Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ! - Vistara News

ರಾಜಕೀಯ

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಂತಾ ನಿಮ್ಮ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡುತ್ತಾರೆ. ಇಷ್ಟೆಲ್ಲ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿಗೆ ಎಸ್‌ಐಟಿಯಿಂದ ನೋಟಿಸ್‌ ಕೊಡಲಾಯಿತೇ? 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೆಸಿಫಿಕ್ ಆಗಿ ಚಾರ್ಜ್‌ ಮಾಡುತ್ತಿರುವ ರಾಹುಲ್‌ ಗಾಂಧಿಯನ್ನು ಎಸ್‌ಐಟಿಯವರು ಕರೆಯಬೇಕಲ್ವಾ? ಈಗ ಪೋಕ್ಸೋ ಕೇಸ್ ಹಾಕಲು 16 ವರ್ಷದ ಸಂತ್ರಸ್ತೆಯನ್ನು ಎಸ್‌ಐಟಿಯವರು ಹುಡುಕುತ್ತಿದ್ದಾರೆ ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

VISTARANEWS.COM


on

Prajwal Revanna Case Government work against Revanna HD Kumaraswamy gives details of the case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ (Hassan Pen Drive Case) ಅನ್ನು ನಾನು ವೀಕ್ಷಣೆ ಮಾಡಿಲ್ಲ. ಆ ಪೆನ್‌ಡ್ರೈವ್‌ಗಳಲ್ಲಿರುವ ಅಶ್ಲೀಲ ವಿಡಿಯೊಗಳನ್ನು ನಾನು ನೋಡಿಲ್ಲ. ಈ ವಿಷಯ ಗೊತ್ತಿದ್ದರೆ ನಾನು ಪ್ರಜ್ವಲ್‌ಗೆ ಎಂಪಿ ಟಿಕೆಟ್‌ ಕೊಡುತ್ತಿರಲಿಲ್ಲ. ಇದು ದೇವೇಗೌಡರ ಕುಟುಂಬ ಸರ್ವನಾಶ ಮಾಡಬೇಕೆಂದು ವ್ಯವಸ್ಥಿತ ಸಂಚಾಗಿದೆ. ಈ ಇಡೀ ಪ್ರಕರಣದಲ್ಲಿ ಸರ್ಕಾರ ವ್ಯವಸ್ಥಿತವಾಗಿ ಸಂಚು ರೂಪಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಪೆನ್‌ಡ್ರೈವ್‌ ವಿಷಯ ನನ್ನ ಮುಂದೆ ಬಂದಿದ್ದರೆ ನಾನು ಟಿಕೆಟ್‌ ಕೊಡುತ್ತಿರಲಿಲ್ಲ. ಪ್ರಜ್ವಲ್‌ ರೇವಣ್ಣನಿಗೆ ಟಿಕೆಟ್‌ ಕೊಡುವ ಪ್ರಶ್ನೆಯೇ ಉದ್ಭವ ಆಗುತ್ತಿರಲಿಲ್ಲ. ಆಗ ನಾನು ಟಿಕೆಟ್‌ ನಿರಾಕರಣೆ ಮಾಡಿದ್ದು, ಸ್ಥಳೀಯ ಕಾರ್ಯಕರ್ತರಿಗೆ ಪ್ರಜ್ವಲ್‌ ಸ್ಪಂದಿಸುತ್ತಿರಲಿಲ್ಲ ಎಂಬ ದೂರು ಬಂದಿತ್ತು. ಹಾಗಾಗಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಎಂದು ಹೇಳಿದ್ದೆ ಎಂಬುದಾಗಿ ಸ್ಪಷ್ಟನೆ ನೀಡಿದರು.

ಪೆನ್‌ಡ್ರೈವ್‌ಗಳು ಮಾರ್ಫಿಂಗ್ ಮಾಡಿರೋದಾ? ನಕಲಿಯೋ ನನಗೆ ಗೊತ್ತಿಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬವನ್ನು ಸರ್ವನಾಶ ಮಾಡಬೇಕೆಂಬ ವ್ಯವಸ್ಥಿತ ಸಂಚು ಇಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಗುಡುಗಿದರು.

ನರೇಂದ್ರ ಮೋದಿ ಆಡಳಿತ ತೆಗೆದು ದೆಹಲಿ ಗದ್ದುಗೆ ಹಿಡಿಯಲು ಷಡ್ಯಂತ್ರ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಸಂಚಾಗಿದೆ. ಎಸ್‌ಐಟಿಯು ಕಾಂಗ್ರೆಸ್‌ ಪರವಾಗಿ ಕೆಲಸ ಮಾಡುತ್ತಿದೆ. ಈಗಲೂ ಹೇಳುತ್ತೇನೆ, ಇಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲೇಬೇಕು. ಇದೇ ನಮ್ಮ ಪಕ್ಷದ ನಿರ್ಧಾರವಾಗಿದೆ. ವಕೀಲ ದೇವರಾಜೇಗೌಡ ಏನೆಲ್ಲ ಹೇಳಿದರು. ಏನು ನಡೆಯುತ್ತಾ ಇದೆ ಇಲ್ಲಿ. ಆ ಬಗ್ಗೆ ತನಿಖೆ ಆಗಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಎಸ್‌ಐಟಿಗೆ ಎಚ್‌ಡಿಕೆ ವಾರ್ನಿಂಗ್‌

ಎಸ್‌ಐಟಿ ತನಿಖೆ ಹಾಗೂ ಕಾರ್ಯವೈಖರಿ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ವಾರ್ನಿಂಗ್ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಕಾಂಗ್ರೆಸ್ ನಡೆಗೆ ಎಚ್‌ಡಿಕೆ ಗರಂ ಆಗಿದ್ದಾರೆ. ಕಾಲ ಚಕ್ರ ಉರುಳುತ್ತದೆ, ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ವಾರ್ನ್‌ ಮಾಡಿದ್ದಾರೆ.

ಡಿಕೆಶಿಯನ್ನು ವಜಾ ಮಾಡಿ

ಮಹಾನುಭಾವ ಡಿ.ಕೆ.ಶಿವಕುಮಾರ್ ಹಿಸ್ಟರಿ ತೆಗೆದರೆ ಈ ರೀತಿ ಕೇಸಲ್ಲಿ ಎಕ್ಸ್‌ಪರ್ಟ್ ಎಂಬುದು ಗೊತ್ತಾಗುತ್ತದೆ. ಇಂತಹವರನ್ನು ಇಟ್ಕೊಂಡು ಎಸ್‌ಐಟಿ ಮೂಲಕ ಯಾವ ಪಾರದರ್ಶಕ ತನಿಖೆ ಆಗುತ್ತದೆ? ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ, ಸಂತ್ರಸ್ತೆಯರಿಗೂ ನ್ಯಾಯ ಕೊಡಬೇಕು, ಸತ್ಯ ಗೊತ್ತಾಗಬೇಕು. ಈ ಕೇಸ್‌ನಲ್ಲಿ ಡಿ.ಕೆ. ಶಿವಕುಮಾರ್‌ ಸಂಚು ಕಾಣುತ್ತಿದೆ. ಮೊದಲು ಅವರನ್ನು ಕ್ಯಾಬಿನೆಟ್‌ನಿಂದ ಸಸ್ಪೆಂಡ್ ಮಾಡಬೇಕು. ಈ ಪ್ರಕರಣದಲ್ಲಿ ಡಿಕೆಶಿ ಸಂಚು ಏನಿದೆ? ಆ ಬಗ್ಗೆ ತನಿಖೆ ಆಗಲೇಬೇಕು. ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲಿ ಎಂದು ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಅಲ್ಲದೆ, ಡಿಸಿಎಂ ಡಿಕೆಶಿ ಮುಖ ನೋಡಿದರೆ ಬಾಲ ಸುಟ್ಟ ಬೆಕ್ಕಿನಂತೆಯೇ ಆಗಿದೆ. ದೇವರಾಜೇಗೌಡ ಸ್ಫೋಟಕ ಸುದ್ದಿಗೋಷ್ಠಿ ನಂತರ ಅವರ ಮುಖ ನೋಡಿ ಎಂದು ವ್ಯಂಗ್ಯವಾಡಿದರು.

ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ತನಿಖೆಯಾಗಲಿ ಎಂದು ಬಿಜೆಪಿ ಮುಖಂಡ ವಿವೇಕ್ ರೆಡ್ಡಿ ಆಗ್ರಹಿಸಿದ್ದಾರೆ. ನ್ಯಾಯಯುತ ತನಿಖೆ ನಡೆಯಬೇಕಾದರೆ ನ್ಯಾಯಾಂಗ ತನಿಖೆಗೆ ಈ ಪ್ರಕರಣವನ್ನು ವಹಿಸಿ ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಬೆಳಗಾವಿ ಸಾಹುಕಾರ್ ರಮೇಶ್‌ ಜಾರಕಿಹೊಳಿ ಪ್ರಕರಣ ಏನಾಯಿತು ಈಗ ಎಂಬುದು ಗೊತ್ತಾ? ಮೂವತ್ತು, ನಲವತ್ತು ಕೋಟಿ ರೂಪಾಯಿ ಖರ್ಚು ಮಾಡಿ ಜಾರಕಿಹೊಳಿ ಅವರ ಹೆಸರನ್ನು ಹಾಳು ಮಾಡಿದರು. ಆ ಆಡಿಯೊ ಈಗಲೂ ಓಡಾಡುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಂತಾ ನಿಮ್ಮ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡುತ್ತಾರೆ. ಇಷ್ಟೆಲ್ಲ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿಗೆ ಎಸ್‌ಐಟಿಯಿಂದ ನೋಟಿಸ್‌ ಕೊಡಲಾಯಿತೇ? 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೆಸಿಫಿಕ್ ಆಗಿ ಚಾರ್ಜ್‌ ಮಾಡುತ್ತಿರುವ ರಾಹುಲ್‌ ಗಾಂಧಿಯನ್ನು ಎಸ್‌ಐಟಿಯವರು ಕರೆಯಬೇಕಲ್ವಾ? ಈಗ ಪೋಕ್ಸೋ ಕೇಸ್ ಹಾಕಲು 16 ವರ್ಷದ ಸಂತ್ರಸ್ತೆಯನ್ನು ಎಸ್‌ಐಟಿಯವರು ಹುಡುಕುತ್ತಿದ್ದಾರೆ. 2900 ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬುದಾಗಿ ಸಿಂಗಾಪುರದಲ್ಲೂ ಸುದ್ದಿ ಅಂತೆ ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಹಾಸನ ಡಿಸಿ ವಿರುದ್ಧ ಎಚ್‌ಡಿಕೆ ಗರಂ

ಇದೇ ವೇಳೆ ಶಿಶುಪಾಲ ಹಾಗೂ ಪಾಪದ ಕಥೆ ಹೇಳಿದ್ದ ಹಾಸನ ಡಿಸಿ ಎಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ. ಕೋಲಾರದಲ್ಲಿದ್ದಾಗ ಗಂಡ, ಹೆಂಡತಿ ಏನ್ ಮಾಡಿದ್ದೀರಾ ಅಂತಾ ಗೊತ್ತಿದೆ. ಯಾವುದೋ ಸಮಿತಿಯವರ ಮನವಿ ಪಡೆದು ವ್ಯಂಗ್ಯ ಮಾಡ್ತೀರಾ ಡಿಸಿ ಅವರೇ? ನಿಮ್ಮ ಯೋಗ್ಯತೆ ನನಗೆ ಚೆನ್ನಾಗಿ ಗೊತ್ತು ಕಿಡಿಕಾರಿದರು.

15 ದಿನಗಳಿಂದ ತಲೆಮರೆಸಿಕೊಂಡಿದ್ದಾನಲ್ಲ ಆ ಕಾರ್ತಿಕ್‌ಗೆ ಯಾವ ನೋಟಿಸ್ ಕೊಟ್ಟಿರಿ? ಬ್ಲೂ ಕಾರ್ನರ್ ನೋಟಿಸ್ ಕೊಟ್ಟಿದ್ದೀರಾ? ಲುಕ್‌ ಔಟ್‌ ನೋಟಿಸ್‌ ಕೊಟ್ಟಿರಾ? ಏನು ನಡೆಯುತ್ತಿದೆ ಇಲ್ಲಿ ಎಂದು ಕಿಡಿಕಾರಿದರು.

ಎಚ್.ಡಿ.ರೇವಣ್ಣ ಎಲ್ಲಿಗೂ ಓಡಿ ಹೋಗಿರಲಿಲ್ಲ. ದೇವರಿಗೆ ಕೈಮುಗಿದುಕೊಂಡು ಓಡಾಡಿಕೊಂಡಿದ್ದ. ಅಯ್ಯೋ ದೇವರೇ ಕಾಪಾಡಪ್ಪ ಅಂತಿದ್ದ. ಆದರೆ, ಬೇಕೆಂದೇ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಕಂಪ್ಲೇಂಟ್ ತೆಗೆದುಕೊಳ್ಳಲು ಸಂತ್ರಸ್ತೆಯರನ್ನು ಹುಡುಕುತ್ತಿದ್ದೇವೆ ಎಂದು ಎಸ್‌ಐಟಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಯಾರಿಗೆಲ್ಲ ಹೇಗೆ ಹೆದರಿಸಿ ಕಂಪ್ಲೇಂಟ್ ತೆಗೆದುಕೊಳ್ಳುವುದಕ್ಕೆ ಪ್ರಯತ್ನ ಮಾಡಲಾಗುತ್ತಿದೆ ಎಂಬ ವಿಷಯ ನಮಗೆ ಗೊತ್ತಾಗಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರೇವಣ್ಣ ಪಾತ್ರ ಎಷ್ಟಿದೆ?

ಯಾರೂ ನೇರವಾಗಿ ಎಚ್.ಡಿ.ರೇವಣ್ಣ ಮೇಲೆ ಕಂಪ್ಲೇಂಟ್‌ ಕೊಟ್ಟಿಲ್ಲ. ಕಿಡ್ನ್ಯಾಪ್ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಪಾತ್ರ ಎಷ್ಟಿದೆ ಗೊತ್ತಿದೆಯಾ? ಬೇಲ್ ವಿಚಾರಣೆ ವೇಳೆ ಆ ಹೆಣ್ಣು ಮಗಳ ಕುರಿತು ಎಸ್‌ಪಿಪಿಯ ಮಾತು ಏನು? ಕಿಡ್ನ್ಯಾಪ್ ಆಗಿದ್ದ ಹೆಣ್ಣು ಮಗಳು ಬದುಕಿದ್ದಾಳೆ, ಸತ್ತಿದ್ದಾಳಾ ಅಂದಿದ್ದರು. ಕೊನೆಗೆ ಮೈಸೂರಿನ ಕಾಳೇನಹಳ್ಳಿ ತೋಟದ ಮನೆಯಿಂದ ಕರೆತಂದಿದ್ದರು. ಆ ತೋಟದ ಮನೆಗೆ ಹೋಗಿ ಕರೆತಂದದ್ರಲ್ಲ, ಮಹಜರು ಮಾಡಿದ್ರಾ? ಒಂದೂವರೆ ದಿವಸ ಆದರೂ ಆ ಹೆಣ್ಣು ಮಗಳು ಹೇಳಿಕೆ ಕೊಟ್ಟಿಲ್ಲವಾ? 2 ದಿನವಾದರೂ ಆ ಹೆಣ್ಣು ಮಗಳನ್ನು ಜಡ್ಜ್ ಮುಂದೆ ಹಾಜರು ಪಡಿಸಿಲ್ಲ ಏಕೆ? ಒಬ್ಬ ಜವಾಬ್ದಾರಿಯುತ ಮಂತ್ರಿಯಾಗಿ ಕೆಲಸ ಮಾಡಿದವರು ರೇವಣ್ಣ. ನೀವು ಬರೆಸಿಕೊಂಡ ಹೇಳಿಕೆಗೆ ಎಚ್.ಡಿ.ರೇವಣ್ಣ ಸೈನ್‌ ಮಾಡಬೇಕಾ? ಇದೇನು ಡಿಸಿಎಂ ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಂ? ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮಹಿಳಾ ಆಯೋಗ ಬರೆದಿದ್ದ ಪತ್ರದಲ್ಲಿ ಎಲ್ಲಿಯೂ ಪ್ರಜ್ವಲ್ ರೇವಣ್ಣ ಅವರ ಹೆಸರು ಇಲ್ಲ. ಪ್ರಜ್ವಲ್ ಆಗಲಿ, ರೇವಣ್ಣ ಹೆಸರಾಗಲಿ ಆಯೋಗದ ಪತ್ರದಲ್ಲಿ ಇರಲಿಲ್ಲ. ಆದರೆ, ಸಿಎಂ ತಮ್ಮ ಪತ್ರದಲ್ಲಿ ಪ್ರಜ್ವಲ್ ಹೆಸರನ್ನು ಉಲ್ಲೇಖಿಸುತ್ತಾರೆ. ಏಪ್ರಿಲ್ 28ಕ್ಕೆ ಪೆನ್‌ಡ್ರೈವ್ ಪ್ರಕರಣ ತನಿಖೆಗೆ SIT ರಚನೆ ಮಾಡಿದ್ದರು. ಏಪ್ರಿಲ್ 28ರಂದು ಬೆಂಗಳೂರಿನಲ್ಲಿ ಸಂತ್ರಸ್ತೆಯಿಂದ ಕಂಪ್ಲೇಂಟ್ ಬರೆಸಿದ್ದರು. ಗಣಕಯಂತ್ರದಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ದೂರು ಬರೆಸಿದರು. ಹೊಳೆನರಸೀಪುರದ ಪೊಲೀಸ್‌ ಠಾಣೆಗೆ ಬೆಂಗಳೂರಿನಿಂದ ಕಂಪ್ಲೇಂಟ್ ಬರೆಸಿ ನೀಡಿದರು. ರಾಜ್ಯದ ಗೌರವವನ್ನು ಉಳಿಸಲು SIT ಮಾಡಿದ್ರು ಅಂತ ಖುಷಿ ಇತ್ತು. ಆದರೆ, ಕೊನೆಗೆ ಮಾಡಿದ್ದೇನು? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

ಪತ್ರದಲ್ಲಿ ಪ್ರಜ್ವಲ್‌, ರೇವಣ್ಣ ಹೆಸರೇ ಇಲ್ಲ

ಏಪ್ರಿಲ್ 25ರಂದು ಮಹಿಳಾ ಆಯೋಗದ ಅಧ್ಯಕ್ಷರಿಂದಲೇ ಸಿಎಂಗೆ ಪತ್ರ ಬರೆಯಲಾಗಿದೆ. ಪೆನ್‌ಡ್ರೈವ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಮನವಿ ಮಾಡಲಾಗಿತ್ತು. ಪ್ರಭಾವಿ ರಾಜಕಾರಣಿಗಳಿಂದ ಲೈಂಗಿಕ ದೌರ್ಜನ್ಯ ಅಂತಾ ಬರೆದಿದ್ದರು. ಮಹಿಳಾ ಆಯೋಗದ ಪತ್ರದಲ್ಲಿ ರಾಜಕಾರಣಿ ಯಾರೆಂದು ಹೇಳಿರಲಿಲ್ಲ. ಒಬ್ಬ ಅಲ್ಲ ಎಷ್ಟೋ ರಾಜಕಾರಣಿಗಳು ಎನ್ನುವ ಅರ್ಥದಲ್ಲಿತ್ತು ಆ ಪತ್ರ. ಆ ಬಳಿಕ ಏಪ್ರಿಲ್ 27ರಂದು ಮುಖ್ಯಮಂತ್ರಿಗಳಿಂದ ತನಿಖಾ ತಂಡ ರಚನೆ ಆಗುತ್ತದೆ. ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ತನಿಖಾ ತಂಡ ರಚಿಸುತ್ತೇನೆ ಎಂಬುದಾಗಿ ಹೇಳಿದ್ದನ್ನು ಎಚ್.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Agniveer: ಹುತಾತ್ಮ ʼಅಗ್ನಿವೀರʼನ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ; ರಾಹುಲ್‌ ಗಾಂಧಿ ಆರೋಪ ಠುಸ್‌!

ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯನ್ನು ಉಲ್ಲೇಖಿಸಿ ಸರ್ಕಾರವು ಅಗ್ನಿವೀರರನ್ನು “ಬಳಸಿ-ಎಸೆಯುವ ಕಾರ್ಮಿಕರು” ಎಂದು ಪರಿಗಣಿಸುತ್ತದೆ. ಅವರಿಗೆ “ಹುತಾತ್ಮ” ಸ್ಥಾನಮಾನವನ್ನೂ ನೀಡುವುದಿಲ್ಲ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ್ದರು. ಅನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟೀಕರಣ ನೀಡಿದ್ದರು. ಇದೀಗ ಅಗ್ನಿವೀರ್‌ ಕುಟುಂಬದ ಸದಸ್ಯರೇ ಪರಿಹಾರ ಪಡೆದಿರುವುದಾಗಿ ಹೇಳಿದ್ದಾರೆ.

VISTARANEWS.COM


on

By

Agniveer
Koo

ಕರ್ತವ್ಯದ ವೇಳೆ ಕಳೆದ ವರ್ಷ ಮೃತಪಟ್ಟಿದ್ದ ಮಹಾರಾಷ್ಟ್ರದ (maharastra) ಅಗ್ನಿವೀರ್ (agniveer) ಅಕ್ಷಯ್ ಗವಾಟೆ (Agniveer Akshay Gawate) ಅವರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ 1.08 ಕೋಟಿ ರೂಪಾಯಿ ನೆರವು ನೀಡಲಾಗಿದೆ ಎಂದು ಸೋಮವಾರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಇದರಿಂದಾಗಿ, ಅಗ್ನಿವೀರ್‌ ಯೋಜನೆಯಡಿ ಆಯ್ಕೆಯಾದವರು ಸತ್ತರೆ ಯಾವುದೇ ಪರಿಹಾರ ಸಿಗುವುದಿಲ್ಲ ಎಂದು ಸಂಸತ್‌ನಲ್ಲಿ ಆರೋಪ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮುಖಭಂಗ ಅನುಭವಿಸಿದಂತಾಗಿದೆ.

ಲೋಕಸಭೆಯಲ್ಲಿ (loksabha) ರಕ್ಷಣಾ ಸಚಿವ ರಾಜನಾಥ್ ಸಿಂಗ್ (rajnath singh) ಅವರು ಕರ್ತವ್ಯದ ವೇಳೆಯಲ್ಲಿ ಪ್ರಾಣ ತ್ಯಾಗ ಮಾಡುವ ಅಗ್ನಿವೀರನಿಗೆ 1 ಕೋಟಿ ರೂಪಾಯಿ ಪರಿಹಾರ ಸಿಗುತ್ತದೆ ಎಂದು ಹೇಳಿಕೆ ನೀಡಿದ ಬಳಿಕ ಈ ಹೇಳಿಕೆ ಹೊರಬಿದ್ದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯನ್ನು ಉಲ್ಲೇಖಿಸಿ ಸರ್ಕಾರವು ಅಗ್ನಿವೀರರನ್ನು “ಬಳಸಿ-ಎಸೆಯುವ ಕಾರ್ಮಿಕರು” ಎಂದು ಪರಿಗಣಿಸುತ್ತದೆ. ಅವರಿಗೆ “ಹುತಾತ್ಮ” ಸ್ಥಾನಮಾನವನ್ನೂ ನೀಡುವುದಿಲ್ಲ ಎಂದು ತೀವ್ರವಾಗಿ ಆರೋಪಿಸಿದ್ದರು. ಅನಂತರ ರಾಜನಾಥ್ ಸಿಂಗ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು.

ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಪಿಂಪಲ್ಗಾಂವ್ ಸರೈ ಮೂಲದ ಅಗ್ನಿವೀರ್ ಅಕ್ಷಯ್ ಗವಾಟೆ ಅವರು 2023ರ ಅಕ್ಟೋಬರ್ 21ರಂದು ಸಿಯಾಚಿನ್‌ನಲ್ಲಿ ಕರ್ತವ್ಯದ ವೇಳೆ ಮೃತಪಟ್ಟಿದ್ದರು. ಸೋಮವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅಕ್ಷಯ್ ಅವರ ತಂದೆ ಲಕ್ಷ್ಮಣ ಗವಾಟೆ, ಅಕ್ಷಯ್ ನಿಧನದ ಅನಂತರ ವಿಮಾ ರಕ್ಷಣೆಯಾಗಿ 48 ಲಕ್ಷ ರೂ., 50 ಲಕ್ಷ ರೂ. ಕೇಂದ್ರ ಸರ್ಕಾರದಿಂದ ಮತ್ತು ರಾಜ್ಯ ಸರ್ಕಾರದಿಂದ 10 ಲಕ್ಷ ರೂ ದೊರೆತಿದೆ ಎಂದರು. ಅಕ್ಷಯ್ ಸಹೋದರಿಗೆ ಸರ್ಕಾರಿ ನೌಕರಿ ನೀಡುವಂತೆ ಅವರು ಮನವಿ ಮಾಡಿದರು.

ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

2022ರ ಜೂನ್ 14ರಂದು ಘೋಷಿಸಲಾದ ಅಗ್ನಿಪಥ್ ಯೋಜನೆಯು 17 ಮತ್ತು 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅವರಲ್ಲಿ ಶೇಕಡಾ 25 ರಷ್ಟು ಜನರನ್ನು ಇನ್ನೂ 15 ವರ್ಷಗಳವರೆಗೆ ಉಳಿಸಿಕೊಳ್ಳುವ ಅವಕಾಶವಿದೆ. ಸರ್ಕಾರವು ಇದಕ್ಕಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ವಿಸ್ತರಿಸಿದೆ.

ರಾಹುಲ್ ಆರೋಪ ಸುಳ್ಳು ಎಂದಿದ್ದ ಭಾರತೀಯ ಸೇನೆ

ಸಿಯಾಚಿನ್‌ನಲ್ಲಿ ಮೃತಪಟ್ಟಿರುವ ಭಾರತೀಯ ಸೈನ್ಯದ ʼಅಗ್ನಿವೀರʼನಿಗೆ ಸಂದ ಹಾಗೂ ಸಲ್ಲಲಿರುವ ಆರ್ಥಿಕ ನೆರವಿನ ವಿವರಗಳನ್ನು ಸೈನ್ಯಾಧಿಕಾರಿಗಳು ತಿಳಿಸಿದ್ದು, ರಾಹುಲ್‌ ಗಾಂಧಿ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಈ ಮೊದಲೇ ಹೇಳಿದ್ದರು.

ಸಿಯಾಚಿನ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಅಗ್ನಿವೀರನ ಕುಟುಂಬಕ್ಕೆ ನೀಡಲಾಗುತ್ತಿರುವ ಹಣಕಾಸಿನ ನೆರವಿನ ಬಗ್ಗೆ ಭಾರತೀಯ ಸೈನ್ಯ ಸ್ಪಷ್ಟನೆ ನೀಡಿತ್ತು. ಮೃತರ ಕುಟುಂಬದವರಿಗೆ ಪರಿಹಾರವನ್ನು ಸೈನಿಕ ಸೇವೆಯ ಸಂಬಂಧಿತ ನಿಯಮಗಳ ಮೂಲಕವೇ ನೀಡಲಾಗುತ್ತಿದೆ ಎಂದು ಹೇಳಿತ್ತು. ಮೃತ ಅಗ್ನಿವೀರರ ಕುಟುಂಬದವರಿಗೆ 48 ಲಕ್ಷ ರೂ. ವಿಮಾ ಹಣದ ಮೊತ್ತ, 44 ಲಕ್ಷ ರೂ. ಪರಿಹಾರ, ಅಗ್ನಿವೀರ್‌ನಿಂದ ಸೇವಾ ನಿಧಿ ಕೊಡುಗೆ ಮತ್ತು ಸರ್ಕಾರದಿಂದ ಇಷ್ಟೇ ಪ್ರಮಾಣದ ಹೊಂದಾಣಿಕೆಯ ಕೊಡುಗೆ ಸಂಚಿತ ಬಡ್ಡಿಯೊಂದಿಗೆ ಕೊಡಲಾಗುತ್ತದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿತ್ತು.

ಸೈನಿಕನ ಮರಣದ ದಿನಾಂಕದಿಂದ ನಾಲ್ಕು ವರ್ಷಗಳು ಪೂರ್ಣಗೊಳ್ಳುವವರೆಗಿನ ಉಳಿದ ಸೇವಾವಧಿಯ ವೇತನವನ್ನು ಸಹ ಇದು ಒಳಗೊಂಡಿದೆ. ಪ್ರಸ್ತುತ ಪ್ರಕರಣದಲ್ಲಿ ಈ ಮೊತ್ತ 13 ಲಕ್ಷ ರೂ. ಗಿಂತ ಹೆಚ್ಚು ಇದೆ. ಇನ್ನು ಸಶಸ್ತ್ರ ಪಡೆಗಳ ಯುದ್ಧ ಅಪಘಾತ ನಿಧಿಯಿಂದ 8 ಲಕ್ಷ ರೂ. ಹೆಚ್ಚುವರಿ ಕೊಡುಗೆಯನ್ನು ಸಂಬಂಧಿಕರಿಗೆ ನೀಡಲಾಗುತ್ತದೆ. ತಕ್ಷಣದ ಪರಿಹಾರವಾಗಿ ಒದಗಿಸಲು ಸೇನಾ ಯೋಧರ ಪತ್ನಿಯರ ಕಲ್ಯಾಣ ಸಂಘ (AWWA) 30 ಸಾವಿರ ರೂ. ಆರ್ಥಿಕ ನೆರವು ನೀಡುತ್ತಿದೆ. ಹೀಗಾಗಿ ಒಟ್ಟಾರೆ ಮೊತ್ತ ₹ 1.13 ಕೋಟಿ ದಾಟಲಿದೆ ಎಂದು ಸೇನೆ ತಿಳಿಸಿತ್ತು.

ಅಗ್ನಿವೀರ್‌ಗಳ ಸೇವಾ ನಿಯಮಗಳ ಪ್ರಕಾರ ಮರಣಹೊಂದಿದ, ಯುದ್ಧದಲ್ಲಿ ಗಾಯಗೊಂಡವರಿಗೆ ಅಧಿಕೃತವಾದ ಪರಿಹಾರಗಳು ಇವುಗಳನ್ನು ಒಳಗೊಂಡಿರುತ್ತವೆ. ಕೊಡುಗೆ ರಹಿತ ವಿಮಾ ಮೊತ್ತ 48 ಲಕ್ಷ ರೂ., ಅಗ್ನಿವೀರ್‌ ಸೇವಾ ನಿಧಿ ಶೇ. 30 ಮತ್ತು ಸರ್ಕಾರ ನೀಡುವ ಸಮಾನ ಹೊಂದಾಣಿಕೆಯ ಕೊಡುಗೆ ಮತ್ತು ಅದಕ್ಕೆ ಬಡ್ಡಿ. ಆರ್ಮಿ ವೈವ್ಸ್ ವೆಲ್ಫೇರ್ ಅಸೋಸಿಯೇಷನ್ ​​(AWWA) ನಿಂದ 30 ಸಾವಿರ ರೂ. ತಕ್ಷಣದ ಆರ್ಥಿಕ ನೆರವು ಎಂದು ಸೇನೆ ಈ ಹಿಂದೆಯೇ ತಿಳಿಸಿತ್ತು.

Continue Reading

ಕರ್ನಾಟಕ

KMF Milk Production: ದಿನಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆ; ಕೆಎಂಎಫ್ ಸಾಧನೆ ಬಗ್ಗೆ ಸಿಎಂ ಮೆಚ್ಚುಗೆ‌

KMF Milk Production: ಕೆಎಂಫ್‌ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಕೆಎಂಎಫ್‌ ಸಾಧನೆ ಬಗ್ಗೆ ಮುಚ್ಚುಗೆ ಸೂಚಿಸಿದ್ದಾರೆ.

VISTARANEWS.COM


on

KMF Milk Production
Koo

ಬೆಂಗಳೂರು: ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್‌ನಲ್ಲಿ ದಿನವೊಂದಕ್ಕೆ 90 ಲಕ್ಷ ಲೀಟರ್ ಇತ್ತು. ಸದ್ಯ ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಇದು ಕೆಎಂಎಫ್ (KMF Milk Production) ಇತಿಹಾಸದಲ್ಲಿಯೇ ಮೈಲುಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಕೆಎಂಫ್‌ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಾಲಿನ ಸೊಸೈಟಿಗಳು ರೈತರ ಸಂಘಟನೆ

ಈ ಹಿಂದೆ ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೇರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅಲ್ಲಿಯವರೆಗೂ ಡೇರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು.

ರೈತರಿಗೆ ನೆರವು

ರಾಜ್ಯದಲ್ಲಿ ಸುಮಾರು 16000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೇರಿಗಳಿವೆ. ಒಂದು ಕೋಟಿ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2 ರೂಪಾಯಿ ಹೆಚ್ಚಿಸಲಾಗಿದೆ ಎಂದರು.

ವಿಪಕ್ಷದ ಅಪಪ್ರಚಾರ

ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಅನಿಸುತ್ತಿದೆ. ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ. ಒಂದು ಕೋಟಿ ಲೀ. ಉತ್ಪಾದನೆಯಾದರೆ ಒಂದು ದಿನಕ್ಕೆ 5 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. ಒಂದು ತಿಂಗಳಿಗೆ 150 ಕೋಟಿ, ವರ್ಷಕ್ಕೆ 1800ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ ಎಂದರು.

2 ರೂ. ಇದ್ದ ಪ್ರೋತ್ಸಾಹಧನವನ್ನು 5 ರೂ. ಮಾಡಿದವನು ನಾನು. ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಈ ಬಗ್ಗೆ ತಿಳಿಯದೆ ಮಾತನಾಡುತ್ತಾರೆ ಎಂದರು.

ಇದನ್ನೂ ಓದಿ | Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರಇದನ್ನೂ ಓದಿ |

ಹಾಲಿನ ದರ ಹೆಚ್ಚಳವಾಗಿಲ್ಲ

ಒಂದು ವೇಳೆ ಹಾಲಿನ ಬೆಲೆ ಹೆಚ್ಚಾದರೂ ಕೊಳ್ಳುವವರಿಗೆ ಅದು ಭಾರವಾಗುತ್ತದೆ. ರೈತರಿಗೆ ಭಾರವಾಗುವುದಿಲ್ಲ, ಸಹಾಯವಾಗುತ್ತದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ ಎಂದು ಪುನರುಚ್ಚರಿಸಿದ ಮುಖ್ಯಮಂತ್ರಿಗಳು .
ಗ್ರಾಹಕರಿಗೆ ಪ್ರಮಾಣ ಹೆಚ್ಚು ಮಾಡಿ ಬೆಲೆ ನಿಗದಿ ಮಾಡಿದ್ದರೂ ಕೂಡ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಹಾಲಿನ ಬೆಲೆ ಕಡಿಮೆ ಇದೆ. ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ಹಾಲು ಕೊಡುತ್ತಿರುವುದು ಕರ್ನಾಟಕ ಮಾತ್ರ ಎಂದರು.

Continue Reading

ರಾಜಕೀಯ

K Annamalai: ಕೆ ಅಣ್ಣಾಮಲೈ ಯುಕೆ ಫೆಲೋಶಿಪ್‌ಗೆ ಆಯ್ಕೆ; ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ?

ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಕೆ. ಅಣ್ಣಾಮಲೈ ( K Annamalai) ಅವರು ಬ್ರಿಟನ್‌ನಲ್ಲಿ ಕೋರ್ಸ್ ಮುಗಿಯುವವರೆಗೆ ತಮ್ಮನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

VISTARANEWS.COM


on

By

K Annamalai
Koo

ಲೋಕಸಭಾ ಚುನಾವಣೆಯಲ್ಲಿ (Lok sabha election) ಬಿಜೆಪಿಯಿಂದ (bjp) ತಮಿಳುನಾಡಿನಲ್ಲಿ (tamilnadu) ಸ್ಪರ್ಧಿಸಿ ಸೋತಿದ್ದ ಒಂದು ತಿಂಗಳ ಬಳಿಕ ಕೆ. ಅಣ್ಣಾಮಲೈ ( K Annamalai) ಅವರಿಗೆ ಯುಕೆ (UK) ಫೆಲೋಶಿಪ್‌ ದೊರೆತಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರೂ ಆಗಿರುವ ಕೆ ಅಣ್ಣಾಮಲೈ ಅವರು ಸದ್ಯದಲ್ಲೇ ಲಂಡನ್‌ಗೆ ತೆರಳಲಿದ್ದಾರೆ. ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಮೂರು ತಿಂಗಳ ಕಾಲ ಅವರು ಅಲ್ಲಿ ನೆಲೆಸಲಿದ್ದಾರೆ.

ಫೆಲೋಶಿಪ್ ಕಾರ್ಯಕ್ರಮವು ಸೆಪ್ಟೆಂಬರ್ ಮಧ್ಯದಲ್ಲಿ ಪ್ರಾರಂಭವಾಗಲಿದ್ದು, ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಮೂಲಗಳ ಪ್ರಕಾರ ಅಣ್ಣಾಮಲೈ ಅವರು 2024ರ ಲೋಕಸಭೆ ಚುನಾವಣೆಗೆ ಮುನ್ನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು ಮತ್ತು ಮೇ ತಿಂಗಳಲ್ಲಿ ದೆಹಲಿಯಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದರು. ಬ್ರಿಟನ್‌ನಲ್ಲಿ ಕೋರ್ಸ್ ಮುಗಿಯುವವರೆಗೆ ತಮ್ಮನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಅಣ್ಣಾಮಲೈ ಅವರು ಮನವಿ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಅಣ್ಣಾಮಲೈ ಅವರು ನಾಗರಿಕ ಸೇವೆಯನ್ನು ತೊರೆದ ಅನಂತರ ಅವರು ಪ್ರಾರಂಭಿಸಿದ ಎನ್‌ಜಿಒ ‘ವೀ ದಿ ಲೀಡರ್ಸ್’ ಪ್ರತಿಷ್ಠಾನದ ಸಂಸ್ಥಾಪಕರಾಗಿ ಚೆವೆನಿಂಗ್ ಗುರುಕುಲ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು. ಕಾರ್ಯಕ್ರಮವನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ಆಯೋಜಿಸಿದೆ ಎಂದು ಚೆವೆನಿಂಗ್ ವೆಬ್‌ಸೈಟ್ ತಿಳಿಸಿದೆ.

ಯುಕೆ ವಿದೇಶಾಂಗ ಕಚೇರಿಯು 20 ವರ್ಷಗಳಿಗೂ ಹೆಚ್ಚು ಕಾಲ ಫೆಲೋಶಿಪ್ ಕಾರ್ಯಕ್ರಮವನ್ನು ನಡೆಸುತ್ತಿದೆ. ಯುವ ಸಾಧಕರು ಮತ್ತು ಮಧ್ಯಮ ವೃತ್ತಿಪರರು ಹಾಗೂ ವಿವಿಧ ಹಿನ್ನೆಲೆಯ ವೃತ್ತಿಪರರು ಇಲ್ಲಿ ತಮ್ಮ ನಾಯಕತ್ವ ಸಾಮರ್ಥ್ಯವನ್ನು ಪ್ರದರ್ಶಿಸಬಹುದು ಎಂದು ವೆಬ್‌ಸೈಟ್ ಹೇಳಿದೆ. ಈ ಕುರಿತು ಜುಲೈ 26ರಂದು ಬ್ರಿಟಿಷ್ ಹೈ ಕಮಿಷನ್ ಘೋಷಣೆ ಮಾಡಲಿದ್ದು, ಅಣ್ಣಾಮಲೈ ಸೇರಿ ಸುಮಾರು ಹತ್ತು ವೃತ್ತಿಪರರು ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಚೆವೆನಿಂಗ್ ಗುರುಕುಲ ಫೆಲೋಶಿಪ್ 12 ವಾರಗಳ ಕಾರ್ಯಕ್ರಮವಾಗಿದ್ದು, ಇದಕ್ಕಾಗಿ ಪ್ರತಿ ವರ್ಷ 12 ಅಭ್ಯರ್ಥಿಗಳನ್ನು ಭಾರತದಿಂದ ಗುರುಕುಲ ಫೆಲೋಗಳಾಗಿ ಆಯ್ಕೆ ಮಾಡಲಾಗುತ್ತದೆ. 12 ವಾರಗಳ ವಸತಿ ಕೋರ್ಸ್ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ನಡೆಯಲಿದೆ.

ಫೆಲೋಶಿಪ್‌ಗೆ ಸಂಬಂಧಿಸಿದ ಒಂದೆರಡು ಪೂರ್ವ-ಉದ್ದೇಶಿತ ಕಾರ್ಯಕ್ರಮಗಳಿಗೆ ಅಣ್ಣಾಮಲೈ ಈಗಾಗಲೇ ಹಾಜರಾಗಿದ್ದಾರೆ ಮತ್ತು ಸೆಪ್ಟೆಂಬರ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಹಂಗಾಮಿ ಅಧ್ಯಕ್ಷರನ್ನು ನೇಮಿಸುವ ನಿರೀಕ್ಷೆಯಿದೆ ಮತ್ತು ಸ್ಥಾನಕ್ಕೆ ಹೆಚ್ಚಿನ ಆಕಾಂಕ್ಷಿಗಳು ಇರುವುದರಿಂದ ತೀವ್ರ ಚರ್ಚೆಗಳು ನಡೆಯುತ್ತಿವೆ.

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ 2020ರ ಆಗಸ್ಟ್ ನಲ್ಲಿ ಬಿಜೆಪಿ ಸೇರಿದ್ದರು. ‘ಪಕ್ಷದ ನಿಷ್ಠಾವಂತ ಸೈನಿಕ’ ಎಂದು ಗುರುತಿಸಿಕೊಂಡಿರುವ ಅವರು ಪಕ್ಷಕ್ಕೆ ಸೇರಿದಾಗಿನಿಂದ ರಾಜ್ಯದಲ್ಲಿ ಹಲವಾರು ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರ ಜತೆಗೆ ವಿವಾದಗಳಿಗೂ ಕೇಂದ್ರವಾಗಿದ್ದಾರೆ.

ಇದನ್ನೂ ಓದಿ: Narendra Modi: ನೀಟ್‌ ಅಕ್ರಮ ಕುರಿತು ಸಂಸತ್‌ನಲ್ಲಿ ಮೋದಿ ಪ್ರಸ್ತಾಪ; ವಿದ್ಯಾರ್ಥಿಗಳಿಗೆ ಅವರು ಹೇಳಿದ್ದಿಷ್ಟು

2023ರಲ್ಲಿ ಅಣ್ಣಾಮಲೈ ಅವರು ನಾಲ್ಕು ಆಡಿಯೋ ಟೇಪ್‌ಗಳ ಸರಣಿಯನ್ನು ಬಿಡುಗಡೆ ಮಾಡಿದರು. ಅದರ ಮೂಲಕ ಅವರು ಡಿಎಂಕೆ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. ‘ಡಿಎಂಕೆ ಫೈಲ್‌ಗಳು’ ಎಂಬ ಶೀರ್ಷಿಕೆಯಡಿ, ಆಡಿಯೋ ಟೇಪ್‌ಗಳ ಭಾಗ ಒಂದರಲ್ಲಿ ಪಟ್ಟಿ ಮಾಡಲಾದ ಆಸ್ತಿಗಳು 1.34 ಲಕ್ಷ ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಇದು ಸ್ಟಾಲಿನ್ ಅವರ ಕುಟುಂಬ ಸದಸ್ಯರು ಮತ್ತು ಇತರ ಹಿರಿಯ ನಾಯಕರು ಸೇರಿದಂತೆ 12 ವ್ಯಕ್ತಿಗಳ ಒಡೆತನದಲ್ಲಿದೆ ಎಂದು ಅವರು ಆರೋಪಿಸಿದ್ದರು. ಅಣ್ಣಾಮಲೈ ಈ ಬಾರಿ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಅವರ ನಾಯಕತ್ವದಲ್ಲ ಪಕ್ಷ ತಮಿಳುನಾಡಿನಲ್ಲಿ ಶೇಕಡಾವಾರು ಮತ ಗಳಿಕೆಯಲ್ಲಿ ಭಾರಿ ಸಾಧನೆ ಮಾಡಿದೆ.

Continue Reading

ಕರ್ನಾಟಕ

R Ashok: ಲೂಟಿಯಾದ ದಲಿತರ ಹಣವನ್ನು ಸಿದ್ದರಾಮಯ್ಯ ಜೇಬಿನಿಂದ ಕೊಡ್ತಾರಾ? ಆರ್‌. ಅಶೋಕ್‌ ಪ್ರಶ್ನೆ

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Valmiki Development Corporation Scam Opposition party leader R Ashok has demanded that CM Siddaramaiah should resign
Koo

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇರವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok), ನೈತಿಕತೆಯ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಈ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಸಣ್ಣ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಯ ಗಮನಕ್ಕೆ ಬಾರದೆ 187 ಕೋಟಿ ರೂ. ಮೊತ್ತದ ಹಗರಣ ನಡೆಯಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್‌ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರಬಂದಿದೆ. ಈಗ ಇದನ್ನು ಮುಚ್ಚಿಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಆರ್‌.ಅಶೋಕ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಸಿಎಂ ಸಿದ್ದರಾಮಯ್ಯ ಈ ಹಗರಣ ಮಾಡಿಯೇ ತಮ್ಮ ಸ್ಥಾನ ಭದ್ರ ಮಾಡಿಕೊಳ್ಳಲು ನೋಡಿದ್ದರು. ಹೈಕಮಾಂಡ್‌ಗೆ ಕಪ್ಪ ಸಲ್ಲಿಸದೇ ಇದ್ದಲ್ಲಿ ಸಿಎಂ ಸ್ಥಾನ ಕಳೆದುಕೊಂಡು ಅದನ್ನು ಡಿ.ಕೆ. ಶಿವಕುಮಾರ್‌ಗೆ ಬಿಟ್ಟುಕೊಡಬೇಕಾಗಿತ್ತು. ಅದನ್ನು ತಪ್ಪಿಸಲು ದಲಿತರ ಹಣವನ್ನು ದುರ್ಬಳಕೆ ಮಾಡಿದ್ದಾರೆ. ಸಚಿವ ಬಿ.ನಾಗೇಂದ್ರ ಅವರಿಂದ ರಾಜೀನಾಮೆ ಪಡೆದು ತಮ್ಮ ತಲೆಯನ್ನು ಉಳಿಸಿಕೊಂಡಿದ್ದಾರೆ ಎಂದು ದೂರಿದ್ದಾರೆ.

ದಲಿತರ ಹಣ ಯಾರು ಕೊಡುತ್ತಾರೆ?

ದಲಿತರಿಗೆ ಸೇರಿದ ಒಟ್ಟು 187 ಕೋಟಿ ರೂಪಾಯಿಯನ್ನು ಬೇನಾಮಿ ಐಟಿ ಕಂಪನಿಗಳ ಖಾತೆಗೆ ವರ್ಗಾಯಿಸಲಾಗಿದೆ. ಈವರೆಗೆ ಆರೋಪಿಗಳಿಂದ 14 ಕೋಟಿ ರೂ, ಬ್ಯಾಂಕ್‌ ಖಾತೆಗಳಿಂದ 10 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಉಳಿದ ಹಣವನ್ನು ಸಿಎಂ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ ಅಥವಾ ಕೆಪಿಸಿಸಿ ಬ್ಯಾಂಕ್‌ ಖಾತೆಯಿಂದ ಪಡೆಯಲಾಗುವುದೇ ಎಂಬ ಬಗ್ಗೆ ಮಾಹಿತಿ ಇಲ್ಲ. ನಷ್ಟವಾದ ಈ ಹಣ ದಲಿತರಿಗೆ ಸೇರಿದ್ದು, ಇದನ್ನು ವಾಪಸ್‌ ಪಡೆಯಲು ಏನು ಮಾಡುತ್ತಾರೆ ಎಂದು ಸರ್ಕಾರ ಸ್ಪಷ್ಟ ಮಾಹಿತಿ ನೀಡಬೇಕಿದೆ ಎಂದು ಆರ್‌.ಅಶೋಕ ಒತ್ತಾಯಿಸಿದ್ದಾರೆ.

ಬಾಕಿ ಹಣ ಎಲ್ಲಿ ಹೋಯಿತು? ಅಂದರೆ ಅದನ್ನು ಗುಳುಂ ಮಾಡಲಾಗಿದೆಯೇ? ನಿಗಮದ ಹಣ ಪಕ್ಕದ ತೆಲಂಗಾಣ ರಾಜ್ಯದ ಚಿನ್ನಾಭರಣ ಅಂಗಡಿಗಳು, ಮದ್ಯದ ಅಂಗಡಿಗಳು ಸೇರಿದಂತೆ ನೂರಾರು ಖಾತೆಗಳಿಗೆ ವರ್ಗಾವಣೆ ಆಗಿದೆ. ಅದು ಸಹ ಮಾರ್ಚ್ ತಿಂಗಳ ಅಂತ್ಯದಲ್ಲಿ ನಡೆದಿದೆ. ಅಂತರರಾಜ್ಯ ವಹಿವಾಟು ಆಗಿರುವ ಇಷ್ಟೊಂದು ದೊಡ್ಡ ಬಹುಕೋಟಿ ಹಗರಣವನ್ನು ಸಿಬಿಐಗೆ ಕೊಡಲು ಹಿಂದೇಟು ಯಾಕೆ? ಈ ಹಗರಣಕ್ಕೂ ತೆಲಂಗಾಣ ಚುನಾವಣೆಗೂ ಇರುವ ನಂಟು ಹೊರಬರಬಹುದು ಎಂಬ ಭಯವೇ? ಎಂದು ಅವರು ಮುಖ್ಯಮಂತ್ರಿಯವರನ್ನು ಪ್ರಶ್ನೆ ಮಾಡಿದ್ದಾರೆ.

ವಿಶೇಷ ತನಿಖಾ ದಳ ಯಾರು ಯಾರನ್ನೋ ವಿಚಾರಣೆ ಮಾಡುತ್ತಿದೆ. ಆದರೆ ಈವರೆಗೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂರಿಸಿ ವಿಚಾರಣೆ ನಡೆಸಿಲ್ಲ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಬಳಿ ಪೊಲೀಸರು ಯಾವುದೇ ಪ್ರಶ್ನೆಗಳನ್ನು ಕೇಳಿಲ್ಲ. ಹಣಕಾಸು ಇಲಾಖೆಯ ಗಮನಕ್ಕೆ ಬಾರದೆ ಇದು ನಡೆದಿಲ್ಲ ಎಂದಾದ ಮೇಲೆ ಸಿದ್ದರಾಮಯ್ಯ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Super Computers : ಜಾಗತಿಕ ನಾಯಕತ್ವಕ್ಕಾಗಿ ಭಾರತದಲ್ಲೇ ತಯಾರಾಗುತ್ತಿದೆ ಸೂಪರ್ ಕಂಪ್ಯೂಟರ್​

ಸಿಎಂ ನಿವಾಸಕ್ಕೆ ಮುತ್ತಿಗೆ

ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಲಿಪಶು ಮಾಡಿ ದೊಡ್ಡ ತಲೆಗಳನ್ನು ರಕ್ಷಿಸಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಜುಲೈ 3 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ನಾನು ಕಾರ್ಯಕರ್ತರೊಂದಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದೇವೆ. ಬುಧವಾರ ಬೆಳಗ್ಗೆ 9.30ಕ್ಕೆ ಕುಮಾರಕೃಪಾ ಅತಿಥಿ ಗೃಹದಿಂದ ಮೆರವಣಿಗೆಯಲ್ಲಿ ಹೊರಟು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಆರ್‌.ಅಶೋಕ್‌ ತಿಳಿಸಿದ್ದಾರೆ.

Continue Reading
Advertisement
ಆಟೋಮೊಬೈಲ್58 mins ago

Mahindra Scorpio N : ಮಹೀಂದ್ರಾ ತನ್ನ ಸ್ಕಾರ್ಪಿಯೋ-ಎನ್ Z8 ವೇರಿಯೆಂಟ್​ನಲ್ಲಿ ನೀಡಿದ ಹಲವು ಫೀಚರ್​ಗಳು

suicide news
ಕರ್ನಾಟಕ2 hours ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Aditya L1
ದೇಶ3 hours ago

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

David Miller :
ಪ್ರಮುಖ ಸುದ್ದಿ3 hours ago

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

Sudha Murty
ದೇಶ3 hours ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ4 hours ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ5 hours ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest5 hours ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ5 hours ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Kolar News
ಕರ್ನಾಟಕ5 hours ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌