Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ! - Vistara News

Latest

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

ಅಮೀರಾ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡ ಗಾಯಕ 115 ಸೆಂ.ಮೀ. ಎತ್ತರದ ಅಬ್ದು ರೋಝಿಕ್ (Abdu Rozik) ತಮ್ಮ ಎತ್ತರ ತಮ್ಮಿಬ್ಬರ ಸಂಬಂಧದ ನಡುವೆ ಎಂದಿಗೂ ಬರುವುದಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Abdu Rozik
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಾಮಾಜಿಕ ಜಾಲತಾಣದಲ್ಲಿ (social media) ಸಕ್ರಿಯರಾಗಿರುವ ಮತ್ತು ಬಿಗ್ ಬಾಸ್ 16 (Bigg Boss 16) ಖ್ಯಾತಿಯ ಅಬ್ದು ರೋಝಿಕ್ (Abdu Rozik) ಇತ್ತೀಚೆಗಷ್ಟೇ ಅಮಿರಾ ಅವರೊಂದಿಗೆ ಮದುವೆ ನಿಶ್ಚಿತಾರ್ಥವನ್ನು (engagement) ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಮುಂದಿನ ಜುಲೈನಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್ ನಟ (Bollywood actor) ಸಲ್ಮಾನ್ ಖಾನ್ (Salman Khan) ಪಾಲ್ಗೊಳ್ಳಲಿದ್ದಾರೆ ಎಂದು ಅಬ್ದು ತಿಳಿಸಿದ್ದಾರೆ.

20 ವರ್ಷದ ಗಾಯಕ (singer) ಅಬ್ದು ರೋಝಿಕ್ ಅವರು ಅಮೀರಾ ಅವರನ್ನು ಆಹಾರ ಉತ್ಸವದಲ್ಲಿ ಭೇಟಿಯಾಗಿದ್ದರು. ಮೊದಲ ನೋಟದಲ್ಲೇ ಇಬ್ಬರಿಗೂ ಪ್ರೀತಿಯಾಗಿತ್ತು ಎಂದು ಅಬ್ದು ತಿಳಿಸಿದರು.

ಅಬ್ದು ಅವರ ನಿಶ್ಚಿತಾರ್ಥವು ಯಾವುದೇ ಪ್ರಚಾರವಲ್ಲ ಎಂದು ಅಬ್ದು ಸ್ಪಷ್ಟಪಡಿಸಿದ್ದು, ನನ್ನಂತಹ ಸಣ್ಣ ವ್ಯಕ್ತಿ ಪ್ರೀತಿಯನ್ನು ಕಂಡುಕೊಂಡಿದ್ದಾನೆ ಎಂದು ಜನರು ನಂಬಲು ಕಷ್ಟವಾಗಬಹುದು ಎಂದು ತಿಳಿಸಿದರು.
ಅಮೀರಾಗಿಂತ ಚಿಕ್ಕವನಾಗಿರುವ ತನ್ನ ಎತ್ತರದ ವ್ಯತ್ಯಾಸವು ನಮ್ಮ ಪ್ರೀತಿಯ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಹೇಳಿದರು.


ಅಬ್ದು ಅವರು 115 ಸೆಂ ಮತ್ತು ಅಮೀರಾ 155 ಸೆಂ.ಮೀ. ಎತ್ತರವಿದ್ದಾರೆ. ಅವರಿಬ್ಬರೂ ಕಡಿಮೆ ಎತ್ತರದಿಂದಾಗಿ ತಮ್ಮ ಸಂಗಾತಿಯನ್ನು ಹುಡುಕುವ ಬಗ್ಗೆ ಚಿಂತಿತರಾಗಿದ್ದರು. ಆದರೆ ಅಮೀರಾ ಅವರನ್ನು ಭೇಟಿ ಮಾಡಿದ್ದಕ್ಕಾಗಿ ಕೃತಜ್ಞರಾಗಿರುತ್ತೇನೆ. ಅಮೀರಾ ತನಗಿಂತ ಎತ್ತರವಾಗಿದ್ದರೂ ಅದು ನಮ್ಮ ಸಂಬಂಧದ ನಡುವೆ ಎಂದಿಗೂ ಬಂದಿಲ್ಲ ಎಂದು ತಿಳಿಸಿದರು.


ಕೆಲವು ದಿನಗಳ ಹಿಂದೆ ಅಬ್ದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅವರು ಅಮೀರಾ ಅವರ ಮುಖವನ್ನು ಬಹಿರಂಗಪಡಿಸಲಿಲ್ಲ, ಆದರೆ ಹೃದಯದ ಆಕಾರದ ವಜ್ರದ ಉಂಗುರದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

ಸುದ್ದಿಯನ್ನು ಹಂಚಿಕೊಂಡ ಅವರು, “ಜುಲೈ 7 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸುವುದಾಗಿ ಹೇಳಿದ್ದು, ನನ್ನನ್ನು ಗೌರವಿಸುವ ಪ್ರೀತಿಯನ್ನು ಪಡೆಯುವ ಅದೃಷ್ಟಶಾಲಿ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಊಹಿಸಿರಲಿಲ್ಲ. ನಾನು ಎಷ್ಟು ಸಂತೋಷವಾಗಿದ್ದೇನೆ ಎಂದು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Highest Collection Movie: ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Highest Collection Movie
Koo

ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಬಾಲಿವುಡ್ (Highest Collection Movie) ದಾಖಲೆಗಳು ನಿರಂತರವಾಗಿವೆ. ಹಲವಾರು ಚಿತ್ರಗಳು ಸಾರ್ವಕಾಲಿಕವಾಗಿ ಅತಿ ಹೆಚ್ಚು ಗಳಿಕೆಯನ್ನು ಪಡೆದಿವೆ. ದಂಗಲ್‌ (Dangal), ಜವಾನ್ (Jawan), ಪಠಾಣ್ (Pathaan), ಬಜರಂಗಿ ಭಾಯಿಜಾನ್ (Bajrangi Bhaijaan), ಸೀಕ್ರೆಟ್ ಸೂಪರ್‌ಸ್ಟಾರ್ (Secret Superstar), ಪಿಕೆ (PK) ಈ ಚಿತ್ರಗಳು ತೆರೆಗೆ ಬಂದು ಹತ್ತು ವರ್ಷಗಳೇ ಕಳೆದರೂ ಇಂದಿಗೂ ಬಹುತೇಕ ಮಂದಿಯ ಮೆಚ್ಚಿನ ಚಿತ್ರವಾಗಿ ಉಳಿದಿದೆ.

ಭಾರತೀಯ ಸಿನಿಮಾ ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ (box office) ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

1. ದಂಗಲ್

ಕುಸ್ತಿ ಪಟುಗಳಾದ ಗೀತಾ ಫೋಗಟ್ ಮತ್ತು ಬಬಿತಾ ಫೋಗಟ್ ಅವರ ಜೀವನಾಧಾರಿತ ಚಿತ್ರದಲ್ಲಿ ಮಹಾವೀರ್ ಸಿಂಗ್ ಪಾತ್ರಧಾರಿಯಾಗಿ ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. 2016ರಲ್ಲಿ ತೆರೆಗೆ ಬಂದ ಈ ಚಿತ್ರ 30 ಕೋಟಿ ರೂ. ಬಜೆಟ್‌ನದ್ದಾಗಿದ್ದು, ವಿಶ್ವಾದ್ಯಂತ ಗಲ್ಲಾ ಪೆಟ್ಟಿಗೆಯಲ್ಲಿ 2,024 ಕೋಟಿ ರೂ. ಗಳಿಸಿ ದಾಖಲೆ ಬರೆದು ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಆದಾಯಗಳಿಸಿದ ಸಿನೆಮಾ ಎಂಬ ಖ್ಯಾತಿಯನ್ನು ಪಡೆದಿದೆ. ಅದರಲ್ಲೂ ಚೀನಾದಲ್ಲಿ ಈ ಸಿನಿಮಾ ಅತಿ ಹೆಚ್ಚು ಆದಾಯವನ್ನು ಗಳಿಸಿದ ಅನ್ಯ ಭಾಷೆಯ ಮೂರನೇ ಸಿನಿಮಾ ಇದು ಎನ್ನುವ ಖ್ಯಾತಿಯೂ ʼದಂಗಲ್ʼ ಚಿತ್ರದ್ದಾಗಿದೆ.


2. ಬಾಹುಬಲಿ 2

ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರ 2012ರಲ್ಲಿ ತೆರೆಗೆ ಬಂದಿದ್ದು, ಎಸ್.ಎಸ್. ರಾಜಮೌಳಿ ಮತ್ತು ವಿ. ವಿಜಯೇಂದ್ರ ಪ್ರಸಾದ್ ಬರೆದು ನಿರ್ದೇಶಿಸಿದ್ದಾರೆ. 250 ಕೋಟಿ ರೂ. ಬಜೆಟ್ ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,810.60 ಕೋಟಿ ರೂ. ಆದಾಯ ಗಳಿಸಿ ದಾಖಲೆ ಬರೆದಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚು ಆದಾಯ ಗಳಿಸಿರುವ ಚಿತ್ರ ಎಂಬ ಖ್ಯಾತಿ ಈ ಸಿನೆಮಾದ್ದಾಗಿದೆ. ಚಿತ್ರ ಬಿಡುಗಡೆಯಾದ ಮೊದಲ ಆರು ದಿನದಲ್ಲಿ 789 ಕೋಟಿ ರೂ. ಗಳಿಸಿರುವುದು ಮಾತ್ರವಲ್ಲ 10 ದಿನದಲ್ಲಿ 1 ಸಾವಿರ ಕೋಟಿ ರೂ. ಆದಾಯ ಪಡೆದ ಸಿನೆಮಾ ಇದಾಗಿದೆ.


3. ಆರ್ ಆರ್ ಆರ್

ರಾಮ್ ಚರಣ್ ಮತ್ತು ಜ್ಯೂ. ಎನ್ ಟಿ ಆರ್ ಅಭಿನಯದ ಆರ್ ಆರ್ ಆರ್ ಚಿತ್ರ 2022ರಲ್ಲಿ ತೆರೆಗೆ ಬಂದಿದ್ದು, 550 ಕೋಟಿ ರೂ. ಬಜೆಟ್ ನದ್ದಾಗಿದೆ. ಅತ್ಯಂತ ದುಬಾರಿ ಖರ್ಚು ಮಾಡಿ ನಿರ್ಮಿಸಿರುವ ಈ ಚಿತ್ರ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ 405.9 ಕೋಟಿ ರೂ. ಗಳಿಸಿದೆ. ವಿಶ್ವದಾದ್ಯಂತ 1,387.26 ಕೋಟಿ ರೂ. ಆದಾಯ ಗಳಿಸಿದೆ. ಭಾರತದಲ್ಲಿ ಮೂರನೇ ಅತಿ ಹೆಚ್ಚು ಆದಾಯ ಗಳಿಸಿದ ಚಿತ್ರವಾಗಿ ಮಾತ್ರವಲ್ಲ ತೆಲುಗಿನಲ್ಲಿ ಎರಡನೇ ಅತಿ ಹೆಚ್ಚು ಆದಾಯಗಳಿಸಿರುವ ಚಿತ್ರವಾಗಿ ಗುರುತಿಸಿಕೊಂಡಿದೆ.


4. ಕೆಜಿಎಫ್ ಚಾಪ್ಟರ್ 2

2022ರಲ್ಲಿ ತೆರೆಗೆ ಬಂದ ಯಶ್ ಅಭಿನಯದ ಕನ್ನಡ ಚಿತ್ರ ಕೆಜಿಎಫ್ ಚಾಪ್ಟರ್ 2 ಅನ್ನು ಪ್ರಶಾಂತ್ ನೀಲ್ ಅವರು ನಿರ್ದೇಶಿಸಿದ್ದಾರೆ. ವಿಜಯ ಕಿರಗಂದೂರ್ ನಿರ್ಮಿಸಿದ್ದಾರೆ.

100 ಕೋಟಿ ಬಜೆಟ್‌ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,250 ಕೋಟಿ ರೂ. ಆದಾಯ ಗಳಿಸಿದೆ. ವಿಶ್ವದಲ್ಲಿ (ಭಾರತೀಯ ಚಿತ್ರ) ನಾಲ್ಕನೇ ಹಾಗೂ ಭಾರತದಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದೆ.

5. ಜವಾನ್

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರ 2023ರಲ್ಲಿ ತೆರೆಗೆ ಬಂದಿದ್ದು, 1,148.32 ಕೋಟಿ ರೂ. ಆದಾಯ ಗಳಿಸಿದೆ. 300 ಕೋಟಿ ರೂ. ಬಜೆಟ್‌ನ ಈ ಚಿತ್ರದಲ್ಲಿ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರ ಕೂಡ ಕಾಣಿಸಿಕೊಂಡಿದ್ದಾರೆ.

ಹಿಂದಿ ಭಾಷೆಯಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದ್ದು, ಭಾರತೀಯ ಸಿನಿಮಾದಲ್ಲಿ ಐದನೇ ಸ್ಥಾನ ಪಡೆದಿದೆ.


6. ಪಠಾಣ್

ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡಿರುವ ಚಿತ್ರ ʼಪಠಾಣ್ʼ ವಿಶ್ವದಾದ್ಯಂತ 1,050.30 ಕೋಟಿ ರೂ. ಆದಾಯ ಗಳಿಸಿದೆ. ಶಾರುಖ್ ಖಾನ್ ಅಭಿನಯದ ಈ ಚಿತ್ರ ಗಳಿಕೆಯಲ್ಲಿ ಹಿಂದಿ ಭಾಷೆಯಲ್ಲಿ ಮೂರನೇ ಸ್ಥಾನ ಹಾಗೂ ಭಾರತೀಯ ಸಿನಿಮಾ ರಂಗದಲ್ಲಿ ಆರನೇ ಸ್ಥಾನವನ್ನು ಗಳಿಸಿದೆ. 240 ಕೋಟಿ ರೂ. ಬಜೆಟ್ ನ ಚಿತ್ರ ಇದಾಗಿದೆ.


7. ಬಜರಂಗಿ ಭಾಯಿಜಾನ್

ಭಾರತದಾದ್ಯಂತ ಬಾಯಿಜಾನ್ ಎಂದೇ ಕರೆಯಲ್ಪಡುವ ಸಲ್ಮಾನ್ ಖಾನ್, ಕರೀನಾ ಕಪೂರ್ ಅಭಿನಯದ ಈ ಚಿತ್ರ 2015ರಲ್ಲಿ ತೆರೆಗೆ ಬಂದಿದ್ದು, ಕಬೀರ್ ಖಾನ್ ನಿರ್ದೇಶಿಸಿದ್ದಾರೆ. ವಿಶ್ವದಾದ್ಯಂತ 969 ಕೋಟಿ ರೂ. ಆದಾಯವನ್ನು ಈ ಚಿತ್ರ ಗಳಿಸಿದ್ದು, ಅತಿ ಹೆಚ್ಚು ಆದಾಯ ಗಳಿಸಿದ ಭಾರತದ 7ನೇ ಚಿತ್ರ ಹಾಗೂ ಹಿಂದಿ ಭಾಷೆಯ 4ನೇ ಚಿತ್ರವಾಗಿ ಗುರುತಿಸಿಕೊಂಡಿದೆ.


8. ಅನಿಮಲ್

ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್, ತೃಪ್ತಿ ದಿಮ್ರಿ ಅಭಿನಯದ ಈ ಚಿತ್ರ ವಿಶ್ವದಾದ್ಯಂತ 917.36 ಕೋಟಿ ರೂ. ಆದಾಯ ಗಳಿಸಿದೆ. ಈ ಚಿತ್ರವನ್ನು 200 ಕೋಟಿ ರೂ. ಬಜೆಟ್ ನಲ್ಲಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ.


9. ಸೀಕ್ರೆಟ್ ಸೂಪರ್ ಸ್ಟಾರ್

2017ರಲ್ಲಿ ತೆರೆಗೆ ಬಂದ ‘ಸೀಕ್ರೆಟ್ ಸೂಪರ್ ಸ್ಟಾರ್’ ಚಿತ್ರವನ್ನು ಅದ್ವತ್ ಚಂದನ್ ನಿರ್ದೇಶಿಸಿದ್ದು, ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವದಾದ್ಯಂತ 905.7 ಕೋಟಿ ರೂ. ಆದಾಯ ಗಳಿಸಿರುವ ಈ ಚಿತ್ರವನ್ನು ಅತೀ ಕಡಿಮೆ ಬಜೆಟ್ 15 ಕೋಟಿ ರೂ.ನಲ್ಲಿ ನಿರ್ಮಿಸಲಾಗಿದೆ.


ಇದನ್ನೂ ಓದಿ: Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

10. ಪಿಕೆ

ಆಮೀರ್ ಖಾನ್, ಅನುಷ್ಕಾ ಶರ್ಮಾ, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಈ ಚಿತ್ರ 2014ರಲ್ಲಿ ತೆರೆಗೆ ಬಂದಿತ್ತು. ರಾಜಕುಮಾರ್ ಹಿರಾನಿ ನಿರ್ದೇಶಿರುವ ಈ ಚಿತ್ರವನ್ನು 122 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಿಸಲಾಗಿದ್ದು, ವಿಶ್ವದಾದ್ಯಂತ 769.89 ಕೋಟಿ ರೂ. ಆದಾಯವನ್ನು ಗಳಿಸಿದೆ.

Continue Reading

Latest

Police Arrest: ಅಕ್ರಮ ಮದ್ಯ ಸಾಗಿಸಲು ಸಹಾಯ; ಸಿಕ್ಕಿ ಬಿದ್ದ ಸಿಐಡಿ ಲೇಡಿ ಆಫೀಸರ್!

Police Arrest: ಪೊಲೀಸರೆಂದರೆ ಕಳ್ಳರನ್ನು ಹಿಡಿದು ತಕ್ಕ ಶಿಕ್ಷೆ ನೀಡುತ್ತಾರೆ ಎಂಬ ನಂಬಿಕೆ ಜನರಿಗೆ. ಆದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿಯೊಂದು ನಿರ್ಮಾಣವಾಗಿದೆ. ಅದೇನೆಂದರೆ, ಗುಜರಾತ್‌ನ ಕಚ್‌ನಲ್ಲಿ ಇತ್ತೀಚೆಗೆ ಮಹಿಳಾ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸ್ ಅಧಿಕಾರಿಯೊಬ್ಬರು ಮದ್ಯವನ್ನು ಸಾಗಿಸುವ ಪ್ರಯತ್ನದಲ್ಲಿ ಕಳ್ಳಸಾಗಣೆದಾರನಿಗೆ ಸಹಾಯ ಮಾಡಿ ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 307 ಮತ್ತು 427ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

VISTARANEWS.COM


on

Police Arrest
Koo

ಅಹಮದಾಬಾದ್: ಪೊಲೀಸ್ ಅಧಿಕಾರಿಗಳೆಂದರೆ ಕಳ್ಳತನ, ಸುಲಿಗೆ, ದರೋಡೆ ಮಾಡುವಂತಹ ದುಷ್ಟರನ್ನು ಹಿಡಿದು ಜನರಿಗೆ ನ್ಯಾಯ ಕೊಡಿಸುವವರು ಎಂಬ ಭಾವನೆ ಜನರಲ್ಲಿದೆ. ಆದರೆ ಗುಜರಾತ್‌ನ ಕಚ್‌ನಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಪೊಲೀಸ್ ವೃತ್ತಿಗೆ ಅಪಖ್ಯಾತಿ ತರುವಂತದಾಗಿದೆ. ಯಾಕೆಂದರೆ ಮಹಿಳಾ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸ್ ಅಧಿಕಾರಿಯೊಬ್ಬರು ಮದ್ಯವನ್ನು ಸಾಗಿಸುವ ಪ್ರಯತ್ನದಲ್ಲಿ ಕಳ್ಳಸಾಗಣೆದಾರನಿಗೆ ಸಹಾಯ ಮಾಡಿ ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ (Police arrest).

ಭಚೌ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ರಾತ್ರಿ, ಮದ್ಯ ಕಳ್ಳಸಾಗಣೆಯನ್ನು ತಡೆಯಲು ಕಚ್(kutch) ನ ಭಚೌ ಪೊಲೀಸ್ ಠಾಣೆ ಪ್ರದೇಶದ ಚೋಪ್ಡ್ವಾ(chopdwa) ಸೇತುವೆಯ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಬಿಳಿ ಥಾರ್ ವಾಹನವೊಂದು ಪೊಲೀಸ್ ತಪಾಸಣೆಯನ್ನು ಕಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿತು. ಮತ್ತೊಂದು ಪೊಲೀಸ್ ಬೆಂಗಾವಲು ವಾಹನ ಅವರನ್ನು ಹಿಂಬಾಲಿಸಿ ತಡೆದರು. ನಂತರ ಪೊಲೀಸರು ವಾಹನವನ್ನು ಶೋಧಿಸಿದಾಗ ಅದರಲ್ಲಿ 16 ಬಾಟಲಿ ಮದ್ಯ ಮತ್ತು ಎರಡು ಕ್ಯಾನ್ ಬಿಯರ್ ಪತ್ತೆಯಾಗಿದೆ. ನಂತರ ಅದಕ್ಕೆ ಸಂಬಂಧಿಸಿದ ವ್ಯಕ್ತಿಗಳು ಕಚ್ ಪೂರ್ವ ಸಿಐಡಿಯ ಅಧಿಕಾರಿ ನೀತಾ ಚೌಧರಿ ಮತ್ತು ಕಳ್ಳಸಾಗಣೆದಾರನನ್ನು ಯುವರಾಜ್ ಸಿಂಗ್ ಎಂದು ಪತ್ತೆ ಮಾಡಲಾಗಿದೆ. ಇವರಿಬ್ಬರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 307 ಮತ್ತು 427 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಯುವರಾಜ್ ಸಿಂಗ್ ಈ ಹಿಂದೆ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕೊಲೆ ಯತ್ನ ಸೇರಿದಂತೆ 6 ಪ್ರಕರಣಗಳಲ್ಲಿ ಬೇಕಾಗಿದ್ದಾನೆ ಎನ್ನಲಾಗಿದೆ. ಮತ್ತು ಪೊಲೀಸ್ ಅಧಿಕಾರಿ ನೀತಾ ಚೌಧರಿ ಅವರು ಪೊಲೀಸ್ ಸಮವಸ್ತ್ರದಲ್ಲಿ ನೃತ್ಯ ವೀಡಿಯೊಗಳನ್ನು ಮಾಡುವುದು ಸೇರಿದಂತೆ ತನ್ನ ಅಸಾಂಪ್ರದಾಯಿಕ ನಡವಳಿಕೆಗಾಗಿ ಅವರು ಈ ಹಿಂದೆ ವಿವಾದದಲ್ಲಿ ಸಿಲುಕಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ಈ ಹಿಂದೆ, ಗುಜರಾತ್ ನಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿದ್ದರೂ ಕೆಲವು ಪೊಲೀಸ್ ಅಧಿಕಾರಿಗಳು ಕಳ್ಳಸಾಗಾಣಿಕೆದಾರರಿಗೆ ಸಹಾಯ ಮಾಡುತ್ತಿದ್ದರು ಎಂಬುದಾಗಿ ಮಾಹಿತಿ ತಿಳಿದುಬಂದಿತ್ತು. ಅಲ್ಲದೇ ಗುಜರಾತ್‌ನ ಭೋಪಾಲ್ ಮತ್ತು ಅಹಮದಾಬಾದ್‌ನಲ್ಲಿ ನಡೆದ ಅಪಘಾತಕ್ಕೀಡಾದ ವಾಹನದಲ್ಲಿ ಮದ್ಯ ನಿಷೇಧದ ಹೊರತಾಗಿಯೂ ಹಲವಾರು ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂಬುದಾಗಿ ತಿಳಿದುಬಂದಿದೆ.

Continue Reading

Latest

Viral Video: ರಸ್ತೆ ಮೇಲೆಯೇ ಮಹಿಳೆಯ ವಶೀಕರಣ! 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

Viral Video: ಪತಿಗೆ ಟಿಫಿನ್ ನೀಡಿ ಹಿಂದಿರುಗುತ್ತಿದ್ದ ಮಹಿಳೆಯನ್ನು ರಾಜಸ್ಥಾನದ ಉದಯಪುರ ಬೀದಿಯಲ್ಲಿ ಹಾಡುಹಗಲೇ ಸಂಮೋಹನಗೊಳಿಸಿ ಆಕೆಯಿಂದ 4.5 ಲಕ್ಷ ಮೌಲ್ಯದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲಾಗಿದೆ.ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು. ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದ್ದಾರೆ. ಮುಂದೇನಾಯಿತು? ಈ ಸುದ್ದಿ ಓದಿ.

VISTARANEWS.COM


on

Koo

ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣ ಹೆಚ್ಚು ನಡೆಯುತ್ತಿದ್ದು, ಹಾಡಹಗಲಿನಲ್ಲೇ ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಳ್ಳರು ದರೋಡೆ ಶುರು ಮಾಡಿದ್ದಾರೆ. ಇದೀಗ ಇಂತಹದೊಂದು ಘಟನೆ ರಾಜಸ್ಥಾನದ ಉದಯಪುರ ಬೀದಿಯಲ್ಲಿ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ವೈರಲ್ (Viral Video )ಆಗಿದೆ.

ಜೂನ್ 28ರಂದು ಪತಿಗೆ ಟಿಫಿನ್ ನೀಡಿ ಹಿಂದಿರುಗುತ್ತಿದ್ದ ಮಹಿಳೆಯನ್ನು ರಾಜಸ್ಥಾನದ ಉದಯಪುರ ಬೀದಿಯಲ್ಲಿ ಹಾಡಹಗಲೇ ಸಂಮೋಹನಗೊಳಿಸಿ ಆಕೆಯಿಂದ 4.5 ಲಕ್ಷ ಮೌಲ್ಯದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲಾಗಿದೆ. ಸಂತ್ರಸ್ತೆಯನ್ನು ರೇಖಾ ಜೈನ್ ಎಂದು ಗುರುತಿಸಲಾಗಿದೆ. ಇಡೀ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ವಿಡಿಯೊದಲ್ಲಿ ಮಹಿಳೆ ದೆಹಲಿ ಗೇಟ್ ಜಂಕ್ಷನ್ ಬಳಿಯ ವಾಚ್‌ಶಾಪ್ ಹೊರಗಿನ ಬೀದಿಯಲ್ಲಿ ನಡೆದುಹೋಗುವಾಗ ಇಬ್ಬರು ವ್ಯಕ್ತಿಗಳು ಅವಳನ್ನು ತಡೆದರು. ಅವರು ಆಕೆಯ ಬಳಿ ಕೆಲವು ಪ್ರಶ್ನೆಗಳನ್ನು ಕೇಳುತ್ತಿದ್ದರೂ ಮತ್ತು ರೇಖಾ ಅದಕ್ಕೆ ಉತ್ತರಿಸುತ್ತಿದ್ದರು. ನಂತರ ಅವಳು ತನ್ನ ಪರ್ಸ್‌ನಿಂದ 50 ರೂಪಾಯಿಗಳನ್ನು ತೆಗೆದುಕೊಂಡು ಅವರಿಗೆ ನೀಡಿದಳು.

ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು. ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದ್ದಾರೆ. ಈ ವೇಳೆ ಅವರು ತಮ್ಮ ಬಳಿ ಇದ್ದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ರೇಖಾ ಪ್ರಜ್ಞೆ ಬಂದ ಬಳಿಕ ತನ್ನ ಪತಿಗೆ ವಿಚಾರ ತಿಳಿಸಿದ್ದು, ಇಬ್ಬರು ಸೇರಿ ನಗರದ ಸೂರಜ್ಪೋಲ್ ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ರೇಖಾ, ಆರೋಪಿಗಳು ತಾನು ನಂಬಿದ ದೇವರ ಬಗ್ಗೆ ಕೇಳಿದ್ದು, ಅದಕ್ಕೆ ಆಕೆ ಭಗವಾನ್ ಮಹಾವೀರ ಸ್ವಾಮಿಯ ಬಗ್ಗೆ ಪ್ರಸ್ತಾಪಿಸಿದಾಗ, ಆಕೆಯ ಬಳಿ ಹಣ ಕೇಳಿದ್ದಾರೆ. ಅವಳು ತನ್ನ ಪರ್ಸ್‌ನಿಂದ 50 ರೂಪಾಯಿಗಳನ್ನು ತೆಗೆದುಕೊಂಡು ಅದನ್ನು ಧಾರ್ಮಿಕ ಕಾರಣಕ್ಕಾಗಿ ಎಂದು ಭಾವಿಸಿ ಅವರಿಗೆ ನೀಡಿದಳು. ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು.

ಇದನ್ನೂ ಓದಿ: ಶಿಕ್ಷಣ ತಜ್ಞ ಡಾ ಎಂ ಆರ್ ಜಯರಾಮ್‌ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದರು ಎಂಬುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿವನ್ನು ಪರೀಕ್ಷಿಸಿದಾಗ ರೇಖಾ ಪೊಲೀಸರಿಗೆ ನೀಡಿದ ವಿವರಗಳು ಸಿಸಿಟಿವಿ ದೃಶ್ಯಾವಳಿಗಳಿಂದ ದೃಢಪಟ್ಟಿವೆ. ಪೊಲೀಸರು ಈಗ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Continue Reading

ಫ್ಯಾಷನ್

Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (radhika merchant) ಅವರನ್ನು ಇದೇ ತಿಂಗಳ 12ರಂದು ಮುಂಬಯಿನ (mumbai) ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (BKC) ಪ್ರಸಿದ್ಧ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿರುವ ಅನಂತ್ ಅಂಬಾನಿ (Anant Ambani) ಅವರ ಸಂಗ್ರಹದಲ್ಲಿರುವ ದುಬಾರಿ ವಾಚ್ ಗಳು ಯಾವುದು, ಇದರ ಬೆಲೆ ಎಷ್ಟು ಗೊತ್ತೇ?

VISTARANEWS.COM


on

By

Anant Ambani
Koo

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (RIL) ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಹಾಗೂ ರಿಲಾಯನ್ಸ್ ಫೌಂಡೇಶನ್ ನ (Reliance Foundation) ಸಂಸ್ಥಾಪಕಿ ನೀತಾ ಅಂಬಾನಿ (nita ambani) ಅವರ ಕೊನೆಯ ಪುತ್ರ ಅನಂತ್ ಅಂಬಾನಿ (Anant Ambani) ತಮ್ಮ ಮದುವೆಯ ಕಾರಣದಿಂದ ಕಳೆದ ಒಂದು ವರ್ಷದಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (radhika merchant) ಅವರನ್ನು ಇದೇ ತಿಂಗಳ 12ರಂದು ಮುಂಬಯಿನ (mumbai) ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (BKC) ಪ್ರಸಿದ್ಧ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಈ ನಡುವೆ ಇದೀಗ ಅನಂತ್ ಅಂಬಾನಿ ಅವರ ಸಂಗ್ರಹದಲ್ಲಿರುವ ದುಬಾರಿ ವಾಚ್ ಎಲ್ಲರ ಗಮನ ಸೆಳೆಯುತ್ತಿದೆ.

ಕ್ಯುರೇಟೆಡ್ ಮತ್ತು ಅತ್ಯದ್ಭುತ ದುಬಾರಿ ವಾಚ್ ಸಂಗ್ರಹಣೆಗಾಗಿ ಹೆಸರುವಾಸಿಯಾಗಿರುವ ಅನಂತ್ ಅಂಬಾನಿ ಅವರ ಬಳಿ ಇರುವ ಕೆಲವು ಅಸಾಧಾರಣ ವಾಚ್ ಸಂಗ್ರಹದ ಕುರಿತು ಕಿರು ಮಾಹಿತಿ ಇಲ್ಲಿದೆ.


ಪಾಟೆಕ್ ಫಿಲಿಪ್ ಗ್ರ್ಯಾಂಡ್ ಮಾಸ್ಟರ್ ಚೈಮ್

ಅನಂತ್ ಅಂಬಾನಿ ಗ್ರ್ಯಾಂಡ್ ಮಾಸ್ಟರ್ ಚೈಮ್ ಸೇರಿದಂತೆ ಪಾಟೆಕ್ ಫಿಲಿಪ್ ಅವರ ಅತ್ಯಂತ ದುಬಾರಿ ಕೈಗಡಿಯಾರಗಳಲ್ಲಿ ಎರಡನ್ನು ಹೊಂದಿದ್ದಾರೆ. ಪಾಟೆಕ್‌ ನ ಅತ್ಯಂತ ದುಬಾರಿ ಕೈಗಡಿಯಾರ ಇದಾಗಿದೆ. ಇದುವರೆಗೆ ಇದರ ಏಳು ವಾಚ್‌ಗಳನ್ನು ಮಾತ್ರ ಮಾಡಲಾಗಿದೆ. ಇದು ಇತ್ತೀಚೆಗೆ ಹರಾಜಿನಲ್ಲಿ 31 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 2.58 ಬಿಲಿಯನ್ ರೂ.ಗಳಾಗಿದೆ.


ಆಡೆಮರ್ಸ್ ಪಿಗುಯೆಟ್ ರಾಯಲ್ ಓಕ್ ಕಾನ್ಸೆಪ್ಟ್ ಜಿಎಂಟಿ ಟೂರ್‌ಬಿಲ್ಲನ್

ರಾಯಲ್ ಓಕ್‌ನ 30ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಬಿಡುಗಡೆ ಮಾಡಲಾದ ಈ ದಪ್ಪ ಗಡಿಯಾರವು ಟೈಟಾನಿಯಂ ಕೇಸ್ ಮತ್ತು ಅಸ್ಥಿಪಂಜರ ಮಾದರಿಯ ಡಯಲ್ ಅನ್ನು ಒಳಗೊಂಡಿದೆ. ಅದರ ಸಂಕೀರ್ಣ ಕಾರ್ಯವಿಧಾನ ಮೋಡಿ ಮಾಡುವಂತಿದೆ. ಮೈ ಯ ಶಾಖ ಮತ್ತು ಜಿಎಂಟಿ ಕಾರ್ಯದೊಂದಿಗೆ ಇದು ಕಾರ್ಯ ನಿರ್ವಹಿಸುತ್ತದೆ. ಇದರ ಅಂದಾಜು ಬೆಲೆ 1.9 ಕೋಟಿ ರೂ.


ಪಾಟೆಕ್ ಫಿಲಿಪ್ ನಾಟಿಲಸ್ ಟ್ರಾವೆಲ್ ಟೈಮ್

ಪಾಟೆಕ್ ಫಿಲಿಪ್ ವಾಚ್‌ ನ ಅತ್ಯಂತ ಅಪರೂಪದ ವಾಚ್ ಇದಾಗಿದ್ದು, ಮಾಣಿಕ್ಯ, ವಜ್ರ ಬಿಳಿ ಚಿನ್ನವನ್ನು ಒಳಗೊಂಡಿದೆ. ಅತ್ಯಂತ ಐಷಾರಾಮಿ ಕೈಗಡಿಯಾರವಾದ ಇದು ಕೆಂಪು ಮಾಣಿಕ್ಯ, ಹಸಿರು ಪಚ್ಚೆಗಳಿಂದ ಅಲಂಕರಿಸಲ್ಪಟ್ಟಿದೆ. ಇದರ ಅಂದಾಜು ಬೆಲೆ 8.2 ಕೋಟಿ ರೂ.

ಇದನ್ನೂ ಓದಿ: Nita Ambani: 50-60 ಬನಾರಸಿ ಸೀರೆ ಖರೀದಿಸಿದ ನೀತಾ ಅಂಬಾನಿ: ಸೀರೆಯ ದರ ಎಷ್ಟು?


ರಿಚರ್ಡ್ ಮಿಲ್ಲೆ ಆರ್ ಎಮ್ 56-01 ಟೂರ್‌ಬಿಲ್ಲನ್

ರಿಚರ್ಡ್ ಮಿಲ್ಲೆ ಆರ್ ಎಮ್ 56-01 ಶುದ್ಧ, ಸ್ಫಟಿಕದಂತಹ ನೀಲಮಣಿಯನ್ನು ಹೊಂದಿದೆ. ಇದು ಅಸಾಧಾರಣ ಬಾಳಿಕೆ ಮತ್ತು ಸ್ಕ್ರಾಚ್ ಪ್ರತಿರೋಧವನ್ನು ಹೊಂದಿದೆ. ಹಸಿರು ನೀಲಮಣಿಯನ್ನು ಒಳಗೊಂಡಿರುವ ಇದರ ಅಂದಾಜು ಬೆಲೆ 25 ಕೋಟಿ ರೂ.


ಪಾಟೆಕ್ ಫಿಲಿಪ್ ಸ್ಕೈ ಮೂನ್ ಟೂರ್ಬಿಲ್ಲಾನ್

ಪಾಟೆಕ್ ಫಿಲಿಪ್ ರಚಿಸಿದ ಅತ್ಯಂತ ಅಪರೂಪದ ಕೈಗಡಿಯಾರಗಳಲ್ಲಿ ಸ್ಕೈ ಮೂನ್ ಟೂರ್‌ಬಿಲ್ಲನ್ ನಲ್ಲಿ ಕ್ಯಾಲೆಂಡರ್, ಚಂದ್ರನ ಚಲನೆಯ ಸೂಚಕ ಸೇರಿದಂತೆ ಹನ್ನೆರಡು ವಿಶೇಷತೆಗಳನ್ನು ಒಳಗೊಂಡಿದೆ. ಇದರ ಸಂಕೀರ್ಣ ವಿನ್ಯಾಸ ಮತ್ತು ಅಸಾಧಾರಣ ಕರಕುಶಲತೆಯು ಸ್ವಿಸ್ ವಾಚ್‌ಮೇಕಿಂಗ್ ಅನ್ನು ಅತ್ಯುತ್ತಮವಾಗಿಸಿದೆ. ಇದರ ಅಂದಾಜು ಬೆಲೆ 54 ಕೋಟಿ ರೂ.

Continue Reading
Advertisement
Highest Collection Movie
ಸಿನಿಮಾ10 mins ago

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Narendra Modi
ರಾಜಕೀಯ11 mins ago

Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

theft Case
ಕ್ರೈಂ17 mins ago

Theft case : ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೆಲಸಗಾರ; ರಾಯಚೂರಲ್ಲಿ ಬೀಡುಬಿಟ್ಟ ಮಂಕಿ ಕ್ಯಾಪ್‌ ಗ್ಯಾಂಗ್‌!

AR Rahman
ಕ್ರೀಡೆ27 mins ago

AR Rahman: ಹಾಡಿನ ಮೂಲಕ ಟೀಮ್​ ಇಂಡಿಯಾಕ್ಕೆ ‘ಜೈ ಹೋ’ ಎಂದ ಎಆರ್ ರೆಹಮಾನ್

Press Day celebration Programme in hosapete
ವಿಜಯನಗರ27 mins ago

Press Day: ಹೊಸಪೇಟೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

Police Arrest
Latest29 mins ago

Police Arrest: ಅಕ್ರಮ ಮದ್ಯ ಸಾಗಿಸಲು ಸಹಾಯ; ಸಿಕ್ಕಿ ಬಿದ್ದ ಸಿಐಡಿ ಲೇಡಿ ಆಫೀಸರ್!

Turbulence
ದೇಶ34 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಲಗೇಜ್‌ ಕಂಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ ವ್ಯಕ್ತಿ-ವಿಡಿಯೋ ಇದೆ

Shraddha Nrityarnava special dance festival in Bengaluru
ಕರ್ನಾಟಕ34 mins ago

Bengaluru News: ಕಲಾ ರಸಿಕರ ಮನಸೂರೆಗೊಳಿಸಿದ ‘ಶ್ರದ್ಧಾ ನೃತ್ಯಾರ್ಣವʼ ವಿಶೇಷ ನೃತ್ಯೋತ್ಸವ

Yuva Sambhrama 2024 programme for 3 days from July 12 in Bengaluru
ಕರ್ನಾಟಕ35 mins ago

Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

Rohit Sharma
ಕ್ರೀಡೆ49 mins ago

Rohit Sharma: ಪಿಚ್​ ಮಣ್ಣು ತಿಂದಿದ್ದೇಕೆ?; ಪ್ರತಿಕ್ರಿಯಿಸಿದ ರೋಹಿತ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌