ಪುರಾವೆ, ಫೋಟೊ ಇರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್‌ ಗಾತ್ರದ ಫೋಟೊಗಳೊಂದಿಗೆ ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ.

ಇದನ್ನೂ ಓದಿ: EPF Death Claim: ಆಧಾರ್ ದೃಢೀಕರಣ ಇಲ್ಲದೇ ಇದ್ದರೂ ಇಪಿಎಫ್‌ಒ ಡೆತ್ ಕ್ಲೈಮ್ ಸಾಧ್ಯವೆ? ಇಲ್ಲಿದೆ ಮಾಹಿತಿ

Continue Reading

ಮನಿ-ಗೈಡ್

Health Insurance: ಕ್ಯಾಶ್​ಲೆಸ್​ ಕ್ಲೈಮ್‌ ಗಳಿಗೆ ಆಸ್ಪತ್ರೆಯಲ್ಲಿ ಇನ್ನು ಹೆಚ್ಚು ಹೊತ್ತು ಕಾಯಬೇಕಿಲ್ಲ; ಇಲ್ಲಿದೆ ಹೊಸ ನಿಯಮ

ಮೂರು ಗಂಟೆಗಳ ಒಳಗೆ ಆಸ್ಪತ್ರಗಳಲ್ಲಿ ನಗದು ರಹಿತ ಆರೋಗ್ಯ ವಿಮಾ (Health Insurance) ಕ್ಲೈಮ್ ಗಳನ್ನು ಸಲ್ಲಿಸಬೇಕು ಎಂದು ಐಆರ್ ಡಿಐಎ ಸೂಚಿಸಿದೆ. ಹಿಂದಿನ 55 ಆದೇಶಗಳನ್ನು ರದ್ದುಗೊಳಿಸಿ ಒಂದು ಸಮಗ್ರ ಆದೇಶವನ್ನು ಹೊರಡಿಸಲಾಗಿದೆ. ಇದರಲ್ಲಿ ಮಾಡಿರುವ ಬದಲಾವಣೆಗಳು ಇಂತಿವೆ.

VISTARANEWS.COM


on

By

Health Insurance
Koo

ಬೆಂಗಳೂರು: ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (IRDAI) ಆರೋಗ್ಯ ವಿಮಾ ಪಾಲಿಸಿಗಳ (Health Insurance) ಮಾನದಂಡಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಿದೆ. 55 ಸುತ್ತೋಲೆಗಳನ್ನು ರದ್ದುಗೊಳಿಸಿ ಆರೋಗ್ಯ ವಿಮಾ ಉತ್ಪನ್ನಗಳ ಕುರಿತು ಸಮಗ್ರವಾಗಿ ಒಂದು ಸುತ್ತೋಲೆ ಪ್ರಕಟಿಸಿದೆ. ಪ್ರಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ (hospital discharge) ವಿನಂತಿ ಸ್ವೀಕರಿಸಿದ ಕ್ಯಾಶ್​ಲೆಸ್​ ಕ್ಲೈಮ್ ಗಳನ್ನು ಮೂರು ಗಂಟೆಗಳ ಒಳಗೆ ಇತ್ಯರ್ಥಗೊಳಿಸಬೇಕು ಐಆರ್ ಡಿಎಐ ಸೂಚಿಸಿದೆ.

ಯಾವುದೇ ಸಂದರ್ಭದಲ್ಲಿ ಪಾಲಿಸಿದಾರರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಹೆಚ್ಚು ಕಾಯುವಂತೆ ಮಾಡಬಾರದು. ಮೂರು ಗಂಟೆಗಳಿಗಿಂತ ಹೆಚ್ಚು ವಿಳಂಬವಾದರೆ ಆಸ್ಪತ್ರೆಯಿಂದ ವಿಧಿಸಲಾದ ಹೆಚ್ಚುವರಿ ಮೊತ್ತವನ್ನು ವಿಮಾದಾರರು ಭರಿಸಬೇಕಾಗುತ್ತೆ ಎಂದು ಕಂಪನಿ ತಿಳಿಸಿದೆ. ತುರ್ತು ಸಂದರ್ಭಗಳಲ್ಲಿ ಬರುವ ನಗದು ರಹಿತ ವಿನಂತಿಯನ್ನು ವಿಮಾದಾರರು ತಕ್ಷಣವೇ ನಿರ್ಧರಿಸಬೇಕು ಎಂದು ಐಆರ್ ಡಿ ಎಐ ಹೇಳಿದೆ.

2024ರ ಜುಲೈ 31ರೊಳಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲು ವಿಮಾದಾರರಿಗೆ ಆದೇಶಿಸಿರುವ ಐಆರ್ ಡಿಎಐ ನಗದು ಕ್ಯಾಶ್​ಲೆಸ್​​ ವಿನಂತಿಗಳನ್ನು ಸ್ವೀಕರಿಸಲು ವಿಮಾದಾರರು ಆಸ್ಪತ್ರೆಯಲ್ಲಿ ಹೆಲ್ಪ್​ ಡೆಸ್ಕ್‌ಗಳನ್ನು ಸಹ ವ್ಯವಸ್ಥೆಗೊಳಿಸಬಹುದು ಎಂದು ಹೇಳಿದೆ.


ಇತರ ಕೆಲವು ಬದಲಾವಣೆಗಳು ?

ಲಭ್ಯವಿರುವ ಉತ್ಪನ್ನಗಳ ಮೂಲಕ ಪಾಲಿಸಿದಾರರಿಗೆ ವಿಮಾ ಕಂಪನಿಗಳು ವ್ಯಾಪಕ ಆಯ್ಕೆಗಳನ್ನು ಒದಗಿಸಬೇಕು ಎಂದು ಐಆರ್ ಡಿಎಐ ಹೇಳಿದೆ. ಅದೇ ಉದ್ದೇಶವನ್ನು ಪೂರೈಸಲು, ವಿಮಾದಾರರು ಎಲ್ಲಾ ವಯಸ್ಸಿನವರು, ಪ್ರದೇಶಗಳು, ಔದ್ಯೋಗಿಕ ವಿಭಾಗಗಳು, ವೈದ್ಯಕೀಯ ಪರಿಸ್ಥಿತಿಗಳು/ ಚಿಕಿತ್ಸೆಗಳು, ಎಲ್ಲಾ ರೀತಿಯ ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆ ಒದಗಿಸುವವರಿಗೆ ವೈವಿಧ್ಯಮಯ ವಿಮಾ ಉತ್ಪನ್ನಗಳನ್ನು ಒದಗಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: Health Insurance Benefits : ಉದ್ಯೋಗಿಗಳ ಆರೋಗ್ಯ ವಿಮೆ ಏಕೆ ಮಹತ್ವಪೂರ್ಣ? ಇಲ್ಲಿದೆ ಡಿಟೇಲ್ಸ್

ಹಲವು ಆರೋಗ್ಯ ವಿಮಾ ಪಾಲಿಸಿಗಳನ್ನು ಹೊಂದಿರುವ ಪಾಲಿಸಿದಾರನು ಸ್ವೀಕಾರಾರ್ಹ ಕ್ಲೈಮ್ ಮೊತ್ತವನ್ನು ಪಡೆಯುವ ಪಾಲಿಸಿ ಆಯ್ಕೆಯನ್ನು ಹೊಸ ಸುತ್ತೋಲೆಯಲ್ಲಿ ಪಡೆಯುತ್ತಾನೆ. ವಿಮಾದಾರರು ಪ್ರತಿ ಪಾಲಿಸಿ ಡಾಕ್ಯುಮೆಂಟ್ ಜೊತೆಗೆ ಗ್ರಾಹಕರ ಮಾಹಿತಿ ಶೀಟ್​​ (CIS) ಒದಗಿಸಬೇಕಾಗುತ್ತದೆ. ಪಾಲಿಸಿ ಅವಧಿಯಲ್ಲಿ ಯಾವುದೇ ಕ್ಲೈಮ್‌ಗಳು ಮಾಡದಿದ್ದರೆ ವಿಮಾ ಮೊತ್ತವನ್ನು ಹೆಚ್ಚಿಸುವ ಅಥವಾ ಪ್ರೀಮಿಯಂ ಮೊತ್ತವನ್ನು ರಿಯಾಯಿತಿ ಮಾಡಬೇಕಾಗುತ್ತದೆ.

ಒಂದು ವೇಳೆ ಪಾಲಿಸಿದಾರರು, ಚಾಲ್ತಿಯಲ್ಲಿರು ಪಾಲಿಸಿಯನ್ನು ಯಾವುದೇ ಸಮಯದಲ್ಲಿ ರದ್ದುಮಾಡಲು ಬಯಸಿದರೆ ಅವಧಿ ಪ್ರೀಮಿಯಂ/ ಅನುಪಾತದ ಪ್ರೀಮಿಯಂನ ಮರುಪಾವತಿ ಮಾಡಬೇಕಾಗುತ್ತದೆ.

ರೋಗಿಯನ್ನು ದಾಖಲಿಸುವ ಮೊದಲು ವಿಮಾ ಕಂಪನಿಯು ಆಸ್ಪತ್ರೆಯ ಟಿಪಿಎ ಡೆಸ್ಕ್‌ಗೆ ಪೂರ್ವ-ಅನುಮೋದನೆಯನ್ನು ಒದಗಿಸಿದ ಮೇಲೂ ಶೇ.43ರಷ್ಟು ವಿಮಾ ಪಾಲಿಸಿದಾರರು ತಮ್ಮ “ಆರೋಗ್ಯ ವಿಮೆ” ಕ್ಲೈಮ್‌ಗಳನ್ನು ಪಡೆಯಲು ತೊಂದರೆಗಳನ್ನು ಎದುರಿಸಿದ್ದಾರೆ ಎಂದು ಸಮೀಕ್ಷೆಯೊಂದರಲ್ಲಿ ತಿಳಿದು ಬಂದಿದೆ. ಕೆಲವು ಪ್ರಕರಣಗಳಲ್ಲಿ, ರೋಗಿಯು ಡಿಸ್ಚಾರ್ಜ್‌ಗೆ ಸಿದ್ಧವಾದ ಅನಂತರ 10- 12 ಗಂಟೆಗಳ ಬಳಿಕ ಕ್ಲೇಮ್​ ನೀಡಲಾಗಿದೆ.

Continue Reading

ಮನಿ-ಗೈಡ್

Money Guide: ಹಣ ಪಾವತಿ ಅಂಗಳಕ್ಕೆ ಕಾಲಿಡಲು ಅದಾನಿ ಗ್ರೂಪ್‌ ಸಜ್ಜು; ಗೂಗಲ್‌ ಪೇ, ಫೋನ್‌ ಪೇಗೆ ಪ್ರಬಲ ಪೈಪೋಟಿ?

Money Guide: ಭಾರತದ ಉದ್ಯಮಿ, ವಿಶ್ವದ ಸಿರಿವಂತರ ಪೈಕಿ ಒಬ್ಬರೆನಿಸಿಕೊಂಡಿರುವ ಗೌತಮ್ ಅದಾನಿ ನೇತೃತ್ವದ ಅದಾನಿ ಗ್ರೂಪ್ ಇದೀಗ ಯುಪಿಐ ಮತ್ತು ಕ್ರೆಡಿಟ್ ಕಾರ್ಡ್ ವ್ಯವಹಾರಕ್ಕೆ ಪ್ರವೇಶಿಸಲು ತಯಾರಾಗಿದೆ. ಅದಾನಿ ಒನ್‌ ಅಪ್ಲಿಕೇಷನ್‌ ಮೂಲಕ ಸೇವೆ ಲಭಿಸಲಿದೆ ಎನ್ನಲಾಗಿದೆ. ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಭಾರತದಲ್ಲಿ ಡಿಜಿಟಲ್‌ ಪೇಮೆಂಟ್‌ (Digital Payments) ವಿಧಾನ ಜನಪ್ರಿಯವಾಗಿದೆ. ಮಾಲ್‌ಗಳಿಂದ ಹಿಡಿದು ತಳ್ಳುಗಾಡಿಯವರೆಗೆ ಯುನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ (UPI) ಮೂಲಕ ವ್ಯವಹಾರ ನಡೆಸಲಾಗುತ್ತದೆ. ಗೂಗಲ್ ಪೇ, ಫೋನ್ ಪೇ, ಅಮೆಜಾನ್ ಪೇ ಹಾಗೂ ಇತರ ಪಾವತಿ ವ್ಯವಸ್ಥೆಗಳು ಭಾರತದಲ್ಲಿ ಯುಪಿಐ ಪಾವತಿ ವ್ಯವಸ್ಥೆಯ ಬಳಕೆಯನ್ನು ವ್ಯಾಪಕಗೊಳಿಸಿವೆ. ಜತೆಗೆ ಕ್ರೆಡಿಟ್‌ ಕಾರ್ಡ್‌ ಬಳಕೆಯೂ ಅಧಿಕವಾಗಿದೆ. ಇದೀಗ ಈ ಎಲ್ಲ ಕಂಪನಿಗಳಿಗೆ ತೀವ್ರ ಸ್ಪರ್ಧೆ ಒಡ್ಡಲು ಭಾರತದ ಮತ್ತೊಂದು ದೈತ್ಯ ಕಂಪನಿಯೊಂದು ಮುಂದಾಗಿದೆ. ಹೌದು, ಭಾರತದ ಉದ್ಯಮಿ, ವಿಶ್ವದ ಸಿರಿವಂತರ ಪೈಕಿ ಒಬ್ಬರೆನಿಸಿಕೊಂಡಿರುವ ಗೌತಮ್ ಅದಾನಿ ನೇತೃತ್ವದ ಅದಾನಿ ಗ್ರೂಪ್ (Adani Group) ಇದೀಗ ಯುಪಿಐ ಮತ್ತು ಕ್ರೆಡಿಟ್ ಕಾರ್ಡ್ ವ್ಯವಹಾರಕ್ಕೆ ಪ್ರವೇಶಿಸಲು ತಯಾರಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಭಾರತದಲ್ಲಿ ಈಗಾಗಲೇ ಯುಪಿಐ ಮತ್ತು ಕ್ರೆಡಿಟ್ ಕಾರ್ಡ್ ಕ್ಷೇತ್ರದಲ್ಲಿ ನೆಲೆಯೂರಿರುವ ಗೂಗಲ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ಗೆ ಪ್ರತಿಸ್ಪರ್ಧಿಯಾಗಿ ಅದಾನಿ ಗ್ರೂಪ್ ಇ-ಕಾಮರ್ಸ್ ಮತ್ತು ಪಾವತಿ ಕ್ಷೇತ್ರವನ್ನು ಪ್ರವೇಶಿಸುವ ಪ್ರಯತ್ನದಲ್ಲಿದೆ ಎಂದು ಫೈನಾನ್ಶಿಯಲ್‌ ಟೈಮ್ಸ್‌ ವರದಿ ಮಾಡಿದೆ.

ಭಾರತದಲ್ಲಿ ವ್ಯಾಪಕವಾಗಿ ಬಳಸಲಾಗುವ ಹಣ ಪಾವತಿ ವಿಧಾನವಾದ ಯುಪಿಐ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಪರವಾನಗಿ ಪಡೆಯಲು ಕಂಪನಿಯು ಈಗಾಗಲೇ ಕೆಲಸ ಆರಂಭಿಸಿದೆ. ಮಾತ್ರವಲ್ಲ ಅದಾನಿ ಕ್ರೆಡಿಟ್ ಕಾರ್ಡ್‌ ಯೋಜನೆಗಳನ್ನು ಅಂತಿಮಗೊಳಿಸಲು ಬ್ಯಾಂಕ್‌ಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಸರ್ಕಾರದ ಬೆಂಬಲದೊಂದಿಗೆ ಭಾರತದಲ್ಲಿ ವೇಗವಾಗಿ ವಿಸ್ತರಿಸುತ್ತಿರುವ ಸಾರ್ವಜನಿಕ ಇ-ಕಾಮರ್ಸ್ ನೆಟ್‌ವರ್ಕ್‌ ಓಪನ್ ನೆಟ್‌ವರ್ಕ್‌ ಫಾರ್ ಡಿಜಿಟಲ್ ಕಾಮರ್ಸ್ (Open Network for Digital Commerce) ಮೂಲಕ ಆನ್‌ಲೈನ್‌ ಶಾಪಿಂಗ್ ಸೇವೆ ಒದಗಿಸಲು ಚಿಂತನೆ ನಡೆಸಲಾಗಿದೆ.

ಅದಾನಿ ಒನ್ ಅಪ್ಲಿಕೇಷನ್‌ ಮೂಲಕ ಸೇವೆ

ಒಂದು ವೇಳೆ ಅನುಮತಿ ದೊರೆತರೆ ಕಂಪನಿಯ ಅದಾನಿ ಒನ್‌ (Adani One) ಅಪ್ಲಿಕೇಷನ್‌ ಮೂಲಕ ಸೇವೆ ಲಭಿಸಲಿದೆ. ಅದಾನಿ ಒನ್ ಅಪ್ಲಿಕೇಶನ್ ಅನ್ನು 2022ರಲ್ಲಿ ಪ್ರಾರಂಭಿಸಲಾಗಿದ್ದು, ಇದು ಪ್ರಸ್ತುತ ಹೋಟೆಲ್ ಮತ್ತು ಫ್ಲೈಟ್ ಬುಕಿಂಗ್‌ನಂತಹ ಪ್ರವಾಸೋದ್ಯಮ ಸೇವೆಗಳನ್ನು ಒದಗಿಸುತ್ತದೆ. ಈಗಾಗಲೇ ಅದಾನಿ ಗ್ರೂಪ್ ಬಂದರು, ವಿಮಾನ ನಿಲ್ದಾಣಗಳು ಮತ್ತು ವಿದ್ಯುತ್ ಸ್ಥಾವರಗಳನ್ನು ಹೊಂದಿದ್ದು, ಇದರಲ್ಲಿನ ಗ್ರಾಹಕರನ್ನು ಸುಲಭವಾಗಿ ಸೆಳೆಯಬಹುದು ಎನ್ನುವ ಲೆಕ್ಕಾಚಾರವಿದೆ. ʼʼಸದ್ಯ ಏಷ್ಯಾದ ಎರಡನೇ ಶ್ರೀಮಂತ ವ್ಯಕ್ತಿಯಾಗಿರುವ ಅದಾನಿ ಗ್ರೂಪ್‌ನ ಸ್ಥಾಪಕ ಗೌತಮ್ ಅದಾನಿ ಅವರು ಶೀಘ್ರದಲ್ಲಿಯೇ ಡಿಜಿಟಲ್‌ ಪಾವತಿ ರಂಗಕ್ಕೆ ಪ್ರವೇಶಿಸಲು ಯೋಜನೆ ಹಾಕಿಕೊಂಡಿದ್ದಾರೆʼʼ ಎಂದು ಮೂಲಗಳು ಮಾಹಿತಿ ನೀಡಿವೆ.

ತೀವ್ರ ಸ್ಪರ್ಧೆ

ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಸದ್ಯ ಡಿಜಿಟಲ್‌ ಪಾವತಿ ಕ್ಷೇತ್ರದಲ್ಲಿ ಗೂಗಲ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ ಪ್ರಬಲ ಶಕ್ತಿಯಾಗಿ ಗುರುತಿಸಿಕೊಂಡಿವೆ. ಇದೀಗ ಯುಪಿಐ, ಕ್ರೆಡಿಟ್ ಕಾರ್ಡ್ ಸೇವೆ ಆರಂಭಿಸುವ ಮೂಲಕ ಅದಾನಿ ಗ್ರೂಪ್‌ ಇ-ಕಾಮರ್ಸ್ ಮತ್ತು ಪಾವತಿ ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧೆ ಒಡ್ಡುವ ಸಾಧ್ಯತೆ ಇದೆ. ಯಾವ ರೀತಿ ಕಾರ್ಯ ನಿರ್ವಹಿಸಲಿದೆ ಎನ್ನುವ ಬಗ್ಗೆ ಶೀಘ್ರದಲ್ಲೇ ಮಾಹಿತಿ ಹೊರ ಬೀಳಲಿದೆ. ಒಟ್ಟಿನಲ್ಲಿ ಈ ಸುದ್ದಿ ತೀವ್ರ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

Continue Reading

ಮನಿ-ಗೈಡ್

Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

Money Guide: ನಿಮ್ಮ ಪ್ಯಾನ್‌ ನಂಬರ್‌ ಇನ್ನೂ ಆಧಾರ್‌ನೊಂದಿಗೆ ಲಿಂಕ್‌ ಆಗಿಲ್ಲವೆ? ಹಾಗಾದರೆ ಮೇ 31ರೊಳಗೆ ಮಾಡಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ನಿಮ್ಮ ಪ್ಯಾನ್‌ ನಂಬರ್‌ (Permanent Account Number) ಅನ್ನು ಆಧಾರ್‌ (Aadhaar)ನೊಂದಿಗೆ ಇನ್ನೂ ಲಿಂಕ್‌ ಮಾಡಿಲ್ಲವೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ (Income tax) ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ನಿಮ್ಮ ಗೊಂದಲಕ್ಕೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಹೀಗೆ ಲಿಂಕ್‌ ಮಾಡಿ

ಪ್ಯಾನ್‌ ಮತ್ತು ಆಧಾರ್‌ ಅನ್ನು ಹಲವು ವಿಧಗಳ ಮೂಲಕ ಲಿಂಕ್‌ ಮಾಡಬಹುದು. ಮೊದಲೇ ಹೇಳಿದಂತೆ ಇದಕ್ಕಾಗಿ ಆನ್‌ಲೈನ್‌ ಮತ್ತು ಆಫ್‌ಲೈನ್‌ ಮಾರ್ಗಗಳನ್ನು ಬಳಸಬಹುದು.

ಇನ್‌ಕಂ ಟ್ಯಾಕ್ಸ್‌ ಡಿಪಾರ್ಟ್‌ಮೆಂಟ್‌ ಪೋರ್ಟಲ್‌ ಮೂಲಕ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳಲಿದ್ದು, ಅಲ್ಲಿ ಪ್ಯಾನ್‌, ಆಧಾರ್‌ ನಂಬರ್‌ ನಮೂದಿಸಿ. ಜತೆಗೆ ಇತರ ಅಗತ್ಯ ಮಾಹಿತಿಯನ್ನು ನೀಡಿ.

ಎಸ್‌ಎಂಎಸ್‌ ಮೂಲಕ

  • UIDPAN 10-ಅಂಕಿಗಳ ಪ್ಯಾನ್‌ ಕಾರ್ಡ್‌ ನಂಬರ್‌, 12-ಅಂಕಿಗಳ ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಒಂದು ಸ್ಪೇಸ್‌ ಕೊಟ್ಟು 567678 ಅಥವಾ 56161ಗೆ ಎಸ್‌ಎಂಎಸ್‌ ಕಳುಹಿಸಿ.
  • ಬಳಿಕ ಪ್ಯಾನ್-ಆಧಾರ್ ಲಿಂಕ್ ಸ್ಥಿತಿಯನ್ನು ಎಸ್ಎಂಎಸ್ ನಿಮಗೆ ತಿಳಿಸಲಾಗುತ್ತದೆ. ಗಮನಿಸಿ ಜನ್ಮ ದಿನಾಂಕವು ಎರಡೂ ದಾಖಲೆಗಳಲ್ಲಿ ಹೊಂದಿಕೆಯಾದರೆ ಮಾತ್ರ ಆಧಾರ್ ಮತ್ತು ಪ್ಯಾನ್ ಅನ್ನು ಲಿಂಕ್ ಮಾಡಲಾಗುತ್ತದೆ.

ಆಧಾರ್-ಪ್ಯಾನ್‌ ಲಿಂಕ್‌ ಆಗಿದ್ಯಾ ಎನ್ನುವುದನ್ನು ಪರಿಶೀಲಿಸುವ ವಿಧಾನ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar Status’ ಆಪ್ಶನ್‌ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್‌ ಮತ್ತು ಆಧಾರ್‌ ನಂಬರ್‌ ನಮೂದಿಸಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ ‘View Link Aadhaar Status’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಆಗ ಒಂದು ವೇಳೆ ಲಿಂಕ್‌ ಆಗಿದ್ದರೆ ನಿಮ್ಮ ಪ್ಯಾನ್‌ (ಪ್ಯಾನ್‌ ನಂಬರ್‌) ಆಧಾರ್‌ ನಂಬರ್‌ (ಆಧಾರ್‌ ನಂಬರ್‌ನ ಅಂಕಿ)ನೊಂದಿಗೆ ಲಿಂಕ್‌ ಆಗಿದೆ ಎನ್ನುವ ಸಂದೇಶ ಮೂಡುತ್ತದೆ.

ಕಡ್ಡಾಯ ಯಾಕೆ?

ನಕಲಿ ಪ್ಯಾನ್‌ ಕಾರ್ಡ್‌ಗಳನ್ನು ತಡೆಗಟ್ಟಲು, ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ಜಾರಿಗೆ ತರುವ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆಯು ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡುವುದನ್ನು ಕಡ್ಡಾಯಗೊಳಿಸಿದೆ. ಹೀಗಾಗಿ ಇದುವರೆಗೆ ಲಿಂಕ್‌ ಮಾಡದಿದ್ದರೆ ಕೂಡಲೇ ಮಾಡಿಸಿ. ಕೊನೆಯ ಕ್ಷಣದ ಗೊಂದಲಗಳನ್ನು ತಪ್ಪಿಸಲು ಅಂತಿಮ ದಿನಾಂಕದವರೆಗೆ ಕಾಯುವ ಬದಲು ಕೂಡಲೇ ಲಿಂಕ್‌ ಮಾಡಿ ಎಂದು ತಜ್ಞರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

Continue Reading
Advertisement
Healthy Salad Tips
ಆಹಾರ/ಅಡುಗೆ6 mins ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Lok Sabha Election
ದೇಶ1 hour ago

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Dina Bhavishya
ಭವಿಷ್ಯ1 hour ago

Dina Bhavishya : ತಿಂಗಳ ಮೊದಲ ದಿನವೇ ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರಿಗೆ ಕಿರಿಕಿರಿ ಅನುಭವ

Anti Islam Rally
ವಿದೇಶ6 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Modi Meditation
ದೇಶ7 hours ago

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Yamaha has opened a new Blue Square outlet in Bengaluru
ಬೆಂಗಳೂರು8 hours ago

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

Neha Hiremath
ಕರ್ನಾಟಕ8 hours ago

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Kanyakumari Tour
ಪ್ರವಾಸ9 hours ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sri Huligemma Devi Maharathotsava in Hulagi
ಧಾರ್ಮಿಕ9 hours ago

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
ಆರೋಗ್ಯ9 hours ago

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌