ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ? - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

ಈ ಅಪರಾಧಗಳ ನಡುವೆ ಎದ್ದು ಕಾಣಿಸುತ್ತಿರುವುದು, ಸ್ತ್ರೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಹೆಚ್ಚಳ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ, ಕೊಡಗಿನ ಮೀನಾ ಕೊಲೆ ಪ್ರಕರಣಗಳು ಇದಕ್ಕೆ ಇತ್ತೀಚಿನ ನಿದರ್ಶನಗಳಾಗಿವೆ. ಇನ್ನೂ ಹತ್ತು ಹಲವನ್ನು ಉದಾಹರಿಸಬಹುದು. ರಾಜ್ಯದಲ್ಲಿ ಪೊಲೀಸ್ ಇಲಾಖೆ ಹಿಂದೆಂದೂ ಇಲ್ಲದಷ್ಟು ದುರ್ಬಲವಾದಂತೆ ಕಾಣುತ್ತಿದೆ.

VISTARANEWS.COM


on

Karnataka Police
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (National crime records bureau- NCRB) ಇತ್ತೀಚೆಗಿನ ಅಪರಾಧಗಳ ಅಂಕಿ ಅಂಶವನ್ನು ಪ್ರಕಟಿಸಿದ್ದು, ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳ (crimes) ಸಂಖ್ಯೆ ಮಿತಿ ಮೀರಿ ಹೆಚ್ಚಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಕಳೆದ ಜನವರಿಯಿಂದ ಏಪ್ರಿಲ್‌ವರೆಗೆ ಏರಿಕೆ ಪ್ರಮಾಣದಲ್ಲಿ ಕೊಲೆ (murder), ಅತ್ಯಾಚಾರ (physical abuse), ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು (Pocso) ನಡೆದಿವೆ. 2024ರ ಜನವರಿಯಿಂದ ಏಪ್ರಿಲ್ 30ರವರೆಗೆ ಅಂದರೆ 4 ತಿಂಗಳಲ್ಲಿ ಸುಮಾರು 430 ಕೊಲೆಗಳು (Murder), 198 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. 2327 ಮಹಿಳೆಯರ ಮೇಲೆ ದೌರ್ಜನ್ಯ, 1262 ಮಕ್ಕಳ ಮೇಲೆ ದೌರ್ಜನ್ಯ, 7421 ಸೈಬರ್ ಕ್ರೈಂ, 450 ರಾಬರಿಗಳು ಸಂಭವಿಸಿವೆ. ಲೈಂಗಿಕ ದೌರ್ಜನ್ಯ ಹಾಗೂ ಸೈಬರ್ ವಂಚನೆ (cyber crime) ಗಗನಕ್ಕೆ ಏರಿವೆ. ಹಲ್ಲೆ, ಮಾರಣಾಂತಿಕ ಹಲ್ಲೆ ಕೇಸ್‌ಗಳು ಅಧಿಕವಾಗುತ್ತಾ ಸಾಗುತ್ತಿವೆ. ಇದು ಆತಂಕಕ್ಕೆ ಕಾರಣವಾಗಿದೆ.

ಎಂದಿನಂತೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಈ ಅಸ್ತ್ರವನ್ನು ಹಿಡಿದುಕೊಂಡು ಸರ್ಕಾರದ ಮೇಲೆ ದಾಳಿಗೆ ಇಳಿದಿವೆ. “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡೊಂಬೊಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ. ರಾಜ್ಯ ಗೃಹ ಇಲಾಖೆ ಎನ್ನುವುದು ಕೆಲಸ ಮಾಡುತ್ತಿದೆಯಾ?” ಎಂದು ವಿಪಕ್ಷ ನಾಯಕರು ಟೀಕಿಸಿದ್ದಾರೆ. ಜನಸಾಮಾನ್ಯರ ಮನದಲ್ಲಿರುವ ಪ್ರಶ್ನೆಯನ್ನೇ ಅವರು ಕೇಳಿದ್ದಾರೆ ಎನ್ನಬೇಕು. ಈ ಪ್ರಶ್ನೆಯನ್ನು ಕೇಳಿ ಅರ್ಧದಲ್ಲೇ ಕೈಬಿಡಬಾರದು. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವತ್ತ ಪ್ರಯತ್ನಿಸಬೇಕು. ಗೃಹ ಸಚಿವರು, ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಮಾಡಬೇಕು.

ಆದರೆ ಗೃಹ ಸಚಿವರು ಇದನ್ನು ಒಂದು ವಿಷಯವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. “ಒಂದೊಂದು ಘಟನೆಗೂ ಒಂದೊಂದು ಕಾರಣ ಅಂತ ಇರುತ್ತದೆ. ಅವರ (ಪ್ರತಿಪಕ್ಷದ) ಕಾಲದಲ್ಲಿ ಎಷ್ಟು ಮರ್ಡರ್ ಆಗಿತ್ತು ಅಂತೆ ಹೇಳಿದರೆ ಯಾವ ಸರ್ಕಾರದಲ್ಲಿ ಸುರಕ್ಷತೆ ಇತ್ತು ಅನ್ನೋದು ತಿಳಿಯುತ್ತೆ” ಎಂದಿದ್ದಾರೆ. “ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಇವರನ್ನು ಹೇಳ್ಕೊಂಡು, ಕೇಳ್ಕೊಂಡು ಸರ್ಕಾರ ಕಾನೂನು ಸುವ್ಯವಸ್ಥೆ ಮಾಡೋಕೆ ಆಗೊಲ್ಲ. ಏನು ಕ್ರಮ ಬೇಕಾದ್ರೂ ತಗೊಳ್ತೇವೆ” ಎಂದಿದ್ದಾರೆ. ಇದು ಒಬ್ಬರು ಇನ್ನೊಬ್ಬರ ಮೇಲೆ ದೂರು ಹಾಕಿ ಮುಗಿಸಬೇಕಾದ ಸಂಗತಿಯಲ್ಲ. ಯಾರೂ ಇಂಥ ವಿಚಾರಗಳಲ್ಲಿ ಸುಮ್ಮಸುಮ್ಮನೆ ಆರೋಪ ಮಾಡುವುದಿಲ್ಲ. ಮೇಲಾಗಿ, ಇದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಒದಗಿಸಿದ ಅಂಕಿಸಂಖ್ಯೆಗಳನ್ನು ಆಧರಿಸಿದೆ. ಹೀಗಾಗಿ ಆಳುವವರು ಇದನ್ನು ಗಂಭೀರವಾಗಿಯೇ ಪರಿಗಣಿಸಬೇಕಿದೆ.

ಈ ಅಪರಾಧಗಳ ನಡುವೆ ಎದ್ದು ಕಾಣಿಸುತ್ತಿರುವುದು, ಸ್ತ್ರೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಹೆಚ್ಚಳ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ, ಕೊಡಗಿನ ಮೀನಾ ಕೊಲೆ ಪ್ರಕರಣಗಳು ಇದಕ್ಕೆ ಇತ್ತೀಚಿನ ನಿದರ್ಶನಗಳಾಗಿವೆ. ಇನ್ನೂ ಹತ್ತು ಹಲವನ್ನು ಉದಾಹರಿಸಬಹುದು. ಹುಬ್ಬಳ್ಳಿಯಲ್ಲಿ ಕೊಲೆ ಮಾಡಿದವನು ಅಂಜಲಿ ಕೊಲೆ ಮಾಡಿದವನು, ತಾನು ನೇಹಾ ಕೊಲೆ ಮಾದರಿಯಲ್ಲಿ ಕೊಲ್ಲುತ್ತೇನೆ ಎಂದು ಮೊದಲೇ ಹೇಳಿಯೇ ಇದನ್ನು ಮಾಡುತ್ತಾನೆ. ಇದನ್ನು ಪೊಲೀಸರ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳುವುದಿಲ್ಲ. ಅಂದರೆ ಇಲ್ಲಿ ಪೊಲೀಸರು ಎಷ್ಟು ಕಾರ್ಯಪ್ರವೃತ್ತರಾಗಿದ್ದಾರೆ ಎಂಬ ಅಂದಾಜು ಸಿಗುತ್ತದೆ. ಬಡವರು ಅನ್ಯಾಯಕ್ಕೊಳಗಾದರೆ ಕೇಳುವವರೇ ಇಲ್ಲವೇ? ಇಲ್ಲಿ ಪ್ರಜ್ವಲ್‌ ರೇವಣ್ಣನಂಥ ಪ್ರಭಾವಿ ಅಪರಾಧಿಗಳನ್ನು ರಾಜಕೀಯ ಕಾರಣಗಳಿಗಾಗಿ ಬೆನ್ನು ಹತ್ತಲಾಗುತ್ತದೆ; ಆದರೆ ಶ್ರೀಸಾಮಾನ್ಯರಿಗೆ ಇಲ್ಲಿ ಯಾವ ರಕ್ಷಣೆಯೂ ಇಲ್ಲವೇ? ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ನೂರಾರು ಹೆಣ್ಣು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಹರಿಬಿಡಲಾಗಿದೆ. ನೂರಾರು ಕುಟುಂಬಗಳನ್ನು ಛಿದ್ರಗೊಳಿಸುವಂತಹ ಇಂಥ ಅಪರಾಧಿಗಳ ಮೇಲೆ ಯಾವ ಕ್ರಮವೂ ಇಲ್ಲ! ಬದಲಾಗಿ ಅವರನ್ನು ರಕ್ಷಿಸಲಾಗುತ್ತಿದೆ.

ಇವೆಲ್ಲವೂ ಅಪಾಯಕಾರಿ ಬೆಳವಣಿಗೆ. “ಹೆಣ್ಣು ನಡುರಾತ್ರಿಯಲ್ಲಿ ಒಬ್ಬಳೇ ಓಡಾಡುವಂತಾದರೆ ದೇಶ ಸ್ವತಂತ್ರವಾದುದಕ್ಕೆ ಸಾರ್ಥಕ” ಎಂದು ಗಾಂಧೀಜಿ ಹೇಳಿದ್ದರಂತೆ. ನಡುರಾತ್ರಿಯಲ್ಲಿ ಬೇಡ, ನಡುಹಗಲಿನಲ್ಲಾದರೂ ಸುರಕ್ಷಿತವಾಗಿ ಓಡಾಡುವಂತಾದರೆ ಸಾಕು! ಕಾಲೇಜಿಗೆ ಹೋಗುವುದು, ಮನೆಯಲ್ಲಿರುವುದು ಮುಂತಾದ ಸರಳ ಕ್ರಿಯೆಗಳ ಸಂದರ್ಭದಲ್ಲಿ ಕೂಡ ಪಾತಕಿಗಳು ದಾಳಿ ನಡೆಸುತ್ತಾರೆ ಎಂದರೆ ಏನು ಹೇಳೋಣ? ಬೆಂಗಳೂರಿನ ಬೀದಿಗಳಲ್ಲಿ ರೌಡಿ ಶೀಟರ್‌ಗಳು ಯಾರ ಭಯವಿಲ್ಲದೆ ಗ್ಯಾಂಗ್‌ ಕಟ್ಟಿಕೊಂಡು ಹೊಡೆದಾಡುವುದು, ಸರ ಎಗರಿಸುವುದು, ಹಲ್ಲೆ, ಬೈಕ್‌ ವ್ಹೀಲಿಂಗ್‌ ನಡೆಸುತ್ತಿದ್ದಾರೆ. ಗೃಹ ಇಲಾಖೆ ದುರ್ಬಲವಾದಾಗ, ಪುಂಡರಿಗೆ ರಾಜಕಾರಣಿಗಳೇ ಕುಮ್ಮಕ್ಕು ನೀಡಿದಾಗ ಇಂಥ ಪ್ರವೃತ್ತಿ ಹೆಚ್ಚುತ್ತದೆ. ಇದಕ್ಕೆ ಈಗಲೇ ಕಡಿವಾಣ ಹಾಕದೆ ಹೋದರೆ ಮುಂದಿನ ದಿನಗಳ ದುರ್ಭರವಾಗಲಿವೆ.

ಇದನ್ನೂ ಓದಿ: Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Karnataka Milk Federation: ಕಾಂಗ್ರೆಸ್‌ ಸರಕಾರ ಎಲ್ಲೆಲ್ಲಿ ದರ ಏರಿಸಬಹುದು ಎಂಬ ಕಡೆಯೆಲ್ಲಾ ಪ್ರಯತ್ನಿಸಿ ನೋಡುತ್ತಿರುವಂತಿದೆ. ಇತ್ತೀಚೆಗೆ ತಾನೇ ಪೆಟ್ರೋಲ್-‌ ಡೀಸೆಲ್‌ ಬೆಲೆಯೇರಿಕೆಯನ್ನು ಮಾಡಿತ್ತು. ಹೀಗೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಬರೆ ಎಳೆಯುತ್ತ ಹೋದರೆ ಕೆಳ ಹಾಗೂ ಕೆಳಮಧ್ಯಮ ವರ್ಗದ ಬಳಕೆದಾರರು ಬದುಕುಳಿಯುವುದೇ ಕಷ್ಟವಾಗಲಿದೆ. ಹೈನುಗಾರರಿಗೆ ಹಾಲು ಮಾರಾಟದ ಲಾಭ ಸಿಗಲಿ. ಆದರೆ ಅದಕ್ಕಾಗಿ ಸಾಮಾನ್ಯ ಬಳಕೆದಾರನ ಜೇಬಿಗೆ ಹೆಚ್ಚಿನ ಹೊರೆ ಆಗದಿರಲಿ.

VISTARANEWS.COM


on

Karnataka Milk Federation
Koo


ಕರ್ನಾಟಕ ಹಾಲು ಮಹಾಮಂಡಳಿ (Karnataka Milk Federation) ನಂದಿನಿ ಹಾಲಿನ ದರ ಏರಿಕೆಯನ್ನು ಘೋಷಿಸಿದೆ. ಹೊಸ ದರ ಬುಧವಾರದಿಂದ ಜಾರಿಗೆ ಬರಲಿದೆ. ಇತ್ತೀಚೆಗಷ್ಟೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬರೆ ಎಳೆದಿದ್ದ ಕರ್ನಾಟಕ ಸರ್ಕಾರ, ಈಗ ಹಾಲಿನ ದರ ಏರಿಕೆ ಮಾಡಿ ಗ್ರಾಹಕರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ. ದರ ಏರಿಕೆಯಿಂದ ಪ್ರತಿ ಲೀಟರ್ ಹಾಲಿಗೆ 2.10 ರೂಪಾಯಿ ಹೆಚ್ಚಳವಾಗಲಿದೆ. ಬೆಲೆ ಹೊಂದಾಣಿಕೆಯ ಜೊತೆಗೆ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು ಒದಗಿಸಲು ನಂದಿನಿ ಹಾಲಿನ ಪ್ರತಿ ಪ್ಯಾಕೆಟ್ ಈಗ 50 ಮಿಲಿ ಲೀಟರ್ ಹೆಚ್ಚು ಹಾಲನ್ನು ಹೊಂದಿರುತ್ತದೆ. ಉದಾಹರಣೆಗೆ, ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 550 ಮಿ.ಲೀ. ಹಾಲನ್ನು ಹೊಂದಿರುತ್ತದೆ. ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ನಲ್ಲೂ 50 ಮಿ.ಲೀ. ಹೆಚ್ಚಿರುತ್ತದೆ. ಈ ಹೆಚ್ಚುವರಿ ಹಾಲಿನ ದರವನ್ನು ಮಾತ್ರ ವಸೂಲಿ ಮಾಡಲಾಗುತ್ತದೆ ಎಂಬುದು ಈ ಬೆಲೆ ಏರಿಕೆ ಮಾಡಿದವರ ಸಮಜಾಯಿಷಿ.

ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿದ್ದರಿಂದ ನಂದಿನಿ ಹಾಲಿನ ಪ್ಯಾಕೆಟ್‌ಗೆ ತಲಾ 50 ಮಿ.ಲೀ. ಹಾಲು ಹೆಚ್ಚಳ (Nandini Milk Price Hike) ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಹಾಲಿನ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ್ದಾರೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೆಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದಿದ್ದಾರೆ.

ಮೇಲ್ನೋಟಕ್ಕೆ ಈ ಕ್ರಮದಲ್ಲಿ ಸದುದ್ದೇಶವೇ ಇರುವಂತೆ ಕಾಣಿಸುತ್ತಿದೆ. ಯಾಕೆಂದರೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು. ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬುದು ಸದುದ್ದೇಶ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆಎಂಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯ. ಪ್ಯಾಕೆಟ್‌ನಲ್ಲಿ ಹೆಚ್ಚುವರಿ ಹಾಲನ್ನು ಸೇರಿಸುವುದು ಸರಿ. ಅದು ಬಳಕೆದಾರನಿಗೆ ಲಾಭವಾಗಿ ಸಿಗುವಂತೆ ಮಾಡದೆ, ಆತನಿಗೆ ಬೇಕಿಲ್ಲದಿದ್ದರೂ ಬಲವಂತವಾಗಿ ನೀಡುತ್ತಿರುವಂತೆ ಈ ಕ್ರಮ ಇದೆ. ಬಳಕೆದಾರನ ದೃಷ್ಟಿಯಿಂದ ಇದು ಅಷ್ಟೇನೂ ಸರಿಯಾದ ಕ್ರಮವಲ್ಲ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಭಯೋತ್ಪಾದಕನಿಗೆ ಶ್ರದ್ಧಾಂಜಲಿ; ಕೆನಡಾ ಸಂಸತ್ ನ ಮೂರ್ಖತನ

ಈಗಲೂ ಹಾಲಿನ ಮಾರಾಟದಿಂದ ಕೆಎಂಎಫ್‌ ಲಾಭವನ್ನು ಗಳಿಸುತ್ತಿಲ್ಲ ಎಂಬುದು ಎಲ್ಲರಿಗೂ ತಿಳಿದೇ ಇದೆ. ಗರಿಷ್ಠ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ. ಜೊತೆಗೆ ಮೊಸರು, ತುಪ್ಪ, ಬೆಣ್ಣೆ ಮುಂತಾದ ನಂದಿನಿ ಹೈನು ಉತ್ಪನ್ನಗಳಿವೆ. ಹಾಗೆಯೇ ಮೈಸೂರು ಪಾಕ್‌, ಪೇಢ ಮುಂತಾದ ಸಿಹಿ ಉತ್ಪನ್ನಗಳೂ ಇವೆ. ಇವೆಲ್ಲವುಗಳ ಮಾರಾಟದಿಂದ ಬರುತ್ತಿರುವ ಒಟ್ಟಾರೆ ಆದಾಯವು ಈ ಸಂಸ್ಥೆಯನ್ನು ಸಲಹುತ್ತಿದೆ. ರಾಜ್ಯದಲ್ಲಿ ಹಾಲಿನ ಬಳಕೆಯನ್ನು ಹೆಚ್ಚು ಮಾಡಬೇಕು; ಆ ಮೂಲಕ ಹೈನುಗಾರರಿಗೆ ನೆರವಾಗಬೇಕು ಎಂಬ ಉದ್ದೇಶವೇನೋ ಚೆನ್ನಾಗಿದೆ. ಆದರೆ ಇದನ್ನು ಬೇರೆ ಮೂಲಗಳಿಂದ ಭರಿಸಬೇಕು ಹೊರತು ಹಾಲಿನಿಂದಲ್ಲ. ಯಾಕೆಂದರೆ ಹಾಲು ಒಂದು ರೀತಿಯಿಂದ ಎಲ್ಲರ ಅಗತ್ಯ ಆಹಾರ. ಹೊಟ್ಟೆ ತುಂಬ ಊಟವಿಲ್ಲದಾಗ ಹಾಲು ಕುಡಿದೇ ಹೊಟ್ಟೆ ತುಂಬಿಸಿಕೊಳ್ಳುವವರಿದ್ದಾರೆ. ಮಕ್ಕಳಿಗೆ, ಮಹಿಳೆಯರಿಗೆ ಹಾಲು ಅತ್ಯಂತ ಪೌಷ್ಟಿಕ ಆಹಾರ. ಆದರೆ ಎಲ್ಲರೂ ಈ ಏರಿದ ಬೆಲೆಯಲ್ಲಿ ಹಾಲನ್ನು ಕೊಳ್ಳುವ ಸ್ಥಿತಿವಂತರಾಗಿರುವುದಿಲ್ಲ.

ಜೊತೆಗೆ ಹಾಲಿನ ದರ ಏರಿಕೆಯೆಂದರೆ ಒಂದು ರೀತಿಯಲ್ಲಿ ಪೆಟ್ರೋಲ್‌ ದರ ಏರಿಕೆಯಂತೆಯೇ. ಇದನ್ನನುಸರಿಸಿ ಕಾಫಿ, ಟೀ ಮುಂತಾದ ಹೋಟೆಲ್‌ ಉತ್ಪನ್ನಗಳ ದರಗಳು ಹೆಚ್ಚಾಗಲಿವೆ. ಮೊಸರು, ತುಪ್ಪ, ಬೆಣ್ಣೆಗಳ ದರವೂ ಹೆಚ್ಚಬೇಕಾದೀತು. ಹಾಲನ್ನು ಬಳಸಿ ಮಾಡುವ ಖಾದ್ಯಗಳ ಬೆಲೆಯೂ ಹೆಚ್ಚಾಗುತ್ತದೆ. ಹೀಗಾಗಿ ಇದು ಬಳಕೆದಾರರಿಗೆ ಹೊರೆಯೇ ಆಗಿದೆ. ಕಾಂಗ್ರೆಸ್‌ ಸರಕಾರ ಎಲ್ಲೆಲ್ಲಿ ದರ ಏರಿಸಬಹುದು ಎಂಬ ಕಡೆಯೆಲ್ಲಾ ಪ್ರಯತ್ನಿಸಿ ನೋಡುತ್ತಿರುವಂತಿದೆ. ಇತ್ತೀಚೆಗೆ ತಾನೇ ಪೆಟ್ರೋಲ್-‌ ಡೀಸೆಲ್‌ ಬೆಲೆಯೇರಿಕೆಯನ್ನು ಮಾಡಿತ್ತು. ಹೀಗೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಬರೆ ಎಳೆಯುತ್ತ ಹೋದರೆ ಕೆಳ ಹಾಗೂ ಕೆಳಮಧ್ಯಮ ವರ್ಗದ ಬಳಕೆದಾರರು ಬದುಕುಳಿಯುವುದೇ ಕಷ್ಟವಾಗಲಿದೆ. ಹೈನುಗಾರರಿಗೆ ಹಾಲು ಮಾರಾಟದ ಲಾಭ ಸಿಗಲಿ. ಆದರೆ ಅದಕ್ಕಾಗಿ ಸಾಮಾನ್ಯ ಬಳಕೆದಾರನ ಜೇಬಿಗೆ ಹೆಚ್ಚಿನ ಹೊರೆ ಆಗದಿರಲಿ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಭಯೋತ್ಪಾದಕನಿಗೆ ಶ್ರದ್ಧಾಂಜಲಿ; ಕೆನಡಾ ಸಂಸತ್ ನ ಮೂರ್ಖತನ

ಖಲಿಸ್ತಾನಿ ಉಗ್ರರಿಗೆ ಕೆನಡಾ ಹುಲುಸಾದ ನೆಲ. ಇಲ್ಲಿರುವ ಭಾರಿ ಪ್ರಮಾಣದ ಸಿಕ್ಖ್‌ ವಲಸಿಗರಲ್ಲಿ ಹಲವು ಪ್ರತ್ಯೇಕತಾವಾದಿಗಳು ಇದರ ಪೋಷಕರು. ಈ ಶ್ರೀಮಂತರ ಹಣಕ್ಕೆ ಆಸೆಪಡುತ್ತಿರುವ ಕೆನಡಾದ ಆಡಳಿತಗಾರರು ಈ ಖಲಿಸ್ತಾನಿ ಚಳವಳಿಯ ಪೋಷಕರೂ ಆಗಿದ್ದಾರೆ ಎನ್ನುವುದರಲ್ಲಿ ಅನುಮಾನವಿಲ್ಲ. ಕೆನಡಾ ಸಂಸತ್ ನಲ್ಲಿ ಖಲಿಸ್ತಾನಿ ಉಗ್ರನಿಗೆ ಶ್ರದ್ಧಾಂಜಲಿ ಅರ್ಪಿಸಿರುವುದು ಖಂಡನೀಯ.

VISTARANEWS.COM


on

Canada
Koo

ಕೆನಡಾದಲ್ಲಿದ್ದ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ, ಖಲಿಸ್ತಾನಿ ಪರ ಹೋರಾಟಗಾರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜಾರ್‌ (Nijjar Killing Case)ನ ಹತ್ಯೆಗೈದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸಂಸತ್ತು ಮಂಗಳವಾರ ಹೌಸ್ ಆಫ್ ಕಾಮನ್ಸ್‌ನಲ್ಲಿ ಒಂದು ನಿಮಿಷ ಮೌನ ಆಚರಿಸಿ ಆತನಿಗೆ ಗೌರವ ಸಲ್ಲಿಸಿದೆ. ಕಳೆದ ವರ್ಷ ಜೂನ್‌ 18ರಂದು ಕೆನಡಾದ ಸುರ‍್ರೆ ನಗರದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಅಪರಿಚಿತರ ಗುಂಡಿಗೆ ಬಲಿಯಾಗಿದ್ದ. ಈ ಘಟನೆ ನಡೆದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸಂಸತ್ತು ಎದ್ದು ನಿಂತು, ಮೌನ ಆಚರಿಸಿತು. ಇದೊಂದು ವಿಚಿತ್ರ ಬೆಳವಣಿಗೆ. ಹಾಗೆಯೇ ಕೆನಡಾದ ಉದ್ಧಟತನಕ್ಕೆ ಇದು ಸಾಕ್ಷಿ ಕೂಡ. ಭಯೋತ್ಪಾದನೆ ಎಂದರೇನು ಎಂದು ಗೊತ್ತಿಲ್ಲದ, ಖಲಿಸ್ತಾನಿ ಉಗ್ರವಾದದ ರುಚಿ ಕಂಡಿಲ್ಲದ ಕೆನಡಾದಂಥ ದೇಶದ ಮೂರ್ಖ ಆಡಳಿತಗಾರರು ಮಾತ್ರ ಮಾಡಬಹುದಾದ ಸಂಗತಿ ಇದು.

ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರ ಹತ್ಯೆಯನ್ನು ಕೆನಡಾದಲ್ಲಿರುವ ಖಲಿಸ್ತಾನಿಗಳು ಸಂಭ್ರಮಾಚರಣೆ ಮಾಡಿದ ಕೆಲವೇ ದಿನಗಳಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಕೆನಡಾದ ಸುರ‍್ರೆ ನಗರದಲ್ಲಿ ಕೊಲೆ ಮಾಡಲಾಗಿತ್ತು. ಪಂಜಾಬಿಗಳೇ ಹೆಚ್ಚಿರುವ ಸುರ‍್ರೆ ನಗರದ ಗುರುನಾನಕ್‌ ಸಿಖ್‌ ಗುರುದ್ವಾರದ ಬಳಿಕ ಖಲಿಸ್ತಾನಿ ಉಗ್ರನ ಹತ್ಯೆ ನಡೆದಿತ್ತು. ಪಂಜಾಬ್‌ನಲ್ಲಿ ಅರ್ಚಕರೊಬ್ಬರ ಕೊಲೆಗೆ ಪಿತೂರಿ ನಡೆಸಿರುವುದು, ಮೂಲಭೂತವಾದದ ಪ್ರಸರಣ ಸೇರಿ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ಈತನ ವಿರುದ್ಧ ತನಿಖೆ ನಡೆಸುತ್ತಿದೆ. ಖಲಿಸ್ತಾನ್‌ ಟೈಗರ್‌ ಫೋರ್ಸ್‌ (KTF) ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಈತ ಪ್ರತ್ಯೇಕವಾದಿಗಳಿಗೆ ಹೆಚ್ಚಿನ ನೆರವು ಒದಗಿಸುತ್ತಿದ್ದ. ಭಾರತದಲ್ಲಿ ಹಲವು ಉಗ್ರ ಚಟುವಟಿಕೆಗಳ ಹಿಂದೆ ಈತನ ಕೈವಾಡವಿದೆ. ಕೆನಡಾದಲ್ಲೂ ಸಿಖ್‌ ಸಮುದಾಯದವರನ್ನು ಎತ್ತಿ ಕಟ್ಟುತ್ತಿದ್ದ. ಹಾಗಾಗಿ ಈತನು ಸೇರಿ ಸುಮಾರು 40 ಉಗ್ರರನ್ನು ಭಾರತವು ಮೋಸ್ಟ್‌ ವಾಂಟೆಡ್‌ ಉಗ್ರರ ಪಟ್ಟಿಗೆ ಸೇರಿಸಿತ್ತು. ಇಂಥ ಉಗ್ರನ ಹತ್ಯೆಯಾದರೆ ಕೆನಡಾಕ್ಕೆ ಯಾಕೆ ಹೊಟ್ಟೆನೋವು?

ಖಲಿಸ್ತಾನಿ ಉಗ್ರರಿಗೆ ಕೆನಡಾ ಹುಲುಸಾದ ನೆಲ. ಇಲ್ಲಿರುವ ಭಾರಿ ಪ್ರಮಾಣದ ಸಿಕ್ಖ್‌ ವಲಸಿಗರಲ್ಲಿ ಹಲವು ಪ್ರತ್ಯೇಕತಾವಾದಿಗಳು ಇದರ ಪೋಷಕರು. ಈ ಶ್ರೀಮಂತರ ಹಣಕ್ಕೆ ಆಸೆಪಡುತ್ತಿರುವ ಕೆನಡಾದ ಆಡಳಿತಗಾರರು ಈ ಖಲಿಸ್ತಾನಿ ಚಳವಳಿಯ ಪೋಷಕರೂ ಆಗಿದ್ದಾರೆ ಎನ್ನುವುದರಲ್ಲಿ ಅನುಮಾನವಿಲ್ಲ. ನಿಜ್ಜಾರ್‌ ಹತ್ಯೆಗೂ ಮೊದಲು ಖಲಿಸ್ತಾನಿ ಉಗ್ರ, ಬಂಧಿತ ಅಮೃತ್‌ಪಾಲ್‌ ಸಿಂಗ್‌ನ ಆಪ್ತ, ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್‌ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರ ರೂವಾರಿ ಅವತಾರ್‌ ಸಿಂಗ್‌ ಖಂಡಾ ಲಂಡನ್‌ನಲ್ಲಿ ಮೃತಪಟ್ಟಿದ್ದ. ಅಮೃತ್‌ಪಾಲ್‌ ಸಿಂಗ್‌ ಬಂಧನದ ಬಳಿಕ ಕೆನಡಾದಲ್ಲಿರುವ ಖಲಿಸ್ತಾನಿಗಳು ಇನ್ನಷ್ಟು ತೀವ್ರವಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಿಂದೂ ದೇವಾಲಯಗಳನ್ನು ಧ್ವಂಸ ಮಾಡುವುದು, ಭಾರತೀಯ ರಾಯಭಾರಿಗಳನ್ನು ಬೆದರಿಸುವುದು ಇವರ ಮುಖ್ಯ ಉದ್ಯೋಗ.

ಭಾರತದಲ್ಲಿ ದಶಕಗಳ ಹಿಂದೆ ಉಲ್ಬಣಗೊಂಡು ಇದೀಗ ಉಪಶಮನಗೊಂಡಿರುವ ಹುಣ್ಣನ್ನು ಕೆರೆದು ಮತ್ತೆ ಉಲ್ಬಣಗೊಳಿಸುವ ಕೆಲಸವನ್ನು ಕೆನಡಾ ಮಾಡುತ್ತಿದೆ. ಒಂದು ಕಾಲದಲ್ಲಿ ಅಮೃತಸರದ ಸ್ವರ್ಣಮಂದಿರವನ್ನು ಅಪವಿತ್ರಗೊಳಿಸಿದ, ಖಲಿಸ್ತಾನ್‌ ಚಳವಳಿಯ ಹೆಸರಲ್ಲಿ ಪಂಜಾಬ್‌ನ ಯುವಜನತೆಯ ಮನಸ್ಸುಗಳನ್ನು ಕೆಡಿಸಿ ಸರ್ವನಾಶ ಮಾಡಿದ ಭಿಂದ್ರಾನ್‌ವಾಲೆಯ ಸಂತಾನಗಳು ಇಂದಿಗೂ ಕೆನಡಾದ ನೆಲದಲ್ಲಿ ಆಶ್ರಯ ಪಡೆದಿವೆ. ಇಂಥ ಡಜನ್‌ಗೂ ಹೆಚ್ಚು ಉಗ್ರರ ಹೆಸರನ್ನು ಭಾರತ ಸರ್ಕಾರ ಕೆನಡಾಗೆ ನೀಡಿದ್ದು, ಅವರನ್ನು ತಮಗೊಪ್ಪಿಸುವಂತೆ ಹೇಳಿದೆ. ಆದರೆ ಅವರು ಕೆನಡಾದ ಪ್ರಜೆಗಳೆಂದೂ, ಅವರ ಪ್ರತಿಭಟನೆಯ ಸ್ವಾತಂತ್ರ್ಯಕ್ಕೆ ತಾನು ಧಕ್ಕೆ ತರುವುದಿಲ್ಲವೆಂದೂ ಕೆನಡಾ ಗಳುಹುತ್ತಲೇ ಇದೆ. ʼಭಾರತ ತನ್ನ ಸಾರ್ವಭೌಮತೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆʼ ಎಂದು ಪ್ರಲಾಪಿಸುತ್ತಿರುವ ಈ ದೇಶದ ಭಂಡ ನಾಯಕತ್ವದ ವೈಫಲ್ಯದಿಂದಾಗಿ, ಕಳೆದ ವರ್ಷ ಉಭಯ ದೇಶಗಳ ರಾಜತಾಂತ್ರಿಕ ಬಾಂಧವ್ಯವೂ ಹಳಸಿತ್ತು. ಪರಸ್ಪರರ ಹೈಕಮಿಶನರ್‌ಗಳನ್ನು ಹೊರಗೆ ಕಳಿಸುವವರೆಗೆ ಅದು ಹೋಗಿತ್ತು. ಇಲ್ಲೂ ಕೆನಡಾದ್ದೇ ಉಪದ್ವ್ಯಾಪ.

ಕೆನಡಾದ ಪ್ರಧಾನಿ ಜಸ್ಟಿನ್‌ ಟ್ರುಡೊ ಮತ್ತು ಇತರ ಆಡಳಿತಗಾರರು ಅರ್ಥ ಮಾಡಿಕೊಳ್ಳಬೇಕಾದ್ದು ಏನೆಂದರೆ, ಖಲಿಸ್ತಾನಿ ಹಿಂಸಾವಾದಿಗಳನ್ನು ಮುಂದಿಟ್ಟುಕೊಂಡು ಹೊರಟರೆ ಆ ದೇಶವೇ ಹಿಂಸೆಯ ಫಲವನ್ನು ಉಣ್ಣಬೇಕಾದೀತು. ಭಯೋತ್ಪಾದಕ ಹರ್‌ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಲ್ಲಿ ತನ್ನ ಪಾತ್ರವಿಲ್ಲ ಎಂದು ಭಾರತ ಈಗಾಗಲೇ ಪ್ರತಿಪಾದಿಸಿದೆ. ಭಯೋತ್ಪಾದಕನಿಗೆ ಗೌರವ ಸಲ್ಲಿಸುವ ಮೂಲಕ ಕೆನಡಾ ಯಾವ ಸಂದೇಶ ನೀಡಹೊರಟಿದೆ? ಆ ದೇಶವೇ ಹೇಳಬೇಕು. ಉಭಯ ದೇಶಗಳ ನಡುವೆ ಶಾಂತಿ- ಸೌಹಾರ್ದ ಸ್ಥಾಪಿಸಬಯಸುವವರು ಮಾಡುವ ಕೆಲಸವಂತೂ ಇದಲ್ಲ.

ಇದನ್ನೂ ಓದಿ: Hardeep Singh Nijjar: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಾಗಿ ಒಂದು ವರ್ಷ; ಮೌನ ಆಚರಿಸಿ ಗೌರವ ಸಲ್ಲಿಸಿದ ಕೆನಡಾ ಸಂಸತ್ತು

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬೆಲೆಯೇರಿಕೆಯನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದ, ಬೆಲೆಯೇರಿಕೆ ವಿರುದ್ಧ ಆಕ್ರೋಶ, ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್‌ ಈಗ ರಾಜ್ಯ ಸರ್ಕಾರದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ. ಮೊದಲೇ, ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಬಳಲುತ್ತಿರುವ ರಾಜ್ಯದ ಜನರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವು ಗಾಯದ ಮೇಲೆ ಬರೆ ಎಳೆದಂತಾಗಿದೆ.

VISTARANEWS.COM


on

CM Meeting
Koo

ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಟಿಕೆಟ್‌, ಮನೆಗಳಲ್ಲಿ 200 ಯೂನಿಟ್‌ಗಳವರೆಗೆ ವಿದ್ಯುತ್‌ ಫ್ರೀ, ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ ಸೇರಿ ಐದು ಉಚಿತ ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ (Siddaramaiah) ನೇತೃತ್ವದ ರಾಜ್ಯ ಸರ್ಕಾರವು (Karnataka Government), ಅವುಗಳನ್ನು ಯಶಸ್ವಿಯಾಗಿಯೂ ಜಾರಿಗೆ ತಂದಿದೆ. ಯಶಸ್ವಿ ಜಾರಿಯಿಂದ ದೇಶಾದ್ಯಂತ ಖ್ಯಾತಿಯನ್ನೂ ಗಳಿಸಿದೆ. ಆದರೆ, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ನೇರವಾಗಿ ಜನರ ಜೇಬಿಗೆ ಕೈ ಹಾಕಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ (Petrol, Diesel Price Hike) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಈಗ ತೀವ್ರ ಚರ್ಚೆ, ಟೀಕೆ, ಆಕ್ರೋಶಕ್ಕೆ ಕಾರಣವಾಗಿದೆ.

ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ, ಅವುಗಳನ್ನು ಸಮರ್ಪಕವಾಗಿ ಜಾರಿಗೂ ತಂದ, ಬಡವರಿಗೆ ಅನುಕೂಲ ಮಾಡಿಕೊಟ್ಟ ಸಿದ್ದರಾಮಯ್ಯ ಅವರ ಸರ್ಕಾರವು ಮೊದಲಿಗೆ ಮದ್ಯದ ಬೆಲೆಯನ್ನು ಏರಿಕೆ ಮಾಡಿತು. ಮದ್ಯ ಪ್ರಿಯರ ಜೇಬಿಗೆ ಕತ್ತರಿ ಹಾಕಿ ಸಂಪನ್ಮೂಲವನ್ನು ಕ್ರೋಡೀಕರಣ ಮಾಡಿತು. ಒಂದೇ ವರ್ಷದಲ್ಲಿ ಎರಡೆರಡು ಬಾರಿ ಮದ್ಯದ ಬೆಲೆಯೇರಿಕೆ ಮಾಡಿತು. ಅಷ್ಟೇ ಅಲ್ಲ, ರಾಜ್ಯ ಸರ್ಕಾರವು ಈಗಾಗಲೇ ಮುದ್ರಾಂಕ ಶುಲ್ಕಗಳನ್ನು ಏರಿಸಿದೆ. ದತ್ತು ಸ್ವೀಕಾರ ಪ್ರಮಾಣಪತ್ರ, ಅಫಿಡವಿಟ್‌, ಆಸ್ತಿ ಪರಭಾರೆ, ಪವರ್‌ ಆಫ್‌ ಅಟಾರ್ನಿ ಸೇರಿ ಯಾವುದೇ ದಾಖಲೆಯನ್ನು ಪಡೆಯಲು ನಿಗದಿಪಡಿಸಿದ್ದ ಶುಲ್ಕವನ್ನು ಎರಡು ಅಥವಾ ಅದಕ್ಕಿಂತ ಹೆಚ್ಚು ಪಟ್ಟು ಹೆಚ್ಚಿಸಲಾಗಿದೆ. ಇದು ಕೂಡ ಸಂಪನ್ಮೂಲ ಕ್ರೋಡೀಕರಣದ ಭಾಗವೇ ಆಗಿದೆ. ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಅದರ ಬೆಲೆ ಹೆಚ್ಚಿಸಿದರೂ ತೊಂದರೆ ಇಲ್ಲ ಎಂದು ಜನ ಸುಮ್ಮನಾದರು. ಮುದ್ರಾಂಕ ಶುಲ್ಕವು ದಿನನಿತ್ಯದ ಖರ್ಚು-ವೆಚ್ಚ ಅಲ್ಲದ ಕಾರಣ, ಅದರ ಬೆಲೆಯೇರಿಕೆಯನ್ನೂ ಜನ ಮನ್ನಿಸಿದರು. ಆದರೆ, ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿರುವುದು ಅಕ್ಷಮ್ಯವಾಗಿದೆ.

ಪೆಟ್ರೋಲ್‌ ಬೆಲೆಯನ್ನು ಒಂದು ಲೀಟರ್‌ಗೆ 3 ರೂ. ಹಾಗೂ ಡೀಸೆಲ್‌ ಬೆಲೆಯನ್ನು ಲೀಟರ್‌ಗೆ 3.5 ರೂ. ಏರಿಕೆ ಮಾಡಿರುವುದು ಜನರ ಮೇಲೆ ನೇರವಾಗಿ, ನಿತ್ಯವೂ ಪರಿಣಾಮ ಬೀರುತ್ತದೆ. ಈಗಾಗಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇ ಜಾಸ್ತಿಯೇ ಇದ್ದ ಕಾರಣ ಮತ್ತೆ ಏರಿಕೆ ಮಾಡಿರುವುದು ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇರಿಕೆಯಿಂದ ಸಾಗಣೆ ವೆಚ್ಚ ಜಾಸ್ತಿಯಾಗುತ್ತದೆ. ಇದು ಅಗತ್ಯವಸ್ತುಗಳ ಬೆಲೆಯೇರಿಕೆಗೂ ಕಾರಣವಾಗುತ್ತದೆ. ಸಕಲ ರೀತಿಯಲ್ಲೂ ಜನರ ಜೇಬಿಗೆ ಭಾರವಾಗುತ್ತದೆ. ಪ್ರತಿದಿನವೂ ಬಡವರ ಹಣಕ್ಕೆ ಕತ್ತರಿ ಬೀಳುತ್ತದೆ. ಅಲ್ಲಿಗೆ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಪಡೆದುಕೊಂಡಂತೆ ಆಗುತ್ತದೆ. ಆಗ ಗ್ಯಾರಂಟಿಗಳ ಆಶಯವೇ ಮಣ್ಣುಪಾಲಾದಂತಾಗುತ್ತದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದಾಗ, ಅಡುಗೆ ಅನಿಲ ಸಿಲಿಂಡರ್‌ ಬೆಲೆಯೂ ಜಾಸ್ತಿ ಮಾಡಿದಾಗ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಬೆಲೆಯೇರಿಕೆಯನ್ನು ಖಂಡಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಚುನಾವಣೆ ಸಂದರ್ಭದಲ್ಲಿಯೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ‘ಬೆಲೆಯೇರಿಕೆ’ ಅಸ್ತ್ರವನ್ನೇ ಬಳಸಿದೆ. ಹೀಗಿರುವಾಗ, ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರವೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದರೆ ಹೇಗೆ? “ಗ್ಯಾರಂಟಿ ಯೋಜನೆಗಳಿಗೆ ಹಣ ಬೇಕಲ್ಲ, ಅದಕ್ಕಾಗಿ ಬೆಲೆಯೇರಿಕೆ ಮಾಡಿದ್ದೇವೆ” ಎಂದು ಸಚಿವ ಎಂ.ಬಿ.ಪಾಟೀಲ್‌ ಅವರು ಹೇಳಿರುವುದು ಯಾವ ರೀತಿಯಲ್ಲಿ ಸಮಂಜಸ? ಸಿದ್ದರಾಮಯ್ಯನವರೇ, ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದೆ. ಇದರಿಂದ ನಿಮ್ಮ ಸರ್ಕಾರಕ್ಕೆ ಹೆಸರೂ ಬಂದಿದೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ, ಕರ್ನಾಟಕದಲ್ಲಿ ನೀವು ನಿರೀಕ್ಷಿಸಿದಷ್ಟು ಸೀಟುಗಳು ಕಾಂಗ್ರೆಸ್‌ಗೆ ಬರದಿರುವ ಹೊತ್ತಿನಲ್ಲಿ ರಾಜ್ಯದ ಜನರ ಮೇಲೆ ಬೆಲೆಯೇರಿಕೆ ಅಸ್ತ್ರವನ್ನು ಬಳಸುತ್ತಿರುವುದು, ‘ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ’ ಎಂಬಂತಹ ವರ್ತನೆಯೇ? ಖಂಡಿತವಾಗಿಯೂ ಇದು ಜನ ವಿರೋಧಿ ಕ್ರಮ.

ಇದನ್ನೂ ಓದಿ: Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: 3ನೇ ಬಾರಿಯ ‘ವಿಸ್ತೃತ’ ಸರ್ಕಾರವು ‘ವಿಕಸಿತ ಭಾರತ’ಕ್ಕೆ ಶ್ರಮಿಸಲಿ

ಲೋಕಸಭೆ ಚುನಾವಣೆ ಫಲಿತಾಂಶವು ಹಲವು ಬದಲಾವಣೆಗಳಿಗೆ ಕಾರಣವಾಗಿದೆ. ಬಿಜೆಪಿಗೆ ಇದ್ದ ಬಹುಮತ ಈಗ ಇಲ್ಲದ ಕಾರಣ ಮೈತ್ರಿಪಕ್ಷಗಳ ಮರ್ಜಿಗೆ ಕಾಯಬೇಕಿದೆ. ಅತ್ತ, ಕಾಂಗ್ರೆಸ್‌ ಮುಂದಾಳತ್ವದ ಇಂಡಿಯಾ ಒಕ್ಕೂಟವೂ ಬಲಿಷ್ಠವಾಗಿದೆ. ಹಾಗಾಗಿ, 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ನರೇಂದ್ರ ಮೋದಿ ಅವರು ಮೈತ್ರಿಪಕ್ಷಗಳ ಜತೆ ಸಮನ್ವಯ ಸಾಧಿಸುವ ಜತೆಗೆ ಪ್ರತಿಪಕ್ಷಗಳನ್ನೂ ಎದುರಿಸಬೇಕಿದೆ. ಇದರ ಮಧ್ಯೆ, ವಿಕಸಿತ ಭಾರತದ ಕನಸು ಸಾಕಾರಗೊಳ್ಳಲು ಕೂಡ ನೂತನ ಸರ್ಕಾರ ಹೆಚ್ಚು ಶ್ರಮ ವಹಿಸಬೇಕಿದೆ.

VISTARANEWS.COM


on

pm narendra Modi Cabinet
Koo

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಬಹುಮತ ಸಾಧಿಸಿದ್ದು, ನರೇಂದ್ರ ಮೋದಿ (Narendra Modi) ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರ ಜತೆಗೆ ಅನುಭವಿಗಳು, ಮೈತ್ರಿ ಪಕ್ಷಗಳ ಸಂಸದರು, ಯುವ ಸಂಸದರು ಸೇರಿ ಹಲವು ಮಾನದಂಡಗಳನ್ನು ಆಧರಿಸಿ ಆಯ್ಕೆ ಮಾಡಿದ 72 ಸಂಸದರು ಸಚಿವರಾಗಿ (Modi 3.0 Cabinet) ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಸುಮಾರು 80 ದಿನಗಳಿಗೂ ಅಧಿಕ ಅವಧಿವರೆಗೆ 7 ಹಂತಗಳಲ್ಲಿ ಮತದಾನ ನಡೆದು, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ, ಈಗ ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ಸತತ ಮೂರನೇ ಬಾರಿಗೆ ಎನ್‌ಡಿಎ ಸರ್ಕಾರವೇ ಅಧಿಕಾರಕ್ಕೆ ಬಂದಿದೆ. ಹಾಗಾಗಿ, ಚುನಾವಣೆ ಸಮಯದ ರಾಜಕೀಯ ಮೇಲಾಟ, ಆರೋಪ, ಪ್ರತ್ಯಾರೋಪ, ಟೀಕೆ, ವ್ಯಂಗ್ಯ, ತಿರುಗೇಟುಗಳನ್ನು ಬಿಟ್ಟು, ಆಡಳಿತ ಪಕ್ಷದವರು ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ನಿರ್ಮಾಣದ ಕನಸನ್ನು ನನಸಾಗಿಸಲು ಶ್ರಮಿಸಬೇಕಿದೆ. ಚುನಾವಣೆ ನೀತಿ ಸಂಹಿತೆ, ಫಲಿತಾಂಶದ ಹಿನ್ನೆಲೆಯಲ್ಲಿ ನಿಂತ ನೀರಾಗಿದ್ದ ಆಡಳಿತ ಯಂತ್ರಕ್ಕೆ ಈಗ ವೇಗ ನೀಡಬೇಕಿದೆ.

ಹಾಗೆ ನೋಡಿದರೆ, ವಿಕಸಿತ ಭಾರತದ ಕಲ್ಪನೆ ಸಾಕಾರಗೊಳಿಸಲು ದೇಶದಲ್ಲಿ ಸಕಾರಾತ್ಮಕ ವಾತಾವರಣವೇ ಇದೆ. ದೇಶದ ಜಿಡಿಪಿ ಬೆಳವಣಿಗೆಯ ಕುರಿತು ಅಂದಾಜಿಸಲಾಗಿದೆ. ಹಣದುಬ್ಬರವೂ ನಿಯಂತ್ರಣಕ್ಕೆ ಬರುತ್ತಿದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಮೂಲ ಸೌಕರ್ಯ ಯೋಜನೆಗಳಿಗೆ ಒತ್ತು ನೀಡಿರುವುದು, ರೈಲು, ರೈಲು ನಿಲ್ದಾಣಗಳ ಆಧುನೀಕರಣ, ದಾಖಲೆ ವೇಗದಲ್ಲಿ ರಸ್ತೆ ನಿರ್ಮಾಣ, ಅತ್ಯಾಧುನಿಕ ವಿಮಾನ ನಿಲ್ದಾಣಗಳು ತಲೆ ಎತ್ತಿರುವುದು, ಇಸ್ರೋ ಬಾಹ್ಯಾಕಾಶ ಯೋಜನೆಗಳಿಗೆ ಉತ್ತೇಜನ ನೀಡಿರುವುದು ಸೇರಿ ಹಲವು ಕಾರ್ಯಕ್ರಮಗಳು ದೇಶದ ಅಭಿವೃದ್ದಿ ಮಾನದಂಡವನ್ನು ದುಪ್ಪಟ್ಟುಗೊಳಿಸಿವೆ. ಇದರಿಂದಾಗಿ ಸರ್ಕಾರದ ಸಚಿವರು, ಸಂಸದರು ವಿಕಸಿತ ಭಾರತದ ಕಲ್ಪನೆಯ ಸಾಕಾರಗೊಳಿಸಲು ಹೆಚ್ಚಿನ ಶ್ರಮ ವಹಿಸಬೇಕು. ಹೊಸ ಹೊಸ ಯೋಜನೆಗಳು, ಯೋಜನೆಗಳ ಸಮರ್ಪಕ ಜಾರಿ ಮೂಲಕ ದೇಶದ ಏಳಿಗೆಗೆ ಇನ್ನಷ್ಟು ಕೊಡುಗೆ ನೀಡಬೇಕು.

ಕೇಂದ್ರದಲ್ಲಿ 10 ವರ್ಷಗಳಿಂದ ಇದ್ದ ಬಹುಮತದ ಸರ್ಕಾರ ಈಗಿಲ್ಲ. ಬಿಜೆಪಿಯು 240 ಸೀಟುಗಳಿಗೆ ಸೀಮಿತವಾಗಿದ್ದು, ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಗಾಗಿ, ಮೋದಿ ಸರ್ಕಾರವು ಸುಸ್ಥಿರ ಆಡಳಿತ ನೀಡಬೇಕು ಎಂದರೆ ಮೈತ್ರಿಕೂಟದಲ್ಲಿ ಸ್ಥಿರತೆ ಕಾಪಾಡಬೇಕು, ಸಮನ್ವಯತೆ ಸಾಧಿಸಬೇಕು. ಪ್ರಾದೇಶಿಕ ಪಕ್ಷಗಳಿಗೆ, ಪ್ರಾದೇಶಿಕ ಪಕ್ಷಗಳ ರಾಜ್ಯಗಳಿಗೆ ಹೆಚ್ಚಿನ ಮನ್ನಣೆ ನೀಡಬೇಕು. ಧರ್ಮ, ಜಾತಿಯ ವಿಷಯಗಳಿಗೆ ಪ್ರಾಮುಖ್ಯತೆ ಕೊಡದೆ, ಎಲ್ಲ ಮೈತ್ರಿ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರವನ್ನು ಮುನ್ನಡೆಸಬೇಕು. ಮೋದಿ ಸರ್ಕಾರವು ಉದ್ಯಮಿಗಳ ಪರವಾದ ಸರ್ಕಾರ ಎಂಬ ಕುಖ್ಯಾತಿ ಇತ್ತೀಚಿನ ವರ್ಷಗಳಲ್ಲಿ ಜಾಸ್ತಿಯಾಗಿದೆ. ಅಡುಗೆ ಅನಿಲ, ಪೆಟ್ರೋಲ್-ಡೀಸೆಲ್‌ ಸೇರಿ ಅಗತ್ಯ ವಸ್ತುಗಳ ಬೆಲೆಯೇರಿಕೆಯು ಬಡ ಹಾಗೂ ಮಧ್ಯಮ ವರ್ಗದವರನ್ನು ಹೈರಾಣಾಗಿಸಿದೆ. ಇಂತಹ ವಿಷಯಗಳ ಕುರಿತು ಮೋದಿ ಹಾಗೂ ಟೀಮ್‌ ಗಮನ ಹರಿಸಬೇಕು. ಬಜೆಟ್‌ನಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರಿಗೆ ನೇರವಾಗಿ ಅನುಕೂಲವಾಗುವ (ಕಿಸಾನ್‌ ಸಮ್ಮಾನ್‌, ಅಡುಗೆ ಅನಿಲ ಸಿಲಿಂಡರ್‌ಗಳಿಗೆ ಸಬ್ಸಿಡಿ ಹೆಚ್ಚಳ ಇತ್ಯಾದಿ) ಯೋಜನೆಗಳನ್ನು ಘೋಷಿಸಬೇಕು.

ಕಳೆದ 10 ವರ್ಷಗಳಲ್ಲಿ ಲೋಕಸಭೆಯಲ್ಲಿ ಬಲಿಷ್ಠ ಪ್ರತಿಪಕ್ಷವೇ ಇರಲಿಲ್ಲ. ಕಾಂಗ್ರೆಸ್‌ ಸೇರಿ ಯಾವೊಂದು ಪಕ್ಷವೂ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯುವಷ್ಟು ಸಮರ್ಥವಾಗಿರಲಿಲ್ಲ. ಇದು ಕೂಡ ಮೋದಿ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟಿತ್ತು. ಆದರೆ, ಫಲಿತಾಂಶದ ಬಳಿಕ ಚಿತ್ರಣ ಬದಲಾಗಿದೆ. ಕಾಂಗ್ರೆಸ್‌ 52 ಕ್ಷೇತ್ರಗಳಿಂದ 99 ಕ್ಷೇತ್ರಗಳಿಗೆ ತನ್ನ ಸದಸ್ಯ ಬಲವನ್ನು ಹೆಚ್ಚಿಸಿಕೊಂಡಿದೆ. ಇಂಡಿಯಾ ಒಕ್ಕೂಟವು ಒಗ್ಗಟ್ಟಾಗಿ 232 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಹಾಗಾಗಿ, ಸಮ್ಮಿಶ್ರ ಸರ್ಕಾರಕ್ಕೆ ಆಡಳಿತ ನಡೆಸುವುದು ಹಗ್ಗದ ಮೇಲಿನ ನಡಿಗೆಯೇ ಆಗಿದೆ. ಇನ್ನು, ಕಳೆದ 10 ವರ್ಷಗಳಿಂದ ಬಲಿಷ್ಠವಾಗಿ, ಸಮರ್ಥವಾಗಿ ಕಾರ್ಯನಿರ್ವಹಿಸದ ಪ್ರತಿಪಕ್ಷಗಳು ಇನ್ನಾದರೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಬೇಕು. ಸರ್ಕಾರ ಲಯ ತಪ್ಪಿದಾಗ ಸರಿದಾರಿಗೆ ತರಬೇಕು. ಸರ್ಕಾರಕ್ಕೆ ಆಗಾಗ ಎಚ್ಚರಿಕೆ ನೀಡುವ ಜತೆಗೆ ಚಾಟಿ ಬೀಸಬೇಕು. ಒಟ್ಟಿನಲ್ಲಿ, ಸಬಲ ಸಮ್ಮಿಶ್ರ ಸರ್ಕಾರ ಹಾಗೂ ಪ್ರಬಲ ಪ್ರತಿಪಕ್ಷಗಳು ಕೂಡಿ ದೇಶದ ಏಳಿಗೆಗೆ, ವಿಕಸಿತ ಭಾರತ ಕಲ್ಪನೆಯ ಸಾಕಾರಕ್ಕೆ ಶ್ರಮಿಸಬೇಕು ಎಂಬುದೇ ಎಲ್ಲರ ಆಶಯವಾಗಿದೆ.

ಇದನ್ನೂ ಓದಿ: Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Continue Reading
Advertisement
Vaccin for Hiv
ಆರೋಗ್ಯ21 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ29 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ44 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ47 mins ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ48 mins ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ56 mins ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ1 hour ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

ದೇಶ2 hours ago

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌