Amanatullah Khan: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಆಪ್‌ ಎಂಎಲ್‌ಎ ಪುತ್ರನಿಂದ ಹಲ್ಲೆ; ಬಿತ್ತು ಕೇಸ್ - Vistara News

ದೇಶ

Amanatullah Khan: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಆಪ್‌ ಎಂಎಲ್‌ಎ ಪುತ್ರನಿಂದ ಹಲ್ಲೆ; ಬಿತ್ತು ಕೇಸ್

Amanatullah Khan: ನೊಯ್ಡಾದ ಸೆಕ್ಟರ್‌ 95 ಪ್ರದೇಶದಲ್ಲಿರುವ ಪೆಟ್ರೋಲ್‌ ಬಕ್‌ನಲ್ಲಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಕಾರಿನ ಡಿಕ್ಕಿಯಿಂದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ, ಹಲ್ಲೆ ಮಾಡುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಾದ ಬಳಿಕ ಸಿಸಿಟಿವಿ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ. ಜನ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Amanatullah Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳು, ಅವರ ಕುಟುಂಬಸ್ಥರಿಗೊಂದು ದುರಹಂಕಾರ ಇರುತ್ತದೆ. ಹಣ, ಅಧಿಕಾರದ ಮದವು ಅವರನ್ನು ಸಾರ್ವಜನಿಕರೊಂದಿಗೆ ದುರಹಂಕಾರದಿಂದ, ದರ್ಪದಿಂದ ವರ್ತಿಸುವ ಹಾಗೆ ಮಾಡುತ್ತದೆ. ಚುನಾವಣೆ ಸಂದರ್ಭ ಹೊರತುಪಡಿಸಿ ಅವರು ಉಳಿದ ಸಮಯದಲ್ಲಿ ಅಹಂಕಾರದಿಂದಲೇ ವರ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಮ್‌ ಆದ್ಮಿ ಪಕ್ಷದ (Aam Aadmy Party) ಶಾಸಕ ಅಮಾನತುಲ್ಲಾ ಖಾನ್‌ ಅವರ ಪುತ್ರನು ಪೆಟ್ರೋಲ್‌ ಪಂಪ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಆತನ ವಿರುದ್ಧ ಕೇಸ್‌ ದಾಖಲಾಗಿದೆ.

ನೊಯ್ಡಾದ ಸೆಕ್ಟರ್‌ 95 ಪ್ರದೇಶದಲ್ಲಿರುವ ಪೆಟ್ರೋಲ್‌ ಬಕ್‌ನಲ್ಲಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಕಾರಿನ ಡಿಕ್ಕಿಯಿಂದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ, ಹಲ್ಲೆ ಮಾಡುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಾದ ಬಳಿಕ ಸಿಸಿಟಿವಿ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ. ವೈರಲ್‌ ಆಗುತ್ತಲೇ ಜನ ಶಾಸಕನ ಪುತ್ರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

ಅಮಾನತುಲ್ಲಾ ಖಾನ್‌ನ ಪುತ್ರನು ಕಾರಿನಲ್ಲಿ ಪೆಟ್ರೋಲ್‌ ಬಂಕ್‌ಗೆ ಬಂದಿದ್ದಾನೆ. ಆದರೆ, ಹಲವು ವಾಹನಗಳನ್ನು ಸಾಲಿನಲ್ಲಿ ನಿಲ್ಲಿಸಿದ ಕಾರಣ, ಕ್ಯೂ ಬಿಟ್ಟು ಹೋಗಿ, ಮೊದಲು ಪೆಟ್ರೋಲ್‌ ಹಾಕಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆಗ ಅಲ್ಲಿದ್ದ ಸಾರ್ವಜನಿಕರು, ಪೆಟ್ರೋಲ್‌ ಬಂಕ್‌ ಸಿಬ್ಬಂದಿಯು ಆತನನ್ನು ತಡೆದಿದ್ದಾರೆ. ಇದರಿಂದ ಕುಪಿತಗೊಂಡ ಎಂಎಲ್‌ಎ ಪುತ್ರನು, ಕಾರಿನ ಡಿಕ್ಕಿಯಲ್ಲಿದ್ದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಇಷ್ಟೆಲ್ಲ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತಂದೆಯೂ ಬಂಕ್‌ಗೆ ಬಂದು ಬೆದರಿಕೆ

ಸಾರ್ವಜನಿಕರ ಜತೆ ಅಸಭ್ಯವಾಗಿ ವರ್ತಿಸಿದ, ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮಗನಿಗೆ ಬುದ್ಧಿ ಮಾತು ಹೇಳಿ, ಪ್ರಕರಣವನ್ನು ತಣ್ಣಗಾಗಿಸುವ ಬದಲು, ಅಮಾನತುಲ್ಲಾ ಖಾನ್‌ ಅವರೇ ಪೆಟ್ರೋಲ್‌ ಬಂಕ್‌ಗೆ ತೆರಳಿ, ಅಲ್ಲಿನ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ವಕ್ಫ್‌ ಬೋರ್ಡ್‌ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳಷ್ಟೇ ಅಮಾನತುಲ್ಲಾ ಖಾನ್‌ ಅವರನ್ನು ಜಾರಿ ನಿರ್ದೇಶನಾಲಯದ ವಿಚಾರಣೆ ನಡೆಸಿದ್ದಾರೆ. ಇವರು ದೆಹಲಿಯ ಓಖ್ಲಾ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದಾರೆ.

ಇದನ್ನೂ ಓದಿ: Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಅಂಬಾನಿ ಮನೆ ಅಡುಗೆಮನೆ ಮೆನು ಹೇಗಿರುತ್ತೆ ಗೊತ್ತಾ? ಪ್ರತಿದಿನ 4000 ರೊಟ್ಟಿ ತಯಾರಾಗುವುದರ ಹಿಂದಿನ ಅಸಲಿ ಕಾರಣವೇನು?

VISTARANEWS.COM


on

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ನಿವಾಸ ‘ಆಂಟಿಲಿಯಾ’ ಕೇವಲ ಐಷಾರಾಮಿ ಜೀವನಕ್ಕೆ ಮಾತ್ರವಲ್ಲ, ಅಲ್ಲಿನ ಶಿಸ್ತುಬದ್ಧ ಆಹಾರ ಪದ್ಧತಿಗೂ ಹೆಸರುವಾಸಿ. ಅಂಬಾನಿ ಕುಟುಂಬದ ಸದಸ್ಯರು ಅಪ್ಪಟ ಸಸ್ಯಾಹಾರಿಗಳಾಗಿದ್ದು, ಅತ್ಯಂತ ಸಾತ್ವಿಕ ಹಾಗೂ ಪೌಷ್ಟಿಕ ಆಹಾರವನ್ನು ಸೇವಿಸುತ್ತಾರೆ. ಮುಖೇಶ್ ಅಂಬಾನಿ ಅವರ ದಿನಚರಿ ಬೆಳಿಗ್ಗೆ ಪಪ್ಪಾಯಿ ರಸ ಮತ್ತು ಇಡ್ಲಿ-ಸಾಂಬಾರ್‌ನೊಂದಿಗೆ ಆರಂಭವಾದರೆ, ನೀತಾ ಅಂಬಾನಿ ಅವರು ಹಣ್ಣುಗಳು ಹಾಗೂ ಡ್ರೈಫ್ರೂಟ್ಸ್ ಗೆ ಆದ್ಯತೆ ನೀಡುತ್ತಾರೆ. ಮಧ್ಯಾಹ್ನದ ಊಟದಲ್ಲಿ ಗುಜರಾತಿ ಶೈಲಿಯ ದಾಲ್, ಅನ್ನ, ರೊಟ್ಟಿ ಮತ್ತು ಸಲಾಡ್‌ಗಳಿದ್ದರೆ, ರಾತ್ರಿಯ ಭೋಜನದಲ್ಲಿ ಆರೋಗ್ಯಕ್ಕೆ ಪೂರಕವಾದ ರಾಗಿ ರೊಟ್ಟಿ ಮತ್ತು ಹಗುರವಾದ ತರಕಾರಿ ಖಾದ್ಯಗಳಿರುತ್ತವೆ.

ಆಂಟಿಲಿಯಾದಲ್ಲಿ ಪ್ರತಿದಿನ ಬರೋಬ್ಬರಿ 4,000 ರೊಟ್ಟಿಗಳು ತಯಾರಾಗುತ್ತವೆ ಎಂಬ ಸುದ್ದಿ ಕೇಳಲು ಅಚ್ಚರಿಯೆನಿಸಿದರೂ ಇದರ ಹಿಂದೆ ಒಂದು ಅಚ್ಚರಿಯ ಕಾರಣವಿದೆ. ಅಂಬಾನಿ ಕುಟುಂಬದ ಸದಸ್ಯರಿಗಾಗಿ ಮಾತ್ರವಲ್ಲದೆ, ಆ ಭವ್ಯ ಬಂಗಲೆಯಲ್ಲಿ ಹಗಲಿರುಳು ಕೆಲಸ ಮಾಡುವ ಸುಮಾರು 600ಕ್ಕೂ ಹೆಚ್ಚು ಸಿಬ್ಬಂದಿಗಳಿಗಾಗಿ ಈ ರೊಟ್ಟಿಗಳನ್ನು ತಯಾರಿಸಲಾಗುತ್ತದೆ. ಭದ್ರತಾ ಸಿಬ್ಬಂದಿ, ಚಾಲಕರು, ಅಡುಗೆಯವರು ಮತ್ತು ತಂತ್ರಜ್ಞರು ಸೇರಿದಂತೆ ಪ್ರತಿಯೊಬ್ಬರಿಗೂ ಮನೆಯ ಸದಸ್ಯರಂತೆಯೇ ಪೌಷ್ಟಿಕ ಮತ್ತು ರುಚಿಕರವಾದ ಊಟವನ್ನು ಇಲ್ಲಿ ನೀಡಲಾಗುತ್ತದೆ. ನೂರಾರು ರೊಟ್ಟಿಗಳನ್ನು ಕ್ಷಣಾರ್ಧದಲ್ಲಿ ತಯಾರಿಸುವ ಅತ್ಯಾಧುನಿಕ ಯಂತ್ರಗಳು ಅಲ್ಲಿವೆ, ಆದರೆ ರುಚಿ ಮತ್ತು ಗುಣಮಟ್ಟಕ್ಕೆ ಯಾವುದೇ ಕುಂದು ಬಾರದಂತೆ ಎಚ್ಚರಿಕೆ ವಹಿಸಲಾಗುತ್ತದೆ.

ಇನ್ನು ಈ ಬೃಹತ್ ಅಡುಗೆಮನೆಯನ್ನು ನಿರ್ವಹಿಸುವ ಅಡುಗೆಯವರ ಬಗ್ಗೆ ಹೇಳುವುದಾದರೆ, ಅವರ ಆಯ್ಕೆ ಪ್ರಕ್ರಿಯೆಯೇ ಒಂದು ರೋಚಕ ಕಥೆ. ದೇಶದ ಅತ್ಯುತ್ತಮ ಹೊಟೇಲ್‌ಗಳ ನುರಿತ ಅಡುಗೆಯವರನ್ನು ಇಲ್ಲಿ ನೇಮಿಸಿಕೊಳ್ಳಲಾಗುತ್ತಿದ್ದು, ಇವರ ಸಂಬಳ ಕೇಳಿದರೆ ಸಾಮಾನ್ಯರು ಬೆಚ್ಚಿಬೀಳುತ್ತಾರೆ. ವರದಿಗಳ ಪ್ರಕಾರ, ಇಲ್ಲಿನ ಮುಖ್ಯ ಅಡುಗೆಯವರು ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಕೇವಲ ಹಣ ಮಾತ್ರವಲ್ಲದೆ, ಅವರಿಗೆ ವಿಮೆ ಮತ್ತು ಅವರ ಮಕ್ಕಳ ಶಿಕ್ಷಣಕ್ಕೂ ನೆರವು ನೀಡಲಾಗುತ್ತದೆ. ಹೀಗೆ ಅಂಬಾನಿ ಮನೆಯ ಅಡುಗೆಮನೆ ಕೇವಲ ಊಟ ತಯಾರಿಸುವ ಸ್ಥಳವಾಗಿರದೆ, ನೂರಾರು ಜನರಿಗೆ ಅನ್ನ ನೀಡುವ ಮತ್ತು ಅತ್ಯುತ್ತಮ ಕೆಲಸಗಾರರಿಗೆ ರಾಜಮರ್ಯಾದೆ ನೀಡುವ ತಾಣವಾಗಿದೆ.

Continue Reading

Latest

ಯುದ್ಧವಿರಾಮ ಅನಿರ್ದಿಷ್ಠಾವಧಿಗೆ ವಿಸ್ತರಣೆ: ಡೋನಾಲ್ಡ್ ಟ್ರಂಪ್‌ ಘೋಷಣೆ

VISTARANEWS.COM


on

Donald trump

ವಾಷಿಂಗ್ಟನ್‌: ಅಮೆರಿಕಾ-ಇಸ್ರೇಲ್‌- ಇರಾನ್‌ ನಡುವಿನ ಯುದ್ಧ ವಿರಾಮಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇವೆ. ಅಷ್ಟರೊಳಗೆ ಯುದ್ಧ ವಿರಾಮ ಅನಿರ್ದಿಷ್ಠಾವಧಿಗೆ ವಿಸ್ತರಣೆಯಾಗಿದೆ.


ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ ನಲ್ಲಿ ಈ ವಿಷಯ ತಿಳಿಸಿರುವ ಅಮೆರಿಕಾ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಇರಾನ್‌ ನಾಯಕರು ಮತ್ತು ಅವರ ಪ್ರತಿನಿಧಿಗಳು ಏಕರೂಪದ ಪ್ರಸ್ತಾವನೆಯೊಂದಿಗೆ ಬರುವವರೆಗೆ ಯುದ್ಧ ವಿರಾಮ ಮುಂದುವರಿಸುತ್ತೇನೆ ಎಂದಿದ್ದಾರೆ.


ಶಾಂತಿ ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನ್‌ ಮನವಿಯನ್ನು ತಾನು ಒಪ್ಪಿಕೊಂಡಿರುವುದಾಗೆ ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ. ಇರಾನ್‌ ಸರ್ಕಾರ ಗಂಭೀರವಾಗಿ ಹಾನಿಗೀಡಾಗಿದೆ. ಹೀಗಾಗಿ ಯುದ್ಧ ವಿರಾಮ ವಿಸ್ತರಿಸುತ್ತಿದ್ದೇನೆ ಹೊರತು ಇದು ಅನಿರಿಕ್ಷಿತವಲ್ಲ ಎಂದು ಹೇಳಿಕೊಂಡಿದ್ದಾರೆ.
ಕಳೆದ ಫೆ.28 ಅಮೆರಿಕಾ-ಇಸ್ರೇಲ್‌ ಜಂಟಿಯಾಗಿ ಇರಾನ್‌ ವಿರುದ್ಧ ಯುದ್ಧ ಆರಂಭಿಸಿದ್ದವು. ಈ ಹಿಂದೆ ಇರಾನ್‌ ನ ವಿದ್ಯುತ್‌ ಸ್ಥಾವರಗಳು, ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ಬಾಂಬ್‌ ದಾಳಿ ನಡೆಸುವುದಾಗಿ ಟ್ರಂಪ್‌ ಗುಡುಗಿದ್ದರು. ಇದನ್ನು ಅಂತರ ರಾಷ್ಟ್ರೀಯ ಕಾನೂನಿನಲ್ಲಿ ಇದಕ್ಕೆ ಅವಕಾಶ ಇಲ್ಲ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ಮತ್ತಿತರ ದೇಶಗಳ ಮುಖಂಡರು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Continue Reading

Latest

ವೈರಲ್ ಬೆಡಗಿ ಕುಂಭಮೇಳದ ಮೋನಾಲಿಸಾ ಬಗ್ಗೆ ಬಿಗ್ ಅಪ್ಡೇಟ್: ಪತ್ನಿ ಗರ್ಭಿಣಿ ಎಂದು ಪೊಲೀಸರಿಗೆ ಪತಿ ಫರ್ಮಾನ್ ಮಾಹಿತಿ

VISTARANEWS.COM


on

ಕುಂಭಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಿದ್ದ ಫೋಟೋ ವೈರಲ್ ಆಗುವ ಮೂಲಕ ರಾತ್ರೋರಾತ್ರಿ ಇಂಟರ್ನೆಟ್‌ ಸೆಲೆಬ್ರಿಟಿಯಾಗಿದ್ದ ಮೋನಾಲಿಸಾ ಭೋಸ್ಲೆ ಈಗ ಮತ್ತೊಂದು ದೊಡ್ಡ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಕೇರಳದ ದೇವಸ್ಥಾನವೊಂದರಲ್ಲಿ ಫರ್ಮಾನ್ ಖಾನ್ ಎಂಬಾತನನ್ನು ವಿವಾಹವಾಗಿದ್ದ ಮೋನಾಲಿಸಾ, ಅಂದಿನಿಂದಲೂ ಅಂತರಧರ್ಮೀಯ ವಿವಾಹ ಮತ್ತು ವಯಸ್ಸಿನ ಕಾರಣಕ್ಕೆ ಸುದ್ದಿಯಲ್ಲಿದ್ದರು. ಇದೀಗ ಆಕೆ ಗರ್ಭಿಣಿಯಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿಯನ್ನು ಆಕೆಯ ಪತಿ ಫರ್ಮಾನ್ ಪೊಲೀಸರಿಗೆ ನೀಡಿದ್ದು, ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ.

ವಾಸ್ತವವಾಗಿ, ಈ ಮದುವೆಯನ್ನು ಮೋನಾಲಿಸಾ ಕುಟುಂಬದವರು ತೀವ್ರವಾಗಿ ವಿರೋಧಿಸಿದ್ದು, ಇದನ್ನು ‘ಲವ್ ಜಿಹಾದ್’ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಮದುವೆಯ ಸಮಯದಲ್ಲಿ ಮೋನಾಲಿಸಾ ಅಪ್ರಾಪ್ತ ವಯಸ್ಕಳಾಗಿದ್ದರು ಎಂದು ಕುಟುಂಬದವರು ದೂರು ನೀಡಿದ್ದರು. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ (NCST) ನಡೆಸಿದ ತನಿಖೆಯಲ್ಲಿ ಮೋನಾಲಿಸಾಗೆ ಕೇವಲ 16 ವರ್ಷ ಎಂದು ತಿಳಿದುಬಂದ ಹಿನ್ನೆಲೆಯಲ್ಲಿ, ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿದೆ. ಪ್ರಸ್ತುತ ಕೇರಳ ಹೈಕೋರ್ಟ್ ಫರ್ಮಾನ್ ಬಂಧನಕ್ಕೆ ಮೇ 20ರವರೆಗೆ ತಡೆಯಾಜ್ಞೆ ನೀಡಿದೆ.

ಇತ್ತೀಚೆಗೆ ಮಧ್ಯಪ್ರದೇಶ ಪೊಲೀಸರು ವಿಚಾರಣೆಗಾಗಿ ಮೋನಾಲಿಸಾರನ್ನು ಹಾಜರುಪಡಿಸುವಂತೆ ಸೂಚಿಸಿದಾಗ, ಆಕೆ ಗರ್ಭಿಣಿಯಾಗಿರುವ ಕಾರಣ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಫರ್ಮಾನ್ ತಿಳಿಸಿದ್ದಾರೆ. ಈ ಹೇಳಿಕೆಯು ತನಿಖಾಧಿಕಾರಿಗಳಲ್ಲಿ ಕುತೂಹಲ ಮೂಡಿಸಿದ್ದು, ಫರ್ಮಾನ್ ನೀಡಿರುವ ಮಾಹಿತಿಯನ್ನು ಪೊಲೀಸರು ಈಗ ವೈದ್ಯಕೀಯ ವರದಿಗಳ ಮೂಲಕ ಪರಿಶೀಲಿಸುತ್ತಿದ್ದಾರೆ. ವೈದ್ಯಕೀಯ ತಪಾಸಣೆಯ ನಂತರವಷ್ಟೇ ಮುಂದಿನ ಕಾನೂನು ಕ್ರಮಗಳ ಬಗ್ಗೆ ಸ್ಪಷ್ಟತೆ ಸಿಗಲಿದ್ದು, ಈ ಹೈಪ್ರೊಫೈಲ್ ಪ್ರಕರಣವು ಈಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

Continue Reading

Latest

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

VISTARANEWS.COM


on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅರನ್ನು ‘ಭಯೋತ್ಪಾದಕ’ ಎಂದು ಟೀಕಿಸಿರುವ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹಿರಿಯ ಬಿಜೆಪಿ ಮಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಎಕ್ಸ್‌ ನಲ್ಲಿ ಅವರು ವಿವರವಾದ ಹೇಳಿಕೆ ನೀಡಿದ್ದು, ಇಂತಹ ಹೇಳಿಕೆ ನಿಮ್ಮ ಅಹಂಕಾರವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆಯಾಚಿಸಬೇಕು ಎಂದೂ ಆಗ್ರಹಪಡಿಸಿದ್ದಾರೆ.


ತೀರಾಕೀಳು ಮಟ್ಟದಲ್ಲಿ ನೀವು ನೀಡಿರುವ ಹೇಳಿಕೆ ನಿಮ್ಮ ದುರಹಂಕಾರದ ಪರಮಾವಧಿ ಮಾತ್ರವಲ್ಲ, ಅದು ನಿಮ್ಮ ಕೊಳಕು, ವಿಷಕಾರಿ ಮನಸ್ಥಿತಿಯನ್ನು ಅನಾವರಣಗೊಳಿಸಿದೆ. ಖರ್ಗೆಯವರೇ, ಪ್ರಧಾನಿ ಮೋದಿ ರವರ ನಾಯಕತ್ವದ ಮೇಲೆ ಅಚಲ ವಿಶ್ವಾಸವಿಟ್ಟು ಭಾರತದ ಜನತೆ ಸತತ ಮೂರನೇ ಬಾರಿಗೆ ಅವರನ್ನು ಪ್ರಧಾನಿ ಪೀಠದಲ್ಲಿ ಕೂರಿಸಿದ್ದಾರೆ. ಅವರನ್ನು ಟೀಕಿಸುವ ಭರದಲ್ಲಿ ಹೀಗೆ ಅವಮಾನಿಸುವುದು ಎಂದರೆ ಮೋದಿ ರವರನ್ನು ಬೆಂಬಲಿಸಿದ ಕೋಟ್ಯಂತರ ಭಾರತೀಯರನ್ನು ಅಪಮಾನಿಸಿದಂತೆ! ಕಾಂಗ್ರೆಸ್ ನಾಯಕರಿಗೆ ಇಂತಹ ದುರ್ವರ್ತನೆ ಅಭ್ಯಾಸವಾಗಿಬಿಟ್ಟಿದೆ. ಚುನಾವಣೆ ಬಂದಾಗಲೆಲ್ಲ ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದು, ಜನರು ನಿಮಗೆ ಪಾಠ ಕಳಿಸುತ್ತಲೇ ಬಂದಿದ್ದಾರೆ. ಆದರೂ ತಿದ್ದಿಕೊಳ್ಳದ ನಿಮ್ಮ ವರ್ತನೆ ನಿಮ್ಮ ಅಹಂಕಾರಕ್ಕೆ ಕನ್ನಡಿ ಹಿಡಿದಿದೆ.


ಖರ್ಗೆಯವರೇ, ಭಾರತದ ಪ್ರಧಾನಿ @narendramodi ರವರು ಅಪ್ರತಿಮ ಜಾಗತಿಕ ನಾಯಕ ಎಂದು ವಿಶ್ವದ ಹಲವಾರು ದೇಶಗಳ ನೇತಾರರು ಕೊಂಡಾಡುತ್ತಿದ್ದಾರೆ. ವಿಶ್ವದ 26ಕ್ಕೂ ಅಧಿಕ ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಮೋದಿ ಅವರನಾಯಕತ್ವವನ್ನು ಗೌರವಿಸಿವೆ. ಇಡೀ ಜಗತ್ತೇ ಭಾರತದತ್ತ ಹೆಮ್ಮೆಯಿಂದ ನೋಡುತ್ತಿರುವಾಗ, ಕೇವಲ ನಿಮ್ಮ ರಾಜಕೀಯ ವೈಷಮ್ಯಕ್ಕಾಗಿ ದೇಶದ ಪ್ರಧಾನಮಂತ್ರಿಗಳ ಬಗ್ಗೆ ಇಷ್ಟು ಕೀಳುಮಟ್ಟದ ಶಬ್ದಗಳನ್ನು ಬಳಸುವುದು, ನಿಮ್ಮ ಕೀಳು ಮನಸ್ಥಿತಿಯನ್ನು ಮತ್ತು ನಿಮ್ಮ ರಾಜಕೀಯ ಹತಾಶೆಯನ್ನು ಸಾಬೀತುಪಡಿಸಿದೆ. ಅಧಿಕಾರದ ಹಪಾಹಪಿಯಲ್ಲಿ, ಒಂದು ಮನೆತನವನ್ನು ಸಂತೋಷಪಡಿಸುವ ಭರದಲ್ಲಿ ನಿಮ್ಮ ಘನತೆಯನ್ನು ಕಳೆದುಕೊಂಡಿದ್ದೀರಿ. ಹಿರಿಯರಾದ ನಿಮ್ಮಿಂದ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನಾಡಿನ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಇಂತಹ ಕೀಳು ಮಟ್ಟದ ಅಸಂಬದ್ಧ ಹೇಳಿಕೆಗೆ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

Continue Reading
Advertisement
Latest16 minutes ago

ಹುಯ್ಯಲೆದೆಯಂತೆ ಇವತ್ತು ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest17 minutes ago

ಎಸ್‌.ಟಿ. ಸಮುದಾಯಕ್ಕೆ ಶೇ.17 ಮೀಸಲಾತಿ ಉಳಿಸಿಕೊಳ್ಳಲು ಹೋರಾಟ ನಡೆಸಿ; ಕಾಂಗ್ರೆಸ್‌ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ

Latest36 minutes ago

ಇದು ಕದನ ವಿರಾಮವೇ?; ಹೊರ್ಮುಜ್‌ನಲ್ಲಿ ಇರಾನ್‌ನ ಮತ್ತೊಂದು ಹಡಗಿಗೆ ತಡೆಯೊಡ್ಡಿದ ಅಮೆರಿಕ

Latest49 minutes ago

ಹೊಸ ರಾಜಕೀಯ ಪಕ್ಷ ಘೋಷಿಸಿದ ಕೆಸಿಆರ್ ಪುತ್ರಿ ಕೆ.ಕವಿತಾ; ಪಕ್ಷದ ಹೆಸರು TRS

Latest1 hour ago

ಇ-ಗಸ್ತು ಪರಿಣಾಮಕಾರಿಯಾಗಿ ಬಳಸಿ ವನ್ಯಜೀವಿ ದಾಳಿ ತಪ್ಪಿಸಿ: ಈಶ್ವರ ಖಂಡ್ರೆ ಕರೆ

Latest19 hours ago

ಇನ್ನು ಮುಂದೆ ಒಳಮೀಸಲಾತಿ ಅನ್ವಯ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

Latest19 hours ago

29 ವರ್ಷಗಳ ‘ನೋ ಕಿಸ್ ಪಾಲಿಸಿ’ ಮುರಿದ ಕಾಜೋಲ್: ಆ ಒಂದು ದೃಶ್ಯಕ್ಕಾಗಿ ಕಟ್ಟುನಿಟ್ಟಿನ ನಿಯಮ ಬದಿಗಿಟ್ಟಿದ್ದೇಕೆ?

Latest19 hours ago

ಒಳ ಮೀಸಲಾತಿ ಹಂಚಿಕೆ: ಎಡಗೈ, ಬಲಗೈ ಜಾತಿಗಳಿಗೆ ತಲಾ ಶೇ. 5.25 ಸ್ಪೃಶ್ಯ ಜಾತಿಗೆ ಶೇ.4.5 ಹಂಚಿಕೆ; ಸಚಿವ ಸಂಪುಟ ಮಹತ್ವದ ನಿರ್ಧಾರ

Latest20 hours ago

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

Latest20 hours ago

ಇಂಜಿನಿಯರಿಂಗ್‌ ಶುಲ್ಕ: ಅಂತಿಮ ನಿರ್ಧಾರ ಮಾಡಿಲ್ಲ: ಸಚಿವ ಡಾ. ಎಂ.ಸಿ. ಸುಧಾಕರ್‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌