Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ - Vistara News

ಕ್ರೈಂ

Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Murder Case: ಮಲಗಿದ್ದ ವ್ಯಕ್ತಿಯನ್ನು ದರದರನೆ ಎಳೆದು ತಂದ ಆಸಾಮಿ ನಂತರ ರಸ್ತೆ ಪಕ್ಕ ಬಿದ್ದಿದ್ದ ಕಲ್ಲು ತಲೆ ಮೇಲೆ ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವವಾಗಿ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಇಬ್ಬರ ಗುರುತೂ ಪತ್ತೆಯಾಗಿಲ್ಲ.

VISTARANEWS.COM


on

jayanagar murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಸ್ತೆಯ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ (Jayanagar murder case) ನಡೆಸಿದ ಘಟನೆ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ಜಯನಗರ (Jayanagar murder case) 7ನೇ ಬಡಾವಣೆಯಲ್ಲಿ ನಡೆದಿದೆ. ರಾತ್ರಿ 12ರ ಹೊತ್ತಿಗೆ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.

ಮೃತನ ಗುರುತು ಪತ್ತೆಯಾಗಿಲ್ಲ. ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಪಾನಮತ್ತನಾಗಿ ಈತ ಮಲಗಿದ್ದ ಎನ್ನಲಾಗಿದೆ. ಮತ್ತೊಬ್ಬ ಬಂದು ಆತನ ಮೇಲೆ ಬಿದ್ದಿದ್ದಾನೆ. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆಯಾಗಿದೆ. ಮಲಗಿದ್ದ ವ್ಯಕ್ತಿಯನ್ನು ದರದರನೆ ಎಳೆದು ತಂದ ಆಸಾಮಿ ನಂತರ ರಸ್ತೆ ಪಕ್ಕ ಬಿದ್ದಿದ್ದ ಕಲ್ಲು ತಲೆ ಮೇಲೆ ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವವಾಗಿ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಘಟನೆ ಸ್ಥಳಕ್ಕೆ ಭೇಟಿ ನೀಡಿರುವ ಬನಶಂಕರಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ನಡೆದ ಸುತ್ತಮುತ್ತಲಿನ ಮನೆಗಳ ಸಿಸಿಟಿವಿ ಫೂಟೇಜ್‌ ಆಧರಿಸಿ ವ್ಯಕ್ತಿಯ ತಲಾಶೆ ನಡೆಸಲಾಗುತ್ತಿದೆ. ಕೊಲೆಯಾದ ವ್ಯಕ್ತಿಯ ವಿವರಗಳೂ ಗೊತ್ತಾಗಿಲ್ಲ. ಯಾವುದೇ ಐಡಿ ಈತನ ಬಳಿ ಕಂಡುಬಂದಿಲ್ಲ.

ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಒಂದು ಜಮೀನು (Land dispute) ಹಲವು ವರ್ಷಗಳಿಂದ ವಿವಾದದಲ್ಲಿತ್ತು. ಈ ಹಿನ್ನೆಲೆಯಲ್ಲಿ ಇಂಜಂಕ್ಷನ್‌ ಆರ್ಡರ್‌ (Injenction Order) ಅನ್ನು ಸಹ ತರಲಾಗಿತ್ತು. ಇಷ್ಟಾದರೂ ಈ ಜಮೀನಿಗೆ ಪ್ರವೇಶ ಮಾಡಿದ್ದಾನೆ ಎಂಬ ಕಾರಣಕ್ಕೆ ಇನ್ನೊಂದು ಕಡೆಯ ಗುಂಪಿನವರು ದಾಳಿ ನಡೆಸಿ ಕುಡುಗೋಲು ಬೀಸಿ ಕೊಂದು (Murder case) ಹಾಕಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಡಹಗಲೇ ಕೊಲೆ ನಡೆದಿದೆ. ಇಂಜಂಕ್ಷನ್‌ ಆರ್ಡರ್ ಇದ್ದ ಜಮೀನಿಗೆ ತೆರಳಿದ್ದ ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ.

ಗಲಾಟೆ ಜೋರಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಅಖಿಲೇಶ್‌ ಗುಂಪಿನವರಲ್ಲೊಬ್ಬರು ಸ್ಥಳದಲ್ಲಿದ್ದ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಮತ್ತೆ ಕೆಲವರು ಕೈಯಿಂದಲೇ ಗುದ್ದಿದ್ದಾರೆ. ಬಹಳಷ್ಟು ಜನ ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡ ಸತೀಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಯೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಯೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Assault Case : ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

Assault Case : ತುಮಕೂರಿನಲ್ಲಿ ಜಮೀನು ವಿವಾದಕ್ಕೆ ಎರಡು ಕುಟುಂಬಗಳ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ವ್ಯಕ್ತಿಯನ್ನು ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

Assault case
Koo

ತುಮಕೂರು: ಜಮೀನು‌ ವಿವಾದ ಹಿನ್ನೆಲೆಯಲ್ಲಿ (Assault Case) ಎರಡು ಕುಟುಂಬಗಳ ನಡುವೆ ಮಾರಾಮಾರಿಯೇ ನಡೆದಿದೆ. ತುಮಕೂರು‌ ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ಘಟನೆ ನಡೆದಿದೆ. ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಾಗೇಗೌಡನಪಾಳ್ಯದ ಮಂಜುನಾಥ್ ಎಂಬಾತನ ತಾಯಿ, ಪತ್ನಿ ಹಾಗೂ ಗಂಗಮ್ಮ, ನಾಗಯ್ಯ ಎಂಬುವವರು ಹಲ್ಲೆ ನಡೆಸಿದ್ದಾರೆ.

ಲಕ್ಷ್ಮಣಯ್ಯಗೆ ಸೇರಿದ ಸರ್ವೇ ನಂ.26ರ ಜಮೀನಿನ‌ ವಿಚಾರಕ್ಕೆ ಗಲಾಟೆ ನಡೆದಿದೆ. 1 ಎಕರೆ 10 ಗುಂಟೆಗೆ ಪಹಣಿ ಇದ್ದು, ಸರ್ವೆ ನಂ.26 ರಲ್ಲಿ ಇರುವ 15 ಗುಂಟೆ ಕರಾಬಿನ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಈಗಾಗಲೇ 15 ಗುಂಟೆ ಕರಾಬು ಜಾಗದಲ್ಲಿ ಲಕ್ಷ್ಮಣಯ್ಯ ಉಳುಮೆ ಮಾಡಿಕೊಂಡಿದ್ದಾರೆ.

15 ಗುಂಟೆ ಕರಾಬು ನಮಗೆ ಸೇರಬೇಕೆಂದು ಪಕ್ಕದ ಜಮೀನಿನ ಮಂಜುನಾಥ ಕುಟುಂಬಸ್ಥರಿಂದ ಲಕ್ಷ್ಮಣಯ್ಯ ಮೇಲೆ ಹಲ್ಲೆ ನಡೆಸಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಗಳಕ್ಕೆ ಬಂದ ಮಂಜುನಾಥ್‌ ಕುಟುಂಬಸ್ಥರು, ಲಕ್ಷ್ಮಣಯ್ಯನನ್ನು ಹಿಡಿದು ನೀರಿನಲ್ಲಿ ಮುಳುಗಿಸಿ, ಕುಡುಗೋಲು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಿಂದ ಲಕ್ಷ್ಮಣಯ್ಯಗೆ ಗಂಭೀರ ಗಾಯಗೊಂಡಿದ್ದು, ತುರುವೇಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ದೇವನಹಳ್ಳಿಯ ಶಾಲೆ ಹಿಂಭಾಗ ಶವ ಪತ್ತೆ

ರಾಜಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಂದಿನಿ ಶಾಲೆ ಹಿಂಭಾಗ ಘಟನೆ ನಡೆದಿದೆ. ರಾಜಕಾಲುವೆಯಲ್ಲಿ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಐದಾರು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇದು ಕೊಲೆಯೋ ಅಥವಾ ಸಹಜ ಸಾವೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಧಾರವಾಡದಲ್ಲಿ ತಂದೆಯನ್ನು ಹುಡುಕಿಕೊಡುವಂತೆ ಮಗನ ಅಳಲು

ತಂದೆಯನ್ನು ಹುಡುಕಿಕೊಡುವಂತೆ ಮಗನೊಬ್ಬ ಎಸ್‌ಪಿ ಕಚೇರಿಗೆ ಆಗಮಿಸಿದ್ದಾನೆ. ಧಾರವಾಡ ಜಿಲ್ಲೆಯ ಮಾರಡಗಿ ಗ್ರಾಮದ ದ್ಯಾಮಪ್ಪ ಹಡಪದ ಕಳೆದ ಮೇ 19ರಂದು ಏಕಾಏಕಿ ಕಾಣೆಯಾಗಿದ್ದರಿ. ಕಳೆದ 50 ದಿನಗಳಿಂದ ತಂದೆ ಕಾಣುತ್ತಿಲ್ಲ ಎಂದು ಮಗ ಪ್ರವೀಣ್‌ ಅಳಲು ತೊಡಿಕೊಂಡಿದ್ದಾರೆ. ಧಾರವಾಡ ಎಸ್‌ಪಿ ಕಚೇರಿಗೆ ಆಗಮಿಸಿ ತಂದೆಯನ್ನು ಹುಡುಕಿಕೊಡುವಂತೆ ಪ್ರವೀಣ್ ಮನವಿ ಮಾಡಿದ್ದಾರೆ. ನಮ್ಮ ತಂದೆಗೆ ಏನಾಗಿದೆ ಅಂತಲೇ ಗೊತ್ತಿಲ್ಲ, ಅವರನ್ನ ಹುಡುಕಿಕೊಡಿ ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Sexual Harassment: 80 ವರ್ಷದ ಅಜ್ಜಿಯ ಮೇಲೆ ನಿರಂತರ ಅತ್ಯಾಚಾರ; ಮೊಮ್ಮಗನಿಗೆ ಜೀವಾವಧಿ ಶಿಕ್ಷೆ

Sexual Harassment: ಅಜ್ಜಿ ಹಾಗೂ ಮೊಮ್ಮಕ್ಕಳ ಬಾಂಧವ್ಯ ತುಂಬಾ ಅನ್ಯೋನ್ಯವಾದದ್ದು. ಮೊಮ್ಮಕ್ಕಳ ಲಾಲನೆ ಪಾಲನೆಯನ್ನು ತಾಯಿಗಿಂತ ತುಸು ಹೆಚ್ಚಾಗಿಯೇ ಅಜ್ಜಿಯಂದಿರು ಮಾಡುತ್ತಾರೆ. ಆದರೆ ಇಲ್ಲೊಬ್ಬ ಮೊಮ್ಮಗ ತನ್ನ ಅಜ್ಜಿಯ ಮೇಲೆಯೇ ಹೀನಾಯ ಕೃತ್ಯ ಎಸಗಿದ್ದಾನೆ. ತಾಯಿಯಿಲ್ಲದ ವೇಳೆ ಅಜ್ಜಿಯನ್ನು ತನ್ನ ಕಾಮದಾಹಕ್ಕೆ ಬಳಸಿಕೊಂಡಿದ್ದು ಅಲ್ಲದೇ, ಯಾರಿಗಾದರೂ ತಿಳಿಸಿದರೆ ಮತ್ತಷ್ಟು ತೊಂದರೆ ಕೊಡುವುದಾಗಿ ಅಜ್ಜಿಗೆ ಬೆದರಿಕೆಯೊಡ್ಡಿದ್ದ. ಈ ಕಾಮುಕ ಮೊಮ್ಮಗನಿಗೆ ಕೋರ್ಟ್ ಈಗ ಕಠಿಣ ಶಿಕ್ಷೆ ವಿಧಿಸಿದೆ.

VISTARANEWS.COM


on

Sexual Harassment
Koo

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರದ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದು, ಸಾಮಾನ್ಯವಾಗಿ ಈ ಪ್ರಕರಣದಲ್ಲಿ ಯುವತಿಯರು ಅಥವಾ ಬಾಲಕಿಯರು ಬಲಿಪಶುಗಳಾಗಿರುತ್ತಿದ್ದರು. ಇದೀಗ ಸಿಕ್ಕಿಂನಲ್ಲಿ 80 ವರ್ಷದ ಅಜ್ಜಿಯ ಮೇಲೆ 24 ವರ್ಷದ ಮೊಮ್ಮಗ ಅತ್ಯಾಚಾರ (Sexual Harassment) ಎಸಗಿದ ಪ್ರಕರಣದಲ್ಲಿ ಈತನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.

ಸಂತ್ರಸ್ತ ಅಜ್ಜಿ ತನ್ನ ಮಗಳು, ಅಳಿಯ, ಮತ್ತು ಮೊಮ್ಮಗನೊಂದಿಗೆ ವಾಸವಾಗಿದ್ದಳು. ಸಂತ್ರಸ್ತೆಯ ಮಗಳು ಪಶ್ಚಿಮ ಬಂಗಾಳ ಪ್ರವಾಸದಿಂದ ಹಿಂದಿರುಗಿದಾಗ ತಾಯಿ ಕಾಣೆಯಾಗಿರುವುದನ್ನು ನೋಡಿ ಆಕೆಯನ್ನು ಹುಡುಕಿದಾಗ ವೃದ್ಧ ತಾಯಿ ನೆರೆಹೊರೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದಳು. ಅಲ್ಲಿ ಅಜ್ಜಿ ಮಗಳ ಬಳಿ ಹಲ್ಲೆಯನ್ನು ಬಹಿರಂಗಪಡಿಸಿದಳು. ಮತ್ತು ಮೊಮ್ಮಗ ತನ್ನ ಮೇಲೆ ಅನೇಕ ಸಂದರ್ಭಗಳಲ್ಲಿ ಅತ್ಯಾಚಾರ ಎಸಗಿದ್ದಾನೆ ಮತ್ತು ಈ ವಿಚಾರ ಬಹಿರಂಗಪಡಿಸಿದರೆ ಮತ್ತಷ್ಟು ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಳು. ಅಲ್ಲದೇ ತನ್ನ ಸ್ವಂತ ಮೊಮ್ಮಗನ ಬಗ್ಗೆ ಪೊಲೀಸರಿಗೆ ದೂರು ನೀಡಲು ಆಕೆ ಹಿಂಜರಿದಿದ್ದಳು. ಆದರೆ ಆಕೆಯ ಮಗಳು ಮಾತ್ರ ತನ್ನ ಮಗನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.

ದೂರಿನಲ್ಲಿ ಅಜ್ಜಿ ಮೊಮ್ಮಗನಿಂದ ಪದೇ ಪದೇ ಅತ್ಯಾಚಾರಕ್ಕೆ ಒಳಗಾಗುತ್ತಿದ್ದು, ಆತ ತನ್ನ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ, ಬೆದರಿಕೆ ಹಾಕುತ್ತಿದ್ದ ಎಂಬುದನ್ನು ವಿವರಿಸಿದ್ದಳು. ಆದರೆ ಆಕೆಯ ಮೇಲೆ ಯಾವುದೇ ದೈಹಿಕ ಗಾಯ ಆಗಿರಲಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ವರದಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದು ಬಂದಿತ್ತು.

ಇದನ್ನೂ ಓದಿ:ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

ಹಾಗಾಗಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (2) (ಎಫ್) (ಸಂಬಂಧಿಕರು, ಪೋಷಕರ ಮೇಲೆ ಅತ್ಯಾಚಾರ ಇತ್ಯಾದಿ), 376 (2) (ಎನ್) (ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಫಾಸ್ಟ್ ಟ್ರ್ಯಾಕ್ ಸೆಷನ್ಸ್ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಿ ಅಪರಾಧಿ ಮೊಮ್ಮಗನಿಗೆ ಜೀವಾವಧಿ ಶಿಕ್ಷೆ ಮತ್ತು ಪ್ರತಿ ಅತ್ಯಾಚಾರ ಅಪರಾಧಕ್ಕೆ 10,000 ರೂ.ಗಳ ದಂಡ ವಿಧಿಸಿತ್ತು, ಜೊತೆಗೆ ಕ್ರಿಮಿನಲ್ ಬೆದರಿಕೆಗಾಗಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 1,000 ರೂ. ಶಿಕ್ಷೆಗಳು ಏಕಕಾಲದಲ್ಲಿ ನಡೆಯಬೇಕೆಂದು ತೀರ್ಪು ನೀಡಿದೆ. ಅಪರಾಧಿ ಮೊಮ್ಮಗ ಈ ಬಗ್ಗೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರೂ ಹೈಕೋರ್ಟ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದು ಮೇಲ್ಮನವಿಯನ್ನು ವಜಾಗೊಳಿಸಿದೆ.

Continue Reading

ಚಿಕ್ಕಬಳ್ಳಾಪುರ

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Lovers Fighting: ಪ್ರೀತಿಸುವ ನೆಪದಲ್ಲಿ ಯುವತಿ ಜತೆಗೆ ಪಾರ್ಕ್‌, ಸಿನಿಮಾ ಅಂತ ಸುತ್ತಾಡಿದ್ದ. ಬಳಿಕ ಆಕೆಯನ್ನು ಗರ್ಭಿಣಿ ಮಾಡಿದ ಪ್ರಿಯಕರ ಮದುವೆ ಅಂದರೆ ಒಲ್ಲೆ ಎಂದವನಿಗೆ ನಡು ರಸ್ತೆಯಲ್ಲೇ ಚಳಿ ಬಿಡಿಸಿದ್ದಾಳೆ. ಪ್ರೇಮಿಗಳ ರಂಪಾಟವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

VISTARANEWS.COM


on

By

Lovers Fighting
Koo

ಚಿಕ್ಕಬಳ್ಳಾಪುರ: ಪ್ರಿಯಕರನೊಬ್ಬ ಪ್ರೀತಿಸುವ ನಾಟಕವಾಡಿ ಏಳು ತಿಂಗಳ ಗರ್ಭಿಣಿ ಮಾಡಿ ಕೈಕೊಟ್ಟಿರುವ (Lovers Fighting) ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ನಡೆದಿದೆ. ನಡುರಸ್ತೆಯಲ್ಲೇ ಪ್ರೇಮಿಗಳು ರಂಪಾಟ ನಡೆಸಿದ್ದು, ಬಳಿಕ ಪರಿಸ್ಥಿತಿ ಹೊಡೆದಾಟ ಬಡೆದಾಟಕ್ಕೂ (Cheating Case) ಹೋಗಿದೆ. ಬಾಗೇಪಲ್ಲಿ ತಾಲೂಕಿನ ಮಲ್ಲಸಂದ್ರ ಗ್ರಾಮದ ನಿವಾಸಿಗಳಾದ ಸೂರ್ಯಪ್ರಕಾಶ್‌, ಗಗನ ಎಂಬುವವರ ರಂಪಾಟವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಸೂರ್ಯಪ್ರಕಾಶ ಹಾಗೂ ಗಗನ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಗಗನ ಯಾವಾಗ ಮದುವೆ ವಿಷಯ ಪ್ರಸ್ತಾಪ ಮಾಡಿದ್ದಳೋ ಆಗ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದ. ಸೂರ್ಯಪ್ರಕಾಶ್ ಮದುವೆಯನ್ನು ನಿರಾಕರಿಸಿದಾಗ ಆತನ ವಿರುದ್ಧ ಗಗನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ದೂರು ದಾಖಲಾಗುತ್ತಿದ್ದಂತೆ ಸೂರ್ಯ ಪ್ರಕಾಶ್‌ ಪೋಷಕರು ಮದುವೆ ಮಾಡಿಸುವುದಾಗಿ ನಂಬಿಸಿ ಬೇಲ್ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿದ್ದರು. ಬೇಲ್ ಪಡೆದ ಬಳಿಕ ಪ್ರಿಯಕರನ ಪೋಷಕರು ಉಲ್ಟಾ ಹೊಡೆದಿದ್ದರು. ಇದರಿಂದ ರೋಸಿ ಹೋದ ಗಗನ ಮದುವೆಯಾಗುವಂತೆ ಸೂರ್ಯನನ್ನು ನಡುಬೀದಿಯಲ್ಲಿ ನಿಲ್ಲಿಸಿದ್ದಳು. ಪ್ರೇಮಿಗಳ ನಡುವಿನ ಮಾತಿನ ಚಕಮಕಿ ಹಾಗೂ ಪರಸ್ಪರ ಹೊಡೆದಾಟ ಬಡೆದಾಟವನ್ನು ಸ್ಥಳೀಯರು ವಿಡಿಯೊ ಮಾಡಿಕೊಂಡಿದ್ದರು.

ಠಾಣೆ ಮೆಟ್ಟಿಲೇರಿದ್ದ ಯುವತಿ

ಪ್ರೀತಿ ಹೆಸರಲ್ಲಿ ತನ್ನನ್ನು ಗರ್ಭಿಣಿ (Pregnant) ಮಾಡಿ ವಂಚಿಸಿ (Fraud Case) ಪ್ರಿಯಕರ ಪರಾರಿಯಾಗಿದ್ದಾನೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಗಗನ ಪೊಲೀಸರಿಗೆ ದೂರು ನೀಡಿದ್ದಳು. ಇದೀಗ ಆಕೆ ಗರ್ಭಿಣಿ ಆಗಿದ್ದು, ಪ್ರಿಯಕರನನ್ನು ಹುಡುಕಿ ಕೊಡುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಕಾಲೇಜಿನಲ್ಲಿ ಓದುವಾಗಲೇ ಈ ಜೋಡಿ ಪರಸ್ಪರ ಪ್ರೀತಿಸಿದ್ದರು. ತನ್ನನ್ನು ವಿವಾಹ ಆಗುವುದಾಗಿ ನಂಬಿಸಿ ತನ್ನನ್ನು ಬಳಸಿಕೊಂಡಿದ್ದು, ಇದೀಗ ತಾನು ಗರ್ಭಿಣಿಯಾಗಿದ್ದೇನೆ. ಆತನನ್ನು ಹುಡುಕಿಕೊಡಿ ಎಂದು ಗಗನ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಿದ್ದಳು. ಆದರೆ ಹೀಗೆ ಪೊಲೀಸರಿಗೆ ಲಾಕ್‌ ಆಗಿದ್ದ ಸೂರ್ಯ ಮದುವೆ ಆಗುವುದಾಗಿ ಹೇಳಿ ಮತ್ತೆ ಕೈಕೊಟ್ಟಿದ್ದಾನೆ.

ಇದನ್ನೂ ಓದಿ: Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಧಾರವಾಡದಲ್ಲಿ ತಂದೆಯನ್ನು ಹುಡುಕಿಕೊಡುವಂತೆ ಮಗನ ಅಳಲು

ತಂದೆಯನ್ನು ಹುಡುಕಿಕೊಡುವಂತೆ ಮಗನೊಬ್ಬ ಎಸ್‌ಪಿ ಕಚೇರಿಗೆ ಆಗಮಿಸಿದ್ದಾನೆ. ಧಾರವಾಡ ಜಿಲ್ಲೆಯ ಮಾರಡಗಿ ಗ್ರಾಮದ ದ್ಯಾಮಪ್ಪ ಹಡಪದ ಕಳೆದ ಮೇ 19ರಂದು ಏಕಾಏಕಿ ಕಾಣೆಯಾಗಿದ್ದರಿ. ಕಳೆದ 50 ದಿನಗಳಿಂದ ತಂದೆ ಕಾಣುತ್ತಿಲ್ಲ ಎಂದು ಮಗ ಪ್ರವೀಣ್‌ ಅಳಲು ತೊಡಿಕೊಂಡಿದ್ದಾರೆ. ಧಾರವಾಡ ಎಸ್‌ಪಿ ಕಚೇರಿಗೆ ಆಗಮಿಸಿ ತಂದೆಯನ್ನು ಹುಡುಕಿಕೊಡುವಂತೆ ಪ್ರವೀಣ್ ಮನವಿ ಮಾಡಿದ್ದಾರೆ. ನಮ್ಮ ತಂದೆಗೆ ಏನಾಗಿದೆ ಅಂತಲೇ ಗೊತ್ತಿಲ್ಲ, ಅವರನ್ನ ಹುಡುಕಿಕೊಡಿ ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Baby Death: ಹೋಮ್‌ ವರ್ಕ್‌ ಮಾಡುತ್ತಿದ್ದ ಬಾಲಕಿಗೆ ಸಾವಾಗಿ ಕಾಡಿದ ಪೆನ್‌!

Baby Death: ಮನೆಯಲ್ಲಿ ಚಿಕ್ಕಮಕ್ಕಳು ಪೆನ್, ಪೆನ್ಸಿಲ್ ಹಿಡಿದುಕೊಂಡು ಆಡುವುದು ಸಾಮಾನ್ಯ. ಮನೆಯಲ್ಲಿ ಹಾಸಿಗೆಯ ಮೇಲೆ ಕುಳಿತು ತನ್ನ ಪುಸ್ತಕಗಳೊಂದಿಗೆ ಆಟವಾಡುತ್ತಿದ್ದ ಬಾಲಕಿಯೊಬ್ಬಳು ಬ್ಯಾಲೆನ್ಸ್ ತಪ್ಪಿ ಮಂಚದಿಂದ ಕೆಳಗೆ ಬಿದ್ದಿದ್ದಳು. ಆಗ ಅವಳು ಹಿಡಿದಿದ್ದ ಪೆನ್ ಕಿವಿಯ ಮೇಲ್ಭಾಗದಿಂದ ನೇರವಾಗಿ ತಲೆಯನ್ನು ಚುಚ್ಚಿತು. ವೈದ್ಯರು ಆಕೆಗೆ ಸರ್ಜರಿ ಮಾಡಿ ಪೆನ್ ಹೊರಗೆ ತೆಗೆದರೂ ಕೂಡ ಗಂಭೀರ ಸ್ಥಿತಿಯಲ್ಲಿದ್ದ ಆಕೆ ಸೋಂಕಿಗೆ ಒಳಗಾಗಿ ಕೊನೆಯುಸಿರೆಳಿದಿದ್ದಾಳೆ.

VISTARANEWS.COM


on

Baby Death
Koo

ಶಾಲೆಗೆ ಹೋಗುವ ಮಕ್ಕಳ ಕೈಯಲ್ಲಿ ಪೆನ್ನು, ಪೆನ್ಸಿಲ್ ಕೊಟ್ಟಾಗ ಅವರು ತಮ್ಮ ತಲೆ, ಕಣ್ಣು, ಕೈಗೆ ಕೆಲವೊಮ್ಮೆ ಚುಚ್ಚಿಸಿಕೊಳ್ಳುವುದಿದೆ. ಆದರೆ ಪೆನ್‌ನಿಂದ ಸಾವು ಸಂಭವಿಸಿದ ಸುದ್ದಿ ಹಿಂದೆಂದೂ ಕೇಳಿದ್ದಿಲ್ಲ. ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಭದ್ರಾಚಲಂನ ಸುಭಾಷ್ ನಗರದಲ್ಲಿ ಬರೆಯಲು ಇಟ್ಟುಕೊಂಡಿದ್ದ ಪೆನ್‌ನಿಂದ ಬಾಲಕಿಯ ಸಾವು ಸಂಭವಿಸಿದ ದುರ್ಘಟನೆ ನಡೆದಿದೆ. 5 ವರ್ಷದ ಬಾಲಕಿ (Baby Death) ತಲೆಗೆ ಪೆನ್ ಚುಚ್ಚಿದ ಪರಿಣಾಮ ಸಾವನಪ್ಪಿದ್ದಾಳೆ.

ರಿಯಾನ್ಶಿಕಾ ಪೆನ್ನು ಚುಚ್ಚಿ ಸಾವನಪ್ಪಿದ ಬಾಲಕಿ. ಈಕೆ ಯುಕೆಜಿಯಲ್ಲಿ ಓದುತ್ತಿದ್ದಳು. ಜುಲೈ 1ರಂದು ತನ್ನ ಮನೆಯಲ್ಲಿ ಹಾಸಿಗೆಯ ಮೇಲೆ ಕುಳಿತು ಹೋಮ್‌ ವರ್ಕ್‌ ಮಾಡುತ್ತ ತನ್ನ ಪುಸ್ತಕಗಳೊಂದಿಗೆ ಆಟವಾಡುತ್ತಿದ್ದಾಗ, ಬ್ಯಾಲೆನ್ಸ್ ತಪ್ಪಿ ಮಂಚದಿಂದ ಕೆಳಗೆ ಬಿದ್ದಿದ್ದಾಳೆ. ಆಗ ಅವಳು ಹಿಡಿದಿದ್ದ ಪೆನ್ ಅವಳ ಕಿವಿಯ ಮೇಲ್ಭಾಗದಿಂದ ನೇರವಾಗಿ ತಲೆಗೆ ಆಳವಾಗಿ ಚುಚ್ಚಿದೆ. ಪೆನ್ನಿನ ಸುಮಾರು ಅರ್ಧದಷ್ಟು ಭಾಗ ಅವಳ ತಲೆಯೊಳಗೆ ತೂರಿ ಹೋಗಿತ್ತು ಎನ್ನಲಾಗಿದೆ.

ತಕ್ಷಣ ಆಕೆಯ ಹೆತ್ತವರಾದ ಮಣಿಕಂಠ ಮತ್ತು ಸ್ವರೂಪಾ ಅವರು ಅವಳನ್ನು ಭದ್ರಾಚಲಂ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ನಂತರ ವೈದ್ಯರ ಸಲಹೆಯ ಮೇರೆಗೆ ಉತ್ತಮ ಚಿಕಿತ್ಸೆಗಾಗಿ ಖಮ್ಮಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ಅಲ್ಲಿ ವೈದ್ಯರು ಆಕೆಗೆ ಸರ್ಜರಿ ಮಾಡಿ ಪೆನ್ ಅನ್ನು ಹೊರಗೆ ತೆಗೆದರೂ ಕೂಡ ಗಂಭೀರ ಸ್ಥಿತಿಯಲ್ಲಿದ್ದ ಆಕೆ ಸೋಂಕಿಗೆ ಒಳಗಾಗಿ ಸಾವನಪ್ಪಿದ್ದಾಳೆ.

ಕೊನೆಗೂ ನೂರಾರು ವರ್ಷ ಬಾಳಿ ಬದುಕುಬೇಕಾಗಿದ್ದ ಆ ಪುಟ್ಟ ಬಾಲಕಿಯ ಜೀವ ಕೇವಲ ಒಂದು ಚಿಕ್ಕ ಪೆನ್ನಿನಿಂದ ಅಂತ್ಯ ಕಂಡಿದ್ದು ದುರಂತವೇ ಸರಿ. ಹಾಗಾಗಿ ಈ ಘಟನೆಯಿಂದ ಎಲ್ಲಾ ಪೋಷಕರು ಎಚ್ಚೆತ್ತುಕೊಳ್ಳುವುದು ಉತ್ತಮ. ನಿಮಗೆ ಎಷ್ಟೇ ಕೆಲಸವಿದ್ದರೂ ಕೂಡ ನಿಮ್ಮ ಮಕ್ಕಳ ಬಗ್ಗೆ ಒಂದು ಗಮನವಿಟ್ಟಿರಿ. ಇಲ್ಲವಾದರೆ ಇಂತಹ ದುರಂತಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ:ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

ಈ ಹಿಂದೆ ಮೇ ತಿಂಗಳಿನಲ್ಲಿ ನೇಪಾಳದಲ್ಲಿ 7 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ 10 ಸೆಂ.ಮೀ ಉದ್ದದ ಪೆನ್ಸಿಲ್ ಅನ್ನು ನುಂಗಿ ಬಿಟ್ಟಿದ್ದ. ಇದರಿಂದ ಆತ ಹೊಟ್ಟೆ ನೋವಿನಿಂದ ನರಳಿದ್ದು, ನಂತರ ಪೋಷಕರು ವೈದ್ಯರ ಬಳಿ ಕರೆದುಕೊಂಡು ಹೋದಾಗ ಬಾಲಕನ ಎದೆ ಮತ್ತು ಹೊಟ್ಟೆಯ ಎಕ್ಸ್-ರೇ ಸ್ಕ್ಯಾನ್ ಮಾಡಿಸಿದ ವೈದ್ಯರಿಗೆ ಪೆನ್ಸಿಲ್ ಅವನ ಹೊಟ್ಟೆಯಲ್ಲಿ ಇರುವುದು ತಿಳಿದು ಬಂದಿತ್ತು. ನಂತರ 4 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯ ಮೂಲಕ ಅದನ್ನು ಆತನ ಹೊಟ್ಟೆಯಿಂದ ಹೊರಗೆ ತೆಗೆಯಲಾಗಿತ್ತು. ಇದರಿಂದ ಆತ ಪ್ರಾಣಾಪಾಯದಿಂದ ಪಾರಾಗಿದ್ದ.

Continue Reading
Advertisement
Virat kohli
ಪ್ರಮುಖ ಸುದ್ದಿ1 min ago

Virat Kohli : ನಿವೃತ್ತಿ ಬಳಿಕ ಪತ್ನಿ ಜತೆ ಲಂಡನ್​ಗೆ ತೆರಳಿ ನೆಲೆಸಲಿದ್ದಾರೆ ವಿರಾಟ್​ ಕೊಹ್ಲಿ,

Porn Passport
ವಿದೇಶ4 mins ago

Porn Passport: ಪೋರ್ನ್ ಪಾಸ್‌ಪೋರ್ಟ್! ಅಶ್ಲೀಲ ವಿಡಿಯೊ ವೀಕ್ಷಿಸಲು ಇದು ಕಡ್ಡಾಯ!!

Lalu Prasad Yadav
ದೇಶ6 mins ago

Lalu Prasad Yadav: ಮುಂದಿನ ತಿಂಗಳು ಮೋದಿ ರಾಜೀನಾಮೆ; ಲಾಲು ಪ್ರಸಾದ್‌ ಯಾದವ್‌ ಸ್ಫೋಟಕ ಭವಿಷ್ಯ

New Fashion Trend
ಫ್ಯಾಷನ್22 mins ago

New Fashion Trend: ಜೆನ್‌ ಜಿ ಹುಡುಗ-ಹುಡುಗಿಯರ ಬೆರಳನ್ನು ಆಕ್ರಮಿಸಿದ ಫಂಕಿ ಉಂಗುರಗಳು!

CM Siddaramaiah
ಕರ್ನಾಟಕ34 mins ago

CM Siddaramaiah: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಿಎಂ ಸಿದ್ದರಾಮಯ್ಯ

karnataka Weather Forecast
ಮಳೆ1 hour ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

district administration has made an innovative attempt for the first time in the state for the marriage of farmer youth and disabled people
ಕರ್ನಾಟಕ1 hour ago

Uttara Kannada News: ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉ.ಕ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ!

Bajaj Freedom 125
ಪ್ರಮುಖ ಸುದ್ದಿ1 hour ago

Bajaj Freedom 125 CNG : ಬಜಾಜ್​ ಕಂಪನಿಯ ಸಿಎನ್​ಜಿ ಬೈಕ್​ ಬಿಡುಗಡೆ; ಕೆ.ಜಿಗೆ 102 ಕಿಲೋ ಮೀಟರ್​​ ಮೈಲೇಜ್​

Keir Starmer
ಪ್ರಮುಖ ಸುದ್ದಿ1 hour ago

Keir Starmer: ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ನೇಮಕ; ಅಭಿನಂದನೆ ಸಲ್ಲಿಸಿದ ಮೋದಿ

Bikini Dress
Latest1 hour ago

Bikini Day: ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆ ಉಡಾಯಿಸಿದ ಸುಂದರಿಯರಿವರು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 hour ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ3 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ4 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ6 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ7 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು8 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು9 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ13 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌