Arvind Kejriwal: ಚೀನಾದಿಂದ ಭಾರತದ ನೆಲ ವಾಪಸ್‌ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್ - Vistara News

ದೇಶ

Arvind Kejriwal: ಚೀನಾದಿಂದ ಭಾರತದ ನೆಲ ವಾಪಸ್‌ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

Arvind Kejriwal: ಜೈಲಿನಿಂದ ಬಿಡುಗಡೆಯಾಗಿ ಬಂದಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಕೇಂದ್ರ ಸರ್ಕಾರ, ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅಬ್ಬರದ ಭಾಷಣಗಳ ಮೂಲಕ ಜನರ ವಿಶ್ವಾಸ ಗಳಿಸಲು ಯತ್ನಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಅವರು 10 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ.

VISTARANEWS.COM


on

Arvind Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ತಿಹಾರ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಅವರು, ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಜನರಿಗಾಗಿ 10 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ (India Bloc) ಅಧಿಕಾರಕ್ಕೆ ಬಂದರೆ ಇಷ್ಟೆಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದಿದ್ದಾರೆ.

“ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾನಿಂದು 10 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇನೆ. ನನ್ನ ಬಂಧನದಿಂದಾಗಿ ಘೋಷಣೆ ಮಾಡುವುದು ವಿಳಂಬವಾಯಿತು. ಆದರೂ, ದೇಶದಲ್ಲಿ ಇನ್ನೂ ಹಲವು ಹಂತಗಳ ಮತದಾನ ಬಾಕಿ ಇದೆ. ಹಾಗಂತ, ಇಂಡಿಯಾ ಒಕ್ಕೂಟದ ಪಕ್ಷಗಳ ಜತೆ ಚರ್ಚಿಸಿ ಗ್ಯಾರಂಟಿಗಳನ್ನು ಘೋಷಣೆ ಮಾಡಿಲ್ಲ. ಇದರಿಂದ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಭಾವಿಸಿದ್ದೇನೆ. ಇಂಡಿಯಾ ಒಕ್ಕೂಟವು ದೇಶದಲ್ಲಿ ಅಧಿಕಾರಕ್ಕೆ ಬಂದರೆ ಈ 10 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು” ಎಂದು ಹೇಳಿದರು.

ಕೇಜ್ರಿವಾಲ್‌ ಘೋಷಿಸಿದ ಪ್ರಮುಖ ಗ್ಯಾರಂಟಿಗಳು

  1. ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಸುವುದು. ಇದರಿಂದ ಬಡವರಿಗೆ, ಉದ್ಯಮಿಗಳಿಗೆ ಅನುಕೂ ಮಾಡಿಕೊಡುವುದು.
  2. ಕೇಂದ್ರ ಹಾಗೂ ರಾಜ್ಯಗಳ ಸಹಕಾರದೊಂದಿಗೆ 5 ಲಕ್ಷ ಕೋಟಿ ರೂ. ವೆಚ್ಚದಲ್ಲಿ ದೇಶಾದ್ಯಂತ ಶಾಲೆ ನಿರ್ಮಿಸಿ, ಬಡವರಿಗೆ ಶಿಕ್ಷಣ ನೀಡುವುದು
  3. ದೇಶಾದ್ಯಂತ ಮೊಹಲ್ಲಾ ಕ್ಲಿನಿಕ್‌ಗಳನ್ನು ಸ್ಥಾಪಿಸಿ, ಉಚಿತವಾಗಿ ಚಿಕಿತ್ಸೆ ನೀಡಲಾಗುವುದು
  4. ಚೀನಾದ ಹಿಡಿತದಲ್ಲಿರುವ ಭಾರತದ ಜಾಗವನ್ನು ವಾಪಸ್‌ ಪಡೆಯುವುದು
  5. ಅಗ್ನಿವೀರ ಯೋಜನೆಯನ್ನು ರದ್ದುಗೊಳಿಸಿ, ಸೇನೆಯನ್ನು ಇನ್ನಷ್ಟು ಬಲಪಡಿಸುವುದು
  6. ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ನೀಡುವುದು
  7. ದೆಹಲಿಗೆ ರಾಜ್ಯ ಸ್ಥಾನಮಾನ ನೀಡುವ ಮೂಲಕ ಏಳಿಗೆಗೆ ಇನ್ನಷ್ಟು ಶ್ರಮಿಸುವುದು

ಗ್ಯಾರಂಟಿ ಘೋಷಿಸಿದ ಬಳಿಕ ಮಾತನಾಡಿದ ಕೇಜ್ರಿವಾಲ್‌, “ದೇಶದ ಬಡವರು ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಕೇಂದ್ರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ಬಂದರೆ, ಬಡವರಿಗೆ ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ಇದಕ್ಕಾಗಿಯೇ ಗ್ಯಾರಂಟಿಗಳನ್ನು ಘೋಷನೆ ಮಾಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Viral News: ನೀವು ಐಸ್‌ಕ್ರೀಂ ಪ್ರಿಯರೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇ ಬೇಕು. ಉತ್ತರ ಪ್ರದೇಶದ ಮಹಿಳೆಯೊಬ್ಬರು ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಜರಿಹುಳ ಪತ್ತೆಯಾಗಿದೆ. ಸದ್ಯ ಈ ಫೋಟೊ, ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕೆಲವು ದಿನಗಳ ಹಿಂದೆ ಮುಂಬೈಯ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಮನುಷ್ಯನ ಕೈ ಬೆರಳು ಪತ್ತೆಯಾಗಿತ್ತು. ಆ ಘಟನೆ ಮರೆಯಾಗುವ ಮುನ್ನವೇ ಈ ಬೆಳವಣಿಗೆ ನಡೆದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆಯ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ.

VISTARANEWS.COM


on

Viral News
Koo

ಲಕ್ನೋ: ಇತ್ತೀಚೆಗೆ ಮುಂಬೈಯ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಮನುಷ್ಯನ ಕೈ ಬೆರಳು ಪತ್ತೆಯಾಗಿತ್ತು. ಈ ಶಾಕ್‌ನಿಂದ ಜನರು ಇನ್ನೂ ಹೊರ ಬಂದಿಲ್ಲ. ಅದಕ್ಕಿಂತ ಮೊದಲೇ ಇನ್ನೊಂದು ಅಂತಹ ಅವಾಂತರ ಎದುರಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಮಹಿಳೆಯೊಬ್ಬರು ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿ ತರಿಸಿದ ಪ್ರತಿಷ್ಠಿತ ಬ್ರ್ಯಾಂಡ್‌ನ ಐಸ್‌ಕ್ರೀಂನಲ್ಲಿ ಜರಿಹುಳ (Centipede) ಕಂಡು ಬಂದಿದೆ. ಸದ್ಯ ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ (Viral News).

ಉತ್ತರ ಪ್ರದೇಶದ ನೋಯ್ಡಾ ಸೆಕ್ಟರ್‌ 12ರಲ್ಲಿ ವಾಸವಾಗಿರುವ ದೀಪಾ ದೇವಿ ಎನ್ನುವ ಮಹಿಳೆ ತನ್ನ 5 ವರ್ಷದ ಮಗನಿಗೆ ಮಾವಿನ ಹಣ್ಣಿನ ಮಿಲ್ಕ್‌ ಶೇಕ್‌ ಮಾಡಿಕೊಡಲು ಆನ್‌ಲೈನ್‌ ಆ್ಯಪ್‌ ಮೂಲಕ ವೆನಿಲ್ಲಾ ಪ್ಲೇವರ್‌ನ ಐಸ್‌ಕ್ರೀಂ ಆರ್ಡರ್‌ ಮಾಡಿದ್ದರು. ಕೆಲಚೇ ಹೊತ್ತಲ್ಲಿ ಪಾರ್ಸಲ್‌ ಏನೋ ಆಕೆಯ ಕೈ ಸೇರಿತು. ಆದರೆ ಬಾಕ್ಸ್‌ ಓಪನ್‌ ಮಾಡಿದಾಗ ಅವರಿಗೆ ಆಘಾತ ಎದುರಾಗಿತ್ತು. ಬಾಕ್ಸ್‌ನ ಮುಚ್ಚಳ ತೆರೆಯುತ್ತಿದ್ದಂತೆ ಐಸ್‌ಕ್ರೀಂನಲ್ಲಿ ಹುದುಗಿದ್ದ ಜರಿಹುಳ ಕಂಡು ಅವರು ಬೆಚ್ಚಿ ಬಿದ್ದಿದ್ದಾರೆ. ಐಸ್‌ಕ್ರೀಂ ಬಂದ ಖುಷಿ ಜರ್ರನೆ ಕರಗಿ ಹೋಗಿತ್ತು.

ವಿಡಿಯೊ ವೈರಲ್‌

ಐಸ್‌ಕ್ರೀಂ ಬಾಕ್ಸ್‌ ಮತ್ತು ಅದರಲ್ಲಿನ ಹುಳವನ್ನು ತೋರಿಸುವ ವಿಡಿಯೊ ವೈರಲ್‌ ಆಗಿದೆ. ವಿಡಿಯೊದಲ್ಲಿ ದೀಪ ದೇವಿ ಅವರು ಬಾಕ್ಸ್‌ ಮುಚ್ಚಳ ತೆರೆಯುತ್ತಿದ್ದಂತೆ ಅದರಲ್ಲಿ ಹುಳ ಇರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಸದ್ಯ ಈ ಘಟನೆ ಆಹಾರ ಸುರಕ್ಷತೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ. ದೇಶಾದ್ಯಂತ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ. ಹುಳ ಪತ್ತೆಯಾಗಿರುವ ಕುರಿತು ದೀಪಾ ದೇವಿ ಅವರು ಡೆಲಿವರಿ ಮಾಡಿರುವ ಆ್ಯಪ್‌ಗೆ ದೂರು ನೀಡಿದ್ದು, ಕೂಡಲೇ ಅವರು ಹಣವನ್ನು ಹಿಂದಿರುಗಿಸಿದ್ದಾರೆ. ಜತೆಗೆ ಐಸ್‌ಕ್ರೀಂ ಕಂಪನಿಗೆ ಮಾಹಿತಿ ರವಾನಿಸಿದ್ದಾರೆ.

ಈ ವಿಷಯ ಹೊರ ಬೀಳುತ್ತಿದ್ದಂತೆ ಕ್ರಮಕ್ಕೆ ಮುಂದಾದ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಸೆಕ್ಟರ್ -22 ರಲ್ಲಿರುವ ಆ್ಯಪ್‌ ಸ್ಟೋರ್‌ಗೆ ಭೇಟಿ ನೀಡಿ ಆ ಬ್ಯಾಚ್ ಐಸ್‌ಕ್ರೀಂ ಮಾರಾಟವನ್ನು ನಿಲ್ಲಿಸಿದೆ. ಜತೆಗೆ ಐಸ್‌ಕ್ರೀಂ ತಯಾರಿಕಾ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಈ ಬಗ್ಗೆ ಭಾನುವಾರ ಪ್ರಕರಣ ದಾಖಲಾಗಿದೆ. ಇನ್ನು ಐಸ್‌ಕ್ರೀಂನಲ್ಲಿ ಏನೇನು ಪತ್ತೆಯಾಗುತ್ತವೋ ಎಂದು ನೆಟ್ಟಿಗರು ಆತಂಕಗೊಂಡಿದ್ದಾರೆ.

ಇದನ್ನೂ ಓದಿ: Italian Parliament: ಇಟಲಿ ಪಾರ್ಲಿಮೆಂಟ್‌ನಲ್ಲಿ ಸಂಸದರ ಮಾರಾಮಾರಿ! ವಿಡಿಯೊ ನೋಡಿ

ಮಾನವನ ಬೆರಳು ಪತ್ತೆ

ಕೆಲವು ದಿನಗಳ ಹಿಂದೆ ಮುಂಬೈಯಲ್ಲಿ ಐಸ್‌ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು. ಮುಂಬೈಯ ಮಲಾಡ್ ಪ್ರದೇಶದ ಮಹಿಳೆಯೊಬ್ಬಳು ದಿನಸಿ ವಸ್ತುಗಳ ಜತೆಗೆ ತನ್ನ ಸಹೋದರನಿಗಾಗಿ ಮೂರು ಬಟರ್ ಸ್ಕಾಚ್ ಕೋನ್ ಐಸ್‌ಕ್ರೀಂ ಅನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದರು. ಮನೆಗೆ ಬಂದ ಐಸ್‌ಕ್ರೀಂ ಅನ್ನು ಸಹೋದರ ಬಿಚ್ಚಿ ತಿನ್ನುವಾಗ ನಾಲಿಗೆಗೆ ಏನೋ ತಗುಲಿದ ಹಾಗೆ ಆಗಿತ್ತು. ಆಗ ಆತ ಸೂಕ್ಷ್ಮವಾಗಿ ನೋಡಿದಾಗ ಮನುಷ್ಯನ ಕೈ ಬೆರಳು ಕಂಡು ಬಂದಿತ್ತು. ಅದು ಸುಮಾರು 2 ಸೆಂಟಿಮೀಟರ್ ಉದ್ದವಿತ್ತು. ಮಹಿಳೆಯ ಸಹೋದರ ವೈದ್ಯನಾಗಿದ್ದ ಕಾರಣ ಆತ ಅದು ಮನುಷ್ಯನ ಕೈ ಬೆರಳು ಎಂದು ಕೂಡಲೇ ಪತ್ತೆ ಹಚ್ಚಿದ್ದ. ಈ ಸುದ್ದಿ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

Continue Reading

ದೇಶ

Madrasa: ಬಕ್ರೀದ್‌ ಹಿನ್ನೆಲೆ ಮದರಸಾದಲ್ಲೇ ಗೋವುಗಳ ಬಲಿ; ನೂರಾರು ಹಿಂದುಗಳಿಂದ ದಾಳಿ, ಸೆಕ್ಷನ್‌ 144 ಜಾರಿ!

Madrasa: ಮೇಡಕ್‌ ಜಿಲ್ಲೆಯಲ್ಲಿರುವ ಮದರಸಾದ ಮೇಲೆ ಹಿಂದುಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಕಲ್ಲುತೂರಾಟ ನಡೆದಿದೆ. ಹಿಂದುಗಳು ಹಾಗೂ ಮುಸ್ಲಿಮರು ಗಾಯಗೊಂಡಿದ್ದಾರೆ. ಗಾಯಗೊಂಡ ಕೆಲ ಮುಸ್ಲಿಮರನ್ನು ಪ್ರಿನ್ಸೆಸ್‌ ಎಸ್ರಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಂದಷ್ಟು ಜನ ಆಸ್ಪತ್ರೆ ಮೇಲೂ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರಾತ್ರೋರಾತ್ರಿ ಪರಿಸ್ಥಿತಿ ಬಿಗಡಾಯಿಸಿದ ಕಾರಣ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಮದರಸಾ ಸುತ್ತಮುತ್ತಲೂ ಸೆಕ್ಷನ್‌ 144 ಜಾರಿಗೊಳಿಸಿದ್ದಾರೆ.

VISTARANEWS.COM


on

Madrasa
Koo

ಹೈದರಾಬಾದ್:‌ ತೆಲಂಗಾಣದ ಮೇಡಕ್‌ ಜಿಲ್ಲೆಯಲ್ಲಿರುವ (Medak District) ಮದರಸಾವೊಂದರಲ್ಲಿ (Madrasa) ಗೋವುಗಳನ್ನು ಹತ್ಯೆ ಮಾಡಲಾಗುತ್ತಿದೆ ಎಂಬ ಕಾರಣಕ್ಕಾಗಿ ನೂರಾರು ಜನ ಮದರಸಾ ಮೇಲೆ ದಾಳಿ ನಡೆಸಿದ್ದಾರೆ. ಮದರಸಾದಲ್ಲಿ ಬಕ್ರೀದ್‌ ಹಬ್ಬದ (Bakrid) ಹಬ್ಬದ ಹಿನ್ನೆಲೆಯಲ್ಲಿ ಗೋವುಗಳನ್ನು ವಧೆ ಮಾಡಲಾಗುತ್ತಿದೆ ಎಂಬ ಸುದ್ದಿ ಹರಡುತ್ತಲೇ ನೂರಾರ ಹಿಂದುಗಳು ಮದರಸಾ ಮೇಲೆ ದಾಳಿ ನಡೆಸಿದ್ದಾರೆ. ಮದರಸಾ ಆಡಳಿತ ಮಂಡಳಿ ಸಿಬ್ಬಂದಿ ಮೇಲೆ ಹಲ್ಲೆ, ಪೀಠೋಪಕರಣಗಳು, ಅಲ್ಲಿದ್ದ ವಾಹನಗಳನ್ನು ಉದ್ರಿಕ್ತರು ಧ್ವಂಸಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮೇಡಕ್‌ ಜಿಲ್ಲೆಯಲ್ಲಿರುವ ಮಿನ್ಹಾಜ್‌ ಉಲ್‌ ಉಲೂಮ್‌ ಮದ್ರಸಾದಲ್ಲಿ ಶನಿವಾರ ರಾತ್ರಿ (ಜೂನ್‌ 15) ಗೋವುಗಳ ವಧೆ ಮಾಡಲಾಗುತ್ತಿದೆ ಎಂಬ ಸುದ್ದಿ ಹರಡಿದೆ. ಹಿಂದು ಸಂಘಟನೆಗಳ ನೂರಾರು ಕಾರ್ಯಕರ್ತರು ದೊಣ್ಣೆ ಸೇರಿ ಹಲವು ಮಾರಕಾಸ್ತ್ರಗಳಿಂದ ಮಸೀದಿ ಮೇಲೆ ದಾಳಿ ನಡೆಸಿದ್ದಾರೆ. ಹಿಂದುಗಳು ದಾಳಿ ನಡೆಸುತ್ತಲೇ ಮುಸ್ಲಿಮರು ಕೂಡ ಕಲ್ಲುತೂರಾಟದ ಮೂಲಕ ಪ್ರತಿದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಹಿಂದುಗಳು ಹಾಗೂ ಮುಸ್ಲಿಮರು ಗಾಯಗೊಂಡಿದ್ದಾರೆ. ಗಾಯಗೊಂಡ ಕೆಲ ಮುಸ್ಲಿಮರನ್ನು ಪ್ರಿನ್ಸೆಸ್‌ ಎಸ್ರಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಂದಷ್ಟು ಜನ ಆಸ್ಪತ್ರೆ ಮೇಲೂ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರಾತ್ರೋರಾತ್ರಿ ಪರಿಸ್ಥಿತಿ ಬಿಗಡಾಯಿಸಿದ ಕಾರಣ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಮದರಸಾ ಸುತ್ತಮುತ್ತಲೂ ಸೆಕ್ಷನ್‌ 144 ಜಾರಿಗೊಳಿಸಿದ್ದಾರೆ. ಹಲವು ಅನಾಮಧೇಯ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮದರಸಾ ಮೇಲೆ ನಡೆದ ದಾಳಿಯನ್ನು ಎಐಎಂಐಎಂ ಶಾಸಕ ಕೆ. ಕೌಸರ್‌ ಮಹಿಯುದ್ದೀನ್‌ ಖಂಡಿಸಿದ್ದಾರೆ. “ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಹಿಂದು ವಾಹಿನಿ ಸಂಘಟನೆಗಳ ಸಾವಿರಾರು ಜನರು ಮದರಸಾ ಮೇಲೆ ದಾಳಿ ನಡೆಸಿ, ಆಡಳಿತ ಮಂಡಳಿಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಮದರಸಾದಲ್ಲಿದ್ದ ಹಲವು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರೆ, ಆಸ್ಪತ್ರೆಗೂ ಬಂದು ಇವರು ಗಲಾಟೆ ಮಾಡಿದ್ದಾರೆ. ಇದು ಖಂಡನೀಯವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೋಮಾಂಸ ಅಕ್ರಮ ವ್ಯಾಪಾರ ನಡೆಸುತ್ತಿದ್ದ 11 ಮುಸ್ಲಿಮರ ಮನೆ ಕೆಡವಿದ ಪೊಲೀಸರು; 150 ಹಸುಗಳ ರಕ್ಷಣೆ

Continue Reading

ವೈರಲ್ ನ್ಯೂಸ್

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Shivraj Chouhan: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆಯ್ಕೆಯಾಗಿದ್ದಾರೆ. ದೆಹಲಿಯಿಂದ ಅವರು ಭೋಪಾಲ್‌ಗೆ ರೈಲಿನಲ್ಲಿ ತೆರಳಿದ್ದು, ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಜನ ಸಾಮಾನ್ಯರೊಂದಿಗೆ ಬೆರೆತು ಪ್ರಯಾಣ ಬೆಳೆಸಿದ ಅವರ ಸರಳತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಶಿವರಾಜ್ ಸಿಂಗ್ ಚೌಹಾಣ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ಅವರ ವಿರುದ್ಧ ಬರೋಬ್ಬರಿ 8.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

VISTARANEWS.COM


on

Shivraj Chouhan
Koo

ಭೋಪಾಲ್‌: ಕೇಂದ್ರ ಸಚಿವ, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Chouhan) ರೈಲಿನಲ್ಲಿ ಸಾಮಾನ್ಯರಂತೆ ಪ್ರಯಾಣ ಬೆಳೆಸಿರುವ ವಿಡಿಯೊ ಸದ್ಯ ವೈರಲ್‌ ಆಗಿದೆ. ಕೇಂದ್ರ ಸಚಿವರ ಸರಳತೆಗೆ ಮೆಚ್ಚುಗೆ ವ್ಯಕ್ತವಾಗಿದೆ (Viral News). ಲೋಕಸಭಾ ಚುನಾವಣೆಯಲ್ಲಿ ತಮ್ಮ ತವರು ಕ್ಷೇತ್ರ ವಿದಿಶಾದಿಂದ ಜಯಗಳಿಸಿರುವ ಅವರು ದೆಹಲಿಯಿಂದ ಭೋಪಾಲ್‌ಗೆ ರೈಲಿನಲ್ಲಿ ತೆರಳಿದರು.

ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ತಮ್ಮ ಪತ್ನಿಯೊಂದಿಗೆ ದೆಹಲಿಯಿಂದ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಸಂಚರಿಸಿದ್ದು, ಪ್ರಯಾಣದ ವೇಳೆ ರೈಲಿನಲ್ಲಿದ್ದ ಸಹಯಾತ್ರಿಕರೊಂದಿಗೆ ನಗು ನಗುತ್ತಾ ಮಾತನಾಡಿದರು. ಚಿಕ್ಕ ಮಕ್ಕಳನ್ನು ಎತ್ತಿ ಮುದ್ದಾಡಿ, ಫೋಟೊಗಳಿಗೆ ಪೋಸ್ ನೀಡಿದರು. ಕೆಲವರು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದು ಸಹ ಕಂಡುಬಂತು.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ರೈಲು ಪ್ರಯಾಣದ ಚಿತ್ರಗಳನ್ನು ಹಂಚಿಕೊಂಡಿರುವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು, ಭಾರತೀಯ ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.

ʼʼಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಮುಂದಾಳತ್ವದಲ್ಲಿ ಭಾರತೀಯ ರೈಲ್ವೆ ನಿರ್ವಹಣೆ ಮತ್ತು ಕಾರ್ಯಾಚರಣೆಯ ಎಲ್ಲ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ನವ ಭಾರತದ ವೇಗದ ಅಗತ್ಯಗಳನ್ನು ಪೂರೈಸಲು ಮತ್ತು ಪ್ರಯಾಣವನ್ನು ಸುರಕ್ಷಿತ ಮತ್ತು ಆರಾಮದಾಯಕವಾಗಿಸಲು ಭಾರತೀಯ ರೈಲ್ವೆ ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ನಡೆದ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನ ಪಾತ್ರ ವಹಿಸಿದ್ದರು. ಮುಖ್ಯಮಂತ್ರಿಯಾಗಿ ಹಲವು ಜನಪರ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ ಖ್ಯಾತಿ ಅವರದ್ದು. ಸದ್ಯ ಶಿವರಾಜ್ ಸಿಂಗ್ ಚೌಹಾಣ್ ಅವರು ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಆಯ್ಕೆಯಾಗಿದ್ದಾರೆ. ಬುಡಕಟ್ಟು ನಾಯಕ ಅರ್ಜುನ್ ಮುಂಡಾ ಅವರ ಬದಲಿಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಹೊಣೆ ಹೊತ್ತಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ಅವರ ವಿರುದ್ಧ ಬರೋಬ್ಬರಿ 8.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಇದನ್ನೂ ಓದಿ: MP Urinating Case: ಮೂತ್ರ ವಿಸರ್ಜನೆ ಕೇಸ್;‌ ಆದಿವಾಸಿ ವ್ಯಕ್ತಿಯ ಕಾಲು ತೊಳೆದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್;‌ ವಿಡಿಯೊ ವೈರಲ್

ಶಿವರಾಜ್ ಸಿಂಗ್ ಚೌಹಾಣ್‌ಗೆ ಸಿಗದ ಸಿಎಂ ಹುದ್ದೆ; ಬಿಕ್ಕಿ ಬಿಕ್ಕಿ ಅತ್ತ ಮಹಿಳೆಯರು!

ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಮರಳಿದ್ದರೂ ಮುಖ್ಯಮಂತ್ರಿಯಾಗಿ ಹೊಸ ಮುಖ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿತ್ತು. ನಿರ್ಗಮಿತ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಪಾಲ ಮುಂಗುಭಾಯ್ ಪಟೇಲ್ ಅವರಿಗೆ ರಾಜೀನಾಮೆ ಸಲ್ಲಿಸಿ ಹೊರ ಬಂದಾಗ ಮಹಿಳಾ ಅಭಿಮಾನಿಗಳು ಅವರನ್ನು ಭೇಟಿ ಮಾಡಿ ತಮ್ಮ ದುಃಖ ವ್ಯಕ್ತಪಡಿಸಿದ್ದರು. ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅಪ್ಪಿಕೊಂಡ ಮಹಿಳೆಯರು ಬಿಕ್ಕಿ ಬಿಕ್ಕಿ ಅತ್ತಿರುವ ವಿಡಿಯೊ ವೈರಲ್ ಆಗಿತ್ತು.

Continue Reading

ವಾಣಿಜ್ಯ

PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

PMAY: ಮಧ್ಯಮ ಮತ್ತು ಬಡ ವರ್ಗದ ಕುಟುಂಬದವರ ಸ್ವಂತ ಸೂರಿನ ಕನಸು ನನಸು ಮಾಡಲೆಂದೇ ಸರ್ಕಾರ ಜಾರಿಗೆ ತಂದ ಯೋಜನೆ ಪಿಎಂಎವೈ (ಪ್ರಧಾನ ಮಂತ್ರಿ ಆವಾಸ್ ಯೋಜನೆ). ಈ ಯೋಜನೆ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಬಡವರಿಗಾಗಿ ಮನೆ ನಿರ್ಮಿಸಿ ಕೊಡುತ್ತಿದೆ. ಹಾಗಾದರೆ ಏನಿದು ಯೋಜನೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರ ಇಲ್ಲಿದೆ.

VISTARANEWS.COM


on

PMAY
Koo

ಬೆಂಗಳೂರು: ಸ್ವಂತ ಮನೆ ಹೊಂದಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಆದರೆ ಈ ದುಬಾರಿ ದುನಿಯಾದಲ್ಲಿ ಸ್ವಂತದ್ದೊಂದು ಸೂರು ಕಟ್ಟಿಕೊಳ್ಳುವ ಆಸೆ ದುಬಾರಿಯೇ ಸರಿ. ಅದರಲ್ಲಿಯೂ ಮಧ್ಯಮ ಮತ್ತು ಬಡ ವರ್ಗದ ಕುಟುಂಬದವರಂತೂ ಇದಕ್ಕಾಗಿ ಜೀವಮಾನವಿಡೀ ದುಡಿದಿದ್ದನ್ನು ಮೀಸಲಿಡಬೇಕಾದ ಸ್ಥಿತಿ ಇದೆ. ಆದರೆ ಗೊತ್ತಿರಲಿ ಇಂತಹವರಿಗೆಂದೇ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana-PMAY) ಜಾರಿಗೆ ತಂದಿದೆ. ಅಂದರೆ ಕೇಂದ್ರ ಸರ್ಕಾರ ಈ ಯೋಜನೆ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಬಡವರಿಗಾಗಿ ಮನೆ ನಿರ್ಮಿಸಿ ಕೊಡುತ್ತಿದೆ. ಹಾಗಾದರೆ ಏನಿದು ಯೋಜನೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರ ಇಲ್ಲಿದೆ (How To Apply For PMAY).

ಏನಿದು ಯೋಜನೆ?

ದೇಶದ ಎಲ್ಲರಿಗೂ ಸೂರು ಒದಗಿಸಬೇಕು ಎನ್ನುವ ಗುರಿಯೊಂದಿಗೆ ಕೇಂದ್ರ ಸರ್ಕಾರ 2015-16ರಲ್ಲಿ ಈ ಯೋಜನೆಯನ್ನು ಪರಿಚಯಿಸಿದೆ. ಈ ಮೂಲಕ ನಗರ ಮತ್ತು ಗ್ರಾಮೀಣದ ಪ್ರದೇಶದ ಬಡ ಜನರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಹೊಂದಿರುವ ಮನೆ ನಿರ್ಮಿಸಿ ಕೊಡಲಾಗುತ್ತದೆ. ಈ ಯೋಜನೆಯಡಿ ವಾರ್ಷಿಕ ಶೇ. 6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ. 10 ವರ್ಷಗಳಲ್ಲಿ ಈ ಯೋಜನೆ ಮೂಲಕ ಸುಮಾರು 4.21 ಮನೆಗಳನ್ನು ನಿರ್ಮಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರ 3 ಕೋಟಿ ಮನೆಗಳನ್ನು ನಿರ್ಮಿಸಿ ಕೊಡುವ ತೀರ್ಮಾನವನ್ನು ಈಗಾಗಲೇ ಪ್ರಕಟಿಸಿದೆ. ಮೊದಲ ಸಂಪುಟ ಸಭೆಯಲ್ಲಿಯೇ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮನೆಯಲ್ಲಿ ಏನಿರಲಿದೆ?

ಸರ್ಕಾರ ನಿರ್ಮಿಸಿ ಕೊಡುವ ಈ ಮನೆ ಅಗತ್ಯ ಮೂಲ ಸೌಕರ್ಯಗಳನ್ನು ಒಳಗೊಂಡಿರುತ್ತದೆ. ಶೌಚಾಲಯ, ಎಲ್‌ಪಿಜಿ ಕನೆಕ್ಷನ್‌, ವಿದ್ಯುತ್‌ ಸಂಪರ್ಕ ಮತ್ತು ನೀರಿನ ಸೌಲಭ್ಯ ಹೊಂದಿರುತ್ತದೆ. ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ನಗರ ಮತ್ತು ಗ್ರಾಮೀಣ ಎನ್ನುವ ಎರಡು ವಿಧವಿದೆ.

ಈ ಯೋಜನೆಯನ್ನು ಫಲಾನುಭವಿಗಳ ವಾರ್ಷಿಕ ಆದಾಯದ ಆಧಾರದಲ್ಲಿ 4 ವರ್ಗಗಳನ್ನಾಗಿ ವಿಂಗಡಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ವರ್ಗ (EWS)- 3 ಲಕ್ಷ ರೂ.ವರೆಗೆ ಆದಾಯ
ಕಡಿಮೆ ಆದಾಯದ ಗುಂಪು (LIG): 3 ಲಕ್ಷ ರೂ.- 6 ರೂ. ಆದಾಯ
ಮಧ್ಯಮ ಆದಾಯದ ಗುಂಪು-1 (MIG-1): 6 ಲಕ್ಷ ರೂ.- 12 ರೂ. ಆದಾಯ
ಮಧ್ಯಮ ಆದಾಯದ ಗುಂಪು-1 (MIG-2): 12 ಲಕ್ಷ ರೂ.- 18 ರೂ. ಆದಾಯ

ಯಾರೆಲ್ಲ ಅರ್ಹರು?

  • ಫಲಾನುಭವಿ ಭಾರತದ ನಿವಾಸಿಯಾಗಿರಬೇಕು.
  • ಫಲಾನುಭವಿ ಶಾಶ್ವತ ಮನೆ ಹೊಂದಿರಬಾರದು.
  • ಫಲಾನುಭವಿ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
  • ಫಲಾನುಭವಿಯ ಹೆಸರು ಪಡಿತರ ಚೀಟಿ ಅಥವಾ ಪಿಬಿಎಲ್ ಪಟ್ಟಿಯಲ್ಲಿರಬೇಕು.
  • ಫಲಾನುಭವಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿರಬೇಕು. ಅಲ್ಲದೆ ಯಾವುದೇ ಮಾನ್ಯ ಗುರುತಿನ ಚೀಟಿಯನ್ನು ಹೊಂದಿರಬೇಕು (ಅಧಾರ್‌ ಕಾರ್ಡ್‌, ಲೈಸನ್ಸ್‌ ಇತ್ಯಾದಿ).
  • ಫಲಾನುಭವಿಯ ಕುಟುಂಬದವರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು.

ಯೋಜನೆ ವೈಶಿಷ್ಟ್ಯ

  • ಈ ಯೋಜನೆ ದೇಶದ ಎಲ್ಲ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಅನ್ವಯವಾಗುತ್ತದೆ
  • ಈ ಯೋಜನೆಯಡಿ, ಎಲ್ಲ ಫಲಾನುಭವಿಗಳಿಗೆ ವಾರ್ಷಿಕ ಶೇ. 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ಲಭ್ಯ.
  • ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮೀಸಲು.
  • ಗೃಹ ನಿರ್ಮಾಣದಲ್ಲಿ ಸುಸ್ಥಿರ, ಪರಿಸರ ಸ್ನೇಹಿ ತಂತ್ರಜ್ಞಾನ ಬಳಕೆ.
  • ಮನೆ ಅಗತ್ಯ ಮೂಲ ಸೌಕರ್ಯ ಹೊಂದಿದ್ದು, ಹೆಚ್ಚುವರಿ ಕಾಮಗಾರಿ ಬೇಕಾದರೆ ಕೈಗೊಳ್ಳಬಹುದಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ https://pmaymis.gov.in/ಗೆ ಭೇಟಿ ನೀಡಿ
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಹೋಮ್‌ಪೇಜ್‌ನಲ್ಲಿ ಕಂಡು ಬರುವ PM Awas Yojana ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.

ಆಫ್‌ಲೈನ್‌ ಮೂಲಕವೂ ನೀವು ಅರ್ಜಿ ಸಲ್ಲಿಬಹುದು. ಇದಕ್ಕಾಗಿ ನೀವು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (Common Service Center) ಭೇಟಿ ನೀಡಿ. ಹೆಚ್ಚಿನ ಮಾಹಿತಿಗಾಗಿ 1800-11-3377, 1800-11-3388 ನಂಬರ್‌ಗೆ ಕರೆ ಮಾಡಿ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು

  • ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆ.
  • ಅರ್ಜಿದಾರರ ಫೋಟೊ
  • ಫಲಾನುಭವಿಯ ಜಾಬ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಸಂಖ್ಯೆ.
  • ಬ್ಯಾಂಕ್ ಪಾಸ್‌ಬುಕ್.
  • ಸ್ವಚ್ಛ ಭಾರತ್ ಮಿಷನ್ (SBM) ನೋಂದಣಿ ಸಂಖ್ಯೆ.
  • ಮೊಬೈಲ್ ನಂಬರ್.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

Continue Reading
Advertisement
Petrol Diesel Price
ರಾಜಕೀಯ1 min ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Team India Coach
ಕ್ರೀಡೆ14 mins ago

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

murder Case
ಬೆಂಗಳೂರು ಗ್ರಾಮಾಂತರ20 mins ago

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

R Ashok
ಕರ್ನಾಟಕ25 mins ago

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

Viral News
ವೈರಲ್ ನ್ಯೂಸ್44 mins ago

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Chandan Shetty Students Party Video Song Vidyarthi Vidyarthiniyare Movie
ಸ್ಯಾಂಡಲ್ ವುಡ್57 mins ago

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Vijayanagara News
ವಿಜಯನಗರ1 hour ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Pakistan Cricket Team
ಕ್ರಿಕೆಟ್1 hour ago

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Madrasa
ದೇಶ1 hour ago

Madrasa: ಬಕ್ರೀದ್‌ ಹಿನ್ನೆಲೆ ಮದರಸಾದಲ್ಲೇ ಗೋವುಗಳ ಬಲಿ; ನೂರಾರು ಹಿಂದುಗಳಿಂದ ದಾಳಿ, ಸೆಕ್ಷನ್‌ 144 ಜಾರಿ!

Actor Darshan teacher Addanda Cariappa sad on arrested darshan
ಸಿನಿಮಾ1 hour ago

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ1 hour ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ23 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌