Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು - Vistara News

ಸಿನಿಮಾ

Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು

Shamita Shetty: ಇತ್ತೀಚೆಗಷ್ಟೇ ಶಮಿತಾ ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ ನಟಿ ಶಿಲ್ಪಾ ಶೆಟ್ಟಿ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಶಿಲ್ಪಾ ಅವರು ಪ್ರವಾಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಜಾರಿ ನಿರ್ದೇಶನಾಲಯ ಶಿಲ್ಪಾ ಶೆಟ್ಟಿ ಅವರಿಗೆ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ ಪಡಿಸಿಕೊಂಡ ಪ್ರಕರಣ ತನಿಖೆ ಹಂತದಲ್ಲೇ, ಮತ್ತೊಂದು ವೈಯಕ್ತಿಕ ಸಮಸ್ಯೆ ಎದುರಾಗಿದೆ.

VISTARANEWS.COM


on

Shamita Shetty Undergoes Surgery For Endometriosis
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಶಮಿತಾ ಶೆಟ್ಟಿ (Shamita Shetty ) ಅವರು ಎಂಡೊಮೆಟ್ರಿಯೊಸಿಸ್ (endometriosis ) ಎನ್ನುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಶಮಿತಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದು, ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಎಂಡೊಮೆಟ್ರಿಯೊಸಿಸ್ ಎಂದರೆ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಶಮಿತಾ ಮಾತನಾಡಿ ʻಮಹಿಳೆಯರೇ, ದಯವಿಟ್ಟು ಎಂಡೊಮೆಟ್ರಿಯೊಸಿಸ್ ಗೂಗಲ್ ಮಾಡಿ. ಸಮಸ್ಯೆ ಏನು ಎಂದು ನೀವು ತಿಳಿದುಕೊಳ್ಳಬೇಕು. ಸುಮಾರು 40% ಮಹಿಳೆಯರು ಎಂಡೊಮೆಟ್ರಿಯೊಸಿಸ್‌ನಿಂದ ಬಳಲುತ್ತಿದ್ದಾರೆ ಎಂದು ನಿಮಗೆ ತಿಳಿದಿದೆಯೇ..? ನಮ್ಮಲ್ಲಿ ಹೆಚ್ಚಿನವರಿಗೆ ಈ ರೋಗದ ಬಗ್ಗೆ ತಿಳಿದಿಲ್ಲ !!! ನನ್ನ ನೋವಿನ ಮೂಲ ಕಾರಣವನ್ನು ಕಂಡುಕೊಳ್ಳಲು ಸಹಾಯ ಮಾಡಿದ ನನ್ನ ವೈದ್ಯರಾದ ಗೈನಾಕ್ ಡಾ ನೀತಾ ವಾರ್ಟಿ ಮತ್ತು ನನ್ನ ಜಿಪಿ ಡಾ ಸುನೀತಾ ಬ್ಯಾನರ್ಜಿ ಇಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ! ಈಗ ನಾನು ಈ ರೋಗವನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಿದ್ದೇನೆ ನನ್ನ ಆರೋಗ್ಯ ಮತ್ತಷ್ಟು ಸುಧಾರಿಸಲು ಎದುರು ನೀಡುತ್ತಿದ್ದೇನೆ. ಈಗೀಗ ನೋವಿಲ್ಲದ ದಿನಗಳನ್ನು ಕಳೆಯುತ್ತಿದ್ದೇನೆ. ಹೀಗಾಗಿ ಎಲ್ಲಾ ಮಹಿಳೆಯರೂ ಈ ಎಂಡೊಮೆಟ್ರಿಯೊಸಿಸ್ ಬಗ್ಗೆ ಜಾಗೃತರಾಗಿ ಮತ್ತು ಚಿಕಿತ್ಸೆ ಪಡೆಯಿರಿʼʼ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Shilpa Shetty: ಅಮ್ಮ , ಸಹೋದರಿ ಜತೆ ಕೇದಾರನಾಥಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ವೈರಲ್‌ ಆಗುತ್ತಿದ್ದಂತೆ ಶಮಿತಾ ಅವರ ಸಹೋದ್ಯೋಗಿಗಳು ಮತ್ತು ಬಾಲಿವುಡ್‌ನ ಅನೇಕ ಗಣ್ಯರು ಬೇಗ ಗುಣಮುಖರಾಗಿ ಎಂದು ಕಮೆಂಟ್‌ ಮಾಡಿದ್ದಾರೆ.

ಏನಿದು ಎಂಡೊಮೆಟ್ರಿಯೊಸಿಸ್ ಕಾಯಿಲೆ?

ಗರ್ಭಕೋಶಕ್ಕೆ ಸಂಬಂಧಿಸಿದ್ದು, ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಮಹಿಳೆಯರಿಗೆ ಗರ್ಭಿಣಿಯಾಗಲು ಕಷ್ಟವಾಗುತ್ತದೆ. ಹಾಗೂ ಮುಟ್ಟಿನ ಸಮಯದಲ್ಲಿ ಕಷ್ಟವಾಗುತ್ತದೆ.

ಇತ್ತೀಚೆಗಷ್ಟೇ ಶಮಿತಾ ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ ನಟಿ ಶಿಲ್ಪಾ ಶೆಟ್ಟಿ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಶಿಲ್ಪಾ ಅವರು ಪ್ರವಾಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಜಾರಿ ನಿರ್ದೇಶನಾಲಯ ಶಿಲ್ಪಾ ಶೆಟ್ಟಿ ಅವರಿಗೆ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ ಪಡಿಸಿಕೊಂಡ ಪ್ರಕರಣ ತನಿಖೆ ಹಂತದಲ್ಲೇ, ಮತ್ತೊಂದು ವೈಯಕ್ತಿಕ ಸಮಸ್ಯೆ ಎದುರಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Aishwarya Rai Bachchan: ಐಶ್ವರ್ಯಾ ರೈ ಧರಿಸಿರುವ V ಆಕಾರದ ಈ ವಜ್ರದುಂಗುರದ ವಿಶೇಷತೆ ಗೊತ್ತೆ?

Aishwarya Rai Bachchan: ನಟಿ ಐಶ್ವರ್ಯ ರೈ ಧರಿಸಿರುವ ವಿ ಆಕಾರದ ಉಂಗುರವನ್ನು “ವಂಕಿʼ ಉಂಗುರ ಅಥವಾ “ವಡುಂಗಿಲಾ” ಎಂದು ಕರೆಯಲಾಗುತ್ತದೆ. ಈ ಉಂಗುರವನ್ನು ಮದುವೆಯಾದ ಮಹಿಳೆಯರು ಧರಿಸುವ ಸಂಪ್ರದಾಯವಿದೆ. ವಿವಾಹಿತ ಮಹಿಳೆಯ ಜೀವನದಲ್ಲಿ ಈ ಉಂಗುರಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ. ವಂಕಿ ಉಂಗುರವನ್ನು ವಧು ತಮ್ಮ ಮದುವೆಯ ದಿನದಂದು ಧರಿಸುತ್ತಾರೆ. ಈ ಉಂಗುರವನ್ನು ಆಕೆಯ ಕುಟುಂಬದ ತಂದೆಯ ಕಡೆಯಿಂದ ಅಥವಾ ಮಹಿಳೆಯ ಸಂಬಂಧಿಕರು ನೀಡುತ್ತಾರೆ.

VISTARANEWS.COM


on

Aishwarya Rai Bachchan
Koo

ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ (Actress Aishwarya Rai Bachchan) ತಮ್ಮ ಅಭಿನಯದ ಮೂಲಕ ಮಾತ್ರವಲ್ಲದೇ ತಮ್ಮ ವಿಶೇಷ ಫ್ಯಾಷನ್ ಶೈಲಿ ಮತ್ತು ಸೌಂದರ್ಯದಿಂದ ಕೂಡ ಅನೇಕ ಅಭಿಮಾನಿಗಳನ್ನು ಆಕರ್ಷಿಸಿದ್ದಾರೆ. ನಿಮಗೂ ಐಶ್ವರ್ಯಾ ಅವರ ಫ್ಯಾಷನ್ ಶೈಲಿಯನ್ನು ಅನುಸರಿಸುವ ಆಸಕ್ತಿ ಇದ್ದರೆ, ನಟಿ ತಮ್ಮ ಬಲಗೈಗೆ ಧರಿಸಿದ ವಿ-ಆಕಾರದ ವಜ್ರದ ಉಂಗುರದ ಬಗ್ಗೆ ತಿಳಿದುಕೊಳ್ಳಿ! ನಟಿ ಈ ಉಂಗುರವನ್ನು ಧರಿಸದೆ ಎಂದಿಗೂ ಹೊರಗೆ ಹೋಗುವುದಿಲ್ಲ. ಹಾಗಾದ್ರೆ ನಟಿ ಧರಿಸಿದ ಈ ಉಂಗುರದ ವಿಶೇಷತೆ ಏನು ಎಂಬುದನ್ನು ತಿಳಿಯಿರಿ. ನಟಿ ಐಶ್ವರ್ಯ ರೈ ಧರಿಸಿರುವ ವಿ ಆಕಾರದ ಉಂಗುರವನ್ನು “ವಂಕಿ” ಉಂಗುರ ಅಥವಾ “ವಡುಂಗಿಲಾ” ಎಂದು ಕರೆಯಲಾಗುತ್ತದೆ. ಈ ಉಂಗುರವನ್ನು ಮದುವೆಯಾದ ಮಹಿಳೆಯರು ಧರಿಸುವ ಸಂಪ್ರದಾಯವಿದೆ. ಹಾಗಾಗಿ ವಿವಾಹಿತ ಮಹಿಳೆಯ ಜೀವನದಲ್ಲಿ ಈ ಉಂಗುರಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ. ವಂಕಿ ಉಂಗುರವನ್ನು ವಧು ತಮ್ಮ ಮದುವೆಯ ದಿನದಂದು ಧರಿಸುತ್ತಾರೆ ಮತ್ತು ಈ ಉಂಗುರವನ್ನು ಆಕೆಯ ಕುಟುಂಬದ ತಂದೆಯ ಕಡೆಯಿಂದ ಅಥವಾ ಮಹಿಳೆಯ ಸಂಬಂಧಿಕರು ನೀಡುತ್ತಾರೆ. ಅವರ ಸಂಪ್ರದಾಯದಲ್ಲಿ ಮದುವೆಯ ನಂತರ ಮಂಗಳಸೂತ್ರವನ್ನು ಧರಿಸುವ ಹಾಗೇ ಈ ಉಂಗುರವನ್ನು ಧರಿಸಬೇಕಾಗುತ್ತದೆ.

Aishwarya Rai Bachchan V shape dimond ring

ಬಂಟ ಸಮುದಾಯದ ಸಂಪ್ರದಾಯ

ಈ ಉಂಗುರವು ಹೆಚ್ಚಾಗಿ ಮಂಗಳೂರಿನ ಬಂಟ ಸಮುದಾಯದವರು ಧರಿಸುತ್ತಾರೆ. ಈ ಉಂಗುರವು ವಿವಾಹಿತ ಮಹಿಳೆಯರು ಮತ್ತು ನವ ವಧುವನ್ನು ಕೆಟ್ಟ ಸಂದರ್ಭಗಳಿಂದ ರಕ್ಷಿಸುತ್ತದೆ ಎಂಬುದು ಬಂಟ ಸಮುದಾಯದ ನಂಬಿಕೆಯಾಗಿದೆ. ಬಂಟ ಸಮುದಾಯಕ್ಕೆ ಸೇರಿದ ನಟಿ ಐಶ್ವರ್ಯ ರೈ 2007ರಲ್ಲಿ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾದ ನಂತರ ತಮ್ಮ ಸಮುದಾಯದ ಸಂಪ್ರದಾಯದಂತೆ ಯಾವಾಗಲೂ ತನ್ನ ಕೈಯಲ್ಲಿ ವಂಕಿ ಉಂಗುರವನ್ನು ಧರಿಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಉಂಗುರವನ್ನು ಬಂಟ ಸಮುದಾಯ ಮಾತ್ರವಲ್ಲದೇ ದಕ್ಷಿಣ ಭಾರತದ ಸಮುದಾಯದ ಅನೇಕ ವಿವಾಹಿತ ಮಹಿಳೆಯರು ಧರಿಸುತ್ತಾರೆ.

ಇದನ್ನೂ ಓದಿ: Bollywood Cinema: ಜೀವನ ಪ್ರೀತಿಯ ತೀವ್ರತೆ ಸಾರಿದ 5 ಬಾಲಿವುಡ್ ಚಿತ್ರಗಳಿವು

ಹಲವಾರು ವಿನ್ಯಾಸಗಳಲ್ಲಿ ಲಭ್ಯ:
ಈ ವಂಕಿ ಉಂಗುರವು ಹಲವಾರು ವಿನ್ಯಾಸಗಳಲ್ಲಿ ಲಭ್ಯವಿದೆ, ಉದಾಹರಣೆಗೆ ವಿ-ಆಕಾರದ ತೆಳುವಾದ ಚಿನ್ನದ ಬ್ಯಾಂಡ್ ಅಥವಾ ನಟಿ ಐಶ್ವರ್ಯ ರೈ ಧರಿಸಿದಂತೆ ವಜ್ರದ ಬ್ಯಾಂಡ್ ನಲ್ಲಿ ಸಿಗುತ್ತದೆ. ಈ ಉಂಗುರವನ್ನು ಮಂಗಳೂರಿನ ವಿವಾಹಿತ ಮಹಿಳೆಯರು ತಮ್ಮ ಬಲಗೈಯ ಉಂಗುರ ಬೆರಳಿಗೆ ಧರಿಸುತ್ತಾರೆ. ಇದರಿಂದ ಅವರು ವಿವಾಹಿತರು ಎಂದು ಹೇಳುತ್ತಾರೆ. ಅಲ್ಲದೇ ಈ ಉಂಗುರವು ಮಹಿಳೆಯರಿಗೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ, ಉದಾಹರಣೆಗೆ ದುಷ್ಟ ಶಕ್ತಿಗಳಿಂದ ಅವರನ್ನು ರಕ್ಷಿಸುತ್ತದೆ ಮತ್ತು ಅವರಿಗೆ ಶಕ್ತಿಯನ್ನು ನೀಡುತ್ತದೆ ಮತ್ತು ಅವರ ವೈವಾಹಿಕ ಜೀವನ ಸಂತೋಷ ಮತ್ತು ಪ್ರೀತಿಯಿಂದ ತುಂಬಿರುವಂತೆ ಮಾಡುತ್ತದೆ ಎಂಬ ನಂಬಿಕೆ ಇದೆ. ಐಶ್ವರ್ಯ ರೈ ಮತ್ತು ಅಭಿಷೇಕ್‌ ಬಚ್ಚನ್‌ ವಿವಾಹ ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿಗಳ ನಡುವೆ ಈ ಉಂಗುರ ವಿಶೇಷವಾಗಿ ಗಮನ ಸೆಳೆದಿದೆ.

Continue Reading

ಸಿನಿಮಾ

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

Kannada New Movie: ಇಂಡಿಯನ್ ಫಿಲಂ ಹೌಸ್‌ನಿಂದ ಉತ್ತಮ ಕಥೆ ಮತ್ತು ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದರ ಅನುಭವದಿಂದಲೇ ಈಗ ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೊಫೆಸರ್, ಇಂಜಿನಿಯರ್ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರು, ತಂತ್ರಜ್ಘರಾಗಿ ಗುರುತಿಸಿಕೊಳ್ಳುತ್ತಿರುವುದು ವಿಶೇಷ.

VISTARANEWS.COM


on

Kannada New Movie Nava Digantha latest news
Koo

ಬೆಂಗಳೂರು: ’ನವ ದಿಗಂತ’ ಚಿತ್ರದ ಮುಹೂರ್ತ ಸಮಾರಂಭವು ಶಕ್ತಿ ದೇವತೆ ಸರ್ಕಲ್ ಮಾರಮ್ಮನ ಸನ್ನಿದಿಯಲ್ಲಿ ಸರಳವಾಗಿ ಮುಹೂರ್ತ ನಡೆಯಿತು. ’ಉಸಿರೆ’ ಸಿನಿಮಾದ ನಿರ್ಮಾಪಕಿ ಲಕ್ಷೀಹರೀಶ್ ಕ್ಯಾಮೆರ ಆನ್ ಮಾಡಿದರೆ, ಉದಯೋನ್ಮುಖ ಯುವ ನಟ ಭಾರ್ಗವ್ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಐಟಿ ಕಂಪೆನಿಯಲ್ಲಿ ವ್ಯವಸ್ಥಾಪಕರಾಗಿರುವ ದುರ್ಗಾಮೋಹನ್ ಅವರು ಚಿನ್ಮಯ ಸಿನಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆ ಶುರು ಮಾಡಿ ಮೂರು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಅಲ್ಲದೆ ಇಂಡಿಯನ್ ಫಿಲಂ ಹೌಸ್‌ನಿಂದ ಉತ್ತಮ ಕಥೆ ಮತ್ತು ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದರ ಅನುಭವದಿಂದಲೇ ಈಗ ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೊಫೆಸರ್, ಇಂಜಿನಿಯರ್ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರು, ತಂತ್ರಜ್ಘರಾಗಿ ಗುರುತಿಸಿಕೊಳ್ಳುತ್ತಿರುವುದು ವಿಶೇಷ.

ಸಿನಿಮಾದ ಕುರಿತು ಹೇಳುವುದಾದರೆ, ಪ್ರತಿಯೊಬ್ಬರಿಗೂ ಪ್ರತಿಭೆ ಅನ್ನುವುದು ಹುಟ್ಟಿನಿಂದಲೇ ಬಂದಿರುತ್ತದೆ. ಆದರೆ ಅದನ್ನು ಮರೆತು ಜೀವನಕ್ಕೋಸ್ಕರ ಬೇರೆ ಉದ್ಯೋಗ ಮಾಡುತ್ತಿರುತ್ತೇವೆ. ನಿಜವಾದ ಸಂತೋಷ ಸಿಗುವುದು ಕಲೆಯಿಂದ ಅಂತ ತಿಳಿಯದೆ ಜೀವನ ಸಾಗಿಸುತ್ತಿರುತ್ತೇವೆ. ವೃತ್ತಿ-ಪ್ರವೃತ್ತಿಯನ್ನು ಬದುಕಿನಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ವಿದ್ಯಾರ್ಥಿ ದೆಸೆಯಿಂದ ಬಂದಾಗ ಮಾತ್ರ, ಕೊನೆತನಕ ಸಾರ್ಥಕ ಜೀವನ ನಡೆಸಬಹುದು. ಕಲೆಯ ಕಡೆ ಗಮನ ಹರಿಸಿದರೆ ಅಡ್ಡದಾರಿಗೆ ಹೋಗಲು ಮನಸು ಬಾರದೆ, ಸಕರಾತ್ಮಕ ಚಿಂತನೆ ನಡೆಸಲು ಪ್ರೇರಣೆ ಸಿಗುತ್ತದೆ. ಸಂಗೀತ, ವಾಗ್ಮಿ, ನೃತ್ಯ, ಕ್ರೀಡೆ, ಬರವಣಿಗೆ ಏನೇ ತೆಗೆದುಕೊಂಡರೂ ಅದೇ ಕಲೆಯಾಗಿರುತ್ತದೆ ಹೊರತು ಬೇರೇನೂ ಆಗಿರುವುದಿಲ್ಲ. ಕಲೆಗೆ ಸಾವಿಲ್ಲ. ಕಲೆಯಲ್ಲಿ ತೊಡಗಿಸಿಕೊಂಡವರು ಸದಾ ಉತ್ಸಾಹಿಗಳಾಗಿ ಆನಂದದಿಂದಿರುತ್ತಾರೆ. ಇಂತಹ ಅಂಶಗಳನ್ನು ಬಳಸಿಕೊಂಡು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಪೋಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಒಂದು ಒಳ್ಳೆಯ ಸಂದೇಶ ಕೊಡಲಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಪ್ರೊಫೆಸರ್ ಆಗಿ ಮೇಘನಾ, ವಿದ್ಯಾರ್ಥಿಗಳಾಗಿ ಚೇತನ್, ರೋಷನ್, ಅಭಿಜಿತ್, ಪುಷ್ಪ, ಯಮುನಾ, ಆಶುತೋಷ್, ಭೋಜರಾಜ, ಸಹದ್ಯೋಗಿಗಳಾಗಿ ಅಜಯ್, ಸಂಕೀರ್ತ್ ಉಳಿದಂತೆ ಅನಿಲ್ ಮಾರ್ಟಿಬನ್, ಪ್ರೀತಿಪಾಟೀಲ್, ನವೀನ್, ಸಂಧ್ಯಾ, ಮೂರ್ತಿ, ಲಕ್ಷೀ, ಪ್ರೀತಂ, ವಾಸುದೇವಚಾರ್. ಇವರೆಲ್ಲರಿಗೂ ಪ್ರಥಮ ಅವಕಾಶ. ನಟ ಭಾರ್ಗವ್ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುವ ಪಾತ್ರದಲ್ಲಿ ರೀಲ್‌ದಲ್ಲಿ ಅದೇ ರೀತಿ ಕಾಣಿಸಿಕೊಳ್ಳುತ್ತಿದ್ದಾರೆ.

ನಾಲ್ಕು ಹಾಡುಗಳಿಗೆ ಶರತ್-ಪ್ರಫುಲ್ಲಾ ಸಂಗೀತ, ಪ್ರಜ್ವಲ್ ವಿನೋದ್ ಛಾಯಾಗ್ರಹಣ, ಸಂಕಲನ ನೊಮಾಡಿಕ್ ಸ್ಟುಡಿಯೋ, ನೃತ್ಯ ರೋಶನ್, ಮೇಕಪ್ ಪವಿತ್ರಾ, ಹಾಗೂ ಎರಡು ಸಾಹಸ ದೃಶ್ಯಗಳನ್ನು ಕ್ಯಾಮೆರಾ ಟ್ರಿಕ್ಸ್‌ದಲ್ಲಿ ಚಿತ್ರೀಕರಿಸಲಾಗುವುದು. ಡಾಬಸಪೇಟೆ, ಬೆಂಗಳೂರು ಸುತ್ತಮುತ್ತ ೩೦ ದಿನಗಳ ಕಾಲ ಎರಡು ಹಂತದಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

Continue Reading

ಬಿಗ್ ಬಾಸ್

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Drone Prathap: , ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ.

VISTARANEWS.COM


on

Drone Prathap Eye surgery for an old woman with her own money
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ. ಅಜ್ಜಿಯೋರ್ವರಿಗೆ ಆಪರೇಶನ್ ಮಾಡಿಸಿದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಮುಂಚೆ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದರು.

ಅದರಂತೆ ಇಬ್ಬರು ಮಕ್ಕಳಿದ್ದರೂ ಕೂಡ ಗುಡಿಸಿಲಿನಲ್ಲಿ ಇದ್ದುಕೊಂಡು ವಾಸ ಮಾಡುತ್ತಿದ್ದ ಬಡ ಅಜ್ಜಿಯ ಕಣ್ಣಿನ ಆಪರೇಶನ್ ಮಾಡಿಸಿದ್ದಾರೆ. ಆ ಅಜ್ಜಿಯು ಪ್ರತಾಪ್ ಅವರನ್ನು ಹರಿಸಿದ್ದು, ನನಗೆ ಈಗ ಸರಿಯಾಗಿ ಕಣ್ಣು ಕಾಣುತ್ತಿದೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಡ್ರೋನ್ ಪ್ರತಾಪ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಇಷ್ಟುದಿನ ನನಗೆ ಒಬ್ಬ ಮೊಮ್ಮಗ ಇದ್ದನು, ಈಗ ಇನ್ನೊಬ್ಬ ಮೊಮ್ಮಗನಾಗಿ ನೀನು ಇದ್ದೀಯಾ. ನನಗೆ ನಿಜವಾಗಿಯೂ ಖುಷಿಯಾಗಿದೆ, ನಿನಗೆ ದೇವರು ಆಯುಷ್ಯ, ಆರೋಗ್ಯ ಕೊಟ್ಟು ಒಳ್ಳೆಯದನ್ನು ಮಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಎಲ್ಲದಕ್ಕೂ ಮುಂಚೆ ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

ಕ್ರಿಕೆಟ್

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Ashwini Puneeth Rajkumar: ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

VISTARANEWS.COM


on

Ashwini Puneeth Rajkumar launched Appu Cup season 2
Koo

ಬೆಂಗಳೂರು: ಅಪ್ಪು ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಪ್ಪು ಕಪ್‌ ಸೀಸನ್‌ 2 ಬ್ಯಾಡ್ಮಿಂಟನ್‌ ಟೂರ್ನಿಗೆ ಇಂದು ನಾಗರಬಾವಿಯ ಕಿಂಗ್ಸ್‌ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸ್ಪರ್ಧಾಳುಗಳಿಗೆ ಶುಭ ಕೋರಿ, ಮೊದಲ ಪಂದ್ಯದ ಆರಂಭಕ್ಕೆ ಟಾಸ್‌ ಹಾಕಿದರು.

PRK ಸಂಸ್ಥೆಯ ಸಹಯೋಗದೊಂದಿಗೆ ಚೇತನ್‌ ಸೂರ್ಯ ಅವರು ಈ ಟೂರ್ನಮೆಂಟ್‌ ಅನ್ನು ಆಯೋಜಿಸಿದ್ದು, ಈ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದೆ. ಅಪ್‌ ಕಪ್‌ ಸೀಸನ್‌ 2ನಲ್ಲಿ ಹತ್ತು ತಂಡಗಳು ಭಾಗವಹಿಸಲಿದ್ದು, ಸಿನಿಮಾ, ಧಾರಾವಾಹಿ ಮತ್ತು ಮಾಧ್ಯಮದವರು ಆಡಲಿದ್ದಾರೆ.

ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ, ಡಿಪಿಐಎಸ್ ಫೌಂಡರ್‌, ಚೇರ್‌ಪರ್ಸನ್ ಸುನಿತಾ ಗೌಡ, ‌ಹಿರಿಯ ನಿರ್ಮಾಕರಾದ ಸಾರಾ ಗೋವಿಂದು ಉಪಸ್ಥಿತರಿದ್ದರು.

Continue Reading
Advertisement
Mumbai Girl
ದೇಶ10 mins ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ18 mins ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ38 mins ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ48 mins ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ59 mins ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Infiltration
ದೇಶ1 hour ago

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ICW 2024
ಫ್ಯಾಷನ್2 hours ago

ICW 2024: ಮುಂಬರುವ ವೆಡ್ಡಿಂಗ್‌ ಸೀಸನ್‌ ಮೆನ್ಸ್ ವೇರ್‌ ಅನಾವರಣಗೊಳಿಸಿದ ಇಂಡಿಯಾ ಕೌಚರ್‌ ವೀಕ್‌ 2024

Indian Army
ದೇಶ2 hours ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ3 hours ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ3 hours ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ8 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ9 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌