1 ಲಕ್ಷ ಡ್ರೋನ್‌ ಗಳಿಗೆ ಬೇಡಿಕೆಯಾಗಲಿದೆ ಎಂದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯ - Vistara News

ವಾಣಿಜ್ಯ

1 ಲಕ್ಷ ಡ್ರೋನ್‌ ಗಳಿಗೆ ಬೇಡಿಕೆಯಾಗಲಿದೆ ಎಂದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯ

ಭಾರತದಲ್ಲಿ ಮುಂಬರುವ ವರ್ಷಗಳಲ್ಲಿ ಒಂದು ಲಕ್ಷ ಡ್ರೋನ್‌ ಗಳಿಗೆ ಬೇಡಿಕೆ ಸೃಷ್ಟಿಯಾಗಲಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಿಳಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಮುಂಬರುವ ಕೆಲ ವರ್ಷಗಳಲ್ಲಿ ಭಾರತದಲ್ಲಿ 1 ಲಕ್ಷ ಡ್ರೋನ್ ಪೈಲಟ್‌ಗಳಿಗೆ ಬೇಡಿಕೆ ಬರಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಮಂಗಳವಾರ ತಿಳಿಸಿದ್ದಾರೆ.‌

ಕೇಂದ್ರ ಸರಕಾರದ 12 ಸಚಿವಾಲಯಗಳು ಡ್ರೋನ್ ಸೇವೆ ಬೇಡಿಕೆ ಸೃಷ್ಟಿಸಲು ಕಾರ್ಯಪ್ರವೃತ್ತವಾಗಿವೆ. ಡ್ರೋನ್ ಸೇವೆಗಳ ವಿಕಾಸ ಕುರಿತ ನೀತಿಯನ್ನು ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ನೀತಿ ಆಯೋಗದ ಸಭೆಯಲ್ಲಿ ಸಿಂಧ್ಯಾ ಅವರು ತಿಳಿಸಿದರು.

ಡ್ರೋನ್ ಉತ್ಪಾದನೆಯನ್ನು ಉತ್ತೇಜಿಸುವ ದೃಷ್ಟಿಯಿಂದ 2022ರ ಸೆಪ್ಟೆಂಬರ್‌ನಿಂದ ಪಿಎಲ್‌ಐ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಮೂಲಕ ದ್ರೋನ್‌ ಕುರಿತ ನೀತಿಗಳನ್ನು ಉದಾರೀಕರಣಗೊಳಿಸಲಾಗಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಪಡೆದವರೂ (ಪಿಯುಸಿ) ಡ್ರೋನ್ ಪೈಲಟ್‌ಗಳಾಗಬಹದು. ಯಾವುದೇ ಕಾಲೇಜು ಪದವಿಯ ಅಗತ್ಯ ಇಲ್ಲ. 2-3 ತಿಂಗಳಿನ ತರಬೇತಿ ಪಡೆದರೆ ಮಾಸಿಕ 30,000 ವೇತನ ಗಳಿಸಬಹುದು ಎಂದು ತಿಳಿಸಿದರು. 2026ರ ವೇಳೆಗೆ ಭಾರತೀಯ ಡ್ರೋನ್ ವಲಯ 15,000 ಕೋಟಿ ರೂ. ವಹಿವಾಟು ನಡೆಸಲಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಕಡಿಮೆ ಅವಧಿಯಲ್ಲಿ 1 ಕೋಟಿ ರೂ. ಗಳಿಸುವುದು ಹೇಗೆ? ಇಲ್ಲಿದೆ ಹೂಡಿಕೆಯ ಲೆಕ್ಕಾಚಾರ

ಕಡಿಮೆ ಸಮಯದಲ್ಲಿ ಒಂದು ಕೋಟಿ ರೂಪಾಯಿ (Money Guide) ಗಳಿಸುವುದು ಅಸಾಧ್ಯವಲ್ಲ. ಇಲ್ಲಿ ಗಮನಿಸಬೇಕಾದ ಕೆಲವು ಪ್ರಮುಖ ಸಂಗತಿಗಳಿವೆ. ಅವುಗಳಲ್ಲಿ ಮುಖ್ಯವಾಗಿ ಅಗತ್ಯವಿರುವ ಹೂಡಿಕೆಯ ಮೊತ್ತವು ಅವಧಿ (duration) ಮತ್ತು ಹೂಡಿಕೆಯ ಮೇಲಿನ ಆದಾಯದ ಅಂದಾಜು ದರವನ್ನು (estimated rate) ಆಧರಿಸಿ ಗಮನಾರ್ಹವಾಗಿ ಬದಲಾಗುತ್ತದೆ ಎಂಬುದು ಕೂಡ ಗಮನಿಸಬೇಕು. 10, 15, ಮತ್ತು 20 ವರ್ಷಗಳಲ್ಲಿ 1 ಕೋಟಿ ರೂಪಾಯಿಗಳನ್ನು ತಲುಪಲು ಎಷ್ಟು ಹೂಡಿಕೆ ಅಗತ್ಯವಿದೆ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು.

VISTARANEWS.COM


on

By

Money Guide
Koo

ಕಡಿಮೆ ವರ್ಷಗಳಲ್ಲಿ ಕೋಟಿ ರೂಪಾಯಿ ಸಂಪಾದಿಸಬೇಕು ಎನ್ನುವ ಕನಸು (financial goal) ಎಲ್ಲರಿಗೂ ಇರುತ್ತದೆ. ಆದರೆ ದಾರಿಯ ಮೂಲ (Money Guide) ಯಾವುದು ಎಂಬುದು ಗೊತ್ತಿರುವುದಿಲ್ಲ. ಹೂಡಿಕೆದಾರರಲ್ಲಿ (Investment) ಹೆಚ್ಚಿನವರು 1 ಕೋಟಿ ರೂಪಾಯಿಗಳ ಆರ್ಥಿಕ ಗುರಿಯನ್ನು ಸಾಧಿಸಬೇಕು ಎಂದುಕೊಳ್ಳುತ್ತಾರೆ. ಇದಕ್ಕಾಗಿ ಅನೇಕ ಹೂಡಿಕೆದಾರರು ತಮ್ಮ ಹೂಡಿಕೆಯಲ್ಲಿ ಸ್ಥಿರತೆಗಾಗಿ ಶ್ರಮಿಸುತ್ತಾರೆ. ಆದರೂ ಬಹುತೇಕ ಸಂದರ್ಭದಲ್ಲಿ ವಿಫಲರಾಗುತ್ತಾರೆ.

ಇಲ್ಲಿ ಗಮನಿಸಬೇಕಾದ ಕೆಲವು ಪ್ರಮುಖ ಸಂಗತಿಗಳಿವೆ. ಅವುಗಳಲ್ಲಿ ಮುಖ್ಯವಾಗಿ ಅಗತ್ಯವಿರುವ ಹೂಡಿಕೆಯ ಮೊತ್ತವು ಅವಧಿ (duration) ಮತ್ತು ಹೂಡಿಕೆಯ ಮೇಲಿನ ಆದಾಯದ ಅಂದಾಜು ದರವನ್ನು (estimated rate) ಆಧರಿಸಿ ಗಮನಾರ್ಹವಾಗಿ ಬದಲಾಗುತ್ತದೆ ಎಂಬುದು ಕೂಡ ಗಮನಿಸಬೇಕು. 10, 15, ಮತ್ತು 20 ವರ್ಷಗಳಲ್ಲಿ 1 ಕೋಟಿ ರೂಪಾಯಿಗಳನ್ನು ತಲುಪಲು ಎಷ್ಟು ಹೂಡಿಕೆ ಅಗತ್ಯವಿದೆ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು.

10 ವರ್ಷಗಳಲ್ಲಿ 1 ಕೋಟಿ ರೂ. ಗಳಿಸಿ

ಕಡಿಮೆ ಸಮಯದಲ್ಲಿ ಒಂದು ಕೋಟಿ ರೂಪಾಯಿ ಗಳಿಸುವುದು ಕಷ್ಟವಲ್ಲ. ಇದಕ್ಕಾಗಿ ಹೂಡಿಕೆದಾರರು 10 ವರ್ಷಗಳಲ್ಲಿ 1 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲು ಮಾಸಿಕ ಆಧಾರದ ಮೇಲೆ ಗಮನಾರ್ಹ ಮೊತ್ತವನ್ನು ಉಳಿಸಬೇಕು. ಈಕ್ವಿಟಿ ಮ್ಯೂಚುವಲ್ ಫಂಡ್‌ಗಳು ಅಥವಾ ಸ್ಟಾಕ್‌ಗಳಲ್ಲಿ ಸಕ್ರಿಯ ಹೂಡಿಕೆ ಮಾಡುವ ಮೂಲಕ ಶೇ. 12ರಷ್ಟು ವಾರ್ಷಿಕ ಆದಾಯವನ್ನು ನಿರೀಕ್ಷಿಸಿದರೆ ತಿಂಗಳ ಹೂಡಿಕೆಯು ಸುಮಾರು 44,640 ರೂ. ಗಳಾಗಿರುತ್ತದೆ.

15 ವರ್ಷಗಳಲ್ಲಿ 1 ಕೋಟಿ ರೂ. ಗಳಿಸಿ

15 ವರ್ಷಗಳವರೆಗೆ ಯೋಜನೆಯು ಹೆಚ್ಚು ಪರಿಣಾಮಕಾರಿಯಾಗಿದೆ. ಶೇ. 12ರ ವಾರ್ಷಿಕ ಆದಾಯವನ್ನು ನಿರೀಕ್ಷಿಸಿದರೆ ಮಾಸಿಕ ಹೂಡಿಕೆಯು ತುಂಬಾ ಚಿಕ್ಕದಾಗಿದೆ. ಪ್ರತಿ ತಿಂಗಳು ಸುಮಾರು 21,020 ರೂ. ಉಳಿತಾಯ ಮಾಡಬೇಕಾಗುತ್ತದೆ. ಇದು ಮುಂಚಿತವಾಗಿ ಪ್ರಾರಂಭಿಸುವುದರ ಪ್ರಯೋಜನಗಳನ್ನು ಎತ್ತಿ ತೋರಿಸುತ್ತದೆ. ಹೂಡಿಕೆಗಳು ಹೆಚ್ಚು ಫಲ ನೀಡಲು ಹೆಚ್ಚಿನ ಸಮಯವನ್ನು ನೀಡುತ್ತದೆ.

20 ವರ್ಷಗಳಲ್ಲಿ 1 ಕೋಟಿ ರೂ. ಗಳಿಸಿ

ಸುದೀರ್ಘ ವರ್ಷದ ಹೂಡಿಕೆಯು ಮಾಸಿಕ ಹೂಡಿಕೆಯ ಅವಶ್ಯಕತೆಯು ಇನ್ನಷ್ಟು ಕಡಿಮೆಯಾಗುತ್ತದೆ. ದೀರ್ಘಾವಧಿಯ ಲಾಭವನ್ನು ಕೊಡುತ್ತದೆ. ಶೇ. 12 ವಾರ್ಷಿಕ ಆದಾಯದಲ್ಲಿ ಹೂಡಿಕೆದಾರರು 1 ಕೋಟಿ ರೂ. ಗುರಿಯನ್ನು ತಲುಪಲು ಪ್ರತಿ ತಿಂಗಳು ಸುಮಾರು 10,880 ರೂ. ಹೂಡಿಕೆ ಮಾಡಬೇಕಾಗುತ್ತದೆ.


ಹೂಡಿಕೆ ಶಿಸ್ತು ಬದ್ಧವಾಗಿರಲಿ

ನಿರ್ದಿಷ್ಟ ಗುರಿಯನ್ನು ತಲುಪಬೇಕಾದರೆ ಇದಕ್ಕಾಗಿ ಶಿಸ್ತುಬದ್ಧ ಹೂಡಿಕೆಯ ಅಗತ್ಯವಿರುತ್ತದೆ ಮತ್ತು ಆದಾಯವನ್ನು ಗರಿಷ್ಠಗೊಳಿಸಲು ಸರಿಯಾದ ಆಯ್ಕೆ ಮಾಡುವುದು ಕೂಡ ಮುಖ್ಯ. ಅದಕ್ಕಾಗಿ ಹೂಡಿಕೆದಾರರು ಮಾರುಕಟ್ಟೆಯ ಅಪಾಯಗಳ ಬಗ್ಗೆ ಜಾಗರೂಕರಾಗಿರಬೇಕು ಮತ್ತು ಅವರ ಹೂಡಿಕೆಯ ತಂತ್ರವು ಅವರ ಅಪಾಯ ಸಹಿಷ್ಣುತೆ ಮತ್ತು ಹಣಕಾಸಿನ ಗುರಿಗಳೊಂದಿಗೆ ಹೊಂದಿಕೆಯಾಗುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಹೂಡಿಕೆ ಪೋರ್ಟ್‌ಫೋಲಿಯೊವನ್ನು ವೈವಿಧ್ಯಗೊಳಿಸುವುದು ಮತ್ತು ನಿಯತಕಾಲಿಕವಾಗಿ ಪರಿಶೀಲಿಸುವುದು ಸಹ ಟ್ರ್ಯಾಕ್‌ನಲ್ಲಿ ಉಳಿಯಲು ನಿರ್ಣಾಯಕವಾಗಿದೆ.

ಇದನ್ನೂ ಓದಿ: Money Guide: ಹಿರಿಯ ನಾಗರಿಕರು ಮಾಸಿಕ 20,000 ರೂ. ಆದಾಯ ಗಳಿಸಲು ಈ ಯೋಜನೆಯಲ್ಲಿ ಹೂಡಿಕೆ ಮಾಡಿ

ಗಮನಿಸಬೇಕಾದ ಅಂಶಗಳು

ಸಂಪತ್ತು ಕ್ರೋಡೀಕರಣಕ್ಕೆ ಸ್ಥಿರವಾದ ಮತ್ತು ಶಿಸ್ತಿನ ಹೂಡಿಕೆಯು ನಿರ್ಣಾಯಕವಾಗಿರುವುದರಿಂದ ಸಾಧ್ಯವಾದಷ್ಟು ಬೇಗ ಹೂಡಿಕೆಯನ್ನು ಪ್ರಾರಂಭಿಸಿ.

ಈಕ್ವಿಟಿ ಮ್ಯೂಚುಯಲ್ ಫಂಡ್‌ಗಳಂತಹ ಸೂಕ್ತವಾದ ಹೂಡಿಕೆಯ ವಿಧಾನಗಳನ್ನು ಆಯ್ಕೆ ಮಾಡಿ. ಅದು ಹಣಕಾಸಿನ ಉದ್ದೇಶಗಳನ್ನು ಪೂರೈಸಲು ಅಗತ್ಯವಾದ ಆದಾಯವನ್ನು ನೀಡುತ್ತದೆ.

ಹೆಚ್ಚುವರಿಯಾಗಿ ನಿಯಮಿತವಾಗಿ ಹೂಡಿಕೆಗಳನ್ನು ಪರಿಶೀಲಿಸಬೇಕು ಮತ್ತು ಗುರಿಗಳು ಮತ್ತು ಅಪಾಯ ಸಹಿಷ್ಣುತೆಯೊಂದಿಗೆ ಹೊಂದಾಣಿಕೆಯನ್ನು ಕಾಪಾಡಿಕೊಳ್ಳಲು ಅವುಗಳನ್ನು ಸರಿಹೊಂದಿಸಬೇಕು.

ಇವುಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಅನ್ವಯಿಸುವುದರಿಂದ ಹೂಡಿಕೆದಾರರು ತಮ್ಮ ಆಯ್ಕೆ ಮಾಡಿದ ಕಾಲಮಿತಿಯೊಳಗೆ 1 ಕೋಟಿ ರೂ. ಅನ್ನು ಸಂಗ್ರಹಿಸುವುದು ಕಷ್ಟವಾಗುವುದಿಲ್ಲ.

Continue Reading

ದೇಶ

Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

Union Budget 2024: ಗೋಲ್ಡ್‌ಮನ್ ಅರ್ಥಶಾಸ್ತ್ರಜ್ಞರು ಸರ್ಕಾರವು ಮಧ್ಯಂತರ ಬಜೆಟ್‌ನಲ್ಲಿ ನಿಗದಿಪಡಿಸಿದ GDPಯ 5.1% ರಷ್ಟು ಹಣಕಾಸಿನ ಕೊರತೆಯ ಗುರಿಗೆ ಬದ್ಧವಾಗಿರುತ್ತದೆ ಎಂದು ನಿರೀಕ್ಷೆ ಇದೆ. ಕಾರ್ಮಿಕ-ತೀವ್ರ ಉತ್ಪಾದನೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ, ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ವಿಸ್ತರಿಸುವ ಮೂಲಕ ಸೇವಾ ರಫ್ತಿನ ಮೇಲೆ ನಿರಂತರ ಗಮನ ಮತ್ತು ದೇಶೀಯ ಆಹಾರ ಪೂರೈಕೆ ಸರಪಳಿಯ ಮೇಲೆ ಒತ್ತು ನೀಡುವುದರ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದನ್ನು ನಾವು ನೋಡುತ್ತೇವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಶಾಂತನು ಸೇನ್‌ಗುಪ್ತಾ ಉಲ್ಲೇಖಿಸಿದೆ.

VISTARANEWS.COM


on

Union Budget 2024
Koo

ಹೊಸದಿಲ್ಲಿ: ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಬಜೆಟ್‌ಗೆ (Union Budget 2024) ದಿನಾಂಕ ದಿನಗಣನೆ ಶುರುವಾಗಿದೆ. ಜುಲೈ 23ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿ ಬಜೆಟ್‌ ಉದ್ಯೋಗ ಸೃಷ್ಟಿ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಕೇಂದ್ರೀಕರಿಸುವ ಸಾಧ್ಯತೆ ಇದೆ ಎಂದು ಗೋಲ್ಡ್‌ಮ್ಯನ್‌ ಸ್ಯಾಚ್ಸ್‌ನ ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.

ಗೋಲ್ಡ್‌ಮನ್ ಅರ್ಥಶಾಸ್ತ್ರಜ್ಞರು ಸರ್ಕಾರವು ಮಧ್ಯಂತರ ಬಜೆಟ್‌ನಲ್ಲಿ ನಿಗದಿಪಡಿಸಿದ GDPಯ 5.1% ರಷ್ಟು ಹಣಕಾಸಿನ ಕೊರತೆಯ ಗುರಿಗೆ ಬದ್ಧವಾಗಿರುತ್ತದೆ ಎಂದು ನಿರೀಕ್ಷೆ ಇದೆ. ಕಾರ್ಮಿಕ-ತೀವ್ರ ಉತ್ಪಾದನೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ, ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ವಿಸ್ತರಿಸುವ ಮೂಲಕ ಸೇವಾ ರಫ್ತಿನ ಮೇಲೆ ನಿರಂತರ ಗಮನ ಮತ್ತು ದೇಶೀಯ ಆಹಾರ ಪೂರೈಕೆ ಸರಪಳಿಯ ಮೇಲೆ ಒತ್ತು ನೀಡುವುದರ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದನ್ನು ನಾವು ನೋಡುತ್ತೇವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಶಾಂತನು ಸೇನ್‌ಗುಪ್ತಾ ಉಲ್ಲೇಖಿಸಿದೆ.

ಈ ಬಾರಿ ಬಜೆಟ್‌ನಲ್ಲಿ ವಾಣಿಜ್ಯ ವಿಮಾನ ತಯಾರಿಕೆಯ ಜೊತೆಗೆ ಆಟಿಕೆಗಳು, ಜವಳಿ ಮತ್ತು ಉಡುಪುಗಳ ತಯಾರಿಕೆಯಂತಹ ಕೈಗಾರಿಕಾ ವಲಯಗಳಿಗೆ ಹಣಕಾಸಿನ ಪ್ರೋತ್ಸಾಹ ನೀಡುವ ನಿರೀಕ್ಷೆ ಇದೆ ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ:Gururaj Gantihole: ಬೈಂದೂರಿನ ನೆರೆ ಸಂತ್ರಸ್ತ ಪ್ರದೇಶಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ; ಪರಿಹಾರ ನೀಡಲು ಸೂಚನೆ

Continue Reading

ಕರ್ನಾಟಕ

Gold Rate Today: ಬಂಗಾರ ಖರೀದಿಸುವ ಪ್ಲ್ಯಾನ್‌ ಇದೆಯೇ? ಚಿನ್ನದ ದರ ಹೀಗಿದೆ ನೋಡಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,745 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,358 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,960, 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,450 ಮತ್ತು ₹ 6,74,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,864 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,580 ಮತ್ತು ₹ 7,35,800 ವೆಚ್ಚವಾಗಲಿದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರ ಇಂದು ಇಳಿಕೆ ಕಂಡಿದೆ (Gold Rate Today). 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 20ರೂ ಇಳಿಕೆ ಆಗಿದ್ದು, ಸ್ವರ್ಣ ಪ್ರಿಯರಿಗೆ ಸ್ವಲ್ಪ ಸಮಾಧಾನವಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,745 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,358 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,960, 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,450 ಮತ್ತು ₹ 6,74,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,864 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,580 ಮತ್ತು ₹ 7,35,800 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,760₹ 7,373
ಮುಂಬೈ₹ 6,745₹ 7,358
ಬೆಂಗಳೂರು₹ 6,745₹ 7,358
ಚೆನ್ನೈ₹ 6,800₹ 7,418

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 94.50 ಹಾಗೂ 8 ಗ್ರಾಂಗೆ ₹ 756 ಇದೆ. 10 ಗ್ರಾಂಗೆ ₹ 945 ಹಾಗೂ 1 ಕಿಲೋಗ್ರಾಂಗೆ ₹ 94,500 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Continue Reading

ಬಜೆಟ್ 2024

Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜುಲೈ 15ರಿಂದ 22ರ ಅವಧಿಯ ನಡುವೆ ಬಜೆಟ್‌ (Union Budget 2024) ಮಂಡಿಸಲು ಸಿದ್ಧತೆ ನಡೆಸಿದ್ದು, ಈ ಸಂದರ್ಭದಲ್ಲಿ ಭಾರತದ ಕೇಂದ್ರ ಬಜೆಟ್ ಬಗ್ಗೆ ತಿಳಿದುಕೊಳ್ಳಬೇಕಾದ ಹತ್ತು ಪ್ರಮುಖ ಆಸಕ್ತಿದಾಯಕ ಸಂಗತಿಗಳಿವೆ. ಅವುಗಳ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Union Budget 2024
Koo

ಲೋಕಸಭೆ ಚುನಾವಣೆ (lok sabha election) ಬಳಿಕ ಮೊದಲ ಬಾರಿಗೆ ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟವು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನೇತೃತ್ವದಲ್ಲಿ ಮೊದಲ ಬಜೆಟ್ (Union Budget 2024) ಮಂಡಿಸಲಿದೆ. ಜುಲೈ 15ರಿಂದ 22ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಕೇಂದ್ರ ಬಜೆಟ್ ಮಂಡನೆಯಾಗಲಿರುವ ಈ ಸಂದರ್ಭದಲ್ಲಿ ತಿಳಿದುಕೊಳ್ಳಬೇಕಾದ 10 ಆಸಕ್ತಿದಾಯಕ ಸಂಗತಿಗಳಿವೆ.

ಬಜೆಟ್ ಎಂಬ ಪದವು ಫ್ರೆಂಚ್ ಪದ ‘ಬೌಗೆಟ್’ನಿಂದ ಬಂದಿದೆ. ಇದರ ಅರ್ಥ ಸಣ್ಣ ಚೀಲ ಅಥವಾ ಚೀಲ ಎಂಬುದಾಗಿದೆ. ಸ್ವತಂತ್ರ ಪೂರ್ವ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಜೆಟ್ ಮಂಡಿಸಿದ್ದು ಜೇಮ್ಸ್ ವಿಲ್ಸನ್. ಭಾರತೀಯ ಕೌನ್ಸಿಲ್‌ನ ಹಣಕಾಸು ಸಚಿವರಾಗಿ ನೇಮಕಗೊಂಡ ಅವರು ಭಾರತೀಯ ವೈಸ್‌ರಾಯ್‌ಗೆ ಬಜೆಟ್ ಕುರಿತು ಸಲಹೆ ನೀಡಿದರು.

1860ರಲ್ಲಿ ಭಾರತದ ಮೊದಲ ಬಜೆಟ್ ಮಂಡನೆಯಾಗಿತ್ತು. ಸ್ಕಾಟಿಷ್ ಉದ್ಯಮಿಯಾಗಿದ್ದ ಜೇಮ್ಸ್ ವಿಲ್ಸನ್ ವ್ಯಾಪಾರ ಮತ್ತು ಹಣಕಾಸಿನ ಬಗ್ಗೆ ಅಪಾರ ತಿಳಿವಳಿಕೆ ಹೊಂದಿದ್ದರು. ಪ್ರಸಿದ್ಧ ಪತ್ರಿಕೆಯಾದ ದಿ ಎಕನಾಮಿಸ್ಟ್ ಮತ್ತು ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್‌ನ ಸಂಸ್ಥಾಪಕರಾಗಿದ್ದ ಅವರು ಬ್ರಿಟಿಷ್ ಸಂಸತ್ತಿನ ಸದಸ್ಯರಾಗಿದ್ದರು ಮತ್ತು ಯುಕೆ ಖಜಾನೆಯ ಹಣಕಾಸು ಕಾರ್ಯದರ್ಶಿ ಮತ್ತು ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿದ್ದರು.


ಕೇಂದ್ರ ಬಜೆಟ್‌ನ 10 ಪ್ರಮುಖ ಸಂಗತಿಗಳು

1. ಮೊದಲ ಬಜೆಟ್‌ ಮಂಡಿಸಿದ್ದು ಯಾರು?

ಸ್ವತಂತ್ರ ಭಾರತದ ಮೊದಲ ವಾರ್ಷಿಕ ಬಜೆಟ್ ಅನ್ನು ಆರ್.ಕೆ. ಷಣ್ಮುಖಂ ಚೆಟ್ಟಿಯವರು 1948ರ ಫೆಬ್ರವರಿ 28ರಂದು ಮಂಡಿಸಿದರು. ದೇಶ ಸ್ವತಂತ್ರಗೊಂಡ ಮೂರು ತಿಂಗಳ ಅನಂತರ ದೇಶದ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ 1947ರ ನವೆಂಬರ್ 26ರಂದು ಮಧ್ಯಂತರ ಬಜೆಟ್ ಮಂಡಿಸಲಾಯಿತು. ಇದು ಕೇವಲ ನಾಲ್ಕು ತಿಂಗಳವರೆಗೆ ಊರ್ಜಿತವಾಗಿತ್ತು.
ಪ್ರಧಾನಿಯೊಬ್ಬರು ಇದುವರೆಗೆ ಮೂರು ಬಾರಿ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಪಂಡಿತ್ ಜವಾಹರಲಾಲ್ ನೆಹರು ಅವರು 1958ರಲ್ಲಿ, ಪ್ರಧಾನಿ ಇಂದಿರಾ ಗಾಂಧಿ ಅವರು 1970ರಲ್ಲಿ ಬಜೆಟ್ ಮಂಡಿಸಿದರು. ಅನಂತರ ರಾಜೀವ್ ಗಾಂಧಿ ಅವರು 1987ರಲ್ಲಿ ಬಜೆಟ್ ಮಂಡಿಸಿದ್ದಾರೆ.

2. ಅತಿ ಉದ್ದದ ಬಜೆಟ್ ಭಾಷಣ ಯಾರದ್ದು?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2020ರಲ್ಲಿ ಅತಿ ಉದ್ದದ ಬಜೆಟ್ ಭಾಷಣ ಮಾಡಿದ ದಾಖಲೆಯನ್ನು ಹೊಂದಿದ್ದಾರೆ. ಇದು 2 ಗಂಟೆ 42 ನಿಮಿಷಗಳು. ಅವರು ಭಾರತದ ಮೊದಲ ಪೂರ್ಣ ಸಮಯದ ಮಹಿಳಾ ಹಣಕಾಸು ಮಂತ್ರಿಯೂ ಆಗಿದ್ದಾರೆ.


3. ಕಾಗದ ರಹಿತ ಬಜೆಟ್‌

ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ 2021ರಲ್ಲಿ ಬಜೆಟ್ ಕಾಗದರಹಿತವಾಯಿತು.

4. ಗರಿಷ್ಠ ಬಜೆಟ್‌ ಯಾರದ್ದು?

ಗರಿಷ್ಠ ಸಂಖ್ಯೆಯ ಬಜೆಟ್‌ಗಳನ್ನು ಮಂಡಿಸಿದ ಕೀರ್ತಿ ಮಾಜಿ ವಿತ್ತ ಸಚಿವ ಮೊರಾಜಿ ದೇಸಾಯಿ ಅವರಿಗೆ ಸಲ್ಲುತ್ತದೆ. ಅವರು ಒಟ್ಟು 10 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಅನಂತರ ಪಿ. ಚಿದಂಬರಂ ಅವರು 9 ಬಾರಿ, ಪ್ರಣಬ್ ಮುಖರ್ಜಿ ಮತ್ತು ಯಶವಂತ್ ಸಿನ್ಹಾ ಅವರು ತಲಾ 8 ಬಾರಿ ಮತ್ತು ಮನಮೋಹನ್ ಸಿಂಗ್ ಅವರು 6 ಬಾರಿ ಬಜೆಟ್ ಮಂಡಿಸಿದ್ದಾರೆ.

5. ಬಜೆಟ್‌ ಮಂಡನೆ ಸಮಯ ಬದಲಾವಣೆ

ಭಾರತದಲ್ಲಿ ಯಾವಾಗಲೂ ಸಂಜೆ 5 ಗಂಟೆಗೆ ಬಜೆಟ್ ಮಂಡಿಸಲಾಗುತ್ತಿತ್ತು. ಆಯವ್ಯಯ ಪತ್ರಗಳನ್ನು ಬ್ರಿಟಿಷ್ ಪಾರ್ಲಿಮೆಂಟ್‌ನಲ್ಲಿ ಮತ್ತು ಲಂಡನ್‌ನಲ್ಲಿ ಮಂಡನೆ ಮಾಡುವಂತೆ ಈ ಅಭ್ಯಾಸವು ಮೊದಲು ಪ್ರಾರಂಭವಾಯಿತು. 1999ರವರೆಗೂ ಇದು ಪಾಲನೆಯಾಗುತ್ತಿತ್ತು. ಆದರೆ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದರು. ಆ ಬಳಿಕ ಈಗ ಮಧ್ಯಾಹ್ನವೇ ಬಜೆಟ್‌ ಮಂಡಿಸಲಾಗುತ್ತದೆ.

6. ಬಜೆಟ್‌ ದಿನ ಬದಲಾವಣೆ

2017ನೇ ವರ್ಷವು ಕೇಂದ್ರ ಬಜೆಟ್‌ಗೆ ಸಂಬಂಧಿಸಿದ ಎರಡು ಪ್ರಮುಖ ಬದಲಾವಣೆಗಳನ್ನು ಗುರುತಿಸಿದೆ. ವಾರ್ಷಿಕ ಬಜೆಟ್ ಮಂಡನೆ ದಿನಾಂಕವನ್ನು ಫೆಬ್ರವರಿ 28ರಿಂದ ಫೆಬ್ರವರಿ 1ಕ್ಕೆ ಬದಲಾಯಿಸಲಾಯಿತು. ಏಪ್ರಿಲ್ 1ರಿಂದ ಪ್ರಾರಂಭವಾಗುವ ಹಣಕಾಸು ವರ್ಷದ ಆರಂಭದ ಮೊದಲು ಸರ್ಕಾರದ ವಿವಿಧ ಯೋಜನೆಗಳಿಗೆ ಹಣ ಹಂಚಿಕೆಗೆ ಎಲ್ಲಾ ಸಂಸತ್ತಿನ ಅನುಮೋದನೆಗಳು ಜಾರಿಯಲ್ಲಿವೆ ಎಂದು ಖಚಿತಪಡಿಸಿಕೊಳ್ಳಲು ಇದನ್ನು ಮಾಡಲಾಗಿದೆ. ಈ ಮೊದಲು ಫೆಬ್ರವರಿ 28 ಮತ್ತು ಹೊಸ ಹಣಕಾಸು ವರ್ಷ ಪ್ರಾರಂಭವಾಗಲು ಕೇವಲ ಒಂದು ತಿಂಗಳು ಬಾಕಿಯಿರುತ್ತಿತ್ತು. ಆಗ ಕೆಲವು ಅನುಮೋದನೆಗಳಿಗೆ ತೊಂದರೆಯಾಗುತ್ತಿತ್ತು. ರೈಲ್ವೆ ಬಜೆಟ್ ಅನ್ನು ಕೇಂದ್ರ ಬಜೆಟ್‌ನಲ್ಲಿ ವಿಲೀನಗೊಳಿಸಿದ ವರ್ಷವೂ ಇದೇ ಆಗಿತ್ತು.

7. ಮೊದಲ ಬಾರಿ ವೈಯಕ್ತಿಕ ತೆರಿಗೆ ಇಳಿಕೆ

ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಮಂಡಿಸಿದ 1997-98ರ ಬಜೆಟ್ ವೈಯಕ್ತಿಕ ಆದಾಯ ತೆರಿಗೆ ದರಗಳನ್ನು ಕಡಿಮೆ ಮಾಡಿದ ಮೊದಲ ಬಜೆಟ್ ಆಗಿದೆ. ಅಂದಿನಿಂದ ಸಣ್ಣಪುಟ್ಟ ಬದಲಾವಣೆಗಳನ್ನು ಹೊರತುಪಡಿಸಿ ಆ ದರಗಳು ಇನ್ನೂ ಬದಲಾಗದೆ ಹಾಗೇ ಉಳಿದಿವೆ.

8. ಮನಮೋಹನ್‌ ಸಿಂಗ್‌ ಐತಿಹಾಸಿಕ ಬಜೆಟ್‌

ಮನಮೋಹನ್ ಸಿಂಗ್ ಅವರ 1991ರ ಬಜೆಟ್ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಐತಿಹಾಸಿಕ ಬಜೆಟ್ ಆಗಿದೆ. ಇದು ಭಾರತೀಯ ಆರ್ಥಿಕತೆಯನ್ನು ಉದಾರೀಕರಣಗೊಳಿಸಿತು. ಇದು ಭಾರತವನ್ನು ಉನ್ನತ ಬೆಳವಣಿಗೆಯ ಹಾದಿಯಲ್ಲಿ ಕೊಂಡೊಯ್ಯಲು ಪ್ರೇರಣೆಯಾಯಿತು ಮತ್ತು ವಿದೇಶಿ ಸ್ಪರ್ಧೆಗೆ ಭಾರತೀಯ ಕಂಪನಿಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿತು.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್


9. ಹಲ್ವಾ ಸಮಾರಂಭ

ಪ್ರತಿ ವರ್ಷ ಹಣಕಾಸು ಸಚಿವರು ಬಜೆಟ್ ಮಂಡಿಸುವ ಒಂದು ವಾರದ ಮೊದಲು ‘ಹಲ್ವಾ ಸಮಾರಂಭ’ ನಡೆಯುತ್ತದೆ. ಬಜೆಟ್ ಮುದ್ರಿಸಿದ ಸ್ಥಳದಲ್ಲಿ ‘ಹಲ್ವಾ’ ತಯಾರಿಸಿ ಎಲ್ಲರಿಗೂ ಬಡಿಸಲಾಗುತ್ತದೆ. ವಿತ್ತ ಸಚಿವರು ಮತ್ತು ವಿತ್ತ ಸಚಿವಾಲಯದ ಎಲ್ಲಾ ಪ್ರಮುಖ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದು, ಶುಭ ಕಾರ್ಯದ ಆರಂಭವನ್ನು ಸೂಚಿಸುತ್ತಾರೆ. ಬಜೆಟ್ ಪೇಪರ್‌ಗಳ ಮುದ್ರಣಕ್ಕೆ ಹೋಗುವ ಮೊದಲು ಅಧಿಕಾರಿಗಳನ್ನು ಲಾಕ್ ಮಾಡಲಾಗುತ್ತದೆ. ಬಜೆಟ್ ಮಂಡನೆಯಾಗುವವರೆಗೆ ಬಜೆಟ್‌ನ ಮುದ್ರಣದಲ್ಲಿ ತೊಡಗಿರುವ ಎಲ್ಲ ಅಧಿಕಾರಿಗಳು ಹೊರ ಜಗತ್ತಿನೊಂದಿಗೆ ಯಾವುದೇ ಸಂವಹನವಿಲ್ಲದೆ ಹಣಕಾಸು ಸಚಿವಾಲಯದೊಳಗೆ ಬಂಧಿಯಾಗುತ್ತಾರೆ.

10. ಸೋರಿಕೆಯಾಗಿತ್ತು ಬಜೆಟ್‌ ಸಾರ

1950ರಲ್ಲಿ ಬಜೆಟ್ ಸೋರಿಕೆಯಾಯಿತು. ಅದರ ಅನಂತರ ಸರ್ಕಾರವು ಬಜೆಟ್‌ನ ಮುದ್ರಣವನ್ನು ರಾಷ್ಟ್ರಪತಿ ಭವನದಿಂದ ಮಿಂಟೋ ರಸ್ತೆಯಲ್ಲಿರುವ ಮುದ್ರಣಾಲಯಕ್ಕೆ ವರ್ಗಾಯಿಸಿತು. 1980ರಲ್ಲಿ ಇದನ್ನು ದೆಹಲಿಯ ರೈಸಿನಾ ರಸ್ತೆಯಲ್ಲಿರುವ ನಾರ್ತ್ ಬ್ಲಾಕ್‌ನಲ್ಲಿರುವ ಹಣಕಾಸು ಸಚಿವಾಲಯದ ನೆಲಮಾಳಿಗೆಯಲ್ಲಿರುವ ಸರ್ಕಾರಿ ಮುದ್ರಣಾಲಯಕ್ಕೆ ಸ್ಥಳಾಂತರಿಸಲಾಯಿತು.

Continue Reading
Advertisement
Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ4 mins ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Maharashtra Rain
Latest5 mins ago

Maharashtra Rain: ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ರಾಯಗಢ ಕೋಟೆಯಲ್ಲಿ ಪ್ರವಾಸಿಗರಿಗೆ ಪ್ರಾಣ ಸಂಕಟ; ವಿಡಿಯೊ ನೋಡಿ

Money Guide
ಮನಿ-ಗೈಡ್14 mins ago

Money Guide: ಕಡಿಮೆ ಅವಧಿಯಲ್ಲಿ 1 ಕೋಟಿ ರೂ. ಗಳಿಸುವುದು ಹೇಗೆ? ಇಲ್ಲಿದೆ ಹೂಡಿಕೆಯ ಲೆಕ್ಕಾಚಾರ

land fraud
ಕರ್ನಾಟಕ17 mins ago

land fraud: ಭೂ ವಂಚನೆ ತಡೆಗೆ ಪಹಣಿ-ಆಧಾರ್‌ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ

Golden Star Ganesh starring Krishnam Pranaya Sakhi movie releasing on 15th August
ಕರ್ನಾಟಕ22 mins ago

Kannada New Movie: ಗಣೇಶ್‌ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ʼಕೃಷ್ಣಂ ಪ್ರಣಯ ಸಖಿʼ

Heavy rain in coastal areas of Uttara Kannada district
ಉತ್ತರ ಕನ್ನಡ23 mins ago

Uttara Kannada News: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 12 ಕಾಳಜಿ ಕೇಂದ್ರಗಳಲ್ಲಿ 437 ಜನರಿಗೆ ಆಸರೆ

Sri Kyatha Lingeshwara Swamy new temple Inauguration on 13th August
ತುಮಕೂರು26 mins ago

Shira News: ಆ.13ರಂದು ಶ್ರೀ ಕ್ಯಾತಲಿಂಗೇಶ್ವರ ಸ್ವಾಮಿ ನೂತನ ದೇವಾಲಯದ ಜೀರ್ಣೋದ್ಧಾರ ಸಮಾರಂಭ

defrauding the government in Quarry Mine Royalty CM Siddaramaiah instructs for strict action
ಕರ್ನಾಟಕ28 mins ago

CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

New Medical Colleges
ಕರ್ನಾಟಕ31 mins ago

New Medical Colleges: ಕರ್ನಾಟಕಕ್ಕೆ 3 ಪದವಿಪೂರ್ವ ವೈದ್ಯಕೀಯ ಕಾಲೇಜು ಮಂಜೂರು; 350 ಸೀಟುಗಳು ಲಭ್ಯ

Jay Shah
ಕ್ರೀಡೆ35 mins ago

Jay Shah: ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ದಿಢೀರ್​ ರಾಜೀನಾಮೆ ನೀಡಲು ಮುಂದಾದ ಜಯ್ ಶಾ; ಕಾರಣವೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ3 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ5 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ8 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು9 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌