Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ! - Vistara News

ಸಿನಿಮಾ

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

Cannes 2024: ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

VISTARANEWS.COM


on

Cannes 2024 Aishwarya Rai turns lady in black in Falguni
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಾಣುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

ಬುಧವಾರ (ಮೇ 15) ರಾತ್ರಿ ಐಶ್ವರ್ಯಾ ರೈ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರ ಕೈಗೆ ಗಾಯ ಆಗಿದ್ದನ್ನು ನೋಡಿ ಅಭಿಮಾನಿಗಳಿಗೆ ಬೇಸರ ಆಗಿತ್ತು. ಕೈಗೆ ಪೆಟ್ಟಾಗಿರುವುದರಿಂದ ಈ ಬಾರಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದು ಅನೇಕರು ಭಾವಿಸಿದ್ದರು. ಕಪ್ಪು, ಬಿಳಿ ಮತ್ತು ಗೋಲ್ಡನ್​ ಬಣ್ಣಗಳಿಂದ ವಿನ್ಯಾಸಗೊಂಡ ಗೌನ್​ ಧರಿಸಿ ಅವರು ಮಿಂಚಿದ್ದಾರೆ. ಬಲಗೈನಲ್ಲಿ ಬ್ಯಾಂಡೇಜ್​ ಇದ್ದರೂ ಕೂಡ ಅವರು ಆ ಬಗ್ಗೆ ಹೆಚ್ಚು ಗಮನ ನೀಡಿಲ್ಲ.

ಇದನ್ನೂ ಓದಿ: Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Carrie Fisher: ಹಾಲಿವುಡ್‌ ಖ್ಯಾತ ನಟಿ ಧರಿಸಿದ ಬಿಕಿನಿ ಬರೋಬ್ಬರಿ 1.46 ಕೋಟಿ ರೂಪಾಯಿಗೆ ಹರಾಜು!

Carrie Fisher : ಇನ್ನು ನಟಿ ಈ ಬಗ್ಗೆ ಈ ಮುಂಚೆ ಹಲವು ಸಂದರ್ಶನಗಳಲ್ಲಿ ಈ ಉಡುಪಿನ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ನಟಿ ಕ್ಯಾರಿ ಫಿಶರ್ ಮರೂನ್ ಹಾಗೂ ಗೋಲ್ಡನ್ ಬಣ್ಣದ ವಿಶೇಷ ಬಿಕಿನಿ ಧರಿಸಿದ್ದರು. ಪಾತ್ರಕ್ಕೆ ಹೊಂದಿಕೊಳ್ಳುವ ಬಿಕಿನಿ 1977ರಿಂದ 1983ರ ಅವಧಿಯಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು.

VISTARANEWS.COM


on

Carrie Fisher Iconic Golden Bikini Rs 1.46 Crore
Koo

ಬೆಂಗಳೂರು: “ರಿಟರ್ನ್ ಆಫ್ ದಿ ಜೇಡಿ” (“Return of the Jedi”) ಫ್ರಾಂಚೈಸ್‌ನಲ್ಲಿ ಪ್ರಿನ್ಸೆಸ್ ಲಿಯಾ ಆಗಿ ಕ್ಯಾರಿ ಫಿಶರ್ (Carrie Fisher) ನಟಿಸಿದ್ದರು. ಇದೀಗ ಕ್ಯಾರಿ ಫಿಶರ್ ಧರಿಸಿರುವ ಚಿನ್ನದ ಬಿಕಿನಿ ಶೈಲಿಯ ವೇಷಭೂಷಣ ಹರಾಜಿನಲ್ಲಿ ಬರೋಬ್ಬರಿ 1.46 ಕೋಟಿ ರೂಪಾಯಿಗೆ ಮಾರಾಟವಾಗಿದೆ. ಪ್ರಮುಖವಾಗಿ ಸ್ಟಾರ್ ವಾರ್ 6ನೇ ಎಪಿಸೋಡ್‌ನಲ್ಲಿ ನಟಿ ಕ್ಯಾರಿ ಫಿಶರ್ ಮರೂನ್ ಹಾಗೂ ಗೋಲ್ಡನ್ ಬಣ್ಣದ ವಿಶೇಷ ಬಿಕಿನಿ ಧರಿಸಿದ್ದರು. ಪಾತ್ರಕ್ಕೆ ಹೊಂದಿಕೊಳ್ಳುವ ಬಿಕಿನಿ 1977ರಿಂದ 1983ರ ಅವಧಿಯಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು.

ಬಿಕಿನಿಯಲ್ಲಿ ಬ್ರಾ ಮೇಲೆ ಧರಿಸಿದ್ದ ಗೋಲ್ಡನ್ ಆಭರಣ ರೀತಿಯ ಡ್ರೆಸ್, ಕೈಗಳಿಗೆ ಧರಿಸಿದ್ದ ತೋಳ್ಬಳೆ, ಸೊಂಟಕ್ಕೆ ಧರಿಸಿದ್ದ ರಿಂಗ್ ಸೇರಿದಂತೆ ಫುಲ್ ಸೆಟ್ ಹರಾಜಾಗಿದೆ.

ಇನ್ನು ನಟಿ ಈ ಬಗ್ಗೆ ಈ ಮುಂಚೆ ಹಲವು ಸಂದರ್ಶನಗಳಲ್ಲಿ ಈ ಉಡುಪಿನ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ʻʻ2016 ರ ಸಂದರ್ಶನದಲ್ಲಿ, ವೇಷಭೂಷಣವನ್ನು ಧರಿಸುವುದು ತನ್ನ ವೈಯಕ್ತಿಕ ಆಯ್ಕೆಯಲ್ಲ ಎಂದು ಫಿಶರ್ ಬಹಿರಂಗಪಡಿಸಿದರು. ನಿರ್ದೇಶಕ ಜಾರ್ಜ್ ಲ್ಯೂಕಾಸ್ ಮೊದಲು ನನಗೆ ಉಡುಪನ್ನು ತೋರಿಸಿದಾಗ ಅವರು ತಮಾಷೆ ಮಾಡುತ್ತಿದ್ದಾರೆ ಎಂದು ಭಾವಿಸಿದೆ. ಅದು ನನಗೆ ತುಂಬಾ ಆತಂಕವನ್ನುಂಟುಮಾಡಿತು. ಡ್ರೆಸ್‌ ಹಾಕಿಕೊಳ್ಲುವಾಗಲೂ ತುಂಬ ನೇರವಾಗಿ ಕುಳಿತುಕೊಳ್ಳಬೇಕಾಗಿತ್ತುʼʼಎಂದು ಹೇಳಿಕೊಂಡಿದ್ದರು. ನಟಿ ಮರಣದ ಮುಂಚೆ ಈ ಬಗ್ಗೆ ಹೇಳಿಕೊಂಡಿದ್ದರು.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ರಿಚರ್ಡ್ ಮಿಲ್ಲರ್, ಈ ವೇಷಭೂಷಣದ ಸೃಷ್ಟಿಕರ್ತ. ಸಂದರ್ಶನವೊಂದರಲ್ಲಿ ಈ ಬಗ್ಗೆ ರಿಚರ್ಡ್ ಮಿಲ್ಲರ್ ಹೇಳಿದ್ದು ಹೀಗೆ. ʻʻಫಿಶರ್‌ಗೆ ಹೆಚ್ಚು ಚಲನೆಯ ಸ್ವಾತಂತ್ರ್ಯ ಸಿಗಬೇಕು ಎಂದು ಮೃದುವಾದ ವಸ್ತುಗಳನ್ನು ಬಳಸಿ ಬಿಕಿನಿ ತಯಾರಿಸಲಾಗಿತ್ತು. ಆದರೆ ಆಕೆ ಅದನ್ನು ಇಷ್ಟಪಡಲಿಲ್ಲ. ಈ ಬಗ್ಗೆ ಅವರನ್ನು ನಾನು ದೂಷಿಸುವುದಿಲ್ಲ, ನಟಿಗೆ ಕಂಫರ್ಟ್‌ ಆಗಿರಲಿ ಎಂದು ಹಿಂಭಾಗದಲ್ಲಿ ಚರ್ಮವನ್ನು ಹಾಕಿ ಉಡುಪು ತಯಾರಿಸಲಾಗಿತ್ತುʼʼಎಂದು ಹೇಳಿಕೊಂಡಿದ್ದರು.

ಕ್ಯಾರಿ ಫಿಶರ್ 2016ರ ಡಿಸೆಂಬರ್ 27ರಂದು ನಿಧನರಾಗಿದ್ದಾರೆ. ತಮ್ಮ 60ನೇ ವಯಸ್ಸಿನಲ್ಲೂ ಕ್ಯಾರಿ ಅಭಿಯನದ ಮೂಲದ ಪ್ರೇಕ್ಷಕರನ್ನು ಮೋಡಿ ಮಾಡಿದ್ದರು. ಕ್ಯಾರಿ ಫಿಶರ್ ಅಭಿನಯಿಸಿದ ಸ್ಟಾರ್ ವಾರ್ಸ್ , ಲಾಸ್ಟ್ ಜೆಡಿ ಸೀರಿಸ್ ಮರಣನಂತರ ಅಂದರೆ 2017ರಲ್ಲಿ ಬಿಡುಗಡೆ ಕಂಡಿತ್ತು. ಇನ್ನು 2019ರಲ್ಲಿ ದಿ ರೈಸ್ ಆಫ್ ಸ್ಕೈವಾಕರ್ ಬಿಡುಗಡೆಯಾಗಿದೆ.

Continue Reading

ಸ್ಯಾಂಡಲ್ ವುಡ್

Dhruva Sarja: ʻಕೆಡಿʼ ಚಿತ್ರದಿಂದ ಹೊರ ಬಿತ್ತು ಸಂಜಯ್ ದತ್ ಫಸ್ಟ್ ಲುಕ್; ಫ್ಯಾನ್ಸ್‌ ಫಿದಾ!

Dhruva Sarja: ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ.

VISTARANEWS.COM


on

Dhruva Sarja``KD'' Sanjay Dutt First Look Out of
Koo

ಬೆಂಗಳೂರು: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟ ಸಂಜಯ್ ದತ್ ಅಭಿನಯಿಸುತ್ತಿರುವುದು ಗೊತ್ತೇ ಇದೆ. ಇದೀಗ ಕೆಡಿ ಚಿತ್ರತಂಡ ಸಂಜಯ್ ದತ್ ಅವರ ಫಸ್ಟ್‌ ಲುಕ್‌ ಅನಾವರನಗೊಳಿಸಿದೆ. ʻಧಕ್ ದೇವಾʼ ಪಾತ್ರದಲ್ಲಿ ಸಂಜಯ್ ದತ್ ನಟಿಸುತ್ತಿದ್ದಾರೆ. ಪೊಲೀಸ್‌ ಲಾಠಿ ಹಿಡಿದು, ಅರ್ಧ ರೌಡಿ ಲುಕ್‌ನಲ್ಲಿ ಢಿಫರೆಂಟ್‌ ಆಗಿ ಕಂಡಿದ್ದಾರೆ. ಈ ಲುಕ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ಇನ್ನು ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಇದೀಗ ಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರೀತ್ಸೋದ್ ತಪ್ಪಾ? ಆಟೋ ಶಂಕರ್, ಒಂದಾಗೋಣ ಬಾ ಸಿನಿಮಾಗಳಲ್ಲಿ ಶಿಲ್ಪಾ ಅಭಿನಯಿಸಿದ್ದಾರೆ. ಈ ಹಿಂದೆ ಪೋಸ್ಟರ್‌ ಔಟ್‌ ಆದಾಗ ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಕೆಲವು ದಿನಗಳ ಹಿಂದೆ ಮೈಸೂರಿನಲ್ಲಿ ಕಂಡಿದ್ದರು ನಟಿ.

ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಇದನ್ನೂ ಓದಿ: Dhruva Sarja: ದರ್ಶನ್‌ ಪ್ರಕರಣದ ಕುರಿತು ಕೊನೆಗೂ ಪ್ರತಿಕ್ರಿಯೆ ನೀಡಿದ  ಧ್ರುವ ಸರ್ಜಾ!

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ.

Continue Reading

ಕ್ರೈಂ

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬೆನ್ನಲ್ಲೇ ಸಂಧಾನಕ್ಕೆ ಹೋಗಿದ್ದಲ್ಲ ಎಂದ ವಿನೋದ್‌ ರಾಜ್‌ !

Actor Darshan: ಜುಲೈ 26ರಂದು ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳುವ ಜತೆಗೆ 1 ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದರು. ಆದರೆ ಮಾಧ್ಯಮಗಳಲ್ಲಿ ರಾಜಿ ಸಂಧಾನಕ್ಕಾಗಿ ಹೋಗಿದ್ದರು ಎಂಬಂತೆ ಬಿಂಬಿತವಾಗಿದೆ ಎಂದು ಇದೀಗ ವಿನೋದ್‌ ರಾಜ್‌ ಬೇಸರ ಹೊರ ಹಾಕಿದ್ದಾರೆ.

VISTARANEWS.COM


on

Actor Darshan case Vinod Raj said that he did not go to negotiations Renukaswamy family
Koo

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್‌ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿಂದೆ ದರ್ಶನ್ ಅವರನ್ನ ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ವಿನೋದ್‌ ರಾಜ್‌ ಆಗಮಿಸಿದ್ದರು. ದರ್ಶನ್‌ ಅವರನ್ನ ಕಂಡು ವಿನೋದ್ ರಾಜ್‌ ಭಾವುಕರಾಗಿದ್ದರು. ದರ್ಶನ್‌ ಅವರನ್ನ ಮೀಟ್ ಮಾಡಿದ್ಮೇಲೆ ಕಣ್ಣೀರು ಹಾಕುತ್ತಲೇ ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಜುಲೈ 26ರಂದು ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳುವ ಜತೆಗೆ 1 ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದರು. ಆದರೆ ಮಾಧ್ಯಮಗಳಲ್ಲಿ ರಾಜಿ ಸಂಧಾನಕ್ಕಾಗಿ ಹೋಗಿದ್ದರು ಎಂಬಂತೆ ಬಿಂಬಿತವಾಗಿದೆ ಎಂದು ಇದೀಗ ವಿನೋದ್‌ ರಾಜ್‌ ಬೇಸರ ಹೊರ ಹಾಕಿದ್ದಾರೆ.

ಈ ಬಗ್ಗೆ ವಿನೋದ್‌ ರಾಜ್‌ ವಿಡಿಯೊ ಮೂಲಕ ಮಾತನಾಡಿ ʻʻದರ್ಶನ್ ಅವರನ್ನ ಒಬ್ಬ ಕಲಾವಿದ ಎನ್ನುವ ಕಾರಣಕ್ಕೆ ಭೇಟಿ ಮಾಡಿ ಬಂದೆ. ಮೊನ್ನೆ ನಾನು ದರ್ಶನ್‌ ಅವರನ್ನು ನೋಡೋಕೆ ಹೋಗಿದ್ದೆ. ಬಳಿಕ ರೇಣುಕಾ ಸ್ವಾಮಿ ಮನೆಗೆ ಹೋಗಿ ಬಂದೆ. ವಾಹಿನಿಗಳ ಮೂಲಕ ನನಗೆ ಅರ್ಥವಾಗಿದ್ದು ಏನೆಂದರೆ ರಾಜಿ ಸಂಧಾನಕ್ಕೋ ಅಥವಾ ಇನ್ಯಾವುದೋ ಕಾರಣಕ್ಕೋ ಅಲ್ಲಿ ಹೋಗಿದ್ದೆ ಎಂದು ಸುದ್ದಿಗಳು ವೈರಲ್‌ ಆಯ್ತು. ಖಂಡತ ಅದು ಅಲ್ವೇ ಅಲ್ಲ. ಕಲಾವಿದರು ಎನ್ನುವ ದೃಷ್ಟಿಯಿಂದ ನಾನು ಹೋಗಿದ್ದೆ. ರೇಣುಕಾ ಸ್ವಾಮಿ ಅವರ ಶ್ರೀಮಿತಿ ಅವರು ಗರ್ಭಿಣಿ. ಹುಟ್ಟುವ ಮಗುಗೆ ಒಳ್ಳಯದ್ದೇನಾದರೂ ಮಾಡಲಿಕ್ಕೆ ಆಗುತ್ತಾ ಎನ್ನುವ ದೃಷ್ಟಿಯಿಂದ ನಾನು ಸಹಾಯ ಮಾಡಿ ಬಂದೆ. ನಮ್ಮಿಂದ ಆದ ಸಣ್ಣ ಕಾಣಿಕೆ ಅದು. ಯಾವುದೇ ರಾಜಿ ಸಂಧಾನ ಅಲ್ಲ. ಆ ತರ ಕೆಲಸ ಕೂಡ ನಾವು ಮಾಡಲ್ಲʼʼಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಹಣ ಸಹಾಯ ಮಾಡಿ, ದರ್ಶನ್‌ ಪರವಾಗಿ ವಾದ ಮಾಡಿದ ನಟ ಗಣೇಶ್ ರಾವ್!

ಚಿತ್ರದುರ್ಗಕ್ಕೆ ತೆರಳಿದ ನಟ ವಿನೋದ್ ರಾಜ್ ಮಾತನಾಡಿ, ‘ಮನೆಗೆ ಆಧಾರ ಸ್ತಂಭವಾದ ಮಗನನ್ನು ಕಳೆದುಕೊಂಡಿದ್ದಾರೆ. ಕುಟುಂಬ ಪರಿತಪಿಸುತ್ತಿರುವ ಸ್ಥಿತಿ ಕಂಡು ಕರಳುಕಿತ್ತು ಬರುತ್ತಿದೆ. ಜೀವನದಲ್ಲಿ ಮನುಷ್ಯ ಹೇಗೆ ಬಾಳಬೇಕು, ಹೇಗೆ ನಡೆದುಕೊಳ್ಳಬೇಕು, ಯಾವ ದಿಕ್ಕಿನಲ್ಲಿ ಮಾನವೀಯತೆ, ಮನುಷತ್ವ ಸಾಗುತ್ತಿದೆ, ಮನುಷ್ಯತ್ವ ಇದೆಯಾ ಎನ್ನುವುದು ನಮ್ಮನ್ನೇ ಮುಟ್ಟಿಕೊಂಡು ನೋಡುವಂತಹ ಕಾಲ ಬಂದಿದೆ. ಜೀವನ ಇಡೀ ಸಂಪದಾನೆ, ಹೆಸರು ಮಾಡುವುದು ಅಲ್ಲವೇ ಅಲ್ಲ. ಜೀವನ ಇಡಿ ಜೀವಗಳ ಬಗ್ಗೆ ಕಾಳಜಿ ತೆಗೆದುಕೊಂಡು ಬದುಕಬೇಕು. ಪ್ರತಿಯೊಬ್ಬರ ಜೀವನದಲ್ಲೂ ಜೀವಗಳಿವೆ. ಜೀವರಾಶಿಗಳನ್ನ ಭಗವಂತ ತಂದೆ ತಾಯಿ ರೂಪದಲ್ಲಿ ಸೃಷ್ಟಿ ಮಾಡಿರುತ್ತಾನೆ. ಅವರೂ ಕೂಡ ಚೆನ್ನಾಗಿ ಇರಬೇಕು ಎಂದು ಬೆಳೆಸುತ್ತಾರೆ. ಎಲ್ಲೋ ಒಂದು ಅತಾಚುರ್ಯ, ಕೆಟ್ಟದ್ದು ನಡೆಯುತ್ತೆ. ಕೆಟ್ಟದ್ದು ಜಾಸ್ತಿ ಆದಾಗ ಇಂತಹ ಪರಿಸ್ಥಿತಿ ಬರುತ್ತದೆ. ಆದರೆ ಇದು ಹೆಚ್ಚಾಗಬಾರದು. ಸಮಾಜದಲ್ಲಿ ಉನ್ನತವಾದ ಸ್ಥಾನ ಎತ್ತರದ ಮಟ್ಟದಲ್ಲಿರುವವರು ವಿವೇಕ ಮರೆಯಬಾರದು, ಅಚಾತುರ್ಯ‌ ನಡೆಯುತ್ತವೆ, ಮುಂದಿನ ತಲೆಮಾರುಗಳು ಹೀಗೆ ಆಗದಂತೆ ಎಚ್ಚರವಹಿಸಬೇಕು, ಮಾಧ್ಯಮ ತಿದ್ದಿಬುದ್ದಿ ಹೇಳಿದಂತೆ ಅನುಸರಿಸಿಕೊಂಡು ಸಾಗಬೇಕು’ ಎಂದು ವಿನೋದ್ ರಾಜ್​ಕುಮಾರ್ ಹೇಳಿದ್ದರು.

ರೇಣುಕಾ ಸ್ವಾಮಿ ಕುಟುಂಬದವರನ್ನು ಸಂತೈಸಿದ ವಿನೋದ್ ರಾಜ್ ಕುಟುಂಬಕ್ಕೆ 1 ಲಕ್ಷ ರೂಪಾಯಿ ಚೆಕ್ ವಿತರಣೆ ಮಾಡಿದ್ದರು.

ಈ ಹಿಂದೆ ದರ್ಶನ್‌ ಅವರನ್ನು ಭೇಟಿಯಾದ ವಿನೋದ್‌ ರಾಜ್‌ ಮಾತನಾಡಿ ʻʻನಾವು 5 ಜನ ಹೋಗಿದ್ವಿ. ಹೆಚ್ಚೇನೂ ಮಾತಾಡೋಕೆ ಆಗಲಿಲ್ಲ. ಕಷ್ಟ – ಸುಖ ಮಾತನಾಡಿದ್ವಿ ಅಷ್ಟೇ. ವಿಜಯಲಕ್ಷ್ಮೀ ಅವರಿಗೂ ಏನೂ ಗೊತ್ತಾಗುತ್ತಿಲ್ಲ. ವಕೀಲರು ಮಾತನಾಡಿದರು ಅಷ್ಟೇ. ಜೈಲಿನ ನಿಯಮಗಳು ಕಟ್ಟುನಿಟ್ಟಾಗಿವೆ. ಇಷ್ಟು ಕಹಿಯಾಗಿ, ಅವರನ್ನ ನಾನು ಈ ಸ್ಥಿತಿಯಲ್ಲಿ ನೋಡಬೇಕಿತ್ತಾ ಅನಿಸ್ತಾಯಿದೆ. ನನ್ನ ಕಣ್ಣುಗಳನ್ನೇ ನಾನು ನಂಬೋಕೆ ಆಗಲಿಲ್ಲ. ಆದರೂ ನಂಬಬೇಕಾದ ಅನಿವಾರ್ಯತೆ ಆಗೋಯ್ತು. ಕಣ್ಣೀರು ಬಿಟ್ಟರೆ ಇನ್ನೇನೂ ಗೊತ್ತಿಲ್ಲ. ಸಂಸಾರ ಹಾಗೂ ಅಭಿಮಾನಿಗಳ ಜೊತೆಗೆ ಸೇರಿಕೊಳ್ಳಲಿ. ತಲೆಯೆತ್ತಿ ನಡೆಯುವಂತಹ ದರ್ಶನ್ ಆಗಲಿ. ಎಲ್ಲರಿಗೂ ದರ್ಶನ ಕೊಡಲಿ ಅಂತ ನಾನು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ’’ ಎಂದಿದ್ದರು.

Continue Reading

ಕಾಲಿವುಡ್

Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

Actor Dhanush: ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ಎಸ್‌ಜೆ ಸೂರ್ಯ, ಪ್ರಕಾಶ್ ರಾಜ್, ದುಶಾರ ವಿಜಯನ್ ಮತ್ತು ಸೆಲ್ವರಾಘವನ್ ಪ್ರಮುಖ ಪಾತ್ರಗಳಲ್ಲಿ ಇದ್ದಾರೆ. ಚಿತ್ರವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ‘A’ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.

VISTARANEWS.COM


on

Actor Dhanush Raayan box office Day 3
Koo

ಬೆಂಗಳೂರು: ಧನುಷ್ (Actor Dhanush) ಬರೆದು ನಿರ್ದೇಶಿಸಿರುವ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ʻರಾಯನ್ʼ ಸಿನಿಮಾವನ್ನು ಕಲಾನಿಧಿ ಮಾರನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ರಿಲೀಸ್‌ ಆಗಿ ಭಾರತದಲ್ಲಿ 50 ಕೋಟಿ ರೂ, ಕಲೆಕ್ಷನ್‌ ಮಾಡಿದೆ.ಬಿಡುಗಡೆಯಾದ ಕೇವಲ ಮೂರೇ ದಿನಕ್ಕೆ ಸಿನಿಮಾ ಭರ್ಜರಿ ಗಳಿಕೆ ಕಂಡು ಮುನ್ನುಗ್ಗುತ್ತಿದೆ. ಸಿನಿಮಾ ರಿಲೀಸ್‌ ಆದ ಬಳಿಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾನುವಾರ (ಜುಲೈ 28) ಬಿಡುಗಡೆಯಾದ ನಂತರ ಅತಿ ಹೆಚ್ಚು ಕಲೆಕ್ಷನ್ ದಾಖಲಿಸಿದೆ. ಮೂರು ದಿನಗಳ ಆರಂಭಿಕ ವಾರಾಂತ್ಯದ ಸಂಗ್ರಹ ಈಗ ಭಾರತದಲ್ಲಿ 42.15 ಕೋಟಿ ರೂ ಜುಲೈ 28 ರಂದು, ‘ರಾಯನ್‌’ ಭಾರತದಲ್ಲಿ ಸರಿಸುಮಾರು ರೂ 14.75 ಕೋಟಿ ಗಳಿಸಿತು. ಇ ದಿನ 1 ಮತ್ತು ದಿನದ 2 ​​ಸಂಗ್ರಹಕ್ಕಿಂತ ಸ್ವಲ್ಪ ಹೆಚ್ಚಾಗಿದೆ. ಭಾನುವಾರದಂದು ಚಿತ್ರವು ಒಟ್ಟಾರೆ ಶೇಕಡಾ 67.31 ರಷ್ಟು ಆಕ್ಯುಪೆನ್ಸಿಯನ್ನು ಹೊಂದಿತ್ತು.

ಟ್ರೇಡ್ ವರದಿಗಳ ಪ್ರಕಾರ, ‘ರಾಯನ್‌’ ಕೇವಲ ಎರಡು ದಿನಗಳಲ್ಲಿ ವಿಶ್ವಾದ್ಯಂತ 50 ಕೋಟಿ ರೂಪಾಯಿಗಳನ್ನು ದಾಟಿದೆ. ಮುಂಬರುವ ವಾರದಲ್ಲಿ 100 ಕೋಟಿ ರೂ, ಕಲೆಕ್ಷನ್‌ ಮಾಡಲಿದೆ ಎಂದು ವರದಿಯಾಗಿದೆ.

ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ಎಸ್‌ಜೆ ಸೂರ್ಯ, ಪ್ರಕಾಶ್ ರಾಜ್, ದುಶಾರ ವಿಜಯನ್ ಮತ್ತು ಸೆಲ್ವರಾಘವನ್ ಪ್ರಮುಖ ಪಾತ್ರಗಳಲ್ಲಿ ಇದ್ದಾರೆ. ಚಿತ್ರವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ‘A’ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಸನ್ ಪಿಕ್ಚರ್ಸ್‌ಗಾಗಿ ಕಲಿನಿತಿ ಮಾರನ್ ನಿರ್ಮಿಸಿರುವ ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ, ಓಂ ಪ್ರಕಾಶ್ ಅವರ ಛಾಯಾಗ್ರಹಣ ಮತ್ತು ಪ್ರಸನ್ನ ಜಿಕೆ ಸಂಕಲನವಿದೆ.

ಇದನ್ನೂ ಓದಿ: Actor Dhanush: ಧನುಷ್‌ ಬರ್ತ್‌ಡೇ ಸ್ಪೆಷಲ್‌; ‘ಕುಬೇರ’ ಸಿನಿಮಾದಿಂದ ಲುಕ್‌ ಪೋಸ್ಟರ್‌ ಔಟ್‌!

ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ರಾಯನ್‌’ (Raayan). ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದರು. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ. ಧನುಷ್‌ ಕೊನೆಯದಾಗಿ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಕಾಣಿಸಿಕೊಂಡರು. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರದಲ್ಲಿ ಶಿವ ರಾಜ್‌ಕುಮಾರ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಮೂರ್ ಪ್ರಮುಖ ಪಾತ್ರಗಳಲ್ಲಿದ್ದರು.

ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.

Continue Reading
Advertisement
cm siddaramaiah mallikarjun kharge dk shivakumar
ಪ್ರಮುಖ ಸುದ್ದಿ6 mins ago

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

Carrie Fisher Iconic Golden Bikini Rs 1.46 Crore
ಸಿನಿಮಾ10 mins ago

Carrie Fisher: ಹಾಲಿವುಡ್‌ ಖ್ಯಾತ ನಟಿ ಧರಿಸಿದ ಬಿಕಿನಿ ಬರೋಬ್ಬರಿ 1.46 ಕೋಟಿ ರೂಪಾಯಿಗೆ ಹರಾಜು!

Drowned in river
ಬಾಗಲಕೋಟೆ13 mins ago

Drowned In River : ಆಟವಾಡುವಾಗ ಕೃಷ್ಣಾ ನದಿ ಹಿನ್ನೀರಿಗೆ ಬಿದ್ದ ಬಾಲಕಿ ಸಾವು; ಅಂಗಾಂಗ ದಾನ ಮಾಡಿ 6 ಜೀವ ಉಳಿಸಿದ ಬಾಲೆ

Gold Rate Today
ಚಿನ್ನದ ದರ38 mins ago

Gold Rate Today: ಮತ್ತೆ ಏರಿಕೆಯಾದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Arvind Kejriwal
ದೇಶ46 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

Dhruva Sarja``KD'' Sanjay Dutt First Look Out of
ಸ್ಯಾಂಡಲ್ ವುಡ್47 mins ago

Dhruva Sarja: ʻಕೆಡಿʼ ಚಿತ್ರದಿಂದ ಹೊರ ಬಿತ್ತು ಸಂಜಯ್ ದತ್ ಫಸ್ಟ್ ಲುಕ್; ಫ್ಯಾನ್ಸ್‌ ಫಿದಾ!

Actor Darshan case Vinod Raj said that he did not go to negotiations Renukaswamy family
ಕ್ರೈಂ58 mins ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬೆನ್ನಲ್ಲೇ ಸಂಧಾನಕ್ಕೆ ಹೋಗಿದ್ದಲ್ಲ ಎಂದ ವಿನೋದ್‌ ರಾಜ್‌ !

Road Accident
ಕಲಬುರಗಿ58 mins ago

Road Accident : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್‌; ಚೆಲ್ಲಾಪಿಲ್ಲಿಯಾಗಿ ಬಿದ್ದ ಇಬ್ಬರು ಸಾವು

Paris Olympics 2024
ಕ್ರೀಡೆ1 hour ago

Paris Olympics 2024: ಪ್ಯಾರಿಸ್‌ ಒಲಿಂಪಿಕ್ಸ್;‌ ಇಂದು ಭಾರತೀಯರ ಅಥ್ಲೀಟ್‌ಗಳ ಕಾದಾಟ ಏನೇನು? ಪದಕ ನಿಶ್ಚಿತ?

Stock Market
ವಾಣಿಜ್ಯ1 hour ago

Stock Market: ಭರ್ಜರಿಯಾಗಿಯೇ ಕಂಬ್ಯಾಕ್‌ ಮಾಡಿದ ಷೇರುಪೇಟೆ; ಸಾರ್ವಕಾಲಿಕ ಗರಿಷ್ಠ ಅಂಕಕ್ಕೆ ತಲುಪಿದ ಸೆನ್ಸೆಕ್ಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ18 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ20 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ22 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ23 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌