Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ - Vistara News

ಮಳೆ

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

Accident News: ಪ್ರತ್ಯೇಕ ಕಡೆಗಳಲ್ಲಿ ನಡೆದ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೈಸೂರಲ್ಲಿ ಮಳೆ ಸಹಿತ ಜೋರಾಗಿ ಬೀಸಿದ ಗಾಳಿಗೆ ಕೂಲಿಂಗ್‌ ಶೀಟ್‌ ತಲೆ ಮೇಲೆ ಬಿದ್ದು ವ್ಯಕ್ತಿಯೊಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಇತ್ತ ರಾಯಚೂರಲ್ಲಿ ರಣ ಬಿಸಿಲಿಗೆ ಇಬ್ಬರು ಬಲಿಯಾಗಿದ್ದಾರೆ.

VISTARANEWS.COM


on

Accident news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು/ರಾಯಚೂರು: ನಿನ್ನೆ ಶುಕ್ರವಾರ ಬೀಸಿದ ಬಿರುಗಾಳಿಗೆ ಕೂಲಿಂಗ್‌ ಶೀಟ್‌ ಕಳಚಿ ವ್ಯಕ್ತಿಯೊಬ್ಬರ ತಲೆ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಕುಸಿದು ಬಿದ್ದ ವ್ಯಕ್ತಿ ಸ್ಥಳದಲ್ಲೇ (Accident News) ಮೃತಪಟ್ಟಿದ್ದಾರೆ. ಮೈಸೂರಿನ ಆಲನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಕುಮಾರ್ (34) ಮೃತ ದುರ್ದೈವಿ.

ಮಾರಶೆಟ್ಟಹಳ್ಳಿ ಗ್ರಾಮದ ನಿವಾಸಿಯಾದ ಶಿವಕುಮಾರ್‌ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ. ಈ ವೇಳೆ ಜೋರಾಗಿ ಬಿರುಗಾಳಿ ಬೀಸಿದ್ದು, ಕೂಲಿಂಗ್ ಶೀಟ್ ನೇರವಾಗಿ ಶಿವಕುಮಾರ್‌ ತಲೆ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡ ಶಿವಕುಮಾರ್‌ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇಬ್ಬರನ್ನು ಬಲಿ ಪಡೆದ ರಾಯಚೂರು ರಣ ಬಿಸಿಲು

ಒಂದು ಕಡೆ ಬಿರುಗಾಳಿ ಸಹಿತ ಮಳೆ ಮತ್ತೊಂದು ಕಡೆ ರಣ ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ರಾಯಚೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅತಿಯಾದ ಬಿಸಿಲಿನ ತಾಪಮಾನದಿಂದ ಮಲ್ಲಯ್ಯ ಹಾಗೂ ಆಂಜನೇಯ ಎಂಬುವವರು ಮೃತಪಟ್ಟಿದ್ದಾರೆ.

ರಾಯಚೂರಿನ ಮಸ್ಕಿ ಪಟ್ಟಣದಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಮೃತಪಟ್ಟಿದ್ದಾರೆ. ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಮಲ್ಲಯ್ಯ (45) ಅವರ ಪ್ರಾಣಪಕ್ಷಿ ಹಾರಿ ಹೋಗಿದೆ.

ಮಲ್ಲಯ್ಯ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ಸ್ವಗ್ರಾಮ ಮಸ್ಕಿಯ ಹಸಮಕಲ್‌ಗೆ ಬಂದಿದ್ದರು. ಮಧ್ಯಾಹ್ನ ಮಸ್ಕಿ ಪಟ್ಟಣದಲ್ಲಿ ಕಿರಾಣಿ ಸಾಮಾನು ತರಲು ಬಂದಾಗ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.

ಇತ್ತ ರಾಯಚೂರು ತಾಲೂಕಿನ ಜಾಲಿಬೆಂಚಿಯಲ್ಲೂ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಾಲಿಬೆಂಚಿಯ ಆಂಜನೇಯ (45) ಮೃತ ದುರ್ದೈವಿ. ಆಂಜನೇಯ ಹೊಲದಿಂದ ಕೆಲಸ ಮುಗಿಸಿ ಮನೆಗೆ ಬರುವಾಗ ಸುಸ್ತಾಗಿ ಬಿದ್ದು ಮೃತಪಟ್ಟಿದ್ದಾರೆ. ನಿತ್ಯ 44-46°C ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ಅನಾವಶ್ಯಕವಾಗಿ ಹೊರಗೆ ಓಡಾಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಮೈಸೂರಿನಲ್ಲಿ ಏಕಾಏಕಿ ಹೊತ್ತಿ ಉರಿದ ಬೈಕ್

ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಿನ್ನೆ ಶುಕ್ರವಾರ ಮಧ್ಯಾಹ್ನ ಏಕಾಏಕಿ ಬೈಕ್‌ವೊಂದು ಹೊತ್ತಿ ಉರಿದಿದೆ. ಬಿಸಿಲ ತಾಪಕ್ಕೆ ಇದ್ದಕ್ಕಿದ್ದಂತೆ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್‌ ಯಾರಿಗೂ ಪ್ರಾಣಹಾನಿ ಆಗಿಲ್ಲ.

ಇದನ್ನೂ ಓದಿ: Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

ರಾಯಚೂರು/ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಉರಿ ಬಿಸಿಲು ಜನರನ್ನು ಸುಸ್ತು (Karnataka Weather Forecast) ಮಾಡಿದೆ. ಅದರಲ್ಲೂ ಉತ್ತರ ಕರ್ನಾಟಕದ ಮಂದಿ ಕುಂತರೂ ನಿಂತರೂ ಬೆವರು ಸುರಿಸುವಂತಾಗಿದೆ. ಬಿಸಿಲಿನ ಆಜ್ಞೆಗೆ ಜನರು ಹೊರಬರಲು ಆಗದೆ ಅಘೋಷಿತ ಬಂದ್‌ ನಿರ್ಮಾಣವಾಗಿದೆ. ಸದ್ಯ ಅತಿಯಾದ ಬಿಸಿಲಿಗೆ ತತ್ತರಿಸಿದ ರಾಯಚೂರು ಜನರು ಮಧ್ಯಾಹ್ನ ಹೊರಗೆ ಬಾರದಂತೆ ರಾಯಚೂರು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಮುಂದಿನ ಒಂದು ವಾರ ಮತ್ತಷ್ಟು ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 44 ರಿಂದ 46 ಡಿ.ಸೆ ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರಿಂದ ಅನಾರೋಗ್ಯ ಸಮಸ್ಯೆ ಜತೆಗೆ ಬಿಸಿಲಾಘಾತಕ್ಕೆ ಸಾವು ಸಂಭವಿಸಬಹುದು. ಹಾಗಾಗಿ ಮಧ್ಯಾಹ್ನ 12 ರಿಂದ 4 ಗಂಟೆವರೆಗೂ ಹೊರಗೆ ಹೋಗದಿರಿ ಎಂದು ಡಿಸಿ ಎಲ್ ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹೊರಗೆ ಹೋಗಲೇಬೇಕಾದ ಅವಶ್ಯಕತೆ ಇದ್ದರೆ ಶುದ್ಧ ಕುಡಿಯುವ ನೀರಿನ ಬಾಟಲ್ ಕೊಂಡೊಯ್ಯಿರಿ. ಟೋಪಿ ಅಥವಾ ಛತ್ರಿ ಬಳಸಿ, ಆದಷ್ಟು ನೆರಳಿನ ಪ್ರದೇಶಗಳಲ್ಲಿ ಓಡಾಡಿ. ಬಾಯಾರಿಕೆ ಆಗದಿದ್ದರೂ ಆಗಾಗ ನೀರು ಕುಡಿಬೇಕು. ಯಾವಾಗಲೂ ನಿಮ್ಮ ಬಳಿ ನೀರು ಇಟ್ಟುಕೊಂಡಿರಿ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹಾಗೆಯೇ ಮನೆ- ಕಚೇರಿಗಳಲ್ಲಿ ಪಕ್ಷಿಗಳಿಗೂ ನೀರನ್ನು ತುಂಬಿ ಇಡಿ ಎಂದಿದ್ದಾರೆ.

karnataka weather forecast

ತುಮಕೂರಲ್ಲಿ ಬಿಸಿ ಗಾಳಿ; ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ

ತುಮಕೂರು ಜಿಲ್ಲೆಯಲ್ಲೂ ಬಿಸಿ ಗಾಳಿಯು ಆತಂಕವನ್ನು ಹೆಚ್ಚಿಸಿದೆ. ಪಾವಗಡ ತಾಲೂಕಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಬಿಸಿಲ ಬೇಗೆಗೆ ಪ್ರಾಣಿ ಪಕ್ಷಿಗಳೂ ಹೈರಾಣಾಗಿವೆ. ಇತ್ತ ರೈತರು ದನ ಕರುಗಳಿಗೆ ಒದ್ದೆ ಮಾಡಿದ ಗೋಣಿಚೀಲ ಹಾಕುತ್ತಿದ್ದಾರೆ. ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ ಹಾಕಿ, ತಂಪು ಮಾಡುತ್ತಿದ್ದಾರೆ.

ಬಿಸಿಲಿನ ಹೊಡೆತ- ಚಿಕ್ಕಬಳ್ಳಾಪುರ ಪ್ರವಾಸಿತಾಣ ಖಾಲಿ ಖಾಲಿ

ಇತ್ತ ಚಿಕ್ಕಬಳ್ಳಾಪುರದಲ್ಲೂ ಅತಿಯಾದ ತಾಪಮಾನದಿಂದಾಗಿ ಪ್ರವಾಸಿ ತಾಣಗಳು ಪ್ರವಾಸಿಗರು ಇಲ್ಲದೆ ಬಣಗುಡುತ್ತಿದೆ. ನಂದಿ ಬೆಟ್ಟ, ಈಶಾ ಫೌಂಡೇಶನ್ ಜನರಿಲ್ಲದೆ ಖಾಲಿ ಖಾಲಿಯಾಗಿದೆ. ಬಿಸಿಲಿನ ತಾಪಕ್ಕೆ ಜನರು ಮನೆ ಬಿಟ್ಟು‌ ಕದಲದ ಕಾರಣಕ್ಕೆ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಬಳ್ಳಾಪುರದಲ್ಲಿ ಆಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಪ್ರತಿನಿತ್ಯ ಪ್ರವಾಸಿಗರಿಂದ ಗಿಜುಗುಡುತಿದ್ದ ನಂದಿಬೆಟ್ಟ ಖಾಲಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

karnataka Weather : ನಾಳೆಗೆ ಹೈವೇವ್‌ ಅಲರ್ಟ್‌- ಬಿರುಗಾಳಿ ಸಹಿತ ಮಳೆಯೊಂದಿಗೆ ಅಪ್ಪಳಿಸಲಿದೆ ರಕ್ಕಸ ಅಲೆ

karnataka Weather Forecast : ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಕಡಲತೀರದಲ್ಲಿ ಅಲೆಗಳು ಅಪ್ಪಳಿಸಲಿದೆ. ಹಲವಡೆ ಹೈವೇವ್‌ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಬಿರುಗಾಳಿಯೊಂದಿಗೆ (Rain News) ಮಳೆಯಾಗಲಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಜೂನ್‌ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Heavy rain) ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಸುತ್ತಮುತ್ತ ವ್ಯಾಪಕ (Rain News) ಮಳೆಯಾಗಲಿದ್ದು, ಬಲವಾದ ಗಾಳಿಯು ಬೀಸಲಿದೆ. ಕೆಲವೆಡೆ ಭೂ ಕುಸಿತವಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಬಿರುಗಾಳಿ ಸಹಿತ (40-50 ಕಿ.ಮೀ) ಗುಡುಗಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಎಚ್ಚರಿಕೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ವೇಗವು 40-50 ಕಿ,ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಗದಗ, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆಯಲ್ಲೂ ವಿಪರೀತ ಮಳೆಯಾಗಲಿದೆ.

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Bengaluru Power Cut: ತುರ್ತು ನಿರ್ವಹಣಾ ಕೆಲಸ; ಜೂ.25ರಂದು ಬೆಂಗಳೂರಿನಲ್ಲಿ ವಿದ್ಯುತ್‌ ಕಡಿತ

ಕರಾವಳಿಯಲ್ಲಿ ಮಳೆಯಾಟ

ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡದ ಪಣಂಬೂರು, ಬೀದರ್‌ನ ಭಾಲ್ಕಿಯಲ್ಲಿ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಕೊಟ್ಟಿಗೆಹಾರದಲ್ಲಿ 4 ಸೆಂ.ಮೀ, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆ ಸುರಿದಿದೆ.

ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆಯಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ , ಉಪ್ಪಿನಂಗಡಿ , ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಹೈ ಅಲರ್ಟ್‌ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಗದಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಶುರುವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಸುಮಾರು 31 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

9 ಜಿಲ್ಲೆಗಳಿಗೆ ಹೈ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವುದರ ಜತೆಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಕೊಡಗು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಮತ್ತು ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ . ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Health Tips: ನಮ್ಮ ದೇಹಕ್ಕೆ ಪ್ರೊಟೀನ್‌ ಪುಷ್ಟಿ ನೀಡಲು ಯಾವ ಮೊಳಕೆ ಕಾಳುಗಳು ಸೂಕ್ತ?

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌!

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌! (Dogs Monsoon Fashion) ಅರರೆ., ಇದೇನಿದು ಶ್ವಾನಗಳಿಗೂ ಮಳೆಗಾಲದ ಫ್ಯಾಷನ್‌ ಎಂದು ಹುಬ್ಬೇರಿಸಬಹುದು. ಹೌದು, ಇದೀಗ ಶ್ವಾನಗಳ ಮಾನ್ಸೂನ್‌ ಡ್ರೆಸ್‌ ಹಾಗೂ ರೈನ್‌ಕೋಟ್‌, ಮತ್ತಿತರೇ ಆಕ್ಸೆಸರೀಸ್‌ ಪೆಟ್‌ ಲೋಕದಲ್ಲಿ ಕಾಲಿಟ್ಟಿವೆ. ಆಯಾ ಜಾತಿಯ ಮುದ್ದು ಶ್ವಾನಗಳಿಗೆ ಹೊಂದುವಂತಹ, ನಾನಾ ವೆರೈಟಿ ಮಾನ್ಸೂನ್‌ ಡ್ರೆಸ್‌ಗಳು ಹಾಗೂ ವಾಟರ್‌ಪ್ರೂಫ್‌ ರೈನ್‌ಕೋಟ್‌ಗಳು ನಾಯಿಮರಿಗಳನ್ನು ಅಲಂಕರಿಸುತ್ತಿವೆ.

Dogs Monsoon Fashion

ಮುದ್ದು ಶ್ವಾನಗಳಿಗೂ ಮಾನ್ಸೂನ್‌ ಫ್ಯಾಷನ್‌

“ಇಂದು ಕಾಲ ಬದಲಾಗಿದೆ. ಮನೆಯಲ್ಲಿ ಮುದ್ದು ಶ್ವಾನಗಳಿಗೂ ಮಕ್ಕಳ ಸ್ಥಾನ ಮಾನ ದೊರಕಿದೆ. ಪ್ರತಿಯೊಬ್ಬರು ಅವರು ಸಾಕಿದ ನಾಯಿಮರಿಗಳನ್ನು ಯಾವ ಮಟ್ಟಿಗೆ ಇಷ್ಟ ಪಡುತ್ತಾರೆಂದರೇ, ಅವಕ್ಕೆ ಇತ್ತೀಚೆಗೆ ನಾನಾ ಬಗೆಯಲ್ಲಿ ಸ್ಟೈಲಿಂಗ್‌ ಕೂಡ ಮಾಡುತ್ತಾರೆ. ಇನ್ನು, ಹಿರಿಯರು ಕಿರಿಯರೆನ್ನದೇ ಎಲ್ಲರೂ ವಾಕಿಂಗ್‌ ಹಾಗೂ ಜಾಕಿಂಗ್‌ ಸಮಯದಲ್ಲೂ ಶ್ವಾನಗಳನ್ನು ಜೊತೆಯಲ್ಲಿಯೇ ಕರೆದೊಯ್ಯುತ್ತಾರೆ. ಇದಕ್ಕೆ ಪೂರಕ ಎಂಬಂತೆ, ಪೆಟ್‌ ಲೋಕದಲ್ಲೂ ನಾನಾ ಬಗೆಯ ಆಕ್ಸೆಸರೀಸ್‌ಗಳು ಹಾಗೂ ಉಡುಗೆಗಳು ಬಂದಿವೆ. ಆಯಾ ಸೀಸನ್‌ಗೆ ಮ್ಯಾಚ್‌ ಆಗುವಂತೆ ದೊರಕುತ್ತಿವೆ. ಅವುಗಳಲ್ಲಿ ಇದೀಗ ಮಾನ್ಸೂನ್‌ ಸೀಸನ್‌ಗೆ ಹೊಂದುವಂತಹ ಫ್ಯಾಷನ್‌ ಉಡುಗೆ ಹಾಗೂ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ” ಎನ್ನುತ್ತಾರೆ ಪೆಟ್‌ ಸ್ಪಾನ ಸ್ಟೈಲಿಂಗ್‌ ಎಕ್ಸ್‌ಫರ್ಟ್ ಜಾಕಿ. ಅವರ ಪ್ರಕಾರ, ಶ್ವಾನಗಳು ಇದೀಗ ಸ್ಟೈಲಿಶ್‌ ಆಗಿ ಕಾಣಿಸಲು ಈ ಆಕ್ಸೆಸರೀಸ್‌ಗಳು ಸಹಕರಿಸುತ್ತಿವೆಯಂತೆ.

Dogs Monsoon Fashion

ಮಾನ್ಸೂನ್‌ಗೆ ಮ್ಯಾಚಿಂಗ್‌

ಶ್ವಾನಗಳಿಗೆ ಬಂದಿರುವ ಕಲರ್‌ಫುಲ್‌ ಉಡುಗೆ ಹಾಗೂ ರೈನ್‌ಕೋಟ್‌ ಮತ್ತು ಅವುಗಳ ಕಾಲಿನ ಪಾದಗಳಿಗೆ ಹಾಕಬಹುದಾದ ಪೆಟ್‌ ವೆಲ್ಲೈಸ್‌, ರೈನ್‌ ಬೂಟ್ಸ್ ಹಾಗೂ ಟವೆಲ್‌ ಮತ್ತು ವೈಪ್ಸ್ ಈ ಸೀಸನ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿವೆ.

Dogs Monsoon Fashion

ಕಲರ್‌ಫುಲ್‌ ಡಾಗ್ಗಿ ರೈನ್‌ ಕೋಟ್ಸ್

ಪಿರಿ ಪಿರಿ ಸಣ್ಣ ಮಳೆಯಲ್ಲೂ ಡಾಗ್ಗಿಯಿಲ್ಲದೇ ವಾಕ್‌ ಮಾಡಲಾಗುವುದಿಲ್ಲ ಎನ್ನುವ ಶ್ವಾನಗಳ ಪೋಷಕರು, ಈ ಮಾನ್ಸೂನ್‌ ಡಾಗ್‌ ರೈನ್‌ಕೋಟ್ಸ್‌ಗಳ ಖರೀದಿ ಮಾಡತೊಡಗಿದ್ದಾರೆ. ಬೇಡಿಕೆ ಹೆಚ್ಚಾದಂತೆ, ಸಿಂಥಟಿಕ್‌, ಪಾಲಿಸ್ಟರ್‌ ಸೇರಿದಂತೆ ವಾಟರ್‌ ಪ್ರೂಫ್‌ ಫ್ಯಾಬ್ರಿಕ್‌ನಲ್ಲಿ ಇವು ನಾನಾ ಡಿಸೈನ್‌ನಲ್ಲಿ ಆಗಮಿಸಿವೆ.

Dogs Monsoon Fashion

ಪೆಟ್ಸ್ ರೈನ್‌ ಬೂಟ್ಸ್

ನಾಯಿ ಮರಿಗಳಿಗೆ ರಸ್ತೆಯ ಹಾಗೂ ನೆಲದ ಕೊಚ್ಚೆ, ಕೆಸರು ಹತ್ತದಂತೆ ಕಾಪಾಡಬಹುದಾದ ಪುಟ್ಟ ಪುಟ್ಟ ರೈನ್‌ ಬೂಟ್ಸ್‌ಗಳು ಕೂಡ ನಾನಾ ವಿನ್ಯಾಸದಲ್ಲಿ ಪೆಟ್‌ ಶಾಪ್‌ಗಳಿಗೆ ಬಂದಿವೆ. ಇನ್ನು, ಡಾಗ್‌ ಟವೆಲ್ಸ್ ಹಾಗೂ ವೈಪ್ಸ್ ಸೇರಿದಂತೆ, ಬೋ ಹಾಗೂ ಬೆಲ್ಟ್‌ಗಳು ಕೂಡ ಪೆಟ್‌ ಶಾಪ್‌ಗಳಿಗೆ ಲಗ್ಗೆ ಇಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Kalaburagi News: ರಸಗೊಬ್ಬರ, ಬೀಜ ಕೊರತೆಯಾಗದಂತೆ ಎಚ್ಚರ ವಹಿಸಲು ಪ್ರಿಯಾಂಕ್ ಖರ್ಗೆ ಸೂಚನೆ

Kalaburagi News: ಕಲಬುರಗಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆ ಸಿದ್ಧತೆ ಮತ್ತು ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

VISTARANEWS.COM


on

Minister Priyank Kharge held a meeting on Monsoon Sowing Preparation and Precautionary Measures for Flood Control
Koo

ಕಲಬುರಗಿ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದ ಕಾರಣ ಎಲ್ಲೆಡೆ ಒಮ್ಮೆಲೆ ಬಿತ್ತನೆ ಶುರುವಾಗಿದ್ದು, ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆ ಸಿದ್ಧತೆ ಮತ್ತು ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಳೆದ ವರ್ಷ ಕಲಬುರಗಿ, ಚಿತ್ತಾಪುರ, ಕಾಳಗಿ ತಾಲೂಕಿನಲ್ಲಿ ಕಳಪೆ ಬೀಜ ವಿತರಣೆಯಾಗಿದ್ದರಿಂದ ರೈತರು ತಮ್ಮ ಬೆಳೆ ಹಾನಿ ಮಾಡಿಕೊಂಡಿದ್ದಾರೆ ಇದು ಪುನರಾವರ್ತನೆಯಾಗಬಾರದು ಎಂದು ತಿಳಿಸಿದರು.

ಈ ಸಲ ಅತಿವೃಷ್ಠಿಯಿಂದ ಬೆಳೆ ಹಾನಿಯಾಗುವ ಸಾಧ್ಯತೆ ಇದ್ದು, ಹಾನಿ ತಡೆಗೆ ಈ ಕೂಡಲೇ ಅಗತ್ಯ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದ ಸಚಿವ‌ ಪ್ರಿಯಾಂಕ್ ಖರ್ಗೆ, ಹೆಚ್ಚು ಮಳೆಗೆ ಆಗಬಹುದಾದ ಹಾನಿ ತಪ್ಪಿಸಲು ಬಸಿಗಾಲುವೆ ನಿರ್ಮಾಣ ಹಾಗೂ ಬೆಳೆ ವಿಮೆ ಮಾಡಿಸಲು ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕಳೆದ ವರ್ಷ ಬೆಳೆ‌ ವಿಮೆ ಮಾಡಿಸಿದ್ದರಿಂದ ಹೆಚ್ಚಿನ ಪರಿಹಾರ ಸಿಗಲು ಕಾರಣವಾಗಿದೆ. ಈ ಬಾರಿಯೂ ನೊಂದಣಿ ಹೆಚ್ಚಿಸಿ, ಮೈ ಮರೆಯದಿರಿ ಎಂದು ಕೃಷಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

ಪ್ರತಿ ತಾಲೂಕಿನಲ್ಲಿ ಪರವಾನಿಗೆ ಇಲ್ಲದೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಾಡಿದಲ್ಲಿ, ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದಲ್ಲಿ ಅಂತಹ ಕೃಷಿ ಮಳಿಗೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರನ್ನೇ ಇದಕ್ಕೆ ಹೊಣೆಗಾರರನ್ನಾಗಿಸಬೇಕು. ಈ ಸಂಬಂಧ ತಾಲೂಕಾ ಅಧಿಕಾರಿಗಳಿಗೆ ಲಿಖಿತ ಸೂಚನೆ ನೀಡಿ ಎಂದು ಡಿ.ಸಿ ಬಿ. ಫೌಜಿಯಾ ತರನ್ನುಮ್ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 8.65 ಲಕ್ಷ‌ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಈ ವರ್ಷ ಉತ್ತಮ ಮಳೆಯಾದ ಕಾರಣ ಜಿಲ್ಲೆಯ ಎಲ್ಲೆಡೆ ಇದೂವರೆಗೆ ಶೇ.30 ಬಿತ್ತನೆಯಾಗಿದೆ. ಉಳಿದೆಡೆ ಬಿತ್ತನೆ ಚಟುವಟಿಕೆ ಗರಿಗೆದರಿವೆ. ಕಳೆದ ವರ್ಷದಲ್ಲಿ ಬೆಳೆ‌ ವಿಮೆ, ಸ್ಥಳೀಯ ಪ್ರಕೃತಿ ವಿಕೋಪ ಹಾಗೂ ತೊಗರಿ ನೆಟೆ ರೋಗ ಪ್ರಕರಣದಲ್ಲಿ ಒಟ್ಟಾರೆ 697.34 ಕೋಟಿ ರೂ. ಪರಿಹಾರ ರೈತರಿಗೆ ಸಿಕ್ಕಿದೆ. ಕಳೆದ‌ ಬಾರಿ 1.62 ಲಕ್ಷ ರೈತರು ಬೆಳೆ ವಿಮೆ‌ ಮಾಡಿಸಿದ್ದರು, ಈ ಸಲ 2.50 ಲಕ್ಷಕ್ಕೆ ಹೆಚ್ಚಿಸಲು ಗುರಿ ಹೊಂದಿದ್ದು, ಇದೂವರೆಗೆ 15 ಸಾವಿರಕ್ಕೂ ಹೆಚ್ಚು ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.

ರೈತರಿಗೆ ಸಬ್ಸಿಡಿ ಹಾಗೂ ಪರಿಹಾರ ಕೊಡಿಸುವಲ್ಲಿ ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಶ್ರಮವಹಿಸಿದ್ದೀರಿ. ಸರ್ಕಾರದ‌ ಮಟ್ಟದಲ್ಲಿ ಈ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ನಿಮಗೆ ಅಭಿನಂದನೆಗಳು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಮುಂದುವರೆದು, ಎಫ್.ಐ.ಡಿ. ನೊಂದಣಿ ತೀವ್ರಗೊಳಿಸಬೇಕು. ಇದರಿಂದ ಡಿ.ಬಿ.ಟಿ. ಪರಿಹಾರ ಪಡೆಯಲು ಸಹಕಾರಿಯಾಗಲಿದೆ. ಇದು ಸ್ಪಂದಿಸುವ ಸರ್ಕಾರ ಎಂಬುದನ್ನು ಅರಿತಿರುವ ರೈತರು ನಮ್ಮಿಂದ ಹೆಚ್ಚಿನ ಅಪೇಕ್ಷೆ ಹೊಂದಿದ್ದಾರೆ. ಇದನ್ನರಿತು ನೀವು ಕೆಲಸ ಮಾಡಿ ಎಂದು ತಿಳಿಸಿದರು‌.

ಇದನ್ನೂ ಓದಿ: DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ವಿಶೇಷವಾಗಿ ಡಿ.ಎ.ಪಿ.ರಸಗೊಬ್ಬರ ಕೊರತೆ ಎದ್ದು ಕಾಣುತ್ತಿದೆ. ಇದು ಹೀಗೆ ಮುಂದುವರೆದರೆ ರೈತರು ಪಕ್ಕದ ರಾಜ್ಯ ಅಥವಾ ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಹಣ ನೀಡಿ ಖರೀದಿಸಬೇಕಾಗುತ್ತದೆ. ರೈತರನ್ನು ಇದರಿಂದ ತಪ್ಪಿಸಲು ಸಾಕಷ್ಟು ಪ್ರಮಾಣದಲ್ಲಿ ಆರ್.ಎಸ್.ಕೆ. ಕೇಂದ್ರದಲ್ಲಿ ಡಿ.ಎ.ಪಿ. ದಾಸ್ತಾನಿಕರಿಸಬೇಕು. ಕಳಪೆ, ನಕಲಿ ಬೀಜ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದರು.

ಬೆಳೆ ವಿಮೆ‌ ಮಾಡಿದ ರೈತರಿಗೆ ಬೆಳೆ ಹಾನಿ‌ ಸಂದರ್ಭದಲ್ಲಿ ಸಮರ್ಪಕ ಪರಿಹಾರ ಪಡೆಯುವ ನಿಟ್ಟಿನಲ್ಲಿ ಕ್ರಾಪ್ ಕಟ್ಟಿಂಗ್ ಎಕ್ಸ್ ಪೆರಿಮೆಂಟ್ ನಡೆಯುವ ಸಮಯದಲ್ಲಿ ಕಡ್ಡಾಯವಾಗಿ ಇರಬೇಕಾದ ಅಧಿಕಾರಿಗಳು ಇರಲೇಬೇಕು ಹಾಗೂ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋಗ್ರಾಫಿ ಮಾಡಲೇಬೇಕು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಕಟ್ಟುನಿಟ್ಟಾಗಿ ಸೂಚಿಸಿದರು.

ತೋಟಗಾರಿಕೆ ಇಲಾಖೆ ಚರ್ಚೆ ವೇಳೆಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ತೋಟಗಾರಿಕೆ ಬೆಳೆ ಪ್ರಮಾಣ ವರ್ಷದಿಂದ ವರ್ಷಕ್ಕೆ ವಿಸ್ತರಣೆಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ತೋಟಗಾರಿಕೆ ಬೆಳೆ ವಿಸ್ತಿರ್ಣ ಹೆಚ್ಚಿಸಬೇಕು. ಇಲ್ಲಿನ ಕೆಂಬಾಳೆ, ಕಲ್ಲಂಗಡಿ ಅಂತಹ ಹಣ್ಣುಗಳನ್ನು ಸೂಪರ್ ಫುಡ್ ಬ್ರ್ಯಾಂಡ್ ನಡಿ ಮಾರಾಟ ಮಾಡಬೇಕು. ರೈತರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕೆಂದ ಅವರು, ಅತಿವೃಷ್ಠಿ ಹಾನಿಯಾದಲ್ಲಿ ಮೇವು ದಾಸ್ತಾನು, ಜಾನುವಾರುಗಳಿಗೆ ಲಸಿಕಾಕರಣ ಮಾಡಬೇಕು ಎಂದು ಪಶುಸಂಗೋಪನಾ ಉಪನಿರ್ದೇಶಕ ಡಾ.ಎಸ್.ಡಿ. ಆವಂಟಿ ಅವರಿಗೆ ಸೂಚಿಸಿದರು.

ರೈತರ ಆತ್ಮಹತ್ಯೆಗೆ ಕಳವಳ, ಪರಿಹಾರ ವಿಳಂಬ ಸಲ್ಲದು

ಸಭೆಯಲ್ಲಿ ರೈತರ ಆತ್ಮಹತ್ಯೆ ಚರ್ಚೆ ಸಂದರ್ಭದಲ್ಲಿ ಇನ್ನು 5 ಪ್ರಕರಣ ಪರಿಹಾರ ನೀಡಲು ಬಾಕಿ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್‌ ಹೇಳಿದಾಗ, ಸಚಿವ ಪ್ರಿಯಾಂಕ್ ಖರ್ಗೆ ಅವರು ಆತ್ಮಹತ್ಯೆಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಾ, ಇಂತಹ ಪ್ರಕರಣದಲ್ಲಿ ಪರಿಹಾರ ವಿಳಂಬ ಸಲ್ಲದು. ಇತ್ತೀಚೆಗೆ ಚಿತ್ತಾಪೂರ ತಾಲೂಕಿನ ಅಳ್ಳೊಳ್ಳಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪ್ರಕರಣ ಉಲ್ಲೇಖಿಸಿ ಪಿ.ಎಚ್.ಸಿ ಯಲ್ಲಿ ಎಂಟಿ ಸ್ನೇಕ್ ವೆನೋಮ್ ಇಲ್ಲದಕ್ಕೆ ಯಾದಗಿರಿ ಆಸ್ಪತ್ರೆಗೆ ಹೋಗಬೇಕಾಯಿತು. ಪ್ರತಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಎಂಟಿ ಸ್ನೇಕ್ ವೆನೋಮ್ ಶೇಖರಿಸಿಡುವಂತೆ ಸೂಚಿಸಿದರು. ಇದಕ್ಕೆ ದನಿಗೂಡಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಹಾವು ಕಚ್ಚಿದ ಪ್ರಕರಣದಲ್ಲಿ ಜನರು ತಪ್ಪು ನಂಬಿಕೆಯಲ್ಲಿ ಮಂತ್ರ-ತಂತ್ರ ಎಂದು ಆ ಕಡೆ ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಲು ಅಭಿಯಾನ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಇದನ್ನೂ ಓದಿ: PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

ಸಭೆಯಲ್ಲಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಉಪ ಆಯುಕ್ತ ಮಾಧವ ಗಿತ್ತೆ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಮೀನಾಕ್ಷಿ ಆರ್ಯ ಸೇರಿದಂತೆ ಜಿಲ್ಲಾ ಮಟ್ಟದ ಅನೇಕ ಅಧಿಕಾರಿಗಳು ಇದ್ದರು.

Continue Reading

ಮಳೆ

Karnataka Weather : ವೀಕೆಂಡ್‌ ಪ್ರಿಯರೇ ಎಚ್ಚರ; ಭಾನುವಾರ ಸುರಿಯಲಿದೆ ಮಳೆ ಧಾರಾಕಾರ

Karnataka Weather Forecast : ಜೂನ್‌ 23ಕ್ಕೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಜೂನ್‌ 26ರವರೆಗೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಭಾನುವಾರದಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಕೆಲವು ಸ್ಥಳದಲ್ಲಿ ಗುಡುಗು ಸಹಿತ ಭಾರಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿಗೆ ಲಘು ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕನಿಷ್ಟ ತಾಪಮಾನ 21 ಹಾಗೂ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ:

ಮಳೆ ಬಂದರೆ ಸವಾರರಿಗೆ ಆತಂಕ

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಮಳೆ ಬಂದರೆ ಸಾಕು ಸವಾರರು ಭಯದಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಣಗಿದ ಮರಗಳು ಬೀಳುವ ಆತಂಕದಲ್ಲಿ ಜನರು ಜೀವವನ್ನು ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.

ಗಾಳಿ ಮಳೆಯಿಂದಾಗಿ ಆನೇಕ ಕಡೆ ಮರಗಳು ಧರೆಗುರುಳಿದ್ದವು. ಸಾಕಷ್ಟು ಕಡೆ ಅನಾಹುತಗಳು ಸಂಭವಿಸಿದ್ದರೂ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಒಣಗಿದ ಮರಗಳು ಅನಾಹುತಕ್ಕೆ ದಾರಿ ಮಾಡಿಕೊಡುತ್ತಿವೆ. ಹೆಬ್ಬಗೋಡಿ ನಗರಸಭೆ ಮತ್ತು ಬೊಮ್ಮಸಂದ್ರ ಕೈಗಾರಿಕಾ ಸಂಘಕ್ಕೆ ಒಳಪಡುವ ಈ ರಸ್ತೆಯಲ್ಲಿ ಎಂಟಿಆರ್‌, ಸಾಯಿ ವಿಶ್ರಾಂ ಹೋಟೆಲ್ ಮತ್ತು ಡೆಲ್ಟಾ ಕಂಪನಿ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳಿವೆ.

ನಿತ್ಯ ಸಾವಿರಾರು ಸಂಖ್ಯೆಯ ಕಾರ್ಮಿಕರು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ರಸ್ತೆಯುದ್ದಕ್ಕೂ ಒಣಗಿದ ಮರಗಳು ಮತ್ತು ಕೊಂಬೆಗಳು ಬೀಳುವ ಆತಂಕದಿಂದಾಗಿ ವಾಹನ ಸವಾರರು, ಪಾದಚಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಕಳದೆರಡು ವರ್ಷಗಳ ಹಿಂದೆ ರಸ್ತೆಯಲ್ಲಿ ಮರ ಬಿದ್ದು ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡಿದ್ದರು. ಇಷ್ಟಾದರೂ ತಲೆಕೇಡಿಸಿಕೊಳ್ಳದ ಅಧಿಕಾರಿಗಳು, ಒಣಗಿದ ಮರಗಳನ್ನು ತೆರವು ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Surrogacy Leaves
ಪ್ರಮುಖ ಸುದ್ದಿ57 mins ago

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

T20 world Cup 2024
ಕ್ರೀಡೆ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ2 hours ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ2 hours ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ3 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ4 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ4 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ4 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ4 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು7 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌