Vijayanagara News: ಹೊಸಪೇಟೆಯಲ್ಲಿ ಡೆಂಗ್ಯು ಜಾಗೃತಿ ಜಾಥಾ - Vistara News

ವಿಜಯನಗರ

Vijayanagara News: ಹೊಸಪೇಟೆಯಲ್ಲಿ ಡೆಂಗ್ಯು ಜಾಗೃತಿ ಜಾಥಾ

Vijayanagara News: ರಾಷ್ಟ್ರೀಯ ಡೆಂಗ್ಯು ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಸಹಯೋಗದಲ್ಲಿ ‘ಸಮುದಾಯದೊಂದಿಗೆ ಸೇರಿ ಡೆಂಗ್ಯು ನಿಯಂತ್ರಿಸೋಣ’ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಹೊಸಪೇಟೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ಜಾಗೃತಿ ಜಾಥಾ ಕಾರ್ಯಾಕ್ರಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ. ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

VISTARANEWS.COM


on

Dengue awareness rally in Hosapete
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ರಾಷ್ಟ್ರೀಯ ಡೆಂಗ್ಯು (Dengue) ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಸಹಯೋಗದಲ್ಲಿ ‘ಸಮುದಾಯದೊಂದಿಗೆ ಸೇರಿ ಡೆಂಗ್ಯು ನಿಯಂತ್ರಿಸೋಣ’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮ (Vijayanagara News) ಜರುಗಿತು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ಜಾಗೃತಿ ಜಾಥಾ ಕಾರ್ಯಾಕ್ರಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಡೆಂಗ್ಯು ಜ್ವರವನ್ನು ಜನರು ನಿರ್ಲಕ್ಷಿಸದೆ ಸೂಕ್ತವಾದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಡೆಂಗ್ಯು ಜ್ವರದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮಾರಣಾಂತಿಕವಾಗಬಹುದು. ಮುಂಗಾರು ಪೂರ್ವ, ಮುಂಗಾರು ಮತ್ತು ಮುಂಗಾರಿನ ನಂತರದ ಸಮಯದಲ್ಲಿ ಡೆಂಗ್ಯು ಸೊಳ್ಳೆಗಳ ಸಂತತಿಯು ತೀವ್ರ ಪ್ರಮಾಣದಲ್ಲಿದ್ದು, ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಶಂಕರನಾಯ್ಕ ಮಾತನಾಡಿ, ರೋಗಗಳು ಬಂದ ಮೇಲೆ ಚಿಕಿತ್ಸೆ ನೀಡುವ ಬದಲಿಗೆ ಬರುವ ಮುಂಚೆ ಅದರ ಮುಂಜಾಗ್ರತೆ ವಹಿಸುವುದು ಸೂಕ್ತ. ಜನರು ಮನೆಯಲ್ಲಿ ಶೇಖರಿಸಿದ ನೀರನ್ನು ಆಗಾಗ ಬದಲಾಯಿಸುತ್ತಿರಬೇಕು. ಈ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪಂಚಾಯಿತಿ ಮಟ್ಟದ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು ಹಾಗೂ ಡೆಂಗ್ಯು ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ ದೊಡ್ಡಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ, ಬೆಳಗಾವಿಯ ಡಾ. ಸಿದ್ದಲಿಂಗಯ್ಯ, ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದನ್ನೂ ಓದಿ: Virat Kohli: ಮಗಳು ವಮಿಕಾ ಕೂಡ ಕ್ರಿಕೆಟ್​ ಪ್ರಿಯೆ; ಬ್ಯಾಟಿಂಗ್​ ಅಚ್ಚುಮೆಚ್ಚು ಎಂದ ಕೊಹ್ಲಿ​

ಕರಪತ್ರ ವಿತರಣೆ

ಈಡೀಸ್ ಈಜಿಪ್ಟೆ ಸೊಳ್ಳೆಯ ಕಚ್ಚುವಿಕೆಯಿಂದ ಡೆಂಗ್ಯು ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಚ ನೀರಿನಲ್ಲಿ ಸಂತಾನಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ಮೂರಕ್ಕಿಂತ ಹೆಚ್ಚು ದಿನಗಳಿಂದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ತಕ್ಷಣವೇ ಆಶಾ, ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಿರಿ ಎನ್ನುವ ಮಾಹಿತಿಯ ಕರಪತ್ರಗಳನ್ನು ಇದೇ ವೇಳೆ ಸಾರ್ವಜನಿಕರಿಗೆ ವಿತರಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

Karnataka Weather Forecast: ವರಮಹಾಲಕ್ಷ್ಮಿ ಹಬ್ಬದ (Varamahalakshim Fest) ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಎಲ್ಲ ಸಾಧ್ಯತೆಯೂ ಇದೆ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
ಜಲಾವೃತಗೊಂಡ ಸರ್ಕಾರಿ ಪ್ರಾಥಮಿಕ ಶಾಲೆ.. ನಿಂತ ನೀರಲ್ಲೇ ಧ್ವಜಾರೋಹಣ ಮಾಡಿದ ಮಕ್ಕಳು
Koo

ಚಿಕ್ಕೋಡಿ: ಗುರುವಾರ ಸಂಜೆ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆ (Rain news) ಅಬ್ಬರ ಜೋರಾಗಿತ್ತು. ಚಿಕ್ಕೋಡಿ, ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಕಳೆದ ಒಂದು ವಾರದಿಂದ ವಿರಾಮ ನೀಡಿದ್ದ ಮಳೆ (karnataka weather Forecast) ಅಬ್ಬರಿಸಿತ್ತು.

ಶಾಲಾ ಆವರಣದಲ್ಲಿ ನಿಂತ ನೀರು

ರಾತ್ರಿ ಸುರಿದ ಮಳೆಯು ಅವಾಂತರವೇ ಸೃಷ್ಟಿಯಾಗಿದೆ. ಶಾಲಾ ಆವರಣದಲ್ಲಿ ನಿಂತ ನೀರಲ್ಲೇ ವಿದ್ಯಾರ್ಥಿಗಳು ಧ್ವಜಾರೋಹಣ ನೆರವೇರಿಸಿದರು. ಬಾಗಲಕೋಟೆಯ ಜಮಖಂಡಿಯ ಲಿಂಗದಕಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಇತ್ತ ನಿನ್ನೆ ಬುಧವಾರ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳೆಗಳು ಜಲಾವೃತಗೊಂಡಿತ್ತು. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗುಂಡಾ ಗ್ರಾಮ ಹೊಲಗಳಿಗೆ ಹಳ್ಳದ ನೀರು ನುಗ್ಗಿತ್ತು. ರೈತ ಬಸವರಾಜ್ ಎಂಬುವವರಿಗೆ ಸೇರಿದ ನಾಲ್ಕೈದು ಎಕರೆ ಜಮೀನು ಜಲಾವೃತಗೊಂಡಿದೆ. ಹಿರೆಹಳ್ಳ ಒಡೆದು ಜಮೀನಿಗೆ ನೀರು ನುಗ್ಗಿದ ಪರಿಣಾಮ ಬೋರ್ ವೆಲ್ ಪೈಪ್ ಗಳು ಸೇರಿ ಮೆಕ್ಕೆಜೋಳ ಬೆಳೆ ಕೊಚ್ಚಿ ಹೋಗಿದೆ. ಮಳೆಗಾಲದಲ್ಲಿ ಹಳ್ಳದ ಮೂಲಕ ಗಣಿ ತ್ಯಾಜ್ಯ ಸಹ ಹರಿದು ಬಂದು ಜಮೀನುಗಳಲ್ಲಿ ಶೇಕರಣೆ ಆಗುತ್ತಿದೆ. ಇದರಿಂದಾಗಿ ಭೂಮಿ ಬೆಳೆ ಬೆಳೆಯಲು ಯೋಗ್ಯ ಇಲ್ಲದಂತಾಗಿದೆ.

ಇತ್ತ ಭಾರಿ ಮಳೆಯಿಂದ ನಾಗಲಾಪುರ ಹಳ್ಳ ಮೈದುಂಬಿ ಹರಿಯುತ್ತಿದ್ದು, ನಾಗಲಾಪೂರ- ಬ್ಯಾಲಕುಂದಿ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದ 5 ಹಳ್ಳಿಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸೇತುವೆ ಮೇಲ್ಭಾಗದಲ್ಲಿ 7 ಅಡಿಗಳಷ್ಟು ಹರಿಯುತ್ತಿರುವ ನೀರಿನಿಂದಾಗಿ ನಾಗಲಾಪುರ, ನಾಗಲಾಪುರ ತಾಂಡಾ, ಬ್ಯಾಲಕುಂದಿ, ಗೊಲ್ಲರಹಳ್ಳಿ ಹಾಗೂ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಈ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ

ಶುಕ್ರವಾರದಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾಸನ, ಬಳ್ಳಾರಿ, ತುಮಕೂರು, ಮೈಸೂರು, ಕೊಡಗು ಜಿಲ್ಲೆಗಳಲ್ಲೂ ಪ್ರತ್ಯೇಕವಾಗಿ ಭಾರಿ ವರ್ಷಾಧಾರೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Tungabhadra Dam: ತುಂಗಭದ್ರಾ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಚುರುಕು

Tungabhadra Dam: ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ ಮುರಿದುಹೋಗಿರುವ 19ನೇ ನಂಬರ್‌ ಗೇಟ್ ಅನ್ನು ಮತ್ತೆ ಅಳವಡಿಸುವ ಕಾರ್ಯ ಆರಂಭವಾಗಿದೆ. ಇದೀಗ ಕ್ರೇನ್ ಮೂಲಕ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅನ್ನು ಅಳವಡಿಸಲು ಜಿಂದಾಲ್ ಎಂಜಿನಿಯರ್‌ಗಳು ಮುಂದಾಗಿದ್ದಾರೆ. 5 ಎಲಿಮೆಂಟ್‌ಗಳ ಜೋಡಿಸಲು ಯೋಜನೆ ರೂಪಿಸಲಾಗಿದ್ದು, ತಲಾ ಒಂದು ಎಲಿಮೆಂಟ್ ಅಳವಡಿಕೆಯಿಂದ 25 ಟಿಎಂಸಿ ನೀರು ತಡೆಯಲು ಸಾಧ್ಯವಿದೆ.

VISTARANEWS.COM


on

Tungabhadra Dam
Koo

ವಿಜಯನಗರ: ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ (Tungabhadra Dam) ಮುರಿದುಹೋಗಿರುವ 19ನೇ ನಂಬರ್‌ ಗೇಟ್ ಅನ್ನು ಮತ್ತೆ ಅಳವಡಿಸುವ ಕಾರ್ಯ ಡ್ಯಾಂ ಸುರಕ್ಷತಾ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಆರಂಭವಾಗಿದೆ. ಇದೀಗ ಕ್ರೇನ್ ಮೂಲಕ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅನ್ನು ಅಳವಡಿಸಲು ಜಿಂದಾಲ್ ಎಂಜಿನಿಯರ್‌ಗಳು ಮುಂದಾಗಿದ್ದಾರೆ.

5 ಎಲಿಮೆಂಟ್‌ಗಳ ಜೋಡಿಸಲು ಯೋಜನೆ ರೂಪಿಸಲಾಗಿದ್ದು, ತಲಾ ಒಂದು ಎಲಿಮೆಂಟ್ ಅಳವಡಿಕೆಯಿಂದ 25 ಟಿಎಂಸಿ ನೀರು ತಡೆಯಲು ಸಾಧ್ಯವಿದೆ. ಈ ಸಂಬಂಧ ನೂರಾರು ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾರೆ. ಇಂದು ಮಳೆ ಕೊಂಚ ಬಿಡುವು ನೀಡಿದ್ದು, ಕಾಮಗಾರಿಗೆ ಅನುಕೂಲವಾಗಿ ಪರಿಣಮಿಸಿದೆ.

13ರಿಂದ 14 ಟನ್ ತೂಕದ ತಾತ್ಕಾಲಿಕ ಗೇಟ್ ಹಾಕಿ ಡ್ಯಾಂ ನೀರು ತಡೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ತುಂಡಾಗಿರುವ ಗೇಟ್ ಬಳಿ ಇರುವ ಚೈನ್ ಲಿಂಕ್ ಜೋಡನೆಯನ್ನು ತಂತ್ರಜ್ಞರು ಆರಂಭಿಸಿದ್ದಾರೆ. ಗೇಟ್‌ನಲ್ಲಿ ಸಿಲುಕಿದ್ದ ಕಟ್ ಆಗಿರೋ ಚೈನ್ ಲಿಂಕ್ ತೆರವು ಕಾರ್ಯವೂ ಪ್ರಗತಿಯಲ್ಲಿದೆ. ಡ್ಯಾಂ ಸಿಬ್ಬಂದಿ ಕ್ರೇನ್ ಮೂಲಕ ಹಳೆ ಚೈನ್ ಲಿಂಕ್ ತೆರವು ಮಾಡಲು ಮಂದಾಗಿದ್ದಾರೆ.

ತಪ್ಪಿದ ದುರಂತ

ಜಲಾಶಯದ ಮೇಲ್ಬಾಗಕ್ಕೆ ಗುರುವಾರ ಗೇಟ್ ರವಾನಿಸಲಾಗುತ್ತಿದ್ದು, ಟ್ರಕ್‌ನಿಂದ ಪ್ಲೇಟ್‌ಗಳನ್ನು ಇಳಿಸುವಾಗ ಒಮ್ಮೆ ಬ್ಯಾಲೆನ್ಸ್ ತಪ್ಪಿತ್ತು. ಅದೃಷ್ಟವಶಾತ್ ಯಾವುದೇ ಸಮಸ್ಯೆಯಾಗಲಿಲ್ಲ. ನಂತರ ಕ್ರೇನ್ ಮೂಲಕ ಬೆಲ್ಟ್ ಹಾಕಿ ಕಬ್ಬಿಣ ಪೇಲ್ಟ್‌ಗಳನ್ನು ಜಲಾಶಯದ ಮೇಲ್ಭಾಗಕ್ಕೆ ಸಾಗಿಸಲಾಯಿತು.

ಪ್ರವೇಶವಿಲ್ಲ

78ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯ ವೀಕ್ಷಣೆಗೆ ಬಂದ ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಜಲಾಶಯ ಗೇಟ್ ಕಿತ್ತು ಹೋಗಿರುವುದರಿಂದ ಮತ್ತು ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಜಲಾಶಯ ವೀಕ್ಷಣೆಗೆ ಬಂದವರು ರಾಷ್ಟ್ರೀಯ ಹೆದ್ದಾರಿ ಮೇಲೆ ಕಿಕ್ಕಿರಿದು ಸೇರಿದ್ದಾರೆ. ಕಾರು, ಬೈಕ್ ಕಾಲ್ನಡಿಗೆ ಮೂಲಕ ಬಂದ ಪ್ರವಾಸಿಗರು ರಸ್ತೆ ಬದಿ ನಿಂತೇ ಜಲ ವೈಭವವನ್ನು ಕಣ್ತುಂಬಿ ಕೊಳ್ಳುತ್ತಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಪ್ರವಾಸಿಗರು ನಿಂತಿರುವ ಕಾರಣ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ವಾಹನಗಳು ವೇಗವಾಗಿ ಬರುತ್ತಿರುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಯೂ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರವಾಸಿಗರನ್ನ ನಿಯಂತ್ರಿಸಲು ಪೊಲೀಸರು ಹರ ಸಾಹಸ ಪಡುವಂತಾಗಿದೆ.

ದುರ್ದೈವದ ಸಂಗತಿ

ರಾಯಚೂರು: ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್‌ ಗೇಟ್‌ ಕಟ್ ಆಗಿದ್ದು ಬಹಳ ದುರ್ದೈವದ ವಿಷಯ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ರಾಯಚೂರಿನಲ್ಲಿ ಹೇಳಿದ್ದಾರೆ. ʼʼಈ ಬಾರಿ ನಮ್ಮ ಡ್ಯಾಂ ಸಂಪೂರ್ಣವಾಗಿ ತುಂಬಿತ್ತು. ಆದರೆ ಗೇಟ್ ತುಂಡಾಗಿರೋದರಿಂದ ನೀರನ್ನ ಬೀಡಬೇಕಾಗಿದೆ. ಆ ಗೇಟ್‌ನ ರಿಪೇರಿ ಕಾರ್ಯ ಕೂಡ ನಡೆಯುತ್ತಿದೆ‌. ನಾನು ಕೂಡ ಅಲ್ಲಿಯೇ ಹೋಗಿ ಮಾರ್ನಿಟರ್ ಮಾಡುತ್ತೇನೆʼʼ ಎಂದು ತಿಳಿಸಿದ್ದಾರೆ.

ʼʼಹವಾಮಾನ ಇಲಾಖೆಯ ಪ್ರಕಾರ ಆಗಸ್ಟ್‌ ಕೊನೆಯ ವಾರದಲ್ಲಿ ಮಳೆಯಾಗುವ ಅಂದಾಜಿದೆ. ಅದರಿಂದ ಮತ್ತೆ ನಮ್ಮ ಡ್ಯಾಂ ತುಂಬುತ್ತೆ ಅನ್ನೋ ನೀರಿಕ್ಷೆಯಿದೆ. ಸದ್ಯಕ್ಕೆ ರೈತರಿಗೆ ಆತಂಕ ಕಾಡೋದು ಸಹಜ. ಮಳೆಯಾದ್ರೆ ಮತ್ತೊಮ್ಮೆ ಡ್ಯಾಂ ತುಂಬುತ್ತೆ ಎನ್ನುವ ನಿರೀಕ್ಷೆ ಇಟ್ಟುಕೊಳ್ಳೋಣ. ಗೇಟ್‌ ತುಂಡಾಗಲು ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಅವರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ಇದರ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. 105 ಟಿಎಂಸಿ ತುಂಬಿರುವ ಡ್ಯಾಂನಿಂದ ಅರ್ಧ ನೀರು ಖಾಲಿ ಮಾಡಬೇಕಿದ್ದು, ಈ ಬಗ್ಗೆ ನಮಗೂ ಬೇಸರವಿದೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Tungabhadra Dam: ನೀರಿನ ರಭಸದ ನಡುವೆಯೇ ಇಂದಿನಿಂದ ಗೇಟ್‌ ಅಳವಡಿಸುವ ಕಾರ್ಯ; ತಜ್ಞ ಕನ್ನಯ್ಯ ನಾಯ್ಡು ಸಾಹಸ

Continue Reading

ಪ್ರಮುಖ ಸುದ್ದಿ

Tungabhadra Dam: ನೀರಿನ ರಭಸದ ನಡುವೆಯೇ ಇಂದಿನಿಂದ ಗೇಟ್‌ ಅಳವಡಿಸುವ ಕಾರ್ಯ; ತಜ್ಞ ಕನ್ನಯ್ಯ ನಾಯ್ಡು ಸಾಹಸ

Tungabhadra Dam: ಕನ್ನಯ್ಯ ನಾಯ್ಡು ಅವರ ಪ್ರಯತ್ನದಿಂದ ನೀರು ಉಳಿಯುವ ಭರವಸೆ ಮೂಡಿದೆ. ಪರಿಣಿತರಾದ ಕನ್ನಯ್ಯ ನಾಯ್ಡು ಅವರಿಂದ ನೀರು ಉಳಿಸುವ ಪ್ರಯತ್ನ ನಡೆದಿದ್ದು, ಬಳ್ಳಾರಿಯ ಜಿಂದಾಲ್‌ನಿಂದ ಬೃಹತ್‌ ಯಂತ್ರಗಳು ಬಂದಿವೆ. ಹೊಸಪೇಟೆಯ ನಾರಾಯಣ ಎಂಜಿನಿಯರ್ಸ್, ಹೊಸಳ್ಳಿಯ ಹಮೀದ್ ಎಂಜನಿಯರ್ಸ್‌ಗಳಲ್ಲಿ ಗೇಟ್‌ ರೆಡಿ ಮಾಡಲಾಗಿದೆ.

VISTARANEWS.COM


on

cm siddaramaiah tungabhadra dam
Koo

ವಿಜಯನಗರ: ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ (Tungabhadra Dam) ಮುರಿದುಹೋಗಿರುವ 19ನೇ ನಂಬರ್‌ ಗೇಟ್ (19 gate crash) ಅನ್ನು ಮತ್ತೆ ಅಳವಡಿಸುವ ಕಾರ್ಯ ಇಂದಿನಿಂದಲೇ ಆರಂಭವಾಗುತ್ತಿದೆ. ಡ್ಯಾಂ ಇಂಜಿನಿಯರ್ ಕನ್ನಯ್ಯ ನಾಯ್ಡು ಅವರ ತಂಡ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ನೀರು ಇರುವಾಗಲೇ ಗೇಟ್ ಅಳವಡಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ನಿನ್ನೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

ನೀರು ಇರುವಾಗ ಶಟರ್‌ಗಳನ್ನು ಹೇಗೆ ಸೆಟ್ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿರುವ ಕನ್ನಯ್ಯ ನಾಯ್ಡು ಆ್ಯಂಡ್ ಟೀಂ 20 ಅಡಿ ಅಗಲ, 12 ಅಡಿ ಉದ್ದದ ಕಟ್ ಮಾಡಿ ರೆಡಿ ಇರಿಸಿಕೊಂಡಿದೆ. ಈಗ ಗೇಟ್ ಮುಚ್ಚಿದರೆ ಜಲಾಶಯದಲ್ಲಿ ಸಾಕಷ್ಟು ನೀರು ಉಳಿಸಿಕೊಳ್ಳಬಹುದು. ಇಲ್ಲವಾದರೆ ಸುಮಾರು 60 ಟಿಎಂಸಿಯಷ್ಟು ನೀರು ವ್ಯರ್ಥವಾಗಿ ಹರಿದುಹೋಗಲಿದೆ.

ಕನ್ನಯ್ಯ ನಾಯ್ಡು ಅವರ ಪ್ರಯತ್ನದಿಂದ ನೀರು ಉಳಿಯುವ ಭರವಸೆ ಮೂಡಿದೆ. ಪರಿಣಿತರಾದ ಕನ್ನಯ್ಯ ನಾಯ್ಡು ಅವರಿಂದ ನೀರು ಉಳಿಸುವ ಪ್ರಯತ್ನ ನಡೆದಿದ್ದು, ಬಳ್ಳಾರಿಯ ಜಿಂದಾಲ್‌ನಿಂದ ಬೃಹತ್‌ ಯಂತ್ರಗಳು ಬಂದಿವೆ. ಹೊಸಪೇಟೆಯ ನಾರಾಯಣ ಎಂಜಿನಿಯರ್ಸ್, ಹೊಸಳ್ಳಿಯ ಹಮೀದ್ ಎಂಜನಿಯರ್ಸ್‌ಗಳಲ್ಲಿ ಗೇಟ್‌ ರೆಡಿ ಮಾಡಲಾಗಿದೆ.

ಕನ್ನಯ್ಯ ನಾಯ್ಡು ಹೇಳಿದ್ದೇನು?

ಕ್ರೆಸ್ಟ್‌ ಪರಿಣತ ಎಂದೇ ಖ್ಯಾತಿ ಪಡೆದಿರುವ ಹಿರಿಯ ತಜ್ಞ ಕನ್ನಯ್ಯ ನಾಯ್ಡು ಸ್ಥಳದಲ್ಲಿದ್ದು, ಒಟ್ಟಾರೆ ಕಾರ್ಯಾಚರಣೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ. ಸಿಎಂ ಆಗಮನಕ್ಕೂ ಮುನ್ನವೇ ಜಲಾಶಯಕ್ಕೆ ಆಗಮಿಸಿದ್ದ ಕನ್ನಯ್ಯ ನೇತೃತ್ವದ ತಜ್ಞರ ತಂಡ ಅದರ ಪರಿಶೀಲನೆ ನಡೆಸಿತ್ತು.

ಕ್ರೆಸ್ಟ್ ತಜ್ಞ ಅಂತಲೇ ಪ್ರಖ್ಯಾತಿ ಹೊಂದಿರೋ ಕನ್ಹಯ್ಯ ನಾಯ್ಡು ಹೇಳಿರುವ ಪ್ರಕಾರ, ಒಂದೇ ಬಾರಿ ಇಷ್ಟೊಂದು ದೊಡ್ಡ ಪ್ರಮಾಣದ ನೀರು ನಿಲ್ಲಿಸುವುದು ಕಷ್ಟ. 48 ಟನ್ ಭಾರದ ಗೇಟ್ ಒಂದೇ ಬಾರಿಗೆ ಇಳಿಸುವುದು ಕಷ್ಟ. ಒಟ್ಟು ಐವತ್ತು ಟನ್ ಭಾರದ ಕಬ್ಬಿಣದ ಗೇಟ್‌ನಲ್ಲಿ ಐದು ಪೀಸ್‌ಗಳನ್ನು ಒಂದೊಂದಾಗಿ ಇಳಿಸಬೇಕು. ಮೂರು ನಾಲ್ಕು ಕಡೆ ಗೇಟ್ ನಿರ್ಮಾಣವಾಗುತ್ತಿದೆ.

ನಾಳೆಯಿಂದ ಒಂದೊಂದೇ ಪೀಸ್‌ಗಳನ್ನು ಕೂರಿಸುತ್ತೇವೆ. ಭಗವಂತನ ಮೇಲೆ ಭಾರ ಹಾಕಿ ಕೆಲಸ ಪ್ರಾರಂಭ ಮಾಡುತ್ತೇವೆ. ನೀರು ಉಳಿಸುವ ಎಲ್ಲಾ ಪ್ರಯತ್ನ ಮಾಡುತ್ತೇವೆ. ಗೇಟ್ ಆಯುಷ್ಯ ಸುಮಾರು 40 ವರ್ಷ ಇರುತ್ತದೆ. ಇದೀಗ ಜಲಾಶಯಕ್ಕೆ 70 ವರ್ಷವಾಗಿದೆ. ಉತ್ತಮವಾಗಿ ಎಲ್ಲ ರೀತಿಯ ಮೆಂಟೆನೆನ್ಸ್ ಮಾಡಿದ್ದೇವೆ. ಇದೀಗ ಹೊಸ ಪ್ರಯತ್ನ ಮಾಡಿ ನೀರು ನಿಲ್ಲಿಸುತ್ತೇವೆ. ಇದು ತಾತ್ಕಾಲಿಕ. ನೀರು ಕಡಿಮೆಯಾದ ಮೇಲೆ ‌ಮತ್ತೊಮ್ಮೆ ಗೇಟ್ ಕೂಡಿಸಬೇಕು ಎಂದು ಕನ್ನಯ್ಯ ನಿನ್ನೆ ತಿಳಿಸಿದ್ದರು.

ಸಿಎಂ ಹೇಳಿದ್ದೇನು?

“70 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗೇಟ್ ಒಡೆದಿದೆ. ನೀರಿನ ರಭಸಕ್ಕೆ ಗೇಟ್ ಕೊಚ್ಚಿ ಹೋಗಿದೆ. ಇದನ್ನು ಆಗಲೇ ತಯಾರು ಮಾಡಲಾಗ್ತಿದೆ. ನಾಳೆಯಿಂದ ಗೇಟ್ ಕೂಡಿಸೋ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಕನ್ನಯ್ಯ ನಾಯ್ಡು ಮತ್ತವರ ತಂಡದಿಂದ ಕಾರ್ಯ ನಡೆಯುತ್ತಿದೆ. ಬಹಳ ಅನುಭವಿ ಅವರು, ಅವರ ನೇತೃತ್ವದಲ್ಲಿ ನಾಳೆಯಿಂದ ತಾತ್ಕಾಲಿಕ ಗೇಟ್ ಕೂಡಿಸಲಾಗ್ತದೆ. ತಜ್ಞರ ಪ್ರಕಾರ 50 ವರ್ಷಕ್ಕೊಮ್ಮೆ ಗೇಟ್ ಬದಲಿಸಬೇಕು. ಇನ್ಮುಂದೆ ತಜ್ಞರು ಹೇಳಿದಂತೆ, ಜಲಾಶಯ ನಿರ್ವಹಣೆ ಮಾಡಲಾಗುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ನಿನ್ನೆ ಭೇಟಿಯ ಬಳಿಕ ಹೇಳಿದ್ದರು.

ಇದನ್ನೂ ಓದಿ: CM Siddaramaiah: ಬೆಂಗಳೂರಿನಲ್ಲಿ ಸಿಎಂ‌ ಸಿದ್ದರಾಮಯ್ಯಗೆ ಟೆನ್ಷನ್; ದೆಹಲಿಯಲ್ಲಿ ಡಿಕೆ‌ ಶಿವಕುಮಾರ್ ಲಾಬಿ

Continue Reading
Advertisement
Kannada New Movie
ಬೆಂಗಳೂರು4 hours ago

Kannada New Movie: ‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ; ರವಿ ಸಾರಂಗ ನಿರ್ದೇಶನದ ಈ ಚಿತ್ರಕ್ಕೆ ರಕ್ಷಿತ-ಪ್ರೇಮ್ ಸಾಥ್

Pralhad Joshi
ದೇಶ4 hours ago

Pralhad Joshi: ಭಾರತ-ಅರ್ಜೆಂಟೀನಾ; ಆಹಾರ ಹಂಚಿಕೆ ಹೆಚ್ಚಳ ಕುರಿತು ಸಚಿವ ಪ್ರಲ್ಹಾದ್‌ ಜೋಶಿ ಚರ್ಚೆ

PM Narendra Modi
ದೇಶ4 hours ago

PM Narendra Modi: ರಾಜತಾಂತ್ರಿಕ ಮಾತುಕತೆಯೇ ಸಂಘರ್ಷಕ್ಕೆ ಪರಿಹಾರ..ದೂರವಾಣಿ ಮೂಲಕ ಮೋದಿ- ನೆತನ್ಯಾಹು ಸಂಭಾಷಣೆ

Bureaucratic Reshuffle
ದೇಶ5 hours ago

Bureaucratic Reshuffle: ಆಡಳಿತಾತ್ಮಕ ಸುಧಾರಣೆಗೆ ಮೋದಿ ಗೇಮ್‌ ಪ್ಲಾನ್‌; ಉನ್ನತ ಮಟ್ಟದ ಅಧಿಕಾರಿಗಳ ಬದಲಾವಣೆ

Indian Paralympic Team
ಕ್ರೀಡೆ5 hours ago

Indian Paralympic Team: ಪದಕ ಬೇಟೆಗೆ ಹೊರಟ ಭಾರತೀಯ ಪ್ಯಾರಾಲಿಂಪಿಕ್ಸ್‌ ತಂಡಕ್ಕೆ ಬೀಳ್ಕೊಡುಗೆ

ICC Women's T20 World Cup
ಕ್ರೀಡೆ6 hours ago

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್‌ ಆತಿಥ್ಯಕ್ಕೆ ಮುಂದಾದ ಜಿಂಬಾಬ್ವೆ

Union Cabinet meeting
ದೇಶ6 hours ago

Union Cabinet Meeting: 2 ಏರ್‌ಪೋರ್ಟ್‌ ಅಭಿವೃದ್ಧಿ, 3 ಮೆಟ್ರೋ ರೈಲು ಯೋಜನೆಗಳಿಗೆ ಕೇಂದ್ರ ಅಸ್ತು

Money Guide
ಮನಿ-ಗೈಡ್6 hours ago

Money Guide: ಎಸ್‌ಐಪಿ-ಪಿಪಿಎಫ್; ಹಣ ಹೂಡಿಕೆಗೆ ಯಾವುದು ಬೆಸ್ಟ್?

CM Siddaramaiah
ಬೆಂಗಳೂರು6 hours ago

CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Shivamogga News
ಕರ್ನಾಟಕ6 hours ago

Shivamogga News: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌