Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ - Vistara News

Lok Sabha Election 2024

Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ

Vijay Sankeshwar: ಹುಬ್ಬಳ್ಳಿಯ ವರೂರಿನ ವಿಆರ್‌ಎಲ್ ಸಂಸ್ಥೆ ಆವರಣದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದ, ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್‌ಮನ್‌ ವಿಜಯ ಸಂಕೇಶ್ವರ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2014ರಲ್ಲಿ ಪ್ರಧಾನಿಯಾದ ನರೇಂದ್ರ ಮೋದಿ ಅವರ ಕೈಗೆ ಮೌನಿ ಬಾಬಾ (ಡಾ. ಮನಮೋಹನ ಸಿಂಗ್) ಖಾಲಿ ಚೊಂಬನ್ನೇ ಕೊಟ್ಟಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

Vijay Sankeshwar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: 2014ರಲ್ಲಿ ಪ್ರಧಾನಿಯಾದ ನರೇಂದ್ರ ಮೋದಿ (Narendra Modi) ಅವರ ಕೈಗೆ ಮೌನಿ ಬಾಬಾ (ಡಾ. ಮನಮೋಹನ ಸಿಂಗ್) ಖಾಲಿ ಚೊಂಬನ್ನೇ ಕೊಟ್ಟಿದ್ದರು ಎಂದು ಮಾಜಿ ಸಂಸದ, ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್‌ಮನ್‌ ವಿಜಯ ಸಂಕೇಶ್ವರ (Vijay Sankeshwar) ಟೀಕಿಸಿದರು.

ಹುಬ್ಬಳ್ಳಿಯ ವರೂರಿನ ವಿಆರ್‌ಎಲ್ ಸಂಸ್ಥೆ ಆವರಣದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, 2014ರಲ್ಲಿ ಇನ್ನೊಂದೇ ತಿಂಗಳು ಕಳೆದಿದ್ದರೂ ಯುಪಿಎ ಕೈಯಲ್ಲಿ ದೇಶ ಅಧೋಗತಿಗೆ ಹೋಗುತ್ತಿತ್ತು ಎಂದು ಹೇಳಿದರು.

ಯುಪಿಎ ಆಡಳಿತದ ಕೊನೇ ಗಳಿಗೆಯಲ್ಲಿ ದೇಶದ ತೈಲ ಸಂಗ್ರಹ ಮುಗಿದೇ ಹೋಗಿತ್ತು. ಸರ್ಕಾರದ ಮೇಲೆ ಸಾಲದ ಹೊರೆ ಬಿದ್ದಿತ್ತು. ಈ ರೀತಿ ನರೇಂದ್ರ ಮೋದಿ ಅವರ ಕೈಗೆ ಅಂದು ಕಾಂಗ್ರೆಸ್ ಖಾಲಿ ಚೊಂಬನ್ನೇ ಕೊಟ್ಟಿದ್ದು ಎಂದರು. ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಲೇ ತೈಲ ರಾಷ್ಟ್ರಗಳಿಗೆ ದಯವಿಟ್ಟು ಪೆಟ್ರೋಲಿಯಂ ಉತ್ಪನ್ನ ನಿಲ್ಲಿಸಬೇಡಿ ಎಂದು ಮನವಿ ಮಾಡಿದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಂಥ ದಯನೀಯ ಸ್ಥಿತಿ ದೇಶಕ್ಕಿಲ್ಲ ಎಂದು ಹೇಳಿದರು.

ಅನೇಕ ಸುಧಾರಣೆಗಳ ಮೂಲಕ ದೇಶದಲ್ಲಿ ಶಾಂತಿ ನೆಲೆಸುವಂತೆ ಮೋದಿ ಮಾಡಿದ್ದಾರೆ. ಆದರೆ ಯುಪಿಎ ಕಾಲದ ಇಟಲಿ ಮೇಡಂ, ಮೌನಿ ಬಾಬಾ ಆಡಳಿತದಲ್ಲಿ ಭಾರತದಲ್ಲಿ ಯಾವುದೇ ಸಾಧನೆ ಆಗಲಿಲ್ಲ ಎಂದರು. ನರೇಂದ್ರ ಮೋದಿ ಆಡಳಿತದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ಮೋದಿ ನಮ್ಮ ಪ್ರಧಾನಿ ಮಾತ್ರವಲ್ಲ, ಜಗತ್ತಿನ ನಾಯಕರಾಗಿ ಎತ್ತರಕ್ಕೆ ಬೆಳೆದಿದ್ದಾರೆ ಎಂದು ಸಂಕೇಶ್ವರ ಬಣ್ಣಿಸಿದರು. ಈ ಲೋಕ ಕದನವನ್ನು ವಿಶ್ವದ ರಾಷ್ಟ್ರಗಳು ಬಹಳ ಕುತೂಹಲದಿಂದ ನೋಡುತ್ತಿವೆ. ಹಾಗಾಗಿ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಕರ್ತವ್ಯ ಪಾಲಿಸಬೇಕು ಎಂದು ಕರೆ ನೀಡಿದರು.

ಸಂವಿಧಾನ ಬದಲಾವಣೆ ಇಲ್ಲ

ತಮ್ಮ ಜೀವಿತಾವಧಿಯಲ್ಲಿ ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದು ಸ್ವತಃ ಮೋದಿ ಅವರೇ ಹೇಳಿದ್ದಾರೆ. ಆದರೂ ಚುನಾವಣೆ ಬಂದಾಗ ರಾಹುಲ್​ ಗಾಂಧಿಯಂತವರು ಅಪಪ್ರಚಾರ ಮಾಡಿ ಜನರ ದಿಕ್ಕು ತಪ್ಪಿಸುತ್ತಾರೆ ಎಂದು ವಿಜಯ ಸಂಕೇಶ್ವರ ವಾಗ್ದಾಳಿ ನಡೆಸಿದರು.

ದೇಶದಲ್ಲಿ ಕಾಂಗ್ರೆಸ್ ಸಂವಿಧಾನದ ವಿರುದ್ಧವಾಗಿ ಬರೋಬ್ಬರಿ 82 ಸರ್ಕಾರಗಳನ್ನು ಕೆಡವಿದೆ. ಆದರೆ ಅಟಲ್​ ಬಿಹಾರಿ ವಾಜಪೇಯಿ, ನರೇಂದ್ರ ಮೋದಿ ಅವರು ಒಂದೇ ಒಂದು ಸರ್ಕಾರವನ್ನು ಉರುಳಿಸುವ ಕೆಲಸ ಮಾಡಿಲ್ಲ ಎಂದರು. ದೇಶದ ಹಲವು ರಾಜ್ಯಗಳಲ್ಲಿ ಈಗಲೂ ಅರಾಜಕತೆ ಇದೆ. ಹಾಗಿದ್ದರೂ ಮೋದಿ ಅವರು ಚುನಾಯಿತ ಸರ್ಕಾರ ಕೆಡವದೇ ಸಂವಿಧಾನಕ್ಕೆ ಗೌರವ ತೋರುವ ಔದಾರ್ಯ ತೋರಿದ್ದಾರೆ ಎಂದು ಅಭಿಮಾನ ವ್ಯಕ್ತಪಡಿಸಿದರು.

49 ವರ್ಷಗಳ ಕಾಲ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್​ ಆಡಳಿತವೇ ಇತ್ತು. 3 ಬಾರಿ ಜನ ನನಗೆ ಆಶೀರ್ವಾದ ಮಾಡಿದರು. 4ನೇ ಬಾರಿ ಪ್ರಲ್ಹಾದ ಜೋಶಿ ಅವರನ್ನು ಗೆಲ್ಲಿಸಿದ್ದಾರೆ. ಈ ಬಾರಿಯೂ ಗೆಲುವು ಅವರದ್ದೇ ಆಗಬೇಕು ಎಂದು ಕೋರಿದರು.

ಸರಳ ವ್ಯಕ್ತಿ ಜೋಶಿ

ಪ್ರಲ್ಹಾದ ಜೋಶಿ ಕೇಂದ್ರದಲ್ಲಿ ದೊಡ್ಡ ಮಂತ್ರಿಯಾಗಿದ್ದರೂ ಯಾವುದೇ ಹಮ್ಮು-ಬಿಮ್ಮು ಇಲ್ಲದ ಸರಳ ವ್ಯಕ್ತಿ ಆಗಿದ್ದಾರೆ. ಎಲ್ಲ ಕಾರ್ಯಕರ್ತರು ಮತ್ತು ಜನರೊಂದಿಗೆ ಬೆರೆಯುವ ವ್ಯಕ್ತಿತ್ವದವರು ಎಂದು ಹೊಗಳಿದರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಕಣಕ್ಕಿಳಿದ ಬಿಜೆಪಿಯ ಈ ನಿಷ್ಠಾವಂತ ನಾಯಕ ಪ್ರಲ್ಹಾದ ಜೋಶಿ ಅವರನ್ನು ಈ ಬಾರಿ 3.5 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಡಾ. ಸಂಕೇಶ್ವರ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಎಪಿಎಂಸಿ ಮಾಜಿ ಸದಸ್ಯ ಚನ್ನು ಹೊಸಮನಿ, ಜಿಪಂ ಮಾಜಿ ಅಧ್ಯಕ್ಷ ಟಿ.ಜಿ. ಬಾಳಣ್ಣವರ, ಶಾಸಕ ಎಂ.ಆರ್​.ಪಾಟೀಲ, ವಿಆರ್​ಎಲ್​ ಸಂಸ್ಥೆ ಅಧಿಕಾರಿ-ಸಿಬ್ಬಂದಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amartya Sen: ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ: ಅಮರ್ತ್ಯ ಸೇನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರಿದಿದೆ. ಅದನ್ನು ನಿಲ್ಲಿಸಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯ ಫಲಿತಾಂಶವು ಭಾರತ ಹಿಂದೂ ರಾಷ್ಟ್ರ ಅಲ್ಲ ಎನ್ನುವುದನ್ನು ಸಾರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Amartya Sen
Koo

ಕೋಲ್ಕತ್ತಾ: ಇತ್ತೀಚಿನ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶವು ಭಾರತ (India) ಹಿಂದೂ ರಾಷ್ಟ್ರವಲ್ಲ (Hindu Rashtra) ಎಂಬುದನ್ನು ಸೂಚಿಸುತ್ತದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ (Nobel laureate) ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಪ್ರತಿಪಾದಿಸಿದರು. ಯುಎಸ್‌ನಿಂದ (US) ಕೋಲ್ಕತ್ತಾಗೆ (Kolkata) ಆಗಮಿಸಿದ ಅವರು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ಚುನಾವಣೆಯ ಅನಂತರ ನಾವು ಯಾವಾಗಲೂ ಬದಲಾವಣೆಯನ್ನು ಕಾಣುತ್ತೇವೆ ಎಂದ ಅವರು, ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುದು ಚುನಾವಣಾ ಫಲಿತಾಂಶಗಳಲ್ಲಿ ಪ್ರತಿಫಲಿಸುತ್ತದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರೆದಿದೆ. ಅದನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಭಾರತವು ಜಾತ್ಯತೀತ ಸಂವಿಧಾನವನ್ನು ಹೊಂದಿರುವ ಜಾತ್ಯತೀತ ರಾಷ್ಟ್ರವಾಗಿರುವಾಗ ರಾಜಕೀಯವಾಗಿ ಮುಕ್ತ ಮನಸ್ಸಿನ ಅವಶ್ಯಕತೆಯಿದೆ. ಭಾರತವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವ ಕಲ್ಪನೆಯು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ ಅವರು, ಹೊಸ ಕೇಂದ್ರ ಸಚಿವ ಸಂಪುಟವು ಹಿಂದಿನ ಸಂಪುಟದ ನಕಲು ಎಂದು ಅಭಿಪ್ರಾಯಪಟ್ಟರು.

ಹಲವು ಸಚಿವರಿಗೆ ಅವರ ಖಾತೆಗಳನ್ನು ಮುಂದುವರಿಸಲಾಗಿದೆ. ಸ್ವಲ್ಪಮಟ್ಟಿಗೆ ಪುನರ್ರಚನೆಯ ಹೊರತಾಗಿಯೂ, ರಾಜಕೀಯವಾಗಿ ಪ್ರಬಲರು ಇನ್ನೂ ಪ್ರಬಲರಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವು ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಜನರನ್ನು ಯಾವುದೇ ವಿಚಾರಣೆಯಿಲ್ಲದೆ ಜೈಲಿನಲ್ಲಿಡಲಾಗಿತ್ತು ಎಂದು ತಮ್ಮ ಬಾಲ್ಯದ ದಿನಗಳನ್ನು ಸೇನ್ ನೆನಪಿಸಿಕೊಂಡರು.

ನಾನು ಚಿಕ್ಕವನಿದ್ದಾಗ ನನ್ನ ಅನೇಕ ಚಿಕ್ಕಪ್ಪಂದಿರು ಮತ್ತು ಸೋದರಸಂಬಂಧಿಗಳನ್ನು ವಿಚಾರಣೆಯಿಲ್ಲದೆ ಜೈಲಿಗೆ ಹಾಕಲಾಯಿತು. ಭಾರತವು ಇದರಿಂದ ಮುಕ್ತವಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಇದು ನಿಲ್ಲದಿದ್ದಕ್ಕೆ ಕಾಂಗ್ರೆಸ್ ಕೂಡ ಕಾರಣ. ಅವರು ಅದನ್ನು ಬದಲಾಯಿಸಲಿಲ್ಲ. ಆದರೆ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ಇದು ಹೆಚ್ಚು ಆಚರಣೆಯಲ್ಲಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊರತಾಗಿಯೂ ಬಿಜೆಪಿ ಫೈಜಾಬಾದ್ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿರುವ ಬಗ್ಗೆ ಸೇನ್, ದೇಶದ ನಿಜವಾದ ಗುರುತನ್ನು ಮರೆಮಾಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

ಇದನ್ನೂ ಓದಿ: Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶದಲ್ಲಿ ಈ ರೀತಿ ನಡೆಯಬಾರದಿತ್ತು. ಭಾರತವನ್ನು ಹಿಂದೂ ರಾಷ್ಟ್ರ’ ಎಂದು ಬಿಂಬಿಸಲು ತುಂಬಾ ಹಣ ಖರ್ಚು ಮಾಡಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಇದು ಭಾರತದ ನಿಜವಾದ ಗುರುತನ್ನು ನಿರ್ಲಕ್ಷಿಸುವ ಪ್ರಯತ್ನವನ್ನು ತೋರಿಸುತ್ತದೆ ಮತ್ತು ಇದು ಬದಲಾಗಬೇಕು ಅವರು ಹೇಳಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಪ್ರಾಥಮಿಕ ಶಿಕ್ಷಣ ಮತ್ತು ಪ್ರಾಥಮಿಕ ಆರೋಗ್ಯದಂತಹ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸೇನ್ ಹೇಳಿದರು.

Continue Reading

Latest

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

ಲೋಕ ಸಭಾ ಚುನಾವಣೆ ಬಳಿಕ ಸಂಸದರಾಗಿ (Members of Parliament) ಆಯ್ಕೆಯಾಗುವವರು ಯಾವ ರೀತಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಮತ್ತು ಪ್ರಮುಖ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗದೇ ಇದ್ದರೆ ಮುಂದಿನ ನಡೆ ಹೇಗಿರುತ್ತದೆ ಎಂಬಿತ್ಯಾದಿ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

By

Members of Parliament
Koo

18ನೇ ಲೋಕಸಭೆಯ (loksabha election) ಮೊದಲ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಹೊಸದಾಗಿ ಚುನಾಯಿತರಾದ ಸಂಸತ್ ಸದಸ್ಯರು (Members of Parliament) ಸೋಮವಾರದಿಂದ ಪ್ರಮಾಣ ವಚನ (taking oath) ಸ್ವೀಕರಿಸಲು ಆರಂಭಿಸಿದ್ದಾರೆ. ಎರಡು ದಿನಗಳಲ್ಲಿ ಕೆಳಮನೆಯ (lower house) 543 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 26ರಂದು ನೂತನ ಲೋಕಸಭಾ ಸ್ಪೀಕರ್ (Speaker) ಆಯ್ಕೆ ನಡೆಯಲಿದೆ.

ಪ್ರಮಾಣ ವಚನ ಬೋಧಿಸುವವರು ಯಾರು?

ಸಂಸದೀಯ ಪದ್ಧತಿಗಳ ಪ್ರಕಾರ ಪ್ರತಿ ಸಾರ್ವತ್ರಿಕ ಚುನಾವಣೆಯ ಅನಂತರ ಲೋಕಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕರಿಸುವ ಹೊಣೆ ನಿರ್ವಹಿಸುತ್ತಾರೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಯನ್ನು ನಡೆಸುವ ಜವಾಬ್ದಾರಿ ಕೂಡ ಈ ಹಂಗಾಮಿ ಸ್ಪೀಕರ್‌ದೇ ಆಗಿರುತ್ತದೆ.

ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಅನಾರೋಗ್ಯದ ಕಾರಣ ಅಥವಾ ಅವರ ಸ್ಥಳದಿಂದ ತೆರಳಲು ಸಾಧ್ಯವಾಗದ ಕಾರಣ ಪ್ರಮಾಣ ವಚನ ಸ್ವೀಕರಿಸದಿರುವ ಸಾಧ್ಯತೆಯಿದೆ.

ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ?

1. ಮೊದಲ ದಿನ ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡದ ಚುನಾಯಿತ ಸಂಸದರು ಸದನದ ಅಧಿವೇಶನದ ಪ್ರಾರಂಭದಲ್ಲಿ ಅದೇ ಅಧಿವೇಶನದಲ್ಲಿ ಅಥವಾ ಅನಂತರದ ಅಧಿವೇಶನದಲ್ಲಿ ಯಾವುದೇ ನಂತರದ ದಿನದಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು.

2. ಸಂಸದರ ಕೋರಿಕೆಯ ಮೇರೆಗೆ ಸಭಾಧ್ಯಕ್ಷರ ಚೇಂಬರ್‌ನಲ್ಲಿ ಮಧ್ಯಂತರ ಅವಧಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ.

3. ಅನಾರೋಗ್ಯದಿಂದ ಬಳಲುತ್ತಿರುವವರು, ಸದನಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಅವರು ಬಯಸಿದಲ್ಲಿ ಪ್ರಮಾಣ ಅಥವಾ ದೃಢೀಕರಣವನ್ನು ಮಾಡಬಹುದು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಯು ಸದಸ್ಯರಿಗೆ ಸಂಬಂಧಿತ ಪ್ರಮಾಣ ಅಥವಾ ದೃಢೀಕರಣ ಕಾರ್ಡ್ ಅನ್ನು ನೀಡುತ್ತಾರೆ.

4. ಸಂವಿಧಾನದ ಪ್ರಕಾರ ಚುನಾಯಿತ ಸಂಸದರು 60 ದಿನಗಳವರೆಗೆ ಸಂಸತ್ತಿಗೆ ಹಾಜರಾಗದಿದ್ದರೆ ಅವರ ಸ್ಥಾನವನ್ನು ಖಾಲಿ ಎಂದು ಘೋಷಿಸಬಹುದು. ಇದೇ ಆಧಾರದಲ್ಲಿ ನ್ಯಾಯಾಲಯಗಳು ಜೈಲಿನಲ್ಲಿರುವ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸುವುದಕ್ಕಾಗಿ ಸಂಸತ್‌ಗೆ ಬರಲು ಅವಕಾಶ ನೀಡಬಹುದು. ಆದರೆ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಅವರು ಮತ್ತೆ ಜೈಲಿಗೆ ಮರಳಬೇಕಾಗುತ್ತದೆ.

5. ದೃಷ್ಟಿ ಸಮಸ್ಯೆಯಿಂದ ಸದಸ್ಯರಿಗೆ ಸಹಿ ಮಾಡಲು, ಪ್ರಮಾಣ ಪತ್ರ ಓದಲು ಸಾಧ್ಯವಾಗದೇ ಇದ್ದರೆ ಇನ್ನೊಬ್ಬ ಸದಸ್ಯರು ಇವರಿಗೆ ಓದಿ ಹೇಳಬಹುದಾಗಿದೆ.

6. ನ್ಯಾಯಾಲಯದ ಆದೇಶದ ಪರಿಣಾಮವಾಗಿ ಒಬ್ಬ ವ್ಯಕ್ತಿಯು ಸದಸ್ಯರಾಗುವುದನ್ನು ತಡೆದರೆ ಮತ್ತು ಅವರ ಸ್ಥಾನದಲ್ಲಿ ಇನ್ನೊಬ್ಬರು ಚುನಾಯಿತರೆಂದು ಘೋಷಿಸಲ್ಪಟ್ಟರೆ ಮತ್ತೆ ಹೊಸದಾಗಿ ಪ್ರಮಾಣವಚನ ಅಥವಾ ದೃಢೀಕರಣವನ್ನು ಮಾಡಬೇಕು.

7. ಮೊದಲ ಸುತ್ತಿನಲ್ಲಿ ಪ್ರಮಾಣವಚನಕ್ಕೆ ಹಾಜರಾಗದ ಸದಸ್ಯರ ಹೆಸರನ್ನು ಕೊನೆಯಲ್ಲಿ ಮತ್ತೆ ಕರೆಯಲಾಗುತ್ತದೆ.

ಯಾವ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂವಿಧಾನದ ಮೂರನೇ ಶೆಡ್ಯೂಲ್ ಸಂಸತ್ತಿನ ಪ್ರಮಾಣ ವಚನದ ಪಠ್ಯವನ್ನು ಒಳಗೊಂಡಿದೆ. ಅದು ಹೀಗೆ ಹೇಳುತ್ತದೆ: ನಾನು…. ಚುನಾಯಿತನಾದ ಅಥವಾ ನಾಮನಿರ್ದೇಶನಗೊಂಡ ಸದಸ್ಯರ ಸಂಸತ್‌ ಸದಸ್ಯನಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ನಾನು ಕಾನೂನಿನ ಮೂಲಕ ಸ್ಥಾಪಿಸಿದಂತೆ ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುತ್ತೇನೆ ಎಂದು ಸ್ಪಷ್ಟವಾಗಿ ದೃಢಪಡಿಸುತ್ತೇನೆ. ನಾನು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ. ನನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ.

ಪ್ರಮಾಣ ವಚನ ಏಕೆ ಮಹತ್ವದ್ದಾಗಿದೆ?

ಲೋಕಸಭೆಯಲ್ಲಿ ಚರ್ಚೆ ಮತ್ತು ಮತ ಚಲಾಯಿಸುವ ಅಧಿಕಾರವನ್ನು ಪಡೆಯಲು ಸಂವಿಧಾನದಲ್ಲಿ (ಆರ್ಟಿಕಲ್ 99) ಸೂಚಿಸಿದಂತೆ ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕು.

ಕೇವಲ ಚುನಾವಣೆಯಲ್ಲಿ ಗೆದ್ದು ಅವಧಿಯನ್ನು ಪ್ರಾರಂಭಿಸುವುದರಿಂದ ಅವರು ಸದನದ ಕಲಾಪಗಳಲ್ಲಿ ಭಾಗವಹಿಸಲು ಸ್ವಯಂಚಾಲಿತವಾಗಿ ಸಾಧ್ಯವಾಗುವುದಿಲ್ಲ.

ಹೇಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂಸದರು ಮೊದಲು ತಮ್ಮ ಚುನಾವಣಾ ಪ್ರಮಾಣಪತ್ರವನ್ನು ಲೋಕಸಭೆಯ ಸಿಬ್ಬಂದಿಗೆ ಸಲ್ಲಿಸಬೇಕಾಗುತ್ತದೆ. 1957ರಲ್ಲಿ ನಡೆದ ಘಟನೆಯ ಅನಂತರ ಸಂಸತ್ತು ಈ ಸುರಕ್ಷತೆಯನ್ನು ಸೇರಿಸಿತು. ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೊಬ್ಬರು ಸಂಸದರೆಂದು ಪೋಸ್ ನೀಡಿ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು!

ಪ್ರಮಾಣಪತ್ರದ ಜೊತೆಗೆ ಸಂಸದರು ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡಲು ಬಯಸಿದ ಭಾಷೆಯನ್ನು ಸಹ ನಮೂದಿಸಬೇಕು.

ಸದಸ್ಯರು ಪ್ರಮಾಣ ವಚನ ಮಾಡುವಾಗ ಹಂಗಾಮಿ ಸ್ಪೀಕರ್ ಜೊತೆ ಹಸ್ತಲಾಘವ ಮಾಡುತ್ತಾರೆ. ಅನಂತರ ಅವರು ಸದನದಲ್ಲಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಸದಸ್ಯರಿಗೆ ಸ್ಪೀಕರ್‌ ಅನುಮತಿ ನೀಡುತ್ತಾರೆ. ಸದಸ್ಯರು ದಾಖಲಾತಿ ಪುಸ್ತಕದಲ್ಲಿ ಸಹಿ ಮಾಡುತ್ತಾರೆ.

ಯಾವ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು?

ಸಂಸದರು ಇಂಗ್ಲಿಷ್ ಅಥವಾ ಅಸ್ಸಾಮಿ, ಬೆಂಗಾಲಿ, ಬೋಡೋ, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು.. ಹೀಗೆ 22 ಭಾಷೆಗಳಲ್ಲಿ ಪ್ರಮಾಣವಚನವನ್ನು ಸ್ವೀಕರಿಸಬಹುದು.

ಅರ್ಧದಷ್ಟು ಸಂಸದರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಹಿಂದಿನ ಎರಡು ಲೋಕಸಭೆಯಲ್ಲಿ ಸಂಸ್ಕೃತವು ಜನಪ್ರಿಯ ಭಾಷೆಯಾಗಿ ಮಾರ್ಪಟ್ಟಿದ್ದು, ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Bansuri Swaraj: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ಯಾವಾಗ ಸದನದ ಸದಸ್ಯರಾಗುತ್ತಾರೆ?

ಒಬ್ಬ ವ್ಯಕ್ತಿಯು ಚುನಾವಣಾ ಅಧಿಕಾರಿಯಿಂದ ಚುನಾಯಿತರೆಂದು ಘೋಷಿಸಲ್ಪಟ್ಟ ದಿನಾಂಕದಿಂದ ಸದನದ ಸದಸ್ಯರಾಗುತ್ತಾರೆ. ಸದನವನ್ನು ರಚಿಸುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ ಅವರು ಸಂಸದರಾಗಿ ಸಂಬಳವನ್ನು ಸ್ವೀಕರಿಸಲು ಪ್ರಾರಂಭಿಸುತ್ತಾರೆ. ಸಂಸದರು ಸದನದ ಅಧಿವೇಶನಗಳಿಗೆ ಗೈರುಹಾಜರಿಯನ್ನು ಕೇಳಬಹುದಾಗಿದೆ.

Continue Reading

ಪ್ರಮುಖ ಸುದ್ದಿ

Parliament Session 2024: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

Parliament Session 2024: ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಸೇರಿ ಎಲ್ಲರೂ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

VISTARANEWS.COM


on

Parliament session 2024
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರಕ್ಕೆ ಬಂದಿದ್ದು, ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ನೂತನ ಸರ್ಕಾರ ರಚನೆಯಾದ ಬಳಿಕ, 18ನೇ ಲೋಕಸಭೆಯ ಮೊದಲ ಸಂಸತ್‌ ವಿಶೇಷ ಅಧಿವೇಶನವು (Parliament Session 2024) ಸೋಮವಾರದಿಂದ (ಜೂನ್‌ 24) ಆರಂಭವಾಗಲಿದೆ. ನರೇಂದ್ರ ಮೋದಿ ಅವರು ಸೇರಿ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲರೂ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಸೇರಿ ಎಲ್ಲರೂ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗೆಯೇ, ನೂತನ ಸ್ಪೀಕರ್‌ ಆಯ್ಕೆಯ ಪ್ರಕ್ರಿಯೆಯೂ ನಡೆಯಲಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ನರೇಂದ್ರ ಮೋದಿ ಹಾಗೂ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಂತರ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಂಸದರು ಅಲ್ಫಾಬೆಟಿಕಲ್‌ (ABCD ಆಧಾರದಂತೆ) ಆರ್ಡರ್‌ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉದಾಹರಣೆಗೆ, ಅಸ್ಸಾಂ ಸದಸ್ಯರು ಮೊದಲಿಗೆ, ಪಶ್ಚಿಮ ಬಂಗಾಳ ಸದಸ್ಯರು ಕೊನೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Narendra Modi

ಸಂಸತ್‌ ವಿಶೇಷ ಅಧಿವೇಶನದ ಮೊದಲ ದಿನ ಅಂದರೆ, ಜೂನ್‌ 24ರಂದು ಮೋದಿ, ಸಚಿವರು ಸೇರಿ ಒಟ್ಟು 280 ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ಅಂದರೆ ಜೂನ್‌ 25ರಂದು 264 ಸದಸ್ಯರು ಪದಗ್ರಹಣ ಮಾಡಲಿದ್ದಾರೆ. ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್‌ ವಿಶೇಷ ಅಧಿವೇಶನ ನಡೆಯಲಿದೆ. ಯಾವುದೇ ವಿಧೇಯಕಗಳ ಮಂಡನೆ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಯಾರಾಗ್ತಾರೆ ಸ್ಪೀಕರ್?‌

ಲೋಕಸಭೆಯ ಸ್ಪೀಕರ್‌ ಆಗಿ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಈಗಾಗಲೇ ಹಂಗಾಮಿ ಸ್ಪೀಕರ್‌ ಆಗಿ ಭಾರ್ತೃಹರಿ ಮಹತಾಬ್‌ ಅವರು ನೇಮಕಗೊಂಡಿದ್ದಾರೆ. ಜೂನ್‌ 26ರಂದು ಸ್ಪೀಕರ್‌ ಆಯ್ಕೆ ನಡೆಯುವ ಸಾಧ್ಯತೆ ಇದೆ. ಸ್ಪೀಕರ್‌ ಹುದ್ದೆಯ ಮೇಲೆ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳಾದ ಜೆಡಿಯು ಹಾಗೂ ಟಿಡಿಪಿ ಕಣ್ಣಿಟ್ಟಿವೆ. ಬಿಜೆಪಿ ಅಭ್ಯರ್ಥಿಯನ್ನೇ ಸ್ಪೀಕರ್‌ ಸ್ಥಾನಕ್ಕೆ ಕೂರಿಸುವುದು ಆ ಪಕ್ಷದ ಉದ್ದೇಶವಾಗಿದೆ. ಸ್ಪೀಕರ್‌ ಸ್ಥಾನಕ್ಕೆ ಬಿಜೆಪಿಯ ಕಿರಣ್‌ ರಿಜಿಜು ಅವರ ಹೆಸರುಗಳು ಕೂಡ ಕೇಳಿಬರುತ್ತಿವೆ. ಹಾಗಾಗಿ, ಕುತೂಹಲ ಹೆಚ್ಚಾಗಿದೆ.

ಇದನ್ನೂ ಓದಿ: Pro Tem Speaker: ಲೋಕಸಭೆ ಹಂಗಾಮಿ ಸ್ಪೀಕರ್‌ ಆಗಿ ಬಿಜೆಪಿಯ ಭಾರ್ತೃಹರಿ ಮಹತಾಬ್ ನೇಮಕ

Continue Reading

ದೇಶ

Ayodhya Ram Mandir: ಅಯೋಧ್ಯೆ ಜನರ ಮನವೊಲಿಕೆಗೆ ಮುಂದಾದ ಬಿಜೆಪಿ; ಜಾಗ ಕಳೆದುಕೊಂಡ ವರ್ತಕರಿಗೆ ಭರ್ಜರಿ ಆಫರ್‌!

ಅಯೋಧ್ಯೆ ಪಟ್ಟಣದಲ್ಲಿ (Ayodhya Ram Mandir) ಸರ್ಕಾರ ನಿರ್ಮಿಸಿದ ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಇದಲ್ಲದೆ, ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತಿನಲ್ಲಿ ಮಳಿಗೆಗಳನ್ನು ಹಂಚಿಕೆದಾರರಿಗೆ ಹಸ್ತಾಂತರಿಸಲಾಗುವುದು ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗೌರವ್ ದಯಾಳ್ ತಿಳಿಸಿದ್ದಾರೆ.

VISTARANEWS.COM


on

By

Ayodhya Ram Mandir
Koo

ಲಕ್ನೋ: ಉತ್ತರ ಪ್ರದೇಶದ (uttarapradesha) ಅಯೋಧ್ಯೆಯಲ್ಲಿ ರಾಮ ಮಂದಿರದ (Ayodhya Ram Mandir) ನಿರ್ಮಾಣದ ವೇಳೆ ಅಯೋಧ್ಯೆ (ayodhya) ಅಭಿವೃದ್ಧಿ ಪ್ರಾಧಿಕಾರವು (ADA) ಕೈಗೊಂಡ ರಸ್ತೆ ವಿಸ್ತರಣೆ ಕಾಮಗಾರಿಗಾಗಿ (road widening project) ಸ್ಥಳಾಂತರಗೊಂಡ ಅಂಗಡಿ ಮಾಲೀಕರಿಗೆ ಹಂಚಿಕೆಯಾಗಿರುವ ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟೇ ಅಲ್ಲ, ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ 500 ಅಂಗಡಿಗಳನ್ನು ಪಡೆಯುವವರಿಗೆ ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತುಗಳಲ್ಲಿ ಹಣ ಪಾವತಿಸುವ ಆಫರ್‌ ಕೂಡ ನೀಡಲಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆ ಇರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಹೀನಾಯವಾಗಿ ಸೋತು ಹೋಗಿತ್ತು. ಅಭಿವೃದ್ಧಿ ಕಾಮಗಾರಿಗಾಗಿ ಸ್ಥಳ ಕಳೆದುಕೊಂಡ ಜನ ಸರ್ಕಾರದಿಂದ ಸೂಕ್ತ ಪರಿಹಾರ ಮತ್ತು ಸ್ಪಂದನೆ ಸಿಗದೆ ಆಕ್ರೋಶಗೊಂಡಿದ್ದರು. ಇದರಿಂದ ಕಳವಳಗೊಂಡಿರುವ ಬಿಜೆಪಿ, ಅಯೋಧ್ಯೆಯ ಜನರ ಮನವೊಲಿಸಲು ಮುಂದಾಗಿದೆ.

ಈ ಕುರಿತು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಿದೆ ಎಂದು ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಯೋಧ್ಯೆ ವಿಭಾಗೀಯ ಆಯುಕ್ತ ಹಾಗೂ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗೌರವ್ ದಯಾಳ್ ತಿಳಿಸಿದ್ದಾರೆ. ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದೇವೆ. ಇದಲ್ಲದೆ, ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತಿನಲ್ಲಿ ಮಳಿಗೆಗಳನ್ನು ಹಂಚಿಕೆದಾರರಿಗೆ ಹಸ್ತಾಂತರಿಸಲಾಗುವುದು ಎಂದು ದಯಾಳ್ ಹೇಳಿದರು.

ರಾಮ್ ಪಥ್ ಎಂದು ಹೆಸರಿಸಲಾದ ಸಹದತ್‌ಗಂಜ್‌ನಿಂದ ನಯಾ ಘಾಟ್‌ವರೆಗಿನ 13 ಕಿ.ಮೀ. ರಸ್ತೆ ವಿಸ್ತರಣೆ ಯೋಜನೆಯಲ್ಲಿ ಸುತ್ತಲಿನ ಅಂಗಡಿದಾರರು ಸ್ಥಳಾಂತರಗೊಂಡಿದ್ದಾರೆ. ಯೋಜನೆಯು ಡಿಸೆಂಬರ್ 2023ರಲ್ಲಿ ಪೂರ್ಣಗೊಂಡಿತು. ಈ ಮೊದಲು, ಅಂಗಡಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಂಗಡಿ ಮಾಲೀಕರು ಸಂಪೂರ್ಣ ಹಣವನ್ನು ಎಡಿಎಗೆ ಪಾವತಿಸಬೇಕಾಗಿತ್ತು.

ಈ ಅಂಗಡಿಗಳ ಬೆಲೆ ಸುಮಾರು 15ರಿಂದ 20 ಲಕ್ಷ ರೂಪಾಯಿಗಳಾಗಿದ್ದು, ಅಂಗಡಿದಾರರು ಈ ದೊಡ್ಡ ಮೊತ್ತವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಅವರ ಮುಂದಿದ್ದ ಏಕೈಕ ಆಯ್ಕೆ ಬ್ಯಾಂಕ್‌ ಸಾಲ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಈ ಅಂಗಡಿಗಳು ಸಿದ್ಧವಾಗಿದ್ದವು. ಆದರೆ ಹಣಕಾಸಿನ ಅಡಚಣೆಯಿಂದಾಗಿ ಕಳೆದ ತಿಂಗಳವರೆಗೆ ಸುಮಾರು 75 ಅಂಗಡಿದಾರರು ಮಾತ್ರ ಅಂಗಡಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಅಂಗಡಿಗಳ ಬೆಲೆಯನ್ನು ಶೇಕಡಾ 30ರಷ್ಟು ಇಳಿಸಿದ್ದಕ್ಕಾಗಿ ನಾವು ರಾಜ್ಯ ಸರ್ಕಾರಕ್ಕೆ ಕೃತಜ್ಞರಾಗಿರುತ್ತೇವೆ. ಮತ್ತು ಉಳಿದ ಮೊತ್ತವನ್ನು 20 ವರ್ಷಗಳ ಸುಲಭ ಬಡ್ಡಿ ರಹಿತ ಕಂತುಗಳಲ್ಲಿ ಪಾವತಿಸಲಾಗುವುದು ಎಂದು ಅಯೋಧ್ಯೆಯ ಬಿಜೆಪಿ ಶಾಸಕ ವೇದ್ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಚುನಾವಣೆಯಲ್ಲಿ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅತ್ಯಂತ ಹೀನಾಯ ಸೋಲನ್ನು ಅನುಭವಿಸಿತು. ಎರಡು ಬಾರಿ ಸಂಸದರಾಗಿದ್ದ ಲಲ್ಲು ಸಿಂಗ್ ಅವರು ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ ವಿರುದ್ಧ ಸೋತರು. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ 54,567 ಮತಗಳ ಅಂತರದಿಂದ ಪ್ರತಿಷ್ಠಿತ ಸ್ಥಾನವನ್ನು ಗೆದ್ದಿದ್ದಾರೆ.

ಇದನ್ನೂ ಓದಿ: Ram Mandir: ರಾಮಮಂದಿರ ಆವರಣದಲ್ಲೇ ಗುಂಡು ತಗುಲಿ ಯೋಧ ಸಾವು; ರಾತ್ರಿ ಏನಾಯ್ತು?

ಈ ವರ್ಷದ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭವ್ಯವಾಗಿ ಉದ್ಘಾಟಿಸಿದ ಅನಂತರರೂ ಫೈಜಾಬಾದ್‌ನ ಜನರು ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿದ್ದರು. ಅಯೋಧ್ಯೆ ಇರುವ ಈ ಕ್ಷೇತ್ರದಲ್ಲಿ ಪಕ್ಷದ ಸೋಲಿನ ಹಿಂದಿನ ಕಾರಣಗಳನ್ನು ತಿಳಿದುಕೊಳ್ಳಲು ರಾಜ್ಯ ಬಿಜೆಪಿ ಮುಖ್ಯಸ್ಥ ಭೂಪೇಂದ್ರ ಚೌಧರಿ ಬುಧವಾರ ಎರಡು ದಿನಗಳ ಭೇಟಿಗಾಗಿ ಅಯೋಧ್ಯೆಗೆ ಆಗಮಿಸಿದ್ದಾರೆ.

Continue Reading
Advertisement
Physical relationship
ವಿದೇಶ3 mins ago

Physical relationship: ಕೈದಿ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ್ದ ಮಹಿಳಾ ಜೈಲಾಧಿಕಾರಿ ಬಗ್ಗೆ ಶಾಕಿಂಗ್‌ ವಿಚಾರ ಬಯಲು

Actor Darshan does not need counseling says by shamitha malnad
ಸ್ಯಾಂಡಲ್ ವುಡ್8 mins ago

Actor Darshan: ದಚ್ಚು ಪರಿಸ್ಥಿತಿಗೆ ಪವಿತ್ರಾ ಕಾರಣ ಅನ್ನೋಕಾಗಲ್ಲ; ದರ್ಶನ್‌ಗೆ ಕೌನ್ಸೆಲಿಂಗ್‌ ಅಗತ್ಯ ಇಲ್ಲ ಎಂದ ಖ್ಯಾತ ಗಾಯಕಿ!

IND vs SA Final
ಕ್ರೀಡೆ19 mins ago

IND vs SA Final: ರಾಮನಾಮ ಸ್ಮರಣೆ ಮಾಡಿ ಭಾರತ ವಿರುದ್ಧ ಫೈನಲ್​ ಆಡಲಿದ್ದಾರೆ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

karnataka weather Forecast
ಮಳೆ19 mins ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

Road Accident
ಕರ್ನಾಟಕ23 mins ago

Road Accident: ಮುಧೋಳ ಬಳಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವು

T20 World Cup Final
ಪ್ರಮುಖ ಸುದ್ದಿ26 mins ago

T20 World Cup Final : ಭಾರತ ತಂಡದ ಗೆಲುವಿಗಾಗಿ ವಿಶ್ವ ಪ್ರಸಿದ್ಧ ಸಿದ್ಧಿವಿನಾಯಕ ದೇಗುದಲ್ಲಿ ವಿಶೇಷ ಪೂಜೆ

Manvita Kamath One and Half cinema song out
ಸ್ಯಾಂಡಲ್ ವುಡ್29 mins ago

Manvita Kamath: ಮದುವೆ ಆದ ಒಂದು ತಿಂಗಳ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ʻಟಗರು ಪುಟ್ಟಿʼ!

Viral Video
Latest31 mins ago

Viral Video: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

Dr HS Shetty
ಪ್ರಮುಖ ಸುದ್ದಿ33 mins ago

Dr HS Shetty: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಿಂದ ಜುಲೈ 6ರಂದು 41 ಸಾವಿರ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ

V Somanna
ಪ್ರಮುಖ ಸುದ್ದಿ39 mins ago

V Somanna: ಹೆಜ್ಜಾಲ- ಚಾಮರಾಜನಗರ ರೈಲ್ವೆ ಕಾರ್ಯ ಶೀಘ್ರದಲ್ಲಿ: ಸಚಿವ ಸೋಮಣ್ಣ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 mins ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ6 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ23 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌