PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ! - Vistara News

ಪ್ರಮುಖ ಸುದ್ದಿ

PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ!

PoK Crisis: ಜಮ್ಮು-ಕಾಶ್ಮೀರ ಜಾಯಿಂಟ್‌ ಅವಾಮಿ ಆಕ್ಷನ್‌ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಹತ್ತಾರು ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌ ಮಾಡಿದರೂ ನಿಯಂತ್ರಿಸಲು ಆಗುತ್ತಿಲ್ಲ ಎನ್ನಲಾಗಿದೆ.

VISTARANEWS.COM


on

PoK
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ:‌ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (PoK Crisisi) ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಸರ್ಕಾರ, ಅಧಿಕಾರಿಗಳ ವಿರುದ್ಧವೇ ಜನ ದಂಗೆ ಎದ್ದಿದ್ದಾರೆ. ಹಣದುಬ್ಬರ ಏರಿಕೆ (Inflation), ಹೆಚ್ಚಿನ ತೆರಿಗೆ ಹಾಗೂ ವಿದ್ಯುತ್‌ ಪೂರೈಕೆಯ ಕೊರತೆಯಿಂದಾಗಿ ಬೇಸತ್ತಿರುವ ಜನ ಸರ್ಕಾರದ ಕಚೇರಿಗಳು, ಪೊಲೀಸ್‌ ಅಧಿಕಾರಿಗಳ ಮೇಲೆಯೇ ದಾಳಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ, ಪಾಕ್‌ ಆಕ್ರಮಿತ ಕಾಶ್ಮೀರವನ್ನು ಭಾರತದ ಜತೆ ವಿಲೀನಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಹಾಗಾಗಿ, ಪಿಒಕೆ ಮೇಲೆ ಪಾಕಿಸ್ತಾನದ (Pakistan) ನಿಯಂತ್ರಣವು ಪೂರ್ತಿ ಕೈತಪ್ಪಿಹೋಗಿದೆ ಎಂದು ಹೇಳಲಾಗುತ್ತಿದೆ.

ಹೌದು, ಕಳೆದ ಎರಡು ದಿನಗಳಿಂದ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಸುಮಾರು 10 ಜಿಲ್ಲೆಗಳಲ್ಲಿ ಜನ ಅಕ್ಷರಶಃ ದಂಗೆಯೆದ್ದಿದ್ದಾರೆ. ಮುಜಫರಾಬಾದ್‌ನಿಂದ ರಾವಲ್‌ಕೋಟ್‌ವರೆಗೆ ಜನ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಸೇನೆ ಹಾಗೂ ಪೊಲೀಸರ ವಾಹನಗಳ ಮೇಲೆ ಕಲ್ಲುತೂರಾಟ, ಸರ್ಕಾರಿ ಕಚೇರಿಗಳ ಮೇಲೆ ದಾಳಿ, ಪೊಲೀಸರ ಮೇಲೆ ಹಲ್ಲೆ ಸೇರಿ ಹಲವು ರೀತಿಯ ಹಿಂಸಾಚಾರ ಭುಗಿಲೆದ್ದಿದೆ. ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನವು ಪಿಒಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಭಾರತದ ಜತೆ ವಿಲೀನಕ್ಕೆ ಬೇಡಿಕೆ

ಭಾರತದ ಜತೆ ಪಾಕ್‌ ಆಕ್ರಮಿತ ಕಾಶ್ಮೀರವನ್ನು ವಿಲೀನಗೊಳಿಸಬೇಕು ಎಂಬುದು ಕೂಡ ಪ್ರತಿಭಟನಾಕಾರರ ಬೇಡಿಕೆಯಾಗಿದೆ. ಭಾರತದ ಪರ ಘೋಷಣೆಗಳು, ಭಾರತದ ಧ್ವಜ ಪ್ರದರ್ಶನಗಳು ಕೂಡ ನಡೆದಿವೆ. ಇನ್ನು, ಸ್ವಾತಂತ್ರ್ಯ ಬೇಕು, ಸ್ವಾತಂತ್ರ್ಯಕ್ಕಾಗಿ ಹೋರಾಟ ಎಂಬ ಘೋಷಣೆಗಳು ಕೂಡ ಕೇಳಿಬಂದಿವೆ. ಪೊಲೀಸರು, ಭದ್ರತಾ ಸಿಬ್ಬಂದಿ ಹಾಗೂ ಜನರ ನಡುವಿನ ಸಂಘರ್ಷಕ್ಕೆ ಒಬ್ಬ ಪೊಲೀಸ್‌ ಅಧಿಕಾರಿ ಬಲಿಯಾಗಿದ್ದಾರೆ. ಪೊಲೀಸರು, ಸೈನಿಕರು ಸೇರಿ ಸುಮಾರು 90 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಕಾರಣಕ್ಕೂ ಜನರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ಆಗುತ್ತಿಲ್ಲ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಿಂದ ಮಾಹಿತಿ ಲಭ್ಯವಾಗಿದೆ.

ಜಮ್ಮು-ಕಾಶ್ಮೀರ ಜಾಯಿಂಟ್‌ ಅವಾಮಿ ಆಕ್ಷನ್‌ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಹತ್ತಾರು ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌ ಮಾಡಿದರೂ ನಿಯಂತ್ರಿಸಲು ಆಗುತ್ತಿಲ್ಲ ಎನ್ನಲಾಗಿದೆ. ಈಗಾಗಲೇ ಪಿಒಕೆ ನಮ್ಮದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಿಒಕೆ ಜನರೇ ಭಾರತದ ಜತೆ ವಿಲೀನಗೊಳ್ಳಲು ಬಯಸುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಇದರ ಬೆನ್ನಲ್ಲೇ, ಬಲೂಚಿಸ್ತಾನದ ಜತೆಗೆ ಪಿಒಕೆಯಲ್ಲೂ ದಂಗೆ ಶುರುವಾಗಿದೆ.

ಇದನ್ನೂ ಓದಿ: Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಮದುವೆಗೆ ಹೋದವರಿಗೆ 66 ಸಾವಿರ ರೂ. ನಗದು, ಭರ್ಜರಿ ಗಿಫ್ಟ್‌ ಕೊಟ್ಟ ದಂಪತಿ; ಎಲ್ಲಿ ಅಂತೀರಾ…?‌

ಚೀನಾದಲ್ಲಿ ನಡೆದ ಶ್ರೀಮಂತರ ಮದುವೆಗೆ ಜಗತ್ತಿನ ಮೂಲೆ ಮೂಲೆಯಿಂದ ಸಾವಿರಾರು ಜನ ಮದುವೆಗೆ ಹಾಜರಾಗಿದ್ದಾರೆ. ಮದುವೆಗೆ ಬರುವವರಿಗೆ ಎಲ್ಲರಿಗೂ ವಿಮಾನದ ಟಿಕೆಟ್‌ ಬುಕ್‌ ಮಾಡಲಾಗಿದೆ. ಫೈವ್‌ ಸ್ಟಾರ್‌ ಹೋಟೆಲ್‌ನಲ್ಲಿ ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಅದ್ಧೂರಿ ಮದುವೆಯ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Rich Wedding
Koo

ಬೀಜಿಂಗ್‌: ಸಂಬಂಧಿಕರು, ಸ್ನೇಹಿತರು, ಹಿತೈಷಿಗಳ ಮದುವೆಗೆ ಹೋದರೆ ಮುಯ್ಯಿ ಮಾಡಿ ಬರುವುದು, ಉಡುಗೊರೆ ನೀಡಿ, ಶುಭ ಹಾರೈಸಿ ಬರುವುದು ವಾಡಿಕೆ. ಆದರೆ, ಮದುವೆಗೆ ಹೋದವರಿಗೇ ಯಾರೂ ಉಡುಗೊರೆ ಕೊಡುವುದಿಲ್ಲ. ಶ್ರೀಮಂತರ ಮದುವೆಯಾದರೆ ಸಣ್ಣ-ಪುಟ್ಟ ಉಡುಗೊರೆ ನೀಡುತ್ತಾರೆ. ಆದರೆ, ಚೀನಾದಲ್ಲಿ (China) ಹಾಗಲ್ಲ. ಶ್ರೀಮಂತ ಯುವಕ-ಯುವತಿಯು ಅದ್ಧೂರಿಯಾಗಿ (Rich Wedding) ಮದುವೆಯಾಗಿದ್ದು, ಮದುವೆಗೆ ಹಾಜರಾದವರಿಗೇ 66 ಸಾವಿರ ರೂ. ನಗದು ಉಡುಗೊರೆ ಸೇರಿ ಹಲವು ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ.

ಪ್ರವಾಸಿ ಇನ್‌ಫ್ಲುಯೆನ್ಸರ್‌ ಆಗಿರುವ ದಾನಾ ಚಾಂಗ್‌ ಅವರು ಶ್ರೀಮಂತರ ಮದುವೆಯೊಂದರ ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಏಷ್ಯಾದ ಅದ್ಧೂರಿ ಮದುವೆಯು ಅದ್ಧೂರಿಯಾಗಿದೆ. ನಾನು ನನ್ನ ಜೀವನದಲ್ಲಿಯೇ ಇಂತಹ ಅದ್ಧೂರಿ ಮದುವೆಯನ್ನು ನೋಡಿಲ್ಲ” ಎಂದು ಪೋಸ್ಟ್‌ ಮಾಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಆದರೆ, ಅದು ಯಾರ ಮದುವೆ? ಯುವಕ-ಯುವತಿಯ ತಂದೆ-ತಾಯಿ ಯಾರು? ಅವರು ಎಷ್ಟು ಶ್ರೀಮಂತರು ಎಂಬುದು ಸೇರಿ ಯಾವುದೇ ಮಾಹಿತಿಯನ್ನು ಅವರು ಹಂಚಿಕೊಂಡಿಲ್ಲ.

ಮದುವೆಗೆ ಹಾಜರಾಗುವವರಿಗೆ ಏನೆಲ್ಲ ಸೌಲಭ್ಯ?

ಜಗತ್ತಿನ ಮೂಲೆ ಮೂಲೆಯಿಂದ ಸಾವಿರಾರು ಜನ ಮದುವೆಗೆ ಹಾಜರಾಗಿದ್ದಾರೆ. ಮದುವೆಗೆ ಬರುವವರಿಗೆ ಎಲ್ಲರಿಗೂ ವಿಮಾನದ ಟಿಕೆಟ್‌ ಬುಕ್‌ ಮಾಡಲಾಗಿದೆ. ಫೈವ್‌ ಸ್ಟಾರ್‌ ಹೋಟೆಲ್‌ನಲ್ಲಿ ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಇನ್ನು, ಫೈವ್‌ ಸ್ಟಾರ್‌ ಹೋಟೆಲ್‌ನಿಂದ ಮದುವೆ ನಡೆಯುವ ಸ್ಥಳಕ್ಕೆ ರೋಲ್ಸ್‌ ರಾಯ್ಸ್‌ ಕಾರಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಇನ್ನು, ಮದುವೆ ಮಂಟಪದಲ್ಲಿ ಊಟ-ತಿಂಡಿ, ಐಸ್‌ಕ್ರೀಮ್‌ಗಳ ವೈವಿಧ್ಯತೆಗಂತೂ ಲೆಕ್ಕವೇ ಇರಲಿಲ್ಲ ಎಂದು ತಿಳಿದುಬಂದಿದೆ.

ಭಾರತದಲ್ಲೂ ಮುಕೇಶ್‌ ಅಂಬಾನಿ ಅವರಂತಹ ಶ್ರೀಮಂತರು ಅದ್ಧೂರಿಯಾಗಿ ಮದುವೆ ಮಾಡುತ್ತಾರೆ. ವಿರಾಟ್‌ ಕೊಹ್ಲಿ, ರಣವೀರ್‌ ಸಿಂಗ್‌ ಅವರಂತಹ ಸೆಲೆಬ್ರಿಟಿಗಳು ಇಟಲಿ ಸೇರಿ ಬೇರೆ ದೇಶಗಳಲ್ಲಿ ಅದ್ಧೂರಿಯಾಗಿ ಮದುವೆಯಾಗಿ, ಭಾರತದಲ್ಲಿ ರೆಸೆಪ್ಶನ್‌ ಇಟ್ಟುಕೊಳ್ಳುತ್ತಾರೆ. ಆದರೆ, ಯಾರೂ ಮದುವೆಗೆ ಬಂದವರಿಗೆ ಸಾವಿರಾರು ರೂ. ನಗದು, ದುಬಾರಿ ಉಡುಗೊರೆ ಕೊಡುವುದಿಲ್ಲ. ಕೊಡಬೇಕು ಎಂಬ ಸಂಪ್ರದಾಯ ಇಲ್ಲದಿದ್ದರೂ ಚೀನಾದಲ್ಲಿ ಮಾತ್ರ ಶ್ರೀಮಂತ ಯುವಕ-ಯುವತಿಯು ಉಡುಗೊರೆ ಕೊಟ್ಟು ಸುದ್ದಿಯಾಗಿದ್ದಾರೆ.

ಇದನ್ನೂ ಓದಿ: Sapthami Gowda: ʻಯುವʼ ಹೇಳಿದ್ದಕ್ಕೆ ಮುಂದುವರಿದೆ, ನನ್ನದೂ ತಪ್ಪಿದೆ; ಸಪ್ತಮಿ ಗೌಡ ಆಡಿಯೊ ವೈರಲ್!

Continue Reading

ಕ್ರೀಡೆ

T20 World Cup Final: ಚೋಕರ್ಸ್ ಹಣೆಪಟ್ಟಿ ಕಳಚಿಕೊಳ್ಳುವುದೇ ದಕ್ಷಿಣ ಆಫ್ರಿಕಾ?; ನಾಳೆ ಫೈನಲ್​

T20 World Cup Final: ಈ ಬಾರಿಯ ವಿಶ್ವಕಪ್​ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಪ್ರದರ್ಶನ ಮತ್ತು ಅದೃಷ್ಟ ನೋಡುವಾಗ ಪ್ರಶಸ್ತಿ ಗೆದ್ದು ಚೋಕರ್ಸ್ ಹಣೆಪಟ್ಟಿಯನ್ನು ಕಳಚುವ ಸಾಧ್ಯತೆಯೊಂದು ಕಂಡುಬಂದಿದೆ. ಸೋಲುವ ಪಂದ್ಯವನ್ನು ಕೂಡ ಅಚ್ಚರಿ ಎಂಬಂತೆ 1 ರನ್​ನಿಂದ ಗೆದ್ದ ನಿದರ್ಶನ ಕೂಡ ಇದೆ.

VISTARANEWS.COM


on

T20 World Cup Final
Koo

ಬಾರ್ಬಡೋಸ್​: ದಕ್ಷಿಣ ಆಫ್ರಿಕಾ ತಂಡ ತನ್ನ ಚೋಕರ್ಸ್ ಹಣೆಪಟ್ಟಿಯನ್ನು ಕಳಚಿಕೊಳ್ಳಲು ಇನ್ನೊಂದೆ ಹೆಜ್ಜೆ ಮಾತ್ರ ಬಾಕಿ ಉಳಿದಿದೆ. ನಾಳೆ ನಡೆಯುವ ಟಿ20 ವಿಶ್ವಕಪ್​ ಟೂರ್ನಿಯ ಫೈನಲ್(T20 World Cup Final)​ ಪಂದ್ಯದಲ್ಲಿ ಭಾರತದ(South Africa vs India Final) ಸವಾಲು ಎದುರಿಸಲಿದೆ. 32 ವರ್ಷಗಳ ಬಳಿಕ ಐಸಿಸಿ ಟೂರ್ನಿಯಲ್ಲಿ ಮೊದಲ ಬಾರಿಗೆ ಅಜೇಯವಾಗಿ ಫೈನಲ್ ಪ್ರವೇಶಿಸಿರುವವ ಹರಿಣ ಪಡೆಗೆ ಈ ಬಾರಿಯಾದರೂ ಕಪ್​ ಗೆಲ್ಲುವ ಭಾಗ್ಯ ಇದೆಯಾ ಎಂದು ಕಾದು ನೋಡಬೇಕಿದೆ. ಈ ಹಿಂದೆ ಆಡಿದ ಎಲ್ಲ 7(ಏಕದಿನ, ಟಿ20) ಸೆಮಿಫೈನಲ್​ ಪಂದ್ಯದಲ್ಲಿಯೂ ಸೋಲು ಕಂಡಿತ್ತು.

ದಕ್ಷಿಣ ಆಫ್ರಿಕಾ ತಂಡ(South Africa) 1992ರಲ್ಲಿ ಸಿಡ್ನಿಯಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಮೊದಲ ಬಾರಿಗೆ​ ಸೆಮಿಫೈನಲ್​ ಪ್ರವೇಶಿಸಿತ್ತು. ಇನ್ನೇನು ಪಂದ್ಯ ಗೆಲ್ಲುತ್ತದೆ ಎನ್ನುವಷ್ಟರಲ್ಲಿ ಮಳೆ ಸುರಿದು ಪಂದ್ಯ ಸ್ಥಗಿತಗೊಂಡಿತು. 13 ಎಸೆತಗಳಲ್ಲಿ ಗೆಲುವಿಗೆ 22 ರನ್ ಬೇಕಿತ್ತು.​ ಮತ್ತೆ ಆಟ ಮುಂದುವರಿದಾಗ ಮೊಟ್ಟ ಮೊದಲ ಬಾರಿಗೆ ಪರಿಚವಾಗಿದ್ದ ಡಕ್​ವರ್ತ್​ ಲೂಯಿಸ್​ ನಿಯದ ಪ್ರಕಾರ ಹರಿಣ ಪಡೆಗೆ 1 ಎಸೆತದಲ್ಲಿ 22 ರನ್​ ಗಳಿಸುವ ಗುರಿ ನೀಡಲಾಯಿತು. ಈ ಪಂದ್ಯ ಸೋತ ಬಳಿಕ 1999ರಲ್ಲಿ ಬರ್ಮಿಂಗ್‌ಹ್ಯಾಮ್​ನಲ್ಲಿ ಆಸ್ಟ್ರೇಲಿಯ ವಿರುದ್ದದ ಪಂದ್ಯ ಟೈ ಆಗಿತ್ತು. ಆ ಪಂದ್ಯದಲ್ಲಿ ಆಸ್ಟ್ರೇಲಿಯ ಲೆಕ್ಕಾಚಾರದ ಮೂಲಕ ಫೈನಲ್ ಪ್ರವೇಶಿಸಿ ಕಪ್ ಗೆದ್ದಿತ್ತು. 2007 ರಲ್ಲಿ ಆಸ್ಟ್ರೇಲಿಯ ವಿರುದ್ಧ ಗ್ರಾಸ್‌ ಐಲೆಟ್‌ ನಲ್ಲಿ 7 ವಿಕೆಟ್‌ ಸೋಲು ಅನುಭವಿಸಿ ಆಘಾತಕ್ಕೆ ಗುರಿಯಾಗಿತ್ತು. 2015 ರಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಆಕ್ಲೆಂಡ್‌ ನಲ್ಲಿ 4 ವಿಕೆಟ್‌ ಸೋಲು ಅನುಭವಿಸಿ ಚೋಕರ್ಸ್ ಎಂದು ಮತ್ತೆ ಕರೆಸಿಕೊಳ್ಳುವ ಸ್ಥಿತಿ ಹರಿಣಗಳ ಪಾಲಿಗೆ ಬಂದೊದಗಿತ್ತು.

ಆದರೆ, ಈ ಬಾರಿಯ ವಿಶ್ವಕಪ್​ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಪ್ರದರ್ಶನ ಮತ್ತು ಅದೃಷ್ಟ ನೋಡುವಾಗ ಪ್ರಶಸ್ತಿ ಗೆದ್ದು ಚೋಕರ್ಸ್ ಹಣೆಪಟ್ಟಿಯನ್ನು ಕಳಚುವ ಸಾಧ್ಯತೆಯೊಂದು ಕಂಡುಬಂದಿದೆ. ಏಕೆಂದರೆ ಪ್ರತಿ ಬಾರಿ ಮಳೆಯಿಂದ ಹಿನ್ನಡೆ ಅನುಭವಿಸುವ ದಕ್ಷಿಣ ಆಫ್ರಿಕಾ ಈ ಬಾರಿ ವರದಾನವಾಗಿಯೇ ಪರಿಣಮಿಸಿದೆ. ಜತೆಗೆ ಸೋಲುವ ಪಂದ್ಯವನ್ನು ಕೂಡ ಅಚ್ಚರಿ ಎಂಬಂತೆ 1 ರನ್​ನಿಂದ ಗೆದ್ದ ನಿದರ್ಶನ ಕೂಡ ಇದೆ. ಇದನೆಲ್ಲ ನೋಡುವಾಗ ಐಡೆನ್​ ಮಾರ್ಕ್ರಮ್​ ಐತಿಹಾಸಿಕ ಕಪ್​ ಎತ್ತಿ ಹಿಡಿಯುವ ಸಾಧ್ಯತೆಯೊಂದು ಕಂಡುಬಂದಿದೆ.

ಇದನ್ನೂ ಓದಿ IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

ಡಿ ಕಾಕ್​ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್​ಗಳು​ ಇದುವರೆಗೂ ನಿರೀಕ್ಷತ ಬ್ಯಾಟಿಂಗ್​ ಪ್ರದರ್ಶನ ತೋರದಿದ್ದರು. ಕೂಡ ಬೌಲಿಂಗ್​ ಮತ್ತು ಫೀಲ್ಡಿಂಗ್​ನಲ್ಲಿ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರುವ ಮೂಲಕ ಪಂದ್ಯವನ್ನು ಗೆದ್ದಿದ್ದಾರೆ. ಆದರೆ ಫೈನಲ್​ ಪಂದ್ಯದಲ್ಲಿ ಎಲ್ಲರು ಬ್ಯಾಟಿಂಗ್​ ನಡೆಸುವ ಅಗತ್ಯವಿದೆ. ಏಕೆಂದರೆ ಇಲ್ಲಿ ಸೋತರೆ ಮತ್ತೊಂದು ಪಂದ್ಯವಿಲ್ಲ.

Continue Reading

ಕರ್ನಾಟಕ

CM Siddaramaiah: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರಿಲ್ಲ, ಕೇಂದ್ರ ಅನುಮತಿ ನೀಡಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

CM Siddaramaiah: ಮುಂದಿನ ದಿನಗಳಲ್ಲಿ ಸಂಸತ್ತಿನ ಒಳಗೆ ಹಾಗೂ ಹೊರಗೆ ರಾಜ್ಯದ ಸಂಸದರು ಇನ್ನಷ್ಟು ಪರಿಣಾಮಕಾರಿಯಾಗಿ ದನಿ ಎತ್ತಿ ರಾಜ್ಯದ ಹಿತ ಕಾಪಾಡಬೇಕು ಎಂದು ನವ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

VISTARANEWS.COM


on

Koo

ನವ ದೆಹಲಿ: ನಗರದ ಕರ್ನಾಟಕ‌ ಭವನದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಕೇಂದ್ರ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇರುವ ಪ್ರಸ್ತಾವನೆಗಳು ಹಾಗೂ ರಾಜ್ಯದ ಹಿತದೃಷ್ಟಿಯಿಂದ ಆಗಬೇಕಾಗಿರುವ ಕೆಲಸಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಸಭೆ ನಡೆಸಿದರು. ರಾಜಕೀಯ ಉದ್ದೇಶವಿಲ್ಲದ, ಅದಕ್ಕೂ ಮೀರಿ ನಮ್ಮ ರಾಜ್ಯದ ಹಿತಾಸಕ್ತಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರು ಸದನದ ಒಳಗೆ ಹಾಗೂ ಹೊರಗೆ ಒಕ್ಕೊರಲಿನಿಂದ ಸೌಹಾರ್ದಯುತವಾಗಿ ದನಿ ಎತ್ತಲು ಸಿಎಂ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದ್ದಾರೆ.

ನಾವು ಬೇರೆ ಬೇರೆ ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸುತ್ತಿರಬಹುದು. ಆದರೆ ಕರ್ನಾಟಕದ ಹಿತಾಸಕ್ತಿಯ ವಿಷಯ ಬಂದಾಗ ನಾವೆಲ್ಲರೂ ಒಂದೇ ವೇದಿಕೆಯವರು. ಈ ವಿಷಯದಲ್ಲಿ ನಮ್ಮ ಹಿಂದಿನವರೂ ಸಹ ಮಾದರಿಗಳಾಗಿದ್ದಾರೆ.
ನೆಲ, ಜಲ, ಸಂಪನ್ಮೂಲ, ಭಾಷೆ, ಸಂಸ್ಕೃತಿ, ಐಡೆಂಟಿಟಿ ಇತ್ಯಾದಿ ವಿಚಾರಗಳಿಗೆ ಬಂದಾಗ ನಮಗೆ ಪಕ್ಷಗಳಿಲ್ಲ. ಕರ್ನಾಟಕ ಹಿತಾಸಕ್ತಿಯ ರಕ್ಷಣೆ ನಮ್ಮ ಆದ್ಯತೆ ಎಂದು ಸಂಸದರು, ಸಚಿವರಿಗೆ ಸಿಎಂ ತಿಳಿಸಿದ್ದಾರೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಹದಾಯಿ ಕುಡಿಯುವ ನೀರಿನ ಯೋಜನೆ ಸಂಬಂಧ ಕೋರ್ಟ್‌ನಲ್ಲಿ ಕೇಸ್ ಇದೆ ಅಂತ ಬಿಜೆಪಿ ಹೇಳಿದೆ. ಆದರೆ, ನಾವು ಡಿಪಿಆರ್ ಕಳುಹಿಸಿದ್ದೇವೆ. ಟೆಂಡರ್ ಕೂಡ ಕರೆದಿದ್ದೇವೆ, ಗೆಜೆಟ್ ನೋಟಿಫಿಕೇಟಿನ್ ಕೂಡ ಆಗಿದೆ. ಅಲ್ಲಿ ಅಡ್ಡಿ ಇರುವುದು ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ಅಷ್ಟೇ ಬೇಕು. ಇದು ಕೇಂದ್ರ ಸರ್ಕಾರದ ಕೆಲಸ. ಕೋರ್ಟ್‌ನಲ್ಲಿ ಇದೆ ಅಂತ ಹೇಳೋದು ಸರಿ ಅಲ್ಲ. ಆ ಕೆಲಸ ಮಾಡಿಕೊಡಬೇಕು ಎಂದು ಹೇಳಿದರು.

ಅಪ್ಪರ್ ಭದ್ರಾ ಯೋಜನೆ 5300 ಕೋಟಿ ಘೋಷಣೆ ಮಾಡಿದ್ದಾರೆ. 23-24ನೇ ಆರ್ಥಿಕ ವರ್ಷ ಮುಗಿದಿದೆ. ಆದರೆ ಇವತ್ತಿನವರೆಗೆ ದುಡ್ಡು ಬಿಡುಗಡೆ ಮಾಡಿಲ್ಲ. ನಿರ್ಮಲಾ ಸೀತಾರಾಮನ್ ಅವರು ನಿಮ್ಮಲ್ಲೇ ಟೆಕ್ನಿಕಲ್ ಪ್ರಾಬ್ಲಮ್ ಇದೆ ಅಂತ ಹೇಳುತ್ತಾರೆ. ಇನ್ನು ಮೇಕೆದಾಟು ಯೋಜನೆ 2018ರಿಂದ ಪೆಂಡಿಂಗ್ ಇದೆ. ನಾವು ಅಂದಾಜು ಮೊತ್ತ 9000 ಕೋಟಿ ಮಾಡಿ ಡಿಪಿಆರ್ ಮಾಡಿದ್ದೇವೆ. ಕೇಂದ್ರ ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೂ ನೀಡಿದ್ದೇವೆ.

ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರು ಇಲ್ಲ ಅಂತ ನಾವು ಭಾವಿಸುತ್ತೇವೆ. ತಮಿಳುನಾಡಿಗೆ ಕೊಡುವ ನೀರು ಕೊಟ್ಟು, ನಾವು ಸಹ ನೀರು ಇಟ್ಟುಕೊಳ್ಳಬಹುದು. ಇದರಿಂದ ತಮಿಳುನಾಡಿಗೂ ಅನುಕೂಲ ಆಗುತ್ತೆ. ಈ ವಿಚಾರವನ್ನು ಕೇಂದ್ರ ತೀರ್ಮಾನ ಮಾಡಬೇಕು ಅಂತ ಗಮನಕೆ ತಂದಿದ್ದೇವೆ. ಬೆಂಗಳೂರಿಗೆ ಕುಡಿಯುವ ನೀರು, ವಿದ್ಯುತ್ ತಯಾರಿಕೆ ಮಾಡೋಕೆ ಅನುಕೂಲ ಆಗುತ್ತದೆ. 2022ರಲ್ಲಿ 177 ಟಿಎಂಸಿ ನೀರು ಜೊತೆಗೆ ಹೆಚ್ಚುವರಿ ನೀರು ಅವರಿಗೆ ಹೋಗಿದೆ. 2010ರಲ್ಲಿ ಅಪ್ಪರ್ ಕೃಷ್ಣಾ ಪ್ರಾಜೆಕ್ಟ್ ಟ್ರಿಬ್ಯುನಲ್‌ನಲ್ಲಿ ತೀರ್ಮಾನ ಆಗಿದೆ. ಆದರೆ, ಗೆಜೆಟ್ ನೋಟಿಫಿಕೇಟಿನ್ ಆಗಿಲ್ಲ, ಅದಕ್ಕೆ ಗೆಜೆಟ್ ನೋಟಿಫಿಕೇಷನ್ ಮಾಡಲು ಕೇಂದ್ರ ಸರ್ಕಾರಕ್ಕೆ ಹೇಳಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡುತ್ತೇವೆ ಎಂದರು.

ಇದನ್ನೂ ಓದಿ | ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

ಚರ್ಚಿಸಿದ ಪ್ರಮುಖ ವಿಷಯಗಳು

  1. ಬೆಂಗಳೂರು ಮತ್ತು ಸುತ್ತಮುತ್ತಲ ಜನ ವಸತಿ ಪ್ರದೇಶಗಳಿಗೆ ನಿರಾತಂಕವಾಗಿ ಕುಡಿಯುವ ನೀರನ್ನು ಪೂರೈಸಲು ಹಾಗೂ ಆಣೆಕಟ್ಟೆಯಿಂದ ಹರಿಯುವ ನೀರಿನಿಂದ ವಿದ್ಯುತ್ ಉತ್ಪಾದಿಸಲು ರಾಜ್ಯ ಸರ್ಕಾರವು 67 ಟಿಎಂಸಿ ಸಾಮರ್ಥ್ಯದ ಮೇಕೆದಾಟು ಯೋಜನೆಯನ್ನು ರೂಪಿಸಿದೆ. ಈ ಪ್ರಸ್ತಾವನೆಯು 2018 ರಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇದೆ. ಈ ಯೋಜನೆಗೆ ಹಲವು ಹಂತಗಳ ಅನುಮತಿ ಅಗತ್ಯವಿದೆ. ಪ್ರಸ್ತುತ ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಮಂತ್ರಾಲಯವು environmental clearance ಅನ್ನು ಶೀಘ್ರವಾಗಿ ಮಾಡಿಕೊಡುವಂತೆ ಒತ್ತಾಯಿಸುವುದು.
  2. ಭದ್ರಾ ಯೋಜನೆ ಮೂಲಕ 2.25 ಲಕ್ಷ ಹೆಕ್ಟೇರ್ ಎತ್ತುವರಿ ನೀರಾವರಿ ಮೂಲಕ ವ್ಯವಸಾಯಕ್ಕಾಗಿ / ಕುಡಿಯುವ ನೀರಿಗಾಗಿ ನೀರನ್ನು ಒದಗಿಸುವ ಪ್ರಸ್ತಾವನೆಯು 2020 ರಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇದೆ. ಇದಕ್ಕಾಗಿ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ 5,300 ರೂ. ಕೋಟಿ ಅನುದಾನವನ್ನು ಘೋಷಿಸಲಾಗಿದೆ. ಆದರೆ ಇದುವರೆಗೆ ಯಾವುದೇ ಅನುದಾನವನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವುದಿಲ್ಲ. ಈ ಅನುದಾನವನ್ನು ಬಿಡುಗಡೆ ಮಾಡಿಸಲು ನೆರವಾಗಬೇಕು. ಜೊತೆಗೆ, ಈ ಯೋಜನೆಯನ್ನು ಕೂಡಲೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕೆಂದು ಕೇಂದ್ರದ ಮೇಲೆ ಒತ್ತಡ ಹೇರುವುದು.
  3. ಕಳಸಾ ಬಂಡೂರಿ ನಾಲಾ ಯೋಜನೆಗೆ ಮಹಾದಾಯಿ ಜಲ ವಿವಾದ ನ್ಯಾಯಮಂಡಳಿ ಅವಾರ್ಡ್ 2018 ರಲ್ಲಿ ಘೋಷಿಸಲಾಗಿತ್ತು. ರಾಜ್ಯ ಸರ್ಕಾರದ ವತಿಯಿಂದ ವಿಸ್ತೃತ ಯೋಜನಾ ವರದಿಯನ್ನು (DPR) ಈಗಾಗಲೆ ಒದಗಿಸಲಾಗಿದೆ. ಅದನ್ನು ಅನುಮೋದಿಸಲು ದಿನಾಂಕ: 30.01.2024 ರಂದು ನ್ಯಾಷನಲ್ ಬೋರ್ಡ್ ಆಫ್ ವೈಲ್ಡ್ ಲೈಫ್ ಸಮಿತಿ ಸಭೆ ಸೇರಿ ದಿನಾಂಕ: 08.01.2024 ರಂದು ವರದಿಯನ್ನು ಸಲ್ಲಿಸಿದೆ. ಈ ವಿಷಯವನ್ನು 77 ನೆ ಸಭೆಯ ಮುಂದೆ ಮಂಡಿಸಲಾಗಿತ್ತು. ಆದರೆ ಸಮಿತಿಯು ಈ ಕುರಿತು ತೀರ್ಮಾನ ಮಾಡಲು ಸಹ ಈ ವಿಷಯವನ್ನು ವಿನಾ ಕಾರಣ ಮುಂದೂಡಲಾಗಿದೆ [ಡೆಫರ್]. ಕಿತ್ತೂರು ಕರ್ನಾಟಕದ ಒಣ ಪ್ರದೇಶಗಳ ಜನರಿಗೆ ನೀರನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಆದ್ದರಿಂದ ಅತಿ ಶೀಘ್ರವಾಗಿ ತೊಡಕುಗಳು ನಿವಾರಣೆಯಾಗುವಂತೆ ನೋಡಿಕೊಳ್ಳುವುದು.
  4. ನಮ್ಮ ಮೆಟ್ರೋ ರೈಲು ಯೋಜನೆಯಡಿಯಲ್ಲಿ ಹಂತ-3 ರ ಕಾಮಗಾರಿಗೆ ರೂ.15611 ಕೋಟಿಗಳ ಪ್ರಸ್ತಾವನೆಯನ್ನು ಕೇಂದ್ರದ ವಸತಿ ಮತ್ತು ನಗರಾಭಿವೃಧ್ಧಿ ಮಂತ್ರಾಲಯಕ್ಕೆ ದಿನಾಂಕ:03.08.2023 ರಂದು ಸಲ್ಲಿಸಲಾಗಿದೆ. ಹಾಗೂ ಡಿಪಿಆರ್ ಅನ್ನೂ ಸಹ ಸಲ್ಲಿಸಲಾಗಿದೆ. ಈ ಯೋಜನೆಯ ಕುರಿತು ಸಾರ್ವಜನಿಕ ಹೂಡಿಕೆಗಳ ಮಂಡಳಿಯು ದಿನಾಂಕ 6-5.2024 ರಂದು ಸಭೆ ನಡೆಸಿದೆ. 17-5-2024 ರಂದು ಶಿಫಾರಸನ್ನೂ ಮಾಡಲಾಗಿದೆ. ಪಿಐಬಿಯು ಕೇಳಿದ್ದ ಎಲ್ಲ ಮಾಹಿತಿಯನ್ನು ಒದಗಿಸಲಾಗಿದೆ. ಈ ಪ್ರಸ್ತಾವನೆಯು ಸದ್ಯ ಕೇಂದ್ರ ಸರ್ಕಾರದ ಮುಂದೆ ಇದೆ. ಈ ಪ್ರಸ್ತಾವನೆಯನ್ನು ಶೀಘ್ರವಾಗಿ ಅನುಮೋದನೆ ಮಾಡಿಸುವುದು.
  5. 15ನೆ ಹಣಕಾಸು ಆಯೋಗವು ಎರಡು ವರದಿಗಳನ್ನು ನೀಡಿದೆ. ಎರಡೂ ವರದಿಗಳೂ ಅಂತಿಮ ವರದಿಗಳೆ ಮೊದಲನೆಯದು 2020-21 ವರ್ಷಕ್ಕೆ ಸಂಬಂಧಿಸಿದ್ದು, ಎರಡನೆಯದು 2021 ರಿಂದ 2026 ವರ್ಷಗಳಿಗೆ ಸಂಬಂಧಿಸಿದ್ದು. ಮೊದಲ ವರದಿಯಲ್ಲಿ 5,495 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಕರ್ನಾಟಕಕ್ಕೆ ಕೊಡಬೇಕೆಂದು ಶಿಫಾರಸು ಮಾಡಲಾಗಿದೆ. ಎರಡನೆಯ ವರದಿಯಲ್ಲಿ ಫೆರಿಫೆರಲ್ ರಿಂಗ್ ರಸ್ತೆಗೆ 3,000 ಕೋಟಿ ರೂ ಮತ್ತು ಕೆರೆ ಹಾಗೂ ಜಲಮೂಲಗಳ ಅಭಿವೃದ್ಧಿಗೆ 3,000 ಕೋಟಿ ಸೇರಿ ಒಟ್ಟಿಗೆ 11,495 ಕೋಟಿ ರೂಪಾಯಿಗಳನ್ನು ನೀಡಲು ಶಿಫಾರಸು ಮಾಡಲಾಗಿದೆ. ಈ ಅನುದಾನ / ವಿಶೇಷ ಅನುದಾನ ಕೂಡಲೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕಾಗಿದೆ.
  6. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರದೇಶಗಳಲ್ಲೊಂದಾದ ಮಹಾತ್ವಾಕಾಂಕ್ಷೆ ಜಿಲ್ಲೆಯಾದ ರಾಯಚೂರಿನಲ್ಲಿ All India Institute of Medical Sciences (AIIMS) ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ವಿವಿಧ ದಿನಾಂಕಗಳಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದಿಂದ ತ್ವರಿತ ಅನುಮೋದನೆ ನೀಡಲು ಕೋರಲಾಗಿದೆ.
  7. ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ.
  8. ಉಡಾನ್ ಯೋಜನೆಯಡಿ ‘SEA PLANE’ ಕಾರ್ಯಕ್ರಮವನ್ನು ಮಲ್ಪೆ, ಬೈಂದೂರು, ಮಂಗಳೂರು, ಕಾಳಿ ನದಿ ಮುಂತಾದ ಕಡೆ ಪ್ರಾರಂಭಿಸಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ದೃಷ್ಟಿಯಿಂದ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಇಲಾಖೆಗೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗಳು ಸದರಿ ಇಲಾಖೆಯಲ್ಲಿ ಬಾಕಿ ಇದ್ದು ಅವುಗಳನ್ನು ಆದಷ್ಟು ಶೀಘ್ರವಾಗಿ ಬಗೆಹರಿಸಿ ಅನುಮೋದನೆ ಕೊಡಿಸುವುದು.
  9. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air Cargo ಕಾಂಪ್ಲೆಕ್ಸ್ ಆಗಿ ಪರಿಗಣಿಸಲು ಸಿವಿಲ್ ಏವಿಯೇಷನ್ ಮಂತ್ರಾಲಯಕ್ಕೆ ಪ್ರಸ್ತಾವನೆಯನ್ನು ದಿನಾಂಕ:05.06.2024 ರಂದು ಕಳುಹಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಹೆಚ್ಚು ರಫ್ತು ಮತ್ತು ಆರ್ಥಿಕ ಬೆಳವಣಿಗೆ ಸುಧಾರಿಸುವುದು. ಆದ್ದರಿಂದ ಈ ಪ್ರಸ್ತಾವನೆಗೆ ಅನುಮೋದನೆ ದೊರೆಯುವಂತೆ ನೋಡಿಕೊಳ್ಳುವುದು.
  10. ಪಶ್ಚಿಮ ಘಟ್ಟಗಳ ಜನರ ರಕ್ಷಣೆಗಾಗಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವಂತೆ ನಿರ್ಧರಿಸಿ ಪ್ರಸ್ತಾವನೆಯನ್ನು ಕಳಿಸಲಾಗಿದೆ. ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಅಂಗೀಕರಿಸಿ ಸೂಕ್ತ ತೀರ್ಮಾನಗಳನ್ನು ಹೊರಡಿಸಬೇಕಾಗಿರುತ್ತದೆ.
  11. ರಾಜ್ಯವು ರೈಲ್ವೆ ನೆಟ್‌ವರ್ಕಿನಲ್ಲಿ ಉತ್ತರದ ರಾಜ್ಯಗಳಿಗೆ ಹೋಲಿಸಿದರೆ ಬಹಳ ಹಿಂದುಳಿದಿದೆ. ಹಾಗಾಗಿ ರೈಲ್ವೆ ಯೋಜನೆಗಳಿಗೆ ಆದ್ಯತೆ ನೀಡಬೇಕಾಗಿದೆ.
  12. ಗ್ರಾಮ ಸಡಕ್ ಯೋಜನೆಯಲ್ಲಿ ದೇಶದ ಅನೇಕ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯಕ್ಕೆ ಕಡಿಮೆ ಪ್ರಮಾಣದ ರಸ್ತೆಗಳನ್ನು ಮಂಜೂರು ಮಾಡಲಾಗಿದೆ. ಹಾಗಾಗಿ ತಾವುಗಳು ಈ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆದು ಹೆಚ್ಚು ಅನುದಾನಗಳನ್ನು ಒದಗಿಸಿಕೊಡಬೇಕು.
  13. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಬೆಳಗಾವಿಯಲ್ಲಿ 70 ಕಾಮಗಾರಿಗಳು, ಯಾದಗಿರಿಯಲ್ಲಿ 70 ಕಾಮಗಾರಿಗಳು, ಕಲಬುರ್ಗಿಯಲ್ಲಿ 106 ಕಾಮಗಾರಿಗಳು, ಧಾರವಾಡದಲ್ಲಿ 50 ಕಾಮಗಾರಿಗಳು, ಒಟ್ಟು 296 ಕಾಮಗಾರಿಗಳ ಅಂದಾಜು ಮೊತ್ತ ರೂ.770 ಕೋಟಿಗಳು ಬಿಡುಗಡೆಯಾಗಬೇಕಾಗಿರುತ್ತದೆ. ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದಿಂದ ತ್ವರಿತ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸುವುದು.
  14. ದೇಶದಲ್ಲಿ 12 ಅತಿ ಹೆಚ್ಚು ಬರಪೀಡಿತ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು ಇದ್ದು, ಬರವನ್ನು ತಡೆಗಟ್ಟುವ ಸಲುವಾಗಿ National Disaster Risk Management Fund (NDRMF) ಅಡಿಯಲ್ಲಿ ರೂ.100 ಕೋಟಿಗಳ ಅನುದಾನವನ್ನು ಒದಗಿಸುವಂತೆ ಕೋರಿ ದಿನಾಂಕ: 30.10.2023 ರಂದು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಲ್ಲದೆ, ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ನೆರೆ ಸಂಭವಿಸಿದ್ದು, ಅವುಗಳನ್ನು ತಡೆಗಟ್ಟಲು 15ನೇ ಹಣಕಾಸು ಆಯೋಗವು ರೂ.250 ಕೋಟಿಗಳ ಅನುದಾನವನ್ನು ಮೀಸಲಿಟ್ಟಿದ್ದು, ಈ ಅನುದಾನವು ಇನ್ನೂ ಬಿಡಗಡೆಯಾಗಿರುವುದಿಲ್ಲ. ಆದ್ದರಿಂದ ತುರ್ತಾಗಿ ಈ ಅನುದಾನ ಬಿಡುಗಡೆಯಾಗುವಂತೆ ನೋಡಿಕೊಳ್ಳುವುದು.
  15. ಕೇಂದ್ರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮನವಿಯಂತೆ ದಿನಾಂಕ:20.07.2023 ರಂದು ರಾಜ್ಯ ಸರ್ಕಾರದ ಶಿರಾಡಿ ಘಾಟ್‌ನಲ್ಲಿ 30 ಕಿ.ಮೀ.ನ ಎರಡು ಲೇನ್ ರಸ್ತೆಯನ್ನಾಗಿ ಪರಿವರ್ತಿಸಲು ರೂ.2,580 ಕೋಟಿ ಪ್ರಸ್ತಾವನೆಯನ್ನು NHAIಗೆ ದಿನಾಂಕ: 03.08.2023 ರಂದು ಸಲ್ಲಿಸಲಾಗಿದ್ದು, ಇದನ್ನು ತ್ವರಿತಗೊಳಿಸಲು ಅನುಮೋದನೆ ನೀಡಿದಲ್ಲಿ ರಾಜ್ಯದ ವಾಣಿಜ್ಯ ಚಟುವಟಿಕೆಗಳನ್ನು ಮಂಗಳೂರು ಬಂದರಿಗೆ ರಫ್ತು ಮಾಡಲು ಉಪಯೋಗವಾಗುತ್ತದೆ. ಇದರ ಜೊತೆಗೆ ರಾಜ್ಯದಿಂದ ದಿನಾಂಕ 28.07.2017 ಮತ್ತು 7.3.2018] ಒಟ್ಟು 38 ಹೆದ್ದಾರಿ ಕಾಮಗಾರಿಗಳನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳಿಸಲಾಗಿದೆ. ಈ ಪ್ರಸ್ತಾವನೆಗಳಲ್ಲಿ ಒಟ್ಟಾರೆ 4,807 ಕಿ.ಮೀ. ರಸ್ತೆ ಒಳಗೊಂಡಿದೆ. ಈ ಪ್ರಸ್ತಾವನೆಗಳು ಕೇಂದ್ರ ಸರ್ಕಾರದ ಮುಂದೆ ಇವೆ. ಇವುಗಳನ್ನು ಶೀಘ್ರವಾಗಿ ಬಗೆಹರಿಸಿಕೊಡುವುದು.
  16. MGNREGA ಅಡಿಯಲ್ಲಿ ಕೆಲವು ಅಗತ್ಯವಿರುವ ಶಾಲಾ ಕಟ್ಟಡ, ತರಗತಿ ಕೊಠಡಿ, ಗ್ರಂಥಾಲಯ, ಇತರೆ ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ಉಪಯೋಗಿಸಲು ಸುಮಾರು ಪ್ರಸ್ತಾವನೆಗಳನ್ನು ನೀಡಲಾಗಿದೆ. ಇದರಿಂದ ಗ್ರಾಮ ಮಟ್ಟದಲ್ಲಿ ಹೆಚ್ಚು ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿ ಮಾಡಲು ಕೇಂದ್ರದ ಭೂ ಸಂಪನ್ಮೂಲ ಮತ್ತು ಗ್ರಾಮೀಣಾಭಿವೃದ್ಧಿ ಮಂತ್ರಾಲಯವನ್ನು ಕೋರಲಾಗಿದೆ.
  17. ಇದೇ ರೀತಿ 207 ಸಬ್-ರಿಜಿಸ್ಟ್ರಾರ್ ಕಛೇರಿಗಳನ್ನು ಗಣಕೀಕರಣಗೊಳಿಸಲು, ಡಿಜಿಟಲ್ ಇಂಡಿಯಾ ಮಾಡ್ರನೈಸೇಷನ್ ಕಾರ್ಯಕ್ರಮದಡಿಯಲ್ಲಿ ರೂ.365 ಕೋಟಿಗಳ ಅನುದಾನದ ಪ್ರಸ್ತಾವನೆಯನ್ನು ದಿನಾಂಕ:07.06.2024 ರಂದು ಕಳುಹಿಸಲಾಗಿದೆ. ಇದರಿಂದ ಕಂದಾಯ ಇಲಾಖೆಯ ಮೂಲಕ ಉತ್ತಮ ಹಾಗೂ ನುರಿತ ಆಡಳಿತವನ್ನು ನೀಡಲು ಸಾಧ್ಯವಾಗುವುದು. ಈ ಪ್ರಸ್ತಾವನೆಯು ಸಹ ಭೂಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿದೆ. ಇವುಗಳು ತುರ್ತಾಗಿ ಅನುಮೋದನೆಯಾಗುವಂತೆ ನೋಡಿಕೊಳ್ಳುವುದು.
  18. ಯುವಜನ ಸಬಲೀಕರಣ ಇಲಾಖೆಯಡಿಯಲ್ಲಿನ ಖೇಲೊ ಇಂಡಿಯಾ ಕಾರ್ಯಕ್ರಮಗಳಡಿಯಲ್ಲಿ ಒಟ್ಟು 16 ವಿವಿಧ ಕಾರ್ಯಕ್ರಮಗಳ ಪ್ರಸ್ತಾವನೆಗಳು ಅನುಮೋದನೆಗಾಗಿ ಕಳೆದ ವರ್ಷದ ನವೆಂಬರ್ ತಿಂಗಳಿನಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇವೆ. ಖೇಲೊ ಇಂಡಿಯಾ ಯೋಜನೆ [ ಅಕ್ಟೋಬರ್-2017 ] ಪ್ರಾರಂಭವಾದಾಗಿದ ಅತ್ಯಂತ ಕಡಿಮೆ ಅನುದಾನ ಪಡೆದ ರಾಜ್ಯ ಕರ್ನಾಟಕವಾಗಿದೆ. ಕರ್ನಾಟಕವು ಅನೇಕ ಹೆಸರಾಂತ ಕ್ರೀಡಾಪಟುಗಳನ್ನು ದೇಶಕ್ಕೆ ಕೊಡುಗೆಯಾಗಿ ಕೊಟ್ಟಿದೆ. ಆದ್ದರಿಂದ ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ಈ 16 ಕಾರ್ಯಕ್ರಮಗಳು ಅನುಮೋದನೆಯಾಗುವಂತೆ ನೋಡಿಕೊಳ್ಳಬೇಕು.
  19. ಕೇಂದ್ರದ ಆಹಾರ ಮತ್ತು ನಾಗರೀಕ ಸರಬರಾಜು ಮಂತ್ರಾಲಯ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅಡಿಯಲ್ಲಿ ಒಟ್ಟು ರೂ.584 ಕೋಟಿ ಅನುದಾನ ಬಿಡುಗಡೆಯಾಗಬೇಕಾಗಿದೆ ಹಾಗೂ ರಾಜ್ಯ ಸರ್ಕಾರಕ್ಕೆ 2.17 ಲಕ್ಷ ಮೆಟ್ರಿಕ್ ಟನ್ ಲಭ್ಯವಿದ್ದು, ಪ್ರಸ್ತುತ 30,000 ಮೆಟ್ರಿಕ್ ಟನ್‌ಗಳನ್ನು ಹೆಚ್ಚುವರಿಯಾಗಿ ನೀಡಲು ಕೋರಲಾಗಿದೆ.
  20. ಬುಡಕಟ್ಟು ವ್ಯವಹಾರಗಳ ಸಚಿವಾಲಯದಲ್ಲಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಜನರಿಗೆ ಮನೆ ಕೊಡುವ ಪ್ರಸ್ತಾವನೆಯು ದಿನಾಂಕ:23.3.2023 ರಿಂದ ಬಾಕಿಯಾಗಿರುತ್ತದೆ. ಇವುಗಳನ್ನು ಶೀಘ್ರವಾಗಿ ಬಗೆಹರಿಸಿಕೊಡುವುದು. ಇದೇ ಸಚಿವಾಲಯದಲ್ಲಿ ಹೊಸ ಪೋಸ್ಟ್ ಮೆಟ್ರಿಕ್ ಬಾಲಕಿಯರ ಮತ್ತು ಬಾಲಕರ ವಸತಿ ನಿಲಯಗಳಿಗೆ ಅನುಮೋದನೆ ನೀಡುವಂತೆ ಕೋರಿ ಪ್ರಸ್ತಾವನೆಯನ್ನು ದಿನಾಂಕ:06-06-2023 ರಂದು ಕಳುಹಿಸಲಾಗಿದೆ.
  21. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವ್ಯಾಪ್ತಿಯಲ್ಲಿ ವಸತಿ, ವಸತಿ ನಿಲಯ ಮುಂತಾದ 5 ಪ್ರಸ್ತಾವನೆಗಳು 2023 ರ ಜೂನ್ ತಿಂಗಳಿಂದ ಬಾಕಿಯಾಗಿವೆ.
  22. ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ 52 ಯೋಜನೆಗಳನ್ನು ಸಲ್ಲಿಸಲಾಗಿತ್ತು. ಇವುಗಳ ಒಟ್ಟು ಮೊತ್ತ 659 ಕೋಟಿ ರೂ.ಗಳಷ್ಟಾಗಿರುತ್ತದೆ. 32 ವಸತಿ ಶಾಲೆಗಳು, 11 ವಸತಿ ನಿಲಯಗಳು, 4 ಡೇ ಸ್ಕೂಲ್‌ಗಳು, 4 ಕೌಶಲ್ಯ ಕೇಂದ್ರಗಳು ಸೇರಿವೆ. ಇವುಗಳಲ್ಲಿ 12 ಯೋಜನೆಗಳು ಅನುಮೋದನೆಯಾಗಿವೆ. ಆದರೆ ಹಣ ಬಿಡುಗಡೆಯಾಗಿಲ್ಲ. ಉಳಿದ 40 ಯೋಜನೆಗಳು ಬಾಕಿ ಉಳಿದಿವೆ.
  23. MSP ಅಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ಮರುಪಾವತಿಗೆ ಕಳುಹಿಸಿರುವ ದಾಖಲೆಗಳ ಮೊತ್ತವು ರೂ.1,027.82 ಕೋಟಿಗಳಾಗಿರುತ್ತದೆ. ಅದನ್ನು ಬಿಡುಗಡೆ ಮಾಡಲು ಕೋರಲಾಗಿದೆ.
  24. ಮೀನುಗಾರಿಕೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಮಾಜಳಿಯಲ್ಲಿ ಹೊಸದಾಗಿ ಮೀನುಗಾರಿಕಾ ಬಂದರನ್ನು ನಿರ್ಮಿಸುವುದು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ನಿರ್ಮಿಸಿರುವ ಮೀನುಗಾರಿಕಾ ಬಂದರನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. 2023 ರಿಂದ ಈ ವಿಷಯ ಬಾಕಿಯಾಗಿದೆ.
  25. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಭರಿಸಲಾಗದ ನಷ್ಟವುಂಟಾಗಿದೆ. ಮೊದಲಿನ ಹಣಕಾಸು ಆಯೋಗಗಳು 1971 ರ ಜನಗಣತಿ ವರದಿಯನ್ನು ಆಧರಿಸಿ ಸಂಪನ್ಮೂಲಗಳನ್ನು ಹಂಚಿಕೆ ಮಾಡುತ್ತಿದ್ದವು. ಆದರೆ 15 ನೆ ಹಣಕಾಸು ಆಯೋಗವು 2011 ರ ಜನಗಣತಿಯನ್ನು ಆಧರಿಸಿ ಸಂಪನ್ಮೂಲಗಳನ್ನು ಹಂಚಿಕೆ ಮಾಡಿದೆ. ಜನಸಂಖ್ಯಾ ನಿಯಂತ್ರಣವನ್ನು ಸಾಧಿಸಿ ದೇಶದ ಅಭಿವೃದ್ಧಿಗೆ ಶ್ರಮಿಸಿದ ಕಾರಣದಿಂದಾಗಿಯೆ ನಮ್ಮ ರಾಜ್ಯಕ್ಕೆ ಸಮಸ್ಯೆಯಾಗಿದೆ. ಈ ಕಾರಣದಿಂದ ನಮಗೆ 2017-18 ನೆ ಸಾಲಿನ ಬಜೆಟ್‌ಗೆ ಹೋಲಿಸಿದರೆ ಬೃಹತ್ ಪ್ರಮಾಣದಲ್ಲಿ [ಅರ್ಧಕ್ಕರ್ಧ] ತೆರಿಗೆ ಹಂಚಿಕೆ ಹಾಗೂ ಇನ್ನಿತರೆ ಸಂಪನ್ಮೂಲಗಳ ಹಂಚಿಕೆಯು ಕಡಿಮೆಯಾಗಿದೆ. ಈಗ 16 ಹಣಕಾಸು ಆಯೋಗವು ರಚನೆಯಾಗಿದೆ. 16 ನೆ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಯಾವುದೇ ಅನ್ಯಾಯವಾಗದಂತೆ ತಾವುಗಳು ನೋಡಿಕೊಳ್ಳಬೇಕೆಂದು ಮನವಿ ಮಾಡುತ್ತೇವೆ.
  26. ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎಂದು ಮನವಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ | ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Continue Reading

Latest

Viral Video: ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

Viral Video: ಮಹಿಳೆಯರ ಮೇಲೆ ಒಂದಿಲ್ಲೊಂದು ಕಾರಣಕ್ಕೆ ಏನಾದರೂ ಕಿರುಕುಳ ನಡೆಯುತ್ತಲೇ ಇರುತ್ತದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳನ್ನು ಹಿಂದಿನಿಂದ ಬಂದ ಯುವಕನೊಬ್ಬ ಹಿಡಿದು ಎಳೆದಾಡಿದ. ಇದರಿಂದ ಹೆದರಿದ ಆಕೆ ಓಡಲು ಪ್ರಯತ್ನಿಸಿದರೂ ಆತ ಬಿಡಲಿಲ್ಲ. ಆ ವೇಳೆ ಒಬ್ಬ ದಾರಿಹೋಕ ಇದನ್ನು ಕಂಡು ಕಾಣದಂತೆ ಸುಮ್ಮನೆ ನಡೆದುಕೊಂಡು ಮುಂದೆ ಹೋದ. ಆದರೆ ಅಷ್ಟರಲ್ಲಿ ಬಸ್ಸೊಂದು ಬಂತು. ಮುಂದೇನಾಯಿತು? ಈ ವಿಡಿಯೊ ನೋಡಿ.

VISTARANEWS.COM


on

Viral Video
Koo

ಸಮಾಜದಲ್ಲಿ ಮಹಿಳೆಯರು ವಿವಿಧ ರೀತಿಯ ಕಿರುಕುಳಗಳಿಗೆ ಒಳಗಾಗುತ್ತಿದ್ದಾರೆ. ಆದರೆ ಕೆಲವರು ಕಂಡೂ ಕಾಣದಂತೆ ಸುಮ್ಮನಿದ್ದರೆ ಇನ್ನೂ ಕೆಲವರು ಮಹಿಳೆಯರ ಸಹಾಯಕ್ಕೆ ಬಂದು ಅವರನ್ನು ರಕ್ಷಿಸುವ ಮನೋಭಾವವುಳ್ಳವರಾಗಿರುತ್ತಾರೆ. ಅಂತಹದೊಂದು ಘಟನೆ ಇದೀಗ ನಡೆದಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಯುವತಿಯೊಬ್ಬಳಿಗೆ ಯುವಕನೊಬ್ಬ ಕಿರುಕುಳ ನೀಡುತ್ತಿದ್ದು, ಇದನ್ನು ಕಂಡು ಬಸ್‌ನ ಪ್ರಯಾಣಿಕರು ಆಕೆಯ ಸಹಾಯಕ್ಕೆ ಧಾವಿಸಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ರಸ್ತೆಯಲ್ಲಿ ಯುವತಿಯೊಬ್ಬಳು ನಡೆದುಕೊಂಡು ಬರುತ್ತಿದ್ದಳು. ಆ ವೇಳೆ ಆಕೆಯ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ರಸ್ತೆಯ ಮೇಲೆ ಹಿಡಿದು ಎಳೆದಾಡಿದ. ಇದರಿಂದ ಹೆದರಿದ ಆಕೆ ಓಡಲು ಪ್ರಯತ್ನಿಸಿದರೂ ಆತ ಬಿಡಲಿಲ್ಲ. ಆ ವೇಳೆ ಒಬ್ಬ ದಾರಿಹೋಕ ಇದನ್ನು ಕಂಡೂ ಕಾಣದಂತೆ ಸುಮ್ಮನೆ ನಡೆದುಕೊಂಡು ಮುಂದೆ ಹೋದ. ಆದರೆ ರಸ್ತೆಯಲ್ಲಿ ಬರುತ್ತಿದ್ದ ಬಸ್‌ನ ಪ್ರಯಾಣಿಕರು ಈ ದೃಶ್ಯವನ್ನು ಕಂಡು ಬಸ್ ನಿಲ್ಲಿಸಿ ಅದರಲ್ಲಿದ್ದ ಪುರುಷರು ಒಟ್ಟಾಗಿ ಯುವತಿಯ ಸಹಾಯಕ್ಕೆ ಬಂದಿದ್ದಾರೆ. ಆ ಯುವಕನನ್ನು ಹಿಡಿದು ಹಿಗ್ಗಾಮುಗ್ಗಾ ಬಾರಿಸಿದ್ದಾರೆ.

ಇದನ್ನೂ ಓದಿ:  ಬಿಜೆಪಿಗೆ ಮತ ಹಾಕಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ!

ಹಾಗಾಗಿ ಸಮಾಜದಲ್ಲಿ ಯಾವುದೇ ರೀತಿಯ ದುರ್ವತನೆಗಳನ್ನು ಕಂಡಾಗ ಅದನ್ನು ಎದುರಿಸಲು ಮುಂದಾಗಬೇಕು. ಕಿರುಕುಳದ ವಿರುದ್ಧ ಧ್ವನಿ ಎತ್ತಿ ನಿಲ್ಲುವುದು ಕೇವಲ ನಮ್ಮ ಜವಾಬ್ದಾರಿ ಮಾತ್ರವಲ್ಲ ಅದು ಸಾಮಾಜಿಕ ಕರ್ತವ್ಯ ಎಂಬುದನ್ನು ತಿಳಿಯಿರಿ. ಇದರಿಂದ ಸಮಾಜದಲ್ಲಾಗುವ ದೌರ್ಜನ್ಯಗಳ ವಿರುದ್ಧ ಹೋರಾಡಬಹುದು. ಹಾಗೂ ಅವುಗಳನ್ನು ನಿರ್ಮೂಲನೆ ಮಾಡಬಹುದು ಎಂಬ ಸಂದೇಶವನ್ನು ಈ ಘಟನೆ ಮತ್ತು ವಿಡಿಯೊ ಸಾರಿದೆ.

Continue Reading
Advertisement
SHAFALI VERMA
ಕ್ರಿಕೆಟ್2 mins ago

SHAFALI VERMA: 40 ವರ್ಷದ ಟೆಸ್ಟ್​ ದಾಖಲೆ ಮುರಿದ ಭಾರತದ ಶಫಾಲಿ ವರ್ಮ

Rich Wedding
ಪ್ರಮುಖ ಸುದ್ದಿ8 mins ago

ಮದುವೆಗೆ ಹೋದವರಿಗೆ 66 ಸಾವಿರ ರೂ. ನಗದು, ಭರ್ಜರಿ ಗಿಫ್ಟ್‌ ಕೊಟ್ಟ ದಂಪತಿ; ಎಲ್ಲಿ ಅಂತೀರಾ…?‌

Actor Darshan A young woman came to Parappa Agrahara to see Darshan
ಕ್ರೈಂ11 mins ago

Actor Darshan: ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ನೋಡಲು ಆಗಮಿಸಿದ ಯುವತಿ; ಯಾರಾಕೆ?

Valmiki Corporation Scam Zameer Ahmed appointed as Ballari district in-charge minister
ಬಳ್ಳಾರಿ15 mins ago

Valmiki Corporation Scam: ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

T20 World Cup Final
ಕ್ರೀಡೆ38 mins ago

T20 World Cup Final: ಚೋಕರ್ಸ್ ಹಣೆಪಟ್ಟಿ ಕಳಚಿಕೊಳ್ಳುವುದೇ ದಕ್ಷಿಣ ಆಫ್ರಿಕಾ?; ನಾಳೆ ಫೈನಲ್​

Kannada Serials TRP Lakshmi Baramma in Top 5 new serials not in demand
ಕಿರುತೆರೆ46 mins ago

Kannada Serials TRP: ಟಾಪ್‌ 5ನಲ್ಲಿ ʻಲಕ್ಷ್ಮೀ ಬಾರಮ್ಮʼ; ಹೊಸ ಧಾರಾವಾಹಿಗಿಲ್ಲ ಬೇಡಿಕೆ!

ಕರ್ನಾಟಕ50 mins ago

CM Siddaramaiah: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರಿಲ್ಲ, ಕೇಂದ್ರ ಅನುಮತಿ ನೀಡಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ವಿದೇಶ1 hour ago

US Presidential Election: ರಂಗೇರುತ್ತಿದೆ ಅಮೆರಿಕ ಅಧ್ಯಕ್ಷೀಯ ಚುನಾವಣೆ; ಬೈಡೆನ್‌-ಟ್ರಂಪ್‌ ಮುಖಾಮುಖಿ; ಭರ್ಜರಿ ಟಾಕ್‌ ವಾರ್‌

NK Bailu victims to get relief soon says Incharge secretary Ritesh Kumar Singh
ಉತ್ತರ ಕನ್ನಡ1 hour ago

Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

Viral Video
Latest1 hour ago

Viral Video: ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು24 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌