Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ! - Vistara News

ಹಾಸನ

Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

Hassan Pen Drive Case: ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

VISTARANEWS.COM


on

Prajwal Revanna case Siddaramaiah writes to PM narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಒಬ್ಬ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆಗಿದ್ದಾರೆ. ಈ ಪ್ರಕರಣದ ಮಹತ್ವದ ಬಗ್ಗೆ ನೀವು ತಿಳಿದಿರಲೇಬೇಕಿತ್ತು. ಅಲ್ಲದೆ, ಪ್ರಜ್ವಲ್‌ 2024ರ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಎನ್‌ಡಿಎ ಅಭ್ಯರ್ಥಿಯೂ ಆಗಿದ್ದಾರೆ. ಜತೆಗೆ ಇಂಥ ಭಯಾನಕ ಹಾಗೂ ನಾಚಿಕೆಗೇಡಿನ ಪ್ರಕರಣ ಪ್ರಜ್ವಲ್‌ ಮೇಲಿದೆ. ಅಲ್ಲದೆ, ಈ ಪ್ರಕರಣವು ದೇಶದ ಜನತೆಯ ಆತ್ಮಸಾಕ್ಷಿಯನ್ನೇ ಕದಡಿಬಿಟ್ಟಿದೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕ್ರಮವಾಗಬೇಕಾದರೆ, ಅವರನ್ನು ಕರೆತರಬೇಕಾದರೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ ಹಾಗೂ ವಿದೇಶಾಂಗ ವ್ಯವಹಾರಗಳ ಖಾತೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಕೋರಿದ್ದಾರೆ.

Hassan Pen Drive case Siddaramaiah writes to PM Modi seeking cancellation of Prajwal Revanna diplomatic passport

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಶುರು

ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?: ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಡಿಪ್ಲೊಮ್ಯಾಟಿಕ್‌ ಇಮ್ಯುನಿಟಿ: ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ: ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

Rain News : ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು (Karnataka Weather Forecast), ಕಾರವಾರದ ಟನಲ್‌ ಎದುರು ಗುಡ್ಡ ಕುಸಿತ ಭೀತಿ ಹೆಚ್ಚಾಗುತ್ತಿದೆ. ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿದ್ದು, ಸವಾರರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

VISTARANEWS.COM


on

By

karnataka weather Forecast
Koo

ಕಾರವಾರ/ ಕಲಬುರಗಿ: ಕರಾವಳಿಯಲ್ಲಿ ವ್ಯಾಪಕ (Rain News) ಮಳೆಯಾಗುತ್ತಿದ್ದು, ಅವಾಂತರಗಳು ಮುಂದುವರಿದಿದೆ. ಉತ್ತರ ಕನ್ನಡದ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಸುರಂಗದಲ್ಲಿ ಮತ್ತೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಟನಲ್ ಎದುರು ಗುಡ್ಡದಿಂದ ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ (Karnataka weather Forecast) ಟನಲ್ ಮೇಲ್ಭಾಗದ ಮಣ್ಣು ಸಡಿಲಗೊಂಡಿದ್ದು, ಬಂಡೆಗಲ್ಲು ಬೀಳುತ್ತಿವೆ.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ. ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಾಗುವಂತಾಗಿದೆ. ಕಳೆದ 10 ವರ್ಷಗಳಿಂದ ಕಾರವಾರದಿಂದ ಭಟ್ಕಳವರೆಗೂ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಪೂರ್ಣಗೊಂಡಿಲ್ಲ. ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪೆನಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು, ಕಲಬುರಗಿಯಲ್ಲಿ ಭಾರಿ ಮಳೆ

ರಾಜಧಾನಿ ಬೆಂಗಳೂರಲ್ಲಿ ಮಂಗಳವಾರ ಸಂಜೆ ವೇಳೆಗೆ ಮಳೆಯಾಗಿದೆ. ಅನ್ನಪೂರ್ಣೇಶ್ವರಿ ನಗರ, ಲಗ್ಗೆರೆ, ಸುಂಕದಕಟ್ಟೆ, ವಿಧಾನಸೌಧ, ಮೆಜೆಸ್ಟಿಕ್‌, ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇತ್ತ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಯಡ್ರಾಮಿ ತಾಲೂಕಿನ ವರವಿ-ಕುಕನೂರು ಮಾರ್ಗದಲ್ಲಿ ಹಳ್ಳ ದಾಟಲು ಗ್ರಾಮಸ್ಥರು ಹರಸಾಹಸ ಪಡುವಂತಾಗಿದೆ.

ಜಮೀನಿನಲ್ಲಿ ಬಿತ್ತನೆ ‌ಕಾರ್ಯ ಮುಗಿಸಿ ‌ಮನೆಗೆ ತೆರಳುವಾಗ ರೈತರು ಹಗ್ಗ ಹಿಡಿದು ಹಳ್ಳದಾಟುತ್ತಿದ್ದಾರೆ. ಪ್ರತಿಬಾರಿ ಮಳೆಗಾಲದಲ್ಲೂ ಇದೇ ರೀತಿ ಸಮಸ್ಯೆ ಎದುರಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕೊಪ್ಪಳದಲ್ಲೂ ಮಳೆ ಸುರಿದಿದೆ. ಕೊಪ್ಪಳ ನಗರ ಸೇರಿದಂತೆ ಸುತ್ತಮುತ್ತ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಆಗುತ್ತಿದ್ದಂತೆ ಮಳೆಯ ಸಿಂಚನವಾಗಿದೆ. ನಿತ್ಯವೂ ಆಗಾಗ ಮಳೆ ಬೀಳುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಕೊಂಚ ಹಿನ್ನಡೆಯಾಗಿದೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ನಾಳೆ, ನಾಡಿದ್ದು ಅಲ್ಪ ಮಳೆ

ರಾಜ್ಯದ ಹಲವೆಡೆ ಮಳೆ ಅಬ್ಬರ ತಗ್ಗಿದೆ. ಇನ್ನೊಂದು ವಾರ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೂ.12ರಂದು‌ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡದ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೀದರ್‌, ವಿಜಯಪುರ, ಯಾದಗಿರಿ, ಕಲಬುರಗಿ ಹಾಗೂ ಮಲೆನಾಡಿನ ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆ ಜತೆಗೆ ಗಾಳಿಯು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಜೂನ್‌ 13ರಂದು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರು ಸುತ್ತಮುತ್ತ ಆಗಾಗ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಬಹುದು ಅಂದಾಜಿಸಲಾಗಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 29, 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ; ಮುಕ್ಕಾಲು ಕರ್ನಾಟಕಕ್ಕೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಅಲರ್ಟ್‌ಗಳನ್ನು ನೀಡಲಾಗಿದೆ. ಜೂನ್‌ 13ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿ ವೇಗವು 55-65 ಕಿ.ಮೀ ಇರಲಿದೆ. ಹೀಗಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್‌ 13ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka Weather Forecast : ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ (Rain News) ಮರಗಳು ಧರೆಗುರುಳಿದ್ದು, ನಾನಾ ಅವಾಂತರವನ್ನೇ ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಗೋಡೆ ಕುಸಿದು ಎರಡು ಎಮ್ಮೆಗಳು ಮೃತಪಟ್ಟರೆ ಮತ್ತೊಂದು ಕಡೆ ನೆಲಕ್ಕೆ ಅಪ್ಪಳಿಸಿದ್ದ ವಿದ್ಯುತ್‌ ತಂತಿ ತಗುಲಿ ಆಕಳೊಂದು ಮೃತಪಟ್ಟಿದೆ.

VISTARANEWS.COM


on

By

Karnataka weather Forecast
Koo

ವಿಜಯಪುರ: ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, (Karnataka Weather Forecast) ಅವಾಂತರವನ್ನೇ ಸೃಷ್ಟಿಸಿದೆ. ವಿಜಯಪುರದಲ್ಲಿ ಸುರಿದ ಧಾರಾಕಾರ ಮಳೆಗೆ (Rain News) ಮನೆಯ ಗೋಡೆ ಕುಸಿದು, ಎರಡು ಎಮ್ಮೆಗಳು ಮೃತಪಟ್ಟಿವೆ. ಗೋಡೆ ಕುಸಿಯುವಾಗ ಮನೆಯಲ್ಲಿ ಯಾರು ಇಲ್ಲದ ಕಾರಣಕ್ಕೆ ಭಾರಿ ಅನಾಹುತವೊಂದು ತಪ್ಪಿದೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಬಸಪ್ಪ ಕೋಟಿನ್ ಎಂಬುವರಿಗೆ ಸೇರಿದ ಎರಡು ಎಮ್ಮೆಗಳನ್ನು ಮನೆ ಸಮೀಪವೇ ಕಟ್ಟಲಾಗಿತ್ತು. ಈ ವೇಳೆ ಗೋಡೆ ಕುಸಿದು ಬಿದ್ದ ರಭಸಕ್ಕೆ ಎಮ್ಮೆಗಳು ಮೃತಪಟ್ಟಿವೆ. ಲಕ್ಷ ರೂಪಾಯಿಗೆ ಬೆಲೆ ಬಾಳುತ್ತಿದ್ದ ಎರಡು ಎಮ್ಮೆಗಳನ್ನು ಕಳೆದುಕೊಂಡು ಬಸಪ್ಪ ಕಂಗಲಾಗಿದ್ದಾರೆ. ನೈಸರ್ಗಿಕ ವಿಕೋಪದಿಂದ ಆದ ಅನಾಹುತಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ನಿನ್ನೆ ಭಾನುವಾರ ರಾತ್ರಿ‌ ಸುರಿದ ಧಾರಾಕಾರ ಮಳೆಗೆ ದೇವರ ಹಿಪ್ಪರಗಿಯ ಕೆಲ ಮನೆಗಳಲ್ಲಿ ನೀರು ನುಗ್ಗಿತ್ತು. ಇದರಿಂದಾಗಿ ಜನರು ಜಾಗರಣೆ ಮಾಡುವಂತಾಯಿತು.

ಯಾದಗಿರಿಯಲ್ಲಿ ವಿದ್ಯುತ್ ತಗುಲಿ ಜಾನುವಾರು ಸಾವು

ಇತ್ತ ಯಾದಗಿರಿಯ ಯಡ್ಡಹಳ್ಳಿ ಗ್ರಾಮದಲ್ಲಿ ವಿದ್ಯುತ್‌ ತಗುಲಿ ಜಾನುವಾರು ಮೃತಪಟ್ಟಿದೆ. ಜೆಸ್ಕಾಂ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ವಿದ್ಯುತ್‌ ಕಂಬಗಳು ಧರೆಗುರುಳಿದ್ದವು. ವಿದ್ಯುತ್ ಕಂಬ ಹಾಗೂ ವಿದ್ಯುತ್ ತಂತಿ ತೆರವು ಮಾಡದೆ ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಪೂರೈಕೆ ಮಾಡಿದ್ದಾರೆ. ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ವಿದ್ಯುತ್ ತಂತಿ ತುಳಿದು ಆಕಳು ಮೃತಪಟ್ಟಿದೆ ಎಂದು ಆರೋಪಿಸಿದ್ದಾರೆ. ಆಕಳು ಕಳೆದುಕೊಂಡ ಲಿಂಗಾರೆಡ್ಡಿ ಕಂಗಲಾಗಿದ್ದು, ಜೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಧಾರಕಾರ ಮಳೆಯಿಂದ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬರದೇವನಾಳ ಸಮೀಪದ ಡೋಣಿ ನದಿಯ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಕಿರಿದಾದ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಡೋಣಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ತರಕಿಹಾಳ, ಕರೇಕನಾಳ, ಮದಲಿಂಗನಾಳ ಹಾಗೂ ಗೆದ್ದಲಮರಿ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ.

ಇದನ್ನೂ ಓದಿ: Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

ಕಲಬುರಗಿಯಲ್ಲಿ ಕೆರೆಯಂತಾದ ರಸ್ತೆಗಳು

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ತೋಟ್ನಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ತವರು ಕ್ಷೇತ್ರದಲ್ಲಿ ಮಳೆಯು ಅವಾಂತರವನ್ನು ಸೃಷ್ಟಿಸಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಗ್ರಾಮಸ್ಥರು ಪರದಾಡುವಂತಾಗಿದೆ. ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಕೊಡಗಿನಲ್ಲಿ ಮಳೆಗೆ ಧರೆಗುರುಳಿದ ಮರಗಳು

ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗುರುಳಿವೆ. ಮಡಿಕೇರಿ ತಾಲೂಕಿನ ಭಾಗಮಂಡಲದ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಮತ್ತೊಂದೆಡೆ ಪಾಂಡಿ ಹಾಗೂ ಸೂರ್ತಲೆ ರಸ್ತೆಯಲ್ಲೂ ಮರ ಬಿದ್ದು ಅವಾಂತರವೇ ಸೃಷ್ಟಿಯಾಗಿದೆ. ಭಾಗಮಂಡಲ ರಸ್ತೆಯಲ್ಲಿ ಬಿದ್ದಿರುವ ಮರಗಳನ್ನು ಸ್ಥಳೀಯರೇ ತೆರವುಗೊಳಿಸಿದ್ದಾರೆ.

ವಿಜಯನಗರದಲ್ಲಿ ನೆಲಕ್ಕೆ ಅಪ್ಪಳಿಸಿದ ಆಲದ ಮರ

ವಿಜಯನಗರದ ಕೂಡ್ಲಿಗಿ ಪಟ್ಟಣದ ರಾಜೀವ್ ಗಾಂಧೀ ನಗರದಲ್ಲಿ ನಿರಂತರ ಮಳೆಯಿಂದಾಗಿ ಬೃಹತ್ ಆಲದ ಮರವೊಂದು ನೆಲಕ್ಕೆ ಅಪ್ಪಳಿಸಿದೆ. ಕೂಡ್ಲಿಗಿ – ಹೊಸಪೇಟೆ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮರ ಉರುಳಿ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆ ಆಗಿತು. ಮರ ತೆರವು ಗೊಳಿಸುವಂತೆ ರಾಜೀವ್ ಗಾಂಧೀ ನಗರದ ನಿವಾಸಿಗಳು ಹಾಗೂ ರೈತರು ಆಗ್ರಹಿಸಿದರು. ಆಲದ ಮರವು ವಿದ್ಯುತ್ ತಂತಿ ಮೇಲೆಯೂ ಬಿದ್ದಿದ್ದು, ರಾಜೀವ್ ಗಾಂಧೀ ನಗರಕ್ಕೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Prajwal Revanna Case: ಪ್ರಜ್ವಲ್‌ ರೇವಣ್ಣಗೆ 10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ (Prajwal Revanna Case) ಜೂನ್‌ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ, ಹೀಗಾಗಿ ಪ್ರಜ್ವಲ್‌ ರೇವಣ್ಣನನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ.

ಬಸವನಗುಡಿಯ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಬಳಿಕ ಪ್ರಜ್ವಲ್‌ನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದೆ ನ್ಯಾಯಾಧೀಶರು ಆರೋಪಿಗೆ 14 ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ವಿಚಾರಣೆ ವೇಳೆ ಪೊಲೀಸರಿಂದ ತೊಂದರೆ ಆಯ್ತಾ ಎಂದು ಪ್ರಜ್ವಲ್‌ಗೆ ಜಡ್ಜ್ ಪ್ರಶ್ನೆ ಕೇಳಿದ್ದು, ಇದಕ್ಕೆ ಏನೂ ತೊಂದರೆ ಆಗಿಲ್ಲ ಸ್ವಾಮಿ ಎಂದು ಉತ್ತರಿಸಿದ್ದಾರೆ. ನಂತರ ಎಸ್ಐಟಿಯಿಂದ ಮೆಡಿಕಲ್‌ ಟೆಸ್ಟ್ ಹಾಗೂ ಇನ್ನಿತರ ಮಾಹಿತಿ ಪಡೆದು ಪ್ರಜ್ವಲ್‌ಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಇದನ್ನೂ ಓದಿ | ಮಾನಸಿಕ ಖಿನ್ನತೆಯಿಂದ ಕುದೂರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆಗೆ ಶರಣು

ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ!

bhavani revanna prajwal revanna case

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಎಸ್‌ಐಟಿಯಿಂದ (SIT) ತನಿಖೆಗೆ ಒಳಗಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರ ಮನೆಯನ್ನು ಇಂದು ಮತ್ತೊಮ್ಮೆ ಮಹಜರು ಮಾಡಲಾಗಿದೆ. ಇದೇ ಸಂದರ್ಭದಲ್ಲಿ ತಾಯಿ ಭವಾನಿ ರೇವಣ್ಣ (Bhavani Revanna) ಅದೇ ಮನೆಯಲ್ಲೇ ಇದ್ದರೂ ಮಗನಿಗೆ ಮುಖಾಮುಖಿ ಆಗಲಿಲ್ಲ ಎಂದು ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಅಧಿಕಾರಿಗಳು ಇಂದು ಮಹಜರ್‌ಗೆ ಕರೆದೊಯ್ದರು. ಇಂದು ಪ್ರಜ್ವಲ್‌ನನ್ನು ನ್ಯಾಯಾಲಯಕ್ಕೆ ಹಾಜರು ಮಾಡುವ ಮುನ್ನ ಬೆಂಗಳೂರಿನ ಬಸವನಗುಡಿಯ ನಿವಾಸದಲ್ಲಿ ಮಹಜರ್ ಪ್ರಕ್ರಿಯೆ ನಡೆಸಿದರು. ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅಸೌಖ್ಯದ ಕಾರಣ ಹೇಳಿ ಮನೆಯಲ್ಲೇ ಇದ್ದರು. ಆದರೆ ಪ್ರಜ್ವಲ್‌ಗೆ ಮುಖಾಮುಖಿಯಾಗಲಿಲ್ಲ.

ಈ ಮುನ್ನವೇ ಸ್ಥಳ ಮಹಜರು ಮಾಡುವ ವೇಳೆ ಅಡ್ಡಿಪಡಿಸದಂತೆ ಭವಾನಿ ಅವರಿಗೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ. ಭವಾನಿ ಅವರು ಕೂಡ ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಕೇಸ್‌ನಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗುತ್ತಿದ್ದಾರೆ. ಕೋರ್ಟ್‌ ಭವಾನಿಗೆ ಮಧ್ಯಂತರ ಜಾಮೀನು ನೀಡಿದ್ದು, ಸಂಜೆಯ ಒಳಗೆ ತನಿಖೆ ಮುಗಿಸಿ ಕಳಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿದೆ.

ಪ್ರಜ್ವಲ್‌ ಮನೆಯಲ್ಲಿ ತನ್ನನ್ನು ಲೈಂಗಿಕವಾಗಿ ಕಿರುಕುಳಕ್ಕೆ ಒಳಪಡಿಸಲಾಗಿದೆ ಎಂದು ಸಂತ್ರಸ್ತೆ ತೋರಿಸಿದ ಕೊಠಡಿ ಮಹಜರು ಮಾಡಲಾಗಿದೆ. ಈ ಸಂದರ್ಭದಲ್ಲಿ ಭವಾನಿ ಅವರು ತುಳಸಿ ಕಟ್ಟೆಗೆ ಪೂಜೆ ಮಾಡುತ್ತಿರುವುದು ಕಂಡುಬಂತು. ಕೈಯಲ್ಲಿ ಊರುಗೋಲು ಹಿಡಿದುಕೊಂಡು ಬಂದ ಭವಾನಿ ರೇವಣ್ಣ, ಮೊದಲ ಮಹಡಿಯಲ್ಲಿರುವ ತುಳಸಿ‌ಕಟ್ಟೆಗೆ ಪೂಜೆ ಸಲ್ಲಿಸಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ವಾಕಿಂಗ್ ಸ್ಟಿಕ್ ಹಿಡಿದುಕೊಂಡು ಓಡಾಡುತ್ತಿದ್ದಾರೆ ಎನ್ನಲಾಗಿದೆ.

ಅಶ್ಲೀಲ ವಿಡಿಯೋದಲ್ಲಿ ತಾನಿರುವುದನ್ನು ಪ್ರಜ್ವಲ್‌ ಒಪ್ಪಿಕೊಂಡಿಲ್ಲ. ಹೀಗಾಗಿ, ಅಶ್ಲೀಲ ವಿಡಿಯೋದಲ್ಲಿ ಕಾಣಿಸುವ ಜಾಗಕ್ಕೂ ಬಸವನಗುಡಿ ಮನೆಯ ಕೋಣೆಗೂ ತಾಳೆ ಆಗ್ತಿದೆಯಾ ಎಂದು ಪರಿಶೀಲನೆ ನಡೆಸಲಾಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಎಲ್ಲೂ ಪ್ರಜ್ವಲ್ ಮುಖ ಕಾಣಿಸುತ್ತಿಲ್ಲ. ಹಾಗಾಗಿ ಮನೆಯ ಕೆಲ ಜಾಗಗಳನ್ನು ಎವಿಡೆನ್ಸ್ ಆಗಿ ಅಧಿಕಾರಿಗಳು ಪರಿಗಣಿಸಲಿದ್ದಾರೆ. ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ ಮಾಡಿರುವ ಜಾಗ ಹಾಗೂ ಅಶ್ಲೀಲ ವಿಡಿಯೋದಲ್ಲಿರುವ ಜಾಗಗಳು ಮ್ಯಾಚ್‌ ಆದರೆ ಪ್ರಜ್ವಲ್‌ ಲಾಕ್‌ ಆದಂತೆಯೇ.

ಇನ್ನೊಂದೆಡೆ ವಿಡಿಯೋ ಮಾಡಿಕೊಂಡ ಮದರ್ ಡಿವೈಸ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸಿದೆ. ಈ ಮೂಲ ಮೊಬೈಲ್‌ ಕಳೆದುಹೋಗಿದೆ. ಒಂದು ವರ್ಷದ ಹಿಂದೆಯೇ ಈ ಬಗ್ಗೆ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವುದಾಗಿ ಪ್ರಜ್ವಲ್‌ ಹೇಳಿದ್ದಾರೆ.

Continue Reading
Advertisement
University Grants Commission
ಪ್ರಮುಖ ಸುದ್ದಿ18 mins ago

University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

Actor Darshan
ಪ್ರಮುಖ ಸುದ್ದಿ28 mins ago

Actor Darshan: ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 3 ದಿನ ಪೊಲೀಸ್ ಕಸ್ಟಡಿ; ಕಟಕಟೆಯಲ್ಲಿ ಕಣ್ಣೀರಿಟ್ಟ ನಟ!

Wedding Jewel Fashion
ಫ್ಯಾಷನ್42 mins ago

Wedding Jewel Fashion: ವೆಡ್ಡಿಂಗ್‌ ಜ್ಯುವೆಲ್‌ ಫ್ಯಾಷನ್‌ನಲ್ಲಿ ಮಹಿಳೆಯರನ್ನು ಸೆಳೆಯುತ್ತಿವೆ ಈ 3 ಟ್ರೆಡಿಷನಲ್‌ ಮಾಟಿಗಳು

EPF Account Rules
ಮನಿ-ಗೈಡ್1 hour ago

EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

Renu Desai Second Marriage
ಸಿನಿಮಾ1 hour ago

Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

Odisha chief minister
ಪ್ರಮುಖ ಸುದ್ದಿ1 hour ago

Odisha chief minister : ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿ; ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ

Renuka Swamy Murder Case
ಕರ್ನಾಟಕ1 hour ago

Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

Raksha Khadse
ರಾಜಕೀಯ2 hours ago

Raksha Khadse: ಅಂದು ಪಂಚಾಯಿತಿ ಸದಸ್ಯೆ, ಇಂದು ಕೇಂದ್ರ ಸಚಿವೆ! ಯಾರು ಈ ರಕ್ಷಾ ಖಡ್ಸೆ?

Health Tips For Monsoon
ಆರೋಗ್ಯ2 hours ago

Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

Ayodhya's e-rickshaw
ಪ್ರಮುಖ ಸುದ್ದಿ2 hours ago

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ6 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ8 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌