Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು! - Vistara News

ರಾಜಕೀಯ

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಕೇಸ್‌ ದಾಖಲಾಗಿ 17 ದಿನವೇ ಗತಿಸಿಹೋಗಿದೆ. ಇನ್ನು ಈ ಕೇಸ್‌ಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಎದುರಿಸಿ ಎಚ್‌.ಡಿ. ರೇವಣ್ಣ ಜೈಲು ಸೇರಿದ್ದರೂ ಆ ಕಡೆ ಭವಾನಿ ಕಣ್ಣೆತ್ತಿಯೂ ನೋಡಿಲ್ಲ. ಇನ್ನು ಇದೇ ಕೇಸ್‌ ವಿಚಾರವಾಗಿ ಎಸ್ಐಟಿ ಎರಡು ಬಾರಿ ನೋಟಿಸ್‌ ಕೊಟ್ಟರೂ ಡೋಂಟ್‌ ಕೇರ್‌ ಎಂಬಂತೆ ಕುಳಿತುಬಿಟ್ಟಿದ್ದಾರೆ. ಪ್ರಜ್ವಲ್ ರೀತಿಯಲ್ಲಿ ತಾಯಿಯೂ ವಿಚಾರಣೆಗೆ ಬರಲು ಹಿಂದೇಟು ಹಾಕಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಖುಷಿ ವ್ಯಕ್ತಪಡಿಸೋಕೆ ಕೂಡಾ ಅವರು ಕಾಣಿಸಿಕೊಳ್ಳಲಿಲ್ಲ. ಇದೆಲ್ಲವೂ ದೇವೇಗೌಡರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಸಂಬಂಧ ಎಚ್‌.ಡಿ. ರೇವಣ್ಣ ಅವರ ಬಳಿ ವಿಸ್ತೃತವಾಗಿ ಚರ್ಚೆ ಮಾಡಿ ತಾಕೀತು ಮಾಡಿದ್ದಾರೆನ್ನಲಾಗಿದೆ.

VISTARANEWS.COM


on

Prajwal Revanna Case Deve Gowda lashes out at Bhavani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣ ಹಾಗೂ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭವಾನಿ ರೇವಣ್ಣ (Bhavani Revanna) ಅವರ ನಡೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (HD Devegowda) ಗರಂ ಆಗಿದ್ದಾರೆ ಎನ್ನಲಾಗಿದೆ. ಇನ್ನು ಮುಂದೆ ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೋ, ಅವರಿಗೆ ಆ ನಿಟ್ಟಿನಲ್ಲಿ ಯಾವ ರೀತಿ ಎಚ್ಚರಿಕೆ ನೀಡುತ್ತೀಯೋ ನಿನಗೆ ಬಿಟ್ಟಿದ್ದು ಎಂಬುದಾಗಿ ಪುತ್ರ ಎಚ್.ಡಿ. ರೇವಣ್ಣ ಅವರಿಗೆ ಕಡ್ಡಿ ಮುರಿದಂತೆ ಹೇಳಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಮೇಲೆ ಕೇಸ್‌ ದಾಖಲಾಗಿ 17 ದಿನವೇ ಗತಿಸಿಹೋಗಿದೆ. ಇನ್ನು ಈ ಕೇಸ್‌ಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಎದುರಿಸಿ ಎಚ್‌.ಡಿ. ರೇವಣ್ಣ ಜೈಲು ಸೇರಿದ್ದರೂ ಆ ಕಡೆ ಭವಾನಿ ಕಣ್ಣೆತ್ತಿಯೂ ನೋಡಿಲ್ಲ. ಇನ್ನು ಇದೇ ಕೇಸ್‌ ವಿಚಾರವಾಗಿ ಎಸ್ಐಟಿ ಎರಡು ಬಾರಿ ನೋಟಿಸ್‌ ಕೊಟ್ಟರೂ ಡೋಂಟ್‌ ಕೇರ್‌ ಎಂಬಂತೆ ಕುಳಿತುಬಿಟ್ಟಿದ್ದಾರೆ. ಪ್ರಜ್ವಲ್ ರೀತಿಯಲ್ಲಿ ತಾಯಿಯೂ ವಿಚಾರಣೆಗೆ ಬರಲು ಹಿಂದೇಟು ಹಾಕಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಖುಷಿ ವ್ಯಕ್ತಪಡಿಸೋಕೆ ಕೂಡಾ ಅವರು ಕಾಣಿಸಿಕೊಳ್ಳಲಿಲ್ಲ. ಅಲ್ಲದೆ, ದೇವೇಗೌಡರ ಮನೆಯತ್ತಲೂ ಸುಳಿಯಲಿಲ್ಲ. ಇದು ದೇವೇಗೌಡರ ಕೆಂಗಣ್ಣಿಗೆ ಗುರಿಯಾಗಿದೆ ಎನ್ನಲಾಗಿದೆ. ತಾವು ಗಳಿಸಿಟ್ಟ ಗೌರವ, ಹೆಸರನ್ನು ಮಣ್ಣು ಪಾಲಾಗಲು ಬಿಡುವುದಿಲ್ಲ. ಆ ರೀತಿ ಮಾಡಲು ಇನ್ನು ಮುಂದೆ ಅವಕಾಶವನ್ನೂ ಕೊಡುವುದಿಲ್ಲ ಎಂದು ಗುಡುಗಿದ್ದಾರೆನ್ನಲಾಗಿದೆ.

ದೇವೇಗೌಡರ ಕುಟುಂಬಕ್ಕೆ ತಲೆ ನೋವಾದ ಭವಾನಿ ರೇವಣ್ಣ!

ಹಾಗಾದರೆ ಭವಾನಿ ಅವರಿಗೆ ಎಚ್.ಡಿ. ರೇವಣ್ಣ ಅವರ ಮೇಲೆಯೂ ಪ್ರೀತಿ ಇಲ್ಲವೇ? ದೇವೇಗೌಡರ ಬಗ್ಗೆ ಭಯವಿಲ್ಲವೇ? ಯಾಕಿಷ್ಟು ಮೊಂಡುತನವನ್ನು ತೋರುತತಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ. ಪತಿಯ ಮೇಲೆ ಪ್ರೀತಿ ಇದ್ದಿದ್ದರೆ ಅವರು ಜೈಲು ಸೇರಿದಾಗ ಬೆಂಬಲಕ್ಕೆ ನಿಲ್ಲಬೇಕಿತ್ತು. ನಿಮ್ಮ ಜತೆಗೆ ನಾನಿದ್ದೇನೆ, ಹೆದರಬೇಡಿ ಎಂದು ಬೆನ್ನಿಗೆ ನಿಲ್ಲಬೇಕಿತ್ತು. ಆಸರೆಯ ಮಾತನಾಡಬೇಕಿತ್ತು. ಆದರೆ, ಈ ಯಾವುದನ್ನೂ ಮಾಡದ ಭವಾನಿ, ತಮ್ಮ ಸೇಫ್‌ ಅನ್ನು ಮಾತ್ರವೇ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇನ್ನು ಪುತ್ರ ಪ್ರಜ್ವಲ್ ಸಹ ತಂದೆ ಜೈಲುಪಾಲಾದರೂ ನನಗೇನು ಎಂಬ ರೀತಿಯಲ್ಲಿ ವಿದೇಶವನ್ನು ಬಿಟ್ಟು ಹೊರ ಬರುತ್ತಿಲ್ಲ. ಇದೆಲ್ಲವೂ ದೇವೇಗೌಡರಿಗೆ ಸಿಟ್ಟು ತರಿಸಿದೆ ಎನ್ನಲಾಗಿದೆ.

ಅಮ್ಮ – ಮಗನ ಆಟಕ್ಕೆ ರೇವಣ್ಣ ಬಲಿ ಎಂದು ಅಸಮಾಧಾನ

ಸಾಮಾನ್ಯವಾಗಿ ಪುತ್ರನ ಕುಟುಂಬದ ವ್ಯವಹಾರಗಳಿಗೆ ತಲೆ ಹಾಕದ ಎಚ್.ಡಿ. ದೇವೇಗೌಡರು, ಈ ಪ್ರಕರಣದಲ್ಲಿ ತಮ್ಮ ಹಾಗೂ ಕುಟುಂಬದ ಹೆಸರು ಮಣ್ಣುಪಾಲಾಗುತ್ತಿರುವುದನ್ನು ಕಂಡು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ರೇವಣ್ಣ ಅವರನ್ನು ಕರೆದು ಒಂದಷ್ಟು ಬುದ್ಧಿ ಮಾತುಗಳನ್ನು ಹೇಳಿದ್ದಾರೆ. ಅಮ್ಮ – ಮಗನ ಆಟಕ್ಕೆ ನೀನು ಬಲಿಯಾಗುತ್ತಿರುವೆ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ. ನಿನ್ನ ಕಷ್ಟದ ಕಾಲದಲ್ಲಿಯೂ ಭವಾನಿ ಸಾಥ್‌ ಕೊಡಲಿಲ್ಲವೆಂದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. ನಿನ್ನ ಒಳ್ಳೆಯತನವೇ ಮುಳುವಾಯಿತು ಎಂದು ಎಚ್‌.ಡಿ. ದೇವೇಗೌಡ ಕಿಡಿಕಾರಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

ಕರೆದು ಬುದ್ಧಿ ಹೇಳು, ಮತ್ತೆ ಹೀಗಾಗದಂತೆ ನೋಡಿಕೋ!!

ಭವಾನಿ ಮತ್ತು ಮಕ್ಕಳು ಏನು ಬೇಕಿದ್ದರೂ ಮಾಡಿಕೊಳ್ಳಲಿ. ಆದರೆ, ಇನ್ನು ಮುಂದೆ ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೊಳ್ಳಿ. ಈ ಬಗ್ಗೆ ಸಮಯ ನೋಡಿ ಅವರೆಲ್ಲರಿಗೂ ಎಚ್ಚರಿಕೆ ಕೊಡು. ಪ್ರಜ್ವಲ್ ವಿದೇಶದಿಂದ ಬಂದು ಕೋರ್ಟ್‌ನಿಂದ ಜಾಮೀನು ಪಡೆದ ಸಾರ್ವಜನಿಕ ಜೀವನದಲ್ಲಿ ಎಚ್ಚರಿಕೆಯಿಂದ ಇರಬೇಕು. ಈ ನಿಟ್ಟಿನಲ್ಲಿ ನೀನು ಜವಾಬ್ದಾರಿಯಿಂದ ನೋಡಿಕೊ ಎಂದು ಎಚ್.ಡಿ. ರೇವಣ್ಣ ಅವರಿಗೆ ಎಚ್.ಡಿ. ದೇವೇಗೌಡ ತಾಕೀತು ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

Pralhad Joshi: ಭಾರತ ಹಿಂದೂ ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆ ಸರಿಯಿದೆ. ನಾನೂ ಅದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.

VISTARANEWS.COM


on

India is a secular nation because Hindus are the majority says Union Minister Pralhad Joshi
Koo

ನವದೆಹಲಿ: ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

“ಭಾರತ ಹಿಂದೂ ರಾಷ್ಟ್ರವಲ್ಲ” ಎಂಬ ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಅವರ ನಡೆಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಕ್ಷೇಪಿಸಿದ್ದು, ನವದೆಹಲಿಯಲ್ಲಿ ಶುಕ್ರವಾರ ಈ ಕುರಿತು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ; ಆರ್‌. ಅಶೋಕ್‌

ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯಾತೀತ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: Team India : ಟೆಸ್ಟ್​​ ಕ್ರಿಕೆಟ್​ನ ಒಂದೇ ದಿನದಲ್ಲಿ ಗರಿಷ್ಠ ರನ್​; ದಾಖಲೆ ಬರೆದ ಭಾರತ ತಂಡ

ಭಾರತ ಹಿಂದೂ ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆ ಸರಿಯಿದೆ. ತಾವೂ ಅದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಚಿವ ಪ್ರಲ್ಹಾದ್‌ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ.

Continue Reading

ದೇಶ

Parliament Sessions: ಅಧಿವೇಶನದ ವೇಳೆ ತಲೆಸುತ್ತಿ ಬಿದ್ದ ಸಂಸದೆ; ವಿಡಿಯೋ ಇದೆ

Parliament Sessions: ನೀಟ್‌ ಪರೀಕ್ಷೆ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಪಕ್ಷ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸುಸ್ತಾಗಿ ತಲೆ ಸುತ್ತಿ ಬಿದ್ದ ಫೂಲೋ ದೇವಿಯವರನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ಭೇಟಿ ಕೊಟ್ಟು ಅವರ ಆರೋಗ್ಯ ವಿಚಾರಿಸಿದ್ದಾರೆ. ಫೂಲೋ ದೇವಿಯ ಸಿಟಿ ಸ್ಕ್ಯಾನ್‌ ಮಾಡಿಸಲು ವೈದ್ಯರು ಸೂಚಿಸಿದ್ದಾರೆ. ಶೀಘ್ರವೇ ಅವರು ಚೇತರಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

VISTARANEWS.COM


on

Parliament Sessions
Koo

ಹೊಸದಿಲ್ಲಿ: ಸಂಸತ್‌ ಅಧಿವೇಶನ(Parliament Sessions)ದಲ್ಲಿ ಇಂದು ನೀಟ್‌ ಪರೀಕ್ಷೆ ಅಕ್ರಮ(NEET Exam) ವಿಚಾರ ಕೋಲಾಹಲ ಎಬ್ಬಿಸಿತ್ತು. ರಾಜ್ಯಸಭೆಯಲ್ಲಿ ಈ ವಿಚಾರವನ್ನೇ ಮುಂದಿಟ್ಟುಕೊಂಡು ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯೆ ಫೂಲೋ ದೇವಿ ನೇತಾಂ ಪ್ರಜ್ಞೆ ತಪ್ಪಿ ಬಿದ್ದ ಘಟನೆ ನಡೆಯಿತು. ತಕ್ಷಣ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.

ನೀಟ್‌ ಪರೀಕ್ಷೆ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಪಕ್ಷ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸುಸ್ತಾಗಿ ತಲೆ ಸುತ್ತಿ ಬಿದ್ದ ಫೂಲೋ ದೇವಿಯವರನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ಭೇಟಿ ಕೊಟ್ಟು ಅವರ ಆರೋಗ್ಯ ವಿಚಾರಿಸಿದ್ದಾರೆ. ಫೂಲೋ ದೇವಿಯ ಸಿಟಿ ಸ್ಕ್ಯಾನ್‌ ಮಾಡಿಸಲು ವೈದ್ಯರು ಸೂಚಿಸಿದ್ದಾರೆ. ಶೀಘ್ರವೇ ಅವರು ಚೇತರಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದ್ದರಿಂದ ಲೋಕಸಭೆಯ ಕಲಾಪವನ್ನು ಶುಕ್ರವಾರ ದಿನದ ಮಟ್ಟಿಗೆ ಮುಂದೂಡಲಾಯಿತು. ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗ, ವಿರೋಧ ಪಕ್ಷದ ಸದಸ್ಯರು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆಗೆ ತಮ್ಮ ಬೇಡಿಕೆಯನ್ನು ಮುಂದುವರೆಸಿದರು. ಸ್ಪೀಕರ್ ಓಂ ಬಿರ್ಲಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಸಂದರ್ಭದಲ್ಲಿ ಈ ವಿಷಯವನ್ನು ಚರ್ಚಿಸಬಹುದು ಎಂದು ವಿರೋಧ ಪಕ್ಷದ ಸದಸ್ಯರಿಗೆ ತಿಳಿಸಿದರು.

ಇದನ್ನೂ ಓದಿ: Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Continue Reading

ಕರ್ನಾಟಕ

Congress government: ಕೈ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದ ಆರ್.ಅಶೋಕ್‌

Congress government: ರಾಜ್ಯ ಸರ್ಕಾರ ಅವರ ಶಾಸಕರಿಂದಲೇ ಪತನವಾಗಲಿದೆ, ಇದರಲ್ಲಿ ನಮ್ಮ ಹಸ್ತಕ್ಷೇಪವಿರುವುದಿಲ್ಲ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

VISTARANEWS.COM


on

Congress government
Koo

ಕೋಲಾರ: ಡಿ.ಕೆ. ಸುರೇಶ್ ಅವರನ್ನು ಸೋಲಿಸಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ (Congress government) ಭದ್ರಪಡಿಸಿಕೊಂಡಿದ್ದಾರೆ, ಈ ಹಿಂದೆ ಪರಮೇಶ್ವರ್ ಸೋಲಿಸಿ ಸಿಎಂ ಸ್ಥಾನ ಭದ್ರಪಡಿಸಿಕೊಂಡಿದ್ದರು. ಇದೀಗ ಅಣ್ಣ-ತಮ್ಮಂದಿರ ಕಾಟ ತಪ್ಪಿಸಲು, ಡಿ.ಕೆ. ಸುರೇಶ್‌ರನ್ನು ಸೋಲಿಸಿದ್ದಾರೆ. ಅದಕ್ಕೆ ಡಿಕೆಶಿ ಸಹ ಅವರದೇ ರೀತಿ ಚದುರಂಗದಾಟ ಆಡುತ್ತಿದ್ದು, ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸಿದ್ದರಾಮಯ್ಯಗೆ ಸ್ವಾಮೀಜಿಗಳಿಂದ ಹೇಳಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅವರ ಶಾಸಕರಿಂದಲೇ ಪತನವಾಗಲಿದೆ, ಇದರಲ್ಲಿ ನಮ್ಮ ಹಸ್ತಕ್ಷೇಪವಿರುವುದಿಲ್ಲ. ಡಿಸಿಎಂಗೆ ಎಕ್ಸ್ಪೈರಿ ಡೇಟ್‌ ಆಗಿದೆ. ಧರ್ಮಾತ್ಮನಾಗಿದ್ದರೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸ್ವಾಮೀಜಿ ಕೇಳಿದ್ದಾರೆ. ಹಾಗಾದರೆ ಸಿಎಂ ಪಾಪಾತ್ಮನಾ? ದಿನನಿತ್ಯ ಮೂರು ಡಿಸಿಎಂ ಹುದ್ದೆ ಸೃಷ್ಟಿಸಿ ಎಂಬ ಕೂಗು ಕೇಳಿಬರುತ್ತಿದೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ, ಅವರ ಶಾಸಕರೇ ಸರ್ಕಾರವನ್ನು ಬೀಳಿಸುತ್ತಾರೆ. ಇಲ್ಲದಿದ್ದರೆ ಡಿ.ಕೆ. ಶಿವಕುಮಾರ್ ಅವರೇ ಸರ್ಕಾರವನ್ನು ಬೀಳಿಸುತ್ತಾರೆ ಎಂದ ತಿಳಿಸಿದರು.

ಇದನ್ನೂ ಓದಿ | CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ; ಆರ್‌. ಅಶೋಕ್‌

ಕೋಲಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಗ್ರಹಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ. ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ ಎಂದು ಆರೋಪಿಸಿದ ಅವರು, ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.

ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

ರೈತರಿಗೆ 800 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ನೀಡಬೇಕಿದೆ. ರೈತರು ಬರ ಪರಿಹಾರ, ಪ್ರೋತ್ಸಾಹಧನ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡಲು ಕೂಡ ಯೋಗ್ಯತೆ ಇಲ್ಲದೆ ಕಲುಷಿತ ನೀರು ಕುಡಿದು ಜನರು ಸತ್ತಿದ್ದಾರೆ. ಡೆಂಘೀ ರೋಗ ಹರಡುತ್ತಿದ್ದು, ಅದಕ್ಕೆ ಚಿಕಿತ್ಸೆ ನೀಡಲು ಸರ್ಕಾರದ ಬಳಿ ಹಣವಿಲ್ಲ. ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕು ಎಂದು ತಿಳಿಸಿದರು.

ತೈಲ ದರ ಏರಿಕೆಯಾಗಿ ಎಲ್ಲ ದರಗಳು ಏರಿದೆ. ಹಾಲು ಉತ್ಪಾದನೆ ಹೆಚ್ಚಳವಾದರೆ ಅದನ್ನು ಬೇರೆ ರೀತಿ ಬಳಸಿಕೊಳ್ಳಬಹುದು. ಅದನ್ನು ಬಿಟ್ಟು ಹಾಲಿನ ದರ ಏರಿಸಿದ್ದಾರೆ. ಇನ್ನು ಲಿಕ್ಕರ್‌ ದರ ಕೂಡ ಏರಿಸುತ್ತಾರೆ. ಅವೈಜ್ಞಾನಿಕ ಗ್ಯಾರಂಟಿಗಳನ್ನು ಜಾರಿ ಮಾಡಿ, ಅದಕ್ಕೆ ಹಣ ಹೊಂದಿಸಲು ಸಾಧ್ಯವಾಗದೆ ತೆರಿಗೆ ವಿಧಿಸಿ ಜನರ ರಕ್ತ ಹೀರುತ್ತಿದ್ದಾರೆ ಎಂದು ದೂರಿದರು.

Continue Reading

ಪ್ರಮುಖ ಸುದ್ದಿ

BS Yediyurappa: ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮಧ್ಯಂತರ ಜಾಮೀನು ವಿಸ್ತರಣೆ

BS Yediyurappa: ಮಾಜಿ ಸಿಎಂ ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣದಲ್ಲಿ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಮಧ್ಯಂತರ ಜಾಮೀನು ವಿಸ್ತರಿಸಿ, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ.

VISTARANEWS.COM


on

BS Yediyurappa
Koo

ಬೆಂಗಳೂರು: ಪೋಕ್ಸೊ ಕೇಸ್‌ನಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆಯಾದ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆವರೆಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಜೂನ್‌ 14ರಂದು ಹೈಕೋರ್ಟ್‌ ತಡೆ ನೀಡಿತ್ತು. ಇದೀಗ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ವಿಸ್ತರಣೆ ಮಾಡಿದೆ.

ಬಿ.ಎಸ್‌. ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣದಲ್ಲಿ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ. ಅಲ್ಲದೇ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ಸೂಚನೆ ನೀಡಿದೆ.

17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಗುರುವಾರ ಚಾರ್ಜ್‌ ಶಿಟ್‌ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮಧ್ಯಂತರ ಜಾಮೀನು ವಿಸ್ತರಣೆಯಾಗಿದೆ.

ಇದನ್ನೂ ಓದಿ | vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Prajwal Revanna Case

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Prajwal Revanna Case) ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌ ಸಿಕ್ಕಿದೆ. ತಮ್ಮ ಮೇಲೆ ಯಾವುದೇ ಆರೋಪವಿಲ್ಲದಿದ್ದರೂ ಕೇಸ್ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ ಪ್ರಶ್ನಿಸಿ ಪ್ರೀತಂ ಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಕೋರ್ಟ್‌, ಪ್ರೀತಂ ಗೌಡರನ್ನು ಬಂಧಿಸದೆ, ತನಿಖೆ ಮುಂದುವರಿಸಲು ಎಸ್ಐಟಿಗೆ ಸೂಚನೆ ನೀಡಿದೆ.

ಅಶ್ಲೀಲ ವಿಡಿಯೊ ಇರುವ ಪೆನ್​ಡ್ರೈವ್​​ ಹಂಚಿಕೆ ಆರೋಪದಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ನಗರದ ಸಿಐಡಿ ಸೈಬರ್ ಠಾಣೆಯಲ್ಲಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ, ಕಿರಣ್​, ಶರತ್​ ಹಾಗೂ ಪ್ರೀತಂ ಗೌಡ ವಿರುದ್ಧ ಐಪಿಸಿ ಸೆಕ್ಷನ್ 354(ಎ), 354 (ಡಿ), 354 ಬಿ, 506 ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಎಫ್‌ಐಆರ್‌ ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಮಾಜಿ ಶಾಸಕ ಪ್ರೀತಂ ಗೌಡ ರಿಟ್ ಅರ್ಜಿ ಸಲ್ಲಿಸಿದ್ದರು. ಯಾವುದೇ ಆರೋಪವಿಲ್ಲದಿದ್ದರೂ ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಜನ ಮಾತನಾಡುತ್ತಿದ್ದಾರೆಂಬ ಆಧಾರದ ಮೇಲೆ ಕೇಸ್ ಹಾಕಿದ್ದಾರೆ ಎಂದು ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.

ಇದಕ್ಕೆ ಎಸ್‌ಪಿಪಿ ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿ, ಆರೋಪಿ ವಿರುದ್ಧ ಸಂತ್ರಸ್ತೆಯ ವಿಡಿಯೊ ಹಂಚಿದ ಗಂಭೀರ ಆರೋಪವಿದೆ. ಹೀಗಾಗಿ ಮಧ್ಯಂತರ ಆದೇಶ ನೀಡದಂತೆ ಮನವಿ ಮಾಡಿದರು. ಈ ವೇಳೆ ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಮಾತನಾಡಿ, ಜನ ಮಾತನಾಡಿಕೊಳ್ಳುತ್ತಿರುವ ಕಾರಣಕ್ಕೆ ದೂರು ನೀಡಿದ್ದಾರೆ. ಸರ್ಕಾರದವರೇ 3 ಲಕ್ಷ ಪೆನ್ ಡ್ರೈವ್ ಹಂಚಿದ್ದಾರೆಂದು ಜನ ಮಾತನಾಡುತ್ತಿದ್ದಾರೆ. ಹಾಗಿದ್ದರೆ ಸರ್ಕಾರದವರ ಮೇಲೂ ಎಫ್ಐಆರ್ ಮಾಡುತ್ತಾರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ವಾದ-ಪ್ರತಿವಾದ ಆಲಿಸಿದ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರು, ವಿಡಿಯೊ ಹಂಚುವುದರಿಂದ ಮಹಿಳೆಯ ಗೌರವಕ್ಕೆ ಹಾನಿಯಾಗುತ್ತದೆ. ಇದು ಗಂಭೀರ ಅಪರಾಧವಾಗಿದೆ. ಆದರೆ, ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಎಸ್‌ಐಟಿ ಬಂಧಿಸದೇ, ತನಿಖೆ ಮುಂದುವರಿಸಬೇಕು. ಅಲ್ಲದೇ ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಸೂಚಿಸಿದ್ದಾರೆ.

Continue Reading
Advertisement
DP Manu
ಕ್ರೀಡೆ1 min ago

DP Manu: ಡೋಪಿಂಗ್ ಸುಳಿಯಲ್ಲಿ ಸಿಲುಕಿದ ಜಾವೆಲಿನ್‌ ತಾರೆ ಮನು; ಒಲಿಂಪಿಕ್ಸ್​ಗೆ ಹಿನ್ನಡೆ

Love Failure
ರಾಯಚೂರು10 mins ago

Love Failure : ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಫ್ಯಾನಿಗೆ ನೇಣು ಬಿಗಿದುಕೊಂಡ ಹುಚ್ಚು ಪ್ರೇಮಿ

Gold Rate Today
ಪ್ರಮುಖ ಸುದ್ದಿ21 mins ago

Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

ಬಾಲಿವುಡ್29 mins ago

Asha Bhosle: ಹಿರಿಯ ಗಾಯಕಿ ಆಶಾ ಭೋಂಸ್ಲೆ ಪಾದಕ್ಕೆ ಮುತ್ತಿಟ್ಟು, ಪನ್ನೀರಿನಿಂದ ತೊಳೆದು ನಮಸ್ಕರಿಸಿದ ಸೋನು ನಿಗಮ್

karnataka Rain
ಮಳೆ38 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Mohan Bhagwat
ದೇಶ46 mins ago

Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Kalki 2898 AD Yash calls visually stunning spectacle
ಟಾಲಿವುಡ್1 hour ago

Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

IND vs SA Final
ಕ್ರೀಡೆ1 hour ago

IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

Law And Order
ಕರ್ನಾಟಕ1 hour ago

Law And Order: ಗದಗ, ರಾಯಚೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

Actor Darshan Renuka Swamy case In colorskannada shantam Paapam
ಸ್ಯಾಂಡಲ್ ವುಡ್1 hour ago

Actor Darshan: ‘ಶಾಂತಂ ಪಾಪಂ’ ಕಿರುತೆರೆ ಶೋನಲ್ಲಿ ದರ್ಶನ್‌ ಕಥೆ? ಏನಿದು ಡೇರ್ ಡೆವಿಲ್ ದೇವದಾಸ್‌ ಡೆಡ್ಲಿ ಕಹಾನಿ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ38 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ17 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ24 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌