Assault Case : ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌! - Vistara News

ಕಲಬುರಗಿ

Assault Case : ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

Assault Case : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಕ್ಷೇತ್ರದಲ್ಲೇ ಹೇಯ ಕೃತ್ಯವೊಂದು ನಡೆದಿದೆ. ಹಣಕ್ಕಾಗಿ ಕಾರು ವ್ಯಾಪಾರಿ ಸೇರಿ ಮತ್ತಿಬ್ಬರನ್ನು ಮನೆಯೊಂದರಲ್ಲಿ ಕೂಡಿ ಹಾಕಿದ ದುರ್ಷಮಿಗಳು, ಅವರನ್ನು ಬೆತ್ತಲೆ ಮಾಡಿ, ಕರೆಂಟ್‌ ಶಾಕ್‌ ಕೊಟ್ಟು ಹಲ್ಲೆ ಮಾಡಿ ಟಾರ್ಚರ್‌ ಮಾಡಿದ್ದಾರೆ.

VISTARANEWS.COM


on

Assault case in kalaburagi
ಆರು ಮಂದಿ ಬಂಧಿತ ಆರೋಪಿಗಳು ಹಾಗೂ ಮಧ್ಯ ಭಾಗದಲ್ಲಿ ಕಿಡ್ನ್ಯಾಪ್‌ ಆಗಿದ್ದ ಅರ್ಜುನ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಹಣಕ್ಕಾಗಿ‌ ಸೆಕೆಂಡ್‌ ಹ್ಯಾಂಡ್‌ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತರಿಬ್ಬರನ್ನು ಅಪಹರಿಸಿರುವ (Kidnap Case) ಘಟನೆ ನಡೆದಿದೆ. ರೂಮಿನಲ್ಲಿ ಮೂವರನ್ನು ಕೂಡಿ ಹಾಕಿ ಬೆತ್ತಲೆ ಮಾಡಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಟಾರ್ಚರ್ ನೀಡಿ, ಹಣವನ್ನು ಲಪಟಾಯಿಸಿರುವ ಘಟನೆ (Assault Case) ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿ ಅರ್ಜುನ್‌ ಮಡಿವಾಳ ಎಂಬಾತನಿಗೆ ಹಲ್ಲೆ ನಡೆಸಲಾಗಿದೆ. ಅರ್ಜುನ್‌ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಮೇ 5ರಂದು ಪರಿಚಯಸ್ಥನಾಗಿದ್ದ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸಲು ಅರ್ಜುನ್‌ ತನ್ನಿಬ್ಬರು ಸ್ನೇಹಿತರಾದ ಎಂ.ಡಿ ಸಮೀರೊದ್ದಿನ್, ಅಬ್ದುಲ್ ರಹೇಮಾನ್ ಜತೆಗೆ ಹೋಗಿದ್ದರು.

ಇದನ್ನೂ ಓದಿ: Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

ಈ ವೇಳೆ ಆರೋಪಿ ರಮೇಶ್‌ ಕಾರಿನ ಟೆಸ್ಟ್‌ ಡ್ರೈವ್‌ ಮಾಡಿ, ಕಾರಿಗೆ ಹಣ ನೀಡುವವರು ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ಇದ್ದಾರೆ. ಅಲ್ಲಿಗೆ ಹೋಗೋಣಾ ಎಂದು ಮೂವರನ್ನು ಕರೆದುಹೋಗಿದ್ದಾರೆ. ನಂತರ ಯಾವುದೋ ಮನೆ ಬಳಿ ಕಾರು ನಿಲ್ಲಿಸಿದಾಗ ಸುಮಾರು ಹತ್ತಾರು ಮಂದಿ ಅರ್ಜುನ್‌ ಹಾಗೂ ಮತ್ತಿಬ್ಬರನ್ನು ಬಲವಂತದಿಂದ ಎಳೆದುಹೋಗಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ರಮೇಶ್‌ ಸೇರಿ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವರು ಹಲ್ಲೆ ನಡೆಸಿದ್ದಾರೆ.

ಕಿರಾತಕರು ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ನಡೆಸಿದ್ದಾರೆ. ಕರೆಂಟ್ ಶಾಕ್ ಬಳಿಕ ಬಡಿಗೆಯಿಂದ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಹಲ್ಲೆ ಮಾಡುವ ದೃಶ್ಯವನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಹಲ್ಲೆ ಮಾಡಿ ಹಣ ಹಾಕಿಸಿಕೊಂಡು, ಬಳಿಕ ಪ್ರತಿ ಬಾರಿ ಕಾರು ಮಾರಾಟ ಮಾಡಿದಾಗ ಕಮಿಷನ್‌ ರೂಪದಲ್ಲಿ ಒಂದು ಲಕ್ಷ ರೂ. ಹಣ ಕೊಡಬೇಕು ಎಂದಿದ್ದಾರೆ. ಕೊಡದೆ ಹೋದರೆ ಮನೆಗೆ ನುಗ್ಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸದ್ಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast : ಕರಾವಳಿಯಲ್ಲಿ ಸೋಮವಾರ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು/ಕಾರವಾರ: ಕರಾವಳಿ ಭಾಗದಲ್ಲಿ ಮಳೆಯು ಅಬ್ಬರಿಸುತ್ತಿದ್ದು, ಜು.8ಕ್ಕೂ ವ್ಯಾಪಕ ಮಳೆಯಾಗುವ (Heavy rain Alert) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿಯ ಉತ್ತರಕನ್ನಡದಲ್ಲಿ ನಾಳೆಯೂ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಬೆಂಗಳೂರಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಇದನ್ನೂ ಓದಿ: Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

ಮಳೆಗೆ ಕುಸಿದು ಬಿದ್ದ ಮನೆ ಗೋಡೆ

ಭಾರೀ ಗಾಳಿ ಮಳೆಗೆ ಗೋಡೆ ಬಿದ್ದು ಮನೆಗೆ ಹಾನಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ಕುಮಟಾ ವಾಲಗಳ್ಳಿ ಗ್ರಾ.ಪಂ ವ್ಯಾಪ್ತಿಯ ಕೋಟೆಗುಡ್ಡದಲ್ಲಿ ಘಟನೆ ನಡೆದಿದೆ. ಕೋಟೆಗುಡ್ಡದ ರಘು ಹಮ್ಮು ಮುಕ್ರಿ ಎಂಬುವವರ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಸಿದು ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಪಕ್ಕದ ವಿಷ್ಣು ಹಮ್ಮು ಮುಕ್ರಿ ಅವರ ಮನೆಯ ಗೋಡೆಯು ಕುಸಿದು ಹಾನಿಯಾಗಿದೆ. ಮನೆ ಕಳೆದುಕೊಂಡ ಕುಟುಂಬಸ್ಥರಿಗೆ ಕೋಟೆಗುಡ್ಡದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಶ್ರಯ ನೀಡಲಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷೆ ಶಾಂತಿ ಮಡಿವಾಳ, ಕಂದಾಯ ಅಧಿಕಾರಿಗಳು, ನೋಡಲ್ ಅಧಿಕಾರಿ ವಿನಾಯಕ ವೈದ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ವಸ್ತುಗಳು ಮಣ್ಣಿನಡಿ ಸಿಲುಕಿ ಹಾನಿಯಾಗಿದೆ. ಮನೆ ಕಳೆದುಕೊಂಡು ರಘು, ವಿಷ್ಣು ಕುಟುಂಬಸ್ಥರು ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Karnataka Rain : ಬೆಂಗಳೂರು, ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ (Heavy Rain Effect) ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮಳೆಗೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಈ ಮಧ್ಯೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ಕಾರವಾರ: ಭಾನುವಾರವೂ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲವೆಡೆ ಮಳೆಯು (Heavy Rain) ಅಬ್ಬರಿಸಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ (Karnataka Rain) ಇತ್ತು.. ಸಂಜೆ ಆಗುತ್ತಿದ್ದಂತೆ ಮೆಜೆಸ್ಟಿಕ್‌, ಕಾಟನ್‌ಪೇಟೆ, ಕೆಆರ್‌ ಮಾರ್ಕೆಟ್‌ ,ಟೌನ್ ಹಾಲ್, ಶಿವಾನಂದ ಸರ್ಕಲ್, ಮೈಸೂರು ಸರ್ಕಲ್ ಸುತ್ತಮುತ್ತ ಮಳೆಯಾಗಿದೆ. ಜಿಟಿ ಜಿಟಿಯಾಗಿ ಶುರುವಾದ ಮಳೆಯು ನಂತರ ಕೆಲ ಕಾಲ ಅಬ್ಬರಿಸಿತ್ತು. ಇತ್ತ ಧಾರವಾಡ ನಗರದಲ್ಲೂ ನಿರಂತರ ಮಳೆಯಾಗಿದೆ. ಬೆಳಗ್ಗೆಯಿಂದಲ್ಲೂ ಬಿಟ್ಟು ಬಿಡದೆ ಸುರಿಯುತ್ತಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಿಂದಾಗಿ ಸವಾರರು ಪರದಾಡಿದರು. ಧಾರವಾಡ ಗ್ರಾಮೀಣ ಕೆಲ ಭಾಗಗಳಲ್ಲಿ ಹೊರತುಪಡಿಸಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.

ನಿರಂತರ ಮಳೆಗೆ ಗುಡ್ಡ ಕುಸಿತ

ಚಿಕ್ಕಮಗಳೂರಿನಲ್ಲಿ ಬಿಟ್ಟುಬಿಡದೆ ಮಳೆಯು ಸುರಿಯುತ್ತಿದ್ದು, ರಸ್ತೆ ಬದಿ ಗುಡ್ಡ ಕುಸಿತ ಹೆಚ್ಚಾಗುತ್ತಿದೆ. ಶೃಂಗೇರಿ ತಾಲೂಕಿನ ಕೂತು ಗೋಡು ಗ್ರಾಮದ ಬಳಿ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಹಲವು ಗಂಟೆಗಳ ಕಾಲ ಸಂಚಾರ ಬಂದ್ ಆಗಿತ್ತು. ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದರು. ಕಳೆದ ಏಳೆಂಟು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪದೆಪದೇ ಗುಡ್ಡದ ಮಣ್ಣು ಕುಸಿಯುತ್ತಿದೆ. ಹೀಗಾಗಿ ತಾಲೂಕು ಆಡಳಿತವು ಗುಡ್ಡಗಾಡು ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಅಡ್ಡಲಾಗಿ ಬಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿತ್ತು. ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಇತ್ತ ಹೆದ್ದಾರಿ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆವರೆಗೆ ವಾಹನಗಳು ಹೆದ್ದಾರಿಯ ಮತ್ತೊಂದು ಬದಿಯಿಂದ ಸಂಚರಿಸುತ್ತಿದ್ದವು.

ಮುಂದುವರಿದ ಪ್ರವಾಸಿಗರ ಹುಚ್ಚಾಟ

ಬೆಳಗಾವಿಯ ಗೋಕಾಕ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನೀರು ರಭಸವಾಗಿ ಧುಮ್ಮಿಕ್ಕುವ ಸ್ಥಳಗಳಲ್ಲಿ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಜತೆಗೆ ಕೆಲವರು ಬಂಡೆಗಲ್ಲುಗಳ‌ ಮೇಲೆ ಕುಳಿತು ಊಟ ಮಾಡುತ್ತಿರುವುದು ಕಂಡು ಬಂದಿದೆ. ಜಲಪಾತಕ್ಕೆ ಭದ್ರತೆ ‌ಒದಗಿಸದೆ ಪೊಲೀಸರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಮಳೆಯಲ್ಲೇ ಟ್ರಾಫಿಕ್‌ಗೆ ಸಿಲುಕಿದ ಪ್ರವಾಸಿಗರು

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಿತಾಣಕ್ಕೆ ಪ್ರವಾಸಿಗರ ದಂಡು ಹರಿದುಬರುತ್ತಿದ್ದು, ಮಳೆಯಲ್ಲೇ ಟ್ರಾಫಿಕ್‌ನಲ್ಲಿ ಸಿಲುಕಿದರು. ಸುಮಾರು ಎರಡು ಗಂಟೆ ಕಾಲ ನಿಂತಲ್ಲೇ ನಿಲ್ಲುಂತಾಯಿತು. ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಟೂರಿಸ್ಟ್‌ಗಳು ಆಗಮಿಸಿದ್ದರು.

ಇದನ್ನೂ ಓದಿ: Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

ಮಳೆಗೆ ಜಲಾಶಯಗಳು ಭರ್ತಿ!

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ರಾಜ್ಯದ ಹಲವೆಡೆ ಜಲಾಶಯಗಳು ಭರ್ತಿಯಾಗುತ್ತಿವೆ. ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯ ಭರ್ತಿಗೆ ಎರಡು ಅಡಿ ಬಾಕಿ‌ ಇದೆ. ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವು ಗಣನೀಯವಾಗಿ ಏರಿಕೆ ಆಗುತ್ತಿದೆ. ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಅಣೆಕಟ್ಟಾಗಿದೆ.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ. ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರೀ ಪ್ರಮಾಣ ಹೆಚ್ಚಳವಾಗುತ್ತಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ನಿನ್ನೆ ಶನಿವಾರ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು ಭಾನುವಾರ 18. 24 ಗೆ ಏರಿಕೆ ಆಗಿದೆ.

ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇರುವುದರಿಂದ ರೈತರಲ್ಲಿ ಸಂತಸ ಹೆಚ್ಚಿಸಿದೆ. ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿ ಆಗಿದೆ. ಇದೇ ರೀತಿ ಒಳ ಹರಿವು ಹೆಚ್ಚಾದರೆ 10 ರಿಂದ 15 ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Kalaburagi News : ಆಕ್ಸಿಜನ್ ಸೋರಿಕೆ! ತಾಲೂಕು ಆಸ್ಪತ್ರೆಯಿಂದ ಹೊರಗೆ ಓಡಿದ ರೋಗಿಗಳು

Kalaburagi News : ತಾಲೂಕು ಆಸ್ಪತ್ರೆ ಆವರಣದಲ್ಲಿದ್ದ ಘಟಕದಿಂದ ಆಕ್ಸಿಜನ್‌ ಸೋರಿಕೆ ಆಗಿತ್ತು. ಈ ವಿಷಯ ತಿಳಿದ ಆಸ್ಪತ್ರೆ ಸಿಬ್ಬಂದಿ ಹಾಗೂ ರೋಗಿಗಳು ಹೊರಗೆ ಓಡಿ ಬಂದಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ದಳ, ಪೊಲೀಸರು ದೌಡಾಯಿಸಿದ್ದರು.

VISTARANEWS.COM


on

By

kalaburagi news
Koo

ಕಲಬುರಗಿ: ಕಲಬುರಗಿ ಜಿಲ್ಲೆಯ (Kalaburagi News) ಚಿಂಚೊಳ್ಳಿ‌ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ (Oxygen leakage) ಆಗಿದೆ ಎಂಬ ಸುದ್ದಿ ಕೇಳಿ ರೋಗಿಗಳು ಶಾಕ್‌ ಆಗಿದ್ದರು. ಆಸ್ಪತ್ರೆ ಹಿಂಭಾಗದಲ್ಲಿದ್ದ ಆಕ್ಸಿಜನ್ ಘಟಕದಿಂದ ಸೋರಿಕೆಯಾಗಿ ಅರ್ಧ ಕಿಮೀ ವ್ಯಾಪ್ತಿವರೆಗೂ ವಾಸನೆ ಮೂಗಿಗೆ ಬಡಿದಿತ್ತು.

ನೋಡನೋಡುತ್ತಿದ್ದ ಒಬ್ಬರಿಂದ ಒಬ್ಬರಿಗೆ ಆಕ್ಸಿಜನ್‌ ಸೋರಿಕೆ ಸುದ್ದಿ ಹರಿದಾಡಿದೆ. ಬಳಿಕ ಆಸ್ಪತ್ರೆಯೊಳಗೆ ಇದ್ದ ಸಿಬ್ಬಂದಿ, ರೋಗಿಗಳು ಭಯಭೀತರಾಗಿ ಹೊರಗೆ ಓಡಿ ಬಂದು ಆವರಣದೊಳಗೆ ಬಂದು ಕುಳಿತುಕೊಳ್ಳುವಂತಾಯಿತು. ಇತ್ತ ಆಕ್ಸಿಜನ್‌ ಟ್ಯಾಂಕ್‌ ಸ್ಫೋಟಗೊಂಡಿದೆ ಎಂಬ ಸುದ್ದಿಯಿಂದಾಗಿ ವೈದ್ಯರು ಮತ್ತು ಸಿಬ್ಬಂದಿ ತಗ್ಗಿದ ವಸತಿಗೃಹಗಳನ್ನು ಖಾಲಿ ಮಾಡಿದ್ದವು.

kalaburagi News

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಚಿಂಚೊಳ್ಳಿ ಪೊಲೀಸರು ದೌಡಾಯಿಸಿದ್ದರು. ಪರಿಶೀಲನೆ ನಡೆಸಿದಾಗ ಆಕ್ಸಿಜನ್‌ ಟ್ಯಾಂಕ್ ತುಂಬಿದ್ದರಿಂದ ಅದರ ಒತ್ತಡವನ್ನು ಹೊರಹಾಕಿದೆ ಎಂದು ಗೊತ್ತಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕಲಬುರಗಿ ಡಿ.ಎಚ್.ಓ ಡಾ.ರತಿಕಾಂತ್ ಸ್ವಾಮಿ, ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂಬುದು ಸುಳ್ಳು ಸುದ್ದಿ. ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಆಕ್ಸಿಜನ್‌ ಟ್ಯಾಂಕ್ ತುಂಬಿದ ನಂತರ ಅದರ ಒತ್ತಡವನ್ನು ಗ್ಯಾಸ್ ರೂಪದಲ್ಲಿ ಹೊರಹಾಕುವ ಸಾಮಾನ್ಯ ಪ್ರಕ್ರಿಯೆ ಆಗಿದೆ. ಆಸ್ಪತ್ರೆಯಲ್ಲಿನ 6 ಕೆ.ಎಲ್. ಸಾಮರ್ಥ್ಯದ ಟ್ಯಾಂಕಿಗೆ ಆಮ್ಲಜನಕ ಭರ್ತಿ ಮಾಡಿದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಎ, ಬಿ, ಸಿ ಎಂಬ ಸುರಕ್ಷತೆಯ ವಾಲ್‌ಗಳ ಮುಖೇನ ಹಂತ ಹಂತವಾಗಿ ಗ್ಯಾಸ್ ಲೀಕ್ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಯಾರು ಆತಂಕ ಪಡಬೇಕಾಗಿಲ್ಲಾ ಎಂದರು.

ಇದನ್ನೂ ಓದಿ: Leopard attack : ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ!

ಐದು ಅಂತಸ್ತಿನ ಕಟ್ಟಡ ಧರಾಶಾಹಿ- ಏಳು ಜನ ದಾರುಣ ಸಾವು

ಅಹ್ಮದಾಬಾದ್‌: ಗೇಮಿಂಗ್‌ ಜೋನ್‌(Gaming zone)ನಲ್ಲಿ ಭಾರೀ ಬೆಂಕಿ ಅವಘಡ(Fire Accident)ದ ಬಳಿಕ ಗುಜರಾತ್‌(Gujarat)ನಲ್ಲಿ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಐದು ಅಂತಸ್ತಿನ ಕಟ್ಟಡ(Building Collapse) ಧರಾಶಾಹಿಯಾಗಿದ್ದು, ಏಳು ಜನ ಧಾರುಣವಾಗಿ ಮೃತಪಟ್ಟಿದ್ದಾರೆ. ಸೂರತ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಅವಶೇಷದಡಿಯಲ್ಲಿ ಹಲವು ಜನ ಸಿಲುಕಿರುವ ಸಾಧ್ಯತೆ ಇದೆ.

ಘಟನೆ ಬಗ್ಗೆ ಸೂರತ್‌ನ ಅಗ್ನಿಶಾಮಕ ಅಧಿಕಾರಿ ಬಸಂತ್‌ ಪರೀಕ್‌ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಈ ದುರಂತ ಸಂಭವಿಸಿದೆ. ರಾತ್ರಿಯಿಡೀ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಏಳು ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕನಿಷ್ಠ ಆರರಿಂದ ಏಳು ಜನರು ಇನ್ನೂ ಅವಶೇಷಗಳಲ್ಲಿ ಸಿಕ್ಕಿಬಿದ್ದಿರುವ ಭಯವಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಎಸ್‌ಡಿಆರ್‌ಎಫ್ (ರಾಜ್ಯ ವಿಪತ್ತು ನಿರ್ವಹಣಾ ಪಡೆ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ನಡೆಸುತ್ತಿವೆ ಎಂದು ಹೇಳಿದ್ದಾರೆ.

ಸುಮಾರು ಐದು ಫ್ಲಾಟ್‌ಗಳಿಗಳನ್ನು ಹೊಂದಿರುವ ಈ ಕಟ್ಟಡವನ್ನು 2016-17ರಲ್ಲಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ಈ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದಾಗ, ಒಳಗೆ ಸಿಲುಕಿರುವವರ ಧ್ವನಿಯನ್ನು ನಾವು ಕೇಳಿದ್ದೇವೆ. ನಾವು ಮಹಿಳೆಯನ್ನು ಜೀವಂತವಾಗಿ ಅವಶೇಷಗಳಿಂದ ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿದ್ದೇವೆ. ಸುಮಾರು ಐದು ಜನರು ಇನ್ನೂ ಒಳಗೆ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಮೇ 25ರಂದು ಸಂಜೆ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 32 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿತ್ತು.

ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ವೀಕೆಂಡ್‌ ಇರುವ ಕಾರಣ ಮಕ್ಕಳು ಆಟವಾಡಲಿ ಎಂಬುದಾಗಿ ಟಿಆರ್‌ಪಿ ಗೇಮಿಂಗ್‌ ಜೋನ್‌ಗೆ ಕರೆದುಕೊಂಡು ಹೋಗಿದ್ದರು. ಇದೇ ವೇಳೆ ಏಕಾಏಕಿ ಅಗ್ನಿ ದುರಂತ ಸಂಭವಿಸಿದ ಕಾರಣ 32 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ. ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ ಸಂಭವಿಸಲು ನಿಖರ ಕಾರಣ ತಿಳಿದುಬಂದಿಲ್ಲ.

ರಾಜ್‌ಕೋಟ್‌ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನೂ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನೂ (SIT) ರಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

Rain News : ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯು (Karnataka weather Forecast) ಅಬ್ಬರಿಸಲಿದ್ದು, ಗಾಳಿ ವೇಗವು ಗಂಟೆಗೆ 40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

karnataka weather Forecast
ಉಡುಪಿಯಲ್ಲಿ ರಸ್ತೆಯೇ ಕಾಣದಷ್ಟು ಅಬ್ಬರಿಸಿರುವ ಮಳೆ.. ರಸ್ತೆ ಕಾಣದೆ ಹೆಡ್‌ಲೈಟ್‌ ಹಾಕಿ ವಾಹನಗಳ ಸಂಚಾರ
Koo

ಬೆಂಗಳೂರು: ರಾಜ್ಯಾದ್ಯಂತ‌ ಮಳೆ ಅಬ್ಬರ (Karnataka Weather Forecast) ಮುಂದುವರಿದಿದೆ. ಕರ್ನಾಟಕ ಕರಾವಳಿಯಲ್ಲಿ ಭಾನುವಾರ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದೆ. ಪ್ರತ್ಯೇಕ ಸ್ಥಳದಲ್ಲಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ. ಇನ್ನೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ, ಕೆಲವಡೆ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಯಚೂರು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಮಳೆಯಾಗಲಿದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ: BESCOM Order : ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತ ಕೇಬಲ್‌ ತೆರವಿಗೆ ಗಡುವು; ಬಿಸಿ ಮುಟ್ಟಿಸಲು ಸಜ್ಜಾದ ಬೆಸ್ಕಾಂ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತಗೆ ಬೆಳಗಾವಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
World Biryani Day:
ಪ್ರಮುಖ ಸುದ್ದಿ22 mins ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest33 mins ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Puri Jagannath Rath Yatra
ಪ್ರಮುಖ ಸುದ್ದಿ46 mins ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

NIA Arrest
ದೇಶ55 mins ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Elephant attack car in Kodagu‌ four people escape
ಕೊಡಗು57 mins ago

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Viral News
ವೈರಲ್ ನ್ಯೂಸ್1 hour ago

Viral News: ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡಿದರೆ 67 ಸಾವಿರ ರೂ. ದಂಡ; ಕಂಡು ಹಿಡಿಯೋದು ಹೇಗೆ?

Bengaluru News Physical Abuse
ಬೆಂಗಳೂರು2 hours ago

Bengaluru News : ʻ ಹುಡುಗ- ಹುಡುಗಿಯರ ಸರ್ವಿಸ್ ಬೇಕಾʼ ಎಂದವನ ಹೆಡೆಮುರಿ ಕಟ್ಟಿದ ಖಾಕಿ ಪಡೆ

Dengue Cases
ಕರ್ನಾಟಕ2 hours ago

Dengue Cases: ರಾಜ್ಯದಲ್ಲಿ ಭಾನುವಾರ 159 ಮಂದಿಗೆ ಡೆಂಗ್ಯೂ ದೃಢ; ಬೆಂಗಳೂರಲ್ಲೇ ಅತಿ ಹೆಚ್ಚು!

Sonakshi Sinha
ಸಿನಿಮಾ2 hours ago

Sonakshi Sinha: ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ವದಂತಿಕೋರರಿಗೆ ನಟಿ ಸೋನಾಕ್ಷಿ ಪ್ರಶ್ನೆ!

Dengue Scare
ಬೆಂಗಳೂರು2 hours ago

Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ5 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ6 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ16 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌