Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು? - Vistara News

ವಿದೇಶ

Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ಘರ್ಷಣೆ ಸಂಭವಿಸಿದ ಅನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (Pakistan occupied Kashmir) ಉದ್ವಿಗ್ನತೆ ಹೆಚ್ಚಾಗಿದೆ. ಮುಜಫರಾಬಾದ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಮೀರ್‌ಪುರ, ಆಜಾದ್ ಜಮ್ಮು ಮತ್ತು ಕಾಶ್ಮೀರ (ಎಜೆಕೆ) ನಲ್ಲಿ ಮಾರುಕಟ್ಟೆ, ಶಾಲೆ ಮತ್ತು ಕಚೇರಿಗಳನ್ನು ಮುಚ್ಚಲಾಗಿದೆ.

VISTARANEWS.COM


on

Pakistan Occupied Kashmir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾಕ್ ಆಕ್ರಮಿತ ಕಾಶ್ಮೀರದ (Pakistan occupied Kashmir) ಕೆಲವು ಭಾಗಗಳಲ್ಲಿ ಹಿಂಸಾತ್ಮಕ ಘರ್ಷಣೆಗಳು (protest) ಮುಂದುವರಿದಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರನ್ನು ಹತ್ಯೆ (murder) ಮಾಡಲಾಗಿದೆ. ಮುಜಫರಾಬಾದ್‌ನಲ್ಲಿ (Muzaffarabad) ಪ್ರತಿಭಟನಾಕಾರರನ್ನು ಪೊಲೀಸರು ನಿಯಂತ್ರಿಸಿದ್ದರೂ ಸಾಮಾನ್ಯ ಜನ ಜೀವನ ಮತ್ತು ವ್ಯವಹಾರಗಳು ಅಸ್ತವ್ಯಸ್ತಗೊಂಡಿದೆ.

ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ಘರ್ಷಣೆ ಸಂಭವಿಸಿದ ಅನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಮುಜಫರಾಬಾದ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಮೀರ್‌ಪುರ, ಆಜಾದ್ ಜಮ್ಮು ಮತ್ತು ಕಾಶ್ಮೀರ (jammu and kashmir) ನಲ್ಲಿ ಮಾರುಕಟ್ಟೆ, ಶಾಲೆ ಮತ್ತು ಕಚೇರಿಗಳನ್ನು ಮುಚ್ಚಲಾಗಿದೆ.

ಕಾರಣ ಏನು?

ಅವಾಮಿ ಆಕ್ಷನ್ ಕಮಿಟಿ (AAC) ಶುಕ್ರವಾರ ಹಣದುಬ್ಬರದ ವಿರುದ್ಧ ಪಿಒಕೆಯ ಕೆಲವು ಭಾಗಗಳಲ್ಲಿ ಪ್ರತಿಭಟನೆಗಳನ್ನು ನಡೆಸಿತು. ಇದು ಪಾಕಿಸ್ತಾನಿ ಭದ್ರತಾ ಪಡೆಗಳ ಮೇಲೆ ಹಲ್ಲೆಗೆ ಕಾರಣವಾಗಿತ್ತು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಮುಜಫರಾಬಾದ್‌ನಲ್ಲಿ ಮೇ 10 ರಂದು ನಡೆದ ಮುಷ್ಕರದಿಂದ ನಗರ ಸ್ತಬ್ಧವಾಗಿತ್ತು.

ಪ್ರತಿಭಟಕರರ ಶಾಂತಿಯುತ ಪ್ರದರ್ಶನಗಳಿಗೆ ಅಡ್ಡಿಯಾಗಿದ್ದರಿಂದ ಪ್ರತಿಭಟನೆ ಉಗ್ರ ರೂಪ ಪಡೆದಿತ್ತು.
ಎಎಸಿ ಹೆಚ್ಚಿನ ತೆರಿಗೆಗಳು, ವಿದ್ಯುತ್ ಬಿಲ್‌ಗಳು ಮತ್ತು ಹಣದುಬ್ಬರ ಹಠಾತ್ ಏರಿಕೆ ವಿರುದ್ಧ ಶುಕ್ರವಾರ ಎಎಸಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿತು. ಜನರ ಮನೆಗಳು ಮತ್ತು ಮಸೀದಿಗಳ ಸುತ್ತಲೂ ಪೊಲೀಸರು ಅಶ್ರುವಾಯು ಶೆಲ್ ಅನ್ನು ಆಶ್ರಯಿಸಿದಾಗ ಘರ್ಷಣೆಗಳು ಭುಗಿಲೆದ್ದಿತು.

ಇದರಿಂದ ಸಮಹ್ನಿ, ಸೆಹನ್ಸಾ, ಮೀರ್‌ಪುರ್, ರಾವಲಕೋಟ್, ಖುಯಿರಟ್ಟಾ, ತಟ್ಟಪಾನಿ ಮತ್ತು ಹಟ್ಟಿಯಾನ್ ಬಾಲಾ ಮುಂತಾದ ಪಿಒಕೆಯ ಬಹು ಭಾಗಗಳಲ್ಲಿ ಮುಷ್ಕರಕ್ಕೆ ಕರೆ ನೀಡಲಾಯಿತು.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಏನಾಗುತ್ತಿದೆ?

ಅವಾಮಿ ಕ್ರಿಯಾ ಸಮಿತಿಯು ಪಿಒಕೆಯ ಮುಜಫರಾಬಾದ್‌ಗೆ ಶಾಂತಿಯುತ ಮೆರವಣಿಗೆಗಳನ್ನು ಶುಕ್ರವಾರ ನಡೆಸಿತು, ವಿದ್ಯುತ್ ಬಿಲ್‌ಗಳ ಮೇಲೆ ವಿಧಿಸಲಾದ “ಅನ್ಯಾಯ” ತೆರಿಗೆಗಳ ವಿರುದ್ಧ ಪ್ರತಿಭಟಿಸಿತು. ಇದು ಹಣದುಬ್ಬರ ಗಗನಕ್ಕೇರಲು ಕಾರಣವಾಯಿತು. ಇಸ್ಲಾಂ ಗಢ್ ಬಳಿ ಪ್ರತಿಭಟನಾಕಾರರು ಮತ್ತು ಪೊಲೀಸರು ಘರ್ಷಣೆ ಮಾಡಿದಾಗ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದವು.

ಎಎಸಿ ಮುಜಫರಾಬಾದ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿತು. ]ಇದು ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿತು. ಮೆರವಣಿಗೆಯನ್ನು ತಡೆಯಲು ಪೊಲೀಸರು ನಗರಕ್ಕೆ ಹೋಗುವ ರಸ್ತೆಗಳಿಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಹಾಕಿದರು. ಇದು ಘರ್ಷಣೆಗೆ ಕಾರಣವಾಯಿತು. ರಾತ್ರಿಯ ದಾಳಿಯಲ್ಲಿ ಪೊಲೀಸರು ಅನೇಕ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದಾಗ ಸಮಿತಿಯು ಶನಿವಾರ ಮುಷ್ಕರಕ್ಕೆ ಕರೆ ನೀಡಿತು.

ಪಿಒಕೆ ಸರ್ಕಾರವು ಈ ಪ್ರದೇಶದಲ್ಲಿ ಸೆಕ್ಷನ್ 144 ಅನ್ನು ವಿಧಿಸಿದರೆ, ಮೇ 10 ಮತ್ತು 11 ರಂದು ಶಿಕ್ಷಣ ಸಂಸ್ಥೆ ಮತ್ತು ಕಚೇರಿಗಳನ್ನು ಮುಚ್ಚಲಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದ ಎಲ್ಲಾ ಜಿಲ್ಲೆಗಳಲ್ಲಿ ಶನಿವಾರ ಜನರು ಸಾವಿರಾರು ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಸಾಮಾಜಿಕ ಮಾಧ್ಯಮಗಳಲ್ಲಿನ ವಿಡಿಯೋ ಮತ್ತು ಫೋಟೋಗಳಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಲಾಠಿಗಳನ್ನು ಬಳಸಿರುವುದನ್ನು ತೋರಿಸಿತ್ತು. ಅಶ್ರುವಾಯು ಬಳಸಿ ಗುಂಪನ್ನು ಚದುರಿಸಲು ಪೊಲೀಸರು ಪ್ರಯತ್ನಿಸಿದರು. ಹಿಂಸಾತ್ಮಕ ಘರ್ಷಣೆಯ ಅನಂತರ ಶುಕ್ರವಾರ ಹತ್ತಾರು ಪೊಲೀಸ್ ಸಿಬ್ಬಂದಿ ಮತ್ತು ಪ್ರತಿಭಟನಾಕಾರರು ಗಾಯಗೊಂಡಿದ್ದರು.

ಇದನ್ನೂ ಓದಿ: America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

ಮೂವರು ಸಾವು

ಪಾಕಿಸ್ತಾನಿ ಪಡೆಗಳು ನಿರಾಯುಧ ನಾಗರಿಕರ ಮೇಲೆ ಗುಂಡು ಹಾರಿಸಿದ್ದು ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪಿಒಕೆ ಕಾರ್ಯಕರ್ತ ಅಮ್ಜದ್ ಅಯೂಬ್ ಮಿರ್ಜಾ ಹೇಳಿದ್ದಾರೆ.‌ ಮಿರ್ಜಾ ಅವರು ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಕರೆ ನೀಡಿದ್ದು, ಪರಿಸ್ಥಿತಿ ಕೈ ಮೀರುತ್ತಿದೆ. ಕೇಂದ್ರವು ದೂರ ಉಳಿಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಭಾರತವು ಈಗ ತನ್ನೆಲ್ಲ ಗಮನವನ್ನು ಪಾಕಿಸ್ತಾನಿ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಮೇಲೆ ಕೇಂದ್ರೀಕರಿಸಬೇಕು ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ ಈ ಆಕ್ರಮಿತ ಪ್ರದೇಶದ ಸ್ವಾತಂತ್ರ್ಯಕ್ಕೆ ಸಹಾಯ ಮಾಡಬೇಕು ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Ex CIA Officer: ಪಾಕಿಸ್ತಾನದಲ್ಲಿ ಉಗ್ರರನ್ನು ತಾಲಿಬಾನ್ ಮೂಲಕ ಕೊಲ್ಲುತ್ತಿರುವ ಭಾರತ; ಅಮೆರಿಕ ಗುಪ್ತಚರ ಇಲಾಖೆ ಮಾಜಿ ಅಧಿಕಾರಿ ಹೇಳಿಕೆ

Ex CIA Officer: CIAನ ಮಾಜಿ ಅಧಿಕಾರಿ ಸಾರಾ ಆಡಂ ಶಾನ್‌ ರ್ಯಾನ್‌ ಶೋ ಎಂಬ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದು, ಈ ವಿಡಿಯೋವನ್ನು ಜೂ.10ರಂದು ಯೂಟ್ಯೂಬ್‌ನಲ್ಲಿ ಪ್ರಕಟಿಸಲಾಗಿತ್ತು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗುತ್ತಿದೆ. ಭಾರತ ತಾಲಿಬಾನ್‌ಗಳಿಗೆ 10 ಮಿಲಿಯನ್‌ ಡಾಲರ್‌ ಹಣ ನೀಡಿದೆ ಮಾತ್ರವಲ್ಲದೇ ತಾಲಿಬಾನ್‌ಗಳ ಮುಖಂಡ ಮುಲ್ಲಾ ಹಿಬಾತುಲ್ಲಾ ಅಖುಂಡಜಾದಾಗೆ ಭದ್ರತೆ ನೀಡುತ್ತಿದೆ.

VISTARANEWS.COM


on

Ex CIA Officer
Koo

ಹೊಸದಿಲ್ಲಿ: ಭಾರತ ತನ್ನ ವಿರುದ್ಧ ದುಷ್ಕೃತ್ಯ ಎಸಗುವ ಪಾಕಿಸ್ತಾನ(Pakistan) ಉಗ್ರರನ್ನು ಮಟ್ಟ ಹಾಕಲು ತಾಲಿಬಾನ್‌(Taliban)ಗಳಿಗೆ ಹಣ ನೀಡುತ್ತಿದೆ ಎಂದು ಅಮೆರಿಕ ಗುಪ್ತಚರ ಇಲಾಖೆ(Ex CIA Officer) ಮಾಜಿ ಅಧಿಕಾರಿ ಎಂದು ಹೇಳಿಕೆ ನೀಡುವ ಮೂಲಕ ಬಾಂಬ್‌ ಸಿಡಿಸಿದ್ದಾರೆ. ಪಾಕಿಸ್ತಾನದಲ್ಲಿ ನೆಲೆಯೂರಿ ಕಾಶ್ಮೀರದಲ್ಲಿ ಜಿಹಾದ್‌ ಹೋರಾಟ ಮಾಡುತ್ತಿರುವ ಲಷ್ಕರ್‌-ಎ ತೊಯ್ಬಾ, ಜೈಷ್‌-ಎ-ಮೊಹಮ್ಮದ್‌, ಹಿಜ್ಬುಲ್‌ ಮುಜಾಹಿದ್ದೀನ್‌ ಮತ್ತು ಅಲ್‌ ಬದ್ರ್‌ ಮುಜಾಹಿದ್ದೀನ್‌ ಸಂಘಟನೆಗಳನ್ನು ಗುರಿಯಾಗಿ ದಾಳಿಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

CIAನ ಮಾಜಿ ಅಧಿಕಾರಿ ಸಾರಾ ಆಡಂ ಶಾನ್‌ ರ್ಯಾನ್‌ ಶೋ ಎಂಬ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದು, ಈ ವಿಡಿಯೋವನ್ನು ಜೂ.10ರಂದು ಯೂಟ್ಯೂಬ್‌ನಲ್ಲಿ ಪ್ರಕಟಿಸಲಾಗಿತ್ತು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗುತ್ತಿದೆ. ಭಾರತ ತಾಲಿಬಾನ್‌ಗಳಿಗೆ 10 ಮಿಲಿಯನ್‌ ಡಾಲರ್‌ ಹಣ ನೀಡಿದೆ ಮಾತ್ರವಲ್ಲದೇ ತಾಲಿಬಾನ್‌ಗಳ ಮುಖಂಡ ಮುಲ್ಲಾ ಹಿಬಾತುಲ್ಲಾ ಅಖುಂಡಜಾದಾಗೆ ಭದ್ರತೆ ನೀಡುತ್ತಿದೆ. ಆಮೂಲಕ ತನ್ನ ವಿರುದ್ಧ ಇರುವ ಉಗ್ರರನ್ನು ತಾಲಿಬಾನ್‌ ಮೂಲಕ ಕೊಲ್ಲುತ್ತಿದೆ. ಅದೂ ಅಲ್ಲದೇ ಖಲಿಸ್ತಾನಿ ಉಗ್ರರ ಸಾವಿನ ಹಿಂದೆಯೂ ಭಾರತದ ಕೈವಾಡವಿರುವ ಸಾದ್ಯತೆ ಇದೆ ಎಂದು ಹೇಳಿದ್ದಾರೆ.

ಭಾರತ ತಾಲಿಬಾನ್‌ ನೆಟ್‌ವರ್ಕ್‌ಗಳನ್ನು ಬಳಸಿಕೊಂಡು ಲಾಹೋರ್‌, ಕರಾಚಿ ಮತ್ತು ಪಾಕಿಸ್ತಾನದ ಇತರೆ ಭಾಗಗಳಲ್ಲಿ ದಾಳಿಗಳನ್ನು ನಡೆಸುತ್ತಿದೆ.ಭಾರತ ಗುರಿಯಾಗಿಸಿರುವ ಉಗ್ರರಲ್ಲಿ ಹಲವರು ಕಳೆದ 30ವರ್ಷಗಳಿಂದ ಮೋಸ್ಟ್‌ ವಾಟೆಂಟ್‌ ಉಗ್ರಗಾಮಿಗಳಾಗಿದ್ದರು. 18 ಉಗ್ರರ ಪಟ್ಟಿಯನ್ನು ನಾನೂ ನೋಡಿದ್ದೇನೆ. ಸದ್ಯ ಅವರೆಲ್ಲಾ ಬದುಕಿದ್ದರೋ ಇಲ್ಲವೋ ತಿಳಿದಿಲ್ಲ. ಆ 18 ಉಗ್ರರು ಯಾರೆಂಬುದು ನನಗೆ ಗೊತ್ತಿದೆ. ಏಕೆಂದರೆ ಕೆಲವು ಕಾಲ ನಾನ್ ಕಾಶ್ಮೀರದಲ್ಲಿ ಕೆಲಸ ಮಾಡಿದ್ದೆ. ಆ ಎಲ್ಲರೂ ಲಷ್ಕರ್‌-ಎ ತೊಯ್ಬಾ, ಜೈಷ್‌-ಎ-ಮೊಹಮ್ಮದ್‌, ಹಿಜ್ಬುಲ್‌ ಮುಜಾಹಿದ್ದೀನ್‌ ಮತ್ತು ಅಲ್‌ ಬದ್ರ್‌ ಮುಜಾಹಿದ್ದೀನ್‌ ಸಂಘಟನೆಗೆ ಸೇರಿದವರಾಗಿದ್ದರು.

ತಾಲಿಬಾನ್‌ ಸಂಘಟನೆ ಮುಲ್ಲಾ ಯಾಕೂಬ್‌ಗೆ 10 ಮಿಲಿಯನ್‌ ಡಾಲರ್‌ ಭಾರತ ನೀಡಿತ್ತು. ಆ ಹಣ ನೇರವಾಗಿ ಗೆಕ್ಕೋ ನೆಲೆಗೆ ತಲುಪಿದೆ. ಈ ಸ್ಥಳದಲ್ಲೇ ತಾಲಿಬಾನ್‌ಗಳ ಮುಖಂಡ ಮುಲ್ಲಾ ಹಿಬಾತುಲ್ಲಾ ಅಖುಂಡಜಾದಾ ಭದ್ರತೆ ನೀಡಲಾಗುತ್ತಿದೆ. ಬಹುಷಃ ಆತನ ಭದ್ರತೆಗೆಂದೇ ಭಾರತ ಅಷ್ಟೋಂದು ಹಣವನನು ವ್ಯಯಿಸುತ್ತಿದೆ. ಇಷ್ಟೆಲ್ಲಾ ಖರ್ಚು ಮಾಡುತ್ತಿರುವ ಭಾರತ ಅದರ ಬದಲಿಗೆ ಏನಾದರೂ ನಿರೀಕ್ಷಿಸದೇ ಇರುತ್ತದೆಯೇ? ಪಾಕಿಸ್ತಾನದಲ್ಲಿರುವ ಕಾಶ್ಮೀರಿ ಉಗ್ರರನ್ನು ಹತ್ಯೆಗೆ ಭಾರತ ತಾಲಿಬಾನ್‌ಗಳನ್ನು ಬಳಸಿಕೊಳ್ಳುತ್ತಿರುವುದು ಖಚಿತ ಎಂದು ಹೇಳಿದ್ದಾರೆ.

ಇದನ್ನೂ ಓದಿ: Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Continue Reading

ವಿದೇಶ

Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

Maya Neelakantan: ಇದೀಗ ಅಮೆರಿಕಾದ ಹೊಸ ರಾಕ್ ಮ್ಯೂಸಿಕ್‌ ಡಾರ್ಲಿಂಗ್‌ ಆಗಿರುವ ಮಾಯಾ ನೀಲಕಂಠನ್‌ 10 ವರ್ಷದ ಗಿಟಾರ್ ಪ್ರತಿಭೆ. ರಾಕ್ ಸಂಗೀತದ ಅಸಾಧಾರಣ ಪ್ರತಿಭೆ ಮತ್ತು ಉತ್ಸಾಹವನ್ನು ಪ್ರದರ್ಶಿಸಿದ‌ ಮಾಯಾ, ಜಡ್ಜ್‌ಗಳ ಮನಗೆದ್ದರು.

VISTARANEWS.COM


on

maya neelakantan
Koo

ನ್ಯೂಯಾರ್ಕ್‌: ಭಾರತ (India) ಮೂಲದ 10 ವರ್ಷದ ಬಾಲಕಿ ಮಾಯಾ ನೀಲಕಂಠನ್ (Maya Neelakantan) ಇತ್ತೀಚೆಗೆ “ಅಮೆರಿಕಾಸ್ ಗಾಟ್ ಟ್ಯಾಲೆಂಟ್” (America’s got Talent) ಕಾರ್ಯಕ್ರಮದಲ್ಲಿ ತಮ್ಮ ಅಗಾಧ ಪ್ರತಿಭೆಯಿಂದ ನೋಡುಗರನ್ನು ಹುಚ್ಚೆಬ್ಬಿಸಿದರು. ಭಾರತೀಯ ಕ್ಲಾಸಿಕಲ್‌ (Classical) ಮತ್ತು ಪಾಪ್‌ ಫ್ಯೂಶನ್‌ (pop Fusion) ಮಾಡಿದ ನೋಟ್‌ ಅನ್ನು ಗಿಟಾರ್‌ನಲ್ಲಿ (Guitar) ನುಡಿಸಿ ಪ್ರೇಕ್ಷಕರಲ್ಲಿ ಪುಳಕ ಮೂಡಿಸಿದರು.

ಇದೀಗ ಅಮೆರಿಕಾದ ಹೊಸ ರಾಕ್ ಮ್ಯೂಸಿಕ್‌ ಡಾರ್ಲಿಂಗ್‌ ಆಗಿರುವ ಮಾಯಾ ನೀಲಕಂಠನ್‌ 10 ವರ್ಷದ ಗಿಟಾರ್ ಪ್ರತಿಭೆ. ರಾಕ್ ಸಂಗೀತದ ಅಸಾಧಾರಣ ಪ್ರತಿಭೆ ಮತ್ತು ಉತ್ಸಾಹವನ್ನು ಪ್ರದರ್ಶಿಸಿದ‌ ಮಾಯಾ, ಜಡ್ಜ್‌ಗಳ ಮನಗೆದ್ದರು. ತನ್ನ ಆಡಿಷನ್‌ಗಾಗಿ ಭಾರತದಿಂದ ಪ್ರಯಾಣಿಸಿದ ಮಾಯಾ, ಪಾಪಾ ರೋಚ್‌ನ “ಲಾಸ್ಟ್ ರೆಸಾರ್ಟ್” ಆಲ್ಬಂನ ನಿರೂಪಣೆಯೊಂದಿಗೆ ತೀರ್ಪುಗಾರರನ್ನು ಬೆರಗುಗೊಳಿಸಿದಳು. ಆತ್ಮವಿಶ್ವಾಸದಿಂದ ಗಿಟಾರ್ ನುಡಿಸಿ ರೋಮಾಂಚನಗೊಳಿಸಿದಳು.

ಮಾಯಾ ಕುಟುಂಬ ಜೊತೆಗಿದ್ದು ತೆರೆಮರೆಯಲ್ಲಿ ಅವಳನ್ನು ಹುರಿದುಂಬಿಸಿತು. ಮಾಯಾ ಕೌಶಲ್ಯ ತೀರ್ಪುಗಾರರಾದ ಸೈಮನ್ ಕೋವೆಲ್, ಸೋಫಿಯಾ ವೆರ್ಗರಾ, ಹೈಡಿ ಕ್ಲುಮ್ ಮತ್ತು ಹೋವೀ ಮ್ಯಾಂಡೆಲ್ ಅವರ ವಿಸ್ಮಯಕ್ಕೆ ಕಾರಣವಾಯಿತು. ಮಾಯಾ ತೀರ್ಪುಗಾರರು ಮತ್ತು ಪ್ರೇಕ್ಷಕರಿಂದ ಸಮಾನವಾಗಿ ಚಪ್ಪಾಳೆಗಳನ್ನು ಪಡೆದರು. ಈಗಾಗಲೇ ಎಲ್ಲಾ ಸೋಶಿಯಲ್‌ ಮೀಡಿಯಾ ವೇದಿಕೆಗಳಲ್ಲಿ ಮಾಯಾ ಗಿಟಾರ್‌ ನುಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊ ಲಕ್ಷಾಂತರ ವೀಕ್ಷಣೆಗಳು ಮತ್ತು ಹಲವಾರು ಕಾಮೆಂಟ್‌ಗಳನ್ನು ಪಡೆದಿದೆ.

“ಭಾರತೀಯ ಉಡುಗೆ ಧರಿಸಿ ರಾಕ್ ಸಂಗೀತ ನುಡಿಸಿದ ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆಯಾಗುತ್ತದೆ. ನೀವು ನಿಜವಾಗಿಯೂ ಆಶೀರ್ವದಿಸಲ್ಪಟ್ಟಿದ್ದೀರಿ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಿಮ್ಮ ಪ್ರತಿಭೆಗೆ ಯಾವುದೇ ಮಿತಿಯಿಲ್ಲ” ಎಂದು ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

ಟೂಲ್, ಮೆಟಾಲಿಕಾ ಮತ್ತು ಸ್ಲೇಯರ್ ಅವರ ಹಾಡುಗಳನ್ನು ಒಳಗೊಂಡಿರುವ ನೀಲಕಂಠನ್ ಅವರ ರಾಕ್ ಮತ್ತು ಗಿಟಾರ್‌ ನುಡಿಸುವಿಕೆಗಳು ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯಗೊಳಿಸಿವೆ. 2022ರಲ್ಲಿ ಅವರು ಗಿಟಾರ್ ವಾದಕ ಆಡಮ್ ಜೋನ್ಸ್ ಅವರ “7ಎಂಪೆಸ್ಟ್” ನಿರೂಪಣೆಯೊಂದಿಗೆ ಪ್ರಭಾವಿಸಿದರು. ಮಾಯಾ ನೀಲಕಂಠನ್ ತನ್ನ ಇನ್ನೊಬ್ಬ ಗಿಟಾರ್‌ ಐಕಾನ್‌ ಗ್ಯಾರಿ ಹಾಲ್ಟ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಅವರಿಂದ ಉಡುಗೊರೆ ಪಡೆದಿದ್ದಾಳೆ. ತನ್ನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಆಕೆ ಆತನನ್ನು ಭೇಟಿಯಾದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾಳೆ. ಅವನ ಸಂಗ್ರಹದಿಂದ ಗಿಟಾರ್ ಅನ್ನು ಉಡುಗೊರೆಯಾಗಿ ಸ್ವೀಕರಿಸಿದಳು.

ಚಿಕ್ಕ ವಯಸ್ಸಿನಿಂದಲೇ ಸಂಗೀತದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡ ನೀಲಕಂಠನ್, ಥ್ರಾಶ್ ಮೆಟಲ್, ಟೂಲ್ ಹಾಡುಗಳು ಮತ್ತು ಭಾರತೀಯ ಶಾಸ್ತ್ರೀಯ ಕರ್ನಾಟಕ ಸಂಗೀತವನ್ನು ನುಡಿಸುತ್ತಾಳೆ. ಹಲವಾರು ಸಂದರ್ಭಗಳಲ್ಲಿ ನೇರ ಪ್ರದರ್ಶನ ನೀಡಿದ್ದಾಳೆ. ಕೇವಲ ಐದು ವರ್ಷದವಳಾಗಿದ್ದಾಗ ಆಕೆ ಆಟಿಕೆ ಗಿಟಾರ್ ನುಡಿಸುತ್ತಾ ಮನೆಯಲ್ಲಿ ನೃತ್ಯ ಮಾಡುತ್ತಿದ್ದಳಂತೆ. ಇದೇ ಆಸಕ್ತಿ ಆಕೆಯನ್ನು ನುರಿತ ಗಿಟಾರ್ ವಾದಕನಾಗಲು ಅವಳನ್ನು ಪ್ರೇರೇಪಿಸಿತು.

ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅವರು ನೀಲಕಂಠನ್ ಅವರ ವೀಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವಳನ್ನು “ದೇವತೆಗಳ ಭೂಮಿಯಿಂದ ಬಂದ ರಾಕ್ ದೇವತೆ” ಎಂದು ಉಲ್ಲೇಖಿಸಿದ್ದಾರೆ. ಮಹೀಂದ್ರಾ ಗ್ರೂಪ್ ಪ್ರತಿ ವರ್ಷ ಮುಂಬೈನಲ್ಲಿ ಆಯೋಜಿಸುವ ಮಹೀಂದ್ರಾ ಬ್ಲೂಸ್ ಫೆಸ್ಟಿವಲ್‌ನಲ್ಲಿ ಈಕೆ ಕಾರ್ಯಕ್ರಮ ನೀಡಲು ಅರ್ಹಳು ಎಂದು ಮಹೀಂದ್ರಾ ಹೇಳಿದ್ದಾರೆ.

ಇದನ್ನೂ ಓದಿ: Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Continue Reading

ವಿದೇಶ

Physical relationship: ಕೈದಿ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ್ದ ಮಹಿಳಾ ಜೈಲಾಧಿಕಾರಿ ಬಗ್ಗೆ ಶಾಕಿಂಗ್‌ ವಿಚಾರ ಬಯಲು

Physical relationship: ಎಕ್ಸ್‌ನಲ್ಲಿ ಭಾರೀ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿರುವ ಜೈಲಿನ ಸಿಬ್ಬಂದಿ ಅಲ್ಲಿನ ಕೈದಿ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ನೋಡಬಹುದಾಗಿದೆ. ಇದನ್ನು ಅದೇ ಕೋಣೆಯಲ್ಲಿದ್ದ ಮತ್ತೊರ್ವ ಖೈದಿ ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿಕೊಂಡಿದ್ದಾನೆ.

VISTARANEWS.COM


on

Physical relationship
Koo

ಲಂಡನ್‌: ಜೈಲಿನ ಮಹಿಳಾ ಸಿಬ್ಬಂದಿ ಕೈದಿಯ ಜೊತೆ ಲೈಂಗಿಕ ಕ್ರಿಯೆ(Physical relationship) ನಡೆಸಿರುವ ಶಾಕಿಂಗ್‌ ಘಟನೆ ಇಂಗ್ಲೆಂಡ್‌ನ ವಾಂಡ್‌ವರ್ಥ್‌ನ ಎಚ್‌ಎಂಪಿ ಜೈಲಿನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral Video) ಆಗುತ್ತಿದ್ದಂತೆ ಈ ಮಹಿಳಾ ಪೊಲೀಸ್‌ ಸಿಬ್ಬಂದಿ ಯಾರು ಎಂಬ ಬಗ್ಗೆ ಶಾಕಿಂಗ್‌ ವಿಚಾರವೊಂದು ಬಯಲಾಗಿದೆ. ಹಾಗಿದ್ದರೆ ಈ ಕೃತ್ಯ ಎಸಗಿರುವ ಈ ಮಹಿಳೆ ಯಾರು? ಇಲ್ಲಿದೆ ಸಂಪೂರ್ಣ ವರದಿ.

ಜೈಲಿನಲ್ಲಿ ಖೈದಿ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಾಕೆಯ ಹೆಸರು ಲಿಂಡಾ ಡಿ ಸೋಜಾ. 31ವರ್ಷದ ಈಕೆ ದಕ್ಷಿಣ ಲಂಡನ್‌ನಲ್ಲಿರುವ ವಾಂಡ್‌ವರ್ಥ್‌ನ ಎಚ್‌ಎಂಪಿ ಜೈಲಿನಲ್ಲಿ ಜೈಲಿನಲ್ಲಿ ಅಧಿಕಾರಿಯಾಗಿದ್ದಳು. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆಕೆ ತಕ್ಷಣ ಕೆಲಸಕ್ಕೆ ರಾಜೀನಾಮೆ ನೀಡಿದ್ದಾಳೆ. ಲಿಂಡಾಳ ಸಹೋದರಿ ಆಂಡ್ರೈನಾ ಪ್ರತಿಕ್ರಿಯಿಸಿದ್ದು, ಲಿಂಡಾ ಮತ್ತು ಪತಿ ನಾತನ್‌ 2023ರ ʼಓಪನ್ ಹೌಸ್: ದಿ ಗ್ರೇಟ್ ಸೆಕ್ಸ್ ಎಕ್ಸ್‌ಪರಿಮೆಂಟ್ʼ ಎಂಬ ಟಿವಿ ಶೋ ಸ್ಪರ್ಧಿಗಳಾಗಿದ್ದರು. ಅದೂ ಅಲ್ಲದೇ ಆಕೆ ಅಡಲ್ಡ್‌ ವಿಡಿಯೋ ಫ್ಲ್ಯಾಟ್‌ಫಾರ್ಮ್‌ನಲ್ಲಿ ಸೀಕ್ರೆಟ್‌ ಅಕೌಂಟನ್ನೂ ಹೊಂದಿದ್ದಾಳೆ ಎಂದು ಹೇಳಿದ್ದಾಳೆ.

ವೈರಲ್‌ ಆಗಿರುವ ವಿಡಿಯೋದಲ್ಲೇನಿದೆ?

ಎಕ್ಸ್‌ನಲ್ಲಿ ಭಾರೀ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿರುವ ಜೈಲಿನ ಸಿಬ್ಬಂದಿ ಅಲ್ಲಿನ ಕೈದಿ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ನೋಡಬಹುದಾಗಿದೆ. ಇದನ್ನು ಅದೇ ಕೋಣೆಯಲ್ಲಿದ್ದ ಮತ್ತೊರ್ವ ಖೈದಿ ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿಕೊಂಡಿದ್ದಾನೆ. ಕೈಯಲ್ಲಿ ಸಿಗರೇಟ್‌ ಹಿಡಿದು ವಿಡಿಯೋ ಮಾಡುತ್ತಿರುವ ಆ ವ್ಯಕ್ತಿ ” ಹಾಯ್‌.. ನಾವು ಇವತ್ತು ಇತಿಹಾಸ ಸೃಷ್ಟಿಸಿದ್ದೇವೆ. ನಾನು ಹೇಳುತ್ತಿರುವುದು ಇದೇ ವಿಚಾರವನ್ನು ಎಂದು ಹೇಳುತ್ತಾ ಕ್ಯಾಮೆರಾವನ್ನು ತಿರುಗಿಸುತ್ತಾನೆ. ಅಲ್ಲಿ ಜೈಲಿನ ಸಿಬ್ಬಂದಿ ಮತ್ತು ಕೈದಿ ಲೈಂಗಿಕ ಚಟುವಟಿಕೆಯಲ್ಲಿ ಭಾಗಿರುವುದನ್ನು ಕಾಣಬಹುದಾಗಿದೆ. ಅದೂ ಅಲ್ಲೇ ಇದ್ದ ಬೆಡ್‌ ಮೇಲೆ ಕೈದಿಗಳ ಬಟ್ಟೆ ಬಿದ್ದಿರುವುದನ್ನು ಕಾಣಬಹುದಾಗಿದೆ.

ಇನ್ನು ಇದೇ ಸಂದರ್ಭದಲ್ಲಿ ಮತ್ತೊರ್ವ ಖೈದಿ ಸೆಲ್‌ ಒಳಗೆ ಬರಲು ಯತ್ನಿಸುತ್ತಾರೆ. ಆಗ ವಿಡಿಯೋ ಮಾಡುತ್ತಿದ್ದವನು “ಸ್ವಲ್ಪ ಹೊತ್ತು ಇರು” ಅಂತಾನೆ. ಆಮೇಲೆ ಕ್ಯಾಮೆರಾವನ್ನು ಸುತ್ತ ತಿರುಗಿಸುತ್ತಾ “ಇದು ವಾಂಡ್‌ವರ್ಥ್‌ ಜೈಲು” ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಈ ಘಟನೆ ಬಗ್ಗೆ ಲಂಡನ್‌ ಪೊಲೀಸರು ಪ್ರತಿಕ್ರಿಯಿಸಿದ್ದು, ಇದು ವಾಂಡ್‌ವರ್ಥ್‌ನ ಎಚ್‌ಎಂಪಿ ಜೈಲಿನಲ್ಲೆ ನಡೆದಿರುವ ಘಟನೆ ಎಂಬುದು ಸ್ಪಷ್ಟವಾಗಿದೆ. ಕೇಸ್‌ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದುವರೆಗೆ ಯಾವುದೇ ಬಂಧನವಾಗಿಲ್ಲ. ಕಾನೂನು ಸಚಿವಾಲಯದ ಜೊತೆಗೂ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

HMP ಜೈಲು ಸೇವೆಯ ವಕ್ತಾರರು ಮಾತನಾಡಿ, ಘಟನೆಯು ಇತ್ತೀಚೆಗೆ ಸಂಭವಿಸಿದೆ ಎಂದು ಭಾವಿಸಲಾಗಿದೆ, ಮಹಿಳಾ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಬ್ಬಂದಿ ಭ್ರಷ್ಟಾಚಾರವನ್ನು ಸಹಿಸಲಾಗುವುದಿಲ್ಲ ಮತ್ತು ಈ ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಜೈಲು ಅಧಿಕಾರಿಯ ವಿರುದ್ಧ ಪೊಲೀಸರಿಗೆ ದೂರು ದಾಖಲಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Continue Reading

ವಿದೇಶ

Mohamed Muizzu: ಮಾಲ್ಡೀವ್ಸ್‌ ಅಧ್ಯಕ್ಷನ ವಿರುದ್ಧ ವಾಮಾಚಾರ; ಸಚಿವೆ ಅರೆಸ್ಟ್‌

Mohamed Muizzu: ಮಾಲ್ಡೀವ್ಸ್ ಸಚಿವೆ ಫಾತಿಮತ್ ಶಮ್ನಾಜ್ ಅವರು ಅಧ್ಯಕ್ಷ ಮೊಯಿಝು ವಿರುದ್ಧವೇ ಅಂದ್ರೆ ಮಾಟ ಮಂತ್ರ ಮಾಡಿಸಿದ್ದಾರೆ. ವಾಮಾಚಾರ ಮಾಡಿದ ಆರೋಪದಲ್ಲಿ ಮಾಲ್ಡೀವ್ಸ್ ಪೊಲೀಸರು ಸಚಿವರನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ. ಆಕೆಯ ಜೊತೆಗೆ ಮತ್ತು ಆಕೆಯ ಇಬ್ಬರು ಸೋದರಿಯರನ್ನು ರಾಜಧಾನಿ ಮಾಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಇಬ್ಬರನ್ನೂ ಒಂದು ವಾರಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈ ಬಗ್ಗೆ ಮಾಲ್ಡೀವ್ಸ್‌ನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

VISTARANEWS.COM


on

Mohamed Muizzu
Koo

ಮಾಲ್ಡೀವ್ಸ್: ಕೆಲವು ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ವಿರುದ್ಧ ಟೀಕೆ ವ್ಯಕ್ತಪಡಿಸಿ ಬಾಯ್ಕಟ್‌ ಸಮಸ್ಯೆ ಎದುರಿಸಿದ್ದ ಮಾಲ್ಡೀವ್ಸ್‌(Maldives) ಇದೀಗ ಮತ್ತೆ ಸುದ್ದಿಯಲ್ಲಿದೆ. ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮೊಯಿಝು(Mohamed Muizzu) ವಿರುದ್ಧ ಮಾಟ ಮಂತ್ರ(black magic) ಮಾಡಿದ ಆರೋಪದಲ್ಲಿ ಸಚಿವೆಯೊಬ್ಬರು ಅರೆಸ್ಟ್‌ ಆಗಿದ್ದಾರೆ. ಮಾಲ್ಡೀವ್ಸ್‌ನ ಪರಿಸರ, ಹವಾಮಾನ ಬದಲಾವಣೆ ಮತ್ತು ಇಂಧನ ಖಾತೆ ರಾಜ್ಯ ಸಚಿವೆ ಫತೀಮತ್‌ ಶಮ್ನಾಜ್‌ ಅಲಿ ಸಲೀಂ ಬಂಧನಕ್ಕೊಳಗಾಗದ ಸಚಿವೆ.

ಮಾಲ್ಡೀವ್ಸ್ ಸಚಿವೆ ಫಾತಿಮತ್ ಶಮ್ನಾಜ್ ಅವರು ಅಧ್ಯಕ್ಷ ಮೊಯಿಝು ವಿರುದ್ಧವೇ ಅಂದ್ರೆ ಮಾಟ ಮಂತ್ರ ಮಾಡಿಸಿದ್ದಾರೆ. ವಾಮಾಚಾರ ಮಾಡಿದ ಆರೋಪದಲ್ಲಿ ಮಾಲ್ಡೀವ್ಸ್ ಪೊಲೀಸರು ಸಚಿವರನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ. ಆಕೆಯ ಜೊತೆಗೆ ಮತ್ತು ಆಕೆಯ ಇಬ್ಬರು ಸೋದರಿಯರನ್ನು ರಾಜಧಾನಿ ಮಾಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಇಬ್ಬರನ್ನೂ ಒಂದು ವಾರಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈ ಬಗ್ಗೆ ಮಾಲ್ಡೀವ್ಸ್‌ನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮಾಟ ಮಂತ್ರ ಮಾಡಿದ್ದೇಕೆ?

ಇನ್ನು ಶಮ್ನಾಜ್‌ ಈ ರೀತಿಯಾಗಿ ಅಧ್ಯಕ್ಷನ ವಿರುದ್ಧವೇ ವಾಮಾಚಾರ ಮಾಡಲು ಕಾರಣವೇನೆಂಬುದನ್ನು ಪೊಲೀಸರು ವಿಚಾರಣೆ ವಿಚಾರಣೆ ನಡೆಸಿದಾಗ ಹಲವು ವಿಚಾರಗಳು ಬಯಲಾಗಿವೆ. ಶಮ್ನಾಜ್ ಮಾಜಿ ಗಂಡ ಅದಂ ರಮೀಜ್ ಅವರು ಸಹ ಮಾಲ್ಡೀವ್ಸ್ ಅಧ್ಯಕ್ಷ ಮೊಯಿಝು ಅವರ ಜೊತೆ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವೇ ತಿಂಗಳ ಹಿಂದೆ ಮೊಯಿಝು ಅವರನ್ನು ಅಮಾನತು ಮಾಡಿದ್ದರು. ಇದರ ಜೊತೆಗೆ ಫಾತಿಮತ್‌ ಅವರಿಗೆ ಮಾಟ ಮಂತ್ರದಲ್ಲಿ ಅಪಾರ ನಂಬಿಕೆ ಇತ್ತು. ವಾಮಾಚಾರ ಮಾಡಿಸಿದರೆ ತನಗೆ ಸದ್ಯ ಇರುವ ಕ್ಯಾಬಿನೆಟ್‌ ಖಾತೆಯ ಬದಲು ಇನ್ನೂ ಅತ್ಯುನ್ನತವಾದ ಖಾತೆಯೇ ಸಿಗುತ್ತದೆ ಅನ್ನೋ ನಂಬಿಕೆ ಇತ್ತು. ಈ ಎಲ್ಲಾ ಕಾರಣದಿಂದ ಮಾಲ್ಡೀವ್ಸ್ ಅಧ್ಯಕ್ಷರ ವಿರುದ್ಧವೇ ವಾಮಾಚಾರ ನಡೆಸಿ ಸಿಕ್ಕಿಬಿದ್ದಿದ್ದಾರೆ.

ಅಂದ ಹಾಗೆ ಮಾಲ್ಡೀವ್ಸ್‌ನಲ್ಲಿ ವಾಮಾಚಾರ ಮಾಡುವುದು ಸರ್ವೇ ಸಾಮಾನ್ಯ. ಮಾಲ್ಡೀವ್ಸ್‌ನ ಬಹಳಷ್ಟು ಕಡೆ ವಾಮಾಚಾರ ಮಾಡುವುದು ವ್ಯಾಪಕವಾಗಿದೆ. ಆದರೆ ಈ ಮಾಟಮಂತ್ರದಲ್ಲಿ ಸಿಕ್ಕಿಬಿದ್ದರೆ ಇಸ್ಲಾಮಿಕ್ ಕಾನೂನಿನ ಪ್ರಕಾರ 6 ತಿಂಗಳವರೆಗೂ ಜೈಲು ಶಿಕ್ಷೆ ವಿಧಿಸಲಾಗುತ್ತೆ.

ಇದನ್ನೂ ಓದಿ: Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Continue Reading
Advertisement
bike wheeling
ಬೆಂಗಳೂರು ಗ್ರಾಮಾಂತರ9 mins ago

Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!

Ex CIA Officer
ವಿದೇಶ11 mins ago

Ex CIA Officer: ಪಾಕಿಸ್ತಾನದಲ್ಲಿ ಉಗ್ರರನ್ನು ತಾಲಿಬಾನ್ ಮೂಲಕ ಕೊಲ್ಲುತ್ತಿರುವ ಭಾರತ; ಅಮೆರಿಕ ಗುಪ್ತಚರ ಇಲಾಖೆ ಮಾಜಿ ಅಧಿಕಾರಿ ಹೇಳಿಕೆ

Suryakumar Yadav
ಕ್ರೀಡೆ16 mins ago

Suryakumar Yadav Catch: ಬೌಂಡರಿ ಲೈನ್ ಟಚ್ ಮಾಡಿದ್ರಾ ಸೂರ್ಯಕುಮಾರ್?; ಹೊಸ ವಿಡಿಯೊ ವೈರಲ್​

Actor Darshan case Shivaraj Kumar reaction
ಸ್ಯಾಂಡಲ್ ವುಡ್23 mins ago

Actor Darshan: ಎಲ್ಲಾ ಹಣೆಬರಹ ಸ್ವಾಮಿ ಏನು ಮಾಡೋದು? ದರ್ಶನ್‌ ಕೇಸ್‌ ಬಗ್ಗೆ ಶಿವಣ್ಣ ಮಾತು!

Rohit Sharma
ಕ್ರೀಡೆ1 hour ago

Rohit Sharma: ಲಿಯೋನೆಲ್ ಮೆಸ್ಸಿ ಶೈಲಿಯಲ್ಲಿ ವಿಶ್ವಕಪ್​ ಎತ್ತಿ ಹಿಡಿದ ರೋಹಿತ್​; ವಿಡಿಯೊ ವೈರಲ್​

Karave Protest
ಕರ್ನಾಟಕ1 hour ago

Karave Protest: ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹ; ನಾಳೆ‌ ಕರುನಾಡಲ್ಲಿ ಮೊಳಗಲಿದೆ ಕರವೇ ಕಹಳೆ

T20 World Cup 2024
ಕ್ರೀಡೆ1 hour ago

T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕ್ರಿಯೇಟಿವ್​ ವಿಷ್‌

Road Accident
ಮೈಸೂರು2 hours ago

Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

KPCC President
ಪ್ರಮುಖ ಸುದ್ದಿ2 hours ago

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

Jayam Ravi married to superstar rajinikanth daughter
ಕಾಲಿವುಡ್2 hours ago

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು3 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ23 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌