SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌! - Vistara News

ಶಿಕ್ಷಣ

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯೂ ತಡವಾಗಿಯಾದರೂ ಗುರುವಾರ ಪ್ರಕಟಗೊಂಡಿದೆ. ಪರೀಕ್ಷೆ ಫೇಲಾದರೂ, ಕಡಿಮೆ ಅಂಕ ಬಂದರೂ ವಿದ್ಯಾರ್ಥಿಗಳು ಬೇಸರವಾಗುವ ಅವಶ್ಯಕತೆ ಇಲ್ಲ. ಯಾಕೆಂದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಮತ್ತೆರಡು ಬಾರಿ ಅವಕಾಶವನ್ನು ಪರೀಕ್ಷಾ ಮಂಡಳಿ ಕಲ್ಪಿಸಿಕೊಟ್ಟಿದೆ.

VISTARANEWS.COM


on

Sslc exam Result 2024
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೇ 9ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟವಿ, ಕಡಿಮೆ ಅಂಕ ಬಂತಲ್ಲ ಎಂದು ಬೇಜಾರಾಗುವ ಅವಶ್ಯಕತೆ ಇಲ್ಲ. ಯಾಕೆಂದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿಗಳಿಗೆ (SSLC Result 2024) ಗುಡ್‌ನ್ಯೂಸ್‌ ನೀಡಿದೆ.

ಅಂದಹಾಗೇ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈಗಾಗಲೇ ಎಸ್‌ಎಸ್‌ಎಲ್‌ಸಿ 1, 2, 3ರ ಹೊಸ ಪರೀಕ್ಷಾ ಮಾದರಿಯನ್ನು ಪರಿಚಯಿಸಿದೆ. ಇದರ ಕ್ರಮವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಅನುತೀರ್ಣರಾಗಿದ್ದರೆ ಅಥವಾ ಕಡಿಮೆ ಅಂಕ ಪಡೆದು ಜಸ್ಟ್‌ ಪಾಸ್‌ ಆಗಿದ್ದರೆ ಅಂತಹ ವಿದ್ಯಾರ್ಥಿಗಳು ಪರೀಕ್ಷೆ 2ರಲ್ಲಿ ಅಂಕವನ್ನು ಸರಿದೂಗಿಸಿಕೊಳ್ಳಬಹುದಾಗಿದೆ. ಕೇವಲ ಫೇಲ್‌ ಆದವರು, ಕಡಿಮೆ ಅಂಕ ಬಂದವರು ಮಾತ್ರವಲ್ಲ ಹೆಚ್ಚು ಅಂಕ ಗಳಿಸಲು ಯಾವುದೇ ವಿದ್ಯಾರ್ಥಿಯಾದರು ಪರೀಕ್ಷೆ 2 ಹಾಗೂ 3ರಲ್ಲಿ ಹಾಜರಾಗಬಹುದು. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದಲೇ ಮುಂದಿನ 1 ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸಲಾಗುತ್ತದೆ. ಇದರಿಂದಾಗಿ ಪರೀಕ್ಷೆ 2-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಹಾಯವಾಗುತ್ತದೆ.

ಎಸ್‌ಎಸ್‌ಎಲ್‌ಸಿಯ ಮೊದಲನೇ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯು ಫೇಲ್‌ ಆಗಿದ್ದರೆ, ಆ ವಿದ್ಯಾರ್ಥಿಯ ಫಲಿತಾಂಶವನ್ನು NC ಎಂದು ತೋರಿಸಲಾಗುತ್ತದೆ. NC ಅಂದರೆ Not Completed ಎಂದು ಪ್ರಕಟಿಸಲಾಗುತ್ತದೆ. ಈ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ 2-3ರಲ್ಲಿ ಬರೆದ ಪರೀಕ್ಷೆಗಳ ಪೈಕಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಅಂತಿಮ ಫಲತಾಂಶವನ್ನು ಪ್ರಕಟಿಸಲಾಗುತ್ತದೆ. ಈ ಮೂಲಕ ಕಡಿಮೆ ಬಂದ ಫಲಿತಾಂಶವನ್ನು ಉತ್ತಮಗೊಳಿಸಿ ವಿದ್ಯಾರ್ಥಿಗಳಿಗೆ ಎರಡೆರಡು ಬಾರಿ ಅವಕಾಶ ಕೊಟ್ಟು ಅವರ ಏಳಿಗೆಗೆ ಇದು ಸಹಕಾರಿ ಆಗಲಿದೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

2023ರ ಜಿಲ್ಲಾವಾರು ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೀಗಿತ್ತು

ಚಿತ್ರದುರ್ಗ -96.8%.
ಮಂಡ್ಯ-96.74%.
ಹಾಸನ-96.68%.
ಬೆಂಗಳೂರು ಗ್ರಾಮಾಂತರ-96.48%.
ಚಿಕ್ಕಬಳ್ಳಾಪುರ-96.15%.
ಕೋಲಾರ-94.6%.
ಚಾಮರಾಜನಗರ -94.32%.
ಮಧುಗಿರಿ- 93.23%.
ಕೊಡಗು-93.19%.
ವಿಜಯನಗರ- 91.41%.
ವಿಜಯಪುರ- 91.23%.
ಚಿಕ್ಕೋಡಿ – 91.07%.
ಉತ್ತರಕನ್ನಡ – 90.53%.
ದಾವಣಗೆರೆ- 90.43%.
ಕೊಪ್ಪಳ- 90.27%.
ಮೈಸೂರು ಜಿಲ್ಲೆ- 89.75%.
ಚಿಕ್ಕಮಗಳೂರು-89.69%.
ಉಡುಪಿ- 89.49%.
ದಕ್ಷಿಣ ಕನ್ನಡ- 89.47%.
ತುಮಕೂರು- 89.43%.
ರಾಮನಗರ- 89.42%.
ಹಾವೇರಿ – 89.11%.
ಶಿರಸಿ- 87.39%.
ಧಾರವಾಡ-86.55%.
ಗದಗ-86.51%.
ಬೆಳಗಾವಿ-85.85%.
ಬಾಗಲಕೋಟೆ-85.14%.
ಕಲಬುರಗಿ-84.51%.
ಶಿವಮೊಗ್ಗ-84.04%.
ರಾಯಚೂರು- 84.02%.
ಬಳ್ಳಾರಿ- 81.54%.
ಬೆಂಗಳೂರು ಉತ್ತರ – 80.93%.
ಬೆಂಗಳೂರು ದಕ್ಷಿಣ – 78.95%.
ಬೀದರ್ – 78.73%.
ಯಾದಗಿರಿ- 75.49%.

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಮನಗರ

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

Govt School : ಶಾಲೆಗೆ ಬರುವ ಬಾಲಕಿಯರು ಎರಡು ಜಡೆ ಹಾಕಿಲ್ಲ ಎಂದು ಅತಿಥಿ ಶಿಕ್ಷಕರು ಮೂವರ ತಲೆಕೂದಲನ್ನೇ (Ramanagar News) ಕತ್ತರಿಸಿದ್ದಾರೆ. ಶಿಕ್ಷಕರ ಕಾರ್ಯಕ್ಕೆ ಪೋಷಕರು ಕಿಡಿಕಾರಿದ್ದಾರೆ. ಇಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

By

ramanagara news
Koo

ರಾಮನಗರ: ಸರ್ಕಾರಿ ಶಾಲೆಯಲ್ಲಿ (Ramanagar News) ಎರಡು ಜಡೆ ಹಾಕಿಲ್ಲವೆಂದು ಶಿಕ್ಷಕರಿಬ್ಬರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ್ದಾರೆ. ಶಿಕ್ಷಕರ ನಡೆಗೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಶಾಲೆಗೆ ಬರುವಾಗ ಎರಡು ಜಡೆ ಹಾಕಿಲ್ಲವೆಂದು ಸಿಟ್ಟಾದ ಇಬ್ಬರು ಶಿಕ್ಷಕರು ಮೂವರು ವಿದ್ಯಾರ್ಥಿನಿಯರಿಗೆ ಕೂದಲು ಕತ್ತರಿಸಿದ್ದಾರೆ. ಹೆಣ್ಮಕ್ಕಳ ತಲೆಗೂದಲು ಕಟ್ ಮಾಡುವುದು ಯಾವ ಸಂಸ್ಕೃತಿ ಸ್ವಾಮಿ ಎಂದು ಪೋಷಕರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಪವಿತ್ರ ಹಾಗೂ ಶಿವಕುಮಾರ್ ಎಂಬ ಶಿಕ್ಷಕರು ವಿದ್ಯಾರ್ಥಿನಿಯರ ಮೇಲೆ ದರ್ಪ ತೋರಿದ್ದಾರೆ. ವಿದ್ಯಾರ್ಥಿನಿಯರು ಪ್ರತಿನಿತ್ಯ ಒಂದು ಜಡೆ ಹಾಕಿಕೊಂಡು ಬರುತ್ತಿದ್ದರು. ಹಾಗಾಗಿ ಕೂದಲು ಕಟ್ ಮಾಡಿದ್ದವಿ ಎಂದು ಸಮಜಾಯಿಷಿಯನ್ನು ನೀಡಿದ್ದಾರೆ. ಪೋಷಕರ ಎದುರು ಘಟನೆ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: Electric shock : ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದವನಿಗೆ ಕರೆಂಟ್‌ ಶಾಕ್‌; ಕ್ಷಣಾರ್ಧದಲ್ಲಿ ಹಾರಿಹೋಯ್ತು ಪ್ರಾಣ

ಅತಿಥಿ ಶಿಕ್ಷಕರ ತಲೆದಂಡ

ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ್ದ ಅತಿಥಿ ಶಿಕ್ಷಕರಿಗೆ ತಲೆದಂಡವಾಗಿದೆ. ಇಬ್ಬರು ಶಿಕ್ಷಕರು ಅಮಾನತು ಮಾಡುವಂತೆ ಶಿಫಾರಸು ಮಾಡಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಮರಿಗೌಡ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಘಟನೆ ಬಗ್ಗೆ ಮೇಲಾಧಿಕಾರಿಗೆ ಪತ್ರ ಬರೆದು, ಅತಿಥಿ ಶಿಕ್ಷಕರಾದ ಶಿವಕುಮಾರ್ ಹಾಗೂ ಪವಿತ್ರ ಅವರಿಗೆ ಅಮಾನತು ಆದೇಶಕ್ಕೆ ರಾಮನಗರ ಜಿಲ್ಲಾ ಡಿಡಿಪಿಐ ಬಸವರಾಜೇಗೌಡಗೆ ವರದಿ ಸಲ್ಲಿಸಿದ್ದಾರೆ. ಘಟನೆ ಬಗ್ಗೆ ಸಂಪೂರ್ಣ ವಿವರಣೆ ಮೂಲಕ ವರದಿ ಸಲ್ಲಿಸಿದ್ದು, ಕೂಡಲೇ ಇಬ್ಬರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

UGCET 2024 ; ಮೊದಲೇ ಸುತ್ತಿನ ಸೀಟು ಹಂಚಿಕೆ ಚಟುವಟಿಕೆ ಶುರುವಾಗಿದ್ದು, ಯುಜಿಸಿಇಟಿ- 2024ರ ಆಪ್ಶನ್ ಎಂಟ್ರಿ ಮಾಡಲು 7 ದಿನಗಳ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಆಪ್ಶನ್ ಎಂಟ್ರಿ ಮಾಡಲು ಇನ್ನೂ ಎರಡು ದಿನಗಳು ಮಾತ್ರ ಬಾಕಿ ಇದೆ.

VISTARANEWS.COM


on

By

UGCET 2024 seat allotment process begins Only a few days left for the option to enter
Koo

ಬೆಂಗಳೂರು: ಯುಜಿಸಿಇಟಿ-24ರ (UGCET 2024) ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಶನ್ (ಆಯ್ಕೆ) ಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಏಳು ದಿನ ಅವಕಾಶ ನೀಡಿತ್ತು. ಅದರಲ್ಲಿ ಐದು ದಿನಗಳು ಈಗಾಗಲೇ ಮುಗಿದಿದ್ದು, ಆಪ್ಶನ್ ಎಂಟ್ರಿ ಮಾಡಲು ಇನ್ನೂ ಎರಡು ದಿನಗಳು ಮಾತ್ರ ಬಾಕಿ ಇದೆ. ಜು.29 ಕೊನೆಯ ದಿನ.

ಎಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೆ ಆಪ್ಶನ್ (ಆಯ್ಕೆ) ಗಳನ್ನು ದಾಖಲಿಸಲು ಜುಲೈ 23ರಿಂದ ಪ್ರಕ್ರಿಯೆ ಪ್ರಾರಂಭಿಸಲಾಗಿತ್ತು. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಇಚ್ಛೆಗಳನ್ನು ದಾಖಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದರು.

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿತ್ತು. ಆಪ್ಶನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬಹುದಾಗಿದೆ.

ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಲಿಂಕ್ ನೀಡಲಾಗಿದ್ದು, ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಆಯ್ಕೆ/ಇಚ್ಛೆಗಳ ದಾಖಲೆಗೆ ನಿಗದಿಪಡಿಸಿದ ಕೊನೆ ದಿನದ ನಂತರ ಮೂರು ದಿನಗಳ ಬಳಿಕ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಅದರ ನಂತರ ಮೂರು ದಿನ ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ‌ ನೀಡಲಾಗುತ್ತದೆ. ಮೂರು ದಿನಗಳ ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ಚಟುವಟಿಕೆಗಳ ವಿವರ ಹೀಗಿದೆ
-ಜು.23ರಿಂದಲೇ Option Entry ಪೋರ್ಟಲ್‌ ತೆರೆಯಲಾಗಿದೆ. ಅಭ್ಯರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು. ಆಯ್ಕೆಗಳನ್ನು ದಾಖಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಇಂದಿಗೆ ಐದು ದಿನಗಳು ಮುಗಿದಿದ್ದು, ಇನ್ನೆರಡು ದಿನಗಳು ಮಾತ್ರ ಬಾಕಿ ಇವೆ.

-ಇಚ್ಛೆ/ಆಯ್ಕೆಗಳನ್ನು ದಾಖಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದ 3 ದಿನಗಳ ನಂತರ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

-ಅಣುಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರ ಇಚ್ಛೆ-ಆಯ್ಕೆಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು 3 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಈ ಮೇಲಿನ ಪ್ರಕ್ರಿಯೆ ಮುಕ್ತಾಯವಾದ 3 ದಿನಗಳ ನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

ವೈದ್ಯಕೀಯ ಕೋರ್ಸುಗಳು:

ರಾಷ್ಟ್ರೀಯ ವೈದ್ಯಕೀಯ ಮಂಡಳಿಯು ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ. ಅದರಂತೆ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಆಪ್ಶನ್‌ಗಳನ್ನು ಸೇರಿಸುವ ಬಗ್ಗೆ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಆನ್‌ಲೈನ್‌ ವೆರಿಫಿಕೇಶನ್‌

ಯುಜಿಸಿಇಟಿ-2024ಕ್ಕೆ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿಯಲ್ಲಿ ನಮೂದಿಸಿದ ಮಾಹಿತಿಯನ್ನು ಆಯಾ ಇಲಾಖೆಯ ವೆಬ್‌ಸರ್ವೀಸ್‌ ಮೂಲಕ ಪರಿಶೀಲನೆ ಮಾಡಿ, ಪ್ರಾಧಿಕಾರದ ವೆಬ್‌ಸೈಟ್‌ನ ಲಿಂಕ್‌ನಲ್ಲಿ ಪರಿಶೀಲಿಸಿಕೊಳ್ಳಲು ಜು.29ರಂದು ಅಭ್ಯರ್ಥಿಗಳಿಗೆ ಸೂಚಿಸಲಾಗಿತ್ತು. ಜತೆಗೆ ಅರ್ಜಿಯಲ್ಲಿನ ವಿವರಗಳು ತಪ್ಪಾಗಿದ್ದಲ್ಲಿ ಸರಿಪಡಿಸಿಕೊಳ್ಳಲು ಅಂತಿಮ ಅವಕಾಶ ನೀಡಿ ಆಫ್‌ಲೈನ್‌ ದಾಖಲೆಗಳ ಪರಿಶೀಲನೆಗೆ ಕಳೆದ ಜು.4ರಿಂದ 6ವರೆಗೆ ಅವಕಾಶ ನೀಡಲಾಗಿತ್ತು. ಬಳಿಕ ಜು.18ರಂದು ವೆರಿಫಿಕೇಶನ್‌ ಸ್ಲಿಪ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಿಂಕ್‌ ನೀಡಲಾಗಿತ್ತು. ಇದನ್ನೂ ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಇಂದೇ ಕೊನೆ ದಿನ

ಡಿಸಿಇಟಿ-2024 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಅಛಿ ಆಯ್ಕೆಗೆ, ಚಲನ್ ಡೌನ್‌ಲೋಡ್, ಶುಲ್ಕ ಪಾವತಿ ಮತ್ತು ಕಾಲೇಜಿನಲ್ಲಿ ಪ್ರವೇಶ ಪಡೆಯಲು ದಿನಾಂಕವನ್ನು ವಿಸ್ತರಿಸಲಾಗಿತ್ತು. ಜತೆಗೆ ದಿನಾಂಕಗಳನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿತ್ತು.

ಅದರಂತೆ ಅಛಿ ಗಳನ್ನು ಆಯ್ಕೆ ಮಾಡಲು ನಿನ್ನೆ 26ರ ಮಧ್ಯಾಹ್ನ 1ರ ವರೆಗೆ ಹಾಗೂ ಚಲನ್ ಡೌನ್‌ಲೋಡ್ ಮಾಡಿಕೊಳ್ಳಲು 2 ರವರೆಗೆ, ಶುಲ್ಕ ಪಾವತಿ ಮಾಡಲು ಸಂಜೆ 4 ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈ ದಿನ ಅಂದರೆ 27ರ ಮಧ್ಯಾಹ್ನ 1ರ ವರೆಗೆ ಅಛಿ-1 ಆಯ್ಕೆ ಮಾಡಿ, ಶುಲ್ಕ ಪಾವತಿಸಿ ಮತ್ತು ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಸಂಬಂಧಿಸಿದ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಂಜೆ 4.30 ರವರೆಗೆ ಅವಕಾಶವಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News: ಸ್ಕಾಯ್ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಿದ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ

Bengaluru News: ಶಾಲಾ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಪಠ್ಯಕ್ರಮದಲ್ಲಿ ಸ್ಕಾಯ್ ಸಮರ ಕಲೆಯನ್ನು ಪರಿಚಯಿಸಿದೆ.

VISTARANEWS.COM


on

Apollo International Public School introduced Sqay samara kale as part of the syllabus
Koo

ಬೆಂಗಳೂರು: ಶಾಲಾ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಪಠ್ಯಕ್ರಮದಲ್ಲಿ ಸ್ಕಾಯ್ ಸಮರ ಕಲೆಯನ್ನು (Bengaluru News) ಪರಿಚಯಿಸಿದೆ.

ಗುರುವಾರ ಹಮ್ಮಿಕೊಳ್ಳಲಾಗಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಶ್ಮೀರ ಮೂಲದ ಈ ಸಮರ ಕಲೆಗೆ ಚಾಲನೆ ನೀಡಲಾಯಿತು.

ಶಾಲೆಯ ಪ್ರಾಚಾರ್ಯೆ ಡಾ. ವೇದವತಿ ಬಿ.ಎ. ಮಾತನಾಡಿ, ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ನೆರವಾಗುವ ಈ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಲಾಗಿದೆ. ಸ್ಕಾಯ್ ಸಮರ ಕಲೆಯ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸುವ ಮೂಲಕ ಅವರಲ್ಲಿ ಹೆಮ್ಮೆ, ಶಿಸ್ತು ಹಾಗೂ ಸ್ವಯಂ ಜಾಗೃತಿಯನ್ನು ಮೂಡಿಸುವುದು ಇದರ ಮೂಲ ಉದ್ದೇಶ. ಈ ಪುರಾತನ ಸಮರ ಕಲೆಗೆ ಪ್ರೋತ್ಸಾಹ ನೀಡುವ ಮೂಲಕ ನಮ್ಮ ಶಾಲೆಯ ಮತ್ತು ಮಕ್ಕಳ ಬೆಳವಣಿಗೆ ಸಹಕಾರಿಯಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru Power Cut: ಜು.27, 28, 30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಾರ್ಯಕ್ರಮದಲ್ಲಿ ಭಾರತೀಯ ಸ್ಕಾಯ್ ಫೆಡರೇಶನ್ ಜಂಟಿ ಕಾರ್ಯದರ್ಶಿ ಮೊಹಮದ್ ಅಲಿ, ಅಪೋಲೋ ನ್ಯಾಷನಲ್ ಪಬ್ಲಿಕ್ ಶಾಲೆಯ ಉಪಾಧ್ಯಕ್ಷೆ ಐಶ್ವರ್ಯ ಡಿಕೆಎಸ್ ಹೆಗ್ಡೆ, ಅಂತಾರಾಷ್ಟ್ರೀಯ ಸ್ವರ್ಣ ಪದಕ ವಿಜೇತೆ ಸಾನಿಯಾ ಸುಭಾಷ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

ಈ ವೇಳೆ ಸ್ಕಾಯ್ ಪಟುಗಳಾದ ಸಾನಿಯಾ ಸುಭಾಷ್ ಹಾಗೂ ದಿವ್ಯಾ ಅವರು ಈ ಕಲೆಯ ಕೌಶಲ್ಯಗಳನ್ನು ಪ್ರದರ್ಶಿಸಿ ಪ್ರೇಕ್ಷಕರನ್ನು ರಂಜಿಸಿದರು.

Continue Reading

ದೇಶ

NEET UG 2024: ಕೊನೆಗೂ ನೀಟ್‌ ಫೈನಲ್ ಫಲಿತಾಂಶ ಪ್ರಕಟ; ಟಾಪರ್‌ಗಳ ಸಂಖ್ಯೆ 17ಕ್ಕೆ ಇಳಿಕೆ, ಇಲ್ಲಿದೆ ಪಟ್ಟಿ

NEET UG 2024: ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶ ಹೇಗೆ ನೋಡುವುದು ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

NEET UG 2024
Koo

ನವದೆಹಲಿ: ಸುಪ್ರೀಂ ಕೋರ್ಟ್‌ (Supreme Court) ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಶುಕ್ರವಾರ (ಜುಲೈ 26) ನೀಟ್‌ ಯುಜಿ 2024 (NEET UG 2024) ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ಕೊನೆಗೂ ಪ್ರಕಟಿಸಿದೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ. ನೀಟ್‌ ಕೌನ್ಸೆಲಿಂಗ್‌ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿದುಬಂದಿದೆ.

ಇನ್ನು ಪರಿಷ್ಕೃತ ಫಲಿತಾಂಶದ ಬಳಿಕ ದೇಶದ ಟಾಪರ್‌ಗಳ ಸಂಖ್ಯೆ 17ಕ್ಕೆ ಇಳಿಕೆಯಾಗಿದೆ. ಜೂನ್‌ 4ರಂದು ಪ್ರಕಟವಾದ ಫಲಿತಾಂಶದಲ್ಲಿ 67 ಮಂದಿ ಟಾಪ್‌ ಎನಿಸಿದ್ದರು. ಮೃದುಲ್‌ ಮಾನ್ಯ ಆನಂದ್‌, ಆಯುಷ್‌ ನೌಗ್ರೈಯಾ, ಮಜೀನ್‌ ಮಂಜೂರ್‌, ಪ್ರಚಿತಾ, ಸೌರವ್‌, ದಿವ್ಯಾಂಶ್‌, ಗನ್ಮಯ್‌ ಗಾರ್ಗ್‌, ಅರ್ಘ್ಯದೀಪ್‌ ದತ್ತ, ಶುಭಂ ಸೇನ್‌ಗುಪ್ತಾ, ಆರ್ಯನ್‌ ಯಾದವ್‌, ಪಾಲಾಂಶ ಅಗರ್ವಾಲ್‌, ರಜನೀಶ್‌ ಪಿ., ಶ್ರೀನಂದ್‌ ಶಮೀಲ್, ಮಾನೆ ನೇಹಾ ಕುಲದೀಪ್‌, ತೈಜಸ್‌ ಸಿಂಗ್‌ ಹಾಗೂ ದೇವೇಶ್‌ ಜೋಶಿ ಅವರು ಈ ಬಾರಿ ಟಾಪ್‌ ಬಂದಿದ್ದಾರೆ.

ನೀಟ್‌ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ

  • ನೀಟ್‌ ಅಧಿಕೃತ ವೆಬ್‌ಸೈಟ್‌ exams.nta.ac.in. ಗೆ ಭೇಟಿ ನೀಡಿ
  • NEET UG 2024 revised result ಎಂಬ ನೋಟಿಫಿಕೇಶನ್‌ ಮೇಲೆ ಕ್ಲಿಕ್‌ ಮಾಡಿ
  • ಇದಾದ ಬಳಿಕ ಹೊಸ ವಿಂಡೋ ಓಪನ್‌ ಆಗಲಿದ್ದು, ಲಾಗಿನ್‌ ಮಾಹಿತಿ ಸೇರಿ ಹಲವು ಮಾಹಿತಿ ಒದಗಿಸಿ
  • ಆಗ ನಿಮ್ಮ ಸ್ಕ್ರೀನ್‌ ಮೇಲೆ ನೀಟ್‌ ಯುಜಿ ಫಲಿತಾಂಶ ಗೋಚರವಾಗಲಿದೆ
  • ಭವಿಷ್ಯದ ರೆಫರೆನ್ಸ್‌ಗಳಿಗಾಗಿ ನೀಟ್‌ ಪರೀಕ್ಷೆಯ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಳ್ಳಿ

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Assembly session: ನೀಟ್ ಪರೀಕ್ಷೆ ರದ್ದು, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ನಿರ್ಣಯ; ಉಭಯ ಸದನಗಳಲ್ಲೂ ಅಂಗೀಕಾರ

Continue Reading
Advertisement
Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ3 mins ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ14 mins ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Infiltration
ದೇಶ23 mins ago

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ICW 2024
ಫ್ಯಾಷನ್54 mins ago

ICW 2024: ಮುಂಬರುವ ವೆಡ್ಡಿಂಗ್‌ ಸೀಸನ್‌ ಮೆನ್ಸ್ ವೇರ್‌ ಅನಾವರಣಗೊಳಿಸಿದ ಇಂಡಿಯಾ ಕೌಚರ್‌ ವೀಕ್‌ 2024

Indian Army
ದೇಶ1 hour ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ2 hours ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ2 hours ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Aishwarya Rai Bachchan
ಸಿನಿಮಾ2 hours ago

Aishwarya Rai Bachchan: ಐಶ್ವರ್ಯಾ ರೈ ಧರಿಸಿರುವ V ಆಕಾರದ ಈ ವಜ್ರದುಂಗುರದ ವಿಶೇಷತೆ ಗೊತ್ತೆ?

Mukesh Ambani
ವಾಣಿಜ್ಯ2 hours ago

Mukesh Ambani: ಮುಕೇಶ್ ಅಂಬಾನಿಯ ಒಂದು ದಿನದ ಆದಾಯ 163 ಕೋಟಿ ರೂ! ಒಟ್ಟು ಸಂಪತ್ತೆಷ್ಟು?

Minister Dinesh Gundurao drives for the 5th Kannada Sahitya Sammelana in Bengaluru
ಬೆಂಗಳೂರು3 hours ago

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ7 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ8 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌