Actor Upendra: ಉಪೇಂದ್ರ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ರಿ-ರಿಲೀಸ್‌ ಆಗಲಿದೆ ಈ ಕ್ಲಾಸಿಕ್‌ ಸಿನಿಮಾ - Vistara News

ಸಿನಿಮಾ

Actor Upendra: ಉಪೇಂದ್ರ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ರಿ-ರಿಲೀಸ್‌ ಆಗಲಿದೆ ಈ ಕ್ಲಾಸಿಕ್‌ ಸಿನಿಮಾ

Actor Upendra: 1998ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ, ನಿರ್ದೇಶನದ ʼಎʼ ಚಿತ್ರವನ್ನು ಅಭಿಮಾನಿಗಳು ಮರೆಯಲು ಸಾಧ್ಯವೇ ಇಲ್ಲ. ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸಿದ್ದ ಈ ಸಿನಿಮಾ ಸಾಂಪ್ರದಾಯಿಕ ಚೌಕಟ್ಟು ಮೀರಿ ಪ್ರಯೋಗಾತ್ಮಕ ಚಿತ್ರ ಎನಿಸಿಕೊಂಡಿತ್ತು. ಇದೀಗ ಈ ಚಿತ್ರವನ್ನು ರಿ-ರಿಲೀಸ್‌ ಮಾಡಲು ಸಿನಿಮಾತಂಡ ಯೋಜನೆ ಹಾಕಿಕೊಂಡಿದೆ.

VISTARANEWS.COM


on

Actor Upendra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ರಿಯಲ್‌ ಸ್ಟಾರ್‌ ಉಪೇಂದ್ರ (Actor Upendra) ತಮ್ಮ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಉಪೇಂದ್ರ ನಟಿಸಿ, ನಿರ್ದೇಶನ ಮಾಡಿದ್ದ ಕ್ಲಾಸಿಕ್ ಸಿನಿಮಾ ʼಎʼ (A) ರಿ-ರಿಲೀಸ್‌ ಆಗಲಿದೆ. 1998ರ ಫೆಬ್ರವರಿ 12ರಂದು ತೆರೆಗೆ ಬಂದಿದ್ದ ಈ ಚಿತ್ರ ಇದೀಗ 26 ವರ್ಷಗಳ ಬಳಿಕ ಮತ್ತೊಮ್ಮೆ ಬಿಡುಗಡೆಯಾಗಲಿದೆ. ಸ್ವತಃ ಉಪೇಂದ್ರ ಅವರೇ ಸೋಷಿಯಲ್‌ ಮೀಡಿಯಾದಲ್ಲಿ ಈ ಸಿನಿಮಾದ ಪ್ರೋಮೊ ರಿಲೀಸ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ತನ್ನ ವಿಭಿನ್ನ ಶೀರ್ಷಿಕೆಯಿಂದಲೇ ಆ ಕಾಲದಲ್ಲಿ ಸಿನಿ ಪ್ರೇಕ್ಷಕರ ಗಮನ ಸೆಳೆದಿದ್ದ ಚಿತ್ರ ʼಎʼ. ಅದುವರೆಗೆ ನಿರ್ದೇಶಕನಾಗಿ ಹಾಗೂ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಉಪೇಂದ್ರ ಈ ಚಿತ್ರದ ಮೂಲಕ ನಾಯಕನಾಗಿಯೂ ಪರಿಚಿತರಾದರು. ವಿಭಿನ್ನ ಕಥಾ ಹಂದರ, ಮೇಕಿಂಗ್‌ ಶೈಲಿಯಿಂದ ಈ ಚಿತ್ರ ನೋಡುಗರನ್ನು ಆಕರ್ಷಿಸಿತ್ತು. ನಾಯಕಿಯಾಗಿ ಚಾಂದಿನಿ ಕಾಣಿಸಿಕೊಂಡ ಈ ಸಿನಿಮಾ ಸಾಂಪ್ರದಾಯಿಕ ಕಟ್ಟು-ಕಟ್ಟಳೆಗಳನ್ನು ಮುರಿದು ಪ್ರಯೋಗಾತ್ಮಕ ಚಿತ್ರ ಎನಿಸಿಕೊಂಡಿತ್ತು.

ಹಿಟ್‌ ಚಿತ್ರ

ಒಬ್ಬ ನಿರ್ದೇಶಕ ಹಾಗೂ ನಾಯಕಿಯ ನಡುವಿನ ಪ್ರೇಮಕಥೆಯನ್ನೆ ಈ ಚಿತ್ರ ಆಧರಿಸಿತ್ತು. ಆದರೆ ಅದನ್ನೇ ಉಪೇಂದ್ರ ವಿಭಿನ್ನವಾಗಿ ತೆರೆ ಮೇಲೆ ತಂದಿದ್ದರು. ಎಲ್ಲವನ್ನೂ ರಿವರ್ಸ್ ಸ್ಕ್ರೀನ್ ಪ್ಲೇಯಲ್ಲಿ ಉಪೇಂದ್ರ ಹೇಳಿದ್ದರು. ಈ ಪ್ರಯೋಗವನ್ನು ವೀಕ್ಷಕರೂ ಮೆಚ್ಚಿಕೊಂಡಿದ್ದರು. ಆ ಮೂಲಕ ಉಪೇಂದ್ರ ಎಂಬ ನಿರ್ದೇಶಕ ಮತ್ತು ನಟ ಗೆಲುವು ಸಾಧಿಸಿದ್ದರು. ಪರಿಣಾಮ ಸೂಪರ್‌ ಚಿತ್ರ ಹಿಟ್‌ ಆಗಿತ್ತು. ಜತೆಗೆ ಸಂಭಾಷಣೆಯೂ ಮೆಚ್ಚುಗೆ ಗಳಿಸಿತ್ತು.

ಮೋಡಿ ಮಾಡಿದ ಸಂಗೀತ

ಚಿತ್ರದ ಯಶಸ್ಸಿನಲ್ಲಿ ಸಂಗೀತದ ಪಾತ್ರವೂ ಮುಖ್ಯವಾಗಿತ್ತು. ಸಿನಿಮಾದ ಹಾಡುಗಳು ಇಂದಿಗೂ ಜನಪ್ರಿಯ. ವಿಶೇಷ ಎಂದರೆ ಗುರು ಕಿರಣ್‌ ʼಎʼ ಸಿನಿಮಾದ ಮೂಲಕ ಮೊದಲ ಬಾರಿ ಸಂಗೀತ ಸಂಯೋಜನೆ ಮಾಡಿದ್ದರು. ಮೊದಲ ಸಿನಿಮಾದಲ್ಲೇ ಸಿಕ್ಸರ್‌ ಭಾರಿಸಿದ್ದರು. ʼಸುಮ್‌ ಸುಮ್ನೆʼ, ʼಚಾಂದಿನಿʼ, ʼಹೇಳ್‌ಕೊಳ್ಳೊಕೆ ಒಂದೂರುʼ, ʼಇದು ಒನ್‌ ಡೇ ಮ್ಯಾಚ್‌ʼ, ʼಮಾರಿ ಕಣ್ಣುʼ ಹೀಗೆ ಸಿನಿಮಾದ ಎಲ್ಲ ಹಾಡುಗಳೂ ಹಿಟ್‌ ಆಗಿದ್ದವು. ಇಂದಿಗೂ ಈ ಹಾಡುಗಳನ್ನು ಸಿನಿ ಪ್ರೇಮಿಗಳು ಗುನುಗುತ್ತಿರುತ್ತಾರೆ. ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ತಯಾರಾದ ಸಿನಿಮಾ ಸುಮಾರು 20 ಕೋಟಿ ರೂ. ಗಳಿಸಿತ್ತು ಎನ್ನಲಾಗಿದೆ.

ಮರು ಬಿಡುಗಡೆ ಯಾಕೆ?

ಚುನಾವಣೆ, ಐಪಿಎಲ್‌ ಮುಂತಾದ ಕಾರಣಕ್ಕೆ ದೊಡ್ಡ ಸಿನಿಮಾಗಳು ಈಗ ರಿಲೀಸ್‌ ಆಗುತ್ತಿಲ್ಲ. ಅಲ್ಲದೆ ಈಗಲೂ ಈ ಚಿತ್ರಕ್ಕೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಲ್ಲದೆ ಇತ್ತೀಚೆಗೆ ರಿ-ರಿಲೀಸ್‌ ಆಗಿದ್ದ ಪುನೀತ್‌ ರಾಜ್‌ ಕುಮಾರ್‌ ಅವರ ʼಜಾಕಿʼ, ʼಅಂಜನಿಪುತ್ರʼ ಮತ್ತು ʼಪವರ್‌ʼ ಸಿನಿಮಾಗಳು ಹಿಟ್‌ ಆಗಿದ್ದವು. ಈ ಎಲ್ಲ ಕಾರಣಗಳಿಂದ ʼಎʼ ಚಿತ್ರವನ್ನು ಮತ್ತೆ ತೆರೆಗೆ ತರಲು ಉಪೇಂದ್ರ ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯಾವಾಗ ರಿ-ರಿಲೀಸ್‌ ಎನ್ನುವುದನ್ನು ಇನ್ನೂ ಘೋಷಿಸಿಲ್ಲ.

ಈ ಮಧ್ಯೆ ಹಲವು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶನಕ್ಕೆ ಇಳಿದಿರುವ ʼಯುಐʼ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಚಿತ್ರದ ʼಟ್ರೋಲ್‌ ಆಗುತ್ತೆʼ ಹಾಡು ಸೂಪರ್‌ ಹಿಟ್‌ ಆಗಿದ್ದು, ಸಿನಿಮಾ ರಿಲೀಸ್‌ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಕನ್ನಡದ ಜತೆಗೆ ವಿವಿಧ ಭಾಷೆಗಳಲ್ಲಿಯೂ ʼಯುಐʼ ತೆರೆಗೆ ಬರಲಿದೆ.

ಇದನ್ನೂ ಓದಿ: UI Cinema: ʼಯುಐʼ ಚಿತ್ರದ ಹಾಡಿನ ಪ್ರೋಮೊ ಔಟ್‌; ಮತ್ತೊಮ್ಮೆ ಪ್ರೇಕ್ಷಕರ ಮೆದುಳಿಗೆ ಕೆಲಸ ಕೊಟ್ಟ ಉಪೇಂದ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Sonakshi Sinha: ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ವದಂತಿಕೋರರಿಗೆ ನಟಿ ಸೋನಾಕ್ಷಿ ಪ್ರಶ್ನೆ!

ಮದುವೆಯಾದ ಬಳಿಕ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಯಾಕೆಂದರೆ ಜನರು ನಾನು ಗರ್ಭಿಣಿ ಎಂದು ಭಾವಿಸುತ್ತಾರೆ ಎಂದು ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಇನ್‌ಸ್ಟಾಗ್ರಾಮ್‌ನಲ್ಲಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಅಷ್ಟೇ ಜಹೀರ್ ಇಕ್ಬಾಲ್ ಅವರನ್ನು ವಿವಾಹವಾದ ಬಳಿಕ ನಟಿ ಸೋನಾಕ್ಷಿ ಆಸ್ಪತ್ರೆಗೆ ತೆರಳಿದ್ದು, ಬಳಿಕ ಅವರು ಗರ್ಭಿಣಿಯಾಗಿರಬಹುದು ಎನ್ನುವ ವದಂತಿಗಳು ಹುಟ್ಟಿದ್ದವು.

VISTARANEWS.COM


on

By

Sonakshi Sinha
Koo

ಮದುವೆಯ (wedding) ಫೋಟೋಗಳನ್ನು ಇನ್‌ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಏಳು ವರ್ಷಗಳ ಇದೇ ದಿನ ನಮ್ಮ ಪ್ರೀತಿ ಹುಟ್ಟಿದ್ದು ಎಂಬುದಾಗಿ ತಮ್ಮ ಪ್ರೇಮ ಕಥೆಯನ್ನು ಹೇಳಿಕೊಂಡಿದ್ದಾರೆ. ತಮ್ಮ ದೀರ್ಘಕಾಲದ ಗೆಳೆಯ ಜಹೀರ್ ಇಕ್ಬಾಲ್ (Zaheer Iqbal) ಅವರನ್ನು ಜೂನ್ 23ರಂದು ವಿವಾಹವಾಗಿದ್ದ ಅವರು ಇದೀಗ ಸಾಮಾಜಿಕ ಜಾಲತಾಣದಲ್ಲಿ (social media) ಮದುವೆಯ ದಿನದಿಂದ ಜಹೀರ್ ಇಕ್ಬಾಲ್ ಅವರೊಂದಿಗೆ ತೆಗೆದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮದುವೆಯಾದ ಬಳಿಕ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಯಾಕೆಂದರೆ ಜನರು ನಾನು ಗರ್ಭಿಣಿ ಎಂದು ಭಾವಿಸುತ್ತಾರೆ ಎಂದು ನಟಿ ಸೋನಾಕ್ಷಿ ಸಿನ್ಹಾ ಇನ್ ಸ್ಟಾಗ್ರಾಮ್ ನಲ್ಲಿ ಹೇಳಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಜಹೀರ್ ಇಕ್ಬಾಲ್ ಅವರನ್ನು ವಿವಾಹವಾದ ಬಳಿಕ ನಟಿ ಸೋನಾಕ್ಷಿ ಆಸ್ಪತ್ರೆಗೆ ತೆರಳಿದ್ದು, ಬಳಿಕ ಅವರು ಗರ್ಭಿಣಿಯಾಗಿರಬಹುದು ಎನ್ನುವ ವದಂತಿಗಳು ಹುಟ್ಟಿದ್ದವು. ಇದು ಸಾಮಾಜಿಕ ಜಾಲತಾಣದಲ್ಲೂ ಭಾರಿ ವೈರಲ್ ಆಗಿತ್ತು. ಇದಕ್ಕೆ ಈಗ ನಟಿ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.

ಮದುವೆಯ ಫೋಟೋಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ನಟಿ, ಏಳು ವರ್ಷಗಳ ಹಿಂದೆ 2017ರ ಜೂನ್ 23ರಂದು ಇದೇ ದಿನ ನಾವು ಪರಸ್ಪರರ ಕಣ್ಣುಗಳಲ್ಲಿ ಪ್ರೀತಿಯನ್ನು ಅದರ ಶುದ್ಧ ರೂಪದಲ್ಲಿ ನೋಡಿದ್ದೇವೆ ಮತ್ತು ಅದನ್ನು ಹಿಡಿದಿಟ್ಟುಕೊಳ್ಳಲು ನಿರ್ಧರಿಸಿದ್ದೇವೆ. ಇಂದು ಆ ಪ್ರೀತಿ ನಮಗೆ ಮಾರ್ಗದರ್ಶನ ನೀಡಿದೆ. ಎಲ್ಲಾ ಸವಾಲುಗಳು ಮತ್ತು ವಿಜಯಗಳ ಮೂಲಕ… ಈ ಕ್ಷಣದವರೆಗೆ ಮುನ್ನಡೆಸುತ್ತದೆ… ಅಲ್ಲಿ ನಮ್ಮ ಕುಟುಂಬಗಳು ಮತ್ತು ನಮ್ಮ ಎರಡೂ ದೇವರುಗಳ ಆಶೀರ್ವಾದದೊಂದಿಗೆ… ನಾವು ಪತಿ ಪತ್ನಿಯಾಗಿದ್ದೇವೆ. ಇಲ್ಲಿಯವರೆಗೆ ಪರಸ್ಪರ ಪ್ರೀತಿ, ಭರವಸೆ ಮತ್ತು ಎಲ್ಲವೂ ಸುಂದರವಾಗಿತ್ತು ಎಂದು ನಟಿ ಸೋನಾಕ್ಷಿ ಹೇಳಿಕೊಂಡಿದ್ದಾರೆ.


ಗರ್ಭಿಣಿಯಾಗಿದ್ದಾರೆ ಎನ್ನುವ ವದಂತಿ

ಇನ್ಸ್‌ಟಾಗ್ರಾಮ್ ನಲ್ಲಿ ಸೋನಾಕ್ಷಿ ಮತ್ತು ಜಹೀರ್ ತಮ್ಮ ಮದುವೆಯ ಉಡುಪನ್ನು ಧರಿಸಿ ಪೋಸ್ ನೀಡುತ್ತಿರುವ ಫೋಟೋವನ್ನು ಹಂಚಿಕೊಂಡ ನಟಿ, ದೇವತೆಗಳು ನಮ್ಮನ್ನು ನೋಡುತ್ತಿದ್ದಾರೆ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ,
ತಾವು ಗರ್ಭಿಣಿ ಎನ್ನುವ ಕುರಿತು ವದಂತಿಗಳ ಬಗ್ಗೆ ಇತ್ತೀಚಿನ ಸಂದರ್ಶನವೊಂದರಲ್ಲಿ ಸೂಕ್ಷ್ಮವಾಗಿ ಗೇಲಿ ಮಾಡಿದ ಅವರು, ಜನರು ತಾನು ಗರ್ಭಿಣಿ ಎಂದು ಭಾವಿಸುವ ಕಾರಣ ಈಗ ಆಸ್ಪತ್ರೆಗೆ ಹೋಗಲು ಸಹ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮದುವೆಯಾದ ಬಳಿಕ ಆದ ಒಂದೇ ಬದಲಾವಣೆಯೆಂದರೆ ಈಗ ನಾವು ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಯಾಕೆಂದರೆ ಮನೆಯಿಂದ ಹೊರಬಂದ ತಕ್ಷಣ ಜನರು ಯೋಚಿಸುತ್ತಾರೆ. ನಾನು ಗರ್ಭಿಣಿಯಾಗಿದ್ದೇನೆ ಎಂದುಕೊಳ್ಳುತ್ತಾರೆ ಎಂದು ಸೋನಾಕ್ಷಿ ತಿಳಿಸಿದ್ದಾರೆ.

ಇದನ್ನೂ ಓದಿ: Sonakshi Sinha: ಮದುವೆಯಾದ ಕೆಲವೇ ದಿನಗಳಲ್ಲಿ ಸೋನಾಕ್ಷಿ ಸಿನ್ಹಾ ಗರ್ಭಿಣಿ? ಆಸ್ಪತ್ರೆಯಲ್ಲಿ ನಟಿ ಹೇಳಿದ್ದೇನು?

ಸೋನಾಕ್ಷಿ ಅವರ ಸಹೋದರ ಕುಶ್ ಸಿನ್ಹಾ ಮದುವೆ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಅವರು ಮದುವೆಗೆ ಹಾಜರಾಗಲಿಲ್ಲ ಎಂಬ ವದಂತಿಗಳಿವೆ. ಆದರೂ ಶೋಶಾ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಕುಶ್ ಅವರು ಗಾಲಾ ರಾತ್ರಿಯಲ್ಲಿ ಪಾಲ್ಗೊಂಡಿದ್ದರಿಂದ ಸೋನಾಕ್ಷಿ ಮತ್ತು ಜಹೀರ್ ಮದುವೆಗೆ ಬರಲಾಗಲಿಲ್ಲ ಎಂದು ಹೇಳಿದ್ದಾರೆ.

ಜನರು ತಪ್ಪಾದ ಮಾಹಿತಿಯನ್ನು ಪ್ರಕಟಿಸುತ್ತಿದ್ದಾರೆ. ಇದು ಹೆಸರಿಸದ ಮೂಲವನ್ನು ಹೊಂದಿದೆ. ಇದನ್ನೆಲ್ಲ ಯಾರು ಮಾಡುತ್ತಿದ್ದಾರೆ ಮತ್ತು ಎಲ್ಲಿಂದ ಬರುತ್ತಿದ್ದಾರೆ ಎಂದು ನನಗೆ ಖಚಿತವಿಲ್ಲ ಎಂದಿದ್ದಾರೆ. ಸೋನಾಕ್ಷಿ ಸಿನ್ಹಾ ಪ್ರಸ್ತುತ ʼಕಾಕುಡಾʼ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ರಿತೇಶ್ ದೇಶ್‌ಮುಖ್ ಅವರೊಂದಿಗೆ ಅಭಿನಯಿಸುತ್ತಿರುವ ಈ ಚಿತ್ರದ ಟ್ರೇಲರ್ ಶಾಪಗ್ರಸ್ತವಾಗಿರುವ ರಾಟೋಡಿ ಗ್ರಾಮವನ್ನು ಪರಿಚಯಿಸುವ ಮೂಲಕ ಪ್ರಾರಂಭವಾಗುತ್ತದೆ.

ಹಳ್ಳಿಯ ಪ್ರತಿಯೊಂದು ಮನೆಗೆ ಎರಡು ಬಾಗಿಲುಗಳಿವೆ. ಒಂದು ದೊಡ್ಡ ಮತ್ತು ಒಂದು ಸಣ್ಣ. ಚಿಕ್ಕ ಬಾಗಿಲು ಕಾಕುಡ ಎಂಬ ಭೂತದ್ದು. ಚಿತ್ರದಲ್ಲಿ ನಾಯಕ, ನಾಯಕಿ ಪರಸ್ಪರ ಪ್ರೀತಿಸಿ ಮದುವೆಯಾಗುತ್ತಾರೆ. ಇದರಿಂದ ಅವರು ಕಾಕುಡನಿಂದ ತೊಂದರೆಯನ್ನು ಎದುರಿಸುವುದು ಚಿತ್ರದ ಕಥೆಯ ಸಾರವಾಗಿದೆ.

Continue Reading

ಸ್ಯಾಂಡಲ್ ವುಡ್

Tharun Sudhir: ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ತರುಣ್ ಸುಧೀರ್; ಹುಡುಗಿ ಹೇಗಿರಬೇಕು ಅಂದ್ರೆ….

Tharun Sudhir: ಮದುವೆ ಬಗ್ಗೆ ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಈ ಹಿಂದೆ ಮಾತನಾಡಿ ʻʻಮದುವೆಯಾಗತ್ತೆ. ಡೇಟ್‌ ಎಲ್ಲ ಫಿಕ್ಸ್‌ ಆಗಿಲ್ಲ. ಸೋನಲ್‌ ರಿಲೇಶನ್‌ ಎಲ್ಲ ದುಬೈನಲ್ಲಿ ಇದ್ದಾರೆ. ಅವರು ಎಲ್ಲ ಬರಬೇಕು. ಮಾತನಾಡಬೇಕು. ಎಲ್ಲ ಆದ ಮೇಲೆನೆ ಫೈನಲ್‌ ಆಗೋದು. ನಮ್ಮ ಮನೆಗೆ ಯಾರು ಬಂದರು ಸಂತೋಷ್.‌ ಮೊದಲಿಂದಲೂ ನನ್ನ ಮಗನಿಗೆ ಮದುವೆ ಆಗಬೇಕು ಎಂದಿತ್ತು.

VISTARANEWS.COM


on

Tharun Sudhir Bigg update marriage
Koo

ಬೆಂಗಳೂರು: ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗಲಿದ್ದಾರೆ ಎಂದು ಬಹಳ ದಿನಗಳಿಂದ ಸುದ್ದಿ ಆಗುತ್ತಲೇ ಇದೆ. ಈ ಮುಂಚೆ ತರುಣ್‌ ಸುಧೀರ್‌ ಅವರ ತಾಯಿ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ. ಈಗ ಆಷಾಢ ಬಂತು. ಮಾತಾಡಲು ಆಗಲ್ಲ. ಆಷಾಢ ಮುಗಿದ್ಮೇಲೆ ಮಾತುಕತೆ ಮಾಡಬೇಕು ಅಂದಿದ್ದರು. ಇದೀಗ ಮದುವೆ ಬಗ್ಗೆ ತರುಣ್‌ ಅವರು ಮೌನ ಮುರಿದಿದ್ದಾರೆ. ʻನನಗೆ ಮದುವೆ ಆಗಬಾರದು ಅಂತೇನೂ ಇಲ್ಲ. ಇದರ ಕುರಿತು ಡಿಸಿಷನ್ ನಾನು ಮಾಡಿಲ್ಲʼʼಎಂದು ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿ ʻʻಇಷ್ಟ ಪಟ್ಟ ಹುಡುಗಿ ಸಿಕ್ಕರೆ ಖಂಡಿತ ಮದುವೆ ಆಗುವೆ. ನನಗೆ ಮದುವೆ ಅಗಬಾರದು ಅಂತ ಏನಿಲ್ಲ. ಮೊದಲು ನನ್ನ ಕೆಲಸವನ್ನು ಗೌರವಿಸಬೇಕು. ಇನ್ನೊಂದು ನನಗೆ ಅಮ್ಮನೇ ಎಲ್ಲ. ಆದ್ದರಿಂದ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಇಷ್ಟು ಇದ್ದರೆ ಸಾಕು. ಅಂಥ ಹುಡುಗಿಯನ್ನು ನಾನು ಮದುವೆಯಾಗುತ್ತೇನೆ. ಬೇಕಿದ್ದರೆ ನಾಲ್ಕು ಗೋಡೆಗಳ ನಡುವೆ ಕಾಲು ಹಿಡಿದುಕೊಳ್ಳಲೂ ರೆಡಿ ಎಂದು ತಮಾಷೆ ಮಾಡಿದ್ದಾರೆʼʼ ತರುಣ್ ಸುಧೀರ್. ಆದರೆ ಎಲ್ಲೂ ಸೋನಾಲ್ ಹೆಸರು ಬಳಸದೇ ಮಾತನಾಡಿದ್ದಾರೆ.

ಮದುವೆ ಬಗ್ಗೆ ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಈ ಹಿಂದೆ ಮಾತನಾಡಿ ʻʻಮದುವೆಯಾಗತ್ತೆ. ಡೇಟ್‌ ಎಲ್ಲ ಫಿಕ್ಸ್‌ ಆಗಿಲ್ಲ. ಸೋನಲ್‌ ರಿಲೇಶನ್‌ ಎಲ್ಲ ದುಬೈನಲ್ಲಿ ಇದ್ದಾರೆ. ಅವರು ಎಲ್ಲ ಬರಬೇಕು. ಮಾತನಾಡಬೇಕು. ಎಲ್ಲ ಆದ ಮೇಲೆನೆ ಫೈನಲ್‌ ಆಗೋದು. ನಮ್ಮ ಮನೆಗೆ ಯಾರು ಬಂದರು ಸಂತೋಷ್.‌ ಮೊದಲಿಂದಲೂ ನನ್ನ ಮಗನಿಗೆ ಮದುವೆ ಆಗಬೇಕು ಎಂದಿತ್ತು. ಇನ್ನೂ ನಾನಿರುವಾಗಲೇ ಮಗನಿಗೆ ಮದುವೆ ಮಾಡಬೇಕು ಅನ್ನುವುದು ನನ್ನ ಆಸೆಯಾಗಿತ್ತು ಎಂದಿರುವ ಮಾಲತಿ ಸುಧೀರ್‌, ಆಗಸ್ಟ್‌ನಲ್ಲಿ ಮದುವೆ ಅನ್ನೋದು ಸುಳ್ಳು. ಡೇಟ್ ಇನ್ನೂ ಫಿಕ್ಸ್ ಆಗಿಲ್ಲ. ಇನ್ನೂ ಕನ್‌ಫರ್ಮ್ ಆಗಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: Tharun Sudhir: ಸೋನಾಲ್-ತರುಣ್ ಮದುವೆ ಯಾವಾಗ? ಭಾವಿ ಸೊಸೆ ಬಗ್ಗೆ ಡೈರೆಕ್ಟರ್ ಅಮ್ಮ ಏನಂದ್ರು?

ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

ತರುಣ್ ನಿರ್ದೇಶನದ ‘ರಾಬರ್ಟ್’ ಚಿತ್ರದಲ್ಲಿ ರಾಘವ ವಿನೋದ್ ಪ್ರಭಾಕರ್ ಜೋಡಿ ತನು ಆಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗಿದೆ. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ್ದರು. ‘ಎಕ್ಕಾ ಸಕ್ಕಾ’ ಎನ್ನುವ ತುಳು ಚಿತ್ರದಲ್ಲಿ ಮೊದಲಿಗೆ ನಟಿಸಿದರು. ಬಳಿಕ ಮತ್ತೆರಡು ತುಳು ಸಿನಿಮಾ ಅವಕಾಶ ಸಿಕ್ಕಿತ್ತು. ನಂತರ ‘ಅಭಿಸಾರಿಕ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

‘ಎಂಎಲ್‌ಎ’, ‘ಮದುವೆ ದಿಬ್ಬಣ’, ‘ಪಂಚತಂತ್ರ’, ‘ಡೆಮೊ ಪೀಸ್’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಸೋನಲ್ ಮಿಂಚಿದರು.ರಾಬರ್ಟ್’ ಬಳಿಕ ‘ಶಂಭೋ ಶಿವ ಶಂಕರ’, ‘ಗರಡಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ. ‘ಬುದ್ಧಿವಂತ-2’ ಹಾಗೂ ‘ಮಾರ್ಗರೆಟ್ ಲವರ್ ಆಫ್ ರಾಮಾಚಾರಿ’ ಸಿನಿಮಾಗಳಲ್ಲಿ ನಟಿಸಿದ್ದು ಇನ್ನಷ್ಟೇ ಈ ಸಿನಿಮಾಗಳು ತೆರೆಗೆ ಬರಬೇಕಿದೆ.

Continue Reading

ಸಿನಿಮಾ

Rishab Shetty: ನನ್ನ ಜೀವನದ ಆಧಾರಸ್ತಂಭ ಎಂದು ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಪತ್ನಿ ಕ್ಯೂಟ್‌ ವಿಶ್

Rishab Shetty: ರಿಕ್ಕಿ ಸಿನಿಮಾ ಮಾಡಿ ಗುರುತಿಸಿಕೊಂಡಿದ್ದರೂ ಖ್ಯಾತಿ ಗಳಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ʻಉಳಿದವರು ಕಂಡಂತೆʼ ಸಿನಿಮಾ ಮೂಲಕ ಅವರು ಹೆಚ್ಚು ಮಂದಿಗೆ ಪರಿಚಿತರಾದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿನಿಮಾ ಮೂಲಕ ಅವರು ಸಿನಿಮಾ ಕ್ಷೇತ್ರದಲ್ಲಿ ಹೆಸರು ಮಾಡಿದರು. ʻಬೆಲ್​ಬಾಟಂʼ ಸಿನಿಮಾದ ಮೂಲಕ ನಟನೆಗೂ ಸೈ ಎನಿಸಿಕೊಂಡರು.

VISTARANEWS.COM


on

Rishab Shetty Birthday pragati shetty cute wish
Koo

ಬೆಂಗಳೂರು: ಇಂದು (ಜುಲೈ 7)ರಂದು ರಿಷಬ್‌ ಶೆಟ್ಟಿ (Rishab Shetty) ಅವರ ಜನುಮದಿನ. 41ನೇ ವಸಂತಕ್ಕೆ ರಿಷಬ್‌ ಕಾಲಿಟ್ಟಿದ್ದಾರೆ. ಈ ದಿನದಂದು ಪತ್ನಿ ಪ್ರಗತಿ ಶೆಟ್ಟಿ ಅವರು ʻನನ್ನ ಜೀವನದ ಆಧಾರಸ್ತಂಭʼ ಎಂದು ಶುಭಕೋರಿದ್ದಾರೆ. ರಿಷಬ್‌ಗೆ ಫ್ಯಾನ್ಸ್‌ ಶುಭಕೋರುತ್ತಿದ್ದಾರೆ.

ಪ್ರಗತಿ ಶೆಟ್ಟಿ ಪೋಸ್ಟ್‌ ಮಾಡಿ ʻʻನನ್ನ ಜೀವನದ ಆಧಾರಸ್ತಂಭಕ್ಕೆ ಜನ್ಮದಿನದ ಶುಭಾಶಯಗಳು. ನೀವು ಎಂತಹ ಅದ್ಭುತ ವ್ಯಕ್ತಿ ಎಂದು ನಾನು ಜೋರಾಗಿ ಜಗತ್ತಿಗೆ ಹೇಳಲು ಬಯಸುತ್ತೇನೆ. ನಿಮ್ಮನ್ನು ನಿಜವಾಗಿಯೂ ತಿಳಿದಿರುವವರು ಅದೃಷ್ಟವಂತರು.ನಿಮ್ಮ ಶಕ್ತಿ, ಬುದ್ಧಿವಂತಿಕೆ ಮತ್ತು ಪ್ರೀತಿ ಪ್ರತಿದಿನ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ. ನಾವು ಒಟ್ಟಿಗೆ ಇರುವುದಕ್ಕಾಗಿ ನಾನು ಪ್ರತಿದಿನ ದೇವರಿಗೆ ಕೃತಜ್ಞನಾಗಿದ್ದೇನೆ. ನಿಮಗೆ ಸಂತೋಷ, ಯಶಸ್ಸು ಮತ್ತು ಪ್ರಪಂಚದ ಎಲ್ಲಾ ಸಂತೋಷದಿಂದ ತುಂಬಿದ ವರ್ಷವಾಗಲಿ. ಹುಟ್ಟು ಹಬ್ಬದ ಹಾರ್ದಿಕ ಶುಭಶಯಗಳು” ಎಂದು ಬರೆದುಕೊಂಡಿದ್ದಾರೆ.

ಸಣ್ಣ ಪುಟ್ಟ ಪಾತ್ರಗಳನ್ನು ಮಾಡುತ್ತ ಚಿತ್ರರಂಗದಲ್ಲಿ ಅವಕಾಶಕ್ಕಾಗಿ ಕಾಯುತ್ತಿದ್ದರು. ನಟನೆಯ ಜತೆ ಡೈರೆಕ್ಷನ್ ಕೂಡ ಆಸಕ್ತಿಯಿದ್ದ ಕಾರಣ, 2016ರಲ್ಲಿ ಅವರು ‘ರಿಕ್ಕಿ’ ಸಿನಿಮಾ ನಿರ್ದೇಶನ ಮಾಡಿದರು. ಅದೇ ವರ್ಷ ರಿಲೀಸ್ ಆದ ರಿಷಬ್ ನಿರ್ದೇಶನದ ‘ಕಿರಿಕ್ ಪಾರ್ಟಿ’ ಸಿನಿಮಾ ಸೂಪರ್ ಹಿಟ್ ಆಯಿತು.

ಕುಂದಾರಪುರದ ಕೆರಾಡಿ ಗ್ರಾಮದಲ್ಲಿ 1983ರಲ್ಲಿ ರಿಷಬ್​ ಶೆಟ್ಟಿ ಜನಿಸಿದ್ದಾರೆ. ಬಾಲ್ಯದಿಂದಲೇ ಸಿನಿಮಾ ಆಸಕ್ತಿ ಬೆಳೆಸಿಕೊಂಡಿದ್ದ ಅವರು ಕನ್ನಡದ ಸಿನಿಮಾ ದಿಗ್ಗಜರ ಚಲನಚಿತ್ರಗಳನ್ನು ನೋಡಿದ್ದರು. ಸಿನಿಮಾಕ್ಕಾಗಿಯೇ ಬೆಂಗಳೂರಿಗೆ ಬಂದಿದ್ದ ಅವರು ತಮ್ಮ ಸಾಧನೆಗಾಗಿ ನಾನಾ ಕೆಲಸಗಳನ್ನು ಮಾಡಿದ್ದರು. ಆರಂಭದಲ್ಲಿ ಸಾಕಷ್ಟು ನಿರಾಸೆ ಎದುರಿಸಿದ್ದ ಅವರು ಸಣ್ಣ ಪುಟ್ಟ ಪಾತ್ರಗಳಿಗೆ ತೃಪ್ತಿಪಡಬೇಕಾಗಿತ್ತು. ರಿಕ್ಕಿ ಸಿನಿಮಾ ಮಾಡಿ ಗುರುತಿಸಿಕೊಂಡಿದ್ದರೂ ಖ್ಯಾತಿ ಗಳಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ʻಉಳಿದವರು ಕಂಡಂತೆʼ ಸಿನಿಮಾ ಮೂಲಕ ಅವರು ಹೆಚ್ಚು ಮಂದಿಗೆ ಪರಿಚಿತರಾದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿನಿಮಾ ಮೂಲಕ ಅವರು ಸಿನಿಮಾ ಕ್ಷೇತ್ರದಲ್ಲಿ ಹೆಸರು ಮಾಡಿದರು. ʻಬೆಲ್​ಬಾಟಂʼ ಸಿನಿಮಾದ ಮೂಲಕ ನಟನೆಗೂ ಸೈ ಎನಿಸಿಕೊಂಡರು.

ಇದನ್ನೂ ಓದಿ: Rishab Shetty: ಕುಂದಾಪುರಕ್ಕೆ ಆಗಮಿಸಿದ ʼಕಲ್ಕಿʼಯ ಬುಜ್ಜಿ; ಪ್ರಭಾಸ್‌ ಕಾರು ರೈಡ್‌ ಮಾಡಿದ ರಿಷಬ್‌ ಶೆಟ್ಟಿ ಹೇಳಿದ್ದೇನು?

ಬದುಕು ಬದಲಿಸಿದ ಕಾಂತಾರ

ತಾವು ಹುಟ್ಟಿದ ಮಣ್ಣಿನ ಕತೆಯೊಂದನ್ನು ಹುಡುಕಿ ತೆಗೆದು ಕಾಂತಾರ ಸಿನಿಮಾ ಮಾಡಿದ ಬಳಿಕ ಅವರ ಪೂರ್ಣ ಸಾಮರ್ಥ್ಯ ಜಗತ್ತಿಗೆ ಪರಿಚಯವಾಯಿತು. ಸಿನಿಮಾ ಬ್ಲಾಕ್​ಬಸ್ಟರ್​ ಹಿಟ್​ ಆಗುವ ಮೂಲಕ ರಿಷಬ್​ ಶೆಟ್ಟಿ ಎಂಬ ಕೆರಾಡಿ ಪ್ರತಿಭೆ ಜಗದ್ವಿಖ್ಯಾತಿ ಪಡೆಯಿತು. ಬಳಿಕ ಡಿವೈನ್​ ಸ್ಟಾರ್​ ಎಂಬ ಹೆಸರಿನಿಂದ ಕರೆಸಿಕೊಳ್ಳುತ್ತಿರುವ ಅವರು ಕಾಂತಾರ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಅವರೀಗ ಎಲ್ಲೇ ಹೋದರೂ ಅಭಿಮಾನಿಗಳು ಅವರನ್ನು ಸುತ್ತುವರಿಯುತ್ತಾರೆ.

Continue Reading

ಸಿನಿಮಾ

Kannada New Movie: ಶಿವಣ್ಣನ ಪುತ್ರಿ ಜತೆ ಕೈ ಜೋಡಿಸಿದ ಅಚ್ಯುತ್ ಕುಮಾರ್!

Kannada New Movie: ಅಚ್ಯುತ್ ಕುಮಾರ್ ಇಲ್ಲಿ ನಾಯಕನ ತಂದೆ ಪಾತ್ರ ನಿಭಾಯಿಸಲಿದ್ದಾರೆ. ಅವರಿಗೆ ಜೋಡಿಯಾಗಿ ಸುಧಾರಾಣಿ ಸಾಥ್ ಕೊಡುತ್ತಿದ್ದಾರೆ.‌ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

VISTARANEWS.COM


on

Kannada New Movie Firefly movie entry by achyuth kumar
Koo

ಬೆಂಗಳೂರು: ʻಫೈರ್ ಫ್ಲೈʼ ಸಿನಿಮಾ ತಾರಾಬಳಗದ ಮೂಲಕವೇ ಸದ್ದು ಸುದ್ದಿಯಾಗುತ್ತಿದೆ. ಕಳೆದ ವಾರವಷ್ಟೇ ಸುಧಾರಾಣಿ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಹಿರಿಯ ನಟ ಅಚ್ಯುತ್ ಕುಮಾರ್ ಫೈರ್ ಫ್ಲೈನಲ್ಲಿ ಅಭಿನಯಿಸುತ್ತಿರುವ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಅಚ್ಯುತ್ ಕುಮಾರ್ ಇಲ್ಲಿ ನಾಯಕನ ತಂದೆ ಪಾತ್ರ ನಿಭಾಯಿಸಲಿದ್ದಾರೆ. ಅವರಿಗೆ ಜೋಡಿಯಾಗಿ ಸುಧಾರಾಣಿ ಸಾಥ್ ಕೊಡುತ್ತಿದ್ದಾರೆ.‌

ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅಚ್ಯುತ್ ಕುಮಾರ್, “ನಾನು ಹೀರೋ ತಂದೆಯ ಪಾತ್ರ ಮಾಡುತ್ತಿದ್ದೇನೆ. ಪಾತ್ರ ತುಂಬಾ ಇಂಟ್ರೆಸ್ಟಿಂಗ್ ಆಗಿದೆ. ಒಬ್ಬ ತಂದೆ ಮಗನ ಬಾಂಧವ್ಯ ಮತ್ತು ಅವರಿಬ್ಬರು ಫ್ರೆಂಡ್ಸ್ ಆಗಿದ್ರೆ ಹೇಗೆ ಮಜವಾಗಿರುತ್ತೆ ಅಂತ ಈ ಸಿನೆಮಾದಲ್ಲಿ ನೋಡಬಹುದು. ನನ್ನ ಕೋಸ್ಟಾರ್ ಆಗಿ ಸುಧಾರಾಣಿಯವರು ನಟಿಸುತ್ತಿದ್ದಾರೆ. ಮುಂಚೆ ನಾವು ಬೇರೆ ಸಿನೆಮಾಗಳಲ್ಲಿ ನಮ್ಮ ಜೋಡಿಯನ್ನು ನೋಡಿ ಜನ ಮೆಚ್ಚಿದ್ದರು. ಆದ್ರೆ ಈ ಸಿನೆಮಾದಲ್ಲಿ ನಮ್ಮಿಬ್ಬರ ಜೋಡಿ ಹಿಂದಿನ ಸಿನೆಮಾಗಳಿಗಿಂತ ವಿಭಿನ್ನವಾಗಿರುತ್ತದೆ. ಅದನ್ನು ನೀವು ಸ್ಕ್ರೀನ್ ಮೇಲೆ ನೋಡಬೇಕು. ಫೈರ್ ಫ್ಲೈ ತುಂಬಾ ಕಲರ್ ಫುಲ್ ಆಗಿ ಮೂಡಿ ಬಂದಿದೆ ಮತ್ತು ತುಂಬಾ ಮನರಂಜನೆಯಿಂದ ಕೂಡಿದೆ. ನೀವುಗಳು ಮಿಸ್ ಮಾಡದೆ ದೀಪಾವಳಿಗೆ ಈ ಚಿತ್ರವನ್ನು ಚಿತ್ರಮಂದಿರದಲ್ಲೇ ನೋಡಿ.
ನಮ್ಮ ಶಿವಣ್ಣನ ಮಗಳು ನಿವೇದಿತಾ ಸಿನೆಮಾ ಮಾಡುತ್ತಿರುವುದು ತುಂಬಾ ಖುಷಿಯಾಗುತ್ತಿದೆ. ಶ್ರೀಮುತ್ತು ಸಿನಿ ಸರ್ವಿಸ್ ನಡಿ ತುಂಬಾ ಪ್ರೊಪೆಷನಲ್ ಆಗಿ ಮುನ್ನೆಡೆಯುತ್ತಿರುವುದು ನೋಡಿದ್ರೆ ಇಂತಹದೊಂದು ನಿರ್ಮಾಣ ಸಂಸ್ಥೆ ಮತ್ತು ನಿರ್ಮಾಪಕಿ ನಮ್ಮ ಚಿತ್ರರಂಗಕ್ಕೆ ಬೇಕಿತ್ತು ಮತ್ತು ಹೊಸಬರಿಗೆ ಅವಕಾಶ ಕೊಡುತ್ತಿರುವುದರಿಂದ ಹೊಸ ತಲೆಮಾರಿನ ಫಿಲ್ಮಂಮೇಕರ್ ಗೆ ಅನುಕೂಲವಾಗುತ್ತದೆ. ಇವರು ಆಯ್ಕೆ ಮಾಡಿಕೊಂಡಿರುವ ಕಥೆ ಕುಟುಂಬ ಕೂತು ನೋಡಬಹುದು. ಮತ್ತೆ ಮತ್ತೆ ಈ ತರ ಹೊಸಬರಿಗೆ ಅವಕಾಶ ಕೊಟ್ಟಿ ನಮ್ಮ ಇಂಡಸ್ಟ್ರೀ ಮುಂದಿನ ಹೆಜ್ಜೆಗಳಿಗೆ ಇವರ ನಿರ್ಮಾಣ ಸಂಸ್ಥೆ ಮೆಟ್ಟಿಲುಗಳಾಗಲಿ ಎಂದು ಆಶಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

‘ಫೈರ್ ಫ್ಲೈ’ ಸಿನಿಮಾಗೆ ಪಾತ್ರವರ್ಗದ ಮೂಲಕ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ನಟಿ ಶೀತಲ್ ಶೆಟ್ಟಿ, ನಟ ಮೂಗು ಸುರೇಶ್ , ಸುಧಾರಾಣಿ ಈ ಸಿನಿಮಾಗೆ ಸೇರ್ಪಡೆ ಆಗಿದ್ದರು. ಈಗ ಸುಧಾರಾಣಿ ಅಚ್ಯುತ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ಫೈರ್ ಫ್ಲೈ ಸಿನಿಮಾ ಥಿಯೇಟರ್ ಬೆಳಗಲಿದೆ.

Continue Reading
Advertisement
Dengue Scare
ಕರ್ನಾಟಕ12 mins ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ53 mins ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest1 hour ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Puri Jagannath Rath Yatra
ಪ್ರಮುಖ ಸುದ್ದಿ1 hour ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

NIA Arrest
ದೇಶ1 hour ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Elephant attack car in Kodagu‌ four people escape
ಕೊಡಗು1 hour ago

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Viral News
ವೈರಲ್ ನ್ಯೂಸ್2 hours ago

Viral News: ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡಿದರೆ 67 ಸಾವಿರ ರೂ. ದಂಡ; ಕಂಡು ಹಿಡಿಯೋದು ಹೇಗೆ?

Bengaluru News Physical Abuse
ಬೆಂಗಳೂರು2 hours ago

Bengaluru News : ʻ ಹುಡುಗ- ಹುಡುಗಿಯರ ಸರ್ವಿಸ್ ಬೇಕಾʼ ಎಂದವನ ಹೆಡೆಮುರಿ ಕಟ್ಟಿದ ಖಾಕಿ ಪಡೆ

Dengue Cases
ಕರ್ನಾಟಕ2 hours ago

Dengue Cases: ರಾಜ್ಯದಲ್ಲಿ ಭಾನುವಾರ 159 ಮಂದಿಗೆ ಡೆಂಗ್ಯೂ ದೃಢ; ಬೆಂಗಳೂರಲ್ಲೇ ಅತಿ ಹೆಚ್ಚು!

Sonakshi Sinha
ಸಿನಿಮಾ2 hours ago

Sonakshi Sinha: ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ವದಂತಿಕೋರರಿಗೆ ನಟಿ ಸೋನಾಕ್ಷಿ ಪ್ರಶ್ನೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ6 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ6 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ17 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌