Kalki 2898 AD: ಮೇ 22ಕ್ಕೆ ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ; ಕಲ್ಕಿ ಚಿತ್ರದ 5ನೇ ಸೂಪರ್ ಸ್ಟಾರ್ ಯಾರು? - Vistara News

ಪ್ರಮುಖ ಸುದ್ದಿ

Kalki 2898 AD: ಮೇ 22ಕ್ಕೆ ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ; ಕಲ್ಕಿ ಚಿತ್ರದ 5ನೇ ಸೂಪರ್ ಸ್ಟಾರ್ ಯಾರು?

Kalki 2898 AD: ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ, ಯಂಗ್ ರೆಬೆಲ್‌ ಸ್ಟಾರ್ ಪ್ರಭಾಸ್‌ ಅಭಿನಯದ ‘ಕಲ್ಕಿ 2898 AD’ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

VISTARANEWS.COM


on

Kalki 2898 AD
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ಕಲ್ಕಿ 2898 AD’ (Kalki 2898 AD) ಬಿಡುಗಡೆಗೆ ಇನ್ನು ಕೇವಲ ಎರಡು ತಿಂಗಳಷ್ಟೇ ಬಾಕಿ ಇದೆ. ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಬೆಟ್ಟದಷ್ಟು ನಿರೀಕ್ಷೆ ಮತ್ತು ಕುತೂಹಲವಿದೆ. ಈಗ ಚಿತ್ರದ ಐದನೇ ಸೂಪರ್‌ ಸ್ಟಾರ್ ಅನ್ನು ಮೇ 22ರಂದು ಅನಾವರಣಗೊಳಿಸುವುದಾಗಿ ಚಿತ್ರತಂಡ ಘೋಷಿಸಿದೆ.

ಈ ಐದನೇ ಸೂಪರ್‌ ಸ್ಟಾರ್‌ ಯಾರು? ಈ ರಹಸ್ಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಹೆಸರು ಬುಜ್ಜಿ ಮತ್ತು ಈತ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯನಂತೆ. ಈ ಗೆಳೆಯನ ಕುರಿತು ಯುಟ್ಯೂಬ್‍ನ ವೈಜಯಂತಿ ನೆಟ್‍ವರ್ಕ್ ಚಾನಲ್‍ನಲ್ಲಿ ಹೊಸ ವೀಡಿಯೊ ಬಿಡುಗಡೆ ಮಾಡಲಾಗಿದೆ.

‘From Skratch: Building A Superstar’ ಹೆಸರಿನ ಈ ವಿಡಿಯೊದಲ್ಲಿ ಬುಜ್ಜಿಯ ಕುರಿತು ಪರಿಚಯ ಮಾಡಿಕೊಡಲಾಗಿದೆ. 2020ರ ಜೂನ್‍ನಲ್ಲಿ ಅಂಥದ್ದೊಂದು ಪಾತ್ರದ ಸೃಷ್ಠಿ ಹೇಗಾಯಿತು ಎಂದು ಪ್ರಾರಂಭವಾಗುವುದರಿಂದ, ಅಂತಿಮವಾಗಿ ಅದು ಹೇಗೆ ರೂಪುಗೊಂಡಿತು ಎಂಬುದನ್ನು ಈ ವಿಡಿಯೊದಲ್ಲಿ ತೋರಿಸಲಾಗಿದೆ.

ಭೈರವನ ಅಚ್ಚುಮೆಚ್ಚಿನ ಗೆಳೆಯನ ಕುರಿತು ಸಾಕಷ್ಟು ಬಿಲ್ಡಪ್‍ ನೀಡಲಾಗಿದ್ದು, ಈ ಐದನೇ ಸೂಪರ್‌ ಸ್ಟಾರ್ ಯಾರಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮನೆಮಾಡಿದೆ. ಬುಜ್ಜಿ ಯಾರು ಎಂಬ ಪ್ರಶ್ನೆಗೆ, ಎರಡು ನಿಮಿಷ 22 ಸೆಕೆಂಡ್‍ನ ಈ ವಿಡಿಯೊದಲ್ಲಿ ಚಿತ್ರಕ್ಕೆ ದುಡಿದ ಹಲವು ತಂತ್ರಜ್ಞರು ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ. ಇಷ್ಟಕ್ಕೂ ಬುಜ್ಜಿ ಯಾರು? ಉತ್ತರಕ್ಕಾಗಿ ಮೇ 22ರವರೆಗೂ ಕಾಯಬೇಕು.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಇದನ್ನೂ ಓದಿ | Kalki 2898 AD: ಪ್ರಭಾಸ್‌ ಜೀವನದಲ್ಲಿ ಎಂಟ್ರಿ ಆದ ವ್ಯಕ್ತಿ ಇವರೇನಾ? ಏನದು ʻಬುಜ್ಜಿʼ?

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

Kalki 2898 AD
Kalki 2898 AD

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ (Kalki 2898 AD) ಕೂಡ ಒಂದು. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchanಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮಹತ್ವದ ಅಪ್‌ಡೇಟ್‌ ಹೊರ ಬಿದ್ದಿದ್ದು, ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ.

ವಿವಿಧ ಭಾಷೆಗಳಲ್ಲಿ ʼಕಲ್ಕಿ 2898 ಎಡಿʼ ಸಿನಿಮಾ ತೆರೆಗೆ ಬರಲಿದೆ. ಈ ಪೈಕಿ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ಸ್ವತಃ ದೀಪಿಕಾ ಅವರೇ ಡಬ್‌ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಅದರ ಬಳಿಕ ಅವರು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ಕನ್ನಡದಲ್ಲಢ ಡಬ್‌ ಮಾಡಿರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಜೂನ್‌ 27ರಂದು ಬಿಡುಗಡೆ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಗಿತ್ತು. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮೊದಲೇ ಒಪ್ಪಂದ ಮಾಡಿಕೊಂಡಂತೆ ಈ ತಿಂಗಳಲ್ಲಿ ಪ್ರೊಮೊಷನ್‌ ನಡೆಸಿಕೊಂಡಲಿದ್ದಾರೆ. ಅದರ ಭಾಗವಾಗಿ ವಿವಿಧ ಮಾಧ್ಯಮಗಳು ಅವರ ಸಂದರ್ಶನವನ್ನು ಚಿತ್ರೀಕರಿಸಲು ತಯಾರಿ ನಡೆಸಿವೆ ಎನ್ನಲಾಗಿದೆ. ಇದರ ಜತೆಗೆ ಡಬ್ಬಿಂಗ್‌ ಅನ್ನೂ ಅವರು ಪೂರ್ಣಗೊಳಿಸಲಿದ್ದಾರೆ. ಸೆಪ್ಟಂಬರ್‌ನಲ್ಲಿ ಮಗು ಜನಿಸುವ ನಿರೀಕ್ಷೆ ಇದ್ದು, ಬಾಕಿ ಇರುವ ಸಿನಿಮಾ ಚಟುವಟಿಕೆಗಳನ್ನೆಲ್ಲ ನಡೆಸಿ ದೀಪಿಕಾ ಜೂನ್‌ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಅಶ್ವತ್ಥಾಮನಾಗಿ ಗಮನ ಸೆಳೆದ ಅಮಿತಾಭ್‌

ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿರುವ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರ ಲುಕ್‌ ರಿಲೀಸ್‌ ಆಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಏ. 21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಫಸ್ಟ್‌ಲುಕ್‌ ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅಭಿಮಾನಿಗಳನ್ನು ಆಕರ್ಷಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Kalki 2898 – AD: ʻಪ್ರಾಜೆಕ್ಟ್‌ ಕೆʼ ಸಿನಿಮಾ ಟೈಟಲ್‌ ರಿವೀಲ್‌; ಪ್ರಭಾಸ್‌, ದೀಪಿಕಾ, ಅಮಿತಾಭ್‌ ಲುಕ್‌ ಔಟ್‌!

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

Jasprit Bumrah : ಭಾರತವು ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ ಬುಮ್ರಾ ತಮ್ಮ ಪತ್ನಿ ಸಂಜನಾ ಗಣೇಶನ್ ಅವರೊಂದಿಗೆ ಮಾತನಾಡಿದರು. ಈ ಪಂದ್ಯಾವಳಿಯಲ್ಲಿ ಐಸಿಸಿ ಪರವಾಗಿ ಕೆಲಸ ಮಾಡುತ್ತಿರುವ ಗಣೇಶನ್ ಅವರು ವಿಶ್ವಕಪ್ ಗೆದ್ದ ಬಗ್ಗೆ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಬುಮ್ರಾ ಅವರನ್ನು ಕೇಳಿದರು.

VISTARANEWS.COM


on

Jasprit Bumrah
Koo

ಬೆಂಗಳೂರು: ಭಾರತ ತಂಡದ ವೇಗದ ಬೌಲರ್​ ಜಸ್​ಪ್ರಿತ್​ ಬುಮ್ರಾ (Jasprit Bumrah) ಟಿ20 ವಿಶ್ವಕಪ್​ನಲ್ಲಿ 15 ವಿಕೆಟ್​ಗಳನ್ನು ಉರುಳಿಸಿದ್ದಾರೆ. ಅವರು ಭಾರತ ವಿಶ್ವಕಪ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಫೈನಲ್​ನಲ್ಲಿ ಅವರು ರೀಜಾ ಹೆಂಡ್ರಿಕ್ಸ್ ಮತ್ತು ಮಾರ್ಕೊ ಜೆನ್ಸರ್​ ವಿಕೆಟ್​ಗಳನ್ನು ಉರುಳಿಸಿದ್ದಾರೆ. ಭಾರತದ ಪಾಲಿಗೆ ಎರಡೂ ಪ್ರಮುಖ ವಿಕೆಟ್​ಗಳಾಗಿವೆ. ಬುಮ್ರಾ ವಿಶ್ವಕಪ್​ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಟೂರ್ನಿಯುದ್ದಕ್ಕೂ ರೋಹಿತ್ ಶರ್ಮಾ ಅವರ ಪ್ರಮುಖ ಬೌಲರ್​ ಆಗಿದ್ದರು.

ಫೈನಲ್​​ನಲ್ಲಿ ವಿರಾಟ್ ಕೊಹ್ಲಿ 76 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮತ್ತೊಂದೆಡೆ, ವಿಶ್ವಕಪ್​ನಾದ್ಯಂತ ಬೌಲಿಂಗ್​ ಸ್ಥಿರತೆಗಾಗಿ ಬುಮ್ರಾ ಅವರನ್ನು ಪಂದ್ಯಾವಳಿಯ ಉತ್ತಮ ಆಟಗಾರ ಎಂದು ಹೆಸರಿಸಲಾಯಿತು. ಭಾರತವು ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ ಬುಮ್ರಾ ತಮ್ಮ ಪತ್ನಿ ಸಂಜನಾ ಗಣೇಶನ್ ಅವರೊಂದಿಗೆ ಮಾತನಾಡಿದರು. ಈ ಪಂದ್ಯಾವಳಿಯಲ್ಲಿ ಐಸಿಸಿ ಪರವಾಗಿ ಕೆಲಸ ಮಾಡುತ್ತಿರುವ ಗಣೇಶನ್ ಅವರು ವಿಶ್ವಕಪ್ ಗೆದ್ದ ಬಗ್ಗೆ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಬುಮ್ರಾ ಅವರನ್ನು ಕೇಳಿದರು.

“ಇದು ನಿಜವಾಗಿಯೂ ಖುಷಿಯ ವಿಚಾರ. ಇನ್ನಿಂಗ್ಸ್ ನ ಮಧ್ಯದಲ್ಲಿ ನಮಗೆ ಆತ್ಮವಿಶ್ವಾಸವಿತ್ತು. ಆದರೆ ಅದು ಹೇಗೆ ಸಾಗುತ್ತೇವೆ ಎಂದು ನಾವು ಹೆದರಿದ್ದೆವು. ಆದರೆ ಈ ರೀತಿಯ ಗೆಲುವನ್ನು ಪಡೆಯಲು ನಿಜವಾಗಿಯೂ ಸಂತೋಷವಾಗಿದೆ.. ಇದು ಉತ್ತಮ ಟೂರ್ನಿ ಎಂದು ಬುಮ್ರಾ ಹೇಳಿದ್ದಾರೆ. ಪುತ್ರ ಅಂಗದ್​ ಕೂಡ ಜತೆಯಲ್ಲಿರುವ ಕಾರಣ ಆತನೊಂದಿಗೆ ವಿಶ್ವ ಕಪ್​ ಗೆಲುವು ಸಂಭ್ರಮಿಸುವುದು ಖುಷಿಯ ವಿಚಾರ ಎಂದು ಅವರು ಹೇಳಿದ್ದಾರೆ.

“ನಮ್ಮ ಪುತ್ರ ಅಂಗದ್ ಕೂಡ ಇಲ್ಲಿದ್ದಾನೆ. ಆತ ನಾವು ವಿಶ್ವಕಪ್ ಗೆದ್ದಿರುವುದನ್ನು ನೋಡಿದ್ದಾನೆ ಇದಕ್ಕಿಂತ ಉತ್ತಮ ಭಾವನೆ ಇಲ್ಲ. ಈ ರೀತಿಯ ಪಂದ್ಯಾವಳಿಯಲ್ಲಿ ಭಾರತಕ್ಕೆ ಕೊಡುಗೆ ನೀಡಿದ್ದಕ್ಕೆ ಸಂತೋಷವಿದೆ” ಎಂದು ವೇಗಿ ಹೇಳಿದ್ದಾರೆ.

ಈ ಟಿ 20 ವಿಶ್ವಕಪ್​​ನಲ್ಲಿ ಭಾರತದ ಅಜೇಯ ಓಟದ ಬಗ್ಗೆ ಪ್ರತಿಕ್ರಿಯಿಸಿದ ಬುಮ್ರಾ, “ಎಲ್ಲಾ ಪ್ರಶಂಸೆಗಳು ಕಡಿಮೆ. ನಾವು ನಿರೀಕ್ಷೆಗಳೊಂದಿಗೆ ಬಂದಿದ್ದೆವು. ನಾವು ನಮ್ಮ ಆಟಕ್ಕೆ ಅಂಟಿಕೊಂಡಿದ್ದೆವು. ಕೊನೆಯ ಹಂತಗಳಲ್ಲಿಯೂ, ನಾವು ಭಯಭೀತರಾಗಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ

ಭಾರತೀಯ ವೇಗಿ ಇಡೀ ಭಾರತೀಯ ಬೌಲಿಂಗ್ ವಿಭಾಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ನಿಜವಾಗಿಯೂ ಖುಷಿಯ ವಿಚಾರ. ಎಲ್ಲ ಬೌಲರ್​ಗಳು ತುಂಬಾ ಆತ್ಮವಿಶ್ವಾಸ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಾಮಾನ್ಯವಾಗಿ, ನಾನು ನನ್ನ ಭಾವನೆಗಳನ್ನು ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತೇನೆ. ಆದರೆ ಈ ಬಾರಿ, ಇದು ಅವಾಸ್ತವಿಕ ಭಾವನೆಯಾಗಿದೆ” ಎಂದು ಬುಮ್ರಾ ಸಂತೋಷ ವ್ಯಕ್ತಪಡಿಸಿದ್ದಾರೆ. ನಾನು ಚಂದ್ರನ ಮೇಲೆ ಇದ್ದೇನೆ, ವಿಶೇಷವಾಗಿ ನನ್ನ ಕುಟುಂಬದೊಂದಿಗೆ ಇಲ್ಲಿದ್ದೇನೆ ಎಂದು ಭಾವಿಸುವೆ ಎಂದು ಭಾರತೀಯ ವೇಗಿ ಹೇಳಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಲು ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ತಂತ್ರಗಾರಿಕೆಯ ನಿರ್ಧಾರವು ಫಲ ನೀಡಿತು. ಅಂತಿಮವಾಗಿ ದಕ್ಷಿಣ ಆಫ್ರಿಕಾ ಚೇಸಿಂಗ್​​ನಲ್ಲಿ ಒತ್ತಡಕ್ಕೆ ಸಿಲುಕಿತು. ಅಂತಿಮ ಐದು ಓವರ್ಗಳಲ್ಲಿ 30 ರನ್​ಗಳ ಅಗತ್ಯವಿದ್ದ ದಕ್ಷಿಣ ಆಫ್ರಿಕಾ ವಿಫಲಗೊಂಡಿತು.

Continue Reading

ಪ್ರಮುಖ ಸುದ್ದಿ

Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ

Ravindra Jadeja : ರವೀಂದ್ರ ಜಡೇಜಾ ಅವರ ಅಂತಾರಾಷ್ಟ್ರೀಯ ಟಿ20ಗೆ ವಿದಾಯ ಹೇಳುವುದರೊಂದಿಗೆ ಟಿ20 ವಿಶ್ವ ಕಪ್​ ಗೆಲುವಿನ ಬಳಿಕ ಭಾರತ ತಂಡದಿಂದ ಟಿ20 ವಿಶ್ವ ಕಪ್​ಗೆ ವಿದಾಯ ಹೇಳಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.

VISTARANEWS.COM


on

Ravindra jadeja
Koo

ಬೆಂಗಳೂರು: ಭಾರತದ ತಂಡ ಸ್ಟಾರ್​ ಆಲ್​ರೌಂಡರ್​ ರವೀಂದ್ರ ಜಡೇಜಾ (Ravindra Jadeja ) ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಹ್ಯಾಂಡಲ್​ ಮೂಲಕ ಟಿ 20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. “ಕೃತಜ್ಞತೆ ತುಂಬಿದ ಹೃದಯದಿಂದ ನಾನು ಟಿ 20 ಅಂತರರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತಿದ್ದೇನೆ. ಹೆಮ್ಮೆಯಿಂದ ಓಡುವ ದೃಢವಾದ ಕುದುರೆಯಂತೆ ನಾನು ಯಾವಾಗಲೂ ನನ್ನ ದೇಶಕ್ಕಾಗಿ ನನ್ನ ಅತ್ಯುತ್ತಮವಾದುದ್ದನ್ನು ನೀಡಿದ್ದೇನೆ. ಕ್ರಿಕೆಟ್​​ನ ಇತರ ಸ್ವರೂಪಗಳಲ್ಲಿ ಆಟ ಮುಂದುವರಿಸುತ್ತೇನೆ. ಟಿ 20 ವಿಶ್ವಕಪ್ ಗೆಲ್ಲುವುದು ನನ್ನ ಕನಸು ನನಸಾಗಿತ್ತು. ಅದು ನನಸಾಗಿದೆ. ನನ್ನ ಟಿ 20 ಅಂತರರಾಷ್ಟ್ರೀಯ ವೃತ್ತಿಜೀವನದ ಉತ್ತುಂಗವಾಗಿದೆ. ನೆನಪುಗಳು, ಅಚಲ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.

ಸ್ಪಿನ್-ಬೌಲಿಂಗ್ ಆಲ್ರೌಂಡರ್ ಎಂಎಸ್ ಧೋನಿ ನಾಯಕತ್ವದಲ್ಲಿ ತಂಡಕ್ಕೆ ಕಾಲಿಟ್ಟಿದ್ದರು. ಅಲ್ಲಿಂದ ಸಾಕಷ್ಟು ಸಾಧನೆ ಮಾಡಿದ್ದಾರೆ. ಆದರೆ ಇತ್ತೀಚೆಗೆ ಮುಕ್ತಾಯಗೊಂಡ ಪಂದ್ಯಾವಳಿಯಲ್ಲಿ ಅವರು ಹೆಚ್ಚು ಪ್ರಭಾವಶಾಲಿ ಪ್ರದರ್ಶನ ನೀಡಿರಲಿಲ್ಲ. 2009ರಲ್ಲಿ ಶ್ರೀಲಂಕಾ ವಿರುದ್ಧ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಅವರು 74 ಪಂದ್ಯಗಳನ್ನು ಆಡಿದ್ದು, 515 ರನ್ ಹಾಗೂ 54 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

2024ರ ಟಿ20 ವಿಶ್ವಕಪ್ ಗೆದ್ದ ಮರುದಿನವೇ ಆಲ್​ರೌಂಡ್​​ ರವೀಂದ್ರ ಜಡೇಜಾ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ತಂಡದಲ್ಲಿ ವಿದಾಯ ಹೇಳಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಅದಕ್ಕಿಂತ ಮೊದಲು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಬಾರ್ಬಡೋಸ್​ನ ಕೆನ್ಸಿಂಗ್ಟನ್​ ಓವಲ್​​ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ 20 ವಿಶ್ವಕಪ್ ಟ್ರೋಫಿಯನ್ನು ಭಾರತ 7 ರನ್​ಗಳಿಂದ ಗೆದ್ದುಕೊಂಡಿತು. ಐಸಿಸಿ ಪ್ರಶಸ್ತಿ ಗೆಲುವಿನ ನಂತರ ಭಾರತ ಸಂಭ್ರಮದಲ್ಲಿರುವಾಗ ಜಡೇಜಾ ಅವರು ವಿರಾಟ್ ಕೊಹ್ಲಿ ಮತ್ತು ಅವರ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂಬಾಲಿಸಿದರು.

ವಿಶ್ವ ಕಪ್​ನಲ್ಲಿ ಜಡೇಜಾ ಉತ್ತಮ ಫಾರ್ಮ್​​ನಲ್ಲಿ ಇರಲಿಲ್ಲ. ಆದರೆ ಕಳೆದ ದಶಕದಲ್ಲಿ ವಿಶ್ವ ಕ್ರಿಕೆಟ್​ನಲ್ಲಿ ಅವರು ಪ್ರಾಬಲ್ಯ ಸಾಧಿಸಿದ್ದರು. ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತೀಯ ತಂಡದ ಆಸ್ತಿಯಾಗಿದ್ದರು. ಸಾರ್ವಕಾಲಿಕ ಅತ್ಯುತ್ತಮ ಆಲ್ರೌಂಡರ್ಗಳಲ್ಲಿ ಒಬ್ಬರೆಂದು ಕರೆಯಲ್ಪಡುವ ಜಡೇಜಾ ಸುಮಾರು 36 ನೇ ವಯಸ್ಸಿನಲ್ಲಿ ಟಿ 20 ಐ ಕ್ರಿಕೆಟ್​ನಿಂದ ವಿದಾಯ ಹೇಳಿದ್ದಾರೆ. ಅವರು ಐಪಿಎಲ್​ನಲ್ಲಿ ಮುಂದುವರಿಯಲಿದ್ದಾರೆ.

2022 ರಲ್ಲಿ ಇಂಗ್ಲೆಂಡ್ ವಿರುದ್ಧ ಬ್ಯಾಟಿಂಗ್​ನಲ್ಲಿ ಅವರ ಅತ್ಯುತ್ತಮ ಪ್ರದರ್ಶನವು ಬಂದಿದ್ದವು. ಅಲ್ಲಿ ಅವರು 29 ಎಸೆತಗಳಲ್ಲಿ 46 ರನ್ ಗಳಿಸಿದ್ದರು. ಆ ಪಂದ್ಯವನ್ನು ಭಾರತ 49 ರನ್​ಗಳಿಂದ ಗೆದ್ದಿತ್ತು. ದುಬೈನಲ್ಲಿ ನಡೆದ 2021 ರ ಟಿ 20 ವಿಶ್ವಕಪ್​​ನಲ್ಲಿ ಸ್ಕಾಟ್ಲೆಂಡ್ ವಿರುದ್ಧ ಅವರು ಬೌಲಿಂಗ್​ನಲ್ಲಿ 15 ನೀಡಿ 3 ವಿಕೆಟ್ ಉರುಳಿಸಿದ್ದರು.

ಜಡೇಜಾ ಅವರ ಅತ್ಯಂತ ಗಮನಾರ್ಹ ಲಕ್ಷಣವೆಂದರೆ ಅವರ ಫೀಲ್ಡಿಂಗ್. ಸುರೇಶ್ ರೈನಾ ಮತ್ತು ಯುವರಾಜ್ ಸಿಂಗ್ ಅವರಂತಹ ಆಟಗಾರರನ್ನು ನಾವು ಹೊಂದಿದ್ದ ಸಮಯದಲ್ಲಿ ಸೌರಾಷ್ಟ್ರದ ಆಟಗಾರ ತಮ್ಮ ವೃತ್ತಿಜೀವನದುದ್ದಕ್ಕೂ ಅನೇಕ ಸಂದರ್ಭಗಳಲ್ಲಿ ಉತ್ತಮ ಫೀಲ್ಡಿಂಗ್ ಮಾಡಿದ್ದಾರೆ. ಅವರು ಎದುರಾಳಿ ತಂಡಕ್ಕೆ 20 ರನ್​ಗಳನ್ನು ಫೀಲ್ಡಿಂಗ್​ನಲ್ಲಿ ಬಿಟ್ಟುಕೊಡುತ್ತಿರಲಿಲ್ಲ.

ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರು ನಿಯೋಜಿತ ಆಲ್​ರೌಂಡರ್​ಗಳಾಗಿ ತಂಡ ಸೇರಿಕೊಂಡಿದ್ದಾರೆ. ಹೀಗಾಗಿ ಜಡೇಜಾ ಈಗ ಏಕದಿನ ಮತ್ತು ಟೆಸ್ಟ್ ಸ್ವರೂಪಗಳತ್ತ ಗಮನ ಹರಿಸಿದ್ದಾರೆ.

Continue Reading

ಕ್ರಿಕೆಟ್

T20 World Cup 2024 : ಚಾಂಪಿಯನ್ ಭಾರತಕ್ಕೆ ಪಾಕಿಸ್ತಾನ ಆಟಗಾರರು ಶುಭ ಕೋರಿದ್ದು ಹೀಗೆ…

T20 World Cup 2024 : 2016ರಲ್ಲಿ ಭಾರತವು ಸೆಮಿಫೈನಲ್​​ನಲ್ಲಿ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ ಸೋತಿತ್ತು. 2021 ರಲ್ಲಿ ಮುಂದಿನ ಗುಂಪು ಹಂತದ ನಿರ್ಗಮನ ಕಂಡಿತು. 2022 ರಲ್ಲಿ, ಟಿ 20 ವಿಶ್ವಕಪ್​​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಸೆಮಿಫೈನಲ್​ನಲ್ಲಿ ಟ್ರೋಫಿ ವಿಜೇತ ಇಂಗ್ಲೆಂಡ್ ವಿರುದ್ಧ ಸೋತಿತ್ತು. ಆ ಸೋಲು ನಿಜವಾಗಿಯೂ ಭಾರತೀಯ ತಂಡಕ್ಕೆ ರಿಯಾಲಿಟಿ ಚೆಕ್ ಆಗಿತ್ತು.

VISTARANEWS.COM


on

T20 World Cup 2024
Koo

ನವದೆಹಲಿ: ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ (T20 World Cup 2024) ಅದ್ಭುತ ಗೆಲುವು ಸಾಧಿಸಿದ ಭಾರತ ತಂಡವನ್ನು ಪಾಕಿಸ್ತಾನದ ಮಾಜಿ ಮತ್ತು ಪ್ರಸ್ತುತ ಆಟಗಾರರು ಅಭಿನಂದಿಸಿದ್ದಾರೆ. ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​​ನಲ್ಲಿ ನಡೆದ ಐಸಿಸಿ ಟಿ 20 ವಿಶ್ವಕಪ್ 2024 ರ ಫೈನಲ್ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಏಡೆನ್ ಮಾರ್ಕ್ರಮ್ ನೇತೃತ್ವದ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ಗಳ ವಿಜಯ ಸಾಧಿಸಿದೆ. 2014ರ ಆವೃತ್ತಿಯ ಫೈನಲ್​ನಲ್ಲಿ ಸೋತ ಬಳಿಕ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆದ್ದಿದೆ.

2016ರಲ್ಲಿ ಭಾರತವು ಸೆಮಿಫೈನಲ್​​ನಲ್ಲಿ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ ಸೋತಿತ್ತು. 2021 ರಲ್ಲಿ ಮುಂದಿನ ಗುಂಪು ಹಂತದ ನಿರ್ಗಮನ ಕಂಡಿತು. 2022 ರಲ್ಲಿ, ಟಿ 20 ವಿಶ್ವಕಪ್​​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಸೆಮಿಫೈನಲ್​ನಲ್ಲಿ ಟ್ರೋಫಿ ವಿಜೇತ ಇಂಗ್ಲೆಂಡ್ ವಿರುದ್ಧ ಸೋತಿತ್ತು. ಆ ಸೋಲು ನಿಜವಾಗಿಯೂ ಭಾರತೀಯ ತಂಡಕ್ಕೆ ರಿಯಾಲಿಟಿ ಚೆಕ್ ಆಗಿತ್ತು. ಇದು ಟಿ20 ಐ ಆಟದಲ್ಲಿ ತೀವ್ರ ಬದಲಾವಣೆಗೆ ಕಾರಣವಾಯಿತು. ತಂಡದ ರಚನೆಯ ದೃಷ್ಟಿಯಿಂದ ಅಲ್ಲ ಆದರೆ ಮನಸ್ಥಿತಿಯ ದೃಷ್ಟಿಯಿಂದ. ಈ ಟಿ 20 ವಿಶ್ವಕಪ್​ನ್ಲಿ ಆಡಲು ರೋಹಿತ್ ಶರ್ಮಾ ಮತ್ತು ಬಳಗ ಬಂದಾಗ, ಅವರ ಉದ್ದೇಶ ಸ್ಪಷ್ಟವಾಗಿತ್ತು. ಅವರು ಆಕ್ರಮಣಕಾರಿಯಾಗಿ ಆಡಿದ್ದರು.

ರೋಹಿತ್ ಶರ್ಮಾ ಮುಂಚೂಣಿಯಿಂದ ತಂಡವನ್ನು ಮುನ್ನಡೆಸಿದರು. ಮಧ್ಯಮ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುವ ಬದಲು ವಿರಾಟ್ ಕೊಹ್ಲಿ ಆರಂಭಿಕರಾದರು. ರಿಷಭ್ ಪಂತ್ ಅವರನ್ನು 3 ನೇ ಕ್ರಮಾಂಕಕ್ಕೆ ಇಳಿಸಲಾಯಿತು. ಆ ಎಲ್ಲಾ ನಡೆಗಳು ಕೆಲಸ ಮಾಡಿದವು.

ಆದರೆ ರೋಹಿತ್ ಶರ್ಮಾಗೆ ಮುಖ್ಯ ಟ್ರಂಪ್ ಕಾರ್ಡ್ ಅವರ ದೀರ್ಘಕಾಲದ ಮುಂಬೈ ಇಂಡಿಯನ್ಸ್ ತಂಡದ ಸಹ ಆಟಗಾರ ಜಸ್ಪ್ರೀತ್ ಬಮ್ರಾ. ಫೈನಲ್​ನಲ್ಲಿ ಕೊಹ್ಲಿ ಮತ್ತು ಬುಮ್ರಾ ವಿಭಿನ್ನವಾಗಿ ಆಡಿದರು. ಕೊಹ್ಲಿ ಬ್ಯಾಟ್​​ನಿಂದ ಮಿಂಚಿದರೆ, ಬುಮ್ರಾ ತಮ್ಮ ಬೌಲಿಂಗ್​ನಿಂದ ಸಂಪೂರ್ಣವಾಗಿ ಬದಲಾಯಿಸಿದರು. ಆ ಇಬ್ಬರು ಆಟಗಾರರು ಪ್ರದರ್ಶನ ನೀಡದಿದ್ದರೆ, ಭಾರತವು 17 ವರ್ಷಗಳ ನಂತರ ವಿಶ್ವ ಟಿ 20 ಚಾಂಪಿಯನ್ ಕಿರೀಟವನ್ನು ಪಡೆಯುತ್ತಿರಲಿಲ್ಲ. ಮೆನ್ ಇನ್ ಬ್ಲೂನ ಅದ್ಭುತ ವಿಜಯಕ್ಕೆ ಪಾಕಿಸ್ತಾನದ ಕ್ರಿಕೆಟಿಗರನೇಕರು ಪ್ರತಿಕ್ರಿಯೆ ನೀಡಿದ್ದಾರೆ.

ಶಹೀನ್ ಶಾ ಅಫ್ರಿದಿ ಭಾರತ ತಂಡಕ್ಕೆ ಹಾಗೂ ವಿದಾಯ ಹೇಳಿದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಅಭಿನಂದನೆ ಸಲ್ಲಿಸಿದ್ದಾರೆ.

ಅರ್ಹ ತಂಡವು ಟಿ 20 ವಿಶ್ವಕಪ್ ಗೆದ್ದಿತು. ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ಈ ಅಪ್ರತಿಮ ಗೆಲುವಿನಲ್ಲಿ ಭಾಗಿಯಾಗಿರುವ ಎಲ್ಲರಿಗೂ ಅಭಿನಂದನೆಗಳು. ಅವರು ಯಾವಾಗಲೂ ಸ್ಥಿರವಾಗಿದ್ದರು ಮತ್ತು ಬಾಗಿಲು ತಟ್ಟುತ್ತಲೇ ಇದ್ದರು, ಈ ಗೆಲುವು ಸಂಪೂರ್ಣ ಸಮರ್ಪಣೆಯ ಫಲಿತಾಂಶವಾಗಿದೆ ಎಂದು ಅಹಮದ್​ ಶೆಹಜಾದ್ ಹೇಳಿದ್ದಾರೆ.

ಕಷ್ಟದ ಸಂದರ್ಭವನ್ನು ಎದುರಿಸಿಕೊಂಡು ಟ್ರೋಫಿ ಗೆದ್ದ ಭಾರತ ತಂಡಕ್ಕೆ ಶುಭಾಶಯಗಳು ಎಂದು ವಕಾರ್ ಯೂನಿಸ್ ಬರೆದುಕೊಂಡಿದ್ದಾರೆ.

ಸ್ಮರಣೀಯ ಗೆಲುವಿಗಾಗಿ ಭಾರತಕ್ಕೆ ಅಭಿನಂದನೆಗಳು. ರೋಹಿತ್​ ಅದಕ್ಕೆ ಸಂಪೂರ್ಣವಾಗಿ ಅರ್ಹರು, ಅವರು ಅಸಾಧಾರಣ ನಾಯಕರಾಗಿದ್ದಾರೆ. ಎಂದಿನಂತೆ ದೊಡ್ಡ ಮ್ಯಾಚ್ ಪ್ಲೇಯರ್ ಮತ್ತು ಬುಮ್ರಾ ನಿಸ್ಸಂದೇಹವಾಗಿ ವಿಶ್ವದ ಅತ್ಯುತ್ತಮ ಬೌಲರ್. ಕಠಿಣ ಅದೃಷ್ಟ. ಪಂದ್ಯಾವಳಿಯಲ್ಲಿ ಅದ್ಭುತವಾಗಿ ಆಡಿದ ತಂಡದ ಉತ್ತಮ ಹೋರಾಟ ಎಂದು ಹೇಳಿದ್ದಾರೆ.

ವೇಗದ ಬೌಲರ್​ ಶೋಯೆಬ್ ಅಖ್ತರ್ ಅವರು ಶುಭಾಶಯ ಕೋರಿದ್ದು ಅದರ ವಿಡಿಯೊ ಇಲ್ಲಿದೆ.

Continue Reading

ಕರ್ನಾಟಕ

CM Post: ಬಿ.ಕೆ.ಹರಿಪ್ರಸಾದ್‌ರನ್ನು ಸಿಎಂ ಮಾಡಲು ಪ್ರಣವಾನಂದ ಶ್ರೀ ಒತ್ತಾಯ; ಕೇಳೋದ್ರಲ್ಲಿ ತಪ್ಪಿಲ್ಲ ಎಂದ ಜಮೀರ್‌

CM Post: ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತರು. ಮೂಲತಃ ಅವರು ಕಾಂಗ್ರೆಸ್ಸಿಗರು, ಯಾವುದೇ ವಲಸೆ ನಾಯಕರಲ್ಲ. ಹೀಗಾಗಿ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

VISTARANEWS.COM


on

Koo

ಯಾದಗಿರಿ: ಬಿ.ಕೆ. ಹರಿಪ್ರಸಾದ್ ಅವರನ್ನು ಸಿಎಂ ಮಾಡುವಂತೆ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ (Pranavananda Swamiji) ಅವರು ಪುನರುಚ್ಚರಿಸಿದ್ದಾರೆ. ಬಿ.ಕೆ. ಹರಿಪ್ರಸಾದ್‌ರನ್ನು (BK hariprasad) ಸಿಎಂ ಅಥವಾ ಡಿಸಿಎಂ ಮಾಡುವಂತೆ ಒತ್ತಾಯ ಮಾಡಿರುವ ಅವರು, ಈಡಿಗ ಸಮುದಾಯವು ತನ್ನದೇ ರಾಜಕೀಯ ಪ್ರಾಬಲ್ಯ ಹೊಂದಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಿದ್ದರೆ ಬಿ.ಕೆ.ಹರಿಪ್ರಸಾದ್ ಅವರನ್ನೇ ಸಿಎಂ (CM Post) ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಅವರ ಹಿಂದೆ ಹಿಂದುಳಿದ ಸಮಾಜ ಇದೆ, ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತೇನೆ. ಸಿಎಂ, ಡಿಸಿಎಂ ಸ್ಥಾನ ಬದಲಾದರೆ ಬಿ.ಕೆ.ಹರಿಪ್ರಸಾದ್ ಅವರಿಗೆ ಸಿಎಂ ಸ್ಥಾನ‌ ನೀಡಬೇಕು. ಇಲ್ಲದಿದ್ದರೆ ಡಿಸಿಎಂ ಆಗಿ ತೆಗೆದುಕೊಳ್ಳಬೇಕು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದರೆ ಹರಿಪ್ರಸಾದ್ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ | Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

ಸ್ವಾಮೀಜಿಗಳು ರಾಜಕೀಯಕ್ಕೆ ಬರಬೇಡಿ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಸ್ವಾಮೀಜಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸುವಾಗ ಮಂತ್ರಿಗಳು, ರಾಜಕೀಯ ನಾಯಕರು ಅಪಮಾನ ಮಾಡಬಾರದು. ಅಪಮಾನ ಮಾಡಿದರೆ ಮುಂದಿನ ದಿನಗಳಲ್ಲಿ ನೀವು ಮಠಕ್ಕೆ ಕಾಲಿಡಬೇಡಿ. ನೀವು ಮಾಡಿದ್ದೆಲ್ಲಾ ಸರಿ ಅಂತ ಒಪ್ಪಿಕೊಳ್ಳೋಕೆ ಸಮುದಾಯದ ಸ್ವಾಮೀಜಿಗಳು ಸಿದ್ಧರಿಲ್ಲ. ನೀವು ಧೈರ್ಯವಾಗಿ ಹೇಳಿ ಮಠಕ್ಕೆ ಕಾಲಿಡಲ್ಲ ಅಂತ, ಆಗ ನಾವು ರಾಜಕೀಯಕ್ಕೆ ಬರಲ್ಲ ಎಂದು ಸವಾಲು ಹಾಕಿದರು.

ಚಂದ್ರಶೇಖರ ಸ್ವಾಮೀಜಿಗಳು ಹೇಳಿದಾಗ ಎಲ್ಲರೂ ಸ್ವಾಗತ ಮಾಡಿದರು. ಡಿ.ಕೆ.ಸುರೇಶ್‌, ಬಾಲಕೃಷ್ಣ ಹಾಗೂ ಚಲುವರಾಯಸ್ವಾಮಿ ಸ್ವಾಗತ ಮಾಡಿದರು. ಒಂದು ಕಡೆ ಸ್ವಾಗತ ಮಾಡೋದು, ಮತ್ತೊಂದು ಕಡೆ ರಾಜಕೀಯಕ್ಕೆ ಬರಬೇಡಿ ಅಂತ ಹೇಳೋದು. ಇದು ಡಿ.ಕೆ.ಶಿವಕುಮಾರ ಅವರ ರಾಜಕೀಯ ಗಿಮಿಕ್, ನಮಗೆ ನೋವಾಗಿದ್ದಕ್ಕೆ ನಾವು ಹೇಳುತ್ತಿದ್ದೇವೆ. ನಮಗೆ ಯಾರು ಡಿಸಿಎಂ ಸ್ಥಾನ ಕೊಟ್ಟಿಲ್ಲ, ಈಗಾಗಲೇ ಡಿಕೆಶಿ ಡಿಸಿಎಂ ಇದ್ದಾರೆ. ಜೊತೆಗೆ ಒಕ್ಕಲಿಗ ಸಮುದಾಯದ ಸಚಿವರು ಇದ್ದಾರೆ. ಚಂದ್ರಶೇಖರ ಸ್ವಾಮೀಜಿಯವರು ಅವರ ಸಮುದಾಯದ ಬಗ್ಗೆ ಮಾತನಾಡಿದ್ದಾರೆ. ಆದರೆ ಡಿ.ಕೆ.ಶಿವಕುಮಾರ ಅವರದ್ದು ರಾಜಕೀಯ ಗಿಮಿಕ್‌ನ ಭಾಗ ಎಂದು ಕಿಡಿಕಾರಿದರು.

ಯಾರು ಬೇಕಾದ್ರು ಅಭಿಪ್ರಾಯ ಹೇಳಬಹುದು ಎಂದ ಜಮೀರ್‌ ಅಹ್ಮದ್‌

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಮಂಡ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿ, ಯಾರು ಬೇಕಾದರೂ ಅವರ ಅಭಿಪ್ರಾಯ ಹೇಳಬಹುದು. ಆದರೆ ನಿರ್ಧಾರ ಮಾಡುವುದು ಪಕ್ಷದ ಹೈ ಕಮಾಂಡ್. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಖಾಲಿ‌ ಇದ್ದಾಗ ಆ ಬಗ್ಗೆ ಚರ್ಚೆ ಮಾಡಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Pradeep Eshwar: ವಿಪಕ್ಷ ನಾಯಕರು ಸಿದ್ದರಾಮಯ್ಯ ಬಳಿ ಕೋಚಿಂಗ್‌ ಪಡೆಯಲಿ: ಅಶೋಕ್‌ಗೆ ಪ್ರದೀಪ್‌ ಈಶ್ವರ್‌ ಸಲಹೆ

ಸ್ವಾಮೀಜಿ‌ ಅವರು ಅವರ ಅಭಿಪ್ರಾಯ ಹೇಳಿದ್ದಾರೆ. ಯಾರು ಬೇಕಾದ್ರು ಅವರ ಅಭಿಪ್ರಾಯ ಹೇಳಬಹುದು. ಹೈ ಕಮಾಂಡ್ ತೀರ್ಮಾನ ಮಾಡಿ ಸಿದ್ದರಾಮಯ್ಯರನ್ನು ಸಿಎಂ ಮಾಡಿದ್ದಾರೆ. ಎಲ್ಲಾ ಸಮುದಾಯದವರೂ ಸಿಎಂ ಸ್ಥಾನ ಕೇಳುತ್ತಾರೆ, ಅದು ಅವರವರ ಅಭಿಪ್ರಾಯ. ಸಿಎಂ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ ಎಂದು ತಿಳಿಸಿದ್ದಾರೆ.

Continue Reading
Advertisement
Reasi Terror Attack
ದೇಶ4 seconds ago

Reasi Terror Attack: ಕಾಶ್ಮೀರದಲ್ಲಿ ರಿಯಾಸಿ ಉಗ್ರರ ದಾಳಿ; ಹಲವೆಡೆ NIA ರೇಡ್‌

Jasprit Bumrah
ಪ್ರಮುಖ ಸುದ್ದಿ30 seconds ago

Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

Bangalore–Mysore Expressway
ಕರ್ನಾಟಕ13 mins ago

Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

karnataka Weather Forecast
ಮಳೆ13 mins ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Rain Effect
ಕೊಡಗು23 mins ago

Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

Breakfast Tip
ಆರೋಗ್ಯ39 mins ago

Breakfast Tips: ಬೆಳಗಿನ ಉಪಾಹಾರಕ್ಕೆ ಈ 5 ಬಗೆಯ ಆಹಾರಗಳನ್ನು ಸೇವಿಸಬೇಡಿ!

Ravindra jadeja
ಪ್ರಮುಖ ಸುದ್ದಿ53 mins ago

Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ

IND vs SA Final
ಕ್ರೀಡೆ1 hour ago

IND vs SA Final: 40 ಸಾವಿರ ಅಡಿ ಎತ್ತರದಲ್ಲಿಯೂ ಮೊಳಗಿದ ವಿಶ್ವಕಪ್​ ಗೆಲುವಿನ ಸಂಭ್ರಮ; ವಿಡಿಯೊ ವೈರಲ್​

Kids Fashion: Bunny Ears Head Bands for Kids' Cute Look!
ಫ್ಯಾಷನ್1 hour ago

Kids Fashion: ಮಕ್ಕಳ ಕ್ಯೂಟ್‌ ಲುಕ್‌ಗೆ ಸಾಥ್‌ ನೀಡುವ ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್ಸ್!

T20 World Cup 2024
ಕ್ರಿಕೆಟ್1 hour ago

T20 World Cup 2024 : ಚಾಂಪಿಯನ್ ಭಾರತಕ್ಕೆ ಪಾಕಿಸ್ತಾನ ಆಟಗಾರರು ಶುಭ ಕೋರಿದ್ದು ಹೀಗೆ…

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ13 mins ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು5 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌