Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು? - Vistara News

ಸ್ಯಾಂಡಲ್ ವುಡ್

Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

ಕ್ರಶ್ಡ್‌ ಅನಾರ್ಕಲಿ ಗೌನ್‌ನಲ್ಲಿ (Actress Fashion) ಕಾಣಿಸಿಕೊಂಡಿರುವ ನಟಿ ಮಿಲನಾ ನಾಗರಾಜ್‌ ಟ್ರೆಡಿಷನಲ್‌ ಲುಕ್‌ನಲ್ಲಿ ಆಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಅಂದ ಹಾಗೆ, ಇವರು ಧರಿಸಿರುವ ಅನಾರ್ಕಲಿ ಗೌನ್‌ ವಿಶೇಷತೆ ಏನು? ಇಲ್ಲಿದೆ ಒಂದಿಷ್ಟು ಟಿಪ್ಸ್.

VISTARANEWS.COM


on

Milana Nagaraj Anarkali border gown worn
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು

ಕ್ರಶ್ಡ್‌ ಅನಾರ್ಕಲಿ ಗೌನ್‌ನಲ್ಲಿ (Actress Fashion) ಆಕರ್ಷಕವಾಗಿ ಕಾಣಿಸಿಕೊಂಡಿರುವ ನಟಿ ಮಿಲನಾ ನಾಗರಾಜ್‌ ಟ್ರೆಡಿಷನಲ್‌ ಲುಕ್‌ನಲ್ಲಿ ಮಹಿಳೆಯರ ಗಮನ ಸೆಳೆದಿದ್ದಾರೆ. ಅಂದ ಹಾಗೆ ಮಿಲನಾ ನಾಗರಾಜ್‌ ಈಗ ಗರ್ಭಿಣಿ.
ಈಗಷ್ಟೇ ವಿದೇಶದಲ್ಲಿ ಬೇಬಿ ಮೂನ್‌ ಮುಗಿಸಿ ಪತಿ ಡಾರ್ಲಿಂಗ್‌ ಕೃಷ್ಣ ಅವರೊಂದಿಗೆ ಮರಳಿರುವ ಮಿಲನಾ ಅವರು ನಾನಾ ಇವೆಂಟ್‌ನಲ್ಲಿ ಒಂದಲ್ಲ ಒಂದು ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಬೇಬಿ ಬಂಪ್‌ ಹೈಲೈಟಾಗದಂತೆ ಡ್ರೆಸ್‌ಗಳನ್ನು ಧರಿಸುತ್ತಾರೆ. ಡೀಸೆಂಟಾಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದು ಫ್ಯಾಷನ್‌ ವಿಮರ್ಶಕರ ಪ್ರಶಂಸೆಗೂ ಒಳಗಾಗುತ್ತಿರುತ್ತಾರೆ.

ಅನಾರ್ಕಲಿ ಗೌನ್‌ನಲ್ಲಿ ಮಿಲನಾ ಸ್ಟೈಲ್‌ & ಸ್ಮೈಲ್‌:

“ಪ್ರೆಗ್ನೆಂಟ್‌ ಆಗಿರುವ ಮಿಲನಾ ನಾಗರಾಜ್‌ ಅವರ ಬೇಬಿ ಬಂಪ್‌ ಎಲ್ಲಿಯೂ ಹೈಲೈಟ್‌ ಆಗುತ್ತಿಲ್ಲ ಎನ್ನುವುದಕ್ಕಿಂತ ಅವರು ಧರಿಸುತ್ತಿರುವ ಉಡುಪುಗಳ ಡಿಸೈನ್‌ ಅಷ್ಟೊಂದು ನೀಟಾಗಿದೆ. ಅವರು ಧರಿಸಿರುವ ಒಂದೊಂದು ಔಟ್‌ಫಿಟ್‌ ಕೂಡ ಡಿಸೆಂಟ್‌ ಲುಕ್‌ ನೀಡುವುದರೊಂದಿಗೆ ಅವರಿಗೆ ಕಂಫರ್ಟಬಲ್‌ ಫೀಲ್‌ ನೀಡಿದೆ” ಎನ್ನುತ್ತಾರೆ ಫ್ಯಾಷನಿಸ್ಟಾಗಳು.

ಇದನ್ನೂ ಓದಿ: Milana Nagaraj: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಲವ್‌ ಮಾಕ್ಟೆಲ್‌ʼ ಜೋಡಿ!

ಗೋಲ್ಡನ್‌ ಅನಾರ್ಕಲಿ ಡಿಟೇಲ್ಸ್‌

ಎಥ್ನಿಕ್‌ವೇರ್‌ ಡಿಸೈನ್‌ಗಳಿಗೆ ಖ್ಯಾತಿ ಗಳಿಸಿರುವ ಸೆಲೆಬ್ರೆಟಿ ಡಿಸೈನರ್‌ ಸಿಂಧೂ ರೆಡ್ಡಿಯವರ ಡಿಸೈನರ್‌ವೇರ್‌ ಇದು. ಕ್ರಶ್ಡ್‌ ಟಿಶ್ಯೂ ಮೆಟೀರಿಯಲ್‌ನ ಈ ಫ್ಯಾಬ್ರಿಕ್‌ ಅನಾರ್ಕಲಿ ವಿನ್ಯಾಸವನ್ನು ಒಳಗೊಂಡಿದೆ. ಮಿಲನಾಗೆ ಎಲಿಗೆಂಟ್‌ ಲುಕ್‌ ನೀಡಿರುವ ಈ ಅನಾರ್ಕಲಿ ಗೌನ್‌ಗೆ ಸ್ಲೀವ್‌ ಹಾಗೂ ಡಿಸೈನರ್‌ವೇರ್‌ ಕೆಳಗೆ ಇರುವ ಬಿಗ್‌ ಬಾರ್ಡರ್‌ ಕಂಪ್ಲೀಟ್‌ ಟ್ರೆಡಿಷನಲ್‌ ಲುಕ್‌ ನೀಡಿದೆ. ಇದರೊಂದಿಗೆ ಕಾಂಟ್ರಸ್ಟ್‌ ಶೇಡ್‌ನ ಬನಾರಸಿ ಬಾರ್ಡರ್‌ ಬಗೆಯ ಸೊಂಟದ ಪಟ್ಟಿ ಅಂದರೆ ಟೈಯಿಂಗ್‌ ಹ್ಯಾಂಡ್‌ ವರ್ಕ್‌ ಎಂಬ್ರಾಯ್ಡರಿ ಮಾಡಿರುವ ವೇಸ್ಟ್‌ ಬೆಲ್ಟ್‌ ಅಥವಾ ಕಮರ್‌ಬಾಂದ್‌ ಗೌನನ್ನು ಇನ್ನಷ್ಟು ಆಕರ್ಷಕವಾಗಿಸಿದೆ. ಇದರೊಂದಿಗೆ ಮ್ಯಾಚ್‌ ಮಾಡಿರುವ ರೆಡ್‌ ಪ್ಯೂರ್‌ ಅರ್ಗಾನ್ಜಾ ದುಪಟ್ಟಾ ಕೂಡ ಸಖತ್‌ ಲುಕ್‌ ನೀಡಿದೆ ಎಂದು ವಿವರಿಸುತ್ತಾರೆ ಸೆಲೆಬ್ರೆಟಿ ಡಿಸೈನರ್‌ ಸಿಂಧೂ ರೆಡ್ಡಿ. ಅವರ ಪ್ರಕಾರ, ಅನಾರ್ಕಲಿ ಡಿಸೈನ್‌ನಲ್ಲೂ ಟ್ರೆಡಿಷನಲ್‌ ಲುಕ್‌ ನೀಡಬಹುದು ಎನ್ನುವುದಕ್ಕೆ ಈ ಡಿಸೈನರ್‌ವೇರ್‌ ಸಾಕ್ಷಿ ಎನ್ನುತ್ತಾರೆ.

ಮಿಲನಾ ನಾಗರಾಜ್‌ ಆಕರ್ಷಕ ಲುಕ್‌

ನಟಿ ಮಿಲನಾ ನಾಗರಾಜ್‌ ಖಾಸಗಿ ಕಾರ್ಯಕ್ರಮಕ್ಕೆಂದು ಧರಿಸಿದ ಈ ಅನಾರ್ಕಲಿ ಗೌನ್‌ನ ಸ್ಟೈಲಿಂಗ್‌ ಸ್ಟೈಲಿಸ್ಟ್‌ಗಳಾದ ತೇಜು ಹಾಗೂ ಖುಷಿ ಮಾಡಿದ್ದಾರೆ. ಇನ್ನು, ವರಹಾ ಸಿಲ್ವರ್‌ ಜ್ಯುವೆಲರಿ ಧರಿಸಿರುವ ಮಿಲನಾ ಲೈಟ್‌ ಮೇಕಪ್‌ನಲ್ಲಿ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ. ಮಿಲನಾಗೆ ಈ ಡಿಸೈನರ್‌ವೇರ್‌ ಸಖತ್‌ ಇಷ್ಟವಾಗಿದೆಯಂತೆ. ಅದರಲ್ಲೂ ಟ್ರೆಡಿಷನಲ್‌ ಲುಕ್‌ ನೀಡುವ ಈ ಔಟ್‌ಫಿಟ್‌ ಲೈಟ್‌ವೈಟ್‌ ಆಗಿರುವುದು ಮತ್ತಷ್ಟು ಕಂಫರ್ಟಬಲ್‌ ಆಗಿಸಿದೆಯಂತೆ. ಯಾವುದೇ ಉಡುಪನ್ನು ನಾನು ಇಷ್ಟಪಟ್ಟು ಧರಿಸುತ್ತೇನೆ ಎನ್ನುತ್ತಾರೆ ಅವರು.

ಮಿಲನಾ ಎಲಿಗೆಂಟ್‌ ಫ್ಯಾಷನ್‌ ಮಂತ್ರ

ಈ ಹಿಂದೆ ವಿಸ್ತಾರ ನ್ಯೂಸ್‌ನ ಫ್ಯಾಷನ್‌ ಕುರಿತ ಸಂದರ್ಶನದಲ್ಲಿ ಮಿಲನಾ ಅವರೇ ಹೇಳಿದಂತೆ, ಯಾವುದೇ ಔಟ್‌ಫಿಟ್‌ ಹಾಗೂ ಡಿಸೈನರ್‌ವೇರ್‌ ಕಂಫರ್ಟಬಲ್‌ ಫೀಲ್‌ ನೀಡಿದಾಗ ತಂತಾನೇ ನೋಡಲು ಆಕರ್ಷಕವಾಗಿ ಕಾಣಿಸುತ್ತದೆ. ನಮ್ಮ ಪರ್ಸನಾಲಿಟಿಗೆ ತಕ್ಕಂತೆ ಧರಿಸಿದಾಗ ಇನ್ನಷ್ಟು ಸುಂದರವಾಗಿ ಕಾಣುತ್ತದೆ ಎಂಬುದು ಸತ್ಯಕ್ಕೆ ಹತ್ತಿರ ಎಂಬುದು ತಿಳಿದು ಬರುತ್ತದೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ )

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Actor Darshan: ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Actor Darshan) ಮತ್ತು ಆತನ ಸಹಚರ ಪ್ರದೋಷ್‌ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ. ಇಬ್ಬರ ಬಳಿಯೂ ಪರವಾನಗಿ ಹೊಂದಿದ ಪಿಸ್ತೂಲ್‌ಗಳಿದ್ದು Licenced Pistol), ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ (deposit) ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

VISTARANEWS.COM


on

Actor Darshan support by anchor hemalatha
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್​ 14ದಿನಗಳ ವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಲವರು ನಟನ ಬೆಂಬಲಕ್ಕೆ ನಿಂತಿದ್ದರು. ನಟಿ ಸಂಜನಾ ಗಲ್ರಾನಿ ಅವರು ಕೂಡ ಸ್ಪಷ್ಟ ಅಭಿಪ್ರಾಯ ನೀಡಿ ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದರು. ಇದರ ಬೆನ್ನಲ್ಲೇ ಕನ್ನಡದ ಖ್ಯಾತ ನಿರೂಪಕಿ ಹೇಮಾಲತಾ ತಮ್ಮ ಇನ್‌ಸ್ಟಾ ಖಾತೆಯಲ್ಲಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು ಮೃತ ರೇಣುಕಾಸ್ವಾಮಿಯನ್ನು ಹೀರೋ ಮಾಡುವುದನ್ನು ನಿಲ್ಲಿಸಿ ಎಂದು ಬರೆದುಕೊಂಡಿದ್ದಾರೆ.

ನಿರೂಪಕಿ ಹೇಮಾಲತಾ ಪೋಸ್ಟ್‌ನಲ್ಲಿ ʻʻಸಾವಿರ ಜನ ಸಾವಿರ ಮಾತನಾಡಲಿ.. ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಸ್ಟಿರುವ ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹಾವೆಂಬ ಸಂಕೋಲೆಯಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ…
ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ಅಲ್ಲದೇ ಕೊಲೆಯಾಗಿರುವ ರೇಣುಕಾಸ್ವಾಮಿಯನ್ನು ಹೀರೋ ಎನ್ನುವಂತೆ ಬಿಂಬಿಸಬೇಡಿʼʼ ಎಂದು ನಿರೂಪಕಿ ಹೇಮಾಲತಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಇನ್ನು ಈ ಹಿಂದೆ ಬಿಗ್‌ಬಾಸ್‌ ಸ್ಪರ್ಧಿ ಇಶಾನಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು, ದರ್ಶನ್ ಸರ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಇಶಾನಿ, ನಿಜಕ್ಕೂ ಇದು ಅಘಾತಕಾರಿ ಸುದ್ದಿ. ಒಬ್ಬ ಅಣ್ಣನ ರೂಪದಲ್ಲಿ ನಾನು ಕಂಡ ದರ್ಶನ್ ಸರ್ ನಿಜಕ್ಕೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಳಿದಾಗ ನಂಬಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Actor Darshan) ಮತ್ತು ಆತನ ಸಹಚರ ಪ್ರದೋಷ್‌ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ. ಇಬ್ಬರ ಬಳಿಯೂ ಪರವಾನಗಿ ಹೊಂದಿದ ಪಿಸ್ತೂಲ್‌ಗಳಿದ್ದು Licenced Pistol), ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ (deposit) ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

ದರ್ಶನ್ ಬಳಿ ಎರಡು ಯುಎಸ್ ಮೇಡ್ ಪಿಸ್ತೂಲ್‌ಗಳು, ಪ್ರದೋಷ್ ಬಳಿ ಒಂದು ಲೈಸೆನ್ಸ್ ಪಿಸ್ತೂಲ್‌ ಇವೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್ ಮತ್ತು ಪ್ರದೋಷ್ ವಿನಾಯಿತಿ ಪಡೆದಿದ್ದರು.

ಬೆಂಗಳೂರು ನಗರಾದ್ಯಂತ 7830 ಗನ್ ಲೈಸೆನ್ಸ್ ಪರವಾನಗಿದಾರರಿದ್ದಾರೆ. ಈ ಪೈಕಿ ದರ್ಶನ್ ಮತ್ತು ಪ್ರದೋಷ್ ಸೇರಿ 277 ಜನರಿಗೆ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು. ಉಳಿದ 7553 ಪರವಾನಗಿ ಹೊಂದಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಠೇವಣಿ ಇರಿಸಿಕೊಂಡಿದ್ದರು. ಆದರೆ ನಟ ದರ್ಶನ್ ಮತ್ತು ಪ್ರದೋಷ್ ಪಿಸ್ತೂಲ್ ವಾಪಸ್ ಮಾಡದೇ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದಿದ್ದಾರೆ.

ಬೆಂಗಳೂರಿನ 277 ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದವರಲ್ಲಿ ದರ್ಶನ್ ಮತ್ತು ಪ್ರದೋಷ್‌ಗೂ ವಿನಾಯಿತಿ ನೀಡಲಾಗಿದ್ದು, ಬೆಂಗಳೂರು ಪೊಲೀಸ್ ಕಮೀಷನರ್ ಅವರಿಂದಲೇ ವಿನಾಯಿತಿ ನೀಡಿ ಆದೇಶ ದೊರೆತಿದೆ. ಕಮೀಷನರ್ ಬಿ. ದಯಾನಂದ ಶಸ್ತ್ರಾಸ್ತ್ರ ಠೇವಣಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿದ್ದರು. ಅತಿ ಗಣ್ಯರಿಗೆ ನೀಡುವ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿಯಲ್ಲಿ ನಟ ದರ್ಶನ್ ಮತ್ತು ಪ್ರದೋಷ್ ಕೂಡ ಅವಕಾಶ ಪಡೆದಿದ್ದು, ಕಳೆದ ಮಾರ್ಚ್ 27ರಂದು ವಿನಾಯಿತಿ ನೀಡಿ ಕಮೀಷನರ್ ದಯಾನಂದ್ ಆದೇಶ ನೀಡಿದ್ದರು.

Continue Reading

ಸ್ಯಾಂಡಲ್ ವುಡ್

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Neha Gowda: ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರಲ್ಲಿ ಸ್ಪರ್ಧಿಸಿದ್ದರು ನೇಹಾ, ಕನ್ನಡದ ಜತೆಗೆ ತೆಲುಗು, ತಮಿಳು ಭಾಷೆಗಳಲ್ಲೂ ನೇಹಾ ಕೆಲಸ ಮಾಡಿದ್ದಾರೆ. ಪತಿ ಚಂದನ್ ಜತೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಾಜ-ರಾಣಿ ರಿಯಾಲಿಟಿ ಶೋನಲ್ಲೂ ಭಾಗವಹಿಸಿ ಗೆದ್ದಿದ್ದರು

VISTARANEWS.COM


on

Neha Gowda in saree with baby bump
Koo

ಮದುವೆಯಾದ 6 ವರ್ಷಗಳ ಬಳಿಕ ಸಿಹಿ ಸುದ್ದಿ ಕೊಟ್ಟಿದ್ದಾರೆ ಲಕ್ಷ್ಮೀ ಬಾರಮ್ಮ ಖ್ಯಾತಿಯ ಗೊಂಬೆ (Neha Gowda) ನೇಹಾ ಹಾಗೂ ಚಂದನ್‌ ದಂಪತಿ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ಇದೀಗ ತೋಟವೊಂದರಲ್ಲಿ ಕ್ಲಿಕ್ಕಿಸಿಕೊಂಡಿರುವ ಫೋಟೊಗಳನ್ನು ನೇಹಾ ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಇತ್ತ ಚಂದನ್ ಗೌಡ ತಮ್ಮ ಖಾತೆಯಲ್ಲಿ ಪತ್ನಿ ಜೊತೆ ಅದೇ ಸ್ಥಳದಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ನೇಹಾ ನಿರಂತರವಾಗಿ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತಾರೆ. ಇದೀಗ ಸರಳವಾದ ಸೀರೆ ಧರಿಸಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ.

2018ರಂದು ಬೆಂಗಳೂರಿನಲ್ಲಿ ಚಂದನ್ ಮತ್ತು ನೇಹಾ ಗೌಡ ಮದುವೆಯಾಗಿದ್ದರು.ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ನೇಹಾ ಹಾಗೂ ನಟ ಚಂದನ್​, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.

Continue Reading

ಕರ್ನಾಟಕ

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

Kannada New Movie: ವಿನೋದ್ ಪ್ರಭಾಕರ್ ಅಭಿನಯದ “ರಗಡ್” ಸಿನಿಮಾ ನಿರ್ಮಾಪಕ ಅರುಣ್ ಕುಮಾರ್ ಅವರ ನಿರ್ಮಾಣದ ಹಾಗೂ ರಂಜಿತ್ ನಿರ್ದೇಶನದಲ್ಲಿ ಆದಿತ್ಯ ಹಾಗೂ ಅಂಕಿತ ಜಯರಾಂ ನಾಯಕ/ ನಾಯಕಿಯಾಗಿ ನಟಿಸಿರುವ ‘ಕಾಗದ’ ಚಿತ್ರದ ಟ್ರೇಲರ್ ಈಚೆಗೆ ಬಿಡುಗಡೆಯಾಯಿತು.

VISTARANEWS.COM


on

Kaagada movie released on 5th July
Koo

ಬೆಂಗಳೂರು: ವಿನೋದ್ ಪ್ರಭಾಕರ್ ಅಭಿನಯದ “ರಗಡ್” ಸಿನಿಮಾ ನಿರ್ಮಾಪಕ ಅರುಣ್ ಕುಮಾರ್ ಅವರ ನಿರ್ಮಾಣದ ಹಾಗೂ ರಂಜಿತ್ ನಿರ್ದೇಶನದಲ್ಲಿ ಆದಿತ್ಯ ಹಾಗೂ ಅಂಕಿತ ಜಯರಾಂ ನಾಯಕ/ ನಾಯಕಿಯಾಗಿ ನಟಿಸಿರುವ ‘ಕಾಗದ’ ಚಿತ್ರದ (Kannada New Movie) ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.

ಬಿಜೆಪಿ ಮುಖಂಡ ರಾಘವೇಂದ್ರ ಶೆಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಚಿತ್ರದ ನಿರ್ದೇಶಕ ರಂಜಿತ್ ಮಾತನಾಡಿ, “ಕಾಗದ”, 2005ರಲ್ಲಿ ನಡೆದ ಪ್ರೇಮಕಥೆ. ಯುವಜನತೆಯ ಕೈಯಲ್ಲಿ ಇನ್ನೂ ಮೊಬೈಲ್‌ ಬಂದಿರದ, “ಕಾಗದ” ದಲ್ಲೇ ಪ್ರೀತಿ ವಿನಿಮಯವಾಗುತ್ತಿದ್ದ ಕಾಲಘಟ್ಟದ ಕಥೆಯೂ ಹೌದು. ಪರಸ್ಪರ ದ್ವೇಷಿಸುವ ಎರಡು ಹಳ್ಳಿಗಳ ನಡುವೆ ಅರಳಿದ ಪ್ರೇಮಕಥೆ ಕೂಡ. ಇಂತಹ ಹಲವು ವಿಶೇಷಗಳ “ಕಾಗದ” ಚಿತ್ರ , ಎಲ್ಲರ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿದೆ. ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಜುಲೈ 5 ರಂದು ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದ ಅವರು, “ಆಪಲ್ ಕೇಕ್” ಚಿತ್ರದ ನಂತರ ಇದು ನನ್ನ ಎರಡನೇ ನಿರ್ದೇಶನದ ಚಿತ್ರ ಎಂದು ಹೇಳಿದರು.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ನನಗೆ ಮೊದಲಿನಿಂದಲೂ ಹಿಂದು-ಮುಸ್ಲಿಂ ಲವ್ ಸ್ಟೋರಿ ಸಿನಿಮಾ ಮಾಡುವ ಆಸೆಯಿತ್ತು. ಆದರೆ ನನ್ನ ಮನಮುಟ್ಟುವ ಹಾಗೆ ಯಾರು ಕಥೆ ಹೇಳುತ್ತಿರಲಿಲ್ಲ. ನನ್ನನ್ನು ಒಪ್ಪಿಸುವಲ್ಲಿ ರಂಜಿತ್ ಯಶಸ್ವಿಯಾದರು. ನಾವು ಈ ಚಿತ್ರದಲ್ಲಿ ಯಾವುದೇ ಧರ್ಮದ ಭಾವನೆಗಳಿಗ ಧಕ್ಕೆ ತರುವ ಸನ್ನಿವೇಶಗಳನ್ನು ತೋರಿಸಿಲ್ಲ. ಎಲ್ಲಕ್ಕಿಂತ ಮನುಷ್ಯತ್ವ ಮುಖ್ಯ ಎಂಬ ಸಂದೇಶ ತಿಳಿಸಿದ್ದೇವೆ. ನನ್ನ ಮಗ ಆದಿತ್ಯ ಈ ಚಿತ್ರದ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾನೆ. “ರಗಡ್” ಚಿತ್ರದ ನಂತರ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಅರುಣ್ ಕುಮಾರ್ ತಿಳಿಸಿದರು. ರಗಡ್ ಚಿತ್ರ

ನಮ್ಮ ಮನೆಯ ಕೆಳಗಡೆ ಆಕ್ಟಿಂಗ್ ಸ್ಕೂಲ್ ಇತ್ತು. ಅಲ್ಲಿ ಕಲಿಯಲು ಬರುತ್ತಿದ್ದವರನ್ನು ನೋಡಿ‌ ನನಗೂ ನಟಿಸುವ ಆಸೆಯಾಯಿತು. ನಟನೆ ಕಲಿತು, ಕಿರುಚಿತ್ರ ಹಾಗೂ ನಾಟಕಗಳಲ್ಲಿ ಅಭಿನಯಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ನನ್ನ ಆಸೆ ಪೂರೈಸಿದ ಅಪ್ಪನಿಗೆ ಧನ್ಯವಾದ ಎಂದು ನಾಯಕ ಆದಿತ್ಯ ತಿಳಿಸಿದ್ದಾರೆ.

ಬಾಲನಟಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ನನಗೆ ತಾವೆಲ್ಲರೂ ನೀಡಿರುವ ಪ್ರೋತ್ಸಾಹಕ್ಕೆ ಧನ್ಯವಾದ. ನಾಯಕಿಯಾಗಿ ಇದು ಮೊದಲ ಚಿತ್ರ. “ಕಾಗದ” ಚಿತ್ರದಲ್ಲಿ ಬೋಲ್ಡ್ ಹುಡುಗಿಯ ಪಾತ್ರ ನನ್ನದು ಎನ್ನುತ್ತಾರೆ ನಾಯಕಿ ಅಂಕಿತ ಜಯರಾಂ.

ಚಿತ್ರದಲ್ಲಿ ನಟಿಸಿರುವ ಶಿವಮಂಜು, ಗೌತಮ್ ತಮ್ಮ ಪಾತ್ರದ ಬಗ್ಗೆ ಹೇಳಿದರು. ಸಂಗೀತದ ಬಗ್ಗೆ ಪ್ರದೀಪ್ ವರ್ಮ, ಛಾಯಾಗ್ರಹಣದ ಕುರಿತು ವೀನಸ್ ನಾಗರಾಜ ಮೂರ್ತಿ ಹಾಗೂ ವರ್ಣಾಲಂಕಾರದ ಬಗ್ಗೆ ಮಣಿ ಮಾಹಿತಿ ನೀಡಿದರು‌.

ಈ ಚಿತ್ರದ ವಿಶೇಷ ಪಾತ್ರದಲ್ಲಿ ನೇಹಾ ಪಾಟೀಲ್ ಕಾಣಿಸಿಕೊಂಡಿದ್ದಾರೆ. ಬಲ ರಾಜವಾಡಿ, ನೀನಾಸಂ ಅಶ್ವಥ್, ಮಠ ಕೊಪ್ಪಳ, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

“ಕಾಗದ” ಟ್ರೇಲರ್ ವೀಕ್ಷಿಸಿದ ಚಂದನವನದ ತಾರೆಯರಾದ ಧ್ರುವ ಸರ್ಜಾ, ರಮೇಶ್ ಅರವಿಂದ್, ಅನು ಪ್ರಭಾಕರ್ ಹಾಗೂ ನಿರ್ದೇಶಕ ಎ.ಪಿ.ಅರ್ಜುನ್ ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಲಭ್ಯವಿದೆ.

Continue Reading

ಸ್ಯಾಂಡಲ್ ವುಡ್

Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

Vinay Gowda: ಈ ಸಿನಿಮಾದಲ್ಲಿ ವಿಲನ್ ಆಗಿ ನಟಿಸುತ್ತಿರುವ ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ (Vinay Gowda) ವಿಲನ್ ಆಗಿ ನಟಿಸುತ್ತಿದ್ದಾರೆ. ಡೆವಿಲ್‌ ಸಿನಿಮಾದಲ್ಲಿ 30% ಶೂಟ್‌ ಆಗಿದೆ. ಫೈಟ್‌ ಸೀಕ್ವೆನ್ಸ್‌ ಬಾಕಿ ಇದೆ. ಟೈಲಾಗ್‌ ಸ್ವಲ್ಪ ಬಾಕಿ ಉಳಿದೆʼʼ ಎಂದರು.ಜತೆಗೆ ʻʻಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್ʼʼಎಂದು ಹೇಳಿಕೆ ನೀಡಿದ್ದಾರೆ.‌

VISTARANEWS.COM


on

Vinay Gowda acted darshan devil Movie and says Futture cant be predict
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಜೈಲು ಸೇರಿದ್ದಾರೆ. ಹೀಗಾಗಿ ಅವರ ʻಡೆವಿಲ್‌ʼ ಸಿನಿಮಾ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಇದೇ ವೇಳೆ ಈ ಸಿನಿಮಾದಲ್ಲಿ ವಿಲನ್ ಆಗಿ ನಟಿಸುತ್ತಿರುವ ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ (Vinay Gowda) ವಿಲನ್ ಆಗಿ ನಟಿಸುತ್ತಿದ್ದಾರೆ. ವಿನಯ್‌ ಸಂದರ್ಶನವೊಂದರಲ್ಲಿ ಡೆವಿಲ್‌ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಜತೆಗೆ ʻʻಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್ʼʼಎಂದು ಹೇಳಿಕೆ ನೀಡಿದ್ದಾರೆ.‌

ವಿನಯ್‌ ಗೌಡ ಮಾತನಾಡಿ ʻʻಬಿಗ್‌ ಬಾಸ್‌ ಮುಗಿಸಿದ ಬಳಿಕ ʻಡೆವಿಲ್‌ʼ ಸಿನಿಮಾ ಚಾನ್ಸ್‌ ಸಿಕ್ಕಿತು. ಈ ಸಿನಿಮಾ ಪರಿಚಯ ಹೇಗಾಯ್ತು ಎಂದರೆ ಪ್ರಕಾಶ್‌ ಅವರ ಜತೆ ಮುಂಚೆ ಕೆಲಸ ಮಾಡಿದ್ದೆ. ಒಂದಷ್ಟು ಧಾರಾವಾಹಿಗಳು ಮಾಡಿದ್ದೆ. ನನ್ನ ನಟನೆ ಗೊತ್ತು ಅವರಿಗೆ. ಈ ರೀತಿ ವಿಲನ್‌ ಕ್ಯಾರಕ್ಟರ್‌ ಬಗ್ಗೆ ಹೇಳಿದರು. ಬಳಿಕ ನಾನು ಸಿನಿಮಾಗೆ ಒಪ್ಪಿಗೆ ನೀಡಿದೆ. ಅವರ ಕೆಲಸ ಅಂತೂ ತುಂಬ ಕ್ಲೀನ್‌ ಹಾಗೂ ಕ್ಲೀಯರ್‌. ನಂದು ಡೆವಿಲ್‌ ಸಿನಿಮಾದಲ್ಲಿ 30% ಶೂಟ್‌ ಆಗಿದೆ. ಫೈಟ್‌ ಸೀಕ್ವೆನ್ಸ್‌ ಬಾಕಿ ಇದೆ. ಟೈಲಾಗ್‌ ಸ್ವಲ್ಪ ಬಾಕಿ ಉಳಿದೆʼʼ ಎಂದರು.

ಮುಂದೆ ಏನಾಗುತ್ತೆ? ಎಲ್ಲಿರವರೆಗೆ ಹೋಗುತ್ತೆ ಗೊತ್ತಿಲ್ಲ

ದರ್ಶನ್‌ ವಿವಾದದ ಬಗ್ಗೆ ಮಾತನಾಡಿ ʻʻನಾನು ಯಾರ ಬಗ್ಗೆ ಮಾತಾಡಲ್ಲ. ನಾವು ಈ ಉದ್ಯಮಕ್ಕೆ ಲೇಟ್‌ ಆಗಿ ಬಂದು ಕಡಿಮೆ ಕೊಡುಗೆ ಕೊಟ್ಟಿರಬಹುದು. ಆದರೆ ಈಗ ನಾನು ಇಂಡಸ್ಟ್ರಿಯಲ್ಲಿ ಇದ್ದೇನೆ. ಇಲ್ಲಿ ಈ ಬಗ್ಗ ಪ್ರಶ್ನೆ ಬಂದಾಗ. ಹೌದು ತೊಂದರೆ ಆಗಿದೆ. ಮುಂದೆ ಏನಾಗುತ್ತೆ? ಎಲ್ಲಿರವರೆಗೆ ಹೋಗುತ್ತೆ ಗೊತ್ತಿಲ್ಲ. ನಾನು ಈ ಚಿತ್ರರಂಗದ ಒಂದು ಭಾಗವೆಂದು ಅಂದುಕೊಂಡಿದ್ದೇನೆ. ಈಗ ಇಂತಹದ್ದೊಂದು ಘಟನೆ ನಡೆದಿದೆ. ಅದನ್ನು ಜಡ್ಜ್‌ ಮಾಡುವುದಕ್ಕೆ ನಾವ್ಯಾರೂ ಅಲ್ಲ. ಮಾಡಿರುವುದು ನಿಜನಾ? ಸುಳ್ಳಾ? ಅದ್ಯಾವುದೂ ನಮಗೆ ಗೊತ್ತಿಲ್ಲ. ಅದಕ್ಕೆ ಕಮೆಂಟ್ ಮಾಡುವುದು ನನಗೆ ಸೂಟ್ ಆಗುತ್ತೆ ಅಂತ ಅನಿಸುತ್ತಿಲ್ಲ.” ಎಂದು ವಿನಯ್ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Pavithra Gowda : ಜೈಲಿನಲ್ಲಿರುವ ಪವಿತ್ರಾ ಗೌಡಗೆ ಬ್ಯಾಗ್​ ತುಂಬಾ ಸಾಮಗ್ರಿ ತಂದು ಕೊಟ್ಟ ಸಹೋದರ

ಸೂಪರ್‌ ಪ್ರಾಜೆಕ್ಟ್

ʻʻಈ ಘಟನೆ ಬಗ್ಗೆ ಹೇಳೋದೆನಂದರೆ ಒಂದು ಕಮೆಂಟ್‌ ಎಲ್ಲಿಯ ಹಂತದವರೆಗೆ ಹೋಗಿದೆ ನೋಡಿ. ಒಂದು ತಪ್ಪು ಕೆಲಸ ಮಾತ್ರ ಹೈಲೈಟ್‌ ಆಗತ್ತೆ. ತಪ್ಪು ಎಲ್ಲಿದೆ, ನೆಗೆಟಿವ್‌ ಎಲ್ಲಿದೆ ಅದು ಮಾತ್ರ ಹೈಲೈಟ್‌ ಆಗತ್ತೆ. ಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್.‌ ಆದರೆ ಬೇಜಾರಾಗತ್ತೆ. ಮುಂದೆ ಸರಿ ಹೋಗುತ್ತೆ ಎನ್ನುವ ನಂಬಿಕೆ ಅನ್ನೋದು ಇದೆಯಲ್ಲ. ಆ ಪ್ರಾಜೆಕ್ಟ್ ರಿಲೀಸ್ ಆದ್ಮೇಲೆ ಹಬ್ಬ ಇದೆಯಲ್ಲ. ಅದರ ಬಗ್ಗೆ ಯೋಚನೆ ಮಾಡುತ್ತಿರುತ್ತೇನೆ. ನಾನು ನೆಗೆಟಿವ್ ಯೋಚನೆ ಮಾಡುವುದಿಲ್ಲʼʼಎಂದರು.

ಕಾಟೇರ ಯಶಸ್ಸಿನ ಬಳಿಕ ಡೆವಿಲ್‌ ಎಂಬ ಸಿನಿಮಾದಲ್ಲಿ ದರ್ಶನ್‌ ನಟಿಸುತ್ತಿದ್ದಾರೆ. ಈ ವರ್ಷ ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆಯಿತ್ತು. ಈ ಸಿನಿಮಾದ ಶೂಟಿಂಗ್‌ ಭರದಿಂದ ನಡೆಯುತ್ತಿತ್ತು. ಈ ಚಿತ್ರದ ಗ್ಲಿಂಪ್ಸ್‌ ವಿಡಿಯೋ ಕೂಡ ರಿಲೀಸ್‌ ಮಾಡಲಾಗಿತ್ತು.ಡೆವಿಲ್‌ನಲ್ಲಿ ಬಾಲಿವುಡ್‌ ನಟ ಮಹೇಶ್‌ ಮಂಜ್ರೇಕರ್‌ ಕೂಡ ನಟಿಸುತ್ತಿದ್ದಾರೆ. ಪ್ರಕಾಶ್‌ ವೀರ್‌ ನಿರ್ದೇಶನದ ಡೆವಿಲ್‌ ಸಿನಿಮಾದ ಭವಿಷ್ಯ ಏನಾಗಬಹುದು ಎಂಬ ಆತಂಕ ಫ್ಯಾನ್ಸ್‌ಗೆ ಇದೆ.

Continue Reading
Advertisement
Gold Rate Today
ಚಿನ್ನದ ದರ16 mins ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ20 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್26 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ32 mins ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ33 mins ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest44 mins ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Asaduddin Owais
ದೇಶ47 mins ago

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Actor Darshan support by anchor hemalatha
ಸ್ಯಾಂಡಲ್ ವುಡ್52 mins ago

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Life threat
ಕರ್ನಾಟಕ1 hour ago

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Para Badminton Ranking
ಕ್ರೀಡೆ1 hour ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌