Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ? - Vistara News

ಕ್ರೈಂ

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

Prajwal Revanna Case: ಕೆ.ಆರ್.‌ ನಗರದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೆಚ್ಚಿನ‌ ವಿಚಾರಣೆ ಬೇಕಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು 10 ದಿನ ಕಸ್ಟಡಿಗೆ ನೀಡುವಂತೆ ಎಸ್.ಐ.ಟಿ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಆರೋಪಿ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ, ಸತೀಶ್‌ ಬಾಬಣ್ಣನನ್ನು ಎಂಟು ದಿನದ ವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶವನ್ನು ಹೊರಡಿಸಿದ್ದಾರೆ.

VISTARANEWS.COM


on

Prajwal Revanna Case 2nd accused in KR Nagar victim abduction case sent to SIT custody Trouble for Revanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ನಲ್ಲಿ 2ನೇ ಆರೋಪಿ ಸತೀಶ್ ಬಾಬಣ್ಣನನ್ನು ಎಂಟು ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಸಿಟಿ ಸಿವಿಲ್ ಕೋರ್ಟ್‌ನ 17ನೇ ಎಸಿಎಂಎಂ ನ್ಯಾಯಾಲಯವು ಆದೇಶಿಸಿದೆ.

ಪ್ರಜ್ವಲ್‌ ರೇವಣ್ಣ ವಿಡಿಯೊ ಕೇಸ್‌ನಲ್ಲಿ ಸಂತ್ರಸ್ತೆಯಾಗಿರುವ ಮೈಸೂರಿನ ಕೆ.ಆರ್.‌ ನಗರದ ಮಹಿಳೆಯ ಅಪಹರಣ ಕೇಸ್‌ಗೆ ಸಂಬಂಧಿ ಎಸ್‌ಐಟಿ ಈಗ ಎರಡನೇ ಆರೋಪಿಯನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಸತೀಶ್ ಬಾಬಣ್ಣ ಎಂಬಾತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಯನ್ನು ನಡೆಸಲು ಸಿಟಿ ಸಿವಿಲ್ ಕೋರ್ಟ್‌ನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಈ ಪ್ರಕರಣದಲ್ಲಿ ಹೆಚ್ಚಿನ‌ ವಿಚಾರಣೆ ಬೇಕಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು 10 ದಿನ ಕಸ್ಟಡಿಗೆ ನೀಡುವಂತೆ ಎಸ್.ಐ.ಟಿ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಆರೋಪಿ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ, ಸತೀಶ್‌ ಬಾಬಣ್ಣನನ್ನು ಎಂಟು ದಿನದ ವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶವನ್ನು ಹೊರಡಿಸಿದ್ದಾರೆ.

ಈಗ ಸತೀಶ್‌ ಬಾಬಣ್ಣನನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು, ಸಂತ್ರಸ್ತ ಮಹಿಳೆ ಅಪಹರಣದ ಹಿಂದೆ ಯಾರಿದ್ದಾರೆ? ಯಾರು ಸೂಚನೆ ನೀಡಿದ್ದಾರೆ? ಎಚ್.ಡಿ. ರೇವಣ್ಣ ಸೂಚನೆ ಕೊಟ್ಟಿದ್ದಾರಾ? ಅವರ ಪಾತ್ರವೇನು ಎಂಬ ಬಗ್ಗೆ ಪ್ರಶ್ನೆ ಕೇಳಲಿದ್ದಾರೆ. ಎಲ್ಲಿಯಾದರೂ ವಿರುದ್ಧವಾಗಿ ಹೇಳಿಕೆ ನೀಡಿದರೆ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಲಿದೆ.

ಏನಿದು ಅಪಹರಣ ಕೇಸ್‌?

ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು.‌ ಈ ಸಂಬಂಧ ಫೋಟೊಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಎ1 ಶಾಸಕ ಎಚ್.ಡಿ. ರೇವಣ್ಣ ಹಾಗೂ ಎ2 ಸತೀಶ್‌ ಬಾಬು ಅಪಹರಣ ಮಾಡಿಸಿದ್ದಾರೆ ಎಂದು ಸಂತ್ರಸ್ತೆಯ ಪುತ್ರ ದೂರು ನೀಡಿದ್ದರು. ಪ್ರಜ್ವಲ್‌ ರೇವಣ್ಣ ಮನೆಗೆಲಸದಾಕೆ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಕೇಸ್‌ ದಾಖಲಾಗಿತ್ತು. ಶಾಸಕ ಎಚ್‌.ಡಿ.ರೇವಣ್ಣ ಸಲಹೆ ಮೇರೆಗೆ ಮಹಿಳೆಯನ್ನು ಸತೀಶ್‌ ಬಾಬು ಅಪಹರಣ ಮಾಡಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ರೇವಣ್ಣ ಮನೆ ಕೆಲಸದ ಮಹಿಳೆಯ ಪುತ್ರ ನೀಡಿದ ದೂರಿನ ಮೇರೆಗೆ ಕಿಡ್ನ್ಯಾಪ್‌ ಪ್ರಕರಣ ದಾಖಲಾಗಿತ್ತು. ಈ ಕೇಸ್‌ನಲ್ಲಿ ಸತೀಶ್‌ ಬಾಬುನನ್ನು ಬಂಧಿಸಲಾಗಿದೆ.

ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

ಎಚ್.ಡಿ. ರೇವಣ್ಣ ನಿವಾಸದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಸವನಗುಡಿಯ ನಿವಾಸದಲ್ಲಿ ಮಹಜರು ಮಾಡಲಾಗಿದೆ.

ಸಿಐಡಿ ಸೈಬರ್‌ಸೆಲ್‌ನಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸ್ಥಳವನ್ನು ಎಸ್‌ಐಟಿ ಅಧಿಕಾರಿಗಳು ಮಹಜರು ಮಾಡಿದ್ದಾರೆ. ಈಗಾಗಲೇ ನ್ಯಾಯಾಧೀಶರ ಎದುರು ಕಳೆದ ಶುಕ್ರವಾರ (ಮೇ 3) ಸಿಎಆರ್‌ಪಿಸಿ 164 ಅಡಿಯಲ್ಲಿ ಸಂತ್ರಸ್ತ ಮಹಿಳೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ವಿಚಾರಣೆ ವೇಳೆ ತನ್ನನ್ನು ಹಾಸನದ ಎಂಪಿ ಕ್ವಾಟ್ರರ್ಸ್‌ ಮಾತ್ರವಲ್ಲದೆ ಬೆಂಗಳೂರಿನ ನಿವಾಸದಲ್ಲಿ ಸಹ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಹೀಗಾಗಿ ಅತ್ಯಾಚಾರ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿರುವ ಎಚ್.ಡಿ. ರೇವಣ್ಣ ಅವರ ಬಸವನಗುಡಿ ನಿವಾಸದೆದುರು ಮಹಜರು ಮಾಡಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಬೆಡ್‌ರೂಮ್‌ನಲ್ಲಿ ಅಧಿಕಾರಿಗಳಿಗೆ ದೂರುದಾರೆ ಮಾಹಿತಿ ನೀಡಿದ್ದಾರೆ. ಎಲ್ಲೆಲ್ಲಿ? ಏನೇನು ನಡೆದಿತ್ತು ಎಂಬ ಬಗ್ಗೆ ಸಂತ್ರಸ್ತೆಯಿಂದ ನೇರವಾಗಿ ಮಾಹಿತಿ ಪಡೆದು ಹೇಳಿಕೆಯಂತೆ ಮಹಜರು ಪ್ರಕ್ರಿಯೆಯನ್ನು ನಡೆಸಲಾಗಿದೆ.

ನೋಟಿಸ್ ಕೊಟ್ಟು ನಮ್ಮನ್ನು ಮನೆಯ ಒಳಗೆ ಬಿಟ್ಟಿಲ್ಲ: ವಕೀಲ ಗೋಪಾಲ್

ಎಚ್‌.ಡಿ. ರೇವಣ್ಣ ಪರ ವಕೀಲ ಗೋಪಾಲ್ ಪ್ರತಿಕ್ರಿಯೆ ನೀಡಿ, ಈಗಾಗಲೇ ಹಲವಾರು ವಿಚಾರಗಳು ಎಲ್ಲರಿಗೂ ತಿಳಿದಿದೆ. ನಮ್ಮ‌ ಕಕ್ಷಿದಾರ ಎಚ್.ಡಿ. ರೇವಣ್ಣ ಅವರ ಹೊಳೆನರಸೀಪುರ ಮನೆಯಲ್ಲಿ ಮಹಜರು ನಡೆದಿದೆ. ಎರಡು ಪ್ರಕರಣಗಳಲ್ಲಿ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ಮಹಜರು ಮಾಡುವ ಸಂದರ್ಭದಲ್ಲಿ ನೋಟಿಸ್ ಕೊಡಬೇಕು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ‌ ಮಹಜರು ಪ್ರಕ್ರಿಯೆ ಮಾಡಲಾಗಿದೆ. ಭವಾನಿ ರೇವಣ್ಣ ಅವರು ಮಹಜರು ಪ್ರಕ್ರಿಯೆಗೆ ಅನುಮತಿ ನೀಡಿದ್ದಾರೆ. ಹೊಳೆನರಸೀಪುರದಲ್ಲಿ ಮಹಜರು ನಡೆದಾಗ ನೋಟಿಸ್ ನೀಡಿದರು. ನನ್ನ ಕಡೆಯಿಂದ ಅವರಿಗೆ ಸಹಕಾರ ನೀಡಿದ್ದೇನೆ. ಹೊಳೆನರಸೀಪುರ ಮಹಜರು ಸಂದರ್ಭದಲ್ಲಿ 4-5-2024ರಲ್ಲಿ ಬಸವನಗುಡಿ ಮನೆಯಲ್ಲಿ ಮಹಜರು ಮಾಡಲು‌ ಸಹಕಾರ ಕೇಳಿದರು. ಈ ಬಗ್ಗೆ ಎಸ್‌ಐಟಿಯಿಂದ ನೋಟಿಸ್ ನೀಡಲಾಗಿದೆ. ನೋಟಿಸ್ ಕೊಟ್ಟು, ನಮ್ಮನ್ನು ಮನೆಯ ಒಳಗೆ ಬಿಟ್ಟಿಲ್ಲ. ಬಸವನಗುಡಿಯ ಮನೆಯ‌‌ ಮಹಜರು ಸಂದರ್ಭದಲ್ಲಿ ನನಗೆ‌ ಮನೆಯೊಳಗೆ ಅನುಮತಿ ನೀಡಿಲ್ಲ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪರಹಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Fraud Case : ಒಂದೂವರೆ ಗಂಟೆ ಸಿಕ್ಕ ಸಿಕ್ಕಲ್ಲಿ ಸುತ್ತಾಡಿಸಿ ವಕೀಲನಿಂದ ಸುಲಿಗೆ ಮಾಡಿದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Theft case
Koo

ಬೆಂಗಳೂರು: ರಾತ್ರಿಯಾದರೆ ಸಾಕು ಡಕಾಯಿತರಂತೆ ಕಾಣುವ ಕೆಲ ಡ್ರೈವರ್‌ಗಳ ಆಟೋ ಹತ್ತಲು ಭಯ ಪಡುವ ಸ್ಥಿತಿ ನಿರ್ಮಾಣ ಆಗಿದೆ. ಬೆಂಗಳೂರಿನಲ್ಲಿ ಸುಲಿಗೆ (Theft case) ಪ್ರಕರಣವೊಂದು ನಡೆದಿದ್ದು, ಅಲರ್ಟ್ ಆದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರ ಪೊಲೀಸರು ಶಿವಕುಮಾರ್ ಹಾಗು ಮಂಟ್ಯಪ್ಪ ಎಂಬ ಖದೀಮರನ್ನು ಬಂಧನ ಮಾಡಿದ್ದಾರೆ. ರಾತ್ರಿಯಾದರೆ ರಸ್ತೆಗಿಳಿಯುವ ಇವರು ಪ್ರಯಾಣಿಕರನ್ನು ಬೆದರಿಸಿ ಸುಲಿಗೆ ಮಾಡುವುದೇ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ.

ಗೋವಿಂದರಾಜನಗರದ ಎಂಸಿ ಲೇಔಟ್‌ನಲ್ಲಿರುವ ಕ್ಯೂಟಿಸ್ ಆಸ್ಪತ್ರೆ ಬಳಿ ಈ ಕೃತ್ಯ ನಡೆದಿದೆ. ವಕೀಲರಾದ ರಾಮಕೃಷ್ಣಯ್ಯ ಅವರು ಹೊರಜಿಲ್ಲೆಯಲ್ಲಿ ಕೇಸ್‌ವೊಂದನ್ನು ಮುಗಿಸಿ ವಾಪಾಸ್ ನಗರಕ್ಕೆ ಬಂದು ಆಟೋಗಾಗಿ ಕಾಯುತ್ತಿದ್ದರು. ಈ ವೇಳೆ ಆಟೋದಲ್ಲಿ ಬಂದವರೇ ಶಿವಕುಮಾರ್ ಹಾಗು ಮಂಟ್ಯಪ್ಪ. ವಕೀಲರನ್ನು ಆಟೋಗೆ ಹತ್ತಿಸಿಕೊಂಡ ಮೇಲೆ ಆರೋಪಿಗಳ ಅಸಲಿ ಆಟ ಶುರುವಾಗಿತ್ತು.

ಇದನ್ನೂ ಓದಿ: Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

ಆರೋಪಿ ಶಿವಕುಮಾರ್ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ನಂದಿನಿ ಲೇಔಟ್‌ನಲ್ಲಿರುವ ವ್ಯಕ್ತಿಯೊಬ್ಬರಿಂದ ಆಟೋವನ್ನು ಬಾಡಿಗೆ ಪಡೆದು ಓಡಿಸುತ್ತಿದ್ದ. ನಿಯತ್ತಾಗಿ ದುಡಿಯುತ್ತಿದ್ದವನಿಗೆ ಹಣದಾಸೆ ಶುರುವಾಗಿತ್ತು. ಇದಕ್ಕೆ ಸಾಥ್ ಕೊಟ್ಟಿದ್ದು ಆತನ ಸ್ನೇಹಿತ ಮಂಟ್ಯಪ್ಪ. ವಕೀಲ ರಾಮಕೃಷ್ಣಯ್ಯರನ್ನು ಪಿಕ್ ಆಪ್ ಮಾಡಿ ಸ್ವಲ್ಪ ಮುಂದೆ ಹೋಗುವಷ್ಟರಲ್ಲಿ ಮತ್ತೊಬ್ಬ ಆರೋಪಿ ಮಂಟ್ಯಪ್ಪ ಆಟೋ ಹತ್ತಿದ್ದ. ಇದನ್ನು ಪ್ರಶ್ನೆ ಮಾಡಿದಾಗ ಏಕಾಏಕಿ ಚಾಕು ತೆಗೆದು ವಕೀಲನ ಕುತ್ತಿಗೆಗೆ ಇಟ್ಟಿದ್ದ.

ಮಧ್ಯರಾತ್ರಿ ಆದ ಕಾರಣ ಯಾರು ಇರದ ರಸ್ತೆಗಳಲ್ಲಿ ಆಟೋವನ್ನು ಸುತ್ತಾಡಿಸಿ ಸುಲಿಗೆಗೆ ಮುಂದಾಗಿದ್ದರು. ಕೊನೆಗೆ ಕ್ಯೂಟೀಸ್ ಆಸ್ಪತ್ರೆ ಬಳಿ ಬಂದು ವಕೀಲರ ಬಳಿ ಇದ್ದ 900 ರೂಪಾಯಿ ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿದ್ದರು. ಪೊಲೀಸರಿಗೆ ಹೇಳಿದರೆ ಜೈಲಿಗೆ ಹೋಗಿ ವಾಪಾಸ್ ಬಂದು ಕೊಲೆ ಮಾಡುವುದಾಗಿ ಬೆದರಿಸಿ ಪರಾರಿಯಾಗಿದ್ದರು. ಈ ವೇಳೆ ಅಸ್ಪಷ್ಟವಾಗಿ ಆಟೋದ ಕೆಲ ನಂಬರ್‌ಗಳನ್ನು ನೋಟ್ ಮಾಡಿದ್ದ ವಕೀಲ ರಾಮಕೃಷ್ಣ ಅದನ್ನು ಪೊಲೀಸರಿಗೆ ತಿಳಿಸಿದ್ದಾರೆ.

ತಕ್ಷಣ ಅಲರ್ಟ್ ಆದ ಪೊಲೀಸರು ರಾತ್ರೋರಾತ್ರಿ ಆ ನಂಬರ್‌ಗಳನ್ನು ನೋಟ್ ಮಾಡಿ ಆಟೋವಿನ ಗುರುತಿನ ಮಾಹಿತಿ ಪಡೆದು ಆಟೋ ಸ್ಟ್ಯಾಂಡ್‌ಗಳಲ್ಲಿ ವಿಚಾರಣೆ ನಡೆಸಿದ್ದಾರೆ. ನಂತರ ಕೆಲ ಆಟೋ ನಂಬರ್‌ಗಳನ್ನು ಕಲೆ ಹಾಕಿದ್ದ ಹಿನ್ನೆಲೆಯಲ್ಲಿ ಒಂದಷ್ಟು ಆಟೋ ಮಾಲೀಕರನ್ನು ಸಂಪರ್ಕ ಮಾಡಿದಾಗ ನಂದಿನಿ ಲೇಔಟ್ ವಿಳಾಸ ಸಿಕ್ಕಿತ್ತು. ಅಲ್ಲಿ ವಿಚಾರಿಸಿದಾಗ ಆ ಆಟೋ ಶಿವಕುಮಾರ್ ಎಂಬಾತನಿಗೆ ಬಾಡಿಗೆ ನೀಡಲಾಗಿತ್ತು. ಈ ನಂಬರ್ ಅನ್ನು ಟ್ರಾಕ್ ಮಾಡಿದಾಗ ಆ ನಂಬರ್ ಟ್ರಾವೆಲ್ ಮಾಡಿದ್ದ ಮತ್ತೊಂದು ಕೃತ್ಯಕ್ಕೆ ಸ್ಕೆಚ್ ಹಾಕುತ್ತಿರುವುದು ಬೆಳಕಿಗೆ ಬಂದಿತ್ತು. ತಕ್ಷಣ ಪೊಲೀಸರು ಆಟೋವನ್ನು ಬೆನ್ನತ್ತಿ ಆರೋಪಿಗಳನ್ನು ವಿಚಾರಿಸಿದಾಗ ಅಸಲಿ ಸಂಗತಿ ಹೊರ ಬಿದ್ದಿದೆ. ದೂರು ದಾಖಲಾದ ಎರಡೇ ಗಂಟೆಗಳಲ್ಲಿ ಈ ಪ್ರಕರಣ ಬಯಲಿಗೆ ಬಂದಿದೆ. ಇನ್ನು ಎರಡು ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ 500 ರೂಪಾಯಿ ರಿಕವರಿ ಮಾಡಿದ್ದಾರೆ. ಸದ್ಯ ಈ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದಿದೆ. ಅಗ್ನಿ ಅವಘಡಕ್ಕೆ ಕಾರಣ ನಿಗೂಢವಾಗಿದೆ. ಆದರೆ ಕಾರಿನಡಿ ಪೆಟ್ರೋಲ್‌ ತುಂಬಿದ್ದ ಕ್ಯಾನ್‌ ಪತ್ತೆಯಾಗಿದೆ.

VISTARANEWS.COM


on

By

Road Accident
Koo

ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ಸರ್ಕಲ್ ಬಳಿ ನಡುರಾತ್ರಿ ಕಾರೊಂದು ಹೊತ್ತಿ ಉರಿದಿದೆ. ಸಿಎನ್‌ಜಿ ವಾಹನಕ್ಕೆ ಬೆಂಕಿ ತಗುಲಿದೆ. ಕಾರು ಚಾಲಕ ಗಾಡಿಯಲ್ಲಿಯೇ ಮಲಗಿದ್ದಾಗಲೇ, ಏಕಾಏಕಿ ಬೆಂಕಿ ಹತ್ತಿದೆ. ಕೂಡಲೇ ಕಾರಿನಿಂದ ಹೊರಬಂದಿದ್ದ. ಕಾರಿನ ಕೆಳಗೆ ಪೆಟ್ರೋಲ್ ಕ್ಯಾನ್ ಇತ್ತು ಎನ್ನಲಾಗಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್‌ ಚಲಾಯಿಸುವಾಗಲೇ ಕಾಣಿಸಿಕೊಂಡ ಎದೆನೋವು

ಬಿಎಂಟಿಸಿ ಬಸ್ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ 40ಕ್ಕೂ ಹೆಚ್ಚು ಜನರ ಜೀವ ಉಳಿದಿದೆ. ನಿನ್ನೆ ಗುರುವಾರ ಮಧ್ಯಾಹ್ನ ಶಾಂತಿನಗರದ ಡಬಲ್ ರೋಡ್ ಬಳಿ ಘಟನೆ ನಡೆದಿದೆ. ಡ್ರೈವರ್ ವಿರೇಶ್ ಬಸ್ ಡ್ರೈವಿಂಗ್ ಮಾಡುತ್ತಿರುವಾಗ ಹಾರ್ಟ್ ಅಟ್ಯಾಕ್ ಆಗಿದೆ. ನಡುರಸ್ತೆಯಲ್ಲಿ ಬಸ್ ಸ್ಲೋ ಆಗಿರುವುದನ್ನು ಗಮನಿಸಿದ ಹಲಸೂರು ಟ್ರಾಫಿಕ್‌ ಎಎಸ್‌ಐ ಆರ್‌ ರಘುಕುಮಾರ್‌ ಓಡೋಡಿ ಬಂದರು. ಬಸ್ ಬಳಿ ಬಂದು ನೋಡಿದಾಗ ಚಾಲಕ ಎದೆಗೆ ಕೈ ಹಿಡಿದು ಒಂದು ಕಡೆಗೆ ವಾಲಿದ್ದರು. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸ್ಲೋ ರನ್ನಿಂಗ್‌ನಲ್ಲಿತ್ತು, ಕೂಡಲೇ ಹ್ಯಾಂಡ್ ಬ್ರೇಕ್ ಹಾಕಿ ಚಾಲಕನನ್ನು ಇಳಿಸಿದ್ದಾರೆ. ನಂತರ ಆ್ಯಂಬುಲೆನ್ಸ್‌ಗೂ ಕಾಯದೆ ಅಶೋಕ ನಗರ ಟ್ರಾಫಿಕ್ ಸಿಬ್ಬಂದಿ ಪ್ರಸನ್ನಕುಮಾರ್ ಸಹಾಯದಿಂದ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

Road Accident
Road Accident

‌ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿ

ಔಟರ್‌ರಿಂಗ್ ರೋಡ್ ಸರ್ವೀಸ್ ರಸ್ತೆಯಿಂದ ಮುಖ್ಯರಸ್ತೆಯಲ್ಲಿ 10 ಚಕ್ರದ ಲಾರಿ ಅಪಘಾತಕ್ಕೀಡಾಗಿದೆ. ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ಟಿಪ್ಪರ್‌ ಲಾರಿ ನಿಯಂತ್ರಣ ತಪ್ಪಿದೆ. ಪರಿಣಾಮ ಟ್ರಾಫಿಕ್‌ ಜಾಮ್‌ ಉಂಟಾಗಿ, ಸತತ ಒಂದು ಗಂಟೆಯಿಂದ ವಾಹನಗಳು ನಿಂತಲ್ಲೆ ನಿಲ್ಲಬೇಕಾಯಿತು. ಶುಕ್ರವಾರ ಬೆ.7ಕ್ಕೆ ಘಟನೆ ನಡೆದಿದ್ದು, ಮೆಟ್ರೋ ಕಾಮಗಾರಿಯ ಗೋಡೆಗೆ ಲಾರಿ ಗುದ್ದಿದೆ. ಲಾರಿಯನ್ನು ತೆಗೆಯಲು ಪೊಲೀಸರು ಎರಡು ಜೆಸಿಬಿ ಬಳಸಿದರು. ರಸ್ತೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆಯಲ್ಲಿ 10 ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೋಲಾರ

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌ ಆಗಿದೆ. ಭೀಕರ ದೃಶ್ಯಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

By

Road Accident
Koo

ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹಕ್ಕಿ ಪಿಕ್ಕಿ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರನ ತಲೆಯೇ ತುಂಡಾಗಿ ಬಿದ್ದಿದೆ. ಆಂಧ್ರಪ್ರದೇಶದ ಚೀಕಲಬೈಲು ಗ್ರಾಮದ ಗುಣಶೇಖರ್ (28) ದಾರುಣ ಅಂತ್ಯ ಕಂಡ ಸವಾರನಾಗಿದ್ದಾನೆ.

ಬೈಕ್‌ ಮೂಲಕ ಗುಣಶೇಖರ್‌ ರಾಯಲ್ಪಾಡುನಿಂದ ಆಂಧ್ರಪ್ರದೇಶದಕ್ಕೆ ತೆರಳುತ್ತಿದ್ದ. ಈ ವೇಳೆ ಬೈಕ್‌ಗೆ ಅಪರಿಚಿತ ವಾಹನ ಗುದ್ದಿದೆ. ಅಪಘಾತದ ರಭಸಕ್ಕೆ ಗುಣಶೇಖರ್‌ ತಲೆಯೇ ತುಂಡಾಗಿ ರಸ್ತೆಗೆ ಬಿದ್ದಿತ್ತು. ಭೀಕರ ದೃಶ್ಯ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದರು. ಕೂಡಲೇ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ತುಮಕೂರಿನಲ್ಲಿ ಕಾರು ಅಪಘಾತ; ಇಬ್ಬರು ಸಾವು

ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟರೆ, ಮತ್ತೋರ್ವ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಜೀವ ಬಿಟ್ಟಿದ್ದಾನೆ. ತುಮಕೂರು ತಾಲೂಕಿನ ಕೋರಾ ಬ್ರಿಡ್ಜ್ ಬಳಿ ಕಾರು ಅಪಘಾತವಾಗಿ ದಾವಣಗೆರೆ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ದಾವಣಗೆರೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ತೂರಿನಲ್ಲಿ ಟೆಂಪೋ ಟ್ರಾವೆಲರ್‌-ಗೂಡ್ಸ್‌ ವಾಹನದ ನಡುವೆ ಅಪಘಾತ

ಚಿತ್ತೂರು ಜಿಲ್ಲೆಯ ಬಂಗಾರುಪಾಳ್ಯಂ ಮಂಡಲಂ ಮೊಗಿಲಿ ಘಾಟ್ ರಸ್ತೆಯಲ್ಲಿ ಟೆಂಪೋ ಟ್ರಾವೆಲರ್ ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಗೋಲ್ಡ್ ಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕದ ಉಡುಪಿಯಿಂದ ಟೆಂಪೋ ಟ್ರಾವೆಲರ್ ತಿರುಮಲಕ್ಕೆ ಹೋಗುವಾಗ ಘಟನೆ ನಡೆದಿದೆ.

ಘಾಟ್‌ನಲ್ಲಿದ್ದ ಸ್ಪೀಡ್ ಬ್ರೇಕರ್‌ಗಳಿಗೆ ಟೊಮೆಟೊ ಮಿನಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಕಳೆದ 13ರಂದು ನಡೆದ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದರು. ಇತ್ತೀಚೆಗೆ ಮೊಗಿಲಿ ಘಾಟ್ ರಸ್ತೆಯಲ್ಲಿ ಹೆದ್ದಾರಿ ಅಪಘಾತ ತಡೆಯಲು ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಲಾಗಿದೆ. ಆದರೂ ಅತಿವೇಗವಾಗಿ ಓಡಿಸಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬಂಗಾರುಪಾಳ್ಯಂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

MLA Muniratna: ಜಾತಿನಿಂದನೆ ಪ್ರಕರಣದಿಂದ ಜಾಮೀನು ಪಡೆದು ಹೊರ ಬಂದ ಶಾಸಕ ಮುನಿರತ್ನರನ್ನು ಅತ್ಯಾಚಾರ ಹಾಗೂ ಹನಿಟ್ರ್ಯಾಪ್‌ ಆರೋಪದ (Physical abuse) ಮೇಲೆ ಕಗ್ಗಲಿಪುರ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

allegations of rape honeytrap Mla Munirathna arrested again by Kaggalipura police as soon as he came out of jail
Koo

ಬೆಂಗಳೂರು: ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಕೇಸ್‌ನಲ್ಲಿ ಜೈಲುಪಾಲಾಗಿದ್ದ ಶಾಸಕ ಮುನಿರತ್ನಗೆ (MLA Muniratna) ಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿತ್ತು. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್‌ ಆಗಿ ಹೊರ ಬಂದಾತಕ್ಷಣ ಕಗ್ಗಲಿಪುರ ಪೊಲೀಸರು (Kaggalipura police) ಹಾಗೂ ಡಿವೈಎಸ್‌ಪಿ ದಿನಕರ್ ಶೆಟ್ಟಿ ಮುನಿರತ್ನರನ್ನು ವಶಕ್ಕೆ ಪಡೆದಿದ್ದಾರೆ. ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾದ ಬಳಿಕ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇನ್ನು ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಗುರುವಾರ ಪೊಲೀಸರು ಸಂತ್ರಸ್ತೆಯನ್ನು ಕರೆದೊಯ್ದು ಕೃತ್ಯ ನಡೆದ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ. ಮುತ್ಯಾಲನಗರದ ಗೋಡೌನ್, ನೆಲಮಂಗಲ ಬಳಿ ಮಹಜರು ಮಾಡಿ ನ್ಯಾಯಾಧೀಶರ ಮುಂದೆ ಸಿಆರ್ ಪಿಸಿ 164 ಅಡಿಯಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಿದ್ದಾರೆ.

ಏನಿದು ಪ್ರಕರಣ?

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕೋವಿಡ್ ಸಮಯದಲ್ಲಿ ನನ್ನ ಸಾಮಾಜಿಕ ಸೇವೆಯನ್ನು ಗುರುತಿಸಿ ಮುನಿರತ್ನ ಕರೆ ಮಾಡಿದ್ದರು. ಅದರಂತೆ ಭೇಟಿಯಾದ ಸಂತ್ರಸ್ತೆ ಹಾಗೂ ಮುನಿರತ್ನ ನಡುವೆ ಆತ್ಮೀಯತೆ ಬೆಳೆದಿತ್ತು. ಆಗಾಗ ವಿಡಿಯೊ ಕಾಲ್‌ ಮೂಲಕ ಮಾತನಾಡುತ್ತಿದ್ದರು. ಹೀಗೊಂದು ದಿನ ನಗ್ನವಾಗಿ ವಿಡಿಯೊ ಕರೆ ಮಾಡುವಂತೆ ಒತ್ತಾಯಿಸಿದಾಗ ಸಂತ್ರಸ್ತೆ ನಿರಾಕರಿಸಿದ್ದರಂತೆ. ಇದಾದ ಬಳಿಕ ಸಂತ್ರಸ್ತೆಯನ್ನು ಗೋಡೌನ್‌ಗೆ ಕರೆಸಿಕೊಂಡು ನಿನ್ನ ನೋಡಿದರೆ ಮೈ ಜುಮ್‌ ಎನಿಸುತ್ತೆ ಎಂದೇಳಿ ತಬ್ಬಿಕೊಳ್ಳಲು ಮುಂದಾಗಿದ್ದರಂತೆ.

ಇದಕ್ಕೆ ಸಂತ್ರಸ್ತೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇದೆಲ್ಲಾ ಕಾಮನ್ ಎಂದಿದ್ದಾರೆ. ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ನಾನು ಶಾಸಕ, ಅಪಾರ ಜನಬೆಂಬಲವಿದೆ ಸುಮ್ಮನಿದ್ದರೆ ಸರಿ , ಇಲ್ಲವಾದರೆ ನಿನ್ನ ವಿರುದ್ಧವೇ ಕಂಪ್ಲೆಂಟ್ ನೀಡುತ್ತೇನೆ ಎಂದು ಹೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದರಂತೆ. ಅತ್ಯಾಚಾರದ ಬಳಿಕ ಈ ರೂಂನಲ್ಲಿ ಸೀಕ್ರೆಟ್ ವೀಡಿಯೊ ರೆಕಾರ್ಡರ್ ಇಟ್ಟಿದ್ದು, ಎಲ್ಲಾ ದೃಶ್ಯಗಳು ಸೆರೆಯಾಗಿದೆ. ನಿನ್ನ ವಿಡಿಯೊ ಎಡಿಟ್ ಮಾಡಿ ಹಂಚುತ್ತೇನೆ. ಹೇಳಿದಂತೆ ಕೇಳಬೇಕು ಅಂತಾ ಹನಿಟ್ರ್ಯಾಪ್ ಮಾಡುವಂತೆ ಹೇಳಿ ನನ್ನನ್ನು ಬಳಸಿಕೊಂಡರು ಎಂದು ಸಂತ್ರಸ್ತೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಜತೆಗೆ ಚಿತ್ರೀಕರಿಸಿದ ವಿಡಿಯೊಗಳನ್ನು ಟಿವಿಯಲ್ಲಿ ಹಾಕಿ ತೋರಿಸುತ್ತಾ, 2020 ರಿಂದ 2022ರ ಅವಧಿಯಲ್ಲಿ ನಿರಂತರ ಅತ್ಯಾಚಾರ ನಡೆಸಿದ್ದಾರೆ. ಇದೇ ವೇಳೆ ಹನಿಟ್ರ್ಯಾಪ್‌ಗು ಬಳಕೆ ಮಾಡಿಕೊಂಡಿದ್ದಾರೆ. ಹೇಳಿದಂತೆ ಕೇಳಲಿಲ್ಲ ಅಂದರೆ ಗಂಡ ಮತ್ತು ಮಕ್ಕಳಿಗೆ ವಿಡಿಯೊ ತೋರಿಸೋದಾಗಿ ಬೆದರಿಕೆ ಹಾಕಿದ್ದಾರೆ. ತನಗೆ ಪರಿಚಯ ಇರುವ ಮತ್ತೊಬ್ಬ ಮಹಿಳೆ ಜತೆ ಸೇರಿ ಆತ ಹೇಳಿದವರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ಮರ್ಯಾದೆ ಹಾಗು ಪ್ರಾಣಕ್ಕೆ ಅಂಜಿ ಶಾಸಕ ಮುನಿರತ್ನ ಹೇಳಿದಂತೆ ಕೇಳಿದ್ದೇನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯಾವ್ಯಾವ ಸೆಕ್ಷನ್‌ನಡಿ ಕೇಸ್?

354A – ಲೈಂಗಿಕ ದೌರ್ಜನ್ಯ
354C – ಮಹಿಳೆಯರ ಇಚ್ಛೆಗೆ ವಿರುದ್ಧವಾಗಿ ಚಿತ್ರೀಕರಣ
376N(2) – ಸರ್ಕಾರಿ ಸೇವಕನಿಂದ ಅತ್ಯಾಚಾರ
506 – ಜೀವ ಬೆದರಿಕೆ
504 – ಉದ್ದೇಶಪೂರ್ವಕವಾಗಿ ನಿಂದನೆ
120(B) – ಅಪರಾಧಿಕ ಒಳಸಂಚು
149 -ಕಾನೂನು ಬಾಹಿರ ಸಭೆ
406 – ನಂಬಿಕೆ ದ್ರೋಹ
384 – ಸುಲಿಗೆ
308 – ಹತ್ಯೆ ಮಾಡಲು ಪ್ರಯತ್ನ, ಐಟಿ ಆಕ್ಟ್ 66,66e

ಮಹಿಳೆಯೊಬ್ಬರನ್ನು ಮುಂದಿಟ್ಟುಕೊಂಡು ಮುನಿರತ್ನ ಹನಿಟ್ರ್ಯಾಪ್‌ ಮಾಡಿಸುತ್ತಿದ್ದನಂತೆ. ತನಗೆ ಆಗದವರನ್ನು ಮಟ್ಟ ಹಾಕಲು ಹನಿಟ್ರ್ಯಾಪ್‌ ಮಾಡಿ ಅವರಿಗೆ ಏಡ್ಸ್‌ ಸೋಂಕಿತರ ರಕ್ತ ಇಂಜೆಕ್ಟ್‌ ಮಾಡಿಸುತ್ತಿದ್ದ ಎನ್ನಲಾಗಿದೆ. ಮುನಿರತ್ನನ ಈ ಭಯಾನಕ ಕೃತ್ಯಕ್ಕೆ ಹಲವರು ಬಲಿಯಾಗಿದ್ದಾರೆ. ತನ್ನ ಎದುರಾಳಿ ಸ್ಥಳೀಯ ಕಾರ್ಪೋರೇಟರ್‌ಗಳನ್ನು ಸೈಲೆಂಟ್ ಮಾಡಿಸಿದ್ದು ಹೀಗೆ, ಅದರಲ್ಲಿ ಮಾಗಡಿ ಎಂಎಲ್‌ಎ ಸಹ ಒಬ್ಬರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹನಿಟ್ರ್ಯಾಪ್, ಏಡ್ಸ್ ಹರಡಿಸುವ ಕೃತ್ಯ, ಡ್ರಗ್ಸ್ ದಂಧೆ ಬಗ್ಗೆಯೂ ಎಫ್ಐಆರ್‌ನಲ್ಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Use nandini ghee compulsorily in temple prasadam Order of the Department of Religious Endowments
ಕರ್ನಾಟಕ5 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು6 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು6 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು9 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು10 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ10 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್11 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ11 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Dina Bhavishya
ಭವಿಷ್ಯ17 ಗಂಟೆಗಳು ago

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು1 ದಿನ ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌