PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು? - Vistara News

ಪ್ರಮುಖ ಸುದ್ದಿ

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

PM Narendra Modi: ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗೆ ನಾಲ್ಕು ಅನುಮೋದಕರು (proposers) ಇದ್ದರು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ನಾಲ್ವರೂ ವಾರಾಣಸಿ ಲೋಕಸಭೆ ಕ್ಷೇತ್ರದವರಾಗಿರಬೇಕು ಎಂಬ ನಿಯಮ ಇರುವುದರಿಂದ, ಅಲ್ಲಿಯವರನ್ನು ಅಯ್ದುಕೊಳ್ಳಲಾಗಿದೆ.

VISTARANEWS.COM


on

pm narendra modi nomination
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ (Lok Sabha Election 2024) ನಾಮಪತ್ರ (Narendra modi nomination) ಸಲ್ಲಿಸಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಈ ಸಂದರ್ಭದಲ್ಲಿ ಅವರೊಂದಿಗೆ ಇದ್ದರು. ನಿನ್ನೆ ಪ್ರಧಾನಿ ಮೋದಿ ವಾರಾಣಸಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದರು.

ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗೆ ನಾಲ್ಕು ಅನುಮೋದಕರು (proposers) ಇದ್ದರು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ನಾಲ್ವರೂ ವಾರಾಣಸಿ ಲೋಕಸಭೆ ಕ್ಷೇತ್ರದವರಾಗಿರಬೇಕು ಎಂಬ ನಿಯಮ ಇರುವುದರಿಂದ, ಅಲ್ಲಿಯವರನ್ನು ಅಯ್ದುಕೊಳ್ಳಲಾಗಿದೆ.

ಪಂಡಿತ್ ಗಣೇಶ್ವರ ಶಾಸ್ತ್ರಿ: ಬ್ರಾಹ್ಮಣ ಸಮುದಾಯದ ಸದಸ್ಯ. ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಗೆ ಮಂಗಳಕರ ಸಮಯವನ್ನು ನಿರ್ಧರಿಸಿದವರು.

ಬೈಜನಾಥ್ ಪಟೇಲ್: ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು.

ಲಾಲ್‌ಚಂದ್ ಕುಶ್ವಾಹಾ: ಲಾಲ್‌ಚಂದ್ ಕುಶ್ವಾಹಾ ಕೂಡ ಒಬಿಸಿ ಸಮುದಾಯದವರು.

ಸಂಜಯ್ ಸೋಂಕರ್: ಇವರು ದಲಿತ ಸಮುದಾಯದಿಂದ ಬಂದವರು.

“… ನಮಗೆ ಬೆಳಿಗ್ಗೆ ಮಾಹಿತಿ ಸಿಕ್ಕಿತು. ಪಕ್ಷದ ಕಾರ್ಯಕರ್ತನಾಗಿ ನನಗೆ ವಹಿಸಿದ ಕೆಲಸಗಳನ್ನು ಮಾಡುತ್ತಿದ್ದೇನೆ. ನನಗೆ ಇಷ್ಟು ದೊಡ್ಡ ಜವಾಬ್ದಾರಿ ನೀಡಿದ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ…, ”ಎಂದು ಸೋಂಕರ್ ಮಾಧ್ಯಮಗಳಿಗೆ ತಿಳಿಸಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ, ಪ್ರಧಾನಿ ಮೋದಿಯವರ ಪ್ರತಿಪಾದಕರು ಕೃಷಿ ವಿಜ್ಞಾನಿ, ಬಿಎಚ್‌ಯು ಮಹಿಳಾ ಮಹಾವಿದ್ಯಾಲಯದ ಮಾಜಿ ಪ್ರಾಂಶುಪಾಲರು, ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ವಾರಣಾಸಿ ಘಾಟ್‌ಗಳ ಮುಖ್ಯ ದಹನಕಾರ ಹೀಗೆ ವಿವಿಧ ಹಿನ್ನೆಲೆಗಳಿಂದ ಬಂದವರಾಗಿದ್ದರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ನಾಮಪತ್ರ ಸಲ್ಲಿಕೆಯ ಸಮಯ ನಿಗದಿ ಹೇಗೆ?

ಪ್ರಧಾನಿ ಮೋದಿ ನಾಮಪತ್ರವನ್ನು ಬೆಳಗ್ಗೆ 11:40 ರಿಂದ ಮಧ್ಯಾಹ್ನ 12:00 ರ ಅವಧಿಯಲ್ಲಿ ಸಲ್ಲಿಸುತ್ತಿದ್ದಾರೆ. ಈ ಸಮಯವು ಮಂಗಳಕರವಾದ ಪುಷ್ಯ ನಕ್ಷತ್ರ ಮತ್ತು ಗಂಗಾ ಸಪ್ತಮಿಯೊಂದಿಗೆ ಹೊಂದಿಕೆಯಾಗುತ್ತದೆ. ಜ್ಯೋತಿಷಿ ಪಂ. ರಿಷಿ ದ್ವಿವೇದಿ ಅವರ ಪ್ರಕಾರ, ಈ ತಾರಾ ಜೋಡಣೆಯು ಶುಭ ಮತ್ತು ಇಷ್ಟಾರ್ಥಗಳ ನೆರವೇರಿಕೆಯನ್ನು ಸೂಚಿಸುತ್ತದೆ. ಪುಷ್ಯ ನಕ್ಷತ್ರದ ಸಮಯದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳುವುದು ಅವುಗಳ ಯಶಸ್ವಿ ಪೂರ್ಣಗೊಳಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ನಂಬಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

SCSP TSP Scheme: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಶೇ.100 ಖರ್ಚು ಮಾಡದಿದ್ರೆ ಕಠಿಣ ಕ್ರಮ; ಸಿಎಂ ವಾರ್ನಿಂಗ್‌

SCSP TSP Scheme: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆ ಶುಕ್ರವಾರ ನಡೆಯಿತು.

VISTARANEWS.COM


on

SCSP TSP Scheme
Koo

ಬೆಂಗಳೂರು: ಎಸ್‌ಸಿ-ಎಸ್‌ಟಿ ಸಮುದಾಯ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ (SCSP TSP Scheme) ಬಿಡುಗಡೆಯಾಗುವ ಅನುದಾನವನ್ನು ಆಯಾಯ ವರ್ಷವೇ ಶೇ.100 ರಷ್ಟು ಖರ್ಚು ಮಾಡಬೇಕು. ಒಂದು ವೇಳೆ ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಾವು ಮಾತ್ರ. ನಮ್ಮ ಸರ್ಕಾರ ಮಾತ್ರ. 2024-25ನೇ ಸಾಲಿನಲ್ಲಿ 39121.46 ಕೋಟಿ ಇದ್ದರೆ, ಹಿಂದಿನ ವರ್ಷ 35221.84 ಕೋಟಿ ಇತ್ತು. ಇದರಲ್ಲಿ ಬಿಡುಗಡೆ ವೆಚ್ಚದ ಶೇ 99.64 ಕೋಟಿಯಷ್ಟು ಖರ್ಚಾಗಿದೆ. ಉಳಿದದ್ದು ಏಕೆ ಆಗಿಲ್ಲ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಆಯಾಯ ವರ್ಷವೇ ಶೇ 100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಮಾಡಿದ್ದು ನಾವೇ. ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎನ್ನುವ ನಿಯಮವನ್ನೂ ಮಾಡಿದ್ದೇವೆ. ಯಾರು ನಿರ್ಲಕ್ಷ್ಯ ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಿರ್ಲಕ್ಷ್ಯಕ್ಕೆ ಕ್ಷಮೆ ಇಲ್ಲ. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಎಸ್‌.ಸಿ.ಎಸ್‌.ಪಿ., ಟಿ.ಎಸ್.ಪಿ. ಕಾಯ್ದೆ 2013 ನ್ನು ಜಾರಿಗೆ ತಂದು, ಸರ್ಕಾರದ ಒಟ್ಟಾರೆ ಅಭಿವೃದ್ಧಿ ಆಯವ್ಯಯದ ಶೇ. 24.1 ರಷ್ಟನ್ನು ಈ ಸಮುದಾಯಗಳ ಅಭಿವೃದ್ಧಿಗೆ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ | HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆಇದನ್ನೂ ಓದಿ |

ಸಭೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಗಳು

  • ಇಂದು ನಡೆದ ರಾಜ್ಯ ಪರಿಷತ್‌ ಸಭೆಯಲ್ಲಿ 2024-25 ನೇ ಸಾಲಿಗೆ ಎಸ್.ಸಿ.ಎಸ್‌.ಪಿ. / ಟಿಎಸ್‌.ಪಿ. ಅಡಿ ಒಟ್ಟಾರೆ ರೂ.39,121.46 ಕೋಟಿ ಅನುದಾನ ಒದಗಿಸಲಾಗಿದೆ.
  • ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು ಶೇ.11 ಅಂದರೆ ರೂ.3897 ಕೋಟಿ ಹೆಚ್ಚಳವಾಗಿದೆ. ಎಸ್‌.ಸಿ.ಎಸ್‌.ಪಿ. ಅಡಿ 27,673.96 ಕೋಟಿ ರೂ. ಹಾಗೂ ಟಿ.ಎಸ್.ಪಿ. ಅಡಿ 11447.50 ಕೋಟಿ ರೂ. ಒದಗಿಸಲಾಗಿದೆ.
  • ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 8,480 ಕೋಟಿ ರೂ., ಇಂಧನ ಇಲಾಖೆಗೆ 5026 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 4174 ಕೋಟಿ ರೂ., ಕಂದಾಯ ಇಲಾಖೆಗೆ 3403 ಕೋಟಿ ರೂ. , ಗ್ರಾಮೀಣಾಭಿವೃದ್ಧಿ ಇಲಾಖೆಗೆ 3163 ಕೋಟಿ ರೂ. ಒದಗಿಸಲಾಗಿದೆ.
  • ಕಳೆದ ವರ್ಷ 35221.84 ಕೋಟಿ ರೂ. ಆಯವ್ಯಯ ಹಂಚಿಕೆಗೆ ಎದುರಾಗಿ ಶೇ. 97.23 ರಷ್ಟು ಹಾಗೂ ಬಿಡುಗಡೆಗೆ ಎದುರಾಗಿ ಶೇ. 99.64 ರಷ್ಟು ಸಾಧನೆಯಾಗಿದೆ.
  • ಈ ಅನುದಾನ ಯಾವ ಕಾರಣಕ್ಕೂ ಬಳಕೆಯಾಗದೆ ಉಳಿಕೆ (lapse) ಆಗಬಾರದು. ಅದೇ ವರ್ಷ ವೆಚ್ಚವಾಗಬೇಕು.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿಗಮಗಳಲ್ಲಿ ಹಣ ವೆಚ್ಚವಾಗಿಲ್ಲ. ಇದಕ್ಕೆ ಶಾಸಕರು ಪಟ್ಟಿ ಕೊಡಲಿಲ್ಲ ಎಂಬ ಕಾರಣ ನೀಡುತ್ತಾರೆ.
  • ನಿಗಮಗಳ ಅಧ್ಯಕ್ಷರು ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಫಲಾನುಭವಿಗಳ ಪಟ್ಟಿ ಒದಗಿಸುವಂತೆ ಮನವೊಲಿಸಬೇಕು.
  • ಈ ಯೋಜನೆಗಳ ಮೌಲ್ಯಮಾಪನದಿಂದ ಶೇ. 65 ರಷ್ಟು ಉಪಯೋಗವಾಗಿರುವುದು ಕಂಡು ಬರುತ್ತದೆ.
  • ಸೆಕ್ಷನ್‌ 7 (ಡಿ) ಕೈಬಿಡಲಾಗಿದೆ. ಇದರಿಂದಾಗಿ ಈ ಯೋಜನೆಯ ಸಂಪೂರ್ಣ ವೆಚ್ಚ ಈ ಸಮುದಾಯದವರಿಗೇ ಬಳಕೆಯಾಗಲಿದೆ.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಚಿವರಾದ ಎಚ್.ಕೆ.ಪಾಟೀಲ್, ಪ್ರಿಯಾಂಕ್‌ ಖರ್ಗೆ, ಡಾ. ಎಂ.ಸಿ. ಸುಧಾಕರ್‌, ಪರಿಷತ್ತಿನ ಸದಸ್ಯರಾಗಿರುವ ಶಾಸಕರುಗಳಾದ ಪ್ರಸಾದ್ ಅಬ್ಬಯ್ಯ, ಬಸಂತಪ್ಪ, ಶ್ರೀನಿವಾಸ್,ನರೇಂದ್ರಸ್ವಾಮಿ, ಕೃಷ್ಣಾನಾಯಕ್ , ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಂಸದರಾದ ಸುನಿಲ್ ಬೋಸ್ ಪ್ರಕಾಶ್ ಲೋಕಸಭಾ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌ ಗೋಯೆಲ್‌, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Salary Hike: ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ!

Continue Reading

Latest

Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Self Harming: ಮದುವೆ ಬಗ್ಗೆ ಸಾವಿರಾರು ಕನಸುಗಳಿರುತ್ತದೆ. ತನ್ನ ಕೈ ಹಿಡಿದ ವರನು ಬದುಕಿಡಿ ಜೊತೆಯಾಗಿ ಇರುತ್ತಾನೆ ಎಂಬ ನಂಬಿಕೆ ಇರುತ್ತದೆ. ಇಂತಹದ್ದೇ ಕನಸು ಕಟ್ಟಿಕೊಂಡ ವಧುವೊಬ್ಬಳು ಮೊದಲ ರಾತ್ರಿಯ ಕೋಣೆಯೊಳಗೆ ಪ್ರವೇಶಿಸಿದಾಗ ಅಘಾತವೊಂದು ಎದುರಾಗಿದೆ. ಅವಳ ಹೊಸ ಬದುಕು ಚಿಗುರುವ ಮೊದಲೇ ಕಮರಿ ಹೋಗಿದೆ. ಸಂಭ್ರಮದ ಮದುವೆ ಆಚರಣೆಗಳು ಮುಗಿದು ವಧು ಮೊದಲ ರಾತ್ರಿಗೆಂದು ವರನಿಗೆ ಹಾಲು ತೆಗೆದುಕೊಂಡು ಕೋಣೆಗೆ ಹೋದಾಗ ವರನು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡು ಬಂದಿದೆ.

VISTARANEWS.COM


on

Koo

ಮದುವೆಯಾದ ಮೇಲೆ ಗಂಡನ ಮನೆಗೆ ಬರುವ ವಧು ತನ್ನ ಪತಿಯ ಜೊತೆ ಸುಖವಾಗಿ ಸಂಸಾರ ನಡೆಸುವಂತಹ ಹಲವಾರು ಕನಸುಗಳನ್ನು ಹೊತ್ತು ಬರುತ್ತಾಳೆ. ಆದರೆ ಅಂತಹ ವಧುವಿನ ಕನಸು ಕ್ಷಣಮಾತ್ರದಲ್ಲಿ ನುಚ್ಚು ನೂರಾದರೆ ಅವಳಿಗೆ ಆಘಾತವಾಗುವುದು ಖಂಡಿತ. ಅಂತಹದೊಂದು ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು ಮೊದಲ ರಾತ್ರಿಗಾಗಿ ಕೋಣೆಗೆ ಹಾಲು ತೆಗೆದುಕೊಂಡು ಹೋದಾಗ ಅಲ್ಲಿ ವರನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿದ್ದ.

ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ರತನ್ಪುರ ಗ್ರಾಮದಲ್ಲಿ ಸಂಭ್ರಮದ ಮದುವೆ ಆಚರಣೆಗಳು ಮುಗಿದು ವಧು ಮೊದಲ ರಾತ್ರಿಗೆಂದು ವರನಿಗೆ ಹಾಲು ತೆಗೆದುಕೊಂಡು ಕೋಣೆಗೆ ಹೋದಾಗ ವರನು ಆತ್ಮಹತ್ಯೆ ಮಾಡಿಕೊಂಡಿದ್ದನು. ಇದರಿಂದ ಆ ಕುಟುಂಬದಲ್ಲಿ ಗೋಳಾಟ ಮುಗಿಲುಮುಟ್ಟಿದೆ.

Self Harming

24 ವರ್ಷದ ಸತ್ಯೇಂದ್ರ ಆತ್ಮಹತ್ಯೆ ಮಾಡಿಕೊಂಡ ವರ. ಈತ ಆತನ ವಧು ವಿನಿತಾ ಕುಮಾರಿ ಅವರೊಂದಿಗೆ ಅದ್ಧೂರಿಯಾಗಿ ಮದುವೆಯಾಗಿದ್ದು, ನಂತರ ದಿಬ್ಬಣ ಭರ್ಜರಿ ಮೆರವಣಿಗೆಯೊಂದಿಗೆ ಆತನ ಗ್ರಾಮಕ್ಕೆ ಮರಳಿದೆ. ನವವಿವಾಹಿತ ವಧುವನ್ನು ಮನೆಗೆ ಸಂಭ್ರಮದಿಂದ ಸ್ವಾಗತಿಸಲಾಗಿತ್ತು. ಹಾಗೇ ವಧುವರರ ಮೊದಲ ರಾತ್ರಿಗೆಂದು ಸಿದ್ಧತೆ ನಡೆಯುತ್ತಿದ್ದು, ವಧು ಹಾಲು ಹಿಡಿದುಕೊಂಡು ಪತಿಯ ಕೋಣೆಗೆ ಹೋದಾಗ ಆತ ಮದುವೆಯ ಉಡುಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಇದನ್ನು ಕಂಡು ವಧು ಆಘಾತಕ್ಕೊಳಗಾಗಿದ್ದಾಳೆ. ಈ ಸುದ್ದಿ ಕುಟುಂಬಸ್ಥರು ಮತ್ತು ಅತಿಥಿಗಳಿಗೆ ನಂಬಲು ಅಸಾಧ್ಯವಾಗಿದೆ.

ಈ ಬಗ್ಗೆ ಉಸ್ರಾಹರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಸತೇಂದ್ರ ಅವರ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ ಸತ್ಯೇಂದ್ರ ಅವರ ಆತ್ಮಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ. ಮೊದಲ ರಾತ್ರಿಯ ಟೆನ್ಶನ್‌ಗೆ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸತ್ಯೇಂದ್ರ ಅವರ ಅಕಾಲಿಕ ಸಾವಿನ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಬುಲೆಟ್‌ ಮೇಲೆ ಬಂದ ಹುಡುಗಿ ಆಟೊ ಚಾಲಕನ ಬುರುಡೆ ಒಡೆದಳು!

ಸಂಭ್ರಮಾಚರಣೆಯಲ್ಲಿ ತೇಲಾಡುತ್ತಿದ್ದ ಕುಟುಂಬವನ್ನು ಈ ಘಟನೆ ಶೋಕಾಚರಣೆಯಲ್ಲಿ ಮುಳುಗುವಂತೆ ಮಾಡಿದೆ. ಇನ್ನೂ ಮದುವೆಯಾಗಿ ಕ್ಷಣಗಳೇ ಕಳೆದಿದ್ದು, ಜೀವನಪರ್ಯಂತ ಒಟ್ಟಿಗೆ ಇರುತ್ತಾನೆ ಎಂದು ಭಾವಿಸಿದ ಪತಿ ಸಾವಿಗೆ ಶರಣಾಗಿದ್ದನ್ನು ಕಂಡು ವಧು ಆಘಾತಕ್ಕೊಳಗಾಗಿದ್ದಾಳೆ. ಅಲ್ಲದೇ ಸಾಲಸೂಲ ಮಾಡಿ ಮಗಳು ಗಂಡನ ಮನೆಯಲ್ಲಿ ಸುಖವಾಗಿರಲಿ ಎಂದು ಬಯಸಿದ ಆಕೆಯ ಪೋಷಕರಿಗೆ ಈ ಘಟನೆ ಆಕಾಶವೇ ಕಳಚಿ ತಲೆಯ ಮೇಲೆ ಬಿದ್ದಂತೆ ಭಾಸವಾಗಿದೆ. ಒಟ್ಟಾರೆ ಈ ಮದುವೆ ಸಂಭ್ರಮ ದುರಂತದ ತಿರುವು ತೆಗೆದುಕೊಂಡಿದೆ.

Continue Reading

ಪ್ರಮುಖ ಸುದ್ದಿ

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಂದುವರಿದ ಮಾಜಿ ಸಚಿವರ ಪಿಎಸ್‌ ವಿಚಾರಣೆ; ನಾಗೇಂದ್ರಗೆ ಢವಢವ!

Valmiki Corporation Scam: ಈಗಾಗಲೇ ವಾಲ್ಮೀಕಿ ನಿಗಮದ (Valmiki Development Corporation) ಎಂಡಿ ಪದ್ಮನಾಭ ಮತ್ತು ಅಕೌಟೆಂಟ್ ಪರಶುರಾಮ್ ಬಂಧನವಾಗಿದ್ದಾರೆ.‌ ಜೊತೆಗೆ ಪ್ರಕರಣದ ಕಿಂಗ್ ಪಿನ್ ಸತ್ಯನಾರಾಯಣ ವರ್ಮ, ಸಾಯಿ ತೇಜ ಕೂಡ ಆರೆಸ್ಟ್ ಆಗಿದ್ದಾರೆ. ಅಕ್ರಮವಾಗಿ ಆಂಧ್ರದ ಫಸ್ಟ್ ಬ್ಯಾಂಕ್‌ಗೆ ಹಣ ರವಾನಿಸಿದ ಎಂಡಿ ಹಾಗೂ ಸಚಿವ ನಾಗೇಂದ್ರರ ಪಿಎಸ್ ಆಗಿದ್ದ ದೇವಂದ್ರರನ್ನು ಎಸ್ಐಟಿ ವಿಚಾರಣೆ ನಡೆಸಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ (Valmiki Corporation Scam) ವಿಚಾರಣೆಗೆ ಸಂಬಂಧಿಸಿ ಮಾಜಿ ಸಚಿವ ನಾಗೇಂದ್ರಗೆ (Ex minister Nagendra) ಢವಢವ ಶುರುವಾಗಿದೆ. ನಾಗೇಂದ್ರ ಆಪ್ತ ಕಾರ್ಯದರ್ಶಿಯನ್ನು ಎಸ್ಐಟಿ ತನಿಖೆ (SIT Enquiry) ನಡೆಸುತ್ತಿದ್ದು, ಮುಂದಿನ ಹಂತದಲ್ಲಿ ನಾಗೇಂದ್ರ ಕೂಡ ತನಿಖೆಗೆ ಹಾಜರಾಗಬೇಕಿದೆ.

ಈಗಾಗಲೇ ವಾಲ್ಮೀಕಿ ನಿಗಮದ (Valmiki Development Corporation) ಎಂಡಿ ಪದ್ಮನಾಭ ಮತ್ತು ಅಕೌಟೆಂಟ್ ಪರಶುರಾಮ್ ಬಂಧನವಾಗಿದ್ದಾರೆ.‌ ಜೊತೆಗೆ ಪ್ರಕರಣದ ಕಿಂಗ್ ಪಿನ್ ಸತ್ಯನಾರಾಯಣ ವರ್ಮ, ಸಾಯಿ ತೇಜ ಕೂಡ ಆರೆಸ್ಟ್ ಆಗಿದ್ದಾರೆ. ಅಕ್ರಮವಾಗಿ ಆಂಧ್ರದ ಫಸ್ಟ್ ಬ್ಯಾಂಕ್‌ಗೆ ಹಣ ರವಾನಿಸಿದ ಎಂಡಿ ಹಾಗೂ ಸಚಿವ ನಾಗೇಂದ್ರರ ಪಿಎಸ್ ಆಗಿದ್ದ ದೇವಂದ್ರರನ್ನು ಎಸ್ಐಟಿ ವಿಚಾರಣೆ ನಡೆಸಿದೆ.

ಅಕ್ರಮವಾಗಿ ಕೋಟಿ ಕೋಟಿ ಹಣ ಪಡೆದಿರುವುದಾಗಿ ಸತ್ಯನಾರಾಯಣ ವರ್ಮ ಹೇಳಿದ್ದ. ಹೀಗಾಗಿ ಪಿಎಸ್ ದೇವೇಂದ್ರಪ್ಪಗೆ ಎಸ್ಐಟಿ ನೋಟೀಸ್ ನೀಡಿ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ, ದೇವೇಂದ್ರಪ್ಪಗೆ 4.4 ಕೋಟಿ ಹಣ ನೀಡಿರುವುದು ಬೆಳಕಿಗೆ ಬಂದಿದೆ. ಈ ಹಣದಲ್ಲಿ 4 ಕೋಟಿ ರಿಕವರಿಯಾಗಿದ್ದು, ಇನ್ನೂ ಸುಮಾರು 40 ಲಕ್ಷ ಹಣ ಮರಳಿ ಸಿಗಬೇಕಿದೆ.

ಆದರೆ ಪಿಎಸ್ ದೇವೇಂದ್ರಪ್ಪ ಸೇರಿದಂತೆ ಬಂಧಿತ ಆರೋಪಿಗಳು ಮಾಜಿ ಸಚಿವ ನಾಗೇಂದ್ರ ಹೆಸರನ್ನು ಎಲ್ಲೂ ಬಾಯಿ ಬಿಟ್ಟಿಲ್ಲ. ನಿನ್ನೆ ಸಿಐಡಿ ದೇವೇಂದ್ರಪ್ಪ ವಿಚಾರಣೆ ನಡೆಸಿದೆ. ಮತ್ತೆ ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ. ಇಂದು ನಿಗಮದ ಅಧ್ಯಕ್ಷ ಗದ್ದಲ್ ಪಿಎಸ್ ಹಂಪಣ್ಣಗೂ‌‌‌ ಎಸ್ಐಟಿ ಬುಲಾವ್‌ ಮಾಡಿದೆ. ನೋಟೀಸ್ ಹಿನ್ನಲೆ ಇಂದು ಹಂಪಣ್ಣ ವಿಚಾರಣೆಗೆ ಹಾಜರಾಗಬೇಕಿದೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಳಿಕ ನಾಗೇಂದ್ರ ಎಲ್ಲೂ ಕಾಣಿಸಿಕೊಂಡಿಲ್ಲ. ಶಾಸಕರ ಸಭೆಯಲ್ಲಾಗಲೀ, ಕ್ಷೇತ್ರದ ಕಾರ್ಯಕ್ರಮಗಳಲ್ಲಾಗಲೀ ಭಾಗವಹಿಸಿಲ್ಲ. ನಾಗೇಂದ್ರ ನಡೆ ನಿಗೂಢವಾಗಿದ್ದು, ಈ ಪ್ರಕರಣದಿಂದ ಪಾರಾಗುವ ಕಾನೂನು ಸಾಧ್ಯತೆಗಳನ್ನು ವಕೀಲರ ಜತೆ ಸಮಾಲೋಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

28 ಕೋಟಿ ಹಣ ರಿಕವರಿ

ವಾಲ್ಮೀಕಿ ನಿಗಮ ಹಗರಣದಲ್ಲಿ ಎಸ್‌ಐಟಿ ಅಧಿಕಾರಿಗಳು ರಿಕವರಿ ಮಾಡಿರುವ ಹಣ ಕೋರ್ಟ್ ಅಕೌಂಟ್‌ಗೆ ಜಮೆ ಮಾಡಲಾಗುತ್ತಿದೆ. ದೊಡ್ಡ ಮೊತ್ತದ ಹಣವನ್ನು ಸಿಐಡಿ ಕಚೇರಿಯಲ್ಲಿಡುವುದು ಕಷ್ಟ. ಭದ್ರತಾ ದೃಷ್ಟಿಯಿಂದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಕೋರ್ಟ್ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ಜಮಾ ಮಾಡಿದ್ದಾರೆ. ನೆನ್ನೆಯಿಂದ ದಿನಕ್ಕೆ ನಾಲ್ಕು ಕೋಟಿಯಂತೆ ಹಣ ಜಮೆ ಮಾಡಲಾಗುತ್ತಿದೆ. ಇದುವರೆಗೂ ಸುಮಾರು 28 ಕೋಟಿ ಹಣ ರಿಕವರಿ ಆಗಿದೆ.

28 ಕೋಟಿ ಹಣವಮ್ನ ಒಟ್ಟಿಗೆ ಜಮೆ ಮಾಡೋದು ಕಷ್ಟ. ಹೀಗಾಗಿ ಅಷ್ಟು ಹಣ ಎಣಿಕೆ ಮಾಡಲು ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ದಿನಕ್ಕೆ ನಾಲ್ಕು ಕೋಟಿ ಹಣವನ್ನು ಮಾತ್ರ ಬ್ಯಾಂಕ್‌ಗೆ ಜಮೆ ಮಾಡಲಾಗುತ್ತಿದೆ.

ಮಾರ್ಚ್ 30ರಂದು ನವೀನ್ ಜಿ ಮಾಲೀಕತ್ವದ ಜಿ.ಎನ್ ಇಂಡಸ್ಟ್ರೀಸ್ ಕಂಪನಿ ಹೆಸರಲ್ಲಿ 4.42 ಕೋಟಿ ವರ್ಗಾವಣೆ ಆಗಿತ್ತು. ವಿಜಯ್ ಕೃಷ್ಣ ಆರ್ ಮಾಲೀಕತ್ವದ ರಾಮ್ ಎಂಟರ್ ಪ್ರೈಸಸ್ ಖಾತೆಗೆ 5.7 ಕೋಟಿ ಹಣ ವರ್ಗಾವಣೆ. ರಾಘವೇಂದ್ರ ಅವರ ನೋವೆಲ್ ಸೆಕ್ಯೂರಿಟಿ ಸರ್ವಿಸಸ್ ಪ್ರೈ.ಲಿ.ಕಂಪನಿ ಹೆಸರಿನ ಖಾತೆಗೆ 4 ಕೋಟಿ ಹಣ ವರ್ಗಾವಣೆ.
ರೇಖಾ ಎಂಬುವವರ ಮಾಲೀಕತ್ವದ ಸುಜಲ್ ಎಂಟರ್ ಪ್ರೈಸಸ್ ಹೆಸರಿನ ಖಾತೆಗೆ 5.63 ಕೋಟಿ ಹಣ ವರ್ಗಾವಣೆ.

ಎಲ್ಲಾ ಕಂಪನಿ ಹೆಸರಲ್ಲಿ ನಕಲಿ ಖಾತೆ ತೆಗೆದು ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಖಾತೆ ಓಪನ್ ಮಾಡಿದ್ದ ಆಸಾಮಿಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಖಾತೆಗಳಿಗೆ ಹಣ ಜಮೆ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ: Valmiki Corporation Scam: ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

Continue Reading

Latest

Viral News: ಕಾಮ ದಾಹ ತಣಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಶಿಕ್ಷಕಿಗೆ ಶಿಕ್ಷೆ

Viral News: ಗುರುವೆಂದರೆ ಗುರಿ ತೋರಿಸುವವರು ಎಂಬ ನಂಬಿಕೆ. ಆದರೆ ಇಲ್ಲೊಬ್ಬಳು ಶಿಕ್ಷಕಿ ಪಾಠ ಮಾಡುವ ಬದಲು ವಿದ್ಯಾರ್ಥಿಗಳೊಂದಿಗೆ ಕಾಮದಾಟವಾಡಿ ಈಗ ಗರ್ಭಿಣಿಯಾಗಿದ್ದಾಳೆ. ಯುನೈಟೆಡ್ ಕಿಂಗ್ ಡಮ್‌ನಲ್ಲಿ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಅವರಲ್ಲಿ ಒಬ್ಬರಿಂದ ಗರ್ಭಿಣಿಯಾದ ಆರೋಪದ ಮೇಲೆ ಬ್ರಿಟಿಷ್ ಮಹಿಳಾ ಶಿಕ್ಷಕಿಗೆ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಆರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

VISTARANEWS.COM


on

Viral News
Koo

ಶಿಕ್ಷಕರು ವಿದ್ಯಾರ್ಥಿಗಳನ್ನು ಸರಿಯಾದ ಮಾರ್ಗದಲ್ಲಿ ನಡೆಸುವವರು ಎಂದು ಹೇಳುತ್ತಾರೆ. ಆದರೆ ಇಲ್ಲೊಬ್ಬ ಶಿಕ್ಷಕಿ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡು ಜೈಲು ಪಾಲಾಗಿದ್ದಳು. ಯುನೈಟೆಡ್ ಕಿಂಗ್ ಡಮ್‌ನಲ್ಲಿ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಅವರಲ್ಲಿ ಒಬ್ಬರಿಂದ ಗರ್ಭಿಣಿಯಾದ ಆರೋಪದ ಮೇಲೆ ಬ್ರಿಟಿಷ್ ಮಹಿಳಾ ಶಿಕ್ಷಕಿಗೆ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಈಗ ಆರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ರೆಬೆಕಾ ಜಾಯ್ನೆಸ್ (30) ಜೈಲು ಶಿಕ್ಷೆಗೆ ಒಳಗಾದ ಶಿಕ್ಷಕಿ. ಈಕೆ ಇಬ್ಬರು ಹುಡುಗರಿಗೆ ಸೋಶಿಯಲ್ ಮೀಡಿಯಾದಲ್ಲಿ ಮೆಸೇಜ್ ಮಾಡುವ ಮೂಲಕ ಅವರ ಪರಿಚಯ ಮಾಡಿಕೊಂಡು ಈ ಕೃತ್ಯ ನಡೆಸಿದ್ದಾಳೆ. ಈ ಹಿಂದೆ ಈ ಶಿಕ್ಷಕಿಗೆ ಒಬ್ಬ ಬಾಲಕನ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಕ್ಕಾಗಿ ಕೋರ್ಟ್ ಶಿಕ್ಷೆ ವಿಧಿಸಿತ್ತು. ಆದರೆ ಜಾಮೀನಿನ ಮೇಲೆ ಹೊರಬಂದ ಶಿಕ್ಷಕಿ ಮತ್ತೆ ಇನ್ನೊಬ್ಬ ಬಾಲಕನೊಂದಿಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದು, ಇದರಿಂದ ಗರ್ಭಿಣಿಯಾಗಿದ್ದಾಳೆ.

ಅಲ್ಲದೇ ಶಿಕ್ಷಕಿಯ ಜೊತೆಗಿನ ಲೈಂಗಿಕ ಸಂಬಂಧವನ್ನು ನಿರಾಕರಿಸಿದರೂ ಆಕೆ ತಮ್ಮನ್ನು ಬಲವಂತವಾಗಿ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾಳೆ. ತಮ್ಮನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾಳೆ. ಹಾಗೇ ತಮ್ಮನ್ನು ಮಾನಸಿಕವಾಗಿ ನಿಂದಿಸಿದ್ದಾಳೆ. ಈ ಘಟನೆಯಿಂದ ಹೊರಬರಲು ತಾವು ಹೆಣಗಾಡುತ್ತಿರುವುದಾಗಿ ಬಾಲಕರು ಶಿಕ್ಷಕಿಯ ಮೇಲೆ ಆರೋಪ ಮಾಡಿದ್ದರು.

ಹಾಗಾಗಿ ವಾಯವ್ಯ ಇಂಗ್ಲೆಂಡ್‍ನ ಮ್ಯಾಂಚೆಸ್ಟರ್ ಕ್ರೌನ್ ನ್ಯಾಯಾಲಯದ ನ್ಯಾಯಾಧೀಶರು ಆಕೆಯ ನಡವಳಿಕೆ ಆಕ್ಷೇಪಕಾರಿ ಆಗಿದೆ. ವಯಸ್ಕಳಾಗಿದ್ದೂ ಎಲ್ಲಾ ತಿಳಿವಳಿಕೆ ಹೊಂದಿದ್ದೂ ತನ್ನನ್ನು ತಾನು ನಿಯಂತ್ರಿಸಿಕೊಳ್ಳಬೇಕಿತ್ತು. ಆದರೆ ಅದರ ಬದಲಾಗಿ ತನ್ನ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನ್ನ ಲೈಂಗಿಕ ದಾಹವನ್ನು ತೀರಿಸಿಕೊಳ್ಳಲು ಇಂತಹ ಘೋರ ತಪ್ಪು ಮಾಡಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ಆಕೆಗೆ ಆರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

ಇದನ್ನೂ ಓದಿ: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

ಶಿಕ್ಷಕಿಗೆ ನ್ಯಾಯಾಲಯ ಈ ಹಿಂದೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದದಂತೆ ಎಚ್ಚರಿಕೆ ನೀಡಿದರೂ ಅದನ್ನು ನಿರ್ಲಕ್ಷ್ಯ ಮಾಡಿ ಮತ್ತೊಂದು ಬಾಲಕನೊಂದಿಗೆ ಸಂಬಂಧ ಹೊಂದಿದ್ದಾಳೆ. ಹಾಗಾಗಿ ಶಿಕ್ಷೆಗೆ ಒಳಗಾದ ಶಿಕ್ಷಕಿಯು ಜನ್ಮ ನೀಡಿದ ಮಗುವನ್ನು ಆಕೆಯಿಂದ ತೆಗೆದುಕೊಂಡು ಆಕೆಯನ್ನು ಜೈಲಿಗೆ ಹಾಕಲಾಗಿದೆ.

ಈ ಘಟನೆ ನೋಡಿದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಮಾತ್ರ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿಲ್ಲ. ಜೊತೆಗೆ ಪುರುಷರು ಹಾಗೂ ಮಕ್ಕಳೂ ಕೂಡ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ.

Continue Reading
Advertisement
Puri Jagannath Yatra
ಧಾರ್ಮಿಕ20 seconds ago

Puri Jagannath Yatra: ಜುಲೈ 7ರಂದು ಪುರಿ ಜಗನ್ನಾಥ ರಥಯಾತ್ರೆ; ಇದಕ್ಕಿದೆ ಪೌರಾಣಿಕ ಹಿನ್ನೆಲೆ

SCSP TSP Scheme
ಕರ್ನಾಟಕ7 mins ago

SCSP TSP Scheme: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಶೇ.100 ಖರ್ಚು ಮಾಡದಿದ್ರೆ ಕಠಿಣ ಕ್ರಮ; ಸಿಎಂ ವಾರ್ನಿಂಗ್‌

Viral Video
ವೈರಲ್ ನ್ಯೂಸ್21 mins ago

Viral Video: ವೇದಿಕೆಯಲ್ಲೇ ಎಲ್ಲರೆದುರು ಟಾಪ್‌ ಎತ್ತಿ ಸ್ತನ ಪ್ರದರ್ಶಿಸಿದ ಸಚಿವೆ- ವಿಡಿಯೋ ಭಾರೀ ವೈರಲ್‌

karnataka rain
ಮಳೆ24 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Ayodhya Ram Mandir
ದೇಶ27 mins ago

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಸಮವಸ್ತ್ರ; ನಿಯಮದಲ್ಲಿ ಬದಲಾವಣೆ: ಕಾರಣವೇನು?

Latest32 mins ago

Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Valmiki Corporation Scam
ಪ್ರಮುಖ ಸುದ್ದಿ35 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಂದುವರಿದ ಮಾಜಿ ಸಚಿವರ ಪಿಎಸ್‌ ವಿಚಾರಣೆ; ನಾಗೇಂದ್ರಗೆ ಢವಢವ!

Team India's Victory Parade
ಕ್ರಿಕೆಟ್37 mins ago

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Viral News
Latest41 mins ago

Viral News: ಕಾಮ ದಾಹ ತಣಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಶಿಕ್ಷಕಿಗೆ ಶಿಕ್ಷೆ

Dengue Fever
ಕರ್ನಾಟಕ55 mins ago

Dengue Fever: ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ24 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ2 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು3 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು3 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ8 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ21 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ23 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌