Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ? - Vistara News

Lok Sabha Election 2024

Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

Lok Sabha Election 2024: ಬಿಜೆಪಿ ಜಾತಿ – ಧರ್ಮಗಳನ್ನು ಪರಸ್ಪರ ಎತ್ತಿಕಟ್ಟುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ದ್ವೇಷದ ರಾಜಕಾರಣವನ್ನು ಮಾಡುತ್ತಾ ಜನರ ಒಳಿತನ್ನು ಕಡೆಗಣಿಸಿದ್ದಾರೆ. ಮೋದಿಯವರು, ದಲಿತರ, ಹಿಂದುಳಿದವರ ಮೀಸಲಾತಿಯನ್ನು ಮುಸಲ್ಮಾನರಿಗೆ ಕಾಂಗ್ರೆಸ್ ನೀಡುತ್ತದೆ ಎಂದು ದೊಡ್ಡ ಸುಳ್ಳನ್ನು ಹೇಳಿದ್ದಾರೆ. ಈ ಪ್ರಮಾಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮುಸಲ್ಮಾನರ ವಿರುದ್ಧ ದಲಿತರನ್ನು, ಹಿಂದುಳಿದವರ ವಿರುದ್ಧ ದಲಿತರು, ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸವನ್ನು ಮೋದಿಯವರು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

VISTARANEWS.COM


on

Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹರಿಹರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರೋಧಿ ಅಲೆ ಜೋರಾಗಿದೆ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಆ ಪಕ್ಷದ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರವಾಗಿ ಮತದಾರರಲ್ಲಿ ಮತಯಾಚಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯ 25 ಸಂಸದರು ರಾಜ್ಯಕ್ಕಾಗಿರುವ ಅನ್ಯಾಯವನ್ನು ಎಂದೂ ಪ್ರಶ್ನಿಸಲಿಲ್ಲ. ಅವರಲ್ಲಿ ಹಲವರನ್ನು ಈ ಬಾರಿ ಬಿಜೆಪಿಯವರೇ ಕೈಬಿಟ್ಟಿದ್ದಾರೆ. ಈ ಹಿಂದೆ ಇದ್ದ ಬಿಜೆಪಿ ಸಂಸದರು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದೇ, ಬಿಜೆಪಿಯವರೇ ಈ ಬಾರಿ ಹಲವರನ್ನು ಕೈಬಿಟ್ಟಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ

ಹರಿಹರ ಪ್ರದೇಶದಲ್ಲಿ ಕುಡಿಯುವ ನೀರಿನ ಯೋಜನೆ ಹಾಗೂ ಸುಮಾರು 5 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರನ್ನು ಒದಗಿಸುವ ಏತ ನೀರಾವರಿ ಯೋಜನೆಗೆ ಚುನಾವಣೆ ನಂತರ ಚಾಲನೆ ನೀಡಲಾಗುವುದು. ನಾನು ನುಡಿದ ಮಾತಿನಂತೆ ನಡೆಯುವವನು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆಂದು ತಿಳಿಸಿದಂತೆ 8 ತಿಂಗಳ ಒಳಗೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಜನರ ಪ್ರಶಂಸೆಯನ್ನು ಗಳಿಸಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ರೈತ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್, ಶೂ ಭಾಗ್ಯ, ಶಾದಿ ಭಾಗ್ಯಗಳಂತಹ ಜನಪರ ಯೋಜನೆಗಳನ್ನು ಕಾಂಗ್ರೆಸ್ ನೀಡಿದೆ ಎಂದು ಹೇಳಿದರು.

ಯಪ್ಪಾ ಯಪ್ಪಾ ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ

ಬಿಜೆಪಿ ಜಾತಿ – ಧರ್ಮಗಳನ್ನು ಪರಸ್ಪರ ಎತ್ತಿಕಟ್ಟುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ದ್ವೇಷದ ರಾಜಕಾರಣವನ್ನು ಮಾಡುತ್ತಾ ಜನರ ಒಳಿತನ್ನು ಕಡೆಗಣಿಸಿದ್ದಾರೆ. ಮೋದಿಯವರು, ದಲಿತರ, ಹಿಂದುಳಿದವರ ಮೀಸಲಾತಿಯನ್ನು ಮುಸಲ್ಮಾನರಿಗೆ ಕಾಂಗ್ರೆಸ್ ನೀಡುತ್ತದೆ ಎಂದು ದೊಡ್ಡ ಸುಳ್ಳನ್ನು ಹೇಳಿದ್ದಾರೆ. ಈ ಪ್ರಮಾಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮುಸಲ್ಮಾನರ ವಿರುದ್ಧ ದಲಿತರನ್ನು, ಹಿಂದುಳಿದವರ ವಿರುದ್ಧ ದಲಿತರು, ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸವನ್ನು ಮೋದಿಯವರು ಮಾಡುತ್ತಿದ್ದಾರೆ. ಸಂವಿಧಾನದ ಮೀಸಲಾತಿ ಪ್ರಮಾಣದಲ್ಲಿ ಶೇ. 10ರಷ್ಟನ್ನು ಆರ್ಥಿಕವಾಗಿ ಹಿಂದುಳಿದವರಿಗೆ ಸೃಷ್ಟಿಸಿದರು. ಆದರೆ, ಸಂವಿಧಾನದಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿಯನ್ನು ಕೊಡಬಹುದಾಗಿದೆ. ಮೋದಿಯವರು ಸಂವಿಧಾನವನ್ನು ಪೂರ್ಣ ತಿಳಿದಿದ್ದಾರೋ ಇಲ್ಲವೋ ಗೊತ್ತಿಲ್ಲ. ನಾವು ಅಧಿಕಾರಕ್ಕೆ ಬಂದರೆ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದೇವೆಯೇ ಹೊರತು. ಒಬ್ಬರ ಮೀಸಲಾತಿಯನ್ನು ಕಿತ್ತು ಮತ್ತೊಬ್ಬರಿಗೆ ಕೊಡುತ್ತೇವೆ ಎಂದು ಎಲ್ಲಿಯೂ ಹೇಳಿಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೀಸಲಾತಿ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆ ಇಲ್ಲ

ಬಿಜೆಪಿ ಹಾಗೂ ಆರ್‌ಎಸ್ಎಸ್ ಮೀಸಲಾತಿಯನ್ನು ಬೆಂಬಲಿಸಲಿಲ್ಲ. ಆದ್ದರಿಂದ ಮೀಸಲಾತಿ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಮಂಡಲ್ ವರದಿಯಂತೆ ಉನ್ನತ ಶಿಕ್ಷಣಸಂಸ್ಥೆಗಳಲ್ಲಿ ಮೀಸಲಾತಿ ತರಲು ಬಿಜೆಪಿ ವಿರೋಧಿಸಿದರು. ಮಂಡಲ್ ಪಂಚಾಯಿತಿ, ನಗರ ಸಭೆಗಳಲ್ಲಿ ಮಹಿಳೆಯರು, ದಲಿತರು, ಹಿಂದುಳಿದವರಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ವಿರೋಧಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಮೀಸಲಾತಿ ನೀಡಿಕೆಯನ್ನು ಎತ್ತಿಹಿಡಿಯಿತು. ಚುನಾವಣೆ ಬಂದಾಗ ಮಾತ್ರ ಮೋದಿಯವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ ಎಂದು ಟೀಕಿಸಿದರು.

ಮೋದಿಯವರು ನೀಡಿದ ಭರವಸೆ ಈಡೇರಿಸಲಿಲ್ಲ

ಮೋದಿಯವರು ಹತ್ತು ವರ್ಷಗಳ ಕಾಲ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ರೈತರ ಸಾಲ ಮನ್ನಾ ಮಾಡದೇ ಅದಾನಿ ಹಾಗೂ ಅಂಬಾನಿ ಕೈಗಾರಿಕೋದ್ಯಮಿಗಳಿಗೆ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ಶ್ರೀಮಂತರ ಪರವಾಗಿರುವವರು. ಆದರೆ, ಇವರು ಬಡವರ ಪರವಾಗಿ ಇರುವವರು ಎಂದು ಮೋಸ ಹೋಗಿದ್ದಾಯ್ತು. ನಂಬಿಕೆ ದ್ರೋಹ ಎಸಗಿದ ಮೋದಿಯವರಿಗೆ ಮತ ಹಾಕಬೇಕೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವುದು ಪೂರ್ವದಲ್ಲಿ ಸೂರ್ಯ ಹುಟ್ಟುವಷ್ಟೇ ಸತ್ಯ

ನಮ್ಮ ಸರ್ಕಾರ ಇರುವವರೆಗೆ ಜನತೆಯ ಆಶೋತ್ತರಗಳನ್ನು ಈಡೇರಿಸಲಾಗುವುದು. ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವುದು ಪೂರ್ವದಲ್ಲಿ ಸೂರ್ಯ ಹುಟ್ಟುವಷ್ಟೇ ಸತ್ಯ. ನಮಗೆ ತೊಂದರೆ ಕೊಡಲು ವಿನಯ್ ಕುಮಾರ್ ಸ್ವತಂತ್ರ ಅಭ್ಯರ್ಥಿಯಾಗಿ ನಿಂತಿದ್ದಾರೆ. ಅವರು ಗೆಲ್ಲುವುದಿಲ್ಲ. ಏಕೆಂದರೆ ಬಿಜೆಪಿ ಜತೆಗೆ ಶಾಮೀಲಾಗಿದ್ದಾರೆ. ಕನಕ ಗುರುಪೀಠದ ನಿರಂಜನಾನಂದಾಪುರಿ ಸ್ವಾಮಿಗಳು ಮತ್ತು ನಾನು ವಿನಯ್ ಕುಮಾರ್ ಅವರೊಂದಿಗೆ ಮಾತನಾಡಿ, ನಿಲ್ಲುವುದು ಬೇಡ ಸಲಹೆ ನೀಡಿದಾಗ ಒಪ್ಪಿಕೊಂಡು ಈಗ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಕರ್ನಾಟಕದಲ್ಲಿ ನಾನು ಬೇಕೋ, ವಿನಯ್ ಕುಮಾರ್ ಬೇಕೋ ನಿರ್ಧರಿಸಿ ಎಂದು ಸಿಎಂ ಸಿದ್ದರಾಮಯ್ಯ ಕೇಳಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಕೇಸ್‌; ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ನಾನೇ ಚುನಾವಣೆಗೆ ನಿಂತಿದ್ದೇನೆ ಎಂದು ತಿಳಿಯಬೇಕು. ಕಾಂಗ್ರೆಸ್ ಅಭ್ಯರ್ಥಿಗೆ ಕೊಡುವ ಮತ ಸಿದ್ದರಾಮಯ್ಯಗೆ ಕೊಡುವ ಮತ. ನನಗೆ ಶಕ್ತಿ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಮ್ಮ ಅಭ್ಯರ್ಥಿ ವಿದ್ಯಾವಂತೆ. ಸಂಸತ್ತಿನಲ್ಲಿ ನಿಮ್ಮ ಪರವಾಗಿ ಮಾತನಾಡುವ ಶಕ್ತಿ ಇದೆ. ಅದಕ್ಕಾಗಿ ನಮ್ಮ ಅಭ್ಯರ್ಥಿಗೆ ಆಶೀರ್ವಾದ ಮಾಡಿ. ಅವರು ಗೆದ್ದರೆ, ನಾನೇ ಗೆದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Lok Sabha Speaker: ಟಿಡಿಪಿಯ ಅಭ್ಯರ್ಥಿಯನ್ನೇ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂಬ ಮಾತುಗಳನ್ನು ನಾನು ಕೇಳಿದೆ. ಹಾಗೊಂದು ವೇಳೆ, ಟಿಡಿಪಿಯ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ ಪಕ್ಷಗಳು ಚರ್ಚಿಸುತ್ತವೆ. ಆ ಮೂಲಕ ಟಿಡಿಪಿ ಅಭ್ಯರ್ಥಿಗೇ ಬೆಂಬಲ ಸೂಚಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಉದ್ಧವ್‌ ಠಾಕ್ರೆ ಬಣದ ಶಿವಸೇನೆ ವಕ್ತಾರ ಸಂಜಯ್‌ ರಾವತ್‌ ತಿಳಿಸಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿದ್ದ ಲೋಕಸಭೆ ಚುನಾವಣೆ (Lok Sabha Speaker) ಮುಗಿದಿದ್ದು, ಎನ್‌ಡಿಎ ಮೈತ್ರಿಕೂಟದ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈಗ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಕಸರತ್ತು ನಡೆದಿದೆ. ಇದರ ಮಧ್ಯೆಯೇ, ಟಿಡಿಪಿ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ (INDIA Bloc) ಬೆಂಬಲವು ಟಿಡಿಪಿಗೆ ಇರಲಿದೆ ಎಂದು ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ವಕ್ತಾರ ಸಂಜಯ್‌ ರಾವತ್‌ (Sanjay Raut) ಹೇಳಿದ್ದಾರೆ.

“ಟಿಡಿಪಿಯ ಅಭ್ಯರ್ಥಿಯನ್ನೇ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂಬ ಮಾತುಗಳನ್ನು ನಾನು ಕೇಳಿದೆ. ಹಾಗೊಂದು ವೇಳೆ, ಟಿಡಿಪಿಯ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ ಪಕ್ಷಗಳು ಚರ್ಚಿಸುತ್ತವೆ. ಆ ಮೂಲಕ ಟಿಡಿಪಿ ಅಭ್ಯರ್ಥಿಗೇ ಬೆಂಬಲ ಸೂಚಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗೊಂದು ವೇಳೆ, ಬಿಜೆಪಿಯವರೇ ಕಣಕ್ಕಿಳಿರೆ, ಎನ್‌ಡಿಎ ಮೈತ್ರಿಕೂಟವೇ ಛಿದ್ರವಾಗಲಿದೆ” ಎಂದು ಸಂಜಯ್‌ ರಾವತ್‌ ಎಚ್ಚರಿಸಿದರು.

Modi 3.0 Government

ಸಂಜಯ್‌ ರಾವತ್‌ ಹೇಳಿಕೆಯ ಬೆನ್ನಲ್ಲೇ ಜೆಡಿಯು ಪ್ರತಿಕ್ರಿಯಿಸಿದೆ. “ಲೋಕಸಭೆ ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಬಿಜೆಪಿ ತೀರ್ಮಾನವೇ ಅಂತಿಮ” ಎಂಬುದಾಗಿ ತಿಳಿಸಿದೆ. ಹಾಗಾಗಿ, ಎನ್‌ಡಿಎ ಮೈತ್ರಿಕೂಟದಿಂದ ಲೋಕಸಭೆ ಸ್ಪೀಕರ್‌ ಚುನಾವಣೆಗೆ ಯಾವ ಪಕ್ಷದವರು ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲಕ್ಕೆ ಈಡುಮಾಡಿದೆ. ಮೊದಲಿನಿಂದಲೂ ಟಿಡಿಪಿಯು ತಮ್ಮ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗಬೇಕು ಎಂಬ ಅಭಿಲಾಷೆ ಹೊಂದಿದೆ ಎಂದು ತಿಳಿದುಬಂದಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನವು ಪ್ರಮುಖವಾಗಿದೆ.

ಜೆಡಿಯು ಪಕ್ಷವು 12 ಸಂಸದರನ್ನು ಹೊಂದಿದ್ದರೆ, ಟಿಡಿಪಿ 16 ಸಂಸದರನ್ನು ಹೊಂದಿದೆ. ಎರಡೂ ಪಕ್ಷಗಳ ನಾಯಕರಾದ ನಿತೀಶ್‌ ಕುಮಾರ್‌ ಹಾಗೂ ಚಂದ್ರಬಾಬು ನಾಯ್ಡು ಅವರು ನಾವು ಎನ್‌ಡಿಎ ಜತೆ ನಿಲ್ಲುತ್ತೇವೆ ಎಂದಿದ್ದಾರೆ. ನರೇಂದ್ರ ಮೋದಿ ಅವರು ಸಂಪುಟ ರಚನೆಯ ವೇಳೆಯೂ ಪ್ರಾಬಲ್ಯ ಸಾಧಿಸಿದ್ದರು. ಕೇಂದ್ರ ಗೃಹ, ರಕ್ಷಣೆ, ಹಣಕಾಸು ಹಾಗೂ ವಿದೇಶಾಂಗ ಖಾತೆಗಳನ್ನು ಬಿಜೆಪಿಯೇ ಉಳಿಸಿಕೊಂಡಿದೆ. ಹಾಗಾಗಿ, ಟಿಡಿಪಿ ಅಭ್ಯರ್ಥಿಯೇ ಸ್ಪೀಕರ್‌ ಚುನಾವಣೆ ಕಣಕ್ಕೆ ಇಳಿಬಹುದು ಎನ್ನಲಾಗಿದೆ. ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್‌ ವಿಶೇಷ ಅಧಿವೇಶನ ನಡೆಯಲಿದ್ದು, ಜೂನ್‌ 26ರಂದು ಸ್ಪೀಕರ್‌ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

Continue Reading

ದೇಶ

EVM Row: ಮೊಬೈಲ್‌ ಬಳಸಿ ಇವಿಎಂ ಅನ್‌ಲಾಕ್‌ ಮಾಡಿದ ಸಂಸದನ ಸಂಬಂಧಿ; ಎಲ್ಲಿ ನಡೆಯಿತು ಮೋಸ?

EVM Row: ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

EVM Row
Koo

ಮುಂಬೈ: ದೇಶದಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಮುಗಿದ ಬೆನ್ನಲ್ಲೇ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಕುರಿತು ಚರ್ಚೆ ಶುರುವಾಗಿದೆ. ಇವಿಎಂಗಳ ಬಳಕೆಯೇ ಬೇಡ ಎಂದು ಎಲಾನ್‌ ಮಸ್ಕ್‌ (Elon Musk) ಹೇಳಿದ್ದಾರೆ. ಇದರ ಬೆನ್ನಲ್ಲೇ, “ಭಾರತದಲ್ಲಿ ಇವಿಎಂಗಳನ್ನು ಪರಿಶೀಲನೆ ಮಾಡಲು ಯಾರಿಗೂ ಆಗುವುದಿಲ್ಲ” ಎಂಬುದಾಗಿ ರಾಹುಲ್‌ ಗಾಂಧಿ ಮಸ್ಕ್‌ ಅವರ ಮಾತನ್ನೇ ಅನುಮೋದಿಸಿದ್ದಾರೆ. ಇದರ ಬೆನ್ನಲ್ಲೇ, ಮೊಬೈಲ್‌ ಬಳಸಿ ಇವಿಎಂಅನ್ನು ಅನ್‌ಲಾಕ್‌ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಶಿವಸೇನೆ ಸಂಸದ ರವೀಂದ್ರ ವೈಕರ್‌ (Ravindra Waikar) ಅವರ ಬಾವ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಷ್ಟೇ ಅಲ್ಲ, ಇದು ಇವಿಎಂ ತಿರುಚಲಾಗುತ್ತದೆ ಎಂಬ ಆರೋಪಕ್ಕೆ ಪುಷ್ಟಿಯನ್ನೂ ನೀಡಿದಂತಾಗಿದೆ.

ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ. ತಮ್ಮ ಮೊಬೈಲ್‌ಗೆ ಒಟಿಪಿ ಜನರೇಟ್‌ ಮಾಡಿಕೊಂಡು ಅನ್‌ಲಾಕ್‌ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

‌ಲೋಕಸಭೆ ಚುನಾವಣೆಯಲ್ಲಿ ರವೀಂದ್ರ ವೈಕರ್‌ ಅವರು ಶಿವಸೇನೆಯ (ಉದ್ಧವ್‌ ಠಾಕ್ರೆ ಬಣ) ಅಭ್ಯರ್ಥಿ ಅಮೋಲ್‌ ಗಜಾನನ ಕೀರ್ತಿಕಾರ್ ಅವರ ವಿರುದ್ಧ ಕೇವಲ 48 ಮತಗಳ ಅಂತರದಿದ್ದ ಗೆದ್ದಿದ್ದಾರೆ. ರವೀಂದ್ರ ವೈಕರ್‌ ಅವರ ಸಂಬಂಧಿಯು ಇವಿಎಂ ತಿರುಚಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆಯು ಮರು ಎಣಿಕೆಗಾಗಿ ಚುನಾವಣಾ ಆಯೋಗಕ್ಕೆ ಮನವಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Continue Reading

ದೇಶ

Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Rahul Gandhi: ಹ್ಯಾಕರ್‌ಗಳು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ಅನ್ನು ಬಳಸಿಕೊಂಡು ಚುನಾವಣೆ ಮತಯಂತ್ರಗಳನ್ನು ಹ್ಯಾಕ್‌ ಮಾಡಬಹುದು. ಹಾಗಾಗಿ, ಇವಿಎಂಗಳನ್ನು ಚುನಾವಣೆಯಲ್ಲಿ ಬಳಸಬಾರದು ಎಂದು ಟೆಸ್ಲಾ ಕಂಪನಿ ಸಿಇಒ ಎಲಾನ್‌ ಮಸ್ಕ್‌ ಹೇಳಿದ್ದಾರೆ. ಇದು ಈಗ ಅಮೆರಿಕದಲ್ಲಿ ಭಾರಿ ಸಂಚಲನ ಮೂಡಿಸಿದೆ. ಎಲಾನ್‌ ಮಸ್ಕ್‌ ಹೇಳಿಕೆ ಕುರಿತು ಪರ ಹಾಗೂ ವಿರೋಧ ಚರ್ಚೆಗಳು ಶುರುವಾಗಿವೆ. ಎಲಾನ್‌ ಮಸ್ಕ್‌ ಅವರ ಆರೋಪಗಳಿಗೆ ರಾಹುಲ್‌ ಗಾಂಧಿ ಅವರೂ ಪ್ರತಿಕ್ರಿಯಿಸಿದ್ದು, ಭಾರತದ ಇವಿಎಂಗಳ ಕುರಿತು ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಸಾಧಿಸಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್‌ ಈಗ 99 ಕ್ಷೇತ್ರಗಳಲ್ಲಿ ಗೆದ್ದಿದೆ. ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವೂ (INDIA Bloc) 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಬಿಜೆಪಿಯೊಂದಕ್ಕೇ ಬಹುಮತ ಬರುವುದನ್ನು ತಪ್ಪಿಸಿವೆ. ಇಷ್ಟೆಲ್ಲ ಆದರೂ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಮತ್ತೆ ಚುನಾವಣೆ ಮತಯಂತ್ರಗಳ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಎಲಾನ್‌ ಮಸ್ಕ್‌ ಹೇಳಿದ್ದಿಷ್ಟು…

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜೀವ್‌ ಚಂದ್ರಶೇಖರ್‌ ತಿರುಗೇಟು

ಎಲಾನ್‌ ಮಸ್ಕ್‌ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ತಿರುಗೇಟು ನೀಡಿದ್ದಾರೆ. “ಸುರಕ್ಷಿತವಾಗಿರುವ ಡಿಜಿಟಲ್‌ ಹಾರ್ಡ್‌ವೇರ್‌ಅನ್ನು ಯಾರೂ ತಯಾರಿಸಲು ಆಗುವುದಿಲ್ಲ ರೀತಿಯಲ್ಲಿ ನೀವು ಇವಿಎಂ ಕುರಿತು ಸಾಮಾನ್ಯವಾದ ಹೇಳಿಕೆ ನೀಡಿದ್ದೀರಿ. ಇವಿಎಂಗೆ ಇಂಟರ್‌ನೆಟ್‌, ಬ್ಲ್ಯೂಟ್‌, ವೈಫೈ ಸಂಪರ್ಕ ಕೂಡ ಇಲ್ಲ. ಕಾರ್ಖಾನೆಯಲ್ಲಿ ತಯಾರಾದ ಇವಿಎಂಗಳನ್ನು, ಯಾವುದೇ ಕನೆಕ್ಟಿವಿಲ್ಲದ ಇವಿಎಂಗಳನ್ನು ಹ್ಯಾಕ್‌ ಮಾಡಲು ಆಗುವುದಿಲ್ಲ. ಭಾರತದಲ್ಲಿ ಇದು ಸಾಬೀತಾಗಿದೆ. ನಾವು ಈ ಕುರಿತು ಒಂದು ಟ್ಯುಟೋರಿಯಲ್‌ ತೆರೆಯೋಣ” ಎಂದು ಟಾಂಟ್‌ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Continue Reading

ದೇಶ

ರಾಹುಲ್‌ ಗಾಂಧಿ ‘ಟಕಾ ಟಕ್’‌ 1 ಲಕ್ಷ ರೂ.ಗಾಗಿ ಬ್ಯಾಂಕ್‌ಗೆ ನುಗ್ಗಿದ ನೂರಾರು ಸ್ತ್ರೀಯರು; ಬಳಿಕ ಆಗಿದ್ದೇನು?

ರಾಹುಲ್‌ ಗಾಂಧಿ ಅವರು ಬ್ಯಾಂಕ್‌ ಖಾತೆಗೆ ಒಂದು ಲಕ್ಷ ರೂ. ಜಮೆ ಮಾಡುತ್ತಾರೆ ಎಂದು ಕರ್ನಾಟಕದಲ್ಲಿ ಮುಸ್ಲಿಂ ಮಹಿಳೆಯರು ಪೋಸ್ಟ್‌ ಆಫೀಸ್‌ನಲ್ಲಿ ಬ್ಯಾಂಕ್‌ ಖಾತೆ ತೆರೆಯಲು ಮುಗಿಬಿದ್ದಿದ್ದರು. ಉತ್ತರ ಪ್ರದೇಶದಲ್ಲಂತೂ ಮಹಿಳೆಯರು ಕಾಂಗ್ರೆಸ್‌ಗೆ ಕಚೇರಿಗೆ ನುಗ್ಗಿದ್ದರು. ಈಗ ಬಿಹಾರದಲ್ಲೂ ಒಂದು ಲಕ್ಷ ರೂ. ಟಕಾಟಕ್‌ ಹಣಕ್ಕಾಗಿ ನೂರಾರು ಮಹಿಳೆಯರು ಬ್ಯಾಂಕ್‌ಗೆ ತೆರಳಿ, ನಿರಾಸೆಯಿಂದ ಮನೆಗೆ ವಾಪಸಾಗಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Bihar Women
Koo

ಪಟನಾ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ದೊರೆತ ಹಿನ್ನೆಲೆಯಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರು ಖಾತೆ ಹಂಚಿಕೆಯನ್ನೂ ಮಾಡಿ ಇಟಲಿಗೆ ತೆರಳಿದ್ದಾರೆ. ಇಷ್ಟಾದರೂ, ರಾಹುಲ್‌ ಗಾಂಧಿ ಅವರು ತಮ್ಮ ಖಾತೆಗೆ ಹಣ ಹಾಕುತ್ತಾರೆ ಎಂದೇ ಮಹಿಳೆಯರು ಭಾವಿಸಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಬಿಹಾರದಲ್ಲಿ ನೂರಾರು ಮಹಿಳೆಯರು ಪಾಸ್‌ಬುಕ್‌ ಹಿಡಿದುಕೊಂಡು, ನಮ್ಮ ಖಾತೆಗೆ ರಾಹುಲ್‌ ಗಾಂಧಿ (Rahul Gandhi) ಹೇಳಿದ ‘ಟಕಾಟಕ್’‌ 1 ಲಕ್ಷ ರೂ. ಜಮೆ ಮಾಡಿ ಎಂದು ಆಗ್ರಹಿಸಿದ್ದಾರೆ. ಕೊನೆಗೆ ಬಂದ ದಾರಿಗೆ ಸುಂಕವಿಲ್ಲ ಎಂದು ಮನೆಗೆ ತೆರಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರ ಬ್ಯಾಂಕ್‌ ಖಾತೆಗೆ ಮಾಸಿಕ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ. ಜಮೆ ಮಾಡಲಾಗುವುದು ಎಂದು ಚುನಾವಣೆ ಪ್ರಚಾರದ ವೇಳೆ ಘೋಷಣೆ ಮಾಡಿದ್ದರು. ಬಿಹಾರದ ಕೈಮುರ್‌ನಲ್ಲಿ ರಾಹುಲ್‌ ಗಾಂಧಿ ಹೇಳಿದಂತೆ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಲಾಗುತ್ತದೆ ಎಂಬ ವದಂತಿ ಹರಡಿದೆ. ಇದನ್ನು ನಂಬಿದ ನೂರಾರು ಮಹಿಳೆಯರು ಬ್ಯಾಂಕ್‌ ಎದುರು ಪಾಸ್‌ಬುಕ್‌ ಹಿಡಿದು, ನಮ್ಮ ಖಾತೆಗೆ ಒಂದು ಲಕ್ಷ ರೂ. ಜಮೆ ಮಾಡಿ ಎಂದು ಆಗ್ರಹಿಸಿದ್ದಾರೆ. ಕೊನೆಗೆ ಪೊಲೀಸರು ಬಂದು ವಾಸ್ತವ ತಿಳಿಸಿದಾಗ ಮಹಿಳೆಯರು ಹಿಡಿಶಾಪ ಹಾಕುತ್ತ ಮನೆಗೆ ತೆರಳಿದರು ಎನ್ನಲಾಗಿದೆ.

ರಾಹುಲ್‌ ಗಾಂಧಿ ಹೇಳಿದ್ದೇನು?

ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಅವರು ಮಹಿಳೆಯರಿಗೆ 1 ಲಕ್ಷ ರೂ. ನೀಡುವ ಕುರಿತು ಹಲವು ಬಾರಿ ಘೋಷಣೆ ಮಾಡಿದ್ದರು. “ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹೆಣ್ಣುಮಕ್ಕಳ ಬ್ಯಾಂಕ್‌ ಖಾತೆಗಳಿಗೆ ಮಾಸಿಕ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ. ನೀಡಲಾಗುತ್ತದೆ. ದೇಶದ ಬಡ ಮಹಿಳೆಯರ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತದೆ. ಇದು ಕಾಂಗ್ರೆಸ್‌ ಗ್ಯಾರಂಟಿಯಾಗಿದೆ. ಟಕಾ ಟಕ್‌ ಅಂತ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ” ಎಂಬುದಾಗಿ ಹೇಳಿದ್ದರು. ಹಾಗಾಗಿ, ಚುನಾವಣೆ ಮುಗಿದ ಕೂಡಲೇ ಮುಸ್ಲಿಂ ಮಹಿಳೆಯರು ಉತ್ತರ ಪ್ರದೇಶದ ಲಖನೌನಲ್ಲಿರುವ ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟಿದ್ದರು.

ಕರ್ನಾಟಕದಲ್ಲೂ ಖಾತೆ ತೆರೆಯಲು ಕ್ಯೂ

ಕಾಂಗ್ರೆಸ್‌ನಿಂದ ಮಹಿಳೆಯರ ಬ್ಯಾಂಕ್‌ ಖಾತೆಗೆ 1 ಲಕ್ಷ ರೂ. ಜಮೆಯಾಗುತ್ತದೆ ಎಂದು ಭಾವಿಸಿ ಬೆಂಗಳೂರಿನ ಹಲವೆಡೆ ಮುಸ್ಲಿಂ ಮಹಿಳೆಯರು ಪೋಸ್ಟ್‌ ಆಫೀಸ್‌ ಎದುರು ಸಾಲಾಗಿ ನಿಂತಿರುವುದು ಕಂಡು ಬಂದಿತ್ತು. ಬೆಂಗಳೂರಿನ ಶಿವಾಜಿ ನಗರ, ವಸಂತನಗರ ಸೇರಿ ಹಲವೆಡೆ ಮುಸ್ಲಿಂ ಮಹಿಳೆಯರು ಬ್ಯಾಂಕ್‌ ಖಾತೆ ತೆರೆಯಲು ಪೋಸ್ಟ್‌ ಆಫೀಸ್‌ ಎದುರು ಸಾಲುಗಟ್ಟಿ ನಿಂತಿದ್ದರು. ಕಾಂಗ್ರೆಸ್‌ 1 ಲಕ್ಷ ರೂ. ಗ್ಯಾರಂಟಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕ್‌ ಖಾತೆ ತೆರೆಯಲು ಮುಂದಾಗಿದ್ದರು.

ಇದನ್ನೂ ಓದಿ: Congress Guarantee: ಗ್ಯಾರಂಟಿಗಾಗಿ ದಾಖಲೆ ಅಪ್ಡೇಟ್‌; ಆಧಾರ್‌, ಬ್ಯಾಂಕ್‌, ಪೋಸ್ಟ್‌ ಆಫೀಸ್‌ಗೆ ಮುಗಿಬಿದ್ದ ಜನ

Continue Reading
Advertisement
Actor Darshan Renukaswamy Send His Photos To Pavitra Gowda
ಕ್ರೈಂ6 mins ago

Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

bakrid 2024
ಧಾರ್ಮಿಕ29 mins ago

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Karnataka weather Forecast
ಮಳೆ1 hour ago

Karnataka weather : ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

Dina Bhavishya
ಭವಿಷ್ಯ3 hours ago

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

World War 3
ಪ್ರಮುಖ ಸುದ್ದಿ9 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ11 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ11 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ11 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ12 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ12 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ13 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ14 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ19 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌