Prajwal Revanna Case: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಏರ್‌ಪೋರ್ಟ್‌ನಲ್ಲೇ ಅರೆಸ್ಟ್! - Vistara News

ಕರ್ನಾಟಕ

Prajwal Revanna Case: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

Prajwal Revanna Case: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣನನ್ನು ಕೊನೆಗೂ ಭಾನುವಾರ ಬಂಧಿಸಲಾಗಿದೆ. ವಿದೇಶದಿಂದ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಬಂಧಿಸಲಾಯಿತು. ಆ ಮೂಲಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯ ಅಪಹರಣ ಮಾಡಿದ ಕೇಸ್‌ನಲ್ಲಿ ಎಚ್‌.ಡಿ.ರೇವಣ್ಣ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಬಂಧನಕ್ಕೀಡಾಗಿದ್ದಾರೆ.

VISTARANEWS.COM


on

Prajwal Revanna Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್‌ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನನ್ನು (Prajwal Revanna Case) ಕೊನೆಗೂ ಬಂಧಿಸಲಾಗಿದೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್‌ ರೇವಣ್ಣ, ಶುಕ್ರವಾರ (ಮೇ 31) ಭಾರತಕ್ಕೆ ಲುಫ್ತಾನ್ಸಾ ವಿಮಾನಯಾನ ಸಂಸ್ಥೆಯ ಎಲ್‌ಎಚ್‌764 ವಿಮಾನದಲ್ಲಿ ಆಗಮಿಸಿದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದರು.

ಜರ್ಮನಿಯ ಮ್ಯೂನಿಕ್‌ನಿಂದ ಲುಫ್ತಾನ್ಸಾ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಇಮಿಗ್ರೇಷನ್‌ ಪ್ರಜ್ವಲ್‌ ರೇವಣ್ಣನನ್ನು ವಿಚಾರಣೆ ನಡೆಸಿದರು. ಇದಾದ ಬಳಿಕ ವಿಮಾನ ನಿಲ್ದಾಣದ ಸಿಬ್ಬಂದಿಯು ಎಸ್‌ಐಟಿ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ, ಪ್ರಜ್ವಲ್‌ ರೇವಣ್ಣ ತಂದೆ ಎಚ್‌.ಡಿ.ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಜ್ವಲ್‌ ರೇವಣ್ಣ ಕಾಮಕೇಳಿಯ ಸಾವಿರಾರು ವಿಡಿಯೊಗಳು ಪೆನ್‌ಡ್ರೈವ್‌ ಮೂಲಕ ಲಭ್ಯವಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಅವರು ವಿದೇಶಕ್ಕೆ ಹಾರಿದ್ದರು. ಇದಾದ ಬಳಿಕ ಅವರ ಬಂಧನಕ್ಕಾಗಿ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿತ್ತು. ಅಲ್ಲದೆ, ಎಸ್‌ಐಟಿ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ರೇವಣ್ಣ, ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯ ಕೇಳಿದ್ದರು. ಆದರೆ, ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಪೊಲೀಸರು ಬಂಧಿಸುತ್ತಲೇ ಪ್ರಜ್ವಲ್‌ ಕೂಡ ಬೆಂಗಳೂರಿಗೆ ಆಗಮಿಸಲು ತೀರ್ಮಾನಿಸಿದರು ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದ ಕಾರಣ ಪ್ರಜ್ವಲ್‌ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಇಮಿಗ್ರೇಷನ್‌ ಅಧಿಕಾರಿಗಳು ಸಂಸದನ ಪಾಸ್‌ಪೋರ್ಟ್‌ಗೆ ಶೀಲ್‌ ಹಾಕಿದರು. ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿರುವ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಲಿದ್ದಾರೆ. ಅಲ್ಲಿನ ಪ್ರಕ್ರಿಯೆ ಮುಗಿಸಿ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಬಂಧಿಸಿದ 24 ಗಂಟೆಯೊಳಗೆ ಎಸ್‌ಐಟಿ ಅಧಿಕಾರಿಗಳು ಸಂಸದನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Suicide News: ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

VISTARANEWS.COM


on

suicide news
Koo

ಬೆಂಗಳೂರು: ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟವನಿಗೆ 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಅಪರಾಧಿಯೊಬ್ಬನಿಗೆ 20 ವರ್ಷಗಳ ಕಾಲ ಕಠಿಣ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ದಂಡ ವಿಧಿಸಿದ 1ನೇ ತ್ವರಿತಗತಿ ನ್ಯಾಯಾಲಯ ಆದೇಶಿಸಿದೆ. ದೇವರಾಜ್ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ.

ಇದನ್ನೂ ಓದಿ: Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

ಆರೋಪಿ ದೇವರಾಜ್​ ಲಗ್ಗೆರೆ ನಿವಾಸಿಯಾಗಿದ್ದು, 2021ರಲ್ಲಿ ಬಾಲಕಿಯನ್ನ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ಆತನ ವಿರುದ್ಧ ವಿರುದ್ಧ ಫೊಕ್ಸೊ ಕಾಯ್ದೆಯಡಿ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.. ಅಂದಿನ ಇನ್ ಸ್ಪೆಕ್ಟರ್ ವೆಂಕಟೇಗೌಡ ಅವರು ಆರೋಪಿಯನ್ನ ಬಂಧಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ಕೃತ್ಯವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಯನ್ನ ದೋಷಿ ನ್ಯಾಯಾಲಯ ಪರಿಗಣಿಸಿದೆ.

ಆರೋಪಿ ದೇವರಾಜ್​​ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಅದೇ ದಿನವೇ ಬಾಲಕಿಗೆ ಜ್ವರ ಬಂದಿದ್ದರಿಂದ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಗುಪ್ತಾಂಗಕ್ಕೆ ಬಲವಾದ ಏಟಾಗಿದೆ ಎಂದು ವರದಿ ನೀಡಿದ್ದರು. ಈ ಬಗ್ಗೆ ಪೋಷಕರು ಆಕೆಯನ್ನು ಪ್ರಶ್ನಿಸಿದಾಗ ಆರೋಪಿಯು ತನ್ನನ್ನು ಮನೆಗೆ ಕರೆದೊಯ್ದು ಕೃತ್ಯವೆಸಗಿರುವುದಾಗಿ ತಿಳಿಸಿದ್ದಳು.

ಈ ಸಂಬಂಧ ನಂದಿನಿಲೇಔಟ್ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಪೊಕ್ಸೊ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಪೊಲೀಸರು ಬಂಧಿಸಿದ್ದರು.

Continue Reading

ದೇಶ

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Sudha Murty: ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದರು.

VISTARANEWS.COM


on

Sudha Murty
Koo

ನವದೆಹಲಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಇನ್ಫೋಸಿಸ್‌ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾ ಮೂರ್ತಿ (Sudha Murty) ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. “ನಾನು ರಾಜಕಾರಣಿ ಅಲ್ಲ. ನನಗೆ ಹೆಚ್ಚು ಮಾತನಾಡಲು ಬರುವುದಿಲ್ಲ” ಎನ್ನುತ್ತಲೇ ಭಾಷಣ ಆರಂಭಿಸಿದ ಅವರು ಗರ್ಭಕಂಠ ಕ್ಯಾನ್ಸರ್‌ಗೆ (Cervical Cancer) ಲಸಿಕೆ ಹಾಗೂ ಕರ್ನಾಟಕ (Karnataka) ಸೇರಿ ದೇಶದ ಪ್ರವಾಸೋದ್ಯಮದ ಏಳಿಗೆಯ ಕುರಿತು ಸದನದ ಗಮನಕ್ಕೆ ತಂದರು. ಕರ್ನಾಟಕ ಪ್ರವಾಸೋದ್ಯಮದ ಕುರಿತೂ ಅವರು ಹೆಚ್ಚು ಗಮನ ಸೆಳೆದರು.

“ಗರ್ಭಕಂಠದ ಕ್ಯಾನ್ಸರ್‌ ಈಗ ಮಾರಣಾಂತಿಕವಾಗಿದೆ. ಒಬ್ಬ ತಾಯಿ ಮೃತಪಟ್ಟರೆ ಮಕ್ಕಳು ಅನಾಥರಾಗುತ್ತಾರೆ. ಒಬ್ಬ ವ್ಯಕ್ತಿಗೆ ಹೆಂಡತಿ ತೀರಿಕೊಂಡರೆ ಮತ್ತೊಬ್ಬ ಪತ್ನಿ ಸಿಗುತ್ತಾಳೆ. ಆದರೆ, ಮಕ್ಕಳಿಗೆ ತಾಯಿ ತೀರಿಕೊಂಡರೆ, ಜೀವನಪೂರ್ತಿ ಅವರು ಅನಾಥರಾಗುತ್ತಾರೆ. ಹಾಗಾಗಿ, ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು. ಈಗ ಲಸಿಕೆಗೆ 1,300-1,400 ರೂ. ಆಗುತ್ತದೆ. ಸರ್ಕಾರ ಮಧ್ಯಪ್ರವೇಶಿಸಿದರೆ ಅದನ್ನು 800 ರೂಪಾಯಿಗೆ ಹೆಣ್ಣುಮಕ್ಕಳಿಗೆ ಲಸಿಕೆ ಕೊಡಿಸಬಹುದು” ಎಂದರು. ಆಗ ಸಭಾಧ್ಯಕ್ಷರು, “ಈ ಕುರಿತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ ನಡ್ಡಾ ಅವರ ಗಮನಕ್ಕೆ ತನ್ನಿ” ಎಂದರು.

ಪ್ರವಾಸೋದ್ಯಮದ ಕುರಿತು ಹೇಳಿದ್ದಿಷ್ಟು…

“ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕದ ಶ್ರವಣಬೆಳಗೋಳದಲ್ಲಿರುವ ಬಾಹುಬಲಿಯ ಮೂರ್ತಿ, ಮಧ್ಯಪ್ರದೇಶದ ಮಾಂಡು, ದೇಶದ ಗುಹೆಗಳು, ಬಾದಾಮಿ, ಐಹೊಳೆ, ಲಿಂಗರಾಜ ದೇವಾಲಯಗಳು ದೇಶದ ಸಂಸ್ಕೃತಿಯ ತಾಣಗಳಾಗಿವೆ. ಇವುಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕು” ಎಂದರು.

“ತ್ರಿಪುರದಲ್ಲಿರುವ ಉನಾಕೋಟಿ, ಮಿಜೋರಾಂನಲ್ಲಿ ನೈಸರ್ಗಿಕ ಸೇತುವೆಗಳಿವೆ. ಇವುಗಳನ್ನು ನೋಡಲು ವಿದೇಶಕ್ಕೆ ಹೋಗುವವರಿದ್ದಾರೆ. ತಂಜಾವೂರಿನ ಬೃಹದೇಶ್ವರ ದೇವಾಲಯ, ಶ್ರೀರಂಗಂ, ಕಾಶ್ಮೀರದಲ್ಲಿರುವ ಮೊಘಲ್‌ ಗಾರ್ಡನ್‌ಗಳು ಜಗತ್ತಿನ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಇಲ್ಲ. ಇವುಗಳನ್ನು ಪಟ್ಟಿಗೆ ಸೇರಿಸುವುದರಿಂದ ಆ ಸ್ಥಳಗಳಿಗೆ ಜನರನ್ನು ಸೆಳೆಯಲು ಪ್ಯಾಕೇಜ್‌ಗಳನ್ನು ಘೋಷಿಸಲಾಗುತ್ತದೆ. ಇದರಿಂದ ಪ್ರವಾಸೋದ್ಯಮದ ಆದಾಯ ಹೆಚ್ಚಾಗುತ್ತದೆ. ಹತ್ತಾರು ಅವಕಾಶಗಳು ಸೃಷ್ಟಿಯಾಗುತವೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Continue Reading

ಕರ್ನಾಟಕ

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Physical Abuse : ಆರೋಪಿ ದೇವರಾಜ್​ ಲಗ್ಗೆರೆ ನಿವಾಸಿಯಾಗಿದ್ದು, 2021ರಲ್ಲಿ ಬಾಲಕಿಯನ್ನ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ಆತನ ವಿರುದ್ಧ ವಿರುದ್ಧ ಫೊಕ್ಸೊ ಕಾಯ್ದೆಯಡಿ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.. ಅಂದಿನ ಇನ್ ಸ್ಪೆಕ್ಟರ್ ವೆಂಕಟೇಗೌಡ ಅವರು ಆರೋಪಿಯನ್ನ ಬಂಧಿಸಿದ್ದರು.

VISTARANEWS.COM


on

Physical Abuse
Koo

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಅಪರಾಧಿಯೊಬ್ಬನಿಗೆ 20 ವರ್ಷಗಳ ಕಾಲ ಕಠಿಣ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ದಂಡ ವಿಧಿಸಿದ 1ನೇ ತ್ವರಿತಗತಿ ನ್ಯಾಯಾಲಯ ಆದೇಶಿಸಿದೆ. ದೇವರಾಜ್ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ.

ಆರೋಪಿ ದೇವರಾಜ್​ ಲಗ್ಗೆರೆ ನಿವಾಸಿಯಾಗಿದ್ದು, 2021ರಲ್ಲಿ ಬಾಲಕಿಯನ್ನ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ಆತನ ವಿರುದ್ಧ ವಿರುದ್ಧ ಫೊಕ್ಸೊ ಕಾಯ್ದೆಯಡಿ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.. ಅಂದಿನ ಇನ್ ಸ್ಪೆಕ್ಟರ್ ವೆಂಕಟೇಗೌಡ ಅವರು ಆರೋಪಿಯನ್ನ ಬಂಧಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ಕೃತ್ಯವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಯನ್ನ ದೋಷಿ ನ್ಯಾಯಾಲಯ ಪರಿಗಣಿಸಿದೆ.

ಇದನ್ನೂ ಓದಿ ;Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ

ಆರೋಪಿ ದೇವರಾಜ್​​ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಅದೇ ದಿನವೇ ಬಾಲಕಿಗೆ ಜ್ವರ ಬಂದಿದ್ದರಿಂದ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಗುಪ್ತಾಂಗಕ್ಕೆ ಬಲವಾದ ಏಟಾಗಿದೆ ಎಂದು ವರದಿ ನೀಡಿದ್ದರು. ಈ ಬಗ್ಗೆ ಪೋಷಕರು ಆಕೆಯನ್ನು ಪ್ರಶ್ನಿಸಿದಾಗ ಆರೋಪಿಯು ತನ್ನನ್ನು ಮನೆಗೆ ಕರೆದೊಯ್ದು ಕೃತ್ಯವೆಸಗಿರುವುದಾಗಿ ತಿಳಿಸಿದ್ದಳು.

ಈ ಸಂಬಂಧ ನಂದಿನಿಲೇಔಟ್ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಪೊಕ್ಸೊ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಪೊಲೀಸರು ಬಂಧಿಸಿದ್ದರು.

Continue Reading

ಪ್ರಮುಖ ಸುದ್ದಿ

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Hemant Nimbalkar: ಹೇಮಂತ್ ಅವರು ಅಧಿಕಾರ ವಹಿಸಿಕೊಳ್ಳಲಿರುವ ಕಾರಣ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.

VISTARANEWS.COM


on

Hemant Nimbalkar
Koo

ಬೆಂಗಳೂರು: ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ (Hemant Nimbalkar) ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಮರು ನಿಯೋಜನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಅವರು ಕಳೆದ ಮೂರು ತಿಂಗಳಿಂದ ಯಾವುದೇ ಹುದ್ದೆಯನ್ನು ಹೊಂದಿರಲಿಲ್ಲ. ಅವರ ಪತ್ನಿ ಅಂಜಲಿನಿಂಬಾಳ್ಕರ್​ ಚುನಾವಣೆಗೆ ಸ್ಪರ್ಧಿಸಿದ್ದ ಕಾರಣ ಈ ನಿಯೋಜನೆ ಮಾಡಲಾಗಿತ್ತು. ಇದೀಗ ಅವರಿಗೆ ಸ್ಥಾನ ನೀಡಲಾಗಿದೆ.

ಸರ್ಕಾರದ ಆದೇಶದ ಪ್ರತಿ ಇಲ್ಲಿದೆ

ಹೇಮಂತ್ ಅವರು ಅಧಿಕಾರ ವಹಿಸಿಕೊಳ್ಳಲಿರುವ ಕಾರಣ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.

ಇದನ್ನೂ ಓದಿ: Advocate G Devarajegowda: ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

ಹೇಮಂತ್ ನಿಂಬಾಳ್ಕರ್ ಕಳೆದ ಒಂದು ವರ್ಷದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಅವರನ್ನು ಪತ್ನಿ ಡಾ. ಅಂಜಲಿ ನಿಂಬಾಳ್ಕರ್‌ ಅವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರಿಂದ ವರ್ಗ ಮಾಡಲಾಗಿತ್ತು. ಅವರಿಗೆ ಯಾವುದೇ ಹುದ್ದೆ ಸೂಚಿಸಿರದ ಕಾರಣ ಮೂರು ತಿಂಗಳಿನಿಂದ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಲ್ಲಿಯೇ ಇದ್ದರು. ಹೇಮಂತ್ ನಿಂಬಾಳ್ಕರ್‌ ಅವರು ಕಳೆದ ಜನವರಿಯಲ್ಲಿ ಬಡ್ತಿ ಹೊಂದಿದ್ದರು. ಅವರಿಗೆ ಐಜಿಪಿ ದರ್ಜೆಯಿಂದ ಎಡಿಜಿಪಿ ದರ್ಜೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶಿತ್ತು.

ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದ ವಿಕಾಸ್ ಸುರಳ್ಕರ್​ಗೆ ಅವರನ್ನು ಆ ಹುದ್ದೆಯಲ್ಲಿ ಮುಂದುವರಿಸಲಾಗಿದೆ.

Continue Reading
Advertisement
suicide news
ಕರ್ನಾಟಕ27 mins ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Aditya L1
ದೇಶ36 mins ago

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

David Miller :
ಪ್ರಮುಖ ಸುದ್ದಿ1 hour ago

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

Sudha Murty
ದೇಶ1 hour ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ2 hours ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ3 hours ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest3 hours ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ3 hours ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Kolar News
ಕರ್ನಾಟಕ3 hours ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Tamanna Bhatia
Latest3 hours ago

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ6 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌